ಮಾತೃಭಾಷೆಯಲ್ಲಿಯೇ ಶಿಕ್ಷಣ-ಮಕ್ಕಳ ಹಕ್ಕನ್ನು ರಕ್ಷಿಸಿ
– ಪಂಡಿತಾರಾಧ್ಯ,ಮೈಸೂರು
ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡಬೇಕೆಂಬ ಜಗತ್ತಿನ ಎಲ್ಲ ಶ್ರೇಷ್ಠ ಶಿಕ್ಷಣ ತಜ್ಞರ ವಿಚಾರಗಳು ಮತ್ತು ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಿ ಕರ್ನಾಟಕ ಸರಕಾರವು ತನ್ನ ಭಾಷಾನೀತಿಯನ್ನು ಅಂತಿಮವಾಗಿ ರೂಪಿಸಿತು(೧೯೯೪). ಅದರ ಪ್ರಕಾರ ಒಂದರಿಂದ ಐದನೇ ತರಗತಿಯವರೆಗೆ ಮಾತೃಭಾಷೆ/ರಾಜ್ಯಭಾಷೆ ಮಾತ್ರ ಕಡ್ಡಾಯ. ಕನ್ನಡ ಮಾತೃಭಾಷೆಯಲ್ಲದವರಿಗೆ ಒಂದನೆಯ ತರಗತಿಯಲ್ಲಿ ಪರಿಸರಭಾಷೆ/ರಾಜ್ಯಭಾಷೆಯಾದ ಕನ್ನಡವೂ ಕಡ್ಡಾಯ ಕಲಿಕೆಯ ವಿಷಯವಲ್ಲ. ಎರಡನೆಯ ಭಾಷೆಯನ್ನು ಕಲಿಯುವ ಹಂತದಿಂದ ಅಂದರೆ ಮೂರನೆಯ ತರಗತಿಯಿಂದ ಅವರಿಗೆ ರಾಜ್ಯಭಾಷೆ ಕನ್ನಡ ಐಚ್ಛಿಕ ಕಲಿಕೆಯ ವಿಷಯ ಮಾತ್ರ; ಪರೀಕ್ಷೆ ಕಡ್ಡಾಯವಲ್ಲ. ಐದನೆಯ ತರಗತಿಯಿಂದ ಕನ್ನಡ ಕಲಿಕೆ ಮತ್ತು ಪರೀಕ್ಷೆ ಕಡ್ಡಾಯ. ಎರಡನೆಯ ಭಾಷೆಯನ್ನು ಕಲಿಯುವ ಹಂತದಿಂದ ಅಂದರೆ ಮೂರನೆಯ ತರಗತಿಯಿಂದ ಮಾತ್ರ ಇಂಗ್ಲಿಷ್ ಮಾತೃಭಾಷೆಯಲ್ಲದ ಮಕ್ಕಳಿಗೆ ಇಂಗ್ಲಿಷ್ ಐಚ್ಛಿಕ ಕಲಿಕೆಯ ವಿಷಯ, ಪರೀಕ್ಷೆ ಕಡ್ಡಾಯವಲ್ಲ. ಐದನೆಯ ತರಗತಿಯಿಂದ ಇಂಗ್ಲಿಷ್ ಕಲಿಕೆ ಮತ್ತು ಪರೀಕ್ಷೆ ಕಡ್ಡಾಯ. ಕರ್ನಾಟಕ ಸರಕಾರದ ಈ ಭಾಷಾನೀತಿಯನ್ನು ಸರ್ವೋನ್ನತ ನ್ಯಾಯಾಲಯವೂ ಪ್ರಶಂಸಿಸಿ ಅನುಮೋದಿಸಿತ್ತು(೧೯೯೩).
ಈ ಭಾಷಾನೀತಿಗೆ ಇದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವ ಸಂದರ್ಭದಲ್ಲಿ ಅದನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸೀಮಿತಗೊಳಿಸಿತು. ಪೂರ್ವ ಪ್ರಾಥಮಿಕವೂ ಸೇರಿದಂತೆ ಒಂದನೆಯ ತರಗತಿಯಿಂದಲೇ ಇಂಗ್ಲಿಷ್ ಮಾತೃಭಾಷೆಯಲ್ಲದವರಿಗೂ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ನಡೆಸಲು ಅನುದಾನರಹಿತ ಖಾಸಗಿ ಶಾಲೆಗಳಿಗೆ ಮುಕ್ತ ಅವಕಾಶ ನೀಡಿತು(೨೦೦೮). ಇದು ಮಾತೃಭಾಷೆಯಲ್ಲಿ ಶಿಕ್ಷಣ ನೀಡಬೇಕೆಂಬ ಮಕ್ಕಳ ಶೈಕ್ಷಣಿಕ ಹಕ್ಕಿನ ನೀತಿಗೆ ವಿರುದ್ಧವಾಗಿದೆ. ಇದರಿಂದ ಮಕ್ಕಳು ಆರಂಭದ ಹಂತದಲ್ಲಿಯೇ ‘ಸಮಾನ ಅವಕಾಶ-ಸಮಾನ ಸ್ಪರ್ಧೆ’ ಎಂಬ ಸಮಾನತೆಯ ನ್ಯಾಯದಿಂದ ವಂಚಿತರಾಗಿದ್ದಾರೆ.
ಕನ್ನಡ/ಇಂಗ್ಲೀಷ್ ಮಾಧ್ಯಮದ ಜೊತೆಗೆ ಏಕರೂಪ ಶಿಕ್ಷಣದ ಬಗ್ಗೆಯೂ ಚರ್ಚೆ ಆಗಬೇಕಲ್ಲವೇ?
– ರಾಕೇಶ್ ಶೆಟ್ಟಿ
ಕಡೆಗೂ ‘ಸರ್ಕಾರ ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತಿಸಬೇಕು’ ಅನ್ನುವ ಮಾತುಗಳನ್ನು ಕಸಪಾ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.ಕಳೆದ ಹಲವು ದಿನಗಳಿಂದ ಇಂಗ್ಲೀಷ್ ಮಾಧ್ಯಮದ ಸುತ್ತ ನಡೆಯುತ್ತಲಿರುವ ಚರ್ಚೆಯಲ್ಲಿ ನಾನು ನಿರೀಕ್ಷಿಸುತಿದ್ದ ಮಾತು “ಏಕರೂಪ ಶಿಕ್ಷಣ”ದ ಬಗ್ಗೆ.ಪೇಟೆಯ/ಉಳ್ಳವರ ಮಕ್ಕಳಿಗೊಂದು ಶಿಕ್ಷಣ,ಹಳ್ಳಿಯ/ಬಡವರ ಮಕ್ಕಳಿಗೊಂದು ಶಿಕ್ಷಣ ಕೊಟ್ಟು ಕಡೆಗೆ ಸಮಾನತೆ,ಸಾಮಾಜಿಕ ನ್ಯಾಯ,ಭಾಷೆ,ನಾಡು-ನುಡಿಯ ಅಳಿವು ಉಳಿವು ಅಂತ ಮಾತನಾಡುವುದೆಷ್ಟು ಸರಿ?
೧೦ನೆ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಓದಿದ ನನಗೆ ಮಾತೃ ಭಾಷೆಯಲ್ಲಿ ಕಲಿಯುವುದೆಷ್ಟು ಸುಲಭ,ಆನಂದದ ವಿಷಯ ಅನ್ನುವುದರ ಅರಿವಿದೆ ಹಾಗೆಯೇ ೧೦ರ ನಂತರ ಇಂಗ್ಲೀಷ್ ಮಾದ್ಯಮಕ್ಕೆ (ಪಿಯುಸಿಯಲ್ಲಿ ಆಯ್ದುಕೊಂಡಿದ್ದು ವಿಜ್ಞಾನ ವಿಷಯ) ಕಾಲಿಟ್ಟಾಗ ಅನುಭವಿಸಿದ ಕಷ್ಟ,ಕೀಳರಿಮೆಯ ಅನುಭವಗಳು ಇವೆ.ಹಾಗಾಗಿ ಈ ಚರ್ಚೆಯಲ್ಲಿ ಮತ್ತು ಈಗಿನ ನಮ್ಮ ಶೈಕ್ಷಣಿಕ ಪರಿಸ್ಥಿತಿಯಲ್ಲಿ ನಾನು ಇಂಗ್ಲೀಷ್ ಮೀಡಿಯಂ ಬೇಕು ಅನ್ನುವುದರ ಪರವೇ ನಿಲ್ಲುತ್ತೇನೆ.
ಒಂದು ವೇಳೆ ಸಾಹಿತಿಗಳು ಒತ್ತಾಯಿಸುತ್ತಿರುವಂತೆ ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲೇ ಆಗಬೇಕು ಅನ್ನುವುದಾದರೆ ಅದು ಈ ರಾಜ್ಯದಲ್ಲಿರುವ ಸರ್ಕಾರಿ/ಅನುದಾನಿತ/ಕೇಂದ್ರೀಯ/ಖಾಸಗಿ ಶಾಲೆಗಳಿಗೂ ಏಕರೂಪವಾಗಿ ಅನ್ವಯವಾಗಲಿ. ಅದನ್ನು ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಕಡ್ಡಾಯವಾಗಲಿ ಆ ಮೂಲಕ ಬಡವರ ಮಕ್ಕಳು ಮಾತ್ರ ಕನ್ನಡದಲ್ಲಿ ಕಲಿತು ಮುಂದೆ ಇಂಗ್ಲೀಷ್ ಲೋಕಕ್ಕೆ ಕಾಲಿಟ್ಟು ಅರ್ಧಕರ್ಧ ಜನ ಕೀಳರಿಮೆ,ಹೆದರಿಕೆಯಿಂದಾಗಿ ಹಿಂದೆ ಬೀಳಲಿ ಅನ್ನುವುದು ಇಬ್ಬಗೆಯ ನೀತಿಯಾಗುತ್ತದೆ.
ಏಕರೂಪ ಶಿಕ್ಷಣ ಅನ್ನುವಾಗ ಇನ್ನೊಂದು ಅಂಶವನ್ನ ನಾವು ಗಮನಕ್ಕೆ ತೆಗೆದುಕೊಳ್ಳಬೇಕು.ಮಕ್ಕಳನ್ನು ಶಾಲೆಗೇ ಸೇರಿಸುವಾಗ ಅದು ಇಂಗ್ಲೀಷ್ ಮೀಡಿಯಂ ಶಾಲೆಯೇ ಅಂತ ಮಾತ್ರ ಈಗಿನ ಪೋಷಕರು ನೋಡುತ್ತಿಲ್ಲ,ಅದರ ಜೊತೆಗೆ ಅವರು ಅಲ್ಲಿರುವುದು ಸೆಂಟ್ರಲ್ ಸಿಲ್ಲಬಸ್ಸೋ,ಐ.ಸಿ.ಎಸ್.ಈ ಸಿಲ್ಲಬಸ್ಸೋ (ಅಥವಾ ಇನ್ಯಾವುದೋ) ಅನ್ನುವುದನ್ನು ನೋಡುತಿದ್ದಾರೆ.ನಮ್ಮ ಮಕ್ಕಳು ಇಂತ ಸಿಲಬಸ್ಸ್ ಇರೋ ಶಾಲೆಯಲ್ಲಿ ಓದುತಿದ್ದಾರೆ ಅಂತ ಹೇಳಿಕೊಳ್ಳುವುದು ಈಗಿನ ಪೋಷಕರಿಗೆ ಗರ್ವದ ವಿಷಯವಾಗಿದೆ. ಅಸಲಿಗೆ ಈ ರೀತಿ ಬೇರೆ,ಬೇರೆ ಸಿಲ್ಲಬಸ್ಸಿನ ಅಗತ್ಯ ಶಾಲಾ ಮಟ್ಟದಲ್ಲಿ ಏನು ಅನ್ನುವುದು ಸಹ ಚರ್ಚೆಯಾಗಬೇಕಲ್ಲವೇ?
ಸಾಮಾಜಿಕ ಕಳಕಳಿಯೆಂದರೆ…..
-ಡಾ.ಅಶೋಕ್ ಕೆ.ಆರ್
ಡಬ್ಬಿಂಗ್ ಅವಶ್ಯಕವೇ?

ಕನ್ನಡಿಗನಿಗೆ ಕನ್ನಡಿಗನೇ ಸಾರಥಿ
– ಪವನ್ ಪಾರುಪತ್ತೇದಾರ
ಮೊನ್ನೆ ಬಹಳಾ ದಿನಗಳಾದ ಮೇಲೆ ಭಟ್ಟ ಫೋನ್ ಮಾಡಿದ್ದ, ನಾನು ತುಂಬಾ ಸಾರಿ ಅವ್ನಿಗೆ ಫೋನ್ ಮಾಡಿದ್ದೆ ಆದ್ರು ರಿಸೀವ್ ಮಾಡಿರ್ಲಿಲ್ಲ, ನಾ ಫೋನ್ ಎತ್ತಿದೊಡನೆ ಲೇ ಡಿ ಕೇ ಬೋಸ್, ಎಲ್ಲಿ ಹಾಳಾಗೋಗಿದ್ಯ ಅಂದೆ. ಒಂದು ಫೋನ್ ರಿಸೀವ್ ಮಾಡ್ಲಿಕ್ಕಾಗಲ್ವ ಅಂತ ಬೈದೆ, ಏನ್ ಮಾಡೋದು ಮಗಾ ಕೆಲಸ ಸಿಕ್ಕಾಪಟ್ಟೆ ಕಷ್ಟ ಐತಿ, ನಿಲ್ಲಂಗಿಲ್ಲ ಕೂರಂಗಿಲ್ಲ, ಮಕ್ಳು ಬಿಡೋಂಗೆ ಇಲ್ಲ, ಭಾರಿ ಕಷ್ಟ್ ಕೊಡ್ತಾರೆ ಅಂದ, ನಾನು ಸರಿ ಮಗನ ಅಂತ ಕಷ್ಟದ್ ಕೆಲ್ಸ ಏನ್ಲೆ ಮಾಡ್ತಿದ್ಯ ಅಂದೆ, ಆಗ ಭಟ್ಟನ ಉತ್ತರ ಕೇಳಿ ಮನಸ್ಸಿಗೆ ಬಹಳಾ ನೋವಾಯ್ತು, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪ್ರಥಮ ದರ್ಜೆಯಲ್ಲಿ ಮುಗಿಸಿದ್ದ ಭಟ್ಟ, ವೆಂಟಿಲೇಶನ್ ರಿಪೇರಿ ಮಾಡುವ ಕೆಲಸ ಮಾಡುತಿದ್ದ, ಅವನೇ ಹೇಳಿದ ಪ್ರಕಾರ, ವೆಂಟಿಲೇಶನ್ ಕೆಲಸ ಇಲ್ದೆ ಇದ್ರೆ ಅವರ ಕಂಪನಿಯ ಆಫೀಸ್ ಬಾಯ್ ಕೂಡ ಅವನೆ, ಆ ಬ್ಯಾಂಕಿಗೆ ಹೋಗಿ ಚೆಕ್ ಹಾಕಿ ಬಾ, ಅಲ್ಲೆಲ್ಲೋ ಹೋಗಿ ಆರ್ಡರ್ ಕಾಪಿ ತೆಗೆದುಕೊಂಡು ಬಾ, ಹೀಗೆ ಎಲ್ಲ ರೀತಿಯಲ್ಲು ಅವ್ನನ್ನ ಬಳಸಿಕೊಳ್ಳುತಿದ್ದರು.
ಭಟ್ಟ ಓದಿದ್ದೆಲ್ಲ ಹುಬ್ಬಳ್ಳಿಯಲ್ಲಿ, ಕೆ.ಎಲ್.ಇ. ಶಾಲೆಯ ಬೋರ್ಡುಗಳಲ್ಲಿ ಕನ್ನಡ ಮೀಡಿಯಂ ಓದಿ ಬೆಳೆದ ಹುಡುಗ, ಅಂತಹ ದಡ್ಡ ಹುಡುಗನೇನಲ್ಲ, ಡಿಪ್ಲೋಮದಲ್ಲಿ ಮತ್ತು ಇಂಜಿನಿಯರಿಂಗ್ನಲ್ಲಿ ಮೊದಲನೆ ದರ್ಜೆಯಲ್ಲಿ ಪಾಸಾಗಿದ್ದಾನೆ. ಮನೆಯ ಕಷ್ಟಗಳನ್ನೆಲ್ಲ ಮೂಲೆಯಲ್ಲಿ ಬಿಸಾಕಿ ಅವರಪ್ಪ ಸಾಲ ಸೋಲ ಮಾಡಿ ಓದಿಸಿದ್ದಾರೆ, ಎಜುಕೇಶನ್ ಲೋನ್ ಕಟ್ಟಲೇ ಬೇಕಾದ ಅನಿವಾರ್ಯತೆ ಅವನ್ನ ಈ ಕೆಲಸಕ್ಕೆ ದೂಡಿದೆ. ಈ ಮಧ್ಯೆ ಆ ಕೋರ್ಸು ಈ ಕೋರ್ಸು ಅಂತ ಹೇಳಿದವರ ಮಾತು ಕೇಳಿ ಟೆಸ್ಟಿಂಗ್ ಕೋರ್ಸ್ ಸಹ ಮಾಡಿದ್ದಾನೆ.ಆದ್ರು ಕೆಲಸ ಇಲ್ಲಿವರೆಗೂ ಸರಿಯಾದ ಕೆಲಸ ಮಾತ್ರ ಸಿಕ್ಕಿಲ್ಲ. ಇದು ಬರೀ ನನ್ನೊಬ್ಬ ಗೆಳೆಯನ ಕಥೆಯಲ್ಲ, ಭಟ್ಟ ಎಂಬುದು ಇಲ್ಲಿ ಪಾತ್ರವಷ್ಟೇ, ಇಂತಹ ಸಾವಿರಾರು ಹುಡುಗರು ಚೆನ್ನಾಗಿ ಓದಿಯೂ ಉತ್ತಮ ಅಂಕಗಳು ಪಡೆದೂ ಸಹ, ಎಂತ ಎಂತಹುದೋ ಕೆಲಸಗಳನ್ನು ಮಾಡುತಿದ್ದಾರೆ, ವೆಂಟಿಲೇಶನ್ ಸೆರ್ವೀಸ್ ಮಾಡುವುದೇ ಆಗಿದ್ದರೆ ಭಟ್ಟ ಐ.ಟಿ.ಐ ಓದಿದ್ದರೆ ಸಾಕಾಗಿತ್ತು, ಇಂಜಿನಿಯರಿಂಗ್ ಅವಶ್ಯಕತೆಯೇ ಇರಲಿಲ್ಲ, ವಿ.ಟಿ.ಯು. ಅಡಿಯಲ್ಲಿ ಸುಮಾರು ೨೦೦ ಕಾಲೇಜುಗಳಿವೆ ಅಂದರೆ ಪ್ರತಿ ವರ್ಷ ಹೊರಬರುವ ಇಂಜಿನಿಯರುಗಳೆಷ್ಟು, ಮತ್ತು ಅವರಲ್ಲಿ ಕೆಲಸಗಳಿಗೆ ಸೇರುವರೆಷ್ಟು? ನಿಜಕ್ಕು ಅಂಕಿ ಅಂಶಗಳ ನೋಡಲು ಹೋದರೆ ಭಯವಾಗುತ್ತದೆ.
ಡಬ್ಬಿಂಗ್ ಎಂಬ ರುಚಿಗೆಟ್ಟ ದಿಢೀರ್ ಅಡುಗೆ ಏಕೆ?
– ರೂಪ ರಾವ್
ಇತ್ತೀಚಿಗೆ ಡಬ್ಬಿಂಗ್ ಬೇಕು ಬೇಡ ಅನ್ನುವ ಹುಯಿಲು ಮತ್ತೆ ಕಾಣ್ತಿದೆ. ರಾಕೇಶ್ ಶೆಟ್ಟಿಯವರ ಲೇಖನ ಓದಿದ ಮೇಲೆ ಇದರ ಬಗ್ಗೆ ನನ್ನದೊಂದಿಷ್ಟು ಅನಿಸಿಕೆ.
ಸ್ವಾಮಿ ಡಬ್ಬಿಂಗ್ ಬೇಡ ಅನ್ನೋದು ಹಳೆಯ ರಾಗವಿರಬಹುದು. ಆದರೆ ಕಾರಣ ಮಾತ್ರ ನಿಚ್ಚಳ… ಅದು ಕನ್ನಡದ ಕಲಾವಿದರಿಗೆ ಆಗೋ ಅನ್ಯಾಯ ಅಷ್ಟೆ. ಅದು ಯಾವತ್ತಿಗೂ ಸಲ್ಲುವ ಕಾರಣ. ಚಿತ್ರರಂಗವನ್ನೇ ನಂಬಿಕೊಂಡು ನಿಂತ ಅಸಂಖ್ಯಾತ ಕಲಾವಿದರಿಗೆ. ನಾಯಕ ,ನಾಯಕಿ ಪಾತ್ರದಿಂದ ಹಿಡಿದು ಪೋಷಕ ಪಾತ್ರಧಾರಿಗಳು, ಛಾಯಾಗ್ರಾಹಕರು, ನಿರ್ದೇಶಕರು,ನೂರಾರು ಜನ ನೇರವಾಗಿ ಇಲ್ಲವೇ ಪರೋಕ್ಷವಾಗಿ ಒಂದು ಚಿತ್ರದ ಮೇಲೆ ಅವಲಂಬಿತರಾಗಿರುತ್ತಾರೆ.. ಅಷ್ಟೂ ಜನರ ಹೊಟ್ಟೆಯ ಮೇಲೆ ಹೊಡೆಯುವ ಹುನ್ನಾರವಿದು.
ರಿಮೇಕ್ ಚಿತ್ರಗಳ ಆರ್ಭಟಕ್ಕೆ ನಿರ್ದೇಶಕರ ಸೃಜನಾತ್ಮಕತೆ ಈಗಾಗಲೇ ಕಡಿಮೆಯಾಗಿದೆ.ಒಂದು ವೇಳೆ ಡಬ್ಬಿಂಗ್ ನಿಷೇಧ ತೆರವು ಗೊಳಿಸಿದರೆ,ಕನ್ನಡದಲ್ಲಿ ನಿರ್ದೇಶಕ, ಕತೆಗಾರ, ಸತ್ತಂತೆ…..! ಉಪೇಂದ್ರ, ಸೂರಿ, ಶಶಾಂಕ್, ಚಂದ್ರು,ಯೋಗರಾಜ್ ಭಟ್ ರವರಂತೆ ಆಗಬೇಕೆನ್ನುವ ಯುವ ನಿರ್ದೇಶಕರ ಗತಿ ?
ಮತ್ತೆ ಯಾವುದೋ ಪ್ರಾದೇಶಿಕತೆಗೆ ಹೊಂದುವ ಅಲ್ಲಿನ ವಾತಾವರಣಕ್ಕೆ ನಿರ್ಮಿಸಲಾಗಿರುವ ಚಿತ್ರವೊಂದನ್ನ ಹಾಗೆಯೇ ಡಬ್ಬಿಂಗ್ ಮಾಡಿದಲ್ಲಿ ಅದನ್ನು ಕೂತು ನೋಡುವ ಕರ್ಮ ನಮ್ಮದಾಗುತ್ತದೆ.ಪಾತ್ರದ ತುಟಿಯ ಚಲನೆ ಒಂದಾದರೆ. ಹಿನ್ನಲೆ ದ್ವನಿಯ ಮಾತು ಒಂದಾಗಿರುತ್ತದೆ. ಅದಕ್ಕೂ ಇದಕ್ಕೂ ಜೋಡಿಸಿ ನೋಡುವ ದರ್ದು ನಮಗೆ ಬೇಕಾ?
ಮತ್ತಷ್ಟು ಓದು 
’ಸತ್ಯ ಮೇವ ಜಯತೇ’ ಅನ್ನಲು ಕನ್ನಡಿಗರು ಅಪ್ಪಣೆ ಪಡೆಯಬೇಕಾ?
– ರಾಕೇಶ್ ಶೆಟ್ಟಿ
ಕಳೆದ ವರ್ಷ ‘ಕನ್ನಡ ಚಲನ ಚಿತ್ರ ಅಕಾಡೆಮಿ’ಯು ಬಿಡುಗಡೆ ಮಾಡಿದ್ದ ವರದಿ ಡಬ್ಬಿಂಗ್ ಪರವಾಗಿತ್ತು.ಆ ವರದಿ ಬಿಡುಗಡೆಯಾದ ತಕ್ಷಣ ಚಿತ್ರರಂಗದ ಬಹುತೇಕ ಮಂದಿ ನಾಗಾಭರಣರ ಮೇಲೆ ಮುಗಿಬಿದ್ದರು.ಕಡೆಗೆ ಅವ್ರು ವರದಿಯನ್ನ ಹಿಂಪಡೆದರು.ಇಲ್ಲಿ ನಷ್ಟ ಆಗಿದ್ದು ಯಾರಿಗೆ? ಕನ್ನಡ ಚಿತ್ರ ರಂಗಕ್ಕಾ? ಅಲ್ಲ … ಕನ್ನಡ ಪ್ರೇಕ್ಷಕನಿಗೆ.
ಇಷ್ಟಕ್ಕೂ, ಡಬ್ಬಿಂಗ್ ಬೇಕೋ ಬೇಡವೋ ಅಂತ ನಿರ್ಧರಿಸಬೇಕಾದವನು “ಕನ್ನಡ ಪ್ರೇಕ್ಷಕನೋ?” ಇಲ್ಲ “ಕನ್ನಡ ಚಿತ್ರ ರಂಗವೋ?”
ಡಬ್ಬಿಂಗ್ ಯಾಕೆ ಬೇಡ ಅಂದ್ರೆ, ಅದರಿಂದ ಕನ್ನಡದ ಮಕ್ಕಳಿಗೆ ಕೆಲಸವಿರೋದಿಲ್ಲ ಅಂತ ಹಳೆ ಕತೆ ಹೇಳ್ತಾ ಇದ್ದಾರೆ.ಈಗ ಬರ್ತಾ ಇರೋ ಅದಿನ್ನೆಷ್ಟು ಚಿತ್ರಗಳಲ್ಲಿ ಕನ್ನಡದ ಕಲಾವಿದರು,ತಂತ್ರಜ್ಞರು,ನಟಿಯರು,ಪೋಷಕ ನಟರು,ಖಳನಟರು,ಸಂಗೀತ ನಿರ್ದೇಶಕರು,ಗಾಯಕ-ಗಾಯಕಿಯರಿಗೆ ಕೆಲ್ಸ ಇದೆ?,ಎಲ್ಲದಕ್ಕೂ ಬೇರೆ ಭಾಷೆಯವರೇ ಬೇಕು.ಆಗ ಮಾತ್ರ ಯಾರು ಕನ್ನಡ ಮಕ್ಕಳಿಗೆ ಅನ್ಯಾಯವಾಗ್ತಾ ಇದೆ ಅಂತ ಉಸಿರೆತ್ತುವುದಿಲ್ಲ. ಭಾಷೆಯ ಉಚ್ಚಾರಣೆ ಬರದೆ ಇದ್ರೂ ನಮಗೆ ಬಾಲಿವುಡ್ ಗಾಯಕರು ಬಂದು ಉಸಿರು ಕಟ್ಟಿ ಹಾಡ್ಬೇಕು,ಬಾಯಿ ಅಲ್ಲಾಡಿಸಲು ಬರದ ಖಳ ನಟರು ಅಲ್ಲಿಂದಲೇ ಬರಬೇಕು.ಒಟ್ಟಿನಲ್ಲಿ ಬೇರೆ ಕಡೆಯಿಂದ ಜನ ಆಮದಾದಷ್ಟು ಚಿತ್ರ ಅದ್ದೂರಿ ಅನ್ನೋ ಭ್ರಮೆ! ಈಗಲೂ ಕನ್ನಡದ ಮಕ್ಕಳಿಗೆ ಆಗುತ್ತಿರುವುದು ಅನ್ಯಾಯವೇ ಅಲ್ಲವೆ?
ಇಷ್ಟಕ್ಕೂ ಡಬ್ಬಿಂಗ್ಗೆ ಅವಕಾಶ ಕೊಟ್ರೆ ಎಲ್ರೂ ಅದೇ ಮಾಡ್ತಾರೆ ಅನ್ನೋ ಅತಂಕವಿದ್ದರೆ,ಅದಕ್ಕಾಗಿ ಕೆಲ ನೀತಿ ನಿಯಮಗಳನ್ನ ಮಾಡಿಕೊಳ್ಳಬಹುದು. ಡಬ್ಬಿಂಗ್ ಮಾಡುವ ಹಕ್ಕನ್ನ ಮುಕ್ತವಾಗಿಡದೆ ‘ವಾಣಿಜ್ಯ ಮಂಡಳಿ’ ಯೇ ಆಯ್ದ ಚಿತ್ರಗಳನ್ನ ಡಬ್ಬಿಂಗ್ ಮಾಡಿ ಬಿಡುಗಡೆ ಮಾಡಬಹುದು.ಹಾಗೆ ಡಬ್ಬಿಂಗ್ ಮಾಡಿದ ಸಿನೆಮಾಗಳಲ್ಲಿ ನಮ್ಮ ನೇಟಿವಿಟಿ ಇಲ್ಲ ಅಂದ್ರೆ ಅವು ಗೆಲ್ಲೋದು ಅಷ್ಟರಲ್ಲೇ ಇದೆ,ಅದರಿಂದ ಯಾವ ಅಪಾಯವು ಇಲ್ಲ. ವಿಷಯ ಹೀಗಿರುವಾಗ ಇನ್ನು ಆಗಿನ ಕಾಲದ ಕತೆಯನ್ನೇ ಹೇಳಿ ಕನ್ನಡ ಪ್ರೇಕ್ಷಕರಿಗೆ ಒಳ್ಳೊಳ್ಳೆ ಚಿತ್ರವನ್ನ ನಮ್ಮ ಭಾಷೆಯಲ್ಲಿ ನೋಡದಂತೆ ಚಿತ್ರ ರಂಗದ ಕೆಲವರು ಯಾಕೆ ಮಾಡುತಿದ್ದಾರೆ!?, ಹಾಗೆ ಡಬ್ಬಿಂಗ್ನಿಂದ ಮುಳುಗಿ ಹೋಗುವಷ್ಟು ‘ಕನ್ನಡ ಚಿತ್ರ ರಂಗ’ ದುರ್ಬಲವಾಗಿಲ್ಲ.೭೫ ವರ್ಷದ ಇತಿಹಾಸವಿರುವ ಚಿತ್ರ ರಂಗದ ಮಾರುಕಟ್ಟೆ ವ್ಯಾಪ್ತಿ ಚಿಕ್ಕದು ಅಂತ ಇನ್ನ ಎಷ್ಟು ದಿನ ಹೆದರ್ತಿರ ಸ್ವಾಮೀ?
ಶಾರ್ಟ್ ವೇವ್ ರೇಡಿಯೋ ಪ್ರಸಾರದಲ್ಲಿ ಕನ್ನಡದ ದನಿಯಿಲ್ಲ
-ಸಾತ್ವಿಕ್ ಎನ್ ವಿ
ಕನ್ನಡಿಗನೊಬ್ಬ ತನ್ನ ಕೆಲಸದ ನಿಮಿತ್ತ ಕರ್ನಾಟಕದ ಹೊರಗೆ ಬದುಕಬೇಕಾಗಿ ಬಂದರೆ ಆತನಿಗೆ ಕನ್ನಡ ಆಕಾಶವಾಣಿ ಕೇಳಲು ಸಾಧ್ಯವಿಲ್ಲ. ಕಾರಣ, ಕಿರುತರಂಗಾಂತರ ಅಂದರೆ ಶಾರ್ಟ್ವೇವನಲ್ಲಿ ಕನ್ನಡದ ಯಾವುದೇ ಆಕಾಶವಾಣಿ ಕೇಂದ್ರ ಪ್ರಸಾರ ಮಾಡುತ್ತಿಲ್ಲ. ಆದರೆ ಇಂಥ ಪರಿಸ್ಥಿತಿ ಇತರೆ ಭಾಷಿಕರಿಗೆ ಇದೆಯೇ? ಇಲ್ಲ. ಕನ್ನಡವನ್ನು ಬಿಟ್ಟು ಮಿಕ್ಕೆಲ್ಲ ದಕ್ಷಿಣಭಾರತದ ಭಾಷೆಗಳಿಗೂ ಈ ಸೌಲಭ್ಯವಿದೆ.
ಏನಿದು ಕಿರುತರಂಗಾತರದಲ್ಲಿ ರೇಡಿಯೋ ಪ್ರಸಾರ?
ಬಾನುಲಿ ಪ್ರಸಾರದಲ್ಲಿ ಶಾರ್ಟ್ ವೇವ್(SW), ಮೀಡಿಯಂ ವೇವ್(MW) ಮತ್ತು ಫ್ರಿಕ್ವೇನ್ಸಿ ಮೊಡೊಲೇಷನ್ (FM) ಎಂಬ ಮೂರು ರೀತಿಯ ತರಂಗಾತರಗಳನ್ನು ಬಳಸಲಾಗುತ್ತದೆ. ಈಗ ಕರ್ನಾಟಕದ ಆಕಾಶವಾಣಿ ಕೇಂದ್ರಗಳು ಕೇವಲ ಎಂ.ಡಬ್ಲ್ಯೂ ಮತ್ತು ಎಫ್.ಎಂ ಗಳಲ್ಲಿ ಮಾತ್ರ ತಮ್ಮ ಕಾರ್ಯಕ್ರಮಗಳನ್ನು ಪ್ರಸರಿಸುತ್ತಿವೆ. ಆದರೆ ಎಂ.ಡಬ್ಲ್ಯೂ ಮತ್ತು ಎಫ್.ಎಂ ತರಂಗಗಳ ದೊಡ್ಡ ಕೊರತೆ ಎಂದರೆ ಈ ಅಲೆಗಳು ಬಹಳ ದೂರ ಚಲಿಸಲಾರವು. ಆದರೆ ಶಾರ್ಟ್ ವೇವ್ ಹಾಗಲ್ಲ. ಅದರ ಚಲನೆಯ ಶಕ್ತಿ ಖಂಡಾಂತರ ವ್ಯಾಪ್ತಿಯದ್ದು. ಇಂದು ನಾವು ಕೇಳುತ್ತಿರುವ ಬಿಬಿಸಿ, ವಾಯ್ಸ್ ಆಫ್ ಅಮೆರಿಕಾ, ರೇಡಿಯೋ ಸಿಲೋನ್, ಚೈನಾ ರೇಡಿಯೋ ಇಂಟರ್ ನ್ಯಾಷನಲ್ ಇತ್ಯಾದಿಗಳು ಇದೇ ತರಂಗಗಳನ್ನು ಬಳಸಿಕೊಳ್ಳುತ್ತವೆ. ಈ ತರಂಗಗಳನ್ನು ಬಳಸಿ ಪ್ರಪಂಚದ ಯಾವುದೇ ನಿರ್ದಿಷ್ಟ ಭಾಗಕ್ಕೆ ಪ್ರಸಾರವನ್ನು ತಲುಪಿಸಲು ಸಾಧ್ಯ. ಇದನ್ನು ಬೀಮಿಂಗ್ ಎಂದು ಕರೆಯಲಾಗುತ್ತದೆ. ಮತ್ತಷ್ಟು ಓದು 
ಕನ್ನಡದಲ್ಲೂ ಮಾಹಿತಿ ಮುದ್ರಿತವಾಗಲಿ
– ರವಿ ಸಾವ್ಕರ್
ಇತ್ತೀಚಿಗೆ ಪೆಪ್ಸಿಕೋ ರವರ ಲೇಸ್ , ಮ್ಯಾಕ್ ಡೋನಾಲ್ದ್ ರವರ ಬರ್ಗರ್ ಗಳಲ್ಲಿ ಆರೋಗ್ಯಕ್ಕೆ ಹಾನಿಕಾರವಾಗುವಂಥಹ ಕೊಬ್ಬಿನಂಶ ಹೆಚ್ಚಾಗಿ ಇದೆ ಅನ್ನೋದರ ಬಗ್ಗೆ ಸುದ್ದಿ ಪ್ರಚಾರದಲ್ಲಿದೆ. ತಯಾರಕರು ತಮ್ಮ ಉತ್ಪಾದನೆಗಳಲ್ಲಿ ಯಾವ ಸಾಮಗ್ರಿ ಎಷ್ಟು ಪ್ರಮಾಣದಲ್ಲಿದೆ ಎಂದು ಗ್ರಾಹಕನಿಗೆ ಸರಿಯಾಗಿ ತಿಳಿಸುವುದು ಅವರ ಕರ್ತವ್ಯ. ಹಾಗೆಯೇ ಅದನ್ನು ಕೇಳಿ ಪಡೆಯುವುದೂ ಸಹ ಒಬ್ಬ ಗ್ರಾಹಕನಹಕ್ಕು ಆಗಿದೆ. Centre for Science and Environment (CSE) ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ.ಆದರೆ ಇಂಥಹ ಚರ್ಚೆಗಳಲ್ಲಿ ಈ ಮಾಹಿತಿಯನ್ನು ಜನರು ಅರಿಯಬೇಕಾದರೆ ಅದು ಜನರ ಭಾಷೆಯಲ್ಲಿ ಇರಬೇಕು ಅನ್ನೋ ಅತಿ ಮುಖ್ಯವಾದ ಅಂಶವನ್ನು ಮರೆತ ಹಾಗಿದೆ. ಒಂದು ವರದಿಯ ಪ್ರಕಾರ ನಮ್ಮ ದೇಶದಲ್ಲಿ ೭% ಜನರಿಗೆ ಮಾತ್ರ ಇಂಗ್ಲಿಷ್ ನಲ್ಲಿ ಇರುವುದನ್ನು ಅರ್ಥಮಾಡಿಕೊಳ್ಳಬಲ್ಲರು. ಮಿಕ್ಕ ೯೩% ಜನರಿಗೆ ಇಂಗ್ಲಿಷ್ ನಲ್ಲಿ ಮಾಹಿತಿ ತಲುಪಿಸಲಾಗದ ಪರಿಸ್ಥಿತಿ ಇರುವಾಗ , ಕೇವಲ ಇಂಗ್ಲಿಷ್ನಲ್ಲಿ ಮಾಹಿತಿಯನ್ನು ನಮೂದಿಸಿದರೆ ನಮ್ಮ ಜನರಿಗೆ ಹೇಗೆ ಅರ್ಥವಾದೀತು? ಒಬ್ಬ ಕನ್ನಡ ಮಾತ್ರ ಬರುವ ಗ್ರಾಹಕನೂ ಸಹ ಅಷ್ಟೇ ದುಡ್ಡು ಕೊಟ್ಟು ಖರೀದಿ ಮಾಡಿರುತ್ತಾನೆ. ಅವನಿಗೆ ಆ ಸಾಮಗ್ರಿಯ ಬಗೆಗೆ ಮಾಹಿತಿಯನ್ನು ತಿಳಿಸದಿರುವುದು ಯಾವ ನ್ಯಾಯ ?






