ವಿಷಯದ ವಿವರಗಳಿಗೆ ದಾಟಿರಿ

Posts from the ‘ಕರ್ನಾಟಕ,ಕನ್ನಡ’ Category

2
ಏಪ್ರಿಲ್

‘ಕೋಮುವಾದ ಮತ್ತು ಮಹಿಳೆ’ ಎಂಬ ಲೇಖನಕ್ಕೊಂದು ಪ್ರತಿಕ್ರಿಯೆ

– ಡಾ.ಜಿ. ಭಾಸ್ಕರ ಮಯ್ಯ

ಸಬಿಹಾರವರ ಮಹಿಳೆ ಮತ್ತು ಕೋಮುವಾದ ಇಂದು ವಿವಾದಕ್ಕೆ ಒಳಗಾಗಿರುವುದು ಜನರ ಕೋಮುವಾದೀಕರಣದ ಪ್ರಕ್ರಿಯೆ ಎಷ್ಟೊಂದು ಉಲ್ಬಣಿಸಿದೆ ಎನ್ನುವುದಕ್ಕೆ ಸಾಕ್ಷಿ. ಸಬಿಹಾರವರ ಲೇಖನದ ಯಾವ ಒಂದು ವಾಕ್ಯವೂ ಅಸತ್ಯದಿಂದ ಕೂಡಿಲ್ಲ. ಪೂರ್ವಾಗ್ರಹಪೀಡಿತವಾಗಿಲ್ಲ. ಅದು ವಾಸ್ತವಕ್ಕೆ ಹಿಡಿದ ಕನ್ನಡಿಯಂತಿದೆ. ಹಾಗೆ ನೋಡಿದರೆ, ಗುಜರಾತಿನ ಬಗ್ಗೆ ಲೇಖಕಿ ಹೇಳಿರುವುದು ಕಡಿಮೆಯೆ. ಅಲ್ಲಿಯ ನರಮೇಧ ಮತ್ತು ಮಹಿಳೆಯರ ಮೇಲಿನ ಭಯಾನಕ ಅತ್ಯಾಚಾರ ಮಧ್ಯಯುಗದ ಯಾವುದೇ ಧರ್ಮಯುದ್ಧ, ಕ್ರುಸೇಡ್ ಮತ್ತು ಜಿಹಾದ್‌ಗೆ ಕಡಿಮೆಯಿಲ್ಲ. ಮನುಷ್ಯತ್ವದಲ್ಲಿ ನಂಬಿಕೆ ಇರುವವರಿಗೆ ಆಕ್ರೋಶ ಉಂಟಾಗುವಂತಹ ಸನ್ನಿವೇಶದ ಚಿತ್ರಣವನ್ನು ಲೇಖಕಿ ಅತ್ಯಂತ ಸಹನೆಯಿಂದ ಉಲ್ಲೇಖಿಸುತ್ತಾರೆ. ಕೋಮುವಾದದ ವಿವಿಧ ಮುಖಗಳನ್ನು ಮತ್ತು ಆಯಾಮಗಳನ್ನು ಚರ್ಚಿಸುತ್ತಾರೆ. ಆದರೆ, ಲೇಖನದ ಆರಂಭದಲ್ಲಿ ಫಣಿರಾಜರವರು ಕೋಮುವಾದದ ಕುರಿತು ಹೇಳಿದ ಮಾತಿನ ಒಂದು ಉಲ್ಲೇಖವಿದೆ. ಅದು …ಬಹುಸಂಖ್ಯಾತರ ಸಂಸ್ಕೃತಿಗೆ ಅಲ್ಪಸಂಖ್ಯಾತರು ಹೊರಗಿನವರು ಎಂದು ವಾದಿಸಿ ದ್ವೇಷ ತಿರಸ್ಕಾರಗಳನ್ನು ಬೆಳೆಸುವುದೇ ಕೋಮುವಾದ – ಕೋಮೂವಾದಕ್ಕೆ ಇಂತಹ ಸರಳ ವ್ಯಾಖ್ಯೆ ಸರಿಯಲ್ಲ. ಫಣಿರಾಜ್ ಮತ್ತು ಜಿ. ರಾಜಶೇಖರ್ ಕೋಮುವಾದವನ್ನು ವಿರೋಧಿಸುವಲ್ಲಿ ನಿಷ್ಪಕ್ಷಪಾತಿಗಳಾಗಿರದೆ, ಒಂದು ಕೋಮಿನ ಕೋಮುವಾದದ ಕುರಿತು ಮೌನವಹಿಸುವುದು ಅಥವಾ ಅಂತಹ ಸಂಸ್ಥೆಗಳೊಂದಿಗೆ ಸಂಬಂಧವನ್ನಿರಿಸಿಕೊಳ್ಳುವುದು ನಿಜಕ್ಕೂ ಆಕ್ಷೇಪಾರ್ಹ. ಆದರೆ ಸಬಿಹಾರವರ ಬರವಣಿಗೆ ಈ ನಿಟ್ಟಿನಲ್ಲಿ ದೋಷಮುಕ್ತವಾಗಿದೆ. ಅವರು ಪಾಕಿಸ್ತಾನ, ಬಾಂಗ್ಲಾ ಮತ್ತು ತಸ್ಲೀಮಾ ನಜರೀನ್ ಅವರನ್ನು ಉಲ್ಲೇಖಿಸುತ್ತಾ ನೆರೆಯ ದೇಶಗಳಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲಿನ ದೌರ್ಜನ್ಯದ ಕುರಿತೂ ಹೇಳುತ್ತಾರೆ. ಸಬಿಹಾರವರ ಲೇಖನ ಈ ನಿಟ್ಟಿನಲ್ಲಿ ವಾಸ್ತವವಾದೀ, ಮಾನವತಾವಾದೀ ಬರವಣಿಗೆಯೆಂಬುದು ನಿಸ್ಸಂಶಯ.

ಮತ್ತಷ್ಟು ಓದು »

27
ಮಾರ್ಚ್

ಕನ್ನಡಮ್ಮನ ಹೆಮ್ಮೆಯ ಪುತ್ರನೂ ಅಣ್ಣಾವರ ಮಗನೂ

– ಜಿ.ವಿ ಜಯಶ್ರೀ

ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ,

ಇದು ಎಂಬತ್ತರ ದಶಕದ ಹಾಡು. ತುಂಬಾ ಇಷ್ಟ ಪಟ್ಟು ಈಗಲೋ ಕೇಳುವಂತಹ ಸುಂದರ ಗೀತೆ.ಈ ಚಿತ್ರದಲ್ಲಿ ನಟಿಸಿದ ಪುನೀತ್ ರಾಜ್ ಕುಮಾರ್ ನಟನೆಯಷ್ಟೇ ಮನಸೆಳೆದ ಸಂಗತಿ ಅಂದ್ರೆ ಅವರು ಹಾಡಿದ ಈ ಹಾಡು .
ಮೊದಲಿನಿಂದ ವೀಕ್ಷಕ ದೇವರ ಮನ ಸೆಳೆದ ಕಲಾವಿದ ಪುನೀತ್. ಅವರ ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಖುದ್ದು ಪುನೀತ್ ವಿಷಯದಲ್ಲಿ ತೋರುವ ಅಭಿಮಾನ ಅಪಾರ.

ಈತನ ಬಗ್ಗೆ ತಮಗೆ ತುಂಬಾ ಹೆಮ್ಮೆ ಇದೆ. ಅಪ್ಪಾಜಿಯ ನಂತರ ಬಣ್ಣ ಹಚ್ಚಿದ (ಪೂರ್ಣಿಮಾ ಸಹ ಹಚ್ಚಿದ್ದಾರೆ ) ಪುನೀತ್ ತಮಗೆ ಮಾದರಿ ಎನ್ನುವ ಮಾತು ಹೇಳಿರುವುದು ಅವರು ತಮ್ಮನ ಮೇಲೆ ಇಟ್ಟಿರುವ ಪ್ರೀತಿಯನ್ನು ಎತ್ತಿ ತೋರುತ್ತದೆ.

ಶಿವಣ್ಣ ಜೀ ಕನ್ನಡ ವಾಹಿನಿಯಲ್ಲಿ ಕಾರ್ಯಕ್ರಮ ನಡೆಸಿ ಕೊಟ್ಟಾಗ ಅಪಾರ ಸಂಖ್ಯೆಯ ವೀಕ್ಷಾಕಾಭಿಮಾನ ಹೊಂದಿದ್ದರು.ಆ ಕಾರ್ಯಕ್ರಮದ ಮೂಲಕ  ಹೆಚ್ಚು ಗೊತ್ತಾದರೂ ಶಿವಣ್ಣ. ಕಾರಣ ಇಷ್ಟೇ ಸಿನಿಮಾದಲ್ಲಿ ಗಿಣಿಗೆ ಕಲಿಸಿದ ಪಾಠದಂತೆ   ಡೈಲಾಗ್ ಹೇಳುವ ಶಿವಣ್ಣನಿಗಿಂತ  ತನ್ನ ಹೃದಯದಿಂದ ಮಾತನಾಡಿದ ಶಿವಣ್ಣ ಇಷ್ಟ ಆಗಿತ್ತು.. ಮಾತಲ್ಲಿ ಯಾವುದೇ ರೀತಿಯ ನಾಟಕೀಯತೆ, ಕಲಿತ ಮಾತು ಇರದೇ ಸಾಮಾನ್ಯ ಮನೆಕನ್ನಡ ಮಾತಾಡಿ , ತಮ್ಮ ಸರಳತೆ, ವಿಶೇಷ ವ್ಯಕ್ತಿತ್ವ್ದದಿಂದ ಗೆದ್ದಿದ್ದರು.

ಮತ್ತಷ್ಟು ಓದು »

21
ಮಾರ್ಚ್

ನಿಮ್ಮ ಬ್ಲಾಗ್ ಪೂರ್ತಿ ಕನ್ನಡದಲ್ಲಿ

ಆತ್ಮೀಯ ಕನ್ನಡಿಗರೆ,
ಈಗ ನೀವು ನಿಮ್ಮ ಬ್ಲಾಗ್ ಅನ್ನು ಆಂಗ್ಲ ಭಾಷೆಯಲ್ಲಿ ಮಾತ್ರವಲ್ಲದೆ ಪೂರ್ತಿ ಕನ್ನಡದಲ್ಲೇ ನೋಡಬಹುದು. ಈಗ ನಿಮಗೆ ಗೂಗಲ್ ಈ ರೀತಿಯ ಅವಕಾಶವನ್ನು ಕಲ್ಪಿಸಿದೆ.gs->Language and Formatting

ಅಲ್ಲಿ Language ಕಾಲಂನಲ್ಲಿ ಕನ್ನಡ ಭಾಷೆಯನ್ನು ಆರಿಸಿಕೊಳ್ಳಿ.

ನಂತರ Save ಮಾಡಿ

ಗ್ಯಾಡ್ಜೆಟ್ ಗಳು ಬ್ಲಾಗಿಗೆ ಹೊರಗಿನವುಗಳಾಗಿರುವುದರಿಂದ ಅಲ್ಲಿ ನಿಮಗೆ ಕನ್ನಡ ಸಿಗುವುದಿಲ್ಲ.

ಈಗ ನಿಮ್ಮ ಬ್ಲಾಗ್ ಕನ್ನಡದಲ್ಲಿ ತಯಾರಾಗಿರುತ್ತದೆ.

ಕನ್ನಡ ಭಾಷೆಯನ್ನು ಸೇರಿಸಿರುವುದಕ್ಕೆ ನನ್ನ ಕಡೆಯಿಂದ ಗೂಗಲ್ ಗೆ ಒಂದು ಅಭಿನಂದನೆ

ಈ ವಿಷಯವನ್ನು ಎಲ್ಲರೊಂದಿಗೂ ಹಂಚಿಕೊಳ್ಳಿ 🙂

***************************************************************************

ಚಿತ್ರ ಕೃಪೆ: hackuadi.blogspot.in

17
ಮಾರ್ಚ್

ಕನ್ನಡ ವಿಕಿಪೀಡಿಯ: ಅನುವಾದಗೊಂಡ ಲೇಖನಗಳ ಸಂವರ್ಧನಾ ಯೋಜನೆ

– ಓಂ ಶಿವಪ್ರಕಾಶ್

ಆತ್ಮೀಯ ಕನ್ನಡ ವಿಕಿಪೀಡಿಯ ಗೆಳೆಯರೆ,

ಈ ಸಂದೇಶ ಕನ್ನಡ ವಿಕಿಪೀಡಿಯದಲ್ಲಿನ ಲೇಖನಗಳ ಗುಣಮಟ್ಟವನ್ನು ಉತ್ತಮ ಪಡಿಸುವ ಸಲುವಾಗಿ ಪ್ರಾರಂಭಿಸಲಾಗುತ್ತಿರುವ ಒಂದು ಮುಖ್ಯ ಯೋಜನೆಯ ಬಗ್ಗೆ. 

ಸುಮಾರು ೨೦೧೦ – ೨೦೧೧ ರಲ್ಲಿ, ಗೂಗಲ್ ತನ್ನ ಗೂಗಲ್ ಟ್ರಾನ್ಸ್ಲೇಷನ್ ಟೂಲ್ ಕಿಟ್‌ನ ಟ್ರಾನ್ಸ್ಲೇಷನ್ ಮೆಮೋರಿಯನ್ನು ಹೆಚ್ಚಿಸುವ ಸಲುವಾಗಿ  ಭಾರತೀಯ ಭಾಷಾ ವಿಕಿಪೀಡಿಯಾಗಳಲ್ಲಿ (ಮುಖ್ಯವಾಗಿ ಕನ್ನಡ, ಹಿಂದಿ, ತಮಿಳು ಮತ್ತು ತೆಲುಗು) ಹಮ್ಮಿಕೊಂಡ ಯೋಜನೆ ಅಡಿಯಲ್ಲಿ, ಅನೇಕ ಲೇಖನಗಳನ್ನು ಇಂಗ್ಲೀಷ್ ವಿಕಿಪೀಡಿಯಾದಿಂದ ಆಯಾ ಭಾಷೆಯ ವಿಕಿಪೀಡಿಯಾಗಳಿಗೆ ಭಾಷಾಂತರ ಮಾಡಿತು. ಕೆಲವು ಬಳಕೆದಾರರು ಈ ಯೋಜನೆಯ ಬಗ್ಗೆ ತಮ್ಮ ಕಳವಳವನ್ನೂ ವ್ಯಕ್ತಪಡಿಸಿದರು. ವಿಕಿಪೀಡಿಯ ಸಮುದಾಯವನ್ನೇ ಬೆಳೆಸದೆ ಮಾಹಿತಿಯನ್ನು ಮಾತ್ರ ಹುಟ್ಟುಹಾಕುವುದು ಇದಕ್ಕೆ ಮುಖ್ಯ ಕಾರಣವಾಗಿತ್ತು. ಜೊತೆಗೆ, ಬಹಳಷ್ಟು ಲೇಖನಗಳನ್ನು ಕನ್ನಡ ವಿಕಿಪೀಡಿಯಕ್ಕೆ ಹಾಕಲಾದರೂ, ಅದರ ಅನುವಾದ ಮತ್ತು ಶೈಲಿಯಲ್ಲೂ ಕೂಡ ತೊಂದರೆಗಳು ಕಂಡುಬಂದವು. ಆದಾಗ್ಯೂ, ನಮಗಿಲ್ಲಿ ಒಂದು ಉತ್ತಮ ಅವಕಾಶವಿದೆ, ಏಕೆಂದರೆ ಈ ಯೋಜನೆಯ ಮೂಲಕ ಸೃಷ್ಟಿಸಲಾದ ಲೇಖನಗಳಲ್ಲಿ ಉತ್ತಮ ಮಾಹಿತಿ ಲಭ್ಯವಿದೆ.  

15
ಮಾರ್ಚ್

ನಮ್ಮ ಮೇಟ್ರೋದಲ್ಲಿ ಇನ್ನೂ ಸಿಗದ ಕನ್ನಡ

-ರವಿ ಸಾವ್ಕರ್

ವಿಶ್ವ ಗ್ರಾಹಕದ ದಿನದ ವಿಶೇಷ ಲೇಖನ [15ನೇ ಮಾರ್ಚ್]

ಕೆಲ ತಿಂಗಳ ಹಿಂದೆ “ನಮ್ಮ ಮೆಟ್ರೋ” ವಿನ ಅಧಿಕಾರಿಗಳು ದೈನಂದಿನ ಎಲ್ಲ ವ್ಯವಹಾರಗಳಲ್ಲಿ ಕನ್ನಡವನ್ನು ಬಳಕೆ ಮಾಡುವುದಾಗಿ ಹೇಳಿದ್ದರು. ಹಾಗೆಯೇ ಹೊರಗುತ್ತಿಗೆ ಕೊಟ್ಟಿರುವ ಸೆಕ್ಯೂರಿಟಿ ಗಾರ್ಡ್ ಎಜೆನ್ಸಿ ನವರಿಗೆ ಕನ್ನಡ ಓದಲು ಬರೆಯಲು ಬರುವವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ನಿಯಮ ಹಾಕಿದೀವಿ ಅಂತ ಸಹ ಹೇಳಿದ್ದರು. ಮೆಟ್ರೋ ಅಧಿಕಾರಿಗಳ ಹೇಳಿಕೆಗಳ ತುಣುಕು ಹೀಗಿದೆ. ಇವರು ಎಷ್ಟರ ಮಟ್ಟಿಗೆ ತಮ್ಮ ನಿಯಮಗಳನ್ನು ತಾವೇ ಪಾಲಿಸುತ್ತಾ ಇದಾರೆ ಅಂತ ನೋಡೋಣ.

ನೆನ್ನೆ ಮೇಟ್ರೋದಲ್ಲಿ ಒಮ್ಮೆ ಹೋಗಿ ಬರೋಣವೆಂದು ಮನೆ ಮಂದಿಯೆಲ್ಲ ಹೋಗಿದ್ದೆವು. ಮೆಟ್ರೋ ದಲ್ಲಿ ಈಗಲಾದರೂ ಕನ್ನಡ ಬಾರದ ಸೆಕ್ಯೂರಿಟಿ ಗಾರ್ಡ್ ಗಳಿಂದ ಮುಕ್ತಿ ಸಿಕ್ಕಿರಬಹುದೇನೋ ಅಂದುಕೊಂಡಿದ್ದೆ. ಆದರೆ ಬಯ್ಯಪ್ಪನಹಳ್ಳಿಯಲ್ಲಿ ಸಿಕ್ಕ ಮೊದಲ ಸೆಕ್ಯೂರಿಟಿ ಗಾರ್ಡ್ ಹಿಂದಿಯಲ್ಲಿ ಮಾತಾಡಿಸಲು ಶುರು ಮಾಡಿದ. ಕನ್ನಡದಲ್ಲಿ ಮಾತಾಡಿಸಿದಾಗ ಕನ್ನಡ ತನಗೆ ಗೊತ್ತಿಲ್ಲವೆಂದು ಉತ್ತರ ಕೊಟ್ಟ. ಕೆಲ ದಿನಗಳ ಹಿಂದೆ ಇದೆ ರೀತಿಯ ಧೋರಣೆಯ ಉತ್ತರವನ್ನು ಮೆಟ್ರೋ ಸೆಕ್ಯೂರಿಟಿ ಗಾರ್ಡ್ ಗಳು ಖಾಸಗಿ ಕನ್ನಡ ವಾಹಿನಿಗಳಿಗೆ ಕೊಟ್ಟಿದ್ದನ್ನು ಇಲ್ಲಿ ನೆನೆಯಬಹುದು.
ಇದನ್ನು ನೋಡಿದರೆ ಗಾರ್ಡ್ ವೆಲ್ ಸೆಕ್ಯೂರಿಟಿ ಎಜೆನ್ಸಿ ಗೆ ಕನ್ನಡ ಬರುವವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳಬೇಕು ಅಂತ ಶರತ್ತನ್ನು ನಿಜವಾಗಲೂ ವಿಧಿಸಿದ್ದಾರ ಅಂತ ಅನುಮಾನ ಬರುತ್ತದೆ.ದಿನಕ್ಕೆ ಸಾವಿರಾರು ಜನರನ್ನು ತಪಾಸಣೆ ಮಾಡುವ ಇವರಿಗೆ ಕನ್ನಡವೇ ಗೊತ್ತಿರದಿದ್ದರೆ ಹೇಗೆ? ಬೆಂಗಳೂರಿನ ಮೆಟ್ರೋ ಸ್ಟೇಷನ್ ಒಳಗೆ ಹಿಂದಿ ಕಲಿತೆ ಕಾಲಿಡಬೇಕು ಎಂದರೆ ಹೇಗೆ?
15
ಮಾರ್ಚ್

ಕನ್ನಡ ಕಟ್ಟುವಿಕೆಯ ಹತ್ತು ಹಲವು ವಿಷಯಗಳು

-ಡಾ. ಪಂಡಿತಾರಾಧ್ಯ

(ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಅಖಿಲ ಭಾರತ ೭೮ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಕನ್ನಡದ ಹಲವು ವಿಚಾರಗಳನ್ನು ತಿಳಿಸಲು ಮೈಸೂರು ವಿವಿಯ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾಗಿರುವ ಡಾ.ಪಂಡಿತಾರಾಧ್ಯ ಅವರು ಕರಪತ್ರವೊಂದನ್ನು ಸಿದ್ಧಪಡಿಸಿದ್ದರು. ಆ ಕರಪತ್ರದ ಪೂರ್ಣಪಾಠವಿಲ್ಲಿದೆ.)

೩ನೇ ಶತಮಾನದ ಅಶೋಕನ ಶಾಸನಗಳಲ್ಲಿ ಬ್ರಾಹ್ಮೀ ಲಿಪಿಯಲ್ಲಿರುವ ಪ್ರಾಕೃತ ಭಾಷೆಯ ಅಂಕಿಗಳು ಮೊದಲಬಾರಿಗೆ ಕಾಣಿಸುತ್ತವೆ. ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿಯ ಅಶೋಕನ ಶಾಸನದಲ್ಲಿ ೨೫೬ ಎನ್ನುವುದನ್ನು ೨೦೦, ೫೦, ೬ ಎಂಬ ಮೂರು ಪ್ರತ್ಯೇಕ ಅಂಕಿಗಳಲ್ಲಿ ಬರೆಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗುಡ್ನಾಪುರದಲ್ಲಿ ದೊರೆತಿರುವ ಕ್ರಿಶ.೬ನೇ ಶತಮಾದ ಕದಂಬ ರವಿವರ್ಮನ ಸಂಸ್ಕೃತ ಶಾಸನದಲ್ಲಿ ಎಲ್ಲ ಒಂಬತ್ತು ಅಂಕಿಗಳಿವೆ.

ಬ್ರಾಹ್ಮೀ ಲಿಪಿಯ ದಕ್ಷಿಣದ ಕವಲಿನಿಂದ ಬೆಳೆದುಬಂದಿರುವ ಕನ್ನಡ ಲಿಪಿಯಲ್ಲಿ ಕನ್ನಡ ಅಂಕಿಗಳೂ ಇವೆ. ಕ್ರಿ.ಶ. ೮ನೆಯ ಶತಮಾನದಿಂದ ಶಾಸನಗಳಲ್ಲಿ ಕನ್ನಡ ಅಂಕಿಗಳು ಕಾಣಿಸುತ್ತವೆ. ದಕ್ಷಿಣ ಭಾರತದಲ್ಲಿ ಕನ್ನಡ ಮಾತ್ರ ತನ್ನ ಅಂಕಿಗಳನ್ನು ಉಳಿಸಿಕೊಂಡಿರುವುದು ಕನ್ನಡಿಗರ ಹೆಮ್ಮೆ. ಬ್ರಿಟಿಷರು, ಹೈದರಾಬಾದಿನ ನಿಜಾಮರು ತಮ್ಮ ನೋಟುಗಳಲ್ಲಿ ಕನ್ನಡ ಅಂಕಿಗಳನ್ನು ಬಳಸಿದ್ದರು. ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರ(೧೮೪೨)ವನ್ನು ಆರಂಭಿಸಿದ ಜರ್ಮನ್ ಪಾದ್ರಿಗಳು ಕನ್ನಡ ಅಂಕಿಗಳನ್ನೇ ಬಳಸಿದ್ದಾರೆ.

ಮತ್ತಷ್ಟು ಓದು »

8
ಮಾರ್ಚ್

‘ರಸಋಷಿಯ ರಮ್ಯಲೋಕದೆಡೆಗೆ’

-ಹೃದಯ ಶಿವ

ಕನ್ನಡ ಸಾಹಿತ್ಯ ಜಗತ್ತಿನ ಮೇರು ಶೃಂಗದಲ್ಲಿ ಶಾಶ್ವತವಾಗಿ ನಿಂತಿರುವ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಳದ ಕನ್ನಡಿಗ ಬಹುಷಃ ಇರಲಾರ. ಬಾಲ್ಯದಲ್ಲಿ ಆಂಗ್ಲ ಸಾಹಿತ್ಯದ ವ್ಯಾಮೋಹಕ್ಕೊಳಗಾಗಿ ಹಲವು ಆಂಗ್ಲ ಕವಿತೆಗಳನ್ನು ಬರೆದರೂ ಕ್ರಮೇಣ ಕನ್ನಡ ಸಾಹಿತ್ಯ ಕೃಷಿಗೆ ಕೈ ಹಾಕಿ ಇಂದು ಕನ್ನಡ, ಕರ್ನಾಟಕದಷ್ಟೇ ಚಿರಾಯುವಾಗಿರುವ ಪುಟ್ಟಪ್ಪನವರು ೧೯೦೪ರಲ್ಲಿ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದರು. ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತ ಮಲೆನಾಡಿನೊಂದಿಗೆ ಆಟವಾಡುತ್ತ, ಮೋಹಕ ಮಂಜನೊಂದಿಗೆ ಮಾತಿಗಿಳಿಯುತ ಬೆಳೆದ ಇವರು ಮೂಲತಃ ನಿಸರ್ಗದ ಆರಾಧಕರಾಗಿದ್ದರು. ಪ್ರೌಢರಾಗುತ್ತಾ ಹೃದಯ ಆರ್ದ್ರಗೊಳ್ಳುತ್ತಿದ್ದಂತೆಯೇ ಮೆದುಳ ಬತ್ತಳಿಕೆಯಲ್ಲಿ ತುಂಬಿಕೊಂಡ ಕಲ್ಪನೆಯ ಸೂಕ್ಷ್ಮತೆಗಳು ಅಕ್ಷರ ರೂಪ ಪಡೆಯುತ್ತಾ ಸಾಗಿ ಕೊನೆಗೆ ಬ್ರಹದಾಕಾರದ ಹೆಮ್ಮರವಾಗಿದ್ದು ಈಗ ಜಗಜ್ಜ್ರಾಹೀರಾಗಿದೆ.

ಕೊಳಲು, ಪಾಂಚಜನ್ಯ, ಅಗ್ನಿಹಂಸ, ಕುಟೀ ಚಕ, ಮಂತ್ರಾಕ್ಷತೆ, ವಿಭೂತಿ ಪೂಜೆ, ಕದರಡಕೆ, ಮರಿ ವಿಜ್ಞಾನಿ, ದ್ರೌಪತಿಯ ಶ್ರೀಮುಡಿ, ರಕ್ತಾಕ್ಷಿ, ಶ್ಮಶಾನ ಕುರುಕ್ಷೇಂತ್ರಂ, ಮಹಾರಾತ್ರಿ ಸೇರಿದಂತೆ ಇನ್ನು ಅನೇಕ ಕೃತಿಗಳನ್ನು ರಚಿಸಿದ ಕುವೆಂಪು ಅವರಿಗೆ ಒಲಿಯದ ಪ್ರಶಸ್ತಿ, ಪುರಸ್ಕಾರಗಳಿಲ್ಲ. ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯಕ್ಕಾಗಿ ಜ್ಞಾನಪೀಠ ಲಭಿಸಿದ್ದು ಜೊತೆಗೆ ಪಂಪ ಪ್ರಶಸ್ತಿ, ಕೇಂದ್ರ ಹಾಗೂ ರಾಜ್ಯ ಸಾಹಿತ್ಯ ಅಕಾಡೆಮಿಯ ಬಹುಮಾನಗಳೊಂದಿಗೆ ಹಲವು ವಿಶ್ವ ವಿದ್ಯಾನಿಲಯಗಳ ಗೌರವ ಡಾಕ್ಟರೇಟ್‌ಗಳು ಬಂದಿವೆ. ಅಧ್ಯಾಪಕರಾಗಿದ್ದುಕೊಂಡೇ ಎಲ್ಲಾ ಪ್ರಕಾರದ ಸಾಹಿತ್ಯ ರಚನೆಯಲ್ಲಿ ಸೈ ಎನಿಸಿಕೊಂಡ ಇವರು ಬರೆದ ಮಲೆಗಳಲ್ಲಿ ಮದುಮಗಳು ಹಾಗೂ ಕಾನೂರು ಹೆಗ್ಗಡತಿ ಎಂಬೆರಡು ಕಾದಂಬರಿಗಳು ಮಲೆನಾಡಿನ ಚಿತ್ರಣ, ಜೀವನವನ್ನು ವಿಸ್ತಾರವಾಗಿ ಬಿಚ್ಚಿಟ್ಟ ಮಹಾಗ್ರಂಥಗಳೇ ಸರಿ. ಈ ಮೇರು ಕವಿಯ ಲೇಖನಿಯಿಂದ ಮೂಡಿ ಬಂದ ತೆರೆದಿದೆ ಓ ಬಾ ಅತಿಥಿ ಭಾವಗೀತೆಯು ನಿರ್ದೇಶಕದ್ವಯರಾದ ದೊರೈ – ಭಗವಾನ್ ನಿರ್ದೇಶನದ ’ಹೊಸಬೆಳಕು’ ಚಿತ್ರದಲ್ಲಿ ದೃಶ್ಯರೂಪ ಪಡೆದುದ್ದು ನಮ್ಮೆಲ್ಲರ ಸೌಭಾಗ್ಯ.

ಮತ್ತಷ್ಟು ಓದು »

29
ಫೆಬ್ರ

“ಸ್ಥಾನ” ಕೇಳಿಕೊಂಡು ಹೋಗಿ “ಮಾನ” ಕಳೆದುಕೊಂಡ ಯಡಿಯೂರಪ್ಪ

 ನಿತಿನ್ ರೈ ಕುಕ್ಕುವಳ್ಳಿ
ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷವನ್ನ ಮೊದಲ ಬಾರಿಗೆ ಅಧಿಕಾರಕ್ಕೆ ತಂದ ಶ್ರೀಯುತ ಯಡಿಯೂರಪ್ಪನವರು ಈನ್ನ ಪಕ್ಷದ ಹೈಕಮಾಂಡ್ ಗೆ ಬೇಡವಾಗಿದ್ದಾರೆ. ಅಕ್ರಮ ಆಸ್ತಿ ಕಬಳಿಕೆ ಪ್ರಕರಣದಲ್ಲಿ ಸಿಲುಕಿ ಜೈಲು ಊಟದ ರುಚಿ ಸವಿದು ಹೊರಬಂದಿರುವ ಯಡ್ಡಿ ಅವರಿಗೆ ಮತ್ತೊಮ್ಮೆ ಬಿ ಜೆ ಪಿ ಯಲ್ಲಿ ತನ್ನ ಹಿಡಿತವನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ.

ಬಿಜೆಪಿ ರಾಷ್ಟೀಯ ಅದ್ಯಕ್ಷರಾದ ನಿತಿನ್ ಗಡ್ಕರಿ ಅವರು ರಾಜ್ಯಕ್ಕೆ ಬಂದ ಸಂದರ್ಭದಲ್ಲಿ ಅವರನ್ನ ಬೇಟಿಯಾದ ಯಡ್ಡಿಯವರು “ಗಡ್ಕರಿ ಸಾಹೇಬ್ರೆ ಮುಖ್ಯಮಂತ್ರಿ ಸ್ಥಾನ ಕೊಡದಿದ್ರು ನಡಿತ್ರಿ ಆದ್ರೆ ರಾಜ್ಯಾದ್ಯಕ್ಷ ಸ್ಥಾನ ಕೊಡಿ ಸರ್ ” ಎಂದು ಗೋಗರೆದರು, ಆದರೆ ನಮ್ಮ ರಾಷ್ಟ್ರದ್ಯಕ್ಷರು ಸರ್ ನಿಮ್ಮ ಸಾಧನೆ ಅಪಾರ ನಿಮ್ಮ ನೇತೃತ್ವದಲ್ಲಿ ನಮ್ಮ ಮಂತ್ರಿಗಳ ಸಾಧನೆ ದೇಶ ವಿದೇಶದ ಪೇಪರ್ ಗಳ ಮುಖ್ಯಪುಟದಲ್ಲಿ ಬಂದಿದೆ ಹಾಗೆ ಒಬ್ಬ ಜೈಲ್ ನಿಂದ ಹೊರಬಂದರೆ ಮತ್ತೊಬ್ಬ ಜೈಲ್ ಕಡೆ ಹೋಗುತ್ತಿದ್ದ ಆದ್ದರಿಂದ ಸರ್ ನೀವ್ ಆರಾಮವಾಗಿ ವಿಶ್ರಾಂತಿ ಪಡೆದು ಮೊಮ್ಮಕ್ಕಳ ಜೊತೆ ಆಟಡ್ತಿರಿ ರಾಜಕೀಯ ಸಾಕು. ನಮ್ಮ ಸದಾನಂದ ಗೌಡರು ಬಿ ಜೆ ಪಿ ಯನ್ನ ಅಧಿಕಾರದಲ್ಲಿ ಮುಂದುವರಿಸಲಿ ಎಂದು ಹೇಳಿದ್ದೆ ತಡ ಯಡ್ಡಿ ಸಾಹೇಬರು ಬಲ ಪ್ರದರ್ಶನಕ್ಕೆ ತನ್ನ ಹುಟ್ಟು ಹಬ್ಬದ ದಿನ 70 ಕೆಜಿ ಕೇಕ್ ರೆಡಿ ಮಾಡಿಬಿಟ್ರು .. ಅದನ್ನ ತನ್ನ ಬೆಂಬಲಿಗರ ಹಾಗು ಅಭಿಮಾನಿ ದೇವರುಗಳ ಮುಂದೆ ಚೂರಿಯಿಂದ ಕಟ್ ಮಾಡೋ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಾರ್ಯಕ್ರಮ ಬಹಳ ಜೋರಾಗೆ ನಡಿತು ಸ್ವಾಮೀಜಿಗಳು ಕೆಲವೊಂದು ಶಾಸಕರು ಆಪ್ತರು ಸೇರಿಕೊಂಡು ಹ್ಯಾಪಿ ಬರ್ತ್ ಡೇ ಹಾಡಿದ್ದೆ ಹಾಡಿದ್ದು ಯಡ್ಡಿ ಫುಲ್ ಕುಶಿ.

ಆದರೆ ಬರ್ತ್ ಡೇ ಪಾರ್ಟಿಗೆ ಬಂದವರೆಷ್ಟು ಜನ ? ಯಡಿಯೂರಪ್ಪ ಅವರಿಂದ ಎಲ್ಲ ರೀತಿಯ ಸಹಾಯ ಪಡೆದ ಅವರ ಆಪ್ತ ನೆಂಟರು ಯಡ್ಡಿ ಅವರನ್ನ ನಡು ಬೀದಿಯಲ್ಲಿ ಬಿಟ್ಟು ಹೋದರೆ ? ಅನ್ನೋ ಪ್ರಶ್ನೆಗಳು ಕಾಡತೊಡಗಿದೆ..ರಾಜಕೀಯ ಅನ್ನೋದು ಅಧಿಕಾರ ಇರುವ ತನಕ ಅಷ್ಟೇ ಅನ್ನೋದಕ್ಕೆ ಯಡ್ಡಿ ಅವರ ಜೀವನವೇ ಸಾಕ್ಷಿ ..ರಾಜಕೀಯದಲ್ಲಿ ಸ್ವಲ್ಪ ಯಾಮಾರಿದರು ತನ್ನ ಹಿಡಿತ ಸಡಿಲಗೊಳ್ಳುವುದು ಅನ್ನೋದಕ್ಕೆ ಯಡ್ಡಿ ಸಾಹೇಬರ ಜೀವನ ಪ್ರತ್ಯಕ್ಷ ಸಾಕ್ಷಿಯಾಗಿ ಕಾಣಿಸುತ್ತೆ .ಯಡಿಯೂರಪ್ಪ ಎಷ್ಟಾದರೂ ಸುಮ್ಮನೆ ಕೂರುವ ಮನುಷ್ಯನಲ್ಲ ರಾಜಕೀಯ ಆಟ ಯಡ್ಡಿ ಅವರಿಗೆ ಹುಟ್ಟಿನಿಂದಲೇ ಬಂದ ಕಲೆಯಾಗಿದೆ ಸದಾನಂದ ಗೌಡ ರ ಕುರ್ಚಿಯನ್ನ ಅಲುಗಾಡಿಸಲು ಏನೆಲ್ಲಾ ಮಾಡಬೇಕು ಅದನ್ನೆಲ್ಲ ಮಾಡುದರಲ್ಲಿ ನೋ ಡೌಟ್. ಮತ್ತಷ್ಟು ಓದು »

28
ಫೆಬ್ರ

ಬಿಜೆಪಿ ಆಡಳಿತದಡಿ ಶಿಕ್ಷಣ ಕ್ಶೇತ್ರ

-ಪ್ರಿಯಾಂಕ್ ಭಾರ್ಗವ್

ಕರ್ನಾಟಕ ರಾಜ್ಯಸರ್ಕಾರವು ಬಿಜೆಪಿ ಪಕ್ಷದ ತೆಕ್ಕೆಗೆ ಸಿಕ್ಕಾಗಲಿಂದ, ಕಲಿಕೆ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ, ಮಾಡಲಾಗುತ್ತಿದೆ ಕೂಡಾ. ಕಳೆದ ನಾಲ್ಕು ವರ್ಷಗಳಲ್ಲಿ ಮಾಡಲಾದ ಬದಲಾವಣೆಗಳು ಮತ್ತು ಅವುಗಳಿಂದಾಗಬಹುದಾದ ಪರಿಣಾಮಗಳ ಬಗ್ಗೆ ಇಲ್ಲಿ ಮಾತನಾಡಲಾಗಿದೆ.

ಶಿಕ್ಷಣದಲ್ಲಿ ತಾನು ಪಾಲಿಸುತ್ತಿರುವ ಭಾಷಾನೀತಿಯನ್ನು ಸಮರ್ಥಿಸಿಕೊಳ್ಳುವಲ್ಲಿ ಎಡವಿದ್ದು
ಕನ್ನಡ ಮಾಧ್ಯಮ ನಡೆಸುವುದಾಗಿ ಹೇಳುತ್ತಾ, ಇಂಗ್ಲೀಶ್ ಮಾಧ್ಯಮಗಳನ್ನು ನಡೆಸುತ್ತಿದ್ದ ಶಾಲೆಗಳನ್ನು ಮುಚ್ಚಲು ಸರಕಾರ ಮುಂದಾಗಿತ್ತು. ಶಾಲೆಗಳು ಕೋರ್ಟು ಮೆಟ್ಟಿಲೇರಿ, ಸುಪ್ರೀಮ್ ಕೋರ್ಟಿನಲ್ಲಿ ಈ ಬಗ್ಗೆ ವಿಚಾರಣೆ ಕೂಡಾ ನಡೆಯುತ್ತಿದೆ. ಸರ್ಕಾರದ ಕಡೆಯಿಂದ ಯಾವ ವಾದ ಮಂಡನೆಯಾಗುತ್ತಿದೆಯೋ ಗೊತ್ತಿಲ್ಲ, ಆದರೆ ಪತ್ರಿಕಗಳಲ್ಲಂತೂ “ಸರ್ಕಾರಕ್ಕೆ ಹಿನ್ನಡೆ, ಇಂಗ್ಲೀಶ್ ಶಾಲೆಗಳ ಗೆಲುವು” ಎಂಬಂತಹ ಸುದ್ದಿ ಆಗಾಗ ಬರುತ್ತಲೇ ಇದೆ. ಶಾಲೆಗಳು ಮಾಡಿದ ತಪ್ಪನ್ನು ತೋರಿಸುತ್ತಾ, “ತಾಯ್ನುಡಿಯಲ್ಲೇ ಕಲಿಕೆ ಒಳಿತು” ಎಂಬ ನೀತಿಯನ್ನು ಕರ್ನಾಟಕ ಸರ್ಕಾರ ಪಾಲಿಸಿಕೊಂಡು ಬಂದಿರುವುದನ್ನು ಹೇಳಿದ್ದರೂ, ತನ್ನ ನಡೆಯನ್ನು ಸಮರ್ಥಿಸಿಕೊಳ್ಳಬಹುದಿತ್ತು. ಆದರೆ, ಕೋರ್ಟಿನಲ್ಲಿ ಸರ್ಕಾರಕ್ಕೆ ಹಿನ್ನಡೆ ಎಂಬ ಸುದ್ದಿ ನೋಡಿದರೆ, ಸರ್ಕಾರವು ತನ್ನ ಭಾಷಾನೀತಿಯನ್ನು ಸಮರ್ಥಿಸಿಕೊಳ್ಳುವಲ್ಲಿ ಎಡವಿದಂತೆ ಕಾಣುತ್ತದೆ. ಬಿಜೆಪಿ ಸರ್ಕಾರದ ಇನ್ನೂ ಕೆಲವು ನಡೆಗಳ ಜೊತೆಗೆ ಹೋಲಿಸಿ ಈ ವಿಷಯವನ್ನು ನೋಡಿದಾಗ, ತಾಯ್ನುಡಿಯಲ್ಲಿ ಶಿಕ್ಷಣದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇಲ್ಲವೇನೋ ಎಂದನಿಸುತ್ತದೆ.
ಮತ್ತಷ್ಟು ಓದು »

13
ಫೆಬ್ರ

ಯಶಸ್ಸಿನ ಹೋರಾಟದ ನಡುವೆ ಇನ್ನೊಂದು ಟಿವಿ

-ಕಾಲಂ ೯

HR ರಂಗನಾಥ್‍ರವರ ಬಹು ನಿರೀಕ್ಷಿತ ಪಬ್ಲಿಕ್ ಟಿವಿಯ ಆರಂಭದೊಂದಿಗೆ ಕನ್ನಡ ಮಾಧ್ಯಮ ಜಗತ್ತು ಒಂದು ಸುತ್ತಿ ಪೂರ್ಣಗೊಳಿಸಿದಂತಾಗಿದೆ. ‘ಇದು ಯಾರ ಆಸ್ತಿಯೂ ಅಲ್ಲ, ಇದು ನಿಮ್ಮ ಟಿವಿ’ ಇದು ಕೇವಲ ಘೋಷಣೆಯ ಮಾತಲ್ಲ, ರಂಗನಾಥ್ ತಮ್ಮ ಚಾನೆಲ್ಗಾಗಿ ಹಣ ಹೂಡಿದವರ ವಿವರವನ್ನೂ ಕೊಡುವುದಾಗಿ ಹೇಳಿಕೊಂಡಿದ್ದಾರೆ.

ರಂಗನಾಥ್ ಪುನರಾಗಮನದೊಂದಿಗೆ ಪಕ್ಕಕ್ಕೆ ಸರಿದವರೆಲ್ಲ ಮಾಧ್ಯಮದ ಮುಖ್ಯ ಭೂಮಿಕೆಗೆ ಬಂದಂತಾಗಿದೆ. ರಂಗನಾಥ್, ದೈತೋಟ, ವಿಶ್ವೇಶ್ವರ ಭಟ್, ಶಿವಸುಬ್ರಹ್ಮಣ್ಯ, ಜೋಗಿ, ರವಿ ಹೆಗಡೆ, ಜಿ ಎನ್ ಮೋಹನ್, ತಿಮ್ಮಪ್ಪ ಭಟ್, ಪೂರ್ಣಿಮಾ ಹೀಗೆ ಕಳೆದ ವರ್ಷ ಪಕ್ಕಕ್ಕೆ ಸರಿದವರ ಉದ್ದದ ಪಟ್ಟಿಯೇ ಇತ್ತು. ಈಗ ಈಶ್ವರ ದೈತೋಟ ಬಿಟ್ಟರೆ ಮತ್ತೆಲ್ಲರೂ ಮಾಧ್ಯಮದ ಮುಖ್ಯ ಜವಾಬ್ದಾರಿಗಳಿಗೆ ಬಂದಂತಾಗಿದೆ. ವರ್ಷವಿಡೀ ಅನೇಕ ಪಲ್ಲಟಗಳಿಗೆ ಸಾಕ್ಷಿಯಾಗಿದ್ದ ಕನ್ನಡ ಮಾಧ್ಯಮ ಜಗತ್ತು ಇದೀಗ ಸ್ಥಿರಗೊಂಡಿದೆ ಎನ್ನಬಹುದು. ನಿಜವಾದ ಪೈಪೋಟಿಯ ದಿನಗಳನ್ನು ಮುಂದೆ ನಿರೀಕ್ಷಿಸಬಹುದು.

ಕಳೆದ ಐದು ವರ್ಷಗಳ ಮಾಧ್ಯಮ ಬೆಳವಣಿಗೆಯನ್ನು ಗಮನಿಸಿದರೆ ಅನೇಕ ಹೊಸ ಸುದ್ದಿವಾಹಿನಿಗಳು ಬಂದಿವೆ. ದಿನಪತ್ರಿಕೆಗಳ ಹೊಸ ಎಡಿಷನ್‍ಗಳು ಆರಂಭಗೊಂಡಿವೆ. ಪೂರ್ಣ ಪ್ರಮಾಣದ ಯಶಸ್ಸಿನ ಕಥೆಯಾಗಿ ಎಲ್ಲರೆದುರು ನಿಂತಿರುವುದು ವಿಜಯ ಕರ್ನಾಟಕ, ಟಿವಿ9 ಮಾತ್ರ. ಸುವರ್ಣ ಸ್ಯೂಸ್ ಸಕಷ್ಟು impact ಮಾದಿದರೂ ‘ಯಶಸ್ಸಿನ ಕಥೆ’ ಎಂದು ಹೇಳುವಂತಿಲ್ಲ. ಮತ್ತಷ್ಟು ಓದು »