ನನ್ನ ಬದುಕು ಪರಿವರ್ತಿಸಿದ ಬಂಗಾರಪ್ಪ
“1992 ನೇ ಇಸ್ವಿ.ನಾನು ಆಗಷ್ಟೇ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ಮುಗಿಸಿದ್ದೆ.ಫಲಿತಾಂಶ ಇನ್ನೂ ಬಂದಿರಲಿಲ್ಲ.ಅತ್ಯಂತ ಕಡು ಬಡತನದ ಕುಟುಂಬ ನಮ್ಮದು.ಒಂದು ಹೊತ್ತಿನ ತುತ್ತಿಗೂ ತತ್ವಾರ ಪಡುವಂತ ದಯನೀಯ ಮತ್ತು ಶೋಚನೀಯ ಸ್ಥಿತಿ.ತಂದೆ ನಾ ಮಗುವಾಗಿರುವಾಗಲೇ ಗತಿಸಿದ್ದರು.ಮೂರು ಜನ ಅಣ್ಣಂದಿರು, ಒಬ್ಬಳು ಸಹೋದರಿ.ದೊಡ್ಡಣ್ಣ 10-11ರ ಪ್ರಾಯದಲ್ಲಿಯೇ ಮನೆ ಬಿಟ್ಟು ಹೋದವನು ನಾಪತ್ತೆಯಾಗಿದ್ದ.ಅಮ್ಮ ಅವನಿಗಾಗಿ ಹುಡುಕಾಡಿ ಹುಡುಕಾಡಿ ಹೈರಾಣಾಗಿದ್ದರು.ಉಳಿದ ಇಬ್ಬರು ಅಣ್ಣಂದಿರಲ್ಲಿ ಒಬ್ಬ ಮಾತ್ರ ಅತ್ಯಂತ ಶ್ರಮಜೀವಿ.ಇಬ್ಬರೂ ಕೂಲಿ ಕೆಲಸ ಮಾಡಿ ತುತ್ತಿನ ಚೀಲ ತುಂಬಿಸುತ್ತಿದ್ದರು. ಅನ್ನಕ್ಕಾಗಿ ಹಾತೊರೆಯುವ ಪರಿಸ್ಥಿತಿ ಅದಾಗಿತ್ತು. ಅದಕ್ಕಾಗಿ ಒಮ್ಮೊಮ್ಮೆ ಅಕ್ಕ,ಅಣ್ಣಂದಿರೊಂದಿಗೆ ಜಗಳವಾಡಿದ್ದು ಇಂದಿಗೂ ನೆನಪಿದೆ. ಕೊನೆಯ ಮಗನಾದ ನನ್ನನ್ನು ಓದಿಸಬೇಕೆಂಬುದು ಅಮ್ಮನ ಮಹದಾಸೆ ಅಣ್ಣಂದಿರ ಹಿರಿಯಾಸೆಯಾಗಿತ್ತು.
ಆಧುನಿಕ ವಿಕ್ರಮಾದಿತ್ಯ, ಬೇತಾಳನೂ ಮತ್ತು ಕುರುನಾಡ ಉಳಿಸಿ ವೇದಿಕೆಯ ವ್ಯಥೆಯೂ…
-ಸಾತ್ವಿಕ್ ಎನ್ ವಿ
ಎಂದಿನಂತೆ ಬೇತಾಳವು ಲೇಡಿಸ್ ಹಾಸ್ಟೆಲ್ ಎದುರಿಗಿನ ಹುಣಸೆ ಮರದ ತನ್ನ ಕೊಂಬೆಯ ಮೇಲೆ ನೇತಾಡುತ್ತಿತ್ತು. ರಸ್ತೆ ಅಗಲೀಕರಣವಾಗುವಾಗ ತನ್ನ ಮರಕ್ಕೂ ಎಲ್ಲಿ ಕೊಡಲಿ ಬೀಳುತ್ತದೋ ಎಂಬ ಭಯ ಇದ್ದುದರಿಂದ ತರಗತಿಯಲ್ಲಿರುವ ಸಭ್ಯ ವಿದ್ಯಾರ್ಥಿಯಂತೆ ಒಂದೇ ಕಣ್ಣಿನಲ್ಲಿ ನಿದ್ದೆ ಮಾಡುತ್ತಿತ್ತು. ಇಂಥ ಸ್ಥಿತಿಯಲ್ಲಿ ವೋಟರ್ ಐಡಿಯಲ್ಲಿರುವ ಫೋಟೋದಂತೆ ಮುಖ ಮಾಡಿಕೊಂಡು ವಿಕ್ರಮರಾಜನು ಬೇತಾಳವನ್ನು ಸೆಳೆದುಕೊಂಡು ಹೋಗಲು ಧಾವಿಸಿದನು. ಆಗ ಬೇತಾಳವು ‘ನಿನಗಂತೂ ಕೆಲಸವಿಲ್ಲ. ಪದೇಪದೇ ಬಂದು ನನ್ನನ್ನು ಹೊತ್ತುಕೊಂಡು ಹೋಗುತ್ತಿಯಾ. ಆದರೆ ಒಮ್ಮೆಯೂ ನೀನು ನಿನ್ನ ಕೆಲಸದಲ್ಲಿ ಉತ್ತೀರ್ಣನಾಗಿಲ್ಲ. ಇದೆಲ್ಲ ನೋಡಿದರೆ ಮುಂದಿನ ಜನ್ಮದಲ್ಲಿ ನೀನು ಎಂಜಿನಿಯರಿಂಗ್ ವಿದ್ಯಾರ್ಥಿಯಾಗುವ ಎಲ್ಲ ಅರ್ಹತೆಗಳಿವೆ’ ಎಂದಿತು.
ಇದೆಲ್ಲವನ್ನೂ ತಲೆಗೆ ತೆಗೆದುಕೊಳ್ಳದ ವಿಕ್ರಮನು, ಮುಂದೆ ಮಕ್ಕಳು ತಮ್ಮನ್ನು ನೋಡಿಕೊಳ್ಳುತ್ತಾರೆ ಎಂಬ ಭರವಸೆ ಇಲ್ಲದಿದ್ದರೂ ಮಕ್ಕಳಿಗೆ ಒಳಿತನ್ನೇ ಬಯಸುವ ಪಾಪದ ತಂದೆತಾಯಿಗಳ ಹಾಗೆ ತನ್ನಷ್ಟಕ್ಕೆ ತನ್ನ ಕಾರ್ಯದಲ್ಲಿ ನಿರತನಾದನು. ಇವನ ಹಸುತನವನ್ನು ಗಮನಿಸಿದ ಬೇತಾಳದ ಮನಸ್ಸು ಕರಗಿ ವಿಕ್ರಮನೇ, ನಿನ್ನ ಕಾರ್ಯಶ್ರದ್ಧೆಯನ್ನು ಮೆಚ್ಚಿದ್ದೇನೆ. ಪದೇ ಪದೇ ವಿಫಲನಾದರೂ ಸ್ವಮೇಕ್ ಚಿತ್ರವನ್ನೇ ಮಾಡುವ ಕನ್ನಡ ನಿರ್ದೇಶಕನಂಥ ನಿನ್ನ ಅಚಲ ನಿರ್ಧಾರವನ್ನು ಗೌರವಿಸುತ್ತೇನೆ. ದಾರಿ ಸವೆಯಲಿ ಎಂದು ಕಥೆಯೊಂದನ್ನು ಹೇಳುತ್ತೇನೆ ಎಂದು ಹೇಳಿ ವಿಕ್ರಮನ ಅನುಮತಿಯನ್ನೂ ಕಾಯದೇ ಕಥೆಯೊಂದನ್ನು ಹೇಳಲು ಪ್ರಾರಂಭಿಸಿತು. ಮತ್ತಷ್ಟು ಓದು 
ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ – ಇಂದು ಮತ್ತು ಮುಂದು
-ಓಂ ಶಿವಪ್ರಕಾಶ್
(ಗಂಗಾವತಿಯಲ್ಲಿ ನೆಡೆದ ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಧುನಿಕ ಜಗತ್ತು ಮತ್ತು ಕನ್ನಡ ಗೋಷ್ಠಿಯಲ್ಲಿ ಮಾಡಿದ ಭಾಷಣದ ಪ್ರತಿ )
ನಮಸ್ಕಾರ ಗಂಗಾವತಿ. ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ – ಇಂದು ಮತ್ತು ಮುಂದು, ಈ ವಿಷಯವನ್ನು ಮಂಡಿಸುವ ಮುನ್ನ ಒಂದು ಸಣ್ಣ ರಿಯಾಲಿಟಿ ಚೆಕ್. ತಂತ್ರಜ್ಞಾನ ನಮಗೆಲ್ಲಿ ಅರ್ಥವಾಗುತ್ತದೆ ಎನ್ನುವಿರಾ? ಕನ್ನಡದಲ್ಲಿ ವಿಷಯವನ್ನು ಪ್ರಸ್ತಾಪಿಸಿದಲ್ಲಿ ರಾಕೆಟ್ ತಂತ್ರಜ್ಞಾನವನ್ನೂ ಕೂಡ ನೀವು ಅರ್ಥ ಮಾಡಿಕೊಳ್ಳಬಲ್ಲಿರಿ. ಆದ್ದರಿಂದ ಚಿಂತೆ ಬೇಡ. ನಮ್ಮಲ್ಲಿ ಎಷ್ಟು ಜನರ ಬಳಿ ಮೊಬೈಲ್ ಫೋನ್ ಇದೆ? ಅದರಲ್ಲಿ ಕನ್ನಡ ಬರುತ್ತಾ? ಕನ್ನಡದಲ್ಲಿ ಎಸ್.ಎಂ.ಎಸ್ ಬರುತ್ತಾ? ನೀವು ಕನ್ನಡದಲ್ಲಿ ಕಳಿಸಿದ ಎಸ್.ಎಂ.ಎಸ್ ಬೇರೆಯವರ ಮೊಬೈಲ್ ನಲ್ಲಿ ಓದ್ಲಿಕ್ಕಾಗುತ್ತಾ? ಹೌದು / ಇಲ್ಲ ಎಂಬ ಉತ್ತರ ನಮ್ಮದು.
ಮಾಹಿತಿ ತಂತ್ರಜ್ಞಾನ ನಮ್ಮೆಲ್ಲರ ಜೀವನಗಳಲ್ಲಿ ಇಂದು ಹಾಸು ಹೊಕ್ಕಾಗಿದೆ. ಕಿಸೆಯಲ್ಲಿ ಕೂರುವ ಆ ಮೊಬೈಲ್ ಫೋನ್ ಕೂಡ ಮಾಹಿತಿ ತಂತ್ರಜ್ಞಾನದ ಮಹಾಪೂರವನ್ನು ನಿಮ್ಮ ಬೆರಳಂಚುಗಳಲ್ಲಿ ಹರಿಸುವ ಶಕ್ತಿಯನ್ನು ಹೊಂದಿದೆ. ಆದರೆ ಅದರಲ್ಲಿ ಕನ್ನಡ ಒಂದು ಪ್ರಶ್ನೆ. ಮೊಬೈಲ್ಗಳಿಂದ ಹಿಡಿದು ಹತ್ತಾರು ವಿಷಯಗಳಲ್ಲಿನ ಶಿಷ್ಟತೆ/ಸ್ಟಾಂಡರ್ಡ್ಸ್ ನ ಕೊರತೆಯಿಂದಾಗಿ ತಂತ್ರಜ್ಞಾನದಲ್ಲಿ ಕನ್ನಡದ ಬಳಕೆಗೆ ಬಹಳಷ್ಟು ತೊಡಕುಗಳಿವೆ. ಆದರೂ, ಕನ್ನಡ ಮಾಹಿತಿ ತಂತ್ರಜ್ಞಾನದ ಸುತ್ತ ಬೆಳದಿದೆ. ನಿಮಗೆ ಈ ವಿಷಯಗಳನ್ನು ಸುಲಭವಾಗಿ ವಿವರಿಸಲು ಒಂದೆರಡು ಕಥೆಗಳನ್ನು ಹೇಳುತ್ತೇನೆ.
ಮತ್ತಷ್ಟು ಓದು 
ರಾಮುಲು ಗೆಲುವು ಬಿಜೆಪಿಗೆ ದಿಗಿಲು
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ (ಈ ಹಿಂದೆ ಕುರಗೋಡು ಕ್ಷೇತ್ರ ಎಂದು ಕರೆಯಲಾಗುತ್ತಿತ್ತು) ಹೆಚ್ಚಾಗಿ ಲಿಂಗಾಯತರೇ ಗೆದ್ದು ಬರುತ್ತಿದ್ದರು. ರಾಮುಲು ಈ ಪರಂಪರೆಯನ್ನು ಮುರಿದಿದ್ದಾರೆ (ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ). ಆದರೆ ಈ ಮುರಿಯುವ ಪ್ರಕ್ರಿಯೆಯಲ್ಲಿ ರಾಜ್ಯದ ಲಿಂಗಾಯತ ಸಮುದಾಯದ ಅನಭಿಷಿಕ್ತ ನಾಯಕ ತಾನೇ ಎಂದು ಸ್ವಯಂಘೋಷಿಸಿಕೊಂಡಿರುವ ಅಥವಾ ಆ ರೀತಿ ತನ್ನ ಭಟ್ಟಂಗಿಗಳಿಂದ ಘೋಷಿಸಲ್ಪಟ್ಟಿರುವ ಯಡಿಯೂರಪ್ಪರಿಗೆ ಒಂದು ರೀತಿಯಲ್ಲಿ ಹೊಡೆತ ಮತ್ತು ಮತ್ತೊಂದು ರೀತಿಯಲ್ಲಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿದ್ದಾರೆ. ಮತ್ತಷ್ಟು ಓದು 
ಅಗತ್ಯವಿರುವವರಿಗೆ ವಿಮೆ ಕವಚ ಇಲ್ವಾ ?
ಸೂಚನೆ ಕೊಟ್ಟುದಲ್ಲದೆ ಒಬ್ಬ ವಿಮಾ ಅಧಿಕಾರಿಯ ಸಂಪರ್ಕವನ್ನೂ ಶ್ರಿಪಡ್ರೆಯವರೇ ಕಲ್ಪಿಸಿಕೊಟ್ಟರು. ಹಾಗೆ ತಯಾರಿಯ ಗಡಿಬಿಡಿಯಲ್ಲಿಯೇ ಹಲವು ಬಾರಿ ಪುತ್ತೂರಿನ ವಿಮಾ ಕಛೇರಿಗೆ ಓಡಿದೆ. ಇದಕ್ಕೆ ಚಾಸಿ ನಂಬರ್ ಉಂಟಾ, ಆರ್ ಟಿ ಒ ಪರವಾನಿಗೆ ಉಂಟಾ ಇತ್ಯಾದಿ ಪ್ರಶ್ನೆಗಳ ಸರಮಾಲೆ ಮೇಲಿನವರು ರವಾನಿಸಿದರು. ಇಂತಹ ಗಾಡಿಗೆ ಹಿಂದೆ ಯಾವುದೇ ಬಾರತೀಯ ಕಂಪೇನಿ ವೀಮೆ ಕೊಟ್ಟಿರುವ ಸಾದ್ಯತೆ ಇಲ್ಲ. ಹಾಗಾಗಿ ನೀವೆ ಮೊದಲಿಗರಾಗಿರುತ್ತೀರಿ ಎಂದೂ ಹೇಳಿದೆ. ಪ್ರಯೋಜನವಾಗಲಿಲ್ಲ. ಅದರ ನೈಜ ಬೆಲೆ, ಖಚಿತ ಗುರುತು ಮೇಲಿನವರಿಗೆ ಸ್ಪಷ್ಟ ಪಡಿಸಲು ತಿಂಗಳುಗಳೇ ಬೇಕು ಅನಿಸಿತು. ಹಾಗಾಗಿ ಪ್ರವಾಸದ ಅವದಿಗೆ ವೀಮಾ ಕವಚದ ಆಸೆ ಬಿಟ್ಟೆ.
ನನ್ನ ಪ್ರವಾಸದುದ್ದಕ್ಕೂ ಯಾರಲ್ಲೂ ನನ್ನ ತ್ರಿಚಕ್ರದ ನೈಜ ಬೆಲೆ ಹೇಳುತ್ತಿರಲಿಲ್ಲ. ಹತ್ತು ಸಾವಿರವೋ ಅಂದಾಗ ಹೂಂ ಅನ್ನುತ್ತಿದ್ದೆ. ಹದಿನೈದೋ ಅಂದಾಗ ಹೌದು ಅನ್ನುತ್ತಿದ್ದೆ. ಅಂತೂ ಏನೂ ತೊಂದರೆಯಾಗದೆ ಸುಮಾರು ಒಂದೂವರೆ ವರ್ಷಗಳಿಂದ ಸುದಾರಿಸುತ್ತಿದ್ದೇನೆ. ನಮ್ಮೂರಲ್ಲಿ ಇಂತಹ ಬೇರೆ ತ್ರಿಚಕ್ರ ಇಲ್ಲದಿರುವದರಿಂದ ಕಳವು ಸಾದ್ಯತೆ ಕಡಿಮೆ. ಕದ್ದರೂ ಉಪಯೋಗಿಸುವುದು ಕಷ್ಟ. ಆಯಾ ಊರಲ್ಲಿ ನೆಲೆ ಇಲ್ಲದ ಪ್ರವಾಸಿಗಳು ಯಾವಾಗಲೂ ಪುಡಿಕಳ್ಳರ ಬಲಿಪಶು.
* * * * * * * * *
ಚಿತ್ರಕೃಪೆ: 1.bp.blogspot.com
ಏನ್ ಇವಾಗ? ನಾವ್ ಇರೋದೇ ಹೀಗೆ…
-ಸಾತ್ವಿಕ್ ಎನ್ ವಿ
ಒಮ್ಮೊಮ್ಮೆ ಇಂಥ ಪ್ರಸಂಗಗಳಿಗೆ ಹೇಗೆ ಪ್ರತಿಕ್ರಿಯಿಸುವುದೋ ತಿಳಿಯುವುದಿಲ್ಲ. ನಿನ್ನೆ ನಮ್ಮ ಮೇಡಂ ಒಬ್ಬರು ಕಾಲ್ ಮಾಡಿ ’ಸಾತ್ವಿಕ್ ನಿಮ್ಮ ಕಡೆ ಯಾರಾದ್ರೂ ಹುಡುಗಿಯಿದ್ದರೆ ಹೇಳೋ ಅಂದ್ರು’. ಅದಕ್ಕೆ ತಮಾಷೆಯಿಂದ ’ನಾನು ಒಂದು ವಧುವರರ ಕೇಂದ್ರ ತೆಗೆದ್ರೆ ಒಳ್ಳೆ ಕಲೆಕ್ಷನ್ ಆಗಬಹುದು ಅಲ್ವಾ ಮೇಡಂ’ ಅಂದೆ. ಅವರು ತಮ್ಮ ಮಾತಿನಲ್ಲಿ ಗಂಭೀರತೆಯನ್ನು ಬಿಟ್ಟು ಕೊಡದೇ ’ಹಾಗಲ್ಲ, ನಿನಗೆ ಗೊತ್ತಲ್ಲ. ನಮ್ಮಲ್ಲಿ ಅಬಕ ಜಾತಿಯ ವಧುಗಳು ಸಿಗೋದು ಬಹಳ ಕಷ್ಟ ಆಗಿದೆ. ಹಾಗಾಗಿ ಅನಿವಾರ್ಯವಾಗಿ ಬೇರೆ ಜಾತಿಯ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ’ ಅಂದ್ರು. ನನ್ನ ವಯಸ್ಸಿನ ಯೋಚನೆಗೆ ನಿಲುಕದ ವಿಷಯವಾದ ಕಾರಣ ’ಆಯ್ತು ಮೇಡಂ ಪ್ರಯತ್ನಿಸುತ್ತೇನೆ’ ಅಂತ ಹೇಳಿ ಮಾತನ್ನು ಮುಗಿಸಲು ನೋಡಿದೆ.
ಕುತೂಹಲಕ್ಕೆ ’ವರನ ಮನೆಯ ಕಡೆಯಿಂದ ಏನೇನು ನಿರೀಕ್ಷೆಗಳಿರುತ್ತವೆ’ ಅಂತ ಕೇಳಿದೆ. ’ಅಂಥ ವಿಶೇಷಗಳೇನು ಇಲ್ಲ. ಹುಡುಗಿ ತಕ್ಕ ಮಟ್ಟಿಗೆ ಓದಿದ್ದರೆ ಸಾಕು. ಆದರೆ ಆಕೆ ಹುಟ್ಟಿನಿಂದ ಸಸ್ಯಾಹಾರಿ ಕುಟುಂಬದ ಹುಡುಗಿ ಆಗಿರಬೇಕು. ಮದುವೆಯ ನಂತರ ತನ್ನ ತವರಿನ ಜೊತೆಗಿರುವ ಎಲ್ಲ ಸಂಬಂಧಗಳನ್ನು ಕಡಿದುಕೊಳ್ಳಬೇಕು. ಅಕೆಯ ಮನೆಯವರು ವರನ ಮನೆಗೆ ಬರುವುದಾಗಲಿ ಅಥವಾ ಸಂಪರ್ಕ ಇಟ್ಟುಕೊಳ್ಳುವುದಾಗಲಿ ಮಾಡಬಾರದು. ಇವು ಸದ್ಯ ವರನ ಮನೆಯವರು ನಿರೀಕ್ಷಿಸುತ್ತಿರುವ ಅಗತ್ಯಗಳು’ ಎಂದರು. ಎರಡನೆಯ ಸಂಗತಿಯನ್ನು ಕೇಳಿ ನನಗೆ ಸಖೇದಾಶ್ಚರ್ಯವಾಯಿತು.
ಹೆಣ್ಣು ಮಕ್ಕಳ ಕೊರತೆಯಿರುವ ಬೇರೊಂದು ಜಾತಿಯ ಹೆಣ್ಣು ಮಕ್ಕಳನ್ನು ಮದುವೆಯಾಗಬೇಕಾದ ಪರಿಸ್ಥಿತಿಯಿರುವ ಜನರಿಗೂ ಇಷ್ಟೊಂದು ಕರಾರು ಮತ್ತು ಆಯ್ಕೆಗಳಿರುತ್ತವೆಯೇ? ಕೊಡುವವರಿಗೆ ಆಯ್ಕೆಗಳಿರುತ್ತವೆ. ಆದರೆ ಕೇಳುವವರಿಗೆ? ಮತ್ತಷ್ಟು ಓದು 
ಹೇಳುವುದು ಒಂದು……
-ಅಭಿನಂದನ್
ಆದರೆ ಒಂದೊಂದ್ ಸಲ ಅದು ಕೇಳಿಸೋದೇ ಇನ್ನೊಂದು ಥರ!!
ಮೊನ್ನೆ ಟ್ರೈನಿನಲ್ಲಿ ಶಿವಮೊಗ್ಗಕ್ಕೆ ಹೋಗ್ತಾ ಇದ್ದೆ. ಮುಂಜಾನೆ ಮಂಪರು..ಯಥಾ ಪ್ರಕಾರ ಮಲಗಿದ್ದೆ.
“ಮಲ್ಗೋರ್ರಿ..ಮಲ್ಗೋರ್ರಿ….!” ಅಂತ ಕೂಗಿಕೊಂಡು ಹೋದ ನಾಸಿಕ ವಾಣಿಯೊಂದು ಮಲಗಿದ್ದ ನನ್ನನ್ನು ಎಬ್ಬಿಸಿತು. ಯಾರಪ್ಪ pirvate ಆಗಿ ಮಲ್ಗಿರೋದನ್ನ public ಮಾಡ್ತಿದಾರೆ ಅಂತ ಕಣ್ಣು ತೆಗೆದು ನೋಡಿದಾಗ ಗೊತ್ತಾಯ್ತು, ಮಲ್ಲಿಗೆ ಹೂವು ಮಾರುವವ ಅವನ ಸಂಕ್ಷಿಪ್ತ, ಕ್ಷಿಪ್ರ, ಗೌಪ್ಯ ಶೈಲಿಯಲ್ಲಿ, “ಮಲ್ಲಿಗೆ ಹೂವು ರೀ, ಮಲ್ಲಿಗೆ ಹೂವು ರೀ….” ಅಂತಿದ್ರು ಅಂತ. ಅವರ speed ಗೆ ಒದ್ದಾಡಿ ಹೋಗಿ, ಬಾಯಿಂದ ಹೊರಗೆ ಬೀಳೋ ಹೊತ್ತಿಗೆ ಅದು “ಮಲ್ಗೋರ್ರಿ” ಆಗೋಗಿತ್ತು.
ಈ ಆಸಾಮಿ ಎಷ್ಟೋ ಪರವಾಗಿಲ್ಲ. ನಮ್ಮ ಮನೆ ಹತ್ತಿರ ಹೂವು ಮಾರುವವ ಏನು ಹೇಳುತ್ತಾರೋ ಇದುವರೆಗೂ ನಂಗೆ ಗೊತ್ತಾಗಿಲ್ಲ. ಒಟ್ಟಿನಲ್ಲಿ “ನಾನು ಹೂವು ಮಾರುತ್ತಿದ್ದೀನಿ” ಅನ್ನೋದನ್ನ ಅವ ಭಾರೀ effective ಆಗಿ ವರ್ಷಗಳಿಂದ communicate ಮಾಡುತ್ತಾ ಬಂದಿದ್ದಾರೆ…ಅದೂ ಅವರದೇ ಬಾಯಿಂದ.
ಇನ್ನು ಎಳನೀರಿನ ಗತಿಯಂತೂ ಬ್ಯಾಡ್ವೇ ಬ್ಯಾಡ. “ಎನ್ನೀರ್ರು”, “ನ್ನೀರ್ರು”, “ಈರ್ರು”, “…ರ್ರು”…ಅದಕ್ಕೇ ಒಂದು ತತ್ಸಮ ತದ್ಭವ ಗ್ರಂಥ ಬರೀಬೋದೇನೋ.
ಬಸ್ಸಿನಲ್ಲಿ ಕಂಡಕ್ಟರ್ರು “ಓಲ್ಡೈನ್” ಅಂತಿದ್ದಿದ್ದು ನನಗೆ ಚಿಕ್ಕಂದಿನಲ್ಲಿ ಸುಮಾರು ವರ್ಷಗಳ ಕಾಲ ತಲೆ ಕೆಡೆಸಿತ್ತು, ಅದ್ಯಾವ ಭಾಷೆಯಲ್ಲಿ ಅದರ ಅರ್ಥ ಎನು ಅಂತ. ಯಾರೋ ಪುಣ್ಯಾತ್ಮೆ sophisticated ಅಜ್ಜಿ ಒಂದು ದಿನ ಸ್ಟಾಪಿನಲ್ಲಿ ನಿಲ್ಲಿಸದೆ ಮುಂದೆ ಹೋಗುತ್ತಿದ್ದ ಬಸ್ಸಿನಿಂದ ಇಳೀಬೇಕಾದ್ರೆ ದಯನೀಯವಾಗಿ “HOLD ON PLEASE” ಅಂತ ಕೂಗಿದಾಗ್ಲೇ ಗೊತ್ತಾಗಿದ್ದು , ಓಲ್ಡೈನ್ ಎಲ್ಲಿಂದ ದಾರಿ ತಪ್ಪಿ ಬಂತು ಅಂತ.
ರೈಲು, ಬಸ್ಸು ಸ್ಟೇಷನ್ನುಗಳಲ್ಲಿ ಇಡ್ಲೀನ ಹೇಗೆಲ್ಲಾ ಚಿತ್ರಾನ್ನ ಮಾಡಲ್ಲ. “ಯಾರ್ರೀಡ್ಲಿ?”, “ಯಾರ್ಗಿಡ್ಲಿ?”, “ಎಲ್ರೀಡ್ಲಿ?”…
ಅಮೇರಿಕ ಕಡೆ ವಿಮಾನಗಳಲ್ಲಂತೂ orange juice ಅಂದ್ರೆ ಅರ್ಥ ಆಗದೆ ಇರೋ ಅಷ್ಟರ ಮಟ್ಟಿಗೆ ಅದು “onjuce” ಆಗೋಗಿದೆ.
ಮತ್ತಷ್ಟು ಓದು 
ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ,ಜಾತಿಗಾಗಿಯಲ್ಲ
– ರಾಕೇಶ್ ಶೆಟ್ಟಿ
ಇದನ್ನ ಈ ದೇಶದ ಕರ್ಮ ಅಂತಲೇ ಅನ್ನಬೇಕೇನೋ, ಅಂದುಕೊಂಡಂತೆ ‘ಮಡೆ ಸ್ನಾನ’ದ ‘ಮಡೆ'(ಮಡೆ=ಎಂಜಲು) ಉರುಳದವರ ಮೇಲೆಯೂ ಬೀಳುತ್ತಿದೆ.ಇಷ್ಟು ದಿನ ಉರುಳಾಡಿದ್ದು ಮನುಷ್ಯರಾದರೆ ಈಗ ಸಮಸ್ತ ಜಾತಿಗಳು ಬಿದ್ದು ಉರುಳಾಡುತ್ತಿವೆ.ಮಡೆ ಸ್ನಾನವನ್ನು ವಿರೋಧಿಸಿ ನಾನು ಈ ಹಿಂದೆ ಬರೆದ ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಲ್ಲಿ ‘ಅದು ಬ್ರಾಹ್ಮಣರ ಎಂಜಲೆಲೆ’ ಅನ್ನುವ ಕಾರಣಕ್ಕೆ ವಿರೋಧಿಸುತಿದ್ದಿರ ಅನ್ನುವಂತಹ ಪ್ರತಿಕ್ರಿಯೆಗಳು ಬ್ಲಾಗಿನಲ್ಲಿ/ಮಿಂಚೆಗಳ ಮೂಲಕ ಬಂದಿವೆ. ನನ್ನ ಲೇಖನದಲ್ಲೂ ಒಂದು ಮಾತನ್ನು ಸ್ಪಷ್ಟವಾಗಿ ಹೇಳಿದ್ದೆ, ಅದ್ಯಾವ ಜಾತಿಯವರು ತಿಂದು ಮತ್ತಿನ್ಯಾವಾ ಜಾತಿಯವ ಅದರ ಮೇಲೆ ಉರುಳಾಡುವುದು ಅಷ್ಟೇ ಅಸಹ್ಯಕರ’ ಅಂತ.
ಅಂದರೆ,ಅದು ಕುಕ್ಕೆಯ ಮಡೆ ಸ್ನಾನವಿರಲಿ ಅಥವಾ ತುರುವೇಕೆರೆಯ ಮಡೆಸ್ನಾನವಿರಲಿ ಎರಡೂ ಅಸಹ್ಯಕರವೇ, ಎರಡೂ ಖಂಡನೀಯವೇ.ಮಡೆ ಸ್ನಾನದ ಪರ-ವಿರೋಧ ಮಾತನಾಡುವವರು ನೆನಪಿಡಬೇಕಾದದ್ದು ‘ಈ ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ ಹೊರತು ಜಾತಿಗಾಗಿಯಲ್ಲ’ ಅನ್ನುವುದು.
ನಾವು ನಿಜಕ್ಕೂ ತಾಂತ್ರಿಕತೆಯನ್ನು ಬಳಸ್ತಾ ಇದೇವ?

ಈ ದೌರ್ಜನ್ಯಗಳಿಗೆ ಕೊನೆ ಎಂದು?
-ವಿಜಯೇಂದ್ರ
ದನಗಳನ್ನು ಕ್ಯಾಂಟರ್ನಲ್ಲಿ ಸಾಗಿಸುತ್ತಿದ್ದಲೆನ್ನಲಾದ ಕೃಷ್ಣಪ್ಪ ಎಂಬ ದಲಿತನನ್ನು ಪ್ರಾಣಿ ದಯಾ ಸಂಘಕ್ಕೆ ಸೇರಿದವರು ಎನ್ನಲಾದ ಹಲವರು ತಡೆದು ಹೊಡೆದು ಸಾವಿಗೀಡು ಮಾಡಿದರು ಎಂದು ಸುದ್ದಿ ಇತ್ತೀಚೆಗಷ್ಟೇ ಗ್ರಾಮೀಣ ಬೆಂಗಳೂರು ವಿಭಾಗದಿಂದ ವರದಿಯಾಗಿದೆ. ಈ ಪ್ರಕರಣವನ್ನು ಮುಚ್ಚಿ ಹಾಕಲು ಸ್ಥಳೀಯ ಪೊಲೀಸರು ಪ್ರಯತ್ನಿಸಿದ್ದು ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಸ್ವ್ವಾತಂತ್ರ್ಯ ಬಂದ ಆರು ದಶಕಗಳ ಅನಂತರವೂ ಭಾರತದಲ್ಲಿ ಒಂದು ವರ್ಗದ ಜನತೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಕ್ಷುಲ್ಲಕ ಕಾರಣಗಳಿಗಾಗಿ ಅವರ ಮೇಲೆ ಅತ್ಯಾಚಾರ, ಹಲ್ಲೆ, ಮಾನಭಂಗಗಳಂತಹ ಗಂಭೀರ ಅಫರಾದಗಳನ್ನು ಎಸಗಲಾಗುತ್ತಿದೆ.
೫೦೦೦ ವರ್ಷಗಳ ಕಾಲ ವರ್ಣಾಶ್ರಮ ಪದ್ದತಿಯನ್ನು ಭಾರತ ಅನುಸರಿಸಿಕೊಂಡು ಬಂದ ಫಲವಾಗಿ ಹುಟ್ಟಿಕೊಂಡ ಅಸ್ಪೃಶ್ಯ ಜಾತಿ ಮತ್ತು ವರ್ಗಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಗಿನ್ನೀಸ್ ಧಾಖಲೆಯನ್ನು ಮೀರಿಸುತ್ತದೆ ಎಂದರೆ ತಪ್ಪ್ಪಾಗಲಾರದು.
ಯಾವುದೇ ಧರ್ಮ ಜಾತಿ ಆಧರಿತ ತಾರತಮ್ಯ ಕಾನೂನು ಬಾಹಿರ ಎಂದು ಸಂವಿಧಾನದ ಕಲಂಗಳಲ್ಲಿ ಸಾರಿ ಹೇಳಿದರೂ ಸಮಾಜದ ಒಂದು ಪ್ರಮುಖ ಭಾಗದ ಜನರನ್ನು ನಾವು ನಿರ್ಲಕ್ಷಿಸಿದ್ದೇವೆ. ಅನುಚ್ಚೇದ ೧೭ ರಲ್ಲಿ ಅಸ್ಪೃಶ್ಯ ಆಚರಣೆ ನಿಷೇದವೆಂದು ಸ್ಪಷ್ಟಪಡಿಸಿದ್ದರೂ, ರಾಷ್ಟ್ರದ ಎಲ್ಲಾ ಕಡೆ ದಲಿತರ ಮೇಲೆ ಕೊಲೆ, ಅತ್ಯಾಚಾರ. ದೌರ್ಜನ್ಯ, ಬಹಿಷ್ಕಾರಗಳಂತಹ ಅನಿಷ್ಟ ಕ್ರೂರ ಪದ್ದತಿಗಳು ಮುಂದುವರಿದೇ ಇದೆ. ಮತ್ತಷ್ಟು ಓದು 








