ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ 14- ಮೈಸೂರಿನವರ ಮನಸೆಳೆದ ಕಲೆ
ನಮ್ಮವನೇ ಆದ ನಾರಾಯಣನ ಮನೆಯಲ್ಲಿ ನಾನು, ಶ್ರೀ ಗೋಪಾಲಕೃಷ್ಣ ಭೇಟಿಯಾದೆವು. ವಿಷಯ ವಿವರ ಚರ್ಚಿಸಿಯಾಯಿತು. ಆದರೂ ಯಕ್ಷಗಾನದ ಪರಿಚಯವಿಲ್ಲದ ಮೈಸೂರು ನಗರಕ್ಕೆ ಮೇಳದ ಜನರನ್ನು ಕಟ್ಟಿಕೊಂಡು ಹೋಗುವುದೆಂದರೆ? ಎಂಬ ಸ್ವರವೆತ್ತಿದೆ. ಕೊನೆಗೆ ಹೇಸಿಗೆ ಕೆಲಸವೆಂದು ಆಗಬಾರದಲ್ಲ ಎಂದೆ.
“ಮೈಸೂರಿನವರು ಎಂದರೆ ಯುರೋಪಿನವರಲ್ಲ. ಅವರೂ ಕನ್ನಡಿಗರೇ. ನಿಮ್ಮ ಕಲೆಯ ಬಗ್ಗೆ ನಿಮಗೇ ಅಳುಕು ಇದೆ ಎಂದಾದರೆ ಪ್ರದರ್ಶನ ವಿಫಲವಾದೀತು. ವಿಶ್ವಾಸವಿದ್ದರೆ ಸಫಲಗೊಂಡೀತು. ಹೊರಡಿ” ಎಂದ. ನಮ್ಮ ಧರ್ಮಸ್ಥಳ ಮೇಳದಲ್ಲೇ ಮೊದಲು ಹಾಸ್ಯಗಾರನಾಗಿ ನನ್ನಿಂದಲೇ ತರಬೇತಿ ಪಡೆದು, ಆಗಲಷ್ಟೇ ಮೂಲ್ಕಿ ಮೇಳವನ್ನು ಆಡಳಿತಕ್ಕಾಗಿ ವಹಿಸಿಕೊಂಡಿದ್ದ ನಾರಾಯಣನೂ “ನಿಮ್ಮ ಜವಾಬ್ದಾರಿಯಲ್ಲಾದರೆ ಹೋಗೋಣ ಮಾವ. ವೇಷಭೂಷಣ ಸಾಮಗ್ರಿಗಳನ್ನು ಮೂಲ್ಕಿಯಿಂದ ಕೇಳಿ ತರಬಹುದು” ಎಂದು ತಿಳಿಸಿದ.
“ಸಂಭಾವನೆ ಎಷ್ಟು ಸಿಗುತ್ತದೆ?” ಎಂದು ಸಹಜವಾಗಿ ಪ್ರಶ್ನಿಸಿದೆ.
“ಬರಿಯ ನೂರು (ಒಂದು ನೂರು) ರೂಪಾಯಿಗಳು ಮಾತ್ರ. ನಿಮ್ಮ ವ್ಯಾನಿನ ಪೆಟ್ರೋಲ್ ಮತ್ತು ಎರಡು ದಿನದ ಕಾಫಿಯ ವೆಚ್ಚಕ್ಕೆ ಸಾಲಬಹುದಷ್ಟೆ. ಅಲ್ಲಿನ ಊಟ-ವಸತಿಗಳ ವೆಚ್ಚಕ್ಕಾಗಿ ಅಲ್ಲಿನ ಪರಿಚಿತರು ಕೆಲವರಿಂದ ವಂತಿಗೆ ಎತ್ತಿದ್ದೇನೆ” ಎಂದು ಹೇಳಿದ ಗೋಪಾಲಕೃಷ್ಣನನ್ನು ಏನೆಂದು ಕರೆಯಲೂ ಶಬ್ದ ಸಾಲದು ಎನ್ನಿಸಿತು.
ಮತ್ತಷ್ಟು ಓದು 
ಗಾಂಧಿಬಂದ ವಿವಾದ : ಆತ್ಮಾವಲೋಕನೆಗೆ ಸುಸಂದರ್ಭ
-ಪ್ರವೀಣ್. ಟಿ. ಎಲ್
ನಾಗವೇಣಿಯವರ ‘ಗಾಂಧಿಬಂದ’ ಎಂಬ ಕಾದಂಬರಿಯ ಕುರಿತು ಬೇರೆ ಬೇರೆ ಪತ್ರಿಕೆಗಳಲ್ಲಿ ಇಂದು ವಿವಾದ ನಡೆಯುತ್ತಿದೆ. ಇದಕ್ಕೆ ರಾಜೇಂದ್ರ ಚೆನ್ನಿಯವರು 1-12-2011 ರಂದು ತಮ್ಮ ಪತ್ರಿಕೆಯಲ್ಲಿ ಗಾಂಧಿ ಬಂದ’ ಕೃತಿಯ ನಿಷೇಧಕ್ಕೆ ಒತ್ತಾಯ ತರವಲ್ಲ ಎಂಬ ಶೀರ್ಷಿಕೆಯಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯದ ಹಿನ್ನೆಲೆಯಲ್ಲಿ ನನ್ನ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಅದು ‘ಜಾತಿ ಸಂಸ್ಥೆಗಳು’ ವಿಶ್ವವಿದ್ಯಾನಿಲಯಗಳ ಮೇಲೆ ತರುತ್ತಿರುವ ‘ಅನೈತಿಕ ಒತ್ತಡ’ವಾಗಿದ್ದು, ಅವುಗಳನ್ನು ‘ಲಕ್ಷ’ಕ್ಕೆ ತೆಗೆದುಕೊಳ್ಳಬಾರದೆಂಬ ವಾದವನ್ನು ಮುಂದಿಟ್ಟರು. ಹಾಗೂ ಅವರ ವಾದವು ಮೇಲ್ನೋಟಕ್ಕೆ ಸಮಂಜಸವಾಗಿ ಕಾಣುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಜಾತಿ ಸಂಸ್ಥೆಗಳ ರಾಜಕೀಯ ಎಂಬುದನ್ನು ಗುರುತಿಸಿದಾಗ ಈ ರಾಜಕೀಯದಲ್ಲಿ ಸಾಹಿತ್ಯವು ತಟಸ್ಥ ಪಕ್ಷವಾಗಿ ತನ್ನನ್ನು ಉಳಿಸಿಕೊಂಡಿದೆಯೆ? ಎಂಬ ಪ್ರಶ್ನೆ ಏಳುತ್ತದೆ.
ತಮಗೆ ಪಥ್ಯವಾಗದ ಯಾವುದೋ ವಿಚಾರವನ್ನು ಮಂಡಿಸಿದೆ ಎನ್ನುವ ಕಾರಣಕ್ಕಾಗಿ ಗ್ರಂಥಗಳನ್ನೇ ನಿಷೇಧಿಸಬೇಕೆಂಬ ಹಾಗೂ ಸಂಶೋಧನೆಗಳನ್ನೇ ನಿಲ್ಲಿಸಬೇಕೆಂದು ಒತ್ತಡ ತರುವ ಪೃವೃತ್ತಿಯು ಇತ್ತೀಚೆಗೆ ಹೆಚ್ಚಾಗುತ್ತಿದೆ ಎಂಬುದು ವಿಷಾದಕರ ಸಂಗತಿ ಹಾಗೂ ಖಂಡನೀಯ. ಇದು ನಮ್ಮ ಸಂಸ್ಕೃತಿಗೆ ತೀರ ಅಸಹಜವಾದ ಒಂದು ಬೆಳವಣಿಗೆ ಎಂಬುದರಲ್ಲಿ ಸಂದೇಹವಿಲ್ಲ. ಏಕೆಂದರೆ ಕೆಲವು ಜಾತಿಯ ಪಾತ್ರಗಳನ್ನು ಹಿಯ್ಯಾಳಿಸುವ, ವ್ಯಂಗ್ಯವಾಡುವ ಹಲವಾರು ಪ್ರದರ್ಶನ ಕಲೆಗಳು ಇಂದಿಗೂ ಯಾವ ‘ಜಾತಿಸಂಸ್ಥೆಗಳ’ ಕೆಂಗಣ್ಣಿಗೂ ಗುರಿಯಾಗದೇ ಮುಂದುವರೆದುಕೊಂಡು ಬರುತ್ತಿರುವುದನ್ನು ನಮ್ಮ ಸಮಾಜದಲ್ಲಿ ನೋಡಲು ಸಾಧ್ಯವಾಗುತ್ತಿದೆ. ಉದಾಹರಣೆಗೆ ಜಾನಪದೀಯ ಕಲೆಗಳಾದ, ‘ಯಕ್ಷಗಾನ’, ‘ತಾಳಮದ್ದಳೆ’, ‘ಶನಿಮಹಾತ್ಮನ ಆಟ’ ಇವುಗಳ ಸಂದರ್ಭದಲ್ಲಿ ಬ್ರಾಹ್ಮಣರಾದಿಯಾಗಿ ಎಷ್ಟೋ ಜಾತಿಗಳ ಪಾತ್ರಗಳನ್ನು(ಮಾಣಿಭಟ್ಟ, ಇತ್ಯಾದಿ) ಹಾಸ್ಯಕ್ಕೆ, ವಿಡಂಬಿಸುವುದಕ್ಕಾಗಿ ಸೃಷ್ಟಿಸಲಾಗಿರುತ್ತದೆ. ಅಂತಹ ಸಂದರ್ಭದಲ್ಲಿ ಅದೇ ಜಾತಿಯ ಜನರು ಅಂತಹ ಪ್ರದರ್ಶನಗಳನ್ನು ನೋಡಿ ಸಂತೋಷವನ್ನು ಪಡುತ್ತಾರೆ, ಕಲಾವಿದನ ಪ್ರತಿಭೆಯನ್ನು ಮೆಚ್ಚಿ ಹೊಗಳುತ್ತಾರೆ. ಜೊತೆಗೆ ಅಂತಹ ಪ್ರದರ್ಶನಗಳು ಪದೇ ಪದೇ ತಮ್ಮ ಊರುಗಳಲ್ಲಿ ನಡೆಯುವಂತೆ ಅಲ್ಲಿನ ಜನರು ಮತ್ತು ಈ ‘ಜಾತಿಸಂಸ್ಥೆಗಳೇ’ ನೋಡಿಕೊಳ್ಳುತ್ತವೆ. ಈ ಸಾಂಪ್ರದಯಿಕ ಕಲೆಯ ಸಂದರ್ಭದಲ್ಲಿ ಕಾಣದ ಪೃವೃತ್ತಿಯು ಆಧುನಿಕ ಸಾಹಿತ್ಯದ ಸಂದರ್ಭದಲ್ಲೇಕೆ ಹುಟ್ಟಿಕೊಳ್ಳಬೇಕು? ಆಧುನಿಕ ಸಾಹಿತ್ಯದ ಸಂದರ್ಭದಲ್ಲೂ ಕೂಡ ಚೆನ್ನಿಯವರು ಹೇಳುವಂತೆ ಈ ಪೃವೃತ್ತಿಯು ಜಾತಿ ರಾಜಕೀಯ ಸಂಸ್ಥೆಗಳಿಂದ ಪ್ರಚೋದಿತವಾದುದನ್ನೇ ಕಾಣುತ್ತೇವೆಯೇ ವಿನಃ ಸಾಮಾನ್ಯ ಓದುಗರಿಂದಲ್ಲ. ಹಾಗಾಗಿ ಈ ಪೃವೃತ್ತಿಗೂ ನಮ್ಮ ಸಾಂಪ್ರದಾಯಿಕ ಸಮಾಜಕ್ಕೂ ಸಂಬಂಧವಿಲ್ಲ ಎಂಬುದು ಸ್ಪಷ್ಟ. ಇದೊಂದು ಭಿನ್ನವಾದ ಸಾಮಾಜಿಕ ವಾಸ್ತವದಲ್ಲಿ ಹುಟ್ಟಿಕೊಂಡ ಸಮಸ್ಯೆಯಾಗಿದೆ. ಮತ್ತಷ್ಟು ಓದು 
ನಮ್ಮ ಯುವಜನತೆಯ ಯೋಚನೆಯ ದಿಕ್ಕು…….???
-ಅರೆಹೊಳೆ ಸದಾಶಿವರಾವ್
ಪ್ರದಕ್ಷಿಣೆ ಎಂಬ ಅಂತರ್ಜಾಲ ಪತ್ರಿಕೆಯೊಂದನ್ನು ಇತ್ತೀಚೆಗೆ ಆರಂಭಿಸಿದ ನಂತರದ ಕೆಲವು ಅನುಭವಗಳು ಒಮ್ಮೊಮ್ಮೆ ಮನಸ್ಸಿಗೆ ತುಂಬಾ ಯೋಚನೆಯ ಸರಕನ್ನು ಒದಗಿಸುತ್ತವೆ. ಇದರಲ್ಲಿ ಮುಖ್ಯವಾದದ್ದು ನಮ್ಮ ಇಂದಿನ ಯುವ ಜನತೆಯ ಆಲೋಚನೆಗಳು.
ಇದಕ್ಕೆ ಪೂರ್ವಭಾವಿಯಾಗಿ ಒಂದೆರಡು ಮಾತುಗಳನ್ನು ನಿಮ್ಮೊಡನೆ ಹೇಳಿಕೊಳ್ಳಲೇ ಬೇಕು. ಅದು ನಮ್ಮ ಬಾಲ್ಯದ ದಿನಗಳು. ಕನಸುಗಳು ಮತ್ತು ಕನಸುಗಳು ಮಾತ್ರವೇ ತುಂಬಿಕೊಂಡಿದ್ದ ಕಣ್ಣುಗಳಿಗೆ ಮನೆಯ ಬಡತನ, ಬೆನ್ನ ಹಿಂದಿರುವ ಸಹೋದರತೆಯ ಬಂಧಗಳು ಅಥವಾ ಆ ಮೂಲಕ ಬಂದೊದಗಿದ ಜವಾಬ್ದಾರಿಗಳು……ಇತ್ಯಾದಿಗಳಾವುವೂ ಹೊರೆ ಅನಿಸುತ್ತಿರಲಿಲ್ಲ. ಅದಕ್ಕೆ ಕಾರಣಗಳು ನಾವು ಬಾಲ್ಯವನ್ನು ಅನುಭವಿಸುತ್ತಿದ್ದ ರೀತಿ. ಮನೆಯಂಗಣದಲ್ಲಿಯೋ, ತೋಟದಲ್ಲಿಯೋ, ಗದ್ದೆಯಲ್ಲಿಯೋ ನಮ್ಮದೇ ಯಕ್ಷಗಾನ, ಪಾಠ ಪುಸ್ತಕಗಳ ನಡುವೆ ಕದ್ದು ಓದುತ್ತಿದ್ದ ಕಾದಂಬರಿ, ಸುಧಾ, ತರಂಗ, ಪ್ರಜಾಮತದಂತಹ ಪತ್ರಕೆಗಳು, ಕಥೆ ಪುಸ್ತಕಗಳು……ಇತ್ಯಾದಿಗಳು, ಮೈಲುಗಟ್ಟಳೆ ದೂರ ನಡೆಯುತ್ತಿದ್ದ ಯಕ್ಷಗಾನಕ್ಕೂ ಕಾಲನಡಿಗೆಯಲ್ಲಿಯೇ ಹೋಗಿ ರಾತ್ರಿ ಇಡೀ ಅರ್ದಂಬರ್ಧ ನೋಡುತ್ತಿದ್ದ ಯಕ್ಷಗಾನ-ನಾಟಕಗಳು, ಶಾಲೆಯಲ್ಲಿ ಪ್ರತೀ ಶನಿವಾರದಂದು ನಡೆಯುತ್ತಿದ್ದ ನಮ್ಮದೇ ಪ್ರತಿಭಾಪ್ರದರ್ಶನಗಳು, ಪ್ರತೀ ಶುಕ್ರವಾರ ಸಂಜೆ ಶಾಲೆಯಲ್ಲಿ ನಡೆಯುತ್ತಿದ್ದ ಭಜನೆ……ಇತ್ಯಾದಿಗಳೆಲ್ಲಾ ನಮಗೆ ಬದುಕು ಎಂದರೆ ಏನು ಎಂಬುದನ್ನು ತೋರಿಸುವಲ್ಲಿ ಸಹಾಯಕವಾಗುತ್ತಿದ್ದುವು. ಇಂತಹ ಪರಿಸರ ನಮ್ಮನ್ನು ಸಾಕಷ್ಟು ಉಲ್ಲಾಸದಿಂದಿರುವಂತೆ ನೋಡಿಕೊಳ್ಳುತ್ತಿದ್ದುವು. ಹಾಗೆಂದೇ ಸಹಜವಾಗಿ ಮುಂದೆ ಸಾಹಿತ್ಯ, ಕಲೆಗಳತ್ತ ನಮ್ಮ ಆಸಕ್ತಿ ಬೆಳೆಯುವಲ್ಲಿ ಇವುಗಳು ಸಹಾಯಕವಾಗುತ್ತಿದ್ದುವು.
ಈ ಎಲ್ಲಾ ಹಿನ್ನೆಲೆಗಳೂ ಮುಂದೆ ನಮ್ಮ ಪ್ರತೀ ಕೃತಿಯಲ್ಲೂ ಸಹಜವಾಗಿ ಆಶಾವಾದವನ್ನು ಬಿಂಬಿಸುತ್ತಿದ್ದುವು. ಅದಕ್ಕೆಂದೇ ಅಂದಿನ ಆರಂಭದ ಕವಿಗಳು, ಕತೆಗಾರರು ಅಥವಾ ಚಿಂತಕರು ಆಶಾವಾದದ ಮಾತಾಡುತ್ತಿದ್ದರು, ನಮ್ಮ ಸುತ್ತ ಮುತ್ತಲಿನ ಪ್ರಕೃತಿಗಳೇ ಎಲ್ಲದಕ್ಕೂ ಸಮೃದ್ಧ ವಸ್ತುವಾಗಿ, ಪ್ರತೀ ಕೆಲಸದಲ್ಲೂ…ಅದು ಸಾಹಿತ್ಯವಿರಲಿ, ಬದುಕಿರಲಿ ಒಂದು ಉಲ್ಲಾಸದ ಮತ್ತು ಉತ್ಸಾಹದ ವಾತಾವರಣಕ್ಕೆ ಕಾರಣವಾಗುತ್ತಿದ್ದುವು.
ಈ ವೆಬ್ಸೈಟ್ ನಲ್ಲಿ ಕನ್ನಡಕ್ಕಿಲ್ಲ ‘ಆಧಾರ’
ಪಾಣಿಯಿಂದ ಹಿಡಿದು ಪೋಸ್ಟಾಫೀಸಿನ ಕಡತದವರೆಗೆ ಎಲ್ಲವೂ ನಾಡಭಾಷೆ ಕನ್ನಡದಲ್ಲಿ ಸಿಗುತ್ತಿರುವಾಗ ರಾಜ್ಯ ಸರ್ಕಾರವೇ ಸ್ಥಾಪಿಸಿದ ಮಿಂಬಲೆ(website) http://www.karnataka.gov.in ಯೆಲ್ಲಾ ಇಂಗ್ಲೀಷ್ ಮಯ. .ಹೋಗುತ್ತಿದ್ದ ಹಾಗೆಯೇ ಕನ್ನಡ/ಇಂಗ್ಲೀಷ ಎಂಬ ಆಯ್ಕೆ ಸಿಗುತ್ತದೆ. ನೋಡೋಣ ಎಂದು ಕುತೂಹಲಕ್ಕೆ ಕನ್ನಡವನ್ನು ಆಯ್ಕೆ ಮಾಡಿಕೊಂಡು ಒಳನಡೆದಾಗ ನನಗೆ ಗೋಚರಿಸಿ ಬೇಸರಿಸಿದ್ದನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.
“ಆಧಾರ್” ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ. ಭಾರತದ ಪ್ರತಿಯೊಬ್ಬ ನಾಗರೀಕನಿಗೂ ಪ್ರತ್ಯೇಕ ಗುರುತಿನ ಚೀಟಿ ನೀಡಬೇಕೆಂಬ ಮಹೋದ್ದೇಶದ್ದು. ಅದು ಈಗಾಗಲೇ ಅಂಚೆ ಕಛೇರಿಗಳ ಮೂಲಕ ಚಾಲನೆಗೆ ಬಂದಿರುವುದು ನಿಮಗೆಲ್ಲಾ ತಿಳಿದೇ ಇದೆ. ಅದೇ ಆಧಾರ ನ ಬಗ್ಗೆ ಕರ್ನಾಟಕದ ಮಿಂಬಲೆಯಲ್ಲಿ ಮಾಹಿತಿ ಪಡೆಯಲು ಹೋದಾಗ ನನಗಾಗಿದ್ದು ಆಘಾತ.
ಅದರ ಹೆಸರೊಂದೇ ನಮ್ಮ ಆಧಾರ್ ಅಂತ. ಬಲಗಡೆ ಬರುವಂತ ಚಿತ್ರ ಪ್ರದರ್ಶನ(Slide Show) ದಲ್ಲಿ ಮಾತ್ರ ನಿಮಗೆ ಕನ್ನಡ ಕಾಣಸಿಗುತ್ತದೆ ಅಷ್ಟೆ!!!http://www.karnataka.gov.in/nammaaadhaar/home.html..
ಅದೂ ೮ ಚಾಯಾ ಚಿತ್ರಗಳಷ್ಟೆ.. ಆಧಾರ ಕಾರ್ಡನು ಶಾಲೆಗೆ ಸೇರಿಸಲು, ವೃದ್ದಾಪ್ಯ ವೇತನ ಪಡೆಯಲು, ಉದ್ಯೋಗ ಪಡೆಯಲು, ಬ್ಯಾಂಕ್ ಖಾತೆ ತೆರೆಯಲು,ಸರ್ಕಾರದ ಸೌಲಭ್ಯಗಳನ್ನು ಪಡೆಯಲು, ಆರೋಗ್ಯ ಸೇವೆಗಳ ಲಾಭ ಪಡೆಯಲು, ಅಂತ ಅದಕ್ಕೆ ಸಂಬಂಧಿಸಿದಂತೆ ಇರುವ ಚಿತ್ರಗಳನ್ನು ಹಾಕಲಾಗಿದೆ. ಅದರಲ್ಲಿ “ಆಧಾರ್” ಪಡೆಯಲು ಏನೇನು ದಾಖಲೆ ಸಲ್ಲಿಸಬೇಕು ಅಂತ ಹೇಳಲಾಗಿಲ್ಲ. ವಿಳಾಸದ ದಾಖಲೆಗಾಗಿ ಸೂಚಿಸಿದ ೨೯ ದಾಖಲೆಗಳ ಮೂಲಪ್ರತಿಯನ್ನು , ಗುರುತಿನ ದಾಖಲೆಗಾಗಿ ಸೂಚಿಸಿದ ದಾಖಲೆಗಾಗಿ ೧೭ರಲ್ಲಿ ಒಂದು , ಹುಟ್ಟು ದಿನಾಂಕದ ದಾಖಲೆಗಾಗಿ ೪ ದಾಖಲೆಗಳಲ್ಲಿ ಒಂದರ ಮೂಲ ಪ್ರತಿ ಸಲ್ಲಿಸಬೇಕು. !! ನೋದಣಿಯ ನಂತರ ಅವುಗಳನ್ನು ಹಿಂತಿರುಗಿಸಲಾಗುವುದು ಅಂತ ಇದೆ. ಆ ೨೯,೧೭,೪ ದಾಖಲೆಗಳು ಏನು . ಎತ್ತ ಎಂಬುದರ ಬಗ್ಗೆ ಮಾಹಿತಿಯಿಲ್ಲ.. ಅದನ್ನು ಆಧಾರ್ ನೊಂದಣಿ ಕೇಂದ್ರದಲ್ಲಿ ಪಡೆಯಬೇಕು ಆಧಾರ್ ಅನ್ನು ಎಲ್ಲಿ ಪಡೆಯಬಹುದು ಎಂಬ ಸ್ಲೈಡಲ್ಲಿ ಜಿಲ್ಲಾಡಳಿತದಿಂದ ಸ್ಥಾಪಿಸಲ್ಪಟ್ಟ ಆಧಾರ್ ನೊಂದಣಿ ಕೇಂದ್ರಗಳು ಅಂತ ಹಾಕಿದ್ದಾರೆ.. ನಮ್ಮ ಜಿಲ್ಲೆಯಲ್ಲಿ ಆಧಾರ್ ನೊಂದಣಿ ಕೇಂದ್ರ ಎಲ್ಲಿದೆ ಅಂತ ಈ ಸೈಟಿಂದ ಹೇಗೆ ತಿಳಿಯೋಣ ಸ್ವಾಮಿ ?? ಆಧಾರ್ ಕೇಂದ್ರ ಹತ್ತಿರದಲ್ಲಿ ಎಲ್ಲಿದೆ ಅಂತ ತಿಳಿಯೋಕೆ ಆಧಾರ್ ಕೇಂದ್ರಕ್ಕೇ ಹೋಗಬೇಕೇ ? ಮತ್ತಷ್ಟು ಓದು 
ಉಡುಪಿಯ ಕೃಷ್ಣ ತಿರುಗಿ ನಿಂತಷ್ಟು ಸುಲಭವಲ್ಲ ’ಮಡೆ ಸ್ನಾನ’ ನಿಲ್ಲುವುದು…!
– ರಾಕೇಶ್ ಶೆಟ್ಟಿ
“ಮಡೆಸ್ನಾನ ಅಥವಾ ಎಂಜೆಲೆಲೆ ಮೇಲೆ ಉರುಳು ಸೇವೆ ಮಾಡುವುದನ್ನು ನಿಷೇಧಿಸುವುದರಿಂದ ಯಾವ ರೀತಿ ಲಾಭವೂ ಇಲ್ಲ ನಷ್ಟವೂ ಇಲ್ಲ. ನಾನು ಈ ವಿಷಯದಲ್ಲಿ ತಟಸ್ಥ ನೀತಿ ಅನುಸರಿಸುತ್ತೇನೆ” ಹೀಗಂತ ಹೇಳಿರೋದು ಪೇಜಾವರಶ್ರೀಗಳು…!
ಒಂದು ಕಡೆ ದಲಿತ ಕಾಲೋನಿಗಳಲ್ಲಿ ಓಡಾಡಿ ಹಿಂದೂ ಧರ್ಮವನ್ನು ಉದ್ಧರಿಸುವ ಮತ್ತು ಮತಾಂತರವನ್ನ ವಿರೋಧಿಸುವ ಮಾತನಾಡುವ ಶ್ರೀಗಳಿಗೆ ಮಡೆಸ್ನಾನದಿಂದ ಯಾವ ಧರ್ಮಕ್ಕೆ,ಹೇಗೆ ನಷ್ಟವಾಗಬಹುದು ಮತ್ತು ಹಿಂದೂ ಅನ್ನುವ ಧರ್ಮದ ಬಗ್ಗೆ ಮಾಧ್ಯಮಗಳ ಮೂಲಕ ಜಗತ್ತಿಗೆ ಯಾವ ಸಂದೇಶ ತಲುಪಬಹುದು ಅನ್ನುವುದರ ಅರಿವಿರಲಿಕ್ಕಿಲ್ಲವಾ? ಇದ್ದರೆ ಈ ರೀತಿ ಮೈಗೆ ಎಣ್ಣೆ ಹಚ್ಚಿಕೊಂಡವರಂತೆ ಹೇಳಿಕೆ ನೀಡುತಿದ್ದರಾ?
’ಮಡೆ ಸ್ನಾನ’ ಅನ್ನುವ So Called ಧಾರ್ಮಿಕ ನಂಬಿಕೆ(!?) ನಡೆದುಕೊಂಡು ಬಂದ ಹಾದಿಗೆ ೪೦೦ ವರ್ಷಗಳ ಇತಿಹಾಸವಿದೆ.ಆದರೆ ತೀರಾ ಇದು ಮಾಧ್ಯಮಗಳಲ್ಲಿ ದೊಡ್ದ ಮಟ್ಟದ ಸುದ್ದಿ ಮಾಡಲಿಕ್ಕಾರಂಭಿಸಿದ್ದು ಬಹುಷಃ ಕಳೆದ ವರ್ಷದಿಂದಲೇ…! ಸದ್ಯ.ಈಗಲಾದರೂ ನಮ್ಮ ದನಿ ಕೇಳಿಬರುತ್ತಿದೆ ಅನ್ನುವ ಸಂತೋಷದ ಜೊತೆ ಜೊತೆಗೆ ಇಂತ ಅನಿಷ್ಟ ಪದ್ಧತಿಗಳಿಗೆ ಬ್ರೇಕ್ ಹಾಕಬೇಕಾದ ಸರ್ಕಾರ ಮತ್ತು ಸರ್ಕಾರದ ಸಚಿವರೇ ’ನೋ ಕಮೆಂಟ್ಸ್’ ಅನ್ನುವುದು ನೋಡಿ ಬೇಸರವೂ ಆಗುತ್ತದೆ.
ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ – ಒಂದು ಸಮೀಕ್ಷೆ
- ಇದೆ
- ಇಲ್ಲ
- ಹೌದು
- ಇಲ್ಲ
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 13- ಯಂತ್ರಗಳು, ಯಾಂತ್ರಿಕರು…
–ರಾಮಚಂದ್ರ ಪಿ
ಆಧುನಿಕ ವಿಜ್ಞಾನವು ಇತ್ತ ಕೊಡುಗೆಗಳನ್ನು ನಾವು ಜೀವನದಲ್ಲಿ ಉಪಯೋಗಿಸಿಕೊಳ್ಳಲೇ ಬೇಕಷ್ಟೆ. ಕಲೆಗೂ ಕೆಲವು ಕೊಡುಗೆಗಳನ್ನು ವಿಜ್ಞಾನವು ಇತ್ತಿದೆ. ಇತರ ಕಲೆಗಳಂತೆ ಯಕ್ಷಗಾನದಲ್ಲೂ ಅವುಗಳ ಉಪಯೋಗವಾಗುತ್ತಿದೆ.
ಸರಿಯಾಗಿ ಉಪಯೋಗ ಮಾಡಿಕೊಳ್ಳುವ ಮೊದಲು, ವಿಜ್ಞಾನವಿತ್ತ ಹಲವು ಸಲಕರಣೆಗಳೂ, ‘ಅನುಕೂಲಗಳೂ’ ನನಗೆ ಉಪಟಳವಿತ್ತಿವೆ.
ನಾವು ಉತ್ತರ ಕನ್ನಡ ಪ್ರವಾಸ ಕೈಕೊಂಡ ಮಾರನೆಯ ವರ್ಷ ಡೇರೆಯ ಅಗತ್ಯ ನಮಗಾಯಿತು. ಅದಕ್ಕೆ ಮೊದಲೇ ಶ್ರೀ ಕೊರಗಪ್ಪ ಶೆಟ್ಟರು ತಮ್ಮ ಮೇಳಕ್ಕೆ ಒಂದು ಡೇರೆಯನ್ನು ಮಾಡಿಸಿಕೊಂಡಿದ್ದರು. ನಮ್ಮ ಮನೆಯಲ್ಲೇ ಬೇಕಾದ ವಸ್ತುಗಳನ್ನು ತರಿಸಿ ಹೊಸ ಡೇರೆಯೊಂದನ್ನು ತಂದೆಯವರು ಮಾಡಿಸಲು ತೊಡಗಿದರು. ಮೊದಲು ಹೊರಗಿನ ಆವರಣ ಮಾತ್ರ ಸಾಕು ಎಂದಿದ್ದುದು, ಅನಂತರ- ಆಟವಾಡುವ ಸ್ಥಳದ ಅರ್ಧ ಬಯಲನ್ನು ಮುಚ್ಚುವ ದೊಡ್ಡ ಡೇರೆಯಾಗಿಯೇ ಪರಿವರ್ತನೆಗೊಂಡಿತು. ಆಗ ಅದಕ್ಕೆ ತಕ್ಕಂತೆ ಕಟ್ಟಿ- ಬಿಚ್ಚಿ- ಜೋಡಿಸಿ ಸಾಗಿಸಬಲ್ಲ ಒಂದು ರಂಗಸ್ಥಳವೂ ಬೇಕು ಎನಿಸಿತು. ಅನಂತರ ಬಂದುದು ವಿದ್ಯುತ್ತಿನ ವ್ಯವಸ್ಥೆ; ಧ್ವನಿವರ್ಧಕದ ಏರ್ಪಾಡು.
ಮಡೆಸ್ನಾನದ ಮರ್ಮವೇನು ?
-ಸಂತೋಷ ಕುಮಾರ್
ಕುಕ್ಕೆ ಸುಬ್ರಮಣ್ಯದಲ್ಲಿ ಜರುಗ ಬೇಕಾಗಿದ್ದ ಮಡೆಸ್ನಾದ ಆಚರಣೆಯನ್ನು ರದ್ದುಗೊಳಿಸಬೇಕೇಂದು ಅಲ್ಲಿನ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಆದರೆ ದಿಡೀರ್ ಬೆಳವಣಿಗೆ ಎಂಬಂತೆ ನಿಷೇಧದ ಆದೇಶದ ಮರುದಿನವೇ ನಿಷೇಧವನ್ನು ರದ್ದುಪಡಿಸುವ ಆದೇಶವನ್ನೂ ಸಹ ನೀಡಲಾಯಿತು. ಇದನ್ನು ರಾಜಕೀಯ ವ್ಯವಸ್ಥೆಯ ಲೋಪದೋಷ ಅಥವಾ ದೌರ್ಬಲ್ಯ ಹಾಗೂ ಆಚರಣೆಯ ಅಥವಾ ಅದನ್ನು ಆಚರಿಸುವವರ ಸಂಸ್ಕೃತಿಯ ವಿಶಿಷ್ಟತೆ ಎಂಬ ಎರಡೂ ವಿಭಿನ್ನ ಆಯಾಮಗಳಲ್ಲಿ ವಿಶ್ಲೇಷಿಸಬಹುದು. ಇಲ್ಲಿ ಎರಡನೇ ಆಯಾಮದಿಂದ ಈ ಘಟನೆಯನ್ನು ವಿಶ್ಲೇಷಿಸಲು ಪ್ರಯತ್ನಿಸಲಾಗುವುದು. ಕುಕ್ಕೆ ಸುಬ್ರಮಣ್ಯದ ಮಡೆಸ್ನಾನದ ಆಚರಣೆಯನ್ನು ನಿಷೇಧಿಸಬೇಕೆಂಬ ಆದೇಶ ಹೊರಡಿಸುತ್ತಿದ್ದಂತೆ ವಿಶೇಷವಾಗಿ ನಮಗೆ ಆ ಆಚರಣೆಯಲ್ಲಿ ಭಾಗವಹಿಸುವ ಭಕ್ತರು ಹೇಗೆ ಪ್ರತಿಸ್ಪಂದಿಸುತ್ತಾರೆ ಎಂಬ ಕುತೂಹಲವಿತ್ತು.
ಕಲಸೆ (ನಾಡಕಲಸಿ) ದೇವಸ್ಥಾನ
-ಪ್ರಹಸ್ತಿ ಪಿ
ಸಾಗರ ತಾಲೂಕಿನ ಇತಿಹಾಸ ಪ್ರಸಿದ್ದ ದೇವಸ್ಥಾನಗಳಲ್ಲಿ ಕಲಸೆ, ನಾಡಕಲಸಿಯೂ ಒಂದು. ಸಾಗರದವನಾಗಿಯೂ ಅದನ್ನು ನೋಡಲಾಗಿರದ ಬಗ್ಗೆ ಸ್ವಲ್ಪ ಬೇಸರವಿತ್ತು. ಬೆಳಗ್ಗೆ ೮ಕ್ಕೆ, ಮಧ್ಯಾಹ್ನ ಒಂದಕ್ಕೆ ಮಾತ್ರ ಅಲ್ಲಿಗೆ ಬಸ್ಸಿನ ಸೌಕರ್ಯವಿದೆ ಎಂಬ ಗೆಳೆಯರ ಮಾತೂ ನೋಡದಿರುವುದಕ್ಕೊಂದು ಪಿಳ್ಳೆ ನೆವವಾಗಿತ್ತು. ಆದರೆ ಅಲ್ಲಿಗೆ ಹೋದ ಮೇಲೆಯೇ ತಿಳಿದಿದ್ದು. ಅದೆಷ್ಟು ಸುಂದರ ಎಂದು.
ಹೋಗುವ ಮಾರ್ಗ:
ಸಾಗರದಿಂದ ಸುಮಾರು ಎಂಟು ಕಿ.ಮೀ ದೂರವಷ್ಟೇ ನಾಡಕಲಸಿ ಅಥವಾ ಕಲಸಿಯ ದೇವಸ್ಥಾನ. ಸಾಗರದಿಂದ ಹೋಗುವುದಾದರೆ ಸೊರಬ ಮಾರ್ಗದಲ್ಲಿ ಸುಮಾರು ೫ ಕಿ.ಮೀ ಹೋದ ಕೂಡಲೇ ಕಲಸಿ ರಾಮೇಶ್ವರ ದೇವಸ್ಥಾನಕ್ಕೆ ದಾರಿ ಅಂತ ಬೋರ್ಡೊಂದು ಸಿಗುತ್ತದೆ. ಅಲ್ಲಿಂದ ಸುಮಾರು ಮೂರು ಕಿ.ಮೀ ಬಲಕ್ಕೆ ಹೋದರೆ ಸಿಗುವುದು ಕಲಸಿ ಊರು. ಅಲ್ಲಿಂದ ಸ್ವಲ್ಪ ಒಳಗಡೆ ಇದೆ ದೇವಸ್ಥಾನ. ಸೊರಬಕ್ಕೆ ತುಂಬಾ ಬಸ್ಸುಗಳಿವೆ. ಹಾಗಾಗಿ ಸೊರಬ ಬಸ್ಸಿನಲ್ಲಿ ಕಲಸಿ ಬೋರ್ಡಿನಲ್ಲಿ ಇಳಿದುಕೊಂಡರೆ ಮೂರು ಕಿ.ಮೀ ನಡೆದು ಕಲಸಿ ದೇವಸ್ಥಾನಕ್ಕೆ ಯಾವಾಗಲಾದರೂ ಹೋಗಬಹುದು. ಸ್ವಂತ ವಾಹನವಿದ್ದರೆ ಇನ್ನೂ ಉತ್ತಮ.
ಇತಿಹಾಸ:
ಇಲ್ಲಿ ಶ್ರೀ ಮಲ್ಲಿಕಾರ್ಜುನ ಮತ್ತು ರಾಮೇಶ್ವರ ದೇವಸ್ಥಾನಗಳಿವೆ. ಈ ಜೋಡಿ ದೇಗುಲಗಳನ್ನು ಹೊಯ್ಸಳ ರಾಜ ಬಳೆಯಣ್ಣ ಹೆಗ್ಗಡೆ ಕ್ರಿ.ಶ ೧೨೧೮ ರಲ್ಲಿ ಕಟ್ಟಿಸಿದನೆಂದು ಸಂಶೋಧನಕಾರರು ಹೇಳುತ್ತಾರೆ.
ಮೊದಲಿಗೆ ಹೋಗುತ್ತಿದ್ದಂತೆಯೇ ನಿಮ್ಮನ್ನು ಸ್ವಾಗತಿಸುವುದು ದೇಗುಲದ ಎದುರಿಗೆ ಅಥವಾ ಹೋಗುವವರ ಬಲಗಡೆಗೆ ಇರುವ ನಾಗರ ಬನ.ಅದಕ್ಕೆ ನಮಸ್ಕರಿಸಿ ಮೊದಲು ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋದೆವು.
ನಮ್ಮೂರ ಕನ್ನಡ ರಾಜ್ಯೋತ್ಸವ – ‘ಕೆಳದಿ’
–ಪ್ರಹಸ್ತಿ ಪಿ.
ಶಿವಮೊಗ್ಗ ಜಿಲ್ಲೆಯ ಸುತ್ತಮುತ್ತಲಿರೋರಿಗೆ ಕೆಳದಿಯ ಬಗ್ಗೆ ಗೊತ್ತೇ ಇರುತ್ತದೆ. ಹೊಸಬರಿಗೆ ಹೇಳಬೇಕೆಂದರೆ, ನೀವು ಜಗತ್ಪ್ರಸಿದ್ಧ ಜೋಗ ಜಲಪಾತದ ಹೆಸರನ್ನು ಕೇಳಿಯೇ ಕೇಳಿರುತ್ತೀರಿ. ಅದಕ್ಕೆ ಹೋಗಬೇಕಾದರೆ ಸಾಮಾನ್ಯವಾಗಿ ಸಾಗರಕ್ಕೆ ಬಂದೇ ಹೋಗುತ್ತಾರೆ. ಸಾಗರದಿಂದ ಎಂಟು ಕಿ.ಲೋ ಮೀಟರು ದೂರವಿರುವ ಊರು ಕೆಳದಿ. ಇಲ್ಲಿಯ ಪಾಳೇಗಾರ ಶಿವಪ್ಪನಾಯಕ, ರಾಣಿ ಚೆನ್ನಮ್ಮ… ಈ ಹೆಸರುಗಳನ್ನು ಎಲ್ಲೋ ಕೇಳಿದ/ಓದಿದ ನೆನಪಾಗುತ್ತಿದೆಯೇ? ಹಾ ಅದೇ ಕೆಳದಿ. ಅದರ ಹತ್ತಿರವೇ ನಮ್ಮೂರು.
ಪ್ರತೀವರ್ಷವೂ ಕನ್ನಡ ರಾಜ್ಯೋತ್ಸವ ಬಂತೆಂದರೆ ನಮಗೆಲ್ಲಾ ಹಬ್ಬದ ವಾತಾವರಣ.ಹಂಪಿಯಿಂದ ಕೆಳದಿಗೆ ಬರುತ್ತಿದ್ದ ವಿದ್ಯಾರಣ್ಯ ಜ್ಯೋತಿಯದು ಕೆಳದಿಯಿಂದ ಸಾಗರದವರೆಗೆ ಮೆರವಣಿಗೆ..ಆ ಸಂದರ್ಭವೆಂದರೆ ನಮಗೆಲ್ಲಾ ಸಂಭ್ರಮವೋ ಸಂಭ್ರಮ.ಪ್ರತೀ ಮನೆಯೆದುರ ರಸ್ತೆಯನ್ನೂ ತೊಳೆದು ಎಳೆದ ದೊಡ್ಡದೊಡ್ಡ ರಂಗೋಲಿಗಳು,”ವಿದ್ಯಾರಣ್ಯ ಜ್ಯೋತಿಗೆ ಸ್ವಾಗತ”, “ರಾಜ್ಯೋತ್ಸವದ ಶುಭಾಶಯಗಳು” ಇತ್ಯಾದಿ ಬರಹಗಳೇನು, ಪ್ರತೀ ಹಳ್ಳಿಯ ಬಾಗಿಲುಗಳಲ್ಲಿ, ಹೆಚ್ಚೆಚ್ಚು ಮನೆಗಳಿದ್ದ ಕಡೆ ಹೀಗೆ ಸಾಲು ತೋರಣಗಳೇನು, ಪೇಟೆ ಹತ್ತಿರ ಸಾಗುತ್ತಿದ್ದಂತೆ ಸಾಲು ಸಾಲು ವಿದ್ಯುತ್ ದೀಪಗಳೇನು..ಅಬ್ಬಾ!! ಜ್ಯೋತಿಯೊಂದಿಗೆ ಎಂಟು ಕಿಲೋಮೀಟರಿಗಿಂತಲೂ ದೂರ ಸಾಗುವುದೆಂದರೆ ಒಂದು ಅವಿಸ್ಮರಣೀಯ ಅನುಭವ.. ವಿದ್ಯಾರಣ್ಯರು ಹಕ್ಕ-ಬುಕ್ಕರ ಗುರುಗಳಲ್ಲವೇ, ಆ ವಿಜಯನಗರ ಸಾಮ್ರಾಜ್ಯಕ್ಕೂ ಕೆಳದಿಗೂ, ಅವರ ಹೆಸರಿನ ಜ್ಯೋತಿಗೂ , ನಾನು ಹೇಳಹೊರಟಿರುವ ಮೆರವಣಿಗೆಗೂ ಎಲ್ಲಿಂದೆಲ್ಲಿಯ ಸಂಬಂಧವಯ್ಯಾ ಅಂತ ಸಂದೇಹ ಶುರು ಆಯ್ತಾ? ತಡೀರಿ ಒಂದೊಂದಾಗಿ ಹೇಳುತ್ತಾ ಹೋಗ್ತೇನೆ. ಮುಂದೆ ಓದಿ.
ವಿಜಯನಗರದ ಕೃಷ್ಣದೇವರಾಯನ ಕಾಲದಲ್ಲಿ ಕೆಳದಿಯ ಸಾಮಾನ್ಯ ರೈತನೊಬ್ಬನಾದ ಭದ್ರಗೌಡನೆಂಬುವನಿಗೆ ನಿಕ್ಷೇಪ ದೊರೆತು ಅದರಿಂದ ಅವನು ಪಾಳೆಯವನ್ನು ಕಟ್ಟಿಕೊಂಡನಂತೆ. ಅವನ ಪರಾಕ್ರಮಕ್ಕೆ ಮೆಚ್ಚಿ ಕೃಷ್ಣದೇವರಾಯ ಅವನಿಗೆ ಎಂಟು ಮಾಗಣಿಗಳ ನಾಯಕತ್ವವನ್ನು ಕೊಟ್ಟನೆಂದು ಇತಿಹಾಸವಿದೆ .ಕಾಲ ಕಳೆದಂತೆ ಸಂಸ್ಥಾನ ಬೆಳೆಯಿತು. ಕೆಳದಿ, ಇಕ್ಕೇರಿ, ಗೌರಿ ಬಿದನೂರು ಹೀಗೆ ಕೋಟೆ ಕೊತ್ತಲಗಳನ್ನು, ದೇವಾಲಯಗಳನ್ನು ಕಟ್ಟಿದರು. ಶಿವಪ್ಪನಾಯಕ, ಚೆನ್ನಮ್ಮ ರಾಣಿಯಂತಹವರು ಬಂದು ಹೋದರು. ಕೆಳದಿಯ ವೀರಭದ್ರ ದೇವಸ್ಥಾನದ ಪ್ರಧಾನ ಬಾಗಿಲ ಬಳಿ ಶ್ರೀಕೃಷ್ಣನ ಸಣ್ಣ ವಿಗ್ರಹವಿದೆ. ಇದು ಅಂದಿನಾ ಘಟನೆಯ ಸವಿನೆನಪಿಗಾಗಿ ಎಂದು ಅನೇಕರು ಹೇಳುತ್ತಾರೆ.
೧೯೫೬ ರಲ್ಲಿ ಕರ್ನಾಟಕ ಏಕೀಕರಣವಾಯಿತು. ರಾಜ್ಯೋತ್ಸವ ಆಚರಣೆಗಳು ಪ್ರಾರಂಭವಾದವು. ೭೦ರ ದಶಕದ ಕೊನೆಭಾಗದಲ್ಲಿ ರಾಜ್ಯೋತ್ಸವ ಆಚರಣೆಯ ಭಾಗವಾಗಿ ಇತಿಹಾಸ ಪ್ರಸಿದ್ದ ಸ್ಥಳಗಳಿಂದ ಜ್ಯೋತಿಯೊಂದನ್ನು ತಂದು ಮೆರವಣಿಗೆ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತಂತೆ. ಅದಾಗಿ ಕೆಲಸಮಯದಲ್ಲಿ ಅಂದರೆ ಈಗ್ಗೆ ಸುಮಾರು ಇಪ್ಪತ್ತು ವರ್ಶಗಳ ಹಿಂದಿಂದ ಕೆಳದಿಯಿಂದ ಜ್ಯೋತಿಯ ಮೆರವಣಿಗೆ ನಡೆಸುವ ಸಂಪ್ರದಾಯ ಶುರುವಾಗಿದೆ ಅಂತ ಅಲ್ಲಿನ ಹಿರಿಯರು ಹೇಳುತ್ತಾರೆ. ಮೊದಲಿಗೆ ನವೆಂಬರ್ ಒಂದರ ಹಿಂದಿನ ರಾತ್ರಿ ಹಂಪಿಯಿಂದಲೇ ವಿದ್ಯಾರಣ್ಯ ಜ್ಯೋತಿ ಕೆಳದಿಗೆ ಬರುತ್ತಿತ್ತಂತೆ. ಜೀಪಲ್ಲಿ ಹಿಂದಿನ ದಿನ ಮಧ್ಯರಾತ್ರಿಯ ಹೊತ್ತಿಗೆ ಕೆಳದಿಗೆ ಬರುತ್ತಿತ್ತು ಆ ಜ್ಯೋತಿ. ಮಧ್ಯರಾತ್ರಿ ಎಷ್ಟೊತ್ತಾದರೂ ಕೆಳದಿಗೆ ಬಂದೇ ತಲುಪುತ್ತಿದ್ದ ಜ್ಯೋತಿ ಹೊತ್ತು ತಂದವರು ಕೆಳದಿ ದೇಗುಲದ ಪ್ರಾಂಗಣದಲ್ಲೇ ಮಲಗಿರುತ್ತಿದ್ದರಂತೆ. ನಂತರ ಬೆಳಗ್ಗೆ ಆರೂ ಮುಕ್ಕಾಲರ ಹೊತ್ತಿಗಾಗಲೇ ಅದಕ್ಕೆ ಪೂಜೆಯಾಗಿ ಕೆಳದಿ ರಾಮೇಶ್ವರ ದೇವಸ್ಥಾನದಿಂದ ಸಾಗರದ ಕಡೆಗೆ ಹೊರಡುತ್ತಿತ್ತು.






