ವಿಷಯದ ವಿವರಗಳಿಗೆ ದಾಟಿರಿ

Posts from the ‘ಕರ್ನಾಟಕ,ಕನ್ನಡ’ Category

8
ಸೆಪ್ಟೆಂ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ: ತಲೆಗೆ ಬಿದ್ದ ತಾಳ

“ನನ್ನಿಂದಾದಷ್ಟು ಸಮಯ… ಈ ಜೀವನ ನನ್ನನ್ನು ಕುಣಿಸಿದಷ್ಟು ದಿನವೂ ಕುಣಿಯುತ್ತೇನೆ…. ಕುಣಿಯುತ್ತಲಿರುತ್ತೇನೆ…”  ಎಂದು ತೀರ್ಮಾನಿಸಿ ಯಕ್ಷಗಾನ ಕಲೆಗಾಗಿ ಅವಿರತವಾಗಿ ದುಡಿದು  18.11.1972  ರಂದು ಬಣ್ಣ ಕಳಚಿ  ಯಕ್ಷಗಾನ ರಂಗವನ್ನು ತಬ್ಬಲಿಯನ್ನಾಗಿ ಮಾಡಿ ಯಕ್ಷಮಾತೆಯ ಪಾದವನ್ನು ಸೇರಿದ ಕುರಿಯ ವಿಠಲ ಶಾಸ್ತ್ರಿಯವರು ಜನಿಸಿದ್ದು ಕಳೆದ ಶತಮಾನದ ದಿನಾಂಕ 8.9.1912  ರಂದು .ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ  ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ  ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು  ತಮ್ಮ ವಯಸ್ಸಿನ ನೂರನೇ ಸಂವತ್ಸರಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪದ್ಯಾಣ ಎಂದೊಡನೆ ತಕ್ಷಣ ನೆನಪಿಗೆ ಬರುವುದು ಯಕ್ಷಗಾನ .ಕನ್ನಡ ನಾಡಿನ ರಾಜಧಾನಿ ಬೆಂಗಳೂರು ನಗರದಲ್ಲಿ  ಮೊದಲ ಬಾರಿಗೆ ಯಕ್ಷಗಾನದ ಕೇಳಿ ಬಡಿದವರು ಎಂದು 1955ನೇ ಇಸವಿಯಲ್ಲಿ ಗುರುತಿಸಿಕೊಂಡವರು ಕಳೆದ ಶತಮಾನದ ಮಂಗಳೂರಿನ ಹಿರಿಯ ಪತ್ರಕರ್ತ ಹಾಗೂ  ಅಂಕಣಕಾರ  ಪದ್ಯಾಣ ಗೋಪಾಲಕೃಷ್ಣ  ( ಪ.ಗೋ. 1928 -1997 ).)ರವರರು ನಿರೂಪಣೆ ಗೈದಿರುವ ಕುರಿಯ  ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು”  ಇಂದು ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆಯಲ್ಲಿ…

—————-

ಮತ್ತಷ್ಟು ಓದು »

3
ಸೆಪ್ಟೆಂ

“ ಹೌದು..ಹಾಗಿದ್ದರು ಹೆಗಡೇಜಿ ” !!!

ಕೆ ಎಸ್ ರಾಘವೇಂದ್ರ ನಾವಡ

ಇತ್ತೀಚೆಗೆ ಯಡಿಯೂರಪ್ಪ ಅಧಿಕಾರ ಉಳಿಸಿಕೊಳ್ಳುವ ಕೊನೆಯ ತ೦ತ್ರಗಳೆಲ್ಲಾ ವಿಫಲವಾದ ನ೦ತರ ಜನತೆಗೆ ಆಷಾಢ ಮಾಸವೆ೦ಬ ಯಕಶ್ಚಿತ್ ಕಾರಣ ನೀಡಿ, ಅಲ್ಲಿಯವರೆಗೂ ಎಳೆದಾಡಿ, ಕೊನೆಗೆ ಪದತ್ಯಾಗ ಅನಿವಾರ್ಯವಾದಾಗ ರಾಜೀನಾಮೆ ನೀಡಿದ್ದು, ಕೂಡಲೇ ರಾಜೀನಾಮೆ ನೀಡುವ ಮೂಲಕ ತಮ್ಮ ಮರ್ಯಾದೆ ಉಳಿಸಿಕೊಳ್ಳಬಹುದಾದ ಏಕೈಕ ಮಾರ್ಗವನ್ನೂ ತೊರೆದು, ಇ೦ದು ಬ೦ದು ನಾಳೆ ಹೋಗುವ “ಅಧಿಕಾರ“ ವೆ೦ಬ

( ಅದೂ ಜನತೆ ನೀಡಿದ್ದು) ಹಾಸಿಗೆಯ ಮೇಲೆ ಆರಾಮಾಗಿ ಮಲಗಿ, ಕಾಲ ಕಳೆದದ್ದರ ಬಗ್ಗೆ ಹಾಗೂ ಆ ಮೂಲಕ ಭಾಜಪಾದ ಶಕ್ತಿಯೇ ತಾನೆ೦ಬುದನ್ನು ತನ್ನ ಹೈಕಮಾ೦ಡ್ ಗೆ ಮನವರಿಕೆ ಮಾಡಿಕೊಡುವ ಯತ್ನದಲ್ಲಿ ಗೆದ್ದರೂ, ಸದಾನ೦ದ ಗೌಡರು ಮುಖ್ಯಮ೦ತಿರ್ಗಳಾಗಿ ರಹಸ್ಯ ಮತದಾನದ ಮೂಲಕ ಗೆಲ್ಲುವಲ್ಲಿ ಇಟ್ಟ ರಾಜಕೀಯ ಚಾಣಾಕ್ಷ ಹೆಜ್ಜೆಗಳು, ಅದಕ್ಕವರು ತೆಗೆದುಕೊ೦ಡ ತೀರ್ಮಾನಗಳು, ಒ೦ದರ ನ೦ತರ ಮತ್ತೊ೦ದರ೦ತೆ ನ್ಯಾಯಾಲಯಕ್ಕೆ ಅವರು ತಮ್ಮ ಮೊಕದ್ದಮೆಗಳ ಮೇಲಿನ ವಿಚಾರಣೆ ಹಾಗೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಸುಮಾರು ೬ ಅರ್ಜಿಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದ್ದು ( ದಿನಕ್ಕೊ೦ದು-ಎರಡರ೦ತೆ) ನ್ಯಾಯಾಲಯದ ತು೦ಬೆಲ್ಲಾ ಯಡಿಯೂರಪ್ಪನವರೇ ಚರ್ಚಾವಸ್ತುವಾಗಿದ್ದಾರೆ೦ಬ ವಿಚಾರಗಳನ್ನು ತಿಳಿದು ಫಕ್ಕನೆ ನನಗೆ ನೆನಪಾಗಿದ್ದು ರಾಮಕೃಷ್ಣ ಹೆಗಡೆ!!
ರಾಜಕೀಯದಲ್ಲಿ ಯಾವಾಗಲೂ ಹಾಗೆಯೇ…. ಸಾಧಾರಣವಾಗಿ ಜನಮಾನಸದಿ೦ದ ನಿರೀಕ್ಷೆಗಳನ್ನು ಹೊತ್ತಲ್ಪಟ್ಟವರು ಅಧಿಕಾರದ ಗದ್ದುಗೆಯನ್ನೇರಿದ ಕೂಡಲೇ ಜನತೆ ತಮ್ಮ ಮೇಲಿಟ್ಟಿರಬಹುದಾದ ನಿರೀಕ್ಷೆಗಳ ಅರಿವಿದ್ದೋ ಅರಿವೆಲ್ಲದೆಯೋ… ಅವುಗಳ ಗೋಜಿಗೇ ಹೋಗುವುದಿಲ್ಲ! ಆದರೆ ಕೆಲವೊಮ್ಮೆ ಯಾವುದೇ ನಿರೀಕ್ಷೆಯಿರದಿದ್ದ.. ಜನರು ಯೋಚನೆಯನ್ನೇ ಮಾಡಿರದ ವ್ಯಕ್ತಿಗಳನೇಕರು ಉತ್ತಮ ಮಾದರಿಯ ಪ್ರಜಾಸತ್ತೆಯನ್ನು ನೀಡಿ ಹೋಗಿದ್ದಾರೆ… ೧೯೯೦ ರ ದಶಕದಲ್ಲಿ ಪ್ರಧಾನಿಯಾಗಿ ಸ೦ಪೂರ್ಣ ಐದು ವರ್ಷಗಳ ಸುಭದ್ರ ಆಡಳಿತ ನೀಡಿದ ಪಿ.ವಿ. ನರಸಿ೦ಹರಾಯರ ಮೇಲೆ ಯಾರೂ ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟೇ ಇರಲಿಲ್ಲ!! ಆದರೂ ಸ್ವತ೦ತ್ರ ಭಾರತದ ಆರ್ಥಿಕ ಇತಿಹಾಸದಲ್ಲಿ ಪಿ.ವಿ. ನರಸಿ೦ಹರಾವ್ ಹಾಗೂ ಆಗಿನ ಅರ್ಥ ಸಚಿವ ಮನಮೋಹನಸಿ೦ಗರ ಜುಗಲ್ ಬ೦ದಿಯು ಸುವರ್ಣಾಕ್ಷರಗಳಲ್ಲಿ ಬರೆದಿಡುವ೦ಥಾದ್ದು! ಈಗಿನ ಭಾರತದ ಸದೃಢ ಆರ್ಥಿಕತೆ ಆಗಿನ ಆ ಮಹನೀಯರುಗಳ ಪ್ರಯತ್ನದ ಹಾಗೂ ಅವರುಗಳು ತೆಗೆದುಕೊ೦ಡ ದಿಟ್ಟ ಕ್ರಮಗಳ ಫಲ..

ಮತ್ತಷ್ಟು ಓದು »

24
ಆಗಸ್ಟ್

ಡಿ ಬಿ ಚಂದ್ರೇಗೌಡರು ಪುಸ್ತಕದಲ್ಲಿ

– ಕಾಲಂ ೯

ಮಲೆನಾಡಿನ ರಾಜಕಾರಣಿ ಡಿ.ಬಿ. ಚಂದ್ರೇಗೌಡರು 75ರ ಹೊಸ್ತಿಲಲ್ಲಿ ಇದ್ದಾರೆ. ಅವರ ನಿರೂಪಿತ  ಆತ್ಮಕಥೆ ‘ಪೂರ್ಣಚಂದ್ರ’ ಪ್ರಕಟಣೆಗೆ ಸಿದ್ಧವಾಗಿದೆ.

ಕಾಂಗ್ರೆಸ್ಸು, ಜನತಾದಳ, ಬಿಜೆಪಿ ಎಲ್ಲ ಪಕ್ಷಗಳಲ್ಲೂ ರಾಜಕೀಯ ಯಾತ್ರೆ ಮಾಡಿ ಕಾನೂನು, ಸಂಸದೀಯ ವ್ಯವಹಾರದಲ್ಲಿ ಹಿಡಿತ ಸಾಧಿಸಿರುವ ರಾಜಕಾರಣಿ ಚಂದ್ರೇಗೌಡರು.

ಆಕಾಶವಾಣಿಯ ಹಿರಿಯ ಪತ್ರಕರ್ತರೊಬ್ಬರು ಚಂದ್ರೇಗೌಡರ ಈ ಆತ್ಮಕಥೆ ‘ಪೂರ್ಣಚಂದ್ರ’(ಚಂದ್ರೇಗೌಡರ ಮನೆಯಾಕೆ ಪೂರ್ಣಿಮಾ)ವನ್ನು ನಿರೂಪೊಸಿದ್ದಾರೆ.

1977ರ ತುರ್ತುಪರಿಸ್ಥಿತಿಯ ತರುವಾಯ ತಿರಸ್ಕೃತಗೊಂಡಿದ್ದ ಇಂದಿರಾಗಾಂಧಿಗೆ ‘ರಾಜಕೀಯ ಮರುಪ್ರವೇಶ’ಕ್ಕಾಗಿ ತಾವು ಗೆದ್ದಿದ್ದ ಚಿಕ್ಕಮಗಳೂರು ಕ್ಷೇತ್ರವನ್ನು ಬಿಟ್ಟುಕೊಟ್ಟ ಕುಟುಂಬ ನಿಷ್ಠೆ ಚಂದ್ರೇಗೌಡರದ್ದು. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಚಿಕ್ಕಮಗಳೂರಿನ ದತ್ತಪೀಠದ ವಿವಾದದ ಸಂಧರ್ಭದಲ್ಲಿ ಸ್ವತಃ ತಾವೇ ಪೂಜೆಗೆ ಕೂತು ಸಿಟಿ ರವಿ, ಮುತಾಲಿಕರಂತಹವರ ಚಳುವಳಿಗಾರರನ್ನು, ಗೌರಿ ಲಂಕೇಶ, ಶಿವಸುಂದರ್ ಇತ್ಯಾದಿ ವಿರೋಧಿ ಬಣದವರನ್ನು ದಂಗುಬಡಿಸಿದ್ದರು.

ಕೊನೆಗಾಲದಲ್ಲಿ ಬಿಜೆಪಿ ಸೇರಿ ಬೆಂಗಳೂರಿನಲ್ಲೊಂದು ಸಂಸದೀಯ ಕ್ಷೇತ್ರ ಹುಡುಕಿಕೊಂಡು ಸಂಸತ್ ಸದಸ್ಯರಾಗಿದ್ದಾರೆ. ಬಿಜೆಪಿಯ ಹೈಕಮಾಂಡ್ ಯಡಿಯೂರಪ್ಪನವರಿಗೆ ಮನೆದಾರಿ ತೋರಿಸಿದಾಗ ವಕಾಲತ್ತಿಗೆ ನಿಂತ ಋಣಸಂದಾಯ ನಿಷ್ಠೆ ಅವರದು.

ಈ ತಿಂಗಳ ಕೊನೆಯಲ್ಲಿ ಪುಸ್ತಕ ಬರಬೇಕು. ಆದರೆ ಅಗಸ್ಟ್ 27ಕ್ಕೆ ಯಡಿಯೂರಪ್ಪನವರಿಗೆ ಇರುವ ಸಮನ್ಸ್ ಮತ್ಯಾವ ರೂಪ ಪಡೆದುಕೊಳ್ಳುತ್ತದೋ ಎಂಬ ಆತಂಕದಲ್ಲಿರುವ ಚಂದ್ರೇಗೌಡರು ಮುಹೂರ್ತದ ದಿನ ಹುಡುಕುತ್ತಿದ್ದಾರೆ.

ಈ ಹಿಂದೆ ಪ್ರಜಾವಾಣಿಯ ಬಿ. ಎಂ. ಹನೀಫ಼್ ನಿರೂಪಿಸಿದ್ದ ಮೈಸೂರಿನ ರಾಜಕಾರಣಿ ಹೆಚ್. ವಿಶ್ವನಾಥರವರ ಆತ್ಮಕಥೆ ಸಾಕಷ್ಟು ಗಮನ ಸೆಳೆದಿದ್ದನ್ನು ಸ್ಮರಿಸಬಹುದು.

*********

19
ಆಗಸ್ಟ್

ಜನಲೋಕಪಾಲ ಅನ್ನುವುದು ಮಾಯದಂಡವೇನಲ್ಲ…!

– ರಾಕೇಶ್ ಶೆಟ್ಟಿ

ಒಂದೆಡೆ ಅಣ್ಣಾರನ್ನ ಬೆಂಬಲಿಸಿ ಜನ ಬೀದಿಗಿಳಿದರೆ, ಇನ್ನೊಂದೆಡೆ ಅಣ್ಣಾ ಹೋರಾಟವನ್ನ ಪ್ರಶ್ನಿಸಿ ಹಲವಾರು ಪ್ರಶ್ನೆಗಳೆದ್ದಿವೆ.

’ಜನಲೋಕಪಾಲ್’ ಬಂದ ತಕ್ಷಣ ಎಲ್ಲ ಭ್ರಷ್ಟರು ಮಾಯವಾಗ್ತಾರೆ ಅಂತ ಖುದ್ದು ಅಣ್ಣಾ ಮತ್ತು ಸಿವಿಲ್ ಸೊಸೈಟಿಯವರ್ಯಾರು ಸಹ ಎಲ್ಲೂ ಹೇಳಿಲ್ಲ.ಹಾಗಾಗ್ಯೂ ಇಂತ ವಾದ ಹುಟ್ಟು ಹಾಕಿದ್ದು ಯಾರು? ಬಹುಷಃ ಕಪಿಲ್ ಸಿಬಲ್ ಇರಬೇಕು ಅದನ್ನೆ ಹಿಡಿದು ಕೆಲವರು ’ಜನಲೋಕಪಾಲ್’ ಬಂದ್ರೆ ಭ್ರಷ್ಟಚಾರ ಮಾಯವಾಗುತ್ತಾ!? ಅಂತ ಕೇಳ್ತಾ ಇದ್ದಾರೆ ಕೆಲವರು. ಅಂತವರಿಗೊಂದು ಪ್ರಶ್ನೆ ಪೋಲಿಸ್ ಇಲಾಖೆ ಅನ್ನುವುದು ಬಂದು ಎಷ್ಟು ವರ್ಷಗಳಾಯ್ತು? ಕಳ್ಳತನ-ಕೊಲೆ-ದರೋಡೆ ನಿಂತಿದೆಯಾ ಸ್ವಾಮಿ!? ಇಲ್ಲ ತಾನೆ..! ಆದರೆ ಜನ್ರಿಗೊಂದು ಹೆದರಿಕೆಯಂತೂ ಇರುತ್ತದೆ ತಪ್ಪು ಮಾಡೋಕೆ ಹಾಗೆ ತಪ್ಪು ಮಾಡಿದವರನ್ನ ಹಿಡಿದು ಜೈಲಿಗೆ ಅವರು ನೂಕುತಿದ್ದಾರಲ್ವಾ? ಹಾಗೆಯೇ ಜನಲೋಕಪಾಲ ಅನ್ನುವುದು ಸಹ.ಅದು ಬಂದ ತಕ್ಷಣ ಎಲ್ಲ ಸರಿ ಹೋಗದು.ಅದು ಸುಧಾರಣೆಯ ಒಂದು ಅಸ್ತ್ರವಷ್ಟೆ.

ಮತ್ತಷ್ಟು ಓದು »

19
ಆಗಸ್ಟ್

ಈ ಎಡವಟ್ಟುಗಳು ಯಾಕೆ ಹೀಗೆ ಅಂತ?

– ಸಚಿನ್ ಕೆ
ನಮಸ್ಕಾರ ಸಾ. ಎಂಗಿದೀರಾ.
ನೋಡಿ ಸಾ, ಪ್ರಪಂಚ ಹೆಂಗೈತೆ ಅಂದ್ರೆ ಹಿಂಗೂ ಜನ ಇರ್ತಾರ ಅಂತ ಗೊತ್ತಿರ್ಲಿಲ್ಲ.

ಗಾಂಧಿ ಮಆತ್ಮ್ ನ ತರ ನೀವು ಉಪ್ವಾಸ ಮಾಡಿದ್ರೆ ಜನ ಅದರಲ್ಲೂ ಹುಳುಕು ಕಂಡಿಡಿತಾರೆ ಅಂದ್ರೆ, ಈ ಜನ ಎಷ್ಟು ಗಬ್ಬೆದ್ದು ಹೋಗಿದ್ದಾರೆ ಅಂತ. ಆ ಬ್ರಹ್ಮ ಇವರ ತಲೆ ಒಳಗೆ ಮಿದುಳು ಇಟ್ಟಿಲ್ಲ ಅನ್ಸುತ್ತೆ, ಅದರೆ ಬದಲು ಸಗಣಿ ಮಡಗವ್ನೆ. ಈ ಬಡ್ಡೆತ್ತೇವು ಬರೀ ಉಲ್ಟಾ ಮಾತಾಡೋದೆ ಆಗ್ವಾಯ್ತು.

ಅವಯ್ಯ ದೇಸಾನ ಏನೋ ಬದಲಾವ್ಣೆ ಮಾಡ್ತೀನಿ ಅಂತ ಮಾತಾಡ್ತಿಲ್ಲ. ಲಂಚ ತಿನ್ನೋ ಎಲ್ಲ ಬೇವರ್ಸಿ ಮುಂಡೇವು ಗಳಿಗೆ ಸರ್ಯಾದ ಸಿಕ್ಸೆ ಆಗ್ಲಿ ಅಂತ ಗೋರ್ಮೆಂಟ್ ನೋರು ಸರಿಯಾದ ರೂಲ್ಸ್ ಮಾಡ್ಲಿ ಅಂತ. ಆದರೆ ಈ ಉಲ್ಟಾ ಮಾತಾಡ್ತ ಇರೋ ಈ ಹೈಕಳು ಕೇಳೋ ಪ್ರಸ್ನೆಗಳನ್ನು ನೋಡಿದ್ರೆ ನಗ ತಡ್ಯಾಕಾಗ್ತಿಲ್ಲ.

ಮತ್ತಷ್ಟು ಓದು »

18
ಆಗಸ್ಟ್

ಕಲಾವಿದರು ಕಸಿದುಕೊಳ್ಳುತ್ತಿರುವ ಕನ್ನಡ ಗ್ರಾಹಕನ ಸ್ವಾತಂತ್ರ್ಯ.!

– ಮಹೇಶ್ ರುದ್ರಗೌಡರ್

ಜೀ ಟಿವಿಯಲ್ಲಿ ಜಾನ್ಸಿ ರಾಣಿ ಅನ್ನೊ ಹಿಂದಿ ದಾರಾವಾಹಿಯನ್ನು ಕನ್ನಡಕ್ಕೆ ಡಬ್ ಮಾಡಿ ಪ್ರಸಾರ ಮಾಡಿದ್ರು ಅಂತ ನಮ್ಮ ಕಿರುತೆರೆ ಕಲಾವಿದರು ಆ ವಾಹಿನಿಯ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಕಲಾವಿದರ ಪ್ರಕಾರ ಇದರಿಂದ ಕಿರುತೆರೆಯನ್ನೇ ನಂಬಿ ಜೀವನ ನಡೆಸುತ್ತಿರುವ ಅನೇಕ ಕುಟುಂಬಗಳು ಬೀದಿಗೆ ಬರುತ್ತವಂತೆ. ಇದರ ಜೊತೆಗೆ ಜೀ ಟಿವಿಯ ಈ ನಡೆ ಕನ್ನಡ ವಿರೋದಿಯಂತೆ. ಇವರ ವಾದವನ್ನು ಮತ್ತು ಕನ್ನಡತನವನ್ನು ಸ್ವಲ್ಪ ಆಳವಾಗಿ ನೋಡಿ ಬರೋಣ ಬನ್ನಿ.

 ಹುರುಳಿಲ್ಲದ ವಾದ.!

ಈ ದಾರಾವಾಹಿ ಈಗಾಗಾಲೇ ತೆಲುಗು, ತಮಿಳು ಬಾಶೆಗೆ ಡಬ್ ಆಗಿ ಅಲ್ಲಿ ಪ್ರಸಾರವಾಗುತ್ತಿದೆ. ಹಾಗಾದರೆ ಆಂದ್ರ ತಮಿಳುನಾಡಿನಲ್ಲಿ ಕಲಾವಿದರೇ ಇಲ್ಲವೇ.? ಅಲ್ಲಿಯೂ ಕಲಾವಿದರಿದ್ದಾರೆ, ಅವರಲ್ಲಿಯೂ ಅನೇಕರಿಗೆ ಕಿರುತೆರೆಯಿಂದಲೇ ಹೊಟ್ಟೆ ತುಂಬುತ್ತದೆ. ಅಲ್ಲಿ ಅವರಿಗೆ ಇಲ್ಲದ ಸಮಸ್ಯೆ ದಿಡೀರನೇ ಕರ್ನಾಟಕಕ್ಕೆ ಬಂದ ಕೂಡಲೇ ಹೇಗೆ ಹುಟ್ಟುತ್ತದೆ. ಇದಕ್ಕೆ ಯಾರು ಕಾರಣ. ಯಾಕೆ ಈ ಮನಸ್ಥಿತಿ.! ಇದೇ ಸಂದರ್ಬದಲ್ಲಿ ಒಬ್ಬ ಕಲಾವಿದರು ಹೇಳಿದ್ರು, ಒಂದು ದಾರಾವಾಹಿ ಕನ್ನಡಕ್ಕೆ ಡಬ್ ಮಾಡಲು ಬಿಟ್ಟರೆ, ಅದರ ಜೊತೆಗೆ ನೂರಾರು ದಾರಾವಾಹಿಗಳು ಬಂದು ನಿಲ್ಲುತ್ತವೆ ಅಂತ.! ಇದು ಯಾವ ಮನಸ್ಥಿತಿಯನ್ನು ತೋರಿಸುತ್ತದೆ. ಸ್ಪರ್ದೆ ಎದುರಿಸುವ ಹಿಂಜರಿಕೆಯನ್ನು ತೋರಿಸುತ್ತದೆ ಅಲ್ಲವೇ.! ಸ್ಪರ್ದೆ ಎಂದ ತಕ್ಷಣ ಬೀದಿಗೆ ಬರುವ ಮಾತು ಇತರ ಬಾಶೆಯ ಕಲಾವಿದರ ಬಾಯಲ್ಲಿ ಬರದೇ ಬರೀ ನಮ್ಮ ಕಲಾವಿದರ ಬಾಯಲ್ಲಿ ಮಾತ್ರ ಏಕೆ ಬರುತ್ತದೆ.? ಒಂದು ಹಿಂದಿ ಬಾಶೆಯಲ್ಲಿರುವ ದಾರಾವಾಹಿಯನ್ನು ಕನ್ನಡ ಚಾನಲ್ಲಿನಲ್ಲಿ ಕನ್ನಡದಲ್ಲಿ ತೋರಿಸಿದರೇ ಅದು ಕನ್ನಡ ವಿರೋದಿ ಎನ್ನುವ ಇವರ ಕನ್ನಡತನಕ್ಕೆ ಏನನ್ನಬೇಕು. ಡಬ್ ಮಾಡದೇನೇ ಹಿಂದಿಯಲ್ಲೇ ತೋರಿಸಿದರೆ ಅದು ಕನ್ನಡಪರವಾಗುವುದೋ.! ಮತ್ತಷ್ಟು ಓದು »

17
ಆಗಸ್ಟ್

`ಆವರಣ’ ಹಿಂದಿಗೆ

-ಕಾಲಂ ೯

ಕನ್ನಡದಲ್ಲಿ ವಾದ-ವಿವಾದಗಳಿಗೆ ಕಾರಣವಾಗಿದ್ದ ಎಸ್. ಎಲ್. ಭೈರಪ್ಪನವರ ‘ಆವರಣ’ ಹಿಂದಿ ಜಗತ್ತನ್ನೂ ಪ್ರವೇಶಿಸಿದೆ. ಈ ಹಿಂದೆಯೇ ತಮಿಳು, ಮರಾಠಿ, ಸಂಕ್ಸಿತಕ್ಕೆ ಆವರಣ ಹೋದ ಸುದ್ದಿ ಇತ್ತು.

ಮುಸ್ಲಿಂ ನವಾಬರ ‘ಜನಾನ’ದ ವರೆಗೆ ಕಥೆ ಪ್ರವೇಶಿಸಿದ್ದು ಒಂದು ಕಡೆಯಾದರೆ ಮತ್ತೊಂದೆಡೆ ಬುದ್ಧಿಜೀವಿಗಳ ಹರಕು-ಹುಳುಕನ್ನು ಕಾದಂಬರಿ ಹರಾಜು ಹಾಕಿ ವಿವಾದಕ್ಕೆ ಕಾರಣವಾಗಿತ್ತು. ಒಂದೇ ವರ್ಶದಲ್ಲಿ 20ಕ್ಕೂ ಹೆಚ್ಚು ಮುದ್ರಣಗಳಿಗೂ ಹೋಗಿತ್ತು.

ಮೂಲಕಥೆ ಉತ್ತರಭಾರತದ ಹಿಂದಿ ಜಗತ್ತಿನದೇ. ಇದೀಗ ಕಾದಂಬರಿ ಹಿಂದಿ ಜಗತ್ತನ್ನು ಪ್ರವೇಶಿಸಿದೆ. ಕುವೆಂಪು ಭಾಷಾ ಭಾರತಿಯ ಅಧ್ಯಕ್ಷರಾಗಿರುವ ಡಾ|  ಪ್ರಧಾನ ಗುರುದತ್ ಹಿಂದಿಗೆ ಅನುವಾದಿಸಿದ್ದಾರೆ.

ಇಂಡಿಯಾ ಟುಡೇ ಹಿಂದಿ ಅವತರಣಿಕೆಯ ಈ ವಾರದ ಸಂಚಿಕೆ ಅರ್ಧ ಪುಟದ ವಿಮರ್ಶೆ ಪ್ರಕಟಿಸಿದೆ. ವಿಮರ್ಶಕ ಶಶಿಭೂಷಣ ದ್ವಿವೇದಿಗೆ ಪ್ರಧಾನರ ಅನುವಾದ ಸಮಧಾನ ತಂದಿಲ್ಲ.

ಇದೇ ಅಗಸ್ಟ್ 16ರಂದು ಕೇರಳದ ಕೊಚ್ಚಿನ್ ನಲ್ಲಿ ಆವರಣದ ಸಂಸ್ಕೃತ ಆವೃತ್ತಿಗೆ ಕೇಂದ್ರ ಸಾಹಿತ್ಯ ಅಕಾಡಮಿಯ ‘ಅತ್ಯುತ್ತಮ ಅನುವಾದ’ ಪುರಸ್ಕಾರ ಸಿಗಲಿದೆ ಎಂದು ಗೊತ್ತಾಗಿದೆ.

**********

10
ಆಗಸ್ಟ್

ಮದನಾರಿ ಬೇಕಾ?

– ಸಚಿನ್

 ಸುವರ್ಣ ನ್ಯೂಸ್ ಚಾನೆಲ್ ನಲ್ಲಿ ಪ್ರಸಾರವಾಗುವ ಕಾರ್ಯಕ್ರಮ “ಮದನಾರಿ”, ಚಿತ್ರರಂಗದ ಭಾಷೆಯಲ್ಲಿ ಹೇಳಬೇಕಾದರೆ ಇದೊಂದು ಮಸಾಲ ಕಾರ್ಯಕ್ರಮ, ಇದರ ಮುಖ್ಯ ಆಕರ್ಷಣೆ ಎಂದರೆ ಐಟಮ್ ಗರ್ಲ್ ಗಳ ಬಗ್ಗೆ ಸಂಪೂರ್ಣ ವಾದ ವಿವರ ಅವರ ಜೀವನದ ಏಳು ಬೀಳುಗಳ ಬಗ್ಗೆ ವಿವರ, ಅವರಿಗಿರುವ ಬಾಯ್ ಫ್ರೆಂಡ್ ಗಳು ಜತೆಯಲ್ಲಿ ಇರುವವರ ಹಾಗು ಕೈ ಕೊಟ್ಟವರ ಬಗ್ಗೆ ಮಾತು. ಹಾಗು ಚಿತ್ರ ರಂಗಕ್ಕೆ ಪ್ರವೇಶ ಅದರ ಹಿನ್ನೆಲೆ, ಇನ್ನು ಮುಂತಾದ ಚಿತ್ರ ವಿಚಿತ್ರ ಸಂಗತಿ ಗಳಿಂದ ಕಾರ್ಯಕ್ರಮ ವನ್ನು ನಿರೂಪಕಿ ದಿವ್ಯಶ್ರಿ ಅವರಿಂದ ನಿರೂಪಿತ ವಾಗಿತ್ತದೆ. ಪ್ರತಿ ಭಾನುವಾರ ರಾತ್ರಿ ಹಾಗೂ ವಾರದ ದಿನಗಳಲ್ಲಿ ಮತ್ತೆ ಮರುಪ್ರಸಾರ ಮಾಡಲಾಗುತ್ತದೆ.ಆದರೆ ಇಷ್ಟೇ ಆಗಿದ್ದರೆ ಈ ಕಾರ್ಯಕ್ರಮದ ಬಗ್ಗೆ ನಾವು ಇಲ್ಲಿ ಟೀಕೆ ಮಾಡುವ ಪ್ರಮೇಯ ವೇ ಬರುತ್ತಿರಲಿಲ್ಲ. ಈ ಎಲ್ಲ ವಿವರ ಗಳ ಜತೆಗೆ ಅಶ್ಲೀಲ ದೃಶ್ಯ ಗಳನ್ನು ಪ್ರಸಾರ ಮಾಡುತ್ತಾರಲ್ಲ ಅದು ಹೇಸಿಗೆ ಹುಟ್ಟಿಸುತ್ತೆ.

ಮತ್ತಷ್ಟು ಓದು »

10
ಆಗಸ್ಟ್

ನೇತ್ರಾವತಿಯ ಶ್ರೀಮುಡಿಗೆ ಕೈಯಿಕ್ಕಿರುವ ಎಂ ಎಸ್ ಇ ಜಡ್:ರಕ್ಷಿಸುವ ಪ್ರವೀಣರೆಲ್ಲಿದ್ದಾರೆ?

-ಸುಂದರ ರಾವ್

ಇತ್ತೀಚಿಗೆ ಕೆಲವು ಪತ್ರಿಕೆಗಳಲ್ಲಿ “ಸರಪಾಡಿ ಸಮೀಪದ ಬೊಳ್ಳಾಜೆಯಲ್ಲಿ ಎಮ್ ಎಸ್ ಇ ಜಡ್ ಪೈಪ್ ಲೈನ್ ಕಾಮಗಾರಿ ಪ್ರಾರಂಭ” ಎಂಬ ಸುದ್ದಿಗಳು ಪ್ರಕಟವಾದವು. “ವಂಶ” ಪತ್ರಿಕೆಯ ಮಿತ್ರರನ್ನು “ನಮ ಒರ ಪೋದು ತೂದು ಬರ್ಕನ?” (ನಾವು ಹೋಗಿ ನೋಡಿ ಬರೋಣವೆ?) ಎಂದು ಕೇಳಿದೆ.
ಮಳೆಗಾಲವಾದರೂ ನಾವು ಹೋದಾಗ ಬಿಸಿಲಿತ್ತು. ಸರಪಾಡಿಯಲ್ಲಿ ಎಂ ಆರ್ ಪಿ ಎಲ್ ನ ಪಂಪ್ ಹೌಸೋ ಏನೋ ಒಂದಿದೆ. ಅದಕ್ಕಿಂತ ಮೊದಲೇ ಬಲಕ್ಕೆ ಹೊಸರಸ್ತೆ ಕಡಿದಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು.ಹಸಿ ಹಸಿ ಮಣ್ಣಿನ ರಸ್ತೆ. ಜೆಸಿಬಿ ಉಪಯೋಗಿಸಿ ರಸ್ತೆ ಮಾಡಿದ್ದರೆಂಬುದು ಯಾರಿಗೂ ಗೊತ್ತಾಗುವಂತಿತ್ತು. ಅದರಲ್ಲಿ ಸ್ವಲ್ಪ ದೂರ ನಡೆದ ಮೇಲೆ ತೆರೆದುಕೊಂಡಿದ್ದು ವಿಶಾಲವಾದ ಪ್ರದೇಶದಲ್ಲಿ ಶೇಖರಗೊಂಡಿದ್ದ ನೀರಿನ ದೃಶ್ಯ.
ಮುಂದೆ ಎ ಎಂ ಆರ್ ಕಂಪೆನಿಯ ಅಣೆಕಟ್ಟು ಕಾಣುತ್ತಿತ್ತು. ನಮ್ಮೆದುರಿಗೆ ಕಾಣುತ್ತಿದ್ದುದು ಅದೇ ಅಣೆಕಟ್ಟಿನಲ್ಲಿ ಸಂಗ್ರಹಿಸಿದ್ದ ನೀರಿನ ರಾಶಿ. ನಾವು ಮುಟ್ಟಿದ್ದು ಒಂದು ಜೆಸಿಬಿ ನಿಂತಿದ್ದ ಸ್ಥಳವನ್ನು. ಸುತ್ತ ಅನೇಕ ಮರಗಳು ಬೇರು ಮೇಲಾಗಿ ಸೊಪ್ಪು ಒಣಗಿ ಉದುರಿ ಕಳಚಿಕೊಂಡು ಬೆತ್ತಲೆ ಅಸ್ತಿಪಂಜರಗಳಂತೆ ವಿಕಾರವಾಗಿ ಆಚೀಚೆ ಉರುಳಿಕೊಂಡಿದ್ದವು. ಕಪ್ಪು ಕಲ್ಲುಗಳನ್ನು ಒಡೆದು ತೆಗೆದಿರುವುದು (ಬಹುಶಃ ಡೈನಮೈಟ್ ಬಳಸಿ) ಸ್ಪಷ್ಟವಾಗಿಯೇ ಕಾಣುತ್ತಿತ್ತು. ಸ್ವಲ್ಪ ದೂರಕ್ಕೆ ಆಳವಾದ ಹೊಂಡದಲ್ಲಿ ಭೂಮಿಯ ಹೊಟ್ಟೆ ಬಗೆದು ಏನೋ ಕಾಮಗಾರಿ ನಡೆಸಿರುವುದೂ ಕಾಣುತ್ತಿತ್ತು. ಒಟ್ಟಿನಲ್ಲಿ ನಡೆಯುತ್ತಿದ್ದ ಚಟುವಟಿಕೆಗಳು ಯಾವುದೋ ದೊಡ್ಡ ಕಾಮಗಾರಿಯ ಮುನ್ಸೂಚನೆಯಾಗಿ ಕಂಡವು. ಸಾಧ್ಯವಿದ್ದಷ್ಟು ಫೋಟೋಗಳನ್ನು ತೆಗೆದುಕೊಂಡು ನಾವು ಹಿಂದೆ ಬಂದೆವು.

ಮತ್ತಷ್ಟು ಓದು »

8
ಆಗಸ್ಟ್

ಸ್ಥಿರತೆಯತ್ತ… ಸರ್ಕಾರವೋ? ಮಾಧ್ಯಮವೋ?

-ಕಾಲಂ ೯

ಕರ್ನಾಟಕದ ಬಿಜೆಪಿ ಸರ್ಕಾರ ತನ್ನ ಮಾನವನ್ನು ತಾನೇ ಹರಾಜು ಹಾಕಿಕೊಂಡ ಕಳೆದ ೧೫ ದಿನಗಳ ಘಟನಾವಳಿ ಈಗ ಒಂದು ಮಜಲಿಗೆ ಬಂದು ನಿಂತಂತೆ ಗೋಚರಿಸುತ್ತದೆ.

2008ರ ಚುನಾವಣೆ ನಡೆದಿದ್ದೇ ‘ನನಗಾದ ಅನ್ಯಾಯ’ಕ್ಕೆ. ಜನತೆ ಓಟು ಹಾಕಿದ್ದೇ ನನಗಾದ ಅನ್ಯಾಯ ಸರಿಪಡಿಸಲು. ನನಗೆ ಸಿಕ್ಕ ಜನತಾ ನ್ಯಾಯವನ್ನು ಯಾವ ಹೈಕಮಾಂಡು ಕಿತ್ತುಕೊಳ್ಳುವ ಹಾಗಿಲ್ಲ ಎಂಬಂತೆ ಸೆಟೆದು ನಿಂತಿದ್ದ ಯಡಿಯೂರಪ್ಪ 15 ದಿನ ಕನ್ನಡದ ಮಾಧ್ಯಮಗಳಿಗೆ ಭವಿಷ್ಯದ ಕೆಲಸ ಕೊಟ್ಟಿದ್ದರು.

ಕನ್ನಡ ಸುದ್ದಿವಾಹಿನಿಗಳ ಎಳಸುತನ, ಗಂಭೀರ ವರದಿಗಾರಿಕೆಯ ಕೊರತೆ, ಮತ್ತೆ ಮತ್ತೆ ಪ್ರದರ್ಶನಕ್ಕೆ ಬಂದಿತೆನ್ನಬೇಕು.

ರೇಸ್ ಕೋರ್ಸ್ ರಸ್ತೆಯತ್ತ ಎರಡು ಬಸ್‍ಗಳು ಕಾಣಿಸಿಕೊಂಡಿದ್ದೇ ತಡ, ವಾಹಿನಿಯೊಂದು ‘ಶಾಸಕರು ರೆಸಾರ್ಟ್‍ನತ್ತ’ ಎಂದು ‘ಬ್ರೇಕಿಂಗ್ ನ್ಯೂಸ್’ ಬಿತ್ತರಿಸಿತು. ಕೆಲವೇ ಕ್ಷಣಗಳಲ್ಲಿ ಉಳಿದ ವಾಹಿನಿಗಳೂ ಅದನ್ನೇ ಹೇಳತೊಡಗಿದವು. ಯಾರೊಬ್ಬರೂ ಇಂತಹ ಸುದ್ದಿಗಳ ನೈಜತೆ ಪರಿಶೀಲಿಸುವ ಗೋಜಿಗೆ ಹೋಗುವುದಿಲ್ಲ. ಯಾವುದೋ ನಾಯಕರ ವಾಹನ ಚಾಲಕರು, ಅಲ್ಲೆಲ್ಲೋ ನಿಂತ ಪೋಲಿಸ್ ಕಾನ್‍ಸ್ಟೇಬಲ್‍ಗಳೇ ಸುದ್ದಿಯ ಸೋರ್ಸ್‍ಗಳಾಗಿರೋದು ಮಾಧ್ಯಮದ ದುರಂತವಾಗಿದೆ. ಮೂರೋ, ಆರೋ ತಿಂಗಳ ಅನುಭವದ ಪತ್ರಕರ್ತರ ದಂಡನ್ನೂ ಕಟ್ಟಿಕೊಂಡು ಮುಖ್ಯಮಂತ್ರಿ ನಿವಾಸ, ಅಶೋಕ ಹೋಟೆಲ್, ಬಿಜೆಪಿ ಕಛೇರಿ, ಕೇಶವಕೃಪಾ… ಇಲ್ಲೆಲ್ಲ ಒಬ್ಬೊಬ್ಬರನ್ನು ನಿಲ್ಲಿಸಿಕೊಂಡು ಕ್ಷಣ, ಕ್ಷಣದ ಸುದ್ದಿ ಬಿತ್ತರಿಸುವ ಕನ್ನಡ ಸುದ್ದಿ ವಾಹಿನಿಗಳ ಪಾಡು ಹೇಳತೀರದು. ಸುದ್ದಿ ಯಾವುದು? ಅಂದಾಜು ಯಾವುದು? ಸುಳ್ಳು ಯಾವುದು? ಆ ಕ್ಷಣದಲ್ಲೇ ಬೆತ್ತಲಾಗಿ ಸುದ್ದಿ ವಾಹಿನಿಗಳ ವಿಶ್ವಾಸಾರ್ಹತೆ ಮೂರಾಬಟ್ಟೆ ಯಾಗಿದೆ. ಮತ್ತಷ್ಟು ಓದು »