ವಿಷಯದ ವಿವರಗಳಿಗೆ ದಾಟಿರಿ

Posts from the ‘ಕರ್ನಾಟಕ,ಕನ್ನಡ’ Category

8
ಆಗಸ್ಟ್

ಈ ಕಥೆ ಮುಂದಿನ ರಾಜಕಾರಣಿಗಳಿಗೆ ಒಂದು ಪಾಠವಾಗಲಿ

– ರಾಕೇಶ್ ಎನ್ ಎಸ್

ಅದು ೧೯೬೦ನೇ ದಶಕದ ಕೊನೆಯ ಭಾಗ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವೆಂಬ ಪುಟ್ಟ ಪಟ್ಟಣದಲ್ಲಿ ಬೂಕನೆಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಎಂಬ ವ್ಯಕ್ತಿ ಒಂದು ಅಕ್ಕಿ ಮಿಲ್‌ನಲ್ಲಿ ಸಾಮಾನ್ಯ ಗುಮಾಸ್ತನಾಗಿ ತಿಂಗಳಿಗೆ ಕೇವಲ ೧೩೦ ರೂ ಸಂಬಳ ಪಡೆದುಕೊಂಡು ದಿನ ಸಾಗಿಸುತ್ತಿದ್ದ. ಅಷ್ಟರಲ್ಲೇ ಆ ವ್ಯಕ್ತಿ ಒಂಚೂರು ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ಆಸಕ್ತನಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕನಾಗಿ, ಜನಸಂಘದ ಮುಖಂಡನಾಗಿ, ಆ ಬಳಿಕ ಶಿಕಾರಿಪುರ ಪುರ ಸಭೆಯ ಸದಸ್ಯನಾಗಿ, ತುರ್ತು ಪರಿಸ್ಥಿತಿ ಘೋಷಿಸಿದ ಅದಕ್ಕೆ ಸಡ್ಡು ಹೊಡೆದ ಹೋರಾಟಗಾರನಾಗಿ, ರಾಜ್ಯದಲ್ಲಿ ಬಿಜೆಪಿಯ ಮುಖವಾಣಿಯಾಗಿ, ರೈತಾಪಿ ಜನರ ದನಿಯಾಗಿ, ರಾಜ್ಯದ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತ ಕತೆ ಈ ದೇಶದ ಪ್ರಜಾಪ್ರಭುತ್ವದ ಸೌಂದರ್ಯಕ್ಕೆ ಮುಕುಟ ಪ್ರಾಯವಾದದ್ದಾಗಿರಬೇಕಾಗಿತ್ತು. ಆದರೆ ಈ ನಾಡಿನ ದುರದೃಷ್ಟವೆಂದರೆ ಆ ವ್ಯಕ್ತಿ ಇಂದು ಈ ನಾಡು ಕಂಡು ಕೇಳರಿಯದ ರಾಕ್ಷಸ ರಾಜಕಾರಣದ ವಾರಸುದಾರನಾಗಿ ಬಿಟ್ಟಿದ್ದಾರೆ. ಪ್ರಜಾಪ್ರಭುತ್ವದ ಚೆಲುವನ್ನು ಹೀರಿದ ಬಂದಣಿಕೆಯಾಗಿ ಇತಿಹಾಸದ ಪುಟ ಸೇರಿದ್ದಾರೆ.

ಅಪನಂಬಿಕೆ, ಸ್ವಜನಪಕ್ಷಪಾತ, ಅಧಿಕಾರದ ಮೋಹ, ಇನ್ನೊಬ್ಬರ ಕಾಲೆಳೆಯುವ ಚಾಳಿ, ಭಟ್ಟಂಗಿಗಳ ಪಟಾಲಂ ಈ ಪಂಚ ಅನಿಷ್ಠ ಗುಣಗಳಲ್ಲಿ ಒಂದು ಗುಣವಿದ್ದರು ಕೂಡ ಒಬ್ಬ ವ್ಯಕ್ತಿಯ ಬದುಕು ಪಾತಳ ಮುಖಿ ಅಗುವುದರಲ್ಲಿ ಅನುಮಾನವಿಲ್ಲ. ಅಂತಹದ್ದರಲ್ಲಿ ಈ ಪಂಚ ಗುಣಗಳನ್ನೆ ತಮ್ಮ ನಡತೆಯಾಗಿಸಿಕೊಂಡಿವವರು ನಾಯಕರಾಗಿ ಬಿಟ್ಟರೆ ಅಥವಾ ನಾಯಕರೆಂದು ಕರೆಸಿಕೊಂಡರೆ ಅವರು ಮಾತ್ರವಲ್ಲ ಅವರಿರುವ ಸಮಾಜ ಅಥವಾ ಪರಿಸರ ಗಬ್ಬೆದ್ದು ಹೋಗುತ್ತದೆ ಎಂಬುದಕ್ಕೆ ಬಿ ಎಸ್ ಯಡಿಯೂರಪ್ಪ ಮತ್ತು ಕರ್ನಾಟಕದ ರಾಜ್ಯ ರಾಜಕೀಯವೇ ಸಾಕ್ಷಿ. ಮತ್ತಷ್ಟು ಓದು »
8
ಆಗಸ್ಟ್

ಪೌರ ಕಾರ್ಮಿಕರ ಬದುಕು ಹಸನಾಗುವುದು ಯಾವಾಗ?

– ಪವನ್ ಯಂ.ಟಿ

ನಾಳೆ ಬೆಳಗ್ಗೆ ೫ ಗಂಟೆಗೆ ಅಲಾರಾಮ್ ಇಡು ಮಗಳೆ ೫:೩೦ ರ ಬಸ್ಸು ಮಿಸ್ ಆಗೋದ್ರೆ ಕಸವೆಲ್ಲ ಅಲ್ಲೇ ಉಳಿದು ಬಿಡುತ್ತೆ, ನಿನ್ನೆ ದಿನ ಸಂತೆ ಬೇರೆ ಇತ್ತು. ಕಸದ ರಾಶಿಯೇ ಬಿದ್ದಿರ ಬಹುದು. ಬೇಗ ಹೋಗಿ ಕ್ಲೀನ್ ಮಾಡಬೇಕು…! ಎಂದು ಪೌರಕಾರ್ಮಿಕೆ ಮಲ್ಲಮ್ಮ ತನ್ನ ಮಗಳಿಗೆ ಹೇಳಿ ಮಲಗಿಕೊಂಡಳು. ಮಲ್ಲಮ್ಮನಿಗಿರುವ ಒಂದೇ ಆಲೋಚನೆ ತನಗೆ ವಹಿಸಿದ ವಾರ್ಡನಂಬರ್ ೭ರಲ್ಲಿ ಬಿದ್ದಿರುವ ಕಸವನ್ನು ತೆಗೆದು ಶುಚಿಗೊಳಿಸುವುದು. ಎಲ್ಲಿ ಬೆಳಗ್ಗೆ ಬಸ್ಸು ಮಿಸ್ಸಾದರೆ ಕಸದ ರಾಶಿ ಅಲ್ಲಿಯೇ ಉಳಿದು ಮೇಲಾಧಿಕಾರಿಗಳು, ಗುತ್ತಿಗೆದಾರರು ನನ್ನನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಯೋ ಅನ್ನುವ ಭಯ ಮಲ್ಲಮ್ಮನಿಗೆ. ಇದು ಕೇವಲ ಒಬ್ಬ ಪೌರಕಾರ್ಮಿಳ/ನ  ಚಡಪಡಿಕೆಯಲ್ಲ. ನಮ್ಮ ದೇಶದಲ್ಲಿ ಅಥವಾ ರಾಜ್ಯದಲ್ಲಿ ದುಡಿಯುತ್ತಿರುವ ಎಲ್ಲಾ ಪೌರ ಕಾರ್ಮಿಕರ ಚಡಪಡಿಕೆಯಾಗಿದೆ. ಪೌರ ಕಾರ್ಮಿಕರಿಗೆ ದಿನಬೆಳಗಾದರೆ ಸ್ವಚ್ಚತೆಯದ್ದೇ ಚಿಂತೆ. ಅವರು ಈ ಕೆಲಸವನ್ನು ತಮ್ಮ ಒಟ್ಟೆ ಪಾಡಿಗಾಗಿ ಮಾಡಿದರೂ ಸಹ  ಅದರ ಹಿಂದೆ ಪ್ರತಿಯೊಬ್ಬ ನಾಗರೀಕನ ಆರೋಗ್ಯದ ಕುರಿತ ಕಾಳಜಿ ಅವರಲ್ಲಿ ಮನೆ ಮಾಡಿರುತ್ತದೆ.

ನಾವು ಬೆಳಗ್ಗೆ ಎದ್ದು ಸುಮಾರು ೭ ಗಂಟೆಯ ಸಮಯಕ್ಕೆ ಪಟ್ಟಣಕ್ಕೆ ಒಂದು ಸುತ್ತು ಬಂದರೆ ಸಾಕು ಪೌರ ಕಾರ್ಮಿಕರು ಪಡುವ ಕಷ್ಟ, ಅವರು ಮಾಡುವ ಕೆಲಸ, ನಮ್ಮ ಕಣ್ಣಿಗೆ ಕಾಣುತ್ತದೆ. ನಮಗೆ ಅಸಯ್ಯ ಎನ್ನಿಸುವ ಕೆಲಸವನ್ನು ಅವರು ಮಾಡಿದಂತೆ ಕಂಡರೂ ಅವರೆಲ್ಲ ನಮ್ಮ ಪಾಲಿನ ದೇವರಿದ್ದಂತೆ, ಇಂದು ನಾವೆಲ್ಲ ಒಳ್ಳೆಯ, ಕೈತುಂಬಾ, ಹಣ ಬರುವ ಕೆಲಸವನ್ನು ಮಾತ್ರ ಹುಡುಕುತ್ತೇವೆ. ಒಂದು ವೇಳೆ ಪೌರ ಕಾರ್ಮಿಕರೇ ಇಲ್ಲವೆಂದಿದ್ದರೇ ಇಂದು ನಮ್ಮ ಆರೋಗ್ಯದ ಪರಿಸ್ಥಿತಿ ಏನಾಗುತ್ತಿತ್ತು ಎನ್ನುವುದನ್ನು ನೀವೇ ಯೋಚಿಸಿ.

ಮತ್ತಷ್ಟು ಓದು »

6
ಆಗಸ್ಟ್

ಕಾಸರಗೋಡಿನ ಕನ್ನಡಿಗರ ತ್ಯಾಗ ಮತ್ತು ಬಲಿದಾನಗಳನ್ನು ಕರ್ನಾಟಕ ಮರೆತಿದೆಯೇ..!?

– ಕುಮಾರ ರೈತ

 “ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು”

ಭಾಷಾವಾರು ಪ್ರಾಂತ್ಯ ರಚನೆಯಾಗುವುದಕ್ಕೂ ಒಂಭತ್ತು ವರ್ಷಗಳಿಗೂ ಮೊದಲೇ ಶ್ರೀಧರ ಕಕ್ಕಿಲಾಯರು ಹೇಳಿದ್ದ ಖಚಿತ ಅಭಿಪ್ರಾಯವಿದು. ಇವರು ಕಾಸರಗೋಡಿನ ಸುಪ್ರಸಿದ್ಧ ವಕೀಲರಾಗಿದ್ದರು. ಕಾಸರಗೋಡನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಲು ಸತತ ೨೫ ವರ್ಷ ಹೋರಾಟ ಮಾಡಿದರು. ಅವರ ಜೀವಿತಾವಧಿಯವರೆಗೂ ಈ ಹೋರಾಟದಲ್ಲಿ ಸಕ್ರಿಯರಾಗಿದ್ದರು. ೧೯೪೭ರ ಡಿಸೆಂಬರ್ನಲ್ಲಿ ಕಾಸರಗೋಡಿನ ಬೋರ್ಡ್ ಹೈಸ್ಲೂಲ್ ಆವರಣದಲ್ಲಿ ೩೧ನೇ  ಕನ್ನಡ ಸಾಹಿತ್ಯ ಸಮ್ಮೇಳನ ನಡೆತು. ಈ ಸಂದರ್ಭದಲ್ಲಿ ಹೊರಬಂದ ಸ್ಮರಣ ಸಂಚಿಕೆ ‘ತೆಂಕುನಾಡು’ ಸ್ಮರಣ ಸಂಚಿಕೆಯಲ್ಲಿ ಶ್ರೀಧರ ಕಕ್ಕಿಲಾಯರ ಈ ಲೇಖನ ಪ್ರಕಟವಾಯಿತು. ಅದರ ಶೀರ್ಷಿಕೆ ‘ಕನ್ನಡ-ಮಲೆಯಾಳ ಸಮಸ್ಯೆ’

ಇದನ್ನೆಲ್ಲ ಪ್ರಸ್ತಾಪಿಸಲು ಕಾರಣವಿದೆ. ಕಾಸರಗೋಡಿಗೆ ಹೋದಾಗಲೆಲ್ಲ ನಾನು ಭೇಟಿ ಕೊಡುವ ಖಾಯಂ ಸ್ಥಳಗಳ ಸಾಲಿನಲಿಬೇಕಲ್ ಕೋಟೆ ಸೇರಿದೆ. ಇಲ್ಲಿ ಪ್ರಾಣದೇವರ ಗುಡಿಯಿದೆ. ಹೊರಭಾಗದಲ್ಲಿ ಗುಡಿ ಹೆಸರನ್ನು ಕನ್ನಡದಲ್ಲಿ ಬರೆಯಲಾಗಿದೆ. ಬೇಕಲ್ ಕೋಟೆ ನಿರ್ಮಾಣ ಮಾಡಿದ್ದು  ಕನ್ನಡಿಗ ರಾಮನಾಯಕ.  (ಟಿಪ್ಪು ಸುಲ್ತಾನ್ ಸೈನ್ಯದ  ದಂಡನಾಯಕ ( ಮೂಲತಃ ಬೇಕಲ್ ಕೋಟೆ ಕನ್ನಡ ಪ್ರದೇಶ. ಇದಕ್ಕೆ ಅನೇಕ ಕುರುಹುಗಳಿವೆ. ಕೋಟೆ ಇರುವ ಊರಿನ ಹೆಸರು ‘ಅಗಸರ ಹೊಳೆ. ಈ ಎರಡೂ ಪದಗಳು ಅಚ್ಚಗನ್ನಡ.

ಮತ್ತಷ್ಟು ಓದು »

6
ಆಗಸ್ಟ್

ಸಂಸತ್ತಿನಲ್ಲಿ ಕನ್ನಡದ ಕಂಪು ಸದಾ ಮೊಳಗಲಿ

– ಅರುಣ್ ಜಾವಗಲ್

ನೆನ್ನೆ ನಡೆದ ಸಂಸತ್ ಕಲಾಪದಲ್ಲಿ ನಮ್ಮ ರಾಜ್ಯದಿಂದ ಆಯ್ಕೆಯಾದ ಲೋಕಸಬಾ ಸದಸ್ಯರಾದ ಚಲುವರಾಯಸ್ವಾಮಿಯವರು ಕನ್ನಡದಲ್ಲಿ ಬಾಶಣ ಮಾಡಿ ಗಮನ ಸೆಳೆದಿದ್ದಾರೆ. ಬಹಳ ದಿನಗಳ ಮೇಲೆ ಸಂಸತ್ತಿನಲ್ಲಿ ಕನ್ನಡದ ಕಂಪು ಮೊಳಗಿದೆ.

೧೯೬೭ ರಲ್ಲಿ ಲೋಕಸಬೆಯ ಕಲಾಪಗಳಲ್ಲಿ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ಜೆ ಹೆಚ್ ಪಟೇಲ್ ರವರು ಬಾಶಣ ಮಾಡಿದ್ದರು. ಮೊಟ್ಟ ಮೊದಲ ಬಾರಿಗೆ ಸಂಸತ್ತಿನಲ್ಲಿ ಕನ್ನಡದ ಡಿಂಡಿಮ ಮೊಳಗಿಸಿದ ಕೀರ್ತಿ ಪಟೇಲ್ ರವರಿಗೆ ಸಲ್ಲಬೇಕು.

ಲೋಕಸಬೆ ಕಲಾಪಗಳಿಗೆ ಹಿಂದಿ/ಇಂಗ್ಲೀಶ್ ಬರಲ್ಲ ಅಂತ ಹಲವಾರು ಜನ ಹಿಂದಿಯೇತರ ಲೋಕಸಬಾ ಸದಸ್ಯರು ಕಲಾಪಗಳಿಗೆ ಹೋಗದೆ ಅತವಾ ಹೋದರು ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳದ ಬಗ್ಗೆ ಕೇಳಿದ್ದಿವಿ. ಆದರೆ ತಮ್ಮ ಬಾಶೆಯಲ್ಲು ಬಾಶಣ ಮಾಡಲು ಪ್ರಜಾಪ್ರಬುತ್ವದಲ್ಲಿ ಅವಕಾಶವಿದ್ದರು ಹಲವಾರು ಜನ ಸದಸ್ಯರು ತಮ್ಮ ಬಾಶೆಯನ್ನ ಬಳಸದಿರುವುದು ದುರಂತವೇ! ನಿಜಕ್ಕು ಅವರು ತಮ್ಮ ಬಾಶೆಯನ್ನ ಬಳಸಿದ್ದೇ ಆದಲ್ಲಿ ವಿಶಯವನ್ನ ಅತ್ಯಂತ ನೇರ ಮತ್ತು ನಿಕರವಾಗಿ ಹೇಳಬಹುದಲ್ಲದೇ ಲೋಕಸಬಾ ಟಿವಿ ಅತವಾ ಇನ್ಯಾವುದೋ ಟಿವಿಯಲ್ಲಿ ಅವರವರ ಕ್ಷೇತ್ರದ ಜನರಿಗೂ ತಾವು ಆಯ್ಕೆ ಮಾಡಿ ಕಳಿಸಿದ ಸದಸ್ಯ ಏನ್ ಮಾತಾಡ್ತಿದ್ದಾರೆ, ಯಾವ ವಿಶಯ ಪ್ರಸ್ತಾಪಿಸುತ್ತಿದ್ದಾರೆ ಅನ್ನೊದು ತಿಳಿಯೋ ಹಾಗೆ ಆಗುತ್ತೆ.
ಮತ್ತಷ್ಟು ಓದು »

5
ಆಗಸ್ಟ್

ಭಗವದ್ಗೀತೆಯ ಆಧುನಿಕ ನಿರೂಪಣೆಗಳು ಹಾಗೂ ಸಮಸ್ಯೆಗಳು

ಡಾ. ರಾಜಾರಾಮ ಹೆಗಡೆ

ಇತ್ತೀಚೆಗೆ ಭಗವದ್ಗೀತೆಯ ಕುರಿತು ಅನೇಕ ಚರ್ಚೆಗಳೆದ್ದಿವೆ. ಶಾಲೆಗಳಲ್ಲಿ ಅದನ್ನು ಪ್ರಚಾರ ಮಾಡುವ  ಕೆಲಸವನ್ನು ಸಮರ್ಥಿಸಿ ಹಾಗೂ ವಿರೋಧಿಸಿ ಹೇಳಿಕೆಗಳು ಬರುತ್ತಿವೆ. ಈ ಎರಡೂ ಪಕ್ಷಗಳ ವಕ್ತಾರರೂ ಕೂಡ ಭಗವದ್ಗೀತೆಯು ಹಿಂದೂಗಳ ಧರ್ಮಗ್ರಂಥವೆಂಬ ಗ್ರಹಿಕೆಯನ್ನು  ಆಧರಿಸಿ ವಾದ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ವಿರೋಧಿಸುವವರ ವಾದವೆಂದರೆ ಸೆಕ್ಯುಲರ್ ರಾಷ್ಟ್ರವಾದ ಭಾರತದಲ್ಲಿ ಎಲ್ಲಾ ಧರ್ಮದವರೂ ಇರುವ ಸಾರ್ವಜನಿಕ ಸಂಸ್ಥೆಗಳಲ್ಲಿ ಹಿಂದೂಗಳಲ್ಲದವರೂ ಭಗವದ್ಗೀತೆಯನ್ನು ಕಲಿಯಬೇಕೆನ್ನುವುದು ಸಂವಿಧಾನ ವಿರೋಧೀ ಕೃತ್ಯವಾಗುತ್ತದೆ. ಹಾಗಾಗಿ ಸೆಕ್ಯುಲರ್ ತತ್ವದ ಪ್ರಕಾರ ಅದು ತಪ್ಪೊಂದೇ ಅಲ್ಲ, ಅದು ಕಾನೂನಿನ ದೃಷ್ಟಿಯಲ್ಲಿ ಅಪರಾಧ ಕೂಡಾ. ಈ ವಿರೋಧವನ್ನು ಖಂಡಿಸಿರುವ ಪರ ಪಕ್ಷದವರು ಭಗವದ್ಗೀತೆಯ ಶಿಕ್ಷಣವನ್ನು ವಿರೋಧಿಸುವವರು ದೇಶ ಬಿಟ್ಟು ತೊಲಗಲಿ ಎನ್ನುತ್ತಿದ್ದಾರೆ. ಅಂದರೆ ಅಂಥ ವಿರೋಧಿಗಳ ರಾಷ್ಟ್ರೀಯತೆಯನ್ನೇ ಪ್ರಶ್ನಿಸುತ್ತಿದ್ದಾರೆ.

ಒಂದೊಮ್ಮೆ ಎರಡೂ ಪಕ್ಷದವರೂ ಒಮ್ಮತಕ್ಕೆ ಬಂದು ಭಗವದ್ಗೀತೆಯನ್ನು ಕೇವಲ ಹಿಂದೂ ಮಕ್ಕಳಿಗೆ ಕಡ್ಡಾಯ ಮಾಡಬಹುದು ಎಂದರೆ ಸಮಸ್ಯೆ ಬಗೆಹರಿಯುತ್ತದೆಯೆ? ಭಗವದ್ಗೀತೆಯು ಹಿಂದೂ ಧರ್ಮಗ್ರಂಥವೆಂದು ನಂಬಿರುವ ವಿರೋಧ ಪಕ್ಷದವರ ಪ್ರಕಾರ ದಲಿತರಿಗೆ ಹಾಗೂ ಶೂದ್ರರಿಗೆ  ಅದೊಂದು ಅಪಾಯಕಾರಿ ಗ್ರಂಥವಾಗಿದೆ.  ಅದನ್ನು ಶಾಲೆಗಳಲ್ಲಿ ಕಡ್ಡಾಯಮಾಡುವ ಪ್ರಯತ್ನದ ಹಿಂದೆ ಬ್ರಾಹ್ಮಣ ಪುರೋಹಿತಶಾಹಿಯ ಹುನ್ನಾರವಿದೆ. ಈ ಕಾರ್ಯದಿಂದ ಅಲ್ಪಸಂಖ್ಯಾತರಿಗೊಂದೇ ಅಲ್ಲ, ದಲಿತ-ಶೂದ್ರರ ಹಿತಾಸಕ್ತಿಗೂ ಧಕ್ಕೆಯಿದೆ. ಈ ವಾದಕ್ಕೆ ಪರಪಕ್ಷದವರು ನೀಡುವ ಉತ್ತರವೆಂದರೆ ಇಂಥ ಹೇಳಿಕೆಗಳು ಬರುತ್ತಿರುವುದೇ ಹಿಂದೂ ಧರ್ಮದ ಅವನತಿಯ ದ್ಯೋತಕ. ಹಾಗಾಗಿ ಇಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಹಾಗೂ ಹಿಂದೂ ಧರ್ಮದ ಐಕ್ಯತೆಯನ್ನು ಸಾಧಿಸಲು ಹಿಂದೂ ಧರ್ಮಗ್ರಂಥಗಳನ್ನು ಕಡ್ಡಾಯವಾಗಿಯಾದರೂ ಹಿಂದೂಗಳಿಗೆ ತಿಳಿಸುವುದು ಅತ್ಯಗತ್ಯ. ಮತ್ತಷ್ಟು ಓದು »

1
ಆಗಸ್ಟ್

ದೆಹಲಿಯೇ ಬೆಂಗಳೂರಿಗೆ ಬಂತು ಮತ್ತು ಅದೇ ಸರಿಯಾದದ್ದು !

-ವಸಂತ್ ಶೆಟ್ಟಿ
ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ನಡೆದಿರೋ ರಾಜಕೀಯ ಬಿಕ್ಕಟ್ಟು ಇನ್ನೇನು ಮುಗಿಬಹುದು ಅನ್ನೋ ಹಂತಕ್ಕೆ ಬಂದಿದೆ. ಕಳೆದ ಒಂದು ವಾರದಿಂದ ನಡೆದಿರೋ ವಿದ್ಯಮಾನವನ್ನು ಗಮನಿಸಿದರೆ ಕರ್ನಾಟಕದ ರಾಜಕೀಯ ಒಂದು ದೊಡ್ಡ ಬದಲಾವಣೆಯ ಘಟ್ಟದಲ್ಲಿದೆ ಅನ್ನಬಹುದು. ಯಾಕೆ ಹಾಗಂದೆ ಅಂತ ಕೇಳಿದ್ರೆ ನನ್ನ ಅನಿಸಿಕೆ ಇಂತಿದೆ:

ಕಳೆದ 60 ವರ್ಷದಿಂದಲೂ ನಾವು ನೋಡಿರುವುದು ಏನೆಂದರೆ ಕರ್ನಾಟಕದ ರಾಜಕೀಯ ನಾಯಕರು ಒಂದು ಸಣ್ಣ ವಿಷಯಕ್ಕೂ ದೆಹಲಿಗೆ ಹೋಗಿ ಅಲ್ಲಿನ ದೊರೆಗಳ ಮುಂದೆ ಕೈ ಕಟ್ಟಿಕೊಂಡು ನಿಂತು, “ಅಪ್ಪಣೆ ಮಹಾಪ್ರಭು” ಅಂತ ನಿಂತುಕೊಳ್ಳೊರು. ಅವರು ಕೊಟ್ಟ ಆಜ್ಞೆನಾ ಪ್ರಸಾದ ಅಂಬಂತೆ ಕಣ್ಣಿಗೊತ್ತಿಕೊಂಡು ವಾಪಸ್ ಬರೋರು. “ನಮ್ದು ನ್ಯಾಶನಲ್ ಪಾರ್ಟಿ ರೀ, ನಾವು ಶಿಸ್ತಿನ ಸಿಪಾಯಿಗಳು ರೀ,,ಹೈಕಮಾಂಡ್ ಮಾಡಿದ ಆಜ್ಞೆ ನಾವ್ ಮೀರುವುದುಂಟೇನು” ಎಂದು ತಮ್ಮ ಗುಲಾಮಗಿರಿಯನ್ನೇ ಖುಷಿಯಾಗಿ ಸಮರ್ಥಿಸಿಕೊಳ್ಳೊರು. ಆದರೆ ಮೊಟ್ಟ ಮೊದಲ ಬಾರಿಗೆ ದೆಹಲಿಯ ಮೂರು ಮತ್ತೊಂದು ನಿವೃತ್ತ ನಾಯಕರಿಗೆ ಸೆಡ್ಡು ಹೊಡೆದು ದೆಹಲಿಯೇ ಬೆಂಗಳೂರಿಗೆ ಬರುವಂತೆ ಮಾಡಿದ್ದು, ಎರಡು ದಿನವಾದರೂ ಅವರಿಗೆ toughest ಫೈಟ್ ಕೊಟ್ಟಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದಿಂದ ಕೇಂದ್ರವಿರಬೇಕು, ಬಾಟಮ್ ಅಪ್ ಆಪ್ರೋಚ್ ಇರಬೇಕು ಅನ್ನುವ ಸಂದೇಶವನ್ನು ಕೊಟ್ಟ ಕಾರಣಕ್ಕೆ ಯಡಿಯೂರಪ್ಪನವರನ್ನು ಮೆಚ್ಚದಿರಲು ಆಗದು. ಮತ್ತಷ್ಟು ಓದು »
1
ಆಗಸ್ಟ್

ಕಥೆಯಾದಳು ಹುಡುಗಿ!

– ಚಿತ್ರ ಸಂತೋಷ್

ವೇಶ್ಯಾವಾಟಿಕೆ ಎನ್ನುವುದು ಗಂಡಸು ಸೃಷ್ಟಿಸುವ ಸಮಸ್ಯೆ ಎಂದವನು ಚಾಣಕ್ಯ. ಆದರೆ, ನನಗನಿಸಿದ ಮಟ್ಟಿಗೆ ಇದು ಸಮಾಜವೇ ಸೃಷ್ಟಿಸುವ ಸಮಸ್ಯೆ. ಉತ್ತರ ಕರ್ನಾಟಕದ ಕೆಲಭಾಗಳಲ್ಲಿ ಈಗಲೂ ಹೆಣ್ಣನ್ನು ವೇಶ್ಯಾವಾಟಿಕೆಗೆ ತಳ್ಳುವ ಕೆಟ್ಟಪದ್ಧತಿ ಚಾಲ್ತಿಯಲ್ಲಿದೆ. ಇಲ್ಲಿ ಯಾವ ಕಾನೂನುಗಳೂ ಕೆಲಸಮಾಡುತ್ತಿಲ್ಲ.

ನನಗೆ ೨೨ ವರ್ಷ. ನಾವು ಐವರು ಹೆಣ್ಣುಮಕ್ಳು. ಮನೆಯಲ್ಲಿ ಬಡತನ. ನಮ್ಮ ಮದುವೆ ಕುರಿತು ಯೋಚನೆ ಮಾಡಿ ಮಾಡಿ ಅಪ್ಪಹಾಸಿಗೆ ಡಿದಿದ್ದ. ನಾನೇ ದೊಡ್ಡವಳು. ನನ್ನ ಕೊನೆಯ ತಂಗಿಯ ಹುಟ್ಟುವಾಗಲೇ ಹೆರಿಗೆಯಲ್ಲಿ ತೊಂದರೆಯಾಗಿ ಅಮ್ಮ ಸಾವನ್ನಪ್ಪಿದ್ದಳು.  ನಾನು ದೊಡ್ಡವಳಾಗಿದ್ದರಿಂದ ನನಗೆ ಸಣ್ಣ ವಯಸ್ಸಿನಲ್ಲೇ ಒಬ್ಬ ಮುದುಕನ ಜೊತೆ ಅಪ್ಪ ಮದುವೆ ಮಾಡಿದ್ದ. ಆದರೆ, ಅವನಿಗೆ ಆಗಲೇ ಮೂರು ಮಂದಿ ಪತ್ನಿಯರಿದ್ದರು. ಮರಳಿ ಮನೆಗೆ ಬಂದೆ. ಕೆಲಸ ಹುಡುಕುವುದು ಅನಿವಾರ್ಯವಾಯಿತು. ನಮ್ಮೂರಿನ ಅಂಕಲ್ ಒಬ್ರು ಕೆಲಸ ಕೊಡಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಅಪ್ಪನಿಗೂ ಹೇಳದೆ ಅವನನ್ನು ನಂಬಿ ಮುಂಬೈಗೆ ತೆರಳಿದೆ.

ಮತ್ತಷ್ಟು ಓದು »

30
ಜುಲೈ

ಮದಿರೆ ಬಿಟ್ಟು ಬದುಕ ಕಟ್ಟಿಕೊಂಡವರ ಕಥೆ

– ಪವನ್ ಯಂ.ಟಿ

ಕೊಟ್ಟಾರೆ ಕೊಡು ಶಿವನೆ ಕುಡುಕನಲ್ಲದ ಗಂಡನ …!

ಎಂದು ಎಷ್ಟೋ ಹೆಣ್ಣು ಮಕ್ಕಳು ದೇವರಲ್ಲಿ ಮೊರೆಯಿಡುತ್ತಿದ್ದ ಬಗ್ಗೆ  ಜನಪದ ಹಾಡನ್ನು ಕೇಳಿದ ನೆನಪಾಗುತ್ತಿದೆ. ಒಂದು ಹೆಣ್ನು ಮಗಳು ತನ್ನ ಗಂಡ ಕುಡುಕನಾಗುವುದನ್ನು ಕನಸಲ್ಲಿಯೂ ನೆನೆಯುದಿಲ್ಲ. ಅದೇ ರೀತಿ ತಮ್ಮ ಮಗ ಮಕ್ಕಳು ಕುಡುಕರಾಗಬೇಕೆಂದು ಯಾವ ತಂದೆ ತಾಯಿಯು ಇಷ್ಟ ಪಡುವುದಿಲ್ಲ. ಆದರೆ ಏನು ಮಾಡುವುದು ಕೆಲವು ಹೆಣ್ಣು ಮಕ್ಕಳ ಮತ್ತು ತಂದೆ ತಾಯಿಯಂದಿಯರ ಆಸೆ ಕೈಗೂಡಬೇಕಲ್ಲ. ನಮ್ಮಲ್ಲಿ ಹೆಚ್ಚು ಜನರು ಕುಡಿತದ ಬಲೆಗೆ ಬಿದ್ದಾಗಿದೆ. ನಮ್ಮ ದೇಶದಲ್ಲಿ ಶೇಕಡ ೭೦ ರಷ್ಟು ಜನರು ಈಗಾಗಲೇ ಕುಡಿತಕ್ಕೆ ಬಲಿ ಬಿದ್ದಿರ ಬಹುದು.

ಯಾವತ್ತೋ ಒಂದು ದಿನ ಜಾಲಿಗೆಂದು ಬಿಯರ್ ಕುಡಿದ ಒಬ್ಬ ವ್ಯಕ್ತಿ ನಂತರ ಕ್ವಾಟರ್, ಆಫ್, ಪುಲ್, ಬಾಟಲ್ ಕುಡಿಯುವವನಾಗಿ ಪರಿವರ್ತನೆಯಾಗುತ್ತಾನೆ, ನಂತರ ಅವನು ಸಂಪ್ರಾಯಿಕ ಕುಡುಕ. ನಮ್ಮಲ್ಲಿ ೫೦ ವರ್ಷಕ್ಕೆ ಮೇಲ್ ಪಟ್ಟ ಮಧ್ಯ ವಯಸ್ಕರು ಹೆಚ್ಚಾಗಿ ಕುಡಿತಕ್ಕೆ ಒಳಗಾಗಿರುವುದನ್ನು ಗಮನಿಸ ಬಹುದು. ಆದರೆ ಈಗಿನ ಸ್ಥಿತಿ ಯಾವ ರೀತಿಯಾಗಿದೆ ಯೆಂದರೆ ಹೆಚ್ಚಾಗಿ ಯುವಕರೇ ಜಾಲಿ, ಗಮ್ಮತಿನ ಹೆಸರಿನಲ್ಲಿ ಕುಡಿತಕ್ಕೆ ಬಲಿ ಬೀಳುತ್ತಿದ್ದಾರೆ. ಮತ್ತಷ್ಟು ಓದು »

29
ಜುಲೈ

ಹೈಕಮಾಂಡ್!!! ಹೈಕಮಾಂಡ್!!!

– ಚೇತನ್ ಜೀರಾಳ್

ಕರ್ನಾಟದಲ್ಲಿ ಕಳೆದೆರೆಡು ವಾರಗಳಿಂದ ನಡೆಯುತ್ತಿರುವ ಈ ರಾಜಕೀಯ ದೊಂಬರಾಟ ದೇಶದ ಗಮನವನ್ನ ತನ್ನತ ಸೆಳೆದಿದೆ. ಅಕ್ರಮ ಗಣಿಗಾರಿಕೆಯ ಬಗ್ಗೆ ಲೋಕಾಯುಕ್ತರು ನೀಡಿರುವ ವರದಿ ರಾಜಕೀಯ ಪಕ್ಷಗಳು ಹಾಗೂ ಅವರ ನಾಯಕರುಗಳಲ್ಲಿ ಆತಂಕ ಹುಟ್ಟಿಸಿದೆ. ಮುಂದೆ ಈ ರಾಜಕೀಯ ದೊಂಬರಾಟ ಹೇಗೆ ತಿರುವುಗಳನ್ನು ಪಡೆಯುತ್ತದೋ ಕಾದು ನೋಡೋಣ.

ಆದರೆ ಈ ಪ್ರಕರಣ ಹೊರಬಿದ್ದಾಗಿನಿಂದ ಹೈಕಮಾಂಡಿನ ಹೆಸರು ಎಂದಿಗಿಂತ ಹೆಚ್ಚು ಪದೇ ಪದೇ ಕಿವಿಯ ಮೇಲೆ ಬೀಳುತ್ತಲೇ ಇದೆ. ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳ ನಾಯಕರು ಎದ್ದರೂ ಹೈಕಮಾಂಡ್, ಬಿದ್ದರೂ ಹೈಕಮಾಂಡ್, ಕನಸಿನಲ್ಲೂ ಹೈಕಮಾಂಡ್ ಎಂದು ಕನವರಿಸುತ್ತಾ ಇರುತ್ತಾರೆ. ಕಾಂಗ್ರೆಸ್, ಬಿಜೆಪಿ ಎಂದು ಪಕ್ಷ ಭೇದ ಮರೆತು ನಮ್ಮ ರಾಜ್ಯದ ನಾಯಕರುಗಳು ಹೈಕಮಾಂಡಿನ ದಾಸ್ಯಕ್ಕೆ ಒಗ್ಗಿಹೋಗಿದ್ದಾರೆ ಎಂದೆನಿಸುತ್ತದೆ. ಹೈಕಮಾಂಡಿನ ಕರೆ ಬಂದ ಕೂಡಲೇ ಉಟ್ಟ ಬಟ್ಟೆಯಲ್ಲಿ ದೆಹಲಿಗೆ ಓಡಿ ಹೋಗುವ ಚಾಳಿ ನಮ್ಮ ರಾಜ್ಯದ ನಾಯಕರುಗಳಿಗೆ ಅಭ್ಯಾಸ ಆಗಿ ಹೋಗಿದೆ. ನಮ್ಮ ರಾಜ್ಯದ ಯಾವುದೇ ಪ್ರಮುಖ ವಿಷಯಗಳಲ್ಲಿ ತೀರ್ಮಾನವಾಗಬೇಕಾದರೂ ದೆಹಲಿಯಲ್ಲಿ ಗಂಟೆಗಟ್ಟಲೆ ಕೈಕಟ್ಟಿಕೊಂಡು ನಿಲ್ಲಬೇಕಾದ ಪರಿಸ್ಥಿತಿ ನಮ್ಮ ಜನಪ್ರತಿನಿಧಿಗಳದು. ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರನ್ನು ಭೇಟಿ ಮಾಡಲು ಹಲವಾರೂ ದಿನಗಳು ಕಳೆದರೂ ಭೇಟಿ ಮಾಡಲು ಸಾಧ್ಯವಾಗದೆ ವಾಪಸ್ ಬಂದಿರುವ ಅನೇಕ ಸುದ್ದಿಗಳನ್ನು ಪತ್ರಿಕೆಗಳಲ್ಲಿ ನೋಡಿರುತ್ತೇವೆ…

ಮತ್ತಷ್ಟು ಓದು »

28
ಜುಲೈ

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?

-ರಾಕೇಶ್ ಎನ್ ಎಸ್
ಲೋಕಾಯುಕ್ತ ವರದಿ ಸೋರಿಕೆಯಾಗುತ್ತಲೆ ಯಡಿಯೂರಪ್ಪ, ರೆಡ್ಡಿ ಸೋದರರು, ಕುಮಾರಸ್ವಾಮಿ, ಅನಿಲ್ ಲಾಡ್ ಸೇರಿದಂತೆ ರಾಜ್ಯದ ಅನೇಕ ಅತಿರಥ ಮಹಾರಥಿಗಳು ಮತ್ತು ಸುಮಾರು ೫೦೦ಕ್ಕೂ ಮಿಕ್ಕ ಅಧಿಕಾರಿಗಳ ಮೇಲಿದ್ದ ಊಹಾಪೋಹ ಆಧಾರಿತ ಆರೋಪಗಳು ಇದೀಗ ತಾತ್ವಿಕ ಮತ್ತು ಸಾಂವಿಧಾನಿಕ ನೆಲಗಟ್ಟಿನ ಮೇಲೆ ನಿಂತ ಆರೋಪಗಳಾಗಿ ಪರಿವರ್ತನೆ ಗೊಂಡಿದೆ.ಯಡಿಯೂರಪ್ಪ ಸಕಲ ಭ್ರಷ್ಟಾಚಾರ ಕಲಾ ವಲ್ಲಭ ಎಂಬುದನ್ನು ಸಾಬೀತು ಮಾಡಲು ದೇಶದ ಜನರಿಗೆ ಯಾವುದೇ ವರದಿಯ ಅಗತ್ಯವಿರಲಿಲ್ಲ. ಆದರೆ ತಾನು ಭ್ರಷ್ಟಾಚಾರಿ ಎಂದು ಅವರನ್ನು ಅರ್ಥ ಮಾಡಿಕೊಳ್ಳಲು ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿಗೆ ಇದು ಗೊತ್ತಾಗಲು ಇಂತಹವೊಂದು ವರದಿ ಅಗತ್ಯವಾಗಿತ್ತು. ಆ ಕೆಲಸವನ್ನು ನ್ಯಾ. ಸಂತೋಷ್ ಹೆಗ್ಗಡೆ ಮಾಡಿ ಮುಗಿಸಿದ್ದಾರೆ.ಯಡಿಯೂರಪ್ಪ ಕರ್ನಾಟಕದ ಸಂಪತ್ತನ್ನು ಸುಮಾರು ೫ ವರ್ಷಗಳಿಂದ ಹುಲುಸಾಗಿ ಮೇಯುತ್ತಿದ್ದಾರೆ, ಕಳೆದ ಮೂರು ವರ್ಷಗಳಲ್ಲಿ ಅದು ಮಿತಿ ಮೀರಿದೆ. ಪ್ರತಿಯೊಂದಕ್ಕೂ ಕೊನೆ ಎಂಬುದು ಇದ್ದೆ ಇರುತ್ತದೆ. ಅದೇ ರೀತಿ ಯಡಿಯೂರಪ್ಪರ ಭ್ರಷ್ಟ ಆಡಳಿತಕ್ಕೆ ಕೊನೆಯ ಷರಾವನ್ನು ಲೋಕಾಯುಕ್ತದ ಈ ವರದಿ ಬರೆಯುತ್ತದೆಯೋ? ಇಲ್ಲ, ೨ ವರ್ಷಗಳ ಬಳಿಕ ಕರ್ನಾಟಕದ ಪ್ರಜ್ಙಾವಂತ ಜನರೇ ಬರೆಯಬೇಕಾಗುತ್ತದೆಯೇ? ಎಂಬುದು ಈಗಿರುವ ಪ್ರಶ್ನೆ… ಮತ್ತಷ್ಟು ಓದು »