ವಿಷಯದ ವಿವರಗಳಿಗೆ ದಾಟಿರಿ

Posts from the ‘ಕರ್ನಾಟಕ,ಕನ್ನಡ’ Category

28
ಜುಲೈ

ಯಡ್ಯೂರಪ್ಪಂಗೆ ನೊಬೇಲ್ ಅವಾರ್ಡು…!

– ವಿಜಯ್ ಹೆರಗು

ಎಂದಿನಂತೆ ನಮ್-ವಿಜಯ್ ಹೆರಗುಮ ಕೆಂಚ, ಸೀನ, ಸಿದ್ದ, ನಾಣಿ ಎಲ್ಲಾರೂ ಬಂದು ಅವರ ಮಾಮೂಲಿ ‘ಅಡ್ಡಾ’ ರಾಮಣ್ಣನ ಟೀ ಅಂಗಡಿ ಮುಂದೆ ಕೂತ್ಕೊಂಡು ಹರಟೆ ಹೊಡೀತಾ ಇದ್ರು. ನಮ್ ಸಿದ್ದ ಅಲ್ಲಿ ಇದ್ದ ಅಂದ್ಮೇಲೆ ರಾಜಕೀಯದ ಮಾತು ಬರ್ಲೇಬೇಕು.

ಸಿದ್ದ : ಲೇ ಕೆಂಚ ಇವತ್ತು ಪೇಪರ್ ನೋಡ್ದೆನ್ಲಾ ?

ಕೆಂಚ : ಹೂ ಕನ್ಲಾ ನೋಡ್ದೆ, ಪಾಪ ನಮ್ ಯಡ್ಯೂರಪ್ನೋರಿಗೆ ಶ್ಯಾನೆ ಕಾಟ ಕೊಡ್ತಾವ್ರೆ. ಈ ಸಂತೋಷ್ ಹೆಗ್ಡೆ ಲೋಕಾಯುಕ್ತ ಆದಾಗಿಂದ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಸಂತೋಷಾನೇ ಕಾಣಾಕಿಲ್ಲ………ಸದ್ಯ ಇನ್ನೊಂದು ವಾರಕ್ಕೆ ಆವಯ್ಯ ರಿಟೈರ್ ಆಯ್ತಾರೆ ಇನ್ನಾರಾ ನಮ್ ಸಿಎಮ್ಮು ಸುಖವಾಗಿ ಇರ್ಬೌದು ಅಂದ್ಕೊಂಡ್ರೆ ಅದೇನೋ “ಗಣಿ ಬಾಂಬ್” ಹಾಕ್ಬಿಟ್ರಲ್ಲ ಅವ್ರು.

ಸೀನ : ಅಲ್ಲಲೇ ಕೆಂಚ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಯಾವಾಗ್ಲಾ ಸಂತೋಷ ನೋಡಿದ್ದೇ ನೀನು!? ಆವಯ್ಯ ಯಾವಾಗಲೂ ಮುಖ ಗಂಟ್ ಹಾಕ್ಕಂಡೆ ಇರ್ತಾರೆ…….

ಸಿದ್ದ : ನಿಜ ಕಣ್ಲಾ ಸೀನ……ಆವಯ್ಯ ನಗೋದೇ ಕಷ್ಟ ಕಣ್ಲಾ ಅದ್ಕೆ ಅವ್ರು ಸದಾನಂದ ಗೌಡ್ರುನ್ನ ಪಕ್ಕಕ್ಕೆ ಇಟ್ಕಂಡಿದ್ರು…..ಸದಾನಂದ ಗೌಡ್ರು ಯಾವಾಗ್ಲೂ ನಗ್ತಾ ಇರ್ತಾರೆ, ಆದ್ರೆ ಈಶ್ವರಪ್ಪ ಬಂದು ಸದಾನಂದ ಗೌಡ್ರುನ್ನ ಎಬ್ಬಿಸಿ ಅವ್ರ ಸೀಟ್ನಾಗೆ ಇವ್ರು ಕುಂತ್ಕಂಬುಟ್ರು.

 

ಮತ್ತಷ್ಟು ಓದು »

23
ಜುಲೈ

ಕನ್ನಡಿಗರೆಂದರೆ ನಾಯಿಗಳಾ?

– ಸಚಿನ್

ಸಿಂಗಮ್ ಚಿತ್ರದಲ್ಲಿ ನಟರಾದ ಅಜಯ್ ದೇವಗನ್ ಹಾಗು ಪ್ರಕಾಶ್ ರೈ ರವರ ಮಧ್ಯೆ ನಡೆಯುವ ಸಂಭಾಷಣೆ ಯಲ್ಲಿ ನಾಯಿಗಳು ಎನ್ನುವ ಪದ ತೂರಿ ಬರುತ್ತೆ.

ಪ್ರಕಾಶ್ ರೈ : ಕರ್ನಾಟಕ ಬಾರ್ಡರ್ ಇಂದ ೧೦೦೦ ಜನರನ್ನು ಕರೆದು ಕೊಂಡು ಬರುತ್ತೇನೆ.
ಅಜಯ್ ದೇವಗನ್: ಆ ಸಾವಿರ ನಾಯಿಗಳಿಗೆ ನಾನೊಬ್ಬ ಸಿಂಹ ಸಾಕು ಎನ್ನುತ್ತಾನೆ. ನನ್ನ ಹಿಂದೆ ಇಡೀ ಒಂದು ಜಿಲ್ಲೆ ಇದೆ ಎಂದು ರಾಜರೋಷವಾಗಿ ಅಜಯ್ ಹೇಳುತ್ತಾನೆ.

ಇದು ನಿಜವಾಗಲೂ ಬೇಕಿತ್ತಾ? ಈ ಮೇಲಿನ ಮಾತುಗಳು ಖಂಡಿತ ಆಕ್ಷೇಪಾರ್ಹ ವಾದದ್ದು.

21
ಜುಲೈ

ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?

– ಕುಮಾರ ರೈತ

ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..?

2011ರ ಜುಲೈ 8 ರಿಂದ 17ರವರೆಗೆ ಕೇರಳದಲ್ಲಿನ ಕನ್ನಡ ಪ್ರಾಂತ್ಯಗಳಾದ ಕಾಸರಗೋಡು-ಹೊಸದುರ್ಗಗಳಲ್ಲಿ ಕ್ಷೇತ್ರ ಪ್ರವಾಸದಲ್ಲಿದ್ದೆ. ಎಂದಿನಂತೆ ಕನ್ನಡ ಭಾಷಾ ಚಳವಳಿಗಾರನ್ನು ಭೇಟಿಯಾದೆ. ‘ಕನ್ನಡಕ್ಕೆ ಭಾರಿ ಅಪಾಯ ತಂದೊಡ್ಡುವ ಕ್ರಮವನ್ನು ಕೇರಳ ಸರಕಾರ ಜರುಗಿಸಿದೆ. ಇದರಿಂದ ಕಾಸರಗೋಡಿನ ಕನ್ನಡದ ಕತ್ತು ಹಿಚುಕಿದಂತಾಗುತ್ತದೆ. ಕೆಲವೇ ವರ್ಷಗಳಲ್ಲಿ ಇಲ್ಲಿನ ಕನ್ನಡ ಸಂಸ್ಕೃತಿ ಕಣ್ಮರೆಯಾಗಲಿದೆ ಎಂಬ ಆತಂಕವನ್ನು ಮುಳ್ಳೇರಿಯಾದ ಆಯುರ್ವೇದ ವೈದ್ಯ ನರೇಶ್ ಮತ್ತು ಕಾಸರಗೋಡಿನ ಸರಕಾರಿ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ರತ್ನಕರ ಮಲ್ಲಮೂಲೆ ಅವರು ವ್ಯಕ್ತಪಡಿಸಿದರು.
19
ಜುಲೈ

ಅಸಂವಿಧಾನಿಕ ಡಬ್ಬಿಂಗ್ ನಿಷೇಧದಿಂದ ಕನ್ನಡಕ್ಕಿಲ್ಲದ ಹ್ಯಾರಿ ಪಾಟರ್..!

-ಮಹೇಶ್ ಎಂ ಆರ್

ಇತ್ತೀಚಿಗೆ ಬಂದ ಸುದ್ದಿಯಂತೆ, ಹ್ಯಾರಿ ಪಾಟರಿನ ಹೊಸ ಚಿತ್ರ ತೆರೆಗೆ ಬಂದಿದೆ. ಅಶ್ಟೆ ಅಲ್ಲ ಇದು ಬಾರತದ ಪ್ರಾದೇಶಿಕ ಬಾಶೆಗಳತ್ತ ತನ್ನ ಗಮನವನ್ನು ಹರಿಸುತ್ತ, ಚಿತ್ರವನ್ನು ಇಂಗ್ಲೀಶಿನ ಜೊತೆಗೆ ತೆಲುಗು, ತಮಿಳು, ಹಿಂದಿಯಲ್ಲೂ ಬಿಡುಗಡೆ ಮಾಡುತ್ತಿದೆ. ಇದರರ್ಥ ಆಂದ್ರಪ್ರದೇಶ, ತಮಿಳುನಾಡಿನ ಮತ್ತು ಉತ್ತರ ಬಾರತದ ಅನೇಕ ರಾಜ್ಯಗಳ ಜನರು ಹ್ಯಾರಿ ಪಾಟರನ್ನು ತಮ್ಮ ತಾಯ್ನುಡಿಯಲ್ಲೇ ನೋಡಿ ಸವಿಯಬಹುದಾಗಿದೆ. ಆದರೆ ಈ ಸೌಬಾಗ್ಯ ಕನ್ನಡ ಬಾಶೆಯನ್ನಾಡುವ, ಕನ್ನಡದಲ್ಲೇ ಮನರಂಜನೆಯನ್ನು ಬಯಸುವ ನಮಗೆ ಇಲ್ಲ.
ಕರ್ನಾಟಕದಲ್ಲಿನ ಪರಿಸ್ಥಿತಿ:
ಕರ್ನಾಟಕದಲ್ಲಿ ಇಂಗ್ಲೀಶ ಚಿತ್ರಗಳು ಇಂಗ್ಲೀಶಿನಲ್ಲೇ ಬಿಡುಗಡೆಯಾಗಬೇಕು ಎಂಬ ನಿಯಮವೇನು ಇಲ್ಲ. ಅದರರ್ಥ ಈ ಚಿತ್ರ ಕರ್ನಾಟಕದಲ್ಲಿ ಇಂಗ್ಲೀಶ ಜೊತೆಗೆ ತೆಲುಗು, ತಮಿಳು, ಹಿಂದಿಯಲ್ಲೂ ಬಿಡುಗಡೆ ಆಗಬಹುದು. ಹೀಗೆ ಕರ್ನಾಟಕದಲ್ಲಿ ಇಂಗ್ಲೀಶ ಚಿತ್ರ ಇಂಗ್ಲೀಶೇತರ ಇತರ ಬಾಶೆಗಳಲ್ಲಿ ಬಿಡುಗಡೆಯಾದರೆ ಅಲ್ಲಿಗೆ ಡಬ್ಬಿಂಗ್ ನಿಶೇದವಿದೆ ಎಂಬ ಮಾತು ಶುದ್ದ ಸುಳ್ಳಾಗುತ್ತದೆ. ಅದರರ್ಥ ಕರ್ನಾಟಕದಲ್ಲಿ ಡಬ್ಬಿಂಗ್ ಚಿತ್ರಗಳಿಗೆ ಅನುಮತಿಯಿದೆ, ಆದರೆ ಕನ್ನಡಕ್ಕೆ ಡಬ್ ಆದ ಚಿತ್ರಗಳಿಗೆ ಅನುಮತಿಯಿಲ್ಲ. ಹ್ಯಾರಿ ಪಾಟರ್ ತೆಲುಗು, ತಮಿಳು, ಹಿಂದಿಗಳಿಗೆ ಡಬ್ ಆಗಿ ಕರ್ನಾಟಕದಲ್ಲಿ ಬಿಡುಗಡೆಯಾದರೆ ಓಕೆ,, ಆದರೆ ಅದೇ ಚಿತ್ರ ಕನ್ನಡಕ್ಕೆ ಡಬ್ ಆಗಿ ಬಿಡುಗಡೆಯಾಗಲಿ ಅಂದ್ರೆ ಯಾಕೆ.? ಅಂತ ಕೇಳ್ತಾರೆ ನಮ್ಮ ಚಲನಚಿತ್ರ ಮಂಡಳಿ. ಈ ಪ್ರಶ್ನೆಯಲ್ಲಿ ಸ್ವಲ್ಪನಾದ್ರೂ ನ್ಯಾಯ ಇದೆಯಾ.!

ಅಸಂವಿಧಾನಿಕ ನಿಯಮ:
ಆಂಗ್ಲ ಬಾಶೆಯ ಬಹುಕೋಟಿ ವೆಚ್ಚದ, ಉನ್ನತ ತಂತ್ರಜ್ನಾನ, ಗ್ರಾಫಿಕ್ಸ್ ಇರುವ ಚಿತ್ರಗಳನ್ನು ಬರೀ ಇಂಗ್ಲೀಶ ಬಲ್ಲವರಶ್ಟೇ ನೋಡಬೇಕು ಎಂಬಂತಿದೆ ನಮ್ಮ ಚಿತ್ರರಂಗದ ಈಗಿನ ನಿಯಮ. ಕರ್ನಾಟಕದಲ್ಲಿ ಇಂಗ್ಲೀಶ್ ಬಾರದವರು ಈ ಚಿತ್ರ ನೋಡಬೇಕೆಂದರೆ ಅವರು ತಮಿಳು, ತೆಲುಗು, ಹಿಂದಿಗೆ ಮೊರೆ ಹೋಗಬೇಕಾದ ಪರಿಸ್ಥಿತಿಯನ್ನು ಈ ಡಬ್ಬಿಂಗ್ ನಿಶೇದದ ನಿಯಮ ತಂದೊಡ್ಡಿದೆ. ಚಿತ್ರರಂಗದ ಈ ಅಸಂವಿದಾನಿಕ ಡಬ್ಬಿಂಗ್ ನಿಶೇದದ ನಿಯಮದಿಂದ ಕೆಲವು ಒಳ್ಳೆಯ ಮನರಂಜನೆಯಿಂದ ಕರ್ನಾಟಕದ ಜನರು ವಂಚಿತರಾಗುತ್ತಿದ್ದಾರೆ. ಈ ಹ್ಯಾರಿ ಪಾಟರ್ ಚಿತ್ರ ಹೆಚ್ಚು ಮಕ್ಕಳ ಮನರಂಜನೆ ಉದ್ದೇಶಿಸಿ ಮಾಡಿರೋದ್ರಿಂದ ಡಬ್ಬಿಂಗ್ ನಿಶೇದದಿಂದಾಗಿ ಕನ್ನಡದ ಮಕ್ಕಳಿಗೆ ಮೋಸವಾಗ್ತಿದೆ ಎಂಬುದನ್ನು ಕೂಡ ಇಲ್ಲಿ ಗಮನಿಸಬೇಕು. ಪ್ರೇಕ್ಷಕನಿಗೆ ನೀನು ಇದನ್ನೇ ನೋಡು ಅಥವಾ ಇದೇ ಬಾಶೆಯಲ್ಲಿ ನೋಡು ಎಂದು ಡಬ್ಬಿಂಗ್ ನಿಶೇದ ಎಂಬ ಅಸ್ತ್ರದ ಮೂಲಕ ಒತ್ತಾಯಿಸುವುದು ಸಂವಿದಾನ ವಿರೋದಿಯಾದ ನಡೆ. ಜಗತ್ತಿನ ಎಲ್ಲ ಒಳ್ಳೆಯ ಮನರಂಜನೆಯನ್ನು ತನ್ನ ನುಡಿಯಲ್ಲಿ ನೋಡುವ ಹಕ್ಕು ಅವನಿಗಿದೆ. ಡಬ್ಬಿಂಗ್ ನಿಶೇದದಿಂದ ಈ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಡಬ್ಬಿಂಗ್ ಬರಲಿ. ಒಳ್ಳೆಯ ಮನರಂಜನೆ ಅನ್ನೋದು ನಗರ ಪ್ರದೇಶಗಳ ಅಥವಾ ಇಂಗ್ಲೀಶ್ ಬಲ್ಲ ಕೆಲವ್ರಿಗೆ ಮಾತ್ರ ಸೀಮಿತ ಆಗದೇ ರಾಜ್ಯದ ಎಲ್ಲರಿಗೂ ಅವರು ಆಡುವ ನುಡಿಯಲ್ಲೇ ಅದುಸಿಗುವಂತಾಗಲಿ. ಕರ್ನಾಟಕದಲ್ಲಿ ಎಲ್ಲರಿಗೂ ಕನ್ನಡದಲ್ಲಿ ಮನರಂಜನೆ ಸಿಗುತ್ತದೆ ಎಂಬ ಉದ್ದೇಶವನ್ನು ಡಬ್ಬಿಂಗ್ ಹೊಂದಿದೆ ಎಂಬ ಸಾಮಾನ್ಯ ತಿಳುವಳಿಕೆಯನ್ನು ಡಬ್ಬಿಂಗ್ ವಿರೋದಿಗಳು ಅರಿಯಬೇಕಿದೆ.!

***************
15
ಜುಲೈ

ಕನ್ನಡಪ್ರೇಮದ ಕುರಿತು ಒಂಚೂರು…

– ರಂಜಿತ್ ಅಡಿಗ

ನಾನು ಕನ್ನಡಿಗ ಅಂತ ಅನ್ನುವಾಗ ನನಗೆ ಚೂರೂ ಹೆಮ್ಮೆಯೇ ಆಗುತ್ತಿದ್ದಿರಲಿಲ್ಲ.

ಹೌದು. ಇಸ್ಕೂಲು, ಹೈಸ್ಕೂಲು ಓದುವಾಗಲೆಲ್ಲ ’ನಾನು ಕನ್ನಡಿಗ’ ಅನ್ನುವುದರಲ್ಲಿ ಅಂತಹ ವಿಶೇಷಗಳೇನೂ ಇರಲಿಲ್ಲ. ಸುತ್ತಮುತ್ತಲೂ ಮುತ್ತಿಕೊಂಡಿದ್ದ ಗೆಳೆಯರೆಲ್ಲರೂ ಕನ್ನಡಿಗರೇ ಆಗಿದ್ದರಿಂದ ಅದೊಂದು ಸ್ಪೆಷಲ್ ಅನ್ನುವ ಭಾವ ಮೂಡುತ್ತಿರಲಿಲ್ಲ. ಕಾಲೇಜುಪರ್ವದಲ್ಲಿ ಕನ್ನಡಿಗ ಆಗಿರುವುದು ಕೊಂಚ ಸಂಕಟಗಳಿಗೆ ಸಿಕ್ಕಿಸಿತ್ತಾದರೂ ಅದಕ್ಕೆ ಕಾರಣ ’ನಾ ಕನ್ನಡದವ’ ಆಗಿರುವುದಲ್ಲ, ’ಇಂಗ್ಲೀಷ್ ಅರಿವು ಕಡಿಮೆ ಇರುವುದು’ ಎಂಬ ಜ್ಞಾನೋದಯ ಆದಮೇಲೆ ಆ ಕುರಿತು ಆಲೋಚನೆಯೂ ಬರಲಿಲ್ಲ.

ಆದರೆ ಕರುನಾಡ ಕೋಟೆ ದಾಟಿದ ಮೇಲೆ ಕನ್ನಡ ಎಂಬ ಭಾಷೆ ಎಷ್ಟು ಸಿಹಿ ಅನ್ನುವುದು ಗೋಚರವಾಗುತ್ತಿತ್ತು. ಇದೊಂಥರ ಮನೆಯಲ್ಲಿದ್ದಾಗ ಹಠ, ಗೊಂದಲ ಮಾಡುತ್ತಿದ್ದು ನಂತರ ಅಮ್ಮನ ಮಹತ್ವ ಅರಿವಾಗುವ ಹಾಸ್ಟೆಲ್ ಹುಡುಗನ ರೀತಿ. ಸಿಂಗಾಪೂರ್ ಗೆ ಬಂದ ಮೇಲೆ ನನ್ನ ಜತೆ ಕೆಲಸ ಮಾಡುವವರಿಗೆ ನನ್ನ ರಾಜ್ಯದ ಕುರಿತು, ಭಾಷೆಯ ಕುರಿತು ವಿವರಿಸುವಾಗ ಅದೆಂತದೋ ಪದಗಳಲ್ಲಿ ಸಿಲುಕದ ಸಂತಸ. ಅವರಂತೂ ಅಮೇರಿಕದ ವೈಭವವನ್ನೂ ಈ ರೀತಿಯ ವಿವರಣೆಯ ಸಹಿತ ಕೇಳಿರಲಿಕ್ಕಿಲ್ಲ, ಹಾಗೆ ಇರುತ್ತಿತ್ತು. ಇಲ್ಲಿಯ ಹೆಚ್ಚಿನವರಿಗೆ ಭಾರತೀಯರೆಂದರೆ ತಮಿಳರು ಅನ್ನುವ ಭಾವ ಇರುವುದರಿಂದ, ನನ್ನ ಭಾರತೀಯತೆ ಅರಿವಾದ ಕೂಡಲೇ, ’ತಮಿಳಾ?’ ಎನ್ನುವ ಪ್ರಶ್ನೆ ಕೇಳುತ್ತಾರೆ. “ಅಲ್ಲ, ನಾನು ಕನ್ನಡಿಗ’ ಎಂಬ ಉತ್ತರಕ್ಕೆ ಪೂರ ಹೆಮ್ಮೆಯ ಲೇಪ. ಅಲ್ಲೇ ಹುಟ್ಟಿ, ಅಲ್ಲೇ ಬೆಳೆದಿದ್ದರೂ ಯಾವಾಗಲೂ ಈ ವಾಕ್ಯ ಆಡಿದ ಉದಾಹರಣೆ ನೆನಪಿಲ್ಲ. ಮತ್ತಷ್ಟು ಓದು »

13
ಜುಲೈ

ಫೀವರ್ ಗೆ ಹಿಂದಿ ಜ್ವರ – ಎಚ್ಚೆತ್ತುಕೊಳ್ಳಲು ಸಕಾಲ !

-ವಸಂತ್ ಶೆಟ್ಟಿ

ಎಂದಿನಂತೆ ಕಚೇರಿಗೆ ಹೋಗ್ತಾ ಎಫ್.ಎಮ್ ಹಾಕಿದ್ರೆ ಅವಕ್ಕಾದೆ. 104% ಬೊಂಬಾಟ್ ಕನ್ನಡ ಹಾಡುಗಳು ಅಂತೆಲ್ಲ ನಮ್ಮ ಮೆಚ್ಚುಗೆ ಗಳಿಸಿದ್ದ ಫೀವರ್ ಎಫ್.ಎಮ್ ಕನ್ನಡ ಹಾಡಿಗೆ ಸೋಡಾ ಚೀಟಿ ಕೊಟ್ಟು ಕೇವಲ ಹಿಂದಿ ಹಾಡುಗಳನ್ನು ಹಾಕೋಕೆ ಶುರು ಮಾಡಿದ್ರು. ಒಂದ್ ಸಲಿ ಹಾಕಿರೋ ಸ್ಟೇಶನ್ ಸರಿಗಿದೆಯಾ ಅಂತ ನೋಡ್ಕೊಂಡೆ. ಸರಿಯಾಗೇ ಇದೆ, ಆದರೆ ಬೊಂಬಾಟ್ ಕನ್ನಡ ವಾಹಿನಿಯಲ್ಲಿ ಹಿಂದಿ ದೇವತೆಯನ್ನು ಪ್ರತಿಷ್ಟಾಪಿಸಿಯಾಗಿತ್ತು. ಸರಿ ಯಾವುದಕ್ಕೂ ಒಂದ್ ಸಲಿ ಫೀವರ್ ಎಫ್.ಎಮ್ ಅನ್ನೇ ಸಂಪರ್ಕಿಸಿ ಯಾಕ್ರಪ್ಪ ಹೀಗೆ ಅಂತ ಕೇಳೊಣ ಅಂತ ಅವರ ಫೇಸ್ ಬುಕ್ ಪುಟದಲ್ಲಿ ಒಬ್ಬ ಕೇಳುಗನಾಗಿ ವಿಚಾರಿಸಿದ್ರೆ ಸಿಕ್ಕ ಉತ್ತರ: “We have changed the sound of the station”, “Music has no language” “Hindi is our national language” ಅನ್ನೋ ಹಸಿ ಸುಳ್ಳಿನ ಕಾಗಕ್ಕ-ಗುಬ್ಬಕ್ಕನ ಕತೆಗಳು. ಇದನ್ನು ಪ್ರತಿಭಟಿಸಿ ಗ್ರಾಹಕರಾಗಿ ನಮ್ಮ ಆಯ್ಕೆ ಕನ್ನಡ, ಅದನ್ನು ಕೊಡದ ವಾಹಿನಿಗೆ ಬೆಂಗಳೂರಿನ ಮಾರುಕಟ್ಟೆಯೇ ಬುದ್ದಿ ಕಲಿಸುತ್ತೆ ಅಂತ ಹೇಳಿದೆ. ಅದಿರಲಿ, ಫೀವರ್ ಎಫ್.ಎಮ್ ನದ್ದು ಒಂದು ಉದಾಹರಣೆಯಷ್ಟೇ. ಇವತ್ತು ನಮ್ಮ ನಾಡಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಈ ನೆಲದ ನುಡಿಯನ್ನು ಬದಿಗೊತ್ತಿ ಪ್ರತಿ ಹಂತದಲ್ಲೂ ವಲಸೆ ಬಂದ ಯಾರೋ ನಾಲ್ಕು ಜನರಿಗಾಗಿ ವ್ಯವಸ್ಥೆಯೆಲ್ಲ ಕಟ್ಟಬೇಕು, ವ್ಯವಸ್ಥಯೆಲ್ಲ ಇರಬೇಕು ಅನ್ನುವಂತೆ ವರ್ತಿಸುವ ವಲಸಿಗರಿಗೆ, ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಈ ವ್ಯವಸ್ಥೆಗೆ ಏನೆನ್ನಬೇಕು. ಯಾಕೆ ಹಾಗ್ ಹೇಳಿದೆ ಅನ್ನೋದನ್ನ ಒಂದ್ ನಾಲ್ಕು ಉದಾಹರಣೆ ಜೊತೆ ಹೇಳ್ತಿನಿ.

  • ಬೆಂಗಳೂರಿನ ಟ್ರಾಫಿಕ್ ಪೋಲಿಸರಿಗೆ (ಬಿಟಿಪಿ) ಹಿಂದಿ/ಇಂಗ್ಲಿಷ್ ಬರಲ್ಲ. ಅದರಿಂದ ಎಷ್ಟು ತೊಂದರೆಯಾಯ್ತು ಗೊತ್ತಾ ಅಂತ ಒಂದಿಷ್ಟು ಜನ ಬಿಟಿಪಿಯ ಫೇಸ್ ಬುಕ್ ತಾಣದಲ್ಲಿ ಹೋಗಿ ಗೋಳು ತೋಡಿಕೊಳ್ಳುತ್ತಾರೆ. ಯಾರಪ್ಪ ಈ ನಾಲ್ಕು ಜನರು ಅಂದ್ರೆ ಅದೇ ಅನ್ನ ಅರಸಿ ಬೆಂಗಳೂರಿಗೆ ವಲಸೆ ಬಂದ ಮಹನೀಯರು. ವಲಸೆ ಬಂದ ನಾಡಿನ ವ್ಯವಸ್ಥೆ ತನಗೆ ಅನುಕೂಲವಾಗುವಂತಿರಬೇಕು, ತನಗೆ ಚೂರೇ ಚೂರು ಕಷ್ಟವಾದರೂ ಅದನ್ನು ಸಹಿಸಲು ಆಗದು ಅನ್ನುವ ಈ ಜನರ ಮನಸ್ಥಿತಿ ಎಂತದ್ದು? ವಲಸಿಗರಿಗಾಗಿಯೇ ನಾಡಿನ ಎಲ್ಲ ವ್ಯವಸ್ಥೆಗಳನ್ನು ಜಗತ್ತಿನಲ್ಲಿ ಎಲ್ಲಿಯಾದರೂ ಕಟ್ಟಿದ್ದಾರಾ?

ಮತ್ತಷ್ಟು ಓದು »

7
ಜುಲೈ

“ತಾವು ಕುಳಿತ ಮರದ ಕೊಂಬೆಯನ್ನು ತಾವೇ ಕಡಿದು ಕೊಳ್ಳುವ ನಮ್ಮ ಸ್ಯಾಂಡಲ್ ವುಡ್ ಮಂದಿ”

-ರತೀಶ

ನಮ್ಮ ಕನ್ನಡ ಚಿತ್ರರಂಗಕ್ಕೆ ನೇರ ಅಥವಾ ದೂರ ಸಂಪರ್ಕ ಹೊಂದಿರುವ  ಯಾರದರನ್ನು ಒಬ್ಬರನ್ನು ‘ನಮ್ಮ ಸ್ಯಾಂಡಲ್ ವುಡ್ ಸಮಸ್ಯೆ ಏನು?’ ಎಂದು ಕೇಳಿ, ‘ಪರಭಾಷೆ ಚಿತ್ರಗಳ ಧಾಳಿ, ಕನ್ನಡಿಗರು ಚಿತ್ರಮಂದಿರಕ್ಕೆ ಬರವುದಿಲ್ಲ, ಕನ್ನಡ ಚಿತ್ರಗಳನ್ನು ನೋಡುವುದಿಲ್ಲ….’ ಎಂದೆಲ್ಲ ಉದ್ದುದ್ದ ಭಾಷಣ ಬಿಗಿಯುತ್ತಾರೆ. ಅವರು ಹೇಳುವ ಮಾತು ಸರಿಯಾಗಿಯೇ ಇರಬಹುದು ಹಾಗೆಯೇ ಅದಕ್ಕೆ ಕಾರಣಗಳು ಹಲವಿರಬಹುದು ಆದರೆ ಒಬ್ಬ ಸಾಮಾನ್ಯ ಪ್ರೇಕ್ಷಕನಾಗಿ ನನಗೆ ತೋಚುವುದು ಏನೆಂದರೆ ಈ ಎಲ್ಲ ಸಮಸ್ಯೆಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಚಿತ್ರರಂಗದವರೇ ಹೊಣೆ! ಅದು ಪ್ರತ್ಯಕ್ಷವಾಗಿರಬಹುದು ಅಥವಾ ಪರೋಕ್ಷವಾಗಿರಬಹುದು.

ನಿನ್ನೆ ನಾನು ಸುವರ್ಣ ಟಿವಿಯಲ್ಲಿ, ಸುವರ್ಣ ಫಿಲಂ ಅವಾರ್ಡ್ಸ್ ಕಾರ್ಯಕ್ರಮ ವೀಕ್ಷಿಸುತ್ತಿದ್ದೆ, ಬಹಳ ಅಪರೂಪಕ್ಕೆ ಅನ್ನುವಂತೆ ಕನ್ನಡಿಗರಿಗೆ ಇಂಥಹ ಕಾರ್ಯಕ್ರಮಗಳನ್ನು ನೋಡಲು ಅವಕಾಶ ಸಿಗುವುದು. ಜೊತೆಗೆ ಕನ್ನಡ ಚಿತ್ರರಂಗದವರಿಗೆ ಇದು ಅತಿ ಮುಖ್ಯ ಹಾಗು ಅತಿ ವಿರಳವಾಗಿ ದೊರಕುವಂತಹ ಅವಕಾಶ, ಇಲ್ಲಿ ಕನ್ನಡ ಚಿತ್ರರಂಗದ ವಿಶೇಷಗಳನ್ನು, ಸಾಧನೆಗಳನ್ನು, ಮುಂದಿನ ಗುರಿಗಳನ್ನು ಹಾಗು ಚಿತ್ರರಂಗದ ಹಿರಿಮೆಯನ್ನು ಜನರಿಗೆ ಹತ್ತಿರವಾಗುವಂತೆ ತಿಳಿಸುವ ಬಹುದಾದಂಥಹ ಬಹು ದೊಡ್ಡ  ವೇದಿಕೆ ನಿರ್ಮಾಣವಾಗಿತ್ತು, ಆದರೆ ನಮ್ಮವರು ಅದನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲವಾಗಿದ್ದು ಬೇಸರದ ಸಂಗತಿ. ಮತ್ತಷ್ಟು ಓದು »

5
ಜುಲೈ

ಪರಭಾಷೆಯ ಚಿತ್ರಗಳಿಗೆ ಮಾರುಕಟ್ಟೆ ನಿರ್ಮಿಸಿ ಕೊಡುತ್ತಿರುವವರ್ಯಾರು?

– ಅರುಣ್ ಜಾವಗಲ್

ಸುವರ್ಣ ಕನ್ನಡ ಪಿಲಂ ಅವಾರ್ಡ್ ಕಾರ್ಯಕ್ರಮ ಕಳೆದ ವಾರ ಟಿವಿಯಲ್ಲಿ ನೋಡಿದೆ. ನಿಜಕ್ಕು ಅದ್ಬುತವಾದ ಕಾರ್ಯಕ್ರಮ, ಪರಬಾಶೆಗಳಲ್ಲಿ ಮಾತ್ರ ನಡೆಯುತ್ತಿದ್ದ ಅದ್ದೂರಿ ಕಾರ್ಯಕ್ರಮಗಳು, ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲು ನಡೆಯಲು ಪ್ರಾರಂಬವಾಗಿರೋದು ನಿಜಕ್ಕೂ ಸಂತೋಶಕರ. ಈ ರೀತಿಯ ಕಾರ್ಯಕ್ರಮಗಳು, ಕನ್ನಡ ಚಿತ್ರರಂಗ, ತಾವೇನು ಯಾರಿಗೂ ಕಡಿಮೆಯಿಲ್ಲ ಅನ್ನೊದನ್ನ ಎತ್ತಿಹಿಡಿದಿದೆ….
ಈ ರೀತಿಯ ಕಾರ್ಯಕ್ರಮಗಳನ್ನ ಬಳಸಿಕೊಂಡು ಚಿತ್ರರಂಗದ ಮಾರುಕಟ್ಟೆಯನ್ನು ವಿಸ್ತಾರ ಮಾಡಿಕೊಳ್ಳಬಹುದು. ಈ ಕೆಲಸವನ್ನು ಬೇರೆ ಬಾಶೆಯ ಚಿತ್ರರಂಗದರು ತುಂಬ ಚೆನ್ನಾಗಿಯೇ ಮಾಡಿಕೊಂಡು ಬಂದಿದ್ದಾರೆ, ಆದರೆ ದುರದ್ರುಶ್ಟ ಅಂದ್ರೆ ಕನ್ನಡ ಚಿತ್ರರಂಗದ ಕಾರ್ಯಕ್ರಮಗಳಲ್ಲಿ ಪರಬಾಶೆಯ ಹಾಡು/ಕುಣಿತದೊಂದಿಗೆ ಪರಬಾಶೆಯ ಚಿತ್ರಗಳಿಗೆ ನಮ್ಮ ರಾಜ್ಯದಲ್ಲಿ ಮಾರುಕಟ್ಟೆ ನಿರ್ಮಿಸೋಕ್ಕೆ ಹೊರಟಿರೋದು ಯಾಕೆ ಅನ್ನೊದು ಗೊತ್ತಾಗುತ್ತಿಲ್ಲ.
ಕಾರ್ಯಕ್ರಮಗಳಲ್ಲಿ- ಕನ್ನಡಿಗರು ಕನ್ನಡ ಸಿನೆಮಾಗಳನ್ನ ನೋಡಿ ಉತ್ತೇಜನ ಕೊಡಬೇಕು….., ಸಿನೆಮಾ ನೋಡೊ ಹವ್ಯಾಸ ಹೊರ ರಾಜ್ಯದಲ್ಲಿರುವಶ್ಟು ನಮ್ಮಲ್ಲಿಲ್ಲ….., ಕನ್ನಡ ಸಿನೆಮಾ ನೋಡೊಕ್ಕೆ ಜನರೇ ಇಲ್ಲ…ಸಿನೆಮಾವನ್ನ ತಿಯೇಟರಿನಲ್ಲೇ ನೋಡಿ….ಹೀಗೆ ಬಾಶಣಗಳನ್ನ ಮಾಡಿ.. ಅದೇ ಕಾರ್ಯಕ್ರಮದಲ್ಲಿ ಪರಬಾಶೆಯ ಹಾಡು/ಕುಣಿತ ನಡೆಸಿದರೆ ಕನ್ನಡಿಗರ ಪಾಡು ಏನಾಗಬಾರದು. ಗಂಟೆಗಟ್ಟಳೆ ಬಾಶಣ ಮಾಡಿ ಚಿತ್ರರಂಗದ ಎಲ್ಲಾ ತೊಡುಕು/ತೊಂದರೆಗಳಿಗೆ ಕನ್ನಡ ಚಿತ್ರ ನೋಡುಗರನ್ನೇ ಹೆಚ್ಚು ಗುರಿಯನ್ನಾಗಿಸಿ, ಪರಬಾಶೆಯ ಚಿತ್ರಗಳಿಗೆ ಕೈಮುಗಿಯುವ ಜನರಿಗೆ ನೈತಿಕತೆಯ ಬಗ್ಗೆ ಅರಿವಿದೆಯೇ?

4
ಜುಲೈ

ದಿಲ್ಲಿಯ ’ಹುಳಿ ದ್ರಾಕ್ಷೆ’ ಹಿಡಿಯಲು ಹೋಗಿ

-ಕಾಲಂ ೯

ದಿಲ್ಲಿ ಕನ್ನಡದ ಪತ್ರಕರ್ತರಿಗೆ ದೂರ. 3000 ಕಿ.ಮೀ. ಅಷ್ಟೇ ಅಲ್ಲ. ಅದರಾಚೆಗೂ ದೂರ. ಕನ್ನಡದ ಪತ್ರಕರ್ತರು ದಿಲ್ಲಿಯಲ್ಲಿ ಹೆಜ್ಜೆ ಗುರುತು ಮೂಡಿಸುವುದು ಸುಲಭದ ಮಾತಲ್ಲ. ಏರು ಬಿಸಿಲು ಅಥವಾ ತೀವ್ರ ಚಳಿಯಲ್ಲಿ ನಿರಂತರ ಆಲೂ ಪಲ್ಯವನ್ನೂ ಅರಗಿಸಿಕೊಳ್ಳುತ್ತಲೇ ಇರಬೇಕು.

ದಿಲ್ಲಿಯ ಆಡುಭಾಷೆ ಹಿಂದಿ – ಉರ್ದು ಮಾತ್ರ. ಇಂಗ್ಲೀಷು ಅಷ್ಟಕ್ಕಷ್ಟೆ. ಇನ್ನು ಕನ್ನಡದ ಕಥೆ? ಪತ್ರಿಕಾರಂಗವೇನು? ಸುಪ್ರೀಂ ಕೋರ್ಟು, ಪಾರ್ಲಿಮೆಂಟು, ಐಎ ಎಸ್ ಲಾಬಿಯಲ್ಲಿಯೂ ಕನ್ನಡದ ಧ್ವನಿ ಕ್ಷೀಣವೇ.

ಕನ್ನಡದ ಪತ್ರಿಕೋದ್ಯಮಕ್ಕೆ ‘ಕೊಂಬು-ಕಹಳೆ’ ಎಲ್ಲ ಆದವರೂ ದಿಲ್ಲಿಯಲ್ಲಿ ಏನೂ ಅಲ್ಲ.

ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ಅಂದರೆ ಅದು ಅಡ್ವಾಣಿಯದ್ದೋ – ಪ್ರಕಾಶ್ ಕಾರಟರದ್ದೋ – ಚಿದಂಬರರದ್ದೋ – ಯಾವುದೇ ರಾಷ್ಟ್ರೀಯ ನಾಯಕರದ್ದಾಗಲಿ. ಅಂದೊಂದು ಮದುವೆ ಮನೆಯ ಬಾಬತ್ತು. ಬರೋಬ್ಬರಿ 600 ಜನ. ಇಂಗ್ಲೀಷ್ ಚಾನೆಲ್ ಗಳು, ಹಿಂದಿ ಚಾನೆಲ್ ಗಳು, ರಾಷ್ಟ್ರೀಯ ಪತ್ರಿಕೆಗಳು, ಅವರವರ ಕ್ಯಾಮರಾಮೆನ್ ಗಳು, ಮೈಕ್‍ಮೆನ್ ಗಳು, ಅದರಾಚೆಗೆ ಎಲ್ಲೋ ಕಳೆದು ಹೋಗುವ ಕನ್ನಡದ ಪತ್ರಕರ್ತ. ಪ್ರಶ್ನೆ ಕೇಳುವುದು, ಉತ್ತರ ಬರೆಯುವುದು ದೂರದ ಮಾತು. ಎಷ್ಟು ದೂರವೆಂದರೆ ದೆಲ್ಲಿಯ ನಮ್ಮ ಧ್ವನಿಗಳು ಆ ಬಾಬತ್ತಿನ ತನಕ ಹೋಗುವುದೇ ಇಲ್ಲ. ದಿಲ್ಲಿಯ ತಮ್ಮ ಮನೆಯಲ್ಲಿಯೇ ಕೂತು NDTVಯದೋ ಆಜ್ ತಕ್ ನದೋ Direct Rellay ನೋಡ್ತಾ ನೋಡ್ತಾನೇ ಇವರು ಸುದ್ದಿ ಕೊಟ್ಟು ಕೈತೊಳೆದುಕೊಳ್ಳುತ್ತಾರೆ. ಮತ್ತಷ್ಟು ಓದು »

4
ಜುಲೈ

ಜನರೆಂದರೆ ಯಾರ್ ಯಾರು ಕಾಗೇರಿಯವರೇ?

– ಬನವಾಸಿ ಬಳಗ

ಇವತ್ತಿನ (೦೩.೦೭.೨೦೧೧ರ) ಕನ್ನಡಪ್ರಭ ದಿನಪತ್ರಿಕೆಯ ಒಂಬತ್ತನೇ ಪುಟದಲ್ಲಿ ಮಾನ್ಯ ಶಿಕ್ಷಣಮಂತ್ರಿಗಳಾದ ಶ್ರೀ ವಿಶ್ವೇಶ್ವರಹೆಗ್ಡೆ ಕಾಗೇರಿಯವರ “ಬುಲೆಟ್ ಸಂದರ್ಶನ“ವೊಂದು ಪ್ರಕಟವಾಗಿದೆ. ಸರ್ಕಾರ ಇಂಗ್ಲೀಶ್ ಮಾಧ್ಯಮ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆ ಆರಂಭಿಸಿರುವ ಹಿನ್ನೆಲೆಯಲ್ಲಿ ಇದು ಕುತೂಹಲಕರವಾಗಿದ್ದು, ಒಂದು ಥರ ಸರ್ಕಾರದ ಮುಂದಿನ ನಡೆಯ ದಿಕ್ಸೂಚಿಯೂ ಆಗಿದೆ. ಇಡೀ ಸಂದರ್ಶನದ ಪ್ರಮುಖ ಮಾತುಗಳು ಇಂತಿವೆ.

ಸಾಹಿತಿಗಳಷ್ಟೇ… ಜನತೆಯಲ್ಲ!

ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯಲು ತಾವು ಸಿದ್ಧ ಎಂಬುದನ್ನು ಮಂತ್ರಿಗಳು ಸಾಬೀತು ಮಾಡುತ್ತಿರುವಂತೆ ಇವರ ಮಾತುಗಳಿವೆ. ಇಂಗ್ಲೀಶ್ ಮಾಧ್ಯಮ ಶಾಲೆಗಳಿಗೆ ಸಾಹಿತಿಗಳು ಮಾತ್ರಾ ವಿರೋಧ ತೋರಿಸಿದ್ದಾರೆ, ಇವರಷ್ಟೇ ನಾಡಿನ ಜನತೆಯಲ್ಲ… ಹಳ್ಳಿಗಾಡಿನ ಜನರೂ ಕೂಡಾ ಅವರ ಅಭಿಪ್ರಾಯ ಹೇಳಲಿ… ಇತ್ಯಾದಿಯಾಗಿ ಮಂತ್ರಿಗಳು ಮಾತಾಡಿದ್ದಾರೆ. ಇದಲ್ಲದೆ ಮಾಧ್ಯಮಗಳಿಗೆ ಜನರ ಅಭಿಪ್ರಾಯ ನಿರೂಪಿಸುವ ಹೊಣೆಗಾರಿಕೆಯನ್ನೂ ವಹಿಸಿದ್ದಾರೆ. ಈ ಪ್ರಯತ್ನವು ಸಾಹಿತಿಗಳ ಬಾಯಿ ಮುಚ್ಚಿಸುವ “ನಿಮ್ಮ ಮಕ್ಕಳು ಇಂಗ್ಲೀಶ್ ಮಾಧ್ಯಮದಲ್ಲಿ ಓದಬಹುದು, ಬಡವರ ಮಕ್ಕಳು ಓದಬಾರದಾ?” ಎಂಬಂತಹ ಮತ್ತೊಂದು ಅಸ್ತ್ರವಾಗಿದೆ. ಇರಲಿ… ಕಾಗೇರಿಯವರು ಆಡಿರುವ ಮಾತುಗಳತ್ತ ನೋಡೋಣ.

ಮತ್ತಷ್ಟು ಓದು »