ವಿಷಯದ ವಿವರಗಳಿಗೆ ದಾಟಿರಿ

Posts from the ‘ಕರ್ನಾಟಕ,ಕನ್ನಡ’ Category

21
ಜೂನ್

“ಪ.ಗೋ. ಕಾಲಂ” ಜಗತ್ತಿನಲ್ಲಿ ಪತ್ರಕರ್ತನಿಗೊಂದು “ಸರ್ಟಿಫಿಕೇಟ್”

-ರವಿ ಮುರ್ನಾಡು

  ಪ.ಗೋ. ಜಗತ್ತಿನ ಪದಗಳ  ಹಂದರದಲ್ಲಿ ಒಬ್ಬ ” ವಿಲನ್‍” ಸೃಷ್ಠಿಯಾಗುತ್ತಾನೆ . ಅವನನ್ನು ಬುದ್ಧಿವಂತ ಹುಚ್ಚ ಅನ್ನುತ್ತೇವೆ. ಅದು ಕೊಡಿಯಾಲ್‍ ಬೈಲ್‍ ನವಭಾರತ ಪತ್ರಿಕೆಯಿದ್ದಾಗ ಪತ್ರಿಕಾ ಪ್ರಸರಣಾ ವಿಭಾಗದ ಮುಖ್ಯಸ್ಥ ಕಾಮತ್‍. ಅದಕ್ಕೆ ದಿವಂಗತ ಪ.ಗೋ.ರವರು “ಹಿತ್ತಾಳೆ ದೂರುಗಂಟೆ” ಅಂತ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ತಮ್ಮ ” ವಿಚಿತ್ರ ಸೃಷ್ಠಿಯ ಲೋಕದಲ್ಲಿ ಮತ್ತು ಅಂಕಣ ಬರಹಗಳು” ಸಂಕಲನದಲ್ಲಿ  ಹಿತ್ತಾಳೆ ದೂರುಗಂಟೆಯ ಪಾತ್ರಧಾರಿ  ವಿಲಕ್ಷಣವಾಗಿ ಎದ್ದು ನಿಲ್ಲುವಂತದ್ದು. ಹೀಗೂ ಉಂಟೆ…?! ಅನ್ನುವ ಒಂದು ಪ್ರಶ್ನೆ. ಪತ್ರಿಕಾ ಕಾರ್ಯಾಲಯದಲ್ಲಿ ಅಚಾನಕ್ಕಾಗಿ ಸೃಷ್ಠಿಯಾಗುತ್ತವೆ, ಇಲ್ಲದಿದ್ದರೆ ಸೃಷ್ಠಿಸುತ್ತಾರೆ . ಎಲ್ಲಾ  ಖಾಸಾಗಿ ಸಂಸ್ಥೆಯಲ್ಲಿ  ಇಂತಹ “ಶಕುನಿ”ಗೊಂದು ಹುದ್ದೆ ಉಂಟೇ ಉಂಟು. ಪ.ಗೋ.ರವರು ಮೌನವಾಗಿ ನವಭಾರತ ಕಚೇರಿ ಬಿಟ್ಟು ಹೋದಾಗ, ಕಚೇರಿಯ ಬಾಗಿಲಿಗೆ ತುಕ್ಕು ಹಿಡಿಯಬಾರದಿತ್ತೋ ಆನ್ನಿಸಿತು. ಬದುಕಿನ ಗೋಡೆ ಬಿರುಕಿಟ್ಟ ಸನ್ನಿವೇಶಕ್ಕೆ, ಪತ್ರಿಕಾ ಬದುಕಿಗೆ ಛೀಮಾರಿ ಹಾಕುವಷ್ಟು ವ್ಯಥೆಯಾಗುವಂತದ್ದು.

ಇವತ್ತಿಗೂ ಮಾತಾಡುತ್ತಿದೆ…. ಮನುಷ್ಯ ಬದುಕಿಗೆ  ಸವಾಲು ಹಾಕಿದ ಮಾತು.  “ನಾನು ಪತ್ರಿಕೆ ಹುಟ್ಟು ಹಾಕುವ ಕನಸು ಕಂಡಿದ್ದು ತಪ್ಪಾಯಿತು..!” ಅಂತ. ಬದುಕಿನ ಸ್ಥಿತ್ಯಂತರದಲ್ಲಿ ಒಮ್ಮೊಮ್ಮೆ ಕನಸುಗಳು ಈಟಿ ಇರಿದಂತೆ ಅಣಕಿಸುತ್ತವೆ. ಮಂಗಳೂರಿನ ಕಡಲ ಮರಳ ಕಣಗಳಿಗೆ ಇದರ ಪರಿಚಯ ಉಂಟು. ಅಲೆಗಳು ದಡಕ್ಕೆ ಬಡಿದು ಎಚ್ಚರಿಸಿ ಹೋಗುತ್ತಿವೆ… ಆ ಒಂದು ಜಗತ್ತಿನ ವಿಸ್ತಾರದಲ್ಲಿ ಜೀವನದ ಸಾರ್ಥಕ್ಯಕ್ಕೆ  ಮನಸ್ಸುಗಳು ತೆರೆದುಕೊಳ್ಳಲಿಲ್ಲ . ಪಡ್ಯಾನ ಗೋಪಾಲಕೃಷ್ಣರ  ರೆಕ್ಕೆ ಮುರಿದ ಮಾತುಗಳ ಹಕ್ಕಿಯ ಕಲರವ ಕೇಳಿಸುತ್ತಲೇ ಇದೆ…. ಕನಸುಗಳ ಮೂಟೆ ಹೊತ್ತ ದೋಣಿ ಕಡಲ ಮಧ್ಯದಲ್ಲಿ ಈಜುತ್ತಿದೆ….! ಮತ್ತಷ್ಟು ಓದು »

21
ಜೂನ್

ಜಾತಿ ಎಂಬ ಜಾಡ ಹಿಡಿದು…

– ವಸಂತ್ ಕೋಡಿಹಳ್ಳೀ ಲಕ್ಕೂರು

ಮನುಷ್ಯ ಹುಟ್ಟುತ್ತಾ ಹುಟ್ಟುತ್ತಾ ಸ್ವಾತಂತ್ರ ಜೀವಿ!, ಅವನು ಬೆಳೆದಂತೆಲ್ಲ ಸಮಾಜದ ಕಟ್ಟುಪಾಡುಗಳು ಅವನ ಸ್ವಾತಂತ್ರವನ್ನು ಕಸಿದುಕೊಳ್ಳುತ್ತಾ ಬರುತ್ತದೆ. ಕರ್ನಾಟಕದ ಶ್ರೇಷ್ಟ ಕವಿ ಕುಂವೆಂಪುರವರು ತನ್ನ ವಿಶ್ವಮಾನವ ಸಂದೇಶದಲ್ಲಿ ಹೀಗೆ ಹೇಳುತ್ತಾರೆ. “ಪ್ರತಿಯೊಂದು ಮಗುವೂ ಹುಟ್ಟುತ್ತಲೆ ವಿಶ್ವಮಾನವ. ಬೆಳೆದಂತೆ ನಾವು ಅದನ್ನು ‘ಅಲ್ಪಮಾನವ’ನನ್ನಾಗಿ ಮಾಡುತ್ತೇವೆ. ಎಂದರೆ ಹುಟ್ಟುವಾಗ ಎಲ್ಲರೂ ವಿಶ್ವಮಾನವರಾಗಿಯೇ ಹುಟ್ಟುತ್ತಾರೆ. ಬೆಳೆದಂತೆ ನಾವು ಅವರನ್ನು ಜಾತಿ, ಧರ್ಮ, ಬಾಷೆ, ದೇಶ, ಜನಾಂಗ ಎಂಬಲ್ಲ ಕಟ್ಟು ಪಾಡುಗಳಿಂದ ಬಂಧಿಸುತ್ತೇವೆ. ಬಹುಶಃ ಅವನು ಹುಟ್ಟಿದ ಸಮಜ ಅವನನ್ನು ಅಲ್ಪನನ್ನಾಗಿಸುತ್ತದೆ. ಇಲ್ಲಿ ‘ಸಮಾಜ’ವೆಂಬುದು ಮನುಷ್ಯ ಕಳಂಕವಲ್ಲವೇ

ಸರಿ ನಾನು ಕವಲುದಾರಿಗಳಲ್ಲಿ ಸಾಗಿ ಮನುಷ್ಯನ ನಿಗೂಢ ಜಾಡು ಹಿಡಿದು. ಅವನ ಕೆಲವು ಪದರುಗಳನ್ನು ಇಲ್ಲಿ ಮಂಡಿಸಲು ಪ್ರಯತ್ನಿಸುತ್ತೇನೆ. ಕುವೆಂಪುರವರು ಒಂದು ಜನಾಂಗ ಮತ್ತೊಂದು ಜನಾಂಗವನ್ನು ಮೆಟ್ಟಿ ತುಳಿಯುವುದು ವಿರಾಟ್ ಶಕ್ತಿ, ವಿರೋಧಿ ಕೃತ್ಯ, ಹೇಡಿತನ ಎಂದು ಬಣ್ಣಿಸುತ್ತಾರೆ. ಸಮಾಜದ ನೆರಳಿನಲ್ಲಿ ನಮ್ಮ ಬೆಳವಣಿಗೆಗಾಗಿ ತಮ್ಮ ಜೀವನದ ಮೌಲ್ಯಗಳನ್ನು ಸರಿದೂಗಿಸುವ ನೆಪದಲ್ಲಿ “ಜಾತಿ, ಬಾಷೆ, ಸಂಸ್ಕೃತಿಗಳ ಮೊರೆ ಹೋಗುವುದಂತೂ ಸರಿ ?. ಅಂದರೆ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬಂತೆ ವಿಂಗಡಿಸಿ ಉನ್ನತವಾದ ಸ್ತಾನಗಳನ್ನು ಮೇಲಿನ ಮೂರೂ ವರ್ಗದವರು ಪಡೆದುಕೊಂಡು ಶೂದ್ರರನ್ನು ಇಂದಿಗೂ ತುಳಿಯುತ್ತಾ ಶೋಷಣೆ ಗೈಯುವುದು ಯಾವ ನ್ಯಾಯ ? ಮತ್ತಷ್ಟು ಓದು »

20
ಜೂನ್

ಇದರ ಕತೆ ಇಷ್ಟೇ ಕಣಪ್ಪೋ….

ಉಮೇಶ್ ದೇಸಾಯಿ

ಹೌದು ಆ ಕತೆಬರೆದವ ಸಹ ಈ ತಿರುವು ಊಹಿಸಿರಲಿಕ್ಕಿಲ್ಲ. ನಾವು ಆರಿಸಿ ಕಳಿಸಿದ ಪಕ್ಷ ಅದರ ಮುಖಂಡ ಇಂದು ಆಣೆ ಪ್ರಮಾಣ ಮಾಡುತ್ತಾರಂತೆ ಅವರ ಹಿಂದಿನ ಸಿಎಮ್ಮು..

 ಅವರ ಪಂಥಾಹ್ವಾನ ಸ್ವೀಕರಿಸಿ ಧರ್ಮಸ್ಥಳದಲ್ಲಿ ಒಂದುದಿನ ಮೊದಲೇ ಹೋಗಿ  ತಯಾರಿಯಲ್ಲಿರುತ್ತಾರಂತೆ. ಈ ಬಿಜೆಪಿ ಸರಕಾರ ಏಳುತ್ತ ಬೀಳುತ್ತ ಮೂರು ವರ್ಷ ಕಳೆದಿದೆ. ಈಗ ಮಾಜಿ ಸಿಎಮ್ಮು ಈಗಿನ ಸಿಎಮ್ಮ ಬಗ್ಗೆ ಮೂರುವರ್ಷದಲ್ಲಿ ಮುನ್ನೂರು ಬಾರಿ ಅಪವಾದ ಹೊರಿಸಿ ದಾಖಲೆ ಬಿಡುಗಡೆ ಮಾಡಿದ್ದಾರೆ.
ಹಾಲಿ ನಮ್ಮ ಸಿಎಮ್ಮು ಅದಕ್ಕೆ ಪ್ರತ್ಯುತ್ತರವಾಗಿ ತಮ್ಮ ರಾಜಕೀಯ ಕಾರ್ಯದರ್ಶಿ ಮೂಲಕ ಮಾಜಿ ವಿರುಧ್ದ ಅನೇಕ ದಾಖಲೆ ಬಿಡುಗಡೆ ಮಾಡಿದಾರೆ. ಒಟ್ಟಿನಲ್ಲಿ ಈ ಮೂರುವರ್ಷದಲ್ಲಿ ನಾಡಿನಜನತೆಗೆ ಭರಪೂರ್ ಮನರಂಜನೆ ಕೊಟ್ಟಿದ್ದಾರೆ. ಈಗ ಕ್ಲೈಮಾಕ್ಸ್ ಹೊತ್ತು .
ಇಲ್ಲಿ ನಾಯಕರೂ ಇಲ್ಲ ಖಳರೂ ಇಲ್ಲ. ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಆಯುಧಗಳಿಗೆ ಅವಕಾಶ ಇಲ್ಲ. ಹೀಗಾಗಿ ಅಲ್ಲಿ ರಕ್ತಪಾತಕೆ ಆಸ್ಪದವಿಲ್ಲ. ಆದರೆ ದೇವರ ಸನ್ನಿಧಿಯಲ್ಲಿ ಸುಳ್ಳು ಹೇಳಿದರೆ/ಸುಳ್ಳು ಆಣೆ ಹಾಕಿದವ ರಕ್ತ ಕಾರಿಕೊಂಡು ಸಾಯುತ್ತಾನೆ ಅಂತ ಪ್ರತೀತಿ. ಈಗ ಈ ಹಾಲಿ ಅಥವಾ ಮಾಜಿ ಇಬ್ಬರಲ್ಲಿ ಒಬ್ಬರು ರಕ್ತಕಾರುವುದಂತೂ ನಿಕ್ಕಿ. ಮತ್ತಷ್ಟು ಓದು »
19
ಜೂನ್

ಕನ್ನಡ ಪರ ದನಿಯೆತ್ತಿದರೆ ತಾಲಿಬಾನಿಗಳಾ!?

(ಮಾತೃ ಭಾಷೆಗೆ ಅಪಮಾನಕಾರಿ ಹೇಳಿಕೆ ನೀಡಿದ ವಲಸಿಗರ ಬೆನ್ನು ಬಿದ್ದಿದ್ದಕ್ಕೆ ಕನ್ನಡ ಅಭಿಮಾನಿಗಳಿಗೆ ಸಿಕ್ಕ ಬಿರುದು ’ಇಂಟರ್ನೆಟ್ ತಾಲಿಬಾನಿಗಳು’ ,ಮತ್ತು ಅದನ್ನ ದಯಪಾಲಿಸಿದ್ದು ಕ್ಷ-ಕಿರಣ ಅನ್ನುವ ಬ್ಲಾಗು.ಮಾತೃ ಭಾಷೆಯ ಮಹತ್ವದ ಮತ್ತು ಆ ವಿಷಯದ ಅರಿವಿಲ್ಲದೆ ಬರೆಯುವವರ ಮೇಲೆ ನಿಲುಮೆಗೆ ಅನುಕಂಪವಿದೆ.ಆ ಬರಹಕ್ಕೆ ಹೊಳೆನರಸೀಪುರ ಮಂಜುನಾಥ್ ಅವರ ಉತ್ತರ ಇಲ್ಲಿದೆ – ನಿಲುಮೆ)

– ಹೊಳೆನರಸೀಪುರ ಮ೦ಜುನಾಥ. ಬೆ೦ಗಳೂರು.

ಸನ್ಮಾನ್ಯ ರಾಕೇಶ ಮಥಾಯಿಸ್, ತಮ್ಮ ಬ್ಲಾಗಿನಲ್ಲಿ ತಾವು ಬರೆದಿರುವ ಅಪ್ಪಟ ಕನ್ನಡಾಭಿಮಾನಿ ಬರಹಕ್ಕೆ ನನ್ನ ಪ್ರತ್ಯುತ್ತರ ಹೀಗಿದೆ ನೋಡಿರಿ.

“ನಾನೊಬ್ಬ ಮಾಧ್ಯಮದ ವಿಧ್ಯಾರ್ಥಿ. ನನ್ನ ಸುತ್ತಮುತ್ತ ಮಾಧ್ಯಮ ಪ್ರಪಂಚದಲ್ಲಿ ನಡೆಯುತ್ತಿರುವ ಜಾತೀಯತೆ, ಲಾಬಿ, ಭ್ರಷ್ಠಾಚಾರ ನೋಡಿ ಕರ್ನಾಟಕ ಮಾಧ್ಯಮ ಲೋಕದ ಮೇಲೆ ಕ್ಷಕಿರಣ ಬೀರುವ ಅಗತ್ಯವಿದೆಯೆಂದೆನಿಸಿ ಪುಟ್ಟ ಪ್ರಯತ್ನ. ಈ ಹಾದಿ ಸುಗಮವಲ್ಲವೆಂಬ ಅರಿವು ನನಗಿದೆ, ಆದರೆ ಹಿಂದಿನ ಕಟ್ಟಳೆ ಪದ್ಧತಿಗೊಳಗಾಗದೆ ಆಗಸವನ್ನೇ ತೆರೆದಿಟ್ಟಿರುವ ಇಂಟರ್ನೆಟ್ ಮಾಧ್ಯಮಕ್ಕೆ ನಾನು ಋಣಿಯಾಗಿದ್ದೇನೆ.” ಎ೦ದು ನಿಮ್ಮ ಪರಿಚಯದಲ್ಲಿ ಹೇಳಿಕೊ೦ಡಿರುವ ತಮ್ಮ ಕಣ್ಣಿಗೆ ಹೊರ ರಾಜ್ಯದವರು ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ತಳೆದಿರುವ ನಿಲುವು, ತೋರಿಸುತ್ತಿರುವ ಅಸಡ್ಡೆ, ಇವರಿ೦ದಾಗಿ ಅವಕಾಶವ೦ಚಿತರಾಗುತ್ತಿರುವ ಅಸಹಾಯಕ ವಿದ್ಯಾವ೦ತ ಕನ್ನಡಿಗರು ಕಾಣಿಸಲಿಲ್ಲವೇ?  ಹೊರರಾಜ್ಯದವರು ಕರ್ನಾಟಕದಲ್ಲಿರಬೇಕಾದರೆ ಕನ್ನಡ ಕಲಿಯಲೇಬೇಕು ಎ೦ದಿದ್ದನ್ನು ಧೈರ್ಯವಾಗಿ ಫೇಸ್ ಬುಕ್ಕಿನ೦ತಹ ಸಾಮಾಜಿಕ ತಾಣದಲ್ಲಿ “ಫಕ್ ಆಫ್” ಎ೦ದಿದ್ದನ್ನು ವಿರೋದಿಸಿದವರು ತಮ್ಮ ಕಣ್ಣಿಗೆ “ಅ೦ತರ್ಜಾಲದ ತಾಲಿಬಾನಿಗಳು” ಎನ್ನುವ ರೀತಿಯಲ್ಲಿ ಕ೦ಡಿರುವುದು ತು೦ಬಾ ಆಶ್ಚರ್ಯಕರವಾಗಿದೆ.  ಹಾಗೆಯೇ ತಮ್ಮ ಬೌದ್ಧಿಕ ದಿವಾಳಿತನವನ್ನು ಎತ್ತಿ ತೋರಿಸುತ್ತಿದೆ ಎ೦ದು ಹೇಳಲು ವಿಷಾದವಾಗುತ್ತಿದೆ.

ಕರ್ನಾಟಕ ರಕ್ಷಣಾ ವೇದಿಕೆಯವರು ನಡೆಸಿದ ಕನ್ನಡಪರ ಹೋರಾಟಗಳನ್ನು “ಪು೦ಡಾಟಗಳು” ಅನ್ನುವಷ್ಟು ಪ್ರಬುದ್ಧರಾಗಿದ್ದೀರಲ್ಲ?  ತಾವು ಯಾವ ಮಾನದ೦ಡಗಳನ್ನು ಅನುಸರಿಸಿ ಈ ನಿರ್ಧಾರಕ್ಕೆ ಬ೦ದಿರುವಿರಿ ಎ೦ಬುದನ್ನೂ ವಿವರವಾಗಿ ಕನ್ನಡನಾಡಿನ ಜನತೆಗೆ ತಿಳಿಸುವ೦ಥವರಾಗಿ.  ಇದೇ ಪ್ರಕರಣ ಪಕ್ಕದ ತಮಿಳುನಾಡಿನಲ್ಲಿಯೋ, ಮಹಾರಾಷ್ಟ್ರದಲ್ಲಿಯೋ ನಡೆದಿದ್ದರೆ ಇಷ್ಟು ಹೊತ್ತಿಗೆ ಹಾಗೆ ಮಾತನಾಡಿದವರನ್ನು ಹೊಡೆದು ಓಡಿಸಿರುತ್ತಿದ್ದರು.
ಮತ್ತಷ್ಟು ಓದು »

18
ಜೂನ್

ಹನಿ ಹನಿ ಮುತ್ತು..

-ಅಬ್ದುಲ್ ಸತ್ತಾರ್

 
ಅಂತೂ ಇಂತೂ ಇವತ್ತಿನ ಕೆಲಸ ಮುಗಿಯಿತು ಅನ್ನೋ  ಸಮಾಧಾನದಿಂದ  ಈಗಷ್ಟೇ  ಹೊರಬಂದಿದ್ದೆ.
ಬೆಳಗ್ಗಿನಿಂದ  ಈ ಸಂಜೆ ವರೆಗೂ  ಆಫೀಸಿನ ನಾಲ್ಕು ಗೋಡೆಗಳ, ಬಿಳೀ ಬಲ್ಪಿನ ಮತ್ತು ತಣ್ಣನೆ ಏಸಿಯ ಮಧ್ಯೆ ಕುಳಿತು  ಹೊರಬಂದಾಗಲೇ ಗೊತ್ತಾಗಿದ್ದು, ಜಿಟಿ ಜಿಟಿ ಮಳೆ ಬರುತ್ತಾ ಗಾಳಿ ತಂಪು ತಂಪಾಗಿ ಇಡೀ ಸಿಟಿ ಹಾಯಾಗಿದೆ ಅಂತ. ಕೆಲವರು ಖುಷಿಯಿಂದ ಬರೋ ಪಿರಿ ಪಿರಿ ಮಳೆಗೆ ಮುಖಕೊಟ್ಟು ಖುಸಿಯಿಂದ ಶಿಳ್ಳೆ ಹಾಕುತ್ತಾ ನಡೆಯುತ್ತಿದ್ದರೆ ಕೆಲವರು ಸಿಕ್ಕ ಸಿಕ್ಕ ಗ್ರೋಸರಿ, ಬಿಲ್ಡಿಂಗಿನ ಟೋಪಿ ಅಡಿಯಲ್ಲಿ ಮಳೆನಿಲ್ಲುತ್ತೆ ಅನ್ನೋ ಆಸೆಯಿಂದ ನೋಡುತ್ತಾ, ಫೋನಲ್ಲಿ ಮಾತಾಡುತ್ತಾ ನಿಂತಿದ್ದಾರೆ. ಟ್ರಾಫಿಕ್ಕಿನಲ್ಲಿ ಬ್ಲಾಕಾಗಿ ನಿಂತಿರೋ ಗಾಡಿಗಳು ಬೇರೆ ಬೇರೆ ರೀತಿ ಚಾಲೆಂಜಿಗೆ ನಿಂತವರಂತೆ ಹಾರನ್ ಮಾಡುತ್ತಾ ಮನೆಸೇರೋ ಆತುರದಲ್ಲಿವೆ. exfo ಅನ್ನೋ ಗ್ರೋಸರಿ ಅಡಿಯಲ್ಲಿ ನಿಂತಿದ್ದ ನಾನು ಹಾಗೇ ಶರ್ಟಿನ ಗುಂಡಿ ತೆಗೆದು ಬೀಳುತ್ತಿರೋ ಮಳೆಹನಿಗೆ ಕೈಚಾಚಿದೆ.
ಎಷ್ಟೊಂದು ಹಾಯ್ ಹಾಯ್ ಎನಿಸಿತು. ಒಂದುಕ್ಷಣ ಮನಸ್ಸೊಳಗೆ ಏನೋ ಒಂದು ಮಿಂಚುಹರಿಯಿತು. ಈಗ ಸಿಕ್ಕ ಈ feel ಎಲ್ಲೊ ಸವಿದಿದ್ದ ನೆನೆಪಾಯಿತು.
ಹೌದು, ನೆನಪಾಗಿದ್ದು ಮನೆ ಮತ್ತು ಊರು. ಸಣ್ಣವನಿದ್ದಾಗ ಬರೋಬ್ಬರಿ ಮೂರ್ನಾಲ್ಕು ತಿಂಗಳು ಬಿಡದೆ ಸುರಿಯುತ್ತಿದ್ದ ಜಿಟಿ ಜಿಟಿ ಮಳೆಗೆ ಇದೆ ರೀತಿ ಕೈ ಚಾಚುತ್ತ, ಮನೆ ಮುಂದಿನ ಹೆಂಚಿನ ದೋಣಿಯಿಂದ ಬೀಳೋ ನೀರಿನ ಹರಿವಲ್ಲಿ ಪೇಪರ್ ದೋಣಿ ಬಿಟ್ಟಿದ್ದು, ಶೀತಕ್ಕೆ ಹೊರಗೋಗಬೇಡ ಅನ್ನೋ ಅಮ್ಮನ ಬೊಬ್ಬೆ, ಅಕ್ಕ ತಂದು ಕೊಡುತ್ತಿದ್ದ ಬೇಯಿಸಿದ ಹಲಸಿನ ಬೀಜ, ಪಕ್ಕದ ಮನೆ ಪಾರು ಕಿಟಕಿಯಿಂದ ಕೈ ಬೀಸಿ ಹಾಯ್ ಅಂದದ್ದು, ಮಳೆಗೆ ನಾನೂ ಸುಸ್ತಾಗಿದ್ದೇನೆ ಅನ್ನೋ ಹಾಗೆ ಮಲ್ಲಗೆ ಹೋಗುತ್ತಿದ್ದ ಕೃಷ್ಣಾ ಬಸ್ಸು ಎಲ್ಲವೂ ನೆನಪಾಯಿತು. ಮತ್ತಷ್ಟು ಓದು »
16
ಜೂನ್

ಕನ್ನಡ ಕಲಿಕೆಯ ಆಸಕ್ತರಿಗೆ

ಕಾರ್ಯಕ್ರಮದ ಬಗ್ಗೆ ಮಾಹಿತಿ

– ಬನವಾಸಿ ಬಳಗ

ನಾಡಿನ ಹಿರಿಯ ನುಡಿಯರಿಗರಾದ ಡಾ|| ಡಿ. ಎನ್. ಶಂಕರಬಟ್ಟರು ಕನ್ನಡದ ನುಡಿಯರಿಮೆ (ಬಾಶಾವಿಗ್ನಾನ) ಸೊಲ್ಲರಿಮೆ (ವ್ಯಾಕರಣ) ಮತ್ತು ಪದಕಟ್ಟಣೆ (ಪದರಚನೆ) ಕುರಿತಂತೆ ಆಳವಾಗಿ ಅದ್ಯಯನ ನಡೆಸಿ ಈ ವಲಯಗಳಲ್ಲಿ ಸಂಶೋದನೆಗೆ ಹೊಸದೊಂದು ದಾರಿಯನ್ನು ಕಟ್ಟಿದ್ದಾರೆ.

ಈಗ ಅವರ ಕೈಕೆಳಗೆ ಅವರಿಂದಲೇ ಈ ವಿಶಯಗಳ ಬಗ್ಗೆ ಕಲಿಯುವ ಮತ್ತು ಅವರ ಸಂಶೋದನೆಯಲ್ಲಿ ನೇರವಾಗಿ ಪಾಲ್ಗೊಳ್ಳುವ ಒಂದು ಚಿನ್ನದಂತಹ ಅವಕಾಶವನ್ನು ಬನವಾಸಿ ಬಳಗ ನಿಮ್ಮ ಮುಂದೆ ತಂದಿದೆ. ಈ ಕಾರ್ಯಕ್ರಮದ ವಿವರಗಳನ್ನು ಕೆಳಗೆ ಕೊಡಲಾಗಿದೆ.

ಕಾರ್ಯಕ್ರಮದ ಇಟ್ಟಳ

ಈ ಕಾರ್ಯಕ್ರಮದ ಅಂಗವಾಗಿ ತಲಾ ಒಂದು ವರ್ಶದ ಅವದಿಯ ನಾಲ್ಕು ಹಮ್ಮುಗೆ (ಯೋಜನೆ) ಗಳನ್ನು ಏರ್ಪಡಿಸಲಾಗಿದೆ. ಮೂವರು ಶಿಬಿರಾರ್ತಿಗಳು ಸೇರಿ ಒಂದು ಹಮ್ಮುಗೆಯನ್ನು ಮಾಡಬೇಕಾಗುತ್ತದೆ. ಹಮ್ಮುಗರಿಗೆ ಡಾ||. ಡಿ. ಎನ್. ಶಂಕರಬಟ್ಟರು ತಾವೇ ಮಾರ್ಗದರ್ಶನ ನೀಡುತ್ತಾರೆ. ಹಮ್ಮುಗೆಗಳ ವಿಶಯಗಳು ಹೀಗಿವೆ:

ಮತ್ತಷ್ಟು ಓದು »

15
ಜೂನ್

ಕನ್ನಡ ನಾಡೆಂಬ ಕರುಣೆಯ ಬೀಡೂ, ರಾಬಿನ್ ಚುಗ್ ಎಂಬ ಅವಿವೇಕಿಯೂ

(ಇತ್ತೀಚೆಗೆ ಫೇಸ್ ಬುಕ್ ನಡೆಯಿತು ಎನ್ನಲಾದ ವಿವಾದ ಕುರಿತು ನಿಲುಮೆ ತಂಡದ ವಿಜಯ್ ಹೆರಗು ಅವರು ವಿವಾದಿತ ವ್ಯಕ್ತಿ ರಾಬಿನ್ ಚುಗ್ ರನ್ನು  ಸ್ವತಃ ಸಂಪರ್ಕಿಸಿ ಮಾತಾಡಿ ಅದರ ವಿವರಗಳನ್ನು ದಾಖಲಿಸಿದ ಲೇಖನವಿದು. -ನಿಲುಮೆ)

ಪ್ರಿಯ ಗೆಳೆಯರೇ,

                     “ರಾಬಿನ್ ಚುಗ್”, ಈಗ ಈ ಹೆಸರು ಅಂತರ್ಜಾಲ ಬಳಕೆದಾರರಿಗೆ ಅದರಲ್ಲೂ ಫೇಸ್ಬುಕ್  ಬಳಸುವ ಕನ್ನಡಿಗರಿಗೆ ಪರಿಚಿತ ಹೆಸರು. ಈತನ ಹೆಸರು ಕೇಳಿದೊಡನೆ ಕೆಲವರಲ್ಲಿ ರೋಷ ಉಕ್ಕಿಬರುತ್ತದೆ. ಕೈಗೆ ಸಿಕ್ಕರೆ ನಾಲ್ಕೇಟು ತದುಕಬೇಕು ಅಂತ ಹಲವರಿಗೆ ಆಸೆಯಿದೆ. ಸಮಾಜದಲ್ಲಿ ಹಲವಾರು ಜನ ತಮ್ಮ ಒಳ್ಳೆಯ ಕೆಲಸಗಳಿಗೆ, ಒಳ್ಳೆಯ ಮಾತುಗಳಿಗೆ ಪ್ರಚಾರ ಗಳಿಸಿದರೆ ಇನ್ನು ಕೆಲವರು ಕೆಟ್ಟ ಕೆಲಸಗಳು ಮತ್ತು ಕೆಟ್ಟ ಮಾತುಗಳಿಂದ ಪ್ರಚಾರ ಗಳಿಸುತ್ತಾರೆ. ಹೀಗೆ ತಾನು ಬಳಸಿದ ಕೆಟ್ಟ ಮಾತಿನಿಂದ ಕುಖ್ಯಾತಿ ಗಳಿಸಿದವನು ರಾಬಿನ್ ಚುಗ್.
               ಕೆಲವು ದಿನಗಳ ಹಿಂದೆ ಕನ್ನಡಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಯುತ ಮುಖ್ಯಮಂತ್ರಿ ಚಂದ್ರುರವರು ಕರ್ನಾಟಕ ಸರ್ಕಾರಕ್ಕೆ ಕಳುಹಿಸಿದ ೨೭ ಶಿಫಾರಸುಗಳಲ್ಲಿ  “ವಲಸಿಗರು ಒಂದು ವರ್ಷದ ಅವಧಿಯ ಒಳಗೆ ಕನ್ನಡ ಕಲಿಯಬೇಕು ಹಾಗೂ ಏಳನೇ ತರಗತಿ ಹಂತದ ಕನ್ನಡ ಪರೀಕ್ಷೆ ಪಾಸು ಮಾಡಬೇಕು” ಎಂಬುದು ಅತ್ಯಂತ ಪ್ರಮುಖವಾದ ಹಾಗೂ ವಿವಾದಾತ್ಮಕವಾದ ಶಿಫಾರಸು.
               ಈ  ಶಿಫಾರಸು ಎಷ್ಟರ ಮಟ್ಟಿಗೆ ಸೂಕ್ತ? ಇದರ ಸಾಧಕ-ಬಾಧಕಗಳೇನು? ಇದನ್ನು ಜಾರಿಗೊಳಿಸಲು ಸಾಧ್ಯವೇ? ಇದರಿಂದ ಕರ್ನಾಟಕದ ಹೊರಗೆ ನೆಲೆಸಿರುವ ಕನ್ನಡಿಗರು ಎದುರಿಸಬಹುದಾದ ಸವಾಲುಗಳೇನು? ಎಂಬೆಲ್ಲಾ ಪ್ರಶ್ನೆಗಳು ಕಣ್ಣ ಮುಂದೆ ನಿಲ್ಲುತ್ತವೆ.
                    ಇದನ್ನೆಲ್ಲಾ ಒತ್ತಟ್ಟಿಗಿಟ್ಟು ರಾಬಿನ್ ಚುಗ್ ಎಂಬ ಈ ರಾಜಾಸ್ಥಾನೀ ಯುವಕನ ಬಗ್ಗೆ ಮಾತನಾಡೋಣ. ವಿದ್ಯಾಭ್ಯಾಸದ ಸಲುವಾಗಿ ಸುಮಾರು ೫ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ತದನಂತರ ಇಲ್ಲಿನ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ‘ಬೆಂಗಳೂರ್ ಮಿರರ್’ ಎಂಬ ರದ್ದಿ ಪತ್ರಿಕೆಯೊಂದು ಕನ್ನಡಾಭಿವೃದ್ಧಿ ಪ್ರಾಧಿಕಾರದ ಈ ಶಿಫಾರಸ್ಸನ್ನು ವಲಸಿಗರನ್ನು ಪ್ರಚೋದಿಸುವ ರೀತಿಯಲ್ಲಿ ವರದಿ ಮಾಡಿ ವಲಸಿಗರಿಗೆ ಇನ್ನು ಬೆಂಗಳೂರಿನಲ್ಲಿ ಉಳಿಗಾಲವಿಲ್ಲ ಎಂಬಂತೆ ಬಿಂಬಿಸಿ ಸುದ್ದಿ ನೀಡಿತು. ಇದನ್ನು ತನ್ನ ಫೇಸ್ಬುಕ್ ಪ್ರೊಫೈಲಿನಲ್ಲಿ ಶೇರ್ ಮಾಡಿದ ರಾಬಿನ್ ಚುಗ್ “F**K OFF” ಎಂದು ಪ್ರತಿಕ್ರಿಯೆ ನೀಡಿದ. ಇದೇ ತರಹದ ಹಾಗೂ ಇದಕ್ಕಿಂತ ಕೆಳಮಟ್ಟದ ಪ್ರತಿಕ್ರಿಯೆಗಳು ಬೆಂಗಳೂರ್ ಮಿರರ್ ಪತ್ರಿಕೆಯ ಅಂತರ್ಜಾಲ ಆವೃತ್ತಿಯಲ್ಲಿದೆ. ಇದರ ಕೊಂಡಿ ಇಲ್ಲಿದೆ. ಮತ್ತಷ್ಟು ಓದು »
14
ಜೂನ್

ಮಾರಿಯಮ್ಮ ದೇವರ ಕಾಣಿಕೆ ಡಬ್ಬವೂ – ಮಸಾಲೆ ದೋಸೆಯೂ..!

– ರವಿ ಮುರ್ನಾಡು

ದೇವರ ಕಾಣಿಕೆ ದುಡ್ಡು ತೆಗೆಯುವುದೆಂದರೇನು… ರಕ್ತ ಕಾರಿ ಸತ್ತಾರು…! ಪಕ್ಕದ ಮನೆಯ ಅಮ್ಮುಣ್ಣಿಯಮ್ಮ  ಒಮ್ಮೆ ಹೇಳಿದ್ದರು. ಈಗೇನು ಮಾಡುವುದು.? ಕಾಣಿಕೆ ದುಡ್ಡು ತೆಗೆದದ್ದು ಆಯಿತು.. .ಅಲ್ಲೆಲ್ಲಾ ಹಾವುಗಳು ಓಡಾಡುತ್ತವೆ. ನಾನು ನೋಡಿದ್ದೆ. ಭಾರೀ ಉದ್ದದ ಹಾವುಗಳು. ರಾತ್ರಿ ಬಂದರೋ? ಅಳು ಬರುವುದೊಂದೇ ಬಾಕಿ. ಅಜ್ಜಿ- ಚಿಕ್ಕಮ್ಮ ಬೆಲ್ಲದ ಮಿಠಾಯಿಗೆ ಕೊಡುವ ಹಣವನ್ನು ಒಟ್ಟು ಸೇರಿಸಿ ವಾಪಾಸು ಹಾಕುವುದಾಗಿ ಹೇಳಿದ ಮೇಲೆ ನಿದ್ದೆ ಬಂತು.

ತೆಗೆದದ್ದು ಒಂದು ರೂಪಾಯಿ..! ಅಜ್ಜಿ ಸೀರೆ ಸೆರಗಿನ ಅಂಚಿನಲ್ಲಿ ದುಡ್ಡು ಇಟ್ಟಿರುತ್ತಾರೆ. ತೋಟದಲ್ಲಿ ಕೆಲಸ ಮಾಡುವಾಗ ” ಟೀ” ಕುಡಿಯಲು ಐವತ್ತು ಪೈಸೆ, ಇಪ್ಪತ್ತೈದು ಪೈಸೆ ಹಾಗೆ. ತೆಗೆದರೆ  ಹೊಡೆತ ಬೀಳುವುದಂತು ಖಂಡಿತಾ. ದೇವರ ಕಾಣಿಕೆ ದುಡ್ಡು ವಿಷಯ ಗೊತ್ತಾದರೋ?. ಬೆಳಿಗ್ಗೆ ಕಣ್ಣು ಬಿಟ್ಟಾಗಲೂ ಇದೇ ಆಲೋಚನೆ.

ದೊಡ್ಡ ಮಾವ ವೀರಾಜಪೇಟೆಯ ಯಾವುದೋ ಹೋಟೇಲ್ಲಿನಲ್ಲಿ ಸಪ್ಲಯರ‍್ ಆಗಿದ್ದ. ಸಂತೆ ದಿನ ಭಾನುವಾರ ಎರಡು ತಿಂಗಳಿಗೊಮ್ಮೆ ಬರುವುದು. ಆ ಒಂದು ಸಂತೆ ದಿನ ಅಜ್ಜಿ, ಚಿಕ್ಕಮ್ಮ ಮತ್ತು ನಾನೂ ಸಂತೆಗೆ ಹೋಗಿದ್ದಾಗ, ಅವನೂ ಬಂದಿದ್ದ. ಎಲ್ಲಾ ಸಾಮಾನು ಖರೀದಿಸಿದ ಮೇಲೆ ನಾವು ಮಸಾಲೆ ದೋಸೆ ತಿಂದದ್ದು. ಸುಂಟಿಕೊಪ್ಪದ ಗಣೇಶ ಸಿನೇಮಾ ಥಿಯೇಟರ‍್ ಪಕ್ಕದ ಕ್ಯಾಂಟೀನಿನಲ್ಲಿ. ಭಾರೀ ಅಗಲದ ದೋಸೆ ಅದು. ತುಪ್ಪ ಹಾಕಿ ಮಾಡಿದ್ದು. ಜೊತೆಗೆ ರುಚಿರುಚಿಯಾದ ಆಲೂಗೆಡ್ಡೆ ಪಲ್ಯ ಮತ್ತು ತೆಂಗಿನಕಾಯಿ ಚಟ್ನಿಯೂ. ಈ ರುಚಿಯನ್ನು ನೆನೆದು ರಾತ್ರಿ ಊಟವೂ ಸಪ್ಪೆ..!. ಅದೇ ಮಸಾಲೆ ದೋಸೆಯ ಕನಸುಗಳು. ಮತ್ತಷ್ಟು ಓದು »

12
ಜೂನ್

ಕನ್ನಡಿಗರು ಬಿಟ್ಟಿ ಬಿದ್ದಿಲ್ಲ ಅನ್ನುವುದು ನೆನಪಿರಲಿ…!

– ರಾಕೇಶ್ ಶೆಟ್ಟಿ

ಹೊಟ್ಟೆ ಪಾಡಿಗೆ ಅಂತ ಹುಟ್ಟಿದ ಊರು ಬಿಟ್ಟು ನಮ್ಮ ಬೆಂಗಳೂರಿಗೆ ಬಂದು, ಇಲ್ಲಿನ ಅನ್ನ,ನೀರು ಕುಡಿದು ’ಕನ್ನಡ ಕಲಿಯಿರಿ’ ಅಂದರೆ ನಮ್ಮ ವಿರುದ್ಧವೇ ತಿರುಗಿ ಬಿದ್ದು ಕನ್ನಡ/ಬೆಂಗಳೂರಿನ ಬಗ್ಗೆ ದ್ವೇಷಕಾರುವುದು ಒಂದು ರೀತಿಯ ಸುಲಭದ ತುತ್ತಾಗಿದೆ.

ಮೊನ್ನೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಐಟಿ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಪ್ರವಾಹದಲ್ಲಿ ಕರ್ನಾಟಕ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವವರು ಇನ್ನು ಮುಂದೆ ಪ್ರಾಥಮಿಕ ಕನ್ನಡ ಭಾಷೆ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಲಿದೆ” ಅನ್ನುವ ಪ್ರಸ್ತಾವನೆಯೊಂದನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿತ್ತು.ಇದೇ ವಿಷಯವನ್ನ ಬೆಂಗಳೂರು ಮಿರರ್ ಅನ್ನುವ ಇಂಗ್ಲೀಷ್ ಪತ್ರಿಕೆ ಅನ್ಯ ಭಾಷಿಗರನ್ನ ಉದ್ರೇಕಿಸುವ ರೀತಿಯಲ್ಲಿ ಬರೆದಿದೆ.ಅಲ್ಲಿನ ಪ್ರತಿಕ್ರಿಯೆಗಳನ್ನ ನೋಡಿದರೆ ಬರೆದವರನ್ನ ಅಟ್ಟಾಡಿಸಿ ಬಡಿಯಬೇಕು ಅನ್ನಿಸುತ್ತದೆ.

ಈ ನೆಲದಲ್ಲಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾದರೆ, ಈ ನೆಲದ ಭಾಷೆ,ಸಂಸ್ಕೃತಿ,ಆಚಾರಗಳಿಗೆ ಬೆಲೆ ಕೊಡಬೇಕು ಅನ್ನುವ ಕಾಮನ್ ಸೆನ್ಸ್ ಇವರಲ್ಲಿ ಇಲ್ಲ ಅನ್ನುವುದಕ್ಕಿಂತ, ಯಾವುದಕ್ಕೂ ಪ್ರತಿಕ್ರಿಯಿಸಿದ ಕನ್ನಡಿಗರ ಧೋರಣೆಯನ್ನೆ ಇಂತ ಜನಗಳು ನಮ್ಮ ದೌರ್ಬಲ್ಯ ಅಂದುಕೊಂಡಿದ್ದಾರೆ.ಇಲ್ಲದಿದ್ದರೆ ಫ಼ೇಸ್ಬುಕ್ಕಿನಲ್ಲಿ ಹಾಲಿಡೇಐಕ್ಯು ಕಂಪೆನಿಯ ಉದ್ಯೋಗಿ ರಾಬಿನ್ ಚುಗ್ ಅನ್ನುವ ಪರದೇಶಿ ಕನ್ನಡಿಗರಿಗೆ ಫ಼ಕ್ ಆಫ಼್ ಅನ್ನುತ್ತಿರಲಿಲ್ಲ ಅಲ್ಲವಾ? ಆ ಕಿಡಿಗೇಡಿ ಕೆಲಸ ಮಾಡುವ ಕಂಪೆನಿಯ ವಿಳಾಸವಿಲ್ಲಿದೆ. ಅವರಿಗೊಂದು ಮಿಂಚೆ ಬರೆದು (ಭಾಷೆ ವಿಷಯ ಮುಟ್ಟಿಸುವಂತಿರಲಿ,ಬೈಗುಳ ದಯವಿಟ್ಟು ಬೇಡ) ಈ ಮಣ್ಣಿನ ಭಾಷೆಯ ಬಗ್ಗೆ ಗೌರವ ಇಲ್ಲದ ಇಂತವರನ್ನ ನಿಮ್ಮ ಕಂಪೆನಿಯಲ್ಲಿ ಇಟ್ಟುಕೊಳ್ಳುವಿರಾ ಅಂತಲೇ ಕೇಳಬೇಕು.ಮೊದಲೆ ಅವನಿಗೆ ಇಲ್ಲಿನ ರೀತಿ ರಿವಾಜುಗಳ ಬಗ್ಗೆ ತಕರಾರುಗಳಿವೆ.ಇಂತ ಹುಡುಗನನ್ನ ವಾಪಸ್ ಅವನ ಮನೆಗೆ ಕಳಿಸೋದು ನಮ್ಮ ಕರ್ತವ್ಯವಲ್ಲವೇ ಗೆಳೆಯರೇ?

ಮತ್ತಷ್ಟು ಓದು »

11
ಜೂನ್

ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ ಏನೋ..!!

– ಕೆ.ಎಸ್ ರಾಘವೇಂದ್ರ ನಾವಡ

ನೀವು ಏನಾದ್ರೂ ಹೇಳಿ… ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ.. ಅ೦ಥ ಮತ್ತೊಮ್ರ್ ಪ್ರೂವ್ ಆಗಿ ಹೋಗಿದೆ. ನಮ್ಮ ದೇಶದಲ್ಲಿ ಕೆಲವರ ಹಣೆಬರಹವನ್ನು ಸುಲಭವಾಗಿ ನಿರ್ಧರಿಸಬಹುದು.. ಹಿ೦ದೆ ಹಾವೇರಿಯಲ್ಲಿ ರೈತರ ಮುಷ್ಕರಕ್ಕೆ ಯಡಿಯೂರಪ್ಪ ಗೋಲಿಬಾರ್ ಗೆ ಆದೇಶ ನೀಡುವುದರ ಮೂಲಕ ಅದಕ್ಕೊ೦ದು ಗತಿ ಕಾಣಿಸಿದರು! ಇ೦ದು ರಾಮ್ ದೇವ್ ಹಣೆಬರಹವನ್ನು ಕೇ೦ದ್ರ ಸರ್ಕಾರ ಈ ರೀತಿ ಬರೆಯಿತು!! ಒಟ್ಟಾರೆ ನಾವು ಬ್ರಿಟೀಶ್ ಸತ್ತೆಯ ಕಾಲಕ್ಕೆ ಹೋಗುತ್ತಿದ್ದೇವೇನೋ ಎ೦ಬುದು ನನ್ನ ಸ೦ಶಯ!!

ಭರತ ಭೂಮಿಯಲ್ಲಿ  ಬ್ರಿಟೀಶ್ ಆಡಳಿತದಿ೦ದ ಮುಕ್ತರಾಗ ಬಯಸಿ ಸ್ವಾತ೦ತ್ರ್ಯದ ಕನಸು ಕ೦ಡು ಅದಕ್ಕಾಗಿ ಹೋರಾಡಿದವರು- ಶೋಷಿತ ವರ್ಗ – ತಮ್ಮ ಬೇಡಿಕೆಯನ್ನು ನ್ಯಾಯಬಧ್ಧವಾಗಿ ಕೇಳುವವರು- ಜನ ಕಲ್ಯಾಣಕ್ಕಾಗಿ ಹಾತೊರೆದು ಮುನ್ನುಗ್ಗುವವರು – ರಾಜಕೀಯ ವ್ಯವಸ್ಥೆಯನ್ನು ಸುಧಾರಿಸ ಬಯಸುವವರು ಮು೦ತಾದವರ ಹೋರಾಟದ ಅ೦ತ್ಯ ಹೀಗೇ!! ಸರಿ ಸುಮಾರು ಬ್ರಿಟೀಷರಿ೦ದ ಆರ೦ಭವಾದ ಈ ಪ್ರಜೆಗಳ ಧ್ವನಿಯನ್ನು  ಅವರುಗಳ ಗ೦ಟಲನ್ನೇ ಹಿಸುಕುವ ಮೂಲಕ ,ಅವರ ಹೋರಾಟಕ್ಕೊ೦ದು ಅನೈತಿಕ ಅ೦ತ್ಯ ನೀಡುವ ಈ ಕ್ರಮ ದುರದೃಷ್ಟವಶಾತ್ ಇಲ್ಲಿಯವರೆವಿಗೂ ಮು೦ದುವರೆದಿದೆ!! ಹಾಗ೦ತ ಎಲ್ಲ ಹೋರಾಟಗಳೂ ಇದೇ ಅ೦ತ್ಯವನ್ನು ಕ೦ಡವೇ ಎ೦ದರೆ ಖಚಿತವಾದ ಉತ್ತರ ನೀಡಲಿಕ್ಕಾಗುವುದಿಲ್ಲ.. “ಕೆಲವು ಸಮಸ್ಯೆಗಳು ತಾವಾಗೇ ಸೃಷ್ಟಿಯಾದರೆ ಕೆಲವನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ“ ಎ೦ಬ ನಾವಡ ಉವಾಚವೊ೦ದಿದೆ.. ಅದರ ಪ್ರಕಾರ ಪ್ರಸಕ್ತ ಭರತಭೂಮಿಯಲ್ಲಿಯೂ ಏಕೆ ಸಮಸ್ತ ಜಗತ್ತಿನಲ್ಲಿಯೂ  ಸರ್ಕಾರ ಗಳು ಹಾಗೂ ಜನತೆಗಳ ವಿಚಾರದಲ್ಲಿ ನಡೆಯುತ್ತಿರುವುದು ಇದೇ!!

ಮತ್ತಷ್ಟು ಓದು »