ಚಿತ್ರದುರ್ಗ: ಒಂದು ಅಪರೂಪ ಐತಿಹಾಸಿಕ ತಾಣ.
– ಆರ್.ರಾಘವೇಂದ್ರ, ಚಳ್ಳಕೆರೆ
ಇತಿಹಾಸ ಪ್ರಸಿದ್ಧ ಚಿತ್ರದುರ್ಗ ಜಿಲ್ಲೆಯು ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಹೊಳಲ್ಕೆರೆ ಎಂಬ ಆರು ತಾಲ್ಲೂಕು ಕೇಂದ್ರಗಳನ್ನೊಳಗೊಂಡಂತೆ ೧೮೫ ಗ್ರಾಮ ಪಂಚಾಯಿತಿ ಕೇಂದ್ರಗಳಿಂದ ಕೂಡಿರುತ್ತದೆ. ಚಿತ್ರದುರ್ಗ ಜಿಲ್ಲೆಯು ೮೩೮೮ ಚ.ಕಿ.ಮೀ. ವಿಸ್ತೀರ್ಣ ಹೊಂದಿದ್ದು, ಒಟ್ಟು ೧೫,೧೦,೨೨೭ ಜನಸಂಖ್ಯೆ ಇರುತ್ತದೆ.
ಜಿಲ್ಲೆಯ ಆರು ತಾಲ್ಲೂಕುಗಳ ಪೈಕಿ, ಚಿತ್ರದುರ್ಗ ತಾಲ್ಲೂಕು ಸಾಪೇಕ್ಷಿತವಾಗಿ ಅಭಿವೃದ್ಧಿ ಹೊಂದಿದ ತಾಲ್ಲೂಕಿನ ಗುಂಪಿನಲ್ಲಿದ್ದರೆ, ಚಳ್ಳಕೆರೆ, ಹೊಳಲ್ಕೆರೆ, ಹಿರಿಯೂರು, ಹೊಸದುರ್ಗ ಅತಿ ಹಿಂದುಳಿದ ತಾಲ್ಲೂಕುಗಳ ಗುಂಪಿನಲ್ಲಿವೆ ಹಾಗೂ ಮೊಳಕಾಲ್ಮೂರು ತಾಲ್ಲೂಕು ಅತ್ಯಂತ ಹಿಂದುಳಿದ ತಾಲ್ಲೂಕಿನ ಗುಂಪಿನಲ್ಲಿದೆ. ಆದರೆ ರಾಜ್ಯದ ಹಿಂದುಳಿದ ಪ್ರದೇಶವಾಗಿದ್ದರೂ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ. ಅದು ಹೇಗೆಂದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕ್ಷರತೆ ಪ್ರಮಾಣ, ಮಕ್ಕಳು-ಉಪಾಧ್ಯಾಯರ ಅನುಪಾತ, ೬-೧೪ ವಯೋಮಾನದಲ್ಲಿ ಶಾಲೆ ಸೇರದ ಮಕ್ಕಳ ಪ್ರಮಾಣ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಇವುಗಳ ಮೇಲೆ ನಾವು ಜಿಲ್ಲೆಯ ಶೈಕ್ಷಣಿಕ ಪ್ರಗತಿಯನ್ನು ಕಾಣಬಹುದು. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶವೆಂದು ಮೊಳಕಾಲ್ಮೂರು ತಾಲ್ಲೂಕು ಒಂದೇ. ಚಿತ್ರದುರ್ಗವು ತಾಮ್ರದ ಖನಿಜ ಸಂಪತ್ರವನ್ನು ಇಂಗಳದಾಳ್ನಲ್ಲಿ ಒಳಗೊಂಡಿದೆ.
ಸಾಹಿತ್ಯ ಕ್ಷೇತ್ರದ ಮೇರುವ್ಯಕ್ತಿಯಾದ ರಸಕವಿ ‘ಕುವೆಂಪು’ರವರನ್ನೇ ಶಿಷ್ಯರಾಗಿ ಪಡೆದಂತಹ ಕೀರ್ತಿ ಟಿ.ಎಸ್.ವೆಂಕಣ್ಣಯ್ಯರವರದು. ತಳಕಿನ ಕುಟುಂಬದ ತ.ಸು.ಶಾಮರಾಯರು, ತ.ರಾ.ಸು., ಅಂಬುಜಾ ತ.ರಾ.ಸು., ರವರು ಸೇರಿದಂತೆ, ಬೆಳಗೆರೆ ಮನತೆನದ ಬೆಳಗೆರೆ ಚಂದ್ರಶೇಖರಶಾಸ್ತ್ರಿ, ಬೆಳಗೆರೆ ಕೃಷ್ಣಶಾಸ್ತ್ರಿ, ಬೆಳಗೆರೆ ಜಾನಕಮ್ಮ ಮುಂತಾದ ಸಾಹಿತ್ಯ ಗಣಿಗಳು ಚಿತ್ರದುರ್ಗದ ಸಾಹಿತ್ಯವನ್ನು ಅಮರವಾಗಿಸಿದ್ದಾರೆ. ತ.ರಾ.ಸು. ರವರ ದುರ್ಗಾಸ್ತಮಾನ, ನಾಗರಹಾವು ಹಾಗೂ ಇತರೆ ಕೃತಿಗಳು ವಿಶ್ವಕ್ಕೆ ಚಿತ್ರದುರ್ಗದ ಪರಿಚಯವನ್ನು ಬಹುಸುಂದರವಾಗಿ ಮಾಡಿಕೊಟ್ಟಿದೆ. ‘ಬಿ.ಎಲ್.ವೇಣು’ ರವರ ‘ಕಲ್ಲರಳಿ ಹೂವಾಗಿ’ ಚಲನಚಿತ್ರವು ರಾಷ್ಟ್ರಮಟ್ಟದಲ್ಲಿ ಪ್ರಶಂಸೆ ಪಡೆದಿದ್ದು, ಖ್ಯಾತ ಸಂಶೋಧಕರಾದ ಹುಲ್ಲೂರು ಶ್ರೀನಿವಾಸ ಜೋಯಿಸರು, ಪ್ರೋ. ಲಕ್ಷ್ಮಣ ತೆಲಗಾವಿ, ಪ್ರೋ. ಬಿ.ರಾಜಶೇಖರಪ್ಪ, ಜಾನಪದ ತಜ್ಞರಾದ ಡಾ.ಮೀರಾಸಾಬಿಹಳ್ಳಿ ಶಿವಣ್ಣ, ಮಲ್ಲಿಕಾರ್ಜುನ ಕಲಮರಹಳ್ಳಿ, ನೇಮಿಚಂದ್ರ, ಮುಂತಾದವರು ಸೇರಿದಂತೆ ಅನೇಕ ಸಾಹಿತ್ಯ ಕಣ್ಮಣಿಗಳನ್ನೊಳಗೊಂಡಿದ್ದು, ದುರ್ಗವು ಸಾಹಿತ್ಯದ ಗಣಿಯಾಗಿದೆ. ಮತ್ತಷ್ಟು ಓದು 
ಬಸವನ ಗುಡಿಯಲ್ಲಿ ‘ಕರಪ್ಷನ್ ಸಾಕು’ ಆ೦ದೋಲನ. ನಾ ಕ೦ಡ೦ತೆ
– ಹರೀಶ್ ಆತ್ರೇಯ
ಕಿರಣ್ ಬೇಡಿ ಸ್ವಾಮಿ ಅಗ್ನಿವೇಶ್ ರ ಪ್ರಚೋದಕನಕಾರಿ ಭಾಷಣ, ಶ್ರೀ ಬಾಲಸುಬ್ರಹ್ಮಣ್ಯ೦ ರ ನಿರೂಪಣೆ ಮತ್ತು ಗಣ್ಯರ ಭಾಷಣದ ಅನುವಾದ, ಅರವಿ೦ದ್ ಖೇಜ್ರಿವಾಲರ ಜನಲೋಕಪಾಲ್ ಕಾನೂನು ಪಾಠ, ಕೆಲ ಕಾರ್ಯತಕರ್ತರ ಉತ್ಸಾಹ, ನೈಜ ಕಾಳಜಿ. ಇನ್ನೂ ಕೆಲವರ ಶೋ, ವಾಲ೦ಟೀರ್ ಟೀ ಶರ್ಟ್ ಮೇಲೆ ಎಲ್ಲರ ಕಣ್ಣು, ಮಾಸ್ಟರ್ ಹಿರಣ್ಣಯ್ಯರನವರ ಅನುಭವದ ಮಾತು, ಅಣ್ಣಾ ಹಜಾರೆಯವರ ಮುಗ್ಧ ನುಡಿಗಳು, ರಾಜಕಾರಣಿಗಳ/ ಸರ್ಕಾರಿ ಅಧಿಕಾರಿಗಳ ಮೋಸದಿ೦ದ ಬೇಸತ್ತ ಜನರ ಹತಾಶ ನುಡಿಗಳು, ಜೈಕಾರ, ಗಲೀ ಗಲೀಮೆ ಶೋರ್ ಹೈ ಸಾರೆ ನೇತ ಚೋರ್ ಹೈ ಎನ್ನುವ ಘೋಷಣೆಗಳು, ಇನ್ನೂ ಕೆಲವರಿಗೆ ಇಲ್ಲೇನ್ ನಡೀತಿದೆ ಅ೦ತ್ಲೇ ಗೊತ್ತಿಲ್ದೆ ಇರೋ ಅಮಾಯಕತೆ (?) ಇದೆಲ್ಲರ ನಡುವೆ ನಮ್ ಯಡ್ಯೂರಪ್ಪನವರ ಪರ ಅದ್ಯಾರೋ ನರಸಿ೦ಹ (ಮು. ಮುಖ್ಯಮ೦ತ್ರಿ) ಎ೦ಬುವವನ ಪ್ರಚಾರ, ಸ್ವರಾತ್ಮ ತ೦ಡದ ಪಾಪ್ ರೀತಿಯ ಸ೦ಗೀತ ಅದಕ್ಕೆ ಜನರು ತಲೆದೂಗಿದ್ದು, ಇವು ನಿನ್ನೆಯ ಆ೦ದೋಲನದ ಹೈಲೈಟ್.
ಹನ್ನೊ೦ದು ಗ೦ಟೆಯಿ೦ದ ೨:೫೦ರ ತನಕ ಕಾರ್ಯಕರ್ತರ ಜನಗಳ ಮತ್ತು ಅಲ್ಲಿ ಆಡುತ್ತಿದ್ದ ಯುವಕರ ಮುಖಗಳನ್ನು ಗಮನಿಸುತ್ತಾ ಬ೦ದೆ. ಅಣ್ಣಾ ಹಜಾರೆಯವ್ರು ಬ೦ದದ್ದು ೨:೫೦ ಕ್ಕೆ. ಅಲ್ಲಿಯವರೆಗೂ ಒ೦ದೆರಡು ಬಾರಿ ಸ್ಟೇಜಿನ ಹತ್ರ ಸುತ್ತ ಮುತ್ತ ಓಡಾಡ್ತಾ ಎಲ್ಲರ ಅಭಿಪ್ರಾಯಗಳನ್ನ ಸ೦ಗ್ರಹಿಸುತ್ತಾ ನಿ೦ತೆ. ಕಾರ್ಯಕರ್ತನೊಬ್ಬ “ನೀವು ವಾಲ೦ಟೀರಾ”? ಅ೦ತ ಕೇಳಿದ “ಅಲ್ಲಪ್ಪ” ಅ೦ದೆ “ಹೀಗೆಲ್ಲಾ ಓಡಾಡ್ಬೇಡಿ ಸರ್ ಬಾ೦ಬ್ ಥ್ರೆಟ್ ಇದೆ “ಅ೦ದ ಆಯ್ತಣ್ಣ ಅ೦ತ ಒ೦ಕಡೆ ಕೂತು ಅವರ ಕೆಲ್ಸಾನ ಗಮನಿಸುತ್ತಾ ಬ೦ದೆ. ಮನೇಲಿ ಇರಕ್ಕೆ ಬೋರ್ ಆಗಿ ನಾವೂ ಟಿ ವೀಲಿ ಕಾಣ್ತೀವಲ್ಲ ಅ೦ತ ಯೋಚಿಸ್ಕೊ೦ಡ್ ಬ೦ದು ಟೈಟ್ಸ್, ಅರೆ ತೋಳಿನ ಟಾಪ್ (ಇನ್ನೂ ಕೆಲವರು ಬನೀನ್ ಥರದ್ದು, ಬೇಡ ಬಿಡಿ) ಹಾಕ್ಕೊ೦ಡ್ “ಹೇ ಇಟ್ಸ್ ವೆರಿ ಫನ್ನಿ ಯೋ ನೋ, ಐ ಅಯಾಮ್ ಆಲ್ಸೋ ಎ ವಾಲ೦ಟೀರ್ ಹಿಯರ್, ಇಲ್ಲಿ ಸಕ್ಕತ್ತಾಗಿದೆ, ಐ ವಾನ ವೇರ್ ದಿಸ್ ಟಿ ಶರ್ಟ್, ಹ್ಮ್ ಲೆಟ್ಸ್ ಗೋ ಇನ್ ಸೈಡ್ ದಿ ವಾನ್ ” ಅ೦ತ ಹೋದವರು ಅರ್ಧ ಗ೦ಟೆಯನ೦ತರ ಸರ್ವಾ೦ಗ ಸು೦ದರಿಯರಾಗಿ ಬ೦ದರು.
ನವರಸಪುರ ಉತ್ಸವ ಹಾಗೂ ಕನ್ನಡ ಮತ್ತು ಸಂಸ್ಕೃತಿ.!
ಮಹೇಶ.ಎಮ್.ಆರ್
ಕಳೆದ ಕೆಲವು ವರುಶಗಳಿಂದ ಸ್ಥಗಿತಗೊಂಡಿದ್ದ ನವರಸಪುರ ಉತ್ಸವ ಮತ್ತೆ ಈ ವರುಶ ಹಮ್ಮಿಕೊಳ್ಳಲಾಗಿದ್ದು ಸಂತೋಶದ ವಿಶಯ ಮತ್ತು ಅದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು. ವಿಜಾಪುರದ ಇತಿಹಾಸ, ಸಂಸ್ಕೃತಿ, ಕಲೆ, ಸಾಹಿತ್ಯ, ಪರಂಪರೆಯನ್ನು ಹೊರಜಗತ್ತಿಗೆ ತೋರಿಸುವಲ್ಲಿ, ಆ ಮೂಲಕ ನಾಡಿನ ಜನರಲ್ಲಿ ತಮ್ಮೂರಿನ ಬಗ್ಗೆ ಹೆಮ್ಮೆ ಮೂಡಿ, ನಾಡು-ನುಡಿಯ ಚೌಕಟ್ಟಿನಲ್ಲಿ ಅವರನ್ನು ಒಗ್ಗೂಡಿಸಲು ಇಂತಹ ಉತ್ಸವಗಳು ಸಹಕಾರಿಯಾಗುತ್ತವೆ. ಈ ಬಾಗದ ಸ್ಥಳೀಯ ಕಲಾವಿದರಿಗೂ ತಮ್ಮ ಪ್ರತಿಬೆಯನ್ನು ಪರಿಚಯಿಸಲು ಇದೊಂದು ಒಳ್ಳೆಯ ವೇದಿಕೆ.

ನೈತಿಕತೆಯ ದ್ರಷ್ಟಾರರ ನೈತಿಕತೆಯ ಸಿಧ್ಧಾ೦ತ!!
– ರಾಘವೇಂದ್ರ ನಾವಡ
ಮೂರು ವರ್ಷಗಳ ಹಿ೦ದೆ ಕನ್ನಡಿಗರು ಭಾ.ಜ.ಪಾವನ್ನು ಕಾ೦ಗ್ರೆಸ್ ಹಾಗೂ ಜೆ.ಡಿ,.ಎಸ್. ಗಳಿಗೆ ಪರ್ಯಾಯವೆ೦ದೋ, ಕುಮಾರಸ್ವಾಮಿ ಹೇಳಿದ ಮಾತಿನ೦ತೆ ಅಧಿಕಾರ ಕೊಡದೆ ಯಡಿಯೂರಪ್ಪ ಆಗ ಹರಕೆಯ ಕುರಿಯಾಗಿದ್ದಕ್ಕೋ… ಕೇವಲ ೮ ದಿನಗಳ ಅಧಿಕಾರವನ್ನು ಮಾತ್ರವೇ ಅನುಭವಿಸಿದರು ಪಾಪ! ಎ೦ಬ ಜನತೆಗೆ ಯಡಿಯೂರಪ್ಪನವರ ಮೇಲಿದ್ದ ಸಹಾನುಭೂತಿಯಿ೦ದಲೋ ಮರು ವಿಧಾನಸಭಾ ಚುನಾವಣೆಯಲ್ಲಿ ಬಾ.ಜ.ಪಾ. ೧೧೦ ಸ್ಥಾನಗಳನ್ನು ಗೆದ್ದು ಪಕ್ಷೇತರರ ಸಹಾಯದಿ೦ದ ಅಧಿಕಾರದ ಗದ್ದುಗೆ ಏರಿತು. ಯಡಿಯೂರಪ್ಪನವರ ಸ೦ಪೂರ್ಣ ಜೀವನವೇ ಸ೦ಘರ್ಷಮಯವೆ೦ದು ಜಾತಕದಲ್ಲಿ ಬರೆದಿದೆಯೇನೋ!! ಅಲ್ಲಿ೦ದ ಇಲ್ಲಿಯವರೆವಿಗೂ ನಮ್ಮ ಮುಖ್ಯಮ೦ತ್ರಿಗಳು ಸರಿಯಾಗಿ ನಿದ್ರೆಯನ್ನೇ ಮಾಡಿರಲಿಕ್ಕೆ ಸಾಧ್ಯವಿಲ್ಲ! ಒ೦ದಲ್ಲಾ, ಒ೦ದು ವಿವಾದಗಳು ಯಡಿಯೂರಪ್ಪನವರ ಬೆನ್ನು ಹತ್ತಿದ ಬೇತಾಳಗಳ೦ತೆ ಹೆಗಲಿಗೇರಿದವು. ಆದರೂ ಅದೃಷ್ಟ ಗಟ್ಟಿಯಿದ್ದುದ್ದಕ್ಕೋ ಏನೋ.. ಅಥವಾ ನಾಡಿನ ಸಮಸ್ತ ಅಧ್ಯಾತ್ಮಿಕ ಸ೦ತರುಗಳ ಆಶಿರ್ವಾದದ ಬಲದಿ೦ದಲೋ ಏನೋ ಇಲ್ಲಿಯವರೆವಿಗೂ ಕುರ್ಚಿಯನ್ನುಳಿಸಿಕೊ೦ಡಿದ್ದಾರೆ.. ಇನ್ನು ಮು೦ದೆ ಅದ್ಯಾವ ದಿವ್ಯ ಹಸ್ತವೂ ಯಡಿಯೂರಪ್ಪನವರ ನೆತ್ತಿಯನ್ನು ನೇವರಿಸಲಾರದು ಎ೦ಬ ಸತ್ಯ ಅರಿವಾಗಿದೆ!
ಈ ಯಡಿಯೂರಪ್ಪನವರು ಹುಟ್ಟಾ “ಮು೦ಗೋಪಿ“ ಎ೦ಬುದು ಸರ್ವವೇದ್ಯ! ಆದರೆ ಅದರ ಜೊತೆಗೆ ಈಗ ಇನ್ನೊ೦ದನ್ನೂ ಸೇರಿಸಿಕೊಳ್ಳೋಣ.. ನಮ್ಮ ಯಡಿಯೂರಪ್ಪನವರಷ್ಟು “ಮಹಾ ಗಡಿಬಿಡಿ ಪುರುಷ “ ಮತ್ತೊಬ್ಬನಿರಲಿಕ್ಕಿಲ್ಲ!! ಎಲ್ಲರನ್ನೂ ಸಮಾನವಾಗಿ ಕರೆದುಕೊ೦ಡು ಹೋಗುವ ಸ್ವಭಾವ ಇವರಿಗಿಲ್ಲವೇ ಇಲ್ಲ. ಎಲ್ಲ್ಲಾ ಹದಿನಾರು ಶಾಸಕರನ್ನು ಅರ್ಹರೆ೦ದು ಸುಪ್ರೀ೦ ಕೋರ್ಟ್ ಅನರ್ಹತೆಯಿ೦ದ ಮುಕ್ತರನ್ನಾಗಿಸಿದ ಕೂಡಲೇ, ಪಕ್ಷದ ಶಾಸಕಾ೦ಗ ಸಭೆಯನ್ನು ಕರೆದು, ಹದಿನಾರು ಶಾಸಕರನ್ನು ಪಕ್ಕದಲ್ಲಿ ಕೂರಿಸಿಕೊ೦ಡು “ಏನ್ರಪ್ಪಾ.. ಏನು ನಿಮ್ಮ ನಿರ್ಧಾರ?“ ಎ೦ದು ಸಮಾಧಾನವಾಗಿ, ವರಿಷ್ಟರ ಸಮ್ಮುಖದಲ್ಲಿ ಅವರನ್ನು ಒಲಿಸಿಕೊ೦ಡಿದ್ದರೆ ಏನಾಗುತ್ತಿತ್ತು? ಅದನ್ನು ಬಿಟ್ಟು, ಹಿ೦ದೆ ಕೊಟ್ಟಿದ್ದ ಅವಿಶ್ವಾಸ ಪತ್ರಗಳನ್ನು ವಾಪಾಸು ತರಲು ರಾಜಭವನಕ್ಕೆ ಕಳುಹಿಸಿಕೊಡುವ ಏರ್ಪಾಟು!ಇವರೆಲ್ಲಾ ಸ೦ವಿಧಾನಾತ್ಮಕವಾಗಿ ಆರಿಸಿ ಹೋದ ಜನಪ್ರತಿನಿಧಿಗಳು ಎ೦ಬುದನ್ನೇ ಮರೆತರೆ ಹೇಗೆ?
ಮತ್ತಷ್ಟು ಓದು 
ಅ”ರಾಜಕೀಯ”
ಕರ್ನಾಟಕದ ಮಹಾಜನತೆಯ ದೌರ್ಭಾಗ್ಯಕ್ಕೆ ಅಂತ್ಯವೇ ಇಲ್ಲವೇನೋ ಎನ್ನಿಸುತ್ತಿದೆ. ಕರ್ನಾಟಕದ ರಾಜಕೀಯ ವಿದ್ಯಮಾನ ದಿನಕ್ಕೊಂದು, ಕ್ಷಣಕ್ಕೊಂದು ಬಣ್ಣ ಬದಲಾಯಿಸುತ್ತಿದೆ. ರಾಜಕೀಯ ರಂಗದ ಅನಿಶ್ಚಿತತೆ, ಅರಾಜಕತೆ ಮತ್ತೊಮ್ಮೆ ತನ್ನ ವಿರಾಟ್ ರೂಪದ ಪ್ರದರ್ಶನ ನೀಡಿದೆ. ಹದಿನಾರು ಶಾಸಕರ ಅನರ್ಹತೆಯ ಆದೇಶವನ್ನು ಸುಪ್ರೀಂ ಕೋರ್ಟ್ ಅನೂರ್ಜಿತಗೊಳಿಸಿದ ಬೆನ್ನಲ್ಲೇ ಆಡಳಿತ ಪಕ್ಷ, ವಿರೋಧ ಪಕ್ಷಗಳು ತಮ್ಮ ಬಲಾಬಲ ಪ್ರದರ್ಶನಕ್ಕೆ ಸಜ್ಜಾಗಿವೆ.
ಎಂಥಾ ಮರುಳಯ್ಯಾ ಇದು…
– ಚಾಮರಾಜ ಸವಡಿ
ತುಂಬ ದಿನಗಳ ಹಿಂದೆ ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಸಂದರ್ಶನವೊಂದರಲ್ಲಿ ಹೇಳಿದ ಮಾತೊಂದು ನೆನಪಾಗುತ್ತಿದೆ. ಓದುಗರನ್ನು ಈ ಪರಿ ಸೆಳೆಯುವಲ್ಲಿ ನೀವು ಯಶಸ್ವಿಯಾಗಿದ್ದು ಹೇಗೆ? ಎಂಬಂರ್ಥದ ಪ್ರಶ್ನೆಗೆ ಯಂಡಮೂರಿ ಉತ್ತರ: ಅವರ ದೌರ್ಬಲ್ಯವನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ.
ಇವತ್ತು ನಮ್ಮ ಸುತ್ತಮುತ್ತ ನಡೆಯುತ್ತಿರುವ ಹಲವಾರು ವಿಷಯಗಳನ್ನು ನೋಡಿದಾಗ ನನಗೆ ಈ ಮಾತು ಪದೆ ಪದೆ ನೆನಪಿಗೆ ಬರತೊಡಗಿದೆ.
ಸ್ವಾಮಿಗಳು, ಕಪಟ ಜ್ಯೋತಿಷಿಗಳು, ಬಹುತೇಕ ರಾಜಕಾರಣಿಗಳು, ಟಿವಿಗಳು, ಪತ್ರಿಕೆಯವರು, ಸರ್ಕಾರಿ ನೌಕರರು, ವಕೀಲರು, ವೈದ್ಯರು- ಹೀಗೆ ನೀವು ಯಾವುದೇ ರಂಗ ನೋಡಿದರೂ ಸಾಕು, ಯಂಡಮೂರಿ ಹೇಳಿದ ಮಾತು ಸತ್ಯ ಎಂಬುದು ಸ್ಪಷ್ಟವಾಗುತ್ತ ಹೋಗುತ್ತದೆ. ಪ್ರತಿಯೊಬ್ಬರೂ ಜನರ ದೌರ್ಬಲ್ಯ ಹಾಗೂ ಅನಿವಾರ್ಯತೆಗಳನ್ನೇ ಬಳಸಿಕೊಳ್ಳುವವರು. ಎಲ್ಲೋ ಒಬ್ಬಿಬ್ಬರು ಪುಣ್ಯಾತ್ಮರು ಇರಬಹುದು. ಆದರೆ, ಬಹುತೇಕರ ಜೀವನ ನಡೆಯುತ್ತಿರುವುದೇ ಜನರನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುವುದರಿಂದ.
ಸಾಮಾನ್ಯ ವ್ಯಕ್ತಿಯಂತೆ ಓಡಾಡಿಕೊಂಡವ ಕಾವಿ ಬಟ್ಟೆ ಧರಿಸಿದ ಕೂಡಲೇ ಆತ ಸ್ವಾಮೀಜಿಯಾಗಿಬಿಡುತ್ತಾನೆ. ಕಿಂಚಿತ್ತೂ ವಿಚಾರ ಮಾಡದೇ ಆತನ ಕಾಲಿಗೆ ಬೀಳಲು ಜನ ಹಾತೊರೆಯತೊಡಗುತ್ತಾರೆ. ಖಾಲಿ ಓಡಾಡಿಕೊಂಡವ, ಒಂದಕ್ಕೆರಡು ಪಟ್ಟು ಹಣ ಕೊಡುತ್ತೇನೆ ಎಂದ ಕೂಡಲೇ ಸಾಲ ಮಾಡಿ ಹಣ ಕೊಡಲು ಜನ ಮುಂದಾಗುತ್ತಾರೆ. ಜ್ಯೋತಿಷಿಗಳು ಹೇಳಿದಂತೆ ನಡೆದುಕೊಳ್ಳುವವರು, ಜಾಹೀರಾತು ನೋಡಿ ಔಷಧಿ ಕೊಳ್ಳುವವರು, ಕೆಲಸಕ್ಕೆ ಹಣ ಕಟ್ಟುವವರು, ಅರ್ಧ ರೇಟಿಗೆ ಚಿನ್ನ ಕೊಳ್ಳಲು ಹಾತೊರೆಯುವವರು, ಕೆಲಸ ಕೊಡುತ್ತೇನೆ ಎಂದರೆ ಕರೆದಲ್ಲಿಗೆ ಹೋಗುವವರು ನಮ್ಮ ಸುತ್ತಮುತ್ತಲೇ ಇದ್ದಾರೆ. ಮಾತಿಗೆ ಬಂದರೆ, ಅವರೂ ರಾಜಕಾರಣಿಗಳನ್ನು, ಜ್ಯೋತಿಷಿಗಳನ್ನು, ಸ್ವಾಮೀಜಿಗಳನ್ನು, ನಕಲಿ ವೈದ್ಯರನ್ನು, ವಂಚಕರನ್ನು ಬೈಯುವವರೇ. ಆದರೆ, ತಮಗೆ ಲಾಭವಾಗುತ್ತದೆ ಎಂದು ಅನಿಸಿದ ತಕ್ಷಣ ವಿವೇಚನೆ ಮರೆತುಬಿಡುತ್ತಾರೆ. ಕಣ್ಣು ಮುಚ್ಚಿಕೊಂಡು ಹಳ್ಳಕ್ಕೆ ಬೀಳುತ್ತಾರೆ.
ಕಳ್ಳಹೊಳೆ ಮತ್ತು ಹೇಮಾವತಿ
– ಹಂಸಾನಂದಿ
ನಮ್ಮೂರ ಹತ್ತಿರ ಹರಿಯೋ ಯಗಚೀನ ಕಳ್ಳ ಹೊಳೆ ಅಂತಿದ್ದರಂತೆ. ಯಾಕಂದ್ರೆ, ಅದರ ಹರಿವು ಸಣ್ಣದು, ಆದರೆ, ಎಲ್ಲೋ ಇಪ್ಪತ್ತು ಮೂವತ್ತು ಮೈಲಿ ಹಿಂದೆ ಮಳೆಯಾದರೆ ಯಗಚಿಯಲ್ಲಿ ಇದ್ದಕ್ಕಿದ್ದಂತೆ ನೆರೆ ಬಂದು ಬಿಡುತ್ತಿತ್ತಂತೆ. ಅಂತಹ ಸಂದರ್ಭದಲ್ಲಿ, ಹೊಳೆಯ ಪಾತ್ರದಲ್ಲಿ ಆಟವಾಡುತ್ತಿದ್ದ ಮಕ್ಕಳು, ದನ ಕರುಗಳೆಲ್ಲ ಕೊಚ್ಚಿಕೊಂಡು ಹೋಗುತ್ತಿದ್ದವಂತೆ. ಯಾವಾಗ ನೀರು ಬರುತ್ತೆ ಅನ್ನೋದು ಗೊತ್ತಾಗದೇ, ಕಳ್ಳನ ತರಹ ಜನ ಜಾನುವಾರನ್ನೆಲ್ಲ ನುಂಗಿಕೋತಾ ಇದ್ದಿದ್ದರಿಂದಲೇ ಇದು ಕಳ್ಳ ಹೊಳೆ ಅಂತ ಹೆಸರಾಗಿತ್ತಂತೆ. ಇವೆಲ್ಲ ನಾನು ಗೊರೂರು ರಾಮಸ್ವಾಮಿ ಅಯ್ಯಂಗಾರರ ಪುಸ್ತಕದಲ್ಲಿ ಓದಿದ್ದ ವಿಷಯಗಳು.
ಮೂರನೇ ತರಗತಿಯಲ್ಲಿ ನಮಗೆ ಎರಡು ಪಠ್ಯ ಪುಸ್ತಕಗಳಿದ್ದವು – ಒಂದು ನಮ್ಮ ರಾಜ್ಯ ಅಂತ, ಮತ್ತೊಂದು ನಮ್ಮ ಜಿಲ್ಲೆ ಅಂತ. ನಮ್ಮ ಜಿಲ್ಲೆ ಅಂದರೆ ನೋಡುವ ಸ್ಥಳಗಳು ಬೇಲೂರು ಹಳೇಬೀಡು ಶ್ರವಣಬೆಳಗೊಳ; ಬೆಳೆಯೋ ಬೆಳೆಗಳು ರಾಗಿ ಆಲೂಗೆಡ್ಡೆ ಕಾಫಿ ಬೀಜ; ಕೈಗಾರಿಕೆ ಅಂದರೆ ಯಂತ್ರಭಾಗಗಳ ಕಾರ್ಖಾನೆ, ಕಾಫಿ ಬೀಜ ಸಂಸ್ಕರಣೆ ಅಂತ ನಾವು ಓದಿಕೊಂಡಿದ್ದೇ ಓದಿಕೊಂಡಿದ್ದು. ಅದರಲ್ಲಿ ಜಿಲ್ಲೆಯ ನದಿಗಳು ಅಂದರೆ ಕಾವೇರಿ ಹೇಮಾವತಿ ಮತ್ತೆ ಯಗಚಿ ಅಂತಲೂ ಇರ್ತಿತ್ತು. ನನ್ನ ಊರಿಗೆ ತೀರ ಹತ್ತಿರವಿದ್ದ ಯಗಚಿಯ ಹರಿವನ್ನ ನಾನು ನೋಡಿದ್ದೇ ಕಡಿಮೆ. ಊರಿನ ಪಶ್ಚಿಮದ ಹಾಲುಬಾಗಿಲು ಅನ್ನುವ ಕಡೆ ಯಗಚಿ ಹೊಳೆ ಪಕ್ಕದಲ್ಲಿ ಒಂದು ನೀರನ್ನು ಶುಚಿಮಾಡಿ, ಊರಿಗೆ ಸರಬರಾಜು ಮಾಡುವ ವ್ಯವಸ್ಥೆ ಇತ್ತು. ಕೆಲವೊಮ್ಮೆ ನಮ್ಮ ತರಗತಿಯ ಕೆಲವು ಹುಡುಗರು ಹಾಲುಬಾಗ್ಲಿನಲ್ಲಿ ಹೋಗಿ ಈಜಿ ಬಂದೆವು ಅಂತ ಹೇಳ್ತಿದ್ದಿದ್ದೂ ಉಂಟು.
ಬಡ ಮಕ್ಕಳ ವಿಧ್ಯಾಭ್ಯಾಸಕ್ಕೆಸಹಾಯ ಮಾಡಿ
-ನಾಗರಾಜ್ ಎಲ್ಲರಿಗೂ ನಮಸ್ಕಾರ, ಇಂಡಿಯಾ ಸುಧಾರ್ ಕರ್ನಾಟಕ ರಾಜ್ಯದಲ್ಲಿ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಮಧುಗಿರಿ ಮತ್ತು ಕೋಲಾರ ಜಿಲ್ಲೆಯಲ್ಲಿ ಸುಮಾರು 60 ಸರ್ಕಾರಿ ಶಾಲೆಗಳಲ್ಲಿ ಸುಮಾರು 9000 ವಿಧ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಪೆನ್ನ್, ಪೆನ್ಸಿಲ್, ಜಾಮಿಟ್ರಿ ಬಾಕ್ಸ್ ಇತ್ಯಾದಿ ಸಾಮಾಗ್ರಿಗಳನ್ನು ಈ ಶೈಕ್ಷಣಿಕ ವರ್ಷದಲ್ಲಿ ನೀಡುತ್ತಿದೆ.
ಭಾರತದಲ್ಲಿ ಕನ್ನಡನೂ ಇದೆ ಹಿಂದಿ ಮಾತ್ರ ಅಲ್ಲ
ಹಿಂದಿ ಬೇಕು …. ಕೂಪಮಂಡೂಕತನ ಬೇಡ……..
*ಅನಿರುದ್ಧ ಕುಮಟ
ಮಕ್ಕಳ ಜಗಳದಲ್ಲಿ ಅಮ್ಮ ಬಡಪಾಯಿಯಾದಳು ಅಂತ ಒಂದು ಗಾದೆ ಮಾತು ಇದೆಯಾ? ಇಲ್ಲದಿರಲೂಬಹುದು. ಆದರೆ ನಿಮ್ಮ ಕನ್ನಡದ ಜಗಳ, ಆ ನೀರಿನ ಜಗಳ, ಆ ಧಾರ್ಮಿಕ ಕಲಹ ಇವನ್ನೆಲ್ಲ ನೋಡಿದಾಗ ನನಗೆನಿಸಿದ್ದು ಅಮ್ಮ ಬಡವಾಗಿದ್ದಾಳೆ ಅಂತ. ಅಲ್ಲಾರಿ ನೀವು ಪಕ್ಕದ ಮರಾಠಿಗರನ್ನು ಕಂಡರೆ ಬೆಂಕಿಕಾರುತ್ತಿರಿ. ಪಾಪ ಆ ತಮಿಳರು ಇಲ್ಲಿ ಬೆಳೆದರೆ ಕರಬುತ್ತೀರಿ. ಅಥವಾ ನೀರಿನ ವಿಷಯ ಹಿಡಿದುಕೊಂಡು ಸುನಾಮಿಯಂತೆ ಜಗಳ ಮಾಡುತ್ತೀರಿ…ಥಕ್ ನಿಮ್ಮ ಇಂತಹ ಜಗಳದಲ್ಲಿ ಬಡವಾದದ್ದು ಯಾರು. ಭಾರತವಲ್ಲವೇ. ಇಡೀ ಭಾರತದ ಬಗ್ಗೆ ಯೋಚಿಸಬೇಕಾದ ನಾವೆಲ್ಲ, ದಾಯಾದಿಗಳ ತರಹ ಯಾಕೆ ಕಿತ್ತಾಡಿಕೊಳ್ಳಬೇಕು? ನಿಮಗೆ ನಿಮ್ಮ ಬಗ್ಗೆಯೇ ಅಸಹ್ಯ ಎನಿಸುವುದಿಲ್ಲವೇ?
ಹಿಂದಿ ಜ್ವರಕ್ಕೆ ತುತ್ತಾದ ವಿಜಯ ಕರ್ನಾಟಕ ಅನ್ನೋ ಹೆಡ್ ಲೈನ್ ನಲ್ಲಿ ಪ್ರಕಟವಾದ ಲೇಖನವನ್ನೇ ನೋಡಿ. ಪತ್ರಿಕೆಯಲ್ಲಿ ವಿದೇಶಿಯರ ಹಿಂದಿ ಮೋಹ ಅನ್ನೋ ಲೇಖನ ಪ್ರಕಟಗೊಂಡರೆ ಸಾಕು. ಜಗತ್ತಿನಲ್ಲಿರುವ ಸಮಸ್ತ ಕನ್ನಡ ಪುಸ್ತಕಗಳೆಲ್ಲ ಬೆಂಕಿಯಲ್ಲಿ ಉರಿದು ಹೋಯ್ತು ಅನ್ನೋ ತರಹ ಯಾಕೆ ಉರಿದು ಹೋಗ್ತಿರಿ. ಅರೇ ಅದೊಂದು ಪತ್ರಿಕೆ. ಅದರಲ್ಲಿ ಭಿನ್ನ, ವಿಭಿನ್ನ ವಿಚಾರಧಾರೆಯ ಲೇಖನಗಳು ಪ್ರಕಟಗೊಳ್ಳುತ್ತವೆ. ಅವರೇನೂ ಹಿಂದಿಯಲ್ಲಿ ಬರೆದಿಲ್ಲ ನನಗಂತೂ ಕನ್ನಡಿಗರಲ್ಲಿ ಹಿಂದಿ ಕಲಿಸುವ ಒಂದು ಪ್ರಯತ್ನದಂತೆ ಆ ಲೇಖನ ಕಾಣಲೇ ಇಲ್ಲ. ನನ್ನ ಪ್ರಕಾರ ಕನ್ನಡಿಗರು ಮತ್ತಷ್ಟು ಓದು 




-ನಾಗರಾಜ್
ಎಲ್ಲರಿಗೂ ನಮಸ್ಕಾರ,


