ಎರಡು ಕೋಟಿಗೆಷ್ಟು ಮನೆ ಕಟ್ಟಿಸಬಹುದು ಯಡ್ಯೂರಪ್ಪನವ್ರೇ?
– ರಾಕೇಶ್ ಶೆಟ್ಟಿ
ಸೂಪರ್ ಮೂನ್ ಎಫ಼ೆಕ್ಟ್ ಬಗ್ಗೆ ಮಾತಾಡುತ್ತ ಏನೋ ವಿಪತ್ತು ಕಾದಿದೆಯಂತೆ ಮಾರಾಯ ಅಂತ ಗುಸು ಗುಸು ಶುರುವಾಗಿತ್ತು,ಊಟಕ್ಕೆ ಹೋಗಿ ಬಂದವ ತಾಜ ಸುದ್ದಿಯೇನು ಅಂತ ನೋಡ ಹೋಗಿ
ಮೈ ಒಮ್ಮೆ ತಣ್ಣಗಾಯಿತು.ಜಪಾನ್ನಲ್ಲಿ ಸುನಾಮಿಯೆದ್ದಿದೆ! ಕ್ಷಣಕಾಲ ಅವಕ್ಕಾದೆ,ನಂತರ ಗೂಗಲ್ ಮಹರಾಜನ ಮೊರೆ ಹೋಗಿ ವಿಡಿಯೋ ನೋಡಿ ದಂಗಾಗಿ ಹೋದೆ,ಅದಿನ್ನೆಂತ ರಾಕ್ಷಸ ಅಲೆಗಳು ಅವು!ತಮ್ಮ ಹರಿವಿನಳೊಗೆ ಸಿಕ್ಕಿದ್ದನ್ನೆಲ್ಲ ಆಪೋಷನ ತೆಗೆದುಕೊಳ್ಳುತ್ತ ಹೊರಟಿತಲ್ಲ,ಅದಿನ್ನೆಷ್ಟು ಸಾವಿರ ಜನರ ಬದುಕು ಮೂರಾ ಬಟ್ಟೆಯಾಯಿತು,ಜಪಾನ್ ಅನ್ನುವ ಸ್ವಾಭಿಮಾನಿಗಳ ದೇಶಕ್ಕೆ ಇದೊಂದು ದೊಡ್ಡ ಪೆಟ್ಟು.ಈ ಆಘಾತದಿಂದ ಜಪಾನ್ ಸಹೋದರರು ಎದ್ದು ಬರಲಿ,ಮತ್ತೆ ಜಪಾನ್ ಗೆಲ್ಲಲೇಬೇಕು ಇದು ಬಹುಷಃ ಬಹುತೇಕರ ಪ್ರಾರ್ಥನೆ.
ಪ್ರವಾಹ! … ಸುನಾಮಿಯ ರಕ್ಕಸ ಅಲೆಗಳನ್ನ ನೋಡಿದಾಗ ನನಗೆ ತಟ್ಟನೆ ನೆನಪಾಗಿದ್ದು, ಎರಡು ವರ್ಷದ ಹಿಂದೆ ಬೆಂಗಳೂರಿನಲ್ಲಿ ರಾತ್ರೋ ರಾತ್ರಿ ಸುರಿದ ಮಳೆಯಲ್ಲಿ ಸಿಕ್ಕಿ ಹಾಕಿಕೊಂಡು almost ಎದೆಯ ಹತ್ತಿರ ಹರಿದು ಬರುತಿದ್ದ ನೀರಿನಲ್ಲಿ ನಾವು ಪಟ್ಟ ಪಾಡು! ಮತ್ತು ಆಗ ನೀರಿನ ರಭಸಕ್ಕೆ ಪಲ್ಸರ್ ಬೈಕಿನಲ್ಲಿ ತೇಲಿಕೊಂಡು ಬಂದ ಆಸಾಮಿಯೊಬ್ಬ ಸಾವರಿಸಿಕೊಂಡು ಹೇಳಿದ ಮಾತು!
“‘ಸರ್,ಈ ತರ ಟೀ.ವಿಯಲ್ಲಿ ನೋಡಿದ್ದೇ,ಅನುಭವಿಸಿರಲಿಲ್ಲ.ಈ ಮಳೆಗೆ ಹಿಂಗೆ ನಾವು ಚಡಪಡಿಸ್ತ ಇದ್ದಿವೀ, ಇನ್ನ ಪಾಪ ಉತ್ತರ ಕರ್ನಾಟಕದ ಪ್ರವಾಹದಲ್ಲಿ ಸಿಕ್ಕಿಕೊಂಡ ಜನರ ಕತೆ ಹೇಗಾಗಿರಬೇಡ”. ಅವನಂದ ಮಾತು ನಿಜ ಅಂತ ಅನ್ನಿಸಿತ್ತು.
ವಿಶ್ವ ಕನ್ನಡ ಸಮ್ಮೇಳನ – ಏನಿದೆ, ಏನಿರಬೇಕಾಗಿತ್ತು?
ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನಕ್ಕೆ ಇನ್ನೇನು ಹೊತ್ತು ಎಣಿಕೆ ಶುರುವಾಗಿದೆ. ನಾಟಕ, ಕವನ ವಾಚನ, ಗಮಕ ವಾಚನ, ಕುಣಿತ, ಹಾಡುಗಾರಿಕೆ ಸೇರಿದಂತೆ ನಾಡಿನ ಕಲೆ, ಸಂಸ್ಕೃತಿ ಪ್ರದರ್ಶನಕ್ಕೆ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅನ್ನುತ್ತೆ ಸಮ್ಮೇಳನದ ವೆಬ್ ಸೈಟ್ ಅಲ್ಲಿರೋ ಕರೆಯೋಲೆ. ಇದಲ್ಲದೇ, ಕೆಲವು ಒಳ್ಳೆಯ ವಿಷಯಗಳ ಬಗ್ಗೆ ಚರ್ಚಾ ಗೋಷ್ಟಿಯನ್ನು ಏರ್ಪಡಿಸಲಾಗಿದೆ ಅಂತಲೂ ಕಂಡೆ. ಕನ್ನಡ, ಕನ್ನಡಿಗ, ಕರ್ನಾಟಕ ಇತಿಹಾಸದಲ್ಲೆಂದೂ ಕಂಡಿರದಂತಹ ಸವಾಲುಗಳನ್ನು ಎದುರಿಸುತ್ತಿರುವ ಜಾಗತೀಕರಣದ ನಂತರದ ಈ ದಿನಗಳಲ್ಲಿ ಇಂತಹ ಸಮ್ಮೇಳನಗಳು ಹೆಚ್ಚಿನ ಮಹತ್ವ ಪಡೆದಿವೆ ಕೂಡಾ. ಈ ಸಮ್ಮೇಳನ ಕರ್ನಾಟಕದ, ಕನ್ನಡಿಗರ ನಾಳೆಗಳನ್ನು ಕಟ್ಟಲು ಆಗಬೇಕಾದ ಕೆಲಸಗಳ ಬಗ್ಗೆ, ಇವತ್ತು ನಾವೆಲ್ಲಿದೀವಿ, ಈ ದಿನ ನಮ್ಮೆದುರು ಇರುವ ಸವಾಲುಗಳೇನು, ನಾವು ಸಾಗಬೇಕಾದ ದಾರಿ ಯಾವುದು, ಎಂತದ್ದು ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚಿಸುವ, ಹೊಸ ದಿಕ್ಕು,ದೆಸೆ ನೀಡುವ ವೇದಿಕೆಯಾಗುತ್ತೆ ಅನ್ನುವುದು ನನ್ನ ನಿರೀಕ್ಷೆಯಾಗಿತ್ತು, ಆದರೆ ಕಾರ್ಯಕ್ರಮದ ಪಟ್ಟಿ ನೋಡಿದಾಗ ಕೆಲ ಮಟ್ಟಿಗೆ ನಿರಾಸೆಯಾಗಿದೆ ಅಂತಲೇ ಹೇಳಬೇಕು. ಜ್ಞಾನಾಧಾರಿತ ಹೊಸ ಜಗತ್ತಿನ ಸವಾಲುಗಳನ್ನು ಎದುರಿಸಿ ಗೆಲ್ಲಲು ಕನ್ನಡಿಗರ ಕಲಿಕೆ, ದುಡಿಮೆಯ ವ್ಯವಸ್ಥೆಗಳನ್ನು ಆದ್ಯತೆಯ ಮೇರೆಗೆ ಚೆನ್ನಾಗಿ ಕಟ್ಟಿಕೊಳ್ಳಬೇಕಾದ ತುರ್ತು ಅಗತ್ಯ ನಮ್ಮ ಮುಂದಿದೆ. ಆದರೆ ಕಾರ್ಯಕ್ರಮದ ಪಟ್ಟಿ ನೋಡಿದ್ರೆ, ಈ ಸಮ್ಮೇಳನ ಹೊಟ್ಟೆಗೆ ಹಿಟ್ಟಿನ ವಿಷಯಗಳಿಗಿಂತ ಹೆಚ್ಚು ಜುಟ್ಟಿನ ಮಲ್ಲಿಗೆಯ ವಿಷಯಗಳತ್ತಲೇ ಗಮನ ಹರಿಸಿದೆಯೆನೋ ಅನ್ನುವಂತಿದೆ !
ಏನಿದೆ?
ಹಾಗಂತ, ಸಮ್ಮೇಳನದಲ್ಲಿ ಪ್ರಯೋಜನವಾಗುವಂತಹ ವಿಷಯಗಳೇ ಇಲ್ಲ ಅಂತಿಲ್ಲ. ಜಾಗತೀಕರಣ, ಮಾರುಕಟ್ಟೆ ಮತ್ತು ಯುವಕರ ಮೇಲೆ ಬೀರಿರುವ ಪ್ರಭಾವದ ಬಗ್ಗೆ ಜಾಗತೀಕರಣ ಕರ್ನಾಟಕ ಅನ್ನುವ ಗೋಷ್ಟಿ, ಗಡಿನಾಡಲ್ಲಿರುವ ಕನ್ನಡಿಗರ ಶಿಕ್ಷಣ ಸವಾಲುಗಳು, ಸಾಮಾಜಿಕ, ಸಾಂಸ್ಕೃತಿಕ ಸ್ಥಿತಿಗತಿಗಳ ಬಗ್ಗೆ ಬೆಳಕು ಚೆಲ್ಲುವ ಗಡಿನಾಡ ಕನ್ನಡಿಗರು ಅನ್ನುವ ಗೋಷ್ಟಿ, ಕನ್ನಡ ತಂತ್ರಾಂಶ, ವಿಜ್ಞಾನ ಶಿಕ್ಷಣದಂತಹ ವಿಷಯಗಳ ಬಗೆಗಿನ ಜ್ಞಾನ-ವಿಜ್ಞಾನ-ತಂತ್ರಜ್ಞಾನ-ಕರ್ನಾಟಕಅನ್ನುವ ಗೋಷ್ಟಿ, ಆಡಳಿತದಲ್ಲಿ ಕನ್ನಡ ಬಳಕೆ ಬಗೆಗಿನ ಕನ್ನಡ ಭಾಷಾ ಬಳಕೆ ಅನ್ನುವ ಗೋಷ್ಟಿ, ಕೃಷಿ ರಂಗ ಎದುರಿಸುತ್ತಿರುವ ಸವಾಲುಗಳ ಬಗೆಗಿನ ಕೃಷಿ-ಸಾಧನೆ ಸವಾಲು ಗೋಷ್ಟಿಗಳು ಈ ಕಾಲಮಾನಕ್ಕೆ ಪ್ರಸ್ತುತವೆನ್ನಿಸುವಂತಹ ಗೋಷ್ಟಿಗಳಾಗಿವೆ. ಇಲ್ಲಿ ಪಾಲ್ಗೊಳ್ಳುತ್ತಿರುವವರು ಅಷ್ಟೇ ಯೋಗ್ಯರು ಅನ್ನುವುದು ಕೂಡಾ ಗಮನಿಸಬೇಕಾದದ್ದು. ಮತ್ತಷ್ಟು ಓದು 
ಕರಾವಳಿಗರನ್ನು ಬಲಿ ತೆಗೆದುಕೊಳ್ಳಲಿರುವ ನೇತ್ರಾವತಿ ನದಿ ತಿರುವು ಯೋಜನೆ…!
-ಶಂಶೀರ್, ಬುಡೋಳಿ
ಯಾರಾದರೂ ಊಹಿಸಿರಬಹುದೇ?
ತಣ್ಣನೆಯ ಹಾದಿಯಲ್ಲಿ ಹರಿಯುತ್ತಿದ್ದ ನೇತ್ರಾವತಿ ನದಿಗೋಸ್ಕರ ಒಂದೊಮ್ಮೆ ಹೋರಾಟ ನಡೆಸುವ ಬಗ್ಗೆ ನಮ್ಮ ಹಿರಿಯರು ಕನಸು ಕೂಡಾ ಕಂಡಿರಬಹುದೇ? ಇಲ್ಲ. ಸಾಧ್ಯವೇ ಇಲ್ಲ. ಯಾಕೆಂದರೆ ನದಿಯ ಮೂಲ ಶೋಧಿಸಬೇಡ ಎನ್ನುವ ಮಾತನ್ನು ಅವರು ನಂಬಿದ್ದರು. ಹಾಗಾಗಿ ಅವರು ಈ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡಿರಲಿಲ್ಲ.ಪಶ್ಚಿಮ ಘಟ್ಟದ ಉಳಿವಿಗಾಗಿ ನಡೆಸುತ್ತಿರುವ ಹೋರಾಟದ ನಂತರ ಕರಾವಳಿಗರು ನಡೆಸುತ್ತಿರುವ ನೇತ್ರಾವತಿ ನದಿ ಉಳಿಸುವ ಹೋರಾಟ ಇವತ್ತಿಗೂ ನಡೆಯುತ್ತಲೇ ಇದೆ.ಮೊನ್ನೆಯ ವಿಶ್ವ ತುಳು ಸಮ್ಮೇಳನದಲ್ಲೂ ಸಹ ಈ ಬಗ್ಗೆ ಚರ್ಚೆ ಉಂಟಾಗಿತ್ತು. ಇತ್ತೀಚಿಗೆ ಪರಮಶಿವಯ್ಯನವರು ಈ ಬಗ್ಗೆ ಚಕಾರವೆತ್ತಿದ್ದು ತನ್ನ ವರದಿ ಅಸಮರ್ಪಕವಾಗಿದ್ಜದರೆ ತಾನು ಯಾವ ಶಿಕ್ಷಾರ್ಹ ಕ್ರಮಕ್ಕೂ ಬದ್ಧ ಎಂದು ಹೇಳಿಕೆ ಕೊಟ್ಟಿದ್ದಾರೆ. ಆದರೆ ಸರಕಾರ ಮಾತ್ರ ತೆಪ್ಪಗಾಗಿದೆ. ವಿಜ್ಞಾನ-ತಂತ್ರಜ್ಞಾನ,ಭ್ರಷ್ಟ ರಾಜಕಾರಣ,ಬಂಡವಾಳಶಾಹಿತ್ವದ ವಿರುದ್ಧದ ಹೋರಾಟದ ತರಹೇ ಈ ನೇತ್ರಾವತಿ ನದಿ ಉಳಿಸುವ ಹೋರಾಟ. ಈ ಹೋರಾಟಕ್ಕೆ ಪ್ರಗತಿಪರ ಸಂಘಟನೆಗಳು ಮಾತ್ರ ಬೆಂಬಲ ಕೊಡುತ್ತಿರುವುದರಿಂದ ಬಲಪಂಥೀಯ ಎನ್ನಿಸುವ ಸಂಘಟನೆಗಳ ವಿರುದ್ಧದ ಆಟದಿಂದ ಇವತ್ತು ಈ ಹೋರಾಟ ಮುಂದುವರಿಯುತ್ತಲೇ ಇದೆ. ಹಾಗಾಗಿ ಪಕ್ಷಾತೀತವಾದ ಸ್ವತಂತ್ರ ಸಂಘಟನೆಗಳು, ಸೇವಾ ಸಂಸ್ಥೆಗಳು ಮಾತ್ರ ಈ ಹೋರಾಟದಲ್ಲಿ ಭಾಗಿಯಾಗಿರುವುದನ್ನು ನಾವು ನೋಡ್ತಾ ಇದ್ದೇವೆ. ಉದಾಹರಣೆಗೆ ಭಾರತೀಯ ಕಿಸಾನ್ ಸಂಘ,ನಾಗರಿಕ ಸೇವಾ ಟ್ರಸ್ಟ್ ಮುಂತಾದ ಸಂಘಟನೆಗಳನ್ನ ಗುರುತಿಸಬಹುದು. ೨೦೦೯ಸಾಗಿದ್ದರೂ ಈ ವರ್ಷದಲ್ಲಿ ನೇತ್ರಾವತಿ ನದಿಯ ಹರಿವನ್ನು ನಿಲ್ಲಿಸಿ ಬೆಂಗಳೂರಿನಲ್ಲಿ ನದಿ ತಿರುಗಿಸುವ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ.
ಕನ್ನಡವೆನೆ ಕುಣಿದಾಡುವುದೆನ್ನೆದೆ…
ಇತ್ತೀಚೆಗಿನ ಎರಡು ಸಂಗತಿಗಳು ನಮ್ಮ ಕನ್ನಡ ನುಡಿ ಈ ರಾಜ್ಯದ ಘನತೆ ಬಗ್ಗೆ ಹತ್ತು ಹಲವು ವಿಚಾರಗಳ ಚರ್ಚೆಗೆ ವೇದಿಕೆಯಾಗಿವೆ. ಅದು ಹೇಮಾಮಾಲಿನಿ ನಮ್ಮ ರಾಜ್ಯದಿಂದ ಆರಿಸಿ ಬಂದಿದ್ದಿರಬಹುದು ಅಥವಾ ಬೆಳಗಾವಿಯಲ್ಲಿ ನಾರಾಯಣ ಮೂರ್ತಿ ಅವರು ವಿಶ್ವ ಕನ್ನಡ ಸಮ್ಮೇಳನ ಉದ್ಘಾಟಿಸಲಿರುವುದು.
ಇವೇ ಆ ಎರಡು ವಿದ್ಯಮಾನಗಳು. ಪತ್ರಿಕೆಯಲ್ಲಿ ಮಾತ್ರವಲ್ಲದೇ ನೆಟ್ ಲೋಕದಲ್ಲು ಚರ್ಚೆಗೆ ಗ್ರಾಸವಾಗಿತ್ತು. ಇದು ಒಳ್ಳೆಯ ಬೆಳವಣಿಗೆ. ಚರ್ಚೆ ಯಾವಾಗಲೂ ಭಿನ್ನ ದನಿ ಗಳನ್ನು ಕೇಳಿಸುತ್ತದೆ. ಮತ್ತು ಭಿನ್ನ ಸ್ವರ ಕೇಳಿಸುತ್ತದೆ..ಆದರೆ ಪೂರ್ವಾಗ್ರಹ ಪೀಡಿತ ಕಿವಿಗಳಿಗೆ ಭಿನ್ನ ರಾಗ ಬೇಕಾಗಿಲ್ಲ.ಫೇಸ್ ಬುಕ್ ನಲ್ಲಿ ನಾ ಹಾಕಿದ ಕಾಮೆಂಟಿಗೆ ಉತ್ತರವಾಗಿ ನನ್ನ ಮಾತೃಭಾಷೆ ಯಾವುದೆಂದು ಪ್ರಶ್ನಿಸಲಾಯಿತು. ನಾ ಅದಕ್ಕೆ ಸರಿಯಾದ ಉತ್ತರ ಕೊಟ್ಟೆ. ಸ್ನೇಹಿತ ರೋರ್ವರು ಬರೆಯುತ್ತ ವಿಶ್ವಕನ್ನಡ ಸಮ್ಮೇಳನ ಮಲ್ಯ ಅವರು ಉದ್ಘಾಟಿಸಲಿ ಎಂದು ಕುಹಕವಾಡಿದರು. ಈಗ ಮೂರ್ತಿ ಅವರಿಗೂ ಇರಿಸುಮುರಿಸಾಗಿ ನಮ್ಮ ಮುಖ್ಯಮಂತ್ರಿ ಜೊತೆ ನಕಾರ ಸೂಚಿಸಿದ್ದರೂ ತಮ್ಮ ಮೂಗು ಎಲ್ಲಿ ಮಣ್ಣಾಗುತ್ತದೆ ಎಂಬ ಹೆದರಿಕೆ ಸರಕಾರಕ್ಕೂ ಬಂದು ಶತಾಯ ಗತಾಯ ಮೂರ್ತಿ ಅವರೇ ಅದನ್ನು ಉದ್ಘಾಟಿಸಲಿದ್ದಾರೆ ಅಂತ ಹೇಳಿಕೆ ಬಂದಿದೆ. ಮತ್ತಷ್ಟು ಓದು 
ಡಾಲರ್ ಲೆಕ್ಕಕ್ಕೆ : ಕನ್ನಡ ಪಕ್ಕಕ್ಕೆ
– ರಾಕೇಶ್ ಶೆಟ್ಟಿ
ಬೆಳಗಾವಿಯಲ್ಲಿ ನಡೆಯೋ ವಿಶ್ವ ಸಮ್ಮೇಳನದ ಉದ್ಘಾಟನೆಗಾಗಿ ಇನ್ಫೋಸಿಸ್ ನಾರಾಯಣ ಮೂರ್ತಿಯವರನ್ನ ಸರ್ಕಾರ ಆಹ್ವಾನಿಸಿದ್ದು, ಮತ್ತದಕ್ಕೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಆಕ್ಷೇಪಿಸಿ ಪತ್ರ ಬರೆದಿದ್ದು ಈದೀಗ ಚರ್ಚೆಗೆ ಗ್ರಾಸವಾಗಿದೆ.ಯಾರೇ ಕೂಗಾಡಲಿ ಊರೇ ಹೊರಾಡಲಿ ’ಇನ್ಫಿ ನಾಣಿ’ಯವ್ರೆ ಉದ್ಘಾಟನೆ ಮಾಡ್ತಾರೆ ಅಂತ ಯಡ್ಯೂರಪ್ಪನವ್ರು ಹೇಳಿಯಾಗಿದೆ.ಅದು ಬದಿಗಿರಲಿ.ಬರಗೂರರ ಪತ್ರಕ್ಕೆ ಪ್ರತಿವಾದವಾಗಿ ಕನ್ನಡ ಪ್ರಭದಲ್ಲಿ ಪ್ರತಾಪ್ ಸಿಂಹ “ನಾರಾಯಣ ಮೂರ್ತಿ ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಬದುಕು ಕಟ್ಟಿಕೊಟ್ಟದ್ದು ಕನ್ನಡದ ಕೆಲಸವಲ್ಲವೇ?ಕೇವಲ ಸಾಹಿತ್ಯ ಕೃಷಿಯೊಂದೇ ಕನ್ನಡದ ಕೈಂಕರ್ಯವೇ? ” ಅಂತ ಕೇಳಿದ್ದಾರೆ.ಮುಕ್ತ ಚರ್ಚೆಗೆ ಆಹ್ವಾನವನ್ನು ನೀಡಿದ್ದಾರೆ.ಅದನ್ನೆಲ್ಲ ಓದುವಾಗ ಬಹಳಷ್ಟು ಜನ ಬರಗೂರರಿಗೆನು ಹಕ್ಕಿದೆ?ಸಾಹಿತಿಗಳೇ ಏಕೆ ಬೇಕು ಅಂದಿದ್ದಾರೆ?
ನಿಜ.ಕೇವಲ ಸಾಹಿತ್ಯ ಕೃಷಿಯೊಂದೇ ಕನ್ನಡದ ಕೈಂಕರ್ಯವಲ್ಲ ಅನ್ನುವ ಪ್ರತಾಪ್ ಮಾತು ಒಪ್ಪಲೆಬೇಕಾದದ್ದು.ಆದರೆ ಬೆಂಗಳೂರಿನ ಭಾಗ್ಯೋದಯಕ್ಕೂ ಇನ್ಫೋಸಿಸ್ ನಾರಾಯಣ ಮೂರ್ತಿಯವರೆ ಕಾರಣ ಅನ್ನುವ ರೀತಿಯ ಮಾತುಗಳು ಸಹ್ಯವೇ?ಸುಮ್ಮನೆ ಕನ್ನಡಿಗರಿಗೆ ಕೆಲಸ ಕೊಟ್ರೂ,ಜೀವನ ಕೊಟ್ರೂ ಅಂತ ಅಬ್ಬರಿಸಿದರಾಯಿತೆ.ಕನ್ನಡಿಗರಿಗೆ ಕೆಲಸ ಕೊಟ್ರೂ ಕೊಟ್ರೂ ಅನ್ನೋವ್ರು ಒಮ್ಮೆ ಹೋಗಿ ಮೂರ್ತಿಯವರ ಕಂಪೆನಿಯಲ್ಲಿ ಎಷ್ಟು ಪ್ರತಿಶತ ಜನ ಕನ್ನಡಿಗರಿದ್ದಾರೆ?ಅಲ್ಲಿರುವ ಕನ್ನಡಿಗರಾದರು ಯಾವ ಡೆಸಿಗ್ನೇಷನ್ ಹೊಂದಿದ್ದಾರೆ? ಅಸಲಿಗೆ ಅಲ್ಲಿನ ಕನ್ನಡಿಗ ಉದ್ಯೋಗಿಗಳ ಪಾಡೇನಿದೆ ಅನ್ನುವುದಾದ್ರು ಕೇಳಿ ನೋಡಿ.ಅಲ್ಲಿ ಯಾರ ಕಾರು-ಬಾರು ನಡೆಯುತ್ತಿದೆ ಅನ್ನುವುದು ತಿಳಿಯಬಹುದು. ಇವೆಲ್ಲದರ ಸತ್ಯ ದರ್ಶನವಾದರೆ ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಬದುಕು ಕಟ್ಟಿಕೊಟ್ಟರು ಅನ್ನುವಂತೆ ಮಾತಾಡಿರುವುದು ಸುಳ್ಳೇ ಸುಳ್ಳು ಅನ್ನುವುದು ಗೊತ್ತಾಗುತ್ತದೆ.
ನಾರಾಯಣ ಮೂರ್ತಿ ಅವರಿಂದ ಏನ್ ಕಲಿಬೇಕು, ಏನ್ ಬೇಡ ?
ಮೂರ್ತಿಯವರಿಂದ ಕಲಿಯಬೇಕಾದದ್ದು ಸಾಕಷ್ಟಿದೆ !

ವಿಜಯ್ ಮಲ್ಯ ವಿಶ್ವಕನ್ನಡ ಸಮ್ಮೇಳನವನ್ನು ಉದ್ಘಾಟನೆ ಮಾಡಬೇಕು!

ಹಾರೋಬೂದಿಯ ವಿರುದ್ಧ ಅಖಾಡಕ್ಕಿಳಿದ ಪೇಜಾವರ ಶ್ರೀ ಮತ್ತು ಸಂಘಟನೆಗಳು
“ಎಂಥ ದೊಡ್ಡ ದೊಡ್ಡರೆಲ್ಲ ಬಂದ್ರು, ವೀಡಿಯೋ ಮಾಡಿದ್ರು, ಪತ್ರಿಕೆಯವ್ರು ಬಂದ್ರು ಏನೆಲ್ಲ ಬರೆದ್ರೂ, ಬೂದಿ ಪರೀಕ್ಷೆ ಮಾಡ್ತೀವಿ ಅಂತ ಬಂದ್ರು, ಬೇಕಾದ್ದು ರಿಪೋರ್ಟ್ ಕೊಟ್ರು ಆದ್ರು ಯಾರಿಂದಲೂ ಏನೂ ಮಾಡೋಕೆ ಆಗ್ಲಿಲ್ಲ. ಇನ್ನು ನೀವ್ ವಿಡೀಯೋ ಮಾಡಿ ಏನ್ ಬರೆದ್ರೂ ನಮಗೇನಿಲ್ಲ. ಇದು ಸರ್ಕಾರದ್ದೇ ಪ್ರೋಜೆಕ್ಟ್, ಸರಕಾರದ್ದೇ ಕಂಪೆನಿ. ಏ ಇವರ ಇವರ ಕಾರಿಗೆ ಅಡ್ಡ ನಿಲ್ಲಿಸ್ರೋ. ಕ್ಯಾಮೆರಾ ಕಿತ್ತುಕೊಳ್ಳೋ….”
ಎಂದು ಇತ್ತಿಚೆಗೆ ಉಡುಪಿಯ ಪ್ರತಿಷ್ಠಿತ ಕಂಪೆನಿಯ ಗುತ್ತಿಗೆದಾರನೊಬ್ಬ ಹಾರೋಬೂದಿ ಇರುವ ಸ್ಥಳಕ್ಕೆ ಹೋದ್ರೆ ಈ ರೀತಿ ಧಮ್ಕಿ ಹಾಕುತ್ತಾನೆ. ಇಷ್ಟೆಲ್ಲ ಧೈರ್ಯದಿಂದ ಈ ಗುತ್ತಿಗೆದಾರ ಮಾತಾಡ್ತಾ ಇರಬೇಕಾದ್ರೆ ಅವನ ಹಿಂದೆ ಪ್ರಬಲವಾದ ಕಾಣದ ಕೈ ಇರಬಹುದು ನೀವೆ ಯೋಚಿಸಿ. ಇಂಥ ಎಷ್ಟೋ ಜನರ ಉಪಟಳವನ್ನು ನಮ್ಮ ಜನ ಎಷ್ಟು ದಿನ ಅಂತ ಸಹಿತಾರೇ? ಅದಕ್ಕೆ ನೋಡಿ ಈ ಪ್ರತಿಷ್ಠಿತ ಕಂಪೆನಿ ಮತ್ತು ಅಹಂಕಾರಿಗಳ ವಿರುದ್ಧ ನೊಂದ ಜನತೆ ಚಳುವಳಿಗೆ ಇಳಿದಿದ್ದಾರೆ.
ಯುಸಿಪಿಎಲ್ ವಿರುದ್ಧ ಜನಾಂದೋಲನ”
“ಪೇಜಾವರ ಶ್ರೀ ಹಾರೋಬೂದಿಯಿಂದ ತೊಂದರೆಗೊಳಗಾದವರ ನಿವಾಸಗಳಿಗೆ ಭೇಟಿ, ನಾಗಾರ್ಜುನ ಆಧುನಿಕ ಭಸ್ಮಾಸುರ ಈ ಯೋಜನೆಯ ವಿರುದ್ಧ ಯಾರೇ ಹೋರಾಟ ಮಾಡಿದರೂ ನನ್ನ ಸಂಪೂರ್ಣ ಬೆಂಬಲ ಇದೆ”
ಹಾರೂಬೂದಿ ಅತ್ಯಂತ ವಿಷಕಾರಕ ಅಂಶ ಹೊಂದಿದ್ದು ಪರಿಸರ ಜಾನುವಾರು ಹಾಗೂ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಲಿದೆ- ಪರಿಸರವಾದಿ ಡಾ.ಎನ್.ಎ. ಮಧ್ಯಸ್ಥ ಆತಂಕ”
“ ಕಂಪೆನಿಯನ್ನು ಸ್ಥಗಿತಗೊಳಿಸಲು ಮಾರ್ಚ್ ೫ ರಂದು ದಕ್ಷಿಣಕನ್ನಡ ಉಡುಪಿ ಬಂದ್ ನಡೆಸಲು ನಿರ್ಧಾra
ಇವೆಲ್ಲ ಇತ್ತೀಚೆಗೆ ಪ್ರಜಾವಾಣಿಯಲ್ಲಿ ಮೂಡಿಬಂದ ಸುದ್ದಿಗಳು
ನಿಲುಮೆಯ ಪ್ರಿಯ ಓದುಗರೇ, ಕಳೆದ ಕೆಲವು ದಿನಗಳ ಹಿಂದೆ ನಂದಿಕೂರಿನ ಪ್ರತಿಷ್ಠಿತ ಕಂಪೆನಿಯ ಕುರಿತಂತೆ ಹಾರೋಬೂದಿಯ ನೋಡಿದಿರಾ ಎಂಬ ಲೇಖನ ಪ್ರಕಟವಾಗಿತ್ತು. ಅದರಲ್ಲಿ ಬೂದಿಯಿಂದ್ ಆಗುತ್ತಿರುವ ತೊಂದರೆಯ ಬಗ್ಗೆ ಮತ್ತು ಜನರ ಬಗ್ಗೆ ಹೇಳಲಾಗಿತ್ತು. ಈ ಸಮಸ್ಯೆಯನ್ನು ಬಗೆಹರಿಸಲು ಸಂಘಟನೆ ಮತ್ತು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದರ ಮುಂದುವರಿಕೆಯೆಂಬಂತೆ ಈ ಸಮಸ್ಯೆಯ ವಿರುದ್ಧ ಜನಾಂದೋಲನ ಆರಂಭವಾಗಿದೆ.
ಪೇಜಾವರಶ್ರೀಗಳು ಸೇರಿದಂತೆ ಅನೇಕ ಪ್ರಮುಖರು ಈ ಅಂದೋಲನದಲ್ಲಿ ಪಾಲ್ಗೊಂಡಿದ್ದಾರೆ. ಈ ಆಂದೋಲನ ಪ್ರಾರಂಭವಾಗಿ ನಂದಿಕೂರಿನ ಸುತ್ತಮುತ್ತಲ ಪ್ರದೇಶಗಳಾದ ಎರ್ಮಾಳು, ಕಟ್ಪಾಡಿ, ಉದ್ಯಾವರ ಸೇರಿದಂತೆ ಸುಮಾರು ೫೦ ಕಡ್ಗಳಲ್ಲಿ ಪಾದಯಾತ್ರೆ ನಡೆಸಿ ಜನಜಾಗೃತಿ ಮೂಡಿಸಲಾಗಿದೆ. ಅಲ್ಲದೇ ಇದೇ ಮಾರ್ಚ್ ೫ ರಂದು ದಕ್ಷಿಣಕನ್ನಡ ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ. ಈ ಜನಾಂದೋಲನದಲ್ಲಿ ಪಾದಯಾತ್ರೆಯ ಮೂಲಕ ಕಂಪೆನಿಯ ಯೋಜನೆಯ ಅಪಾಯವೆನ್ನು ಬಿಂಬಿಸುವ ಟ್ಯಾಬ್ಲೋ ಹಾಗೂ ಧ್ವನಿಮುದ್ರಿತ ಯಕ್ಷಗಾನ ಪ್ರಸಂಗ, ಕಂಪೆನಿ ವಿರೋಧಿ ಘೋಷಣೆಗಳು, ಭಿತ್ತಿಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಗಿದೆ. ದಕ್ಷೀಣಕನ್ನಡ ಜಿಲ್ಲಾ ಬಂದ್ಗೆ ಜಿಲ್ಲೆಗಳ ಪ್ರಮುಖ ಸಂಘಟನೆಗಳಾದ ಮೀನುಗಾರರ ಸಂಘ, ಉಡುಪಿ ತಾಲೂಕು ಗ್ರಾಮ ಪಂಚಾಯಿತಿ ಒಕ್ಕೂಟ, ವಿಜಯಕುಮಾರ ಹೆಗ್ಡೆ ನೇತೃತ್ವದ ರೈತಸಂಘ, ಉದ್ಯಾವರ ಗ್ರಾಮ ಸಂರಕ್ಷಣಾ ಸಮಿತಿ ಮೊದಲಾದ ಸಂಘಟನೆಗಳು ಬೆಂಬಲ್ ಸೂಚಿಸಿವೆ.
ಇದೆಲ್ಲ ಬೆಳವಣಿಗೆಗಳನ್ನು ನೋಡಿದಾಗ ನೊಂದ ಜನರಿಗೆ ನ್ಯಾಯ ದೊರೆಯಬಹುದೆಂಬ ಆಶಾಕಿರಣ ಮೂಡುತ್ತಿದೆ. ಈಗ ಹೋರಾಟ ಮುಂದಾಗಿರುವ ಸಂಘಟನೆಗಳು ಯಾವುದೇ ಒತ್ತಡಕ್ಕೆ ಮಣಿಯದೇ ಜನಪರವಾದ ಹೋರಾಟ ಮಾಡಿ ಮುಂದೆ ಬರಬಹುದಾದ ದೊಡ್ಡ ಗಂಡಾಂತರವನ್ನು ತಪ್ಪಿಸಬೇಕಾಗಿದೆ. ಇದಲ್ಲದೇ ಈ ಹೋರಾಟಕ್ಕೆ ಸ್ಥಳೀಯ ಜನರ ಬೆಂಬಲವೂ ಅತ್ಯಗತ್ಯ.
ಚಿತ್ರ ಕೃಪೆ: deccanherald.com, thecanaratimes.com
ನಾವು ಸ್ವತಂತ್ರರೇ..?
ಮಮತ ಕಂಡ್ಲೂರು
ಅಂದು ಸಿಕ್ಕಿತ್ತು ಮುಕ್ತಿ
ಕಳಚಿತ್ತು ಆ ಪರರ ಕಪಿಮುಷ್ಟಿ
ಅಂತೂ ಇಂತೂ ಸ್ವಾತಂತ್ರ್ಯ ಬಂತೆಂದರು ಹಿರಿಯರು
ತನ್ನ ಕರುಳಕುಡಿಗಳಿವರೆಲ್ಲ ಒಂದೆಂಬ ಭಾವದಿ
ಇಹರೆಂದು ‘ಭರತಮಾತೆ’ಯ ಎದೆಯು ಮಿಡಿದಿತ್ತು.
ಆಹಾ, ಎಂಥಾ ಪರಮಾನಂದವಾಗುತ್ತಿದೆ.
ನಮ್ಮದೇ ನೆಲ,ಜಲ,ಗಾಳಿ ಕೊನೆಗೆ ನಮ್ಮದೇ ‘ಸರಕಾರ’.
ನೆಮ್ಮದಿಯ ಉಸಿರು ಬಿಡುತ್ತಿದ್ದಂತೆ,
ಆರಂಭವಾಯ್ತು ಪ್ರಗತಿಯ ಅರಸುವಿಕೆ!
ಜನ್ಮತಾಳಿದುವು ಕಟ್ಟಡಗಳು ಗೆದ್ದಲಗೂಡಿನ ತೆರದಿ.
ಬಲಿಯಾಗಿ ಪಕ್ಷಪಕ್ಷಗಳ ಸ್ವಾರ್ಥರಾಜಕೀಯಕ್ಕೆ
ಅನಾಥಭಾವದಿ ನರಳುವಂತಾಯ್ತು ಬಡಜನತೆ.
ಬೆಳೆದವು ಸರಕಾರದ ಯೋಜನೆಗಳು ಹನುಮಂತನ ಬಾಲದಂತೆ…… ಮತ್ತಷ್ಟು ಓದು 
ನಮ್ಮ ರಾಜ್ಯವನ್ನು ಪ್ರತಿನಿಧಿಸಲು ಜನರಿಲ್ವಾ???
– ಚೇತನ್ ಜೀರಾಳ್
ಇದು ಖಂಡಿತಾ ಕರ್ನಾಟಕದ ದೌರ್ಭಾಗ್ಯದ ಪರಮಾವಧಿ. ಹೈಕಮಾಂಡ್ ದಾಸ್ಯಕ್ಕೆ ಸಿಲುಕಿರುವ ಬಿಜೆಪಿ ಪಕ್ಷ ಮತ್ತೊಂದು ಎಡವಟ್ಟು ತೀರ್ಮಾನ ಕೈಗೊಂಡಿದೆ. ಹಿರಿಯ ರಾಜಕಾರಣಿ ಶ್ರೀ ರಾಜಶೇಖರ ರ್ಮೂರ್ತಿಯವರ ನಿಧನದಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಹಿಂದಿ ಚಲನಚಿತ್ರ ನಟಿ ಶ್ರೀಮತಿ ಹೇಮಾ ಮಾಲಿನಿ ಅವರನ್ನ ರಾಜ್ಯದಿಂದ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ.
ರಾಜ್ಯಸಭಾ ಸದಸ್ಯತ್ವ ಅಂದರೇನು?
ಒಬ್ಬ ರಾಜ್ಯಸಭಾ ಸದಸ್ಯ ಮುಖ್ಯವಾಗಿ ಆಯಾ ರಾಜ್ಯದ ಪ್ರತಿನಿಧಿಯಾಗಿ ಸಂಸತ್ತಿನ ಮೇಲ್ಮನೆಯಲ್ಲಿ ಕೆಲಸಮಾಡುತ್ತಾರೆ. ರಾಜ್ಯಸಭೆ ಅನ್ನುವುದು ಒಕ್ಕೂಟ ವ್ಯವಸ್ಥೆಯ ಒಂದು ಮುಖ್ಯ ಭಾಗ. ಕೇಂದ್ರದಲ್ಲಿ ಲೋಕಸಭೆಗಿರುವಷ್ಟೇ ಪ್ರಾಮುಖ್ಯತೆ ರಾಜ್ಯಸಭೆಗೂ ಇದೆ. ರಾಜ್ಯಸಭಾ ಸದಸ್ಯರನ್ನು ಆಯಾ ರಾಜ್ಯದ ಶಾಸಕರು ಆಯ್ಕೆ ಮಾಡುತ್ತಾರೆ.
ನಮ್ಮ ರಾಜ್ಯವನ್ನೂ ಪ್ರತಿನಿಧಿಸಲು ಅರ್ಹ ಜನಪ್ರತಿನಿಧಿಗಳು ಇಲ್ಲವೇ?
ಇಷ್ಟಕ್ಕೂ ರಾಜ್ಯಸಭೆ ಸ್ಥಾನಕ್ಕೆ ಹೇಮಾ ಮಾಲಿನಿಯವರನ್ನು ಕಣಕ್ಕಿಳಿಸಲು ಇರುವ ಅರ್ಹತೆಯಾದರೂ ಏನು? ಮೊದಲನೆಯದಾಗಿ ಹೇಮಾ ಮಾಲಿನಿ ನಮ್ಮ ನಾಡಿನವರಲ್ಲ, ಹೋಗಲಿ ಆ ಕಾರಣವನ್ನು ಬದಿಗಿಟ್ಟು ನೋಡೋಣವೆಂದರೆ ಅವರಿಂದ ನಮ್ಮ ರಾಜ್ಯಕ್ಕೆ ಆಗಿರುವ ಉಪಯೋಗವಾದರೂ ಏನು? ನಮ್ಮ ನಾಡಿನ ಯಾವ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವ ಪ್ರಯತ್ನ ರಾಜ್ಯ ಮಟ್ಟದಲ್ಲಾಗಲಿ ಅಥವಾ ಕೇಂದ್ರ ಮಟ್ಟದಲ್ಲಾಗಲಿ ಪ್ರಯತ್ನಿಸಿದ್ದಾರೆ? ನಮ್ಮ ನೆಲ, ಜಲ, ಭಾಷೆ, ಉದ್ಯೋಗ, ಉದ್ದಿಮೆ ಹೀಗೆ ಯಾವ ಕಾರಣಕ್ಕಾಗಿ ನಮ್ಮ ನಾಡಿಗಾಗಿ ಕೆಲಸ ಮಾಡಿದ್ದಾರೆ? ಯಾವುದೇ ದೃಷ್ಠಿಯಿಂದ ನೋಡಿದರೂ ಸಹ ಹೇಮಾ ಮಾಲಿನಿ ನಮ್ಮ ರಾಜ್ಯದ ಪ್ರತಿನಿಧಿಯಾಗಿ ರಾಜ್ಯಸಭೆ ಪ್ರವೇಶಿಸಲು ಅರ್ಹರಲ್ಲ. ಇಂತಹುದೇ ತಪ್ಪನ್ನು ಹಿಂದೆ ಬಿಜೆಪಿ ಹೈಕಮಾಂಡ್ ವೆಂಕಯ್ಯ ನಾಯ್ಡು ಅವರನ್ನ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಿವಾಗ ಮಾಡಿತ್ತು. ಕಾಂಗ್ರೆಸ್ ಹಾಗೂ ಜನತಾದಳ ಪಕ್ಷಗಳು ಸಹಿತ ಇಂತಹುದೇ ತಪ್ಪನ್ನು ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ.
ಮತ್ತಷ್ಟು ಓದು 










