ಓಶೋ ವಿಚಾರಗಳು ಪ್ರಾಕ್ಟಿಕಲ್ಲಾಗಿವೆಯೇ?
– ಸುಪ್ರೀತ್.ಕೆ.ಎಸ್
ಈ ಲೇಖನದ ಉದ್ದೇಶ ಓಶೋ ಮೇಲಿನ ನನ್ನ ಪ್ರೀತಿ, ಮುನಿಸು, ಅಭಿಮಾನ, ಆತನ ಬಗೆಗಿರುವ ಬೆರಗು, ಕುತೂಹಲ, ಅನುಮಾನ, ಅಸಹ್ಯಗಳನ್ನು ಬರೆದಿರಿಸುವುದು, ಆ ಮೂಲಕ ನನ್ನೊಳಗೊಂದು ಸ್ಪಷ್ಟ ನಿಲುವನ್ನು ರೂಪಿಸಿಗೊಳ್ಳುತ್ತಾ ಹೋಗುವುದು ಎಂದಾಗಿತ್ತು. ಓಶೋನ ವಿಚಾರಗಳನ್ನು ನಾನೆಷ್ಟೇ ಮೆಚ್ಚಿದರೂ
ಅವನ್ನು ಯಥಾವತ್ತಾಗಿ ಬ್ಲಾಗಿಗೆ ಹಾಕುವುದು ವ್ಯರ್ಥ ಶ್ರಮ ಎನ್ನಿಸಿ ಸುಮ್ಮನಾದೆ. ಹಾಗೆ ನೋಡಿದರೆ ಅಂತರ್ಜಾಲದಲ್ಲಿ ಓಶೋ ಸಾಹಿತ್ಯಕ್ಕೆ ಕೊರತೆಯೇನೂ ಇಲ್ಲ. ಆತನ ಪ್ರತಿಯೊಂದು ಭಾಷಣ, ಪುಸ್ತಕಗಳು ಅಂತರ್ಜಾಲದಲ್ಲಿ ಲಭ್ಯವಿವೆ. ಕನ್ನಡದಲ್ಲಿಯೂ ಓಶೋ ವಿಚಾರಗಳಿಗಾಗಿಯೇ ಮೀಸಲಾದ ಪತ್ರಿಕೆಯಿದೆ. ಇಂಗ್ಲೀಷಿನಲ್ಲಿ ತುಂಬಾ ಸರಳವಾಗಿರುವ ಪ್ರವಚನಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಹೊರಟರೆ ನಮ್ಮ ಶ್ರದ್ಧೆಯೆಂಬ ಕಲ್ಮಷವೇ ಸೇರಿಕೊಂಡು ಭಾಷಾಂತರ ಮೂಲಕ್ಕಿಂತ ಹೆಚ್ಚು ಕ್ಲಿಷ್ಟಕರವಾಗಿಬಿಡುತ್ತದೆ. ಮೇಲಾಗಿ ಓಶೋ ಇಂಥದ್ದೊಂದು ವಿಷಯದ ಬಗ್ಗೆ ಎಂದು ತಯಾರಾಗಿ ಮಾತಾಡಿದವನಲ್ಲ. ತನ್ನ ಸಂನ್ಯಾಸಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೋದ. ಒಂದೊಂದು ಪ್ರವಚನದಲ್ಲೂ ಬೇರೆ ಬೇರೆ ಆಯಾಮಗಳಲ್ಲಿ ವಿಷಯಗಳನ್ನು ವಿವರಿಸುತ್ತಾ ಹೋಗುವ ಆತನ ಶೈಲಿಯನ್ನು ಅನೇಕ ವೇಳೆ ನಾವು ವಿರೋಧಾಭಾಸ ಎಂದು ಭಾವಿಸುತ್ತೇವೆ.ಯೇಸುವಿನ ಬಗ್ಗೆ ಇದುವರೆಗೂ ನಾನು ಕೇಳಿರುವ ಪ್ರವಚನಗಳಲ್ಲಿ ಒಂದಕ್ಕಿಂತ ಒಂದು ಭಿನ್ನವಾದ, ಕೆಲವೊಂದು ವೇಳೆ ವೈರುಧ್ಯಗಳಂತೆ ಕಾಣುವ ಹಾಗೆ ಆತ ಮಾತನಾಡಿದ್ದಾನೆ. ಹೀಗಾಗಿ ಓಶೋ ಚಿಂತನೆ ಎಂಬುದು ನನ್ನೆದುರು ಸಮುದ್ರದ ಹಾಗೆ ನಿಂತಂತೆ ಭಾಸವಾಗುತ್ತದೆ. ಕಲ್ಲು ಸಕ್ಕರೆಯ ದೊಡ್ಡ ಬಂಡೆಯೆದುರು ನಿಂತಂತೆ ಅನ್ನಿಸುತ್ತದೆ. ಹೀಗಾಗಿ ಆತನ ಪ್ರವಚನಗಳನ್ನು ಯಥವಾತ್ತಾಗಿ ಭಾಷಾಂತರಿಸಿ ಬ್ಲಾಗಿಗೆ ಹಾಕುವುದಕ್ಕಿಂತ ಆತನ ಪ್ರೇರಣೆಯಿಂದ ನಾನು ಕಂಡುಕೊಂಡ ಸತ್ಯ ಯಾವುದು, ಆತ ನನ್ನಲ್ಲಿ ಹುಟ್ಟುಹಾಕಿದ ವಿಚಾರಗಳು ಯಾವುವು, ಅವು ನನ್ನೊಳಗೆ ಮಾಡಿದ ಪ್ರಭಾವಗಳೇನು ಎಂಬುದರ ಬಗ್ಗೆ ಬರೆಯುತ್ತೇನೆ. ಮತ್ತಷ್ಟು ಓದು 
‘ಭಾರತದ ಬಳಿಯಿದೆ ನಿಂಬೆಯ ಶಕ್ತಿ’ !
ಪಾಕಿಸ್ತಾನದ ಬಳಿ ಭಾರತಕ್ಕಿಂತ ೧೦೦ಕ್ಕೊ ಹೆಚ್ಚು ಅಣ್ವಸ್ತ್ರಗಳಿವೆ ಅನ್ನೋ ಸುದ್ದಿ ಮೊನ್ನೆ ಪತ್ರಿಕೆಗಳಲ್ಲಿ ಬಂದಿದೆ.ಆದರೆ ಭಾರತೀಯರು ಈ ಸುದ್ದಿಗೆ ಗಲಿಬಿಲಿಯಾಗಬೇಕಿಲ್ರಿ! ಯಾಕೆ ಅಂತಿರಾ? ಯಾಕಂದ್ರೆ ‘ಭಾರತದ ಬಳಿಯಿದೆ ನಿಂಬೆಯ ಶಕ್ತಿ’ !
ಇದೇನಿದು ಯಾವ್ದೋ ಬಟ್ಟೆ ತೊಳ್ಯೋ ಸೋಪ್ ಜಾಹಿರಾತಿನ ಡೈಲಾಗ್ ತರ ಇದ್ಯಲ್ಲಪ್ಪ ಅಂತಿರಾ?ರೀ,ಇದು ಆ ತರ ನಿಂಬೆ ಅಲ್ಲ.ನಾನ್ ಹೇಳೋಕ್ ಹೊರಟಿದ್ದು,ಕಳೆದ ಬಾರಿ ಒಂದಿಷ್ಟು ಜನ ಎಂ.ಎಲ್.ಎಗಳು ಹೋಗಿ ಗೋವಾದಲ್ಲಿ ಕೂತು,ಅಲ್ಲಿಗೆ ಕುಮ್ಮಿನು ಹೋದ್ಮೇಲೆ,ಈ ಕಡೆ ಯಡ್ಡಿ ಕುರ್ಚಿ ಗಡ-ಗಡ ನಡುಗಲು ಶುರು ಮಾಡಿದಾಗ.ವಿಧಾನ ಸೌಧದ ಎದುರು ಕಾಣಿಸಿತ್ತಿಲ್ಲ ಹರಿಶಿನ ಕುಂಕುಮ ಹಚ್ಚಿದ ನಿಂಬೆಹಣ್ಣು ಅದರ ಬಗ್ಗೆ. ಮತ್ತೀಗ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಕಾಣಿಸಿಕೊಂಡ ಪವರ್ಫುಲ್ ನಿಂಬೆಯ ಬಗ್ಗೆ! (ಆ ಪರಿ ಕಾಡ್ತಾ ಇರೋ ರಾಜಭವನದ ಬಳಿ ಯಾಕೆ ಇನ್ನ ನಿಂಬೆ ಬಿದ್ದಿಲ್ಲ ಅಂತ ನಾನ್ ಕೇಳೋಲಪ್ಪ 😉 ).ಇದೇ,ಈ ಮಂತ್ರಿಸಿದ ನಿಂಬೆಹಣ್ಣು ಕಣ್ರೀ ಭಾರತದ ಶಕ್ತಿಯಾಗಬೇಕು.ಅದ್ಹೆಂಗೆ ಸಿವಾ ಅಂತಿರ? ಹೇಳ್ತೀನಿ ಕೇಳಿ…
ಈಗಾಗ್ಲೇ ಚೀನಾ ಅನ್ನೋ ನಂಬಿಕೆಗೆ ಅರ್ಹವಲ್ಲದ ದೇಶ ಭಾರತವನ್ನ ಇರೋ ಬರೋ ದಿಕ್ಕುಗಳಿಂದ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಕಡೆಯಿಂದ ಸುತ್ತಿ ಕುಳಿತಿದೆ.ಹೀಗೆ ಪಾಕಿಸ್ತಾನ,ಶ್ರೀಲಂಕ,ಬಾಂಗ್ಲ,ನೇಪಾಳ,ಬರ್ಮಾ ಕಡೆ ಹರಡಿಕೊಂಡಿರೋ ಚೀನಿಗಳು ವಾಪಸ್ ಚೈನಗೆ ಹೋಗೋ ಹಾಗೆ ಮಾಡ್ಬೇಕು.ಹೇಗ್ ಮಾಡೋದು?
ಹೆಗಂದ್ರೆ,ಹೇಗಿದ್ರು ಅಲ್ಲಿ ಪ್ರಜಾಪ್ರಭುತ್ವಕ್ಕಾಗಿ ಚಿಕ್ಕದಾಗಿ ಕೂಗೆದ್ದಿದೆ.ಅಲ್ಲಿನ ಜನರಿಗೆ ದೈತ್ಯ ಶಕ್ತಿ ಆವಹನೆಯಾಗುವಂತೆ ಭಾರತ ನಿಂಬೆ ಶಕ್ತಿಯನ್ನ ಪ್ರಯೋಗಿಸ್ಬೇಕು ರೀ,ಆಗ ಅಲ್ಲಿ ರೊಚ್ಚಿಗೆಳೋ ಚೀನೀ ಜನರನ್ನ ಕಂಟ್ರೋಲ್ ಮಾಡೋಕೆ ಅಂತ ಚೀನಿಗಳೆಲ್ಲ ವಾಪಸ್ ಅವ್ರ ದೇಶಕ್ಕೆ ಹೋಗ್ತಾರೆ.ಅವರೆಲ್ಲ ಕಾಲ್ಕಿತ್ತ ಮೇಲೆ ಭಾರತ ಸೋಯ್ಯಿ-ಟಪಕ್ ಅಂತ ಮತ್ತಿನ್ನೊಂದು ಕೆಲ್ಸ ಮಾಡ್ಬೇಕಪ್ಪ.ಗಡಿಯುದ್ದಕ್ಕೂ ನಿಂಬೆ ಬೆಳೆಯೋದು ಕಡ್ಡಾಯ ಮಾಡಿ, ಗಡಿ ಬೇಲಿ ತರ ಮಂತ್ರಿಸಿದ ನಿಂಬೆ ಬೇಲಿ ಮಾಡಿಬಿಡ್ಬೇಕು.ಅಲ್ಲಿಗೆ ದೇಶ ಫುಲ್ ಸೆಕ್ಯೂರ್ ಆಗಿಬಿಡುತ್ತೆ! (ಹಿಂಗ್ ಮಾಡೋಕೆ ನಮ್ ದೇಸದ ಸಿಕ್ಯುಲರ್ಗಳು ಬಿಡೋಲ್ಲ ಅಂತಿರ, ಅವ್ರು ಯಾವ್ ಒಳ್ಳೆ ಕೆಲ್ಸ ತಾನೇ ಮಾಡೋಕ್ ಬಿಡ್ತಾರೆ ನೀವೇ ಹೇಳಿಪ್ಪ ;))
ಇಷ್ಟು ಮಾಡಿದ್ರೆ ಪಾಕಿಸ್ತಾನದ ಸದ್ದು ಸಹ ಅಡಗಿಬಿಡುತ್ತೆ,ಇಲ್ಲ ಅಂದ್ರೆ ಭಾರತದಲ್ಲಿಡಿ ಕಡ್ಡಾಯ ನಿಂಬೆ ಬೆಳೆಯುವಂತೆ ಮಾಡಿ ಅದೇ ನಿಂಬೆ ಹಣ್ಣು ಪಾಕಿಸ್ತಾನಕ್ಕೆ ಎಸೆಯುವಂತೆ ಮಾಡಿದ್ರೂ ಆ ದೇಶ ನಿಂಬೆಯಲ್ಲಿ ಮುಚ್ಚಿ ಹೋಗುತ್ತೆ! ಹೇಗಿದೆ ‘ನಿಂಬೆಯ ಶಕ್ತಿ’, ಸಕ್ಕತ್ತ್ ಅಲ್ವಾ? ಮತ್ತಷ್ಟು ಓದು 
ಹಾರೋ ಬೂದಿಯ ನೋಡಿದಿರಾ?
ಪವನ್ ಎಂ ಟಿ
ಒಂದು ದಿನ ಮನೆಯಲ್ಲಿ ಬಿದ್ದಿರುವ ಧೂಳನ್ನು ಗುಡಿಸದೇ ಇದ್ದರೇನೆ ಕಿರಿಕಿರಿ ಆಗ್ತಾ ಇರುತ್ತೆ. ಹಾಗಿರುವಾಗ ಹೇಗೆ ಇದ್ರೂ ಧೂಳಿನ ಒಳಗೆ ಇರಬೇಕಂದ್ರೆ ಹೇಗಾಗಬಹುದು?
ದಿನನಿತ್ಯದ ಸಣ್ಣ ಸಂಗತಿಯೇ ಹೀಗಾದರೆ ಉಡುಪಿ ಜಿಲ್ಲೆಯ ಪಡುಬಿದ್ರೆಯ ನಂದಿಕೂರು ಗ್ರಾಮದ ಸುತ್ತಮುತ್ತಲಿನ ಜನರ ಸ್ಥಿತಿ ನೆನಪಿಸಿಕೊಂಡರೇ ಮೈ ಜುಮ್ ಎನ್ನುತ್ತದೆ. ಕಾರಣವಿಷ್ಟೆ. ಪಡುಬಿದ್ರಿ ಸಮೀಪದಲ್ಲಿ ಇತ್ತೀಚೆಗೆ ಬೃಹತ್ ಕಂಪೆನಿಯೊಂದು ತನ್ನ ಕಾರ್ಯಾರಂಭ ಮಾಡಿದೆ. ಅದರ ಆರಂಭದ ಸಂದರ್ಭದಲ್ಲೇ ತೀವ್ರ ಪ್ರತಿರೋಧ ಇತ್ತಾದರೂ ಹಣವಂತರ ಮುಂದೆ ಈ ಚಳುವಳಿ ಸೋತು ಸುಣ್ಣವಾಯಿತು. ಸಮಾಜ ಸೇವೆ ಮಾಡುತ್ತೇವೆಂದು ಹೇಳಿ ಮತ ಪಡೆದ ಜನಪ್ರತಿನಿಧಿಗಳು ಈ ಕಂಪೆನಿಯ ರಕ್ಷಣೆಗೆ ನಿಂತರು. ಇದೀಗ ಕಂಪೆನಿಯು ತನ್ನ ಹತ್ತು ಶೇಕಡಾ ಕೆಲಸ ಆರಂಭ ಮಾಡಿದೆ ಅಷ್ಟೇ. ಆದರೆ ಅದು ಕೊಟ್ಟ ಹೊಡತಕ್ಕೆ ಇಲ್ಲಿನ ಸ್ಥಳೀಯ ಜನತೆ ತತ್ತರಿಸುತ್ತಿದೆ. ಇಲ್ಲಿನ ಕಾರ್ಖಾನೆಯು ಉಗುಳುತ್ತಿರುವ ತ್ಯಾಜ್ಯದ ಧೂಳಿನಿಂದ ಅನೇಕ ರೀತಿಯ ಶಾರೀರಿಕ ತೊಂದರೆಗಳನ್ನು ಇಲ್ಲಿನ ಪ್ರಜೆಗಳು ಅನುಭವಿಸುತ್ತಿದ್ದಾರೆ. ತನ್ನದಲ್ಲದ ತಪ್ಪಿಗೆ ಮಕ್ಕಳು ಮಹಿಳೆಯರು ಸೇರಿದಂತೆ ಚರ್ಮ, ಶ್ವಾಸಕೋಶ ಸಂಬಂಧಿ ರೋಗಗಳಿಂದ ಬಳಲುತ್ತಿದ್ದಾರೆ. ಮತ್ತಷ್ಟು ಓದು 
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ…!
ಸಾಮೂಹಿಕ ಆತ್ಮಹತ್ಯೆ: ಮಲೆಕುಡಿಯರ ಬೆದರಿಕೆ, ನಿಲ್ಲದ ಮಲೆಕುಡಿಯರ ಮೇಲಿನ ದೌರ್ಜನ್ಯ,
ಬಲಾತ್ಕಾರದಿಂದ ಎಬ್ಬಿಸಿದರೆ ಪ್ರಾಣತ್ಯಾಗ, ಸತ್ತರೂ-ಬದುಕಿದರೂ ಇಲ್ಲಿಯೇ: ಮಲೆಕುಡಿಯರ ಶಪಥ
ಪ್ರಜಾವಾಣಿ ಪತ್ರಿಕೆಯಲ್ಲಿ ಜನವರಿ ತಿಂಗಳ ಕೊನೆಯ ಕೆಲವು ದಿನಗಳಲ್ಲಿ ಬಂದ ಪ್ರಮುಖ ಸುದ್ದಿಗಳು. ಇವೆಲ್ಲಾ ‘ಕಾನೂನು ಪ್ರಕಾರವಾಗಿ ಎತ್ತಂಗಡಿ ಮಾಡಿಸಿದ್ದೇವೆ’ ಎಂದು ಹೇಳುತ್ತಿರುವ ಅಧಿಕಾರಿಗಳ ವಿರುದ್ಧವಾಗಿ ಮನೆ ಕಳೆದುಕೊಂಡ ಸುಲ್ಕೇರಿಯ ಮಲೆಕುಡಿಯರು ದು:ಖಭರಿತ ಅಸಹಾಯಕತೆಯ ದನಿ. ಇಷ್ಟಾದರೂ ಅಲ್ಲಿನ ಕಾಂಗ್ರೆಸ್ ಶಾಸಕರು ‘ಸುಲ್ಕೇರಿ ನಾಯ್ದಿಗುರಿಯಲ್ಲಿ ಒಕ್ಕಲೆಬ್ಬಿಸಿರುವ ಪ್ರಕರಣ ಕಾನೂನು ಪ್ರಕಾರವೇ ನಡೆದಿದೆ. ಸಂಸದರು, ಮಾಜಿ ಶಾಸಕರು ಹಾಗೂ ಬಿಜೆಪಿ ಮುಖಂಡರಿಂದ ನಾನು ಪಾಠ ಕಲಿಯಬೇಕಾಗಿಲ್ಲ. ನಾನು ಘಟನಾ ಸ್ಥಳಕ್ಕೆ ಕಾಲಿಡುವುದಿಲ್ಲ. ತಾಕತ್ತಿದ್ದರೆ ಅವರು ನನ್ನನ್ನು ಅಲ್ಲಿಗೆ ಬರುವಂತೆ ಮಾಡಲಿ’ಎಂದು ಘೋಷಿಸಿದ್ದಾರೆ. (ಪ್ರ.ವಾ) ಮತ್ತಷ್ಟು ಓದು 
ಸಂಶೋಧನೆಯ ಸತ್ಯಕ್ಕೆ ಸಂದ ಜಯ: ಚಿಮೂ.ಗೆ ಗೌರವ ಡಾಕ್ಟರೇಟ್ ನೀಡಲು ಒಪ್ಪಿಗೆ
ಕನ್ನಡದ ಹಿರಿಯ ಸಂಶೋಧಕರಾದ ಡಾ.ಎಂ. ಚಿದಾನಂದ ಮೂರ್ತಿಯವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ನೀಡಲು ನಿರಾಕರಿಸಿದ್ದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕೊನೆಗೂ ಗೌರವ ಡಾಕ್ಟರೇಟ್ ನೀಡಲು ಸಮ್ಮತಿಸಿದ್ದಾರೆ. ಕನ್ನಡಿಗರ, ಸಾಹಿತಿಗಳ, ಸಂಘಟನೆಗಳ ಒತ್ತಾಯಕ್ಕೆ ಒಪ್ಪಿಗೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಚರ್ಚ್ ಮೇಲಿನ ದಾಳಿಯ ಕುರಿತು ನ್ಯಾಯಮೂರ್ತಿ ಸೋಮಶೇಖರ್ ಆಯೋಗವು ನೀಡಿದ ವರದಿಯನ್ನು ಚಿದಾನಂದಮೂರ್ತಿಯವರು ಸಮರ್ಥಿಸಿದ್ದಾರೆ. ಅಲ್ಲದೇ ಡಾಕ್ಟರೇಟ್ ನೀಡಲು ಸಾಹಿತ್ಯಿಕ ಸಾಧನೆಗಳ ಜೊತೆಗೆ ಸಾಮಾಜಿಕ ಕಾಳಜಿಯೂ ಮಾನದಂಡ ಎಂದು ಹೇಳುವ ಮೂಲಕ ಗೌರವ ಡಾಕ್ಟರೇಟ್ ಗೆ ಹೊಸ ಮಾನದಂಡವೊಂದನ್ನು ಸೇರ್ಪಡೆಗೊಳಿಸಿದ್ದರು.
ರಾಜ್ಯಪಾಲರ ಈ ನಿರ್ಧಾರವನ್ನು ಸಾಹಿತಿಗಳು, ಹಲವು ಕನ್ನಡಪರ ಸಂಘಟನೆಗಳು, ಕನ್ನಡ ಪ್ರೇಮಿಗಳು ವಿರೋಧಿಸಿದ್ದರು. ಚಿದಾನಂದಮೂರ್ತಿಯವರನ್ನು ಕೋಮುವಾದಿಯೆಂದು ಸಹ ಹೇಳುವಲ್ಲಿ ರಾಜ್ಯಪಾಲರು ಹಿಂದೆ ಬಿದ್ದಿರಲಿಲ್ಲ. ಇದನ್ನು ತೀವ್ರವಾಗಿ ವಿರೋಧಿಸಿದ್ದ ಸಾಹಿತ್ಯ ಪ್ರೇಮಿಗಳು, ಸಂಶೋಧನಾ ಆಸಕ್ತರು ಇಂದು ರಾಜಭವನದ ಮುಂದೆ ಪ್ರತಿಭಟನೆ ನಡೆಸಿದ್ದರು.
ನಿನ್ನೆ ಮುಕ್ತಾಯಗೊಂಡ 77ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿಯೂ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ತಮ್ಮ ನಡುವಿನ ವೈಚಾರಿಕ ಭಿನ್ನತೆಗಳನ್ನು ಮರೆತು ಕನ್ನಡ ಸಂಶೋಧಕನಿಗೆ ಸಲ್ಲಬೇಕಿದ್ದ ಸ್ಥಾನಮಾನಗಳನ್ನು ಕೊಡಿಸುವಲ್ಲಿ ಎಲ್ಲ ಕನ್ನಡ ಸಾಹಿತಿಗಳು ಒಂದಾದದ್ದು ಮತ್ತು ಒಕ್ಕೊರಲಿನಲ್ಲಿ ಆಗ್ರಹಪಡಿಸಿದ್ದು ವಿಶೇಷವಾಗಿತ್ತು. ಮತ್ತಷ್ಟು ಓದು 
ಇದು ಕನ್ನಡಕ್ಕಾದ ಅವಮಾನವಲ್ಲವೇ?
ಕರ್ನಾಟಕದಲ್ಲಿ ಕನ್ನಡದ ಪರ ಕೆಲಸ ಮಾಡಿದವರಿಗೆ ಗೌರವ ಕೊಡೋದು ತಪ್ಪಾ? ತಪ್ಪು ಅನ್ನೋದಾದ್ರೆ ರಾಜ್ಯಪಾಲರು, ಡಾ|| ಎಂ. ಚಿದಾನಂದಮೂರ್ತಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನಿರಾಕರಿಸಿರುವುದು ಸರಿಯಾಗುತ್ತದೆ,ಅಲ್ವಾ? ಚಿಮೂ ಯಾರು? ಕನ್ನಡಕ್ಕೆ ಅವರ ಕೊಡುಗೆಯೇನು? ಎಲ್ಲ ಅರ್ಹತೆಯಿದ್ದರು ಅವರಿಗೆ ಗೌರವ ಡಾಕ್ಟರೇಟ್ ನಿರಾಕರಿಸಲು ನೀಡಿರುವ ಕಾರಣವಾದರು ಏನು ಅಂತ ನೋಡಿದರೆ ‘ಸಂಘ ಪರಿವಾರದ’ ಜೊತೆ ಅವರು ಗುರ್ತಿಸಿಕೊಂಡಿರುವ ಮಹಾಪರಾಧವನ್ನ ಮಾಡಿರುವುದಂತೆ!
ಅದ್ಯಾವ ಸೀಮೆಯ ಅಪರಾಧ ಅಂತ ನನಗೂ ಇನ್ನು ಕೆಲವರಿಗೂ ಅನ್ನಿಸಬಹುದು ಆದರೆ ಸಿಕ್ಯುಲರ್ ಮನಸ್ಸುಗಳಿಗೆ ಅದು ದೇಶ ದ್ರೋಹಕ್ಕೆ ಸಮ ಅನ್ನಿಸಲೂಬಹುದು.ಆದರೆ ಚಿಮೂ ಅವರನ್ನ ಕೇಸರಿ-ಹಸಿರಿನ ಪರದೆ ಸರಿಸಿ, ಕೆಂಪು-ಹಳದಿಯ ಕನ್ನಡದ ಪರದೆಯ ಮೂಲಕ ನೋಡಿದಾಗಲೂ ಅವರ ವಿರೋಧಿಗಳು ಅವರಿಗೆ ಗೌರವ ಡಾಕ್ಟರೇಟ್ ನೀಡುವುದನ್ನು ವಿರೋಧಿಸಬಲ್ಲರೆ?
ಯಾವುದೇ ರಾಜಕೀಯ ಪಕ್ಷ,ಸಂಘಟನೆ, ಪಂಥಕ್ಕೆ ಸೇರದ ಒಬ್ಬ ಸಾಮನ್ಯ ಕನ್ನಡಿಗನ ಕಣ್ಣಿಗೆ ಚಿಮೂ ಅವರು,ಕನ್ನಡದ ಪ್ರಖ್ಯಾತ ಸಂಶೋಧಕ,ವಿದ್ವಾಂಸ,ಇತಿಹಾಸಜ್ಞ ಹಾಗೂ ಲೇಖಕರಾಗಿ ಮಾತ್ರ ಕಾಣಬಲ್ಲರು.
ಇಂತ ಚಿಮೂ ಅವರಿಗೆ ಗೌರವ ಡಾಕ್ಟರೇಟ್ ನಿರಾಕರಿಸುವುದು ಕನ್ನಡ ಭಾಷೆಯ ಪ್ರಾಚೀನತೆ ಹಾಗೂ ಪ್ರಾಚೀನ ಕರ್ನಾಟಕದ ಬಗ್ಗೆ ಅವರ ಒಲವನ್ನ,ನಿಷ್ಠೆಯನ್ನ,ತುಡಿತವನ್ನ ಮತ್ತು ಕನ್ನಡಕ್ಕಾಗಿ ಅವರು ಮಾಡಿರುವ ಕೆಲಸವನ್ನ ಕಡೆಗಣಿಸಿದಂತೆ ಅವಮಾನಿಸಿದಂತಲ್ಲವೇ? ಕನ್ನಡಕ್ಕಾಗಿ ಕೆಲಸ ಮಾಡಿದವರನ್ನ ಕಡೆಗಣಿಸುವುದು ಕನ್ನಡಿಗರನ್ನ,ಕರ್ನಾಟಕವನ್ನ ಕಡೆಗಣಿಸಿದಂತೆ-ಅವಮಾನಿಸಿದಂತೆಯೇ ಸರಿ. ಮತ್ತಷ್ಟು ಓದು 
ಮಕ್ಕಳೇ, ಕಿಂದರಿಜೋಗಿ ಇಂಟರ್ ನೆಟ್ ನಲ್ಲಿದ್ದಾನೆ
ಇವನು ತುತ್ತೂರಿ ಊದುವ ಕಿಂದರಿಜೋಗಿಯಲ್ಲ. ನಿಮಗೆ ತುತ್ತೂರಿ ಊದಲು, ಚಿತ್ರ ಬಿಡಿಸಲು, ಕತೆಕವನ ಬರೆಯಲು, ಮಕ್ಕಳ ಸೃಜನಾತ್ಮಕತೆ ಬೆಳೆಸಲು ಹೇಳಿಕೊಡುತ್ತಾನೆ. ಒಂದು ಲೆಕ್ಕದಲ್ಲಿ ಇವನು ಮಕ್ಕಳಿಗೆ ಇಂಟರ್ ನೆಟ್ ಮಾಮ. ಮಕ್ಕಳಿಗೆ ಬೇಕಾದ್ದು ಇಂದು ಇಂಟರ್ ನೆಟ್ ನಲ್ಲಿ ಕಡಿಮೆಯಿದೆ. ಅವರ ಸೃಜನಶೀಲತೆ ಬೆಳೆಸಲು ಪೂರಕವಾದ ವೆಬ್ ಸೈಟ್, ಬ್ಲಾಗ್ ಗಳು ಕನ್ನಡದಲ್ಲಿ ಬೆರಳೆಣಿಕೆಯಷ್ಟಿವೆ ಅಷ್ಟೇ. ಚಂದಮಾಮ, ಬಾಲವನ.. ಮತ್ತೊಂದಿಷ್ಟು ಬ್ಲಾಗ್ ಗಳಿವೆ ಅಷ್ಟೇ.
ಹೆಚ್ಚು ಮಕ್ಕಳಿಗೆ ಇಷ್ಟವಾಗುವ ಹೊಸ ಮಕ್ಕಳ ವೆಬ್ ಸೈಟ್ ಇನ್ನೊಂದಿದೆ. ಅದು ಕಿಂದರಿಜೋಗಿ ಅಂತ. “ಕಿಂದರಜೋಗಿ, ಮಕ್ಕಳಿಗಾಗಿ ತೆರೆದಿರುವ ಮುಕ್ತ ತಾಣ. ದಿನನಿತ್ಯದ ಕಲಿಕೆಯಿಂದ ಹಿಡಿದು, ತಾವೇ ತಾವಾಗಿ ಹೊಸತನ್ನೇನಾದರೂ ಮಾಡಬಲ್ಲೆವು ಎಂಬ ಶಕ್ತಿಯನ್ನು ಮಕ್ಕಳಲ್ಲಿ ತುಂಬುವ ಒಂದು ಸಣ್ಣ ಪ್ರಯತ್ನ. ಯಾವುದೇ ತಂಡ ರಚನೆಯಿಲ್ಲದೆ, ಮಕ್ಕಳೊಡನೆ ತನ್ನಲ್ಲಿರುವ ಕಲೆ, ಕಲಿಕೆ, ಜ್ಞಾನ ಇತ್ಯಾದಿಗಳನ್ನು ಹಂಚಿಕೊಳ್ಳುವ ಎಲ್ಲರಿಗೂ ಇದು ವೇದಿಕೆ. ನೀವೂ ನಮ್ಮೊಂದಿಗೆ ಕೈಜೋಡಿಸ್ತೀರಲ್ಲವೇ” ಎಂದು ಕಿಂದರಿಜೋಗಿ ಹೇಳುತ್ತಾನೆ.
ಕಿಂದರಿಜೋಗಿ ಮಕ್ಕಳ ಎಲ್ಲ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತಾನೆ ಅಂತ ವೆಬ್ ಸೈಟ್ ನೋಡಿದಾಗಲೇ ಅರಿವಾಗುತ್ತದೆ. ಅಲ್ಲಿ ಓದಿ ಕಲಿ, ಕಥೆ, ಕವನ, ಗಣಿತ, ಚಿತ್ರಕಥೆ, ನಾಟಕ, ನೋಡಿ ನಲಿ, ಪ್ರಯೋಗ, ಭೂಮಿ ಮೇಲೆ, ಮಕ್ಕಳ ಸುದ್ದಿ, ಮಾಡಿ ತಿಳಿ, ವಿಜ್ಞಾನ, ವ್ಯಂಗ್ಯಚಿತ್ರಗಳು, ಸಂಗೀತ ಎಲ್ಲವೂ ಇದೆ.
ಒಂದಿಷ್ಟು ಸ್ಯಾಂಪಲ್ ನೋಡಿ
ಇಲ್ಲಿ……………………
ಮತ್ತಷ್ಟು ಓದು 
ಪೇಜಾವರ ಶ್ರೀಗಳಿಗೆ ದಲಿತರ ಮನೆ(ನ) ಇನ್ನೂ ಹತ್ತಿರವಿಲ್ಲವೇ?
ಸಾತ್ವಿಕ್ ಎನ್.ವಿ
ಉಡುಪಿಯಲ್ಲೊಂದು ಪ್ರಸಿದ್ಧ ಕಾಲೇಜು. ಪ್ರತಿವರ್ಷವೂ ಹೊಸದಾಗಿ ಬರುವ ವಿದ್ಯಾರ್ಥಿಗಳ ಜೊತೆ ಆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಸ್ವಾಮೀಜಿಯವರೊಂದಿಗೆ ಸಂವಾದ ಕಾರ್ಯಕ್ರಮ. ಒಂದು ವರ್ಷವೂ ತಪ್ಪದೇ ಯತಿಗಳಿಗೆ ವಿದ್ಯಾರ್ಥಿಗಳು ಕೇಳುವ ಪ್ರಶ್ನೆ ‘ಸ್ವಾಮೀಜಿ ಕೃಷ್ಣಮಠದಲ್ಲಿ ಸಹಪಂಕ್ತಿ ಭೋಜನ ಯಾಕಿಲ್ಲ’ ಅಂತ. ‘ಅದು ನಮ್ಮ ಮಠದ ಸಂಪ್ರದಾಯ ಕ್ರಮ. ಅಲ್ಲದೇ ಯಾವುದೇ ಬ್ರಾಹ್ಮಣರು ‘ಅನ್ಯ’ರೊಂದಿಗಿನ ಸಹಪಂಕ್ತಿ ಭೋಜನ ಅಷ್ಟಾಗಿ ಇಷ್ಟಪಡುವುದಿಲ್ಲ’ ಎಂಬ ರೆಡಿಮೇಡ್ ಉತ್ತರ ಸ್ವಾಮೀಜಿಗಳಿಂದ. ಮರುಪ್ರಶ್ನೆ ಕೇಳಲು ಹೊರಟ ವಿದ್ಯಾರ್ಥಿಗೆ ಪಕ್ಕದಲ್ಲಿರುವ ಮೇಷ್ಟ್ರುಗಳ ಬಿರುಸುನೋಟ ರೆಡ್ ಸಿಗ್ನಲ್ ಆಗಿರುತ್ತದೆ. ಅಲ್ಲಿಗೆ ಸಂವಾದ ಕಾರ್ಯಕ್ರಮ ಮುಗಿಯುತ್ತದೆ.
ಈ ಪ್ರಸಂಗ ನೆನಪಾದದ್ದು ಪೇಜಾವರ ಶ್ರೀಗಳ ದಲಿತ ಕಾಲೋನಿಗಳ ಭೇಟಿಯನ್ನು ಪತ್ರಿಕೆಯಲ್ಲಿ ನೋಡಿದ ಸಂದರ್ಭದಲ್ಲಿ. ಸ್ವಾಮೀಜಿಯವರು ಅಲ್ಲಿನ ದಲಿತರಿಗೆ ವೈಷ್ಣವ ದೀಕ್ಷೆಯನ್ನು ನೀಡುವ ಮೂಲಕ ಜನರನ್ನು ಉತ್ತಮ ವ್ಯಕ್ತಿಗಳಾಗಿ ಪರಿವರ್ತಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಈ ಪ್ರಕ್ರಿಯೆ ನಮ್ಮಲ್ಲಿ ಸಾಮಾನ್ಯವಾದ ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಅವು- ಈವರಗೆ ದಲಿತರು ಉತ್ತಮ ವ್ಯಕ್ತಿಗಳಾಗಿರಲಿಲ್ಲವೇ? ಸಹಪಂಕ್ತಿ ಭೋಜನಕ್ಕೆ ಒಪ್ಪದ ಮನಸ್ಸುಗಳು ಮುಂದೆ ದಲಿತರನ್ನು ಅಥವಾ ಇತರೆ ವೈಷ್ಣವ ದೀಕ್ಷೆ ಪಡೆದ ವ್ಯಕ್ತಿಗಳನ್ನು ತಮ್ಮವರೆಂದು ಒಪ್ಪಿಕೊಳ್ಳುತ್ತಾರೆಯೇ?
ಹೀಗೆಲ್ಲಾ ಉಂಟು!
ಬೃಹತ್ ಬೆಂಗಳೂರಿನ ಕೆಲವು ಅನುಭವಗಳನ್ನು ನಾನೀಗ ಹೇಳ ಹೊರಟಿರುವೆ .ನೆನಪಾದರೆ ನಗು, ಅಳು ಎರಡೂ ಬರುವ ಘಟನೆಗಳವು. ಅದೊಂದು ಶನಿವಾರ ರಜೆಯಿದ್ದ ಕಾರಣ ಸ್ನೇಹಿತೆಯ ರೂಮಿಗೆ ಹೊರಟಿದ್ದೆ. ನಾನಿದ್ದ BTM ನಿಂದ ಅಷ್ಟು ದೂರದ ಕೋರಮಂಗಲಕ್ಕೆ ಆಟೋದಲ್ಲೇ ಹೊರಟಿದ್ದೆ. .(ನನ್ನಂತಹ ಇನ್ನೊಂದು ೪ ಜನರಿದ್ದರೆ ಆಟೋದವರ ಹೊಟ್ಟೆಪಾಡು ಬಹು ಸುಲಭ !)ಕೋರಮಂಗಲ (ಮೊನ್ನೆ ಮೊನ್ನೆ ಗೊತ್ತಾಗಿದ್ದು ಹೆಸರು )ದಲ್ಲೊಂದು ಸಿಗ್ನಲ್ ಬಿತ್ತು.ಇಳಿಯಲಿರುವ ಸ್ಟಾಪ್ ಮುಂದಿತ್ತು.ನಾನು ವಾಹನದಲ್ಲಿ ಕೂತ ಪಯಣಿಗರ ಯೋಗಕ್ಷೇಮ ವಿಚಾರಿಸಲು ಬರುತ್ತಿದ್ದ ಭಿಕ್ಷುಕರು ,ಮಾರಾಟಗಾರರನ್ನು ನೋಡುತ್ತಿದ್ದೆ .ಆಗ ನನ್ನ ದೃಷ್ಟಿ ಬಿತ್ತು ನೋಡಿ, ಸಿಗ್ನಲ್ ಕೆಳಗೆ ನಿಂತ ಬೈಕ್ ಸವಾರನ ಜೊತೆ ಜಗಳ ಆಡುತ್ತಿದ್ದ ಒಬ್ಬ ಹಿಜಡಾ ಮೇಲೆ. ನಮ್ಮ ಉಡುಪಿ ,ಕುಂದಾಪುರದ ಕಡೆ ಇವರು ಬೆರಳೆಣಿಕೆಯಷ್ಟು ಇರಬಹುದು ..ಆದ್ರೆ ನಾನಂತೂ ನೋಡಿದ್ದೇ ಇಲ್ಲ, t .v ಲೆಲ್ಲಾ ನೋಡಿದ್ದಾಗ ಭಯಮಿಶ್ರಿತ ಕುತೂಹಲ ಇದ್ದೆ ಇತ್ತು .ನಾ ಕಣ್ಣು ಬಾಯಿ ಬಿಟ್ಟುಕೊಂಡು ಅವಳನ್ನೇ ನೋಡುತ್ತಿದ್ದುದು ಅವಳಿಗೆ ಅದು ಹ್ಯಾಗೆ ಗೊತ್ತಾಯ್ತೋ, ಸ್ಮೈಲ್ ಕೊಡುತ್ತಲೇ ಬಂದುಬಿಟ್ಟಳಲ್ಲ ನಮ್ಮ ಆಟೋದ ಕಡೆ !ನನ್ನ ಫ್ರೆಂಡ್ ಹೇಳಿದ್ದು ನೆನಪಾಯ್ತು ,ಅವರು ಹುಡುಗೀರ ಹತ್ತಿರ ಏನೂ ಕೇಳಲ್ಲ ಅಂತ…. !ಸುಳ್ಳೇ ಸುಳ್ಳು ಕ್ಯಾರೆ ಅನ್ನದೆ ಆಟೋ ಹತ್ತಿ ನನ್ನ ಪಕ್ಕ ಕುಳಿತು ಕೈ ಚಾಚಿದಳು.. ಅಬ್ಬಾ! ಎಂದೂ ನಂಬದ ದೇವರು ಕೂಡ ನೆನಪಿಗೆ ಬಂದುಬಿಟ್ಟ ! ಆಟೋದವರಿಗೆ ಕೊಡಲು ಕೈಯಲ್ಲೇ ಇದ್ದ ನೂರರ ನೋಟನ್ನೇ ನಡುಗುವ ಕೈಯಿಂದ ಕೊಟ್ಟುಬಿಟ್ಟೆ.ಅವಳು ಅದನ್ನು ತೆಗೆದುಕೊಂಡು ತನ್ನಲ್ಲಿದ್ದ ಐವತ್ತರ ನೋಟನ್ನು ಅದು ಹೇಗೋ ತಲೆಗೆ ಸುತ್ತು ಹಾಕಿ (ನಾ ನೋಡಲಿಲ್ಲ) ಕೊಟ್ಟು ಬಿಟ್ಟಳಪ್ಪ.ನಾ ತೊದಲುತ್ತ ಬೇಡ ಬೇಡ ಅಂದಿರಬೇಕು…ಸ್ವರ ಹೊರಗೆ ಬಂದಿದ್ದು ಅನುಮಾನ !ಅವಳು ಬೇಡ ಅನ್ನೋಲ್ಲ, ಒಳ್ಳೆದಾಗುತ್ತೆ ಅಂತ ನನ್ನ ತಲೆ ಮುಟ್ಟಿ ಕೆಳಗಿಳಿದು ಹೋಗಿಬಿಟ್ಟಳು .ಅಲ್ಲಿ ತನಕ ನಾ ಉಸಿರಾಡಿದ್ದರೆ ಕೇಳಿ !……..ಆಗ ಬಾಯಿ ತೆರೆದ ಆಟೋದವನು, “ಮ್ಯಾಡಂ ಅವರನ್ನು ಹಾಗೆಲ್ಲ ನೋಡಬಾರದು ಅಂತ..ನಮಸ್ಕಾರ !ಮೊದಲೇ ಹೇಳಿದ್ದರೆ ಏನಾಗ್ತಿತ್ತೋ !?! ..ಈಗ ಹೋಗೋವಾಗ ಎಲ್ಲಾದರೂ ಅವರನ್ನು ನೋಡಿದರೆ ಕೈಯ್ಯಲ್ಲಿದ್ದ ಮೊಬೈಲ್ ಸ್ವಿಚ್ ಆಫ್ ಆಗಿದ್ದರೂ ಕೂಡ ಅಲ್ಲಾಡದೆ ಅದನ್ನೇ ನೋಡುತ್ತಿರುತ್ತೇನೆ!
ಹ್ಮ್.. ಇದೊಂದು ಮಾಯಾನಗರೀನೆ ಹೌದು ಕಣ್ರೀ…. ಇದು ಕೊಟ್ಟ ಪಾಡು , ನಾ ಪಟ್ಟ ಬವಣೆ ಎಷ್ಟೆಲ್ಲಾ ಅಂತ ಗೊತ್ತಾ..ಬರೆಯ ಹೋದರೆ ಕಾದಂಬರಿನೇ ಆದೀತು !3 ಸ್ಟಾಪ್ ಹಿಂದೆ ಹೋದರೆ ಸಿಗೋ ಸಿಲ್ಕ್ ಬೋರ್ಡ್ ಗೆ ಹೋಗಲು ಗೊತ್ತಿಲ್ಲದೇ btm ನಿಂದ ಮೆಜೆಸ್ಟಿಕ್ ಹೋಗಿ ಅಲ್ಲಿಂದ ಸಿಲ್ಕ್ ಬೋರ್ಡ್ಗೆ ಹೋದ ಪರಮ ಬುದ್ದಿವಂತೆ ನಾನು !.ಒಬ್ಬ ಆಸಾಮಿನ ಕೇಳಿದ್ದೆ,ಸಿಲ್ಕ್ ಬೋರ್ಡ್ಗೆ ಹೋಗಬೇಕಾದ್ರೆ ಹ್ಯಾಗ್ ಹೋಗ್ಬೇಕು ಅಂತ ! ಪಾಪ ,ಗೊತ್ತಿಲ್ಲ ಅನ್ನೋಕೆ ನಾಚಿಕೆ ಆಗಿರಬೇಕು !ನೆಕ್ಸ್ಟ್ ಸ್ಟಾಪ್ಗೆ ಹೋಗಿ ಯಾರ್ನಾದ್ರೂ ಕೇಳಿ ಅಂದ .ಅದಕ್ಕೆ ಅಲ್ಲಿ ತನಕ ಯಾಕೆ ಹೋಗ್ಬೇಕು ??ಮೆಜೆಸ್ಟಿಕ್ ನಲ್ಲಿ ಎಲ್ಲ ಬಸ್ಸು ಸಿಗತ್ತೆ ಅಂತ ಅಲ್ಲಿಗೆ ಹೋಗೋಕೆ ಬಸ್ ಸ್ಸ್ಟ್ಯಾಂಡ್ ನಲ್ಲಿ ನಿಂತರೆ ಬರೋ ಬಸ್ಸುಗಳ ಮೇಲಿದ್ದ ಹೆಸರು ಕೆಂ.ಬ.ನಿ (!!?!!)ಆಮೇಲೆ ಬಂದ ಬಸ್ಸುಗಳ ಮೇಲೆ ಬರೆದಿತ್ತು ಕೆಂಪೇಗೌಡ ಬಸ್ ನಿಲ್ದಾಣ ಅಂತ !ಓಹೋ ಗೊತ್ತಾಯ್ತು ಗೊತ್ತಾಯ್ತು !ಅಲ್ಲಾ….ನಮ್ಮ ಕಡೆ ಕಂಡಕ್ಟರುಗಳು ಕಿರುಚುತ್ತಾರಪ್ಪ ಪ್ರಸ್ತುತ ನಿಲ್ದಾಣ ಮತ್ತೆ ಹೋಗಲಿರೋ ನಿಲ್ದಾಣದ ಹೆಸರನ್ನು ..ಇವರೆಲ್ಲ ಯಾಕೆ ಹಿಂಗೆ ?!ಛೆ ಸರಿಯಿಲ್ಲಪ್ಪ ಬೆಂಗಳೂರು !ಆಮೇಲೆ ಫ್ರೆಂಡ್ ಮೂಲಕ ಮೆಜೆಸ್ಟಿಕ್ ಮತ್ತೆ ಕೆಂ.ಬ.ನಿ ಎರಡೂ ಒಂದೇ ಅಂತ ಗೊತ್ತಾದಾಗ ನಗು ಬಂತು ..ಸಂಜೆ ಸಿಲ್ಕ್ ಬೋರ್ಡ್ ಅನ್ನೋದು ನಾನಿದ್ದ ಸ್ಟಾಪಿನ ೩ ಸ್ಟಾಪ್ ಹಿಂದೇನೆ ಅಂತ ಗೊತ್ತಾದಾಗ ನಗು ,ಅಳು ಎರಡೂ ಬಂತು ! ಮತ್ತಷ್ಟು ಓದು 
ಡಬ್ಬಿಂಗ್ ಬೇಕೋ ಬೇಡವೋ ಅಂತ ನಿರ್ಧರಿಸಬೇಕಾದವನು “ಕನ್ನಡ ಪ್ರೇಕ್ಷಕನೋ?” ಇಲ್ಲ “ಕನ್ನಡ ಚಿತ್ರ ರಂಗವೋ?”
“ಮಚ್ಚು,ಲಾಂಗು,ಲೀಟರ್ ಗಟ್ಲೆ ರಕ್ತ ಬಿಟ್ಟು ಬೇರೆ ಇನ್ನೆನಪ್ಪ ಇದೆ ನಿಮ್ಮ ಕನ್ನಡ ಚಿತ್ರಗಳಲ್ಲಿ?, ವರ್ಷಕ್ಕೆ ಬರೋ ಚಿತ್ರಗಳಲ್ಲಿ ಅರ್ದಕ್ಕರ್ಧ ರಿಮೇಕ್ ಚಿತ್ರಗಳೇ.ಯಪ್ಪಾ!! ಬಿಡೋ ಹೋಗ್ಲಿ… ” ಅಂತ ನನ್ನ ಅನ್ಯ ಭಾಷೆಯ ಗೆಳೆಯರು ಕೂಡಿ ಗೇಲಿ ಮಾಡಿ ನಗ್ತಾ ಇದ್ರು.ನಾನಾದರು ಏನಂತ ಉತ್ತರ ಕೊಡ್ಲಿ, ಇರೋ ವಿಷ್ಯಾನೆ ತಾನೇ ಪಾಪ ಅವ್ರು ಹೇಳ್ತಾ ಇರೋದು.ಅದ್ರಲ್ಲಿ ತಪ್ಪೇನಿದೆ?,ಒಬ್ಬ ಕನ್ನಡ ಸಿನೆಮಾ ಅಭಿನಯದ ಅಭಿಮಾನಿಯಾಗಿದ್ದಕ್ಕೆ ಇಂತ ಮಾತುಗಳನ್ನ ಕೇಳಲೆಬೇಕಾಗಿತ್ತು.
ಅವ್ರು ಹೇಳಿದ್ ಮಾತ್ಗಳನ್ನ ಒಮ್ಮೆ ಕೂತು ಯೋಚಿಸಿ ನೋಡಿದೆ.ಹೌದಲ್ಲ! ನಮ್ಮ ಚಿತ್ರರಂಗದವರು ‘ಓಂ’ ಚಿತ್ರ ಗೆದ್ದಾದ ಮೇಲೆ ದಶಕಗಳ ಕಾಲ ಮಚ್ಚು,ಲಾಂಗು ಹಿಡಿದು ಟಿ.ಎಂ.ಸಿಗಟ್ಲೆ ರಕ್ತ ಚೆಲ್ಲಾಡಿ,ಮಧ್ಯೆ ‘ತವರಿನ’ ನೆನಪಾಗಿ ತೊಟ್ಟಿಲು,ಬಟ್ಟಲು,ಬಿಂದಿಗೆ,ಚೊಂಬು ಎಲ್ಲ ತಂದು,ಕಡೆಗೆ ‘ಮುಂಗಾರು ಮಳೆ’ ಬಂದ್ ಮೇಲೆ ಪ್ರವಾಹದ ರೀತಿಯಲ್ಲಿ ಪ್ರೀತಿಯ ಮಳೆ ಸುರಿಸುತ್ತಾ,ಒಂದ್ಸರಿ ತಮಿಳು ಸಿನೆಮ, ಇನ್ನೊಂದ್ಸರಿ ತೆಲುಗು ಸಿನೆಮ,ಟೈಮ್ ಸಿಕ್ಕಾಗ ಮಲಯಾಳಂ,ಹಿಂದಿ ಸಿನೆಮಾಗಳನ್ನ ನೋಡಿ ಆ ರೀಲುಗಳನ್ನ ಇಲ್ಲಿಗ್ ತಗಂಡ್ ಬಂದು,ಅದನ್ನ ಇಲ್ಲಿ ಬಿಚ್ಚಿ ಅದೇ ಕತೆಗೆ ಕನ್ನಡದ ಬಣ್ಣ (ಅದನ್ನು ಸರಿಯಾಗ್ ಬಳಿಯೋದಿಲ್ಲ ಎಷ್ಟೋ ಜನ,ಅದು ಇರ್ಲಿ ಬಿಡಿ) ಬಳಿದು ಮೇಲ್ಗಡೆ ಆ ಸ್ಟಾರು,ಈ ಸ್ಟಾರು ಅಂತ ಹೆಸ್ರಾಕಂಡು ರಿಲೀಸ್ ಮಾಡ್ತಾರೆ.ಜನ ಬಂದ್ ನೋಡ್ತಾರಾ?,ಎಲ್ಲೋ ನಮ್ಮಂತ ಕನ್ನಡ ಚಿತ್ರಗಳನ್ನ ಮಾತ್ರ ನೋಡೋ ಮಂದಿ ವಿಧಿಯಿಲ್ಲದೇ ಬಂದು ನೋಡ್ತಾರೆ.ಉಳಿದವರು ‘ಬನ್ರೋ,ಆ ಸಿನೆಮ ಬಂದೈತೆ ನೋಡನ’ ಅಂದ್ರೆ ‘ಹೇಯ್,ಹೋಗಲೇ ಅದನ್ನ ಆ ಭಾಷೆಯಲ್ಲೇ ನೋಡಿವ್ನಿ.ಯಾವ್ದಾದ್ರು ಇವರೇ ಮಾಡಿರೋ ಕತೆಯಿದ್ರೆ ಹೇಳು ಬತ್ತಿನಿ ನೋಡಕೆ’ ಅಂತಾರೆ. ಮತ್ತಷ್ಟು ಓದು 








