ವಿಷಯದ ವಿವರಗಳಿಗೆ ದಾಟಿರಿ

Posts from the ‘ಕರ್ನಾಟಕ,ಕನ್ನಡ’ Category

22
ಜನ

ರಾಜ್ಯಪಾಲರು…ಅತಿರೇಕ ಹಾಗೂ ಯಡಿಯೂರಪ್ಪ…..

  ‘ ನಂದನವನ’
                                        
ಭ್ರಷ್ಟಚಾರ, ಸ್ವಜನಪಕ್ಷಪಾತ, ಅಧಿಕಾರ ದುರಪಯೋಗ ಕಾರಣಗಳಿಂದಾಗಿ ಮುಖ್ಯಮಂತ್ರಿ ವಿರುದ್ಧವೇ ಕ್ರಿಮಿನಲ್ ಮೊಕದ್ದಮೆ ಹೂಡಲು ರಾಜ್ಯಪಾಲ ಹನ್ಸ್ರಾಜ್ ಭಾರದ್ವಾಜ್ ಅನುಮತಿ ನೀಡಿದ್ದಾರೆ. ಕಟ್ಟರ್ ಕಾರ್ಯಕರ್ತರ ಪಕ್ಷವಾದ ಬಿಜೆಪಿ, ಸಂಘಪರಿವಾರಿಗಳು ನಾಚುವ ಬದಲು ರಾಜ್ಯಪಾಲರ ವಿರುದ್ಧವೇ ತೊಡೆತಟ್ಟಿ ನಿಂತಿರುವುದು ನಾಚಿಕೇಡು. ಭ್ರಷ್ಟಚಾರದ ವಿರುದ್ಧ ಧ್ವನಿ ಎತ್ತುವ ಮೂಲಕ ಕಾನೂನಿನಲ್ಲಿ ಒಬ್ಬ ಸಾಮಾನ್ಯ ಮನುಷ್ಯನಿಂದ ಹಿಡಿದು ಮುಖ್ಯಮಂತ್ರಿಯವರಿಗೆ ಒಂದೇ ನ್ಯಾಯ ಎಂಬ ಘೋಷ ವ್ಯಾಕ್ಯವನ್ನು ವಕೀಲರಾದ ಸಿರಾಜ್ ಭಾಷಾ, ರಾಮಚಂದ್ರ ಸಿಎಂ ವಿರುದ್ದ ಮೊಕದ್ದಮೆಗೆ ಅವಕಾಶ ನೀಡುವಂತೆ ರಾಜ್ಯಪಾಲರ ಅನುಮತಿ ಕೋರುವ ಮೂಲಕ ಎತ್ತಿ ಹಿಡಿದಿದ್ದಾರೆ.
ಮೊದಲಿನಿಂದಲೂ ರಾಜ್ಯದಲ್ಲಿ ಒಂದು ರೀತಿ ವಿರೋಧ ಪಕ್ಷದಂತೆಯೇ ವತರ್ಿಸಿಕೊಂಡು ಬಂದ ರಾಜ್ಯಪಾಲರು ಸಿಎಂ  ವಿರುದ್ಧ ಮೊಕದ್ದಮೆ ಹೂಡಲು ಖಂಡಿತಾ ಅನುಮತಿ ಕೊಟ್ಟೆ ಕೊಡುತ್ತಾರೆ ಎಂಬುದರಲ್ಲಿ ಎರಡು ಮಾತು ಇರಲಿಲ್ಲ. ರಾಜ್ಯಪಾಲರು ಈ ಹಿಂದಿನ ಕೆಲವು ಪ್ರಕರಣಗಳಲ್ಲಿ ಸಿಎಂ ಹಾಗೂ ಬಿಜೆಪಿ ಸಕರ್ಾರದ ವಿರುದ್ಧದ ತೋರಿದ ಅಸಹಕಾರ ನಿಜಕ್ಕೂ ಅವರ ಹುದ್ದೆಗೆ  ಘನತೆ ತರುವಂಥದ್ದಲ್ಲ. ಆದರೂ ಭ್ರಷ್ಟಾಚಾರದ ವಿಷಯದಲ್ಲಿ ಅವರು ತೆಗೆದುಕೊಂಡಿರುವ ನಿಧರ್ಾರಕ್ಕೆ ಹ್ಯಾಸ್ಟ್ ಅಫ್ ಹೇಳಲೇಬೇಕು.
ರಾಜಕೀಯವಾಗಿ ರಾಜ್ಯಪಾಲರ ಕ್ರಮ ದುರುದ್ದೇಶಪೂರಿತ ವಿರಬಹುದು. ಆದರೆ ಸಾಂವಿಧಾನಿಕವಾಗಿ, ಈ ನೆಲದ ಕಾನೂನು, ಪ್ರಜಾಪ್ರಭುತ್ವವನ್ನು ಗೌರವಿಸುವ ಪ್ರತಿಯೊಬ್ಬ ವ್ಯಕ್ತಿಯು ರಾಜ್ಯಪಾಲರ ಈ ನಿರ್ಣಯವನ್ನು ಗೌರವಿಸುವಂಥದೇ ಆಗಿದೆ. ಮುಖ್ಯಮಂತ್ರಿ ವಿರುದ್ಧದದ ಭ್ರಷ್ಟಾಚಾರದ ಪ್ರಕರಣಗಳು ಪುಂಖಾನುಫುಂಖವಾಗಿ ಮಾಧ್ಯಮಗಳಲ್ಲಿ ಈ ಹಿಂದೆಯೇ ವರದಿಯಾಗಿದ್ದವು. ಒಮ್ಮೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗಕ್ಕೆ ಕಾಲಿಟ್ಟರೂ ಅಲ್ಲಿಯ ಸಾಮಾನ್ಯ ಜನರು ಕೂಡ ಸಿಎಂ ಅವರ ಪ್ರವರ ಹೇಳುತ್ತಾರೆ. ಅಷ್ಟೂ ಅಲ್ಲದೇ ರಾಜ್ಯಪಾಲರಿಗೆ ಆ ಇಬ್ಬರು ವಕೀಲರು ಕೇವಲ ಅನುಮತಿ ಕೋರಿ ಅಜರ್ಿ ಬರೆದಿಲ್ಲ, ಬದಲಿಗೆ 2000 ಸಾವಿರ ಪುಟಗಳಷ್ಟು ದಾಖಲೆ, ಇನ್ನೂರು ಪುಟಗಳ ವರದಿಯನ್ನು ನೀಡಿದ್ದಾರೆ.

ಮತ್ತಷ್ಟು ಓದು »

21
ಜನ

25ರ ಲಹರಿಯಲ್ಲಿ

ಪ್ರವೀಣಚಂದ್ರ, ಪುತ್ತೂರು

ಒಂದಲ್ಲ, ಎರಡಲ್ಲ, ಹತ್ತಾರು ಬಾರಿ ಲೆಕ್ಕ ಮಾಡಿ ನೋಡಿದೆ. 25ಕ್ಕಿಂತ ಕಡಿಮೆಯಾಗುವುದೇ ಇಲ್ಲ. ಮತ್ತೆ ಮತ್ತೆ ಲೆಕ್ಕ ಮಾಡಿ ಅದೇ ಉತ್ತರ ಬಂದಾಗ ಒಂದಿಷ್ಟು ಖುಷಿ ಮತ್ತು ದಿಗಿಲು ಜೊತೆಯಾಯಿತು.

ಮುಂಜಾನೆ ಎದ್ದಾಗಲೇ 4 ಮೆಸೆಜ್‌ಗಳು ಬರ್ತ್‌ಡೇ ವಿಷ್‌ ಮಾಡಲು ಕಾಯುತ್ತಿದ್ದವು. ಸ್ವಲ್ಪ ಸಮಯವಾದಾಗ ಮತ್ತೆ ಒಬ್ಬರು ಮೆಸೆಜ್‌ ಮಾಡಿದರು. ಸ್ವಲ್ಪ ಹೊತ್ತಾದಾಗ ಗೆಳೆಯ ಸೂರ್ಯ ಕಾಲ್‌ ಮಾಡಿ ವಿಷ್‌ ಮಾಡಿದ. ಮೊಬೈಲ್‌ನ ಬ್ರೌಸರ್‌ ಆನ್‌ ಮಾಡಿ ನೋಡಿದಾಗ ಸುಮಾರು ಬರ್ತ್‌ಡೇ ವಿಷ್‌ಗಳು ಬಂದಿದ್ದವು. ಆಫೀಸ್‌ಗೆ ಹೋಗಿ ನೋಡಿದಾಗ ಫೇಸ್‌ಬುಕ್‌ನಲ್ಲಿ 19 ಜನ, ಆರ್ಕುಟ್‌ನಲ್ಲಿ 32 ಜನ ಬರ್ತ್‌ಡೇ ವಿಷ್‌ ಮಾಡಿ ನನಗೆ 25 ವರ್ಷ ಮುಗೀತು ಅಂತ ಕನ್‌ಫರ್ಮ್‌ ಮಾಡಿದ್ರು. ಅದರಲ್ಲಿ ನನ್ನ ಆತ್ಮೀಯ ಸ್ನೇಹಿತರು, ನನಗಿಂತ ಹಿರಿಯರು, ಕಿರಿಯರು, ಜೀವನದಲ್ಲಿ ಬಹಳಷ್ಟು ಸಾಧಿಸಿದವರೂ ಎಲ್ಲರೂ ಇದ್ದರು. ಯಾಕೋ ತುಂಬಾ ಖುಷಿಯಾಗಿಬಿಟ್ಟಿತು. ಅಮ್ಮನಿಗೆ ಫೋನ್‌ ಮಾಡಿ ವಿಷಯ ತಿಳಿಸಿದೆ. ಇಲ್ಲಿ ನೀನು ಇರುತ್ತಿದ್ದರೆ ಪಾಯಸ ಮಾಡಬಹುದಿತ್ತು ಅಂತ ಹೇಳಿ ಅವಳೂ ಕನ್‌ಫರ್ಮ್‌ ಮಾಡಿ ಬಿಟ್ಟಳು. ಅಣ್ಣನಿಗೆ ಕಾಲ್‌ ಮಾಡಲಿಲ್ಲ. ಯಾಕೆಂದರೆ ಕಳೆದ 5ರಂದು ಆತನ ಬರ್ತ್‌ಡೇ ಮುಗಿದಿತ್ತು. ಆತನಿಗೆ ವಿಷ್‌ ಮಾಡಲು ಮರೆತಿದ್ದೆ.

ಆಫೀಸ್‌ನಲ್ಲಿ ಕೀಬೋರ್ಡ್‌ನ ಮೇಲೆ ನನಗೊಂದು ವಿಶಿಷ್ಠ ಗಿಫ್ಟ್‌ ಕಾದಿತ್ತು. ಚಂದದ ದೊಡ್ಡ ಪ್ಲಾಸ್ಟಿಕ್‌ ಕವರ್‌, ಅದರೊಳಗೆ ಎ4 ಸೈಜ್‌ ಕಾಗದದಲ್ಲಿ ಹ್ಯಾಪಿಬರ್ತ್‌ ಡೇ ಅಂತ ಪ್ರಿಂಟ್‌, ಒಳಗಡೆ ಅಚ್ಚರಿಯ ಉಡುಗರೆಗಳು. ಅಂದ್ರೆ ಇಂಕ್‌ ಖಾಲಿಯಾಗಿರುವ ಪೆನ್ನು ಇತ್ಯಾದಿ. ಅವರು ಅಂತಹ ವಿಶಿಷ್ಠ ಗಿಫ್ಟ್‌ ನೀಡಲು ಕಾರಣ ಅವರ ಬರ್ತ್‌ಡೇಗೆ ನಾನೂ ಹಾಗೇ ಮಾಡಿದ್ದೆ. ಅಂದ್ರೆ ಪುಟ್ಟ ಕಾಗದದಲ್ಲಿ ಹ್ಯಾಪಿ ಬರ್ತ್‌ಡೇ ಅಂತ ಬರೆದು `ನಿನ್ನ ಜನ್ಮದಲ್ಲಿ ಇಂತಹ ಗಿಫ್ಟ್‌ ಯಾರಾದರೂ ಕೊಟ್ಟಿದ್ದಾರಾ? ಅಂತ ಕೊಚ್ಚಿಕೊಂಡಿದ್ದೆ. ಅವರು ಅಷ್ಟೇ ನನ್ನ ಜೀವನದಲ್ಲಿ ನನಗೆ ಯಾರೂ ನೀಡದಂತಹ ವಿಶಿಷ್ಠ ಗಿಫ್ಟ್‌ ನೀಡಿ ನನ್ನನ್ನು ಆಶ್ಚರ್ಯಗೊಳಿಸಿದ್ದರು. ಮತ್ತಷ್ಟು ಓದು »

19
ಜನ

ಹಿಂದಿ ಜ್ವರಕ್ಕೆ ತುತ್ತಾದ ವಿಜಯ ಕರ್ನಾಟಕ

ಪ್ರಿಯಾಂಕ್ ಬೆಂಗಳೂರು

೧೭ನೇ ಜನವರಿ ೨೦೧೧  ವಿಜಯ ಕರ್ನಾಟಕದಲ್ಲಿ “ವಿದೇಶೀಯರ ಹಿಂದಿ ಮೋಹ” ಎಂಬ ಹೆಸರಿನಡಿ ಒಂದು ಅಂಕಣ ಮೂಡಿ ಬಂದಿದೆ. ವಿದೇಶೀಯರು ಹಿಂದಿ ಕಲಿಯಲು ಆಸಕ್ತಿ ತೋರುತ್ತಿರುವುದು, ಕೇಂದ್ರ ಸರಕಾರವು ಜನವರಿ ಹತ್ತರಂದು ಹಿಂದಿ ದಿವಸ್ ಆಚರಿಸುವುದು, ಇತ್ಯಾದಿ ವಿಷಯಗಳನ್ನು ಮುಂದಿಟ್ಟು, ಕನ್ನಡಿಗರಲ್ಲಿ ಹಿಂದಿ ಕಲಿಕೆ ಬಗ್ಗೆ ಒಲವು ಮೂಡಿಸುವ ಒಂದು ಪ್ರಯತ್ನದಂತೆ ಈ ಅಂಕಣ ಕಾಣುತ್ತದೆ. ಹಿಂದಿಗೆ ಎಲ್ಲಿಲ್ಲದ ಬೇಡಿಕೆಯಿದೆ ಎಂದು ಹೇಳುವ ಅವಸರದಲ್ಲಿ, ವ್ಯವಸ್ಥಿತ ಹಿಂದಿ ಹೇರಿಕೆಯಿಂದ ಕನ್ನಡಕ್ಕಾಗುತ್ತಿರೋ ತೊಂದರೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಕೆಲಸವನ್ನು ವಿಜಯ ಕರ್ನಾಟಕ ಮರೆತಂತಿದೆ. ಈ ಅಂಕಣ ಓದಿದ ಕನ್ನಡಿಗರಲ್ಲಿ “ವಿಜಯ ಕರ್ನಾಟಕ ಹಿಂದಿ ಹೇರಿಕೆಯ ಪರ ಇದೆಯೇ?” ಎಂಬ ಪ್ರಶ್ನೆ ಹುಟ್ಟಿರುವುದಂತೂ ಹೌದು.

ಅಂಕಣದಲ್ಲಿ ಹೇಳಲಾಗಿರುವ ಕೆಲವು ವಿಷಯಗಳಲ್ಲಿ ಎರಡನ್ನು ಇಲ್ಲಿ ಹೆಸರಿಸಿ, ಆ ವಿಷಯಗಳು ಕನ್ನಡಕ್ಕೆ ಹೇಗೆ ಕುತ್ತು ಎಂಬುದನ್ನು ವಿವರಿಸಲಾಗಿದೆ. ಮತ್ತಷ್ಟು ಓದು »

7
ಜನ

ಕನ್ನಡ ಮತ್ತು ಸಂಸ್ಕೃ’ತ’ ಇಲಾಖೆಯೇ?

ವಸಂತ ಶೆಟ್ಟಿ

ಸಂಸ್ಕೃತದಲ್ಲಿ ಅಡಗಿರುವ ಅರಿವನ್ನು ಹೆಚ್ಚು ಜನರಿಗೆ ಪರಿಚಯಿಸುವ ಉದ್ದೇಶದಿಂದ ಶುರುವಾದ ಸಂಸ್ಕೃತ ಭಾರತಿ ಸಂಸ್ಥೆ ಬೆಂಗಳೂರಿನಲ್ಲಿ ಸಂಸ್ಕೃತ ಪುಸ್ತಕ ಮೇಳ ಆಯೋಜಿಸಿದೆ ಅನ್ನುವ ಜಾಹೀರಾತು ಪತ್ರಿಕೆಗಳಲ್ಲಿ ಕಂಡೆ. ವೇದ, ಉಪನಿಷತ್ತು, ಆಯುರ್ವೇದ ಸೇರಿದಂತೆ ಹಲವು ಜ್ಞಾನ ಸಂಪತ್ತನ್ನು ಜನ ಸಾಮಾನ್ಯರಿಗೆ ಮುಟ್ಟಿಸುವುದು ಈ ಮೇಳದ ಉದ್ದೇಶವಾಗಿದೆಯಂತೆ. ಪುಸ್ತಕ ಮೇಳಕ್ಕೆ ನನ್ನ ಯಾವುದೇ ವಿರೋಧವಿಲ್ಲ. ಸಂಸ್ಕೃತದ ಬಗ್ಗೆ ಮೊದಲೇ ವಿರೋಧ ಇಲ್ಲ. ಸಂಸ್ಕೃತದಲ್ಲಿರುವ ಎಲ್ಲ ಒಳ್ಳೆಯದು ಕನ್ನಡಕ್ಕೆ ಅನುವಾದಗೊಂಡು ಕನ್ನಡಿಗರಿಗೆ ದೊರಕಲಿ ಅನ್ನುವುದು ನನ್ನ ನಿಲುವು.  ಆದರೆ ಈ ಮೇಳದ ಜಾಹೀರಾತು ನೋಡಿದಾಗ ಅಚ್ಚರಿಯಾಗಿದ್ದು, ಈ ಮೇಳದ ಸಹ ಪ್ರಾಯೋಜಕರು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಂಬುದು !

ಕನ್ನಡ ಮತ್ತು ಸಂಸ್ಕೃ’ತ’ ಇಲಾಖೆಯೇ?
ಆರ್.ಎಸ್.ಎಸ್ ನ ಅಂಗಸಂಸ್ಥೆಯಾದ “ಸಂಸ್ಕೃತ ಭಾರತಿ”  ಸಂಸ್ಕೃತ ಪ್ರಚಾರ, ಪುಸ್ತಕ ಮೇಳ ಅಂತ ಖಾಸಗಿಯಾಗಿ ಕಾರ್ಯಕ್ರಮ ನಡೆಸುವುದಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಇಂತಹ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿಸುವುದರ ಹಿಂದಿನ ರಹಸ್ಯವೇನು? ಇಮಾಮ ಸಾಬಿಗೂ ಗೋಕುಲಾಷ್ಟಮಿಗೂ ಏನ್ ಸಂಬಂಧ? ಬೆಳಗಾವಿಯಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಮ್ಮೇಳನಕ್ಕೆ ಸರಿಯಾದ ಆದ್ಯತೆ, ಗಮನ ಕೊಡದೇ ವರ್ಷಾನುಗಟ್ಟಲೆ ಅದನ್ನು ಮುಂದೆ ಹಾಕುವ ಸರ್ಕಾರ ಸಂಸ್ಕೃತ ಪುಸ್ತಕ ಮೇಳದ ಯಶಸ್ಸಿಗೆ ಟೊಂಕ ಕಟ್ಟಿ ನಿಲ್ಲುವುದನ್ನು ನೋಡಿದಾಗ ಅದನ್ನು misplaced priority ಅನ್ನದೇ ವಿಧಿಯಿಲ್ಲ. ಹೇಗೆ ಕೊಂಕಣಿ ಅಕಾಡೆಮಿಯ ಕೆಲಸ ಕೊಂಕಣಿ ಭಾಷೆ, ಸಂಸ್ಕೃತಿಯ ಉಳಿಸುವಿಕೆ-ಬೆಳೆಸುವಿಕೆಯೋ, ಹೇಗೆ ತುಳು ಅಕಾಡೆಮಿಯ ಕೆಲಸ ತುಳು ನುಡಿ, ತುಳು ಸಂಸ್ಕೃತಿಯ ಪೋಷಣೆ, ರಕ್ಷಣೆಯೋ, ಅದೇ ರೀತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೆಲಸ ಕನ್ನಡ ನಾಡು-ನುಡಿ, ಸಂಸ್ಕೃತಿಯ ಉಳಿವು,ಬೆಳೆವು, ಕನ್ನಡಿಗರಲ್ಲಿ ಕನ್ನಡತನದ ಅರಿವು ಹೆಚ್ಚಿಸುವತ್ತ ಗಮನ ಹರಿಸುವುದೇ ವಿನಹ ಇಂದು ಸಂಸ್ಕೃತ ಮೇಳ ಇಲ್ಲವೇ ನಾಳೆ ದಿನ ತಮಿಳು ಮೇಳ, ಹಿಂದಿ ಮೇಳ ಅಂತ ತನ್ನ ಕಾರ್ಯ ವ್ಯಾಪ್ತಿಗೆ ಸಂಬಂಧಿಸದ ಮೇಳಗಳನ್ನು ಪ್ರಾಯೋಜಿಸುವುದಲ್ಲ. ಕನ್ನಡ ವಿಶ್ವವಿದ್ಯಾಲಯಗಳು ಅನುದಾನವಿಲ್ಲದೇ ಒದ್ದಾಡುತ್ತಿವೆ. ಗಡಿ ಭಾಗದ ಕನ್ನಡ ಶಾಲೆಗಳೆಲ್ಲ ಒಂದೊಂದಾಗಿ ಬಾಗಿಲು ಹಾಕಿ, ಅಲ್ಲಿನ ಕನ್ನಡಿಗರೆಲ್ಲ ಪರಭಾಷಿಕರಾಗುತ್ತಿದ್ದಾರೆ, ಇದಾವುದನ್ನೂ ಗಮನಿಸದ ಸರ್ಕಾರ, ಸಂಸ್ಕೃತ ಪುಸ್ತಕ ಮೇಳವನ್ನು ಪ್ರಾಯೋಜಿಸುವುದನ್ನು ನೋಡಿದಾಗ, ಕೋಟ್ಯಾಂತರ ಜನ ಆಡುವ ಜೀವಂತ ಭಾಷೆಯತ್ತ ಅದಕ್ಕಿರುವ ಆದ್ಯತೆ ಏನಿದೆ, ಎಷ್ಟಿದೆ ಅನ್ನುವ ಪ್ರಶ್ನೆ ಕನ್ನಡಿಗರ ಮನಸಲ್ಲಿ ಬರದೇ ಇರದು. ಮತ್ತಷ್ಟು ಓದು »
4
ಜನ

ತುಕ್ರ ಬೆಂಗಳೂರಿಗೆ ಹೋದದ್ದು..

ಪ್ರವೀಣ ಚಂದ್ರ ಪುತ್ತೂರು

Quantcast

ಕಿಟಕಿಯ ಕಡೆಯಿಂದ ಬೀಸುವ ಚಳಿಗಾಳಿಗೆ ಕಬ್ಬಿಣವೂ ಮಂಜುಗಡ್ಡೆಯಾಗಿತ್ತು. `ಏನು ಚಳಿ ದೇವ್ರೆ’ ಅಂತ ಗೊಣಗುತ್ತ ತಣ್ಣಗಿನ ರೈಲಿನ ಕಬ್ಬಿಣದ ಸೀಟ್‌ ಮೇಲೆ ಮಲಗಲಾರದೇ ತುಕ್ರ ಎದ್ದು ಕುಳಿತುಕೊಂಡ. ಕಿಸೆಯಿಂದ ಬೆಲ್ಟ್‌ ತುಂಡಾಗಿರುವ ಟೈಟಾನ್‌ ಕಂಪನಿಯ ವಾಚ್‌ ತೆರೆದು ಗಂಟೆ ನೋಡಿಕೊಂಡ. ಇನ್ನೂ ಆರೂವರೆಯಷ್ಟೇ. ಏಳುವರೆಗೆ ಮೆಜೆಸ್ಟಿಕ್‌ಗೆ ತಲುಪುವುದಾಗಿ ಆತನಿಗೆ ಗೊತ್ತಿತ್ತು. ಈ ಚಳಿಯಲ್ಲಿ ಜನ ಹೇಗೆ ಬದುಕುತ್ತಾರಪ್ಪ ಅಂದುಕೊಳ್ಳುತ್ತ ರೈಲಿನ ಬಾಗಿಲ ಬಳಿ ಕುಳಿತುಕೊಂಡು ಒಂದು ಬೀಡಿಗೆ ಬೆಂಕಿ ಹಚ್ಚಿದ. ಒಳಗೆ ಹೊಗೆ ಪ್ರವೇಶಿಸಿದಾಗ ಮೈ ಒಂದಿಷ್ಟು ಬಿಸಿಯಾಗಿ ಹಾಯೆನಿಸಿತ್ತು. `ಸಾಬ್‌ ಬೀಡಿ’ ಅಂತ ಮುದುಕನೊಬ್ಬ ಇವನ ಪಕ್ಕ ಕುಳಿತುಕೊಂಡಾಗ ಅವನಿಗೂ ಒಂದು ತೆಗೆದುಕೊಟ್ಟ. ಆತ ಸಹ ಬಾಗಿಲ ಪಕ್ಕದಲ್ಲಿ ಇವನಿಗೆ ಒರಗಿ ಕುಳಿತ. ಸ್ವಲ್ಪ ಸಮಯವಾದಗ ಒಂದಿಷ್ಟು ತೂಕಡಿಕೆ ಬಂದಂತಾಗಿ ಅಲ್ಲಿಂದ ಎದ್ದು ಬಂದ ತುಕ್ರ ಸೀಟ್‌ನಲ್ಲಿ ಕುಳಿತುಕೊಂಡ.

****
ದಿನಾ ಕುಡಿದು ಬರುವುದನ್ನು ತುಕ್ರಾನ ಹೆಂಡತಿ ಕಮಲ ಆಕ್ಷೇಪಿಸುತ್ತಿದ್ದಳು. ಇದೇ ಕಾರಣಕ್ಕೆ ದಿನನಿತ್ಯ ಸಣ್ಣಪುಟ್ಟ ಜಗಳವೂ ಆಗುತ್ತಿತ್ತು. ನಿನ್ನೆ ರಾತ್ರಿ ಹೆಂಡತಿ ಏನೋ ಹೇಳಿದ್ದು ಇವನ ಪಿತ್ತವನ್ನು ನೆತ್ತಿಗೇರಿಸಿತ್ತು. ನೀನು ಒಬ್ಬಳೇ ಇಲ್ಲಿರು. ನಾನು ಮಗನಲ್ಲಿಗೆ ಹೋಗ್ತಿನಿ ಅಂದಾಗ ಕಮಲ ಮೊದಲು ಕುಡಿದ ಅಮಲಿಗೆ ಹೇಳುತ್ತಿದ್ದಾನೆ ಅಂದುಕೊಂಡಳು. ಕ್ವಿಂಟಾಲ್‌ ಅಕ್ಕಿ ತರಲೆಂದು ಕಪಾಟ್‌ನಲ್ಲಿಟ್ಟಿದ್ದ ಒಂದು ಸಾವಿರ ರೂಪಾಯಿಯನ್ನು ಕಿಸೆಗೆ ಹಾಕಿಕೊಂಡು ಅಂಗಿ ಹಾಕಿದಾಗ ಕಮಲ ಕಳವಳಗೊಂಡು ಕ್ಷಮೆ ಕೇಳಿದರೂ ತುಕ್ರ ಹಠ ಬಿಡಲಿಲ್ಲ. ಯಾಕೋ ಎಂದು ನೋಡಿರದ ಬೆಂಗಳೂರು ಕುಡಿದ ಅಮಲಿನಲ್ಲಿ ತುಕ್ರನಿಗೆ ಸುಂದರವಾಗಿ ಕಾಣಿಸಿತ್ತು. ಮತ್ತೆ ಒಂದಿಷ್ಟು ಜಗಳ ಮಾಡಿ ಸೀದಾ ಪುತ್ತೂರು ರೈಲ್ವೆ ಸ್ಟೇಷನ್‌ಗೆ ಬಂದಿದ್ದ. ಸ್ಟೇಷನ್‌ವರೆಗೆ ಹೂವಿನ ಅಂಗಡಿಯ ಗಡಂಗ್‌ ಗೆಳೆಯ ನಾರಾಯಣನನ್ನು ಕರೆದುಕೊಂಡು ಹೋಗಿದ್ದ.

**** ಮತ್ತಷ್ಟು ಓದು »

3
ಜನ

ಕೃಷ್ಣಾ ತೀರ್ಪು:100 ಟಿ.ಎಂ.ಸಿ ನೀರು ಸುಮ್ಮನೆ ಬಿಟ್ಟು ಬಿಡುವುದಕ್ಕೆ ಅದೇನು 100 ಬಕೆಟ್ ನೀರಲ್ಲ..!

ಚೇತನ್ ಜೀರಾಳ್

ನಾಲ್ಕು ದಶಕಗಳ ಸುಧೀರ್ಘ ಹೋರಾಟದ ನಂತರ ಕೃಷ್ಣ ನದಿ ನೀರು ಹಂಚಿಕೆಯ ತೀರ್ಪು ಹೊರಬಿದ್ದಿದೆ. ಮೇಲ್ನೋಟಕ್ಕೆ ನಮಗೆ ಸಂಪೂರ್ಣ ನ್ಯಾಯ ದಕ್ಕಿದೆ ಅಂತ ಅನ್ನಿಸಿದರೂ ಸಹ ಕೆಲವು ಪ್ರಮುಖ ವಿಷಯಗಳಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲವೇನೋ ಅನ್ನಿಸುತ್ತದೆ. ಇದುವರೆಗೂ ಮಾಧ್ಯಮಗಳು ಹಾಗೂ ಅಂತರ್ಜಾಲದಲ್ಲಿ ದೊರಕಿರುವ ಮಾಹಿತಿಯ ಪ್ರಕಾರ,ಸ್ಕೀಮ್ ಬಿಯಲ್ಲಿ ಒಟ್ಟು ಲಭ್ಯವಿರುವ 448 ಟಿ.ಎಂ.ಸಿ ನೀರಿನ ಹಂಚಿಕೆಯ ವಿವರಗಳು ಇಂತಿದೆ: ಮಹಾರಾಷ್ಟ್ರಕ್ಕೆ 81 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ, ಕರ್ನಾಟಕಕ್ಕೆ 177 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ ಹಾಗೂ ಆಂಧ್ರ ಪ್ರದೇಶಕ್ಕೆ 190 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ.
ಇದರ ಜೊತೆಗೆ ರಾಜ್ಯದ ದಶಕಗಳ ಬೇಡಿಕೆಯಾಗಿದ್ದ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು 519 ಮೀಟರ್ ನಿಂದ 524.26 ಮೀಟರ್ ವರೆಗೆ ಏರಿಸಲು ಇದ್ದ ಅಡಚಣೆಯನ್ನು ನಿವಾರಿಸಿ ನ್ಯಾಯಾಧಿಕರಣ ಅವಕಾಶ ನೀಡಿದೆ. ಕೃಷ್ಣ ನದಿಯ ಒಟ್ಟು ನೀರು ಹಂಚಿಕೆಯಲ್ಲಿ ಕರ್ನಾಟಕದ ಪಾಲಿಗೆ 911 ಟಿ.ಎಂ.ಸಿ ನೀರು ಸಿಕ್ಕಿದೆ, ಮಹಾರಾಷ್ಟ್ರದ ಪಾಲಿಗೆ 666 ಟಿ.ಎಂ.ಸಿ ಹಾಗೂ ಆಂಧ್ರ ಪ್ರದೇಶಕ್ಕೆ 1001 ಟಿ.ಎಂ.ಸಿ ನೀರು ಸಿಕ್ಕಿದೆ. ಇದರ ಜೊತೆಗೆ ಕರ್ನಾಟಕ ಪ್ರತಿ ವರ್ಷ ಜೂನ್-ಜುಲೈ ತಿಂಗಳಿನಲ್ಲಿ 8-10 ಟಿ.ಎಂ.ಸಿ ನೀರು ಆಂಧ್ರಕ್ಕೆ ಬಿಡಬೇಕು ಎಂದು ತೀರ್ಪು ನೀಡಿದೆ. ಹಾಗದರೆ ರಾಜ್ಯಕ್ಕೆ ಅನ್ಯಾಯವಾಗಿರುವುದೆಲ್ಲಿ???

ರಾಜ್ಯಕ್ಕೆ ಅನ್ಯಾಯವಾಗಿರುವುದೆಲ್ಲಿ?
ಮೊದಲನೆಯದಾಗಿ ಬಚಾವತ್ ಆಯೋಗ ತನ್ನ ತೀರ್ಪಿನಲ್ಲಿ ಕೃಷ್ಣಾ ನದಿಯ ಕೊಳ್ಳದಲ್ಲಿ ಲಭ್ಯವಿರುವ ಹೆಚ್ಚುವರಿ ನೀರನ್ನು ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶಕ್ಕೆ ಕ್ರಮವಾಗಿ 50%, 25% ಹಾಗೂ 25% ಹಂಚಬೇಕು ಎಂದು ತೀರ್ಪು ನೀಡಿತ್ತು. ಆದರೆ ಬಂದಿರುವ ತೀರ್ಪಿನಲ್ಲಿ ಕರ್ನಾಟಕಕ್ಕೆ ಬರಬೇಕಾಗಿದ್ದ 50% ನೀರಿನ ಬದಲು ಸಿಕ್ಕಿರುವುದು ಕೇವಲ 39.5% ನಷ್ಟು ಮಾತ್ರ. ಆಂಧ್ರಕ್ಕೆ ಸಿಗಬೇಕಾಗಿದ್ದ 25% ಬದಲು ಇಂದು ಸಿಕ್ಕಿರುವುದು 42.41% ಹಾಗೂ ಮಹಾರಾಷ್ಟ್ರಕ್ಕೆ ಸಿಗಬೇಕಾಗಿದ್ದ 25% ನಲ್ಲಿ ಸಿಕ್ಕಿರುವುದು ಕೇವಲ 18.08% ಮಾತ್ರ. ಕರ್ನಾಟಕ ತನ್ನ ಪಾಲಿಗೆ ಬರಬೇಕಾಗಿದ್ದ ಸುಮಾರು 100 ಟಿ.ಎಂ.ಸಿ ಯಷ್ಟು ನೀರನ್ನು ಕಳೆದುಕೊಂಡಿದೆ. ಮತ್ತಷ್ಟು ಓದು »

1
ಜನ

ಪ್ರೀತಿಯ ಹಚ್ಚಿಕೊಂಡಿರೋ ಹುಚ್ಚು ಹುಡುಗರಿಗೆ

ಶ್ರೀಕಾಂತ್.ಎನ್.ಎಸ್, ಬೆಂಗಳೂರು

ನಮ್ಮ ನಡುವಿನ, ಈಗಿನ ಹೆಣ್ಣು ಮಕ್ಕಳ ನೆನೆದರೆ ಕಣ್ಣ ಮುಂದೆ ಬರುವುದು ಜೀನ್ಸು, ಹೈ ಹೀಲ್ಸು, ಬಳುಕುವ ನಡಿಗೆ. ಇದೆಲ್ಲದರ ಸಂಗಮವೇ, ಹುಡುಗರ ಹರಿದಿರೋ ಜೇಬು! ಒಬ್ಬ ಹುಡುಗಿ ಬಂದು ತನ್ನನ್ನು ಮಾತಾಡಿಸುತ್ತಿದ್ದಂತೆಯೇ ಹುಡುಗರಿಗೆ ಎಲ್ಲಿಲ್ಲದ ರೋಮಾಂಚನ, ಆನಂದ. ತಮ್ಮದೇ ಆದ ಲೋಕಕ್ಕೆ ಹೋಗಿಬಿಡುತ್ತಾರೆ. ಅದೇ ಗುಂಗಿನಲ್ಲಿ ಒಂದಿಷ್ಟು ಪ್ರೇಮಕಥೆಗಳು ಅವರ ಮನಸ್ಸಿನಲ್ಲಿ ಹಾದುಹೋಗುತ್ತವೆ. ಹೀಗೆ ಪ್ರೀತಿ ಅಪ್ಪಳಿಸಿದ ನಾವೆಯಾಗಿ ಅವರು ತಮ್ಮ ಸ್ವಂತಿಕೆಯನ್ನು ಮರೆಯುತ್ತಾ ಅವನತಿಯ ಹಾದಿಯನ್ನು ಹಿಡಿಯುತ್ತಾರೆ. ಇಷ್ಟೆಲ್ಲಾ ಪ್ರೀತಿ ತುಂಬಿದ ಹುಡುಗಾಟದ ಹುಡುಗರ ಮನಸ್ಸಿನ ಚೀತ್ಕಾರಕ್ಕೆ ವರವಾಗಿ ಸಿಗುವುದು, ಹುಡುಗಿಯಿಂದ ಪಾತಾಳಕ್ಕೆ ಹೆದ್ದಾರಿ, ಅವರಿವರಿಂದ ಛೀಮಾರಿ!

ಹುಡುಗಿ ಹುಡುಗನ ಹಿಂದೆ ಹೋದ್ರೆ,
ಅವಳು ಅವನ ಅತಿಥಿ,
ಹುಡುಗ ಹುಡುಗಿ ಹಿಂದೆ ಹೋದ್ರೆ
ಅವತ್ತೇ ಅವನ ತಿಥಿ. ಮತ್ತಷ್ಟು ಓದು »

30
ಡಿಸೆ

ABVP ಸಮಾವೇಶಕ್ಕೆ ಹಿಂದಿ ಬ್ಯಾನರ್ ಯಾಕೆ?

ವಸಂತ ಶೆಟ್ಟಿ

ಮೊನ್ನೆ ಬಸವನಗುಡಿಯ ಟಾಗೋರ್ ಸರ್ಕಲ್ ಬಳಿ ಹೋಗುವಾಗ ಈ ಬ್ಯಾನರ್ ಕಂಡಿತು. ಇದೇನಪ್ಪ ಇದು ಅಂತ ನೋಡಿದ್ರೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ABVP ಯವರ ಯಾವುದೋ ವಿಧ್ಯಾರ್ಥಿ ಸಮಾವೇಶದ ಬ್ಯಾನರ್, ಅದು ಪೂರ್ತಿ ಹಿಂದಿಯಲ್ಲಿ !!. ಅಲ್ಲಲ್ಲಿ…
ಮೊನ್ನೆ ಬಸವನಗುಡಿಯ ಟಾಗೋರ್ ಸರ್ಕಲ್ ಬಳಿ ಹೋಗುವಾಗ ಈ ಬ್ಯಾನರ್ ಕಂಡಿತು. ಇದೇನಪ್ಪ ಇದು ಅಂತ ನೋಡಿದ್ರೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ABVP ಯವರ ಯಾವುದೋ ವಿಧ್ಯಾರ್ಥಿ ಸಮಾವೇಶದ ಬ್ಯಾನರ್, ಅದು ಪೂರ್ತಿ ಹಿಂದಿಯಲ್ಲಿ !!. ಅಲ್ಲಲ್ಲಿ ಕನ್ನಡದಲ್ಲೂ ಬ್ಯಾನರ್ ಕಂಡಿದ್ದೆ, ಆದರೆ ಕರ್ನಾಟಕದಲ್ಲಿ ಹಿಂದಿ ಬ್ಯಾನರ್ ಯಾವ ಪುರುಷಾರ್ಥಕ್ಕಾಗಿ ಹಾಕಿದ್ದಾರೆ ಅಂತ ಗೊತ್ತಾಗಲಿಲ್ಲ. ಮತ್ತಷ್ಟು ಓದು »

29
ಡಿಸೆ

ಭೈರಪ್ಪ ಎಂಬ STAR WRITER

ವಿಕಾಸ್ ಹೆಗಡೆ
ಪ್ರಕಟವಾದ ಮೊದಲನೇ ವಾರವೇ ಮೂರು ಮುದ್ರಣ, ಅಧಿಕೃತವಾಗಿ ಪುಸ್ತಕ ಬಿಡುಗಡೆ ಮಾಡಿದ್ದು ಎಂಟನೇ ಮುದ್ರಣ, ಪ್ರಕಟವಾಗುವ ಮೊದಲೇ ಬುಕ್ಕಿಂಗ್, ಎಲ್ಲಾ ಪ್ರತಿಗಳು ಖಾಲಿ, ಬೆಲೆ ದುಬಾರಿಯಾದರೂ ಎಲ್ಲಾ ಕಡೆ ಪುಸ್ತಕಗಳ ಜೋರು ಮಾರಾಟ, ಪತ್ರಿಕೆಗಳಲ್ಲಿ ಚರ್ಚೆ, ವಾದ, ವಿವಾದ, ಸಮರ್ಥನೆ, ದೂಷಣೆ – ಇಷ್ಟು ಹೇಳುತ್ತಿದ್ದಂತೆ ಎಲ್ಲರಿಗೂ ತಿಳಿದುಬಿಡುತ್ತದೆ. ಇದು ಇತ್ತೀಚೆಗೆ ಕನ್ನಡ ಸಾಹಿತ್ಯ ಲೋಕದ ವಿದ್ಯಮಾನ. ಅದು ಎಸ್.ಎಲ್. ಭೈರಪ್ಪನವರ ’ಕವಲು’ ಕಾದಂಬರಿ. ೨೩ ಮುದ್ರಣಗಳನ್ನು ಕಂಡ ಅವರ ಹಿಂದಿನ ಕಾದಂಬರಿ ‘ಆವರಣ’ದ ವಿಷಯವಂತೂ ಹೇಳುವುದೇ ಬೇಡ. ಬಹುಶಃ ಈ ಮಟ್ಟಿಗೆ ಸಂಚಲನ ಉಂಟು ಮಾಡುವ ಮತ್ತೊಬ್ಬ ಬರಹಗಾರ ಭಾರತದಲ್ಲಿಲ್ಲ. ಆ ಮಟ್ಟಿಗೆ ಜನಪ್ರಿಯ. ಎಲ್ಲಾ ವಯೋಮಾನದ ಓದುಗರನ್ನು ಹೊಂದಿರುವ ಲೇಖಕರಲ್ಲೊಬ್ಬರು. ಅಧ್ಯಯನ ಶೀಲ, ಸಮರ್ಪಣಾ ಮನೋಭಾವದ ಕಾದಂಬರಿಕಾರರಾಗಿ, ಅದ್ಭುತ ಬರಹಗಾರರಾಗಿ ಭೈರಪ್ಪನವರು ಪ್ರಸಿದ್ಧಿ. ಪಕ್ಕದ ರಾಜ್ಯದ ಸಾಹಿತ್ಯ ಲೋಕದಲ್ಲೇನಾಗುತ್ತಿದೆ ಎಂದು ಸರಿಯಾಗಿ ಗೊತ್ತಾಗದಿರುವ ಈ ಪರಿಸ್ಥಿತಿಯಲ್ಲೂ ಇವರ ಹಲವಾರು ಕಾದಂಬರಿಗಳು ಭಾರತದ ಅನೇಕ ಭಾಷೆಗಳಿಗೆ ಅನುವಾದಗೊಳ್ಳುತ್ತವೆ.ನಾನು ಓದಿದ ಇವರ ಮೊದಲ ಕಾದಂಬರಿ ‘ಧರ್ಮಶ್ರೀ’. ಅದಾದ ಮೇಲೆ ಅವರ ಅಂಚು, ದಾಟು, ಪರ್ವ, ವಂಶವೃಕ್ಷ, ನಿರಾಕರಣ, ಜಲಪಾತ, ಸಾರ್ಥ ಮುಂತಾದ ಹಲವು ಕಾದಂಬರಿಗಳನ್ನು ಓದಿದ್ದೇನೆ. ಒಂದೊಂದೂ ಕೂಡ ವಿಷಯಗಳ ಆಗರವಾಗಿ ಕಂಡಿವೆ. ಇನ್ನೂ ಕೆಲವು ಓದುವುದು ಬಾಕಿ ಇವೆ. ಘಟನೆಗಳನ್ನು ಕತೆಯಂತೆ ಹೇಳಿಬಿಡಬಹುದು, ಕಾಲ್ಪನಿಕ ಕತೆಗಳನ್ನು ಹೆಣೆದುಬಿಡಬಹುದು ಆದರೆ ಅದರಲ್ಲಿನ ಪಾತ್ರಗಳ ಮನಸ್ಸಿನ ತುಮುಲಗಳನ್ನು, ಸಮಾಜ, ಧರ್ಮ, ಸಂಪ್ರದಾಯ ಸಂಬಂಧಿತ ಸಂಗತಿಗಳನ್ನು ಚಿತ್ರಿಸುವುದು ಮಾತ್ರ ಎಲ್ಲರಿಗೂ ಸಾಧ್ಯವಿಲ್ಲ. ಅದನ್ನು ಸಮರ್ಥವಾಗಿ ಮಾಡುವುದರಿಂದಲೇ ಭೈರಪ್ಪನವರು ಅತ್ಯಂತ ಯಶಸ್ವಿ ಬರಹಗಾರರೆನ್ನಬಹುದು. ಭೈರಪ್ಪನವರ ಬರವಣಿಗೆಯ ವಿಷಯಗಳು ಎಷ್ಟರ ಮಟ್ಟಿಗೆ ಸೂಕ್ಷ್ಮವಾಗಿರುತ್ತವೆ ಎಂದರೆ ಅವು ಮೇಲ್ನೋಟಕ್ಕೆ ಸುಮ್ಮನೇ ಕಥೆಯಾಗಿದ್ದರೂ ಅದು ಸರಿಯಾಗಿ ಅರ್ಥವಾಗಲು ಅಂತಹ ಸನ್ನಿವೇಶಗಳನ್ನು, ಪರಿಸ್ಥಿತಿಗಳನ್ನು, ಮನಸ್ಥಿತಿಯನ್ನು ಸ್ವತಃ ಅನುಭವಿಸಿರಬೇಕು, ಇಲ್ಲವೇ ಕಂಡಿರಬೇಕು. ಆವಾಗಲಷ್ಟೇ ಅದು ಇನ್ನೂ ಚೆನ್ನಾಗಿ ತಾಗಬಲ್ಲುದು. ಜೊತೆಗೆ ಅವರ ಕಾದಂಬರಿಗಳ ವಿಷಯ ವ್ಯಾಪ್ತಿ ಮತ್ತು ಆಳ ಎಂತವರಿಗೂ ಹೊಸ ಹೊಸ ಲೋಕಗಳನ್ನು, ಸತ್ಯಗಳನ್ನು ತೋರಿಸಿಕೊಡುವಂತವು. ಮತ್ತಷ್ಟು ಓದು »
25
ಡಿಸೆ

“ಗ್ರಾಮದೇಗುಲಗಳಾಗಿ ಗರೋಡಿಗಳು”

ಜಗನ್ನಾಥ್ ಶಿರ್ಲಾಲ್

ತುಳುನಾಡು ಸಾಂಸ್ಕೃತಿಕ ಅನನ್ಯತೆಯ ನಾಡು. ದೈವ, ದೇವರುಗಳ ಸಮಾಗಮದ ಬೀಡು. ಇಲ್ಲಿನ ಪರಿಸರ, ಪ್ರಾಣಿ, ಪಕ್ಷಿ, ಗಿಡ, ಮರ, ಸ್ಥಳ, ವೀರ ಪುರುಷರ, ಆರಾಧನೆಯ ದೈವಿಕ ನೆಲೆಯಾಗಿದೆ. ಪ್ರತಿಯೊಂದು ನಂಬಿಕೆ ನಡವಳಿಕೆಗಳು ಜಾನಪದದ ಆಧಾರದಲ್ಲಿ ಹೆಣೆದಿರುವುದು ತುಳುನಾಡ ಸಂಸ್ಕೃತಿಯ ವೈಶಿಷ್ಟ್ಯ.
ವ್ಯಕ್ತಿಗಳು ತನ್ನ ಜೀವಿತ ಕಾಲದಲ್ಲಿ ಅಸಾಮಾನ್ಯ ರೀತಿಯಲ್ಲಿ ಬಾಳಿ ಬದುಕಿ ಬಲಿದಾನವಾದಾಗ ಅವರನ್ನು ದೈವತ್ವ ಮಟ್ಟಕ್ಕೆ ಏರಿಸಿ ಪೂಜಿಸುವ ಪದ್ಧತಿ ನಮ್ಮ ಸಂಸ್ಕೃತಿಯಲ್ಲಿ ಕಂಡುಬರುತ್ತದೆ. ಅತಿಮಾನುಷ ಶಕ್ತಿಗಳನ್ನು ಪೂಜಿಸಲು ಅತ್ತ ದೇವಸ್ಥಾನವು ಅಲ್ಲದ ಇತ್ತ ಭೂತ ಸ್ಥಾನವೂ ಅಲ್ಲದ ಒಂದು ವಿಶಿಷ್ಟ ಪೂಜಾ ಕೇಂದ್ರವಾಗಿ ‘ಗರೋಡಿ’ ಎಂಬ ದೇಗುಲವು ನಿರ್ಮಾಣವಾದುದು ಜನರ ಭಾವುಕ ಪ್ರಜ್ಞೆಗೆ ತಲೆಬಾಗಲೇ ಬೇಕಾದುದು. ಈ ಮೂಲಕ ಇಡೀ ಗ್ರಾಮ ವ್ಯವಸ್ಥೆಯಲ್ಲಿ ಆ ಗರೋಡಿಗೆ ಸಂಬಂಧಿಸಿದ ಸಮುದಾಯದ ಜನರನ್ನು ಒಂದುಗೂಡಿಸುವಲ್ಲಿ ದೈವ ಭಕ್ತಿಯು  ಕಾರಣವಾಗಿದೆ. ಅಲ್ಲದೆ ಪ್ರಸ್ತುತ ಆಧುನಿಕ ಜಗತ್ತಿನಲ್ಲಿ ಸಮುದಾಯಗಳ ಮಧ್ಯೆ ಸಾಮರಸ್ಯ ಮೂಡಿಸಲು ಮತ್ತು ಪಾಲ್ಗೊಳ್ಳುವಿಕೆಗೆ ಗರೋಡಿಗಳು ಒಂದು ಕಾರಣವಾಗಿದೆ. ಮತ್ತಷ್ಟು ಓದು »