ಸಾಹಿತಿಗಳೆಂದರೆ ಸರ್ವಸ್ವವೇ?
– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಕನ್ನಡ ಕಲಿಕಾ ಮಾಧ್ಯಮದ ವಿರುದ್ಧ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪಿನ ಆಶಯ ಕುರಿತು ಬರುತ್ತಿರುವ ಅಭಿಪ್ರಾಯಗಳಲ್ಲಿ ಸುಪ್ರೀಂ ತೀರ್ಪಿನ ಪರ ಬಹುತೇಕ ದನಿಗಳಿವೆ. ಸುಪ್ರೀಂ ತೀರ್ಪು ಸರಿ. ನಮ್ಮ ಸರ್ಕಾರದ ನೀತಿಗಳು ಸರಿ ಇಲ್ಲ ಎಂಬುದೂ ಸರಿ, ಆದರೂ… ಎಂದು ಅನುಮಾನದ ರಾಗ ಎಳೆಯುವವರು ಕೆಲವರು ಮಾತ್ರ. ಈ ಸರ್ವೇ ಸ್ಯಾಂಪಲ್ ಸಂಖ್ಯೆ ತುಂಬ ಕಡಿಮೆ ಎನಿಸಿದರೂ ಸುಪ್ರೀಂ ತೀರ್ಪು ಜನಸಾಮಾನ್ಯರ ದೃಷ್ಟಿಗೆ ತಕ್ಕಂತೆಯೇ ಇದೆ ಎಂಬುದರಲ್ಲಿ ಅನುಮಾನವಿಲ್ಲ. ಸರ್ವೋಚ್ಚ ನ್ಯಾಯಾಲಯದ ತೀರ್ಪು ಬಂದ ಮೇಲೂ ಇದು ಇನ್ನೂ ತೀವ್ರ ಚರ್ಚೆಯ ವಿಷಯವಾಗಿಯೇ ಇರುವುದು ವಿಷಯದ ಗಂಭೀರತೆಯನ್ನು ತೋರಿಸುತ್ತದೆ. ಆದರೆ ಸರ್ಕಾರ ಬಹುಸಂಖ್ಯಾತರ ಆಶಯವನ್ನು ಗಮನಕ್ಕೆ ತಂದುಕೊಂಡು ಹೆಜ್ಜೆ ಇಡುತ್ತಿದೆಯೇ? ಇಲ್ಲ.
ಘನ ನ್ಯಾಯಾಲಯದ ತೀರ್ಪು ಯಾವುದೇ ನಿರ್ದಿಷ್ಟ ಭಾಷಾ ಮಾಧ್ಯಮ ಹೇರಿಕೆಯ ವಿರುದ್ಧವಿದ್ದರೂ ನಮ್ಮ ಸರ್ಕಾರ ಮಾತ್ರ ಕನ್ನಡದ ರಕ್ಷಣೆ ಹೇಗಾಗಬಲ್ಲುದು ಎಂಬುದಕ್ಕಿಂತ ಕನ್ನಡ ಮಾಧ್ಯಮ ರಕ್ಷಣೆಗೆ ಪಣ ತೊಟ್ಟಂತೆ ಕಾಣುತ್ತದೆ. ತನ್ನ ಆದೇಶವನ್ನು ಅದು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಸದಾ ಸುದ್ದಿ ಬಯಸುವ ಬೆರಳೆಣಿಕೆ ಸಾಹಿತಿಗಳ ಹಾಗೂ ಹೋರಾಟಗಾರರ ಭಾವಾವೇಶದ ಅಭಿಪ್ರಾಯಕ್ಕೆ ಸರ್ಕಾರ ಬಗ್ಗುವಂತೆ ಕಾಣುತ್ತಿದೆ. ತೀರ್ಪನ್ನು ಕುರಿತು ಚರ್ಚಿಸಲು ಸರ್ಕಾರ ಕರೆದ ಸಭೆಯಲ್ಲಿ ಆಹ್ವಾನಿತರಾದವರು ಯಾರು? ಒಂದಿಷ್ಟು ಸಾಹಿತಿಗಳು, ಚಳವಳಿಗಾರರು ಹಾಗೂ ಸರ್ಕಾರಿ ಅಧಿಕಾರಿಗಳು. ಇವರೇ ಈ ವಿಷಯಕ್ಕೆ ಸಂಬಂಧಿಸಿದ ಸಮಸ್ತ ಸಂಗತಿಗಳನ್ನು ಪ್ರತಿನಿಧಿಸುತ್ತಾರಾ? ಇವರನ್ನೇ ಶಿಕ್ಷಣ ತಜ್ಞರು, ಪಾಲಕ-ಪೋಷಕರು, ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ವರ್ಗದವರು ಇತ್ಯಾದಿ ಊಹಿಸಿಕೊಳ್ಳಬೇಕಾ? ಅಷ್ಟಕ್ಕೂ ಈ ಸಭೆಯಲ್ಲಿ ಪಾಲ್ಗೊಂಡವರಲ್ಲಿ ಕನ್ನಡ ಕಲಿತರೆ ಭವಿಷ್ಯವಿದೆ ಎಂಬ ವಾತಾವರಣ ಹುಟ್ಟಿಸಬೇಕಿದೆ ಎಂದ ಗಿರೀಶ್ ಕಾರ್ನಾಡ್ ಹಾಗೂ ಭಾಷೆಯಾಗಿ ಕನ್ನಡ ಕಲಿಸಲು ಅಡ್ಡಿ ಇಲ್ಲ ಹಾಗೂ ಅಂಥ ವಾತಾವರಣ ರೂಪಿಸಬೇಕು ಎಂದ ಸಿ ಎನ್ ರಾಮಚಂದ್ರನ್ ಅವರ ಮಾತುಗಳನ್ನು ಬಿಟ್ಟರೆ ಉಳಿದವರ ಅಭಿಪ್ರಾಯಗಳೆಲ್ಲ ಹೋರಾಟಗಾರರ ಮಾತಿನಂತೆ ತಥಾಕಥಿತವಾಗಿವೆ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೭
— ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೬
ಆವರಣ’ ಎಂಬ ವಿ-ಕೃತಿ ಸಂಗ್ರಹ: ಗೌರಿ ಲಂಕೇಶ್
ಸುಪ್ರೀಂ ತೀರ್ಪಿಗೆ ತಕರಾರೆತ್ತುವ ಮುನ್ನ…
– ಡಾ. ಶ್ರೀಪಾದ ಭಟ್, ಸಹಾಯಕ ಪ್ರಾಧ್ಯಾಪಕ, ತುಮಕೂರು ವಿವಿ
ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂದು ಮಂಗಳವಾರ ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೊರಬೀಳುತ್ತಿದ್ದಂತೆ ಕರ್ನಾಟಕದಲ್ಲಿ ಖಾಸಗಿ ಶಾಲೆಯವರಿಗೆ ಸಂಭ್ರಮವಾದರೆ, ಕನ್ನಡ ಹೋರಾಟಗಾರರು ಹಾಗೂ ಸಾಹಿತಿಗಳಿಗೆ ಸಂಕಟ ಆರಂಭವಾಗಿದೆ. ರಾಜ್ಯ ಮಟ್ಟದ ಪತ್ರಿಕೆಯ ಮಿತ್ರರೊಬ್ಬರು ಕರೆ ಮಾಡಿ ಈ ತೀರ್ಪು ಸರಿ ಇಲ್ಲ, ಇದರಿಂದ ಕನ್ನಡ ಸರ್ವನಾಶವಾಗುತ್ತದೆ. ಇದನ್ನು ಕುರಿತು ಸ್ಟ್ರಾಂಗ್ ಆಗಿ ಲೇಖನ ಬರೆದುಕೊಡಿ ಸಾರ್ ಎಂದರು. ಇಲ್ಲ, ಸುಪ್ರೀಂ ತೀರ್ಪು ಸರಿಯಾಗಿಯೇ ಇದೆ ಎಂದು ನನ್ನ ಅಭಿಪ್ರಾಯ ಹೇಳುವಷ್ಟರಲ್ಲಿ ಏನ್ ಸಾರ್, ಕನ್ನಡ ಮೇಷ್ಟ್ರಾಗಿ ನೀವೇ ಹಿಂಗದ್ರೆ ಹೆಂಗೆ ಎನ್ನುತ್ತ ಆಮೇಲೆ ಕರೆ ಮಾಡ್ತೀನಿ ಅಂತ ಫೋನ್ ಇಟ್ಟರು. ಅವರು ನನ್ನನ್ನು ಕನ್ನಡ ವಿರೋಧಿ ಸ್ಥಾನದಲ್ಲಿ ಸ್ಥಾಪಿಸಿಬಿಟ್ಟರು. ಈ ತೀರ್ಪು ಕುರಿತಂತೆ ಕನ್ನಡ ಪರ ಎಂದುಕೊಳ್ಳುವ ಬಹುತೇಕರ ನಿಲುವು ಹೀಗೇ ಇದ್ದರೆ ಅಚ್ಚರಿ ಇಲ್ಲ.
ಸಮಸ್ಯೆಯ ಮೂಲ 33 ವರ್ಷಗಳ ಹಿಂದಿದೆ. ಗೋಕಾಕ್ ಸಮಿತಿ 1981ರಲ್ಲಿ ಪ್ರಾಥಮಿಕ ಹಂತದಲ್ಲಿ ಕನ್ನಡವೇ ಕಲಿಕಾ ಮಾಧ್ಯಮವಾಗಬೇಕು ಎಂದು ವರದಿ ನೀಡಿದ್ದರ ಆಧಾರದಲ್ಲಿ 1982ರಲ್ಲಿ ಸರ್ಕಾರ ಹೀಗೆ ಆದೇಶ ನೀಡಿತು. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತು. 1984ರಲ್ಲಿ ಕೇಸು ಬಿತ್ತು. ಸ್ವಲ್ಪ ಕಾಲ ಸುಮ್ಮನಿದ್ದ ಸರ್ಕಾರ ಮತ್ತೆ 1994ರಲ್ಲಿ 1ರಿಂದ 4 ನೇ ತರಗತಿವರೆಗೆ ಕನ್ನಡವಲ್ಲದೇ ಬೇರೆ ಮಾಧ್ಯಮದಲ್ಲಿ ಕಲಿಸುವ ಶಾಲೆಗಳಿಗೆ ಅನುಮತಿ ಕೊಡುವುದಿಲ್ಲ ಎಂದು ಆದೇಶಿಸಿತು. ಕೆಲವು ಖಾಸಗಿ ಶಾಲೆಗಳು ಕನ್ನಡದಲ್ಲೇ ಕಲಿಸುತ್ತೇವೆಂದು ಅನುಮತಿ ಪಡೆದು ಇಂಗ್ಲಿಷ್ನಲ್ಲಿ ಬೋಧಿಸತೊಡಗಿದವು. ಮತ್ತೆ ತಕರಾರು ಎದ್ದು ನ್ಯಾಯಾಲಯದ ಮೆಟ್ಟಿಲಿಗೆ ಹೋಯಿತು. ಮತ್ತೆ ಸರ್ಕಾರದ ಆದೇಶ ಬಿತ್ತು. 2009ರಲ್ಲಿ ಕೇಸು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಯಿತು. ಈಗ ತೀರ್ಪು ಹೊರಬಿದ್ದಿದೆ. ಈ ತೀರ್ಪಿನಿಂದ ಕನ್ನಡ ಶಾಶ್ವತವಾಗಿ ಸತ್ತೇ ಹೋಗುತ್ತದೆ ಎಂದು ಹುಯಿಲೆಬ್ಬಿಸಲಾಗುತ್ತಿದೆ. ಹೌದೇ? ಇದರಿಂದ ಕನ್ನಡ ಸತ್ತೇ ಹೋಗುತ್ತಾ?
ಕಥೆಯಾದರು ಚಿತ್ತಾಲ
– ರಾಘವೇಂದ್ರ ಅಡಿಗ ಎಚ್ಚೆನ್
ಕನ್ನಡ ಸಾಹಿತ್ಯ ದಿಗಂತದ ಇನ್ನೊಂದು ತಾರೆ ಅಸ್ತಂಗತವಾಗಿದೆ. ಕವಿ, ಕಥೆಗಾರ, ಶ್ರೀ ಯಶವಂತ ಚಿತ್ತಾಲರು (86) ನಮ್ಮನ್ನೆಲ್ಲಾ ಅಗಲಿದ್ದಾರೆ. ಬಹುಷಃ ತಾವೊಬ್ಬರೇ ಚಿರಶಾಂತಿಯ `ಶಿಕಾರಿ’ ಗಾಗಿ ಹೊರಟಿರುವರೇನೊ? “ನಾನು ಬರೆಯುತ್ತಿರುವುದು ನಾನು ನಾನೇ ಆಗಲು, ಉಳಿದವರನ್ನು ತಿದ್ದುವುದಕ್ಕಲ್ಲ, ಆ ಯೋಗ್ಯತೆಯಾಗಲೀ, ಅಧಿಕಾರವಾಗಲೀ ನನಗಿಲ್ಲ.” ಎಂದಿದ್ದ ಚಿತ್ತಾಲರಿಲ್ಲದ ಈ ಸಮಯದಲ್ಲಿ ಅವರ ಪುಸ್ತಕಗಳ ಅಪಾರ ಅಭಿಮಾನಿಗಳಲ್ಲಿ ನಾನೂ ಒಬ್ಬನಾಗಿ ಅವರ ಬದುಕಿನ ಕುರಿತು ನಿಮ್ಮೊಡನೆ ನಾಲ್ಕು ಮಾತುಗಳನ್ನು ಹಂಚಿಕೊಳ್ಳಬೇಕೆನಿಸುತ್ತಿದೆ
ಯಶವಂತ ಚಿತ್ತಾಲರು ಕನ್ನಡ ಸಾಹಿತ್ಯ ಲೋಕ ಕಂಡ ಅಪರೂಪದ ಬರಹಗಾರರಲ್ಲಿ ಒಬ್ಬರು. ಕನ್ನಡ ಸಾಹಿತ್ಯದಲ್ಲಿ ನವ್ಯ ಯುಗ ಪ್ರಾರಂಭಾವಾಗಿದ್ದ ಕಾಲಘಟ್ಟದಲ್ಲಿ ತಮ್ಮನ್ನು ಸಾಹಿತ್ಯ ಲೋಕಕ್ಕೆ ಪರಿಚಯಿಸಿಕೊಂಡ ಚಿತ್ತಾಲರು ನವ್ಯ ಮಾರ್ಗದಲ್ಲಿನ ಕಥೆಗಳು, ಕಾದಂಬರಿಗಳು ಅಂದು ಸಾಕಷ್ಟು ಪ್ರಸಿದ್ದವಾಗಿದ್ದವು. ‘ಪುರುಷೋತ್ತಮ’, ‘ಛೇದ’, ‘ಶಿಕಾರಿ’ ಗಳಂತಹ ಪ್ರಸಿದ್ದ ಹಾಗೂ ಮಹತ್ವದ ಕಾದಂಬರಿಗಳನ್ನು ರಚಿಸಿದ್ದ ಚಿತ್ತಾಲರ ‘ಕಥೆಯಾದಳು ಹುಡುಗಿ’ ಕನ್ನಡದ ಅತ್ಯಂತ ಜನಪ್ರಿಯ ಕಥಾ ಸಂಕಲನಗಳಲ್ಲಿ ಒಂದು.
ಮೂಲತಃ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಕುಮಟಾದ ಹನೇಹಳ್ಳಿಯವರಾದ ಚಿತ್ತಾಲರು ತಮ್ಮ ಜೀವನದ ಅರ್ಧಕ್ಕೂ ಹೆಚ್ಚಿನ ಸಮಯವನ್ನು ಮುಂಬೈನಲ್ಲಿ ಕಳೆದಿದ್ದರು. ಹನೇಹಳ್ಳಿಯ ವಿಠೋಬಾ, ರುಕ್ಮಿಣಿ ದಂಪತಿಗಳ ಏಳು ಮಕ್ಕಳುಗಳ ಪೈಕಿ ಐದನೆಯವರಾಗಿದ್ದ ಯಶವಂತ ಚಿತ್ತಾಲರು 1928 ರಲ್ಲಿ ಜನಿಸಿದರು. ಪ್ರಾಥಮಿಕ ಶಾಲಾ ಶಿಕ್ಷಣವನ್ನು ತಮ್ಮ ಹುಟ್ಟೂರಿನಲ್ಲೇ ಪೂರೈಸಿದ ಚಿತ್ತಾಲರು ಕುಮಟಾ, ಧಾರವಾಡ್, ಮುಂಬೈ ಹಾಗೂ ನ್ಯೂ ಜರ್ಸಿಗಳಲ್ಲಿ ಉನ್ನತ ವ್ಯಾಸಂಗವನ್ನು ಮಾಡಿದ್ದರು. ಇವರು ವಿಜ್ಞಾನ ಪದವೀಧರರಾಗಿದ್ದು ರಸಾಯನ ಶಾಸ್ತ್ರದಲ್ಲಿ ಉನ್ನತ ಮಟ್ಟದ ಪ್ರೌಢಿಮೆಯನ್ನು ಹೊಂದಿದ್ದರು. ಅದರಲ್ಲಿಯೂ ಪಾಲಿಮರ್ ತಂತ್ರಜ್ಞಾನದಲ್ಲಿ ವಿಶೇಷ ಅನುಭವ ಹೊಂದಿದ್ದ ಚಿತ್ತಾಲರು . ಮುಂಬೈ ವಿವಿಯ ಪ್ಲಾಸ್ಟಿಕ್ ತಂತ್ರವಿಜ್ಞಾನದ ಬಿಎಸ್ಸಿಯಲ್ಲಿ ಪ್ರಥಮ ಸ್ಥಾನ ಸುವರ್ಣ ಪದಕ ಪಡೆದಿರು. ನಲ್ವತ್ತ ನಾಲ್ಕನೇ ವಯಸ್ಸಿನಲ್ಲಿ ಅಮೆರಿಕದ ಸ್ಟೂವನ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಎಂಎ ಪದವಿ ಪಡೆದಿದ್ದ. ಚಿತ್ತಾಲರು ಬೆಕಾಲೈಟ್ ಹೈಲಮ್ ಲಿ. ಕಂಪನಿಯಲ್ಲಿ 30 ವರ್ಷಕ್ಕೂ ಹೆಚ್ಚು ಕಾಲ ದುಡಿದಿದ್ದಾರೆ. ಇಲ್ಲಿ ಹಲವು ವರ್ಷಗಳ ಕಾಲ ಮಾರ್ಕೆಟಿಂಗ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿ ಮುಂಬೈನಲ್ಲಿ ಅದೇ ಕಂಪನಿಯಲ್ಲಿ ಎಕ್ಸಿಕ್ಯುಟಿವ್ ಡೈರಕ್ಟರ್ ಆಗಿ 1985ರಲ್ಲಿ ನಿವೃತ್ತಿ ಹೊಂದಿದ್ದರು.
ಕವಿ ಗಂಗಾಧರ ಚಿತ್ತಾಲರ ಸಹೋದರರಾಗಿದ್ದ ಯಶವಂತ ಚಿತ್ತಾಲರಿಗೆ ಬಾಲ್ಯದಿಂದಲೂ ಸಾಹಿತ್ಯದ ಕಡೆಗೆ ಒಲವಿದ್ದಿತು. ಪಾಶ್ಚಾತ್ಯ ದೇಶಗಳನ್ನೆಲ್ಲಾ ಸುತ್ತಿ ಅಲ್ಲಿನ ಸಾಹಿತ್ಯದ ಮೌಲ್ಯಗಳ ತೌಲನಿಕ ಚಿಂತನೆಯನ್ನು ನಡೆಸಿ ಕನ್ನಡದಲ್ಲಿ ಕೃತಿಗಳನ್ನು ರಚಿಸಿದ ಯಶವಂತ ಚಿತ್ತಾಲರಿಗೆ ಮನಃಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರಗಳಲ್ಲಿ ಬಹಳ ಆಸಕ್ತಿ ಇದ್ದಿತು. ಇವರು ತಮ್ಮ ವಿಶಿಷ್ಟ ಬಗೆಯ ಸಾಹಿತ್ಯದಿಂದ ಜನರನ್ನು ಸಮ್ಮೋಹಗೊಳಿಸಿದ್ದಲ್ಲದೆ ತಮ್ಮ ಸಜ್ಜನಿಕೆಯ ಜೀವನ ಶೈಲಿ, ಜೀವನ ಪ್ರೀತಿಯಿಂದಲೂ ಅಪಾರ ಜನ ಮೆಚ್ಚುಗೆಗೆ ಭಾಜನರಾಗಿದ್ದವರು.
ಕಾನೂನಿನ ಶಂಖದಿಂದ ಪರಿಹಾರದ ತೀರ್ಥ ಬರುತ್ತದೆಯೇ?
– ರಾಕೇಶ್ ಶೆಟ್ಟಿ
ಇತ್ತೀಚೆಗೆ ಪ್ರಕಟವಾದ ಸುದ್ದಿಗಳಲ್ಲಿ ಬಹುವಾಗಿ ಕಾಡಿದ್ದು,ವಿಜಯವಾಣಿಯಲ್ಲಿ ಜನವರಿ ೨೯ರಂದು ಮತ್ತೆ ಫೆಬ್ರವರಿ ೫ರಂದು ಪ್ರಕಟವಾದ ೨ ಸುದ್ದಿಗಳು.ಒಂದು ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲೇ ಇರುವ ಆನೇಕಲ್ ಪುರಸಭೆ ವ್ಯಾಪ್ತಿಯಲ್ಲಿ ವರದಿಯಾದ ಮಲಹೊರುವ ಪ್ರಕರಣ ಮತ್ತು ಇನ್ನೊಂದು ಮಂಡ್ಯದ ಕಾಂಗ್ರೆಸ್ಸ್ ಕಛೇರಿಗೆ ಸಂಬಂಧಿಸಿದ ಮ್ಯಾನ್ ಹೋಲ್ ಅನ್ನು ಪೌರಕಾರ್ಮಿಕನೊಬ್ಬ ಬರಿಗೈಯಿಂದ ಸ್ವಚ್ಚ ಮಾಡುತಿದ್ದ ವರದಿ.
ಆನೇಕಲ್ಲಿನ ಪ್ರಕರಣ ವರದಿಯಾದ ಮೇಲೆ ಸರ್ಕಾರ ಎಚ್ಚೆತ್ತುಕೊಂಡು, ‘ಮಲಹೊರುವಂತೆ ಪ್ರೇರೆಪಿಸಿದ’ ಮತ್ತು ‘ಜಾತಿನಿಂದನೆ’ಯ (ಇದರಲ್ಲಿ ಜಾತಿ ನಿಂದನೆಯಾಗಿದ್ದು ಹೇಗೆ ಅನ್ನುವುದು ತಿಳಿಯಲಿಲ್ಲ) ಆರೋಪದ ಮೇಲೆ ಒಬ್ಬರನ್ನು ಬಂಧಿಸಿದ ಫಾಲೋ-ಅಪ್ ಸುದ್ದಿಯೂ ಪತ್ರಿಕೆಯಲ್ಲಿ ಬಂದಿತ್ತು. ಆದರೆ,ಸರಿಯಾದ ಒಳಚರಂಡಿ ವ್ಯವಸ್ಥೆಯನ್ನು ರೂಪಿಸದ ಸರ್ಕಾರ ಇಂತ ಪ್ರಕರಣದಲ್ಲಿ ಮೊದಲ ಆರೋಪಿಯಾಗಬೇಕೆ ಅಥವಾ ವ್ಯವಸ್ಥೆಯ ನಿರ್ಲಕ್ಷ್ಯದ ಅನಿವಾರ್ಯತೆಗೆ ಬಿದ್ದು,ಕಾರ್ಮಿಕರಿಂದ ಮಲಹೊರಿಸುವ ಸ್ಥಿತಿಗೆ ಬಂದು ನಿಲ್ಲುವವರು ಆರೋಪಿಗಳಾಗಬೇಕೆ?
ಅತ್ಯಾಧುನಿಕ ಉಪಕರಣಗಳು ಆಯಾ ಪಾಲಿಕೆ/ನಗರಸಭೆ/ಪುರಸಭೆ/ಗ್ರಾಮಪಂಚಾಯಿತಿ ಗಳಲ್ಲಿ ಲಭ್ಯವಿದ್ದೂ ಮತ್ತು ಅವುಗಳನ್ನು ಬಳಸುವ ಬಗ್ಗೆ ಜನರಿಗೆ ಅರಿವು ಮೂಡಿಸಿ,ಅವು ಸುಲಭವಾಗಿ ದಕ್ಕುವಂತೆ ಸರ್ಕಾರ ಮಾಡಿದ್ದರೆ,ಒಬ್ಬರು ಜೈಲಿಗೆ ಹೋಗುವುದನ್ನು ತಪ್ಪಿಸಬಹುದಿತ್ತಲ್ಲವೇ?
ಆರ್.ಕೆ ಶ್ರೀಕಂಠನ್ ಅವರೊಂದಿಗಿನ ಮಾತುಕತೆಯ ನೆನಪು
ಕರ್ನಾಟಕ ಸಂಗೀತದ ಹಿರಿಯ ಗಾಯಕರಾದ ಆರ್.ಕೆ ಶ್ರೀಕಂಠನ್ ಅವರು ನಿನ್ನೆ ವಿಧಿವಶರಾದರು.ತಮ್ಮ ೯೪ರ ವಯಸ್ಸಿನಲ್ಲೂ ಸಂಗೀತ ಕಛೇರಿಯನ್ನು ನಡೆಸಿಕೊಡುತಿದ್ದ ಶ್ರೀಕಂಠನ್ ಅವರ ಬಗ್ಗೆ ಹಂಸಾನಂದಿ ಹಾಗೂ ಪ್ರಭುಮೂರ್ತಿಯವರು ಉತ್ತರ ಕ್ಯಾಲಿಫೋರ್ನಿಯಾ ಕನ್ನಡಕೂಟದ ಪರವಾಗಿ ೨೦೦೮ರಲ್ಲಿ ನಡೆಸಿದ ಸಂದರ್ಶನವನ್ನು ಪ್ರಕಟಿಸುತಿದ್ದೇವೆ – ನಿಲುಮೆ
ಒಂದು ಮಾಘದ ತಂಪಿನಿರುಳಲಿ
ನಂದನದಿ ಸೇರಿರಲು ಸುರಗಣ
ಚಂದದಲಿ ತಲೆದೂಗಲಿಕೆ ನಾರದನ
ಗಾಯನಕೆ
ಇಂದದೇಕೋ ತನ್ನ ಹಾಡ
ಲ್ಲೊಂದು ಸೊಗಸೂ ಕಾಣದೆಯೆ ಕರೆ
ತಂದನೈ ಹಾಡಲಿಕೆ ಕರ್ನಾಟಕದ
ಕೋಗಿಲೆಯ!
ಸೃಜನಶೀಲತೆಯಿಲ್ಲದ ಜನರ ಹಟವಿದು – ಡಬ್ಬಿ೦ಗ್ ವಿರೋಧ
– ಗುರುರಾಜ್ ಕೊಡ್ಕಣಿ
ಕನ್ನಡ ಚಿತ್ರರ೦ಗದಲ್ಲಿ ಮತ್ತೆ ಡಬ್ಬಿ೦ಗ್ ವಿವಾದದ ಅಲೆ ಭುಗಿಲೆದ್ದಿದೆ.ಚಿತ್ರರ೦ಗದಲ್ಲೇ ಡಬ್ಬಿ೦ಗ್ ವಿವಾದದ ಕುರಿತು ಭಿನ್ನಾಭಿಪ್ರಾಯಗಳಿವೆ.ಹೆಚ್ಚಿನ ಸಿನಿಮಾ ಮ೦ದಿ ಡಬ್ಬಿ೦ಗ್ ವಿರೋಧಿಗಳಾಗಿದ್ದರೆ ,’ಮಠ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರು ಪ್ರಸಾದರ೦ಥವರು ಡಬ್ಬಿ೦ಗ್ ಪರವಾಗಿ ನಿ೦ತಿದ್ದಾರೆ.ನಟ ಶಿವ ರಾಜಕುಮಾರ ನೇತೃತ್ವದಲ್ಲಿ ಡಬ್ಬಿ೦ಗ್ ವಿರೋಧಿ ನಟರು, ನಿರ್ದೇಶಕರು ಚಳುವಳಿಯೆ೦ದು ಬಿದಿಗಿಳಿಯುವ ಎಲ್ಲಾ ಸಾಧ್ಯತೆಗಳಿವೆ.ಈ ಮಧ್ಯೆ ಡಬ್ಬಿ೦ಗ್ ಸಮರ್ಥಿಸಿದರು ಎ೦ಬ ಕಾರಣಕ್ಕೆ ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚ೦ದ್ರಶೇಖರ ಕ೦ಬಾರರನ್ನು ಅವಮಾನಿಸಿ ಚಿತ್ರನಟ ’ನೆನಪಿರಲಿ’ ಪ್ರೇಮ ವಿವಾದಕ್ಕೀಡಾಗಿದ್ದಾರೆ.ಸಧ್ಯಕ್ಕ೦ತೂ ಡಬ್ಬಿ೦ಗ್ ವಿವಾದ ಶೀಘ್ರದಲ್ಲಿ ಮುಗಿಯುವ ಯಾವ ಲಕ್ಷಣಗಳೂ ಗೋಚರಿಸುತ್ತಿಲ್ಲ ಡಬ್ಬಿ೦ಗ್ ವಿರೋಧಿಗಳ ವಾದಗಳನ್ನೊಮ್ಮೆ ಗಮನಿಸಿ.ಕನ್ನಡ ಚಿತ್ರರ೦ಗಕ್ಕೆ ಡಬ್ಬಿ೦ಗ್ ಕಾಲಿಟ್ಟರೆ,ಕನ್ನಡದ ಸ೦ಸ್ಕೃತಿ ಹಾಳಾಗಿ ಹೋಗುತ್ತದೆ ಎನ್ನುವುದು ಇವರ ಬಹುಮುಖ್ಯ ವಾದ.ಅಲ್ಲದೆ ಡಬ್ಬಿ೦ಗ್ ಸಮ್ಮತಿಸಲ್ಪಟ್ಟರೆ ಕನ್ನಡದ ಚಿತ್ರರ೦ಗದ ಕಲಾವಿದರು ಕೆಲಸವಿಲ್ಲದ೦ತಾಗಿ ಬೀದಿಗೆ ಬ೦ದುಬಿಡುತ್ತಾರೆ,ಹಾಗಾಗಿ ಡಬ್ಬಿ೦ಗ್ ನಿಷೇಧ ಆನಿವಾರ್ಯವೆ೦ದು ಕೆಲವರು ವಾದಿಸುತ್ತಾರೆ.ಪರಭಾಷಾ ಚಿತ್ರಗಳು ಕನ್ನಡಕ್ಕೆ ಡಬ್ ಆದರೆ,ಆ ಸಿನಿಮಾಗಳಲ್ಲಿನ ಆದ್ಧೂರಿ ಸೆಟ್,ದೃಶ್ಯ ವಿಜೃ೦ಭಣೆಯ ಮು೦ದೆ ಕನ್ನಡದ ಸಿನಿಮಾಗಳು ಪೈಪೋಟಿ ನೀಡಲಾಗದೆ ಸೋತು ಹೋಗಬಹುದೆನ್ನುವುದು ಉಳಿದ ಕೆಲವರ ಅ೦ಬೋಣ.ಒಟ್ಟಾರೆಯಾಗಿ,ಡಬ್ಬಿ೦ಗ್ ವಿರೋಧಿಗಳ ತಿರುಳಿಲ್ಲದ ಈ ವಾದಗಳು ಅವರ ಹತಾಶ ಮನಸ್ಥಿತಿಗೆ ಸಾಕ್ಷಿಯಾಗಬಲ್ಲವೇ ಹೊರತು ಬೇರೆನನ್ನೂ ನಿರೂಪಿಸಲಾರವು.
ಮೈಸೂರು ಹುಲಿಯ ವಿರುದ್ಧ ಸೆಟೆದು ನಿಂತ ಸಹ್ಯಾದ್ರಿಯ ಹುಲಿ
– ಕ.ವೆಂ.ನಾಗರಾಜ್
ಟಿಪ್ಪು ಸುಲ್ತಾನನ ಪರವಾಗಿ ಮತ್ತು ವಿರುದ್ಧವಾಗಿ ಬರುತ್ತಿರುವ ಲೇಖನಗಳು ಮತ್ತು ಹೇಳಿಕೆಗಳನ್ನು ಗಮನಿಸಿದಾಗ ಹೆಚ್ಚಿನವು ಉತ್ಪ್ರೇಕ್ಷೆಯಿಂದ ಕೂಡಿದುದೆಂದು ಮೇಲ್ನೋಟಕ್ಕೆ ಕಾಣುತ್ತವೆ. ಇದರಲ್ಲಿ ಜಾತಿ, ಧರ್ಮಗಳೂ ಥಳಕು ಹಾಕಿಕೊಂಡು ವಿಷಯವನ್ನು ಜಟಿಲಗೊಳಿಸುತ್ತವೆ. ಟಿಪ್ಪು ಪರಮತ ಸಹಿಷ್ಣುವೋ ಅಲ್ಲವೋ, ಕ್ರೂರಿಯೋ ಅಲ್ಲವೋ ಎಂಬ ಬಗ್ಗೆ ಪ್ರಖರವಾದ ವಾದ, ಪ್ರತಿವಾದಗಳನ್ನು ಕಂಡಿದ್ದೇವೆ. ಟಿಪ್ಪು ಹೆಸರಿನಲ್ಲಿ ಮುಸ್ಲಿಮ್ ವಿಶ್ವವಿದ್ಯಾಲಯದ ಸ್ಥಾಪನೆಗೆ ನಡೆಯುತ್ತಿರುವ ಪ್ರಯತ್ನ ಇಂತಹ ಚರ್ಚೆಗಳಿಗೆ ಮತ್ತಷ್ಟು ಒತ್ತು ಕೊಟ್ಟಿದೆ. ಇತಿಹಾಸವನ್ನು ಇತಿಹಾಸವಾಗಿಯೇ ಆಧ್ಯಯನ ಮಾಡಬೇಕು, ಅದಕ್ಕೆ ಜಾತ್ಯಾತೀತತೆಯ ಲೇಪ ಕೊಡುವ ಸಲುವಾಗಿ ವಾಸ್ತವತೆಯನ್ನು ಮರೆಮಾಚುವ ಕೆಲಸ ಇತಿಹಾಸಕ್ಕೆ ಮಾಡುವ ಅಪಚಾರವಾಗುತ್ತದೆ ಎಂಬುದನ್ನು ಎಷ್ಟು ಬೇಗ ಮನಗಾಣುತ್ತೇವೋ ಅಷ್ಟೂ ದೇಶಕ್ಕೆ ಒಳ್ಳೆಯದು. ಈಗಾಗಲೇ ಬಹಳಷ್ಟು ಚರ್ಚಿತವಾಗಿರುವ ವಿಷಯಗಳನ್ನು ಪುನಃ ಇಲ್ಲಿ ಪ್ರಸ್ತಾಪಿಸಹೋಗದೆ ಟಿಪ್ಪುವಿನ ಕಾಲದಲ್ಲಿ ಬಂದಿಗಳಾಗಿದ್ದವರ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಪ್ರಸ್ತಾಪಿಸಿ, ಟಿಪ್ಪುವಿನ ವಿರುದ್ಧ ಸೆಟೆದು ನಿಂತಿದ್ದ ಒಬ್ಬ ಧೀರ ಕನ್ನಡಿಗನ ಬಗ್ಗೆ ನನಗೆ ತಿಳಿದಿರುವ ಸಂಗತಿಗಳನ್ನು ಹಂಚಿಕೊಳ್ಳುತ್ತೇನೆ.
ಮೂಲ ವಿಷಯಕ್ಕೆ ಬರುವ ಮುನ್ನ ಮೊದಲೇ ಹೇಳಿದ್ದಂತೆ ಹೈದರ್ ಮತ್ತು ಟಿಪ್ಪೂರ ಕಾಲದಲ್ಲಿ ಬಂದಿಗಳ ಸ್ಥಿತಿಯನ್ನು ತಿಳಿಸುವ ಸಲುವಾಗಿ ಜೇಮ್ಸ್ ಸ್ಕರಿ ಎಂಬ ಬ್ರಿಟಿಷ್ ಕೈದಿಯೊಬ್ಬನ ಬಗ್ಗೆ ಸಂಕ್ಷಿಪ್ತವಾಗಿ ತಿಳಿಯೋಣ. ಜೇಮ್ಸ್ ಸ್ಕರಿಯ ತಂದೆ ಒಬ್ಬ ಬ್ರಿಟಿಷ್ ಸೈನಿಕನಾಗಿದ್ದು, ಸ್ಕರಿ ಚಿಕ್ಕಂದಿನಲ್ಲೇ ಗನ್ ಪೌಡರ್ ಸಾಗಾಟದ ಕೆಲಸ ಮಾಡುತ್ತಿದ್ದು ಅದಕ್ಕಾಗಿ ಸಮುದ್ರಯಾನ ಮಾಡಬೇಕಾಗುತ್ತಿತ್ತು. ಹೀಗೆ ಪ್ರಯಾಣ ಮಾಡುತ್ತಿದ್ದ ಸಮಯದಲ್ಲಿ ತನ್ನ ೧೪ನೆಯ ವಯಸ್ಸಿನಲ್ಲೇ ಸೈಂಟ್ ಹೆಲೆನಾ ಎಂಬ ದ್ವೀಪದಲ್ಲಿ ಫ್ರೆಂಚರಿಂದ ಹಡಗಿನಲ್ಲಿದ್ದ ಇತರ ೧೪ ಸಿಬ್ಬಂದಿಗಳೊಂದಿಗೆ ಕ್ರಿ.ಶ. ೧೭೮೦ರಲ್ಲಿ ಬಂಧಿಸಲ್ಪಟ್ಟ. ಈ ೧೫ ಜನರನ್ನು ಫ್ರೆಂಚ್ ಅಡ್ಮಿರಲ್ ಸಫ್ರೆನ್ ಹೈದರಾಲಿಯ ವಶಕ್ಕೆ ಒಪ್ಪಿಸಿದ. ಇವರುಗಳನ್ನು ಮೊದಲು ಬೆಂಗಳೂರಿನ ಜೈಲಿಗೆ, ನಂತರ ಶ್ರೀರಂಗಪಟ್ಟಣದ ಸೆರೆಮನೆಗೆ ಸಾಗಿಸಲಾಯಿತು. ಸೆರೆಯಾದ ಕೂಡಲೇ ಕಾಲುಗಳಿಗೆ ಬಲವಾದ ಕಬ್ಬಿಣದ ಸರಪಳಿಗಳನ್ನು ಹಾಕಿ, ಕೈಗಳಿಗೂ ಕಬ್ಬಿಣದ ಕೋಳಗಳನ್ನು ಹಾಕಿ ಸೆರೆಮನೆ ತಲುಪುವವರಗೆ ಹಲವಾರು ದಿನಗಳ ಕಾಲ ನಡೆಸಿಕೊಂಡೇ ಹೋಗಲಾಗಿತ್ತು. ಟಿಪ್ಪು ಇವರೆಲ್ಲರನ್ನೂ ಬಲವಂತವಾಗಿ ಇಸ್ಲಾಮ್ ಮತಕ್ಕೆ ಮತಾಂತರಿಸಿ, ಜೇಮ್ಸ್ ಸ್ಕರಿಗೆ ಮುಸ್ಲಿಮ್ ಹೆಸರಾದ ಶಂಶೇರ್ ಖಾನ್ ಎಂದು ಹೊಸ ಹೆಸರು ಕೊಟ್ಟು ಬಲವಂತವಾಗಿ ತನ್ನ ಸೇನೆಯಲ್ಲಿ ಕೆಲಸ ಮಾಡಿಸಿದ್ದ.
ತುಳುವಿಗೆ ೮ನೇ ಪರಿಚ್ಛೇದದ ಮಾನ್ಯತೆ ತುಳುವರ “ಹಕ್ಕು” ಯಾರ ಭಿಕ್ಷೆಯಲ್ಲ…!
– ರಾಕೇಶ್ ಶೆಟ್ಟಿ
ಬೆಂಗಳೂರಿನ ಸಮಸ್ತ ತುಳು ಸಂಘಟನೆಗಳೂ ಒಗ್ಗೂಡಿ,ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವಂತೆ ಮತ್ತು ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ವರ್ಷದ ಸೆಪ್ಟಂಬರ್ ೨೮ ರ ಶನಿವಾರ ಕಳೆದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಒಂದು ದಿನದ ’ಹಕ್ಕೊತ್ತಾಯ – ಪ್ರತಿಭಟನೆ’ಯನ್ನು ಮಾಡಿದ್ದವು.ಅಂದಿನ ಪ್ರತಿಭಟನೆಯ ನೇತೃತ್ವ ವಹಿಸಿದವರು ಹಿರಿಯ ಸಾಹಿತಿ ಡಾ|| ಡಿ.ಕೆ ಚೌಟ ಅವರು. ಚೌಟ ಅವರ ಭಾಷಣದಲ್ಲಿ ಇಷ್ಟು ವರ್ಷಗಳ ಕಾಯುವಿಕೆಯನ್ನು ಕಡೆಗಣಿಸಿದ ರಾಜಕಾರಣಿಗಳು,ವ್ಯವಸ್ಥೆಗಳ ಮೇಲೆ ಸಾತ್ವಿಕ ಕೋಪ ಎದ್ದು ಕಾಣುತಿತ್ತು.ಹಾಗೆಯೇ ತುಳುವಿಗೆ ಇರುವ ಅಪಾಯ, ನಮ್ಮ ಭೂಮಿ ಮಲಯಾಳಿಗಳ ಪಾಲಾಗುತ್ತಿರುವ ಬಗೆಗಿನ ಆತಂಕವಿತ್ತು.ಆ ದಿನ ಬಹಳಷ್ಟು ಜನ ಮಾತನಾಡಿದರು.ಆದರೆ ನಿಜವಾಗಿಯೂ ತುಳುವರ ಅಸ್ಮಿತೆಯನ್ನು ಬಡಿದ್ದೆಬ್ಬಿಸುವಂತ ಮಾತನಾಡಿದ್ದು ಚೌಟ ಅವರೊಬ್ಬರೇ.ಅವರ ಮಾತು ಮತ್ತದಕ್ಕೆ ವ್ಯಕ್ತವಾದ ಸ್ಪಂದನೆ ಕಂಡಾಗ ಏನಾದರೂ ಒಳ್ಳೆಯ ಬೆಳವಣಿಗೆಗಳು ಆಗಬಹುದು ಅಂದುಕೊಳ್ಳುತಿದ್ದೆ.ಅಷ್ಟರಲ್ಲೇ, ರಾಜಕಾರಣಿಗಳ ಆಗಮನವಾಯಿತು…!
ಒಬ್ಬರು ಚಿಕ್ಕಮಗಳೂರಿನ ಸಂಸದ ಜಯಪ್ರಕಾಶ್ ಹೆಗ್ಡೆ,ಮತ್ತೊಬ್ಬರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಅನಂತ ಕುಮಾರ್.ಇಂತ ಪ್ರತಿಭಟನಾ ಸಭೆಗಳಿಗೆ ರಾಜಕಾರಣಿಗಳನ್ನೇಕೆ ಕರೆಯುತ್ತಾರೆ ಅನ್ನುವುದು ನನಗೆ ಅರ್ಥವಾಗಲಿಲ್ಲ!
ಅದಕ್ಕೇ ಸರಿಯಾಗಿಯೇ ಈ ಇಬ್ಬರ ಮಾತುಗಳು ಸಾಗಿತ್ತು.ಪ್ರತಿಭಟನೆಗೆಂದು ಬಂದವರನ್ನು ತಮ್ಮ ಆಶ್ವಾಸನೆಗಳ ಮೂಲಕ,ಹಾಸ್ಯ ಚಟಾಕಿಗಳ ಮೂಲಕ ಸಮಾಧಾನಪಡಿಸುವ ಎಂದಿನ ರಾಜಕಾರಣಿಗಳ ಓಲೈಕೆಯ ಶೈಲಿಯ ಭಾಷಣ.೮ನೇ ಪರಿಚ್ಚೇದ ಬಿಟ್ಟು ಕೋರಿರೊಟ್ಟಿ,ನೀರ್ ದೋಸೆ ಇತ್ಯಾದಿ ಇತ್ಯಾದಿ.ಅನಂತ ಕುಮಾರ್ ಅವರು ನವೆಂಬರ್ ತಿಂಗಳಲ್ಲಿ ನೀವು ಒಂದು ತುಳು ನಿಯೋಗವನ್ನು ಕರೆದುಕೊಂಡು ದೆಹಲಿಗೆ ಬನ್ನಿ ಆ ಸಮಯಕ್ಕೆ ಶುರುವಾಗುವ ಸಂಸತ್ತಿನ ಅಧಿವೇಶನದಲ್ಲಿ ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಮಾತನಾಡುವ ಅಂತ ಹೇಳಿ ಎಲ್ಲರ ಚಪ್ಪಾಳೆಯನ್ನು ಗಿಟ್ಟಿಸಿದ್ದರು.ಅನಂತ ಕುಮಾರ್ ಅವರ ಮಾತನ್ನು ಹೆಗ್ಡೆಯವರು ಅನುಮೋದಿಸಿದ್ದರು.ವೇದಿಕೆಯಲ್ಲಿದ್ದವರೂ ಅದಕ್ಕೇ ಸಮ್ಮತಿಸುವುದರೊಂದಿಗೆ ಪ್ರತಿಭಟನಾ ಸಭೆ ’ಶಾಂತ’ವಾಯಿತು.







