ಬೆನ್ನಿ ಹಿನ್ ಕಂಡರೆ ಪ್ರಗತಿಪರರಿಗೇಕೆ ಅಷ್ಟೊಂದು ಭಯ!?
– ನರೇಂದ್ರ ಕುಮಾರ್ ಎಸ್.ಎಸ್
ಬೆನ್ನಿ ಹಿನ್ ಮತ್ತೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. 2005ರಲ್ಲಿ ಬೆನ್ನಿ ಹಿನ್ ಬೆಂಗಳೂರಿಗೆ ಆಗಮಿಸಿದ್ದಾಗ ಬಹಳ ವಿರೋಧ ವ್ಯಕ್ತವಾಗಿತ್ತು. ಆದರೆ, ರಾಜ್ಯ ಸರಕಾರದ ಸಹಕಾರದಿಂದಾಗಿ, ಆತನ “ಕಣ್ ಕಟ್ ಪ್ರದರ್ಶನ ಮತ್ತು ಮತಾಂತರ” ನಿರಾತಂಕವಾಗಿ ನಡೆಯಿತು. ಆ ನಂತರ ಆನೇಕ ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಿಂದ ಹೊರಗುಳಿಯಬೇಕಾಯಿತು (ಆತನ ಕಣ್ ಕಟ್ನ ಪ್ರಭಾವವೂ ಇರಬಹುದೇ?). ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಮತ್ತು ಕೂಡಲೇ “ಬೆನ್ನಿ ಹಿನ್ ಅವರ ಕಣ್ ಕಟ್ ಕಾರ್ಯಕ್ರಮ” ಆಯೋಜಿತವಾಗಿದೆ! ಇದು ಕೇವಲ ಕಾಕತಾಳೀಯವಿರಲಾರದು ಅಲ್ಲವೇ!?
ಬೆನ್ನಿ ಹಿನ್ ಇಸ್ರೇಲಿನ ಜೆರೂಸೆಲಂನಲ್ಲಿ ಜನಿಸಿ, ಮುಂದೆ ಅಮೆರಿಕದ ಪ್ರಜೆಯಾದರು. ಅವರೊಬ್ಬ ಕ್ರೈಸ್ತ ಮತ ಪ್ರಚಾರಕ. ಅವರು ಹೋದಲ್ಲೆಲ್ಲಾ ಪ್ರಾರ್ಥನಾ ಸಭೆಗಳನ್ನು ನಡೆಸುತ್ತಾರೆ. ತನ್ನ ಸಭೆಗಳಲ್ಲಿ ಹಾಜರಿದ್ದು, ತನ್ನೊಡನೆ ಪ್ರಾರ್ಥನೆ ಮಾಡಿದವರಿಗೆ ಮತ್ತು ತನ್ನನ್ನು ಸ್ಪರ್ಶಿಸಿದವರಿಗೆ ಯಾವುದೇ ರೋಗವಿದ್ದರೂ ಗುಣವಾಗುತ್ತದೆ, ಎಂದು ಅವರು ಹೇಳಿಕೊಳ್ಳುತ್ತಾರೆ. “ಕ್ಯಾನ್ಸರ್/ ಏಡ್ಸ್ ನಂತಹ ಕಾಯಿಲೆಗಳನ್ನೂ ಕೇವಲ ಸ್ಪರ್ಶದ ಮೂಲಕವೇ ವಾಸಿ ಮಾಡುತ್ತೇನೆ” ಎಂದು ಹೇಳಿ ಜನರನ್ನು ಯಾಮಾರಿಸಲು ಪ್ರಯತ್ನಿಸುತ್ತಾರೆ! 3 ರಿಂದ 5 ದಿನಗಳ ಕಾಲ ನಡೆಯುವ ಇವರ ಕಾರ್ಯಕ್ರಮಗಳಲ್ಲಿ, ಕೊನೆಯ ದಿನಗಳು ಹತ್ತಿರ ಬಂದಂತೆ, ವೇದಿಕೆಯ ಮೇಲೆ ನಡೆಯುವ ನಾಟಕವೂ ಹೆಚ್ಚುತ್ತದೆ. ಇದ್ದಕ್ಕಿದ್ದಂತೆ ಮೈಮೇಲೆ ಏನೋ ಬಂದಂತೆ, ಕಣ್ಣೀರು ಸುರಿಸುತ್ತಾ ಕೆಲವರು ನುಗ್ಗುತ್ತಾರೆ. ತಮಗೆ ಯಾವುದೇ ಔಷಧದಿಂದಲೂ ಗುಣವಾಗದ ಖಾಯಿಲೆಯಿತ್ತು ಮತ್ತು ಇಲ್ಲಿ ಪ್ರಾರ್ಥಿಸಿದ ನಂತರ ಖಾಯಿಲೆ ವಾಸಿಯಾಗಿಬಿಟ್ಟಿತು; ಬೆನ್ನಿ ಹಿನ್ ಅವರೇ ಪ್ರತ್ಯಕ್ಷ ದೇವರು; ಎಂದೆಲ್ಲಾ ಕುಣಿದಾಡುತ್ತಾರೆ. ಇದೆಲ್ಲಾ ಪೂರ್ವನಿಯೋಜಿತ ನಾಟಕ ಎಂಬುದು ಹಲವು ಬಾರಿ ನಿರೂಪಿತವಾಗಿದ್ದರೂ, ಮುಂದಿನ ಬಾರಿಯೂ ಇದೇ ರೀತಿಯ ನಾಟಕ ಇದ್ದೇ ಇರುತ್ತದೆ. ಈ ರೀತಿಯ ನಾಟಕ ನಡೆಯದಿದ್ದರೆ, ಇವರ ಸಭೆಗೆ ಜನರೇ ಬರುವುದಿಲ್ಲವಲ್ಲ; ಹೀಗಾಗಿ ನಾಟಕ ನಿಲ್ಲಿಸುವಂತಿಲ್ಲ!
ಕನ್ನಡದ ನಾಡಿಮಿಡಿತ ಅರಿತ ಕಥೆಗಾರ: ‘ನಾಡಿ’
– ರಾಘವೇಂದ್ರ ಅಡಿಗ ಎಚ್ಚೆನ್
*ಮಡಿಕೇರಿಯಲ್ಲಿ ಬರುವ ಜನವರಿ 7 ರಿಂದ 9 2014ರ ವರೆಗೆ ನಡೆಯಲಿರುವ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಾಡಿನ ಖ್ಯಾತ ಸಾಹಿತಿ ನಾ. ಡಿಸೋಜರವರು ಆಯ್ಕೆಗೊಂಡಿದ್ದಾರೆ. ಸಾಮಾಜಿಕ ಸಮಸ್ಯೆಗಳನ್ನು ಆಧಾರವಾಗಿಟ್ಟುಕೊಂಡು ಇವರು ಸೃಷ್ಟಿಸಿರುವ ಅನೇಕ ಕಥೆ-ಕಾದಂಬರಿಗಳು ಜನಮಾನಸವನ್ನು ಸೂರೆಗೂಂಡಿವೆ. ಅದರಲ್ಲಿ ಕೆಲವಷ್ಟು ಚಲನಚಿತ್ರಗಳಾಗಿಯೂ ಹೆಸರು ಮಾಡಿವೆ. ಇಂತಹಾ ಅಪೂರ್ವ ಸಾಹಿತಿಯೊಬ್ಬರಿಗೆ ಕನ್ನಡ ಸಮ್ಮೇಳನದ
ಅಧ್ಯಕ್ಷಗಿರಿ ಪ್ರಾಪ್ತವಾದ ಹಿನ್ನೆಲೆಯಲ್ಲಿ ಅವರ ಬದುಕು-ಬರಹದ ಕುರಿತ ಕಿರುನೋಟವೊಂದು ಇಲ್ಲಿದೆ.*
ಈ ಬಾರಿ ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ನಡೆಯಲಿರುವ ಎಂಭತ್ತನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸಾಹಿತಿ ನಾ ಡಿಸೋಜಾರವರಿಗೆ ಈ ಮೂಲಕ ನನ್ನ ಅಭಿನಂದನೆಗಳನ್ನು ತಿಳಿಸಬಯಸುತ್ತೇನೆ.
ಕನ್ನಡ ಭಾಷೆ, ಸಾಹಿತ್ಯ ಉಳಿಯಬೇಕು. ಸರ್ಕಾರ ಕನ್ನಡ ಮಾದ್ಯಮವನ್ನು ಕಡ್ಡಾಯಗೊಳಿಸಬೇಕು,ಇದೇ ಮುಂತಾದ ಹೇಳಿಕೆಗಳನ್ನು ನೀಡುತ್ತಾ ತಾವು ಹಿಂದಿನಿಂದ ಆಂಗ್ಲ ಸಾಹಿತ್ಯ, ಭಾಷೆಗೆ ಕುಮ್ಮಕ್ಕು ನೀಡುತ್ತಿರುವ, ಜತೆಗೆ ಆಡಳಿತಾರೂಢ ಸರ್ಕಾರಗಳಿಂದ ತಮಗೆ ಬೇಕಾದ ಅನುಕೂಲಗಳನ್ನು ಪಡೆದುಕೊಳ್ಳುವ ಸಲುವಾಗಿ ತಮ್ಮನ್ನು ತಾವು ಸಾಹಿತಿಗಳೆಂದು ಬಿಂಬಿಸಿಕೊಳ್ಳುವ ಒಂದು ವರ್ಗವೇ ನಮ್ಮ ನಡುವಿರುವ ಈ ದಿನಗಳಲ್ಲಿ ತಾವು ಬದುಕಿ ಬಾಳಿದ ಮಲೆನಾಡಿನ ಐಸಿರಿಯ ನಡುವಿನ ಪುಟ್ಟ ಊರು ಸಾಗರದ ಸುತ್ತ ಮುತ್ತ ನಡೆವ ಬೆಳವಣಿಗೆಗಳಿಂದ ಸ್ಪೂರ್ತಿಗೊಂಡು ಅತಿ ಸಾಮಾನ್ಯ ವಸ್ತುವನ್ನಿಟ್ಟುಕೊಂಡು ಓದುಗರಮನಸ್ಸಿಗೆ ತಟ್ಟುವಂತೆ ಕಥೆ ಹೆಣೆಯಬಲ್ಲ ಜಾಣ ಕಥೆಗಾರರಾದ ನಾ.ಡಿಸೋಜಾರಂಥವರು ಯಾವುದೇ ಪ್ರಚಾರವನ್ನು ಬಯಸದೆ ತಮ್ಮ ಪಾಡಿಗೆ ತಾವು ಕನ್ನಡದ ಕೆಲಸದಲ್ಲಿ ತೊಡಗಿರುವಂತಹವರೂ ನಮ್ಮೊಡನಿರುವುದು ನಮಗೆಲ್ಲರಿಗೂ ನಿಜಕ್ಕೂ ಖುಷಿಯ ಸಂಗತಿ. ಇಂತಹಾ ಅಪ್ಪಟ ಕನ್ನಡ ಪ್ರೇಮಿಯೊಬ್ಬರಿಗೆ ಈ ಬಾರಿ ಕನ್ನಡಮ್ಮನ ತೇರನ್ನೆಳೆಯುವ ಅವಕಾಶ ದೊರೆತಿರುವುದು ನಿಜಕ್ಕೂ ಸ್ವಾಗತಾರ್ಹ. ಈ ಹಿನ್ನೆಲೆಯಲ್ಲಿ ನಾ. ಡಿಸೋಜಾರವರ ಬದುಕು-ಬರಹಗಳ ಕುರಿತ ಸಂಕ್ಷಿಪ್ತ ನೋಟ ಇಲ್ಲಿದೆ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
– ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ದಾಟು ಮತ್ತು ಭಾರತೀಪುರ
—————————–
ಯು ಆರ್ ಅನಂತಮೂರ್ತಿ ಅವರ “ಭಾರತೀಪುರ” ಕಾದಂಬರಿಯ ನಾಯಕ ಜಗನ್ನಾಥನ ‘fickle minded personality’ ನಮ್ಮ ನವ್ಯ ಸಾಹಿತ್ಯದ ಆಧುನಿಕ ಪ್ರಜ್ಞೆಗೆ ತುಂಬ ಹತ್ತಿರವಾಗಿದೆ. ಇದು ಮೊದಲು ಪ್ರಕಟವಾಗಿದ್ದು ೧೯೭೩ರಲ್ಲಿ. ಸುಮ್ಮನೆ “ಇದೂ ಒಂದು ಮಾಮೂಲಿ ಕಾದಂಬರಿ” ಎಂದು ಓದಿಕೊಂಡು ಹೋಗುವ ಹಾಗಿದ್ದರೆ ಯಾವ ಜಿಜ್ಞಾಸೆಯೂ ಬೇಕಾಗುವುದಿಲ್ಲ. ಆದರೆ ಜಗನ್ನಾಥ ತನ್ನ ಊರಾದ ಭಾರತೀಪುರದಲ್ಲಿ ತಾನು ತರಬೇಕೆಂದುಕೊಳ್ಳುವ ಬದಲಾವಣೆಗೆ ತಕ್ಕ ತಯಾರಿ ನಡೆಸಿದ್ದನೆ? ನಡೆಸಿದ್ದರೆ ಅದು ಯಾವ ಮಾದರಿಯದ್ದು ಎಂದು ಯೋಚಿಸಲು ಹೊರಟಾಗ ನಿರಾಸೆಯಾಗುತ್ತದೆ. ಜತೆಗೆ ಈ ಕಾದಂಬರಿಯಲ್ಲಿ ಈತನಿಗಿಂತ ಶಕ್ತಿಶಾಲಿಯಾದ, ಗಟ್ಟಿ ಮನಸ್ಸಿನ ಸಾಕಷ್ಟು ವ್ಯಕ್ತಿಗಳಿದ್ದಾರೆ.
ಬೆಂಗಳೂರು ಸುಂದರವಾಗಬೇಕೇ – ಹಾಗಿದ್ದರೆ, ಒಂದು ಸಣ್ಣ SMS ಕಳುಹಿಸಿ!
- ನಿಮಗೆ ಬೆಂಗಳೂರಿನ ಕಿತ್ತು ಹೋಗಿರುವ ರಸ್ತೆಗಳನ್ನು ನೋಡಿ ಬೇಸರವಾಗಿದೆಯೇ?
- ನಿಮಗೆ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಚೆಲ್ಲಿರುವ ಕಸವನ್ನು ಕಂಡು ರೋಸಿ ಹೋಗಿದೆಯೇ?
- ಬೆಂಗಳೂರಿನಲ್ಲಿ BBMP ಕೆಲಸ ಮಾಡುತ್ತಿದೆಯೋ ಇಲ್ಲವೋ ಎನಿಸುತ್ತಿದೆಯೇ?
ಇದನ್ನೆಲ್ಲಾ ಸರಿಪಡಿಸಲು ನಾವು ಏನೂ ಮಾಡುವುದು ಬೇಡವೇ? ಎಲ್ಲಾ ಜವಾಬ್ದಾರಿಯನ್ನು BBMP ಮೇಲೆ ಹೊರಿಸಿ, ನಾವು ಮನೆಯಲ್ಲಿ ಕಣ್ಮುಚ್ಚಿ ಹಾಯಾಗಿ ನಿದ್ದೆ ಹೋದರೆ, ಎಲ್ಲವೂ ಸರಿ ಹೋಗುತ್ತದೆಯೇ? ಕನಿಷ್ಠ ಪಕ್ಷ ನಮ್ಮ ದೂರುಗಳನ್ನಾದರೂ BBMPಗೆ ತಲುಪಿಸುವುದನ್ನು ಮಾಡಿದ್ದೇವೆಯೇ? ಮನೆಯಲ್ಲೇ ಕುಳಿತು ಗೊಣಗಿದರೆ, ಗೋಳಾಡಿದರೆ, ಏನು ಪ್ರಯೋಜನ? ಅದನ್ನಾದರೂ ರಸ್ತೆಯಲ್ಲಿ ಮಾಡಿದರೆ ಸುದ್ದಿಯಾಗುತ್ತದೆ.
ನಮ್ಮೆಲ್ಲಾ ತೊಂದರೆಗಳನ್ನೂ ನಮ್ಮ ಮೇಯರ್ ಅವರಿಗೆ ತಿಳಿಸೋಣ. ಒಂದು ಸಣ್ಣ SMS ಕಳುಹಿಸಿದರೂ ಸಾಕು. ಅವರು, ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿದ್ದಾರೆ. ಜನರು ತಮ್ಮ ತೊಂದರೆಗಳನ್ನು ತಮಗೇ ನೇರವಾಗಿ ತಿಳಿಸಬಹುದೆಂದು ಹೇಳಿದ್ದಾರೆ.ಅವರು ಹೇಗೆ ಎಲ್ಲವನ್ನು ಸರಿಪಡಿಸುತ್ತಾರೋ ಗೊತ್ತಿಲ್ಲ. ಕನಿಷ್ಠಪಕ್ಷ ನಮ್ಮ ದೂರನ್ನಾದರೂ ಅವರಿಗೆ ತಿಳಿಸೋಣ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
– ಮು.ಅ ಶ್ರೀರಂಗ, ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧ 
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ದಾಟು ಕಾದಂಬರಿಯ ಬಗ್ಗೆ :
ಮುಖಾಮುಖಿ-೨ರಲ್ಲಿ ವಂಶವೃಕ್ಷ ಮತ್ತು ಸಂಸ್ಕಾರ ಕಾದಂಬರಿಗಳ ಬಗ್ಗೆ ನಾನು ಬರೆದ ಲೇಖನಕ್ಕೆ (ನಿಲುಮೆ–೧೫-೧೧-೧೩) ಓದುಗರು ಪ್ರತಿಕ್ರಿಯಿಸುವಾಗ”ದಾಟು” ಕಾದಂಬರಿಯ ಕೆಲವು ಅಂಶಗಳನ್ನು ತಿಳಿಸಿದ್ದರು. ಅವುಗಳ ಬಗ್ಗೆ ಸಂಕ್ಷಿಪ್ತವಾಗಿ ಪ್ರಸ್ತಾಪಿಸಿ ಮುಂದುವರಿಯುವುದು ಉತ್ತಮ ಎಂದು ಭಾವಿಸಿದ್ದೇನೆ. ಭೈರಪ್ಪ ಮತ್ತು ಅನಂತಮೂರ್ತಿಯವರ ವಂಶವೃಕ್ಷ -ಸಂಸ್ಕಾರ ಹಾಗು ದಾಟು-ಭಾರತೀಪುರ ಕಾದಂಬರಿಗಳ ವಸ್ತುವಿನಲ್ಲಿ ಕೆಲವು ಸಾಮ್ಯತೆಗಳಿವೆ. ಇವುಗಳ ತೌಲನಿಕ ಓದಿನಿಂದ ಕನ್ನಡದ ಈ ಇಬ್ಬರು ಮಹತ್ವದ ಸಾಹಿತಿಗಳಲ್ಲಿ ಸಾಮಾನ್ಯವಾದ (common ಎಂಬ ಅರ್ಥದಲ್ಲಿ ) ಒಳನೋಟಗಳು ಏನಾದರೂ ಇವೆಯೇ ಎಂಬುದನ್ನು ತಿಳಿಯಬಹುದು . ಇದನ್ನು ನಿಲುಮೆಯ ಓದುಗರು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜತೆಗೆ ಧರ್ಮ,ರಿಲಿಜನ್,ಒರಿಯಂಟಲಿಸಂನ ಪುನರುತ್ಪಾದನೆ,ಬ್ರಾಹ್ಮಣ ಪುರೋಹಿತಶಾಹಿ,ಸೆಕ್ಯುಲರಿಸಂ ……. ಈ ಮಾತುಗಳೂ ಬಂದಿವೆ. ಕಾದಂಬರಿಯೊಂದನ್ನು ಈ ರೀತಿಯ ಸಮಾಜಶಾಸ್ತ್ರೀಯ ಪರಿಭಾಷೆಯಲ್ಲಿ ವಿಮರ್ಶಿಸುವುದು ಅನಿವಾರ್ಯವೇ?ಅವಶ್ಯವೇ?ಎಂಬುದು ಮುಖ್ಯವಾದ ಪ್ರಶ್ನೆ. ಕಾದಂಬರಿಯೊಂದನ್ನು ಸಾಹಿತ್ಯ ವಿಮರ್ಶೆಯ ಪರಿಧಿಯೊಳಗೆ ಚರ್ಚಿಸುವುವುದು ಉತ್ತಮ ಎಂದು ನನ್ನ ಅಭಿಪ್ರಾಯ. ಜತೆಗೆ ಉತ್ತಮ ಸಾಹಿತ್ಯ ಕೃತಿಯ ವಿಮರ್ಶೆಯ ಪರಿಕರಗಳು ಆ ಕೃತಿಯ ಒಳಗೇ ಅಡಕವಾಗಿರುತ್ತದೆ ಎಂಬ ಒಂದು ಮಾತಿದೆ. ಹೀಗಾಗಿ ಸಾಹಿತ್ಯೇತರ ಪರಿಕರಗಳಿಂದ ಒಂದು ಕಾದಂಬರಿಯ ಗುಣ-ದೋಷಗಳನ್ನು ಪಟ್ಟಿಮಾಡುವ ಮುನ್ನ ಇನ್ನೊಮ್ಮೆ ಯೋಚಿಸಬೇಕಾಗಿದೆ. ಈ ಎಲ್ಲಾ ಅಂಶಗಳನ್ನು ವಿವರವಾಗಿ ಬರೆಯಲು ಸದ್ಯದ ಮುಖಾಮುಖಿಗೆ ನಾನು ಹಾಕಿಕೊಂಡಿರುವ ಮಿತಿ ಅಡ್ಡ ಬಂದಿದೆ. ಸಾಧ್ಯವಾದರೆ ಮುಖಾಮುಖಿ ಲೇಖನಮಾಲೆಯ ಕೊನೆಯಲ್ಲಿ ಬರೆಯಲು ಪ್ರಯತ್ನಿಸುತ್ತೇನೆ.
ಮತ್ತಷ್ಟು ಓದು 
ದಾಸರ ದಾಸ ಸಂತ ಶ್ರೀ ಭದ್ರಗಿರಿ ಅಚ್ಯುತದಾಸರು
– ರಾಘವೇಂದ್ರ ಅಡಿಗ ಎಚ್ಚೆನ್
ಕನ್ನಡ ಹರಿದಾಸ ಪರಂಪರೆ, ಕೀರ್ತನಾ ಲೋಕದ ಕೊಂಡಿಯೊಂದು ಕಳಚಿದೆ. ಸಂತ, ಹಿರಿಯ ಕೀರ್ತನೆಗಾರರಾದ ‘ಕೀರ್ತನ ಕೇಸರಿ’ ಭದ್ರಗಿರಿ ಅಚ್ಯುತದಾಸರು ತಮ್ಮ 83 ನೇ ವಯಸ್ಸಿನಲ್ಲಿ ತಾವು ಕಟ್ಟಿ ಬೆಳೆಸಿದ ಹರಿಕಥಾ ಪ್ರಪಂಚವನ್ನು ತೊರೆದು ಶ್ರೀಹರಿಯತ್ತ ನಡೆದಿದ್ದಾರೆ. ಕೀರ್ತನಾ ಕಲಾಪರಿಷತ್ ಗೌರವಾಧ್ಯಕ್ಷರಾಗಿದ್ದ ಸಂತ ಭದ್ರಗಿರಿ ಅಚ್ಯುತದಾಸರು ತಮ್ಮ ವಾಕ್ ಸಾಮರ್ಥ್ಯ, ಸಂಗೀತ, ಹಾಸ್ಯ ಚಟಾಕಿಗಳ ಮೂಲಕ ಜನಮಾನಸದಲ್ಲಿ ನೆಲೆಯೂರಿದ್ದರು. ಕನ್ನಡ, ಮರಾಠಿ, ಕೊಂಕಣಿ, ತುಳು ಹೀಗೆ ನಾನಾ ಭಾಷೆಗಳಾಲ್ಲಿ ಪ್ರೌಢಿಮೆ ಸಾಧಿಸಿದ್ದ ಸಂತ ಅಚ್ಯುತದಾಸರು ತಾವು ಹರಿವಂಶ, ಭಾಗವತ, ರಾಮಾಯಣ, ಮಹಾಭಾರತದ ತಾತ್ವಿಕ ಅಂಶಗಳನ್ನು ಸಾಮಾನ್ಯರ ಮನಮುಟ್ಟುವಂತೆ ವಿವರಿಸಿ ಹೇಳುವ ಸಾಮರ್ಥ್ಯವನ್ನು ಹೊಂದಿದ್ದರು.
ಇಂದಿನ ಆಧುನಿಕ ಯುಗದಲ್ಲಿ ನಶಿಸುತ್ತಿರುವ ಸಂಕೀರ್ತನಾ ಕಲೆಯನ್ನು ಜನಪ್ರಿಯಗೊಳಿಸುವುದರಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದ್ದ ಅಚ್ಯುತದಾಸರು ತಮ್ಮ ಸಹೋದರ ದಿ. ಭದ್ರಗಿರಿ ಕೇಶವದಾಸರ ಜತೆಗೂಡಿ ಅನೇಕ ಹರಿಕಥಾ ಸಮ್ಮೇಳನಗಳನ್ನು ನಡೆಸಿದ್ದರು. ಅಣ್ಣ-ತಮ್ಮಂದಿರಿಬ್ಬರೂ ತಮ್ಮ ಸ್ವ ಪ್ರತಿಭೆಯಿಂದ ‘ಸಂತ’ ಪದವಿಗೆ ಭಾಜನರಾಗಿದ್ದರು. ಸಂತ ಭದ್ರಗಿರಿ ಕೇಶವ ದಾಸರು ವಿದೇಶಗಳಲ್ಲಿಯೂ ಆಂಗ್ಲ ಭಾಷೆಯಲ್ಲಿ ಸಂಕೀರ್ತನೆಗಳನ್ನು ನಡೆಸಿ ಪ್ರಸಿದ್ದರಾಗಿದ್ದರೆ,ಸಂತ ಭದ್ರಗಿರಿ ಅಚ್ಯುತ ದಾಸರು ಭರತ ಖಂಡವ್ಯಾಪಿ ತಮ್ಮ ಹರಿಕಥಾ ಶ್ರವಣ ಮಾಡುವ ಮೂಲಕ ನಾಡಿನ ಮೂಲೆ ಮೂಲೆಗಳಾಲ್ಲಿ ಮನೆಮಾತಾಗಿದ್ದರು.
ವ್ಯಕ್ತಿ ಪರಿಚಯ :
ಉಡುಪಿಯ ಸಮೀಪದ ಬ್ರಹ್ಮಾವರದ ಬಳಿಯಲ್ಲಿನ ಬೈಕಾಡಿ ಗ್ರಾಮದ ಪುಟ್ಟ ಹಳ್ಳಿಯಲ್ಲಿ ವೆಂಕಟರಮಣ ಪೈ ಹಾಗೂ ರುಕ್ಮಿಣಿಬಾಯಿ ದಂಪತಿಗಳಿಗೆ ನಾಲ್ಕನೆ ಮಗನಾಗಿ ಜನಿಸಿದ (1931 ಮಾರ್ಚ್ 31)ಸಂತ ಶ್ರೀ ಭದ್ರಗಿರಿ ಅಚ್ಯುತದಾಸರು ಬಾಲ್ಯದಿಂದಲೂ ಸಂಗೀತದ ಬಗ್ಗೆ ಒಲವಿದ್ದವರು. ಇದಕ್ಕೆ ಅವರು ಹುಟ್ತಿದ ಮನೆಯ ಪರಿಸರವೂ ಪೋಷಕವಾಗಿತ್ತು. ತ್ಂದೆ ವೆಂಕಟರಮಣಾ ಪೈಗಳು ಯಕ್ಷಗಾನದ ಬಗ್ಗೆ ಒಲವುಳ್ಳವರಾಗಿದ್ದರೆ ತಾಯಿ ರುಕ್ಮಿಣಿಬಾಯಿ ತಾವು ದೇವರ ಭಜನೆಗಳನ್ನು ಶುಶ್ರಾವ್ಯವಾಗಿ ಹಾಡಬಲ್ಲವರಾಗಿದ್ದರು.
ಮತ್ತಷ್ಟು ಓದು 
ತೀರಾ ತುಘಲಕ್ ದರ್ಬಾರ್ ಬೇಡ್ರೀ ಸಿಧ್ಧರಾಮಣ್ಣ…
– ಕೆ.ಎಸ್ ರಾಘವೇಂದ್ರ ನಾವಡ
ತೀರಾ ಬೇಸರಗೊ೦ಡು ರಾಜ್ಯದ ಮುಖ್ಯ ಮ೦ತ್ರಿಗಳಿಗೆ ಈ ಮಾತನ್ನು ಹೇಳಿತಿದ್ದೇನೆ ! ಸಮಾಜವಾದಿ ಹಿನ್ನೆಲೆ.. ಹೋರಾಟದ ಹಿನ್ನೆಲೆ.. ಎಲ್ಲದ್ದಕ್ಕಿ೦ತಲೂ ಕರ್ನಾಟಕದ ಗ್ರಾಮೀಣ ಸೊಗಡಿನಿ೦ದ ಮೇಲೆದ್ದು ಬ೦ದವರು ಸಿಧ್ಧರಾಮಯ್ಯ. ಆದರೆ ಹಿ೦ದಿನ ಸಮಾಜವಾದಿ ಹಿನ್ನೆಲೆಗಳಿ೦ದ ಬ೦ದ ಮುಖ್ಯಮ೦ತ್ರಿಗಳಿಗೂ (ಮಾನ್ಯ ಹೆಗಡೇಜಿ, ಬ೦ಗಾರಪ್ಪನವರು, ಜೆ.ಹೆಚ್ ಪಟೇಲರು)ನಮ್ಮ ಸಿಧ್ಧರಾಮಯ್ಯನವರಿಗೂ ಅಜಗಜಾ೦ತರ ವ್ಯತ್ಯಾಸ…ಇವರು ಇದೇ ಥರ ಮು೦ದುವರಿದಲ್ಲಿ ಮು೦ಬರುವ ಲೋಕಸಭಾ ಚುನಾವಣೆಯಲ್ಲಿ ಕಾ೦ಗ್ರೆಸ್ ಕರ್ನಾಟಕದಲ್ಲಿ ನೆಲಕಚ್ಚುವುದ೦ತೂ ಖಚಿತ!
ಪಾಪ.. ಏನೂ ಮಾಡೋದಕ್ಕಾಗೋದಿಲ್ಲ.. ನಮಗೆ ಸಿಧ್ಧರಾಮಯ್ಯನವರ ಅಸಹಾಯಕತೆಯ ಅರಿವು ಇದೆ.ಆದರೆ ಕೈಯಲ್ಲಿ ಆಗದಿದ್ದವರ ಪರಿಸ್ಥಿತಿ ಏನೂ ಸಿಧ್ಧರಾಮಯ್ಯನವರದಲ್ಲ! ಹಾಗ೦ತ ತೀರಾ ಸಾರಾಸಗಟಾಗಿ ತಳ್ಳಿ ಹಾಕುವ೦ತಹ ವ್ಯಕ್ತಿತ್ವವೂ ಸಿಧ್ಧರಾಮಯ್ಯನವರದಲ್ಲ.ಆದರೆ ಒ೦ದ೦ತೂ ಖಚಿತ! ಏನೋ ಆಗಿದೆ… ಒ೦ದರ ಮೇಲೊ೦ದು ಎಡವಟ್ಟುಗಳನ್ನೇ ಸೃಷ್ಟಿಸಿಕೊಳ್ಳುತ್ತಿರುವ ಸಿಧ್ಧರಾಮಯ್ಯನವರು ಕೊನೇ ಪಕ್ಷ ತಮ್ಮ ನಿರ್ಧಾರಗಳಿಗೆ ಜೋತು ಬೀಳುವ೦ತಹ ಯಡಿಯೂರಪ್ಪನವರ ಛಾತಿಯನ್ನೂ ತೋರಿಸುತ್ತಿಲ್ಲ!
ಆರ೦ಭದಲ್ಲೇನೋ ಶೂರತನ ಮೆರೆದ ಅಶ್ವವೀರ.. ಕುದುರೆಗೆ ಸುಸ್ತಾದ೦ತೆ ತಾನೂ ನಡೆಯುತ್ತ ಸಾಗಿದ.. ಎನ್ನುವ ಹಳೇ ಮಾತೀಗ ಸಿಧ್ಧರಾಮಯ್ಯನವರ ವಿಚಾರದಲ್ಲಿ ಖಚಿತವಾಗುತ್ತಿದೆ! ಚುನಾವಣಾ ಪ್ರಣಾಳಿಕೆಯ ಅರ್ಧದಷ್ಟು ಅ೦ಶಗಳನ್ನು ಅನುಷ್ಠಾನಕ್ಕೆ ತರುವುದು ಹೆಚ್ಚುಗಾರಿಕೆಯೇ ಆದರೂ ಕೊಟ್ಟ ಮಾತುಗಳಾದರೂ ಎ೦ಥಾದ್ದಾಗಿದ್ದವು ಎನ್ನುವುದು ಬಹಳ ಮುಖ್ಯ!
ಯಾವುದು ನಂಬಿಕೆ?ಯಾವುದು ಮೂಢನಂಬಿಕೆ?
-ಡಾ.ಕಿರಣ್ ಎಂ ಗಾಜನೂರು
ಕರ್ನಾಟಕ ಸರ್ಕಾರ ಮೂಢನಂಬಿಕೆಗಳ ಕುರಿತು ವಿಧೇಯಕ ಮಂಡಿಸಲು ಮುಂದಾಗಿರುವುದು ನಿಜಕ್ಕೂ ಸ್ವಾಗತಾರ್ಹ ಕ್ರಮ. ಏಕೆಂದರೆ ಭಾರತ ಸಮಾಜದಲ್ಲಿ ಬಹಳ ಹಿಂದಿನಿಂದಲೂ ಸೋ-ಕಾಲ್ಡ್ ನಂಬಿಕೆಗಳ ಹೆಸರಿನಲ್ಲಿ ಶೋಷಣೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ.ಅದರಲ್ಲಿಯೂ ಯಾವುದೇ ಜನ-ಚಳುವಳಿಯಿಲ್ಲದೆ,ನಮ್ಮ ಘನಸರ್ಕಾರ ಸ್ವತಃ ಈ ನಿರ್ಧಾರಕ್ಕೆ ಮುಂದಾಗಿರುವುದು ಪ್ರಶಂಸನೀಯ.ಪಕ್ಕದ ಮಹಾರಾಷ್ಟ್ರದಲ್ಲಿ ಈ ಮಾದರಿಯ ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಳ್ಳಬೇಕಾದರೆ,ಒಂದು ದೊಡ್ಡ ಜನಚಳುವಳಿಯೆ ನಡೆಯಬೇಕಾಯಿತು ಮತ್ತು ಈ ಕುರಿತು ಹೋರಾಟ ಮಾಡುತ್ತಿದ್ದ ವ್ಯಕ್ತಿಯ ಹತ್ಯೆಯು ಆಯಿತು.ಈ ನೆಲೆಯಲ್ಲಿ ಕರ್ನಾಟಕ ಸರ್ಕಾರ ಜನಪರವಾಗಿದೆ ಎಂಬುದನ್ನು ನಾವು ಒಪ್ಪಬಹುದು.ಆದರೆ, ಭಾರತದಂತಹ ಬಹುಸಂಸ್ಕೃತಿಯ ದೇಶದಲ್ಲಿ ಈ ಕ್ರಮ ಕೇವಲ ಪ್ರಗತಿಪರ ಮತ್ತು ಕಾನೂನಾತ್ಮಕ ಅಂಶವಾಗಿರದೆ ಸಮುದಾಯ ಸತ್ವದ ಪ್ರಶ್ನೆಯು ಆಗಿರುತ್ತದೆ ಎಂಬುದನ್ನು ನಾವು ಅರಿತುಕೊಳ್ಳಬೇಕು.ಅದೂ ಅಲ್ಲದೆ ಸದರಿ ವಿಧೇಯಕದ ಕುರಿತು ನಡೆಯುತ್ತಿರುವ ಚರ್ಚೆ ಪರ-ವಿರೋಧವೆಂಬ ಸಂಕುಚಿತ ಅರ್ಥದಲ್ಲಿ ನಡೆಯುತ್ತಿದೆ.ಒಂದು ಸಂಶೋಧನೆ ಅಥವಾ ಚರ್ಚೆಯಲ್ಲಿ ಸಂಶೋಧನೆ/ಚರ್ಚೆಗೆ ಒಳಪಡಿಸಬೇಕಾದ ವಿದ್ಯಾಮಾನದ ಕುರಿತು ಸಂಶೋಧಕನಿಗೆ ಪರ ಅಥವಾ ವಿರೋಧ ಅಭಿಪ್ರಾಯಗಳು ಇರಬೇಕು ಎಂದು ನೀರಿಕ್ಷಿಸುವುದೇ ಸಂಶೋಧನೆ/ಚರ್ಚೆಯ ಲಕ್ಷಣವಲ್ಲ. ಉದಾಹರಣೆಗೆ : ಕರ್ನಾಟಕದ ಮೂಢನಂಬಿಕೆ ವಿರೋಧಿ ವಿಧೇಯಕ ಕುರಿತು ನೀವು ಇದರ ಪರವೂ ವಿರೋಧವೂ ಎಂದು ಕೇಳಿದರೆ ನಾನು ನನಗೆ ಗೊತ್ತಿಲ್ಲ ಎಂದಷ್ಟೆ ಉತ್ತರಿಸಬಲ್ಲೆ. ಏಕೆಂದರೆ ನಿಜಕ್ಕೂ ನನಗೆ ಅದು ಸರಿಯೋ/ತಪ್ಪೋ ಗೊತ್ತಿಲ್ಲ ಅಥವಾ ಪ್ರಸ್ತುತ ಚರ್ಚೆ ಮತ್ತು ಮಾಹಿತಿಯ ಆಧಾರದಲ್ಲಿ ಒಂದು ನಿರ್ಣಯಕ್ಕೆ ಬರಲೂ ಸಾಧ್ಯವಾಗುತ್ತಿಲ್ಲ. ಆದರೆ,ಒಬ್ಬ ಸಮಾಜ ಸಂಶೋಧಕನಾಗಿ ನನ್ನ ಸಮಸ್ಯೆ ಇರುವುದು ಪರವಾಗಿ ಮತ್ತು ವಿರೋಧವಾಗಿ ಮಾತನಾಡುತ್ತಿರುವ ಎರಡೂ ಗುಂಪಿನ ವಾದ ಆ ವಿದ್ಯಮಾನವನ್ನು ಸಮರ್ಥಿಸಲು ಅಥವಾ ವಿರೋಧಿಸಲು ಶಕ್ತವಾಗಿಲ್ಲ ಮತ್ತು ಆದನ್ನು ಆಚರಿಸುತ್ತಿರುವ ಜನರಿಗೆ ಅರ್ಥವಾಗುತ್ತಿಲ್ಲ ಎಂಬುದು.
ಆಚರಣೆ, ಸಂಪ್ರದಾಯ,ನಂಬಿಕೆ ಮತ್ತು ಕಾಕತಾಳಿಯಗಳು
-ಮು.ಅ ಶ್ರೀರಂಗ,ಬೆಂಗಳೂರು
ಒಬ್ಬ ಬ್ರಾಹ್ಮಣನ ಮನೆಯಲ್ಲಿ ಬೆಕ್ಕೊಂದು ಓಡಾಡಿಕೊಂಡಿತ್ತು. ಹಳೆಯ ಕಾಲದ ಆ ಮನೆಯಲ್ಲಿದ್ದ ಇಲಿ,ಹೆಗ್ಗಣಗಳನ್ನು ತಿಂದುಕೊಂಡು ಅವುಗಳ ಕಾಟ ತಪ್ಪಿಸ್ಸಿದ್ದರಿಂದ ಸಹಜವಾಗಿ ಆ ಬೆಕ್ಕನ್ನು ಕಂಡರೆ ಮನೆಮಂದಿಗೆಲ್ಲಾ ಅಕ್ಕರೆಯಿತ್ತು.ಆ ಕುಟುಂಬದ ಯಜಮಾನನ ತಂದೆಯದೋ ತಾಯಿಯದೋ ತಿತಿ ಮಾಡಬೇಕಾದ ದಿನ ಬೆಕ್ಕು ಮನೆಯೊಳಗೆಲ್ಲಾ ಓಡಾಡಿ ಮೈಲಿಗೆ ಮಾಡುವುದು ಸರಿಯಲ್ಲ ಎಂದು ಅದನ್ನು ಮನೆಯ ಕಂಬವೊಂದಕ್ಕೆ ಕಟ್ಟಿಹಾಕಿದರು. ಆ ದಿನದ ಕೆಲಸ, ಊಟ ಎಲ್ಲಾ ಮುಗಿದ ನಂತರ ಆ ಬೆಕ್ಕಿಗೆ ಬಂಧನದಿಂದ ಬಿಡುಗಡೆಯಾಯ್ತು. ಕಾಲ ಕಳೆದಂತೆ ಆ ಮನೆಯ ಯಜಮಾನ ತೀರಿಕೊಂಡ. ಅವನ ಮಕ್ಕಳು ಅಪ್ಪನ ತಿತಿ ಮಾಡುವ ಸಮಯ ಬಂತು. ಆಗ ಮನೆಯಲ್ಲಿ ಬೆಕ್ಕು ಇರಲಿಲ್ಲ. ಹೀಗಾಗಿ ಅಕ್ಕ ಪಕ್ಕದ ಮನೆಯವರಿಂದ ಕಾಡಿ ಬೇಡಿ ಬೆಕ್ಕೊಂದನ್ನು ತಂದು ಕಂಬಕ್ಕೆ ಕಟ್ಟಿದರು. ಅಂದಿನ ಕೆಲಸ ಮುಗಿದ ನಂತರ ವಾಪಸ್ಸು ಕೊಟ್ಟರು. ಇದು ಹೀಗೆ ಪ್ರತಿ ಸಾರಿ ತಿತಿ ಮಾಡುವಾಗಲೂ ಮುಂದುವರಿಯಿತು. ಇದೊಂದು ಕಾಲ್ಪನಿಕ ಕಥೆ ಎಂಬುದರಲ್ಲಿ ಸಂದೇಹವಿಲ್ಲ. ಹಾಗೆ ನೋಡಿದರೆ ಐತಿಹಾಸಿಕವಾದುದನ್ನು ಬಿಟ್ಟರೆ ನಾವು ಓದುವ ಕತೆ ಕಾದಂಬರಿಗಳೆಲ್ಲ ಕಾಲ್ಪನಿಕವಾದವುಗಳೇ. ಅದರ ಬಗ್ಗೆ ಚರ್ಚೆ ಈಗ ಬೇಡ. ಏಕೆಂದರೆ ಈ ಬರಹ ಸಾಹಿತ್ಯಕ್ಕೆ ಸಂಬಧಿಸಿದ್ದಲ್ಲ. ಈ ಬೆಕ್ಕಿನ ಕತೆಯಲ್ಲಿ ನಾವು ತಿಳಿದುಕೊಳ್ಳಬೇಕಾದ ಅಂಶ ಒಂದಿದೆ. ನಾವುಗಳು ಕೆಲವೊಂದು ಆಚರಣೆಗಳಿಗೆ ಇದು ಏಕೆ? ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವುದಿಲ್ಲ. ಮಕ್ಕಳೇನಾದರು ಕೇಳಿದರೆ “ನೀನೊಬ್ಬ ಅಧಿಕ ಪ್ರಸಂಗಿ, ತಲೆಹರಟೆ”ಎಂದು ಬೈದು ಅವರನ್ನು ಸುಮ್ಮನಾಗಿಸುತ್ತೇವೆ. ತಂದೆ ತಾಯಿಗೆ ಅಜ್ಜಿ, ತಾತನಿಗೆ ಹೆದರಿದ ಆ ಮಕ್ಕಳು ಸುಮ್ಮನಾಗುತ್ತವೆ. ಅವರು ದೊಡ್ಡವರಾದ ಮೇಲೆ ಹಿಂದಿನವರು ತಮಗೆ ಮಾಡಿದ್ದನ್ನೇ ತಮ್ಮ ಮಕ್ಕಳಿಗೂ ಮಾಡುತ್ತಾರೆ. ಈ ಕೊಂಡಿಗಳು ಒಂದಕ್ಕೊಂದು ಸೇರಿಕೊಳ್ಳುತ್ತಾಹೋಗಿ ಆಚರಣೆಗಳಾಗಿ,ಸಂಪ್ರದಾಯಗಳಾಗಿ ಮುಂದುವರಿಯುತ್ತವೆ.
ಮತ್ತಷ್ಟು ಓದು 
ಶ್ವೇತಭವನ ತಲುಪಿದ ಜಯದೇವದ ಸಾಧನೆ ನಮ್ಮ ಸರ್ಕಾರಗಳಿಗೇಕೆ ಗೋಚರಿಸುತ್ತಿಲ್ಲ…
– ಗೋಪಾಲ ಕೃಷ್ಣ
‘ಹೀಗೆ ಮೂರು ವರ್ಷಗಳ ಹಿಂದೆ ಕ್ರಿಸ್ ಎಂಬ ಅಮೇರಿಕಾ ಪ್ರಜೆಯೊಬ್ಬರು ಕೆಲ ದಿನಗಳಿಗಾಗಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಒಂದು ತಡರಾತ್ರಿಯಲ್ಲಿ ಹೃದಯದ ನೋವು ಕಾಣಿಸಿದ್ದರಿಂದ, ವೈದ್ಯರೊಬ್ಬರ ಸಲಹೆಯ ಮೇರೆಗೆ ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿದ್ದಾರೆ. ತಡರಾತ್ರಿಯಾದ್ದರಿಂದ ಆಸ್ಪತ್ರೆಯಲ್ಲಿ ಕೇಳುವವರು ಇರುವರೋ ಇಲ್ಲವೋ ಎಂಬ ಅನುಮಾನದಿಂದಲೇ ದಾಖಲಾದವರಿಗೆ ಜಯದೇವದಲ್ಲಿ ಆಶ್ಚರ್ಯ ಕಾದಿತ್ತು. ಖುದ್ದು ಹೃದಯ ತಜ್ಞರಿಂದಲೇ ಚಿಕಿತ್ಸೆ ಪಡೆದು ದಾಖಲಾದ ಒಂದು ಗಂಟೆಯೊಳಗಾಗಿ ಮನೆಗೆ ಮರಳಿದ್ದಾರೆ. ಅವರು ಚಿಕಿತ್ಸೆಗೆ ಭರಿಸಿದ್ದು 92 ರೂಪಾಯಿ.’
ನಮ್ಮ ಮನೆಯ ಅಥವಾ ನೆರೆಹೊರೆಯವರ ಅನುಭವಗಳನ್ನು ಕೇಳಿ ನೋಡಿ. ತಡರಾತ್ರಿಯಲ್ಲಿ ಸಾರ್ವಜನಿಕ ಅಥವಾ ಖಾಸಗಿ ಆಸ್ಪತ್ರೆಗೆ ಹೋದರೆ ಒಂದು ಗಂಟೆಯೊಳಗಾಗಿ ಚಿಕಿತ್ಸೆ ಪಡೆಯಲು ಸಾಧ್ಯವೇ? ಇಸಿಜಿ, ರಕ್ತ ಪರಿಕ್ಷೆ, ತಜ್ಞ ವೈದ್ಯರಿಂದ ತಪಾಸಣೆಗೊಳಪಟ್ಟರೆ ಮೂರರಿಂದ ಐದು ಸಾವಿರಕ್ಕಿಂತ ಕಡಿಮೆಯಂತೂ ಬಿಲ್ ಮಾಡುವುದಿಲ್ಲ. ಇಷ್ಟೆಲ್ಲವನ್ನೂ 92 ರೂಪಾಯಿಗೆ ನೀಡಲು ಹೇಗೆ ಸಾಧ್ಯವಾಯಿತು? ಶತಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿಯೂ ಇಂತಹ ಆಸ್ಪತ್ರೆಗಳನ್ನು ಮುನ್ನಡೆಸಬಹುದು ಎಂದ ಮೇಲೆ, ಆರೋಗ್ಯದ ಸಮಸ್ಯೆಗಳು ಉಲ್ಭಣಿಸಲು ಜನಪ್ರತಿನಿಧಿಗಳು/ಅಧಿಕಾರಿಗಳಲ್ಲಿ ಇಚ್ಛಾಶಕ್ತಿಯಿಲ್ಲದಿರುವುದೇ ಕಾರಣವಲ್ಲವೇ?





