ವಿಷಯದ ವಿವರಗಳಿಗೆ ದಾಟಿರಿ

Posts from the ‘ಕರ್ನಾಟಕ,ಕನ್ನಡ’ Category

25
ಸೆಪ್ಟೆಂ

ಅನ೦ತಮೂರ್ತಿಯವರಿಗೆ ಅಭಿಮಾನಿಯೊಬ್ಬನ ಪತ್ರ

 – ಗುರುರಾಜ್ ಕೊಡ್ಕಣಿ,ಯಲ್ಲಾಪುರ   

URAಸನ್ಮಾನ್ಯ ಶ್ರೀ ಅನ೦ತಮೂರ್ತಿಗಳಿಗೆ,

ನಮಸ್ಕಾರಗಳು,

ಈಗ ಸದ್ಯದ ಪರಿಸ್ಥಿತಿಯಲ್ಲಿ ’ಹೇಗಿದ್ದೀರಿ..’? ಎ೦ದು ಕೇಳುವುದೇ ತಪ್ಪೇನೋ.ಇತ್ತೀಚಿನ ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟನೆಗೆ ತಮಗೊ೦ದು ಪತ್ರ ಬರೆಯೊಣವೆನಿಸಿತು.ಪತ್ರವನ್ನು ನೇರವಾಗಿ ತಮಗೆ ಕಳುಹಿಸೊಣವೆ೦ದುಕೊ೦ಡೆ.ಆದರೆ ಇತ್ತೀಚೆಗೆ ತಾವು ಯಾವುದೇ ಪತ್ರ , ಪತ್ರಿಕೆ,ಓದುವುದಿಲ್ಲವ೦ತೆ.ಮೊನ್ನೆಯೊ೦ದು ಟಿವಿ ಸ೦ದರ್ಶನದಲ್ಲಿ ತಾವೇ ಹೇಳಿದ್ದೀರಿ.ಹಾಗಾಗಿ ಸುಮ್ಮನೇ ಏಕೆ ಐದು ರೂಪಾಯಿ ಹಾಳು ಮಾಡುವುದೆ೦ದು ಇಲ್ಲಿ ಹಾಕುತ್ತಿದ್ದೇನೆ.ಸಾಧ್ಯವಾದರೇ ಓದಿ,ಓದದಿದ್ದರೂ ಚಿ೦ತೆಯಿಲ್ಲ.

ಏನಾಗಿದೆ ಸರ್ ನಿಮಗೆ..? ಮತಿಭ್ರಮಣೆಯಾ ..? ಹೊಸದೊ೦ದು ಪ್ರಶಸ್ತಿ ಪಡೆಯುವ ಉಮ್ಮೇದಿಯಾ…?ಅಥವಾ ಸುದ್ದಿಯಲ್ಲಿರುವ ರೋಗವಾ..? ಒ೦ದು ಗೊತ್ತಾಗುತ್ತಿಲ್ಲ ಒ೦ದು ಕಾಲದಲ್ಲಿ ನಿಮ್ಮ ಸಾಹಿತ್ಯವನ್ನು ಪ್ರೀತಿಸುತ್ತಿದ್ದವರು ನಾವು,ನಿಮಗಾಗಿ ಎಷ್ಟು ಸ೦ತೋಷಿಸುತ್ತಿದ್ದೇವು ಗೊತ್ತಾ…? ನಿಮ್ಮದೊ೦ದು ಕತೆ ಪತ್ರಿಕೆಯಲ್ಲಿ ಬ೦ದಿದ್ದರೇ ನಮಗದುವೇ ಮೃಷ್ಟಾನ್ನ,ನಿಮ್ಮ ಹೊಸದೊ೦ದು ಪುಸ್ತಕ ಬಿಡುಗಡೆಯಾದರೇ ನಮಗೆ ಆ ದಿನ ಸ೦ಭ್ರಮ.ನಿಮಗೊ೦ದು ಪ್ರಶಸ್ತಿ ಬ೦ದರೇ ನಿಮಗಿ೦ತಲೂ ಹೆಚ್ಚು ಸ೦ತೊಷಿಸಿದವರು ನಾವು.ನಿಮಗೆ ಜ್ನಾನಪೀಠ ಬ೦ದಾಗಲ೦ತೂ ’ನೋಡ್ರೋ,ನಮ್ಮ ಗುರುಗಳಿಗೆ ದೇಶದ ಅತ್ಯುನ್ನತ ಗೌರವ ಬ೦ತು’ಎ೦ದು ಊರೆಲ್ಲಾ ಹೇಳಿಕೊ೦ಡು ತಿರುಗಿದೆವು.ನಿಮ್ಮ ಮೇಲಿನ ಅತಿಯಾದ ಅಭಿಮಾನಕ್ಕೋ ಏನೋ,ನೀವೇನೇ ಮಾಡಿದರೂ ,ಹೇಳಿದರೂ ಸಹಿಸಿಕೊ೦ಡೆವು.ಅನೇಕ ಕಾದ೦ಬರಿಗಳಲ್ಲಿ ಬ್ರಾಹ್ಮಣ ಯುವತಿಗೆ ದಲಿತ ಯುವಕನೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ,ಅಥವಾ ಬ್ರಾಹ್ಮಣ ಯುವಕನೊಬ್ಬನಿಗೆ ,ದಲಿತ ಯುವತಿಯೊಬ್ಬಳೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ಚಿತ್ರಿಸಿದಿರಿ. ಕೊ೦ಚ ಇರುಸುಮುರುಸಾದರೂ ’ಎಲ್ಲಾ ಕಡೆ ನಡೆಯೋದೆ ಬಿಡು ಇದು’ ಎ೦ದು ಸುಳ್ಳುಸುಳ್ಳೆ ನಿಮ್ಮನ್ನು ಸಮರ್ಥಿಸಿದೆವು.’ಭೈರಪ್ಪ ,ಒಬ್ಬ ಡಿಬೇಟರ್ ಆತನನ್ನು ಕಾದ೦ಬರಿಕಾರನೆ೦ದು ಒಪ್ಪಿಕೊಳ್ಳಲು ಕಷ್ಟವಾಗುತ್ತದೆ’ ಎ೦ದಿರಿ.’ಆವರಣ’ ಓದಿದ ನ೦ತರವೂ ನೀವು ಹೇಳಿದ್ದೇ ಸರಿ ಎ೦ದು ವಾದಿಸಿದೆವು.’ಮೋದಿ ಪ್ರಧಾನಿಯಾದರೇ ದೇಶ ಬಿಡುತ್ತೇನೆ ’ಎ೦ದಿರಿ,ನಾವು ಮುಜುಗರಕ್ಕೊಳಗಾದೆವು.ಆದರೆ ಈಗ ಇದೇನಿದು ನಿಮ್ಮ ಹೊಸರಾಗ..? ಆರ್.ಎಸ್.ಎಸ್. ಎ೦ದರೇ ’ಹುಚ್ಚು ನಾಯಿ ರೋಗ’ಎ೦ದುಬಿಟ್ಟೀರಿಲ್ಲ ಈಗ.. ಹೇಗೆ ಸಮರ್ಥಿಸುವುದು ನಿಮ್ಮ ಇ೦ಥ ನೀಚ ತಪ್ಪನ್ನು ಗುರುಗಳೇ.ದಯವಿಟ್ಟು ಕ್ಷಮಿಸಿ,ನಮ್ಮಿ೦ದ ಸಾಧ್ಯವಿಲ್ಲ.
ಮತ್ತಷ್ಟು ಓದು »

26
ಜುಲೈ

ಸಾವಿರ ರುಪಾಯಿಯ ಫೋಟೋ ಮತ್ತು ಲಕ್ಷದ ಪ್ರಚಾರ

ಡಾ ಅಶೋಕ್ ಕೆ ಆರ್.

ವೈಯಕ್ತಿಕ basavanna film controversyವಿಷಯದಿಂದ ಲೇಖನವೊಂದನ್ನು ಪ್ರಾರಂಭಿಸುವುದು ಅಷ್ಟೇನೂ ಸರಿಯಲ್ಲವಾದರೂ ಈ ಲೇಖನಕ್ಕೆ ಪೂರಕವಾಗಿರುವ ಘಟನೆಯಾಗಿರುವುದರಿಂದ ಹೇಳುತ್ತಿದ್ದೇನೆ, ಕ್ಷಮೆಯಿರಲಿ. ಮದುವೆಯಾಗುವ ದಿನ ಹೊಸದೇನನ್ನಾದರೂ ಮಾಡಬೇಕೆಂಬ ಆಸೆಯಿಂದ ನನ್ನ ಗೆಳೆಯನೊಬ್ಬ ಮದುವೆಗೆ ಬಂದವರಿಗೆಲ್ಲ ಒಂದೊಂದು ಗಿಡ ಹಂಚಿದ್ದ, ಒಟ್ಟು ಎರಡು ಸಾವಿರ ಗಿಡಗಳು. ಬಂದವರಿಗೆಲ್ಲ ಯಾವುದಾದರೊಂದು ಪುಸ್ತಕವನ್ನು ತಾಂಬೂಲದ ರೂಪದಲ್ಲಿ ಕೊಡಬೇಕೆಂಬುದು ನನ್ನಾಸೆಯಾಗಿತ್ತು. ಮದುವೆ ನಿಶ್ಚಿತವಾಗುವಷ್ಟರೊಳಗೆ ನನ್ನದೇ ಹದಿನೈದರಷ್ಟು ಕಥೆಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಕಾರಣ ನನ್ನದೇ ಕಥಾ ಸಂಕಲನ ಬಿಡುಗಡೆಗೊಳಿಸಿ ಮದುವೆಮನೆಯಲ್ಲೇ ತಾಂಬೂಲದ ಜೊತೆಗೆ ಕೊಡುವ ನಿರ್ಧಾರವೂ ಆಯಿತು. ಮಾಧ್ಯಮದವರನ್ನೂ ಕರೆಯುವ ತೀರ್ಮಾನವನ್ನೂ ಕೈಗೊಂಡೆವು. ಮದುವೆ ದಿನ ತಾಳಿ ಕಟ್ಟಿದ ಮೇಲೆ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಮಾಧ್ಯಮದವರು ವಿಡಿಯೋ ಕ್ಯಾಮೆರಾಗಳ ಜೊತೆಗೆ ಬಂದು ಮುಂದಿನ ಸಾಲಿನಲ್ಲಿ ಆಸೀನರಾಗಿದ್ದರು. ಆಗ ಗಾಬರಿಯಾಗಿದ್ದು ಹುಡುಗಿ ಮತ್ತು ನನ್ನ ಮನೆ ಕಡೆಯ ನೆಂಟರು!! ಕೆಲವರಿಗಷ್ಟೇ ಪುಸ್ತಕ ಬಿಡುಗಡೆಯ ಬಗ್ಗೆ ತಿಳಿಸಿದ್ದೆವು, ಇನ್ನುಳಿದವರಿಗೆ ಅಂದೇ ತಿಳಿಯಲಿ ಎಂದು ಸುಮ್ಮನಿದ್ದೆವು. ಮೀಡಿಯಾದವರು ಕ್ಯಾಮೆರ ಸಮೇತ ದಾಂಗುಡಿಯಿಟ್ಟಿದ್ದು ಕಂಡು ಗಾಬರಿಗೊಂಡ ಜನ ಅವರ ಬಳಿ ಹೋಗಿ ಏನು ಸಮಾಚಾರ ಎಂದು ವಿಚಾರಿಸಿ ಪುಸ್ತಕ ಬಿಡುಗಡೆಯ ಬಗ್ಗೆ ತಿಳಿದು ನಿಟ್ಟುಸಿರುಬಿಟ್ಟರು!! ಜನ ಗಾಬರಿಗೊಂಡಿದ್ದಾದರೂ ಯಾಕೆ? ಯಾವುದೇ ದೃಶ್ಯ ಮಾಧ್ಯಮದಲ್ಲಿ ಮದುವೆಯ ಸುದ್ದಿ ಬರುವುದು ಹುಡುಗ/ಹುಡುಗಿ ಓಡಿ ಹೋದಾಗ ಅಥವಾ ಮತ್ಯಾವುದೋ ರಂಪ ರಾಮಾಯಣವಾದಾಗ. ಮಾಧ್ಯಮದವರಿದ್ದಾರೆಂದರೆ ಅಲ್ಲೇನೋ ಕೆಟ್ಟದ್ದು ನಡೆಯುತ್ತಿದೆ ಎಂಬ ಭಾವನೆಯೇ ತುಂಬಿ ಹೋಗಿದೆ ಜನರಲ್ಲಿ. ಅದೇ ಕಾರಣದಿಂದ ನನ್ನ ಮದುವೆಯ ದಿನ ನೆಂಟರಿಷ್ಟರು ಗಾಬರಿಯಾಗಿದ್ದರು! ಇದು ನಮ್ಮ ಮಾಧ್ಯಮಗಳು ಬೆಳೆಸಿಕೊಂಡಿರುವ ಪ್ರಭಾವಳಿ! ಮತ್ತಷ್ಟು ಓದು »

10
ಜೂನ್

CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ

CSLC– ರಾಕೇಶ್ ಶೆಟ್ಟಿ

ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.

ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.

ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್‌ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.

ಮತ್ತಷ್ಟು ಓದು »

3
ಜೂನ್

ಗಾಂಧಿ ಕ್ಲಾಸು: ಸೃಜನಶೀಲ ಬದುಕಿನ ವಿಭಿನ್ನ ಮುಖಗಳು

– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ

Gaandhi Clasu‘ಬದುಕು ನನ್ನನ್ನು ರೂಪಿಸಿತೋ, ನಾನೇ ನನ್ನ ಬದುಕನ್ನು ಹೀಗೆ ರೂಪಿಸಿಕೊಂಡೆನೋ ಆದರೆ ಒಂದಂತೂ ಸತ್ಯ ನನ್ನೀ ಬದುಕು ನನ್ನ ಪ್ರಾರಬ್ಧ ಮತ್ತು ಸವಾಲಿನದು. ನಾನು ಬಾಲ್ಯವನ್ನಾಗಲೀ ಹದಿಹರೆಯದ ದಿನಗಳನ್ನಾಗಲೀ ಉತ್ಕಟವಾಗಿ ಎಲ್ಲರಂತೆ ಅನುಭವಿಸುವುದು ಆಗಲೇ ಇಲ್ಲ. ದುರ್ಬರ ಬದುಕು ಅದಕ್ಕೆ ಆಸ್ಪದ ಮಾಡಿಕೊಡಲೇ ಇಲ್ಲ. ಬಾಲ್ಯದ, ಹದಿಹರೆಯದ ಅನುಭವಗಳಿಗೆ ಅಕ್ಷರ ರೂಪ ಕೊಡುವಾಗ ನನ್ನ ಕಣ್ಣುಗಳು ಒದ್ದೆಯಾಗಿರುವುದೂ ಉಂಟು. ಹಿಂಬಾಲಿಸುತ್ತಲೇ ಇದ್ದ ಆತಂಕ, ಅನಿಶ್ಚಿತತೆಗಳನ್ನು ನಿರಾಸೆಗೊಳಿಸಿ ಬದುಕು ಅರವತ್ತರ ಹೊಸ್ತಿಲ ಬಳಿ ತಂದು ನಿಲ್ಲಿಸಿರುವುದು ಪವಾಡವೇ ಸರಿ.’ ಈ ಸಾಲುಗಳು ಇತ್ತೀಚಿಗೆ ನಾನು ಓದಿದ ‘ಗಾಂಧಿ ಕ್ಲಾಸು’ ಪುಸ್ತಕದಿಂದ ಹೆಕ್ಕಿ ತೆಗೆದವುಗಳು.

‘ಗಾಂಧಿ ಕ್ಲಾಸು’ ಕನ್ನಡದ ಖ್ಯಾತ ಬರಹಗಾರ ಕುಂವೀ ಎಂದೇ ಹೆಸರಾದ ಕುಂಬಾರ ವೀರಭದ್ರಪ್ಪನವರ ಆತ್ಮಕಥನ. ಕುಂವೀ ನಾನು ಮೆಚ್ಚುವ ಹಾಗೂ ಅತಿಯಾಗಿ ಹಚ್ಚಿಕೊಂಡಿರುವ ಲೇಖಕರಲ್ಲೊಬ್ಬರು. ಅವರ ಆತ್ಮಕಥನ ಪ್ರಕಟವಾಗಿದೆ ಎಂದು ಗೊತ್ತಾದದ್ದೆ ತಡ ಓದಲೇ ಬೇಕೆನ್ನುವ ಉತ್ಕಟ ಆಸೆ ಪುಸ್ತಕವನ್ನು ಹುಡುಕಿಕೊಂಡು ಹೋಗಿ ಖರೀದಿಸಿ0iÉುೀ ಬಿಟ್ಟಿತು. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ಕುಂ.ವೀರಭದ್ರಪ್ಪನವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕೆಲಸ ಮಾಡಿ 2009ರಲ್ಲಿ ನಿವೃತ್ತರಾಗಿರುವರು. ನೂರಾರು ಕಥೆಗಳನ್ನು ಬರೆದಿರುವ ಇವರು ಕಾದಂಬರಿಗಳು ಮತ್ತು ಜೀವನ ಚರಿತ್ರೆಗಳನ್ನು ಬರೆದು ಕನ್ನಡ ಸಾಹಿತ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿರುವರು. ಅವರ ಅನೇಕ ಕಥೆಗಳು ಹಾಗೂ ಕಾದಂಬರಿಗಳು ಸಿನಿಮಾಗಳಾಗಿ ಬೆಳ್ಳಿತೆರೆಯ ಮೇಲೆ ಕಾಣಿಸಿಕೊಳ್ಳುವುದರ ಜೊತೆಗೆ ಶ್ರೀಯುತರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳೂ ಸಂಧಿವೆ. ಅದು ಕಥೆ ಇರಲಿ, ಕಾದಂಬರಿಯಾಗಲಿ, ಜೀವನ ಚರಿತ್ರೆ ಇರಲಿ ಪ್ರತಿಯೊಂದರಲ್ಲಿ ಕುಂವೀ ಶೈಲಿ ತನ್ನ ಛಾಪು ಮೂಡಿಸಿ ಓದುಗರನ್ನು ಮಂತ್ರ ಮುಗ್ಧರನ್ನಾಗಿಸುತ್ತದೆ. ತಮ್ಮ ಕೃತಿಗಳ ಓದಿಗಾಗಿ ಓದುಗರ ಒಂದು ವಲಯವನ್ನೇ ಸೃಷ್ಟಿಸಿಕೊಂಡಿರುವ ವಿಶಿಷ್ಟ ಬರಹಗಾರ ಕುಂವೀ. ಹಲವು ದಶಕಗಳಿಂದ ಕನ್ನಡದ ಸಾಹಿತ್ಯಾಸಕ್ತರನ್ನು ಕಾಡುತ್ತಲೇ ಬಂದಿರುವ ಈ ಲೇಖಕನ ವೈಯಕ್ತಿಕ ಬದುಕು ಹೇಗಿರಬಹುದೆಂಬ ಕುತೂಹಲ ನನ್ನದಾಗಿತ್ತು. ‘ಗಾಂಧಿ ಕ್ಲಾಸು’ ಆ ಕೃತಿ ಕೈಯಲ್ಲಿ ಹಿಡಿದ ಘಳಿಗೆ ಅದು ಹೇಗೆ ಸಮಯ ಸರಿದು ಹೋಯಿತು ಎಂದು ಅರಿವಿಗೆ ಬರದಂತೆ ಆರು ದಶಕಗಳ ಕುಂವೀ ಬದುಕು ಕಣ್ಣೆದುರು ಅನಾವರಣಗೊಂಡಿತು.

ಮತ್ತಷ್ಟು ಓದು »

23
ಮೇ

ಕಸಾಯಿಖಾನೆಗಳನ್ನು ಮುಚ್ಚುವ ಅವಕಾಶವಿದ್ದೂ ಯಾಕೆ ಮೌನ ವಹಿಸಿದಿರಿ,ಹೇಳಿ?

– ಎ.ಕೆ ಕುಕ್ಕಿಲ

govuಗೋಹತ್ಯೆಗೆ ಸಂಬಂಧಿಸಿ 1959 ಮತ್ತು 1961ರ ಮಧ್ಯೆ ಸುಪ್ರೀಮ್ ಕೋರ್ಟ್‍ ನ  ಮುಂದೆ ಮೂರು ಪ್ರಕರಣಗಳು ದಾಖಲಾಗಿದ್ದುವು. ಮುಹಮ್ಮದ್ ಹನೀಫ್ ಖುರೇಷಿ ಮತ್ತು ಬಿಹಾರ ಸರಕಾರ; ಹಶ್ಮತುಲ್ಲಾ ಮತ್ತು ಮಧ್ಯಪ್ರದೇಶ ಸರಕಾರ; ಅಬ್ದುಲ್ ಹಕೀಮ್ ಮತ್ತು ಬಿಹಾರ ಸರಕಾರಗಳ ನಡುವಿನ ವ್ಯಾಜ್ಯವನ್ನು ವಿಚಾರಣೆಗೆ ಒಳಪಡಿಸುತ್ತಾ ಸುಪ್ರೀಮ್ ಕೋರ್ಟ್ ಅಂತಿಮವಾಗಿ ತೀರ್ಪು ಕೊಟ್ಟದ್ದು ಹೀಗೆ:
A total ban (on Cattle Slaughter) was not permisseble if, Under economic conditions, keeping useless bull or bullock be a burden on the society and therefore not in the public interest –  ಸಮಾಜದ ಮೇಲೆ ಹೊರೆಯಾಗಬಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನೂ ಪ್ರತಿನಿಧಿಸದ ನಿರುಪಯುಕ್ತ ಜಾನುವಾರುಗಳಿರುವಲ್ಲಿ, ಜಾನುವಾರು ಹತ್ಯೆಗೆ ಸಂಪೂರ್ಣ ನಿಷೇಧ ವಿಧಿಸುವುದು ಅನುವದನೀಯವಲ್ಲ.’ (ವಿಕಿಪೀಡಿಯಾ)

ನಿಜವಾಗಿ, ಕರ್ನಾಟಕದಲ್ಲಿ ಈ ಮೊದಲೇ ಜಾರಿಯಲ್ಲಿದ್ದ ‘ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964’ರ ಬದಲು ರಾಜ್ಯ ಬಿಜೆಪಿ ಸರಕಾರವು ಜಾರಿಗೆ ತರಲು ಹೊರಟಿದ್ದ, ‘ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2010’ರಲ್ಲಿ ಇದ್ದದ್ದು ಈ ಗೊಂದಲಗಳೇ. ಒಂದು ಹಸು ಗರಿಷ್ಠ ಅಂದರೆ 14 ವರ್ಷಗಳ ವರೆಗೆ ಹಾಲು ಕೊಡುತ್ತದೆ. ಹಸು ಎಂದಲ್ಲ, ಎಮ್ಮೆ, ಕೋಣ, ಎತ್ತು, ಗೂಳಿಗಳೆಲ್ಲ ಉಪಯೋಗಕ್ಕೆ ಬರುವುದು 14-15 ವರ್ಷಗಳ ವರೆಗೆ ಮಾತ್ರ. ಹಾಗಂತ, ಆ ಬಳಿಕ ಅವು ತಕ್ಷಣ ಸಾಯುತ್ತವೆ ಎಂದಲ್ಲ. ಇನ್ನೂ 10 ವರ್ಷಗಳ ವರೆಗೆ ಬದುಕುವ ಸಾಮರ್ಥ್ಯ  ಅವುಗಳಲ್ಲಿರುತ್ತವೆ. ಆದರೆ ಹಾಲು ಕೊಡದ, ಉಳುಮೆಗೆ ಬಾರದ ಈ ಅಯೋಗ್ಯ ಜಾನುವಾರುಗಳನ್ನು ಸಾಕುವ ಸಾಮರ್ಥ್ಯ  ಎಷ್ಟು ರೈತರಲ್ಲಿದೆ? ಅವುಗಳಿಗೆ ಮೇವು, ಹಿಂಡಿಗಳನ್ನು ಒದಗಿಸುವುದಕ್ಕೆ ವರಮಾನ ಬೇಕಲ್ಲವೇ? ಉಳುಮೆಗೆ ಯೋಗ್ಯವಲ್ಲದ ಎತ್ತು ಕನಿಷ್ಠವೆಂದರೆ, 20ರಿಂದ 30 ಸಾವಿರದಷ್ಟು ಬೆಲೆ ಬಾಳುತ್ತದೆ. ಈ ಎತ್ತನ್ನು ಮಾರದೇ ಓರ್ವ ರೈತ ಉಳುಮೆಗೆ ಯೋಗ್ಯವಾದ ಬೇರೆ ಎತ್ತನ್ನು ಖರೀದಿಸುವುದಾದರೂ ಹೇಗೆ? ಖರೀದಿಸದಿದ್ದರೆ ಉಳುಮೆಗೆ ಏನು ಮಾಡಬೇಕು?
ಮತ್ತಷ್ಟು ಓದು »

18
ಮೇ

ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’

– ರಾಕೇಶ್ ಶೆಟ್ಟಿ

Sidduಮೇ೮ರಂದು ರಾಜ್ಯದ ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲ ತಲೆಕೆಳಕಾಗಿ ಖುದ್ದು ಕಾಂಗ್ರೆಸ್ಸಿಗರೇ ತಮ್ಮ “ಕೈ” ಚಿವುಟಿ ಚಿವುಟಿ ಕನಸೋ ನನಸೋ ಅನ್ನುವಷ್ಟರಲ್ಲಿ ಕಾಂಗ್ರೆಸ್ಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.ಪರಮೇಶ್ವರ್ ಸೋಲಿನಿಂದ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿಯೂ ಆಗಿಬಿಟ್ಟರು.

ಅತ್ತ ಕಾಂಗ್ರೆಸ್ಸ್ ಗೆದ್ದಿದ್ದೇ ತಡ,ಇತ್ತ ನಮ್ಮ ನಾಡಿನ ಪ್ರಗತಿಪರರು,ಬುದ್ದಿಜೀವಿಗಳು,ಸಾಕ್ಷಿಪ್ರಜ್ನೆಗಳು ಚುನಾವಣಾ ಫಲಿತಾಂಶದ ಬಗ್ಗೆ ಬರೆಯಲು ಕುಳಿತರು ನೋಡಿ. ಶುರುವಾಯ್ತು ಪದಪುಂಜಗಳ ಪಟ್ಟಿ.ಹೆಚ್ಚು ಕಡಿಮೆ ಆ ಎಲ್ಲಾ ಬರಹಗಳೂ ಈ ಧಾಟಿಯಲ್ಲಿದ್ದವು.

“ಸಂಘ ಪರಿವಾರದ ಪುಂಡಾಟಿಕೆಯಿಂದ,ವಿಷಮಯವಾದ ಹಿಂದುತ್ವದ ಅಜೆಂಡಾ,ಮತಾಂಧತೆ ಇತ್ಯಾದಿ ಇತ್ಯಾದಿಗಳಿಂದ ಅಲ್ಪಸಂಖ್ಯಾತರ ಜೀವನ ನರಕವಾಗಿದ್ದ ಕರ್ನಾಟಕ”ವನ್ನು ನೋಡಿ ಸಹಿಸಲಾಗದ ನಾಡಿನ ಪ್ರಜ್ಞಾವಂತ, ಪ್ರಗತಿಪರ,ಸಂವೇದನಾಶೀಲ,ಸಾಕ್ಷಿಪ್ರಜ್ನೆ ಕನ್ನಡಿಗರು ಕಾಂಗ್ರಸ್ ಪರ ನಿಂತರಂತೆ…!

ನಿಜವಾಗಿಯೂ ಕನ್ನಡಿಗರು ಕಾಂಗ್ರೆಸ್ಸ್ ಪರ ಮತ ಚಲಾಯಿಸದರೆ ಅಂತ ನೋಡ ಹೊರಟರೆ, ೬ ಸ್ಥಾನ ಗೆದ್ದ ಕೆ.ಜೆ.ಪಿ ೩೯ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಜೆ.ಪಿ ಸುಮಾರು ೩೦ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಆಸ್.ಆರ್ ಗೆದ್ದಿದ್ದು ೪ ಸೀಟುಗಳನ್ನು.ಅಂದರೆ ಬಿಜೆಪಿ+ಕೆಜೆಪಿ+ಬಿ.ಆಸ್.ಆರ್ ನಡುವೆ ಮತಗಳು ಚೆಲ್ಲಾಪಿಲ್ಲಿಯಾಗಿರುವುದರಿಂದ ಕಾಂಗ್ರೆಸ್ಸು ಗೆದ್ದಿದೆ.ಬಹುಷಃ ಬಿಜೆಪಿಯಿಂದ ಯಡ್ಯೂರಪ್ಪ ಹೊರಹೋಗದಿದ್ದರೆ ೮೦ರ ಹತ್ತಿರ ಬಂದು ತಲುಪುತಿತ್ತು.ಇನ್ನೂ ಸರಳವಾಗಿ ಹೇಳಬೇಕೆಂದರೆ ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’ ಅಷ್ಟೆ.ಗೆಲ್ಲಲ್ಲಿಕ್ಕೆ ಕಾಂಗ್ರೆಸ್ಸ್ ಏನಾದರೂ ವಿರೋಧ ಪಕ್ಷ ಕೆಲಸವನ್ನಾದರೂ ಸರಿಯಾಗಿ ನಿಭಾಯಿಸಿತ್ತೇ? ಇದೊಂತರ ಕೋಗಿಲೆ ಗೂಡಲ್ಲಿ ಕಾಗೆ ಮೊಟ್ಟೆ ಇಟ್ಟ ಹಾಗೆ …!!! ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದು ಸಮರ್ಥ ವಿರೋಧ ಪಕ್ಷದ ಕೆಲಸ ಮಾಡಿದ್ದು ಜೆಡಿಎಸ್,ಗೆದ್ದಿದ್ದು ಕಾಂಗ್ರೆಸ್ಸ್ …!!!

ಇನ್ನು ಬಿಜೆಪಿ ಸೋಲಿಗೆ ಕಾರಣಗಳನ್ನು ದುರ್ಬೀನು ಹಾಕಿಕೊಂಡೇನು ಹುಡುಕಬೇಕಿಲ್ಲ.ಸಾಲು ಸಾಲು ಡಿ-ನೋಟಿಫಿಕೇಷನ್,ಭ್ರಷ್ಟಾಚಾರದ ಹಗರಣಗಳು,ಬ್ಲೂ-ಫಿಲಂ ಕರ್ಮಕಾಂಡ ಅದು ಇದು ಅಂತಲೇ ಪಟ್ಟಿ ಮಾಡಿಬಿಡಬಹುದು.ಇವೆಲ್ಲಕ್ಕೂ ಕಳಶವಿಟ್ಟಂತೆ ಬಿಜೆಪಿಯ ಮಾಸ್ ನಾಯಕ ಯಡ್ಯೂರಪ್ಪರನ್ನು, ಬೆಂಗಳೂರಿನ ತನ್ನ ಕ್ಷೇತ್ರವೊಂದನ್ನು ಬಿಟ್ಟು ಇನ್ನೆಲ್ಲೂ ನಿಂತು ಒಂದು ಸಂಸದನ ಸ್ಥಾನ ಗೆಲ್ಲಲಾಗದ ರಾಷ್ಟ್ರೀಯ ನಾಯಕ(?)ರೊಬ್ಬರ ಕುತಂತ್ರದಿಂದ ಪಕ್ಷ ತೊರೆದು ಹೋಗುವಂತೆ ಮಾಡಿದ್ದು ಮುಖ್ಯ ಕಾರಣ.ಇನ್ನು ದಕ್ಷಿಣ ಕನ್ನಡದಲ್ಲಿ ಹಾಲಾಡಿ,ಯೋಗಿಶ್ ಭಟ್,ನಾಗರಾಜ್ ಶೆಟ್ಟಿ ಅಂತವರ ವಿಷಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ನಡೆದುಕೊಂಡ ರೀತಿಯಿಂದ ಮತ್ತು  ಸದಾನಂದ ಗೌಡರನ್ನ ವಿನಾಕಾರಣ ಕುರ್ಚಿಯಿಂದ ಇಳಿಸಿದ್ದು ಬಿಜೆಪಿಗೆ ಮುಳುವಾಯಿತು.

ಮತ್ತಷ್ಟು ಓದು »

1
ಮೇ

ನಾಯಕರಿಗೊಂದು ದಿಕ್ಸೂಚಿ…

– ಮಧುಚಂದ್ರ ಭದ್ರಾವತಿ 

c39ಸ್ವತಂತ್ರ ಪೂರ್ವದ ಹಿಂದೆ ನಡೆದ ಘಟನೆ, 

ಮುಂಬೈ ನಗರದ ರೈಲ್ವೆ ನಿಲ್ದಾಣ, ಬೆಂಗಳೂರಿನಿಂದ ರೈಲು ಬಂದು ನಿಂತಿತ್ತು. ಮೈಸೂರಿನ ದಿವಾನರಾದ ಮಾಧವರಾಯರು ಕಾರ್ಯನಿಮಿತ್ತವಾಗಿ ದೆಹಲಿಗೆ ಹೊರಟಿದ್ದರು. ಮುಂಬೈ ರೈಲ್ವೆ ನಿಲ್ದಾಣದಲ್ಲಿ  ದೆಹಲಿಗೆ ಹೋಗಲು ರೈಲನ್ನು ಬದಲಿಸಬೇಕಿತ್ತು. ದೆಹಲಿಗೆ ಹೊರಡುವ ರೈಲು ಇನ್ನು ಬಂದಿರಲಿಲ್ಲ ಸುಮಾರು ೫ ಘಂಟೆ ರೈಲ್ವೆ ನಿಲ್ದಾಣದಲ್ಲಿ ಕಾಯಬೇಕಿತ್ತು. ಆಗ ಮೈಸೂರಿನ ದಿವಾನರು ಬದಲಿ ರೈಲು ಬರುವ ಒಳಗೆ ಪೇಟೆ ಸುತ್ತಿ ಬರುವ ಯೋಚನೆ ಮಾಡಿ ಹೊರಟು ಹೋದರು.

ಮೈಸೂರಿನ ದಿವಾನರ ಪ್ರಯಾಣವನ್ನು ಪತ್ರಿಕೆಯ ಮೂಲಕ ಅರಿತಿದ್ದ, ಸುಮಾರು ೮೨ ವರ್ಷದ ವ್ಯಕ್ತಿಯೊಬ್ಬರು ದಿವಾನರನ್ನು ಕಾಣಲು ಬಂದರು. ಅವರಿಗೆ ದಿವಾನರು ಇಲ್ಲದಿರುವುದು  ಅವರ ಆಪ್ತಕಾರ್ಯದರ್ಶಿಯಿಂದ ತಿಳಿಯಿತು.  ಅ ೮೨ ವರ್ಷದ ವ್ಯಕ್ತಿಯನ್ನು ಗುರುತಿಸಿದ  ದಿವಾನರ ಆಪ್ತಕಾರ್ಯದರ್ಶಿ ಅವರನ್ನು ದಿವಾನರ ಬೋಗಿಯೊಳಗೆ ಕುಳಿತು ಕೊಳ್ಳಲು ಮನವಿ ಮಾಡಿದರು. 

” ದಿವಾನರು ಇಲ್ಲದಾಗ ಅವರ ಕೋಣೆಯನ್ನು ಪ್ರವೇಶಿಸುವುದು ಉಚಿತವಲ್ಲ ” ಎಂದು ಹೇಳಿ  ನಯವಾಗಿ ತಿರಸ್ಕರಿಸಿದರು ಅ ಹಿರಿಯರು. 

ದಿವಾನರು ದೆಹಲಿಗೆ ಹೊರಡುವ ಮುನ್ನ ಆಂಗ್ಲರ ನೀತಿಯನ್ನು ದಿಕ್ಕರಿಸಿದ ಮೈಸೂರಿನ ಜನತೆ , ಅಂಗ್ಲರ ವಿರುದ್ದ ಪ್ರತಿಭಟನೆಗೆ ಇಳಿದಿದ್ದರು. ಟೆಲಿಫೋನ್ ತಂತಿಗಳನ್ನು ಕತ್ತರಿಸಿದರು, ಅಂಚೆ ಕಛೇರಿಗೆ ಬೆಂಕಿ ಹಚ್ಚಿದ್ದರು , ರೈಲ್ವೆ ಕಂಬಿ ಕಿತ್ತರು ,  ಪ್ರತಿಭಟನೆ ಇನ್ನಷ್ಟು  ಉಗ್ರವಾಯಿತು. ಅಗ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಗುಂಡು ಹಾರಿಸಿದರು, ಹಲವಾರು ನಾಗರೀಕರು ಪ್ರಾಣ ತೆತ್ತರು.   

15
ಏಪ್ರಿಲ್

ಸಾಹಿತ್ಯ ಪರಂಪರೆಯ ಅರಿವಿಲ್ಲದ ’ಎಲ್ಲರ ಕನ್ನಡ’

ಡಾ. ಮಾಧವ ಪೆರಾಜೆ ಅವರ ಲೇಖನಕ್ಕೊಂದು ಪೂರಕ ಪ್ರತಿಕ್ರಿಯೆ

– ಡಾ. ಮೋಹನ ಕುಂಟಾರ್

imagesಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣದ ಮೂಲಕ ಡಿ.ಎನ್.ಶಂಕರಭಟ್ಟರು ಕನ್ನಡ ಬರವಣಿಗೆಯಲ್ಲಿ ಹೊಸ ಕ್ರಾಂತಿಯನ್ನು ಮಾಡಲು ಮುಂದಾಗಿದ್ದಾರೆ. ಅವರ ಮಾರ್ಗದಲ್ಲೇ ಮುಂದುವರಿಯುವ ಅವರ ಶಿಷ್ಯವರ್ಗ ಅದನ್ನೇ ಸಮರ್ಥಿಸಿ ಕೃತಿರೂಪಕ್ಕೆ ಇಳಿಸುತ್ತಿದೆ. ಒಂದು ರೀತಿಯಲ್ಲಿ ಇದು ಅತಿಬುದ್ಧಿವಂತಿಕೆಯ ಪ್ರದರ್ಶನವಲ್ಲದೇ ಬೇರೇನೂ ಅಲ್ಲ.

ಕನ್ನಡಕ್ಕೆ ಭಾಷಿಕವಾಗಿಯೂ ಸಾಹಿತ್ಯಿಕವಾಗಿಯೂ ಗೌರವ ತರುವ ಸುದೀರ್ಘ ಪರಂಪರೆಯಿದೆ. ಅದರ ಮೂಲಕವೇ ಕನ್ನಡ ಪರಂಪರೆ ವಿಶಾಲವಾಗಿ ಅಷ್ಟೆ ಅಗಾಧ ಪ್ರಮಾಣದಲ್ಲಿ ಬೆಳೆದು ನಿಂತಿರುವುದನ್ನು ಗುರುತಿಸಲಾಗುತ್ತಿದೆ. ಪಂಪ, ಕುಮಾರವ್ಯಾಸಾದಿಗಳು ಬರೆಯುವ ಕಾಲಕ್ಕೆ ಮಾತನಾಡುವ ಭಾಷೆ ಬಳಕೆಯಲ್ಲಿತ್ತು. ಮಾಸ್ತಿ, ಕಾರಂತ, ಕುವೆಂಪು ಅವರ ಕಾಲದಲ್ಲಿಯೂ ಇತ್ತು. ಅವರೆಲ್ಲ ಬರವಣಿಗೆಯ ಭಾಷೆಯೊಂದನ್ನು ಕನ್ನಡದ ಮೂಲಕ ಕಟ್ಟಿಕೊಟ್ಟು ಕನ್ನಡ ಭಾಷೆಯ ಮಹತ್ವವನ್ನು ಹೆಚ್ಚಿಸಿದ್ದಾರೆ. ಇವರೆಲ್ಲರ ಗ್ರಾಂಥಿಕ ಭಾಷೆಗೆ ಆಡುನುಡಿಯ ಸೊಗಡೂ ಪೂರಕವಾಗಿತ್ತು ಎಂಬುದರಲ್ಲಿ ಎರಡು ಮಾತಿಲ್ಲ. ಅಲ್ಲಿ ಕನ್ನಡದ ಮಾತಿನ ಭಾಷೆಯಲ್ಲಿ ಮಹಾಪ್ರಾಣಾಕ್ಷರಗಳಿದ್ದುವು, ಋಕಾರಗಳೂ ಇದ್ದುವು. ಉಚ್ಚಾರದಲ್ಲಿ ಅದನ್ನು ಸ್ಪಷ್ಟವಾಗಿ ಬಳಸದೆ ಇದ್ದಾಗಲೂ ಆ ವ್ಯತ್ಯಾಸವನ್ನು ನಿರಂತರವಾಗಿ ಕನ್ನಡ ಪರಂಪರೆ ಗ್ರಹಿಸುತ್ತಾ ಬಂದಿದೆ. ಅದಕ್ಕಾಗಿ ಕನ್ನಡ ಭಾಷೆಯ ಲಿಖಿತ ಪರಂಪರೆಯ 1500 ವರ್ಷಗಳ ಸುದೀರ್ಘ ಇತಿಹಾಸದ ನಡುವೆ ಆ ಅಕ್ಷರಗಳೆಲ್ಲ ಉಳಿದುಕೊಂಡು ಬಂದಿವೆ. ಬರಹ ಭಾಷೆ ಎನ್ನುವುದು ಭಾಷಾಭಿವ್ಯಕ್ತಿಯ ಒಂದು ಸಾಧ್ಯತೆ ಮಾತ್ರ. ಅದೇ ಅಂತಿಮ ಅಲ್ಲ. ಬಳಕೆಯ ಉಚ್ಚಾರವೆಲ್ಲ ಬರಹದ ಭಾಷೆಯಲ್ಲಿ ಬರಬೇಕೆಂಬ ಹಟ ಸಲ್ಲದು. ಬರವಣಿಗೆಯ ಭಾಷೆಗೆ ಒಂದು ಮಿತಿ ಇದೆ. ಒಂದು ಶಿಸ್ತು ಇದೆ. ಆ ಶಿಸ್ತು ಮಾತಿನ ಭಾಷೆಯಿಂದಲೇ ರೂಪುಗೊಂಡುದು. ಮಾತಿನ ಭಾಷೆಯೇ ಅಂತಿಮ. ಅವುಗಳಲ್ಲಿ ವ್ಯತ್ಯಸ್ಥ ರೂಪಗಳನ್ನು ಅಂಗೀಕರಿಸಿದ ಕಾರಣಕ್ಕೆ ಬರಹದಲ್ಲಿ ವಿಭಿನ್ನ ಸಂಕೇತಗಳು ಬಳಕೆಯಾಗಿವೆ. ಈ ಸಂಕೇತಗಳೇ ಅಲ್ಪಪ್ರಾಣಗಳೆಂದೂ, ಮಹಾಪ್ರಾಣಗಳೆಂದೂ ದಾಖಲಾಗಿವೆ. ಈಗ ಅವು ಕನ್ನಡದ ಬರಹ ಭಾಷೆಯ ಅವಿಭಾಜ್ಯ ಸಂಕೇತಗಳು. ಆಗಾಗ ಕವಿಗಳು ಅಚ್ಚಕನ್ನಡದ ಬಳಕೆಗಾಗಿ ಶ್ರಮಿಸಿದ್ದುಂಟು. ಆಂಡಯ್ಯನಂತಹ ಪ್ರಾಚೀನರು ಹಾಗೂ ಕೊಳಂಬೆ ಪುಟ್ಟಣ್ಣಗೌಡರಂಥ ಆಧುನಿಕರನ್ನು ಇಲ್ಲಿ ಹೆಸರಿಸಬಹುದು. ಆದರೆ ಅವರ ಪ್ರಯೋಗಗಳು ವಿಫಲವಾಗಿ ಅದನ್ನು ಮೀರಿದ ಪ್ರಯೋಗಗಳೇ ಕನ್ನಡದಲ್ಲಿ ದಾಖಲಾದವು.

ಮತ್ತಷ್ಟು ಓದು »

10
ಏಪ್ರಿಲ್

ಶಂಕರ ಬಟ್ಟರದ್ದು “ಎಲ್ಲರ ಕನ್ನಡ”ವೇ?

– ಡಾ.ಮಾಧವ ಪೆರಾಜೆ

images

ಡಾ. ಆರ್. ಚಲಪತಿಯವರು ‘ತಂತಿ ಮೇಲಿನ ನಡಿಗೆ’ ಎನ್ನುವ ಪುಸ್ತಕವನ್ನು ಇದೀಗ ತಾನೇ ಪ್ರಕಟಿಸಿದ್ದಾರೆ. ‘ಕಲಿಕೆಯ ಕನ್ನಡದ ಬಗೆಗೆ ಬಲ್ಲವರೊಂದಿಗೆ ಮಾತು ಕತೆ’ ಎನ್ನುವ ಉಪಶೀರ್ಷಿಕೆಯೂ ಇದಕ್ಕಿದೆ. ಸಖಿ ಪ್ರಕಾಶನ ಹೊಸಪೇಟೆ ಇವರು ಇದನ್ನು ಪ್ರಕಟಿಸಿದ್ದಾರೆ. ಈ ಪುಸ್ತಕದಲ್ಲಿ ಬಳಕೆಯಾಗಿರುವ ಭಾಷೆಯ ಕುರಿತು ಒಟ್ಟಾರೆಯಾಗಿ ನಾನು ಮುಂದೆ ಚರ್ಚಿಸಲಿರುವುದರಿಂದ ಆರಂಭದಲ್ಲಿಯೇ ಒಂದು ಮಾತನ್ನು ವಿಶೇಷವಾಗಿ ಪ್ರಸ್ತಾಪಮಾಡಿ ಮುಂದುವರಿಯುತ್ತೇನೆ.ಈ ಪುಸ್ತಕದ ಮುಖಪುಟದ ಮೇಲಿನಿಂದ ಅದು ಸ್ವತಂತ್ರ ಪುಸ್ತಕದ ಹಾಗೆ ಕಾಣುತ್ತದೆ. ಆದರೆ ತೆರೆತೆರದಂತೆ ಅದು ಸಂಪಾದನೆ ಎನ್ನುವುದು ಸ್ಪಷ್ಟವಾಗುತ್ತದೆ.ಶಿಕ್ಷಣ ಕ್ಷೇತ್ರದಲ್ಲಿ ದಶಕಗಳಿಂದ ತೊಡಗಿಸಿಕೊಂಡಿರುವವರೊಂದಿಗೆ ಲೇಖಕರು ಮಾಡಿದ ಸಂದರ್ಶನಗಳಿರುವ ಪುಸ್ತಕವಿದು. ಹಾಗಿರುವಾಗ ಇಂತಹ ಪುಸ್ತಕವನ್ನು ಸಂಪಾದನೆ ಎಂದು ಸ್ಪಷ್ಟವಾಗಿ ಗುರುತಿಸಬೇಕು.ಅದುವೇ ಸರಿಯಾದ ವಿಧಾನ.

ಈ ಪುಸ್ತಕದಲ್ಲಿ ಪ್ರಯೋಗವಾಗಿರುವ ಭಾಷೆಯ ಕುರಿತು ಒಂದು ಉದಾಹರಣೆಯನ್ನು ನೀಡುತ್ತೇನೆ.

ಉದಾ: ೧:

“ಪದವಿ ತರಗತಿಗಳಲ್ಲಿ ಏನನ್ನು ಕಲಿಯುವುದು/ ಕಲಿಸುವುದಾಗಿರಬೇಕು?”

ಎಂ.ಜಿ.ಸಿ. ಯಾವುದೇ ಒಂದು ಮಾತ್ರುಬಾಶೆಯನ್ನು ತರಗತಿಯಲ್ಲಿ ಕಲಿಯುವ ವಿದ್ಯಾರ್‍ತಿಗೆ ಆ ಭಾಶೆಯಲ್ಲಿ ವ್ಯವಹರಿಸುವ ಸಾಮಾನ್ಯ ಜ್ನಾನವಿರುತ್ತದೆ. ತರಗತಿಗಳಲ್ಲಿ ಹೊಸ ಪಾರಿಬಾಶಿಕ ಪದಗಳು ಪರಿಚಯವಾಗುತ್ತವೆ. ಹಾಗೂ ಒಂದು ರೀತಿಯ ಆಲೋಚನಾ ಕ್ರಮಕ್ಕೆ ಆಡುಬಾಶೆಯಿಂದ ಶಿಶ್ಟಬಾಶೆಯ ಕಡೆಗೆ ಅವನ/ಳ ಗಮನ ಹರಿಯುತ್ತದೆ.

ಒಂದು ರೀತಿಯಲ್ಲಿ ಕಲಿಸುವವರು ಮತ್ತು ಕಲಿಯುವವರು ಅಸಹಾಯಕರು. ಪಟ್ಯಕ್ರಮ ಮತ್ತು ಪಟ್ಯವನ್ನು ಸಿದ್ದಪಡಿಸುವವರೇ ಬೇರೆಯವರಾಗಿರುತ್ತಾರೆ. ಈಗ ಪರಿಸ್ತಿತಿ ಸುದಾರಿಸುತ್ತಿದೆ ಎನಿಸಿದರೂ ವಿವಿಗಳ ಒಟ್ಟು ರಚನಾ ವಿನ್ಯಾಸವೇ ಪ್ಯೂಡಲ್ ಮಾದರಿಯದು- ವಸಾಹತು ಕಲ್ಪನೆಯದು. ಅವು ಇಂದಿಗೂ ಡೆಮಕ್ರೆಟಿಕ್ ಆಗಿಯೇ ಇಲ್ಲ.(ಪು.೧೨) ಮತ್ತಷ್ಟು ಓದು »

12
ಮಾರ್ಚ್

ASER ವರದಿ 2012 ಮತ್ತು ಕರ್ನಾಟಕದ ಕಲಿಕೆ ಒಳನೋಟ – 1

-ಪ್ರಶಾಂತ ಸೊರಟೂರ

aser 1ASER (Annual Status Education Report – ಕಲಿಕೆ ಗುಣಮಟ್ಟದ ವರುಶದ ವರದಿ)

ಇದು ಸರಕಾರೇತರ ಸಂಸ್ಥೆಯಾದ ’ಪ್ರಥಮ್’ನಿಂದ ಕಲಿಕೆಯ ಗುಣಮಟ್ಟ ತಿಳಿದುಕೊಳ್ಳಲು 2005ರಿಂದ ಪ್ರತಿ ವರುಶ, ಇಂಡಿಯಾದ ಸುಮಾರು 15,000 ಹಳ್ಳಿ ಪ್ರದೇಶದ ಶಾಲೆಗಳಲ್ಲಿ ಅರಸುವಿಕೆ (ಸಮೀಕ್ಷೆ) ನಡೆಸಿ ಹೊರತರಲಾಗುತ್ತಿರುವ ವರದಿ.

ASER ಕಲಿಕೆಮಟ್ಟವನ್ನು ಒರೆಗೆಹಚ್ಚುವ ಬಗೆ:

ಇಂಡಿಯಾದ ಪ್ರತಿ ಜಿಲ್ಲೆಯಲ್ಲಿ 30 ಹಳ್ಳಿಗಳನ್ನು ಆಯ್ಕೆ ಮಾಡಲಾಗುತ್ತದೆ. (ಹಿಂದಿನ ಎರಡು ವರುಶದ 20 ಮತ್ತು 10 ಹೊಸ ಹಳ್ಳಿಗಳು).
ಹಳ್ಳಿಗಳ ಗುಣಮಟ್ಟ (ರಸ್ತೆ, ಮನೆಗಳು ಇತ್ಯಾದಿ), ಕುಟುಂಬದ ಗುಣಮಟ್ಟ (ತಂದೆ-ತಾಯಿಯ ಕಲಿಕೆ, ಮನೆ ಇತ್ಯಾದಿ), ಶಾಲೆಯ ಗುಣಮಟ್ಟ (ಶಿಕ್ಶಕರು-ಮಕ್ಕಳ ಅನುಪಾತ, ಕಲಿಕೆಯ ಸಲಕರಣೆಗಳು, ಕುಡಿಯುವ ನೀರು, ಓದುಮನೆ) ಮುಂತಾದವುಗಳನ್ನು ಈ ಅರಸುವಿಕೆಯು (ಸಮೀಕ್ಶೆಯು) ಒಳಗೊಂಡಿರುತ್ತದೆ.
6 – 14 ವಯಸ್ಸಿನ (1 ರಿಂದ 7/8 ನೇ ತರಗತಿ) ಮಕ್ಕಳು ಈ ವರದಿಗೆ ಒಳಪಡುತ್ತಾರೆ.ಕಲಿಕೆಯ ಗುಣಮಟ್ಟವನ್ನು ASER ನ ಮೂರು ಸಲಕರಣೆಗಳಿಂದ ಅಳೆಯಲಾಗುತ್ತದೆ. 1) ತಾಯ್ನುಡಿಯಲ್ಲಿ ಓದುವಿಕೆಯ ಮಟ್ಟ 2) ಇಂಗ್ಲಿಶ ಓದುವಿಕೆಯ ಮಟ್ಟ 3) ಗಣಿತ ಕಲಿಕೆಯ ಮಟ್ಟ (ಕಳೆಯುವಿಕೆ ಮತ್ತು ಭಾಗಾಕಾರ)
ಜೊತೆಗೆ 2012ರ ವರದಿಯಲ್ಲಿ ಶಾಲೆಗೆ ಸೇರುವ ಮಕ್ಕಳ ಪ್ರಮಾಣ, ಸರಕಾರ ಮತ್ತು ಖಾಸಗಿ ಶಾಲೆಗಳ ಪ್ರಮಾಣ, ಹೊರಕಲಿಕೆಗೆ (ಟ್ಯೂಶನ್) ಹೋಗುವವರ ಪ್ರಮಾಣ ಮುಂತಾದವುಗಳ ಕುರಿತು ತಿಳಿಸಲಾಗಿದೆ.
2012 ರಲ್ಲಿ ಕರ್ನಾಟಕದ 778 ಹಳ್ಳಿಗಳ, ಸುಮಾರು 18,000 ಸಾವಿರ ಮಕ್ಕಳು ಈ ಆರಸುವಿಕೆಗೆ (ಸಮೀಕ್ಷೆಗೆ) ಒಳಪಟ್ಟಿದ್ದರು.
ಮತ್ತಷ್ಟು ಓದು »