ಖಾಸಗಿ ಕಾಲೇಜಿನ ಕಲಿಕೆ- ಬರೀ ಗಿಲೀಟಿನ ಬುಡುಬುಡಿಕೆ
ಶ್ರದ್ಧಾಹಿ ಪರಮಾಗತಿಃ-
● ನನ್ನ ಆಟೋ ಮಾರಿದರು ಮಗಳಿಗೆ ಪ್ರವೇಶ ದೊರೆಯಲಿಲ್ಲ
● ೯೫% ಅಂಕ ಪಡೆದರೂ ಕಾಲೇಜಿನಲ್ಲಿ ಸೀಟಿಲ್ಲ
● ಹಿಂದೂ ಧರ್ಮದ ಮಕ್ಕಳಿಗೆ ಪ್ರವೇಶವಿಲ್ಲ; ನಮ್ಮ ಕೋಮಿನ ಮಕ್ಕಳಿಗೆ ಆದ್ಯತೆ
● ಪೋಷಕರು ಭರಿಸಲಾಗದಷ್ಟು ಕಾಲೇಜುಗಳು ದುಬಾರಿ
● ದುಬಾರಿ ಕಾಲೇಜಿಗೆ ಸೇರಿಸಿದರೂ ಟ್ಯೂಷನ್ ಹೇಳಿಸಲೇಬೇಕು – ಸಾವಿರಾರು ರೂಪಾಯಿಗಳ ಧಂಧೆ
● ದುಬಾರಿ ಕಾಲೇಜಿಗೆ ಸೇರಿಸುವ ಕುಟುಂಬಗಳಲ್ಲಿ ಆದಾಯದ ಬಹು ಭಾಗ ಶುಲ್ಕಕ್ಕೆ ಹೋಗುವ ಕಾರಣ ಜೀವನದ ಹಲವು ಅಗತ್ಯತೆಗಳನ್ನು ಕಡಿತಗೊಳಿಸಿಕೊಂಡು ಮನೆಯ/ಮನಸ್ಸಿನ/ದೇಹದ ಆರೋಗ್ಯಕ್ಕೆ ಸಂಚಾಕಾರ ತಂದುಕೊಳ್ಳುವ ಸಾಧ್ಯತೆ ಹೆಚ್ಚು.
● ಇಷ್ಟೆಲ್ಲಾ ಕಷ್ಟ ಪಡುವ ತಾಯಿತಂದೆಯರಿಂದ ಅಥವಾ ಮಗುವೇ ಸಂವೇದನಾಶೀಲನಾಗಿದ್ದರೆ ಅದಕ್ಕೆ ಕಷ್ಟಗಳು ತಿಳಿದು ನೇರ ಅಥವಾ ಪರೋಕ್ಷ ಒತ್ತಡಕ್ಕೆ ಒಳಗಾಗಿ ವಿದ್ಯಾಭ್ಯಾಸಕ್ಕೆ ಆಡ್ದಿಯಾಗಬಹುದು.
● ಇದು ಒಂದು ಆರೋಗ್ಯಕರ ಬೆಳವಣಿಗೆ ಅಲ್ಲ.
● ಕ್ರಿಶ್ಚಿಯನ್ ಅಥವಾ ಮುಸಲ್ಮಾನರ ವಿದ್ಯಾ ಸಂಸ್ಥೆಗಳಿಗೆ ಸೇರಿ ಅಲ್ಲಿ ಹೂವು ಮುಡಿಯುವಂತಿಲ್ಲ, ಹಣೇ ಕುಂಕುಮ ಇಡುವಂತಿಲ್ಲ, ಸೀರೆ ಉಡುವಂತಿಲ್ಲ, ಬಳೆ ತೊಡುವಂತಿಲ್ಲ ಎಂಬ ತಲೆಹರಟೆ ಅಸಹಿಷ್ಣತೆಯ ಪರಮಾವಧಿಯ ನಿಷೇಧಗಳನ್ನು ಅನುಭವಿಸಬೇಕು. ಇನ್ನು ಲವ್ ಜಿಹಾದು/ಪ್ರೇಮಕ್ಕೆ ಒತ್ತಡ ಹಾಕುವುದು ಇತ್ಯಾದಿ ಸಮಸ್ಯೆಗಳು ಸೇರಿ ‘ಕಾಸು ಹಾಳು ತಲೆಯು ಬೋಳು’ ಎಂಬ ಗಾದೆಯಂತೆ ಆಗುವುದೊಂದು ಅಭಾಸ.
ಈ ಸಮಸ್ಯೆಗಳು ಎಂದಿಗೂ ಇದ್ದಂತಹವೇ.ಆದರೆ ಇತ್ತೀಚೆಗೆ ಅದರ ವ್ಯಾಪ್ತಿ, ಗಹನತೆ ಹೆಚ್ಚಾಗಿದೆ. ಮತ್ತಷ್ಟು ಓದು 
“ನೆಟ್ಟಿ”ಗೇರಿದ ಪಠ್ಯ @ ನೆತ್ತಿಗೇರುವುದೇ?
-ಸುದರ್ಶನ ರಾವ್
ಅಂತರ್ಜಾಲದಲ್ಲಿ ಕನ್ನಡ ಮಾಧ್ಯಮ ಶಾಲಾ ಪಠ್ಯಗಳು
ನಾವು ಶಾಲೆಯಲ್ಲಿ ಓದುತ್ತಿರುವಾಗ ಒಂದು ತರಗತಿಯಿಂದ ಉತ್ತೀರ್ಣರಾಗಿ ಇನ್ನೊಂದು ತರಗತಿಗೆ ಹೋಗುವುದರ ಜೊತೆಗೆ ಮುಂದಿನ ತರಗತಿಯ ಪಠ್ಯ ಪುಸ್ತಕಗಳ ಬೇಟೆಯೂ ಶುರುವಾಗುತ್ತಿತ್ತು. ಏಪ್ರಿಲ್ ಹತ್ತನೇ ತಾರೀಖು ನಮ್ಮ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಿ ಅಧಿಕೃತವಾಗಿ ಪಾಸಾಗಿದ್ದೇವೆಂದು ಘೋಷಣೆಯಾಗುತ್ತಿದ್ದಂತೆ ನಮಗಿಂತ ಒಂದು ವರ್ಷ ಮುಂದಿನ ವಿದ್ಯಾರ್ಥಿಗಳೊಂದಿಗೆ ನಮ್ಮ ಮಾತುಕತೆ ಶಾಲಾ ಆವರಣದಲ್ಲೇ ಶುರುವಾಗುತ್ತಿತ್ತು. . ಮತ್ತಷ್ಟು ಓದು 
“ಚಪ್ಪಟೆ ಪಾದದ ಕನ್ನಡಿಗರು”
-ದೀಕ್ಷಿತ್ ಪೊಯ್ಯೆಕಂಡ
“100 ಮೀಟರ್ ಓಟವನ್ನು 15 ಸೆಕೆಂಡುಗಳಲ್ಲಿ ಮುಗಿಸಬಹುದು ಬಿಡು ಮತ್ತೆ ಹಗ್ಗ ಹತ್ತೋದು ಕಂಬ ಹತ್ತೋದು ಕಷ್ಟ ಬಿಡು” ಎಂದು ಮಂಜು ವೈದ್ಯಕೀಯ ಪರೀಕ್ಷೆಯ ಬಳಿಕ ಕೊಚ್ಚಿಕೊಳ್ಳತೊಡಗಿದ. ನನ್ನದೇನೂ ಹೊರತಾಗಿರಲಿಲ್ಲ, “ಅಯ್ಯೋ ಮೆಡಿಕಲ್ ಹೆಂಗೂ ಆಯ್ತು ಇನ್ನು ಫಿಸಿಕಲ್ ಟೆಸ್ಟ್ ಹೇಗೆ ಪಾಸ್ ಮಾಡೊದಪ್ಪಾ” ಅನ್ನುತ್ತಾ ಜೊತೆಗಿದ್ದವರೊಂದಿಗೆ ಮಾತಿಗಿಳಿದೆ. ಮತ್ತೊಬ್ಬನದೂ ಅದೇ ರಾಗ. ನಮಗಿದ್ದ ಸಂತೋಷದ ವಿಷಯವೆಂದರೆ ಆ ದಿನ 8 ಮಂದಿ ಕನ್ನಡಿಗರು ಅಲ್ಲಿದ್ದೆವು. ಸರಿಸುಮಾರು ಮೂರು ಗಂಟೆ ಕಾದ ಬಳಿಕ ಮೆಡಿಕಲ್ ರಿಸಲ್ಟ್ ಬಂತು. ಅದನ್ನು ಹಿಡಿದುಕೊಂಡು ಬಂದ ಏರ್ಪೋರ್ಟ್ ಮುಖ್ಯಸ್ಥ “ನಾನು ರಿಜೆಕ್ಟ್ ಆದ ಅಭ್ಯರ್ಥಿಗಳ ಹೆಸರು ಮಾತ್ರ ಕರೆಯುತ್ತಿದ್ದೇನೆ’ ಎಂದು ಮಲಯಾಳಿ ಮಿಶ್ರಿತ ಆಂಗ್ಲ ಭಾಷೆಯಲ್ಲಿ ಓದತೊಡಗಿದ. ರಮೇಶ್.. ಸುರೇಶ್.. ಹೀಗೆ ಹೆಸರು ಕೇಳಿದಾಗ, ನನಗೇನೋ ಫೈವ್ ಸ್ಟಾರ್ ಜಾಹೀರಾತು ಕೇಳಿದಂತಾಗುತಿತ್ತು. ಉಫ್ ಅದೇನೋ ಎದೆಯಲಿ ಡವ ಡವ! ವರುಷಗಳ ಕನಸು. ಲಿಖಿತ ಪರೀಕ್ಷೆಯ ಬಳಿಕದ ತಯಾರಿ, ಬಯಲಲ್ಲಿ ಪಟ್ಟ ಕಷ್ಟ ಎಲ್ಲವೂ ನೆನಪಾಗುತಿದ್ದವು. ಒಂದೊಂದೇ ಹೆಸರನ್ನು ಕೇಳಿಸಿಕೊಳ್ಳುತ್ತಾ ಹೋದಂತೆ ಸಿಡಿಲು ಬಡಿದಂತೆ ದೀಕ್ಷಿತ್ ಕುಮಾರ್ ಅಂತ ಹೆಸರನ್ನೂ ಕೇಳಿಬಿಟ್ಟೆ. ಆಯ್ತು ನನ್ನ ಕನ್ನಂಬಾಡಿ ಕಟ್ಟೆ ಒಡೆದೋಯ್ತು. ಕಣ್ಣು ಮಂಜಾಗತೊಡಗಿತು. ನನ್ನ ಹೆಸರನ್ನೂ ಹೇಳಿಯೇಬಿಟ್ಟರು. ಈ ಕೆಲಸಕ್ಕಾಗಿ ಇನ್ನಿಲ್ಲದಂತೆ ಪಟ್ಟ ಶ್ರಮವೆಲ್ಲಾ ವ್ಯರ್ಥವಾಗಿ ಹೋಯಿತು. ಮತ್ತೆ ಮಂಜು, ತ್ರಿಭುವನ್ ಹೀಗೇ ಮುಂದುವರಿದಿತ್ತು. ಅಷ್ಟೂ ಕನ್ನಡಿಗರ ಯಾತ್ರೆ ಮುಗಿದಿತ್ತು. ಕಾರಣ ಕೇಳಿದ್ರೆ, ನಮ್ಮದು ಚಪ್ಪಟೆ ಪಾದ ಅಂತೆ ! ಮತ್ತಷ್ಟು ಓದು 
ತಲೆಕೆಟ್ಟ ಕಾನೂನುಗಳು ಮತ್ತು ಸ್ವಂತ ಬುದ್ಧಿಯಿಲ್ಲದ ಜೀವಿಗಳು
– ರಾಕೇಶ್ ಶೆಟ್ಟಿ
ಇತ್ತೀಚೆಗೆ ಮತ್ತೂರಿನಲ್ಲಿ ನಡೆದ ಸೋಮಯಾಗದಲ್ಲಿ ಸಂಕೇತಿ ಬ್ರಾಹ್ಮಣರು ಮೇಕೆ ಬಲಿ ಕೊಟ್ಟು ತಿಂದರಂತೆ, ಸೋಮರಸ ಕುಡಿದರಂತೆ ಅಂತ ಪ್ರಗತಿಪರರ ವಾಣಿಯೊಂದು ಸುಳ್ಳು ಸುದ್ದಿ ಬರೆಯಿತು. ಈ ಸುದ್ದಿಯಿಂದಾಗಿ ಟೌನ್ ಹಾಲ್ ಮುಂದೆ ನಿಂತು ದನ ತಿನ್ನುವುದನ್ನು ಬೆಂಬಲಿಸುವ ಕಬಾಬ್ ಕ್ರಾಂತಿಕಾರಿಗಳಿಗೂ ಹೊಟ್ಟೆನೋವು ಕಾಣಿಸಲಾರಂಭಿಸಿತು. ಇವರನ್ನು ಕರೆಯದೇ ತಿಂದರೂ ಎಂದು ಹೊಟ್ಟೆ ನೋವಾಗಿತ್ತೋ ಏನೋ. PhD ಮಹಾಶಯನೊಬ್ಬ ಬ್ರಾಹ್ಮಣರು ಮಾಂಸ ತಿನ್ನಲು ಶುರು ಮಾಡಿದರೆ ರೇಟ್ ಜಾಸ್ತಿಯಾಗುತ್ತೆ ಅಂತ ಅಳ್ತಾ ಇದ್ದ. ಎಂತೆಂತವರೆಲ್ಲ ವಿವಿಗಳಲ್ಲಿ ಪಾಠ ಮಾಡುತ್ತಾರಪ್ಪಾ ಅನಿಸಿತು. ಎಲ್ಲಾ (ಜಾತಿ/ಪಂಗಡದ) ಬ್ರಾಹ್ಮಣರು ಸಸ್ಯಹಾರಿಗಳು ಅನ್ನೋದು “ಮೂಢನಂಬಿಕೆ”. ಸಿದ್ರಾಮಯ್ಯನವರಿಗೆ ಹೇಳಿ ಮೌಢ್ಯ ನಿಷೇಧ ಕಾಯ್ದೆಯ ಮೂಲಕ ಈ ಮೂಢನಂಬಿಕೆಯನ್ನು ನಿಷೇಧಿಸಬೇಕು. ಕಾಶ್ಮೀರಿ ಪಂಡಿತರಿಗೆ ಶಿವರಾತ್ರಿ ಹಬ್ಬದಂದು ಮಾಂಸದಡುಗೆಯೇ ವಿಶೇಷವಾದದ್ದು. ಬಂಗಾಳಿ, ಓಡಿಶಾದ ಬ್ರಾಹ್ಮಣರೂ, ಗೌಡ ಸಾರಸ್ವತ ಬ್ರಾಹ್ಮಣರಲ್ಲೂ ಮಾಂಸಹಾರಿಗಳಿದ್ದಾರೆ. ಮತ್ತಷ್ಟು ಓದು 
ಶಂಕರಾಚಾರ್ಯರನ್ನು ಸ್ತುತಿಸಿದ್ದಾಯಿತು, ವಿದ್ಯಾರಣ್ಯರನ್ನೂ ಸ್ಮರಿಸೋಣ….
-ಶ್ರೀನಿವಾಸ ರಾವ್
||ಅವಿದ್ಯಾರಣ್ಯಕಾನ್ತಾರೇ ಭ್ರಮತಾಂ ಪ್ರಾಣಿನಾಂ ಸದಾ
ವಿದ್ಯಾಮಾರ್ಗೋಪದೇಷ್ಟಾರಂ ವಿದ್ಯಾರಣ್ಯಗುರುಂ ಶ್ರಯೇ||
ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಮಾರ್ಗದರ್ಶನ ನೀಡಿದರು. ದಕ್ಷಿಣಪಥದಲ್ಲಿ ಹಿಂದೂ ಧರ್ಮದ ಸಾಮ್ರಾಜ್ಯವನ್ನು ಸ್ಥಾಪಿಸುವ ಮೂಲಕ ಶೃಂಗೇರಿ ಪೀಠಾಧಿಪತಿಗಳ ಬಿರುದಾವಳಿಗೆ ‘ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ’ ಎಂಬ ಬಿರುದನ್ನು ತಂದುಕೊಟ್ಟಿದ್ದೂ ಅವರೇ. ಶೃಂಗೇರಿಯ ಈಗಿನ ಪೀಠಾಧಿಪತಿಗಳಿಗೆ ‘ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ’ ಎಂದು ಬಿರುದಾವಳಿಗಳಲ್ಲಿ ಹೇಳಿದರೂ ನಮಗೆ ಆ ಯತಿಶ್ರೇಷ್ಠರೇ ನೆನಪಾಗುತ್ತಾರೆ. ಮನಸ್ಸು ಪುಟಿದೇಳುತ್ತದೆ. ‘ವಿದ್ಯಾಶಂಕರ ಪಾದಪದ್ಮಾರಾಧಕ’ ಎಂದಾಗಲೂ ವಿದ್ಯಾತೀರ್ಥರ ಶಿಷ್ಯರಾಗಿ-ಭಾರತೀ ತೀರ್ಥರ ಕರಕಮಲ ಸಂಜಾತರಾಗಿದ್ದ ಅವರನ್ನೇ ಮನಸ್ಸು ನೆನೆಯುತ್ತದೆ. ಮತ್ತಷ್ಟು ಓದು 
ರಾಜ್ಯ ಸರ್ಕಾರ ರಾಜ್ಯವನ್ನು ಏನು ಮಾಡಲು ಹೊರಟಿದೆ?
ಎಸ್.ಆರ್. ಅನಿರುದ್ಧ ವಸಿಷ್ಠ, ಭದ್ರಾವತಿ
ಜಿಲ್ಲಾ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯಲ್ಲಿ ಇನ್ನಿಲ್ಲದ ತಂತ್ರಗಾರಿಕೆ ಮಾಡಿ, ತಮ್ಮ ಪಕ್ಷಕ್ಕೇ ಅಧಿಕಾರ ಬರುವಂತೆ ಮಾಡಿಕೊಂಡಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಈಗ್ಗೆ ಕೆಲವು ತಿಂಗಳ ಹಿಂದೆ ಪಂಚಾಯತ್ರಾಜ್ ಕಾಯ್ದೆಗೆ ತಿದ್ದುಪಡಿ ತಂದು ಜಿಪಂ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿದೆ.ಇದರ ಪರಿಣಾಮ ಈಗ ಅಧ್ಯಕ್ಷರಾಗುವವರಿಗೆ ಮಾಸಿಕ ೩೫ ಸಾವಿರ ವೇತನ, ಆತಿಥ್ಯ ಭತ್ಯೆ ೨ ಲಕ್ಷ, ಮನೆ ಬಾಡಿಗೆಗೆ ಮಾಸಿಕ ೮೦ ಸಾವಿರ, ಮನೆ ನಿರ್ವಹಣೆಗೆ ೨೦ ಸಾವಿರ, ತಿಂಗಳಿಗೆ ೧ ಸಾವಿರ ಲೀಟರ್ ಡೀಸೆಲ್, ರೈಲು ಹಾಗೂ ವಿಮಾನ ಪ್ರಯಾಣ ದರ, ದಿನ ಭತ್ಯೆ ೨ ಸಾವಿರ, ವಸತಿ ಗೃಹ ಭತ್ಯೆ ೫ ವರ್ಷಕ್ಕೆ ೧೦ ಲಕ್ಷ ದೊರೆಯುತ್ತಿದೆ. ಇದರೊಂದಿಗೆ ಅಧ್ಯಕ್ಷರಿಗೆ ಗೂಟದ ಕಾರು, ಚಾಲಕ, ಪೊಲೀಸ್ ಭದ್ರತೆ ಸಹ ಲಭ್ಯವಾಗಲಿದೆ. ಇದು ನೇರವಾಗಿ ಅವರಿಗಾಗಿ ವೆಚ್ಚ ಮಾಡುವ ಲೆಕ್ಕವಾದರೆ, ಪರೋಕ್ಷವಾಗಿ ಇನ್ನು ಲಕ್ಷಗಟ್ಟಲೆ ಇವರಿಗಾಗಿ ಸರ್ಕಾರ ವ್ಯಯ ಮಾಡುತ್ತದೆ. ಮತ್ತಷ್ಟು ಓದು 
ಕನ್ನಡ ಎನೆ ಕಿವಿ ನಿಮಿರಬೇಕಿರುವುದು ಪರರದ್ದು!
-ಸಂಕೇತ್ ಡಿ ಹೆಗಡೆ, ಸಾಗರ
ಕೋರಾ ಅಂತ ಒಂದು ಸಾಮಾಜಿಕ ಜಾಲತಾಣವಿದೆ. ಮೊನ್ನೆ ಹೀಗೆ ಜಾಲಾಡುತ್ತಿದ್ದಾಗ ಒಂದು ಭಲೇ ಬುದ್ಧಿವಂತಿಕೆಯ ಪ್ರಶ್ನೆ ಎದುರಾಯಿತು. ಪುಣ್ಯಾತ್ಮನೊಬ್ಬ ಬೆಂಗಳೂರಿನ ರಸ್ತೆಯೊಂದರ ಮೇಲೆ ಕಾರಿನಲ್ಲಿ ಕುಳಿತು ಪೋಸ್ಟ್ ಮಾಡಿದ್ದು. “ನಾನೀಗ ಬೆಂಗಳೂರಿನಲ್ಲಿದ್ದೇನೆ. ಕರ್ನಾಟಕ ಇಲ್ಲಿಂದ ಎಷ್ಟು ಕಿಲೋಮೀಟರ್ ಪ್ರಯಾಣಿಸಿದರೆ ಸಿಗುತ್ತೆ” ಅಂತ! ಹಾಗೆ ಕೇಳಿದವನ ಕಂಡು ಮತ್ತೊಬ್ಬ ಉತ್ತರ ಬರೆದಿದ್ದ. “೧೦೮ಕ್ಕೆ ಕರೆಮಾಡಿ ’ನಾನು ಬೆಂಗಳೂರಿನಲ್ಲಿದ್ದೇನೆ, ನನಗೆ ಕರ್ನಾಟಕಕ್ಕೆ ಕರೆದುಕೊಂಡುಹೋಗಿ’ ಅಂತ ಹೇಳಿ. ಅವರು ವಿಲ್ಸನ್ ಗಾರ್ಡನ್ ಅನ್ನುವ ಸ್ಥಳದಲ್ಲಿರುವ ನಿಮ್ಹಾನ್ಸ್ ಅನ್ನುವ ಕಟ್ಟಡದ ಬಳಿ ಇಳಿಸುತ್ತಾರೆ” ಅಂತ. ಇವರ ಪ್ರಶ್ನೋತ್ತರಗಳ ನೋಡಿ ಉಕ್ಕಿಬಂದ ನಗು, “ತಪ್ಪು ಅವನದಲ್ಲ” ಎಂದು ಅನಿಸಿದಾಗ ಮುಚ್ಚಿಕೊಂಡು ಹಿಂದೆಹೋಗಿಬಿಟ್ಟಿತು. ಎಂತಹ ಸ್ಥಿತಿಗೆ ಬೆಂಗಳೂರನ್ನು ತಂದಿಟ್ಟುಬಿಟ್ಟಿದ್ದೇವೆ ಅನ್ನುವುದು ನೆನಪಾಗಿ ಹೃದಯದ ಒಂದು ಮೂಲೆಯಲ್ಲಿರುವ ಭಾಷಾಭಿಮಾನಕ್ಕೆ ಅತೀವ ವೇದನೆಯಾಯಿತು. ಪಾಪ ಆ ಕಾರಿನವನದೇನು ತಪ್ಪು? ಬೆಂಗಳೂರಿನ ಗಾಳಿಯನ್ನು ಪ್ರಥಮ ಬಾರಿಗೆ ಕುಡಿಯುತ್ತಿರುವ ಯಾವನಿಗೆ ಕರ್ನಾಟಕದ “ರಾಜಧಾನಿ”ಯ ಗಾಳಿ ಕುಡಿದ ಅನುಭವವಾಗುತ್ತೆ? ಅವನೋ ಕನ್ನಡಿಗರ ನಾಡಾಗಿರುವ, ಕನ್ನಡವನ್ನು ಉಸಿರಾಗಿಸಿಕೊಂಡಿರುವ, ಕನ್ನಡತನದ ಬೀಡಾಗಿರುವ ಪ್ರದೇಶವೊಂದು ಸಿಕ್ಕಾಗ ಇಳಿದುಕೊಂಡುಬಿಡೋಣ ಅಂದುಕೊಂಡಿದ್ದ. ಅವನಿಗೇನು ಗೊತ್ತು, “ದಿಸ್ ಇಸ್ ಕರ್ನಾಟಕಾಸ್ ಕ್ಯಾಪಿಟಲ್, ಫಾರ್ ಯು” ಅಂತ. ಬೆಂಗಳೂರು ಕರ್ನಾಟಕದಲ್ಲಿದೆ, ಅದೇ ಅದರ ರಾಜಧಾನಿ ಅಂತ ಅವನಿಗೆ ಗೊತ್ತಿಲ್ಲದಿರುವ ಅವನ ಸಾಮಾನ್ಯ ಜ್ನಾನಕ್ಕೆ ವಿಷಾದಿಸೋಣ. ಆದರೆ ಅವನಿಗೆ ಬೆಂಗಳೂರಿನಲ್ಲಿದ್ದರೂ ಇದು ಕರ್ನಾಟಕವೆನ್ನುವುದು ಗೊತ್ತಾಗದ ಮಟ್ಟದಲ್ಲಿ ನಾವು ಬೆಂಗಳೂರನ್ನು ಕಾಪಾಡಿಕೊಂಡಿದ್ದೇವೆ ಎಂಬ ಕಟುವಾಸ್ತವಕ್ಕೆ, ಕೇವಲ ವಿಷಾದಿಸಿದರೆ ಸಾಕೇನು? ಮತ್ತಷ್ಟು ಓದು 
ಈ ಗೆಲುವು ಮತ್ತೊಂದು ಸೋಲಿಗೆ ಮುನ್ನುಡಿಯಾಗದಿರಲಿ ರಾಘವೇಶ್ವರರೇ….
– ಕೆ ಎಸ್ ರಾಘವೇಂದ್ರ ನಾವಡ
ಅಂತೂ ಇಂತು ಎರಡು ವರುಷಗಳ ಹಿಂದೆ ಹೋಗಿದ್ದ ಹಿಂದೂಗಳ ಮರ್ಯಾದೆ ಮೊನ್ನೆ ವಾಪಾಸು ಬಂದಿತು. ರಾಘವೇಶ್ವರರು ಮತ್ತೊಂದು “ಅಂತರಿಕ ಯುದ್ಧ” ಗೆದ್ದಿದ್ದಾರೆ!! ಏಕೆ0ದರೆ ಬಾಹ್ಯ ವೈರಿಗಿ0ತಲೂ ಆಂತರಿಕ ವೈರಿಯನ್ನು ಗೆಲ್ಲುವುದು ಬಹಳ ಕಷ್ಟ! ಅಂದ ಮೇಲೆ ನಮ್ಮ ರಾಘವೇಶ್ವರ ಗೆಲುವೇನು ಸಾಮಾನ್ಯವೇ? ಏಕೆಂದರೆ ರಾಘವೇಶ್ವರರ ವಿರುದ್ಧ ಹಿಂದಿನ0ತೆ ಯುದ್ದ ಸಾರಿದ್ದು ಬೇರಾರು ಅಲ್ಲ! ಅವರ ಸುತ್ತು ಬಳಗದಲ್ಲಿನ ಹಿತಶತ್ರುಗಳೇ!! ಬ್ರಾಹ್ಮಣರೇ!, ಹಿಂದೂ ಸಂಘಟನೆಗಳೇ! ಇವರೊಂದಿಗೆ ಸಾರಿಗೆ ಒಗ್ಗರಣೆ ಹಾಕುವಂತೆ ಈ ಬಳಗಕ್ಕೆ ಬೇರೆಯವರ ಸಾಥ್ ಇತ್ತಷ್ಟೇ ! ಹಿಂದೂಗಳು ಹಿಂದೂಗಳ ಬೆಳವಣಿಗೆಯನ್ನು ಸಹಿಸಲಾರರು ಎಂಬುದಕ್ಕೆ ಈ ಹಗರಣ ಮತ್ತೊಂದು ಉದಾಹರಣೆಯಷ್ಟೇ!! ಮತ್ತಷ್ಟು ಓದು 
ಕಾಂಗ್ರೆಸ್ ಮುಕ್ತ ಸುಳ್ಯದಲ್ಲಿ ಅರಳಿದ ಕಮಲ
– ತಾರನಾಥ ನಡುಮನೆ
ಸುಳ್ಯ- ಇಂದು ಇದು ರಾಜಕೀಯವಾಗಿ ದಕ್ಷಿಣಕನ್ನಡಕ್ಕೆ ಸೇರಿದರೂ, ಇನ್ನೂ ಕೊಡಗಿನ ಕೆಲವು ಸಂಪ್ರದಾಯವನ್ನು ಉಳಿಸಿಕೊಂಡು ಬಂದ ಪ್ರದೇಶ. ಕರ್ನಾಟಕದ ಪ್ರಮುಖ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವನ್ನು ಹೊಂದಿರುವ ತಾಲೂಕು.
ಸುಳ್ಯ ಪರಿಸರ ಮಂಗಳೂರಿನಂತೆ ಸಮತಟ್ಟಾಗಿರದೆ , ಕೊಡಗಿನಂತೆ ಸಣ್ಣ ಬೆಟ್ಟ-ಗುಡ್ಡ ವನ್ನು ಹೊಂದಿರೋ ಪ್ರದೇಶ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಹಸಿರು ಸಿರಿಯಲ್ಲಿ ಮಲಗಿರುವ ಊರು. ಇಲ್ಲಿನ ಜನ ಸ್ವಾಭಿಮಾನಿಗಳು , 1837 ರಲ್ಲಿ ನಡೆದ ಅಮರ ಸುಳ್ಯದ ರೈತ ದಂಗೆ ಇದಕ್ಕೆ ಸಾಕ್ಷಿ. ಅಂದು ಕಂದಾಯ ಪಾವತಿ ಹಾಗೂ ಕೊಡಗಿನ ಅರಸ ಚಿಕ್ಕವೀರರಾಜೇಂದ್ರನ ಪದಚ್ಯುತಿ ಕಾರಣಕ್ಕಾಗಿ ತಮ್ಮನಾಳುತ್ತಿದ್ದ ಬ್ರಿಟಿಷರ ವಿರುದ್ದ ದಂಗೆ ಎದ್ದ ರೈತರು ಮಂಗಳೂರಿಗೆ ಮುತ್ತಿಗೆ ಹಾಕಿದ್ದರು. ಮೊದಲು ಮಂಗಳೂರನ್ನು ಗೆದ್ದರೂ ನಂತರ ಆಂಗ್ಲರಿಗೆ ಬಿಟ್ಟು ಕೊಡಬೇಕಾಯಿತು.
ಕನ್ನಡನಾಡಿನ ಅನರ್ಘ್ಯ ರತ್ನಗಳು
– ರೋಹಿತ್ ಚಕ್ರತೀರ್ಥ
ನಮ್ಮ ನಾಡು ಕವಿಪುಂಗವರಿಗೆ, ಸಮಾಜಸುಧಾರಕರಿಗೆ, ಶಾಸ್ತ್ರಕೋವಿದರಿಗೆ ನೆಲೆ ಕೊಟ್ಟ ಪುಣ್ಯಭೂಮಿ. ಇಲ್ಲಿ ಶತಶತಮಾನಗಳಿಂದ ಅನೇಕಾನೇಕ ಸಂತರು, ಪ್ರಾಜ್ಞರು, ವಿಚಾರವಾಧಿಗಳು ಆಗಿಹೋಗಿದ್ದಾರೆ. ಈಗಿನ ಇಪ್ಪತ್ತೊಂದನೇ ಶತಮಾನದಲ್ಲೂ ಅಂತಹ ಪುಣ್ಯಪುರುಷರು ಮತ್ತೆಮತ್ತೆ ನಮ್ಮ ಈ ಕರುನಾಡಿನಲ್ಲಿ ಹುಟ್ಟಿಬರುತ್ತಲೇ ಇರುವುದು ನಮ್ಮೆಲ್ಲರ ಪೂರ್ವಜನ್ಮದ ಸುಕೃತ ಎಂದೇ ತಿಳಿಯಬೇಕು. ಇಂದಿನ ಈ ಸುದಿನದಂದು ಅಂತಹ ಕೆಲ ಪುಣ್ಯಪುರುಷ/ಮಹಿಳೆಯರನ್ನು, ಸಮಾಜದ ಚಿಂತನೆಯ ಧಾಟಿಯನ್ನೇ ಬದಲಾಯಿಸಬಲ್ಲ ಪ್ರವರ್ತಕರನ್ನು ನೆನೆಯೋಣ.
ಪ್ರೊ. ಭಗ್ವಂತ – ಇವರೊಬ್ಬ ಸಮಾಜಸುಧಾರಕ ಕಮ್ ಪಂಡಿತ ಕಮ್ ವಿಚಾರವಾದಿ ಕಮ್ ಜಾತ್ಯತೀತ ಕಮ್ ಇನ್ನೇನೇನೋ ಆಗಿರುವ ಪುಣ್ಯಪುರುಷರು. ಇವರು ಜಗತ್ತಿನ ಉಳಿದೆಲ್ಲಾ ದೇಶಗಳನ್ನು ಬಿಟ್ಟು ನಮ್ಮ ಭರತಖಂಡವನ್ನು, ಅದರಲ್ಲೂ ಕರ್ನಾಟಕವನ್ನು ತನ್ನ ಅವತಾರಕ್ಕಾಗಿ ಆರಿಸಿಕೊಂಡದ್ದೇ ನಮ್ಮೆಲ್ಲರ ಪುಣ್ಯ. ಭಗ್ವಂತ್ ಅವರು ತನ್ನ ದಿವ್ಯಚಕ್ಷುಗಳಿಂದ ಈ ಸಮಾಜದ ಧರ್ಮ-ಪಂಥಗಳಲ್ಲಿ ಅಡಗಿರುವ ವಾರೆಕೋರೆಗಳನ್ನು ಹೊರಗೆಳೆದುಹಾಕಿ ಸಮಾಜಕ್ಕೆ ಭರಿಸಲಾರದ ಸಹಾಯ ಮಾಡಿದ್ದಾರೆ. ಇವರಿಗೆ ಹಿಂದೂ ಧರ್ಮದ ಭಗವದ್ಗೀತೆ ಎಂದರೆ ತುಂಬಾ ಪ್ರೀತಿ. ಅದನ್ನು ನೂರಾರು ಸಲ ಪಾರಾಯಣ ಮಾಡಿ, ಇದುವರೆಗೆ ಪಂಡಿತವರೇಣ್ಯರಿಗೆ ಕಾಣದ ಅರ್ಥಗಳನ್ನು ಹುಡುಕಿ ಹೊರತೆಗೆದ ಸಾಹಸಿ ಅವರು. ಭಗ್ವಂತ್ ಭಾರತದಲ್ಲಲ್ಲದೆ ದೂರದ ಸೌದಿಯಲ್ಲೋ ವ್ಯಾಟಿಕನ್ನಲ್ಲೋ ಹುಟ್ಟಿ ಅಲ್ಲಿನ ಧರ್ಮಗ್ರಂಥಗಳನ್ನು ಈ ರೀತಿ ಹೊಗಳಿದ್ದರೆ ಅವರಿಗೆ ಅಲ್ಲಿನ ಮಠಾಧಿಪತಿಗಳು ಮತ್ತು ಸರ್ಕಾರಗಳು ಅಲೌಕಿಕ ಪ್ರಶಸ್ತಿಗಳನ್ನು ಕೊಟ್ಟು ಸನ್ಮಾನಿಸುತ್ತಿದ್ದವು. ಮತ್ತಷ್ಟು ಓದು 






