ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

25
ಫೆಬ್ರ

ದಹಿಸಬೇಕಾಗಿರುವುದು ಧರ್ಮಗ್ರಂಥವನ್ನಲ್ಲ ಸಂಕುಚಿತ ಮನಸ್ಸಿನ ತ್ಯಾಜ್ಯವನ್ನು!

– ಸಂದೇಶ್.ಎಚ್.ನಾಯ್ಕ್ ಹಕ್ಲಾಡಿ,ಕುಂದಾಪುರ    

ಭಗವದ್ಗೀತೆಯಾವ ದೇಶ ತನ್ನ ಸಂಸ್ಕೃತಿ,ಸಂಸ್ಕಾರ, ಆಚಾರ, ವಿಚಾರಗಳಂತಹ ಮೇರು ಮೌಲ್ಯಗಳ ಮೂಲಕ ಜಗತ್ತಿನ ಜನಮಾನಸದಲ್ಲಿ ವೈಶಿಷ್ಟ್ಯಪೂರ್ಣ ಹೆಗ್ಗಳಿಕೆಗೆ ಭಾಜನವಾಗಿದೆಯೋ ಅದೇ ದೇಶದಲ್ಲಿನ ಬಹುಪಾಲು ನಾಗರೀಕರ ಮನಸ್ಸಿನಲ್ಲಿ ಶಾಂತಿ, ಸಮಾಧಾನ, ನೆಮ್ಮದಿ ಹಾಗೂ ಆಹ್ಲಾದತೆಗಳನ್ನು ಪಸರಿಸುವ ಧರ್ಮ, ಧಾರ್ಮಿಕತೆಯ ಅಂಶಗಳೆಂದರೆ ಕೆಲವು ವಿಚಾರವಾಧಿಗಳು ಹಾಗೂ ಪ್ರಗತಿಪರರಿಗೆ ಅದೇಕೋ ಕಡು ದ್ವೇಷ. ದೇವರು, ಆರಾಧನೆ, ಪೂಜೆ, ಪುನಸ್ಕಾರ, ಧರ್ಮಗ್ರಂಥಗಳೆಂಬ ಶಬ್ಧಗಳು ಅಂತಹವರ ಕಿವಿಗೆ ಬೀಳುತ್ತಲೇ ಕಾದ ಕಬ್ಬಿಣವನ್ನು ಕಿವಿಗೆ ಸುರಿದಂತೆ ವರ್ತಿಸಲಾರಂಭಿಸುತ್ತಾರೆ. ತಮ್ಮ ವೈಚಾರಿಕ ಹೊಳಹುಗಳಷ್ಟೇ ಸಾರ್ವಕಾಲಿಕವೆಂಬ ತಪ್ಪುಗ್ರಹಿಕೆಯನ್ನೇ ಸದಾ ಸಮಾಜದ ಮೇಲೆ ಹೇರುವ ಹಾಗೂ ಇನ್ನುಳಿದವೆಲ್ಲವೂ ದೋಷಪೂರಿತ, ಅಪಾಯಕಾರಿಯೆಂಬಂತೆ ಬಿಂಬಿಸುವ ನಿರಂತರ ಪ್ರಯತ್ನದಲ್ಲಿ ತೊಡಗಿರುವವರು ಕಟ್ಟುವುದಕ್ಕಿಂತಲೂ ಕೆಡವುದು, ಒಡೆಯುವುದು ಹಾಗೂ ಬೀದಿಗೆ ಬೀಳಿಸಿ ವಿಕೃತ ಖುಷಿ ಪಡುವುದರಲ್ಲೇ ತಮ್ಮ ಉದ್ಧೇಶ ಈಡೇರಿಸಿಕೊಳ್ಳಬಲ್ಲೆವೆಂಬ ಅನಾರೋಗ್ಯಕರ ಮನಸ್ಥಿತಿಯೊಂದನ್ನು ಬೆಳೆಸಿಕೊಂಡಿದ್ದಾರೆ ಹಾಗೂ ಅದನ್ನು ಒತ್ತಾಯಪೂರ್ವಕವಾಗಿ ಸಮಾಜದ ಮೇಲೆ ಹೇರುವ ವಿಫಲ ಯತ್ನದಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಒಂದು ಭಾಗವೇ ‘ಭಗವದ್ಗೀತೆ’ಗೆ ಬೆಂಕಿ ಇಡಲು ಮುಂದಾಗಿರುವ ಆಕ್ರಮಣಕಾರಿ ಮನೋಪ್ರವೃತ್ತಿಯ ದುರಹಂಕಾರಿ ವರ್ತನೆ.

ಸಿಕ್ಕ ವೇದಿಕೆಯ ಘನತೆ ಗಾಂಭೀರ್ಯತೆಗೆ ನ್ಯಾಯ ಒದಗಿಸದೆ ತಮ್ಮ ವೈಯಕ್ತಿಕ ಅಸ್ತಿತ್ವ ಹಾಗೂ ವೈಚಾರಿಕ ಧೋರಣೆಯ ಚಲಾವಣೆಯನ್ನು ಕಾಯ್ದುಕೊಳ್ಳಲೋಸುಗ ಸಮಾಜೋದ್ಧಾರದ ಸೋಗು ತೊಟ್ಟು ಸದಾ ಅನ್ಯರ ಭಾವನೆಗಳನ್ನು ಅಪಮಾನಿಸುತ್ತಾ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುವವರ ವರ್ತನೆಯಲ್ಲಿ ಢಾಳಾಗಿ ಗೋಚರಿಸುವುದು ವಿವೇಕ ಹಾಗೂ ವಿವೇಚನೆಗಳ ಕೊರತೆ. ಈ ಅಪಭ್ರಂಶ ವರ್ತನೆಯನ್ನು ಅನುಮೋದಿಸುವ, ಬೆಂಬಲಿಸುವ ಸಣ್ಣ ಹಿಂಬಾಲಕರ ಗುಂಪು ವೇದಿಕೆ ಮುಂದಿದ್ದರಂತೂ ಮುಗಿದೇ ಹೋಯಿತು. ಅವರ ಮಾತು, ಕೃತಿಗಳ ಮೇಲಿನ ಸ್ಥಿಮಿತವನ್ನೇ ಕಳೆದುಕೊಳ್ಳುತ್ತಾರೆ. ಆ ಮೂಲಕ ತಮ್ಮಲ್ಲಡಗಿರುವ ಅಸಹಿಷ್ಣುತೆ, ಸಂಕುಚಿತತೆಗಳನ್ನು ಮತ್ತೆ ಮತ್ತೆ ಜಾಹೀರುಗೊಳಿಸುತ್ತಾರೆ.
ಮತ್ತಷ್ಟು ಓದು »

6
ಜನ

ಪ್ರತೀ ಬಾರಿಯೂ ಹಿಂದೂ ಧರ್ಮವೇ ವಿಮರ್ಷೆಗೊಳಪಡಬೇಕೇ?

– ಲಕ್ಷ್ಮೀಶ ಜೆ.ಹೆಗಡೆ

Ganeshaಪೇಷಾವರದಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಭಯೋತ್ಪಾದಕರು ಶಾಲೆಯ ಮೇಲೆ ದಾಳಿ ನಡೆಸಿ ಅಮಾಯಕ ಮಕ್ಕಳ ಮಾರಣ ಹೋಮ ನಡೆಸಿದಾಗ ನಮ್ಮಲ್ಲಿನ ಕೆಲವು ವಿಚಾರವಾದಿಗಳಿಗೆ ಅನ್ನಿಸಿದ್ದು ಧರ್ಮಗ್ರಂಥಗಳ   ನಿಷ್ಕರ್ಷೆಯಾಗಬೇಕೆಂದು.ಅದರಲ್ಲೂ ವಿಶೇಷವಾಗಿ ‘ಹಿಂಸೆಗೆ ಪ್ರಚೋದನೆ’ ಕೊಡುವ ಭಗವದ್ಗೀತೆಯ ವಿಮರ್ಷೆಯಂತೂ ಆಗಲೇಬೇಕು.ಆಗ ಮಾತ್ರ ಜಗತ್ತು ಶಾಂತಿಯ ದಿನಗಳನ್ನು ನಿರೀಕ್ಷಿಸಬಹುದು.ಜಗತ್ತಿನ ಶಾಂತಿಗೆ ಭಂಗ ತರಲು ಪ್ರಮುಖ ಕಾರಣವಾಗಿರುವುದು ಇಸ್ಲಾಮಿಕ್ ಭಯೋತ್ಪಾದನೆ ಎಂಬುದು ಎಲ್ಲರಿಗೂ ಗೊತ್ತಿದ್ದರೂ ಪ್ರಾಮಾಣಿಕವಾಗಿ ವಿಮರ್ಷೆಗೊಳಪಡಬೇಕಾಗಿರುವುದು ಭಗವದ್ಗೀತೆಯಂತೆ.ಅದೇ ಸಮಯದಲ್ಲಿ ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವನ್ನಾಗಿಸುವ ಕುರಿತೂ ಚರ್ಚೆ ನಡೆಯುತ್ತಿರುವುದರಿಂದ ಅವರ ಮಾತುಗಳು ಸಾಂಧರ್ಬಿಕವೋ, ಕಾಕತಾಳೀಯವೋ ಎಂಬುದನ್ನು ಅವರುಗಳೇ ಹೇಳಬೇಕು.

ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವನ್ನಾಗಿ ಘೋಷಿಸಕೂಡದು ಎಂದಾದರೆ ಬೇರೆ ಯಾವ ಗ್ರಂಥವಾಗಬೇಕೆಂದು ಕೇಳಿದರೆ ನಮಗೆ ನಮ್ಮ ಸಂವಿಧಾನವೇ ಸಾಕು ಎನ್ನುತ್ತಾರೆ.ಸಂವಿಧಾನ ಎಂದಿಗೂ ಧಾರ್ಮಿಕ ಗ್ರಂಥವಾಗಲಾರದು. ಅದು ಎಲ್ಲ ಧರ್ಮಗಳನ್ನೂ ಮೀರಿದ್ದು.ಅದನ್ನು ಎಲ್ಲರೂ ಗೌರವಿಸಲೇಬೇಕು.ಜಗತ್ತಿನ ಇತರ ಅನೇಕ ರಾಷ್ಟ್ರಗಳೂ ತಮ್ಮದೇ ಆದ ಸಂವಿಧಾನವನ್ನು ಹೊಂದಿವೆ ಮತ್ತು ಅದನ್ನು ಗೌರವಿಸುತ್ತವೆ ಕೂಡಾ.ಆದರೆ ಆ ಇತರ ರಾಷ್ಟ್ರಗಳು ತಮ್ಮದೇ ಆದ ಧಾರ್ಮಿಕ ಮೌಲ್ಯ,ಧರ್ಮಗ್ರಂಥಗಳನ್ನು ಘೋಷಿಸಿ,ಪೋಷಿಸುತ್ತಿರುವಾಗ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಅದರದ್ದೇ ಆದ ಧಾರ್ಮಿಕ ಮೌಲ್ಯ,ರಾಷ್ಟ್ರೀಯ ಗ್ರಂಥ ಇರಬೇಡವೇ?ಅದು ಈ ದೇಶದ ಬಹುಸಂಖ್ಯಾತ ಹಿಂದೂಗಳ ಭಗವದ್ಗೀತೆಯಾದರೆ ಇತರ ಧರ್ಮಗಳ ಅಸ್ತಿತ್ವಕ್ಕೇನಾದರೂ ಧಕ್ಕೆ ಬರುತ್ತದೆಯೇ?ರಾಷ್ಟ್ರೀಯ ಗ್ರಂಥವಾಗಿ ಘೋಷಣೆಯಾದ ಕೂಡಲೇ ಕಡ್ಡಾಯವಾಗಿ ಎಲ್ಲರೂ ಭಗವದ್ಗೀತೆಯನ್ನು ಪಠಣ ಮಾಡಬೇಕು ಎಂಬ ಕಾನೂನನ್ನು ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜಾರಿಗೆ ತರಲು ಸಾಧ್ಯವೇ?ಇದನ್ನು ಅರ್ಥಮಾಡಿಕೊಳ್ಳದ ಕೆಲವರು ಭಗವದ್ಗೀತೆ,ಹಿಂದೂ ಧರ್ಮ,ಸನಾತನ ಧರ್ಮ ವಿಮರ್ಷೆಗೊಳಗಾಗಬೇಕೆಂದು ಕೂಗುತ್ತಿದ್ದಾರೆ.

ಮತ್ತಷ್ಟು ಓದು »

29
ಡಿಸೆ

ಮತಾಂತರ ಸರಿಯಾದರೇ ,ಮರುಮತಾಂತರವೇಕೆ ತಪ್ಪು?

– ರಾಕೇಶ್ ಶೆಟ್ಟಿ

Conversionಹೀಗೆ ಹತ್ತು ದಿನಗಳ ಹಿಂದೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಹತ್ತಿರ ಒಂದು ಜಾಹೀರಾತು ಓದಿದ್ದೆ.”೧೫ ಕಥೆಗಳು ನಿಮ್ಮ ಜೀವನವನ್ನೇ ಬದಲಾಯಿಸುವವು” ಅಂತ ಬರೆದಿತ್ತು.ಇದ್ಯಾವುದೋ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದ ಜಾಹೀರಾತು ಎಂದುಕೊಂಡೆ.ಆದರೆ,ಇತ್ತೀಚೆಗೆ ದಿನ ಪತ್ರಿಕೆಗಳ ಮುಖಪುಟದಲ್ಲೂ ದೊಡ್ಡದಾಗಿ ಇದೇ ಜಾಹೀರಾತು “ಅನುಭವಿಸಿ ಬದಲಾಯಿಸುವ ಶಕ್ತಿ – ೧೫ ಕಥೆಗಳು ನಿಮ್ಮ ಜೀವನವನ್ನು ಬದಲಾಯಿಸುವುದು” ಎಂದು ಕಾಣಿಸಲಾರಂಭಿಸಿತು. ಪ್ರತಿದಿನ ಜಾಹೀರಾತು ಕೊಡುವಂತದ್ದು ಈ ಪುಸ್ತಕದಲ್ಲಿ ಅಂತದ್ದೇನಿದೆ ಎಂದು ಓದುವ ಕೂತುಹಲವಾಗಿ ಓದಿದೆ.ಮೂರ್ನಾಲ್ಕು ಪುಟ ಓದಿದಂತೆ ಪುಸ್ತಕದ ಮುಂದಿನ ಪುಟಗಳಲ್ಲಿ ಏನಿರಬಹುದು ಮತ್ತು ಈ ಪುಸ್ತಕ ಓದಿದವರು ಏನಾಗಿ ಬದಲಾಗಬೇಕು ಎಂಬ ಉದ್ದೇಶವಿದೆಯೆಂದು ಖುದ್ದು ಅನುಭವಿಸಿದೆ!

ಆ ಪುಸ್ತಕದಲ್ಲಿ ಬಾಲಿವುಡ್ ನಟ ಜಾನಿಲಿವರ್,ನಟಿ ನಗ್ಮಾ ಇನ್ನೂ ಹಲವರು ತಮ್ಮ ತಮ್ಮ ಕತೆಗಳನ್ನು ಹೇಳಿ ಕೊಂಡಿದ್ದಾರೆ.ಈ ಪುಸ್ತಕದ ಸರಳ ಸಾರಾಂಶವೇನೆಂದರೆ,”ಬೈಬಲ್ ಮತ್ತು ಜೀಸಸ್” ಮಾತ್ರ ಸತ್ಯ ಮತ್ತು ಅವು ಮಾತ್ರವೇ “ಪಾಪಿ”ಗಳಾದ ಮನುಷ್ಯ ಬದುಕಿನ ಬಿಡುಗಡೆಯ ಹಾದಿ ಎಂಬುದು!.ಅದೊಂದೇ ಮಾತ್ರ ಸತ್ಯವೆಂದಾದರೆ,ಉಳಿದ ರಿಲಿಜನ್ನುಗಳು, ಸಂಪ್ರದಾಯಗಳು ಮತ್ತು ಭಿನ್ನ ಹಾದಿಗಳೆಲ್ಲವೂ ಸುಳ್ಳು ಅಂತಾಯಿತಲ್ಲ! ಈ ಪುಸ್ತಕದ ಉದ್ದೇಶವನ್ನು ಇನ್ನೂ ಸರಳ ಮಾಡುವುದಾದರೆ ಅಥವಾ ಸಾಮಾನ್ಯಜನರ ಭಾಷೆಯಲ್ಲಿ ಹೇಳುವುದಾದರೆ,ಜನರನ್ನು ಕ್ರಿಸ್ತ ಮತಕ್ಕೆ ಬನ್ನಿ ಎಂದು ಕರೆಯುವ ಮತಾಂತರದ ಹೊಸ ತಂತ್ರವಷ್ಟೇ.ಈ ಬಗ್ಗೆ ಯಾವ ಮೀಡಿಯಾಗಳು,ಯಾವ ಸೆಕ್ಯುಲರ್ ನಾಯಕನೂ ಅಬ್ಬರಿಸಿ ಬೊಬ್ಬಿರಿಯಲಿಲ್ಲ,ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಎಂದು ಮೊಸಳೆ ಕಣ್ಣೀರೂ ಸುರಿಸಲಿಲ್ಲ.

ಮತ್ತಷ್ಟು ಓದು »

26
ಡಿಸೆ

ಭಗವದ್ಗೀತೆಯ ಕುರಿತ ಪರಕೀಯ ನಿರೂಪಣೆಗಳು/ನಿರ್ಣಯಗಳು…!

-ಡಾ. ಪ್ರವೀಣ್ ಟಿ. ಎಲ್.

ಉಪನ್ಯಾಸಕರು, ಕುವೆಂಪು ವಿಶ್ವವಿದ್ಯಾನಿಲಯ

ಭಗವದ್ಗೀತೆಭಗವದ್ಗೀತೆಯು ಸದಾ ಚರ್ಚೆಯಲ್ಲಿರುವ ವಸ್ತುವಿಷಯ. ಅದನ್ನು ಶಾಲೆಯಲ್ಲಿ ಭೋದಿಸುವ ಸಲುವಾಗಿ ಕಳೆದ ಬಾರಿ ಚರ್ಚೆಯಾಗಿತ್ತು. ಪ್ರಸ್ತುತ ಕೇಂದ್ರ ಸರ್ಕಾರ ಅದನ್ನೊಂದು ರಾಷ್ಟ್ರೀಯ ಗ್ರಂಥ ಮಾಡುವ ಆಶಯ ವ್ಯಕ್ತಪಡಿಸಿದ ಕಾರಣಕ್ಕಾಗಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಹಲವು ಲೇಖನಗಳು ಪ್ರಜಾವಾಣಿಯಲ್ಲಿ ಪ್ರಕಟವಾಗುತ್ತಲೇ ಇವೆ. ಮುಖ್ಯವಾಗಿ ಪ್ರಜಾವಣಿಯ ‘ಸಂಗತ’ದಲ್ಲಿ ಪ್ರಕಟವಾದ ಪ್ರೊ. ಭಗವಾನ್‍ರ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಈ ಬರಹ. ಹಾಗೆಂದು ಭಗವದ್ಗೀತೆ ರಾಷ್ಟೀಯ/ಧರ್ಮ ಗ್ರಂಥವಾಗಬೇಕೆಂಬ ಆಶಯ ನನ್ನದಲ್ಲ. ಬದಲಾಗಿ ‘ಭಗವದ್ಗೀತೆಯು ಜಾತಿವ್ಯವಸ್ಥೆಯನ್ನು ಪ್ರತಿಪಾದಿಸುವ ಒಂದು ಅಪಾಯಕಾರಿ ಕೃತಿ’ ಎನ್ನುವ ಹಾಗೂ ‘ಧರ್ಮಗ್ರಂಥ’ ಮಾಡಬೇಕೆನ್ನುವ ಎರಡೂ ವಾದಗಳು ಹೇಗೆ ನಮಗೆ ಪರಕೀಯವಾಗಿವೆ ಎಂಬುದನ್ನು ತೋರಿಸುವುದು.

ಲೇಖಕರು ತಮ್ಮ ವಾದದ ಸಮರ್ಥನೆಗೆ ನೀಡಿದ ಅಂಶಗಳು ಭಗವದ್ಗೀತೆಯು ಜಾತಿವ್ಯವಸ್ಥೆಯನ್ನು ಪ್ರತಿಪಾದಿಸಿದೆ ಎಂಬುದನ್ನು ಸಾಭೀತುಪಡಿಸಲು ಯಶಸ್ವಿಯಾಗಿಲ್ಲ.

ಮತ್ತಷ್ಟು ಓದು »

18
ಡಿಸೆ

ಗೀತೆ ಅರ್ಥೈಸಿಕೊಳ್ಳಲು ತಯಾರಿಲ್ಲದವರ ವ್ಯರ್ಥ ವಿರೋಧ

– ಡಾ. ಬಿ.ಕೆ ಸುರೇಶ್,ಮಂಡ್ಯ

ಭಗವದ್ಗೀತೆಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥ ಮಾಡಬೇಕೆಂಬ ಪರ ವಿರೋಧದ ವಿಮರ್ಶೆಗಳಲ್ಲಿ “ದಾಯಾದಿಗಳ ಕಥನ ರಾಷ್ಟ್ರೀಯ ಗ್ರಂಥವಾಗಬೇಕೆ?” ಎಂದು ವಿಶ್ಲೇಷಿಸಿರುವ ಶ್ರೀ ವೆಂಕಟೇಶ್ ಕೆ ಜನಾದ್ರಿ ಅವರ ಆಲೋಚನೆ ವಿಚಿತ್ರವಾಗಿದೆ. ಕುರುಕ್ಷೇತ್ರ ಕದನದಲ್ಲಿ ಬುದ್ದ, ಕ್ರಿಸ್ತ, ಬಸವಣ್ಣ, ಗಾಂಧೀಜಿ ಮೊದಲಾದವರನ್ನೆಲ್ಲಾ ಎಳೆದು ತಂದು ಅವರೆಲ್ಲಾ ಇದ್ದಿದ್ದರೆ ಏನೇನು ಆಡುತ್ತಿದ್ದರು? ಏನೇನು ಸಂಭವಿಸುತ್ತಿತ್ತು? ಎಂಬುದನ್ನು ತಿಳಿಸಿದ್ದಾರೆ. ಖಂಡಿತವಾಗಿಯೂ ಕೃಷ್ಣನನ್ನು ಹೊರತುಪಡಿಸಿ ಬೇರೆ ಯಾರೇ ಇದ್ದಿದ್ದರೂ ಭಗವದ್ಗೀತೆ ಹುಟ್ಟುತ್ತಿರಲಿಲ್ಲ. ಅರ್ಜುನ ಉಳಿಯುತ್ತಲೂ ಇರಲಿಲ್ಲ. ಮಹಾಭಾರತದ ಅಸ್ತಿತ್ವವೇ ಇರುತ್ತಿರಲಿಲ್ಲ. ಗೀತೆ ಮತ್ತು ಕೃಷ್ಣನ ಮಹತ್ತ್ವ ಇರುವುದೇ ಅಲ್ಲಿ. ಭಗವದ್ಗೀತೆಯನ್ನು ಏನಕೇನ ವಿರೋಧಿಸಲೇ ಬೇಕೆಂಬ ಒಂದೇ ಒಂದು ಕಾರಣಕ್ಕೆ ಲೇಖಕರು ಕಾಲಧರ್ಮಕ್ಕನುಗುಣವಾಗಿ ಮಹಾಪುರುಷರು ಸಮಾಜವನ್ನು ಉದ್ದರಿಸಿದ್ದ ಸಂಗತಿಯನ್ನು ಮರೆತಿದ್ದಾರೆ. ಬುದ್ದನ ಕಾಲ ಮತ್ತು ಕಾಲಧರ್ಮವೇ ಬೇರೆ ಮತ್ತು ಬಸವಣ್ಣ ಕಾಲ ಮತ್ತು ಕಾಲಧರ್ಮವೇ ಬೇರೆ ಎಂಬ ಸಂಗತಿಯನ್ನು ಅವರು ಮರೆತಿದ್ದಾರೆ ಅಥವಾ ಮರೆತಂತೆ ನಟಿಸಿದ್ದಾರೆ. ಮಹಾಭಾರತ ಕಾಲದಲ್ಲಿ ಧರ್ಮವನ್ನು(ಪೂಜಾ ವಿಧಾನ ಎಂದು ಅರ್ಥೈಸಿಕೊಳ್ಳಬಾರದು) ಪ್ರತಿಪಾದನೆ ಮಾಡಬೇಕಾದ ವಿಧಾನ ಕೃಷ್ಣನದ್ದಾದರೆ ಬುದ್ದನ ಕಾಲದಲ್ಲಿ ಅದರ ವಿಧಾನ ಭೀನ್ನವೇ ಆಗಿರುತ್ತದಲ್ಲಾ. ನಮ್ಮ ಕಾಲದಲ್ಲಿ ಸ್ಲೇಟು ಹಿಡಿದು ಶಾಲೆಹೋಗುತ್ತಿದ್ದೆವು. ಈಗ ಮಕ್ಕಳು ಟ್ಯಾಬ್ಲಟ್ ಹಿಡಿದು ಹೋಗಲಾಗುತ್ತಿದೆ. ಹಾಗಾಗಿ ಸ್ಲೇಟೇ ಸರಿ ಇಲ್ಲ ಎನ್ನಲಾಗುತ್ತದೆಯೇ? ಬುದ್ದ ಮತ್ತು ಕೃಷ್ಣ ಇಬ್ಬರನ್ನೂ ಅವತಾರಿ ಪುರುಷರು ಎನ್ನುವ ನೆಲದಲ್ಲಿ ಅವೆರಡೂ ವಿಧಾನಗಳನ್ನು ನಮ್ಮ ದೇಶ ಒಪ್ಪಿದೆ. ಒಪ್ಪದೇ ಇರುವ ಮಾನಸಿಕತೆ ನಮ್ಮಲ್ಲಿ ಆರಂಭವಾಗಿದ್ದು ಕಮ್ಯುನಿಷ್ಟ ಚಿಂತನೆ ಸಮಾಜದಲ್ಲಿ ಪ್ರಚಾರಕ್ಕೆ ಬಂದ ಮೇಲಷ್ಟೆ. ತಮ್ಮ ಮೂಗಿನ ನೇರಕ್ಕೆ ವಾದಗಳನ್ನು ಮಂಡಿಸುವ ಇಂಥ ವಿಧಾನಗಳು ಪ್ರಚಲಿತಕ್ಕೆ ಬಂದಿರುವುದೂ ಕೂಡ ಕಮ್ಯುನಿಷ್ಟ್ ಚಿಂತನೆಯ ಪ್ರಚಾರದ ತರುವಾಯ.

ಮತ್ತಷ್ಟು ಓದು »

17
ಡಿಸೆ

ಭಾರತೀಯ ಸಂಸ್ಕೃತಿ,ಪರಂಪರೆಯ ಚೇತನವಾದ ಭಗವದ್ಗೀತೆ, ಕೇವಲ ದಾಯಾದಿಗಳ ಕಲಹವೇ..?

– ಎಸ್.ಎನ್.ಭಾಸ್ಕರ್‍, ಬಂಗಾರಪೇಟೆ

ಭಗವದ್ಗೀತೆಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವನ್ನಾಗಿ ಘೋಷಣೆ ಮಾಡುವ ಬಗ್ಗೆ ಪ್ರಸ್ತಾಪಿತವಾದ ಹಿನ್ನೆಲೆಯಲ್ಲಿ ದಿನಾಂಕ ೧೨-೧೨-೨೦೧೪ ರಂದು ಕನ್ನಡಪ್ರಭ ಪತ್ರಿಕೆಯಲ್ಲಿ “ದಾಯಾದಿಗಳ ಕಲಹ ರಾಷ್ಟ್ರೀಯ ಗ್ರಂಥವಾಗಬೇಕೆ?” ಎಂಬ ಶೀರ್ಷಿಕೆ ಅಡಿಯಲ್ಲಿ ಲೇಖನವೊಂದು ಪ್ರಕಟವಾಗಿತ್ತು.

ಭಗವದ್ಗೀತೆಯ ವ್ಯಾಪ್ತಿಯ ಬಗ್ಗೆ, ಮಹತ್ವದ ಬಗ್ಗೆ ಸೂಕ್ತವಾದ ಅರಿವು ಇಲ್ಲದೇ ಬರೆದಂತಹ ಈ ಲೇಖನಕ್ಕೆ ಪ್ರತಿಕ್ರಿಯೆ ನೀಡುವ ನಿಟ್ಟಿನಲ್ಲಿ ಈ ಕೆಳಗಿನ ಲೇಖನವನ್ನು ಬರೆಯಲಾಗಿದೆ.

—————————————————————————————————-

“ಭಗವದ್ಗೀತೆಯನ್ನು ಅಭ್ಯಸಿಸಿ, ಭಗವಂತನ ಈ ಸೃಷ್ಠಿಯ ಪರಿಕಲ್ಪನೆಯನ್ನು ತಿಳಿದ ಅರಿವಿನ ಮುಂದೆ ಜಗತ್ತಿನಲ್ಲಿ ಅಸ್ಥಿತ್ವದಲ್ಲಿರುವ ಸಮಸ್ತ ಅಂಶಗಳು ಗೌಣವೆನಿಸುತ್ತವೆ” – ಆಲ್ಬರ್ಟ್ ಐನ್‌ಸ್ಟೈನ್.

“ಜೀವನದಲ್ಲಿ ಸಂದೇಹಗಳು ನನ್ನ ಕಾಡಿದಾಗ, ದುಃಖ, ಭ್ರಮನಿರಸನಗಳು ಎದುರಾದಾಗ, ಯಾವುದೇ ಆಶಾಕಿರಣಗಳು ಗೋಚರಿಸದಿದ್ದಾಗ, ಭಗವದ್ಗೀತೆಯ ಕಡೆ ನಾನು ಮುಖಮಾಡುತ್ತೇನೆ, ಮರುಕ್ಷಣ ದುಃಖ ದುಮ್ಮಾನಗಳು ಕರಗಿ, ಮನಸ್ಸಿನನಲ್ಲಿ ವಿಶ್ವಾಸದ ಮಂದಹಾಸ ಮೂಡುತ್ತದೆ. ಭಗವದ್ಗೀತೆಯನ್ನು ಧ್ಯಾನಿಸುವ ವ್ಯಕ್ತಿಯು ನಿರಂತರ ಸುಖಿಯಾಗುತ್ತಾನೆ, ಪ್ರತಿನಿತ್ಯವೂ ಜೀವನದ ಹೊಸ ಹೊಸ ಅರ್ಥಗಳನ್ನು ತಿಳಿಯುತ್ತಾನೆ” – ಮಹಾತ್ಮಾ ಗಾಂಧಿ.

ಮತ್ತಷ್ಟು ಓದು »

6
ಡಿಸೆ

ರಾಮ ಜನ್ಮಭೂಮಿ/ಬಾಬರಿ ವಿವಾದ : ಭೂತಕಾಲದ ತಪ್ಪುಗಳು ಭವಿಷ್ಯಕ್ಕೆ ಭಾರವಾಗಬಾರದು

– ರಾಕೇಶ್ ಶೆಟ್ಟಿ

Ayodhya Issue and Unityಮುಂಬೈನಿಂದ ನಾನು ಬೆಂಗಳೂರಿಗೆ ಹೊರಟಿದ್ದ ಸೆಪ್ಟಂಬರ್ ೩೦,೨೦೧೦ರ ಗುರುವಾರದ ಆ ದಿನ ಉಳಿದ ದಿನಗಳಂತೆ ಇರಲಿಲ್ಲ.ಒಂದು ಬಗೆಯ ಕುತೂಹಲ,ಕಾತರ,ಆತಂಕಗಳು ಭಾರತದ ಬಹುತೇಕರಲ್ಲಿ ಮನೆ ಮಾಡಿದ್ದ ದಿನವದು.ಅಲಹಬಾದ್ ಉಚ್ಚ ನ್ಯಾಯಾಲಯ ಅಯೋಧ್ಯೆಯ “ರಾಮ ಜನ್ಮ ಭೂಮಿ/ಬಾಬರಿ ಮಸೀದಿ” ವಿವಾದದ ಕುರಿತು ತೀರ್ಪು ನೀಡುವ ದಿನವಾಗಿತ್ತದು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಹಳಷ್ಟು ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದವು,ಸೂಕ್ಷ್ಮ,ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಪಡೆಯ ಕಣ್ಗಾವಲಿತ್ತು.ಜನರ ಜೊತೆಗೆ ವಿಶೇಷವಾಗಿ ಟಿ.ಆರ್.ಪಿ ಮಾಧ್ಯಮಗಳು ಕೂಡ ಸಂಯಮದಿಂದ ವರ್ತಿಸಬೇಕು ಎನ್ನುವ ಮನವಿಗಳು ಸರ್ಕಾರದಿಂದಲೇ ಬರುತಿತ್ತು.ಮಧ್ಯಾಹ್ನ ೩.೩೦ರ ಸುಮಾರಿಗೆ ತೀರ್ಪು ಹೊರಬರಲಿದೆ ಎನ್ನುವ ಸುದ್ದಿಗಳು ಹರಿದಾಡುತಿದ್ದವು.ನನ್ನ ವಿಮಾನವಿದ್ದಿದ್ದು ಸಂಜೆಯ ವೇಳೆಗೆ.ಆದರೆ,ಬಾಬರಿ ಮಸೀದಿ ಧರಾಶಾಹಿಯಾದ ಮೇಲೆ ಭೀಕರ ದಂಗೆಗೆ ಸಾಕ್ಷಿಯಾಗಿದ್ದ ಮುಂಬೈನಲ್ಲಿ ತೀರ್ಪು ಹೊರಬಂದ ಮೇಲೆ ಏನಾದರೂ ಆಗಬಾರದ್ದು ಶುರುವಾದರೇ,ಅದಕ್ಕೂ ಮುಖ್ಯವಾಗಿ ನಾನು ಹೋಗಬೇಕಾದ ದಾರಿಯಲ್ಲೇ “ಅತಿ ಸೂಕ್ಷ್ಮ ಪ್ರದೇಶ”ಗಳು ಇದ್ದವಾದ್ದರಿಂದ,ಸೇಫರ್ ಸೈಡ್ ಎಂಬಂತೆ ತುಸು ಬೇಗವೇ ನಾನು ಮತ್ತು ನನ್ನ ಸಹುದ್ಯೋಗಿ ಕ್ಯಾಬ್ ಹತ್ತಿಕೊಂಡೆವು.

ಕ್ಯಾಬ್ ಹೊರಟಂತೇ,ಡ್ರೈವರ್ ಅನ್ನು ಮಾತಿಗೆಳೆದೆ.”ಇವತ್ತು ತೀರ್ಪು ಬರಲಿಕ್ಕಿದೆಯಲ್ಲ.ನಿಮಗೇನನ್ನಿಸುತ್ತದೆ,ಆ ಜಾಗ ಯಾರಿಗೆ ಸೇರಿಬೇಕು ನಿಮ್ಮ ಪ್ರಕಾರ?”.ಅವರು ನನ್ನತ್ತ ತಿರುಗಿ “ತಪ್ಪು ತಿಳಿಯಬೇಡಿ ಸರ್.ನಿಮ್ಮ ಪ್ರಶ್ನೆಯೇ ಸರಿಯಿಲ್ಲ.ಜಾಗ ಯಾರಿಗೆ ಸೇರಬೇಕು ಎನ್ನುವುದು ‘ಅಹಂ’ನ ಪ್ರಶ್ನೆಯಾಗುತ್ತದೆ.ಆ ಅಹಂ ಮುಂದೇ ಪ್ರತಿಷ್ಟೆ, ದ್ವೇಷವನ್ನಷ್ಟೇ ಹೊರಡಿಸುತ್ತದೆ.ಅಸಲಿಗೆ ಇದು “ನಂಬಿಕೆ”ಯ ಪ್ರಶ್ನೆ.ಈ ಸಮಸ್ಯೆಯ ಪರಿಹಾರವಾಗಬೇಕಿರುವುದು ಪರಸ್ಪರ ಸಂವಾದ,ಸಾಮರಸ್ಯ,ಶಾಂತಿಯ ಅನುಸಂಧಾನದಿಂದಲೇ ಹೊರತು, ಇದು ಸರ್ಕಾರ,ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ವಿಷಯವಲ್ಲ.ಆ ಜಾಗ ರಾಮ ಜನ್ಮಭೂಮಿಯೆಂಬುದು ಹಿಂದೂಗಳ ನಂಬಿಕೆಯಾಗಿದೆ.ಮೊಘಲ ಬಾಬರ್ ಆದೇಶಂತೆ ಅಲ್ಲಿದ್ದ ಮಂದಿರವೊಂದನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಿಸಲಾಗಿರುವ ವಾದವಿದೆಯಲ್ಲ ಸರ್ ಅದು ನಿಜವೇ ಆದರೆ,ಅಲ್ಲಿ ಮಂದಿರವೇ ನಿರ್ಮಾಣವಾಗಬೇಕು.ಯಾಕೆಂದರೆ ರಾಮ,ರಾಮಾಯಣ,ಕೃಷ್ಣ,ಮಹಾಭಾರತವೆಲ್ಲ ಈ ದೇಶದ ಜನರಿಗೆ ಕೇವಲ ಪುರಾಣಗಳಲ್ಲ.ಅವು ಜನರ ಜೀವನದ ಭಾಗಗಳು.ಹೀಗಿರುವಾಗ ಅಲ್ಲಿನ ಜನರ ನಂಬಿಕೆಗಳಿಗೆ ಬೆಲೆ ಕೊಟ್ಟು ಬಾಬರಿನಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದ.

ಮತ್ತಷ್ಟು ಓದು »

1
ಡಿಸೆ

ತುಳುನಾಡ ನಂಬಿಕೆಗಳು…

– ಭರತೇಶ ಆಲಸಂಡೆಮಜಲು

ತುಳುನಾಡುಬಾಳಿಗೊಂದು ನಂಬಿಕೆ ಎಂಬಂತೆ, ಈ ಬಾಹ್ಯ ಜಗತ್ತು ನಂಬಿಕೆಯ ತಲೆದಿಂಬುನಿಟ್ಟು ಮಲಗಿದೆ. ಈ ನಂಬಿಕೆಯಲ್ಲಿ ಎಲ್ಲವೂ ಶೂನ್ಯ ಆಕಾಶ ಅನಂತವಾದರೆ, ಅಣು ಪರಮಾಣುಗಳು ಎನೋ ಕತ್ತಲಲ್ಲಿ ತೇಲುವ ಸೂಕ್ಷ್ಮ ಜೀವಿ, ಆ ಆಗಾಧ ಶಕ್ತಿಯ ಕೊಲ್ಮಿಂಚು ಎಲ್ಲೋ ಹುಟ್ಟಿ ಶಕ್ತಿಯ ಅದುಮಿದ ಶೂನ್ಯ, ಸತ್ಯದ ಜಗದಲ್ಲಿ ನಾವೊಂದು ಭ್ರಾಮರಕ ನಿರ್ಮಿತಿಗಳು ಅದೇ ನಿರಾಕಾರ, ನಿರ್ಗುಣ, ನಿರಾಮಯ, ಆಗೋಚರ ಬ್ರಹ್ಮಾಂಡದ ಸ್ವರೂಪಗಳು ನಮ್ಮ ನಮ್ಮ  ಜ್ಞಾನದ ಅಳತೆಯೊಳಗೆ…. “ನೈಜ ಜಗತ್ತಿನಲ್ಲಿ ಬಣ್ಣಗಳೇ ಇಲ್ಲ, ವಾಸನೆಯೂ ಇಲ್ಲ, ಮೃದುತ್ವ ಕಾಠೀಣ್ಯಗಳು ಇಲ್ಲ, ಅವೆಲ್ಲ ಏನಿದ್ದರೂ ನಮ್ಮ ನಿಮ್ಮ ಮಿದುಳಿನಲ್ಲಿ ನಮ್ಮ ನಿಮ್ಮ ಜ್ಞಾನದಲ್ಲಿ” ಎಂದು ಪ್ರಸಿದ್ಧ ನರ ವಿಜ್ಞಾನಿ ನೋಬೆಲ್ ವಿಜೇತ ಸರ್ ಜಾನ್ ಐಕೆಲ್ಸ್ ಹೇಳಿದ್ದಾರೆ.

ನಮ್ಮ ಯೋಚನಾ ಲಹರಿಯ ಶೂನ್ಯ ಜಾಗಗಳಲ್ಲಿ ಈ ನಂಬಿಕೆಗಳು ಅಚ್ಚಳಿದು ನಿಂತಿದೆ ನಮ್ಮ ನಂಬಿಕೆಗಳೇ ಹಾಗೆ ಅದು ಪ್ರಕೃತಿಯ ಅರಾಧನೆಯಿಂದ ಹಿಡಿದು ಗುರು ಹಿರಿಯರ ಪೂಜನೆಯವರೆಗೆ ಅದರಲ್ಲೂ ಕರಾವಳಿ ಇವೂಗಳ ಗೂಡು, ಬೀಡು. ಹಲವಾರು ವೈಶಿಷ್ಟ, ವಿಶೇಷ, ಆಚರಣೆ, ಅರಾಧನೆ, ಪಾಲನೆ ಇವುಗಳಿಂದಾಗಿ ವಿಶ್ವವ್ಯಾಪ್ತಿಯಲ್ಲಿ ಛಾಪನ್ನು ಮೂಡಿಸಿದೆ.  ಎಲ್ಲರ ಮಂದ ದೃಷ್ಠಿ ಇತ್ತ ಕಡೆ ನೆಡುವಂತೆ ಮಾಡಿದೆ. ಇಲ್ಲಿನ ಆಚರಣೆ ಒಂದನ್ನು ಮೀರಿಸುವ ಇನ್ನೊಂದು ಪ್ರಬುದ್ಧವಾದದ್ದು. ಪ್ರಪಂಚದ ಬೇರೆ ಯಾವೂದೇ ಕೋಣೆಯಲ್ಲೂ ಅರಸಿ ಹುಡುಕಿದರೂ ಬಯಸಿ ಸಿಗಲಾರದು. ಯಾವುದೋ ಪೂವಾಗ್ರಹದ ನೆಲೆಯಲ್ಲಿ ತುಳುನಾಡು ತನ್ನ ಭವ್ಯ ಸಂಸ್ಕೃತಿಯ ಕಣಜದ ನೆಲೆಯಲ್ಲಿ ಇನ್ನೂ ಆಚರಣೆಗಳು ಉಳಿದು ನಡೆಯುತಿದೆ. ಒಂದಷ್ಟು ಜಿಜ್ಞಾಸೆ, ವಿಮರ್ಶೆಗಳಿಂದ ಮತ್ತಷ್ಟು ಪ್ರಚಾರವಾಗಿ ಇನ್ನಷ್ಟು ಗಟ್ಟಿಯಾಗಿ ತುಳುವರ ಮನಗಳಲ್ಲಿ ಅಗೆಲುಗಳ ರೂಪದಲ್ಲಿ ಭಾವುಕವಾಗಿ ಬೆಚ್ಚಗೆ ಕುಳಿತಿದೆ.

ಮತ್ತಷ್ಟು ಓದು »

27
ನವೆಂ

ಒಂದಿಡಿ ಜನಾಂಗಕ್ಕೆ ಕಂಟಕವಾದವರನ್ನು ವೈಭವೀಕರಿಸುವುದೇಕೆ?

– ಡ್ಯಾನಿ ಪಿರೇರಾ,ಹಳ್ಳಿಮೈಸೂರು

Frncis Xvierನ.16 ರ ಕನ್ನಡಪ್ರಭ ದಿನಪತ್ರಿಕೆಯಲ್ಲಿ ‘ಫ್ರಾನ್ಸಿಸ್ ಕ್ಸೇವಿಯರ್ ಪಾರ್ಥಿವ ಶರೀರ ಪ್ರದರ್ಶನಕ್ಕೆ ಅಪಸ್ವರ’ ಎಂಬ ಶೀರ್ಷಿಕೆ ಅಡಿಯಲ್ಲಿ ಸಂತನೆಂದು ಹೇಳಲಾಗುವ ಪ್ರಾನ್ಸಿಸ್ ಕ್ಸೇವಿಯರ್‍ರ ಬಗ್ಗೆ ವರದಿಯಾಗಿತ್ತು. ಆತನ ಪಾರ್ಥಿವ ಶರೀರ ನ.22 ರಿಂದ ಜ.4 ರ ವರೆಗೆ ಸಾರ್ವಜನಿಕ ದರ್ಶನಕ್ಕಿಡಲಾಗುತ್ತಿದೆ.

ಈ ನಡುವೆ ಈ ವಿವಾದಿತ ಸಂತನ ವಿಚಾರದಲ್ಲಿ ಆತನು ನಡೆಸಿದ ಮತಾಂತರದ ಕ್ರೌರ್ಯ ಹಾಗೂ ಮಾರಣಹೋಮ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದೂ ಈತ ಒಬ್ಬ ಮಹಾನ್ ಸಂತ ಎಂದು ಆತನನ್ನು ವೈಭವೀಕರಿಸುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಸಹಜವಾಗಿ ಏಳುತ್ತದೆ. ಭಾರತದ ಸಂತ ಪರಂಪರೆಗೂ ಪಾಶ್ಚತ್ಯ ಸಂತ ಪರಂಪರೆಗೂ ಅಜಗಜಾಂತರ ವ್ಯತ್ಯಾಸವಿದೆ. ಒಬ್ಬ ವ್ಯಕ್ತಿ ಆತ ಯಾವುದೇ ಜಾತಿಗೆ ಸೇರಿರಲಿ ಆತ ಮಾಡಿದ ಮಾನವತೆಯ ಸೇವೆಯನ್ನು ಅತ್ಯಂತ ಕೃತಜ್ಞತೆಯನ್ನು ಸ್ಮರಿಸಿ, ಆತನಿಗೆ ಸಂತ ಪದವಿ ನೀಡುವುದು ಈ ನೆಲದ ಪರಂಪರೆ. ಆದರೆ ಪಾಶ್ಚತ್ಯ ಜಗತ್ತಿನ ಸಂತ ಪದವಿಯನ್ನೇರಲು ಇಂಥಹ ಮಾನದಂಡವೇನಿಲ್ಲ ಎನಿಸುತ್ತದೆ!  ಒಬ್ಬ ವ್ಯಕ್ತಿ ತನ್ನ ಮತದ ಹಿತಕ್ಕೆ ಪೂರಕವಾಗಿ ನಡೆದು, ಇತರ ಮತಗಳ ಅವಹೇಳನ ಗೈದು ಇತರ ಮತೀಯರ ಮೇಲೆ ಮರಣ ಮೃದಂಗ ಬಾರಿಸಿದರೆ ಆತ ಶ್ರೇಷ್ಠನೆಂದು ಪರಿಗಣಿತವಾಗುತ್ತದೆ ಎನ್ನುವುದಕ್ಕೆ ಕ್ಸೇವಿಯರ್ ಸಂತ ಪದವಿ ಅಲಂಕರಿಸಿದ್ದೇ ಸಾಕ್ಷಿ ಎನ್ನಬೇಕಾಗುತ್ತದೆ. ಇನ್ನೊಂದು ಮತದ ನಂಬಿಕೆಗಳ ವಿರುದ್ಧ ನಡೆದುಕೊಂಡಾಗಲೂ ಅವನನ್ನು ಆರಾಧಿಸುವ ಮನಸ್ಥಿತಿ ಏರ್ಪಟ್ಟರೆ ಅತನನ್ನು ಯಾವ ಅರ್ಥದಲ್ಲಿ ಸಂತ ಎನ್ನ ಬಹುದು ಎನ್ನುವ ಪ್ರಶ್ನೆ ಸಹಜವಾಗಿ ಏಳುತ್ತದೆ. ಈ ಹಿನ್ನೆಲೆಯಲ್ಲಿ ಕ್ಸೇವಿಯರ್ ಒಬ್ಬ ಸಂತನೆಂದು ಕ್ರೈಸ್ತ ಸಮಾಜ ಒಪ್ಪಿಕೊಂಡರೂ ಮಾನವತೆಯ ನೆಲೆಗಟ್ಟಿನಲ್ಲಿ ಯೋಚಿಸುವ ಯಾವುದೇ ಜನಾಂಗ ಇದನ್ನು ಒಪ್ಪಲು ಸಾಧ್ಯವಾಗುವುದಿಲ್ಲ.
ಮತ್ತಷ್ಟು ಓದು »

14
ಸೆಪ್ಟೆಂ

ಧರ್ಮ ಮತ್ತು ಅಂಧತ್ವ

-ಡಾ ಅಶೋಕ್ ಕೆ ಆರ್.

World_Religionಆಗ ನಾನು ಕಲ್ಬುರ್ಗಿಯಲ್ಲಿ ಓದುತ್ತಿದ್ದೆ. ಗೆಳೆಯನೊಬ್ಬನನ್ನು ಕಾಣುವ ಸಲುವಾಗಿ ಕಲ್ಬುರ್ಗಿಯಿಂದ ಲಿಂಗಸೂರು ಕಡೆಗೆ ಹೋಗುವ ಬಸ್ಸನ್ನೇರಿದೆ. ದಾರಿ ಮಧ್ಯದಲ್ಲಿ ಕುಟುಂಬವೊಂದು ಬಸ್ಸಿನೊಳಗೆ ಬಂತು. ಮಗ, ಸೊಸೆ ಮತ್ತು ಅತ್ತೆ ಎಂಬುದು ಅವರ ಮಾತಿನಿಂದ ಅರಿವಾಗುತ್ತಿತ್ತು. ಅದು ಮುಸ್ಲಿಂ ಕುಟುಂಬವೆಂದು ತಿಳಿದಿದ್ದು ಬುರ್ಖಾ ಧರಿಸಿದ್ದ ಸೊಸೆಯ ಉಡುಪಿನಿಂದ. ಉತ್ತರ ಕರ್ನಾಟಕದ ಕಡೆ (ನಂತರದ ದಿನಗಳಲ್ಲಿ ಕರಾವಳಿ ಭಾಗದಲ್ಲೂ ಕಂಡಂತೆ) ಮುಸ್ಲಿಮರನ್ನು ಅವರ ಮಾತಿನ ದಾಟಿಯಿಂದ ಗುರುತು ಹಿಡಿಯಲಾಗುವುದಿಲ್ಲ ನಮ್ಮ ಹಳೆ ಮೈಸೂರು ಭಾಗದಲ್ಲಿ ಗುರುತಿಸುವಂತೆ, ಮತ್ತು ಬಹುತೇಕ ಎಲ್ಲ ಕನ್ನಡ ಚಿತ್ರಗಳಲ್ಲೂ ತೋರಿಸಿರುವಂತೆ. ಅಂದು ಬಸ್ಸೇರಿದ ಕುಟುಂಬದಲ್ಲಿ ಅತ್ತೆ ಉತ್ತರ ಕರ್ನಾಟಕದ ಕಡೆಯ ಸೀರೆಯನ್ನು ಉಟ್ಟಿದ್ದರು, ಸೊಸೆ ಬುರ್ಖಾಧಾರಿಯಾಗಿದ್ದರು.

ಕಳೆದೊಂದು ವಾರದಿಂದ ಅಂತರ್ಜಾಲ ತಾಣಗಳಲ್ಲಿ ಬುರ್ಖಾದ ಬಗೆಗಿನ ಚರ್ಚೆ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಮೇಲಿನ ಘಟನೆ ನೆನಪಾಯಿತು. ‘ನಾನು ವಿವಾದದ ವಿಷಯಗಳನ್ನು ಎತ್ತಿಕೊಂಡು ಮಾತನಾಡುತ್ತಿದ್ದೇನೋ ಅಥವಾ ನಾನು ಮಾತನಾಡಿದ್ದೆಲ್ಲವೂ ವಿವಾದವಾಗುತ್ತೋ ಗೊತ್ತಿಲ್ಲ’ ಎಂದೇ ಮಾತುಗಳನ್ನಾರಂಭಿಸಿದ್ದ ದಿನೇಶ್ ಅಮೀನ್ ಮಟ್ಟುರವರ ಮಾತುಗಳು ಮತ್ತೆ ಚರ್ಚೆಗಳೊಂದಷ್ಟನ್ನು ಹುಟ್ಟುಹಾಕಿವೆ. ಪತ್ರಕತ್ರ ಬಿ.ಎಂ.ಬಷೀರ್‍ರವರ “ಬಾಡೂಟದ ಜೊತೆ ಗಾಂಧಿ ಜಯಂತಿ” ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ. ಅವರು ಮೋದಿಯ ಬಗ್ಗೆ, ಮಾಧ್ಯಮದ ಬಗ್ಗೆ, ಮಂಗಳೂರಿನ ಕೋಮು ಸಾಮರಸ್ಯದ ಬಗ್ಗೆ, ಆ ಕೋಮು ಸಾಮರಸ್ಯದಿಂದಲೇ ಹುಟ್ಟಿದ ಕೋಮುವಾದತನದ ಬಗ್ಗೆ, ಕೋಮುವಾದಿಗಳ ಅಟ್ಟಹಾಸದ ನಡುವೆಯೇ ನಿಜ ಜಾತ್ಯತೀತ ಮನೋಭಾವದ ಧರ್ಮಸಹಿಷ್ಣುಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ಕೊನೆಗೆ ಅವರ ಭಾಷಣ ಚರ್ಚೆಗೊಳಗಾಗುತ್ತಿರುವುದು ಅವರು ಪ್ರಸ್ತಾಪಿಸಿದ ಬುರ್ಖಾ ಪದ್ಧತಿಯ ಬಗೆಗೆ ಮಾತ್ರ! ಅವರು ಬುರ್ಖಾ ವಿಷಯಕ್ಕೆ ಬರುವುದಕ್ಕೆ ಮೊದಲು ಮುಸ್ಲಿಂ ಸಮಾಜದ ಒಳಬೇಗುದಿಗಳನ್ನು ಸಮಾಜದ ಮುಂದೆ ತೆರದಿಡುವ ಕೆಲಸವನ್ನು ಬೋಳುವಾರ ಮೊಹಮದ್, ಸಾರಾ ಅಬೂಬಕ್ಕರ್, ಫಕೀರ್ ಮೊಹಮದ್ ಕಟ್ಪಾಡಿ ಸಮರ್ಥವಾಗಿ ನಿರ್ವಹಿಸಿದ್ದಾರೆ. ಅವರು ಹಾಕಿದ ದಾರಿಯಲ್ಲಿ ಜ್ಯೋತಿಯನ್ನಿಡಿದು ನಡೆಯುವವರ ಕೊರತೆ ಎದ್ದು ಕಾಣುತ್ತಿದೆ ಎಂಬ ಮಾತುಗಳನ್ನು ಹೇಳಿದ್ದಾರೆ. ಬಿ.ಎಂ.ಬಷೀರ್ ಸ್ವಲ್ಪ ಸಾಫ್ಟ್ ಕಾರ್ನರಿನಲ್ಲಿ ಬರೆಯೋದು ಜಾಸ್ತಿ. ಮುಸ್ಲಿಂ ಸಮುದಾಯದ ತಲ್ಲಣಗಳು ಈ ಪುಸ್ತಕದಲ್ಲಿ ಕಾಣಸಿಗುತ್ತಿಲ್ಲ ಎಂದು ಸಲಹೆಯನ್ನು ಕೊಟ್ಟಿದ್ದಾರೆ. ಮುಸ್ಲಿಮನಾದವನು ಆ ಸಮುದಾಯದ ತಲ್ಲಣಗಳನ್ನು ಸಮರ್ಥವಾಗಿ ಬಿಂಬಿಸಲು ಸಾಧ್ಯ ಎಂಬುದು ಎಷ್ಟು ಸತ್ಯವೋ ಮುಸ್ಲಿಂ ಲೇಖಕನಾದ ಮಾತ್ರಕ್ಕೆ ಮುಸ್ಲಿಂ ಸಮುದಾಯದ ತಲ್ಲಣಗಳನ್ನಷ್ಟೇ ಬರೆಯಬೇಕು ಎಂಬುದೂ ಒಪ್ಪತಕ್ಕ ವಿಷಯವೇನಲ್ಲ. ಮತ್ತಷ್ಟು ಓದು »