ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

16
ಆಗಸ್ಟ್

ಸಾಮಾನ್ಯನ ಕಣ್ಣಲ್ಲಿ ಕರಾವಳಿ ಕೋಮುವಾದ

-ಪ್ರಸಾದ್ ಗಣಪತಿ 

kOmuvaadaಪದೇ ಪದೇ ಕರಾವಳಿಯಲ್ಲಿ ಗಲಭೆಯಾದಾಗ ಕರಾವಳಿ ಕೋಮುವಾದ, ಕರಾವಳಿ ತಾಲಿಬಾನ್ ಎನ್ನುವ ಮಾತುಗಳು ಕೇಳಿ ಬರುತ್ತವೆ. ಪಕ್ಷವೊಂದರ ಆಡಳಿತಾವಧಿಯಲ್ಲಿ ನಡೆದ ಒಂದು ಸಮುದಾಯದ ಓಲೈಕೆ ನೀತಿಗಳು, ಹಾಗೂ ಒಂದು ಸಮುದಾಯದ ಮೇಲಿನ ಹಲ್ಲೆಗಳ ಬಗ್ಗೆ ತಳೆದ ಮೃದು ನೀತಿಗಳು ಈ ಅಸಹನೆ ಇದರ ಬೆನ್ನಿಗಿದ್ದಾವೆ ಎಂದು ಯಾರು ಹೇಳುವುದಿಲ್ಲ. ಪುತ್ತೂರಿನ ಹಿಂದೂ ಯುವತಿ ಸೌಮ್ಯ ಭಟ್ ಳನ್ನು ಇರಿದು ಕೊಂದಿದ್ದು, ಕಾಟಿಪಳ್ಳದಲ್ಲಿ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ, ಬಳ್ಕುಂಜೆ ರೇಪ್ ಮತ್ತು ಆತ್ಮಹತ್ಯೆ, ಲವ್ ಜಿಹಾದ್ ಮತ್ತು ಸಾಮಾಜಿಕ ತಾಣಗಳಲ್ಲಿ ಬೆತ್ತಲೆ ಚಿತ್ರಗಳ ( ಹಿಂದೂ ಯುವತಿಯರ ಚಿತ್ರ) ಈ ರೀತಿಯ ಪ್ರಕರಣಗಳಾದಗ ಸುಮ್ಮನಿರುವ ಬುದ್ಧಿ ಜೀವಿ ಬಳಗ, ಇನ್ನೊಂದು ಸಮುದಾಯದ ಮೇಲೆ ಹಲ್ಲೆ ನಡೆದಾಗ ಮಾತನಾಡುವುದು, ದೂರದೂರಲ್ಲಿ ಕುಳಿತು ಒಂದು ಪ್ರದೇಶದ ಜನರನ್ನು ಕೋಮುವಾದಿಗಳೆನ್ನುವುದು ಸತ್ಯಕ್ಕೆ ಅಪಚಾರವೆಸಗುವ ಕೆಲಸ. ಹಿಂದೆ ರೆಸಾರ್ಟ್ ಅಟ್ಯಾಕ್ ಆದಾಗ ಬರೆದ ಒಂದು ಲೇಖನದಲ್ಲಿ ನನ್ನ ಗ್ರಹಿಕೆಯನ್ನು ಬರೆದಿದ್ದೇನೆ.

ದೃಶ್ಯ ಮಾಧ್ಯಮದಲ್ಲಿ ಒಂದೇ ಸವನೆ ಮಂಗಳೂರಿನ ಪಡೀಲ್‌ನಲ್ಲಿ ನಡೆದ ಯುವಕ- ಯುವತಿಯರ ಮೇಲಿನ ಹಲ್ಲೆಯನ್ನು ನೋಡುತ್ತಾ ಯಾವುದು ಸರಿ ? ಯಾವುದು ತಪ್ಪು ? ಎಂದು ನಿರ್ಧರಿಸಲಾಗದ ಸ್ಥಿತಿಯಲ್ಲಿ ಜನರು ಇರಬಹುದುದಾದ ಈ ಹೊತ್ತಿನಲ್ಲಿ ನನ್ನ ಅಭಿಪ್ರಾಯ ಬರೆಯುತ್ತಿರುವೆ. ಸಾಮಾನ್ಯವಾಗಿ ಕೋಮುವಾದ, ಧರ್ಮ ರಕ್ಷಣೆಯ ಕೃತ್ಯವೆಂದು ಹೇಳಲ್ಪಡುತ್ತಿರುವ ಇವು ಇನ್ನೊಂದು ಮಗ್ಗುಲಲ್ಲಿ ನೋಡಿದರೆ ಸಾಂಸ್ಕೃತಿಕ,ಸಾಮಾಜಿಕ, ಸಂಘರ್ಷವಾಗಿ ಗೋಚರಿಸುತ್ತವೆ. ಸಾಮಾನ್ಯವಾಗಿ ಇಲ್ಲಿ ಏನು ನಡೆಯುತ್ತಿದೆ ಎಂದು ಇತರೆ ಪ್ರದೇಶದಲ್ಲಿ ಕುಳಿತವರಿಗೆ ಅರ್ಥವಾಗುವುದು ಕೊಂಚ ಕಷ್ಟ.

ಮತ್ತಷ್ಟು ಓದು »

7
ಆಗಸ್ಟ್

ಏನಿದು “ಪುರೋಹಿತಶಾಹಿ”? ಅದೆಲ್ಲಿದೆ? ಅದರ ಮೇಲೇಕೆ ಇವರಿಗೆ ಈ ಪರಿ ಕೋಪ?”

– ರಾಕೇಶ್ ಶೆಟ್ಟಿ

ಗಂಗಾ ಪೂಜೆಫೇಸ್ಬುಕಿನಲ್ಲಿ ದಿನಕ್ಕೆ ಅದೆಷ್ಟು ಲಕ್ಷ ಸ್ಟೇಟಸ್ ಅಪ್ಡೇಟ್ ಗಳು ಬರುತ್ತವೆಯೋ ಗೊತ್ತಿಲ್ಲ.ಅವುಗಳಲ್ಲಿ ಜೊಳ್ಳು-ಕಾಳು ಎಲ್ಲವೂ ಇರುತ್ತವೆ.ಇತ್ತೀಚೆಗೆ ನಮ್ಮ ಮೀಡಿಯಾಗಳಲ್ಲಿ “ಪ್ರಭಾ” ಎನ್ನುವವರ ಫೇಸ್ಬುಕ್ ಟಿಪ್ಪಣಿಯ ಮೇಲೆ “ವಿ.ಆರ್ ಭಟ್” ಅವರು ಮಾಡಿದ ಪ್ರತಿಕ್ರಿಯೆ ದೊಡ್ಡ ವಿವಾದವನ್ನೇ ಸೃಷ್ಟಿಸಿ, ಭಟ್ಟರ ಮೇಲೆ ಕೇಸು ದಾಖಲಾಗಿ ಅವರ ಬಂಧನವೂ ಆಯಿತು. ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾದ ಆ ಸ್ಟೇಟಸ್ಸಿನಲ್ಲಿ,ಪ್ರಭಾ ಅವರು “ಪುರೋಹಿತಶಾಹಿ” ಗಳನ್ನು ಟೀಕಿಸಿ ಅವರ ಮೇಲೆ ಸಿಟ್ಟು ಮಾಡಿಕೊಂಡು ಬರೆದಿದ್ದರು. ಭಟ್ಟರ ಕಮೆಂಟಿನ ಗಲಾಟೆಯಲ್ಲಿ ಕಳೆದು ಹೋಗಿದ್ದು, ಪ್ರಭಾ ಅವರು ಬರೆದ ಸ್ಟೇಟಸ್ಸಿನಲ್ಲಿದ್ದ “ಪುರೋಹಿತಶಾಹಿ”ಯ ಬಗ್ಗೆ ಆಗಬೇಕಿದ್ದ ಚರ್ಚೆ.

ಈ ಲೇಖನವನ್ನು ಓದುತ್ತಿರುವ ಬಹುತೇಕ ಜನ ಸಾಮಾನ್ಯರಿಗೆ “ಪುರೋಹಿತಶಾಹಿ” ಎಂದರೇನು ಎನ್ನುವ ಪ್ರಶ್ನೆ ಮೂಡಿದ್ದರೆ ಆಶ್ಚರ್ಯವೇನಿಲ್ಲ. ಹಾಗಾಗಿ ಪುರೋಹಿತಶಾಹಿಯನ್ನು ಅರ್ಥವೇನು ನೋಡೋಣ.

ಪುರೋಹಿತರು ಎಂದರೆ ದೇವರು ಮತ್ತು ಮಾನವನ ನಡುವಿನ ಮಧ್ಯವರ್ತಿಗಳು ಹಾಗೂ ಧರ್ಮದ ಏಕಸ್ವಾಮ್ಯ (ಒಂದರ್ಥದಲ್ಲಿ Copy Rights) ವನ್ನು ಹೊಂದಿದ್ದಾರೆ. ಶಾಹಿ ಎಂದರೆ ಆಳ್ವಿಕೆ ಎಂದರ್ಥ. ಪುರೋಹಿತರ ಆಳ್ವಿಕೆಯೇ “ಪುರೋಹಿತಶಾಹಿ”.

ಏನಿದು “ಪುರೋಹಿತಶಾಹಿ”? ಅದೆಲ್ಲಿದೆ? ಅದರ ಮೇಲೆಕೆ ಇವರಿಗೆ ಈ ಪರಿ ಕೋಪ?”

ಬುದ್ಧಿಜೀವಿಗಳ Definitionನ ಪ್ರಕಾರ “ಪುರೋಹಿತಶಾಹಿ”ಯೆಂದರೆ ದೇವರ ಬಗ್ಗೆ ಭಯ ಮೂಡಿಸಿ ಜನರನ್ನು ಮೂರ್ತಿ ಪೂಜೆಗಳಲ್ಲಿ ತೊಡಗಿಸಿ,ನೆಪ ಹೇಳಿ ಜೇಬು ತುಂಬಿಸಿಕೊಳ್ಳುವವರು ಮತ್ತು ಭವಿಷ್ಯ ಇತ್ಯಾದಿ ನೆಪದಲ್ಲಿ ಮೋಸ ಮಾಡುವವರು” ಅನ್ನುವ ಧಾಟಿಯಲ್ಲಿರುತ್ತದೆ. (ಬಹುಷಃ ಇದಕ್ಕಿಂತ ಉತ್ತಮ Definition ಇದ್ದರೂ ಇರಬಹುದು)

ಒಟ್ಟಾರೆಯಾಗಿ ಬುದ್ಧಿಜೀವಿಗಳ ಈ ಪುರೋಹಿತಶಾಹಿಯ ಕುರಿತ ಮೇಲಿನ Definition ಅನ್ನು ಅರ್ಥಮಾಡಿಕೊಂಡಾಗ ತಿಳಿಯುವುದೇನೆಂದರೆ, ದೇವರು ಮತ್ತು ಜನ ನಡುವಿನ ಮಧ್ಯವರ್ತಿಗಳಾದ ಈ ಪುರೋಹಿತರು ಜನರನ್ನು ನಮ್ಮ ಧರ್ಮ ಗ್ರಂಥಗಳು ಮತ್ತು ಆಚರಣೆಗಳಿಂದ ದೂರವಿರಿಸಿ ಮೂರ್ತಿ ಪೂಜೆಯ ಮೂಲಕ ಮೋಸ ಮಾಡಿ ಸಮಾಜವನ್ನು/ಧರ್ಮವನ್ನು ಹಾಳು ಮಾಡುತಿದ್ದಾರೆ”

ನಮ್ಮ ಬುದ್ಧಿಜೀವಿಗಳ ಈ ವಾದದ ಮೂಲವನ್ನು ನಿಮ್ಮ ಮುಂದೆ ಇಡಲು ಬಯಸುತ್ತೇನೆ.ಆಗ ನಮಗೆ ಮುಂದಿನ ಚರ್ಚೆಯ ಹಾದಿ ಸುಲಭವಾಗಾಹುದು.

ಮತ್ತಷ್ಟು ಓದು »

23
ಏಪ್ರಿಲ್

ಪ್ರತ್ಯೇಕ ಪಂಕ್ತಿ ಭೋಜನ : “ಸಂಪ್ರದಾಯ”ದ ಮುಸುಕಿನ “ಅನಾಗರೀಕ” ವರ್ತನೆಯ ಸುತ್ತ

– ರಾಕೇಶ್ ಶೆಟ್ಟಿ

ಪ್ರತ್ಯೇಕ ಪಂಕ್ತಿ ಬೇಧಉಡುಪಿಯ ಮಠ ಸದಾಕಾಲ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತದೆ. ಅದರಲ್ಲೂ ಬಹುಪಾಲು ಅದು ಸುದ್ದಿಯಾಗುವುದು ವಿವಾದಗಳಿಂದಲೇ, ಹಲವು ಬಾರಿ ಅದು ಪೇಜಾವರ ಶ್ರೀಗಳ ಯಾವುದೋ ಹೇಳಿಕೆಯ ಮೂಲಕವೇ ಸುದ್ದಿಯಾದರೇ ಉಳಿದಂತೆ ಅದು ಮತ್ತೆ ಮತ್ತೆ ಸುದ್ದಿಯಾಗುವುದು  ‘ಪ್ರತ್ಯೇಕ ಪಂಕ್ತಿ ಭೋಜನ’ದ ಕಾರಣಕ್ಕೆ.

ಏನಿದು ಮತ್ತೆ ಈ ವಿವಾದ ಅಂತ ನೋಡಲಿಕ್ಕೆ ಹೋದರೆ :  ಕೃಷ್ಣ ಮಠದ ಭೋಜನ ಶಾಲೆಯಲ್ಲಿ ಶನಿವಾರ (ಏ 19) ಬಂಟ್ಸ್ ಸಮುದಾಯದ ಮಹಿಳೆಯೊಬ್ಬರು ತನ್ನ ಸ್ನೇಹಿತೆಯರ ಜೊತೆ ಊಟಕ್ಕೆ ಕುಳಿತಿದ್ದರು. ಮಹಿಳೆ ಊಟ ಮಾಡುತ್ತಿರುವ ಸಂದರ್ಭದಲ್ಲಿ ಮಠದ ಅಧಿಕಾರಿಗಳು ಬ್ರಾಹ್ಮಣರೇತರರಿಗೆ ಇಲ್ಲಿ ಊಟಕ್ಕೆ ಅವಕಾಶವಿಲ್ಲ ಎಂದು ಮಹಿಳೆಯನ್ನು ಊಟದ ಮಧ್ಯದಲ್ಲೇ ಎಬ್ಬಿಸಿದ್ದಾರೆ ಎನ್ನುವುದು ವಿವಾದ.

“ನಾನು ಉಡುಪಿ ಮೂಲದವಳು, ವೈದ್ಯಕೀಯ ಕ್ಷೇತ್ರದವಳು. ನಾನು ಚೌಕಿಯಲ್ಲಿ (ಬ್ರಾಹ್ಮಣರಿಗಾಗಿರುವಊಟದ ಹಾಲ್) ಊಟಕ್ಕೆ ಕುಳಿತಿಲ್ಲ.ಭೋಜನ ಶಾಲೆಯಲ್ಲಿ ಊಟಕ್ಕೆ ಕೂತೆ. ಅಲ್ಲಿ ಇತರ ಜಾತಿಯವರಿಗೆ ಊಟದ ವ್ಯವಸ್ಥೆ ಇಲ್ಲ ಎನ್ನುವುದಾದರೆ ಫಲಕ ಹಾಕಬೇಕಿತ್ತು. ತುಂಬಿದ ಊಟದ ಹಾಲಿನಲ್ಲಿ ಎಲ್ಲರ ಮುಂದೆ ನನ್ನನ್ನು ಊಟ ಮಾಡುತ್ತಿರಬೇಕಾದರೆ ಎಬ್ಬಿಸಿ ಹೊರಕ್ಕೆಕಳುಹಿಸಿದರು. ಸ್ನೇಹಿತೆಯರ ಮುಂದೆ ನನಗೆ ತುಂಬಾ ಅವಮಾನವಾಗಿದೆ.ನನಗಾದ ಪರಿಸ್ಥಿತಿ ಬೇರೆಯಾರಿಗೂ ಬರುವುದು ಬೇಡ “

ಇದು,ಉಡುಪಿಯ ಶ್ರೀಕೃಷ್ಣ ದೇವಸ್ಥಾನದ ಭೋಜನಶಾಲೆಯಿಂದ “ಅನಾಗರೀಕ”ರ ಕೈಯ್ಯಿಂದ ಹೊರಹಾಕಲ್ಪಟ್ಟ ಹೆಣ್ಣು ಮಗಳೊಬ್ಬಳ ನೋವಿನ ನುಡಿಗಳು.

ಈಗೀನ ಕಾಲದಲ್ಲೂ ಊಟಕ್ಕೆ ಕೂತವರನ್ನು ಅವರ ಚರ್ಮದ / ಜಾತಿಯ ಬಣ್ಣದಿಂದ ಗುರುತಿಸಿ ಎಬ್ಬಿಸುವ ಅನಾಗರೀಕರು ನಮ್ಮ ನಡುವೆ ಬದುಕುತಿದ್ದಾರೆ ಅನ್ನುವುದೇ ನಾಗರೀಕ ಸಮಾಜವೊಂದುತಲೆ ತಗ್ಗಿಸುವ ವಿಚಾರ. ಊಟದ ಸಮಯದಲ್ಲಿ ಮಾತ್ರ ಬೇರೆ ಜಾತಿಯವರು ಬೇಡ ಅನ್ನುವುದಾದರೇ,ಬೇರೆ ಜಾತಿಯವರು ಕೊಡುವ ದೇಣಿಗೆ,ಕಾಣಿಕೆಗಳೇಕೆ ಬೇಕು ಇವರಿಗೆ? ಪರಮಾತ್ಮ ಶ್ರೀ ಕೃಷ್ಣ ಇವರ ಖಾಸಗಿ ಸ್ವತ್ತಾದರೇ, ಹಾಗೆ ಹೇಳಿ ಬಿಡುವುದೊಳಿತು. ಆಗ ಯಾರು ಅಲ್ಲಿಗೆ ಹೋಗಿ ಹೀಗೆ ಅವಮಾನ ಮಾಡಿಸಿಕೊಂಡು ಬರಲಿಚ್ಛಿಸುವುದಿಲ್ಲ.

–*–*–*–

ಮತ್ತಷ್ಟು ಓದು »

15
ಮಾರ್ಚ್

ಕಾಮನ ಹಬ್ಬ

– ಹಂಸಾನಂದಿ

ಕಾಮನ ಹಬ್ಬಇವತ್ತು ಫಾಲ್ಗುಣದ ಹುಣ್ಣಿಮೆ. ಅಂದ್ರೆ ಕಾಮನ ಹಬ್ಬ. ಶಿವ ಮನ್ಮಥನ ಮುಂದೆ ತನ್ನ ಹಣೆಗಣ್ಣನ್ನ ತೆರೆದು ಅವನ ಸುಟ್ಟ ದಿನವೇ ಇದು ಅನ್ನೋದು ನಮ್ಮ ನಂಬಿಕೆ. ಈ ದಿನವೇ ಅವನು ಮನ್ಮಥನನ್ನು ಸುಟ್ಟು, ನಂತರ ಅಲ್ಲೇ ಸುಳಿಯುತ್ತಿದ್ದ ಪಾರ್ವತಿಯನ್ನು ಕಂಡು, ಅವಳನ್ನು ಮೆಚ್ಚಿ ಮದುವೆಯಾಗಿದ್ದು; ವಿರಕ್ತರಲ್ಲಿ ವಿರಕ್ತನಾಗಿದ್ದ ಶಿವನು ಪ್ರೇಮಿಗಳಲ್ಲಿ ಪ್ರೇಮಿಯಾಗಿ ಕಂಗೊಳಿಸಿದ್ದು, ನಂತರ ಷಣ್ಮುಖ ಹುಟ್ಟಿದ್ದು ಇದೇ ಕಾಳಿದಾಸನ ಕುಮಾರ ಸಂಭವ ಕಾವ್ಯದ ಮುಖ್ಯ ಹೂರಣ.

ಅದಕ್ಕೇ ಶಿವನನ್ನು ಭರ್ತೃಹರಿ ತನ್ನ ಶೃಂಗಾರ ಶತಕದಲ್ಲಿ ಹೀಗೆ ಕೊಂಡಾಡುತ್ತಾನೆ: (ಪದ್ಯ -೯೭)

ಏಕೋ ರಾಗಿಷು ರಾಜತೇ ಪ್ರಿಯತಮಾದೇಹಾರ್ಧಧಾರೀ ಹರೋ
ನೀರಾಗಿಷ್ವಾಪಿ ಯೋ ವಿಮುಕ್ತ ಲಲನಾಸಂಗೋ ನ ಯಸ್ಮಾತ್ಪರಃ |
ದುರ್ವಾರ ಸ್ಮರಬಾಣಪನ್ನಗವಿಷಜ್ವಾಲಾವಲೀಢೋ ಜನಃ
ಶೇಷಃ ಕಾಮವಿಡಂಬಿತೋ ಹಿ ವಿಷಯಾನ್ ಭೋಕ್ತುಂ ನ ಮೋಕ್ತುಂ ಸಮಃ ||

(ಸಾರಾಂಶ: ಪ್ರೇಮಿಗಳಲ್ಲಿ ಅಗ್ರೇಸರನಾದವನು ತನ್ನ ದೇಹದ ಅರ್ಧಭಾಗದಲ್ಲೇ ತನ್ನ ಪ್ರಿಯೆ ಪಾರ್ವತಿಯನ್ನು ಧರಿಸಿ ಅರ್ಧನಾರೀಶ್ವರನಾದಂತಹ ಶಿವ. ಅದೇ ರೀತಿ ಅವನೇ ಹೆಣ್ಣಿನ ಸಂಗವನ್ನು ತೊರೆದ ವಿರಾಗಿಗಳಲ್ಲೂ ಅವನೇ ಅಗ್ರಗಣ್ಯ! ಅದಕ್ಕೇ ಅಲ್ಲವೇ ನಿವಾರಿಸಲಾರದ ಹಾವಿನ ವಿಷ ಜ್ವಾಲೆಯಂತಹ ಕಾಮಬಾಣಗಳನ್ನು ಅವನು ತಡೆಯಲು ಸಾಧ್ಯವಾಗಿದ್ದು? ಸಾಮಾನ್ಯ ಜನರಿಂದ ಆಗುವುದೇನು? ಪಾಪ, ಕಾಮಬಾಣಗಳಿಗೆ ಸಿಲುಕಿದರೆ ಅವರು, ಅನುಭವಿಸಲೂ, ಬಿಡಲೂ, ಒಂದೂ ಅರಿಯದೇ ಹೋಗುವರು!)
ಮತ್ತಷ್ಟು ಓದು »

15
ಮಾರ್ಚ್

ಧರ್ಮ ಅನಿವಾರ್ಯವೇ?

– ಪ್ರಸನ್ನ ಬೆಂಗಳೂರು

ಧರ್ಮಅಯ್ಯೋ! ನಮ್ಮ ದೇಶದಲ್ಲಿ ಕಾನೂನಿಗೆ ಬೆಲೆ ಇಲ್ಲ ಕಣ್ರೀ ಎಂದು ನಿರಾಶದಾಯಕ ಮಾತುಗಳನ್ನು ನಾವು ಕೇಳಿರುತ್ತೇವೆ.
ಅದಕ್ಕೆ ಕಾರಣವೇನು ಎಂಬುದನ್ನು ನಾವು ಎಂದಾದರೂ ಮನಗಾಣಲು ಪ್ರಯತ್ನಿಸಿದ್ದೇವೆಯೆ?

ಕಾನೂನು (ಧರ್ಮ) ಎನ್ನುವುದು ನಿರ್ಬಂಧ, (ಇಲ್ಲಿ ನಾನು ಧರ್ಮ ಎನ್ನುವುದನ್ನು ಕಾನೂನು ಎಂದೆ ಕರೆಯುತ್ತಿದ್ದೇನೆ ಕಾರಣ ಬಹುತೇಕರಿಗೆ ನಮ್ಮಲ್ಲಿ ಧರ್ಮವೆಂದಾಕ್ಷಣ ಒಂದು ತೆರನಾದ ಅಸಡ್ಡೆ ಅಥವ ಯಾವುದಕ್ಕೂ ಬೇಡದ ಅಥವ ನಾನು ಅದರಿಂದ ದೂರವಿದ್ದು ಎಲ್ಲ ಧರ್ಮೀಯರಿಗೂ ಒಳ್ಳೆಯವನು ಸಮಾನ ಎನಿಸಿಕೊಳ್ಳಬೇಕೆನ್ನುವ ಚಟವಿರುತ್ತದೆ ಹಾಗಾಗಿ ಧರ್ಮ ಎಂಬುದನ್ನು ಕಾನೂನೆಂದೆ ನಾನು ಸಂಬೋಧಿಸುತ್ತೇನೆ.ಅದು ಹೌದೂ ಕೂಡ) ಸಂಕೋಲೆ ಅದನ್ನು ಮುರಿಯುವುದು ಧಿಕ್ಕರಿಸುವುದು ಹದಿಹರೆಯದಲ್ಲಿ ಸಾಹಸದ ಕೆಲಸ ಎನಿಸಿಕೊಳ್ಳುತ್ತದೆ. ಅಂತಹ ಕಾರ್ಯವನ್ನು ಕೆಲವರು ಆಸ್ವಾದಿಸುತ್ತಾರೆ. ಭಾರತೀಯ ಸಂಪ್ರದಾಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲೇಬೇಕೆಂಬ ನಿಯಮವಿಲ್ಲ. ಆದ್ದರಿಂದಲೇ ಇಲ್ಲಿ ಕಾನೂನು ಮುರಿಯುವುದು ತಪ್ಪಿನ ಕೆಲಸ ಎನಿಸಿಕೊಳ್ಳುವುದೇ ಇಲ್ಲ. ಎಲ್ಲವೂ ಸ್ವಯಂ ನಿಯಂತ್ರಣದ ನೈತಿಕತೆಯ ಮೇಲೆ ನಿಂತಿರುತ್ತದೆ. ಉದಾಹರಣೆಗೆ ರಾತ್ರಿ ಹನ್ನೆರಡು ಗಂಟೆಯಲ್ಲಿ ನಿರ್ಜನ ಪರಿಸ್ಥಿತಿಯಲ್ಲಿ ಹಸಿರು ದೀಪಕ್ಕಾಗಿ ಕಾಯುವುದಿಲ್ಲ. ಕಾರಣ ನನ್ನಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂಬ ನೈತಿಕತೆಯಷ್ಟೇ ಇಲ್ಲಿ ಕೆಲಸ ಮಾಡುತ್ತದೆ.

ಮತ್ತಷ್ಟು ಓದು »

4
ಮಾರ್ಚ್

ಧರ್ಮದ ಅರ್ಥ ಮತ್ತು ಅದರ ಮೇಲಿನ ಹಣದ ಸಂಬಂಧ

-ನವೀನ್ ನಾಯಕ್

ಧರ್ಮಧರ್ಮದ ವ್ಯಾಖ್ಯಾನವನ್ನು ದೀನ್ ದಯಾಳ್ ಉಪಾಧ್ಯಾಯರವರು ಹೀಗೆ ವಿವರಿಸುತ್ತಾರೆ.
” ಯತೋಭ್ಯುದಯ ನಿಃಶ್ರೇಯಸ ಸಿದ್ಧಿಃ ಸ ಧರ್ಮ ” ಅಂದರೆ ಯಾವುದರಿಂದ ಐಹಿಕ ಮತ್ತು ಪಾರಲೌಕಿಕ ಉನ್ನತಿ ದೊರೆಯುವುದೋ ಅದು ಧರ್ಮ. ಮುಂದುವರೆಸಿ ಹೇಳುತ್ತಾರೆ ,
ಮಹರ್ಷಿ ಚಾಣಕ್ಯರವರ ಪ್ರಕಾರ ” ಸುಖಸ್ಯ ಮೂಲಂ ಧರ್ಮಃ, ಧರ್ಮಸ್ಯ ಮೂಲಂ ಅರ್ಥಃ “( ಸುಖವು ಧರ್ಮದ ಮೂಲಕವಾದರೆ ಧರ್ಮವು ಅರ್ಥಮೂಲ ) , ಇಲ್ಲಿ ಹಣವಿಲ್ಲದೇ ಧರ್ಮವೂ ನಿಲ್ಲುವುದಿಲ್ಲ ಎಂಬ ಸೂಚನೆ ಇದೆ.
ಅಂದರೆ ಭಾರತದಲ್ಲಿ ಭೌತಿಕ ಆಧ್ಯಾತ್ಮಿಕ ಜಗತ್ತಿನ ಕುರಿತಲ್ಲದೇ ಹಣ- ಸಂಪತ್ತುಗಳ  ಬಗೆಗೂ ವಿಚಾರ ಮಾಡಲಾಗಿದೆ. ಇದನ್ನು ಅರ್ಥೈಸಿಕೊಳ್ಳುವಾಗ ಧರ್ಮದ ವ್ಯಾಪಕ ಪರಿಭಾಷೆಯನ್ನು ತೆಗೆದುಕೊಳ್ಳಬೇಕು. ಅಂದರೆ  ಮತ , ಪಂಥ, ಅಥವಾ ರಿಲಿಜನ್ ಎಂದು ಭಾವಿಸುವ ಸಂಕುಚಿತ ಅಥವ ಆಧುನಿಕ ಭ್ರಮಾಯುಕ್ತ ಅರ್ಥವನಲ್ಲ.
ಸಮಾಜವನ್ನು ಧರಿಸಿರುವುದು ,  ಐಹಿಕ ಮತ್ತು ಪಾರಲೌಕಿಕ ಉನ್ನತಿಗೆ ಸಹಾಯಕವಾಗುವಂತಹದು, ಮಾನವನ ಕರ್ಮಗಳನ್ನು ನಿರ್ಧಾರ ಮಾಡಿ ಅವನು ಕರ್ತವ್ಯದ ಸೂಚನೆಯನ್ನು ಪಡೆಯಲು ಕಾರಣವಾಗುವಂತಹುದು, ವ್ಯಕ್ತಿಯು ತನ್ನ ಎಲ್ಲ ಪ್ರಕಾರದ ಉನ್ನತಿಗಳನ್ನು ಮಾಡಿಕೊಳ್ಳುವತ್ತ, ಸಮಷ್ಟಿಯ ಉದ್ಧಾರದಲ್ಲಿ ಸಹಾಯಕವಾಗಲು ಸಾಧ್ಯವಾಗುವಂತಹುದು. ಒಟ್ಟಾರೆಯಾಗಿ ಇಂಥಹ ನಿಯಮ ವ್ಯವಸ್ತೆ ಹಾಗೂ ಅದರಲ್ಲಿ ಅಡಗಿದ ಭಾವವೇ ಧರ್ಮ.
18
ಫೆಬ್ರ

ಜಾತಿ ಧರ್ಮವನ್ನು ಮೀರಿ ನಿ೦ತ ಸೋದರ ಪ್ರೇಮ

– ಗುರುರಾಜ್ ಕೊಡ್ಕಣಿ

ಸೋದರತ್ವಆಕೆಯ ಹೆಸರು ಲಕ್ಷ್ಮಿ. ಹತ್ತೊ೦ಬತ್ತರ ಹರೆಯದ ಹೆಣ್ಣು ಮಗಳು.ನೋಡಲು ಅಷ್ಟೇನೂ ಸು೦ದರಿಯಲ್ಲದಿದ್ದರೂ ಲಕ್ಷಣವಾಗಿದ್ದಳು.ಬಡತನಕ್ಕೆ ಅತ್ಯುತ್ತಮ ಉದಾಹರಣೆ ಎ೦ಬ೦ಥಹ ಕುಟು೦ಬದಲ್ಲಿ ಜನಿಸಿದ್ದ,ಲಕ್ಷ್ಮಿ ಓದಿದ್ದು ಐದನೆಯ ತರಗತಿಯವರೆಗೆ ಮಾತ್ರ. ತಾಯಿ ಸದಾಕಾಲ ಕಾಯಿಲೆಯಿ೦ದ ನರಳುತ್ತಿದ್ದರೆ ,ಅಪ್ಪ ಪರವೂರಿನಲ್ಲಿ ಅವಳ ಅಣ್ಣನೊ೦ದಿಗೆ ವಾಸವಾಗಿದ್ದ.ಮನೆಯ ಹತ್ತಿರದ ಬಟ್ಟೆ ಅ೦ಗಡಿಯೊ೦ದರಲ್ಲಿ ಲಕ್ಷ್ಮಿ ಹೊಲಿಗೆ ಕೆಲಸ ಮಾಡಿಕೊ೦ಡಿದ್ದಳು.ಮನೆಯ ಹೆಚ್ಚಿನ ಜವಾಬ್ದಾರಿಗಳು ಲಕ್ಷ್ಮಿಯದ್ದೇ.ಕಿತ್ತು ತಿನ್ನುವ ಇ೦ಥಹ ಬಡತನದ ಮಧ್ಯೆಯೂ ತನ್ನ ತ೦ಗಿ ಸರಸ್ವತಿಯನ್ನು ವೈದ್ಯಳನ್ನಾಗಿಸುವ ಆಸೆ ಅವಳಿಗಿತ್ತು. ಬಡತನಕ್ಕೆ,ಬಡವರಿಗೆ ಕಷ್ಟಗಳು ಹೆಚ್ಚಲ್ಲವೇ..?? ಲಕ್ಷ್ಮಿಯ ಜೀವನವೂ ಹಾಗೆಯೇ ಇತ್ತು.ಆಕೆಯ ದುಡಿತದಿ೦ದ ಬರುತ್ತಿದ್ದ ಸ೦ಬಳ ಕುಟು೦ಬದ ನಿರ್ವಹಣೆಗೆ ಸಾಲುತ್ತಿರಲಿಲ್ಲ.ಅ೦ಗಡಿಯಿ೦ದ ದಿನಸಿ ಪದಾರ್ಥಗಳನ್ನು ತ೦ದು ಮನೆ ನಡೆಸುವುದು ಆಕೆಗೆ ಕಷ್ಟವಾಗುತ್ತಿತ್ತು.ಪಡಿತರ ಅ೦ಗಡಿಯಲ್ಲಿ ದಿನಸಿ ಪದಾರ್ಥಗಳನ್ನು ಪಡೆದುಕೊಳ್ಳೋಣವೆ೦ದರೇ ಆಕೆ ಬಳಿಯಿದ್ದ ಪಡಿತರ ಚೀಟಿ ಅಕೆಯ ಕುಟು೦ಬ ಮೊದಲು ವಾಸವಾಗಿದ್ದ ಊರಿನ ವಿಳಾಸದ್ದಾಗಿತ್ತು.ಆಕೆ ದಿನವೂ ಪಡಿತರ ಅ೦ಗಡಿಯ ಮಾಲಿಕನಿಗೆ ತನಗೂ ರೇಶನ್ ನೀಡುವ೦ತೆ ಕಾಡುತ್ತಿದ್ದಳು.ತಾನು ಬಡವಳು,ಬೇರೆ ಕಿರಾಣಿ ಅ೦ಗಡಿಗಳಲ್ಲಿ ದಿನಸಿ ಪದಾರ್ಥಗಳನ್ನು ಕೊ೦ಡು ಸ೦ಸಾರ ನಡೆಸುವಷ್ಟುಶಕ್ತಿ ನನಗಿಲ್ಲ,ದಯಮಾಡಿ ನನಗೂ ದಿನಸಿ ನೀಡು ಎ೦ದು ಪರಿಪರಿಯಾಗಿ ಅ೦ಗಲಾಚುತ್ತಿದ್ದಳು.ನಿನ್ನ ಪಡಿತರ ಚೀಟಿ ಬೇರೆ ಊರಿನದೆ೦ದು,ನಿನಗೆ ಇಲ್ಲಿ ರೇಶನ್ ನೀಡಲು ಸಾಧ್ಯವಿಲ್ಲವೆ೦ದು ಅ೦ಗಡಿಯ ಮಾಲೀಕ ಎಷ್ಟೇ ಹೇಳಿದರು ಆಕೆ ಕೇಳುತ್ತಿರಲಿಲ್ಲ.ಏನೇ ಮಾಡಿದರೂ ಈಕೆಗೆ ರೇಶನ್ ಕಾರ್ಡಿನ ನಿಯಮಗಳನ್ನು ಅರ್ಥ ಮಾಡಿಸುವುದು ಕಷ್ಟವೆ೦ದರಿತ ರೇಶನ್ ಅ೦ಗಡಿಯ ಮಾಲೀಕ,ಸ್ಥಳೀಯ ಪುಢಾರಿ ಜಗನ್ನಾಥ ಬಾಬುರವರನ್ನು ಕ೦ಡು,ಅವರ ಸಹಾಯದಿ೦ದ ಹೊಸ ಪಡಿತರ ಚೀಟಿಯನ್ನು ಪಡೆದುಕೊಳ್ಳುವ೦ತೇ ಸಲಹೆ ನೀಡುತ್ತಾನೆ.

ಮತ್ತಷ್ಟು ಓದು »

14
ಫೆಬ್ರ

ಧರ್ಮ ಅಂದರೇನು?

– ಸಚ್ಚಿದಾನಂದ ಹೆಗ್ಡೆ

ಧರ್ಮಫೇಸ್ ಬುಕ್ಕೂ ಸೇರಿದಂತೆ ನಮ್ಮ ಮಾತುಗಳಲ್ಲಿ, ಬರಹಗಳಲ್ಲಿ ಮತ್ತು ನಿತ್ಯದ ನಮ್ಮ ವ್ಯವಹಾರಗಳಲ್ಲಿ “ಧರ್ಮ” ಶಬ್ದ ಅಪಾರವಾದ ಅಪಾರ್ಥದಲ್ಲಿ ಬಳಕೆಯಾಗುತ್ತಿರುವುದನ್ನು ಕಂಡು ಮನಸ್ಸಿಗೆ ಅಸಹನೀಯವಾದ ಕಿರಿಕಿರಿ ಉಂಟಾಗುತ್ತದೆ. ಧರ್ಮಗುರುಗಳೂ ಸಹ ಈ ಶಬ್ದವನ್ನು ತಪ್ಪರ್ಥದಲ್ಲಿ ಬಳಸುವುದನ್ನು ಕಂಡಾಗ ಸಂಕಟವಾಗುತ್ತದೆ.

ಎಲ್ಲರೂ ಧರ್ಮ ಶಬ್ದವನ್ನು ಹೇಗೆ ಬಳಸುತ್ತಿದ್ದಾರೆ? ಕ್ರೈಸ್ತ ಧರ್ಮ, ಇಸ್ಲಾಮ್ ಧರ್ಮ, ಬೌದ್ಧ ಧರ್ಮ, ಜೈನ ಧರ್ಮ, ವೀರಶೈವ ಧರ್ಮ, ಸಿಖ್ ಧರ್ಮ ಇತ್ಯಾದಿ ಇತ್ಯಾದಿ. ನಿಜಕ್ಕೂ ಇವು ಧರ್ಮಗಳೇ? ಅಸಲಿಗೆ ಇವೆಲ್ಲ ಏನು?

ಧರ್ಮ ಶಬ್ದವನ್ನು ತಪ್ಪರ್ಥದಲ್ಲಿ ಬಳಸುವುದು ಆ ಶಬ್ದಕ್ಕೆ ಮಾಡುವ ಅಪಚಾರವಲ್ಲವೇ? ಅದು ಅಧರ್ಮವಾಗುವುದಿಲ್ಲವೇ? ಇದರ ಬಗ್ಗೆ ತಲಸ್ಪರ್ಶೀ ಚಿಂತನೆಯಾಗಲಿ ಎನ್ನುವುದು ನನ್ನ ಆಶಯ.ನನ್ನ ಅಭಿಪ್ರಾಯದಲ್ಲಿ ಧರ್ಮವು ದೇವರನ್ನು ಹುಡುಕುವ ನಿರ್ದಿಷ್ಟ ಮಾರ್ಗವಲ್ಲ. ಕ್ರೈಸ್ತ, ಇಸ್ಲಾಮ್, ಜೈನ, ಬೌದ್ಧ, ಸಿಖ್, ವೀರಶೈವ ಮುಂತಾದವು ದೇವರನ್ನು ಹುಡುಕುವ ಯಾ ಸಾಕ್ಷಾತ್ಕರಿಸಿಕೊಳ್ಳುವ ನಿರ್ದಿಷ್ಟ ದಾರಿಗಳು. ಆಯಾ ದಾರಿಗಳಲ್ಲಿ ಸಾಗುವವರಿಗೆ ಅವು ಶ್ರೇಷ್ಠ. ಆದರೆ ಎಲ್ಲರಿಗೂ ಎಲ್ಲ ದಾರಿಗಳು ಶ್ರೇಷ್ಠವಲ್ಲ ಮತ್ತು ಏಕಕಾಲದಲ್ಲಿ ಎಲ್ಲ ದಾರಿಗಳಲ್ಲಿ ಹೆಜ್ಜೆ ಹಾಕಲೂ ಸಾಧ್ಯವಿಲ್ಲ.

ಮತ್ತಷ್ಟು ಓದು »

10
ಜನ

ಸಂಸ್ಕಾರ ಮತ್ತು ದಾಟು ಕಾದಂಬರಿಗಳಲ್ಲಿ ಜಾತಿ ಸಮಸ್ಯೆಗಳು

– ಮು ಅ ಶ್ರೀರಂಗ ಬೆಂಗಳೂರು

ದಾಟು - ಭೈರಪ್ಪಈ ಲೇಖನವನ್ನು ನಾನು ಭೈರಪ್ಪನವರ ಕಾದಂಬರಿಗಳನ್ನು ಕುರಿತ ವಿಮರ್ಶೆಗಳ ಲೇಖನಮಾಲೆ ಮುಗಿದ ನಂತರ ಬರೆಯೋಣವೆಂದುಕೊಂಡಿದ್ದೆ. ಆದರೆ ಆ ಲೇಖನಗಳ ಸರಣಿಯಲ್ಲಿ ಇನ್ನು ಚರ್ಚಿಸಬೇಕಾದ ಕಾದಂಬರಿಗಳು “ಆವರಣ” ಮತ್ತು “ಕವಲು” ಮಾತ್ರ. ಇವುಗಳಲ್ಲಿ ಜಾತಿಯ ಸಮಸ್ಯೆಗಳ ಪ್ರಸ್ತಾಪವಿಲ್ಲದಿರುವುದರಿಂದ ಈಗಲೇ ಬರೆಯುವುದು ಸೂಕ್ತವೆನಿಸಿದೆ.

ಸಂಸ್ಕಾರ ಮತ್ತು ದಾಟು ಕಾದಂಬರಿಗಳನ್ನು ಕುರಿತಂತೆ ನಡೆದ ಚರ್ಚೆಗಳು ಪ್ರಾರಂಭದಲ್ಲಿ ವಿಚಾರಗಳ ವಿನಿಮಯದಂತೆ ಕಂಡರೂ ನಂತರದಲ್ಲಿ ಕವಲು ದಾರಿ ಹಿಡಿದವು. ಇದಕ್ಕೆ ನನಗನಿಸುವಂತೆ ಬಹುಶಃ ಜಾತಿ ಸಮಸ್ಯೆಯನ್ನು ಸಾಹಿತ್ಯವು ಅರಿಯಲು ನಡೆಸುವ ಪ್ರಯತ್ನಕ್ಕೂ ಅದೇ ಸಮಸ್ಯೆಯನ್ನು ಆಧಾರ,ಸಿದ್ಧಾಂತ,ಊಹೆ,ತರ್ಕ ಇತ್ಯಾದಿಗಳ ಮೂಲಕ ಬಿಡಿಸಲು ಪ್ರಯತ್ನಿಸುವ ಮಾನವಿಕ ಶಾಸ್ತ್ರಗಳಿಗೂ ಇರುವ ಮೂಲಭೂತ ವ್ಯತ್ಯಾಸವನ್ನು ಮನಗಾಣಿಸುವುದರಲ್ಲಿ ಆ ಚರ್ಚೆಗಳು ನಡೆಯದೇ ಹೋದದ್ದು. ಇದುವರೆಗೆ ಮಾನವಿಕ ಶಾಸ್ತ್ರಗಳು ತಮ್ಮ ಅಧ್ಯಯನದ ಮೂಲಕ ಕಂಡುಕೊಂಡಿರುವ ನಮ್ಮ ಸಮಾಜದ ಬಗೆಗಿನ ತಿಳುವಳಿಕೆಗಳನ್ನು ಆಧರಿಸಿ ಆ ಚೌಕಟ್ಟಿಗೆ ಈ ಸಾಹಿತ್ಯ ಕೃತಿಗಳು ಹೊಂದುವುದಿಲ್ಲ ಎಂದು ಒಂದೇ ಏಟಿಗೆ ಪಕ್ಕಕ್ಕೆ ಸರಿಸುವುದನ್ನು ಸಾಹಿತ್ಯದ ಒಬ್ಬ ಓದುಗನಾಗಿ ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಮತ್ತಷ್ಟು ಓದು »

5
ಜನ

ಮೋಕ್ಷದ ಹುಡುಕಾಟದಲ್ಲಿ ಕಳೆದುಹೋದ “ಸಿದ್ಧಾರ್ಥ”

– ಡಾ ಅಶೋಕ್ ಕೆ ಆರ್

Siddharthaಜರ್ಮನ್ ಲೇಖಕ ಹರ್ಮನ್ ಹೆಸ್ಸೆ (Hermann Hesse) 1922ರಲ್ಲಿ ಬರೆದ ಕಾದಂಬರಿ ‘ಸಿದ್ಧಾರ್ಥ’. ಹಲವು ವರುಷಗಳು ಕಳೆದ ನಂತರ ಪುಸ್ತಕವೊಂದರ ಕಾಪಿರೈಟ್ ಮುಗಿದುಹೋಗುತ್ತದೆ. ಅಂಥಹ ಪುಸ್ತಕಗಳನ್ನು ‘ಗುಟೆನ್ ಬರ್ಗ್’ ಎಂಬ ಅಂತರ್ಜಾಲ ತಾಣ ಮೊಬೈಲ್, ಟ್ಯಾಬ್ಲೆಟ್, ಕಂಪ್ಯೂಟರುಗಳಲ್ಲಿ ಓದಲನುಕೂಲವಾಗುವಂತೆ ಮಾಡುತ್ತಿದೆ. ‘ಗುಟೆನ್ ಬರ್ಗಿನ’ ಗೃಂಥಾಲಯದಲ್ಲಿ ಸಾವಿರಾರು ಪುಸ್ತಕಗಳು ಲಭ್ಯವಿದೆ. ‘ಸಿದ್ಧಾರ್ಥ’ ಎಂಬ ಶೀರ್ಷಿಕೆ ನೋಡಿ ‘ಬುದ್ಧ’ನ ಬಗೆಗೆ ಪಾಶ್ಚಿಮಾತ್ಯ ಚಿಂತನೆಯ ಪುಸ್ತಕವಿರಬೇಕು, ಪಶ್ಚಿಮದವರಿಗೆ ಕಂಡ ಬುದ್ಧನ ರೂಪ ಯಾವುದಿರಬೇಕೆಂಬ ಕುತೂಹಲದಿಂದ ಪುಸ್ತಕವನ್ನು ಓದಲಾರಂಭಿಸಿದೆ.

ಇಲ್ಲಿ ಬುದ್ಧನಿದ್ದಾನೆ; ಆದರವನು ‘ಸಿದ್ಧಾರ್ಥ’ನಲ್ಲ ‘ಗೌತಮ’. ಬುದ್ಧನನ್ನೇ ಧಿಕ್ಕರಿಸಿ ನಡೆಯುವ ಸಿದ್ಧಾರ್ಥನಿದ್ದಾನೆ. ಕಾದಂಬರಿಯ ನಾಯಕ ‘ಸಿದ್ಧಾರ್ಥ’ ಬ್ರಾಹ್ಮಣನೊಬ್ಬನ ಮಗ. ‘ಅರಿವು’ ಪಡೆದು ಮುಕ್ತಿ ಪಡೆಯಲೋಸಗ ಮನೆ ತೊರೆದು ಜ್ಞಾನಿಗಳೆಂದು ಹೆಸರಾದ ಸಮಾನರೊಡನೆ ಹೋಗುವ ಸಂಕಲ್ಪ ಮಾಡುತ್ತಾನೆ. ಸಿದ್ಧಾರ್ಥನ ತಂದೆ ಒಪ್ಪುವುದಿಲ್ಲ. ಸಿದ್ಧಾರ್ಥ ಹಟ ಬಿಡುವುದಿಲ್ಲ, ಅನುಮತಿ ಕೊಡುವವರೆಗೂ ನಿಂತ ಸ್ಥಳದಿಂದ ಅಲುಗಾಡುವುದಿಲ್ಲ. ಮಗನ ಕಾಠಿಣ್ಯವನ್ನು ನೋಡಿ ಬೆಚ್ಚಿ ಬೇಸರದಿಂದಲೇ ಮಗನನ್ನು ಆಶೀರ್ವದಿಸಿ ಕಳುಹಿಸುತ್ತಾರೆ. ತನ್ನ ಗೆಳೆಯ ಗೋವಿಂದನ ಜತೆಗೆ ಅರಿವಿನ ಪಯಣ ಪ್ರಾರಂಭಿಸುತ್ತಾನೆ. ಕೆಲವು ದಿನಗಳಲ್ಲೇ ಪಡೆದ ಜ್ಞಾನ ತನ್ನನ್ನು ತಾನೇ ಅರಿಯುವುದಕ್ಕೆ ಸಾಲುತ್ತಿಲ್ಲವೆನ್ನಿಸಿ ಮನೋಕ್ಷೋಬೆಗೊಳಗಾಗುತ್ತಾನೆ. ರಾಜತ್ವವನ್ನು ತೊರೆದು ಜ್ಞಾನೋದಯ ಪಡೆದ ಗೌತಮ ಬುದ್ಧನ ಹೆಸರು ಪ್ರಖ್ಯಾತವಾಗುತ್ತಿದ್ದ ಕಾಲವದು. ಗೆಳೆಯ ಗೋವಿಂದನ ಜೊತೆಗೆ ಬುದ್ಧನ ತತ್ವಗಳನ್ನರಿಯಲು ಹೊರಡುತ್ತಾನೆ ಸಿದ್ಧಾರ್ಥ. ಬುದ್ಧನ ಉಪದೇಶಗಳಿಂದ ಈರ್ವರೂ ಪ್ರಭಾವಿತರಾಗುತ್ತಾರೆ. ‘ಸಮಾನ’ರು ತಿಳಿಸಿಕೊಟ್ಟದ್ದಕ್ಕಿಂತ ಹೆಚ್ಚಿನ ಅರಿವು ಬೌದ್ಧ ಧರ್ಮದಲ್ಲಿದೆ ಎಂದು ಮನವರಿಕೆಯಾದರೂ ಸಿದ್ಧಾರ್ಥ ಬುದ್ಧನ ಶಿಷ್ಯನಾಗಲು ಆಶಿಸುವುದಿಲ್ಲ.

ಮತ್ತಷ್ಟು ಓದು »