ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

3
ಆಕ್ಟೋ

ಪ್ರೊ.ಬಾಲು ಅವರಿಗೆ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

Prof Balu2ಕರ್ನಾಟಕದಲ್ಲಿ ಈಗ ಗೌರವ ಡಾಕ್ಟರೇಟ್ ಪದವಿ ಎನ್ನುವುದು ಮಾರುಕಟ್ಟೆಯಲ್ಲಿ ದೊರೆಯುವ ವಸ್ತುವಾಗಿರುವುದು ನಮಗೆಲ್ಲ ಗೊತ್ತಿರುವ ವಿಚಾರವೇ. ಆದರೆ ಯುರೋಪಿನ ವಿಶ್ವವಿದ್ಯಾಲಯಗಳಲ್ಲಿ ಇದು ಇನ್ನೂ ತನ್ನ ಘನತೆ ಹಾಗೆ ಉಳಿಸಿ ಕೊಂಡಿದೆ. ಉದಾಹರಣೆಗೆ, ಪ್ರೊಫೆಸರ್ ಎಸ್. ಎನ್. ಬಾಲಗಂಗಾಧರ ರಾವ್ ಅವರಿಗೆ ೩೦/೯/೨೦೧೩ರಂದು  ಗೌರವ ಡಾಕ್ಟರೇಟ್ ಪದವಿ ಮತ್ತು ಬಂಗಾರದ ಪದಕದೊಂದಿಗೆ ಸನ್ಮಾನ ಮಾಡಿದ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯ ತನ್ನ ೧೫ ವರ್ಷಗಳ ಇತಿಹಾಸದಲ್ಲಿ ಕೊಟ್ಟಿದ್ದು ಕೇವಲ ಬೆರಳೆಣಿಕೆಯಷ್ಟು ಗೌರವ ಡಾಕ್ಟರೇಟ್ ಪದವಿಗಳನ್ನು ಮಾತ್ರ.

ಈ ಸಂದರ್ಭದಲ್ಲಿ ಎಸ್. ಎನ್. ಬಾಲಗಂಗಾಧರ ರಾವ್ ಅವರ ಸಾಧನೆಗಳ ಕುರಿತು ಅಲ್ಲಿನ ಸಮಾಜ ವಿಜ್ಞಾನಗಳ ಡೀನ್ ಮಾಡಿದ ಭಾಷಣದ ಕನ್ನಡ ಅವತರಣಿಕೆಯನ್ನು ನಾವಿಲ್ಲಿ ಕೊಡುತ್ತಿದ್ದೇವೆ.

–      ನಿಲುಮೆ

 

ಮತ್ತಷ್ಟು ಓದು »

24
ಸೆಪ್ಟೆಂ

ಸೆಕ್ಸ್ ಗುರುವಿನ ಸನ್ನಿಧಿಯಲ್ಲಿ….

– ಚೇತನಾ ತೀರ್ಥಹಳ್ಳಿ

Oshoಓಶೋ!

ಈ ಹೆಸರು ಕಿವಿಗೆ ಬಿದ್ದ ಕ್ಷಣಕ್ಕೆ ನೆನಪಾಗೋದು ಅಮ್ಮನ ಆ ಅವತ್ತಿನ ತಟವಟ. “ಆ ಹಾಳಾದ xyz ತಾನು ಕೆಡೋದಲ್ದೆ ಊರು ಹಾಳು ಮಾಡ್ತಾನೆ. ಆ ಮನುಷ್ಯನ್ನ ನೋಡಿದ್ರೆ ಸ್ವಾಮೀಜಿ ಥರ ಕಾಣ್ತಾನಾ?”
ಅಪ್ಪ ಸಹೋದ್ಯೋಗಿ ಬಳಿಯಿಂದ ಮನೆಯಲ್ಲಿ ತಂದಿಟ್ಟುಕೊಂಡಿದ್ದ ಓಶೋ ಪುಸ್ತಕವನ್ನ ನೋಡೀ ನೋಡೀ ಸಿಡುಕುತ್ತಿದ್ದಳು. ಯಾರಾದ್ರೂ ನೋಡಿದ್ರೆ ಏನು ತಿಳಿದಾರು! ಅನ್ನುವ ಆತಂಕ ಜೊತೆಗೆ. ನಾನು ಕೇಳೀಕೇಳೀ ರೇಜಿಗೆ ಬಿದ್ದು ಕೇಳಿದ್ದೆ, “ಯಾಕೆ?”

ಬಹಳಷ್ಟು ಜನ ಓಶೋ ಬಗ್ಗೆ ತಳೆದಿರುವ ಅಭಿಪ್ರಾಯವನ್ನೆ ನನ್ನ ಮುಗ್ಧ ಅಮ್ಮನೂ ಹೇಳಿದ್ದಳು. ಅದು ಎಂಭತ್ತರ ದಶಕ. ಓಶೋ ಎಂಬ ಮಹಾ ಸಂತನ ಬಗ್ಗೆ ಭಾರತ ಮಾತ್ರವೇನು, ಪಶ್ಚಿಮ ದೇಶಗಳಲ್ಲೂ ಸಾಕಷ್ಟು ಪುಕಾರು ಹಬ್ಬಿದ್ದ ಕಾಲವದು. ಅಂಥ ಸಂದರ್ಭದಲ್ಲಿ ಅವಳ ಯೋಚನೆ ತಪ್ಪೇನೂ ಆಗಿರಲಿಲ್ಲ ಅನ್ನಿಸುತ್ತೆ. ಯಾಕಂದರೆ ಅದೇ ಅಮ್ಮ ಆಮೇಲೆ ನನ್ನ ಕಪಾಟಿನಿಂದ ಹಲವು ಓಶೋ ಪುಸ್ತಕಗಳನ್ನ ತೆಗೆದು ಕಣ್ಣಾಡಿಸಿದ್ದಾಳೆ; ಆಗೀಗ ಅದರ ಕೆಲವು ವಿಚಾರಗಳ ಉಲ್ಲೇಖವನ್ನೂ ಮಾಡುವಷ್ಟು ಬದಲಾಗಿದ್ದಾಳೆ.ಅದೇನೇ ಇರಲಿ, ನನಗೆ ಓಶೋ ಮೊದಲ ಬಾರಿ ಪರಿಚಯವಾಗಿದ್ದು ಹೀಗೆ. ಅದೇನು ತಿಕ್ಕಲುತನವೋ! ಅಮ್ಮ ಮಾಡಿದ್ದ ಆರೋಪವೇ ನನ್ನಲ್ಲಿ ಓಶೋ ಬಗ್ಗೆ ಕುತೂಹಲ ಹುಟ್ಟಿಸಿತ್ತು. ಇಷ್ಟೆಲ್ಲ ಬೈಸಿಕೊಳ್ಳುವ ಈ ಮನುಷ್ಯನ ಮಾತನ್ನ ಅಷ್ಟೊಂದು ಜನ ಕೇಳ್ತಾರೆ ಅಂದ್ರೆ ಸುಮ್ಮನೆನಾ? ಅನ್ನುವಂಥ ಕುತೂಹಲವದು. ಮುಂದೊಂದು ದಿನ ’ಶೂನ್ಯ ನಾವೆ’ ಏರಿ ಶುರುವಾದ ನನ್ನ ಓಶೋ ಯಾನ ಈ ಹೊತ್ತಿನವರೆಗೆ ಸೇರಿದೆ.

ಮತ್ತಷ್ಟು ಓದು »

22
ಜುಲೈ

ಕಾಂಗ್ರೆಸ್ಸಿನ ‘ನಮೋ’ನಿಯಾ ಮತ್ತು ಸೆಕ್ಯುಲರ್ ‘ನಾಯಿಮರಿ’

–  ರಾಕೇಶ್ ಶೆಟ್ಟಿ

NaModiಭಾರತದಲ್ಲಿ ಭಾವುಕತೆಗೇನಾದರೂ ಬರವುಂಟೇ? ಹಾಗೇನಾದರೂ ಇದ್ದಿದ್ದರೆ ನಮ್ಮ ಸ್ಥಿತಿ ಸ್ವಲ್ಪಮಟ್ಟಿಗಾದರೂ ಸುಧಾರಿಸುತ್ತಿತ್ತೋ ಏನೋ? ಆದರೆ,ಭಾವುಕತೆ ಅನ್ನುವುದು ನಮ್ಮ ಅಸ್ಮಿತೆಯ ಭಾಗವಾಗಿರುವುದರಿಂದಲೇ ನಮ್ಮ ರಾಜಕಾರಣಿಗಳು,ರಾಜಕೀಯ ಪಕ್ಷಗಳು ಪದೇ ಪದೇ ಭಾವುಕತೆಯ ಬಿರುಗಾಳಿಯೆಬ್ಬಿಸಿ ತಮ್ಮ ಹಗರಣ,ವೈಫಲ್ಯಗಳನ್ನು ಮುಚ್ಚಿಕೊಳ್ಳುವುದು.ಅದರಲ್ಲೂ ಇಂತ ವಿಷಯದಲ್ಲಿ ಕಾಂಗ್ರೆಸ್ಸ್ ಪಕ್ಷದ್ದು ಉಳಿದೆಲ್ಲರಿಗಿಂತ ಒಂದು ‘ಕೈ’ ಮೇಲೆಯೇ ಹೌದು.

೨೪ ಗಂಟೆಯ ಮೀಡಿಯಾ ಯುಗದಲ್ಲಿ ದೊಡ್ಡ ದೊಡ್ಡ ಹಗರಣಗಳು ಸುದ್ದಿಯಾದಗಾಲೆಲ್ಲ ಕಾಂಗ್ರೆಸ್ಸ್ ಅದರಿಂದ ಹೊರಬರಲು ಒಂದು ಸಣ್ಣ ಎಳೆಯೇನಾದರೂ ಸಿಗುತ್ತದೆಯಾ ಅಂತ ನೋಡುತ್ತಿರುತ್ತದೆ.ಈ ಬಾರಿ ರೂಪಾಯಿ ಮೌಲ್ಯ ಕುಸಿದು,ಆಡಳಿತ ವ್ಯವಸ್ಥೆಯೇ ಹಳ್ಳ ಹಿಡಿದು ಕುಳಿತಿರುವಾಗ ಅದಕ್ಕೆ ಕಾಣಿಸಿದ ಬೆಳಕಿನ ಹಾದಿ “ನಾಯಿ ಮರಿ”…!

ಹೌದು. ಗುಜರಾತ್ ಮುಖ್ಯಮಂತ್ರಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಬಳಸಿದ ನಾಯಿ ಮರಿ ಪದ.ರಾಯಿಟರ್ಸ್ ನೀಡಿದ ಸಂದರ್ಶನದಲ್ಲಿ ನಾಯಿ ಮರಿ ಬಂದಿದ್ದು ಹೇಗೆ ಅಂತ ನೋಡಿದರೆ,

ಸಂದರ್ಶಕ: “ಏನು (೨೦೦೨ ರ ಗಲಭೆ) ನಡೆಯಿತೋ ಆ ಬಗ್ಗೆ ನೀವು ಪಶ್ಚಾತ್ತಾಪ ಪಡುತ್ತಿರಾ?”

ಮತ್ತಷ್ಟು ಓದು »

8
ಜುಲೈ

’ಹರಶರಣ ದೆನಿಲೋನ ಹಾದಿಯಲ್ಲಿ’ ಶಿವಪ್ರಕಾಶರ ಲೇಖನಕ್ಕೊಂದು ಪ್ರತಿಕ್ರಿಯೆ

-ಬಾಲಚಂದ್ರ ಭಟ್

Danielouಈ ಲೇಖನ ಪ್ರಜಾವಾಣಿಯಲ್ಲಿ ಪ್ರಕಟವಾದ ಎಚ್.ಎಸ್.ಶಿವಪ್ರಕಾಶರ ಜುಲೈ ೫ ರಂದು ಪ್ರಕಟವಾದ ’ಹರಶರಣ ದೆನಿಲೋನ ಹಾದಿಯಲ್ಲಿ’ ಬರಹಕ್ಕೆ ಪ್ರತಿಕ್ರಿಯೆ. ಬಹಳಷ್ಟು ವಿಷಯಗಳನ್ನು ಲೇಖನದಲ್ಲಿ ಉಲ್ಲೇಖಿಸಿದ್ದನ್ನು ಓದಿದ ನಂತರ ಸ್ವಲ್ಪ ಲೇಖನ ಏನು ಹೇಳಹೊರಟಿದೆಯೆಂಬುದರ ಬಗ್ಗೆ ಗೊಂದಲ ಮೂಡಿತು. ನಾನು ತಿಳಿದುಕೊಂಡಂತೆ ಲೇಖಕರು ಒಟ್ಟಾರೆಯಾಗಿ ಏನು ಹೇಳುತ್ತಾರೆಂದರೆ,

೧. ಆಲೆನ್ ದೆನಿಲೋ ನ ವಿಚಾರಗಳು, ಬಹುತೇಕ ಭಾರತೀಯ ಆಧ್ಯಾತ್ಮಿಕ ಪರಿಕಲ್ಪನೆಗಳಿಗಿಂತ(‘ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತ’) ಭಿನ್ನವಾಗಿತ್ತು, ಹಾಗೂ

೨. ಭಾರತದ ಆಧ್ಯಾತ್ಮಿಕ ವಿಷಯಗಳ ಬಗ್ಗೆ ’ಸ್ಟೀರಿಯೊಟೈಪಡ್ ಪೌರಾತ್ಯ’ ಚಿಂತನೆಗಳಿಂದ, ಹಾಗೂ ವಸಾಹತುಶಾಹಿ ಪರಿಕಲ್ಪನೆಗಳಿಂದ ಹೊರತಾಗಿದ್ದವು.

ಈ ಮೇಲಿನ ಎರಡು ಲೇಖಕರ ಅಭಿಪ್ರಾಯಗಳನ್ನು ಈ ಕೆಳಗಿನಂತೆ ವಿಮರ್ಶಿಸಿದ್ದೇನೆ.ಹಾಗೆಯೆ ಪ್ರಶ್ನೆಗಳ ಮೂಲಕ ನನ್ನಲ್ಲಿನ ಗೊಂದಲಗಳನ್ನ ಪ್ರಸ್ತಾಪಿಸಿದ್ದೇನೆ. ತಪ್ಪಿದ್ದಲ್ಲಿ ಸರಿಪಡಿಸಿ.

೧. ನಾನು ಹಾಗೆ ತಿಳಿದುಕೊಳ್ಳಲು ಕಾರಣ ಶಿವಪ್ರಕಾಶರು ಹೀಗೆ ಉಲ್ಲೇಖಿಸಿರುವದು: “ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತವನ್ನೇ ಭಾರತದ ಸಾರ ಸರ್ವಸ್ವವೆನ್ನುವರು ಆ ಕಾಲದ ಬಹಳ ಮಂದಿ ವಿದ್ವಾಂಸರು. ಅವರಲ್ಲಿ ಬಹುತೇಕ ಪ್ರಭೃತಿಗಳು ಭಾರತೀಯರೆಂದರೆ ಜೀವನೋತ್ಸಾಹ, ರಾಗರತಿಗಳಿಲ್ಲದ ಓಡುಗಾಲ ಯೋಗಿಗಳೆಂದು ಬಗೆದಿದ್ದರು. ಆದರೆ ವಿದ್ವತ್ತು, ರಸಗ್ರಾಹಿತ್ವ ಮತ್ತು ವ್ಯಕ್ತಿಗತ ಆಧ್ಯಾತ್ಮಿಕ ಸಾಧನೆಗಳ ತ್ರಿವೇಣಿಸಂಗಮವಾಗಿದ್ದ ದೆನಿಲೋ ಒತ್ತು ನೀಡಿದ್ದು ಭಾರತೀಯರ ರಸವಿಮುಖಿಯಾದ ಸಮಣಪಂಥೀಯ ಅಧ್ಯಾತ್ಮವಾದಕ್ಕಲ್ಲ, ಐಂದ್ರಿಕ ಜಗತ್ತಿಗೆ ತನ್ನನ್ನು ಪೂರ್ಣವಾಗಿ ತೆರೆದುಕೊಂಡು ಹಾಕುವ ಪ್ರತಿಯೊಂದು ತುತ್ತನ್ನೂ ಬಿಂದುವಾಗಿ ಮಾಡಿಕೊಂಡ ಶೈವ-ಶಾಕ್ತರ ಪೂರ್ಣಾದ್ವೈತಕ್ಕೆ.”

ಮತ್ತಷ್ಟು ಓದು »

17
ಜೂನ್

ಬೌದ್ದರನ್ನು ಓಡಿಸಲು ಶಂಕರರೇನು ಅರಸರಾಗಿದ್ದರೇ?

– ಸಂತೋಶ್ ತಮ್ಮಯ್ಯ

Shankaraacharya1ಕೆಲವರ ಮನಸ್ಸೇ ವಿಚಿತ್ರವಾದುದು. ಅವರದ್ದು ವಿನಾಕಾರಣ ನಿರಾಕರಣವಾದ. ಇದ್ದುದನ್ನು ಇಲ್ಲವೆನ್ನುವುದು, ಇಲ್ಲದ್ದನ್ನು  ಇದೆ ಎನ್ನುವುದು , ವಿನಾಕಾರಣ ಖಂಡಿಸುವುದು, ವಿಪರೀತವನ್ನು ಮಂಡಿಸುವುದು, ವಿಚಿತ್ರ ಸ್ವಭಾವಗಳು. ಉದಾಹರಣೆಗೆ ಎಲ್ಲರಿಗೂ ಇಷ್ಟವಾಗುವ ಸಿನೆಮಾವನ್ನು ಕೆಲವರು ವಿನಾಕಾರಣ ಬಯ್ಯುತ್ತಾರಲ್ಲಾ ಅಂಥವರು.  ಆ ಮನಸ್ಸನ್ನು  ಸಿನಿಕವೆನ್ನಿ, ಪೂರ್ವಗ್ರಹವೆನ್ನಿ, ಅಬದ್ಧವೆನ್ನಿ, ಅಸ್ವಸ್ಥವೆನ್ನಿ ಎಲ್ಲವೂ ಸರಿಯೇ. ನಮ್ಮ ಸಾಹಿತ್ಯಲೋಕದಲ್ಲಿ ಅಂಥವರನೇಕರು ಸಿಗುತ್ತಾರೆ. ಅವರೆಲ್ಲರೂ   ಸಂದರ್ಭ ಸಿಕ್ಕಾಗಲೆಲ್ಲಾ ಹೀಗೆ ಹೇಳಿಕೆಗಳನ್ನು ಕೊಡುತ್ತಿರುತ್ತಾರೆ. ಭೈರಪ್ಪನವರು ಬರೆದಾಗ, ನ್ಯಾಯನೀತಿಯನ್ನು ಇನ್ಯಾರೋ ಎತ್ತಿ ಹಿಡಿದಾಗ, ಚಿದಾನಂದ ಮೂರ್ತಿಗಳು ಏನನ್ನೋ ಶೋಧಿಸಿದಾಗಲೆಲ್ಲಾ   ಅದಕ್ಕೆ ಸಂಪೂರ್ಣ ನೇತ್ಯಾತ್ಮಕವಾದುದನ್ನು ಹಿಡಿದು ಹೇಳಿಕೆಗಳನ್ನು ನೀಡಲಾರಂಭಿಸುತ್ತಾರೆ. ಅದಕ್ಕೆ ಕೆಲವು ಪತ್ರಕರ್ತರು ಕನ್ನಡದ ಮನಸ್ಸು ಎಂಬ ಹೆಸರು ಕೊಟ್ಟುಬಿಡುತ್ತಾರೆ. ಇಂಥ ಸತ್ಯದ ಆವರಣವನ್ನೇ ಕನ್ನಡದ ಮನಸ್ಸು ಎನ್ನುವುದಾದರೆ ಅದು ಕನ್ನಡಕ್ಕೆ ಮುಸುಕಿರುವ ಆವರಣ ಎನ್ನದೆ  ವಿಧಿ ಇಲ್ಲ. ಇಂಥವರ ಗುಂಪಿಗೆ ಈಗ ಮತ್ತೊಬ್ಬರು ಸೇರಿದ್ದಾರೆ.

ಯಾರೋ ಕೇಶವ ಮೂರ್ತಿಯಂತೆ. ಇದುವರೆಗೆ ಅವರ ಮುಖ ನೋಡಿದವರಿಲ್ಲ. ಸಾಹಿತ್ಯ ಓದಿದವರಿಲಿಲ್ಲ. ಈ ಮಧ್ಯೆ ಕಾಂಗ್ರೆಸ್ ಆಡಳಿತಕ್ಕೆ ಬಂತು. ಗುರುತಿಸಿಕೊಳ್ಳುವುದು ಲಾಭದ ದೃಷ್ಟಿಯಿಂದ ಉತ್ತಮ ಎನಿಸಿತ್ತೋ ಏನೋ ಹೇಳಿಕೆಯೊಂದನ್ನು ಕೊಟ್ಟರು.”ನರೇಂದ್ರ  ಮೋದಿಗಿಂತ ಶಂಕರಾಚಾರ್ಯರು ಹೆಚ್ಚು ಕ್ರೂರಿ” ಎಂದರು. ನರೇಂದ್ರಮೋದಿಯವರನ್ನು ನವನವೀನವಾಗಿ ಟೀಕಿಸುವ ಜನರಿಗೆ ಒಮ್ಮೆ ಈ ಮಾದರಿಯ ಟೀಕೆ ಸ್ವಜನಶೀಲವಾಗಿ ಕಂಡಿರಬೇಕು. ಏಕೆಂದರೆ ಅಲ್ಲಿ ಮೋದಿಯೂ ಇದ್ದರೂ, ಶಂಕರಾಚಾರ್ಯರೂ ಇದ್ದರು. ಇತಿಹಾಸವನ್ನೂ ಬಯ್ದಂತಾಯಿತು. ವರ್ತಮಾನವನ್ನೂ ತೆಗಳಿದಂತಾಯಿತು. ವೋಟ್ ಬ್ಯಾಂಕ್‌ ರಾಜಕಾರಣಕ್ಕಂತೂ ಇಂಥ ಹೇಳಿಕೆಗಳ ಆವಶ್ಯಕತೆ ತುಂಬಾ ಇತ್ತು. ಖಂಡಿಸುವ ಈ ಹೇಳಿಕೆಗಳಿಗಾಗಿ ಅವರು ಸಾಕಷ್ಟು  ಶ್ರಮವನ್ನೇ ಪಟ್ಟಿರಬೇಕು.
ಬಹುಶಃ ಕೇಶವಮೂರ್ತಿಯವರಿಗೆ ಈ ಸಂಗತಿಗಳು ತಿಳಿದಿರಲಿಕ್ಕಿಲ್ಲ.

೧೯೮೪ರ ಸಿಕ್ಖ್ ನರಮೇಧದಲ್ಲಿ ಸತ್ತವರು ೨೭೩೩ ಎಂಬುದು ಸರಕಾರದ ದಾಖಲೆ. ಆದರೆ ದಂಗೆಯಲ್ಲಿ  ೨೫,೦೦೦ಕ್ಕೂ ಹೆಚ್ಚು ಜನರು ಸತ್ತರು ಮತ್ತು ಗಾಯಗೊಂಡಿದ್ದರು. ನೂರಾರು ಸಿಕ್ಖ್ ಮಹಿಳೆಯರ ಮೇಲೆ ಅತ್ಯಾಚಾರ ನಡೆಯಿತು. ಸುಮಾರು ೩ ಲಕ್ಷ ಸಿಕ್ಖರು ಮನೆಮಾರುಗಳನ್ನು ಬಿಟ್ಟು ಓಡಿ ಹೋದರು ಮತ್ತು ತಲೆ ಮರೆಸಿಕೊಂಡರು. ನೂರಾರು ಗುರುದ್ವಾರಗಳನ್ನು ಕೆಡವಲಾಯಿತು ಮತ್ತು ಧರ್ಮಗ್ರಂಥವನ್ನು ಸುಡಲಾಯಿತು.  ದೇಶ ಕಾಯುತ್ತಿದ್ದ ೩೦೦ ಜನ ಸಿಕ್ಖ್ ಯೋಧರನ್ನ್ನು  ಕೊಲ್ಲಲಾಯಿತು. ಬೊಕಾರೋ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ೧೨೦ ಜನ  ಸಿಕ್ಖರನ್ನು  ಸಾಮೂಹಿಕವಾಗಿ  ದಹಿಸಲಾಯಿತು. ಖಾನ್‌ಪುರದಲ್ಲಿ ೧೩ ವರ್ಷದ ಸಿಕ್ಖ್ ಬಾಲಕನನ್ನು  ಗ್ಯಾಸ್ ಸ್ಟವ್‌ನಲ್ಲೇ ಕೋಳಿ ಸುಡುವಂತೆ ಸುಡಲಾಯಿತು. ಅಗರ್ತಲಾದಲ್ಲಿ ವಾಸಿಸುತ್ತಿದ್ದ ೩೦ ಸಿಕ್ಖ್ ಕುಟುಂಬಗಳು ಜೀವರಕ್ಷಣೆಗಾಗಿ ಪೊಲೀಸ್ ಠಾಣೆಯ  ಮೆಟ್ಟಲೇರಿದರು. ಪೊಲೀಸರೇ ಅವರೆಲ್ಲರನ್ನು ಸಜೀವವಾಗಿ ಸುಟ್ಟರು. ಮಧ್ಯಪ್ರದೇಶದ ಜಬಲ್‌ಪುರದಲ್ಲಿ ೧೨ ಜನ ಸಿಕ್ಖರನ್ನು ರೈಲು ನಿಲ್ದಾಣದ  ಪ್ಲಾಟ್‌ಫಾರ್ಮ್‌ನಲ್ಲೇ ನೇಣು ಹಾಕಿ ಕೊಲ್ಲಲಾಯಿತು.

ಮತ್ತಷ್ಟು ಓದು »

7
ಜೂನ್

ಶಿವ ನಾನು, ಶಿವ ನಾನು!

Shankaraacharya1ಈ ಬರಹವು ’ಎಲ್ಲರ ಕನ್ನಡ ‘ ದಲ್ಲಿದೆ.ಎಲ್ಲರ ದನಿಗೂ ವೇದಿಕೆಯಾಗುವ ನಿಲುಮೆಯ ಎಂದಿನ ನಿಲುವಿನಂತೆ ಈ ಲೇಖನವನ್ನು “ನಿಲುಮೆ” ಪ್ರಕಟಿಸುತ್ತಿದೆ.ಆದರೆ ವಿಷಯಗಳು ಸಾಮಾನ್ಯ ಕನ್ನಡಿಗರಿಗೆ ತಲುಪಬೇಕೆಂದರೆ ವಿಷಯ ಸಾಮಾನ್ಯ ಕನ್ನಡದಲ್ಲಿದ್ದರೆ ಒಳಿತಾದ್ದರಿಂದ ಪ್ರಚಲಿತ ಬಳಕೆಯಲ್ಲಿರುವ ಕನ್ನಡದ ಲೇಖನಗಳನ್ನು ಅಪೇಕ್ಷಿಸುತ್ತದೆ.

– ಕಿರಣ್ ಬಾಟ್ನಿ

{ಇತ್ತೀಚೆಗೆ ಜಾತಿಗಳ ಬಗೆಗಿನ ಚರ‍್ಚೆ ಹಾದಿ ತಪ್ಪುತ್ತಿದೆ ಎಂದು ನನ್ನ ಅನಿಸಿಕೆ. ಒಂದು ಕಡೆ ’ಬಲಗಡೆ’ಯವರಲ್ಲಿ ಮುಂಚೂಣಿಯಲ್ಲಿದ್ದಾರೆ ಎನಿಸಿಕೊಂಡವರು ಬಾರತದಲ್ಲಿ ಜಾತಿಯೇರ‍್ಪಾಡೆಂಬುದೇ ಇಲ್ಲ ಎಂದು ವಾದಿಸಿ ಆ ಮೂಲಕ ಕೂಡಣಮಾರ‍್ಪಿಗೆ ಅರ‍್ತವೇ ಇಲ್ಲವೆಂಬ ಅನಿಸಿಕೆಯನ್ನು ಬಿತ್ತುತ್ತಿದ್ದಾರೆ. ಇನ್ನೊಂದು ಕಡೆ ’ಎಡಗಡೆ’ಯವರಲ್ಲಿ ಜಾತಿಯೇರ‍್ಪಾಡಿನ ಕೆಡುಕುಗಳ ಬಗ್ಗೆ ಹಾಡಿ ಗೋಳಾಡುವುದೇ ಒಂದು ಕಸುಬಾಗಿ ಬಿಟ್ಟಿರುವುದರಿಂದ ಅವರಿಂದ ಕೂಡಣಮಾರ‍್ಪಿನ ನಿಟ್ಟನ್ನು ಬಯಸುವುದೇ ತಪ್ಪೆಂಬಂತಿದೆ. ಇನ್ನು ಇವೆರಡು ಗುಂಪುಗಳು ಅರಿವನ್ನು ಹಂಚಿಕೊಳ್ಳುವುದಂತೂ ದೂರದ ಮಾತು.

ಇವೆರಡರ ನಡುವಿನ ಹಾದಿಯೊಂದನ್ನು ನಾವು ಕಂಡುಕೊಳ್ಳದೆ ಹೋದರೆ ಒಟ್ಟಾರೆಯಾಗಿ ಕನ್ನಡಿಗರಿಗೆ ಏಳಿಗೆಯಿಲ್ಲ ಎಂಬ ನಂಬಿಕೆ ನನ್ನಲ್ಲಿ ಬಹಳ ಗಟ್ಟಿಯಾಗಿದೆ. ’ಎಲ್ಲರಕನ್ನಡ’ವನ್ನು ನಾನು ಒಪ್ಪಿ ಅದನ್ನೇ ಬಳಸುವ ಹಟ ಹಿಡಿದಿರುವುದಕ್ಕೆ ಈ ನಂಬಿಕೆ ಒಂದು ಮುಕ್ಯವಾದ ಕಾರಣ. ಹುಟ್ಟಿನಿಂದ ಮಾದ್ವ ಬ್ರಾಮಣ ಜಾತಿಗೆ ಸೇರಿದ ನಾನು ಈ ನಡುಹಾದಿಯಲ್ಲಿ ನಡೆಯುವಾಗ ಸಂಸ್ಕ್ರುತದಲ್ಲಿ ಈಗಾಗಲೇ ಇರುವ ಮತ್ತು ಕನ್ನಡದ ಕೂಡಣವನ್ನು ಒಡೆಯದೆ ಅದನ್ನು ಇಡಿಯಾಗಿ ಆದ್ಯಾತ್ಮಿಕ ಎತ್ತರಕ್ಕೊಯ್ಯುವಂತಹ ಅರಿವನ್ನು ನನ್ನ ಕಯ್ಲಾದಶ್ಟು ಎಲ್ಲರಕನ್ನಡಕ್ಕೆ ತರಬೇಕಾದುದು ನನ್ನ ಕರ‍್ತವ್ಯವೆಂದೇ ತಿಳಿದುಕೊಂಡಿದ್ದೇನೆ.

ಇಲ್ಲಿ ಬಹಳ ಚಿಕ್ಕದಾದ ಅಂತಹ ಒಂದು ಮೊಗಸನ್ನು ಮಾಡಿದ್ದೇನೆ. ಎಲ್ಲರಕನ್ನಡದಲ್ಲಿ ಹೀಗೆ ಗೇದರೆ ಬ್ರಾಮಣರು ಜಾತಿಯೇರ‍್ಪಾಡನ್ನು ಕೆಡವಲು ನೆರವಾಗಬಹುದು ಮತ್ತು ಬ್ರಾಮಣಿಕೆಯನ್ನು ಒಂದು ಜಾತಿಯಂತೆ ಕಾಣುವುದನ್ನು ನಿಲ್ಲಿಸಿ ಹಿಂದಿನ ಬ್ರಾಮಣರು ಮಾಡಿದ ಕೆಲಸದಲ್ಲಿ ನಿಜವಾಗಲೂ ಉಳಿಸಿಕೊಳ್ಳತಕ್ಕುದನ್ನು ಉಳಿಸಿಕೊಂಡು ಆ ಮೂಲಕ ಕೂಡಣಕ್ಕೆ ನೆರವಾಗಬಹುದು. ಇದನ್ನು ಎಶ್ಟು ಸಾರಿ ಕೂಗಿ ಹೇಳಿದರೂ ಸಾಲದು. – ಕಿ. ಬಾ.}

ಮತ್ತಷ್ಟು ಓದು »

17
ಮೇ

ಹೇಗೆ ಹೇಳಲಿ? ಏನು ಹೇಳಲಿ?

– ಪ್ರೊ.ರಾಜಾರಾಮ ಹೆಗಡೆ
Vachana Charche ದೇವನೂರು ಮಹಾದೇವರವರ ಲೇಖನಕ್ಕೆ ಪ್ರತಿಕ್ರಿಯೆ {ಪ್ರಜಾವಾಣಿಯಲ್ಲಿ ಅಪ್ರಕಟಿತ ಲೇಖನ}

ದೇವನೂರು ಮಹಾದೇವರ ಪ್ರತಿಕ್ರಿಯೆಯನ್ನು ಓದಿದ ನಂತರ, ಅವರು ಏನನ್ನು ಹೇಗೆ ಹೇಳಿದ್ದಾರೆ ಎಂಬುದನ್ನು ಕಂಡ ನಂತರ ಅವರನ್ನು ಕಾಡಿದ ಆ “ಹೇಗೆ ಹೇಳಲಿ? ಏನು ಹೇಳಲಿ?” ಎಂಬ ಪ್ರಶ್ನೆ ಈಗ ಅವರದಕ್ಕಿಂತ ನನ್ನದೇ ಆಗಿದೆ. ಅವರು ನಮ್ಮ ಕುರಿತು ಏಕೆ ಇಂಥ ಭಾಷೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ಸ್ಪಷ್ಟ. ಅವರಿಗೆ ಸಿಟ್ಟಿದೆ. ದೇವನೂರರು ಒಂದು ಸಮೂಹದ ಹಿತದೃಷ್ಟಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರ ಜೀವನ ಈ ಕುರಿತಾಗಿಯೇ ಒಂದು ಹೋರಾಟ ಎಂದರೂ ತಪ್ಪಿಲ್ಲ. ಇಷ್ಟನ್ನು ಖಚಿತವಾಗಿ ಹೇಳಬಲ್ಲಷ್ಟು ನಾನು ಅವರನ್ನು ಬಲ್ಲೆ. ಹಾಗೂ ಅದನ್ನು ಗಮನಿಸುವುದು ಮುಂದಿನ ಸಂವಾದಕ್ಕೆ ನಿರ್ಣಾಯಕ ಎಂಬುದಾಗಿ ನನಗನಿಸುತ್ತದೆ. ಏಕೆಂದರೆ ಯಾರದೇ ಪ್ರಾಮಾಣಿಕತೆಯ ಮೇಲೆ ಅಪನಂಬಿಕೆಯನ್ನಿಟ್ಟು ಬೌದ್ಧಿಕ ಚರ್ಚೆಯನ್ನು ಪ್ರಾರಂಭಿಸುವುದರಿಂದ ಚರ್ಚಿಸತಕ್ಕ ವಿಷಯಕ್ಕೆ ನ್ಯಾಯ ಸಲ್ಲುವುದಿಲ್ಲ.

ನಮ್ಮ ದುರುದ್ದೇಶದ ಕುರಿತು ಅವರು ಕಟ್ಟಿಕೊಂಡಿರುವ ಚಿತ್ರಗಳನ್ನು ಅವರ ಲೇಖನದ ಮೂಲಕ ಗ್ರಹಿಸುತ್ತ ಹೋದಾಗ ನಮ್ಮ ಕುರಿತು ಯಾವ ರೀತಿಯ ಚಿತ್ರಣವು ಅವರ ವಲಯದಲ್ಲಿ ಗಟ್ಟಿಯಾಗುತ್ತಿದೆ ಎಂಬುದಕ್ಕೆ ಮತ್ತೊಂದು ದೃಷ್ಟಾಂತ ಸಿಕ್ಕಂತಾಯಿತು. ಹಾಗಂತ ಇದೇನೂ ನನಗೆ ಆಘಾತ ನೀಡಲಿಲ್ಲ. ಈ ಥೆರಪಿಯನ್ನು ನನಗೆ ಹಾಗೂ ನನ್ನ ಗುಂಪಿಗೆ ನಾವು ಬಾಲು ಜೊತೆ ಸೇರಿ ಸಂಶೋಧನೆ ಪ್ರಾರಂಭಿಸಿದಾಗಿನಿಂದಲೂ ನೀಡಲಾಗುತ್ತಿದೆ. ಸಂಶೋಧನೆ ಮಾಡುವುದು ಕೇವಲ ಬೌದ್ಧಿಕ ಪ್ರಶ್ನೆಯೊಂದೇ ಅಲ್ಲ, ಅದು ಪ್ರವಾಹದ ವಿರುದ್ಧ ಈಜುವ ಕೆಲಸ ಕೂಡ ಆಗಿದೆ ಎಂಬುದು ನಮಗೆ ಈಗಾಗಲೇ ಅನುಭವ ವೇದ್ಯವಾಗಿದೆ. ನಮ್ಮ ದುರುದ್ದೇಶದ ಕುರಿತು ಹುಟ್ಟುತ್ತಿರುವ ಕಥೆ ಸಾಕಷ್ಟು ಬೇರುಬಿಡುತ್ತಿದೆ ಎಂಬುದನ್ನು ಪ್ರಜಾವಾಣಿ ಪ್ರತಿಕ್ರಿಯೆಗಳಿಂದ ಮನಗಾಣುತ್ತಿದ್ದೇನೆ. ದೇವನೂರರೇ ಕೊಟ್ಟ ಆಡಿನ ಕಥೆಯಂತೆ ಹತ್ತಾರು ಮಂದಿ ಒಂದು ಸುಳ್ಳನ್ನು ಹೇಳುತ್ತಿದ್ದರೆ, ಹಾಗೂ ನಾವು ಸುಮ್ಮನೇ ಇದ್ದರೆ ಜನ ಅದನ್ನೇ ಸತ್ಯವೆಂದು ನಂಬಿಬಿಡುವ ಸಾಧ್ಯತೆಯಿದೆ. ಒಂದೊಮ್ಮೆ ನಮ್ಮ ಸಂಶೋಧನೆಯು ದೇವನೂರರು ಅಂದುಕೊಂಡಂತೇ ಯಾವುದೇ ಮಾನವ ಸಮುದಾಯದ ಅಹಿತವನ್ನು ಬಯಸುವ ದುರುದ್ದೇಶವನ್ನು ಹೊಂದಿಲ್ಲ ಅಂತಾದರೆ, ಈ ನಿಟ್ಟಿನಲ್ಲಿ ಈಗಿರುವ ಜ್ಞಾನದ ಮಿತಿಗಳನ್ನು ಕಳೆದು ಇನ್ನೂ ಹೆಚ್ಚು ಸ್ಪಷ್ಟತೆಯನ್ನು, ನ್ಯಾಯವನ್ನು ಸಾಧಿಸುವುದು ಅಂತಾದರೆ, ದೇವನೂರರ ನೋವಿಗೆ ಇರಬಹುದಾದ ಕಾರಣಗಳೇ ಮಾಯವಾಗುತ್ತವೆ. ಮುಂದೆ ಅವರ ಜೊತೆ ಅರ್ಥಪೂರ್ಣ ಸಂವಾದ ಸಾಧ್ಯವಾಗಬಹುದು ಎಂಬ ಆಶಯದಿಂದ ಈ ಲೇಖನ.

ಮತ್ತಷ್ಟು ಓದು »

16
ಮೇ

ವಂದೇ ಮಾತರಂ ಹಾಡಲಾಗದಿದ್ದರೆ…

-ಅಶ್ವಿನ್ ಅಮೀನ್

Vande Mataram BSPಅದನ್ನು ಬರಿ ಗೀತೆ ಅನ್ನಬಹುದೇ?ಊಹೂಂ ಅದು ಗೀತೆಯಲ್ಲ, ಅದು ಭಾರತದ ಸ್ವಾತಂತ್ರ್ಯ ಹೋರಾಟದ ಬೀಜಮಂತ್ರ.ಬ್ರಿಟಿಷರ ನಿದ್ದೆ ಕೆಡಿಸುತ್ತಿದ್ದ ಮಂತ್ರವದು.ಎದೆಯುಬ್ಬಿಸಿ ಗರ್ವದಿಂದ ಗರ್ಜಿಸುವಾಗ ಮೈ ಮನಸ್ಸುಗಳು ರೋಮಾಂಚನಗೊಳ್ಳುತ್ತವೆ.. ಅದೆಂತಾ ಶಕ್ತಿಯಿದೆ ಈ ‘ವಂದೇ ಮಾತರಂ’ ನಲ್ಲಿ. ಅದೆಷ್ಟೋ ಹೋರಾಟಗಳ ಸ್ಪೂರ್ತಿ ಇದು, ದೇಶ ಪ್ರೇಮವ ಬಡಿದೆಬ್ಬಿಸುವ ಬೀಜಮಂತ್ರವಿದು. ಪ್ರತಿಯೊಬ್ಬ ಭಾರತೀಯನ ನಾಡಿ ಮಿಡಿತವಿದು… ವಂದೇ ಮಾತರಂ ಅನ್ನು ವಿಶ್ಲೇಷಿಸ ಹೊರಟರೆ ಆ ವಿಶ್ಲೇಷಣೆಯೇ ಒಂದು ವೀರ ಗೀತೆಯಾದೀತು…!!!!

ಆದರೆ…ವಂದೇ ಮಾತರಂ ಅನ್ನು ಗೌರವಿಸುವ ಮನಸ್ಸುಗಳ ನಡುವೆ ಧರ್ಮದ ನೆಪವೊಡ್ಡಿ ಅದನ್ನು ವಿರೋಧಿಸುವ ಕೆಲ ವಿಷ ಮನಸ್ಸುಗಳೂ ತುಂಬಿರುವುದು ಖೇದಕರ..

ಮೊನ್ನೆ ಮೊನ್ನೆ ತಾನೆ ತಾನು ಮುಸ್ಲಿಂ ಎಂಬ ಕಾರಣಕ್ಕೆ ವಂದೇ ಮಾತರಂ ಹಾಡುವುದಿಲ್ಲ ಎಂದು ವಂದೇ ಮಾತರಂ ಹಾಡಿನ ಮಧ್ಯೆಯೇ ಸಂಸತ್ತಿನಿಂದ ಹೊರನಡೆದು ಉದ್ದಟತನ ತೋರಿದ ಬಿಎಸ್ಪಿ ಸಂಸದ ಶಫಿಕುರ್ ರೆಹಮಾನ್ ಬಗ್ಗೆ ಕೇಳಿರುತ್ತೀರಿ. ಇಂತಹ ಮತಾಂಧವಾದದ ನಡೆ ಇದೇ ಮೊದಲಲ್ಲ. ವಂದೇ ಮಾತರಂ ಅನ್ನು ವಿರೋಧಿಸಿ ಭಾರತೀಯರಲ್ಲಿ ವಿಷ ಬೀಜ ಬಿತ್ತಿದವರಲ್ಲಿ ಆಲಿ ಸಹೋದರರು ಮೊದಲಿಗರಾಗಿ ಕಂಡು ಬರುತ್ತಾರೆ.

ಆ ಘಟನೆ ಹೀಗಿದೆ;

1923. ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್ಸ್ ನ ರಾಷ್ಟ್ರೀಯ ಅಧಿವೇಶನ ನಡೆಯುತ್ತಿತ್ತು. ಆಗ ಪ್ರತಿ ಅಧಿವೇಶನದಲ್ಲಿ ವಂದೇ ಮಾತರಂ ಹಾಡುವ ಸಂಪ್ರದಾಯ ಬೆಳೆದು ಬಂದಿತ್ತು. ಪಂಡಿತ್ ವಿಷ್ಣು ದಿಗಂಬರ ಫಲುಸ್ಕರ್ ಪ್ರತಿ ವರ್ಷದಂತೆ ವಂದೇ ಮಾತರಂ ಹಾಡ ಹೊರಟಾಗ ಆಗಿನ ಕಾಂಗ್ರೆಸ್ಸ್ ಅಧ್ಯಕ್ಷ (ಮುಸ್ಲಿಂ ಲೀಗ್ ನ ಸ್ಥಾಪಕರಲ್ಲೊಬ್ಬರಾದ) ಮೌಲಾನ ಅಹಮದ್ ಆಲಿ ಆತನ ಸಹೋದರ ಶೌಕತ್ ಆಲಿ ತಡೆದರು. ಇಸ್ಲಾಂನ ಕಾನೂನಿನಂತೆ ಸಂಗೀತ ನಿಷಿದ್ಧ ಎಂಬುದು ಅವರು ಕೊಟ್ಟ ಕಾರಣವಾಗಿತ್ತು. ಹಠಾತ್ ಬೆಳವಣಿಗೆಯಿಂದ ಕೆಂಡಾ ಮಂಡಲರಾದ ಫಲುಸ್ಕರ್ ಇದು ಕಾಂಗ್ರೆಸ್ಸ್ ನ ಅಧಿವೇಶನ, ಒಂದು ಧರ್ಮದ ಸಭೆಯಲ್ಲ.. ಮುಸ್ಲಿಮರ ದರ್ಗಾ, ಮಸೀದಿಯೂ ಅಲ್ಲ.. ಈ ರಾಷ್ಟ್ರೀಯ ವೇದಿಕೆ ಮೇಲೆ ವಂದೇ ಮಾತರಂಗೆ ಅಡ್ಡಿಪಡಿಸಲು ನಿಮಗೇನು ಅಧಿಕಾರವಿದೆ? ಅಧಿವೇಶನ ಪ್ರಾರಂಭವಾಗುವ ಮೊದಲು ಅಧ್ಯಕ್ಷೀಯ ಮೆರವಣಿಗೆ ಯಲ್ಲಿ ವಿಜೃಂಭಣೆಯ ಸಂಗೀತ ವಾದ್ಯಗಳೊಂದಿಗೆ ಬರುವಾಗ ನಿಮಗೆ ಹಿಡಿಸಿತೇ ?! ವಂದೇ ಮಾತರಂಗೆ ವಿರೋಧ ಇರುವವರು ಧಾರಾಳವಾಗಿ ಹೊರ ನಡೆಯಬಹುದು ಎಂದು ಆಲಿ ಸಹೋದರರನ್ನು ಜಾಡಿಸಿದರು. ನಂತರ ವಂದೇ ಮಾತರಂ ಅನ್ನು ಪೂರ್ತಿಯಾಗಿ ಹಾಡಿ ವಂದಿಸಿ ಕೆಳಗಿಳಿದರು.
ಮತ್ತಷ್ಟು ಓದು »

6
ಏಪ್ರಿಲ್

ಇನ್ನೂ ಬೇಕೆ ಇಂಥ ರಾಜಕೀಯ ಮೀಸಲಾತಿ?

-ಸಾತ್ವಿಕ್ ಎನ್.ವಿ.

ಒಂದು ವಿಷಯವಂತೂ ಸಂಸತ್ತಿನಲ್ಲಿ ಒಂದು ಸಣ್ಣ ಚರ್ಚೆಯೂ ಇಲ್ಲದೇ ಸರ್ವಾನುಮತದಿಂದ ಅನುಮೋದನೆ ಪಡೆಯುತ್ತದೆ. ಸಂಸದರು ಇದಕ್ಕೆ ವಿರೋಧ ಇಲ್ಲವೆ ಅನುಮಾನ ವ್ಯಕ್ತಪಡಿಸುವುದು ಪ್ರತಿಗಾಮಿತನ ಎಂದೇ ಭಾವಿಸುತ್ತಾರೆ. ಪಕ್ಷಬೇಧ ಮರೆತು ಬೆಂಬಲಿಸುತ್ತಾರೆ. ಅದುವೇ ಚುನಾವಣೆಯಲ್ಲಿ ನೀಡಲಾಗಿರುವ ರಾಜಕೀಯ ಮೀಸಲಾತಿಯ ನವೀಕರಣ. ಇದು ಪ್ರತಿ ಹತ್ತು ವರ್ಷಕ್ಕೊಮ್ಮೆ ನವೀಕರಣಕ್ಕೆ ಬರುತ್ತದೆ. ಆಗ ಸಂಸತ್ತು ಈ ಪದ್ಧತಿಯನ್ನು ನಿರಾಕರಿಸಬಹುದು ಇಲ್ಲವೇ ಮುಂದಿನ ಹತ್ತು ವರ್ಷಕ್ಕೆ ನವೀಕರಿಸಬಹುದು. ಆದರೆ ಸಂಸತ್ತು ಯಾವುದೇ ಚರ್ಚೆಯಿಲ್ಲದೇ ನವಿಕರಿಸುತ್ತಲೇ ಬಂದಿದೆ. ಸರ್ಕಾರ ಯಾ ರಾಜಕೀಯಪಕ್ಷಗಳಿಗೆ ದಲಿತ/ಹಿಂದುಳಿದ ವರ್ಗಗಳ ಬಗ್ಗೆ ಇಷ್ಟೊಂದು ಪ್ರೀತಿ ಎಲ್ಲಿಂದ ಉಕ್ಕಿತೆಂದು ಆಶ್ಚರ್ಯವಾಗಬಹುದು. ಆದರೆ ಇದರ ಹಿಂದಿನ ತಂತ್ರ ಬೇರೆಯದೇ ಇದೆ.

ಯಾಕೆಂದರೆ ಸಂವಿಧಾನದಲ್ಲಿ ದಲಿತ ಜನವರ್ಗದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ನೀಡಲಾದ ಈ ಮೀಸಲಾತಿಯು ರಾಜಕೀಯ ಪಕ್ಷಗಳ ಕೈಯಲ್ಲಿ ಸಿಕ್ಕಿ ತನ್ನ ಮೂಲ ಉದ್ದೇಶವನ್ನು ಎಂದೋ ಮರೆತಿದೆ. ಮೀಸಲು ಕ್ಷೇತ್ರದಲ್ಲಿ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸುತ್ತವೆ. ಗೆದ್ದ ಸ್ಪರ್ಧಿಯು ತನ್ನ ಸಮುದಾಯದ ಪ್ರತಿನಿಧಿಯಾಗಿರುತ್ತಾನೆ. ತನ್ನ ಸಮುದಾಯದ ಅಭಿವೃದ್ಧಿಯ ಸಲುವಾಗಿ ಸದನದಲ್ಲಿ ಧ್ವನಿ ಎತ್ತುವುದು ಆತನ ಕರ್ತವ್ಯವಾಗಿರುತ್ತದೆ. ಆದರೆ ಪಕ್ಷವೊಂದರ ಹಂಗಿನಲ್ಲಿರುವ ವ್ಯಕ್ತಿಯಿಂದ ಇಂಥ ದೃಢ ಮತ್ತು ನಿಷ್ಠುರ ಕೆಲಸಗಳನ್ನು ನಿರೀಕ್ಷಿಸಲು ಸಾಧ್ಯವೇ? ಆತ ದಲಿತವರ್ಗದಿಂದ ಬಂದಿದ್ದರೂ ತನ್ನ ಪಕ್ಷಕ್ಕಾಗಿಯೇ ತಯಾರಾದವನು. ಆತ ತನ್ನ ಪಕ್ಷದ ಸಿದ್ಧಾಂತದಿಂದ ಎಷ್ಟು ಹೊರಗೆ ನಿಂತು ಕೆಲಸ ಮಾಡಲು ರಾಜಕೀಯ ಪಕ್ಷಗಳು ಅವಕಾಶ ನೀಡುತ್ತಿವೆ? ಹೆಚ್ಚಿನ ಸಂದರ್ಭದಲ್ಲಿ ಆಯ್ಕೆಯಾದ ವ್ಯಕ್ತಿಯು ಪಕ್ಷವೊಂದರಲ್ಲಿ ಸದಸ್ಯರ ಸಂಖ್ಯೆ ಹೆಚ್ಚಿಸುವ ಇಲ್ಲವೇ ಹೌದಪ್ಪನಾಗಿ ಬಳಕೆಯಾಗುವ ಸಂದರ್ಭವೇ ಹೆಚ್ಚು. ಇಂಥ ಸಂದರ್ಭದಲ್ಲಿ ದಲಿತ ಸದಸ್ಯನೊಬ್ಬನಿಗೆ ಇತರೆ ವರ್ಗದ ರಾಜಕೀಯ ನೇತಾರನಿಗಿಂತ ಹೆಚ್ಚಿನ ಜವಾಬ್ದಾರಿ ಮತ್ತು ಹೊಣೆಗಾರಿಕೆ ಇರಬೇಕಾಗುತ್ತದೆ. ಮತ್ತಷ್ಟು ಓದು »

14
ಮಾರ್ಚ್

ಟಿಪ್ಪು ಹೊಗಳಿದ ಮೇಲೆ ಕೋವಿದನೂ ಅಲ್ಲ ಕೋದಂಡನೂ ಅಲ್ಲ

– ಸಂತೋಶ್ ತಮ್ಮಯ್ಯ

Pratap Simha's bookಕೊಡವರಿಗೆ ಕಾವೇರಮ್ಮನ ಶಾಪವಿದೆಯಂತೆ, ಬ್ರಹ್ಮಹತ್ಯಾದೋಷವೂ, ನಾಗದೋಷವೂ ಕಾಡುತ್ತಿದೆಯಂತೆ. ಹಾಗಾಗಿ ಕೊಡವರಿಗೆ ಶಾಂತಿ ನೆಮ್ಮದಿ ಇಲ್ಲವಂತೆ, ಅಷ್ಟಮಂಗಲ ಪ್ರಶ್ನೆಯಲ್ಲಿ ಅದು ಕಂಡುಬಂದಿದೆಯಂತೆ. ಇದು ಸದ್ಯ ಕೊಡಗಿನಲ್ಲಿ ಚರ್ಚೆಯಾಗುತ್ತಿರುವ ವಿಷಯ. ಈ ದೋಷ, ಶಾಪ, ಪ್ರಶ್ನೆ, ಅದಕ್ಕಿರುವ ಪರಿಹಾರಗಳು ಏನೇನಿವೆಯೋ ಗೊತ್ತಿಲ್ಲ. ಆದರೆ ಒಂದು ಶಾಪವಂತೂ ಅಷ್ಟಮಂಗಲ ಪ್ರಶ್ನೆಯ ಹೊರತಾಗಿಯೂ ಪ್ರಜ್ನಾವಂತ ಕೊಡವರಿಗೆ ತಿಳಿದೇ ಇದೆ.

ಅದೆಂದರೆ ಕರ್ನಾಟಕದ ಎಲ್ಲರಿಗೂ ಕೊಡಗಿಗೆ ಹೋದಾಗ ಅಲ್ಲಿನ ಯೋಧರು, ಧೀರರು, ಶೂರರು ಎಲ್ಲರೂ ನೆನಪಾಗಿಬಿಡುತ್ತಾರೆ. ಮಡಿಕೇರಿಗೆ ಬಂದ ರಾಜಕಾರಣಿಗಳು, ಸಾಹಿತಿಗಳಿಗೆ ಯೋಧರನ್ನು ಹೊರತಾಗಿಸಿ ಮಾತು ಹೊರಬರುವುದೇ ಇಲ್ಲ. ಅವರೆಲ್ಲರಿಗೂ ಭಾಷಣಕ್ಕೆ, ಸಾಹಿತ್ಯಕ್ಕೆ, ಸಿನಿಮಾಕ್ಕೆ ಕೊಡಗಿನ ಯೋಧರು, ಬ್ರಹ್ಮಗಿರಿ, ಕಾವೇರಮ್ಮೆ, ಇಗ್ಗುತ್ತಪ್ಪರು ಬೇಕು. ಆದರೆ ಅವರೆಲ್ಲರೂ ಟಿಪ್ಪು ವಿಷಯಕ್ಕೆ ಬಂದರೆ ಟಿಪ್ಪು ಆ ಯೋಧರನ್ನೆಲ್ಲಾ ಮೀರಿ ನಿಂತುಬಿಡುತ್ತಾನೆ! ಅಂದರೇ ಧರ್ಮಕ್ಕಾಗಿ ಹೋರಾಡಿದ ಕೊಡಗಿನ ಯೋಧರು ಸಾಹಿತಿಗಳ ಪ್ರಕಾರ ಸೆಕ್ಯುಲರ್ ಆಗಿಬಿಡುತ್ತಾರೆ. ಈ ಸೆಕ್ಯುಲರ್ ವ್ಯಾದಿ ಸಾಹಿತಿಗಳ ಪ್ರಾರಬ್ಧವಾದರೂ ಕೊಡವರ ಪಾಲಿಗೆ ಅದು ಶಾಪ. ಅವರ ಭಾವನೆಗಳ ಮೇಲಿನ ಚೆಲ್ಲಾಟ. ಏಕೆಂದರೆ ಈ ಸೆಕ್ಯುಲರ್ ವ್ಯಾದಿ ಟಿಪ್ಪುವನ್ನು ಹೊಗಳಲು ಕೊಡವರ ಬಲಿದಾನವನ್ನೂ ತಿರುಚಲೂ ಹಿಂಜರಿಯುವುದಿಲ್ಲ. ಹೀಗೆ ಟಿಪ್ಪುವನ್ನು ಹೊಗಳುತ್ತಾ ಕೊಡವರ ಯೋಧತನವನ್ನು ವರ್ಣಿಸಲು ಹೇಗೆ ತಾನೇ ಸಾಧ್ಯ? ಸಾಧ್ಯವಿಲ್ಲ ನಿಜ. ಆದರೆ ಅದು ನಿರಂತರ ನಡೆಯುತ್ತಲೇ ಇದೆ. ಕೊಡಗಲ್ಲೇ ಕೆಲವರು ಭಂಡರಿದ್ದಾರೆ. ಅಂಥವರಿಗೆ ಅಷ್ಟು ಮಾತುಗಳು ಸಾಕಾಗುತ್ತವೆ. ಸಾಹಿತಿ-ರಾಜಕಾರಣಿಗಳಿಗೆ ಚಪ್ಪಾಳೆಗಳು ಭರಪೂರ ಗಿಟ್ಟುತ್ತವೆ. ಹಾಗಾಗಿ ಕಾರ್ನಾಡರೂ “ಟಿಪ್ಪು ಸುಲ್ತಾನ ಕಂಡ ಕನಸು” ಎಂದು ಬರೆಯುತ್ತಾರೆ. ಕೆಲವರು “ಟಿಪ್ಪು ಜನ್ಮದಿನವನ್ನು ಆಚರಿಸಲು ಶಾಲೆಗಳಿಗೆ ರಜಾ ಘೋಷಿಸಲಾಗುವುದು” ಎನ್ನುತ್ತಾರೆ. ಇನ್ನೊಬ್ಬರು ” ಟಿಪ್ಪು ಓರ್ವ ಸಂತ” ಎಂದುಬಿಡುತ್ತಾರೆ. ವಿಚಿತ್ರವೆಂದರೆ ಇವರೆಲ್ಲರೂ ಹೀಗೆ ಹೇಳುವ ಮೊದಲು ಮಡಿಕೇರಿಯ ಯುದ್ಧ ಸ್ಮಾರಕಗಳಿಗೆ ಹಾರ ಹಾಕಿ ಬಂದಿರುತ್ತಾರೆ. ಇವನ್ನೆಲ್ಲಾ ಕೇಳುವುದು, ನೋಡುವುದೇ ಕೊಡಗಿನವರ ಪಾಲಿನ ಶಾಪ. ಏಕೆಂದರೆ ಕೊಡಗಲ್ಲಿ ಬಂದು ಟಿಪ್ಪುವನ್ನು ಹೊಗಳುವುದೆಂದರೆ ಕೊಡಗಿನ ಪೂರ್ವಜರನ್ನು ನಿಂದಿಸಿದಂತೆಯೇ.

ಮತ್ತಷ್ಟು ಓದು »