ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

28
ಫೆಬ್ರ

ಅವರಿಗೆ ಸಾಚಾರ್ ವರದಿ: ನಮಗೇಕಿಲ್ಲ ಪಚೌರಿ ವರದಿ?

-ಸಂತೋಷ್ ತಮ್ಮಯ್ಯ

Rama Sethuveಭಾರತದಲ್ಲಿ ಹಿಂದುಗಳು ಎಂದರೆ ಎರಡನೇ ದರ್ಜೆಯ ಜನರು ಮತ್ತು ಹಿಂದುಗಳನ್ನು ಎಲ್ಲಿಡಬೇಕೋ ಅಲ್ಲೇ ಇಡಲಾಗುತ್ತಿದೆ ಎಂಬುದಕ್ಕೆ ರಾಮಸೇತು ಪ್ರಕರಣವೇ ಸಾಕ್ಷಿ. ಕೇಂದ್ರ ಸರಕಾರ ರಾಜೇಂದ್ರ ಪಚೌರಿ ವರದಿಯನ್ನು ತಿರಸ್ಕರಿಸುವುದರ ಮೂಲಕ ಅದನ್ನು ಸಾಭೀತುಪಡಿಸಿದೆ. ಸುಪ್ರಿಂಕೋರ್ಟಿಗೆ ತಾನು ಸೇತುಸಮುದ್ರಂ ಯೋಜನೆಯನ್ನು ಮಾಡಲು ಬಯಸಿರುವುದಾಗಿಯೂ, ಇಷ್ಟಿಷ್ಟು ಖರ್ಚುವೆಚ್ಚಗಳನ್ನು ಅದಕ್ಕಾಗಿ ಇಟ್ಟಿರುವುದಾಗಿಯೂ ಇದು ರಾಷ್ಟ್ರದ ಮಹತ್ತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂಬುದರ ಬಗ್ಗೆ ಅಫಿಡವಿಟ್ ಅನ್ನು ಸಲ್ಲಿಸಿದೆ.
ಸಲ್ಲಿಸದೇ ಇನ್ನೇನು ತಾನೇ ಮಾಡಿಯಾರು? ರಾಮಸೇತು ಹಿಂದೂ ಭಾವನೆಗಳಿಗೆ ಸಂಬಂಧಪಟ್ಟ ಸಂಗತಿ, ರಾಮಸೇತು ರಾಮಾಯಣಕ್ಕೆ ಸಂಬಂಧಪಟ್ಟ ಸಂಗತಿ, ರಾಮಸೇತು ಹಿಂದೂ ತತ್ತ್ವಶಾಸ್ತ್ರ, ಅಧ್ಯಾತ್ಮದ ಪರಾಕಾಷ್ಠೆಗೆ ಸಂಬಂಧಪಟ್ಟ ಸಂಗತಿ, ರಾಮಸೇತು ವಿಶ್ವದ ಓರ್ವ ಮಹಾನ್ ಆದರ್ಶಪುರುಷನೊಬ್ಬನ , ಧರ್ಮಸಂಸ್ಥಾಪಕನೊಬ್ಬನಿಗೆ ಸಂಬಂಧಪಟ್ಟ ಸಂಗತಿ.  ಆ ಆದರ್ಶಪುರುಷ  ಹಿಂದೂ ದೇವರು ಎಂಬ ಉದಾಸೀನತನ ಸರಕಾರಕ್ಕೆ ಇರುವಾಗ ಈ ಸರಕಾರ ಅಫಿಡವಿಟ್ ಅನ್ನೂ ಸಲ್ಲಿಸುತ್ತದೆ ಮತ್ತು ಅಯೋಧ್ಯೆಯನ್ನೂ ತುಂಡುಮಾಡಿ ಹಂಚಿಬಿಡುತ್ತದೆ. ಅಂದು ಬಾಬರ್ ಮಾಡಿದಂತೆ ರಾಮಕುರುಹನ್ನೇ ಒಡೆಯುತ್ತದೆ. ಹಾಗಾಗಿ ರಾಜೇಂದ್ರ ಪಚೌರಿ ಎಂಬ ವಿಶ್ವವಿಖ್ಯಾತ ಪರಿಸರ ಶಾಸ್ತ್ರಜ್ನ, ಚಿಂತಕ ಹೇಳುವ ಮಾತನ್ನು ಸರಕಾರ ಕೇಳುವ ಸ್ಥತಿಯಲ್ಲಿರುವುದಿಲ್ಲ. ಅದನ್ನು ತಿರಸ್ಕರಿಸದೇ ಇರುವುದಿಲ್ಲ.
ಕೆಲವರ್ಷಗಳ ಹಿಂದೆ ರಾಜೇಂದ್ರ ಪಚೌರಿ ವರದಿ ಸರಕಾರದ ಸೇತುಸಮುದ್ರಂ  ಯೋಜನೆಯ ಅವೈಜ್ನಾನಿಕತೆ ಮತ್ತು ತಿಕ್ಕಲುತನಗಳನ್ನು ಎಳೆಎಳೆಯಾಗಿ ಬಿಡಿಸಿ ವರದಿಯನ್ನು ಸಿದ್ಧ ಮಾಡಿತ್ತು. ಭೂಗೋಳದ ದಕ್ಷಿಣದ ಸಮುದ್ರಗಳ ಜಲಚರಗಳ ತವರು ಮನೆ ಈ ಪ್ರದೇಶ ಎಂದು ಬಣ್ಣಿಸಿತ್ತು. ಈ ಪ್ರದೇಶದಲ್ಲಿ ನಡೆಯುವ ಯಾವುದೇ ಮಾನವ ಹಸ್ತಕ್ಷೇಪಗಳು ಈ ಜಲಚರಗಳ ಸಂತತಿಯನ್ನು ಕೊಲ್ಲುತ್ತದೆ ಎಂದು ಹೇಳಿತ್ತು. ಮತ್ತು ಭಾರತ ಮತ್ತು ಶ್ರೀಲಂಕಾ ನಡುವಿನ ಕಡಲ್ಗಾಲುವೆಗೆ  ಪರ್ಯಾಯ ಮಾರ್ಗವನ್ನು ಸೂಚಿಸಿತ್ತು. ಆದರೆ ಸರಕಾರ, ಯಾವ ರಾಜೇಂದ್ರ ಪಚೌರಿಯವರ ಮಾತಿಗಾಗಿ ವಿಶ್ವಸಂಸ್ಥೆ ಕಾಯುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಒಂದು ಸಲಹೆಗಾಗಿ ಯುನೆಸ್ಕೋ ಬೇಡಿಕೊಳ್ಳುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಡೇಟ್‌ಗಾಗಿ ವಿದೇಶದ ವಿಶ್ವವಿದ್ಯಾಲಯಗಳು ಕಾಯುತ್ತವೆಯೋ, ಯಾವ ನೊಬೆಲ್ ಪ್ರಶಸ್ತಿ ಸಮಿತಿ ಯಾವ ರಾಜೇಂದ್ರ ಪಚೌರಿಯವರನ್ನು ಆಹ್ವಾನಿಸುತ್ತದೆಯೋ ಅಂಥ ಪಚೌರಿಯವರನ್ನು, ಅವರ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತದೆ. ಕಾರಣ ರಾಮ ಹಿಂದು. ರಾಮಸೇತು ಹಿಂದೂ ಭಾವನೆ.ಅದು ದೇಶದಲ್ಲಿ ಅಂಥಾ ದೊಡ್ಡ ಸಂಗತಿಯೇನಲ್ಲ ಎಂಬ ತನ್ನ ಎಂದಿನ ಕಾಂಗ್ರೆಸ್ ನೀತಿ. ಹಾಗಾಗಿ ಕಾಂಗ್ರೆಸ್‌ಗೆ ಯಾವಾಗಲೂ ಮುಸಲ್ಮಾನರಿಗೆ ಹೆಚ್ಚು ತಿನ್ನಿಸಿ, ಅವರಿಗೆ ಹೆಚ್ಚು ಕುಡಿಸಿ, ಹೆಚ್ಚು ಸಂಬಳ ಕೊಡಿಸಿ, ಹೆಚ್ಚುಹೆಚ್ಚಾಗಿ ಮಿಲಿಟರಿಗೆ ಸೇರಿಸಿಕೊಳ್ಳಿ, ಮೇಷ್ಟ್ರನ್ನಾಗಿ ನೇಮಿಸಿಕೊಳ್ಳಿ,ಗುಮಾಸ್ತರನ್ನಾಗಿಸಿಕೊಳ್ಳಿ. ಅವರನ್ನು ಜತನದಿಂದ ನೋಡಿಕೊಂಡಿರಿ. ಪಾಪ ಅವರು ಬಡವರು ನೋಡಿ, ಮೀಸಲಾತಿ ಸಿಗದೇ ಇದ್ದರೆ ಅವರು ಸತ್ತೇಹೋದಾರು ಎಂದೆಲ್ಲಾ ಆಲಾಪಿಸುವ ರಾಜೇಂದ್ರ ಸಾಚಾರ್ ವರದಿ ಮಾತ್ರ ಇಷ್ಟವಾಗುತ್ತದೆ. ರಾಜೇಂದ್ರ ಪಚೌರಿ ವರದಿ ಮೂಲೆಗುಂಪಾಗುತ್ತದೆ.

ಮತ್ತಷ್ಟು ಓದು »

26
ಫೆಬ್ರ

ರಾಮಸೇತು: ಭಕ್ತಿ ಭಾವನೆಯ ಜೊತೆಗೆ ಜೀವನೋಪಾಯದ ಪ್ರಶ್ನೆಯೂ ಹೌದು

– ಅಜಿತ್ ಶೆಟ್ಟಿ,ಉಡುಪಿ

Raama Setuveರಾಮಾಯಣ ಮತ್ತು ಮಹಾಭಾರತ ಗ್ರಂಥಗಳು ಹಿಂದೂಗಳಿಗೆ ಧಾರ್ಮಿಕ ಪವಿತ್ರ ಗ್ರಂಥಗಳಾಗಿದ್ದು, ಈ ಎರಡೂ ಕೃತಿಗಳು ಇತಿಹಾಸದ ಕಥೆಗಳಾಗಿವೆ .ಅನಾದಿಕಾಲದಿಂದ ಮಹಾಪಂಡಿತರು, ತಿಳಿದವರು ಇವನ್ನು ಪಂಚಮವೇದವೆಂದು ಕೈ ಮುಗಿಯುತ್ತಾರೆ. ಸಾವಿರಾರು ವರ್ಷಗಳಿಂದ ಭಾರತೀಯರ ಜನಜೀವನದಲ್ಲಿ ಮಿಳಿತವಾಗಿರುವ ಈ ಪವಿತ್ರ ಗ್ರಂಥಗಳ ಯಥಾರ್ಥವೇನು ಎಂದು ಕೇಳಿದರೆ ಏನೂಂತ ಹೇಳಬೇಕು? ಆರ್ಯ-ದ್ರಾವಿಡರು ವೈರಿಗಳೆಂದು ಕಥೆ ಕಲ್ಪಿಸಿ, ರಾಮ ಯಾವ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದನೆಂದು ಸರ್ಟಿಫಿಕೇಟ್ ಕೊಡಿ,ಸಾಕ್ಷಧಾರ ಕೊಡಿ ಎನ್ನುವ ಮೂರ್ಖ ಕರುಣಾನಿಧಿಯಂಥವರಿಗೆ ಏನೆಂದು ಉತ್ತರಿಸಬೇಕು ?

ಮೊದಲು ಹಿಂದೂ ರಾಷ್ಟ್ರ ಅಖಂಡ ಭಾರತದ ಮೇಲೆ ಮಹಮದೀಯರ ಆಕ್ರಮಣವಾಯಿತು . ನಂತರ ವ್ಯವಹಾರಕ್ಕೆ ಬಂದ ಕ್ರೈಸ್ತ ಯುರೋಪಿಯನ್ನರ ಆಕ್ರಮಣ . ಮಹಮದೀಯರು ಹೆದರಿಸಿ ಬೆದರಿಸಿ,ಕೊಲೆ ಸುಲಿಗೆ ಮಾಡುತ್ತ ನಮ್ಮ ಸಂಪತ್ತು ಲೂಟಿ ಹೊಡೆದರು.ಮೋಸದಿಂದ, ವಿಶ್ವಾಸಘಾತುಕ ಕೆಲಸದಿಂದ,ಕುಟಿಲ ತಂತ್ರದಿಂದ ಹಿಂದೂ ದೊರೆಗಳನ್ನು ಸೋಲಿಸಿ,ಪ್ರಜೆಗಳನ್ನು ಹೆದರಿಸಿ,ಒಪ್ಪದವರ ಕೊಲೆ ಮಾಡಿ ಅವರ ಮತ ಪ್ರಚಾರ ಮಾಡಿ ಮತಾಂತರಿಸಿದರು.ಅಲ್ಲಾವುದ್ದೀನ್ ಖಿಲ್ಜಿ, ಔರಂಗಜೇಬ್,ತುಘಲಕ್ ಅವರಿಂದ ಟಿಪ್ಪುವಿನವರೆಗೆ ಎಲ್ಲರೂ ಭಾರತೀಯ ಸಂಸ್ಕೃತಿಯ ಮೇಲೆ ಆಕ್ರಮಣದ ಆಡಳಿತ ನಡೆಸಿದವರೇ. ಅದಕ್ಕೆ ಇರಬೇಕು ವಿಲ್ ದುರಂಟ್ STORY OF CIVILIZATION ಕೃತಿಯಲ್ಲಿ ಭಾರತದ ಮೇಲೆ ನಡೆದ ಇಸ್ಲಾಮಿನ ಆಕ್ರಮಣ ವಿಶ್ವದ ಇತಿಹಾಸದ ಅತ್ಯಂತ ರಕ್ತಸಿಕ್ತ ಅದ್ಯಾಯವೆಂದಿದ್ದು.ಯುರೋಪಿಯನ್ನರು ಭಾರತೀಯರ ಶಕ್ತಿ ಅಡಗಿರುವುದು ಭಾರತೀಯ ಸಂಸ್ಕೃತಿಯಲ್ಲಿ ಎಂದು ಮನಗಂಡು ಹಿಂಸಾ ಮಾರ್ಗವನ್ನು ಬದಿಗಿಟ್ಟು, ಹಿಂದೂ ನಂಬಿಕೆ , ಅಚಾರ ವಿಚಾರ ದೇವರನ್ನು ಪ್ರಶ್ನಿಸುತ್ತಾ,ಲೇವಡಿ ಮಾಡುತ್ತ,ಹಣದ ಆಮಿಷವೊಡ್ಡಿ ಮಿಷನರಿಗಳ ಮೂಲಕ ಉಪಾಯದಿಂದ ಮತಾಂತರದ ಕ್ರೈಸ್ತಿಕರಣಕ್ಕೆ ಮುಂದಾದರು.ಹಿಂದೂ ಧರ್ಮ ಪ್ರಸಾರಕ್ಕೆ ಇಲ್ಲಿತನಕ ಎಲ್ಲಿಯೂ ಹಿಂದೂಗಳು ಯುದ್ದ ಮಾಡಿಲ್ಲ,ಇನ್ನೊಂದು ಧರ್ಮವನ್ನು ನಿಂದಿಸಿಲ್ಲ ತೀರ ವಿಪರೀತವಾಗುತ್ತಿದೆ,ಸ್ವಾಭಿಮಾನಕ್ಕೆ ದಕ್ಕೆಯಾಗುತ್ತಿದೆ ಎಂದೆನಿಸಿದಾಗ ಅದಕ್ಕೆ ಉತ್ತರಿಸಿದ್ದಾರೆ.

ಮತ್ತಷ್ಟು ಓದು »

18
ಫೆಬ್ರ

ಸಮಾನತೆ, ವಿಶ್ವಭ್ರಾತೃತ್ವ ಮತ್ತು ನಾವು

-ಕ.ವೆಂ.ನಾಗರಾಜ್

Sodarate     “ನನಗೆ ಒಂದು ಕನಸು ಇದೆ. ಅದೆಂದರೆ ನನ್ನ ನಾಲ್ಕು ಮಕ್ಕಳು ಒಂದು ದಿನ ಅವರ ಬಣ್ಣಗಳಿಂದಲ್ಲದೆ ಅವರ ಗುಣಗಳಿಂದ ಗುರುತಿಸಲ್ಪಡುವ ದೇಶದಲ್ಲಿ ಬಾಳುತ್ತಾರೆ ಅನ್ನುವುದು” – ಇದು ಅಮೆರಿಕಾದ ದಿ. ಮಾರ್ಟಿನ್ ಲೂಥರ್ ಕಿಂಗ್ ರವರ ಉದ್ಗಾರ. ಇದು ಸಮಾನತೆಯನ್ನು ಬಯಸಿದ, ಅಲ್ಲಿ ಪ್ರಚಲಿತವಿದ್ದ ಕಪ್ಪು-ಬಿಳಿ ಜನಾಂಗ ದ್ವೇಷದ ವಿರುದ್ಧ ಹೋರಾಡಿದ್ದ ವ್ಯಕ್ತಿಯ ಕನಸು. ಸಮಾನತೆ ಅನ್ನುವ ಕಲ್ಪನೆ ಯಾವುದೇ ಆದರ್ಶಮಾನವನ ಗುರಿ. ಸಮಾನತೆ ಅಂದರೇನು ಅನ್ನುವುದಕ್ಕೆ ವಿವರಣೆ ನೀಡುವುದು ಕಷ್ಟವೇ ಸರಿ. ಸರಿಸಮ ಎಂಬುದು ನಿಘಂಟಿನ ಅರ್ಥ. ವ್ಯಾವಹಾರಿಕ ಜಗತ್ತಿನಲ್ಲಿ ಸಮಾನತೆಯ ಕಲ್ಪನೆಯ ಸಾಕಾರ ಹೇಗೆ ಎಂಬುದರ ಕುರಿತು ಚಿಂತಿಸಬೇಕಿದೆ. ಭಾರತದ ಸಂವಿಧಾನದಲ್ಲಿ ದೇಶದ ನಾಗರಿಕರಲ್ಲಿ ಜಾತಿ, ಮತ, ಲಿಂಗ, ಭಾಷೆ – ಇಂತಹ ಯಾವುದೇ ಕಾರಣದಿಂದ ಭೇದ ಕೂಡದು, ಎಲ್ಲರಿಗೂ ಸಮಾನವಾದ ಹಕ್ಕು ಇದೆ ಎಂದಿದೆ. ಆದರೆ ಇಲ್ಲಿ ಜಾತಿಯ ಹೆಸರಿನಲ್ಲಿ, ಮತದ ಹೆಸರಿನಲ್ಲಿ, ಲಿಂಗದ ಹೆಸರಿನಲ್ಲಿ, ಭಾಷೆಯ ಹೆಸರಿನಲ್ಲಿ ಭೇದ ಭಾವ ತಾಂಡವವಾಡುತ್ತಿರುವುದು ದುರ್ದೈವ. ಯಾರು ಈ ಸಮಾನತೆಯನ್ನು ಸಾಧಿಸಬೇಕಿದೆಯೋ ಆ ಆಳುವ ಸ್ಥಾನದಲ್ಲಿರುವ ಜನಪ್ರತಿನಿಧಿಗಳೇ ಇಂತಹ ಭೇದ ಭಾವಗಳನ್ನು ಉಳಿಸಿ, ಪೋಷಿಸಿಕೊಂಡು ಬರುತ್ತಿರುವುದು ಘೋರ ಸತ್ಯ.

ಮತ್ತಷ್ಟು ಓದು »

24
ಡಿಸೆ

‘ಈಗ ಮದುವೆ ಆಗಿದೆ, ಆದರೆ ಕೆಲವು ಗಂಡಸರಿಗೆ ತಾಳಿಯೂ ಕಾಣೋದಿಲ್ಲ

-ರೂಪಾರಾವ್

ಒಂದು ಹುಡುಗಿ ಹೆಣ್ಣಾಗುವ ಘಳಿಗೆ ಅತಿ ಸಂಭ್ರಮದ ಘಳಿಗೆ. ಆದರೆ ಅ ಘಳಿಗೆ ಸುಮಾರು ಎಲ್ಲಾರ ಅಮ್ಮಂದಿರು ಅಳುತ್ತಾರೆ. ಮಗಳು ಹೆಣ್ಣಾದಳಲ್ಲ ಎಂಬ ಕಾರಣಕ್ಕಲ್ಲ. ತಾನು ಅನುಭವಿಸಿದ ನೋವು ನರಕಗಳನ್ನು ಮಗಳೂ ಅನುಭವಿಸಬೇಕಾಗುತ್ತಲ್ಲ ಎಂದು.

ಅಂತಹ ಘಳಿಗೆ ಬರುವುದಕ್ಕೂ ಮುಂಚೆಯೇ ಆ ಭಯ ನನಗೆ ಕಾಡಿತ್ತು. ಆಗಿನ್ನೂ ಒಂಬತ್ತನೇ ತರಗತಿಗೆ ಕಾಲಿಟ್ಟಿದ್ದೆ. ಯಾವುದೋ ಅಂಗಡಿಗೆ ಹೋಗುವ ಕಾರಣಕ್ಕಾಗಿ ಹೋದಾಗ , ಯಾವುದೋ ಗಂಡಸು ಏನೇನೋ ಅಸಭ್ಯವಾಗಿ ಹೇಳುತ್ತಾ ನನ್ನ ಹಿಂದೆಯೇ ಬರತೊಡಗಿದ.ಎಂಥ ವಿಷಮ ಘಳಿಗೆ ಎಂದರೆ ಅವನ್ಯಾಕೆ ಹಾಗೆಲ್ಲಾ ಹೇಳ್ತಿದಾನೆ ಅಂತಲೂ ನನಗೆ ಅರ್ಥ ಆಗಿರಲಿಲ್ಲ. ಮನೆಗೆ ಬಂದು ಯಾರಿಗೂ ಹೇಳದೆ ಅತ್ತಿದ್ದೆ.

ಅಲ್ಲಿಂದ ಮುಂದೆ ನಾನು ಹೇಗಿರಬೇಕೆಂಬ ಪಾಠ ಅಮ್ಮನಿಂದ ಬಂತು. ಆಗ ಹೆಣ್ಣಾಗಿದ್ದೆ…. ಒಳ್ಳೆಯ ಸ್ಪರ್ಷ ಕೆಟ್ಟ ಸ್ಪರ್ಷ ನೋಟಗಳ ವ್ಯತ್ಯಾಸ ತಿಳಿಯುತ್ತಿತ್ತು. ಆದರೂ ಬಸ್ ನಲ್ಲಿ ಸ್ಕೂಲಿಗೆ ಹೋಗುವಾಗ ಬೇಕಾಗಿಯೇ ಕೈ ಹಾಕಿ ನೂಕುವ ಕಂಡಕ್ಟರ್, ನನ್ನ ಹಿಂದೆ ಬಂದು ನಿಲ್ಲು ಎನ್ನುತ್ತಿದ್ದ ಡ್ರೈವರ್ ಇವರುಗಳನ್ನು ಎದುರಿಸಲಾಗಿರಲಿಲ್ಲ. ಸುಮ್ಮನೆ ಇವರುಗಳ ಸ್ಪರ್ಷ ತೀಟೆಗೆ ಮೂಕ ಪಶುಗಳಾಗುತ್ತಿದ್ದೆವು(ಅಕಸ್ಮಾತ್ ತಿರುಗಿಸಿ ಕೇಳಿದರೆ ಆ ಬಸ್ ನಮ್ಮ ಸ್ಟಾಪಿನಲ್ಲಿ ನಿಲ್ಲುತ್ತಿರಲಿಲ್ಲ. ನಿಂತರೂ ಒಂದಷ್ಟು ದೂರ ನಿಲ್ಲುತ್ತಿದ್ದೆವೆ. ನಾವುಗಳು ಓಡಿ ಹೋಗಿ ಹತ್ತಬೇಕಿತ್ತು.)

ಮತ್ತಷ್ಟು ಓದು »

22
ಡಿಸೆ

ದೈವಭಕ್ತಿಯ ಸಾಕಾರ ಮೂರ್ತಿ ವಿಶ್ವ ಮಾತೆ ಶ್ರೀಶಾರದಾದೇವಿ

-ಶ್ರೀವಿದ್ಯಾ,ಮೈಸೂರು

Sharada Maateನಮ್ಮ ತಾಯಿಯಂತೆ ಕಾಣುವ ಮಾತೆ ಶ್ರೀಶಾರದಾದೇವಿಯವರ ಜೀವನ ನಮ್ಮ ಲೌಕಿಕ ಜೀವನಕ್ಕೆ ಆದರ್ಶವಾಗಿದೆ. ಅವರು ನಮ್ಮ ತರಹ ಸಾಮಾನ್ಯ ಮಹಿಳೆ, ದೇವಿಭಕ್ತೆ, ಎಲ್ಲರನ್ನೂ ಸ್ವಂತ ಮಕ್ಕಳಂತೆ ಕಾಣುವ ತಾಯಿ, ಪತಿಗೆ ಸೇವೆ, ಸಹಾಯ ಮಾಡುವ ಪತ್ನಿ, ಪತಿ ಹೇಗೆ ನಡೆದುಕೊಂಡಿದ್ದರೋ ಹಾಗೆಯೇ ಇರುವ ಪತ್ನಿ, ತಪಸ್ವಿನಿ, ಪತಿಯಿಂದ ತನ್ನ ಪೂಜೆ ಮಾಡಿಸಿಕೊಂಡು ಜಗನ್ಮಾತೆ ದೇವಿಯ ದರ್ಶನ ಪಡೆದ ಪುಣ್ಯಾತ್ಮೆ. ಇವೆಲ್ಲ ನಮ್ಮ ಜೀವನಕ್ಕೆ ಆದರ್ಶವಾಗಲಿವೆ. ಆದರೂ ಪತಿ – ಪತ್ನಿ ಸಂಬಂಧ, ಲೌಕಿಕ ಆಸೆಗಳು, ಕಾಮ, ಪ್ರೇಮ ಇವೆಲ್ಲ ಶಾರದಾದೇವಿಯವರ ಮನಸ್ಸಿನಿಂದ ಸಂಪೂರ್ಣ ದೂರವಾಗಿದ್ದವು. ಅವರ ಮನಸ್ಸು ಯಾವಾಗಲೂ ದೇವಿಯ ಮೇಲೆ, ಪತಿಯ ಸೇವೆಗೆ, ಜನರ ಸುಧಾರಣೆಗೆ, ಬಡವರಿಗೆ ಊಟ ಹಾಕೋದು ಇವೆಲ್ಲ ಇತ್ತು. ನಾವು ಅವರನ್ನು ನೆನೆಸಿಕೊಂಡರೆ ಕೆಟ್ಟ ಮನಸ್ಸುಗಳೆಲ್ಲ ದೂರವಾಗುವುದು. ಇಂತಹ ನಮ್ಮ ಪವಿತ್ರ ತಾಯಿಯ ದೇಶದಲ್ಲಿ ನಾವು ಹುಟ್ಟಿದ್ದು ನಮ್ಮ ಪುಣ್ಯ …

೧೮೫೩ನೆಯ ಡಿಸೆಂಬರ್ ೨೨ರಂದು ಜಯರಾಮವಟಿ ಎಂಬ ಚಿಕ್ಕ ಹಳ್ಳಿಯಲ್ಲಿ ಶ್ರೀಶಾರದಾದೇವಿಯವರು ದೇವರ ಅನುಗ್ರಹದಿಂದ ರಾಮಚಂದ್ರ ಮುಖರ್ಜಿ, ಶ್ಯಾಮಸುಂದರಿದೇವಿಯವರಿಗೆ ಜನಿಸಿದಳು.ಈ ಕುಟುಂಬದವರು ಬ್ರಾಹ್ಮಣರಲ್ಲ ಆದರೂ ಶೀಲ ಹಾಗೂ ನಡೆ-ನುಡಿಗಳಲ್ಲಿ ಬ್ರಾಹ್ಮಣರೇ ಆಗಿದ್ದರು. “ಬ್ರಾಹ್ಮಣ” ಎಂಬ ಪದದ ಅರ್ಥವನ್ನು ಸಂಪೂರ್ಣವಾಗಿ ಗ್ರಹಿಸಿ, ಅನುಷ್ಠಾನ ರೀತಿಯಲ್ಲಿಯೂ ಅಳವಡಿಸಿಕೊಂಡಿದ್ದರು. ಬಡವರಾದರೂ ಸೌಜನ್ಯತೆಗೆ ಬಡತನ ಇರಲಿಲ್ಲ. ದೀನರೆನಿಸಿದ್ದರೂ ಧಾರಾಳಿ ಆಗಿದ್ದರು. ಒಂದಿಷ್ಟು ಗದ್ದೆ ಇತ್ತು, ಕಣಜ ತುಂಬುವಷ್ಟು ಭತ್ತ ಬರುತ್ತಿತ್ತು. ಪೌರೋಹಿತ್ಯ ಜನಿವಾರವನ್ನು ಮಾಡಿ, ಮಾರುವ ವೃತ್ತಿಯನ್ನೂ ಇಟ್ಟುಕೊಂಡಿದ್ದರು. ಹಳ್ಳಿಯ ಜನರಿಗೆ ಕಷ್ಟ ಕಾಲದಲ್ಲಿ ಉದಾರವಾಗಿ ದಾನ ಮಾಡುತ್ತಿದ್ದರು. ಪರರ ನೋವಿಗೆ ಅಯ್ಯೋ ಅನ್ನುವ ಆದರ್ಶ ಗುಣ ಇವರಲ್ಲಿ ಮನೆ ಮಾಡಿತ್ತು.

ಮತ್ತಷ್ಟು ಓದು »

22
ನವೆಂ

ಸ್ವಾಭಿಮಾನದ ಬದುಕು ಕಟ್ಟಿಕೊಟ್ಟ “ಸರ್ಕಾರ್ “

-ಅಜಿತ್ ಎಸ್ ಶೆಟ್ಟಿ

ಕೇಸರಿ ಅಂಗಿ, ಕೇಸರಿ ಶಾಲು, ಕೇಸರಿ ಟೋಪಿ , ಕೇಸರಿ ಶೂಗಳು , ಕೇಸರಿ ಬಣ್ಣದ ಸೈಕಲ್ , ಅದಕ್ಕೆ ಕೇಸರಿ ಬಣ್ಣದ ಚಕ್ರಗಳು ,ಕೇಸರಿ ಪೆನ್ ಯಿಂದ ಹಿಡಿದು ಕೇಸರಿ ಬಣ್ಣದ ಮೊಬೈಲ್ ತನಕ ಎಲ್ಲವೂ ಕೆಸರಿನೇ.  ಹಿಂದುತ್ವವಾದಿ ಯಾದರೂ  ಮನೆಯಲ್ಲಿ ಯಾವದೇ ದೇವರ ಫೋಟೋ ಇಲ್ಲ.  ಇರುವದು ಎರಡೇ ಎರಡು ಫೋಟೋಗಳು ಅವರುಗಳೇ ಇವನ ಪಾಲಿಗೆ ದೇವರು. ಆ ಫೋಟೋ ಗಳು ಬೇರೆ ಯಾರದ್ದು ಅಲ್ಲಾ ಮರಾಠ ಸೇನಾಧಿಪತಿ , ಹಿಂದೂ ಹೃದಯ ಸಾಮ್ರಾಟ್ , ಹುಲಿ, ಬಾಳಾ ಸಾಹೇಬ್  ಠಾಕ್ರೆ ಮತ್ತು ಅವರ ಪತ್ನಿ ಮೀನಾ ಅವರದ್ದು . ಅವರನ್ನು ಅರಾಧಿಸುತಿರುವವರು 52 ರ ಹರೆಯದ ಪೂನಾ ಜಿಲ್ಲೆಯ  ನಂಗೋನ್ ಎಂಬಲ್ಲಿನ ಮಹಾದೇವ್ ಯಾದವ್. ನಾವು ಇಂಥ ಸಾವಿರಾರು   ಠಾಕ್ರೆ ಅಭಿಮಾನಿಗಳನ್ನು ಮಹಾರಾಷ್ಟ್ರದಲ್ಲಿ ನೋಡಬಹುದು . 

ಇಂದು ಬಾಳಾ ಸಾಹೇಬ್ ಯನ್ನು “ತಮಿಳು ವಿರೋಧಿ” “ಕನ್ನಡಿಗರ ಪಾಲಿನ ಶತ್ರು ” ಉತ್ತರ ಭಾರತೀಯರು ಮತ್ತು ಗುಜರಾತಿಗಳ ಪಾಲಿಗೆ ಕಂಟಕರಾಗಿದ್ದವರೆಂದು ಬೆರಳೆಣಿಕೆ ಎಷ್ಟು ಇರುವ ಅವರ ವಿರೋಧಿಗಳು ಕರೆಯಬಹುದು . ಆದರೆ ಅದು ಬಾಳಾ ಸಾಹೇಬ್  ಠಾಕ್ರೆ ಯವರ   ವ್ಯಕ್ತಿತ್ವದ ಮುಂದೆ ಗೌಣವಾಗುತದೆ . ಠಾಕ್ರೆ ವ್ಯಕ್ತಿತ್ವ ಅಂತಹುದು ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳುತಿದ್ದ . ಎಲ್ಲಿಯೂ ಎಡಬಿಡಂಗಿ ತರ ವರ್ತಿಸುತಿರಲಿಲ್ಲ.  ಉದಾಹರಣೆ ಸಮೇತ ಸಮರ್ಥಿಸಿಕೊಳ್ಳುತಿದ್ದರು. ಅದು ಇಂದಿರೆ ಹೇರಿದ ತುರ್ತು ಪರಿಸ್ಥಿತಿಯಿಂದ ಹಿಡಿದು ಹಿಟ್ಲರ್ ಬಗೆಗಿನ ಠಾಕ್ರೆ  ಅಭಿಮಾನದವರೆಗೆ. ದೇಶಕ್ಕೆ ಕಳಂಕದಂತಿದ್ದ , ಗುಲಾಮತೆಯ ಪ್ರತೀಕದಂತೆ ಭಾಸವಾಗುತಿದ್ದ ಬಾಬ್ರಿ ಮಸೀದಿ ದ್ವಂಸದಿಂದ, ಭಾರತ-ಪಾಕ್ ಕ್ರಿಕೆಟ್ ಪಂದ್ಯದ ತನಕ. ಎಲ್ಲಿಯೂ ರಾಜಿ ಇರಲಿಲ್ಲ. ಬಾಳಾ ಸಾಹೇಬ್ ಠಾಕ್ರೆ ಒಬ್ಬ ಭಾಷಾಪ್ರೇಮಿಯಾಗಿದ್ದರು ಅಪ್ರತಿಮ ದೇಶಭಕ್ತ, ಒಬ್ಬ ಹುಟ್ಟು ಹೋರಾಟಗಾರ, ಅಂಜದೇ ಅಳುಕದೇ ಯಾರಿಗೂ ತಲೆಬಾಗದೆ ತಾನು ನಂಬಿಕೊಂಡು ಬಂದಿರುವ ತತ್ವ ಸಿದ್ದಾಂತವನ್ನು  ಪ್ರತಿಪಾದಿಸುವವ. ತಮ್ಮವರ ಹಕ್ಕಿಗಾಗಿ ಹೋರಾಡಿದ ಧೀಮಂತ ನಾಯಕ. ತನ್ನ ಶಕ್ತಿಯ ಮೇಲೆ, ತನ್ನ ಜನರ ನಂಬಿಕೆ ಮೇಲೆ ಅಪಾರ ಭರವಸೆ ಇಟ್ಟುಕೊಂಡಿದ್ದ ಅದ್ಬುತ ಮಾತುಗಾರ. ತನ್ನ ನಂಬಿರುವ ತನ್ನ ಜನರ ಭರವಸೆ ಎಂದು ಹುಸಿಗೊಳಿಸದ, ಅವರಿಗೆ ಸ್ವಾವಲಂಬಿ ಬದುಕು ಕಟ್ಟಿಸಿಕೊಟ್ಟ “ಸರ್ಕಾರ್” . ಉಳಿದವರಿಗೆ ಸ್ಪೂರ್ತಿಯ ಚಿಲುಮೆ . ಒಬ್ಬ ವ್ಯಂಗ್ಯ ಚಿತ್ರಗಾರ ನಾಗಿ ಬದುಕು ಪ್ರಾರಂಭಿಸಿದ ಬಾಳಾ ಸಾಹೇಬ್ ಠಾಕ್ರೆ  ಬೆಳೆದು ಬಂದ ಅವನ ವಿರೋಧಿಗಳು ಮೆಚ್ಚುವಂಥಹುದು . ಅದಕ್ಕೊಂದು ಸಲಾಂ ಹೇಳಲೇ ಬೇಕು. ವಿವಾದಾತ್ಮಕ ವಾಗಿದ್ದರೂ ವರ್ಣರಂಜಿತ ಬದುಕು.
ಮತ್ತಷ್ಟು ಓದು »

19
ನವೆಂ

ಡಾ ಅಂಬೇಡ್ಕರ್, ಸಾಮರಸ್ಯ ಮತ್ತು ಆರೆಸ್ಸೆಸ್

-ರಾಜೇಶ್  ಪದ್ಮಾರ

ಮಲೆನಾಡಿನ ಪೂರ್ಣಚಂದ್ರ ತೇಜಸ್ವಿ ಇರಲಿ ಕರಾವಳಿಯ  ಪ್ರೊ|| ಅಮೃತ ಸೋಮೇಶ್ವರ ಇರಲಿ ಅಥವಾ ಕೋಲಾರದ ಗುಡಿಬಂಡೆಯ ಡಾ|| ಎಂ.ಟಿ.ಕಾಂಬೈ ಇರಲಿ ‘ಸಾಮರಸ್ಯ’ ನನಗದು ಅತ್ಯಂತ ಪ್ರಿಯವಾದ ಶಬ್ದ ಎನ್ನುವುದುಂಟು. ಅದು ಮನೆಯಲಿರಲಿ, ವ್ಯಾಪಾರವಿರಲಿ ಕೊನೆಗೆ ರಾಜಕಾರಣವೇ ಇರಲಿ ಸಾಮರಸ್ಯಬೇಕು.

ಈ ಸಾಮರಸ್ಯ ಮನುಷ್ಯನಲ್ಲೇ ಇದೆ. ಕಾಲಿರಲಿ, ಕೈಯಿರಲಿ, ತಲೆಯಿರಲಿ ಒಂದಕ್ಕೊಂದು ಪೂರಕವೇ. ಕಾಲಿಗೆ ಮುಳ್ಳು ಚುಚ್ಚಿದಾಗ ಕೈ ‘ತನಗೇನೂ ಆಗಿಲ್ವಲ್ಲ’ ಎಂದು ಸುಮ್ಮನಿರುವುದಿಲ್ಲ. ಹೀಗೆ ಒಂದಕ್ಕೊಂದು, ಒಬ್ಬರಿಗೊಬ್ಬರು ಪೂರಕವಾಗಿ ಯೋಚಿಸುವುದು, ನೆರವಿಗೆ ಮುಂದಾಗುವುದೇ ಸಾಮರಸ್ಯ. ಶರೀರದಲ್ಲಿರುವ ಈ ಸಮರಸತೆ, ಸಮಾಜದಲ್ಲೂ ಬರಬೇಕಷ್ಟೆ.

ಹಾಗೇ ಸಮಾಜ ಸಾಮರಸ್ಯದಿಂದಿರಲು ತೊಡಕುಗಳೂ ಇವೆ. ವಿದ್ಯೆ, ಆಸ್ತಿ, ಅಂತಸ್ತು, ಜಾತಿ, ಭಾಷೆ ತೊಡಕು ತಂದುಹಾಕುತ್ತೇವೆ. ವಿದ್ಯೆ, ಸಿರಿವಂತಿಕೆ ಇದೆಯಲ್ಲ ಅದು ಅವರವರು ಗಳಿಸಿದ್ದು, ಆದರೆ ಜಾತಿ- ಅದು ಗಳಿಸಿದ್ದಲ್ಲ. ಅದು ಹುಟ್ಟಿದಾಗ ಅಂಟಿಕೊಂಡಿದ್ದು.

‘ಮಂಡಲ್ ವರದಿ’ ಖ್ಯಾತಿಯ ಆ ಬಿಂದೇಶ್ವರ ಪ್ರಸಾದ್ ಮಂಡಲ್ ಪ್ರಕಾರ ಭಾರತದಲ್ಲಿ 5600 ಜಾತಿಗಳು. ಜಾತಿ ಇರೋದೆ ತಪ್ಪಾ? ಹಾಗೆ ಹೇಳೋರು ಇದಾರೆ. ಅವರೊಂದಿಗೆ ಹೊಸ ಜಾತಿನೇ ಆಗಿದ್ದಾರೆ. ಯಾವುದರಲ್ಲಿ ಜಾತಿ ಇಲ್ಲ? ಭತ್ತದಲ್ಲಿ ಅದೆಷ್ಟು ನಮೂನೆ? ಮಾವಿನಹಣ್ಣಿನಲ್ಲಿ ಅದೆಷ್ಟು ಥರಾ? ಬದನೆಕಾಯಿಯಲ್ಲೂ ಅದೆಷ್ಟು ರೀತಿ? ಹೋಗಲಿ ನಮ್ಮ ದೇಶದ ಮಣ್ಣಿದೆಯಲ್ಲ ಅದೆಷ್ಟು ಬಗೆ? ಈ ನಮೂನೆ, ಥರ, ಬಗೆ, ರೀತಿಗಳೇ ಜಾತಿಗಳಾಗೋದು. ಬಣ್ಣವೋ, ರುಚಿಯೋ, ಗುಣ ಸ್ವಭಾವವೋ  ಜಾತಿ ಆಗಿಬಿಡುತ್ತದೆ ಸರಿ. ಆದರೆ ‘ನಾನೇ ಮೇಲು’ ಎಂಬ ಈ ‘ಶ್ರೇಷ್ಠತೆಯ ವ್ಯಸನ’ ಇದೆಯಲ್ಲ ಇದು; ವಿವೇಕ’ ಇರೋ ಮನುಷ್ಯ ಸಂಕುಲದಲ್ಲಿ ಮಾತ್ರ. ಅದು ಯಾವುದೇ, ಯಾರದೇ ಭಾಷಣವಿರಲಿ ಸಾಮಾನ್ಯವಾಗಿ ಶುರುವಾಗುವುದು ‘ಅಣ್ಣತಮ್ಮಂದಿರೇ’ ಎಂದಲ್ಲವೇ? ಆಸ್ತಿ ಹಂಚಿಕೊಳ್ಳುವುದು ಬೇಡ ಸ್ವಾಮಿ, ಒಟ್ಟಿಗೆ ಕೂತು ಒಂದೇ ಸಾಲಿನಲ್ಲಿ ಊಟ ಮಾಡಲೇನು ಅಡ್ಡಿ? ಹೆಗಲ ಮೇಲೆ ಕೈಹಾಕಿ ಪ್ರೀತಿಯಿಂದ ಮಾತನಾಡಿಸಲೇನು ಸಂಕಟ? ನಮ್ಮೂರ ದೇವಸ್ಥಾನಕ್ಕೆ ಇದೇ ಅಣ್ಣತಮ್ಮಂದಿರೆಲ್ಲ ಬಂದರೇಕೆ ಕಿರಿಕಿರಿ?

ಸಮಸ್ಯೆ ಇರುವುದೇ ಈ ನಡೆನುಡಿಯ ನಡುವಿನ ಅಂತರದಲ್ಲಿ. ಅಸಲಿಗೆ ನಮ್ಮ ವೇದಗಳು, ಉಪನಿಷತ್ತುಗಳು ಜಗತ್ತಿನ ಹಿತವನ್ನೇ ಮಾತನಾಡುತ್ತವೆ. ಆದರೆ ವೇದದ ವಕ್ತಾರಿಕೆ ಹಿಡಿದೋರು ಜಗತ್ತಿನಲ್ಲಿ ಪಕ್ಕದ ಕೇರಿಯವನನ್ನೂ ಹತ್ತಿರ ಸೇರಿಸುವುದಿಲ್ಲ, ಶರಣರನ್ನು, ವಚನಕಾರರನ್ನು ಕಂಠಪಾಠ ಮಾಡಿರೋರು ಇದಾರೆ, ಅರ್ಥ ತಿಳಿದು ಆಚರಿಸುವವರನ್ನು ಹುಡುಕಬೇಕಷ್ಟೆ. ಕೋಲಾರ ಜಿಲ್ಲೆಯಲ್ಲಿ ಬಸ್ಸಿನಲ್ಲೊಮ್ಮೆ ಪ್ರಯಾಣಸಾಗಿತ್ತು. ಹಳ್ಳಿಯೊಂದರಲ್ಲಿ ಬಸ್ಸು ನಿಂತಾಗ ಕೆಲವು ಕಾಲೇಜು ಹುಡುಗರು ಹತ್ತಿದರು. ಹಾಗೆ ಬಂದು ಪಕ್ಕದಲ್ಲಿ ಕೂತವನ ಹತ್ತಿರ ಮಾತಿಗಿಳಿದಿದ್ದೆ. ಹೆಸರು, ಊರು, ಕಾಲೇಜು, ಕೋರ್ಸು, ಕಾಂಬಿನೇಶನ್ ಕೇಳುತ್ತಲೇ ‘ನಿಮ್ಮ ಊರಲ್ಲೊಂದು ಚರ್ಚ್ ಆಗಿದೆಯಂತಲ್ಲ, ಹೌದಾ?’ ಎಂದೆ. ಮತ್ತಷ್ಟು ಓದು »

6
ನವೆಂ

“ ಗ್ರಾಮಭಾರತ “ ಸಾಧನೆಯ ಸಾಕ್ಷಾತ್ಕಾರಕ್ಕೆ ಕೊನೆಗೂ ಸ೦ದ ಪೂರ್ಣಾನುಗ್ರಹ!

-ರಾಘವೇಂದ್ರ ನಾವಡ

ಏನೂ ಮಾಡದೇ ಇರುವುದಕ್ಕಿ೦ತ ಏನನ್ನಾದರೂ ಮಾಡುವುದು ಸಾವಿರ ಪಾಲು ಉತ್ತಮವೆ೦ಬ ನಾವಡ ಉವಾಚವಿದೆ.. ಏನನ್ನಾದರೂ ಮಾಡುತ್ತಲೇ ಇರುವುದು ವ್ಯಕ್ತಿಯೋರ್ವನ ಸತತ ಕ್ರಿಯಾಶೀಲತೆಯನ್ನು ಅಭಿವ್ಯಕ್ತಿಸುತ್ತದೆ. ಏನನ್ನು ಮಾಡಬೇಕು ಮತ್ತು ಮಾಡಬಾರದು ಎನ್ನುವ ಆಯ್ಕೆ ಮಾತ್ರ ನಮ್ಮದು! ಕೆಲವರು ತಾವು ಬೆಳೆದುಬ೦ದದ್ದನ್ನು ಮರೆಯದೇ ಬೆಳೆದ ನ೦ತರ ಊರವರಿಗೆ ತನ್ನ ಗ್ರಾಮಕ್ಕೆ ಏನನ್ನಾದರೂ ಕೊಡುಗೆಯನ್ನು ನೀಡಬೇಕೆ೦ದು ಬಯಸಿದರೆ, ಏನನ್ನೂ ಮಾಡದಿದ್ದವರು ಇರುವವರಿ೦ದಲೇ ಎಲ್ಲವನ್ನೂ ಕಿತ್ತುಕೊ೦ಡು ತಮ್ಮ ಬೇಳೆ ಬೇಯಿಸಿಕೊಳುತ್ತಾರೆ!

ಎಲ್ಲವುದಕ್ಕಿ೦ತಲೂ ಮುಖ್ಯವಾಗಿ ಒಬ್ಬ ವ್ಯಕ್ತಿ ಸಮಾಜದಲ್ಲಿ ಒ೦ದು ಹ೦ತದಕ್ಕೆ ಮುಟ್ಟಿದನೆ೦ದರೆ ಜನತೆ ಅವರಿ೦ದ ನಿರೀಕ್ಷಿಸುವುದು ಬಹಳಷ್ಟಿರುತ್ತದೆ! ಕೆಲವರು ಆ ನಿರೀಕ್ಷೆಯ ಸಾಫಲ್ಯತೆಗಾಗಿ ಸ್ವಲ್ಪವಾದರೂ ಪ್ರಯತ್ನ ಪಟ್ಟರೆ.. ಇನ್ನು ಕೆಲವರು  ನಿರೀಕ್ಷೆಗಳ ಹಿ೦ದೆ ಓಡುತ್ತಾ ತಮ್ಮ ಬದುಕನ್ನು ಗೋಜಲಿನೊಳಗೆ ಸಿಲುಕಿಸಿಕೊಳ್ಳಲು ಇಷ್ಟಪಡುವುದಿಲ್ಲ.. ದೇವರಿಟ್ಟ ಹಾಗೆ ಇರಲಿ! ಎನ್ನುವ೦ತೆ…

ಅದಕ್ಕೆ೦ದೇ ಮಾನವ ಕನಸನ್ನು ಕಾಣಬೇಕು ಎನ್ನುವುದು!.. ಕನಸು ಮು೦ದಿನ ಸಾಧನೆಯ ಹ೦ತಕ್ಕೆ ನಮ್ಮನ್ನು ಕೊ೦ಡೊಯ್ಯುವ ದಾರಿ  ದೀಪ. ಕೆಲವರು ಕ೦ಡ ಕನಸಿನ ಬೆನ್ನನ್ನು ಹತ್ತುತ್ತಾರೆ.. ಇನ್ನು ಕೆಲವರು ರಾತ್ರಿ ಕ೦ಡ ಕನಸನ್ನು ಮತ್ತೊಬ್ಬರೊ೦ದಿಗೆ ಚರ್ಚಿಸುತ್ತಾ ಸುಮ್ಮನಿದ್ದು ಬಿಡುತ್ತಾರೆ!

ಮತ್ತಷ್ಟು ಓದು »

28
ಆಕ್ಟೋ

ಸ್ವಾಮಿ ವಿವೇಕಾನಂದರ ಪದತಳದಲ್ಲಿ ಅರಳಿದ ಕುಸುಮ ಭಗಿನಿ ನಿವೇದಿತಾ

– ಶ್ರೀವಿದ್ಯಾ,ಮೈಸೂರು

ಇಂದು ನಮ್ಮ ಸೋದರಿ ನಿವೇದಿತಾ ಅವರ ಜನ್ಮದಿನ. ನಿವೇದಿತಾ ಅವರ ಜೀವನವನ್ನು ನಮ್ಮ ದೇಶಕ್ಕಾಗಿ ತ್ಯಾಗ ಮಾಡಿದವರು. ಉದಾರ ಮನಸ್ಸು ಅವರದ್ದು. ಸ್ವಾಮಿ ವಿವೇಕಾನಂದರ ಭವ್ಯ ಭಾರತದ ಕನಸ್ಸನ್ನು ನನಸಾಗಿಸಲು ಸಾಕಷ್ಟು ಪ್ರಯತ್ನಿಸಿದರು. ಆ ಕಾಲದಲ್ಲಿ ಮಹಿಳೆಯರಿಗೆಶಾಲೆಗಳು ಇರಲಿಲ್ಲ. ಜ್ಞಾನವೂ ಕಡಿಮೆಯಿತ್ತು. ಆದರೆ, ಈ ಕಾಲದಲ್ಲಿ ನೋಡಿ, ಎಷ್ಟೋ ಮಹಿಳೆಯರು ವಿದ್ಯಾವಂತರಾಗಿ ಜೀವನ ನಡೆಸುತ್ತಿರುವರು.ಇದೆಲ್ಲಾ ನಿವೇದಿತಾ ಅವರ ಪರಿಶ್ರಮದಿಂದ ! ನಿವೇದಿತಾ ಅವರು ಮನೆ ಮನೆಗಳಿಗೆ ಹೋಗಿ ಮನವೊಲಿಸಿ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಬೇಕೆಂದು ಜಾಗೃತಿ ಮೂಡಿಸಿ ಅನೇಕ ಶಾಲೆಗಳನ್ನು ಕಟ್ಟಿಸಿದರು. ಅಲ್ಲದೇ, ಪ್ಲೇಗ್ ರೋಗ ಬಂದಿದ್ದಾಗ ಜನರ ಸೇವೆ ಮಾಡಿದರು. ಅವರು ಅಸಾಮಾನ್ಯ ಮಹಿಳೆ. ಅವರ ದೇಶವನ್ನು ಬಿಟ್ಟು ಬಂದಾಗಲೂ ಅವರ ಮನಸ್ಸಿನಲ್ಲಿ ಅವರ ದೇಶದ ಜನರು ಅವರನ್ನು ದೂರವಿಡುತ್ತಾರೆಂದು ಹಿಂಸೆ, ನೋವಾಗುತ್ತಿತ್ತು. ಆದರೂ, ಭಾರತ ದೇಶಕ್ಕೆ ಅದೆಲ್ಲ ತ್ಯಾಗ ಮಾಡಿದ್ದು ಅವರ ಪ್ರೀತಿ, ಗೌರವ ದೊಡ್ಡದು ಅಲ್ಲವೇ ? ಅವರು ನಮ್ಮವರೇ ಎಂದು ಅವರ ಜನ್ಮದಿನವನ್ನು ನೆನೆಸಿಕೊಂಡು ಆಚರಿಸೋಣ

ಅವರ ಜೀವನವನ್ನು ತಿಳಿಸುತ್ತಿದ್ದೇನೆ…

೧೮೬೭ರ ಅಕ್ಟೋಬರ್ ೨೮ರಂದು ಮಾರ್ಗರೆಟ್ ಎಲಿಜಬೆತ್ ನೊಬೆಲ್(ನಿವೇದಿತಾ) ಐರ್ಲೆ೦ಡಿನಲ್ಲಿ ಹುಟ್ಟಿದಳು.ತಾಯಿ ಮೇರಿ ಇಸಬೆಲ್, ತಂದೆ ಸಾಮ್ಯುಅಲ್. ಐರ್ಲೆ೦ಡಿನಲ್ಲಿ ಕೂಡ ಸ್ವಾತಂತ್ರ್ಯಕ್ಕಾಗಿ ಹೋರಾಟಗಳು ನಡೆದಿದ್ದಾಗ ಅವಳ ಅಜ್ಜ ಹ್ಯಾಮಿಲ್ಟನ್ ಭಾಗವಹಿಸಿ, ಮನೆಮಾತಾಗಿದ್ದರು. ತಮ್ಮ ಅಜ್ಜನಿಂದ ಅಪಾರವಾದ ಧೈರ್ಯ ಮತ್ತು ದೇಶಭಕ್ತಿ, ಧರ್ಮಗುರುವಾದ ತಂದೆಯಿಂದ “ಮಾನವ ಸೇವೆಯೇ ಭಗವಂತನ ಸೇವೆ” ಎಂಬ ಆದರ್ಶಗಳನ್ನು ಬಾಲ್ಯದಿಂದಲೇ ಅವಳು ರೂಢಿಸಿಕೊಂಡಿದ್ದಳು. ಅಷ್ಟೇ ಅಲ್ಲ, ದಾಷ್ಟ್ರಭಕ್ತಿ, ದೈವಭಕ್ತಿ ಜೊತೆಯಾಗಿ ಅವಳ ಹೃದಯದಲ್ಲಿ ಬೆಳೆದವು. ದುಃಖದಲ್ಲಿರುವವರನ್ನು ಅನುಕಂಪದಿಂದ ಕಾಣುವ ಗುಣ ಬೆಳೆದವು. ಶಾಲೆಯಲ್ಲೂ ಎಲ್ಲರಿಗೂ ಅಚ್ಚುಮೆಚ್ಚು ಆಗಿದ್ದಳು. ರಗ್ಬಿ ಎನ್ನುವ ಸ್ಥಳದಲ್ಲಿ ಹೆಣ್ಣುಮಕ್ಕಳ ಉಚಿತ ಅನಾಥಾಲಯದಲ್ಲಿ ಒಂದು ವರ್ಷ ಕೆಲಸ ಮಾಡಿದಳು. ನಂತರ, ರೆಕ್ಸ್ ಹಾಮ್ ಎನ್ನುವ ಗಣಿಕೇಂದ್ರದಲ್ಲಿದ್ದ ಸೆಕೆಂಡರಿ ಶಾಲೆಯ ಶಿಕ್ಷಕಿಯಾಗಿ ಕೆಲಸ ಮಾಡಿದಳು. ಸಮಾಜ ಸೇವಕಿಯಾಗಿಯೂ ಕೆಲಸ ಪ್ರಾರಂಭಿಸಿದಳು.೧೮೯೨ರಲ್ಲಿ ತನ್ನದೇ ಸ್ವಂತ ಶಾಲೆಯನ್ನು ಪ್ರಾರಂಭಿಸಿದಳು. ಈ ಶಾಲೆ ಬಹುಬೇಗ ಜನಪ್ರಿಯವಾಯಿತು. ಅವಳು ಮದುವೆಯಾಗಬೇಕು ಎನ್ನುವ ಹಂತದಲ್ಲಿ ಮದುವೆ ಮುರಿದುಬಿತ್ತು. ೧೮೯೫, ಮಾರ್ಗರೆಟ್ ಸ್ವಾಮಿ ವಿವೇಕಾನಂದರನ್ನು ಕಂಡ ವರ್ಷ. ಅದು ಅವಳ ಜೀವನದ ದಿಕ್ಕನ್ನೇ ಬದಲಾಯಿಸಿದ ಮಹತ್ವದ ವರ್ಷ. ಈ ಭೇಟಿಯ ನಂತರ ಅವಳು ಸ್ವಾಮೀಜಿಯ ಮಾತು-ಬರಹಗಳನ್ನು ಮತ್ತೆ-ಮತ್ತೆ ಓದಿದಳು. ಭಾರತೀಯ ತತ್ವಶಾಸ್ತ್ರ, ಉಪನಿಷತ್ತು, ಭಗವದ್ಗೀತೆಯನ್ನು ಅಧ್ಯಯನ ಮಾಡಿ ಚರ್ಚೆ ಮಾಡಿದಳು. ಕ್ರಮೇಣ ಅವಳ ಸಂಶಯಗಳೆಲ್ಲ ದೂರವಾದವು. ವಿವೇಕಾನಂದರು ಭಾರತದ ಬಡಮಕ್ಕಳ, ಸ್ತ್ರೀಯರ ವಿದ್ಯಾಭ್ಯಾಸದ ವ್ಯವಸ್ಥೆಯನ್ನು ಕುರಿತು ಮಾತನಾಡುತ್ತಿರುವಾಗ ಮಾರ್ಗರೆಟ್ ” ನಾನು ಸಿದ್ಧಳಾಗಿದ್ದೇನೆ, ಆ ಕೆಲಸ ಮಾಡುತ್ತೇನೆ” ಎಂದಳು.
ಮತ್ತಷ್ಟು ಓದು »

13
ಆಕ್ಟೋ

ಮಲಾಳ ಯೂಸುಫ್ ಝಾಯಿಯ ಡೈರಿಯಿಂದ

–  ಡಾ ಅಶೋಕ್ ಕೆ ಆರ್

ಪಾಕಿಸ್ತಾನಿ ತಾಲಿಬಾನಿಗಳಿಂದ ಗುಂಡೇಟು ತಿಂದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಈ ಹೋರಾಟಗಾರ್ತಿ ಮಾಡಿದ ತಪ್ಪಾದರೂ ಏನು? ಹೆಣ್ಣುಮಕ್ಕಳು ಶಾಲೆಗೆ ಹೋಗಬಾರದು ಎಂಬ ತಾಲಿಬಾನ್ ಆದೇಶವನ್ನು ವಿರೋಧಿಸಿದ್ದೇ ಇವಳ ಅಪರಾಧ! ಎರಡು ವರುಷದ ಮುಂಚೆ ಬರೆದ ದಿನಚರಿಗಳನ್ನು ಗುಲ್ ಮಕಾಯಿ ಎಂಬ ಕಾವ್ಯನಾಮದಡಿಯಲ್ಲಿ ಬಿಬಿಸಿ ಉರ್ದುವಿನಲ್ಲಿ ಪ್ರಕಟಣೆಗೆ ನೀಡಿದ್ದು ಇವಳ ಬಹುದೊಡ್ಡ ತಪ್ಪು. ಅಂದಹಾಗೆ ಮಲಾಳ ಯೂಸುಫ್ ಝಾಯಿ ಎಂಬ ಹೆಸರಿನ ಈ ಹೋರಾಟಗಾರ್ತಿಯ ವಯಸ್ಸು ಹದಿನಾಲ್ಕು!

ಶನಿವಾರ ಜನವರಿ 3 : ಭಯವಾಗ್ತಿದೆ
ನಿನ್ನೆ ಕನಸಿನಲ್ಲಿ ಮಿಲಿಟರಿ ಹೆಲಿಕಾಪ್ಟರ್ ಗಳು ಮತ್ತು ತಾಲಿಬಾನಿಗಳು ಬಂದಿದ್ದರು. ನಮ್ಮ ಸ್ವಾಟ್ ಜಿಲ್ಲೆಯಲ್ಲಿ ಸೈನಿಕ ಕಾರ್ಯಾಚರಣೆ ಶುರುವಾದಾಗಿನಿಂದ ಈ ರೀತಿಯ ದುಸ್ವಪ್ನಗಳು ಮಾಮೂಲಾಗಿದೆ. ಅಮ್ಮ ಮಾಡಿಕೊಟ್ಟ ತಿಂಡಿ ತಿಂದು ಶಾಲೆಗೆ ಹೊರಟೆ. ಹೆಣ್ಣುಮಕ್ಕಳು ಶಾಲೆಗೆ ಹೋಗುವುದನ್ನು ತಾಲಿಬಾನಿಗಳು ನಿಷೇಧಿಸಿರುವುದರಿಂದ ನನಗೆ ಭಯವಾಗುತ್ತಿದೆ.
27 ಜನರಲ್ಲಿ 11 ಮಂದಿ ಮಾತ್ರ ಶಾಲೆಗೆ ಬಂದಿದ್ದೆವು. ತಾಲಿಬಾನ್ ಆದೇಶದಿಂದ ಹಾಜರಾತಿ ಕಡಿಮೆಯಾಗಿತ್ತು. ನನ್ನ ಮೂವರು ಗೆಳತಿಯರು ಈ ಆದೇಶದ ನಂತರ ತಮ್ಮ ಕುಟುಂಬದೊಡನೆ ಲಾಹೋರ್, ಪೇಷಾವರ, ರಾವಲ್ಪಿಂಡಿಗೆ ಹೊರಟುಹೋಗಿದ್ದಾರೆ.