ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

20
ಫೆಬ್ರ

ಹರಃ ಪಾಪಾನಿ ಹರತಾತ್ ಶಿವೋ ಧತ್ತಾಂ ಸದಾ ಶಿವಂ

-ಸುಗುಣಾ ಮಹೇಶ್

ಇತ್ತೀಚೆಗೆ ಮಗನಿಗೆ ಶಿವರಾತ್ರಿ ಹಬ್ಬವಿದೆ ಉಪವಾಸ ಜಾಗರಣೆ ಎಲ್ಲಾ ಮಾಡುತ್ತಾರೆ. ಊರಲ್ಲಿ ಇದ್ದಿದ್ದರೆ ನಾವೂ ಸಹ ಆಚರಿಸಬಹುದಿತ್ತು ಆದರೆ ಕುವೈತಿನಲ್ಲಿ ಇದ್ದೀವಿ ಕೆಲಸದ ದಿನ ಬೇರೆ ಉಪವಾಸವಂತೂ ಮಾಡುತ್ತೇವೆ, ಜಾಗರಣೆ ಕಷ್ಟವೇನೋ ಎಂದು ಹೇಳಿದಾಗ ಮಗ ಶಿವನ ಬಗ್ಗೆ ಏನಾದರು ಇದ್ದರೆ ಹೇಳು ಎಂದ ಅವನಿಗಾಗಿ ಈ ಲೇಖನ ಬರೆದೆ ನಿಮ್ಮೊಂದಿಗೂ ಹಂಚಿಕೊಳ್ಳುತ್ತಲಿದ್ದೇನೆ….
ದೇವತೆಗಳ ಮತ್ತು ರಾಕ್ಷಸರ ಮಧ್ಯೆ ನಡೆದ ಸಮುದ್ರ ಮಥನದ ಸಂದರ್ಭದಲ್ಲಿ ಸಮುದ್ರದಿಂದ ಹಾಲಾಹಲ ಹೊರಬಂದು ಸೃಷ್ಟಿಯನ್ನು ಅಲ್ಲೋಲ ಕಲ್ಲೋಲ ಮಾಡುವ ಸಾಧ್ಯತೆಗಳು ಹೆಚ್ಚಾದ್ದರಿಂದ ದೇವತೆಗಳು ಈ ಸಂಕಷ್ಟದಿಂದ ಪಾರುಮಾಡಲು ಭಗವಾನ್ ವಿಷ್ಣುವಿನ ಮೊರೆ ಇಟ್ಟಾಗ, ವಿಷ್ಣು ಶಿವನನ್ನು ಭೇಟಿಯಾಗುವಂತೆ ಸಲಹೆ ನೀಡುತ್ತಾನೆ. ನಂತರ ದೇವತೆಗಳು ಶಿವನ ಬಳಿಗೆ ತೆರಳಿ ಕಷ್ಟದಿಂದ ಪಾರು ಮಾಡೆಂದು ಬೇಡಿಕೊಳ್ಳುತ್ತಾರೆ. ದೇವತೆಗಳ ಕಷ್ಟವನ್ನು ಅರಿತ ಶಿವ ಹಾಲಾಹಲ ಕುಡಿದು ಅದು ಹೊರಗೆ ಬರದಂತೆ ಹಾವಿನಿಂದ ಸುತ್ತಿಕೊಂಡನೆಂದು ಹೇಳಲಾಗುತ್ತದೆ. ಆದುದರಿಂದ ಶಿವನ ಕಂಠ ನೀಲಿಯಾಗಿರುತ್ತದೆ ಇದೇ ಕಾರಣಕ್ಕೆ ಶಿವನನ್ನು ನೀಲಕಂಠ ಎಂದೂ ಸಹ ಕರೆಯುತ್ತಾರೆ.
ಒಮ್ಮೆ, ಇಡೀ ಜಗತ್ತೇ ಪ್ರಳಯದ ಅಂಚಿನಲ್ಲಿದ್ದಾಗ ಪಾರ್ವತಿ ದೇವಿ ಈ ಜಗತ್ತನ್ನು ಉಳಿಸಲು ಶಿವನ್ನಲಿ ಮೊರೆಯಿಟ್ಟು ಬೇಡಿಕೊಳ್ಳುತ್ತಾಳೆ. ಆ ಸಂದರ್ಭದಲ್ಲಿ ಶಿವನು ಪ್ರಳಯದಿಂದ  ಜೀವಸಂಕುಲಗಳನ್ನೆಲ್ಲಾ ಪಾರು ಮಾಡಿದ ರಾತ್ರಿಯನ್ನು ಮಹಾಶಿವರಾತ್ರಿ ಎಂದು ಪಾರ್ವತಿ ದೇವಿ ಕರೆದರೆಂದು ಹೇಳಲಾಗುತ್ತದೆ. ಪ್ರಳಯದ ನಂತರ ಪಾರ್ವತಿ ಶಿವನ ಪೂಜೆ ಸಲ್ಲಿಸಲು ಇಷ್ಟವಾದ ದಿನ ಯಾವುದೆಂದು ಕೇಳಿದಾಗ, ಮಾಘ ತಿಂಗಳಿನ ೧೪ರ ರಾತ್ರಿ ನನ್ನ ಇಷ್ಟದ ರಾತ್ರಿ, ಅದನ್ನು ಶಿವರಾತ್ರಿ ಎಂದು ಹೇಳಿದ ಕೂಡಲೆ ಪಾರ್ವತಿ ಈ ಹಬ್ಬವನ್ನು ಪ್ರಚಲಿತಪಡಿಸಿದಳು ಎಂದು ಪುರಾಣಕಥೆಗಳು ಹೇಳುತ್ತವೆ.
13
ಫೆಬ್ರ

ಸಂಸ್ಕೃತಿ ಸಂಕಥನ – 22 – ಭಾರತೀಯ ಸಂಸ್ಕೃತಿಗೆ ಗ್ರಹಣ ಹಿಡಿಸಿದ ವಸಾಹತು ಪ್ರಜ್ಞೆ

-ರಮಾನಂದ ಐನಕೈ

ಸುಮಾರು 35 ವರ್ಷಗಳ ಹಿಂದಿನ ನೆನಪು. ನಾವು ಹೈಸ್ಕೂಲಿಗೆ ಹೋಗುತ್ತಿರುವ ದಿನಗಳು. ಒಂದು ರೀತಿಯ ವಿಚಿತ್ರ ಸಭ್ಯತೆಯನ್ನು ಬೆನ್ನಟ್ಟಿ ಹೊರಟಿರುವ ಕಾಲ. ಮೇಸ್ಟ್ರಗಳು ಕ್ಲಾಸಿಗೆ ಬಂದರೆ ಜೀವನದ ‘ಗುರಿ’ಯ ಕುರಿತಾಗೆ ಮೊದಲ ಪ್ರಶ್ನೆ ಕೇಳುತ್ತಿದ್ದರು. ಯಾರು ಅತ್ಯುತ್ತಮ ಗುರಿಯನ್ನು ಹೇಳಿದರೋ ಅವರಿಗೆ ‘ವ್ಹೆರಿ ಗುಡ್’ ಅನ್ನುತ್ತಿದ್ದರು. ಮುಂದೆ ಜೀವನದಲ್ಲಿ ಮನುಷ್ಯ ಮಾಡಬಹು ದಾಂತಹುದು ಇಂತಿಂಥದಿದ್ದೆ ಎಂದು ನಮಗೆ ಗೊತ್ತಾಗಿದ್ದೇ ಈ ಪ್ರಶೆಗಳಿಗೆ ಉತ್ತರ ಹುಡುಕುವ ಮೂಲಕ. ನಾವು ಮಾಡುವ ಕಾರ್ಯಗಳಿಗೆ ಉದ್ದೇಶ ಇದ್ದರೆ ಮಾತ್ರ ಅದು ಗುರಿ ತಲುಪುತ್ತದೆ. ಕ್ರಿಯೆಗೂ ಉದ್ದೇಶಕ್ಕೂ ಸಂಬಂಧ ಇರಬೇಕು. ಆದ್ದರಿಂದ ಗುರಿ ಅಂದರೆ  ಉದ್ದೇಶ. ಗುರಿಯ ದಾರಿ ಯಲ್ಲಿ ಹೋದರೆ ಗುರಿ ಸಿಗುತ್ತದೆ. ಈ ರೀತಿಯ ಚಿಂತನೆ ಇದ್ದ ಕಾಲ ಅದು.

ಇಂಥ ಚಿಂತನೆಗಳು ಎಲ್ಲಿಂದ ಬಂದವು? ಕೇಳಿದರೆ, ದಾರ್ಶನಿಕರಿಂದ, ಪುರಾಣಗಳಿಂದ, ಪ್ರಾಚೀನ ಜನರ ಜೀವನಾನುಭವದಿಂದ ಇತ್ಯಾದಿ ಯಾಗಿ ಮನಸ್ಸಿಗೆ ಕಂಡಂತೆ ಹೇಳುತ್ತೇವೆ. ಯಾರಿಂದಲೂ ಅಲ್ಲ. ನಾವು ಕಲ್ಪಿಸುತ್ತಿರುವ ಸೀಮಿತ ಅರ್ಥದ ಗುರಿ ನಮ್ಮಲ್ಲಿ ಹುಟ್ಟಿದ್ದೇ ಪಾಶ್ಚಾತ್ಯ ಪ್ರಭಾವದಿಂದ. ವಸಾಹತುಶಾಹಿ ಪ್ರಜ್ಞೆ ಯಿಂದ. ಏಕೆಂದರೆ ಅವರ ಅಷ್ಟೂ ಚಿಂತನೆಗಳು ಅರಳುವುದು ಕಾರಣ ಮತ್ತು ಉದ್ದೇಶಗಳ ಮೇಲೆ. ಏಕೆಂದರೆ ಪಾಶ್ಚಾತ್ಯ ಪುರಾಣ ಕಟ್ಟಲ್ಪಟ್ಟಿದ್ದೇ ಈ ಪರಿಕಲ್ಪನೆಯ ಮೇಲೆ. ಅನೇಕ ಸಂದರ್ಭಗಳಲ್ಲಿ ಅದು ನಮ್ಮಲ್ಲಿ ಅರ್ಥ ಕೊಡಲಾರದು.

ಮತ್ತಷ್ಟು ಓದು »

7
ಫೆಬ್ರ

ಹುಟ್ಟೋ ಮಕ್ಕಳು ಪ್ರಪಂಚವನ್ನು ನೋಡಲಿ..

-ನಟರಾಜು ಎಸ್ ಎಂ

ಜೂನ್ ತಿಂಗಳ ಸಂಜೆ ಏಳರ ಸಮಯ ಅನಿಸುತ್ತೆ. ನನ್ನ ಮೊಬೈಲ್ಗೆ ಒಂದು ಮೆಸೇಜ್ ಬಂದಿತ್ತು. “ನಿಮ್ಮ ತಂಗೀನ ಆಟೋದಲ್ಲಿ ನಿಮ್ಮ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದರು” ಅಂತ ಮೆಸೇಜ್ ಮಾಡಿದ್ದವರು ನಾವು ಬಾಡಿಗೆಗಿದ್ದ ಮನೆ ಓನರ್ ಅವರ ಚಿಕ್ಕ ಮಗಳು. ನಾನು ತಕ್ಷಣ ನಮ್ಮ ಮನೆಯ ಮೊಬೈಲ್ ನಂಬರ್ಗೆ ಫೋನ್ ಮಾಡಿದಾಗ ಅತ್ತಲಿನ ನನ್ನ ತಾಯಿಯ ದನಿ ಕಂಡು ನಾನು ಒಂದು ಕ್ಷಣ ನಡುಗಿದ್ದೆ.
“ಅಪ್ಪಾ ಹೊಟ್ಟೆ ನೋವು ಇಲ್ಲ ಏನೂ ಇಲ್ಲ ಸಾಯಂಕಾಲದಿಂದ ಒಂದೇ ಸಮನೆ ರಕ್ತ ಹೋಗ್ತಾ ಅದೆ ಅಂತ ಒಂದು ಆಸ್ಪತ್ರೆಗೆ ಕರಕೊಂಡ್ ಹೋಗಿದ್ದೆ. ಅಲ್ಲಿ ಆಗಲ್ಲ ಅಂತ ದೊಡ್ಡಾಸ್ಪತ್ರೆಗೆ ಬರೆದವ್ರೆ ಕಣಪ್ಪ ನಂಗ್ಯಾಕೋ ಭಯ ಆಗ್ತದೆ” ಅಂತ ನನ್ನ ತಾಯಿ ಅಳುತ್ತಾ ಇತ್ತು. “ಒಂದಷ್ಟು ಹೊತ್ತು ಬಿಟ್ಟು ಫೋನ್ ಮಾಡಪ್ಪ ಆ ಆಸ್ಪತ್ರೆಗೆ ಹೋಗ್ತಾ ಇದ್ದೀವಿ” ಅಂತ ಹೇಳಿ ನಮ್ಮ ತಾಯಿ ಫೋನಿಟ್ಟಿತ್ತು. ಈಗಾಗಲೇ ಒಂದು ಜೀವವನ್ನು ಕಳೆದುಕೊಂಡಿದ್ದ ನಾವು ನಮ್ಮ ಮನೆಯ ಮತ್ತೊಂದು ಜೀವ ಜೀವನ್ಮರಣದ ಮಧ್ಯೆ ಹೋರಾಡ್ತಾ ಇದೆ ಅಂತ ಗೊತ್ತಾದಾಗ ಯಾಕೋ ನಾನು ತುಂಬಾ ಗಾಬರಿಯಾಗಿದ್ದೆ. ಮತ್ತೆ ಒಂದರ್ಧ ಗಂಟೆ ಬಿಟ್ಟು ಮತ್ತೆ ಫೋನ್ ಮಾಡಿದಾಗ “ಈ ದೊಡ್ಡಾಸ್ಪತ್ರೆಯಲ್ಲೂ ಆಗಲ್ಲ ಅಂದುಬುಟ್ರು ಕಣಪ್ಪ. ಎರಡು ಮಕ್ಕಳವೆ. ದಿನ ತುಂಬಿಲ್ಲ, ರಕ್ತ ಜಾಸ್ತಿ ಹೋಗದೆ ತಕ್ಷಣ ಆಪರೇಷನ್ ಮಾಡ್ಬೇಕು ಇಲ್ಲ ಅಂದ್ರೆ ತಾಯಿ ಮಕ್ಕಳು ಮೂರು ಜೀವಕ್ಕೂ ತೊಂದ್ರೆ ಅಂತ ಹೇಳುದ್ರು” ಅಂತ ನಮ್ಮ ತಾಯಿ ಗುಳೋ ಅಂತ ಅಳುತ್ತಿತ್ತು. ಆಗ ನಾನಿದ್ದುದು ದೂರದ ಕಲ್ಕತ್ತದಲ್ಲಿ. ನಮ್ಮ ತಾಯಿ ಮಾತನಾಡುತ್ತಿದುದು ಹೆರಿಗೆಗೆ ದೊಡ್ಡಾಸ್ಪತ್ರೆ ಅಂತ ಕರೆಯಲ್ಪಡುವ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಮುಂಭಾಗದಿಂದ.
6
ಫೆಬ್ರ

ಸಂಸ್ಕೃತಿ ಸಂಕಥನ – 21 – ಬುದ್ಧ ಬ್ರಾಹ್ಮಣ ವಿರೋಧಿಯೇ?

-ರಮಾನಂದ ಐನಕೈ

ನಿಜಕ್ಕೂ  ಇದು ಕುತೂಹಲದ ಪ್ರಶ್ನೆ. ಈ ಕುರಿತು ಸಂಶೋಧನೆ ಮಾಡಿದ ಬಾಲಗಂಗಾಧರರ ಅಭಿಪ್ರಾಯಗಳು ನಮಗೆ ಹೊಸತೊಂದು ಸತ್ಯದ ಲೋಕವನ್ನು ತೆರೆದುಕೊಡುತ್ತದೆ. ಬುದ್ಧ ವರ್ಣ ವ್ಯವಸ್ಥೆಯನ್ನು ದ್ವೇಷಿಸಿದ್ದು ನಿಜವೇ? ವರ್ಣ ವ್ಯವಸ್ಥೆಯನ್ನು ಒಪ್ಪಿಕೊಂಡೆ ಆತ ಬ್ರಾಹ್ಮಣತ್ವವನ್ನು ಚರ್ಚೆಗೆ ಎಳೆಯುತ್ತಾನೆ. ಇದು ಹೇಗೆ ಸಾಧ್ಯ? ನಮ್ಮ ದೇಶದ ದಲಿತರು ಬುದ್ಧಿಸಂನ್ನು ಆರಾಧಿಸು ವುದು ಅದು ನಿಜವಾದ ಮಾನವೀಯ ಧರ್ಮ ಅಂತಲೋ ಅಥವಾ ಬುದ್ಧಿಸಂ ಬ್ರಾಹ್ಮಣರನ್ನು ದ್ವೇಷಿಸುತ್ತದೆ ಎಂಬ ಕಲ್ಪಿತ ಕಥೆಯ ಪ್ರೇರಣೆ ಯಿಂದಲೋ?

ಹಿಂದೂಯಿಸಂ ಹಾಗೆ ಬುದ್ಧಿಸಂ ಕುರಿ ತಾಗಿಯೂ ವರ್ಣರಂಜಿತ ಕಥೆ ಕಟ್ಟಿದವರೂ ಐರೋಪ್ಯರೆ. ಏಕೆಂದರೆ ಬುದ್ಧಿಸಂನ್ನು ಕೂಡಾ ಅವರು ತಮ್ಮ ಕನ್ನಡಕದಿಂದಲೇ ನೋಡಿದರು. ಜೊತೆ ಜೊತೆಗೆ ಹಿಂದೂಯಿಸಂ ಕುರಿತಾದ ಕೆಲವು ಕಗ್ಗಂಟುಗಳಿಂದ ತಪ್ಪಿಸಿಕೊಳ್ಳಲು ಬುದ್ಧಿಸಂನ್ನು ವೈಭವೀಕರಿಸುವ ಅಗತ್ಯ ಅವರಿಗಿತ್ತು. ಬುದ್ಧಿಸಂ ಅನ್ನುವುದು ಹಿಂದೂಯಿಸಂಗಿಂತ ಉತ್ತಮವಾದ ರಿಲಿಜನ್ ಎಂದು ಭಾವಿಸಲು ಅವರಲ್ಲಿ ಸಾಕಷ್ಟು ಸಮರ್ಥನೆಗಳಿದ್ದವು. ಬುದ್ಧಿಸಂ ಏಕದೇವನ ಕಲ್ಪನೆಯಲ್ಲಿದೆ. ತ್ರಿಪಿಟಕಗಳು ಅವರ ಸ್ಕ್ರಿಪ್ಚರ್ಗಳು. ಮತಾಂತರಕ್ಕ ಮಾನ್ಯತೆ ಇದೆ. ಹಾಗಾಗಿ ಬುದ್ಧಿಸಂ ಅನ್ನುವುದು ಒಂದು ಶುದ್ಧವಾದ ರಿಲಿಜನ್ ಅಂದು ಕೊಂಡರು.

ಮತ್ತಷ್ಟು ಓದು »

2
ಫೆಬ್ರ

ಏನ್ ಗುರು ರಾಜಕೀಯನಾ?

-ಅಶ್ವಿನ್ ಎಸ್ ಅಮೀನ್

ಇತ್ತೀಚೆಗೆ ಬನವಾಸಿ ಬಳಗದವರು ನಡೆಸುತ್ತಿರುವ  ‘ಏನ್ ಗುರು’ ಎಂಬ ಬ್ಲಾಗ್ ನಲ್ಲಿ ಪ್ರಕಟವಾದ ‘RSS ಕಣ್ಣಲ್ಲಿ ಭಾಷಾ ನೀತಿ, ಒಕ್ಕೂಟ ಮತ್ತು ಸಮಾಜ’ ಎಂಬ ಲೇಖನವನ್ನು ಓದಿದೆ. ಲೇಖಕರ ಮಾತುಗಳು ಏಕಮುಖಿಯಾಗಿವೆಯೇನೋ ಎನಿಸಿ ಈ ಪ್ರತಿಕ್ರಿಯೆಯನ್ನು ದಾಖಲಿಸುತ್ತಿದ್ದೇನೆ.

ಲೇಖನ ಆರಂಭದಲ್ಲಿ ಅರೆಸ್ಸಿಸಿನ ಧನಾತ್ಮಕ ಅಂಶಗಳ ಕುರಿತು ಲೇಖಕರು ಗಮನ ಸೆಳೆಯುತ್ತಾರೆ. ಆದರೆ ಒಂದು ಕಡೆ ನೆರೆ ಬರ ಹಾಗು ಇತರ ವಿಕೋಪಗಳ ಸಂದರ್ಭದಲ್ಲಿ ಜಾತಿ ಮತ ಲೆಕ್ಕಿಸದೆ ಜನತೆಯ ಸಹಾಯಕ್ಕೆ ಧಾವಿಸುವ ಆರೆಸ್ಸೆಸ್ ನ ಬಗ್ಗೆ ಹೊಗಳುವ ಲೇಖಕರು ಮತ್ತೊಂದು ಕಡೆ ಪ್ರಾಂತೀಯ ವಿರೋಧದ ಬಗ್ಗೆ ಮಾತನಾಡುತ್ತಾರೆ.! ಪ್ರಾಂತೀಯ ಹಾಗು ವೈವಿಧ್ಯತಾ ವಿರೋಧವಿದ್ದರೆ ಆರೆಸ್ಸೆಸ್ ದೇಶದ ಯಾವದೇ ಭಾಗದಲ್ಲಿ ಉಂಟಾಗುವ ವಿಕೋಪಗಳ ಸಂದರ್ಭದಲ್ಲಿ ನೆರವಿಗೆ ಧಾವಿಸುತ್ತಿತ್ತೆ..?!

ಆರೆಸ್ಸೆಸಿನ ಪೂಜನೀಯ ಗುರುಗಳಾದ ಮಾಧವ ಸದಾಶಿವ ಗೋಳವಾಲ್ಕರ್ ಗುರೂಜಿಯವರ ‘ಚಿಂತನ ಗಂಗಾ’ ಪುಸ್ತಕವನ್ನಾಧರಿಸಿ ಆ ಲೇಖನವನ್ನು ಬರೆಯಲಾಗಿದೆ. ಆ ಸಮಗ್ರ ಗ್ರಂಥವನ್ನು ಲೇಖಕರು ಓದಿರುವುದು ಸಂತೋಷದಾಯಕ. ಆದರೆ ಅದನ್ನು ಸರಿಯಾಗಿ ಅರ್ಥೈಸುವಲ್ಲಿ ಎಡವಿದ್ದಾರೆ ಎಂಬುದೇ ವಿಪರ್ಯಾಸ.! ಮತ್ತಷ್ಟು ಓದು »

30
ಜನ

ಸಂಸ್ಕೃತಿ ಸಂಕಥನ – 20 – ಬುದ್ಧನನ್ನು ಹೈಜಾಕ್ ಮಾಡಿದ ಪ್ರೊಟೆಸ್ಟಾಂಟರು

-ರಮಾನಂದ ಐನಕೈ

ಎಲ್ಲರಿಗೂ ಅಚ್ಚರಿಯಾಗಬಹುದು. ಪ್ರೊಟೆಸ್ಟಾಂಟರು ಹೇಗೆ ಮತ್ತು ಏಕೆ ಬುದ್ಧಿಸಂನ್ನು ಹೈಜಾಕ್ ಮಾಡಿದರು ಎಂಬುದು. ಇಲ್ಲಿ ಹೈಜಾಕ್ ಅಂದರೆ ಅಪಹರಣ ಎಂಬ ಅರ್ಥವಲ್ಲ. ಪ್ರೊಟೆ ಸ್ಟಾಂಟರು ಬುದ್ಧಿಸಂನ್ನು ಹೇಗೆ ತಮ್ಮ ಸಮರ್ಥನೆ ಗಾಗಿ ಬಳಸಿಕೊಂಡರು ಎಂಬುದು. ಇದರ ಹಿಂದೆ ಸ್ವತಃ ಭಾರತೀಯರಿಗೆ ಅರ್ಥವಾಗದ ಹಲವು ರಹಸ್ಯಗಳಿವೆ. ಈ ರಹಸ್ಯಗಳನ್ನು ಬಾಲಗಂಗಾಧರರು ಸ್ವಾರಸ್ಯವಾಗಿ ಭೇದಿಸುತ್ತಾರೆ.

ಸಮಕಾಲೀನ ಭಾರತೀಯ ಚಿಂತಕರಿಗೆ ಬುದ್ಧಿಸಂ ಕುರಿತಾಗಿ ಒಂದು ಪೂರ್ವಗ್ರಹಿತ ಅಭಿ ಪ್ರಾಯಗಳಿವೆ. ಬುದ್ಧಿಸಂ ಮಾನವೀಯತೆಗಾಗಿ ಹೋರಾಡುತ್ತಿದೆ. ಇದು ಸಮಾಜದಲ್ಲಿನ ಅನಿಷ್ಟ ವನ್ನು ವಿರೋಧಿಸಿದೆ. ಯಜ್ಞಯಾಗಾದಿಗಳನ್ನು ಧಿಕ್ಕರಿಸಿದೆ. ಪ್ರಾಣಿ ಬಲಿ ವಿರೋಧಿಸಿ ಅಹಿಂಸಾ ತತ್ವ ಮೆರೆದಿದೆ. ಈ ಮೂಲಕ ಹಿಂದೂ ಯಿಸಂನ್ನು ವಿರೋಧಿಸಿದೆ. ಭಾರತದ ಜಾತಿ ವ್ಯವಸ್ಥೆಯನ್ನು ವಿಮರ್ಶಿಸಿದೆ. ಇಲ್ಲಿನ ವರ್ಣಾ ಶ್ರಮವನ್ನು ವಿರೋಧಿಸಿದೆ. ಇಲ್ಲಿನ ಪುರೋಹಿತ ಶಾಹಿಯನ್ನು ಹಾಗೂ ಬ್ರಾಹ್ಮಣರನ್ನು ವಿರೋಧಿಸಿದೆ. ಹಾಗಾಗಿ ಇದೊಂದು ವಿಶ್ವಮಾನ್ಯವಾದ ರಿಲಿಜನ್. ಬುದ್ಧಿಸಂ ಸಮಾಜದಲ್ಲಿನ ತರತಮ ವನ್ನು ಸಹಿಸುವುದಿಲ್ಲ. ಮನುಷ್ಯರ ಏಳ್ಗೆಗಾಗಿ ಹಂಬಲಿಸುತ್ತದೆ ಇತ್ಯಾದಿ. ಈ ಕಾರಣಕ್ಕಾಗೆ ನಮ್ಮ ದೇಶದ ದಲಿತ ಚಿಂತಕರೆಲ್ಲ ಬುದ್ಧಿಸಂ ಕಡೆಗೆ ಆಕರ್ಷಿತರಾದರು. ಅಂಬೇಡ್ಕರರು ಕೂಡ ಬುದ್ಧಿಸಂಗೆ ಮತಾಂತರ ಹೊಂದಿದ್ದು ಈ ಆಕರ್ಷಣೆಯಿಂದ. ನಿಜವಾಗಿಯೂ ಇದು ನಿಜವೆ? ಭಾರತೀಯ ಸಂಸ್ಕೃತಿಯೊಂದಿಗೆ ಬುದ್ಧಿಸಂ ವಿರೋಧವಾಗಿಯೇ ನಡೆದುಕೊಂಡು ಬಂದಿ ದೆಯೇ? ನಿಜವಾಗಿಯೂ ಬುದ್ಧ ವರ್ಣಾಶ್ರಮ ದಿಂದ ಹೊರಗುಳಿದು ವರ್ಣಾಶ್ರಮ ಪದ್ಧತಿಯನ್ನು ವಿರೋಧಿಸಿದನೇ? ಈಗ ನಾವು ವಿಸ್ಮೃತಿಯಿಂದ ಸ್ಮೃತಿಗೆ ಬರಬೇಕಾಗಿದೆ.

ಮತ್ತಷ್ಟು ಓದು »

19
ಜನ

ಸ್ವಾಮಿ ವಿವೇಕಾನಂದರೊಳಗಿನ ’ಮನುಷ್ಯ’ ಮತ್ತು ಮನುಷ್ಯನೊಳಗಿನ ’ಅವಿವೇಕ’

– ರಾಕೇಶ್ ಶೆಟ್ಟಿ

ಓದು,ಅನುಭವ ಮತ್ತು ವಯಸ್ಸು,ಮನುಷ್ಯನನ್ನ ಮಾಗಿಸುತ್ತದೆ ಅನ್ನುತ್ತಾರೆ,ಆದರೆ ಕೆಲವರ ಪಾಲಿಗೆ ಓದು,ಅನುಭವದ ಜೊತೆಗೆ ವಯಸ್ಸು ಬಾಗಿಸುತ್ತದೆ ದೇಹ ಮತ್ತೆ ತಲೆ ಎರಡನ್ನೂ…! ಅಂತವರ ವಿಷಯ ಪಕ್ಕಕ್ಕಿರಲಿ….ವಿವೇಕಾನಂದರ ವಿಷಯಕ್ಕೆ ಬರೋಣ…

ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸ್ವಾಮಿ ವಿವೇಕಾನಂದರು ಜಪಾನ್ ಮೂಲಕ ಸಾಗುವಾಗ ಅಲ್ಲಿನ ನಗರ ವೀಕ್ಷಣೆಯ ನಂತರ ತಮ್ಮ ಮದರಾಸಿ ಶಿಷ್ಯರಿಗೆ ಬರೆದ ಪತ್ರದ ಸಾಲುಗಳಿವು.ಈ ಪತ್ರದ ಕೆಲವು ಸಾಲುಗಳು ಇಂದಿಗೂ ನಮ್ಮ ನಡುವಿನ ತಲೆ ಕೆಟ್ಟ ಸಮಸ್ಯೆಗಳ ಅರಿವಿದ್ದೆ ಅವರು ಅಂದೇ ಹೇಳಿದ್ದರೇನೋ ಅನ್ನುವಂತಿವೆ.

“ಜಪಾನೀಯರ ಪಾಲಿಗಂತೂ ಭಾರತವೆಂದರೆ ಇನ್ನೂ ಎಲ್ಲ ಶ್ರೇಷ್ಠ-ಉನ್ನತ ವಿಚಾರಗಳ ಸ್ವಪ್ನ ಲೋಕವೇ ಆಗಿದೆ.ಆದರೆ ನೀವು?ನೀವೆಂಥವರು?… ಜೀವನವಿಡೀ ಕಾಡು ಹರಟೆಯಲ್ಲೇ ಮುಳುಗಿರುವವರು.ಕೇವಲ ಹರಟೆ ಮಲ್ಲರು.ಇನ್ನೆಂಥವರು ನೀವು? ಬನ್ನಿ ಇಲ್ಲಿಗೆ.ಈ ಜನರನ್ನು ನೋಡಿ ಬಳಿಕ ನಾಚಿಕೆಯಿಂದ ಮುಖ ಮುಚ್ಚಿ ಕುಳಿತುಕೊಳ್ಳಿ.

ಸಮುದ್ರ ದಾಟಿದರೆ ನಿಮ್ಮ ಜಾತಿ ಕೆಟ್ಟು ಹೋಗುತ್ತದಲ್ಲವೇ…!? ಬುದ್ದಿ ಕೆಟ್ಟ ಅರಳು ಮರಳು ಜನಾಂಗ…! ಶತಶತಮಾನಗಳಿಂದಲೂ ಮೂಢನಂಬಿಕೆ-ಕಂದಾಚಾರಗಳ ಕಂತೆಗಳನ್ನೇ ತಲೆಯ ಮೇಲೆ ಹೊತ್ತು ಕುಳಿತಿರುವವರು…!

ಈ ಆಹಾರವನ್ನು ಮುಟ್ಟಬಹುದೇ? ಆ ಆಹಾರವನ್ನು ಮುಟ್ಟಬಹುದೇ? ಎಂಬ ಬಹಳ ದೊಡ್ಡ ವಿಮರ್ಶೆಯಲ್ಲಿ ನೂರಾರು ವರ್ಷಗಳಿಂದ ಮುಳುಗಿದ್ದೀರಲ್ಲಾ-ಎಂಥ ಮನುಷರು ನೀವೆಲ್ಲ!

ಮತ್ತಷ್ಟು ಓದು »

22
ಡಿಸೆ

ಪುನರ್ಜನ್ಮ ಪರಿಕಲ್ಪನೆಯ ಕುರಿತು ಆಸಕ್ತಿ ಇರುವವರು ಓದಲೇ ಬೇಕಾದ ಪುಸ್ತಕ

– ಗೋವಿಂದ ರಾವ್ ವಿ ಅಡಮನೆ

ನಾನೀಗ ಶಿಫಾರಸ್ಸು ಮಾಡುತ್ತಿರುವುದು ಒಂದು ಇಂಗ್ಲಿಷ್ ಪುಸ್ತಕ. ಈ ಪುಸ್ತಕ ೧೯೫೦ ರಲ್ಲಿ ಪ್ರಕಟವಾದ ಪುಸ್ತಕವಾದರೂ ಜನಪ್ರಿಯತೆ ಇನ್ನೂ ಕುಗ್ಗಿಲ್ಲ. ಅದರ ವಿಷಯವೇ ಅಂಥದ್ದು. ಪುನರ್ಜನ್ಮ ಕ್ಕೆ ಸಂಬಂಧಿಸಿದಂತೆ ನಿಮ್ಮದೇ ಆದ ಅಭಿಪ್ರಾಯ ರೂಪಿಸಿಕೊಳ್ಳಲು ನೆರವು ನೀಡಬಲ್ಲ ಪುಸ್ತಕ ಇದು. ನಾನು ಇದನ್ನು ಖರೀದಿಸಿದ್ದು ೧೯೮೨ ರಲ್ಲಿ. ನನ್ನ ಬ್ಲಾಗ್ : ‘ಮಾಡಿದ್ದುಣ್ಣೋ ಮಹಾರಾಯ’- ಒಂದು ವಿಶ್ಲೇಷಣೆ ಬರೆಯಲು ನೆರವು ನೀಡಿದ ಪುಸ್ತಕ ಇದು. ಯಾವುದೇ ವಿಷಯವನ್ನು ಮನೋಗತ ಮಾಡಿಕೊಳ್ಳ ಬೇಕಾದರೆ ಆ ವಿಷಯದ ಮೂಲ ಆಕರವನ್ನೇ ನೋಡು ಎಂಬುದು ನನ್ನ ಅಧ್ಯಾಪಕರು ನನಗೆ ಕಲಿಸಿದ ಅಮೂಲ್ಯ ಪಾಠಗಳಲ್ಲಿ ಒಂದು. ಪುನರ್ಜನ್ಮ ಕುರಿತಾದ ಕುತೂಹಲಜನಕ ಉದಾಹರಣೆಗಳು ಈ ಪುಸ್ತಕದಲ್ಲಿವೆ.  ಎಂದೇ, ಈ ವಿಷಯದಲ್ಲಿ ಆಸಕ್ತಿ ಇರುವವರು ನೀವಾಗಿದ್ದರೆ ಈ ಪುಸ್ತಕ ಓದುವುದು ಒಳಿತು ಎಂಬುದು ನನ್ನ ಸಲಹೆ.

ಪುಸ್ತಕದ ಹೆಸರು: Many Manisions – “The Edgar Cayce Story On Reincarnation”. ಬರೆದವರು: Gina Cerminaria [ಗಿನಾ ಸರ್ಮಿನಾರಾ (ಏಪ್ರಿಲ್ ೧೯೧೪ – ಏಪ್ರಿಲ್ ೧೯೮೪). ಮನೋವಿಜ್ಙಾನದಲ್ಲಿ Ph.D ಪದವೀಧರೆ. ವಿಷಯದ ಕುರಿತು ಸುದೀರ್ಘ ಕಾಲ ಸಂಶೋಧನೆ ಮಾಡಿದ ಬಳಿಕ ಪ್ರಕಟಿಸಿದ ಪುಸ್ತಕ ಇದು.] ಪ್ರಕಾಶನ: A Signet Bool from New American Library.

ಮತ್ತಷ್ಟು ಓದು »

20
ಡಿಸೆ

ಆಧುನಿಕ ವಿಕ್ರಮಾದಿತ್ಯ, ಬೇತಾಳನೂ ಮತ್ತು ಕುರುನಾಡ ಉಳಿಸಿ ವೇದಿಕೆಯ ವ್ಯಥೆಯೂ…

-ಸಾತ್ವಿಕ್ ಎನ್ ವಿ

ಎಂದಿನಂತೆ ಬೇತಾಳವು ಲೇಡಿಸ್ ಹಾಸ್ಟೆಲ್ ಎದುರಿಗಿನ ಹುಣಸೆ ಮರದ ತನ್ನ ಕೊಂಬೆಯ ಮೇಲೆ ನೇತಾಡುತ್ತಿತ್ತು. ರಸ್ತೆ ಅಗಲೀಕರಣವಾಗುವಾಗ  ತನ್ನ ಮರಕ್ಕೂ ಎಲ್ಲಿ ಕೊಡಲಿ ಬೀಳುತ್ತದೋ ಎಂಬ ಭಯ ಇದ್ದುದರಿಂದ ತರಗತಿಯಲ್ಲಿರುವ ಸಭ್ಯ ವಿದ್ಯಾರ್ಥಿಯಂತೆ ಒಂದೇ ಕಣ್ಣಿನಲ್ಲಿ ನಿದ್ದೆ ಮಾಡುತ್ತಿತ್ತು. ಇಂಥ ಸ್ಥಿತಿಯಲ್ಲಿ ವೋಟರ್ ಐಡಿಯಲ್ಲಿರುವ ಫೋಟೋದಂತೆ ಮುಖ ಮಾಡಿಕೊಂಡು ವಿಕ್ರಮರಾಜನು ಬೇತಾಳವನ್ನು ಸೆಳೆದುಕೊಂಡು ಹೋಗಲು ಧಾವಿಸಿದನು. ಆಗ ಬೇತಾಳವು ‘ನಿನಗಂತೂ ಕೆಲಸವಿಲ್ಲ. ಪದೇಪದೇ ಬಂದು ನನ್ನನ್ನು ಹೊತ್ತುಕೊಂಡು ಹೋಗುತ್ತಿಯಾ. ಆದರೆ ಒಮ್ಮೆಯೂ ನೀನು ನಿನ್ನ ಕೆಲಸದಲ್ಲಿ ಉತ್ತೀರ್ಣನಾಗಿಲ್ಲ. ಇದೆಲ್ಲ ನೋಡಿದರೆ ಮುಂದಿನ ಜನ್ಮದಲ್ಲಿ ನೀನು ಎಂಜಿನಿಯರಿಂಗ್ ವಿದ್ಯಾರ್ಥಿಯಾಗುವ ಎಲ್ಲ ಅರ್ಹತೆಗಳಿವೆ’ ಎಂದಿತು.

ಇದೆಲ್ಲವನ್ನೂ ತಲೆಗೆ ತೆಗೆದುಕೊಳ್ಳದ ವಿಕ್ರಮನು, ಮುಂದೆ ಮಕ್ಕಳು ತಮ್ಮನ್ನು ನೋಡಿಕೊಳ್ಳುತ್ತಾರೆ ಎಂಬ ಭರವಸೆ ಇಲ್ಲದಿದ್ದರೂ ಮಕ್ಕಳಿಗೆ ಒಳಿತನ್ನೇ ಬಯಸುವ ಪಾಪದ ತಂದೆತಾಯಿಗಳ ಹಾಗೆ ತನ್ನಷ್ಟಕ್ಕೆ ತನ್ನ ಕಾರ್ಯದಲ್ಲಿ ನಿರತನಾದನು. ಇವನ ಹಸುತನವನ್ನು ಗಮನಿಸಿದ ಬೇತಾಳದ ಮನಸ್ಸು ಕರಗಿ ವಿಕ್ರಮನೇ, ನಿನ್ನ ಕಾರ್ಯಶ್ರದ್ಧೆಯನ್ನು ಮೆಚ್ಚಿದ್ದೇನೆ. ಪದೇ ಪದೇ ವಿಫಲನಾದರೂ ಸ್ವಮೇಕ್ ಚಿತ್ರವನ್ನೇ ಮಾಡುವ ಕನ್ನಡ ನಿರ್ದೇಶಕನಂಥ ನಿನ್ನ ಅಚಲ ನಿರ್ಧಾರವನ್ನು ಗೌರವಿಸುತ್ತೇನೆ. ದಾರಿ ಸವೆಯಲಿ ಎಂದು ಕಥೆಯೊಂದನ್ನು ಹೇಳುತ್ತೇನೆ ಎಂದು ಹೇಳಿ ವಿಕ್ರಮನ ಅನುಮತಿಯನ್ನೂ ಕಾಯದೇ ಕಥೆಯೊಂದನ್ನು ಹೇಳಲು ಪ್ರಾರಂಭಿಸಿತು. ಮತ್ತಷ್ಟು ಓದು »

16
ಡಿಸೆ

ಏನ್ ಇವಾಗ? ನಾವ್ ಇರೋದೇ ಹೀಗೆ…

-ಸಾತ್ವಿಕ್ ಎನ್ ವಿ

ಒಮ್ಮೊಮ್ಮೆ ಇಂಥ ಪ್ರಸಂಗಗಳಿಗೆ ಹೇಗೆ ಪ್ರತಿಕ್ರಿಯಿಸುವುದೋ ತಿಳಿಯುವುದಿಲ್ಲ.  ನಿನ್ನೆ ನಮ್ಮ ಮೇಡಂ ಒಬ್ಬರು ಕಾಲ್ ಮಾಡಿ ’ಸಾತ್ವಿಕ್ ನಿಮ್ಮ ಕಡೆ ಯಾರಾದ್ರೂ ಹುಡುಗಿಯಿದ್ದರೆ ಹೇಳೋ ಅಂದ್ರು’. ಅದಕ್ಕೆ ತಮಾಷೆಯಿಂದ ’ನಾನು ಒಂದು ವಧುವರರ ಕೇಂದ್ರ ತೆಗೆದ್ರೆ ಒಳ್ಳೆ ಕಲೆಕ್ಷನ್ ಆಗಬಹುದು ಅಲ್ವಾ ಮೇಡಂ’ ಅಂದೆ. ಅವರು ತಮ್ಮ ಮಾತಿನಲ್ಲಿ ಗಂಭೀರತೆಯನ್ನು ಬಿಟ್ಟು ಕೊಡದೇ ’ಹಾಗಲ್ಲ, ನಿನಗೆ ಗೊತ್ತಲ್ಲ. ನಮ್ಮಲ್ಲಿ ಅಬಕ ಜಾತಿಯ ವಧುಗಳು ಸಿಗೋದು ಬಹಳ ಕಷ್ಟ ಆಗಿದೆ.  ಹಾಗಾಗಿ ಅನಿವಾರ್ಯವಾಗಿ ಬೇರೆ ಜಾತಿಯ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ’ ಅಂದ್ರು. ನನ್ನ ವಯಸ್ಸಿನ ಯೋಚನೆಗೆ ನಿಲುಕದ ವಿಷಯವಾದ ಕಾರಣ ’ಆಯ್ತು ಮೇಡಂ ಪ್ರಯತ್ನಿಸುತ್ತೇನೆ’ ಅಂತ ಹೇಳಿ ಮಾತನ್ನು ಮುಗಿಸಲು ನೋಡಿದೆ.

ಕುತೂಹಲಕ್ಕೆ ’ವರನ ಮನೆಯ ಕಡೆಯಿಂದ ಏನೇನು ನಿರೀಕ್ಷೆಗಳಿರುತ್ತವೆ’ ಅಂತ ಕೇಳಿದೆ. ’ಅಂಥ ವಿಶೇಷಗಳೇನು ಇಲ್ಲ. ಹುಡುಗಿ ತಕ್ಕ ಮಟ್ಟಿಗೆ ಓದಿದ್ದರೆ ಸಾಕು. ಆದರೆ ಆಕೆ ಹುಟ್ಟಿನಿಂದ ಸಸ್ಯಾಹಾರಿ ಕುಟುಂಬದ ಹುಡುಗಿ ಆಗಿರಬೇಕು. ಮದುವೆಯ ನಂತರ ತನ್ನ ತವರಿನ ಜೊತೆಗಿರುವ ಎಲ್ಲ ಸಂಬಂಧಗಳನ್ನು ಕಡಿದುಕೊಳ್ಳಬೇಕು. ಅಕೆಯ ಮನೆಯವರು ವರನ ಮನೆಗೆ ಬರುವುದಾಗಲಿ ಅಥವಾ ಸಂಪರ್ಕ ಇಟ್ಟುಕೊಳ್ಳುವುದಾಗಲಿ ಮಾಡಬಾರದು. ಇವು ಸದ್ಯ ವರನ ಮನೆಯವರು ನಿರೀಕ್ಷಿಸುತ್ತಿರುವ ಅಗತ್ಯಗಳು’ ಎಂದರು. ಎರಡನೆಯ ಸಂಗತಿಯನ್ನು ಕೇಳಿ ನನಗೆ ಸಖೇದಾಶ್ಚರ್ಯವಾಯಿತು.

ಹೆಣ್ಣು ಮಕ್ಕಳ ಕೊರತೆಯಿರುವ ಬೇರೊಂದು ಜಾತಿಯ ಹೆಣ್ಣು ಮಕ್ಕಳನ್ನು ಮದುವೆಯಾಗಬೇಕಾದ ಪರಿಸ್ಥಿತಿಯಿರುವ ಜನರಿಗೂ ಇಷ್ಟೊಂದು ಕರಾರು ಮತ್ತು ಆಯ್ಕೆಗಳಿರುತ್ತವೆಯೇ? ಕೊಡುವವರಿಗೆ ಆಯ್ಕೆಗಳಿರುತ್ತವೆ. ಆದರೆ ಕೇಳುವವರಿಗೆ? ಮತ್ತಷ್ಟು ಓದು »