ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

17
ನವೆಂ

ಸಂಸ್ಕೃತಿ ಸಂಕಥನ – ೧೧ -ಬ್ರಾಹ್ಮಣರಿಗೆ ಖಳನಾಯಕರ ಪಟ್ಟ ಕಟ್ಟಿದ ಇತಿಹಾಸ

– ರಮಾನಂದ ಐನಕೈ

ಬ್ರಾಹ್ಮಣರಿಗೆ ಖಳನಾಯಕರ ಪಟ್ಟ ಕಟ್ಟಿದ ಇತಿಹಾಸ

ಇತ್ತೀಚೆಗೆ ನಾಡಿನ ಪ್ರಸಿದ್ಧ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಮಾತನಾಡುತ್ತ ಈ ದೇಶ ಮುಸ್ಲಿಂ, ಕ್ರಿಶ್ಚಿಯನ್ ಹಾಗೂ ವೈದಿಕಶಾಹಿ ಆಡಳಿತ ಕಂಡಿದೆ. ಇವೆಲ್ಲವುಗಳಲ್ಲಿ ವೈದಿಕಶಾಹಿ ಆಡಳಿತ ಭಯಂಕರವಾಗಿತ್ತು ಎಂದಿದ್ದಾರೆ.  ನನ್ನ ಇತಿಹಾಸ ಜ್ಞಾನದ ಪ್ರಕಾರ ಮುಸ್ಲಿಂ,ಕ್ರಿಶ್ಚಿಯನ್ ಹಾಗೂ ಕೆಲವು ಕಾಲ ಮೌರ್ಯರು, ಗುಪ್ತರು ಮುಂತಾದ ರಾಜರುಗಳು ಆಳಿದ್ದನ್ನು ಓದಿದ್ದೇನೆ. ಈ ವೈದಿಕಶಾಹಿಗಳು ಯಾರು? ಇವರು ಎಷ್ಟನೇ ಇಸವಿಯಿಂದ ಎಷ್ಟನೇ ಇಸವಿಯವರೆಗೆ ಆಳಿದರು? ಇವರ ಆಡಳಿತದ ಹಾಗೂ ಯುದ್ಧದ ವಿವರಗಳೇನು? ಈ ಕುರಿತು ಗ್ರಂಥ, ಶಾಸನ, ನಾಣ್ಯ ಇತ್ಯಾದಿಗಳು ಇವೆಯೇ ಎಂಬ ಉತ್ತರ ಬೇಕು. ಸುಮ್ಮ ಸುಮ್ಮನೇ ವೇದಿಕೆಯ ಮೇಲೆ ಮಾತನಾಡುವುದು ಈ ದೇಶದ ವಾಕ್ ಸ್ವಾತಂತ್ರ್ಯದ ಫಲ. ಪ್ರಗತಿಪರರೆನಿಸಿಕೊಂಡವರು ವೇದಿಕೆ ಹತ್ತಿದಾಕ್ಷಣ ಪುರೋಹಿತಶಾಹಿ, ವೈದಿಕಶಾಹಿ ಮುಂತಾದ ಪದಪುಂಜಗಳೇ ಹೊರಗೆ ಬರುತ್ತವೆ. ಇದಕ್ಕೆ ಆಧಾರ ಇದೆಯೇ? ಇವೆಲ್ಲ ಪರೋಕ್ಷವಾಗಿ ಬ್ರಾಹ್ಮಣರನ್ನು ಪ್ರಹಾರ ಮಾಡಲು ಉಪಯೋಗಿಸುವ ಪ್ರತಿಮೆಗಳು. ಇದರಿಂದ ಕಂಡಿತ ತೆ ಸಾಧ್ಯವಿಲ್ಲ.

ಸೆಕ್ಯುಲರ್ ಬುದ್ಧಿಜೀವಿಗಳ ದೃಷ್ಟಿಯಲ್ಲಿ ಭಾರತದಲ್ಲಿ ಬ್ರಾಹ್ಮಣರು ಖಳನಾಯಕರು. ಇವರನ್ನು ಪುರೋಹಿತಶಾಹಿಗಳು, ವೈದಿಕಶಾಹಿ ಗಳು ಎಂಬಿತ್ಯಾದಿಯಾಗಿ ಚಿತ್ರಿಸುತ್ತಿದ್ದಾರೆ. ಬ್ರಾಹ್ಮಣರು ಪ್ರಾಚೀನ ಭಾರತವನ್ನು ಆಳಿದವರು, ದಬ್ಬಾಳಿಕೆ ಮಾಡಿದವರು, ತರತಮದ ಸಾಮಾಜಿಕ ವ್ಯವಸ್ಥೆಯ ಶಿಲ್ಪಿಗಳು ಇವೇ ಮುಂತಾಗಿ ಬಾಯಿಗೆ ಬಂದಂತೆ ಹಲುಬುತ್ತಿದ್ದಾರೆ. ನಿದು ನಿಜವೇ? ಇವರಿಗೆ ಈ ತಿಳುವಳಿಕೆ ಏಕೆ ಬಂತು? ಎಲ್ಲಿಂದ ಬಂತು? ಬ್ರಾಹ್ಮಣರು ನಿಜವಾಗಿಯೂ ಪುರೋ ಹಿತಶಾಹಿಗಳೇ?

ಮತ್ತಷ್ಟು ಓದು »

14
ನವೆಂ

ನಾನೊಬ್ಬ ಹಿಂದೂ, ಆದ್ದರಿಂದ…..

– ಗೋವಿಂದ ರಾವ್ ವಿ ಅಡಮನೆ

ನಾನೊಬ್ಬ ಹಿಂದೂ, ಆದ್ದರಿಂದ

  • ನನಗೆ ಇಷ್ಟವಾದದ್ದನ್ನು ‘ದೇವರು’ ಎಂದು ಪೂಜಿಸುವ ಸ್ವಾತಂತ್ರ್ಯ ಇದೆ. ‘ದೇವರೇ ಇಲ್ಲ’ ಎಂದು ಸಾರ್ವಜನಿಕವಾಗಿ ಘೋಷಿಸುವ ಸ್ವಾತಂತ್ರ್ಯವೂ ಇದೆ.
  • ನಾನು ನಂಬಿರುವ ದೇವರನ್ನು ಓಲೈಸುವ ಸಲುವಾಗಿ ನನಗೆ ಇಷ್ಟವಾದ ವಿಧಿವಿಧಾನಗಳನ್ನು ನನಗೆ ಸರಿಕಂಡ ರೀತಿಯಲ್ಲಿ ಆಚರಿಸುವ ಸ್ವಾತಂತ್ರ್ಯ ನನಗೆ ಇದೆ.
  • ಸಾರ್ವಜನಿಕವಾಗಿ ದೇವರ ಅಸ್ತಿತ್ವವನ್ನು ಅಲ್ಲಗಳೆಯುತ್ತಾ ಖಾಸಗಿಯಾಗಿ ದೇವರಲ್ಲಿ ನಂಬಿಕೆ ಇಡುವ, ಖಾಸಗಿಯಾಗಿ ದೇವರನ್ನು ನಂಬದಿದ್ದರೂ ಸಾರ್ವಜನಿಕವಾಗಿ ಆಸ್ತಿಕನಂತೆ ನಟಿಸುವ ಸ್ವಾತಂತ್ರ್ಯ ನನಗೆ ಇದೆ.
10
ನವೆಂ

ಸಂಸ್ಕೃತಿ ಸಂಕಥನ – ೧೦: ಪ್ರೊಟೆಸ್ಟಾಂಟರೇಕೆ ಕೆಥೋಲಿಕ್ ಪ್ರೀಸ್ಟ್ಗಳ ಮೇಲೆ ಪ್ರಹಾರಮಾಡಿದರು?

– ರಮಾನಂದ ಐನಕೈ

ಸಂಸ್ಕೃತಿ ಸಂಕಥನ – ೧೦

ಕೆಥೋಲಿಕ್ ಕ್ರಿಶ್ಚಿಯಾನಿಟಿ ರಿಲಿಜನ್ನಿನ ಸೀಮೆ ದಾಟಿ ಅನೈತಿಕವಾಗಿದೆ. ಇದಕ್ಕೆ ಕಾರಣ ಕ್ಯಾಥೋಲಿಕ್ ಪ್ರೀಸ್ಟ್ಗಳು. ಇವರು ದೇವರು ಮತ್ತು ಜನರ ನಡುವೆ ಮಧ್ಯವರ್ತಿಗಳ ಪಾತ್ರವಹಿಸಿ ಜನರ ರಿಲಿಜನ್ನಿನ ಸ್ವಾತಂತ್ರ್ಯ ಹರಣ ಮಾಡಿದ್ದಾರೆ. ಚರ್ಚ್ ಅನ್ನುವ ಸಂಸ್ಥೆಯ ಮೂಲಕ ಅಧಿಕಾರ ಚಲಾಯಿಸುತ್ತ ಸಮಾಜವನ್ನು ಶ್ರೇಣೀಕರಣಗೊಳಿಸುತ್ತಿದ್ದಾರೆ. ಸ್ವಾರ್ಥ ಹಾಗ ಅಧಿಕಾರದಾಹದಿಂದ ಜನರಲ್ಲಿ ತಾರತಮ್ಯ ಹುಟ್ಟುಹಾಕುತ್ತಿದ್ದಾರೆ. ಪ್ರೀಸ್ಟ್ಹುಡ್ಡನ್ನು ಪಾರಂಪರಿಕ ಮಾಡಿಕೊಂಡಿದ್ದಾರೆ. ಹಾಗಾಗಿ ಕ್ಯಾಥೋಲಿಕ್ ಕ್ರಿಶ್ಚಿಯಾನಿಟಿ ಕೂಡಾ ಒಂದು ಸುಳ್ಳು  ರಿಲಿಜನ್ನಿನ ಸ್ವರೂಪ ಪಡೆದುಕೊಂಡಿದೆ. ಇದಕ್ಕೆಲ್ಲ ಮುಖ್ಯ ಕಾರಣ ಕೆಥೋಲಿಕ್ ಪ್ರೀಸ್ಟ್ಗಳು. ಪ್ರೀಸ್ಟ್ಗಳು ನಿಜವಾದ ಕಂತ್ರಿ(ಕನ್ನಿಂಗ್)ಗಳು ಎಂಬುದು  ಪ್ರೊಟೆಸ್ಟಾಂಟ್ ಸುಧಾರಣಾವಾದಿಗಳ  ಉಗ್ರ ಆರೋಪ.

ಭಾರತೀಯ ಸಂಸ್ಕೃತಿಯ ಕುರಿತು ಬರೆಯುತ್ತಿರುವಾಗ ಈ ತಲೆಬರಹದ ಪ್ರಸ್ತುತತೆಯ ಕುರಿತು ಪ್ರಶ್ನೆ ಏಳುವುದು ಸಹಜ. ಆದರೆ ಇದಕ್ಕೆ ಔಚಿತ್ಯ ಇದೆ. ಕಳೆದ ನಾನೂರು ವರ್ಷಗಳಿಂದ ಭಾರ ತೀಯ ಸಂಸ್ಕೃತಿ ಹಲವಾರು ತಪ್ಪು ದೃಷ್ಟಿಕೋನಗಳಿಂದ ಅರ್ಥ ವ್ಯತ್ಯಾಸಗಳನ್ನು ಹೊಂದುತ್ತ ಬಂದಿದೆ. ನಮ್ಮ ಸಮಾಜ ವಿಜ್ಞಾನಗಳೂ ಇದೇ ತಪ್ಪುದಾರಿಯಲ್ಲಿ ಸಾಗಿವೆ. ಹಾಗಾಗಿ ಪ್ರೊ. ಬಾಲ ಗಂಗಾಧರರು ಹೇಳುವ ಪ್ರಕಾರ ಈಗೇನಾದರೂ ನಿಜವಾದ ಭಾರತೀಯ ಸಂಸ್ಕೃತಿಯನ್ನು ಅರಿಯ ಬೇಕೆಂದರೆ ಮೊದಲು ಪ್ರಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು. ಅಷ್ಟರಮಟ್ಟಿಗೆ ಪಾಶ್ಚಾತ್ಯ ದೃಷ್ಟಿಕೋನಗಳು ನಮ್ಮ ಸಂಸ್ಕೃತಿಯನ್ನು ವ್ಯಾಖ್ಯಾನಿಸಿವೆ.

ಮತ್ತಷ್ಟು ಓದು »

3
ನವೆಂ

ಸಂಸ್ಕೃತಿ ಸಂಕಥನ – ೯

– ರಮಾನಂದ ಐನಕೈ

ವರ್ಶಿಪ್ ಅಂದರೆ ನಮ್ಮ ಪೂಜೆ ಅಲ್ಲ

ಜನಸಾಮಾನ್ಯರ ಮಾತು ಹಾಗಿರಲಿ, ಯಾವುದೇ ಭಾರತೀಯ ತಿಳುವಳಿಕಸ್ತನ ಹತ್ತಿರ ‘ಪೂಜೆ’ ಅಂದರೆ ಏನೆಂದು ಕೇಳಿದರೆ ‘ವರ್ಶಿಪ್’ ಎಂದು ಉತ್ತರ ಕೊಡುತ್ತಾನೆ. ‘ವರ್ಶಿಪ್’ ಅಂದರೆ ಏನೆಂದು ಕೇಳಿದರೆ  ‘ಪೂಜೆ’ ಅನ್ನುತ್ತಾನೆ. ಅದು ಸ್ವಾಭಾವಿಕ. ಏಕೆಂದರೆ ನೂರಾರು ವರ್ಷಗಳಿಂದ ನಮ್ಮ ಜ್ಞಾನ ಇಷ್ಟು ಹದಕ್ಕೆ ಬಂದಿದೆ. ಹೆಚ್ಚು ವಾದ ಮಾಡಿದರೆ ನಿಘಂಟು ತೆರೆದು ತೊರಿಸುತ್ತಾರೆ. ಅಲ್ಲಿ ವರ್ಶಿಪ್ ಅಂದರೆ ಅರ್ಚನೆ, ಪೂಜೆ, ಆರಾಧನೆ ಎಂಬಿತ್ಯಾದಿ ಅರ್ಥಗಳಿವೆ. ನಾವಿಲ್ಲಿ ಚರ್ಚಿಸುತ್ತಿರುವುದು ತರ್ಜುಮೆಯ ಕುರಿತಾಗಲ್ಲ ಅಥವಾ ಪದಗಳ ಅರ್ಥ ವ್ಯತ್ಯಾಸಗಳ ಬಗ್ಗೆಯೂ ಅಲ್ಲ. ಇಂಥ ತಪ್ಪು ಗೃಹಿಕೆಗಳು ಒಂದು ಸಂಸ್ಕೃತಿಯ ಮೇಲೆ ಮಾಡುವ ತಪ್ಪು ಪರಿಣಾಮಗಳ ಕುರಿತು.

ಪಾಶ್ಚಾತ್ಯರು ಭಾರತಕ್ಕೆ ಬಂದು ಇಲ್ಲಿನ ಆಚರಣೆಗಳನ್ನು ನೋಡಿ ‘ಭಾರತೀಯರು ವರ್ಶಿಪ್ ಮಾಡುತ್ತಿಲ್ಲ, ಬದಲಾಗಿ ನೂರಾರು ದೇವರುಗಳನ್ನು ಪೂಜೆ ಮಾಡುತ್ತಾರೆ’ ಎಂದು ಗ್ರಹಿಸಿದರೆ ತೊಂದರೆ ಇಲ್ಲವಾಗಿತ್ತು. ಆದರೆ ಅವರು ಭಾರತೀಯರು ತಪ್ಪುತಪ್ಪಾಗಿ ವರ್ಶಿಪ್ ಮಾಡುತ್ತಿದ್ದಾರೆ ಎಂದು ಗ್ರಹಿಸಿದ್ದೇ ಯಡವಟ್ಟಾಗಲು ಕಾರಣ. ಏಕೆಂದರೆ ಮುಂದೆ ಅವರು ಈ ತಪ್ಪು ವರ್ಶಿಪ್ ಸರಿಪಡಿಸಲು ಪ್ರಯತ್ನಿಸಬೇಕಾಯಿತು. ಈ ಪ್ರಯತ್ನವೇ ಭಾರತೀಯ ಸಂಸ್ಕೃತಿಗೆ ಬಡಿದ ಬಾಲಗ್ರಹ ಎಂಬುದು ಬಾಲಗಂಗಾಧರರ ಬರಹಗಳನ್ನು ಓದಿದಾಗ ಅರಿವಾಗುತ್ತದೆ.

ಮತ್ತಷ್ಟು ಓದು »

29
ಆಕ್ಟೋ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 8 – ಅಸೂಯೆ ತಂದ ಆಡಳಿತ

ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ  ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ  ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು  ಜನಿಸಿದ್ದು ಕಳೆದ ಶತಮಾನದ 1912ರ ಸೆಪ್ಟೆಂಬರ್ 08ರಂದು. ತಮ್ಮ ವಯಸ್ಸಿನ ನೂರನೇ ಸಂವತ್ಸರದ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ. ಗೋ.)ರವರರು ನಿರೂಪಣೆ ಗೈದಿರುವ ಕುರಿಯ  ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು”  ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆದಲ್ಲಿ ಪ್ರಕಟವಾಗುತ್ತಿದೆ.
 
ಮಾಡುತ್ತಲಿದ್ದ ಸುಧಾರಣಾ ಪ್ರಯೋಗಗಳನ್ನು ಮೇಳದ ಯಜಮಾನರಾದ ಶ್ರೀ ಕೊರಗಪ್ಪ ಶೆಟ್ಟಿಯವರು ಸ್ವಾಗತಿಸುತ್ತಿದ್ದರು. ಅಂತೆಯೇ, ಪ್ರೇಕ್ಷಕ ವರ್ಗದವರಿಂದಲೂ ಮೆಚ್ಚುಗೆ ಗಳಿಸುತ್ತಿದ್ದೆವು. ಇತರ ಕೆಲವು ತಾಪತ್ರಯಗಳನ್ನು ಸಹಿಸಿಕೊಂಡಾದರೂ, ಕಲಾ ವ್ಯವಸಾಯವನ್ನು ಹುಲುಸಾಗಿ ಮಾಡುತ್ತೇನೆ, ಆಸೆಯ ಕೆಲವು ಬಳ್ಳಿಗಳಿಗಾದರೂ ನೀರೆರೆಯುತ್ತೇನೆ ಎನ್ನುತ್ತಲೇ ವರ್ಷದ ಮುಕ್ಕಾಲು ಭಾಗವನ್ನು ನೂಕಿದೆ.ಮಾತ್ಸರ್ಯದ ಮೊಳಕೆ 
ನಾನು ತಿಳಿದಿದ್ದಂತೆಯೇ, ಕೆಲವೊಂದು ಮಂದಿ ಇತರ ಕಲಾವಿದರ ಮಾತ್ಸರ್ಯ ಬೀಜದ ಮೊಳಕೆಯಾಗಿತ್ತು. ಆದರೆ, ನಾನು ಹೋಗುತ್ತಲಿರುವುದು ಸರಿಯಾದ ದಾರಿ ಎಂಬ ಆತ್ಮವಿಶ್ವಾಸ ನನಗಿತ್ತು. ಹೇಗಾದರೂ ನನ್ನ ಮೇಲೆ ಮತ್ಸರವಿದ್ದರೆ ಅದು ನನ್ನ ಮೇಲಷ್ಟೆ ಪ್ರಯೋಗವಾಗಬೇಕು-ಬೇರಾರನ್ನೂ ಮುಟ್ಟಲಾರದು ಎಂದುಕೊಂಡಿದ್ದೆ.

ಮತ್ತಷ್ಟು ಓದು »

28
ಆಕ್ಟೋ

ಹಾವು ಪುರಾಣ!

-ವಾಣಿಶೆಟ್ಟಿ ಕುಂದಾಪುರ
“ನಾಗಾ…

ನೀ ಹೀಂಗೆಲ್ಲ ಬಪ್ಪಕಾಗ..
ಮಕ್ಕಳ್ ಮರಿ ತಿರ್ಗು ಜಾಗ
ಜಾಗ ಖಾಲಿ ಮಾಡ ಬೇಗ …”

ಮನೆ ಕಡೆ ನಾಗರಹಾವು ಬಂದಾಗಲೆಲ್ಲಾ ಅದನ್ನು ಓಡಿಸೋವಾಗ “ಅದಕ್ಕೆ ನೋವು ಮಾಡಬೇಡಿ” ಅನ್ನೋ ದೊಡ್ಡವರ ರಾಗದ ಹಿನ್ನಲೆಯಲ್ಲಿ ನಮ್ಮ ಕುಂದಗನ್ನಡದ ಪ್ರಾಸ ಹೀಗಿತ್ತು :) ನಮ್ಮ ಹಳ್ಳಿಗಳಲ್ಲಿ ಹಾವಿನ ಬಗ್ಗೆ ಭಯ ಮತ್ತು ಆಸಕ್ತಿ ಸ್ವಲ್ಪ ಕಮ್ಮಿನೇ ಜನರಲ್ಲಿ.ಆದರೆ ನಂಗೆ ಮಾತ್ರ ಇವತ್ತಿಗೂ ಅಷ್ಟೇ ಉತ್ಸಾಹ ಅವುಗಳ ಬಗ್ಗೆ.ಅದರಲ್ಲೂ ನಾಗರಹಾವು ಅಂದ್ರೆ ಸಕತ್ ಖುಷಿ..ಅದು ಮಾಡುವಷ್ಟು ಗೊಂದಲ ,ಖರ್ಚು,ಭಯ ಮತ್ಯಾವ ಹಾವುಗಳು ಮಾಡೋದಿಲ್ಲ.ಅಪರೂಪಕ್ಕೆ ಅವುಗಳು ಕೋಳಿ ಗೂಡಲ್ಲಿರೋ ಮೊಟ್ಟೆ ತಿನ್ನೋಕೆ ಬಂದರೆ ಈ ಅಕ್ಕ ಪಕ್ಕದ ಮನೇಲಿ ಎಲ್ಲ ಹೋ ದೇವ್ರ್ ಹಾವ್ ಬಂತ್ ..ಎಂದು ಪಡುವ ಸಂಭ್ರಮವೋ ಸಂಭ್ರಮ!ನಂತರ  ಅದಕ್ಕಿಷ್ಟು ಹಾಲು ಇಟ್ಟು ,ಅಕ್ಕಿ ಚೆಲ್ಲಿ ಕೈ ಮುಗಿಯೋರು !ಆದರೆ ಅದು ಕುಡಿದದ್ದು ನಾ ನೋಡೇ ಇಲ್ಲ.ಪಾಪ !ಅದರ ಹೆದರಿಕೆ ಅದಕ್ಕೆ ಎಲ್ಲಿ ಹೊಡಿತಾರೋ ಅಂತ!ಯಾವ ಹಾವಿಗೂ ಇರದ ಮುಂಡು ಬಾಲ ಇದಕ್ಕೆ ಇರೋದರಿಂದ  ಅದರ ನಿಕ್ ನೇಮ್ ಮುಂಡಪ್ಪ.

ಒಮ್ಮೆ ನಮ್ಮ ಪಕ್ಕದ ಕಾಡಿಗೆ ನವಿಲು ಹಿಡಿಯುವ ಗುಂಪೊಂದು ಬಂದಿತ್ತು.ಅವರ ಜೊತೆ ನಾವು ಕೂಡ ನೋಡಲು ಹೋಗಿದ್ದೆವು .ಚಂದದ ನವಿಲು ಗರಿ ಸಿಗುತ್ತಲ್ಲಾ ಅಂತ!ಸರಿ ಹೋಗ್ತಾನೆ ಒಂದು ದೊಡ್ಡ ನವಿಲು ಸಿಕ್ಕಿಬಿಟ್ಟಿತು.ಅವರು ಅದನ್ನು ಕೊಲ್ತಾರೆ ಅಂತ ಮಾತ್ರ ನಮಗೆ ಗೊತ್ತಿರಲಿಲ್ಲ.ಅವರು ಅದನ್ನ ಕೊಂದು ಹೊಟ್ಟೆ ಸೀಳಿದಾಗ ಅಲ್ಲೊಂದು ಪುಟ್ಟ ನಾಗರ ಮರಿ!ಆಮೇಲೆ ನಾಗರ ಹಾವಿನ ಹೆಣ ಕಂಡ ತಪ್ಪಿಗೆ (ಅಷ್ಟು ಚಂದದ ನವಿಲು ಕೊಂದಿದ್ದು ಮಾತ್ರ ಸರಿಯಂತೆ ಅವರ ಪ್ರಕಾರ ) ಸರ್ಪ ಸಂಸ್ಕಾರ ,ಅದೂ ಇದೂ ಪೂಜೆ ಮಾಡಬೇಕಾಯ್ತು ,ಆಮೇಲೆ ನವಿಲು ಹಿಡಿಯೋದು ಬಿಟ್ಟಿರಬೇಕು ಬಹುಶಃ :) ಮತ್ತಷ್ಟು ಓದು »

27
ಆಕ್ಟೋ

ಸಂಸ್ಕೃತಿ ಸಂಕಥನ – ೮

– ರಮಾನಂದ ಐನಕೈ

ಮೂರ್ತಿ ಪೂಜೆಗೆ ಕಾರಣಗಳು ಬೇಕಾಗಿಲ್ಲ 

ಯಾವ ಸಂಸ್ಕೃತಿಯಲ್ಲಿ ರಿಲಿಜನ್ ಇದೆಯೋ ಆ ಸಂಸ್ಕೃತಿ ವಿಗ್ರಹ ಆರಾಧನೆ ಅಥವಾ ಮೂರ್ತಿ ಪೂಜೆಯನ್ನು ವಿರೋಧಿಸುತ್ತದೆ. ಏಕೆಂದರೆ ರಿಲಿಜನ್ನಿನಲ್ಲಿ ಗಾಡ್ ಹಾಗೆ ಆಜ್ಞಾಪಿಸಿದ್ದಾನೆ. ಗಾಡ್ ಮಾತ್ರ ನಿಜವಾದ ದೇವರು. ಉಳಿದ ದೇವರುಗಳೆಲ್ಲ ಗಾಡ್ನ ವೈರಿ ಸೈತಾನನ ಪ್ರತಿರೂಪಗಳು. ಹಾಗಾಗಿ ಸೈತಾನನ ಪ್ರತಿರೂಪವಾದ ನೂರಾರು ಮೂರ್ತಿಗಳನ್ನು ಪೂಜಿಸುವುದು ಅನೈತಿಕ. ಪಾಶ್ಚಾತ್ಯರು ಅದೇ ದೃಷ್ಟಿಯಲ್ಲಿ ನಮ್ಮ ಮೂರ್ತಿಪೂಜೆಗಳನ್ನು ನೋಡಿ ಟೀಕೆ ಮಾಡಿದರು. ಆದರೆ ಅದು ನಮಗ ಅರ್ಥವೇ ಆಗಲಾರದು. ಏಕೆಂದರೆ ನಮ್ಮದು ರಿಲಿಜನ್ನೇ ಇಲ್ಲದ ಬಹುಸಂಸ್ಕೃತಿಗಳ ನಾಡು.

 

ಪಾಶ್ಚಾತ್ಯರು ಭಾರತೀಯರ ಮೂರ್ತಿ ಪೂಜೆ ಯನ್ನು ಅನೈತಿಕ ಎಂದು ವ್ಯಾಖ್ಯಾನಿಸಿದರು. ಏಕಿರ ಬಹುದು? ಅದರ ಹಿಂದಿನ ನಿಜ ಏನಿರಬಹುದು?

ಮತ್ತಷ್ಟು ಓದು »

24
ಆಕ್ಟೋ

ಅವತ್ತು ಎದೆ ನೋವೂ ಬಂದಿರಲಿಲ್ಲ, ಶರಣರೂ ಬರಲಿಲ್ಲ..!

-ಕಾಲಂ ೯

ನೂರು ವರ್ಷ ದಾಟಿದ ಸಿದ್ಧಗಂಗಾ ಸ್ವಾಮೀಜಿ ಜೈಲು-ಆಸ್ಪತ್ರೆ ಹುಡುಕಿಕೊಂಡು ಯಡಿಯೂರಪ್ಪನವರನ್ನು ನೋಡಲು ಹೋಗಿದ್ದಾರಲ್ಲ? ಏನಿದರ ಹಿಂದಿನ ಹಕೀಕತ್ತು? ಧರ್ಮಾಚರಣೆಗೂ ಪುರುಸೊತ್ತು ಇಲ್ಲದಷ್ಟು ಸಾಮ್ರಾಜ್ಯ ಕಟ್ಟಿಕೊಂಡು ಸ್ವಾಮೀಜಿಯೊ ಅಥವಾ JSS ಕಂಪೆನಿಯ CEO ನೋ ಎಂಬಂತಿರುವ ಜಗದ್ಗುರುಗಳು ಧಾವಿಸಿ ಬಂದರಲ್ಲ? ಅಂತಹದೇನು ಆಗಿತ್ತಲ್ಲಿ? ರಂಭಾಪುರಿಗಳು ಸೇರಿದಂತೆ ಅನೇಕ ಸಣ್ಣ-ಪುಟ್ಟ ವೀರಶೈವ ಸ್ವಾಮೀಜಿಗಳು ಯಡಿಯೂರಪ್ಪನವರನ್ನು ಸಂತೈಸಲು ಸಾಲುಗಟ್ಟಿದ್ದು ಮಾಧ್ಯಮಕ್ಕೆ ಆಶ್ಚರ್ಯವೆನಿಸಿರಲಿಲ್ಲ. ಆದರೆ ಈ ಹಿರಿತಲೆಗಳು ಹಾಗೇ ದೌಡಾಯಿಸಿದ್ದರ ಹಿಂದೇನು ನಡೆದಿದೆ? ಇದು ಮಾಧ್ಯಮದ ಒಳಗೂ-ಹೊರಗೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸೋಮವಾರದ ತಮ್ಮ ಅಂಕಣದಲ್ಲಿ ಅಮೀನ್‌ಮಟ್ಟು ತುಂಬಾ ಆಪ್ತವಾಗಿಯೇ ಯಡಿಯೂರಪ್ಪನವರ ಪ್ಲಸ್ಸು-ಮೈನಸ್ಸುಗಳನ್ನು ಹೊರಹಾಕಿದ್ದನ್ನು ಓದಿದ ಅನೇಕರು ’ಈ ಮಠಾಧಿಪತಿಗಳನ್ನೇಕೆ ಬಿಟ್ಟಿರಿ’ ಎಂದು ಪ್ರತಿಕ್ರಿಯಿಸಿದ್ದಾರೆ. ಸರ್ವ ವೀರಶೈವ ಮಠಗಳಿಗೂ ಒಬ್ಬನೇ ಆಡಳಿತಾಧಿಕಾರಿ ಎಂಬಂತಿರುವ ಸಚಿವ ಸೋಮಣ್ಣ ಬೆನ್ನುಹತ್ತಿ ಇವರನ್ನೆಲ್ಲ ಹೊರಡಿಸಿಕೊಂಡು ಬರುತ್ತಿದ್ದಾರೆಯೇ? ಸರ್ಕಾರದಿಂದ ದೇಣಿಗೆಯಾಗಿ ಪಡೆದ ೩-೫ ಕೋಟ ರೂಗಳ ಹಂಗು ಹಿಂಗೆಲ್ಲ ಮಾಡುವಂತೆ ಮಾಡಿತೆ?

ಒಟ್ಟು ರಾಜ್ಯದ ನಾಯಕತ್ವದ ಎಲ್ಲ ಲಕ್ಷಣಗಳು ಕರಗಿ ಶುದ್ಧ ವೀರಶೈವ ಮುಖಂಡನಂತೆ ಗೋಚರಿಸುತ್ತಿರುವ ಯಡಿಯೂರಪ್ಪನವರ ಜೈಲು-ಆಸ್ಪತ್ರೆಗಳ ಹರಾಕಿರಿ ನಗೆಪಾಟಲಾಗಿ ಹೋಗಿರುವಾಗ ಈ ’ಗೌರವಾನ್ವಿತ’ರೇಕೆ ಹರಸಲು ಹೊರಟರು? ಮತ್ತಷ್ಟು ಓದು »

22
ಆಕ್ಟೋ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 7 – ಗುರುವಿಗಾಗಿ ನಾಟ್ಯಶಾಲೆ

 ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ  ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ  ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು  ಜನಿಸಿದ್ದು ಕಳೆದ ಶತಮಾನದ 1912ರ ಸೆಪ್ಟೆಂಬರ್ 08ರಂದು. ತಮ್ಮ ವಯಸ್ಸಿನ ನೂರನೇ ಸಂವತ್ಸರದ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ. ಗೋ.)ರವರರು ನಿರೂಪಣೆ ಗೈದಿರುವ ಕುರಿಯ  ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು”  ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆ ದಲ್ಲಿ ಪ್ರಕಟವಾಗುತ್ತಿದೆ.
 
***
ರಂಗ ಪ್ರವೇಶದ ಪ್ರಥಮ ವರ್ಷದ ಸಂಪೂರ್ಣ ಕಥೆಯನ್ನು ದಿನ ದಿನಗಳ ಅನುಭವದ ವಿವರಗಳೊಂದಿಗೆ ಹೇಳುತ್ತಾ ಹೋಗಬೇಕೆನ್ನುವುದು ನನ್ನ ಉದ್ದೇಶವಲ್ಲ. ಆದರೆ ಮೊದಲಿನ ಎರಡು ದಿನಗಳ ಅನುಭವವನ್ನು ಅನಿವಾರ್ಯವಾಗಿ ಹೇಳಬೇಕಾಗುತ್ತದೆ. ಎರಡನೇ ಆಟ ಕಟೀಲಿನ ಬಳಿಯ ಶಿಬರೂರಿನಲ್ಲಿ ಆಗಿತ್ತು.ಅಂದಿನದು ‘ಪಟ್ಟಾಭಿಷೇಕ’ (ಪಾದುಕಾ ಪಟ್ಟಾಭಿಷೇಕದ ಕಥೆ.) ಅನುಭವದಲ್ಲಿ ನನಗೆ ಅಣ್ಣನಾದ ಅಳಿಕೆ ರಾಮಯ ರೈಗಳು ತಾನು ಭರತನ ಪಾತ್ರವಹಿಸಿ, ನನಗೆ ರಾಮನ ಪಾತ್ರವನ್ನೇ ತೆಗೆಸಿಕೊಟ್ಟಿದ್ದರು.ರಾಮಯ ರೈಗಳು ನಾಟ್ಯಪ್ರವೀಣ. ಮಾತುಗಾರಿಕೆಯಲ್ಲೂ ಮುಂದು. ವ್ಯಾಸಂಗ ಮಾಡುತ್ತಲೇ ಇರುವುದು ಅವರ ಅಭ್ಯಾಸ.ನಾಟ್ಯ ಬಲ್ಲ ಅವರೆಡೆಯಲ್ಲಿ ನಾನೆಲ್ಲಿ? ಎಂಬುದೇ ನನ್ನ ಕೊರಗು. ಆದರೆ, ಅವರೇ ನನಗೆದುರಾಗಿ ರಂಗದಲ್ಲಿ ಬಂದಾಗ ಆ ಕೊರಗು ಅದಾವ ಮಾಯದಿಂದಲೋ ಕಾಣದಾಯಿತು. ಚಿತ್ರಕೂಟದ ರಾಮ ಭರತರ ಸಮಾಗಮ ಅತ್ಯುದ್ಭುತವೆನಿಸಿತು. ನನಗೆ ಬಂದ ಆ ಸನ್ನಿವೇಶದ ಸಹಜ ಸ್ಫೂರ್ತಿ ಅದಕ್ಕೆ ಎಷ್ಟರ ಮಟ್ಟಿಗೆ ಕಾರಣವೋ, ಅಷ್ಟೇ ಪರಿಮಾಣದಲ್ಲಿ ರಾಮಯ ರೈಗಳ ಪಾತ್ರ ಸ್ಫೂರ್ತಿಯೂ ಕಾರಣ.

ಮರುದಿನ ಶ್ರೀ ಶೆಟ್ಟರು ವೇತನದ ವಿಷಯ ಪ್ರಸ್ತಾಪ ಮಾಡಿದರು.

ಮತ್ತಷ್ಟು ಓದು »

29
ಸೆಪ್ಟೆಂ

ಸಂಸ್ಕೃತಿ ಸಂಕಥನ – ೭

– ರಮಾನಂದ ಐನಕೈ
ಕ್ರಿಯಾ ಜ್ಞಾನವೇ ಬದುಕಿನ ಶಿಕ್ಷಣ

ನಮ್ಮೂರಿನಲ್ಲೊಬ್ಬ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಿದ್ದಾರೆ. ಎಂ.ಎಸ್.ಸಿ.ಯಲ್ಲಿ ಬಂಗಾ ರದ ಪದಕ ಪಡೆದವರು. ನಿವೃತ್ತಿಯ ನಂತರ ಊರಿಗೆ ಬಂದು ಕೃಷಿಕರಾಗಿದ್ದಾರೆ. ಅವರಿಗೆ ಗೊತ್ತಿ ಲ್ಲದ ವಿಷಯವಿಲ್ಲ. ಯಾವ ಕ್ಷೇತ್ರದ ಬಗ್ಗಾದರೂ ಘಂಟೆಗಟ್ಟಲೇ ಮಾತನಾಡುತ್ತಾರೆ. ತಮಗೆ ಸಿಕ್ಕಾ ಪಟ್ಟೆ ಜ್ಞಾನವಿದೆಯೆಂಬ ಅಹಂಕಾರವೂ ಇದೆ. ಆದರೆ ಒಂದು ತೊಂದರೆ ಅಂದರೆ ಅವರು ಅಂದು ಕೊಂಡಂತೆ ಒಂದೂ ಆಗುವುದಿಲ್ಲ. ಅವರ ಮಾತಿ ನಲ್ಲಿ ತೋರುವ ಚಾಕಚಕ್ಯತೆ ಕೃತಿಯಲ್ಲಿ ಕಾಣುವು ದಿಲ್ಲ. ಉದಾಹರಣೆಗೆ ಅವರು ಶಕ್ತಿಯ ಮೂಲದ ಬಗ್ಗೆ ಅಮೂಲಾಗ್ರ ತಿಳುವಳಿಕೆ ಹೊಂದಿದ್ದಾರೆ. ವಿದ್ಯುತ್ ಅನ್ವೇಷಣೆಯ ಕುರಿತು ಸವಿವರವಾದ ಮಾಹಿತಿ ನೀಡುತ್ತಾರೆ. ವಿದ್ಯುತ್ ಕಂಡು ಹಿಡಿದ ವರು, ವಿದ್ಯುತ್ ಹೇಗೆ ಉತ್ಪಾದಿಸಲ್ಪಡುತ್ತದೆ; ತಂತಿ ಹೇಗೆ ವಿದ್ಯುತ್ ವಾಹಕವಾಗುತ್ತದೆ; ಬಲ್ಪಿನ ಒಳ ಗಡೆಯಿಂದ ಹೇಗೆ ಪ್ರಕಾಶ ನೀಡುತ್ತದೆ ಇತ್ಯಾದಿ. ಅವರ ನೆಚ್ಚಿನ ಆಳು ಶಂಕರ. ಆತ ಅಕ್ಷರ ಜ್ಞಾನಿಯಲ್ಲ. ಅವನಿಗೆ ಈ ಪ್ರಪಂಚದ ಬಗ್ಗೆ ಕಡಿಮೆ ತಿಳುವಳಿಕೆ ಇದೆ. ಮೇಸ್ಟ್ರು ಹೇಳಿದಷ್ಟು ಮಾಡುವುದು ಅವನ ಕಾಯಕ. ವಿದ್ಯುತ್ತಿನ ಬಗ್ಗೆ ಇಷ್ಟೆಲ್ಲ ಮಾಹಿತಿ ನೀಡುವ ಪ್ರಾಧ್ಯಾಪಕರಿಗೆ ಮನೆಯಲ್ಲಿ ಫ್ಯೂಸ್ ಹೋದರೆ, ಹೋಲ್ಡರಿನಲ್ಲಿ ವಯರ್ ಬಿಟ್ಟರೆ ಹಾಕಲು ಬರುವುದಿಲ್ಲ. ಆ ಕೆಲಸ ಮಾಡುವವನು ಶಂಕರ. ವಿದ್ಯುತ್ತಿಗೆ ಸಂಬಂಧಿಸಿದ ಅಷ್ಟೂ ರಿಪೇರಿ ಕೆಲಸವನ್ನು ಶಂಕರ ಮಾಡುತ್ತಾನೆ. ಆತನನ್ನು ಕೇಳಿ ದರೆ ತನಗೆ ಇದರ ಬಗ್ಗೆ ತಿಳುವಳಿಕೆಯೇನಿಲ್ಲ. ಹೀಗೆ ಮಾಡಿ ಮಾಡಿ ಕಲಿತೆ ಅನ್ನುತ್ತಾನೆ. ಜೀವನದ ಚಿಕ್ಕ ಕೆಲಸಕ್ಕೆ ನೆರವಿಗೆ ಬಾರದ ಪ್ರಾಧ್ಯಾಪಕರ ಪಾಂಡಿತ್ಯವನ್ನು ಏನನ್ನೋಣ? ಪ್ರಾಧ್ಯಾಪಕರದ್ದು ಲೋಕಜ್ಞಾನ, ಶಂಕರನದ್ದು ಕ್ರಿಯಾಜ್ಞಾನ ಅನ್ನೋಣವೇ? ಉತ್ತರ ಗೊತ್ತಿಲ್ಲ. ಹುಡುಕಲು ಪ್ರಯತ್ನಿಸೋಣ.
ಮತ್ತಷ್ಟು ಓದು »