ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

11
ಜೂನ್

ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ ಏನೋ..!!

– ಕೆ.ಎಸ್ ರಾಘವೇಂದ್ರ ನಾವಡ

ನೀವು ಏನಾದ್ರೂ ಹೇಳಿ… ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ.. ಅ೦ಥ ಮತ್ತೊಮ್ರ್ ಪ್ರೂವ್ ಆಗಿ ಹೋಗಿದೆ. ನಮ್ಮ ದೇಶದಲ್ಲಿ ಕೆಲವರ ಹಣೆಬರಹವನ್ನು ಸುಲಭವಾಗಿ ನಿರ್ಧರಿಸಬಹುದು.. ಹಿ೦ದೆ ಹಾವೇರಿಯಲ್ಲಿ ರೈತರ ಮುಷ್ಕರಕ್ಕೆ ಯಡಿಯೂರಪ್ಪ ಗೋಲಿಬಾರ್ ಗೆ ಆದೇಶ ನೀಡುವುದರ ಮೂಲಕ ಅದಕ್ಕೊ೦ದು ಗತಿ ಕಾಣಿಸಿದರು! ಇ೦ದು ರಾಮ್ ದೇವ್ ಹಣೆಬರಹವನ್ನು ಕೇ೦ದ್ರ ಸರ್ಕಾರ ಈ ರೀತಿ ಬರೆಯಿತು!! ಒಟ್ಟಾರೆ ನಾವು ಬ್ರಿಟೀಶ್ ಸತ್ತೆಯ ಕಾಲಕ್ಕೆ ಹೋಗುತ್ತಿದ್ದೇವೇನೋ ಎ೦ಬುದು ನನ್ನ ಸ೦ಶಯ!!

ಭರತ ಭೂಮಿಯಲ್ಲಿ  ಬ್ರಿಟೀಶ್ ಆಡಳಿತದಿ೦ದ ಮುಕ್ತರಾಗ ಬಯಸಿ ಸ್ವಾತ೦ತ್ರ್ಯದ ಕನಸು ಕ೦ಡು ಅದಕ್ಕಾಗಿ ಹೋರಾಡಿದವರು- ಶೋಷಿತ ವರ್ಗ – ತಮ್ಮ ಬೇಡಿಕೆಯನ್ನು ನ್ಯಾಯಬಧ್ಧವಾಗಿ ಕೇಳುವವರು- ಜನ ಕಲ್ಯಾಣಕ್ಕಾಗಿ ಹಾತೊರೆದು ಮುನ್ನುಗ್ಗುವವರು – ರಾಜಕೀಯ ವ್ಯವಸ್ಥೆಯನ್ನು ಸುಧಾರಿಸ ಬಯಸುವವರು ಮು೦ತಾದವರ ಹೋರಾಟದ ಅ೦ತ್ಯ ಹೀಗೇ!! ಸರಿ ಸುಮಾರು ಬ್ರಿಟೀಷರಿ೦ದ ಆರ೦ಭವಾದ ಈ ಪ್ರಜೆಗಳ ಧ್ವನಿಯನ್ನು  ಅವರುಗಳ ಗ೦ಟಲನ್ನೇ ಹಿಸುಕುವ ಮೂಲಕ ,ಅವರ ಹೋರಾಟಕ್ಕೊ೦ದು ಅನೈತಿಕ ಅ೦ತ್ಯ ನೀಡುವ ಈ ಕ್ರಮ ದುರದೃಷ್ಟವಶಾತ್ ಇಲ್ಲಿಯವರೆವಿಗೂ ಮು೦ದುವರೆದಿದೆ!! ಹಾಗ೦ತ ಎಲ್ಲ ಹೋರಾಟಗಳೂ ಇದೇ ಅ೦ತ್ಯವನ್ನು ಕ೦ಡವೇ ಎ೦ದರೆ ಖಚಿತವಾದ ಉತ್ತರ ನೀಡಲಿಕ್ಕಾಗುವುದಿಲ್ಲ.. “ಕೆಲವು ಸಮಸ್ಯೆಗಳು ತಾವಾಗೇ ಸೃಷ್ಟಿಯಾದರೆ ಕೆಲವನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ“ ಎ೦ಬ ನಾವಡ ಉವಾಚವೊ೦ದಿದೆ.. ಅದರ ಪ್ರಕಾರ ಪ್ರಸಕ್ತ ಭರತಭೂಮಿಯಲ್ಲಿಯೂ ಏಕೆ ಸಮಸ್ತ ಜಗತ್ತಿನಲ್ಲಿಯೂ  ಸರ್ಕಾರ ಗಳು ಹಾಗೂ ಜನತೆಗಳ ವಿಚಾರದಲ್ಲಿ ನಡೆಯುತ್ತಿರುವುದು ಇದೇ!!

ಮತ್ತಷ್ಟು ಓದು »

11
ಜೂನ್

ಬೆಳಕಿಗೆ ಹೊಸತನ ನೀಡಲಿ ಹಣತೆಗಳ ಸಾಲು

– ಮನೋಹರ ಪ್ರಸಾದ್‌,ಮಂಗಳೂರು  

ಸಂಜೆ ಯಾವಾಗ ಆಗುವುದೆಂಬ ಕಾತುರ. ನಾನಾಗ ಐದನೆಯ ಅಥವಾ ಆರನೆಯ ತರಗತಿಯಲ್ಲಿದ್ದೆ. ಶಾಲೆಯ ಕೊನೆಯ ಗಂಟೆ – ಆಗಿನ ಪರಿಭಾಷೆಯಲ್ಲಿ ಲಾಂಗ್‌ಬೆಲ್‌ ಯಾವಾಗ ಕೇಳಿಸುವುದೆಂದೇ ನಮ್ಮ ಗಮನ. ಶಿಕ್ಷಕರು ಕೂಡ ಇದನ್ನು ಅರಿತವರೇ ಆಗಿದ್ದರು. ಏಕೆಂದರೆ, ಅವರು ಕೂಡ ನಮ್ಮ ಹಾಗೆ ಎಳೆಯರೇ ಆಗಿದ್ದವರಲ್ಲ! ಅರ್ಧತಾಸು ಬೇಗನೆ ಲಾಂಗ್‌ಬೆಲ್‌! ಕ್ಲಾಸಿನಿಂದ ಹೊರ ಚಿಮ್ಮಿದ ಮಕ್ಕಳ ಹರ್ಷೋದ್ಗಾರ. ಪುಸ್ತಕದ ಚೀಲ ಹೆಗಲಿಗೇರಿಸಿ, ಬುತ್ತಿಯನ್ನು ಹುಡುಕಿಕೊಂಡು… ಮನೆಯ ಕಡೆಗೆ ಓಟ. ಆ ದಿನ ಅದು ಎಂದಿನ, ಸಾಮಾನ್ಯ ನಡಿಗೆಯಾಗಿರಲಿಲ್ಲ. ಅದು ಮನೆಯ ಕಡೆಗೆ “ಒಲಿಂಪಿಕ್‌ ಓಟ’. ಎಷ್ಟು ಬೇಗ ಮನೆ ತಲುಪುತ್ತೇವೆಯೋ ಅಷ್ಟು ಸಂಭ್ರಮದ ವೃದ್ಧಿ ಎಂಬ ಭಾವನೆ. ಬಾಲ್ಯದ ದಿನಗಳ ವಿಶೇಷವಾದ ಸ್ಪಂದನ ಇದಾಗಿತ್ತು.

ಈ ಸಂಭ್ರಮಕ್ಕೆ ಕಾರಣ. ದೀಪಾವಳಿಯ ಆರಂಭ. ರಜೆಯ ಸಂತಸದ ಜತೆ ಪ್ರತಿದಿನವೂ ಬಗೆಬಗೆಯ ರೂಪದಲ್ಲಿ ದೀಪಾವಳಿಯ ಆಚರಣೆಯ ಸ್ವಾರಸ್ಯ. ವರ್ಷಪೂರ್ತಿ ಉಳಿಸಿಕೊಂಡು ಬಂದ ಚಿಲ್ಲರೆ ಈಗ ನಮ್ಮ ಡಬ್ಬಿಯಲ್ಲಿ ಭಾರೀ ಮೊತ್ತ ಆಗಿರಬಹುದು ಎಂಬ ಲೆಕ್ಕಾಚಾರ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾತ್ರ ನಮ್ಮ ಈ “ಖಜಾನೆ’ಯನ್ನು ಒಡೆಯಲು ಮನೆಯವರ ಅನುಮತಿ. ಈ ಖಜಾನೆಯ ಸಂಪತ್ತು ನಮ್ಮ ಪಟಾಕಿ ಖರೀದಿ ಎಂಬ “ಮಹತ್ಕಾರ್ಯ’ಕ್ಕೆ ವಿನಿಯೋಗವಾಗಬೇಕು.
ಮತ್ತಷ್ಟು ಓದು »

10
ಜೂನ್

ಅಂಥ ಕಳ್ಳರು ಸಂತೆಲೀ ಜೊತೆಯಾದರು…

– ವಿಜಯ್ ಹೆರಗು

ಭಾರತ ದೇಶದ ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ. ಇಲ್ಲಿ ವಾಹನ ಚಲಾಯಿಸಲು ಪರವಾನಗಿ ಇಲ್ಲದಿದ್ದರೂ ಪರವಾಗಿಲ್ಲ, ಪೋಲಿಸಪ್ಪನ ಕೈಗೆ ನೂರರ ನೋಟು ತುರುಕಿ ಬಚಾವಾಗಬಹುದು. ಆದರೆ ಉಪವಾಸ ಸತ್ಯಾಗ್ರಹ ಮಾಡಲು ಅನುಮತಿ ಬೇಕು. ಇಲ್ಲದಿದ್ದರೆ ಹೆಂಗಸರು, ಮಕ್ಕಳೆಂಬ ಭೇದ ತೋರದೆ ಸದೆಬಡಿಯುತ್ತಾರೆ. ಸಾಮಾನ್ಯ ಜನರು ಏನೂ ಮಾಡಲಾಗದ ಹಂತ ತಲುಪಿದ್ದಾರೆ. ತಾವೇ ಆರಿಸಿಕಳಿಸಿದ ಮಂದಿ ತಮ್ಮ ಮೇಲೆ ದಬ್ಬಾಳಿಕೆ ಮಾಡುವುದನ್ನು ನೋಡುವ ಅಸಹಾಯಕ ಸ್ಥಿತಿ ಯಾವುದೇ ದೇಶದ ಜನರಿಗೂ ಬರಬಾರದು.

  ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಯು.ಪಿ.ಎ  ಸರ್ಕಾರ ಹಗರಣಗಳ ಮೇಲೆ ಹಗರಣಗಳನ್ನು ಸೃಷ್ಟಿಸುತ್ತಾ ಸಾಗಿದೆ. ಜನರು ಶಾಂತಿಯುತ ಪ್ರತಿಭಟನೆಗೆ ಮುಂದಾದರೆ ರಾತ್ರೋರಾತ್ರಿ ಪೋಲಿಸ್ ದಾಳಿಗಳಾಗುತ್ತವೆ. ಇದನ್ನು ಪ್ರಧಾನಿ ದುರದೃಷ್ಟಕರ ಎಂದರೆ ಅವರದೇ ಸಂಪುಟದ ಸಚಿವರು ಸಮರ್ಥಿಸಿಕೊಳ್ಳುತ್ತಾರೆ. ಇಂತಹ ಒಂದು ಸರ್ಕಾರವನ್ನು ಆರಿಸಿ ಕಳಿಸಿದ್ದು ನಮ್ಮ ದುರದೃಷ್ಟ ಎಂದೇ ಹೇಳಬೇಕು.
 ಇನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭಾಜಪ ಸರ್ಕಾರ ನಮ್ಮ ನಾಡು ಕಂಡ ಅತ್ಯಂತ ಭ್ರಷ್ಟ ಸರ್ಕಾರ ಎಂಬ ಹಣೆಪಟ್ಟಿ ಹೊಂದಿದೆ. ಇಲ್ಲಿ ಯಡಿಯೂರಪ್ಪನವರೇ ಸರ್ವಸ್ವ. ಅವರು ಹೇಳಿದ್ದಕ್ಕೆ ಎಲ್ಲರೂ ಅಸ್ತು ಎನ್ನಲೇಬೇಕು, ಇಲ್ಲದಿದ್ದರೆ ಅವರಿಗೆ ಉಳಿಗಾಲವಿಲ್ಲ. ತಮ್ಮ ಕುಯುಕ್ತಿಯಿಂದ ಹೈಕಮಾನ್ದನ್ನೇ ಅಲುಗಾಡಿಸಬಲ್ಲ ಶಕ್ತಿ ಯಡಿಯೂರಪ್ಪನವರಿಗಿದೆ. ಮತ್ತಷ್ಟು ಓದು »
7
ಜೂನ್

ಇಲ್ಲಿ ‘ನಿಮ್ಮ’ ಕಣ್ಣಿಗೆ ಸಣ್ಣವರಾದ ಸಾಮಾನ್ಯ ಜನರು ಇದ್ದರು…

ಡಾ.ಅಜಕ್ಕಳ ಗಿರೀಶ್

ರಾಮದೇವ್ ಬಗ್ಗೆ ಬೇಕಾದದ್ದು ಮಾತಾಡಲಿ. ಆದರೆ ಹಾಗೆ ಹಿಡನ್ ಅಜೆಂಡಾ, ಕೋಮುವಾದಿಗಳು ಇತ್ಯಾದಿ ಬೈಯುವಾಗ ಕೂಡ ಯಾರೊಬ್ಬರೂ ಗಮನಿಸದ ವಿಚಾರ ಅಂದರೆ, ಅವರನ್ನು ಬೇಂಬಲಿಸಿ ರಾಮಲೀಲ ಮೈದಾನಕ್ಕೆ ಗಂಟುಮೂಟೆ ಕಟ್ಟಿಕೊಂಡು ಹೋದ ಸಾವಿರಾರು ಜನರು ಇದ್ದಾರಲ್ಲ ಅವರು ಯಾವ ಸ್ವಾರ್ಥದಿಂದ ಹೋದರು? ನಿಜ , ಅಲ್ಲಿ ಕಡುಬಡವರು ಇದ್ದಿರಲಾರರು. ಆದರೆ,ಅಲ್ಲಿ ಇದ್ದವರು ನಿಜವಾದ ದೇಶಭಕ್ತರು. ದೇಶಭಕ್ತಿ ಅಂದರೆ ಏನು ಅಂತ ವಿವರಿಸುವುದು ಯಾವಾಗಲೂ ಕಷ್ಜ್ಟ. ಆದರೆ ಇಂದು ಬಹುಶಃ ದೇಶಭಕ್ತಿ ಅಂದರೆ ಏನು ಅಂತ ಯಾರಿಗಾದರೂ ಪಾಠ ಹೇಳಬೇಕಾದರೆ ನಾವು ಇದು ಅಂತ ತೋರಿಸಬಹುದುದು. ಬೇರೆ ಅಂಥ ಉದಾಹರಣೆಗಳು ಬಹಳ ಸಿಗಲಿಕ್ಕಿಲ್ಲ. ಊಟದ ಆಸೆಯಿಂದ ಸೇರಿದ್ದಾರೆ ಅನ್ನಲು ಅಲ್ಲಿ ಊಟವಿಲ್ಲ,ಉಪವಾಸ. ಹಣದ ಆಸೆಗೆ ಹೋದರೇ? ಅವರು ತಮ್ಮ ಸ್ವಂತ ಹಣದಿಂದ ಹೋದರು ,ಅಷ್ಟೇ ಅಲ್ಲ ,ಬಹುಶ ಬಹಳ ಜನ ಪೆಂಡಲ್ ಇತ್ಯಾದಿ ಖರ್ಚಿಗೆ ದೇಣಿಗೆ ಕೂಡ ಕೊಟ್ಟಿರಬಹುದು(ದೇವಸ್ತಾನಗಳಿಗೆ ನಮ್ಮ ಖರ್ಚಲ್ಲಿ ಹೋಗಿ ಕಾಣಿಕೆ ಹಾಕಿದಂತೆ.ದೇವಸ್ತಾನದಲ್ಲಿ ಪುಣ್ಯವಾದರೂ ಸಿಗುತ್ತೆ ಸ್ವಂತಕ್ಕೆ ಅಂತ ಆಸೆ ಇರುತ್ತೆ, ಇಲ್ಲಿ ಸ್ವಂತಕ್ಕೆ ಅಂತ ಏನಿಲ್ಲ.) ಮತ್ತಷ್ಟು ಓದು »

5
ಜೂನ್

ರಾಮದೇವ್,ಮೀಡಿಯಾ ಮತ್ತು ಸಂಪಾದಕೀಯ

– ಮಹೇಶ ಪ್ರಸಾದ ನೀರ್ಕಜೆ

ಸಂಪಾದಕೀಯ ತಂಡ ಬರೆದ “ಸಂವಿಧಾನವನ್ನೇ ಒಪ್ಪದ ರಾಮದೇವ ಸತ್ಯಾಗ್ರಹಕ್ಕೆ ಇಳಿದಿದ್ದಾರೆ… ಜೈ ಹೋ! ” ಈ ಲೇಖನದ ಬಗ್ಗೆ ನನ್ನ ಕೆಲವು ಅನಿಸಿಕೆಗಳು. ಇವು ಒಟ್ಟಾರೆಯಾಗಿ ಮಾಧ್ಯಮಗಳ ಬೇಜವಾಬ್ದಾರಿತನದ ಬಗ್ಗೆ ನನ್ನ ಕೆಲವು ಟಿಪ್ಪಣಿಗಳು ಕೂಡ ಹೌದು. ಸದಾ ಮಾಧ್ಯಮದ ತಪ್ಪು ಒಪ್ಪುಗಳನ್ನು ಪ್ರಕಟಿಸುವ ತಂಡ ಅದರ ಜೊತೆಜೊತೆಗೆ ಬೇರೆ ಕೆಲವು ವಿಚಾರಗಳನ್ನು ಕೂಡ ಬರೆಯುತ್ತದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸಂಪ್ರದಾಯವಾದಿಗಳ ಬಗ್ಗೆ, ಮೂಢ ನಂಬಿಕೆಗಳ ಬಗ್ಗೆ ಸಾಕಷ್ಟು ಬರಹಗಳನ್ನು ಬರೆದಿದ್ದಾರೆ. ಅವರ ಕೆಲವು ಪ್ರಯತ್ನಗಳ ಬಗೆಗೆ ನನಗೆ ಹೆಮ್ಮೆಯಿದೆ. ಅದರಲ್ಲೂ ಜಿ ಕನ್ನಡ ವಾಹಿನಿಯಲ್ಲಿ ನಡೆಯುತ್ತಿದ್ದ ಬೃಹತ್ ಬ್ರಹ್ಮಾಂಡ ಕಾರ್ಯಕ್ರಮದ ಬಗೆಗಿನ ವಿರೋಧ ಎಲ್ಲರ ಗಮನ ಸೆಳೆದಿತ್ತು. ಆದರೆ ಮೊದಲಿನಿಂದಲೂ ಕೂಡ ನನಗೆ ಸಂಪಾದಕೀಯ ತಂಡದ ಬಗೆಗೆ ಕೆಲವು ಅನುಮಾನಗಳಿವೆ. ಮೊದಲನೆಯದಾಗಿ ತನ್ನ TRP ಹೆಚ್ಚಿಸಿ ಕೊಳ್ಳಲೋ ಎಂಬಂತೆ ಬ್ಲಾಗಿನಲ್ಲಿ ಎಲ್ಲೆಂದರಲ್ಲಿ ಅನಾಮಿಕ ಪ್ರತಿಕ್ರಿಯಗಳ ಮಹಾಪೂರ. ಈ ಪ್ರತಿಕ್ರಿಯೆಗಳನ್ನು ಯಾರು ಬರೆಯುತ್ತಾರೆ, ಅವರ ಪ್ರತಿಕ್ರಿಯೆಗಳಲ್ಲಿ ಏನಾದರು ಕುತ್ಸಿತ ಉದ್ದೇಶಗಳಿವೆಯೇ ಇತ್ಯಾದಿ ಪ್ರಶ್ನೆಗಳು ನನಗೆ ಮೊದಲಿನಿಂದಲೂ ಇವೆ. ಅಲ್ಲದೆ ಮೂಢ ನಂಬಿಕೆಯನ್ನು ವಿರೋಧಿಸುವ ನೆಪದಲ್ಲಿ ಎಲ್ಲಾ ಅಧ್ಯಾತ್ಮಿಕ ವ್ಯಕ್ತಿಗಳನ್ನು ಟೀಕಿಸುವ ಹುನ್ನಾರವೋ ಎಂದು ಕೂಡ ಸಂಶಯವಿದೆ. ಆದರೆ ಕೆಲವು ಬರಹಗಳಲ್ಲಿ ಉತ್ತಮ ಅಧ್ಯಾತ್ಮಿಕ ಮೌಲ್ಯಗಳನ್ನು ಅದರಲ್ಲೂ ವಿವೇಕಾನಂದ, ಬುಧ್ಧ ಗಾಂಧೀಜಿ ಬಗ್ಗೆ ಬರೆದಿದ್ದೂ ಹೌದು. ಒಟ್ಟಿನಲ್ಲಿ ನನ್ನ ಮಟ್ಟಿಗೆ ಸಂಪಾದಕೀಯ ವಿರೋಧಾಭಾಸಗಳ ಗೂಡು. ಇರಲಿ, ಈಗ ಪ್ರಸ್ತುತ ಲೇಖನದ ಬಗ್ಗೆ ಹೇಳುವುದಾದರೆ ನನ್ನ ಪ್ರಕಾರ ಇದರಲ್ಲಿ ಹಲವಾರು ತಪ್ಪುಗ್ರಹಿಕೆಗಳು, ಮತ್ತು ತಪ್ಪು ಮಾಹಿತಿಗಳು ಕಾಣಸಿಗುತ್ತವೆ. ಅವುಗಳನ್ನು ಪಟ್ಟಿ ಮಾಡಿ, ನಿಜ ಸಂಗತಿಯನ್ನು ಹೊರಗೆಡಹುವ ಒಂದು ಪ್ರಯತ್ನ ಇದು.

ಮತ್ತಷ್ಟು ಓದು »

31
ಮೇ

ಚಿತ್ರದುರ್ಗ: ಒಂದು ಅಪರೂಪ ಐತಿಹಾಸಿಕ ತಾಣ.

–    ಆರ್.ರಾಘವೇಂದ್ರ, ಚಳ್ಳಕೆರೆ

ಇತಿಹಾಸ ಪ್ರಸಿದ್ಧ ಚಿತ್ರದುರ್ಗ ಜಿಲ್ಲೆಯು ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಹೊಳಲ್ಕೆರೆ ಎಂಬ ಆರು ತಾಲ್ಲೂಕು ಕೇಂದ್ರಗಳನ್ನೊಳಗೊಂಡಂತೆ ೧೮೫ ಗ್ರಾಮ ಪಂಚಾಯಿತಿ ಕೇಂದ್ರಗಳಿಂದ ಕೂಡಿರುತ್ತದೆ. ಚಿತ್ರದುರ್ಗ ಜಿಲ್ಲೆಯು ೮೩೮೮ ಚ.ಕಿ.ಮೀ. ವಿಸ್ತೀರ್ಣ ಹೊಂದಿದ್ದು, ಒಟ್ಟು ೧೫,೧೦,೨೨೭ ಜನಸಂಖ್ಯೆ ಇರುತ್ತದೆ.

ಜಿಲ್ಲೆಯ ಆರು ತಾಲ್ಲೂಕುಗಳ ಪೈಕಿ, ಚಿತ್ರದುರ್ಗ ತಾಲ್ಲೂಕು ಸಾಪೇಕ್ಷಿತವಾಗಿ ಅಭಿವೃದ್ಧಿ ಹೊಂದಿದ ತಾಲ್ಲೂಕಿನ ಗುಂಪಿನಲ್ಲಿದ್ದರೆ, ಚಳ್ಳಕೆರೆ, ಹೊಳಲ್ಕೆರೆ, ಹಿರಿಯೂರು, ಹೊಸದುರ್ಗ ಅತಿ ಹಿಂದುಳಿದ ತಾಲ್ಲೂಕುಗಳ ಗುಂಪಿನಲ್ಲಿವೆ ಹಾಗೂ ಮೊಳಕಾಲ್ಮೂರು ತಾಲ್ಲೂಕು ಅತ್ಯಂತ ಹಿಂದುಳಿದ ತಾಲ್ಲೂಕಿನ ಗುಂಪಿನಲ್ಲಿದೆ. ಆದರೆ ರಾಜ್ಯದ ಹಿಂದುಳಿದ ಪ್ರದೇಶವಾಗಿದ್ದರೂ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ. ಅದು ಹೇಗೆಂದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕ್ಷರತೆ ಪ್ರಮಾಣ, ಮಕ್ಕಳು-ಉಪಾಧ್ಯಾಯರ ಅನುಪಾತ, ೬-೧೪ ವಯೋಮಾನದಲ್ಲಿ ಶಾಲೆ ಸೇರದ ಮಕ್ಕಳ ಪ್ರಮಾಣ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಇವುಗಳ ಮೇಲೆ ನಾವು ಜಿಲ್ಲೆಯ ಶೈಕ್ಷಣಿಕ ಪ್ರಗತಿಯನ್ನು ಕಾಣಬಹುದು. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶವೆಂದು ಮೊಳಕಾಲ್ಮೂರು ತಾಲ್ಲೂಕು ಒಂದೇ. ಚಿತ್ರದುರ್ಗವು ತಾಮ್ರದ ಖನಿಜ ಸಂಪತ್ರವನ್ನು ಇಂಗಳದಾಳ್‌ನಲ್ಲಿ ಒಳಗೊಂಡಿದೆ.

ಸಾಹಿತ್ಯ ಕ್ಷೇತ್ರದ ಮೇರುವ್ಯಕ್ತಿಯಾದ ರಸಕವಿ ‘ಕುವೆಂಪು’ರವರನ್ನೇ ಶಿಷ್ಯರಾಗಿ ಪಡೆದಂತಹ ಕೀರ್ತಿ ಟಿ.ಎಸ್.ವೆಂಕಣ್ಣಯ್ಯರವರದು. ತಳಕಿನ ಕುಟುಂಬದ ತ.ಸು.ಶಾಮರಾಯರು, ತ.ರಾ.ಸು., ಅಂಬುಜಾ ತ.ರಾ.ಸು., ರವರು ಸೇರಿದಂತೆ, ಬೆಳಗೆರೆ ಮನತೆನದ ಬೆಳಗೆರೆ ಚಂದ್ರಶೇಖರಶಾಸ್ತ್ರಿ, ಬೆಳಗೆರೆ ಕೃಷ್ಣಶಾಸ್ತ್ರಿ, ಬೆಳಗೆರೆ ಜಾನಕಮ್ಮ ಮುಂತಾದ ಸಾಹಿತ್ಯ ಗಣಿಗಳು ಚಿತ್ರದುರ್ಗದ ಸಾಹಿತ್ಯವನ್ನು ಅಮರವಾಗಿಸಿದ್ದಾರೆ. ತ.ರಾ.ಸು. ರವರ ದುರ್ಗಾಸ್ತಮಾನ, ನಾಗರಹಾವು ಹಾಗೂ ಇತರೆ ಕೃತಿಗಳು ವಿಶ್ವಕ್ಕೆ ಚಿತ್ರದುರ್ಗದ ಪರಿಚಯವನ್ನು ಬಹುಸುಂದರವಾಗಿ ಮಾಡಿಕೊಟ್ಟಿದೆ. ‘ಬಿ.ಎಲ್.ವೇಣು’ ರವರ ‘ಕಲ್ಲರಳಿ ಹೂವಾಗಿ’ ಚಲನಚಿತ್ರವು ರಾಷ್ಟ್ರಮಟ್ಟದಲ್ಲಿ ಪ್ರಶಂಸೆ ಪಡೆದಿದ್ದು, ಖ್ಯಾತ ಸಂಶೋಧಕರಾದ ಹುಲ್ಲೂರು ಶ್ರೀನಿವಾಸ ಜೋಯಿಸರು, ಪ್ರೋ. ಲಕ್ಷ್ಮಣ ತೆಲಗಾವಿ, ಪ್ರೋ. ಬಿ.ರಾಜಶೇಖರಪ್ಪ, ಜಾನಪದ ತಜ್ಞರಾದ ಡಾ.ಮೀರಾಸಾಬಿಹಳ್ಳಿ ಶಿವಣ್ಣ, ಮಲ್ಲಿಕಾರ್ಜುನ ಕಲಮರಹಳ್ಳಿ, ನೇಮಿಚಂದ್ರ, ಮುಂತಾದವರು ಸೇರಿದಂತೆ ಅನೇಕ ಸಾಹಿತ್ಯ ಕಣ್ಮಣಿಗಳನ್ನೊಳಗೊಂಡಿದ್ದು, ದುರ್ಗವು ಸಾಹಿತ್ಯದ ಗಣಿಯಾಗಿದೆ. ಮತ್ತಷ್ಟು ಓದು »

31
ಮೇ

ಕನ್ನಡ ಟಿವಿ ವಾಹಿನಿಗಳು ಹಾಗೂ ಮೂಢನಂಬಿಕೆಗಳ ಪ್ರಸಾರ

ಆನಂದ ಪ್ರಸಾದ್

ಕನ್ನಡದ ಎಲ್ಲ ಟಿವಿ ವಾಹಿನಿಗಳೂ ಜ್ಯೋತಿಷ್ಯವೆಂಬ ಅವೈಜ್ಞಾನಿಕ ಹಾಗೂ ಮೂಢನಂಬಿಕೆಗಳನ್ನು ಬಲಪಡಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದು ಇದು ಮಾಧ್ಯಮಗಳಿಗೆ ಇರಬೇಕಾದ ಜವಾಬ್ದಾರಿಗೆ ವಿರುದ್ಧವಾದುದು.  ವಿಜ್ಞಾನದ ಆವಿಷ್ಕಾರವಾದ ಟಿವಿಯನ್ನು ತಮ್ಮವ್ಯಾಪಾರ   ಹೆಚ್ಚಿಸಿಕೊಳ್ಳಲು ಜ್ಯೋತಿಷಿಗಳಿಗೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿರುವ ಟಿವಿ ವಾಹಿನಿಗಳು ಯಾವುದೇ ನಾಚಿಕೆ ಇಲ್ಲದೆ ಈ ಕೆಲಸದಲ್ಲಿ ತೊಡಗಿವೆ.  ವಿಜ್ಞಾನಿಗಳು ಶ್ರಮ ವಹಿಸಿ ಸಂಶೋಧಿಸಿದ ಟಿವಿ ಮಾಧ್ಯಮ ಇಂದು ಅವೈಜ್ಞಾನಿಕ ವಿಚಾರಗಳು ಹಾಗೂ ಮೂಢನಂಬಿಕೆಗಳನ್ನು ಬಲಪಡಿಸಲು ದುರುಪಯೋಗವಾಗುತ್ತಿದೆ.  ಇದನ್ನು ಪ್ರಜ್ಞಾವಂತರು ವಿರೋಧಿಸಬೇಕಾಗಿದೆ.  ಮಾಧ್ಯಮಗಳಿಗೆ ಜನರನ್ನು ವಿಚಾರವಂತರನ್ನಾಗಿ ಮಾಡುವ ಮಹತ್ತರ ಜವಾಬ್ದಾರಿ ಇದೆ.  ಇದನ್ನು ಕಡೆಗಣಿಸಿ ೨೧ ಶತಮಾನದಲ್ಲೂ ಜ್ಯೋತಿಷ್ಯ, ವಾಸ್ತು ಎಂಬ ವೈಜ್ಞಾನಿಕ ಆಧಾರಗಳಿಲ್ಲದ ಪುರೋಹಿತಶಾಹಿ ವಿಚಾರಗಳನ್ನು ಜನರ ಮೇಲೆ ಹೇರಲು ಯತ್ನಿಸುತ್ತಿರುವ ಟಿವಿ ವಾಹಿನಿಗಳ ಧೋರಣೆಯನ್ನು ವಿಚಾರವಂತರು, ಸಾಹಿತಿಗಳು, ವಿಜ್ಞಾನಿಗಳು, ತಂತ್ರಜ್ಞರು, ಪ್ರಜ್ಞಾವಂತರು  ವಿರೋಧಿಸಬೇಕಾಗಿದೆ.

ಇಂದು ದೇಶಾದ್ಯಂತ ಭ್ರಷ್ಟಾಚಾರದ ವಿರುದ್ಧ ಹೋರಾಟ ರೂಪುಗೊಳ್ಳುತ್ತಿರುವ ಹೊತ್ತಿನಲ್ಲಿ ಮೂಢನಂಬಿಕೆಗಳನ್ನು ಬಲಪಡಿಸುವ ಪುರೋಹಿತಶಾಹಿ ಕುತಂತ್ರದ ವಿರುದ್ಧವೂ ಹೋರಾಟ ನಡೆಯಬೇಕಾದ ಅಗತ್ಯ ಇದೆ.  ಕಷ್ಟಪಟ್ಟು ದುಡಿದು ತಿನ್ನುವುದರ ಬದಲು ಕೆಲವು ಪುರೋಹಿತಶಾಹಿಗಳು ಜ್ಯೋತಿಷ್ಯ, ವಾಸ್ತುವಿನ ಹೆಸರಿನಲ್ಲಿ ಜನರ ನಂಬಿಕೆಗಳನ್ನು, ಜನರ ಭಯವನ್ನು ತಮ್ಮ ಜೇಬು ತುಂಬಿಸಿಕೊಳ್ಳಲು ಸುಲಭೋಪಾಯವಾಗಿ ಬಳಸಿಕೊಳ್ಳುತ್ತಿರುವುದೂ ಒಂದು ರೀತಿಯ ಭ್ರಷ್ಟಾಚಾರವಲ್ಲವೇ?  ಇಂಥ ಭ್ರಷ್ಟಾಚಾರಕ್ಕೆ ಟಿವಿ ವಾಹಿನಿಗಳು ಕೈಗೂಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸಮಂಜಸವೆಂದು ಟಿವಿ ವಾಹಿನಿಗಳನ್ನು ನಡೆಸುವವರು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಅಗತ್ಯ ಇದೆ.  ಜ್ಯೋತಿಷ್ಯ, ವಾಸ್ತು ಇಲ್ಲದೆ ಪಾಶ್ಚಾತ್ಯ ರಾಷ್ಟ್ರಗಳು ಅಭಿವೃದ್ಧಿ ಸಾಧಿಸಿವೆ.   ಹೀಗಿರುವಾಗ ನಮ್ಮ ಟಿವಿ ವಾಹಿನಿಗಳು ಜ್ಯೋತಿಷ್ಯ, ವಾಸ್ತುಗಳನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸುತ್ತ್ತಿರುವುದು ಯಾವ ಪುರುಷಾರ್ಥ ಸಾಧನೆಗಾಗಿ ಎಂದು ನಾವು ಕೇಳಬೇಕಾಗಿದೆ.  ಮತ್ತಷ್ಟು ಓದು »

23
ಮೇ

ಅಮರನಾಥ ಯಾತ್ರೆಯ ಪ್ರಾರಂಭ

ಶ್ರೀಹರ್ಷ ಸಾಲಿಮಠ

ಅಮರನಾಥ ಯಾತ್ರೆ ಮತ್ತೆ ಶುರುವಾಗಿದೆ. ಅಲ್ಲಿ ಇಲ್ಲಿ ರಿಸರ್ಚು ಮಾಡುವವರಿಗಿಂತ ಹೋಗಿಬಂದವನ ಬಾಯಲ್ಲೇ ಕೇಳಿದರೆ ವಿವರವಾದ ಐಡಿಯಾ ಸಿಗುತ್ತದೆ! ವಾಟ್ ಎನ್ ಐಡಿಯಾ ಸರ್‍ ಜಿ!

ಅಮರನಾಥಕ್ಕೆ ಹೋಗುವವರು ಮೊದಲು ಪರವಾನಗಿ ಪಡೆಯಬೇಕು. ಪರವಾನಗಿ ಜೆ&ಕೆ (ಜಮ್ಮು ಕಾಶ್ಮೀರ) ಬ್ಯಾಂಕ್ ನಲ್ಲಿ ದೊರೆಯುತ್ತದೆ. ಕರುನಾಡಲ್ಲಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಈ ಬ್ಯಾಂಕಿದೆ. ಬೆಂಗಳೂರಲ್ಲಿ ಅವೆನ್ಯೂ ರಸ್ತೆಯ ಕೊನೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಬಳಿ ಜಮ್ಮು ಕಾಶ್ಮೀರ ಬ್ಯಾಂಕಿದೆ. ದಿನಕ್ಕೆ ಪರಿಮಿತ ಜನರಿಗೆ ಮಾತ್ರ ಪರವಾನಗಿ ಕೊಡುತ್ತಾರೆ. ಇವತ್ತು ಪರವಾನಗಿ ಪಡೆದರೆ ಜುಲೈಗೆ ಸಿಗಬಹುದು. ಪರವಾನಗಿ ಸಿಕ್ಕ ದಿನವೇ ಗುಹೆಯ ಬಳಿ ಹೋಗಬೇಕೆಂದು ಹೇಳುತ್ತಾರಾದರೂ ಅಮರನಾಥದಲ್ಲಿ ಅಷ್ಟು ಕಟ್ಟುನಿಟ್ಟಿನ ನಿಯಮವಿರಲಿಲ್ಲ.
ಯಾತ್ರೆಗೆ ಹೊರಡಲು ಮದ್ಯಮವರ್ಗದವರಿಗೆ ರೈಲು ಒಳ್ಳೆಯ ಮಾರ್ಗ. ಪುಣೆಯಿಂದ ಜಮ್ಮುವಿಗೆ ನೇರ ರೈಲು ಇದೆ. ಇಲ್ಲವೇ ಹುಬ್ಬಳ್ಳಿ ಅಥವಾ ಬೆಂಗಳೂರಿನಿಂದ ಹೊಸದೆಹಲಿ ತಲುಪಿ ಹಳೆ ದೆಹಲಿ ರೇಲ್ವೇ ನಿಲ್ದಾಣದಿಂದ ಜಮ್ಮು ತಲುಪಬಹುದು (ಹೊಸ ದೆಹಲಿ ಯಿಂದ ಹಳೆದೆಹಲಿ ರೇಲ್ವೇ ನಿಲ್ದಾಣಕ್ಕೆ ಹೋಗಬೇಕು). ದೆಹಲಿಯಿಂದ ಜಮ್ಮು ಸುಮಾರು ಹದಿನೈದು ತಾಸುಗಳ ರೈಲು ಪಯಣ. ಸರ್ಕುಲಾರ್‍ ಟಿಕೆಟ್ ಕಾಯ್ದಿರಿಸಿದರೆ ಟಿಕೆಟ್ ದರದಲ್ಲಿ ರಿಯಾಯಿತಿ ಸಿಗುತ್ತದೆ.
ಜಮ್ಮು ಕಾಶ್ಮೀರದಲ್ಲಿ ಆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳನ್ನು ಹೊರತುಪಡಿಸಿ ಬೇರೆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳು ಕೆಲಸ ಮಾಡುವುದಿಲ್ಲ. ಎಲ್ಲ ರಾಜ್ಯದ ಎಲ್ಲ ಪೋಸ್ಟ್ ಪೇಡ್ ನೆಟ್ವರ್ಕ್‌ಗಳು ಕೆಲಸ ಮಾಡುತ್ತವಾದರೂ ಬಿ ಎಸ್ ಎನ್ ಎಲ್ ಪೋಸ್ಟ್ ಪೇಡ್ ಉತ್ತಮವಾದದ್ದು. ಮತ್ತಷ್ಟು ಓದು »

13
ಮೇ

ಶಾಪ ವಿಮೋಚನೆಯಾಗದ ಅಹಲ್ಯೆಯರು…

– ರೂಪ ರಾವ್,ಬೆಂಗಳೂರು

ರಾಮಾಯಣದ ಸೀತಾ ಸ್ವಯಂವರದ ನಾಟಕದ ತಾಲೀಮು ನಡೆಯುತ್ತಿತ್ತು.
ಅದರಲ್ಲಿ ಬರುವ ಅಹಲ್ಯಾ ಶಾಪ ವಿಮೋಚನೆಯ ಪ್ರಸಂಗವನ್ನೂ  ವೇದಿಕೆಯಮೇಲೆ ತರೋಣ

“ಗೀತಾ ಅಹಲ್ಯಾ ಪಾತ್ರ ನೀನೇ ಮಾಡಬೇಕು .” ಮೇಡಂ ನನ್ನನ್ನು ಈ ಪಾತ್ರಕ್ಕೆ ಕರೆದಾಗ ನಾನು ಕಕ್ಕಾಬಿಕ್ಕಿ, ಜೊತೆಗೆ ಒಮ್ಮೆಗೆ,ಮಾಡಬಾರದೆನಿಸಿತು.
“ಮೇಡಂ ನಾ………….ನು …………ಈ ಪಾರ್ಟ್ ಮಾಡಲ್ಲ. ………” ಹಿಂಜರಿಕೆಯಿಂದಲೇ ನುಡಿದೆ.

“ಯಾಕೆ ಗೀತಾ “? ನನ್ನತ್ತಲೇ ತೀಕ್ಷ್ಣವಾಗಿ ನೋಡುತ್ತಾ

“ಮೇಡಂ iam not happy with Ahalya’s charactor. ತುಂಬಾ ಸಲ ಅನ್ಕೂಂಡಿದ್ದೀನಿ ಯಾಕೆ ಈ ಪಂಚ ಮಹಾ ಕನ್ನಿಕೆಯರ ಹೆಸರಲ್ಲಿ  ಅಹಲ್ಯಾ ಹೆಸರು ಸೇರಿದೆ ಅಂತ?”
“ಯಾಕಮ್ಮಾ”? ಮತ್ತೆ ಪ್ರಶ್ನೆ ಎಸೆದರು.
” ಹಾಗಲ್ಲ ಮೇಡಂ ಗಂಡ ಇರದಿದ್ದಾಗ  ಮತ್ತೊಬ್ಬನ ಜೊತೆ ಸಂಬಂಧ ಹೊಂದಿದವಳು. ಅಸಲಿಗೆ ಆ ಕಥೆಯೇ ಬೇಕಿರಲಿಲ್ಲ .ರಾಮನ ಔನ್ನತೆಯನ್ನ ಎತ್ತಿ ತೋರೋದಿಕ್ಕೆ ಈ ಕತೆ ಸೇರಿಸಿದ್ದಾರೆ ಅಷ್ಟೇ.

“ಸರಿ.ಆಯ್ತು,ನಿನಗೆ ಯಾವ ಪಾತ್ರ ಬೇಕೋ ಅದನ್ನೇ ಚೂಸ್ ಮಾಡು.ಆದರೂ ಪಾತ್ರಕ್ಕಿಂತ ಪಾತ್ರಧಾರಿಯ ಆ ಪಾತ್ರದಲ್ಲಿ ಹೇಗೆ ಇನ್‌ವಾಲ್ವ್ ಆಗ್ತಾನೆ ಅನ್ನೋದು ಮುಖ್ಯ. ಮತ್ತೆ ಪುರಾಣದಲ್ಲಿ ಕೇಳಿದ ಕಥೆಯನ್ನ ಆ ನೆಲೆಯಲ್ಲಿಯೇ ನೋಡುವುದಕ್ಕಿಂತ ಒಂದು ವಿಭಿನ್ನ ನೆಲೆಯಲ್ಲಿ ನೋಡಿದರೆ ಪಾತ್ರ ಇಂಟರೆಸ್ಟಿಂಗ್ ಆಗಿರುತ್ತೆ. ಅಹಲ್ಯಾ ಜೀವನದಲ್ಲಿ ನಿಜಕ್ಕೂ ಏನು ನಡೆದಿರಬಹುದು ಅನ್ನೋದನ್ನ ಯೋಚಿಸಿದರೆ ಆ ಪಾತ್ರ ನಿಜಕ್ಕೂ ತುಂಬಾ ಕಾಂಪ್ಲಿಕೇಟೆಡ್ ಅನ್ಸುತ್ತೆ. “ಮೇಡ್ಂ ಒಂದೇ ಸಲಕ್ಕೆ ಒಪ್ಪಿ, ಜೊತೆಗೇ ನನ್ನ ಮನಸಲ್ಲಿ ಅಲೆಯನ್ನು ಎಬ್ಬಿಸಿದರು.
ಮತ್ತಷ್ಟು ಓದು »

12
ಮೇ

ಎಂಥಾ ಮರುಳಯ್ಯಾ ಇದು…

ಚಾಮರಾಜ ಸವಡಿ

ತುಂಬ ದಿನಗಳ ಹಿಂದೆ ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಸಂದರ್ಶನವೊಂದರಲ್ಲಿ ಹೇಳಿದ ಮಾತೊಂದು ನೆನಪಾಗುತ್ತಿದೆ. ಓದುಗರನ್ನು ಈ ಪರಿ ಸೆಳೆಯುವಲ್ಲಿ ನೀವು ಯಶಸ್ವಿಯಾಗಿದ್ದು ಹೇಗೆ? ಎಂಬಂರ್ಥದ ಪ್ರಶ್ನೆಗೆ ಯಂಡಮೂರಿ ಉತ್ತರ: ಅವರ ದೌರ್ಬಲ್ಯವನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ.

ಇವತ್ತು ನಮ್ಮ ಸುತ್ತಮುತ್ತ ನಡೆಯುತ್ತಿರುವ ಹಲವಾರು ವಿಷಯಗಳನ್ನು ನೋಡಿದಾಗ ನನಗೆ ಈ ಮಾತು ಪದೆ ಪದೆ ನೆನಪಿಗೆ ಬರತೊಡಗಿದೆ.

ಸ್ವಾಮಿಗಳು, ಕಪಟ ಜ್ಯೋತಿಷಿಗಳು, ಬಹುತೇಕ ರಾಜಕಾರಣಿಗಳು, ಟಿವಿಗಳು, ಪತ್ರಿಕೆಯವರು, ಸರ್ಕಾರಿ ನೌಕರರು, ವಕೀಲರು, ವೈದ್ಯರು- ಹೀಗೆ ನೀವು ಯಾವುದೇ ರಂಗ ನೋಡಿದರೂ ಸಾಕು, ಯಂಡಮೂರಿ ಹೇಳಿದ ಮಾತು ಸತ್ಯ ಎಂಬುದು ಸ್ಪಷ್ಟವಾಗುತ್ತ ಹೋಗುತ್ತದೆ. ಪ್ರತಿಯೊಬ್ಬರೂ ಜನರ ದೌರ್ಬಲ್ಯ ಹಾಗೂ ಅನಿವಾರ್ಯತೆಗಳನ್ನೇ ಬಳಸಿಕೊಳ್ಳುವವರು. ಎಲ್ಲೋ ಒಬ್ಬಿಬ್ಬರು ಪುಣ್ಯಾತ್ಮರು ಇರಬಹುದು. ಆದರೆ, ಬಹುತೇಕರ ಜೀವನ ನಡೆಯುತ್ತಿರುವುದೇ ಜನರನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುವುದರಿಂದ.

ಸಾಮಾನ್ಯ ವ್ಯಕ್ತಿಯಂತೆ ಓಡಾಡಿಕೊಂಡವ ಕಾವಿ ಬಟ್ಟೆ ಧರಿಸಿದ ಕೂಡಲೇ ಆತ ಸ್ವಾಮೀಜಿಯಾಗಿಬಿಡುತ್ತಾನೆ. ಕಿಂಚಿತ್ತೂ ವಿಚಾರ ಮಾಡದೇ ಆತನ ಕಾಲಿಗೆ ಬೀಳಲು ಜನ ಹಾತೊರೆಯತೊಡಗುತ್ತಾರೆ. ಖಾಲಿ ಓಡಾಡಿಕೊಂಡವ, ಒಂದಕ್ಕೆರಡು ಪಟ್ಟು ಹಣ ಕೊಡುತ್ತೇನೆ ಎಂದ ಕೂಡಲೇ ಸಾಲ ಮಾಡಿ ಹಣ ಕೊಡಲು ಜನ ಮುಂದಾಗುತ್ತಾರೆ. ಜ್ಯೋತಿಷಿಗಳು ಹೇಳಿದಂತೆ ನಡೆದುಕೊಳ್ಳುವವರು, ಜಾಹೀರಾತು ನೋಡಿ ಔಷಧಿ ಕೊಳ್ಳುವವರು, ಕೆಲಸಕ್ಕೆ ಹಣ ಕಟ್ಟುವವರು, ಅರ್ಧ ರೇಟಿಗೆ ಚಿನ್ನ ಕೊಳ್ಳಲು ಹಾತೊರೆಯುವವರು, ಕೆಲಸ ಕೊಡುತ್ತೇನೆ ಎಂದರೆ ಕರೆದಲ್ಲಿಗೆ ಹೋಗುವವರು ನಮ್ಮ ಸುತ್ತಮುತ್ತಲೇ ಇದ್ದಾರೆ. ಮಾತಿಗೆ ಬಂದರೆ, ಅವರೂ ರಾಜಕಾರಣಿಗಳನ್ನು, ಜ್ಯೋತಿಷಿಗಳನ್ನು, ಸ್ವಾಮೀಜಿಗಳನ್ನು, ನಕಲಿ ವೈದ್ಯರನ್ನು, ವಂಚಕರನ್ನು ಬೈಯುವವರೇ. ಆದರೆ, ತಮಗೆ ಲಾಭವಾಗುತ್ತದೆ ಎಂದು ಅನಿಸಿದ ತಕ್ಷಣ ವಿವೇಚನೆ ಮರೆತುಬಿಡುತ್ತಾರೆ. ಕಣ್ಣು ಮುಚ್ಚಿಕೊಂಡು ಹಳ್ಳಕ್ಕೆ ಬೀಳುತ್ತಾರೆ.

ಮತ್ತಷ್ಟು ಓದು »