ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

10
ಮೇ

‘ಕಾಪ’ ಪಂಚಾಯಿತಿ!

– ಪ್ರಶಾಂತ್ ಯಾಳವಾರಮಠ

ಸುನೀತಾ(21) ಮತ್ತು ‘ಜಸ್ಸಾ’ ಉರ್ಫ್ ಜಸ್ಬೀರ್ ಸಿಂಗ(22) ಒಬ್ಬರನ್ನೊಬ್ಬರು ಪ್ರೀತಿಸಿ.. ’ಪ್ರೀತಿ ಮಾಡಬಾರದು ಮಾಡಿದರೆ ಜಗಕೆ ಹೆದರಬಾರದು’ ಅಂದು ಕೊಂಡು ಮನೆಯವರ ಮತ್ತು ಊರಿನವರ ವಿರೋಧದ ನಡುವೆ ಮದುವೆಯಾಗಿದ್ದರು! ತಮ್ಮ ಪುಟ್ಟ ಸಂಸಾರ, ಪುಟ್ಟ ಮನೆ ಮತ್ತೆ ತಮಗೆ ಒಂದು ಪುಟ್ಟ ಮಗುವಿನ ಬರುವಿಗೆ ಕಾಯ್ತಾ ಹಾಯಾಗಿದ್ದರು ಅಂದರೆ ಸುನೀತಾ ೫ ತಿಂಗಳ ಗರ್ಭಿಣಿ!.
ಹೀಗೆ ಎಲ್ಲವೂ ಚೆನ್ನಾಗಿರುವಾಗ ಒಂದು ದಿನ ಮುಂಜಾನೆ ಸುನಿತಾಳ ತಂದೆಯ ಮನೆ ಮುಂದೆ ಅತೀ ಕ್ರೂರತನಕ್ಕೆ ಸಾಕ್ಷಿಯಾಗಿ ಎರಡು ದೇಹಗಳು ಬಿದ್ದಿದ್ದವು! ಅಬ್ಬಾ ಎಂತಹ ರಾಕ್ಷಸರು ಅಂತೀರಾ ಗರ್ಭಿಣಿಯ ಹೊಟ್ಟೆಗೆ ಒದ್ದಿದ್ದರು, ಮುಖಕ್ಕೆ ಗುದ್ದಿದ್ದರು ಮತ್ತು ಎರಡು ದೇಹಗಳಿಗೆ ಇರಿದಿದ್ದರು!

ಮತ್ತಷ್ಟು ಓದು »

6
ಮೇ

ಅಮೇರಿಕಾ ಕಲಿಸಿದ ಪಾಠ…?

 ಅರೆಹೊಳೆ ಸದಾಶಿವ ರಾವ್

ಅಂತ:ಶಕ್ತಿ ಮತ್ತು ಅಂತರಿಕ ದೌರ್ಬಲ್ಯದ ಬಗ್ಗೆ ಒಂದು ಮಾತಿದೆ. ಅಂತ:ಶಕ್ತಿ ಲಾಭದಾಯಕವಾದರೆ, ಅಂತರಿಕ ದೌರ್ಬಲ್ಯ ಅಪಾಯಕಾರಿ. ವಿಶ್ವದ ಉಗ್ರರ ಪಟ್ಟಿಯಲ್ಲಿ ನಂ.೧ ನೆಯ ಸ್ಥಾನದಲ್ಲಿದ್ದವನು ಒಸಾಮಾ ಬಿನ್ ಲ್ಯಾಡೆನ್. ಅಮೇರಿಕಾ ಅವನನ್ನು ಹತ್ತುವರ್ಷಗಳ ಭೇಟೆಯ ನಂತರ ಕೊಂದು ಮುಗಿಸಿದೆ. ಗುಣಕ್ಕೆ ಮತ್ಸರವಿಲ್ಲದಂತೆ ಭಾವಿಸಿದರೆ, ಅಮೆರಿಕಾಕ್ಕೆ ಈ ವಿಷಯದಲ್ಲಿ ಹ್ಯಾಟ್ಸ್ ಆಫ್ ಹೇಳಲೇ ಬೇಕು.
ಹಾಗೇ ಸುಮ್ಮನೇ ಒಮ್ಮೆ ನಮ್ಮ ಪರಿಸ್ಥಿತಿಗೆ ಈ ಘಟನೆಯನ್ನು ಸಮೀಕರಿಸಿಕೊಳ್ಳೋಣ. ಭಾರತದ ಪವಿತ್ರ ಸಂಸತ್ತಿನ ಮೇಲೆ ಉಗ್ರ ಅಫ್ಜಲ್ ದಾಳಿ ಮಾಡಿದ ಮತ್ತು ಸಿಕ್ಕಿ ಬಿದ್ದ. ಮುಂಬೈ ತಾಜ್ ಹೋಟೆಲ್ ಮೇಲಿನ ದಾಳಿಯಲ್ಲಿ ಕಸಬ್ ಸಿಕ್ಕಿ ಬಿದ್ದ. ನಾವು, ಇಬ್ಬರನ್ನೂ ಕಟ Pಟೆಯಲ್ಲಿ ನಿಲ್ಲಿಸಿದೆವು. ಇಬ್ಬರಿಗೂ ಅವರ ಪರವಾಗಿ ವಾದ ಮಾಡಲೆಂದು, ಒಲ್ಲೆ ಒಲ್ಲೆನೆಂದರೂ ವಕೀಲರನ್ನು ಸರಕಾರಿ ಖರ್ಚಿನಲ್ಲಿ ಒದಗಿಸಿಕೊಟ್ಟೆವು. ವಾದ ವಿವಾದಗಳು ನಡೆದುವು. ಎಲ್ಲರೂ ನಿರೀಕ್ಷಿಸಿದ್ದಂತೆ, ನ್ಯಾಯಾಲಯ ನ್ಯಾಯ ನೀಡಿತು. ಜೊತೆಗಿದ್ದ ಕೆಲವರು ಆರೋಪ ಮುಕ್ತರಾದರೆ, ಈ ದಾಳಿಗಳ ರೂವಾರಿಗಳಾದ ಅಫ್ಜಲ್, ಕಸಬ್‌ರಿಗೆ ಮರಣದಂಡನೆಯನ್ನು ನ್ಯಾಯಾಲಯ ಘೋಷಿಸಿತು. ಈಗ ಕಸಬ್ ಕಾನೂನು ಸಮರ ಮುಂದುವರಿಸಿದ್ದರೆ, ಅಫ್ಜಲ್ ದಯಾ ಭಿಕ್ಷೆಯನ್ನುಕೇಳಿಕೊಂಡು, ಕೆಲವು ವರ್ಷಗಳಿಂದ ಜೈಲಿನಲ್ಲಿಯೇ ಇದ್ದಾನೆ. ಅಫ್ಜಲ್‌ನ ಕಥೆ ಏನು ಎಂಬುದಕ್ಕೆ ಯಾವ ಸರಕಾರವೂ ಸ್ಪಷ್ಟ ಉತ್ತರ ನೀಡುತ್ತಿಲ್ಲ. ಎಲ್ಲರೂ ತಮ್ಮ ತಮ್ಮ ‘ರಾಜಕೀಯ’ ಲೆಕ್ಕಾಚಾರದಲ್ಲಿ ಸಿಗಬಹುದಾದ ಲಾಭಕ್ಕಾಗಿ ಕಾದು ಕುಳಿತಿದ್ದಾರೆ.
ಹಲವು ಸಾವಿಗೆ ಕಾರಣರಾದ ಉಗ್ರರಾದ ಅಫ್ಜಲ್ ಮತ್ತು ಕಸಬ್‌ರ ‘ರಕ್ಷಣೆ’ಗಾಗಿ ನಮ್ಮ ಸರಕಾರಗಳು ಕೋಟಿ ಕೋಟಿ ವ್ಯಯಿಸುತ್ತಿವೆ. ಮತ್ತೊಂದರ್ಥದಲ್ಲಿ ನಮ್ಮ ಮೇಲೆ, ನಮ್ಮ ಸ್ವಾಭಿಮಾನದ ಮೇಲೆ ಮತ್ತು ತೀರಾ ನಮ್ಮ ಮಾತ್ರಭೂಮಿಯ ಮೇಲೆ, ದಾಳಿಯ ಮೂಲಕ ಅಕ್ಷಮ್ಯ ಅಪರಾಧವನ್ನು ಮಾಡಿದ ಈ ಉಗ್ರರನ್ನು ನಾವು ‘ರಕ್ಷಿ’ಸುತ್ತಿದ್ದೇವೆ. ಮತ್ತಷ್ಟು ಓದು »

4
ಮೇ

ನಿಮಗೆ ದೇವರ ಅಸ್ಥಿತ್ವದಲ್ಲಿ ನಂಬಿಕೆ ಇದೆಯೇ?

– ಗೋವಿಂದ ರಾವ್

ವಿಜ್ಞಾನ ಮಾರ್ಗ, ವೈಜ್ಞಾನಿಕ ಮನೋಧರ್ಮ, ವೈಜ್ಞಾನಿಕತೆ ಮುಂತಾದ ವಿಷಯಗಳ ಕುರಿತು ನಾನು ಆಯೋಜಿಸುತ್ತಿದ್ದ ತರಬೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದವರು ಕೇಳುತ್ತಿದ್ದ ಸಾಮಾನ್ಯ ಪ್ರಶ್ನೆ ಇದು. ಅಂಥ ಸಂದರ್ಭಗಳಲ್ಲಿ ನಾನು ನೀಡುತ್ತಿದ್ದ ಸ್ಪಷ್ಟ ಉತ್ತರ ಇಂತಿರುತ್ತಿತ್ತು – ‘ಖಂಡಿತ ಇದೆ. ಆಧ್ಯಾತ್ಮಿಕತೆ ಮತ್ತು ವೈಜ್ಞಾನಿಕತೆ ಪರಸ್ಪರ ವೈರುಧ್ಯಗಳಲ್ಲ, ಪೂರಕಗಳು. ವೈಜ್ಞಾನಿಕತೆ ಕಂದಾಚರಗಳನ್ನೂ ಯಾಂತ್ರಿಕ ಮತೀಯ ಆಚರಣೆಗಳನ್ನೂ ವಿರೋಧಿಸುತ್ತದೆಯೇ ವಿನಾ ಪ್ರಾಮಾಣಿಕ ಸತ್ಯಾನ್ವೇಷಣೆಯನ್ನಲ್ಲ, ಪ್ರಾಮಾಣಿಕ ಸತ್ಯಾನ್ವೇಷಕರನ್ನಲ್ಲ. ವೈಜ್ಞಾನಿಕ ಮನೋಧರ್ಮದ ಪ್ರವರ್ತಕರು ಇಂದಿನ ‘ಸ್ವಘೋಷಿತ ಜಗದ್ಗುರುಗಳು’ ‘ಧರ್ಮ’ದ ಹೆಸರಿನಲ್ಲಿ ಪೋಷಿಸುತ್ತಿರುವ ಮೌಢ್ಯವನ್ನೂ ಕಂದಾಚರಣೆಗಳನ್ನೂ ಪ್ರದರ್ಶಿಸುತ್ತಿರುವ ‘ಪವಾಡ’ಗಳನ್ನೂ ವಿರೋಧಿಸುತ್ತಿದ್ದಾರೆಯೇ ವಿನಾ ರಾಮಕೃಷ್ಣ ಪರಮಹಂಸರ, ಸ್ವಾಮಿ ವಿವೇಕಾನಂದರ, ಗೌತಮಬುದ್ಧನ, ಬಸವಣ್ಣನವರ ಆಧ್ಯಾತ್ಮಿಕ ಚಿಂತನೆಗಳನ್ನಲ್ಲ.’

ನಾನು ನಂಬಿರುವ ‘ದೇವರು’ ಯಾವುದು? (ಗಮನಿಸಿ: ಯಾರು? ಅಲ್ಲ). ಹಾಲಿ ಅಸ್ಥಿತ್ವದಲ್ಲಿ ಇರುವ ವಿಶ್ವ ಯಾವುದರಿಂದ ಮೂಡಿ ಬಂದಿತೋ ಅದೇ ನಾನು ನಂಬುವ ‘ದೇವರು’. ನಾನು ನೋಡದೇ ಇದ್ದರೂ ಇದೆಯೆಯೆಂದು ನಂಬಿರುವ ‘ದೇವರ’ ಕಿರು ಪರಿಚಯ ಈಗ ಮಾಡಿಕೊಡುತ್ತೇನೆ. ಈ ದೇವರ ವೈಜ್ಞಾನಿಕ ಹೆಸರು ‘ವಿಚಿತ್ರತೆ’. ‘ವೈಚಿತ್ರ್ಯ’ ಎಂದು ಕರೆದರೂ ಆದೀತು. ‘Singularity’ ಎಂಬ ಇಂಗ್ಲಿಷ್ ಪದದ ಭಾಷಾಂತರ ಇದು (ನೋಡಿ: ಮೈಸೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್-ಕನ್ನಡ ನಿಘಂಟು). ಈ ದೇವರನ್ನು ಆವಿಷ್ಕರಿಸಿದವರು ವಿಶ್ವವಿಜ್ಞಾನಿಗಳು (Cosmologists).

ಮತ್ತಷ್ಟು ಓದು »

29
ಏಪ್ರಿಲ್

ಸಂಪಾದಕೀಯ ಅನ್ನೋ ಮೊಟ್ಟೆಯ ಮೇಲೆ ಒಂದು ಪ್ರೀತಿಯ ಕುಟುಕು…

– ಮಹೇಶ್ ಪ್ರಸಾದ್ ನೀರ್ಕಜೆ

ಸಂಪಾದಕೀಯದಲ್ಲಿ ಪ್ರಕಟವಾದ ಬ್ಲಾಗ್ ಬರಹಕ್ಕೆ ಪ್ರತಿಯಾಗಿ ನನ್ನ ಅನಿಸಿಕೆ ಇದು.

ಸಾಯಿ ಬಾಬಾರ ಸುತ್ತ ಇರುವ ಪವಾಡಗಳ ಬಗೆಗಿನ ವಿವಾದಗಳ ಬಗ್ಗೆ ಸಂಪಾದಕೀಯ ಈ ಹಿಂದೆ ಒಂದೆರಡು ಲೇಖನಗಳಲ್ಲಿ ಬರೆದಿತ್ತು (ಅದರಲ್ಲಿ ಒಂದು ಸನ್ಮಾರ್ಗ ಎನ್ನುವ ಪತ್ರಿಕೆಯಲ್ಲಿ ಪ್ರಕಟವಾದ ಸಂಪಾದಕೀಯ ಬರಹ). ಅವುಗಳಲ್ಲೊಂದು ಲೇಖನಕ್ಕೆ ಬಂದ ಪ್ರತಿಕ್ರಿಯೆಯೊಂದಕ್ಕೆ  ಪ್ರತಿಯಾಗಿ ಸಂಪಾದಕೀಯ ಬರೆದ ಸ್ಪಷ್ಟೀಕರಣ ರೂಪದ ಬರಹವೇ ನಾನು ಮೇಲೆ ನೀಡಿದ ಬ್ಲಾಗ್ ಬರಹ. ಈ ಬ್ಲಾಗ್ ಬರಹದ ಸಾರಾಂಶ ಏನೆಂದರೆ ಸಾಯಿ ಬಾಬಾ ಮಾಡಿದ ಸಮಾಜ ಮುಖೀ ಕೆಲಸಗಳ ಬಗ್ಗೆ ಮೆಚ್ಚುಗೆಯಿದ್ದರೂ ಮೂಲತಹ ಬಾಬಾ ನಡೆದ ದಾರಿ ಪವಾಡಗಳನ್ನೊಳಗೊಂಡ ದಾರಿಯಾಗಿದ್ದು ಅದು ಜನರನ್ನು ದಿಕ್ಕುತಪ್ಪಿಸುವ, ಮೌಢ್ಯತೆಗೆ ನೂಕುವ ಮೋಸದ, ಸುಳ್ಳಿನ ದಾರಿಯಾಗಿದೆ, ಆದ್ದರಿಂದ ನಮಗೆ ಅಂತಹ ಸುಳ್ಳಿನ ದಾರಿ ಬೇಕೋ ಅಥವಾ ಬುಧ್ಧ ಹಾಕಿಕೊಟ್ಟ ಸತ್ಯದ ದಾರಿ ಬೇಕೋ ಎಂಬ ಜಿಜ್ಞಾಸೆ. ಕೊನೆಯಲ್ಲಿ ಸಂಪಾದಕೀಯ ಹೀಗೆ ಹೇಳುತ್ತದೆ – “ಬುದ್ಧನ ಸತ್ಯ ಮಾರ್ಗವೇ ನಿಜವಾದ ಬದುಕಿನ ತಳಪಾಯ. ಅದರ ಮೇಲೇ ನಮ್ಮ ಬದುಕು ಕಟ್ಟಿಕೊಳ್ಳುವಂತಾಗಬೇಕು” ಮತ್ತು “ನಾವು ಸತ್ಯದ ಮಾರ್ಗದಲ್ಲಿ ಊರ್ಧ್ವಮುಖಿಗಳಾಗಬೇಕೇ ಹೊರತು ಸುಳ್ಳಿನ ಮಾರ್ಗದಲ್ಲಿ ಅಧೋಮುಖಿಗಳಾಗಬಾರದು ಅಲ್ಲವೇ?”. ಇದರ ಬಗ್ಗೆ ಒಂದು ಚಿಂತನೆ ನಡೆಸುವ ಉದ್ದೇಶ ಈ ಲೇಖನದ್ದು.

ಮತ್ತಷ್ಟು ಓದು »

27
ಏಪ್ರಿಲ್

‘ಸತ್ಯ ಸಾಯಿ’ ಮತ್ತು ‘ಸತ್ಯ ಸಾಯಿಸುವ’ ಮಾಧ್ಯಮಗಳು

ಅರೆಹೊಳೆ ಸದಾಶಿವರಾಯರು

ಫೇಸ್ ಬುಕ್‌ನಲ್ಲಿ ಒಂದು ಸಾಲು ಓದಿದೆ. ‘ಮ್ಯಾಜಿಷಿಯನ್’ ಸತ್ಯ ಸಾಯಿಬಾಬಾ ಇನ್ನಿಲ್ಲ ಎಂದು ಒಬ್ಬರು ವ್ಯಂಗ್ಯವಾಗಿ ಬರೆದುಕೊಂಡಿದ್ದರು. ಮುಂದುವರಿಯುತ್ತಾ, ಈ ಸತ್ಯಸಾಯಿಬಾಬಾ ಎಂಬ ಜಾದೂಗಾರನನ್ನು ಕೇವಲ ಮಾಧ್ಯಮಗಳು ಈ ಮಟ್ಟಿಗೆ ದೇವಮಾನವನನ್ನಾಗಿ ಮಾಡಿವೆ ಎಂದೂ ಸೇರಿಸಿಕೊಂಡಿದ್ದರು.
ಮೊದಲಾಗಿ ಮಾನವ ಎಂದರೆ ಏನು ಎಂಬತ್ತ ಗಮನ ಹರಿಸಬೇಕು. ಅದಕ್ಕೂ ಮೊದಲಾಗಿ ಒಂದು ವಿಷಯ ಸ್ಪಷ್ಟೀಕರಣದೊಂದಿಗೇ ಲೇಖನ ಆರಂಭಿಸಬೇಕು. ಅದೆಂದರೆ ನಾನು ಸಾಯಿ ಬಾಬಾ ಅವರ ಭಕ್ತನೂ ಅಲ್ಲ ಮತ್ತು ಅವರ ಪವಾಡಗಳ ಕುರಿತು ಪರ-ವಿರೋಧ ಎಂದು ಹೇಳಿಕೊಳ್ಳುವಷ್ಟು, ಜ್ಞಾನಿಯೂ ಅಲ್ಲ. ಆ ಮಟ್ಟಿಗೆ ಈ  ವಿಷಯದಲ್ಲಿ ನಾನು ತಟಸ್ಥ. ಇನ್ನು ಮಾನವ ಎಂದರೆ…..!. ಜೀವಂತ ಇರುವ ಎಲ್ಲವೂ ಮಾನವನಾಗುವುದಿಲ್ಲ ಅಥವಾ ಮನುಷ್ಯಗರ್ಭದಲ್ಲಿ ಜನಿಸಿದ ಎಲ್ಲರೂ ಮಾನವನಂತೆ ಬದುಕುವುದಿಲ್ಲ. ಪರಸ್ಪರರನ್ನು ಪ್ರೀತಿಸುತ್ತಾ ಸಾಧ್ಯವಾದಷ್ಟೂ ಜನರ ಬಳಿ, ಜನರನ್ನು ಗೌರವಿಸುತ್ತಾ ಬದುಕುವುದು ಮಾನವೀಯ ಧರ್ಮ ಎನಿಸುತ್ತದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಜನಸೇವೆಯೇ ಜನಾರ್ದನ ಸೇವೆ ಎಂದುಕೊಂಡು, ಅಕ್ಷರಶ: ಅದನ್ನೇ ಪಾಲಿಸಿದರೆ ಆತ ಜನರ ಪಾಲಿಗೆ ಜನಾರ್ದನನಾಗುತ್ತಾನೆ;ದೇವತ್ವವನ್ನು ಪಡೆಯುತ್ತಾನೆ-ಸಾಯಿಬಾಬಾ ವಿಷಯದಲ್ಲಿಯೂ ಅದೇ ಆಗಿದೆ. ಮತ್ತಷ್ಟು ಓದು »

25
ಏಪ್ರಿಲ್

ಹಿಂದಿ ಬೇಕು …. ಕೂಪಮಂಡೂಕತನ ಬೇಡ……..

*ಅನಿರುದ್ಧ ಕುಮಟ

ಚಿತ್ರಕೃಪೆ: ಗೂಗಲ್

ಮಕ್ಕಳ ಜಗಳದಲ್ಲಿ ಅಮ್ಮ ಬಡಪಾಯಿಯಾದಳು ಅಂತ ಒಂದು ಗಾದೆ ಮಾತು ಇದೆಯಾ? ಇಲ್ಲದಿರಲೂಬಹುದು. ಆದರೆ ನಿಮ್ಮ ಕನ್ನಡದ ಜಗಳ, ಆ ನೀರಿನ ಜಗಳ, ಆ ಧಾರ್ಮಿಕ ಕಲಹ ಇವನ್ನೆಲ್ಲ ನೋಡಿದಾಗ ನನಗೆನಿಸಿದ್ದು ಅಮ್ಮ ಬಡವಾಗಿದ್ದಾಳೆ ಅಂತ. ಅಲ್ಲಾರಿ ನೀವು ಪಕ್ಕದ ಮರಾಠಿಗರನ್ನು ಕಂಡರೆ ಬೆಂಕಿಕಾರುತ್ತಿರಿ. ಪಾಪ ಆ ತಮಿಳರು ಇಲ್ಲಿ ಬೆಳೆದರೆ ಕರಬುತ್ತೀರಿ. ಅಥವಾ ನೀರಿನ ವಿಷಯ ಹಿಡಿದುಕೊಂಡು ಸುನಾಮಿಯಂತೆ ಜಗಳ ಮಾಡುತ್ತೀರಿ…ಥಕ್ ನಿಮ್ಮ ಇಂತಹ ಜಗಳದಲ್ಲಿ ಬಡವಾದದ್ದು ಯಾರು. ಭಾರತವಲ್ಲವೇ. ಇಡೀ ಭಾರತದ ಬಗ್ಗೆ ಯೋಚಿಸಬೇಕಾದ ನಾವೆಲ್ಲ, ದಾಯಾದಿಗಳ ತರಹ ಯಾಕೆ ಕಿತ್ತಾಡಿಕೊಳ್ಳಬೇಕು? ನಿಮಗೆ ನಿಮ್ಮ ಬಗ್ಗೆಯೇ ಅಸಹ್ಯ ಎನಿಸುವುದಿಲ್ಲವೇ?

ಹಿಂದಿ ಜ್ವರಕ್ಕೆ ತುತ್ತಾದ ವಿಜಯ ಕರ್ನಾಟಕ ಅನ್ನೋ ಹೆಡ್ ಲೈನ್ ನಲ್ಲಿ ಪ್ರಕಟವಾದ ಲೇಖನವನ್ನೇ ನೋಡಿ. ಪತ್ರಿಕೆಯಲ್ಲಿ ವಿದೇಶಿಯರ ಹಿಂದಿ ಮೋಹ ಅನ್ನೋ ಲೇಖನ ಪ್ರಕಟಗೊಂಡರೆ ಸಾಕು. ಜಗತ್ತಿನಲ್ಲಿರುವ ಸಮಸ್ತ ಕನ್ನಡ ಪುಸ್ತಕಗಳೆಲ್ಲ ಬೆಂಕಿಯಲ್ಲಿ ಉರಿದು ಹೋಯ್ತು ಅನ್ನೋ ತರಹ ಯಾಕೆ ಉರಿದು ಹೋಗ್ತಿರಿ. ಅರೇ ಅದೊಂದು ಪತ್ರಿಕೆ. ಅದರಲ್ಲಿ ಭಿನ್ನ, ವಿಭಿನ್ನ ವಿಚಾರಧಾರೆಯ ಲೇಖನಗಳು ಪ್ರಕಟಗೊಳ್ಳುತ್ತವೆ. ಅವರೇನೂ ಹಿಂದಿಯಲ್ಲಿ ಬರೆದಿಲ್ಲ ನನಗಂತೂ ಕನ್ನಡಿಗರಲ್ಲಿ ಹಿಂದಿ ಕಲಿಸುವ ಒಂದು ಪ್ರಯತ್ನದಂತೆ ಆ ಲೇಖನ ಕಾಣಲೇ ಇಲ್ಲ. ನನ್ನ ಪ್ರಕಾರ ಕನ್ನಡಿಗರು ಮತ್ತಷ್ಟು ಓದು »

21
ಏಪ್ರಿಲ್

ಪೂರ್ವಾವಲೋಕನ : ಒಂದು ಸಂವಾದ

– CSLC

ಕನ್ನಡದ ವಿದ್ವಾಂಸ ಜಗತ್ತಿಲ್ಲಿ ನಮ್ಮ ಸಮಾಜದ ಮತ್ತು ಸಮಾಜವಿಜ್ಞಾನದ ಕುರಿತು ವೈಜ್ಞಾನಿಕವಾಗಿ ಹೆಚ್ಚು ಚರ್ಚೆಯಾಗಬೇಕೆಂಬ ಉದ್ದೇಶದಿಂದ ಬಾಲಗಂಗಾಧರರ ಹಲವಾರು ಆಂಗ್ಲ ಭಾಷೆಯ ಲೇಖನಗಳನ್ನು ಕನ್ನಡಕ್ಕೆ ಅನುವಾದಿಸಿಲಾದ ’ಪೂರ್ವಾವಲೋಕನ’ ಕೃತಿಯನ್ನು (ಅಭಿನವ ಪ್ರಕಾಶನ) ಇತ್ತೀಚೆಗೆ ಪ್ರಕಟಿಸಲಾಗಿದೆ. ಈ ಪುಸ್ತಕದಲ್ಲಿರುವ ಕೆಲವಾರು ಲೇಖನಗಳ ಆಧಾರದ ಮೇಲೆ “ಪೂರ್ವಾವಲೋಕನ : ಒಂದು ಸಂವಾದ”  ಒಂದು ದಿನ ಕಾರ್ಯಾಗಾರವನ್ನು ಇದೇ ತಿಂಗಳ ೨೪ ರಂದು ಸರ್ಕಾರಿ ಕಲಾ  ಕಾಲೇಜು, ಕೆ.ಆರ‍್. ಸರ್ಕಲ್ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ನಾವು ಬರೆದ ಲೇಖನಗಳಿಗೆ ಹಾಗೂ ಇತರ ಗೆಳೆಯರ ಲೇಖನಗಳಿಗೆ ಪ್ರತಿಕ್ರಿಯೆ ಬರೆದಂತಹ ಸಂದರ್ಭದಲ್ಲಿ ಆಸಕ್ತಿದಾಯಕವಾಗಿ ಚರ್ಚೆಗೆ ಅನುವು ಮಾಡಿಕೊಡಲಾಗಿದೆ. ಆದಕಾರಣ ಇದು ಕೇವಲ ಅಂತರ್ಜಾಲದಲ್ಲಿ ನಡೆಯುವ ಚರ್ಚೆಗೆ ಸೀಮಿತವಾಗದೆ, ನೇರವಾಗಿ ಮುಖಾಮುಖಿಯಾಗಿ ಚರ್ಚಿಸಲು ಒಂದು ಸುಸಂದರ್ಭ ಎಂದು ತಿಳಿದು ತಮ್ಮೆಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ. ಕಾರ್ಯಾಗಾರಕ್ಕೆ ಬರಲು ಯಾವುದೇ ಪ್ರವೇಶ ಶುಲ್ಕವಿಲ್ಲ, ನಿಮ್ಮ ಆಸಕ್ತಿಯೇ ಶುಲ್ಕವಾಗಿದೆ. ಹಾಗೂ ಕೆಳಕಂಡ ಲೇಖನಗಳನ್ನು ಓದಿಕೊಂಡು ಬಂದು ಚರ್ಚಿಸಬಹುದು.
ರಾಜಾರಾಮ ಹೆಗ್ಡೆಯವರು “ Why Understand Western Culture” which is translated as ” ಪಾಶ್ಚಾತ್ಯ ಸಂಸ್ಕತಿಯನ್ನು ಯಾಕೆ ಅರ್ಥ ಮಾಡಿಕೊಳ್ಳಬೇಕು? (ಪುಟ ಸಂಖ್ಯೆ ೧೦೦ – ೧೧೫  ಪೂರ್ವಾವಲೋಕನ) ಲೇಖನದ ಕುರಿತು ಚರ್ಚಿಸಲಿದ್ದಾರೆ.
ಪ್ರೊ. ಜಿ ಸಿವರಾಮಕ್ರಷ್ಣನ್  ” To Follow Our fore Fathers…” which is translated as “ನಮ್ಮ ಪೂರ್ವಜರನ್ನು ಅನುಸರಿಸಿ…” ಸಂಪ್ರದಾಯದ ಸ್ವರೂಪ” (ಪುಟ ಸಂಖ್ಯೆ ೮೫-೧೦೦  ಪೂರ್ವಾವಲೋಕನ) ಲೇಖನದ ಕುರಿತು ಚರ್ಚಿಸಲಿದ್ದಾರೆ.
14
ಏಪ್ರಿಲ್

ಅಗೋಚರ….!

– ಜಿ.ವಿ ಜಯಶ್ರೀ

ಹೆಚ್ಚಾಗಿ ಪವಾಡಗಳು… ಪುರುಷರು… ಮಾಯಾ-ಮಂತ್ರ, ಭವಿಷ್ಯ ಮನುಷ್ಯರಿಗೆ ಇಷ್ಟ. ಯಾವ ಭಾಷೆಯಲ್ಲಿ ನೋಡಿದರು ಇಂತಹ ವಿಷಯಗಳಿಗೆ ಸಂಬಂಧಿಸಿದ ಕಥೆಗಳು , ಧಾರಾವಾಹಿಗಳು ಇದ್ದೆ ಇರುತ್ತದೆ. ಅದೊಂತರ ಸೀರಿಯಸ್ ವಿಷಯದ ಚರ್ಚೆ ಮಧ್ಯೆ ಸಣ್ಣ ಜಾಹಿರಾತು ಇದ್ದಂತೆ. ಬೇಕಾದವರು ನೋಡಬಹುದು ಬೇಡದೆ ಇದ್ದವರು ಬಿಸಾಡ ಬಹುದು.

ಹೆಚ್ಚು ಜನಪ್ರಿಯ ವ್ಯಕ್ತಿಗಳಲ್ಲಿ ಸಾಧು ಸಂತರು, ಬಾಬಗಳು ಸೇರುತ್ತಾರೆ. ಕಳೆದವಾರ ಅಣ್ಣ ಹಜಾರೆ ಅವರ ವಿಷಯದ ಜೊತೆಗೆ ಹೆಚ್ಚು ಚಾಲ್ತಿಯಲ್ಲಿ ಕಂಡ ಸಂಗತಿ ಪುಟ್ಟಪರ್ತಿ ಸಾಯಿ ಬಾಬ. ಅತ್ಯಂತ ಜನಪ್ರಿಯ ಬಾಬ ಅವರು, ಜೊತೆಗೆ ಅತ್ಯಂತ ವಿವಾದಿತ ಬಾಬ.

ಬಹುಸಂಖ್ಯಾತ ಉತ್ತರ ಭಾರತೀಯರು ಅವರ ಮನೆಯಲ್ಲಿ  ಇರುವ ಒಂದು ಚಂಬು ಪಕ್ಕದ ಮನೆಗೆ ಕೊಡಬೇಕಾದ್ರೂ ಸಾಯಿ ಬಾಬ ಅನುಮತಿ ಕೇಳ್ತಾರೆ ,ತಮಾಷೆ ಅಲ್ಲ ಕಣ್ರೀ ಅಷ್ಟೊಂದು ನಂಬಿಕೆ .ಏನೇ ಸಂಗತಿಗಳು ಇರಲಿ ಅವರು ಅತ್ಯಂತ ಹೆಚ್ಚು ಗಮನ ಸೆಳೆಯುವುದು ಸಮಾಜಮುಖಿ ಕೆಲಸಗಳಿಂದ.ಭಜನ್ ಮಾಡುವಾಗ ಸದಾ ಶಾಂತ ಸ್ಥಿತಿಯಲ್ಲಿರುವ ವದನ, ಆ ಮೌನ ಎಲ್ಲವೂ ಹೆಚ್ಚು ಆಕರ್ಷಣೆಯ  ಅಂಶ. ಅವರ ಭಜನ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರು ಸಂತೋಷದಿಂದ ಹೊರ ಬರುತ್ತಾರೆ.

ಮತ್ತಷ್ಟು ಓದು »

4
ಏಪ್ರಿಲ್

ಕನ್ನಡಕ್ಕಿಂತ ತಮಿಳು ಯಾವುದರಲ್ಲಿ ಮುಂದಿದೆ?

ಅಜಕ್ಕಳ ಗಿರೀಶ್ ಭಟ್

ಕನ್ನಡದ ಬಗ್ಗೆ ಚರ್ಚೆಯಾಗುತ್ತಿರುವುದು ಸಂತೋಷ. ಬನವಾಸಿ ಬಳಗ ಹಾಗೂ ಶುಭಶ್ರೀಯವರ ಲೇಖನಗಳನ್ನು ಓದಿದೆ. ಈಗಾಗಲೇ ನಾನು ಹಿಂದಿನ ಒಂದು ಪ್ರತಿಕ್ರಿಯೆಯಲ್ಲಿ ಬರೆದಿರುವಂತೆ, ಅಲ್ಲಿ ಎತ್ತಲಾಗಿರುವ ಹಲವು ಅಂಶಗಳು ನನ್ನ ಪುಸ್ತಕದಲ್ಲಿ ಪ್ರಸ್ತಾಪವಾಗಿವೆ. ಆದರೂ ಕೆಲವು ನಿರ್ದಿಷ್ಟ ಪ್ರಶ್ನೆಗಳನ್ನು ನಾನು ಇಲ್ಲಿ ಮತ್ತೆ ಎತ್ತಿಕೊಳ್ಳಬಯಸುತ್ತೇನೆ. ಶಂಕರ ಭಟ್ಟರ ಸಿದ್ಧಾಂತಗಳ ಬಗ್ಗೆ ನಾನು ಬರೆದುದನ್ನು ವೈಜ್ಞಾನಿಕವಲ್ಲ, ವೈಯಕ್ತಿಕ ದಾಳಿ ಅಂತೆಲ್ಲ ಕರೆಯಲಾಗಿದೆ. ವಾದದ ವಿಷಯಗಳ ಬಗ್ಗೆ ಹೇಳುವುದಕ್ಕಿಂತ, ಶಂಕರ ಭಟ್ಟರ ವಾದಗಳ ಕುರಿತು ನಾನು ಬರೆದ ಹೊತ್ತಗೆಯ ಶೀರ್ಷಿಕೆಯ ಬಗ್ಗೆಯೇ ಹೆಚ್ಚು ಒತ್ತು ಕೊಟ್ಟು ಬರೆದಿದ್ದಾರೆ. ಇರಲಿ. ಇದು ಅಷ್ಟು ಮುಖ್ಯ ಅಂತ ನನಗೆ ಅನ್ನಿಸದಿದ್ದರೂ ಈ ಶೀರ್ಷಿಕೆಯ ಬಗ್ಗೆ ಆರೋಪವನ್ನು ಮತ್ತೆ ಮತ್ತೆ ಮಾಡಲಾಗಿರುವುದರಿಂದ ಸಮರ್ಥನೆ ನೀಡುವೆ. ಮೊದಲೇ ಸ್ಪಷ್ಟಪಡಿಸುತ್ತೇನೆ,ನನಗೆ ಆ ಹಿರಿಯ ಭಾಷಾವಿದ್ವಾಂಸರ ಬಗ್ಗೆ ತುಂಬ ಗೌರವ ಉಂಟು. ವೈಯಕ್ತಿಕ ದ್ವೇಷವಾಗಲೀ ಅಸೂಯೆಯಾಗಲೀ ಇಲ್ಲ ! ಇನ್ನು, ಶೀರ್ಷಿಕೆಯಲ್ಲಿ ಅವರ ಹೆಸರು ಯಾಕೆ ತರಬೇಕಿತ್ತು? ಅವರು ಏಕಾಂಗಿ ಎಂದು ಬಿಂಬಿಸುವ ಯತ್ನವೇ? ಇತ್ಯಾದಿ ಪ್ರಶ್ನೆಗಳೂ ಬಂದಿವೆ.
ಮೊದಲನೆಯದಾಗಿ ತಾವು ಹೇಳಿದ ಹಾಗೆ ವ್ಯಾಪಕವಾಗಿ ಹೊತ್ತಗೆಗಳನ್ನು ಬರೆಯುತ್ತಿರುವವರು ಅವರೊಬ್ಬರೇ. ಅವರನ್ನು ಬೆಂಬಲಿಸಿದ ವಿವಿಧ ವಿ.ವಿ.ಗಳ ಮುಖ್ಯಸ್ಥರು ಅಥವಾ ಇನ್ನಾರಾದರೂ (ಶುಭಶ್ರೀಯವರೂ ಸೇರಿದಂತೆ) ಬರೆಯಲಾರಂಭಿಸಿಲ್ಲ. ಇನ್ನು ಆರಂಭಿಸಲೂಬಹುದು. ಆರಂಭಿಸಿದರೆ ನನ್ನ ಆಕ್ಷೇಪವಿಲ್ಲ, ದುಖವೂ ಇಲ್ಲ. ಯಾರಾದರೂ ಬರೆದರೆ ನಾನು ಓದುವುದಿಲ್ಲ ಅಂತ ಶಪಥ ಕೂಡ ಮಾಡೊಲ್ಲ. ಯಾಕೆಂದರೆ ಓದದಿದ್ದರೆ ಓದದವರಿಗೆ ನಷ್ಟ ಅಂತ ನನಗೊತ್ತು. ಒಟ್ಟಿನಲ್ಲಿ ಈಗ ಸದ್ಯಕ್ಕೆ ನಿಜವಾಗಿ ಕತ್ತರಿ ಪ್ರಯೋಗ ಮಾಡಿದವರು ಅವರೊಬ್ಬರೇ.
1
ಏಪ್ರಿಲ್

ಸುದ್ದಿ ‘ಮೋಹ’ದ ಪತ್ರಿಕೆಗಳ ಬಗ್ಗೆ…..

ಅರೆಹೊಳೆ ಸದಾಶಿವರಾಯರು

ಕಟೀಲು ದೇವಳಕ್ಕೆ ಶಿಲ್ಪಾ ಶೆಟ್ಟಿ ಬಂದರು!. ಇದು ನಮ್ಮ ಪತ್ರಿಕೆಗಳ ಮಟ್ಟಿಗೆ ಬಹು ಮುಖ್ಯ ಸುದ್ದಿಯಾಯಿತು! ಆಶ್ಚರ್ಯವೆಂದರೆ, ನಮ್ಮ ಪತ್ರಿಕೆಗಳು ಇದನ್ನು ಮುಖ ಪುಟದಲ್ಲಿ ಪ್ರಕಟಿಸಿ ಕೃತಾರ್ಥವಾದುವು. ಆಕೆ ತನ್ನದೇ ಹುಟ್ಟೂರಿಗೆ ಬಂದದ್ದು, ತನ್ನ ಅಜ್ಜಿಮನೆಯಲ್ಲಿ ಓಡಾಡಿದ್ದು, ಕೋಳಿ ಸುಕ್ಕಾ ತಿಂದದ್ದು…..ಎಲ್ಲವು ಸುದ್ದಿಯಾಯಿತು. ಮತ್ತೂ ಒಂದು ವಿಶೇಷ ಸುದ್ದಿ ಎಂದರೆ ಕಟೀಲು ಕ್ಷೇತ್ರವೇ ಈಕೆಯ ಭೇಟಿಯಿಂದ ಪವಿತ್ರವಾಯಿತೇನೋ ಎಂಬಷ್ಟೂ ಸುದ್ದಿಯನ್ನು ಆಕೆ ವಿಮಾನದಲ್ಲಿ ಬಂದಿಳಿದಿದ್ದರಿಂದ, ಮರಳಿ ವಿಮಾನವೇರುವ ತನಕ ಬರೆಯಲಾಯಿತು. ಎಲ್ಲಾ ಪತ್ರಿಕೆಗಳ ಒಬ್ಬೊಬ್ಬ ಪತ್ರಕರ್ತನೂ ಅಷ್ಟು ಹೊತ್ತಿನ ಮಟ್ಟಿಗೆ ಆಕೆಯ ಸಂಸಾರದ ಹಿಂದಿದ್ದ.!

ಈ ಕ್ಷಣದಲ್ಲಿ ನನಗೊಂದು ವಿಷಯ ನೆನಪಿಗೆ ಬರುತ್ತದೆ. ಇತ್ತೀಚೆಗೆ ನಾವು ಒಂದು ಸಮ್ಮೇಳನವನ್ನು ಆಯೋಜಿಸಿದ್ದೆವು. ಅದರ ಉದ್ಘಾಟನಾ ಸಮಾರಂಭದ ವರದಿ ಸವಿಸ್ತಾರವಾಗಿ ಪ್ರಕಟವಾಯಿತು. ಉದ್ಘಾಟನೆ ಮುಗಿಯುತ್ತಲೇ, ಒಂದು ಮಗು ವಾಮಾಚಾರಕ್ಕೆ ಬಲಿಯಾದ ಘಟನೆ ಬಹಿರಂಗ ಗೊಂಡಿತು. ಅದೇ ಸಂಜೆ ನಮ್ಮ ಸಮ್ಮೇಳನದ ಸಮಾರೋಪವೂ ನಡೆಯುತ್ತಿತ್ತು. ಆದರೆ ಸಂಜೆ ಒಬ್ಬನೇ ಒಬ್ಬ ಪತ್ರಕರ್ತನೂ ಅಲ್ಲಿರಲಿಲ್ಲ. ಅಲ್ಲಿನ ಯಾವ ವರದಿಯೂ ದಾಖಲಾಗಲಿಲ್ಲ.  ಸಮ್ಮೇಳನದಲ್ಲಿಯೇ ತಲ್ಲೀನರಾಗಿದ್ದ ನಮಗೆ ಇದೇಕೆ ಎಂದು ಆಶ್ಚರ್ಯವಾಯಿತು. ನಂತರ,   ನಮಗೆ ಆ ವಾಮಾಚಾರದ ಘಟನೆಯಿಂದ ಸಂಭ್ರಮದ ಘಟನೆಯನ್ನೂ ಮರೆಯುವಷ್ಟು ಘಾಸಿಯಾಯಿತು-ಖೇದವಾಯಿತು. ಮತ್ತಷ್ಟು ಓದು »