ನಮ್ಮೂರ ಹಬ್ಬ : ತಿಂಗಳು ಮಾಮನ ಹಬ್ಬ
– ಶಾಂತಮ್ಮ ಕೋಡಯ್ಯ
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದ ಲೇಖನ
ಪೀಠಿಕೆ: ಹಬ್ಬಗಳು ಗ್ರಾಮದ ಅವಿಭಾಜ್ಯ ಅಂಗಗಳು ಹಳ್ಳಿಗರಿಗೆ ಹಬ್ಬಗಳೇ ಜೀವಾಳ. ಹಬ್ಬಗಳೇ ಮಾದ್ಯಮಗಳು, ಮನೋರಂಜನೆಗಳು.. ನಮ್ಮ ಪೂರ್ವಜರಿಂದ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ಪರಿಚಯಿಸುವ ನಮ್ಮ ಜೀವನದಲ್ಲಿ ಸುಂದರ ಅನುಭವಗಳು ಮತ್ತು ಬಾಲ್ಯ, ಯೌವನ, ಮುಪ್ಪು, ಪ್ರೇಮ ಮುಂತಾದವುಗಳ ಸಂಗಮ. ಹಬ್ಬಗಳು ಹಳ್ಳಿಗರ ಪ್ರತಿಷ್ಠೆ ಕೂಡ ಹೌದು. ಎಲ್ಲ ಜಾತಿಯವರು ಬೆರೆತು, ಭೇದ ಮರೆತು ಒಂದಾಗುವ ಪರಿ ಅದ್ಭುತ. ನಮ್ಮ ಹಿರಿಯರ ಹಾಡು, ಹಸೆ, ಬೈಗುಳ, ಬೆಡಗು, ಬಿನ್ನಾಣ, ಕಾರ್ಯ ವೈಖರಿ ಎಲ್ಲ ಸಂಸ್ಕೃತಿಯನ್ನ ಹೊಂದಿ ಬೆಳೆಯಲು ಸಹಾಕಾರಿ ಈ ತಿಂಗಳಮಾಮನ ಹಬ್ಬ. ಮತ್ತಷ್ಟು ಓದು 
ಬಾಲಗಂಗಾಧರ ತಿಲಕರೆಂದರೆ ಸ್ವಾತಂತ್ರ್ಯ ಹೋರಾಟಗಾರ ಮಾತ್ರವಲ್ಲ ಧಾರ್ಮಿಕ ಸಾಮರಸ್ಯ ಮೂಡಿಸಿದ ಧೀಮಂತನಾಯಕ.
ಶಿವಾನಂದ ಶಿವಲಿಂಗ ಸೈದಾಪೂರ
ಬಾಲಗಂಗಾಧರ ತಿಲಕರೆಂದರೆ ಭಾರತದ ಸಂಪೂರ್ಣ ಸ್ವಾತಂತ್ರ್ಯ ಚಳುವಳಿಯ ಮೊದಲ ನಾಯಕ. “ಸ್ವರಾಜ್ಯವೇ ನನ್ನ ಜನ್ಮಸಿದ್ಧ ಹಕ್ಕು” ಎಂದು ಬ್ರಿಟನಿಯರ ವಿರುದ್ಧ ಘರ್ಜಿಸಿದ ಪ್ರಖರ ಹಿಂದೂ ರಾಷ್ಟ್ರವಾದಿ. ಧಾರ್ಮಿಕ ಹಬ್ಬಗಳಾದ ಶಿವಾಜಿ, ಸಾರ್ವಜನಿಕ ಗಣೇಶ ಉತ್ಸವಗಳ ಜನಕ. ಭಾರತೀಯರಲ್ಲಿ ಧಾರ್ಮಿಕ ಸಾಮರಸ್ಯ ಮೂಡಿಸಿ, ಅವರನ್ನು ಸ್ವಾತಂತ್ರ್ಯ ಹೋರಾಟಕ್ಕೆ ಅಣಿಗೊಳಿಸಿದ ಏಕೈಕ ಜನನಾಯಕ. ಸಮಸ್ತ ಭಾರತೀಯರ ಬಾಯಿಂದ “ಲೋಕಮಾನ್ಯ”ರೆಂದು ಕರೆಸಿಕೊಂಡವರು. ಮತ್ತಷ್ಟು ಓದು 
ನಮ್ಮೂರ ಹಬ್ಬ – ಕೆಡ್ಡಸ (ಭೂಮಿ ಋತುಮತಿಯಾಗುವುದು)
– ಭರತೇಶ ಅಲಸಂಡೆಮಜಲು
ಪುತ್ತೂರು ತಾಲೂಕು, ದಕ್ಷಿಣ ಕನ್ನಡ
ತುಳುನಾಡು ಅಂದ ಕೂಡಲೇ ಅಲ್ಲಿನ ಆಚರಣೆ, ಕ್ರಮ, ನಿಲುವುಗಳಲ್ಲಿ ಒಂದಷ್ಟು ಬಿನ್ನ ವಿಶೇಷತೆಯಿಂದಲೇ ಕೂಡಿರುತ್ತದೆ. ಇಲ್ಲಿ ಪಂಚಭೂತಗಳನ್ನು ವಿವಿಧ ರೀತಿಯಿಂದ ವಿಶೇಷವಾಗಿ ಆಚರಿಸುವುದು ವಾಡಿಕೆ. ಹೌದು, ಇಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ ಹಿಂದಿನಿಂದಲೂ ಅಕ್ಕನೇ ಮನೆಯೊಡತಿ, ಆಳಿಯಕಟ್ಟು ಪದ್ಧತಿಯೇ ಇದಕ್ಕೆ ಮೊಹರು… ಹೌದು ಅದುದರಿಂದಲೇ ಇಲ್ಲಿ ಭೂಮಿಯನ್ನು ಹೆಣ್ಣು ಎಂದು ಸಂಕಲ್ಪಿಸಿ ಮಾನುಷಿಕವಾಗಿ ಸಾಮಾನ್ಯ ಸ್ತ್ರಿಯಲ್ಲಾಗುವ ಪ್ರಕೃತಿ ಸಹಜ ಬದಲಾವಣೆಯನ್ನು ಭೂತಾಯಿಯಲ್ಲಿ ಸಂಭೂತ ಮಿಲಿತವಾಗಿಸಿ ಅವಳನ್ನು ದೇವಿಯೆಂದು ಅರಾಧಿಸುವುದು, ಅವಳ ಮೊದಲ ಋತುಸ್ರಾವವನ್ನು ಸಂಭ್ರಮಿಸುವುದು, ಹೇಗೆ ಮನೆ ಹುಡುಗಿ ದೊಡ್ಡವಳಾದಳೆಂದು ಮನೆಯವರೆಲ್ಲಾ ಸಂಭ್ರಮಿಸುತ್ತಾರೋ, ಮದಿಮಾಲ್ ಮದಿಮೆ ಮಾಡಿ ಊರವರನ್ನೆಲ್ಲಾ ಕರೆದು ಪುಟ್ಟ ಮಗಳಿಗೆ ಸೀರೆ ಉಡಿಸಿ ಮದುವೆ ಮಾಡುತ್ತರೋ… ಮತ್ತಷ್ಟು ಓದು 
ನಮ್ಮೂರ ಹಬ್ಬ- ನುಡಿ ಮತ್ತು ಭೇಟಿ
– ಪ್ರಮೋದ್ ಜತ್ಕರ
ನನ್ನದು ಗುಮ್ಮಟ ನಗರಿ ವಿಜಯಪುರ. ತನ್ನದೇ ಆದ ಕಲಾ ಸ್ವಂತಿಕೆ ಹೊಂದಿರುವಂತಹದ್ದು. ಇಲ್ಲಿ ತಾಲುಕಿಗೊಂದು ಭಾಷೆ, ವಲಯಕ್ಕೊಂದು ಆಚರಣೆ, ಊರಿಗೊಂದು ದೈವ.. ಹೀಗೆ ವೈಶಿಷ್ಟ್ಯವಾದದ್ದು. ಇದು ಕೇವಲ ನಮ್ಮ ಜಿಲ್ಲೆಯ ವೈಶಿಷ್ಟ್ಯವಲ್ಲ ಇಡೀ ಭಾರತದ ವೈಶಿಷ್ಟ್ಯ, ಅದಕ್ಕೆಂದೇ ನಾವು ವಿವಿಧತೆಯನ್ನು ಪ್ರದರ್ಶಿಸುವವರು… (ಏಕತೆ ಎಂದು ಹೇಳಲಾರೆ!).
ನನ್ನೂರು ವಿಜಯಪುರದ ಇಂಡಿ ತಾಲ್ಲೂಕಿನ ಚಡಚಣ ವಲಯದಲ್ಲಿ ಬರುತ್ತದೆ. ನನ್ನೂರು ಒಂದು ಚಿಕ್ಕ ಹಳ್ಳಿ, ನಿವರಗಿ ಅಂತ ಅದರ ಹೆಸರು, ಭೀಮೆಯ ತಂಪಿನಲ್ಲಿ ಬೆಳೆದ ಊರು. ಅವಳೇ ನಮಗೆ ದೈವಗಳ ದೈವ.. ಭೀಮೆ ದಾಟಿದರೆ ಮಹಾರಾಷ್ಟ್ರ. ನಮ್ಮ ಸಂಪ್ರದಾಯಗಳು ಸಾಮಾನ್ಯವಾಗಿ ಮಹಾರಾಷ್ಟ್ರದ ಸಂಪ್ರದಾಯಗಳಿಗೆ ಹೋಲುತ್ತವೆ.
ನಮ್ಮಲ್ಲಿನ ಪ್ರಮುಖ ಸಂಪ್ರದಾಯಗಳಲ್ಲಿ “ನುಡಿ” ಮತ್ತು “ಭೇಟಿ” ಎಂಬ ಎರಡು ಸಂಪ್ರದಾಯಗಳು ಬಹು ಮುಖ್ಯವಾದವು. ಮತ್ತಷ್ಟು ಓದು 
ನಮ್ಮೂರ ಹಬ್ಬ – ಋಷ್ಯಶೃಂಗೇಶ್ವರನ ರಥೋತ್ಸವ
– ಅಪರ್ಣ ಜಿ. ಸಿರಿಮನೆ
ಹಬ್ಬಗಳು ಸಾಮಾಜಿಕ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅದರಲ್ಲೂ ಪಾರಂಪರಿಕವಾಗಿ ನಡೆದುಕೊಂಡು ಬರುವ ಊರ ಹಬ್ಬಗಳು ಸಾಮಾಜಿಕ ಒಗ್ಗಟ್ಟನ್ನು ಪ್ರತಿನಿಧಿಸುವುದರಲ್ಲಿ ಎರಡು ಮಾತಿಲ್ಲ. ಮಲೆನಾಡಿನ ದಟ್ಟ ಹಸಿರಿನ ನಡುವೆ ರಮಣೀಯತೆಯನ್ನೇ ಹಾಸಿ ಹೊದ್ದಿರುವ ಒಂದು ಪುಟ್ಟ ಗ್ರಾಮ ‘ಕಿಗ್ಗಾ’ ನಮ್ಮೂರು. ಪ್ರಾಕೃತಿಕ ಸೌಂದರ್ಯದಿಂದಲೇ ಜನರನ್ನು ತನ್ನೆಡೆಗೆ ಸೆಳೆಯುವ ನಮ್ಮೂರು ಮಳೆದೇವರೆಂದೇ ಹೆಸರಾಗಿರುವ ಋಷ್ಯಶೃಂಗೇಶ್ವರ ನೆಲೆಸಿರುವ ಪುಣ್ಯಕ್ಷೇತ್ರ. ಪ್ರತಿವರ್ಷವೂ ನಡೆಯುವ ಋಷ್ಯಶೃಂಗೇಶ್ವರನ ರಥೋತ್ಸವ ನಮ್ಮೂರಿನ ಪ್ರಮುಖ ಹಬ್ಬ. ಮತ್ತಷ್ಟು ಓದು 
ನಮ್ಮೂರ ಹಬ್ಬ – ಹೊಸ ಹುರುಪಿನ ಹೊಸ್ತು
– ಸ್ವಾತಿ ಶೆಟ್ಟಿ
ಬೆಳಗಾಗಿ ನಾನೆದ್ದು ಯಾರ್ಯಾರ ನೆನೆಯಲಿ
ಎಳ್ಳು ಜೀರಿಗೆ ಬೆಳೆಯೋಳ ಭೂಮಿತಾಯಿ
ಎದ್ದೊಂದುಗಳಿಗೆ ನೆನೆದೇನು…
ಮೋಡ ಮಳೆಗೆ ಮೂಲ, ಮಕ್ಕಳಿಗೆ ತಾಯಿ ಮೂಲ, ಬೆಳಕಿಗೆ ಸೂರ್ಯ ಮೂಲ, ಭೂಮಿತಾಯಿ ಬೆಳೆಗೆ ಮೂಲ. ಹೌದು, ನಮ್ಮದು ಕೃಷಿ ಪ್ರದಾನವಾದ ವ್ಯವಸ್ಥೆ ರೈತರಿಗೆ ಅನ್ನ ನೀಡುವ ಭೂಮಿ ತಾಯಿ ಹಾಗೂ ಕೃಷಿಯೊಂದಿಗೆ ಅವಿನಾಭಾವ ಸಂಭಂದವಿದೆ. ಭೂಮಿಯನ್ನು ಹಾಗೂ ಕೃಷಿಯನ್ನು ಈ ಹಿನ್ನೆಲೆಯಲ್ಲಿ ಪೂಜ್ಯ ಭಾವನೆಯಿಂದ ಆರಾಧಿಸಿಕೊಂಡು ಬಂದಿದ್ದೇವೆ. ನಮ್ಮ ಕರಾವಳಿಯ ಹೆಚ್ಚಿನ ಎಲ್ಲಾ ಆಚರಣೆಗಳು ಕೃಷಿ ಸಂಬಂಧಿತವಾದ ಆಚರಣೆಗಳಾಗಿ ರೂಢಿಯಲ್ಲಿದೆ. ಮತ್ತಷ್ಟು ಓದು 
ನಮ್ಮೂರ ಹಬ್ಬ ( ಮೈಸೂರು )
– ವಿಜಯ ನಂಜುಂಡಯ್ಯ
ಭಾರತೀಯರಿಗೆ ಹಬ್ಬ, ಹರಿದಿನಗಳು ಹೊಸದೇನೂ ಅಲ್ಲ. ಹಬ್ಬಗಳು ಹೆಸರೇ ಸೂಚಿಸುವಂತೆ, ಸಂತೋಷ, ಸಡಗರದ ಸಂಕೇತ ವಾಗಿದೆ. ಈ ಹಬ್ಬ, ಸಂತೋಷವನ್ನುಂಟು ಮಾಡುತ್ತದೆ ಎಂದರೆ ನೀವೇ ನೋಡಿ.
ಕೆಲವು ವಸ್ತುಗಳೂ, ವಿಷಯಗಳೂ ಮನಸ್ಸಿಗೆ ಹತ್ತಿರವಾಗಿ ಖುಷಿ ತಂದರೆ,,ಸೌಂದರ್ಯ, ಶೃಂಗಾರ ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತದೆ.ಹಾಗೇ ಇಂಪಾದ, ತಂಪಾದ ಪ್ರೀತಿಯ ಮಾತುಗಳು, ಮಧುರವಾದ ಸ್ವರ, ಸಂಗೀತಗಳು ಕಿವಿಗೆ ಹಬ್ಬವನ್ನುಂಟು ಮಾಡುವುದರಲ್ಲಿ ಆಶ್ಚರ್ಯವಿಲ್ಲ. ರುಚಿ, ರುಚಿಯಾದ ತಿಂಡಿ ತೀರ್ಥಗಳು ಬಾಯಿಗೆ ಹಬ್ಬವನ್ನುಂಟು ಮಾಡುತ್ತದೆ.. ಮತ್ತಷ್ಟು ಓದು 
ನಮ್ಮೂರ ಹಬ್ಬ.. ( ಶ್ರೀ ರಂಗನಾಥ ಸ್ವಾಮಿಯ ರಥೋತ್ಸವ )
ಯೋಗಾನಂದಾರಾಧ್ಯ
ನೇರಲವಾಡಿ, ಮಾಗಡಿ ತಾಲ್ಲೂಕು
ರಾಮನಗರ ಜಿಲ್ಲೆ
ಹಬ್ಬಗಳೆಂದರೆ ಸಾಮಾನ್ಯವಾಗಿ ಸಡಗರ ಸಂಭ್ರಮದಿಂದ ಕೂಡಿದ್ದು, ಬಂಧು ಬಾಂಧವರು, ಗೆಳೆಯರು, ಆಯಾ ಸಮುದಾಯದವರು ಒಟ್ಟಿಗೇ ಸೇರಿ ಆಚರಿಸುವ ಮನಶ್ಶಾಂತಿಯ ಮಹತ್ಕಾರ್ಯ..
ಇಂದು ಪ್ರಪಂಚದ ನಾನಾ ಭಾಗಗಳಲ್ಲಿ ಅವರದೇ ಆದ ಸಂಸ್ಕೃತಿಯ ವೈಶಿಷ್ಟ್ಯಗಳಿಂದ ಕೂಡಿದ ಹಲವಾರು ಹಬ್ಬಗಳನ್ನು ಆಚರಿಸುವುದನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಾವು ಕಂಡಿದ್ದೇವೆ.. ಕೆಲವು ಹಬ್ಬಗಳನ್ನು ಜಾಗತಿಕ ಮಟ್ಟದಲ್ಲಿ ಆಚರಿಸಿದರೆ, ಮತ್ತೆ ಕೆಲವು ರಾಷ್ಟ್ರೀಯ ಮಟ್ಟದಲ್ಲಿ, ಇನ್ನೂ ಕೆಲವು ರಾಜ್ಯಮಟ್ಟದಲ್ಲಿ ಹಾಗೆಯೇ ಸಂಪ್ರದಾಯ, ಸಂಸ್ಕೃತಿಗಳ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲೂ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುವುದು ಸರ್ವೇ ಸಾಮಾನ್ಯ… ಮತ್ತಷ್ಟು ಓದು 
ಸಿಡಿಲು ಸನ್ಯಾಸಿಯ ಐದು ನಿಮಿಷದ ಮಾತುಗಳು ಇಡೀ ಜಗತ್ತಿಗೆ ಸನಾತನ ಧರ್ಮದ ಶ್ರೇಷ್ಠತೆಯನ್ನು ಬಿತ್ತರಿಸಿದ್ದವು.
ಶಿವಾನಂದ ಶಿವಲಿಂಗ ಸೈದಾಪೂರ
(ಎಂ.ಎ.ವಿದ್ಯಾರ್ಥಿ.)
ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ.
ಸ್ವಾಮಿ ವಿವೇಕಾನಂದರ 115ನೇ ಪುಣ್ಯಸ್ಮರಣೆಯ ವಿಶೇಷ ಲೇಖನ.
ಅದೊಂದು ತಮ್ಮ ಧರ್ಮ ಪ್ರಾಬಲ್ಯವನ್ನು ಜಗತ್ತಿನ ಇತರ ದೇಶದ ಮೇಲೆ ಹರಡಲು ನಡೆಸಿದ ಸಮಾರಂಭ. ಅದಕ್ಕೂ ಒಂದು ಇತಿಹಾಸ, ನೂರ ಐವತ್ತು ವರ್ಷಗಳ ಹಿಂದೆ ಕೊಲಂಬಸ್ ಶೋಧಿಸಿದ್ದು, ಅದರ ಸ್ಮರಣೆಯ ಹೆಸರಲ್ಲಿ ಕ್ರೈಸ್ತ ಧರ್ಮವನ್ನು ಜಗತ್ತಾದ್ಯಂತ ಬಿತ್ತಲು ಆಯೋಜನಗೊಂಡಿದ್ದೇ ವಿಶ್ವ ಸರ್ವಧರ್ಮ ಸಮ್ಮೇಳನ.. ಅದಕ್ಕೆ ಕಾರಣ ಒಂದು ಉದ್ದೇಶ ಹಲವು. ಅಷ್ಟೊತ್ತಿಗೆ ಕ್ರೈಸ್ತ ಧರ್ಮ ಜಗತ್ತಿನ ಹಲವಾರು ದೇಶಗಳನ್ನು ಆಕ್ರಮಿಸಿಕೊಂಡಿತ್ತು. ಅಂತಹ ಆಕ್ರಮಣಕ್ಕೆ ಒಳಗೊಂಡ ದೇಶಗಳಲ್ಲಿ ಭಾರತವು ಒಂದು. ಮತ ಸುಧಾರಣೆಗಾಗಿ ಬುದ್ಧ, ಬಸವ, ಮಹಾವೀರ, ಶಂಕರ, ಮದ್ವಾಚಾರ್ಯರು…. ಹೀಗೆ ಎಲ್ಲರು ಬಂದು ಹೋದರು. ಯಶಸ್ವಿಯು ಇಲ್ಲ, ವಿಫಲವು ಇಲ್ಲ. ಎಲ್ಲವೂ ಮಧ್ಯಂತರದಲ್ಲಿಯೇ ಸಾಗಿತ್ತೇ ಹೊರತು ಅವರ್ಯಾರು ಸಹ ದೇಶದ ಹೋರ ಹೋಗಿ ಸನಾತನ ಧರ್ಮವನ್ನು ಪ್ರಚಾರ ಮಾಡಲಿಲ್ಲ. ಸನಾತನ ಧರ್ಮದ ಮೇಲೆ ದಾಳಿ ಆದಾಗಲೆಲ್ಲ ತಕ್ಕ ಉತ್ತರಕ್ಕೆ ಸಿದ್ಧವಾಗಿಯೇ ಇತ್ತು ಭಾರತ. ತುರ್ಕರ ದಾಳಿಗೆ ವಿಜಯನಗರ, ಮರಾಠರಂತಹ ಮನೆಗಳು ಹುಟ್ಟುತ್ತಲೇ ಬಂದವು. ಮತ್ತಷ್ಟು ಓದು 
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು? ( ಭಾಗ – ೪ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಸಾಮಾನ್ಯವಾಗಿ ಪಶ್ಚಿಮದಲ್ಲಿ ನಮ್ಮ ಸಂಸ್ಕೃತಿಗೆ ಸಂಬಂಧಿಸಿದಂತೆ ಪದೇಪದೇ ಕೇಳಿಬರುವ ಈ ಪ್ರಶ್ನೆಗಳನ್ನು ಗಮನಿಸಿ. ನೀವು ಹಣೆಗೆ ತಿಲಕ ಇಡುವುದೇಕೆ? ಗೋಮಾಂಸವನ್ನು ನೀವೇಕೆ ತಿನ್ನುವುದಿಲ್ಲ? ನೀವು ಶಿಶ್ನವನ್ನು ಪೂಜೆ ಮಾಡುತ್ತೀರಂತೆ ಹೌದೆ? ಜಾತಿ ಪದ್ಧತಿಯ ಬಗ್ಗೆ ನಿಮ್ಮ ಅನಿಸಿಕೆಯೇನು? ಈಗಲೂ ಭಾರತದಲ್ಲಿ ವಿಧವೆಯರನ್ನು ಸುಡುತ್ತಾರೆಯೇ? ನಿಮ್ಮ ದೇವರುಗಳಿಗೇಕೆ ಆರೆಂಟು ಕೈಗಳು ಇರುತ್ತವೆ? ನಿಮ್ಮ ರಿಲಿಜನ್ನಿನ ಚಿಹ್ನೆ ಯಾವುದು? ನೀವು ದೇವಸ್ಥಾನದಲ್ಲಿ ಮೂರ್ತಿಪೂಜೆ/idolatry ಮಾಡುತ್ತೀರಾ? ನೀವು ದೇವರನ್ನು ನಂಬುತ್ತೀರಾ? Are you religious? ಇತ್ಯಾದಿ. ಈ ರೀತಿಯ ಪ್ರಶ್ನೆಗಳು ಎದುರಾದಾಗ ಯಾರಾದರೂ ಹೇಗೆ ಪ್ರತಿಕ್ರಿಯಿಸಬಹುದು? ಸ್ಥೂಲವಾಗಿ ಹೇಳುವುದಾದರೆ, ಇದಕ್ಕೆ ಎರಡು ವಿಧದಲ್ಲಿ ಪ್ರತಿಕ್ರಿಯಿಸಬಹುದು. ಮೊದಲನೆಯದು, ಈ ಪ್ರಶ್ನೆಗಳು ಗ್ರಹಿಸಲು ಸಾಧ್ಯವಾಗುವಂಥ ಮತ್ತು ನಮಗೆ ಅರ್ಥವಾಗುವ ಪ್ರಶ್ನೆಗಳು ಎಂಬ ಊಹೆಯೊಂದಿಗೆ ಈ ಪ್ರಶ್ನೆಗಳಿಗೆ ಉತ್ತರ ನೀಡುವುದು. ಸುಧಾರಣಾವಾದಿಗಳ ಕಾಲದಿಂದ ಇಂದಿನವರೆಗೆ ನಾವು ಅನುಸರಿಸಿದ ಮಾರ್ಗ ಇದೇ. ಆದರೆ ಅಮೆರಿಕೆಯಲ್ಲಿ ನೆಲೆಸುವ ಭಾರತೀಯರ [ಅಷ್ಟೇ ಏಕೆ, ಸಂಕುಚಿತಗೊಳ್ಳುತ್ತಿರುವ ಆ ಜಗತ್ತಿನಲ್ಲಿ, ಭಾರತದಲ್ಲಿನ ಭಾರತೀಯರ] ಪರಿಸ್ಥಿತಿ ಇಂದು ಬದಲಾಗಿದೆ: ಹಿಂದಿನ ಕಾಲದ ಸುಧಾರಕರು ಭಾರತೀಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು, ಆದರೆ ನಾವಿಂದು ಪಾಶ್ಚಾತ್ಯ ಸಂಸ್ಕೃತಿಯ ಸಂದರ್ಭದಲ್ಲಿ ನಿಂತು ಮಾತನಾಡುತ್ತಿದ್ದೇವೆ. ಬದಲಾದ ಈ ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ನಾವೂ ನಮ್ಮ ಸುಧಾರಣಾವಾದಿಗಳು ನಡೆದ ಮಾರ್ಗವನ್ನು ಅನುಸರಿಸಿದರೆ ಉಂಟಾಗುವ ಪರಿಣಾಮವನ್ನು ಗ್ರಹಿಸುವುದು ಬಹಳ ಮುಖ್ಯವಾಗಿದೆ. ಮತ್ತಷ್ಟು ಓದು 







