ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

7
ಸೆಪ್ಟೆಂ

ಫ್ರಾನ್ಸಿನ ಸೆಕ್ಯುಲರಿಸಂ ಮತ್ತು ಇಸ್ಲಾಮಿನ ಜಗಳದಲ್ಲಿ ಭಾರತಕ್ಕೇನು ಪಾಠ?

– ವಿನಾಯಕ ಹಂಪಿಹೊಳಿ

726567-burqaಸದ್ಯಕ್ಕೆ ಫ್ರಾನ್ಸಿನಲ್ಲಿ ಬುರ್ಕ ಬ್ಯಾನ್ ಕುರಿತು ಚರ್ಚೆ ನಡೆಯುತ್ತಿದೆ. ಬುರ್ಕಾ ಬ್ಯಾನ್ ತುಂಬಾ ಹಿಂದೆಯೇ ಆಗಿದೆ. ಈ ರೀತಿಯ ನಿಷೇಧಗಳಿಗೆ ಫ್ರಾನ್ಸ್ ಕೊಡುತ್ತಿರುವ ಕಾರಣ ರಿಲಿಜನ್ನುಗಳು ಪ್ರತಿಪಾದಿಸುವ ವಸ್ತ್ರಸಂಹಿತೆಯನ್ನು ಪಬ್ಲಿಕ್ ವಲಯದಲ್ಲಿ ಪಾಲಿಸುವುದು ಅಲ್ಲಿನ ಸೆಕ್ಯುಲರಿಸಂ ಐಡಿಯಾಲಜಿಯೊಂದಿಗೆ ಸರಿಹೊಂದದಿರುವದು. ಫ್ರಾನ್ಸಿನಲ್ಲಿ ಪ್ರಜಾಪ್ರಭುತ್ವದ ಆಡಳಿತವನ್ನು ಚರ್ಚಿನಿಂದ ಪ್ರತ್ಯೇಕಿಸುವ ಪ್ರಕ್ರಿಯೆ ತುಂಬ ಕಟ್ಟುನಿಟ್ಟಾಗಿತ್ತು. ಫ್ರಾನ್ಸಿನ ಸೆಕ್ಯುಲರಿಸಂ ರಿಲಿಜನ್ನನ್ನು ಕೇವಲ ರಾಜಕೀಯದಿಂದಷ್ಟೇ ಪ್ರತ್ಯೇಕಿಸುವದಷ್ಟೇ ಅಲ್ಲ, ಫ್ರಾನ್ಸ್ ದೇಶವು ಯಾವ ರಿಲಿಜನ್ನಿನೊಂದಿಗೂ ಗುರುತಿಸಿಕೊಳ್ಳಬಾರದು ಎನ್ನುವದು ಅದರ ಆಶಯ. ಆದ್ದರಿಂದ ಫ್ರಾನ್ಸ್ ದೇಶವು ತನ್ನನ್ನು ತಾನು ರಿಪಬ್ಲಿಕ್ ಮತ್ತು ಸೆಕ್ಯುಲರ್ ದೇಶವೆಂದು ಘೋಷಿಸಿಕೊಂಡಿತ್ತು. ಈ ರೀತಿಯ ಲಿಬರಲ್ ಸೆಕ್ಯುಲರಿಸಂ ಅನ್ನು ಬರೀ ಕ್ರಿಶ್ಚಿಯನ್ನರೇ ತುಂಬಿಕೊಂಡಿದ್ದ ದೇಶದಲ್ಲಿ ಈ ರೀತಿಯ ಸೆಕ್ಯುಲರಿಸಂ ಅನ್ನು ಜಾರಿಗೆ ತರುವದು ಅಷ್ಟು ಕಷ್ಟವಾಗಿರಲಿಲ್ಲ. ಮತ್ತಷ್ಟು ಓದು »

4
ಸೆಪ್ಟೆಂ

ಇಂಡೋನೇಷ್ಯದ ನೋಟಿನಲ್ಲೂ ಈತನದೊಂದು ಫೋಟೋ ಇದೆ!

– ರೋಹಿತ್ ಚಕ್ರತೀರ್ಥ

Ganapati-Ganesh in Space Lighten Background Wallpaper - 1366x768ಗಿರೀಶ ಕಾರ್ನಾಡರ ಹಯವದನ ನಾಟಕ ಗೊತ್ತಲ್ಲ? ಪದ್ಮಿನಿ ಎಂಬ ಸುರಸುಂದರ ಹೆಣ್ಣನ್ನು ಮೋಹಿಸಿ ತಲೆ ಕಡಿದುಕೊಳ್ಳುವ ಮತ್ತು ಇದ್ದ (ಮತ್ತು ಬಿದ್ದ) ತಲೆಯ ಬದಲಾಗಿನ್ನೊಂದು ತಲೆ ಅಂಟಿಸಿಕೊಂಡು ಪೇಚಾಡುವ ಇಬ್ಬರು ಜೀವದ ಗೆಳೆಯರ ಕತೆ ಅದು. ಆ ನಾಟಕದ ಪ್ರಾರಂಭದಲ್ಲಿ ಭಾಗವತ ಹೇಳುತ್ತಾನೆ: “ಸರ್ವ ವಿಘ್ನಗಳನ್ನೂ ನಿರ್ಮೂಲನಗೊಳಿಸಿ ಸಕಲ ಈಪ್ಸಿತಗಳಲ್ಲಿ ಸಿದ್ಧಿಯನ್ನು ನೀಡುವ ಆ ವಿಘ್ನೇಶ್ವರನೇ ಇಂದಿನ ನಮ್ಮ ನಾಟಕಕ್ಕೆ ಯಶಸ್ಸನ್ನು ನೀಡಲಿ. ಆತನ ಮಹಾತ್ಮ್ಯವನ್ನಾದರೂ ವರ್ಣಿಸುವುದು ಹೇಗೆ? ಆನೆಯ ಮುಖ, ಮನುಷ್ಯನ ದೇಹ, ಮುಖದಲ್ಲಿ ಮುರುಕು ದಂತ, ದೇಹದಲ್ಲಿ ಬಿರುಕು ಬಿಟ್ಟ ಉದರ – ಹೇಗೆ ನೋಡಿದರೂ ಅಪೂರ್ಣತೆಗೇ ಸಾಕ್ಷಿಯಾಗಿರುವಂತೆ ಕಾಣುವ ಈ ವಕ್ರತುಂಡನೇ ವಿಘ್ನಹರ್ತನೂ ಆಗಿರಬೇಕು ಎಂಬುದರ ರಹಸ್ಯವನ್ನಾದರೂ ಹೇಗೆ ಬಿಡಿಸೋಣ? ಬಹುಶಃ ದೇವರ ಪೂರ್ಣತ್ವ ಮನುಷ್ಯ ಕಲ್ಪನೆಗೇ ಒಗ್ಗಲಾರದಂಥಾದ್ದು ಎಂಬುದನ್ನೇ ಈ ಮಂಗಳಮೂರ್ತಿಯ ರೂಪ ಸಂಕೇತಿಸುತ್ತಿರಬಹುದು” ಮತ್ತಷ್ಟು ಓದು »

27
ಆಗಸ್ಟ್

ಉಪನಿಷತ್ ವಾಙ್ಮಯ 2: ಆಮಿಷ ಒಡ್ಡದೆ ಉತ್ತರಿಸು; ಅರಿವಿನ ಮಟ್ಟವನೆತ್ತರಿಸು!

– ಸ್ವಾಮಿ ಶಾಂತಸ್ವರೂಪಾನಂದ
ಉಪನಿಷತ್ ವಾಙ್ಮಯ :- ಉಪನಿಷತ್ ವಾಙ್ಮಯ 1

yama_nachiketaನಚಿಕೇತ ಯಮಸದನಕ್ಕೆ ಹೋದ. ಅಲ್ಲಿ ಮೂರು ದಿನ ಕಾದ. ಭೂಮಿಯಿಂದ ಸೂಕ್ಷ್ಮದೇಹಿಯಾಗಿ ಮೃತ್ಯುವಿನ ಲೋಕಕ್ಕೆ ಹೋಗುತ್ತಿರುವಾಗ ಅವನು ಒಬ್ಬನೇ ಇದ್ದದ್ದಲ್ಲ. ಅವನ ಮುಂದೆ ಸಾವಿರಾರು ಜನ, ಹಿಂದೆ ಸಾವಿರಾರು ಜನ ಸಾಗರದ ರೀತಿಯಲ್ಲಿ ಹೋಗುತ್ತಿದ್ದರಂತೆ. ಅವರೆಲ್ಲರೂ ಯಾವಾವುದೋ ಕಾರಣಕ್ಕೆ ತೀರಿಕೊಂಡರು. ಬದುಕಿನ ಯಾತ್ರೆ ಮುಗಿಸಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡವರು. ಭೂಮಿಯ ಮೇಲಿನ ವ್ಯವಹಾರಗಳನ್ನು ಮುಗಿಸಿ ಪರಲೋಕಕ್ಕೆ ಹೊರಟವರು. ಇಲ್ಲಿ ನಾವು ಉಪನಿಷತ್‍ಕಾರನ ಲೋಕಪ್ರಜ್ಞೆಯನ್ನು ಗಮನಿಸಬೇಕು. ಕತೆ ಕೇವಲ ನಚಿಕೇತ ಮತ್ತು ಯಮನ ಮಾತುಕತೆಯ ಸುತ್ತ ಸುತ್ತುವುದಾದರೂ ಉಪನಿಷತ್‍ಕಾರ ಇವೆಲ್ಲ ಸಣ್ಣಸಣ್ಣ ವಿವರಗಳನ್ನು ಕೂಡ ನಮ್ಮ ಕಣ್ಮುಂದೆ ತಂದು ಬೆಚ್ಚಿಬೀಳಿಸುತ್ತಾನೆ. ಭೂಮಿಯಲ್ಲಿ ಪ್ರತಿಕ್ಷಣದಲ್ಲೂ ನೂರಾರು ಜೀವಗಳು ಕೈಕಾಲು-ಪಪ್ಪುಸಗಳ ಕಾರ್ಯ ನಿಲ್ಲಿಸಿ ನಿಶ್ಚೇಷ್ಟಿತವಾಗುತ್ತಲೇ ಇರುತ್ತವೆ; ಪ್ರತಿ ನಿಮಿಷದಲ್ಲೂ ಅಸಂಖ್ಯಾತ ಜನರು ಮೃತ್ಯುವಿಗೆ ಪಕ್ಕಾಗುತ್ತಲೇ ಇರುತ್ತಾರೆ ಎಂಬ ಎಚ್ಚರಿಕೆಯನ್ನು ಓದುಗನಿಗೆ ಅದುಹೇಗೆ ಉಪನಿಷತ್ ದಾಟಿಸುತ್ತದೆ ನೋಡಿ! ಇಂಥ ನೂರಾರು ಜೀವರ ನಡುವಿನಲ್ಲಿ ನಚಿಕೇತನೂ ಇದ್ದ. ಅವನಿಗೆ ಭೂಲೋಕವನ್ನು ಬಿಟ್ಟು ಬಂದೆನಲ್ಲಾ ಎಂಬ ಚಿಂತೆಯೂ ಇರಲಿಲ್ಲ; ದೇವರ ಲೋಕ ಸೇರುವ ದಾರಿಯಲ್ಲಿದ್ದೇನೆಂಬ ಸಂತೋಷವೂ ಇರಲಿಲ್ಲ. ದುಃಖ ಸಂತೋಷಗಳಿಲ್ಲದ ಒಂದು ವಿಚಿತ್ರ ಸ್ಥಿತಿಯಲ್ಲಿ ಅವನು ಯಮಪುರಿಗೆ ಹೋದ. ಮತ್ತಷ್ಟು ಓದು »

25
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 11
ಸೋದರಿ ನಿವೇದಿತಾ (ಮಾರ್ಗರೇಟ್ ಎಲಿಜಬೆತ್ ನೊಬೆಲ್)
– ರಾಮಚಂದ್ರ ಹೆಗಡೆ

220px-Sœur_Niveditaವಿದೇಶಿ ನೆಲದಲ್ಲಿ ಹುಟ್ಟಿ ಭಾರತದ ಸೇವೆಗೆ ತನ್ನ ಅರ್ಪಿಸಿಕೊಂಡ, ಭಾರತಕ್ಕಾಗಿಯೇ ತನ್ನ ಪೂರ್ತಿ ಜೀವನ ಅರ್ಪಿಸಿದ ಐರ್ಲೆಂಡ್ ದೇಶದ ಹೆಣ್ಣುಮಗಳು ಮಾರ್ಗರೇಟ್ ಎಲಿಜಬೆತ್ ನೊಬೆಲ್. ಸ್ವಾಮಿ ವಿವೇಕಾನಂದರ ಭಾಷಣ ಹಾಗೂ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಭಾರತದೆಡೆಗೆ ಆಕರ್ಷಿತರಾದ ಮಾರ್ಗರೇಟ್ ಸ್ವಾಮಿ ವಿವೇಕಾನಂದರಿಂದ ಬ್ರಹ್ಮಚರ್ಯ ಹಾಗೂ ಸೇವೆಯ ದೀಕ್ಷೆ ಪಡೆದು ‘ಸೋದರಿ ನಿವೇದಿತಾ’ ಆದರು. ಬಾಲ್ಯದಿಂದಲೇ ಆಧ್ಯಾತ್ಮದ ಸೆಳೆತ ಹೊಂದಿದ್ದ ಮಾರ್ಗರೇಟ್ ನೊಬೆಲ್ಲರಿಗೆ ಲಂಡನ್ನಿನಲ್ಲಿ ಸ್ವಾಮಿ ವಿವೇಕಾನಂದರ ದರ್ಶನವಾಯಿತು. ಭಾರತೀಯ ಧರ್ಮ, ಸಂಸ್ಕೃತಿ, ವೇದ ಉಪನಿಷತ್ತುಗಳ ಕುರಿತ ಅವರ ಚಿಂತನೆಗಳಿಂದ ಮಂತ್ರಮುಗ್ಧರಾದ ಆಕೆ ಅವರನ್ನೇ ತನ್ನ ‘ಗುರುದೇವ’ ರೆಂದು ಸ್ವೀಕರಿಸಿದರು. ಭಾರತೀಯ ಚಿಂತನೆಗಳ ಅಧ್ಯಯನದಲ್ಲಿ ತೊಡಗಿದ ಆಕೆಗೆ ಭಾರತವನ್ನು ಕಾಣುವ ಹೆಬ್ಬಯಕ್ಕೆ ಹುಟ್ಟಿತು. ಸ್ವಾಮೀಜಿ ಅವರೊಂದಿಗೆ ನಿರಂತರವಾಗಿ ಪತ್ರ ಸಂಪರ್ಕದಲ್ಲಿದ್ದ ಅವರಿಗೆ ಒಮ್ಮೆ ಸ್ವಾಮೀಜಿ ಹೀಗೆ ಬರೆದರು: “ನನ್ನ ದೇಶದ ಸ್ತ್ರೀಯರಿಗೆ ವಿದ್ಯಾಭ್ಯಾಸ ಕೊಡುವ ಅಗತ್ಯ ತುಂಬಾ ಇದೆ. ಅದಕ್ಕೆ ತಕ್ಕ ಯೋಜನೆಗಳನ್ನು ಹಾಕುತ್ತಿದ್ದೇನೆ. ನಿನ್ನಿಂದ ನನಗೆ ತುಂಬಾ ಸಹಾಯವಾದೀತು. ಇಲ್ಲಿ ನಿನಗಾಗಿ ಸಹಸ್ರಾರು ಮಹಿಳೆಯರು ಕಾಯುತ್ತಿದ್ದಾರೆ.” ಎಂದು ಬರೆದರು. ಈ ಕರೆಗೆ ಓಗೊಟ್ಟ ಮಾರ್ಗರೆಟ್ ಭಾರತಕ್ಕೆ ಬಂದು ಇಲ್ಲಿಯ ಸ್ತ್ರೀಯರ ಅನಕ್ಷರತೆ, ಅಜ್ಞಾನಗಳನ್ನು ತೊಡೆದು ಅವರ ಸರ್ವಾಂಗೀಣ ಉದ್ಧಾರಕ್ಕೆ ತೊಡಗಬೇಕೆಂಬ ನಿರ್ಧಾರವನ್ನು ಮನದಾಳದಿಂದ ಕೈಗೊಂಡರು. ಮತ್ತಷ್ಟು ಓದು »

16
ಆಗಸ್ಟ್

ಕನ್ನಡದ ಮೊದಲ ಕೋಮುವಾದಿ ಈ ಮುಮ್ಮಡಿ ಬಲ್ಲಾಳ ವೀರ!

– ಸಂತೋಷ್ ತಮ್ಮಯ್ಯ

hoಕ್ರಿ.ಶ ೧೩೧೦. ಅದು ಮುಸಲ್ಮಾನರ ರಂಜಾನ್ ತಿಂಗಳಿನ ೨೨ನೇ ದಿನ, ಭಾನುವಾರ. ಆ ಪವಿತ್ರ ತಿಂಗಳಿನ ೨೧ ದಿನಗಳೂ ಮುಸಲ್ಮಾನರು ದಕ್ಷಿಣ ಭಾರತದಲ್ಲಿ ನಿರಂತರ ಲೂಟಿ ನಡೆಸಿದ್ದರು. ಕಾಫಿರರ ಕೊಲೆ ಮಾಡಿದ್ದರು, ವಿಗ್ರಹ ಭಂಜನೆ ನಡೆಸಿದ್ದರು, ಮತಾಂತರಗಳು ನಡೆದಿದ್ದವು.

ರಂಜಾನಿನ ೨೨ನೇ ದಿನದಂದು ಅವರು ಲೂಟಿಗೆ ಆರಿಸಿಕೊಂಡದ್ದು ಶ್ರೀಮಂತ ದ್ವಾರಸಮುದ್ರವನ್ನು. ಮಲ್ಲಿಕಾಫರ್ ಎಂಬ ಒಂದು ಕಾಲದ ಬ್ರಾಹ್ಮಣ ಮತಾಂತರವಾದೊಡನೆಯೇ ವಿಪರೀತ ಕ್ರೂರಿಯೂ, ಮಾತೃ ಧರ್ಮದ ದ್ವೇಷಿಯೂ ಆಗಿ ಬದಲಾಗಿದ್ದ. ಹಿಂದೂ ಧರ್ಮದ ಯಾವ ನರವನ್ನು ಮೀಟಿದರೆ ಲಾಭ ಎಂಬುದನ್ನು ಉಳಿದ ದಾಳಿಕೋರರಿಗಿಂತ ಆತ ಚೆನ್ನಾಗಿ ಬಲ್ಲವನಾಗಿದ್ದ. ಅಲ್ಲಾವುದ್ದೀನ್ ಖಿಲ್ಜಿಯ ಕೂಲಿ ಮಾಡುತ್ತಿದ್ದ ಆತ ದಣಿಯನ್ನು ಮೆಚ್ಚಿಸಲು ಏನು ಮಾಡಲೂ ಹಿಂಜರಿಯುತ್ತಿರಲಿಲ್ಲ. ದ್ವಾರಸಮುದ್ರವನ್ನು ಲೂಟಿಮಾಡಬೇಕು ಎಂದು ಆತನೇ ಮುಹೂರ್ತ ನಿಗದಿಪಡಿಸಿದ್ದ. ಏಕೆಂದರೆ ಆ ಹೊತ್ತಲ್ಲಿ ದ್ವಾರಸಮುದ್ರದ ರಾಜ ರಾಜಧಾನಿಯಲ್ಲಿರಲಿಲ್ಲ. ನಿಶ್ಚಯವಾದಂತೆ ದ್ವಾರಸಮುದ್ರದ ಮೇಲೆ ದಾಳಿಯಾಯಿತು. ನಿರಂತರ ೧೩ ದಿನ ಲೂಟಿ ನಡೆಯಿತು. ದೇವಸ್ಥಾನಗಳು ಧ್ವಂಸವಾದವು. ಅತ್ತ ರಾಜ ರಾಜಧಾನಿಗೆ ದೌಢಾಯಿಸಿ ಬಂದಾಗ ಕಾಲ ಮಿಂಚಿಹೋಗಿತ್ತು. ಮಲ್ಲಿಕಾಫರನಿಗೆ ಶರಣಾಗದೆ ಆತನಿಗೆ ಬೇರೆ ದಾರಿಯಿರಲಿಲ್ಲ. ದುಷ್ಟ ಮಲ್ಲಿಕಾಫರ್ ಆತನಿಗೆ ಎರಡು ಆಯ್ಕೆಗಳನ್ನು ನೀಡಿದ. ಒಂದೋ ಇಸ್ಲಾಮಿಗೆ ಮತಾಂತರವಾಗಬೇಕು. ಇಲ್ಲವೇ ತಮಿಳು ಪಾಂಡ್ಯರನ್ನು ಗೆಲ್ಲಲು ಸಹಾಯ ಮಾಡಬೇಕು ಮತ್ತು ದ್ವಾರಸಮುದ್ರದಲ್ಲಿ ಮುಸಲ್ಮಾನ ಸೈನ್ಯವನ್ನು ಇರಿಸಿಕೊಳ್ಳಬೇಕು. ರಾಜ ಮತಾಂತರಕ್ಕೆ ಒಪ್ಪಿಗೆ ನೀಡಲಿಲ್ಲ. ಉಳಿದ ಷರತ್ತುಗಳಿಗೆ ಒಪ್ಪಿದ. ಮಲ್ಲಿಕಾಫರ್ ದ್ವಾರಸಮುದ್ರದ ಸೈನ್ಯದ ಬಲದಿಂದ ತಮಿಳು ಪಾಂಡ್ಯರನ್ನು ಗೆದ್ದು ಲೂಟಿಗೈದು ದೆಹಲಿಗೆ ಹೊರಟುಹೋದ. ಮತ್ತಷ್ಟು ಓದು »

14
ಆಗಸ್ಟ್

ವೇದಾಂತದ ಕಥೆಗಳ ಆಧಾರದಲ್ಲಿ ಇತಿಹಾಸ ಶಬ್ದದತ್ತ ಕಿರುನೋಟ

– ವಿನಾಯಕ ಹಂಪಿಹೊಳಿ

download (3)ಹಿಸ್ಟರಿ ಎನ್ನುವ ಶಬ್ದದ ಸ್ವರೂಪವು ಬೈಬಲ್ಲಿನ ಥಿಯಾಲಜಿಯಲ್ಲಿ ನಮಗೆ ಕಾಣಸಿಗುತ್ತದೆ. ಪ್ರತಿಯೊಂದು ಸಮಾಜಕ್ಕೂ ಗಾಡ್ ತನ್ನ ಸಂದೇಶಗಳನ್ನು ಪ್ರವಾದಿಗಳ ಮೂಲಕ ತಲುಪಿಸಿರುತ್ತಾನೆ. ಇದು ಒಂದಾನೊಂದು ಕಾಲದಲ್ಲಿ ಆ ಸಮಾಜದಲ್ಲಿ ನಡೆದಿರುವ ಘಟನೆಯಾಗಿರುತ್ತದೆ. ಆ ಸಮಾಜದ ಜನರನ್ನು ಅರಿತುಕೊಳ್ಳಲು ಹಾಗೂ ಅಲ್ಲಿನ ಜನರು ಆಚರಿಸುವ ಪದ್ಧತಿಗಳಲ್ಲಿ ರಿಲಿಜಿಯಸ್ ಯಾವುದು ಎಂದು ಗುರುತಿಸಿಕೊಳ್ಳಲು ಈ ಸಂದೇಶಗಳು ಅಗತ್ಯ. ಹೀಗಾಗಿ ಸಮುದಾಯವೊಂದನ್ನು ಅಧ್ಯಯನ ಮಾಡುವಾಗ ಆ ಸಮುದಾಯದಲ್ಲಿ ಗಾಡ್ ಯಾವಾಗ ಮಧ್ಯಪ್ರವೇಶಿಸಿ ತನ್ನ ಸಂದೇಶಗಳನ್ನು ನೀಡಿದ್ದ ಎನ್ನುವುದನ್ನು ಕಂಡುಕೊಳ್ಳುವದು ಅಗತ್ಯ. ಹಿಸ್ಟರಿ ಎನ್ನುವ ಅಧ್ಯಯನ ಕ್ರಮವು ಈ ಪ್ರಕ್ರಿಯೆಯಿಂದಲೇ ಹುಟ್ಟಿರುತ್ತದೆ. ಲಭ್ಯವಿರುವ ಶಾಸನಗಳ ಆಧಾರದಲ್ಲಿ ಸಮಂಜಸವಾದ ವಿವರಣೆಯೊಂದನ್ನು ಕಟ್ಟಿಕೊಡುವುದೇ ಹಿಸ್ಟರಿಯ ಧ್ಯೇಯ. ಹಿಸ್ಟರಿ ಶಬ್ದಕ್ಕೆ ಪರ್ಯಾಯವಾಗಿ ನಾವು ಇತಿಹಾಸ ಎಂಬ ಶಬ್ದವನ್ನು ಬಳಸುತ್ತ ಬಂದಿದ್ದೇವೆ. ಆದರೆ ವಸಾಹತು ಪ್ರಜ್ಞೆಗೂ ಪೂರ್ವದಲ್ಲಿ ಇತಿಹಾಸ ಎಂಬ ಶಬ್ದವು ಏನನ್ನು ಪ್ರತಿನಿಧಿಸುತ್ತಿತ್ತು? ಸದ್ಯಕ್ಕೆ ಉಪನಿಷತ್ತುಗಳ ಕಥೆ ಮತ್ತು ಅದಕ್ಕೆ ಶಂಕರಾಚಾರ್ಯರು ಬರೆದ ಭಾಷ್ಯಗಳನ್ನು ಆಧಾರವಾಗಿಟ್ಟುಕೊಂಡು ಚರ್ಚಿಸೋಣ. ಮತ್ತಷ್ಟು ಓದು »

7
ಆಗಸ್ಟ್

ಉಪನಿಷತ್ ವಾಙ್ಮಯ 1: ಮೃತ್ಯುಮುಖದಲ್ಲಿ ಜ್ಞಾನದಾಹಿ; ಕೇಳಿದ ಗುರುವನು “ದೇಹಿ! ದೇಹಿ!”

– ಸ್ವಾಮಿ ಶಾಂತಸ್ವರೂಪಾನಂದ

yama_nachiketaಉಪನಿಷತ್ ಎಂಬುದು ವೇದಕಾಲದ ಗದ್ಯಕಾವ್ಯ. ವಿದ್ಯೆ, ಜ್ಞಾನ, ಚಿಂತನೆಗಳು ಮುಪ್ಪುರಿಗೊಂಡ ಮನಸ್ಸುಗಳು ರಚಿಸಿದ ಅನನ್ಯ ಜೀವನಾಮೃತ ಸಾರ. ವೇದಗಳ ಒಟ್ಟರ್ಥವನ್ನು ಇವು ಸಂಗ್ರಹವಾಗಿ ತಿಳಿಸುತ್ತವೆ ಎನ್ನುವ ಕಾರಣಕ್ಕೆ ಇವನ್ನು ವೇದಾಂತ ಎಂದೂ ಕರೆಯುತ್ತಾರೆ. ಉಪನಿಷತ್ತುಗಳ ಸಾಲಿನಲ್ಲಿ ಅತಿವಿಶಿಷ್ಟವಾದದ್ದು ಕಠ. ಕೃಷ್ಣಯಜುರ್ವೇದದ ಕಠ ಪರಂಪರೆಯಲ್ಲಿ ಬರುವ ಈ ಉಪನಿಷತ್ತು ಗುರು-ಶಿಷ್ಯರ ಸಂವಾದದ ಒಂದು ಸಂಕ್ಷಿಪ್ತ ಚಿತ್ರಣ. ಗುರುಸ್ಥಾನದಲ್ಲಿ ಕೂತವನು ಸಾಕ್ಷಾತ್ ಯಮಧರ್ಮರಾಯ! ಮತ್ತು ಅವನೆದುರು ಶಿಷ್ಯನಾಗಿ ತಲೆಬಾಗಿ ವಿನೀತನಾಗಿ ಪವಡಿಸಿದವನು ಏಳೋ ಎಂಟೋ ವಯಸ್ಸಿನ ಮುದ್ದುಬಾಲಕ ನಚಿಕೇತ. ಪ್ರಪಂಚದ ಎರಡು ಧ್ರುವಗಳಂತಿರುವ ಈ ಇಬ್ಬರು ಜೊತೆಯಾದದ್ದು ಹೇಗೆ ಎಂಬುದೇ ಒಂದು ವಿಚಿತ್ರ ಕತೆ. ಕಠೋಪನಿಷತ್ತನ್ನು ಪ್ರವೇಶಿಸುವ ಮೊದಲು ನಮಗೆ ಆ ಹಿನ್ನೆಲೆ ತಿಳಿದಿದ್ದರೆ ಒಳ್ಳೆಯದು. ಮತ್ತಷ್ಟು ಓದು »

29
ಜುಲೈ

ಹಸುವಿನ ಕೆಚ್ಚಲು ಹಿಂಡಿ ತೋಳನಿಗೆ ಹಾಲುಣಿಸುವವರು

– ರೋಹಿತ್ ಚಕ್ರತೀರ್ಥ

6a00d8341dd33453ef0168e5744052970c-550wiದಡ್ಡ ವೈರಿಯನ್ನು ಗೆಲ್ಲುವುದು ಸುಲಭ. ಆದರೆ ಅತಿ ಬುದ್ಧಿವಂತ ಶತ್ರುವಿನದ್ದೇ ಸಮಸ್ಯೆ. ಕ್ರಿಸ್ಟೋಫರ್ ನೊಲನ್‍ನ ಡಾರ್ಕ್ ನೈಟ್ ಸಿನೆಮಾ ಸರಣಿಯನ್ನು ನೋಡಿದವರಿಗೆ ಜೋಕರ್‍ನ ಪರಿಚಯ ಚೆನ್ನಾಗಿಯೇ ಇರುತ್ತದೆ. ಈತ ಹೊಡೆ ಬಡಿ ಕೊಲ್ಲು ಎನ್ನುವಂಥ ನೇರಾನೇರ ವಿಲನ್ ಅಲ್ಲ. ನಾಯಕನ ಜೊತೆಗೇ ಇದ್ದು, ಆತನ ತಂತ್ರಗಳನ್ನೆಲ್ಲ ಕರಗತ ಮಾಡಿಕೊಳ್ಳಬಲ್ಲ; ಸಂದರ್ಭ ಬಂದರೆ ನಾಯಕನಿಗಿಂತ ಚೆನ್ನಾಗಿ ಅವನ್ನು ಪ್ರಯೋಗಿಸಬಲ್ಲ ಚತುರನೀತ. ಇಂಥವರನ್ನು ಸಂಭಾಳಿಸುವುದು ಕಷ್ಟದ, ನಾಜೂಕಿನ, ಬುದ್ಧಿವಂತಿಕೆ ಮತ್ತು ಸಂಯಮ ಬೇಡುವ ಕೆಲಸ. ಸಿನೆಮಾದಲ್ಲಿ ಈತನ ಹಾವಭಾವ, ವೇಷಭೂಷಣಗಳನ್ನು ನೋಡಿಯಾದರೂ ವಿಲನ್ ಎನ್ನಬಹುದೇನೋ; ಆದರೆ ನಿಜಜೀವನದಲ್ಲಿ ಇವರು ನಮ್ಮ ನಿಮ್ಮಂತೆಯೇ ಇರುತ್ತಾರೆ. ನಮ್ಮ ಭಾಷೆಯನ್ನೇ, ನಮ್ಮ ಧಾಟಿಯಲ್ಲೇ ಮಾತಾಡುತ್ತಾರೆ. ನಮಗೇನೋ ಬಹಳ ದೊಡ್ಡ ಉಪಕಾರ ಮಾಡಲಿಕ್ಕೆಂಬಂತೆ ಹಿಂದೆ ಮುಂದೆ ಸುಳಿದಾಡಿಕೊಂಡಿರುತ್ತಾರೆ. “ನೀನೂ? ಬ್ರೂಟಸ್!” ಎಂದು ನಾವು ಕಂಗಾಲಾಗಿ ನೆಲಕ್ಕುರುಳುವಷ್ಟರಲ್ಲಿ ಕಾಲ ಮಿಂಚಿರುತ್ತದೆ. ಮತ್ತಷ್ಟು ಓದು »

23
ಜುಲೈ

ಒಳಗಣ್ಣು – 1 ( ಭಗವದ್ಗೀತೆಯನ್ನು ಯಾವ ಪ್ರಾಯದಲ್ಲಿ ಓದಬೇಕು? )

– ಸ್ವಾಮಿ ಶಾಂತಸ್ವರೂಪಾನಂದ

krishna-poster-FV90_lನಮ್ಮಲ್ಲೊಂದು ಅಭಿಪ್ರಾಯವಿದೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ಭಾಗವತ, ಉಪನಿಷತ್ತು ಇವೆಲ್ಲ ಪ್ರಾಯವಾದವರಿಗೆ. ಅಜ್ಜಂದಿರಿಗೆ. ಕೈಲಾಗದೆ ಕೂತವರಿಗೆ. ಊರುಗೋಲಿಲ್ಲದೆ ನಡೆದಾಡಲು ಆಗದ ಸ್ಥಿತಿಗೆ ತಲುಪಿದ ಮೇಲೆ ಇವೆಲ್ಲ ವೇದಾಂತಗಳು. ಅಲ್ಲಿಯವರೆಗೆ ನಮಗೆ ಧರ್ಮಗ್ರಂಥಗಳು ಬೇಕಾಗಿಲ್ಲ, ಅಂತ. ಒಮ್ಮೆ ನಾನು ಉತ್ತರಭಾರತದ ಪ್ರವಾಸದಲ್ಲಿದ್ದಾಗ ಒಂದು ಹಳ್ಳಿಯ ದೇವಸ್ಥಾನದಲ್ಲಿ ಪೂಜೆ ಮತ್ತು ಪ್ರವಚನ ಏರ್ಪಾಟಾಗಿತ್ತು. ಪೂಜೆಯ ಹೊತ್ತಿಗೆ ಊರಿನ ಹಲವು ತರುಣರು ಹಾಜರಿದ್ದರು. ಆದರೆ ಪೂಜೆಯ ಬಳಿಕ ಗೀತಾಪ್ರವಚನ ಎಂದಾದಾಗ ಅಲ್ಲಿದ್ದ ತರುಣರೆಲ್ಲ ಹೊರಟುಹೋಗಿ ನಡುವಯಸ್ಸು ದಾಟಿದ ಮಂದಿಯಷ್ಟೇ ಉಳಿದರು. ಹಾಗೇಕಾಯಿತು ಎಂದು ಅಲ್ಲಿದ್ದವರಲ್ಲಿ ಕೇಳಿದಾಗ “ಸತ್ಸಂಗ, ಪ್ರವಚನ ಇವೆಲ್ಲ ಮಕ್ಕಳಿಗೇಕೆ ಸ್ವಾಮಿ! ಅದನ್ನು ಕೇಳುವುದೇನಿದ್ದರೂ ಜೀವನದ ಎಲ್ಲ ವ್ಯಾಪಾರ ಮುಗಿಸಿ ಪರಲೋಕಕ್ಕೆ ಹೊರಡಲನುವಾದ ಮುದುಕರ ಕೆಲಸವಲ್ಲವೆ?” ಎಂದು ಹೇಳಿದರು. ಇನ್ನೊಂದು ಸಂದರ್ಭದಲ್ಲಿ, ಮುಂಬಯಿಯ ಮನೆಯೊಂದಕ್ಕೆ ಆಮಂತ್ರಿತನಾಗಿ ಹೋಗಿದ್ದೆ. ಮನೆ ಯಜಮಾನ ನನಗೆ ಅವರ ದೇವರ ಮನೆ ತೋರಿಸುತ್ತ, ಅಲ್ಲೇ ಪಕ್ಕದಲ್ಲಿ ಪೇರಿಸಿದ್ದ ಉದ್ಗ್ರಂಥಗಳನ್ನು ತೋರಿಸಿ, ಅವಕ್ಕೆ ಪ್ರತಿದಿನ ಪೂಜೆ ಮಾಡುತ್ತೇನೆ ಎಂದರು. “ಹೌದೆ? ಏನು ಪುಸ್ತಕಗಳವು?” ಎಂದು ಕೇಳಿದೆ. ನೋಡಿದರೆ ಬಹಳ ಹಳೆಯ ಕಾಲದ ಪುಸ್ತಕಗಳಂತೆ ಕಂಡವು. ಹಾಳೆ ವೃದ್ಧಾಪ್ಯದ ಕಾರಣದಿಂದ ಬೂದುಬಣ್ಣಕ್ಕೆ ತಿರುಗಿತ್ತು. ರಟ್ಟಿಗೂ ಮನುಷ್ಯನೊಬ್ಬನ ಆಯುಸ್ಸಿನಷ್ಟೇ ಪ್ರಾಯವಾಗಿರಬೇಕು! “ಇವು ರಾಮಾಯಣ, ಮಹಾಭಾರತ ಮತ್ತು ಭಾಗವತದ ಗ್ರಂಥಗಳು. ನನ್ನ ಅಜ್ಜ ಅವನ್ನು ಬಳಸುತ್ತಿದ್ದರಂತೆ. ನಂತರ ತಂದೆಯ ಕೈಗೆ ಬಂದವು. ಅಲ್ಲಿಂದ ನನಗೆ ಸಿಕ್ಕವು. ಮೂರು ತಲೆಮಾರಿನಿಂದ ಅವು ಹೀಗೆ ದೇವರ ಕೋಣೆಯಲ್ಲಿ ಪೂಜೆಗೊಳ್ಳುತ್ತಿವೆ” ಎಂದರಾತ. “ಓಹ್! ನೀವು ಇವನ್ನು ಅಭ್ಯಾಸ ಮಾಡಿದ್ದೀರೆಂದು ತುಂಬ ಖುಷಿಯಾಯಿತು” ಎಂದು ಹರ್ಷ ವ್ಯಕ್ತಪಡಿಸಿದೆ. “ಇಲ್ಲ ಇಲ್ಲ! ಇವೆಲ್ಲ ಸಂಸ್ಕೃತದಲ್ಲಿರುವ ಪುಸ್ತಕಗಳು! ನನಗೆ ಇಂಗ್ಲೀಷ್ ಮತ್ತು ಕೊಂಚ ಹಿಂದಿ ಬಿಟ್ಟರೆ ಮಿಕ್ಕ ಭಾಷೆಗಳ ಅಭ್ಯಾಸವಿಲ್ಲ. ಸಂಸ್ಕೃತವಂತೂ ನನ್ನ ಅಜ್ಜನ ಕಾಲಕ್ಕೇ ನಿಂತುಹೋಯಿತು. ಅವರು ಆಗಿನ ಕಾಲದ ಮೇಧಾವಿಗಳೊಂದಿಗೆ ಸಂಸ್ಕೃತದಲ್ಲಿ ಚರ್ಚೆ ಮಾಡುತ್ತಿದ್ದರಂತೆ. ತಂದೆಗೆ ಅಲ್ಪಸ್ವಲ್ಪ ಬರುತ್ತಿದ್ದಿರಬೇಕು. ನನಗಂತೂ ಸಂಸ್ಕೃತವನ್ನು ಸುಡುತಿನ್ನಲಿಕ್ಕೂ ಬರುವುದಿಲ್ಲ! ಇವೆಲ್ಲ ಹಳೆ ತಲೆಮಾರಿನ ವಸ್ತುಗಳೆಂದು ದೇವರ ಮನೆಯಲ್ಲಿಟ್ಟು ಪೂಜೆ ಮಾಡುತ್ತೇವೆ ಅಷ್ಟೆ! ನಿವೃತ್ತನಾದ ಮೇಲೆ ನಾನು ಮಹಾಭಾರತವೋ ರಾಮಾಯಣವೋ ಯಾವುದಾದರೊಂದು ಕೃತಿಯ ಇಂಗ್ಲೀಷ್ ಅನುವಾದವನ್ನು ಕೊಳ್ಳಬೇಕೆಂದಿದ್ದೇನೆ” ಎಂದರು ಆ ಪುಣ್ಯಾತ್ಮ. ನನಗೆ ಭ್ರಮನಿರಸನವಾದರೂ ಮತ್ತಷ್ಟು ಕುತೂಹಲ ಉಳಿದಿತ್ತು. “ಅದೇಕೆ ಯಾವುದಾದರೊಂದು ಕೃತಿ ಎನ್ನುತ್ತೀರಿ? ಎರಡೂ ಕೊಳ್ಳಬಹುದಲ್ಲ!” ಎಂದೆ ನಾನು. ಅದಕ್ಕೆ ಆ ಮನುಷ್ಯ ನಗುತ್ತ “ತಮಾಷೆ ಮಾಡ್ತಿದ್ದೀರಾ ಸ್ವಾಮೀಜಿ! ನಿವೃತ್ತನಾದ ಮೇಲೆ ನಮಗೆ ಎಷ್ಟು ಮಹಾ ಆಯುಷ್ಯ ಉಳಿದಿರುತ್ತೆ! ಹೆಚ್ಚೆಂದರೆ ಹತ್ತು ವರ್ಷ! ಅಷ್ಟರಲ್ಲಿ ಒಂದು ಗ್ರಂಥ ಓದಿ ಅರ್ಥೈಸಿಕೊಳ್ಳುವುದೇ ಕಷ್ಟದ ಮಾತು. ಅಂಥಾದ್ದರಲ್ಲಿ ಎರಡೆರಡು ಹೇಗೆ ಸಾಧ್ಯ? ಎರಡು ಪುಸ್ತಕ ಕೊಂಡು ಅವುಗಳಲ್ಲೊಂದನ್ನು ಓದಲು ಆಗದೇ ಹೋದರೆ ಆ ನಿರಾಸೆ ಮನಸ್ಸಲ್ಲಿ ಉಳಿದುಬಿಡುತ್ತದಲ್ಲವೆ?” ಎಂದು ಉತ್ತರಿಸಿದರು. ಮತ್ತಷ್ಟು ಓದು »

16
ಜೂನ್

ಗೂಂಡಾಗಿರಿ ಎಂದು ಕರೆಯುವ ಭಂಡತನ

Untitled5555

ಸಂಶೋಧಕರಾದ(?!!) ಭಗವಾನ್ ಅವರ ಶಂಕರಾಚಾರ್ಯ ಮತ್ತು ಪ್ರತಿಗಾಮಿತನ ಪುಸ್ತಕದ ಎರಡನೆಯ ಅಧ್ಯಾಯ “ಶಂಕರಾಚಾರ್ಯನ ಗೂಂಡಾಗಿರಿ ಮತ್ತು ವೈದಿಕ ಸಂಸ್ಕೃತಿ” ಲೇಖನದ ಶೀರ್ಷಿಕೆಯನ್ನು ಸಾಬೀತು ಪಡಿಸಲು ಸಂಶೋಧಕರು ಹಾಕಿರುವ ತಿಪ್ಪರಲಾಗ ಮತ್ತು ಬಿಟ್ಟ ಸತ್ಯವಿಚಾರಗಳು ಬೃಹದಾಕಾರವಾಗಿವೆ. ಸದ್ಯ, ಇವರುಗಳು ಗಣಿತ, ರಸಾಯನ ಶಾಸ್ತ್ರ ಮುಂತಾದುವುಗಳನ್ನು ಓದಿಲ್ಲ. ಇಲ್ಲದೇ ಹೋಗಿದ್ದರೆ ಅಲ್ಲಿ ಇವರು ಹುಟ್ಟುಹಾಕಬಹುದಾಗಿದ್ದ ಪ್ರಮೇಯಗಳಿಂದ ಎಷ್ಟು ವಿಜ್ಞಾನಿಗಳ ಆತ್ಮಗಳು ಅಕಾಲ ಮೃತ್ಯುವನ್ನಪ್ಪಿ ಪ್ರೇತಗಳಾಗುತ್ತಿದ್ದವೋ ಗೊತ್ತಿಲ್ಲ. ವಿಜ್ಞಾನ ಉಳ್ಕೊಂಡ್ರೂ ಸಮಾಜ ವಿಜ್ಞಾನವನ್ನು ಮನಕ್ಕೆ ಬಂದ ತರ್ಕ, ಊಹೆಗಳನ್ನು ವೈಜ್ಞಾನಿಕವೆಂದು ಒರಲುತ್ತಾ ಬುಡವಿಲ್ಲದ ಸಿದ್ಧಾಂತ ಮಂಡನೆ ಮತ್ತು ಬ್ರಾಹ್ಮಣರ ಖಂಡನೆಯಿಂದ ಪ್ರಚಂಡನಾಗುವ ಕೌಶಲವು ಬುದ್ಧಿಜೀವಿಗಳು ಎಂದೆನಿಸಿಕೊಳ್ಳಬೇಕಾದರೆ ಕಲಿಯಬೇಕಾದ ಕಸರತ್ತಾದ್ದರಿಂದ, ಆ ವಿಷಯದಲ್ಲಿ ಅಸಾಮಾನ್ಯ ಪ್ರತಿಭೆಯನ್ನು ಮೆರೆದಿದ್ದಾರೆ. ಕಳೆದ ಅಧ್ಯಾಯದಲ್ಲಿ ಶಂಕರಾಚಾರ್ಯರಿಂದ ಶುರುಮಾಡಿದ ಪ್ರಲಾಪವನ್ನು ಕಡೆಯಾಗುವಾಗ ನೌಕರಿ ಮಾಡುವ ಜನರವರೆಗೂ ವಿಸ್ತರಿಸಿದ್ದು ಇವರ ಪ್ರತಿಭೆಗೆ ಸಾಕ್ಷಿ. ಇಲ್ಲಿಯೂ ಅಷ್ಟೆ; ಯುಗ ಯುಗಗಳನ್ನು ಲೀಲಾಜಾಲವಾಗಿ ಹಾರಿ ನೆಗೆದು ಒಂದೆರಡು ಉದಾಹರಣೆಗಳಿಂದ ಇಡೀ ಗ್ರಂಥದ ಆಶಯವನ್ನೇ, ಆ ಜನಪದದ ಸಾಮಾರ್ಥ್ಯವನ್ನೇ ದಿಕ್ಕಾಪಾಲು ಮಾಡುವ ಅಮೋಘ ವಾದಲಹರಿಯಲ್ಲಿ ಮುಳುಗಿ ತೇಲಿದ್ದಾರೆ. ಆದರೆ ಇತಿಹಾಸವನ್ನು ತಿರುಚಿ ಬರೆಯಬಹುದಾದರೂ ಐತಿಹಾಸಿಕ ಸತ್ಯಗಳನ್ನು ನಾಶಮಾಡಲು ಸಾಧ್ಯವಿಲ್ಲವಾದ್ದರಿಂದ ವಿಚಾರಗಳ ಸತ್ಯಾಂಶಗಳನ್ನು ಪ್ರಸ್ತುತಪಡಿಸುವಲ್ಲಿ ದಯನೀಯವಾಗಿ ಸೋತಿದ್ದಾರೆ. ಈ ಅಧ್ಯಾಯದಲ್ಲಿ ಮುಖ್ಯವಾಗಿ ಆಪಾದಿಸಿರುವ ನಾಗಾರ್ಜುನಕೊಂಡದ ಬೌದ್ಧ ಮಂದಿರಗಳು ಶಂಕರಾಚಾರ್ಯರ ನೇತೃತ್ವದಲ್ಲಿ ಧ್ವಂಸವಾಗಿದ್ದು ಎಂಬುದರ ಮತ್ತು ಇನ್ನಿತರ ಐತಿಹಾಸಿಕ ವಿಚಾರಗಳೆಡೆಗೆ ನೋಡೋಣ. ಉಳಿದಂತೆ ಅದೇ ಬ್ರಾಹ್ಮಣ, ಪುರೋಹಿತಶಾಹಿ, ಹಿಂದೂ ಧರ್ಮ ಮುಂತಾದ ಪದಪುಂಜಗಳಿಂದ ಅರೋಪ ಮಾಡುತ್ತ ಪುಟಭರ್ತಿ ಮಾಡುವ ಕೆಲಸ ಮಾಡಿದ್ದಾರಾದ್ದರಿಂದ ಮತ್ತೆ ಮತ್ತೆ ಅದನ್ನು ಪರಿಶೀಲಿಸುವ ಅಗತ್ಯವಿಲ್ಲ. ಮತ್ತಷ್ಟು ಓದು »