ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

19
ಏಪ್ರಿಲ್

‘ಅಪರೇಷನ್ ಪೀಠತ್ಯಾಗ’ದ ಸೂತ್ರದಾರರು ಯಾರು?

– ಮಂಜುನಾಥ ಹೆಗಡೆ

FB_IMG_1460892892983ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮೇಲೆ ಬಂದಂತಹ ಅತ್ಯಾಚಾರ ಆರೋಪವನ್ನು ಇತ್ತೀಚೆಗೆ ನ್ಯಾಯಾಲಯವು ತಳ್ಳಿಹಾಕಿ, “ಇದು ಶ್ರೀಗಳನ್ನು ಸಿಕ್ಕಿಹಾಕಿಸಲು ನಡೆಸಿದ ಷಡ್ಯಂತ್ರ” ಎಂದು ಷರಾ ಬರೆದಿದ್ದಲ್ಲದೇ, CID ಮತ್ತು FSLಗಳನ್ನು ಕೂಡ ತರಾಟೆಗೆ ತೆಗೆದುಕೊಂಡಿದೆ. ಹಾಗಾದರೆ ಯಾರು, ಯಾಕಾಗಿ ಒಂದು ಧಾರ್ಮಿಕ ಸಂಸ್ಥೆಯ ಮೇಲೆ ಹಗೆ ಸಾಧಿಸಲು ಹೊರಟಿದ್ದಾರೆ ? ಯಾರು ಮಠವನ್ನು ಇನ್ನಿಲ್ಲವಾಗಿಸುವ “ಷಡ್ಯಂತ್ರ” ಮಾಡುತ್ತಿದ್ದಾರೆ? ಆಮೂಲಾಗ್ರವಾಗಿ ಎಲ್ಲವನ್ನೂ ಪರಿಶೀಲಿಸಬೇಕಾಗಿದೆ!

ಸುಮಾರು 1200 ವರ್ಷಗಳ ಹಿಂದೆ ಆದಿಶಂಕರಾಚಾರ್ಯರು ಗೋಕರ್ಣದ ಸಮೀಪದ ಅಶೋಕೆಯಲ್ಲಿನ ಸೌಮ್ಯ ಪ್ರಕೃತಿಯ ಮಡಿಲಲ್ಲಿ ಧರ್ಮಪಾಲನೆಗಾಗಿ ಮಠವೊಂದನ್ನು ಸ್ಥಾಪಿಸಿ ತಮ್ಮ ಜ್ಯೇಷ್ಠ ಶಿಷ್ಯ ಸುರೇಶ್ವರಾಚಾರ್ಯರಿಂದ ಸನ್ಯಾಸ ದೀಕ್ಷೆ ಪಡೆದು ತಮ್ಮಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾನಂದರನ್ನು ಪೀಠಾಧಿಪತಿಯನ್ನಾಗಿ ಮಾಡಿ ಗೋಕರ್ಣ ದೇವಾಲಯದ ಆಡಳಿತವೂ ಸೇರಿದಂತೆ ಹಲವಾರು ಹೊಣೆಗಾರಿಕೆಗಳನ್ನು ಕೊಡುತ್ತಾರೆ. ಇದು ರಾಜಗುರುಪೀಠವಾಗಿದ್ದು ಸಮಾಜದ ಅಂತರಂಗ ಮತ್ತು ಬಹಿರಂಗ ಶ್ರೇಯೋಭಿವೃದ್ಧಿಗಾಗಿ ದುಡಿಯುತ್ತಿದೆ. ಅಲ್ಲಿಂದ ಇಲ್ಲಿನವರೆಗೂ ಶ್ರೀಮಠದ ಮಾರ್ಗದರ್ಶನದಲ್ಲಿ ಧರ್ಮಪಾಲನೆ ನಡೆಯುತ್ತಾ ಬಂದಿದೆ. ಶಂಕರರಿಂದ ಆರಂಭಿಸಿ 35 ತಲೆಮಾರುಗಳು ಕಳೆದಿವೆ. ಪ್ರಸ್ತುತ ಶ್ರೀ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು 36ನೇ ಪೀಠಾಧೀಶರಾಗಿರುತ್ತಾರೆ. ಶ್ರೀಗಳ ಪ್ರೇರಣೆಯಂತೆ ಬಿಂದು-ಸಿಂಧು, ಮುಷ್ಟಿಭಿಕ್ಷೆ, ವಿದ್ಯಾನಿಧಿ, ಕಾಮದುಘಾ, ಗುರುಕುಲ, ಭಾರತೀ ವಿದ್ಯಾಲಯಗಳು, ಗ್ರಾಮರಾಜ್ಯ, ವಿದ್ಯಾನಿಧಿ, ಜೀವನದಾನ ಮೊದಲಾದ ಹತ್ತು ಹಲವಾರು ಸಮಾಜಮುಖಿ ಯೋಜನೆಗಳು ಆರಂಭಗೊಂಡವು. ಅಷ್ಟಾಗಿ ಮಠದ ಸಂಪರ್ಕ ಇಲ್ಲದವರೂ ಮಠಕ್ಕೆ ಬರಲಾರಂಭಿಸಿದರು! ಮಠದ ಪ್ರಸಿದ್ಧಿಯೂ ಜಾಸ್ತಿಯಾಗುತ್ತಾ ಬಂತು! ಬರೀ ಜಪ-ತಪ-ಅನುಷ್ಠಾನಗಳೇ ಆಗಿದ್ದರೆ ತೊಂದರೆ ಇರಲಿಲ್ಲವೇನೋ! ಆದರೆ ಇದು ರಾಜಗುರು ಪೀಠ. ಇಲ್ಲಿ ಕಾವಿಯೂ ಇದೆ, ಕಿರೀಟ-ಶ್ವೇತಛತ್ರಗಳೂ ಇವೆ! ಸಮಾಜದಲ್ಲಿ ನಡೆಯುವ ಅಧರ್ಮ ಕಾರ್ಯಗಳ ನಿಗ್ರಹವೂ ಪೀಠದ ಹೊಣೆಯಾಗಿರುತ್ತದೆ! ಮತ್ತಷ್ಟು ಓದು »

15
ಏಪ್ರಿಲ್

ನೂರು ಸಾಲಿನ ಸರಳ (ಮಿನಿ) ರಾಮಾಯಣ ಕಾವ್ಯ…

ನಾಗೇಶ ಮೈಸೂರು

Ram-Vs-Ravan-14

ಶ್ರೀ ರಾಮ ಸೀತೆಯ ಕಥೆ ನಮಗೇನು ಹೊಸದಲ್ಲ ಬಿಡಿ.. ಎಲ್ಲಾ ಭಾಷೆಗಳಲ್ಲಿ ಖಂಡುಗಗಟ್ಟಲೆ ಕಥೆ, ಕಾವ್ಯಗಳು ಸಿಕ್ಕುತ್ತವೆ. ಆದರಿದು ಆಧುನಿಕ ವೇಗದ ಜಗ.. ಎಲ್ಲಾ ಸಂಕ್ಷಿಪ್ತದಲ್ಲಿ, ಫಾಸ್ಟ್ ಪುಡ್ಡಿನ ಹಾಗೆ ಶೀಘ್ರಗತಿಯಲ್ಲಿ ಸಿಗುವಂತಿದ್ದರೆ ಅದನ್ನೇ ಬಯಸುವ ಗ್ರಾಹಕ ವರ್ಗವೂ ಸಾಕಷ್ಟು ದೊಡ್ಡದಿದೆ. ಇನ್ನು ಮಿಕ್ಕವರಿಗೆ ದೊಡ್ಡದು, ಚಿಕ್ಕದು ಎನ್ನುವ ಜಿಜ್ಞಾಸೆಗಿಂತ ಸಮಯದ ಅಭಾವ. ಇನ್ನು ಕಿರಿಯರ ವಿಷಯಕ್ಕೆ ಬಂದರೆ ಅವರಿಗೆ ತೀರಾ ಭಾರವಾಗದ ರೀತಿಯಲ್ಲಿ ಅರುಹಬೇಕಾದ ಅನಿವಾರ್ಯ.. ಇದನ್ನೆಲ್ಲಾ ಗಮನದಲ್ಲಿರಿಸಿಕೊಂಡು ಹೆಣೆದ ನೂರು ಸಾಲಿನ, ಚತುಷ್ಪಾದಿ ಅವತಾರದಲ್ಲಿರುವ ಕಾವ್ಯರೂಪಿ ರಾಮಾಯಣ ಸಾರ – ಈ ಶ್ರೀರಾಮ ಚರಿತ. ನರಮಾನವನಾಗಿ ಪಡಿಪಾಟಲು ಪಟ್ಟನೆನ್ನುವ ಹಿನ್ನಲೆಯನ್ನು ಅಂತರ್ಗತವಾಗಿಸಿಕೊಂಡು ಮೂಡಿಬಂದ ಕಥಾಲಹರಿ. ಸರಳ ಲಹರಿ ಹಿತವಾಗಿ ನುಡಿವಂತಿದ್ದು ಮುದ ತಂದರೆ ಧನ್ಯ .

ಮೂರ್ಖತೆಯ ತೆಗುಳು, ದ್ವಾರಪಾಲರ ಅಹಂಕಾರಗಳು

ನೆಮ್ಮದಿಯ ವೈಕುಂಠ, ಕಿಚ್ಚನ್ಹಚ್ಚಿಸಿ ಮಹಾಲಕ್ಷ್ಮಿಗೆ ದಿಗಿಲು

ಸನಕಾದಿ ಮುನಿಗಳ ಶಾಪ, ಭೂಲೋಕದ ಜನ್ಮಪರಿತಾಪ

ಸೇವೆಯಾಳುಗಳ ವತಿಯಿಂದ, ಶ್ರೀ ಹರಿಗೂ ಬಿಡದ ಕೂಪ || ೦೧ ||

ಮತ್ತಷ್ಟು ಓದು »

11
ಏಪ್ರಿಲ್

ಋಗ್ವೇದ ೧೦.೮೫.೧೩ ಅಘಾಸು ಹನ್ಯಂತೇ ಗಾವಃ

– ವಿನಾಯಕ ಹಂಪಿಹೊಳಿ

rigvedaಸ್ವಘೋಷಿತ ಅಭಿನವ ಪ್ರವಾದಿ ಜಾಕೀರ ನಾಯ್ಕರ ಶಿಷ್ಯರೊಂದಿಗೆ ಸ್ವಲ್ಪ ದಿನಗಳ ಹಿಂದೆ ನನ್ನ ಕೆಲವು ಮಿತ್ರರು ಚರ್ಚೆಯೊಂದನ್ನು ನಡೆಸಿದ್ದರು. ಆ ಚರ್ಚೆಯಲ್ಲಿ ನಾನೂ ಭಾಗವಹಿಸಿದ್ದೆ. ಅಲ್ಲಿ ನಮ್ಮ ವಿರೋಧಿಗಳ ವಾದವೊಂದು ನನ್ನ ಗಮನ ಸೆಳೆಯಿತು. ಅಲ್ಲಿ ನಮ್ಮ ವಿರೋಧಿಗಳು “ಋಗ್ವೇದದಲ್ಲಿ ಗೋಮಾಂಸದ ಉಲ್ಲೇಖವಿದೆ. ಮದುವೆಯ ಸಂದರ್ಭದಲ್ಲಿ ಆಕಳುಗಳನ್ನು ಕಡಿಯಲಾಗುತ್ತಿತ್ತು ಎಂಬುದಕ್ಕೆ ಆಧಾರವಿದೆ. ಬೇಕಾದರೆ ಋಗ್ವೇದದ ೧೦ನೇ ಮಂಡಲದ ೮೫ನೇ ಸೂಕ್ತದ ೧೩ನೇ ಋಕ್ಕನ್ನು ನೋಡಿ” ಎಂದು ಹೇಳಿದ್ದರು. ಆ ಋಕ್ಕು ಹೀಗಿತ್ತು.

ಸೂರ್ಯಾಯಾ ವಹತುಃ ಪ್ರಾಗಾತ್ಸವಿತಾ ಯಮವಾಸೃಜತ್ | ಅಘಾಸು ಹನ್ಯಂತೇ ಗಾವೋsರ್ಜನ್ಯೋಃ ಪರ್ಯುಹ್ಯತೇ || ಮತ್ತಷ್ಟು ಓದು »

2
ಏಪ್ರಿಲ್

ಸ್ವಾಮಿ ವಿವೇಕಾನಂದರ ಒಂದು ಮರು ಓದು

Swamijiಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

3, 4, 5 ಜೂನ್ 2016

ಸ್ಥಳ ಮತ್ತು ಆತಿಥ್ಯ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ, ಕರ್ನಾಟಕ

ಸಹ ಸಂಘಟಕರು: Vergelijkende Cultuurwetenschappen (ಗೆಂಟ್ ವಿಶ್ವವಿದ್ಯಾಲಯ, ಬೆಲ್ಜಿಯಂ); SDM Centre for Interdisciplinary Research in Humanities and Social Sciences (ಉಜಿರೆ, ಭಾರತ) ಮತ್ತು India Platform

 ಪ್ರವೇಶ: ಉಚಿತ, ಆದರೆ ನೊಂದಾವಣೆ ಖಡ್ಡಾಯ.

ನೊಂದಾಯಿಸಿಕೊಳ್ಳಲು, ತಮ್ಮ ಪೂರ್ಣ ಹೆಸರು, ಸಂಸ್ಥೆ ಮುಂತಾದ ವಿವರಗಳೊಂದಿಗೆ ಇಲ್ಲಿಗೆ ಬರೆಯಿರಿ: revisitingvivekananda@gmail.com

ಕಡೆಯ ದಿನಾಂಕ: 10 ಮೇ 2016.

ಸಮ್ಮೇಳನದ ಚಟುವಟಿಕೆಗಳ ತಾತ್ಕಾಲಿಕ ವೆಳಾಪಟ್ಟಿ ಮತ್ತು ಇಂಗ್ಲಿಷ್ concept noteಗಾಗಿ ನೋಡಿ:  http://www.cslc.in/dharma-and-ethics/?page=Dharma_And_Ethics_8 ಮತ್ತಷ್ಟು ಓದು »

17
ಫೆಬ್ರ

ಏಕರೂಪ ನಾಗರಿಕ ಸಂಹಿತೆ – ಸುಪ್ರೀಂ ಕೋರ್ಟ್ V/S ಜಮಾತೆ ವಿಚಾರಧಾರೆ

– ಅನಿರುದ್ಧ ವಸಿಷ್ಟ,ಭದ್ರಾವತಿ

ಅರಾಜಕತೆ ತಂದೊಡ್ಡದಿರಲಿ ಧರ್ಮಾಧಾರಿತ ಕಾನೂನು

Uniform Civil Codeಪ್ರಜಾಪ್ರಭುತ್ವ ದೇಶದಲ್ಲಿರುವ ಭಾರತೀಯರಿಗೆ ದೇಶದ ಸಂವಿಧಾನವೇ ಮೇಲ್ಪಂಕ್ತಿಯಾಗಿದ್ದು, ಸಂವಿಧಾನವೇ ಅಂತಿಮವಾದುದು. ಧರ್ಮ ಗ್ರಂಥಗಳಾದ ರಾಮಾಯಣ, ಮಹಾಭಾರತ, ಕುರಾನ್, ಬೈಬಲ್‌ಗಳು ಆಯಾ ಧರ್ಮದ ಅನುಯಾಯಿಗಳ ವೈಯಕ್ತಿಕವಾಗಿರಬೇಕು.ಆದರೆ,ವೋಟ್ ಬ್ಯಾಂಕ್ ರಾಜಕಾರಣದ ಫಲವಾಗಿ ಸರ್ಕಾರಗಳು ಕೈಗೊಂಡ ನಿರ್ಧಾರಗಳು ಸಂವಿಧಾನ ವಿರುದ್ಧ ನಡೆಯಲು ಪ್ರೇರಣೆಯಾಗುತ್ತವೆ ಎಂದರೆ ಅದು ಪ್ರಜಾಪ್ರಭುತ್ವದ ದುರಂತವೇ ಹೌದು.೩೦೦ ವರ್ಷಗಳ ಕಾಲ ಬ್ರಿಟೀಷರಿಂದ ಆಳಿಸಿಕೊಂಡ ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದರೂ, ಒಂದು ರೀತಿಯಲ್ಲಿ ಸರ್ವಾಧಿಕಾರಿ ಮನಸ್ಥಿತಿಯನ್ನೆ ಇಂದಿಗೂ ಹೊಂದಿದೆ ಎಂದರೆ ತಪ್ಪಲ್ಲ. ಇದು ಕೇವಲ ಆಳುವ ಪಕ್ಷಗಳ ಮನಸ್ಥಿತಿ ಮಾತ್ರವಲ್ಲ, ದೇಶದ ಪ್ರತಿ ಧರ್ಮ ಹಾಗೂ ಜಾತಿಗಳಲ್ಲಿ ಇದು ಹಾಸು ಹೊಕ್ಕಾಗಿದೆ.

೧೯೪೭ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರೂಪಿಸಲಾದ ಸಂವಿಧಾನ ಮಹೋನ್ನತ ಆಶಯಗಳನ್ನು ಹೊಂದಿದೆ.ಸಂವಿಧಾನವೇ ಭಾರತೀಯರಿಗೆ ಒಂದು ರೀತಿಯಲ್ಲಿ ಸವೋತ್ತಮ ಎಂದರೂ ತಪ್ಪಲ್ಲ. ಆದರೆ, ಸಂವಿಧಾನ ಆಶಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ಯಾವುದೇ ಸರ್ಕಾರ ಅಥವಾ ಧರ್ಮಗಳು ನಡೆದುಕೊಂಡಾಗ ಅದನ್ನು ನ್ಯಾಯಾಂಗದಲ್ಲಿ ಪ್ರಶ್ನೆ ಮಾಡುವ ಅಧಿಕಾರವನ್ನು ಇದೇ ಸಂವಿಧಾನ ಕಲ್ಪಿಸಿದೆ. ಆದರೆ, ಯಾವುದೇ ಒಂದು ಒಳ ವ್ಯವಸ್ಥೆ ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನಿಸುತ್ತದೆ ಎಂದರೆ ಹೇಗೆ?

ಮತ್ತಷ್ಟು ಓದು »

1
ಫೆಬ್ರ

ದೇವಾಲಯ ಪ್ರವೇಶದ ಕುರಿತು ತಪ್ಪು ತಿಳಿವಳಿಕೆಗಳು

– ಡಾ. ರಾಜಾರಾಮ ಹೆಗಡೆ
ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ,ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ.

ಶನಿಸಿಂಗಾಣಪುರಇಂದು ಎರಡು ವಿಭಿನ್ನ ಸ್ಥಳಗಳಲ್ಲಿ ದೇವಾಲಯಗಳಿಗೆ ಸ್ತ್ರೀಯರ ಪ್ರವೇಶದ ಕುರಿತು ಹೋರಾಟಗಳು ನಡೆಯುತ್ತಿವೆ. ಈ ಹೋರಾಟವನ್ನು ನಡೆಸುತ್ತಿರುವವರು ಪ್ರಗತಿಪರರು ಹಾಗೂ ಸ್ತ್ರೀವಾದಿಗಳು. ಈ ಸಂದರ್ಭದಲ್ಲಿ ಅವರು ಎತ್ತುತ್ತಿರುವ ಚರ್ಚೆಯನ್ನು ಗಮನಿಸಿದಾಗ ಭಾರತೀಯ ಸಂಸ್ಕೃತಿಯ ಕುರಿತು ಈ ಮುಂದಿನ ತಪ್ಪು ಕಲ್ಪನೆಗಳು ಅವರಿಗೆ ಇರುವುದು ಸ್ಪಷ್ಟ. ಅದೆಂದರೆ: 1. ಹಿಂದೂ ಎನ್ನುವುದು ಇಸ್ಲಾಂ, ಕ್ರಿಶ್ಚಿಯಾನಿಟಿಗಳಂತೆ ಒಂದು ರಿಲಿಜನ್ನು. 2. ಹಿಂದೂಗಳ ದೇವಾಲಯಗಳು ಚರ್ಚು ಮಸೀದಿಗಳಂತೆ ಹಿಂದೂಗಳ ಸಾರ್ವಜನಿಕ ಪೂಜಾ ಸ್ಥಳಗಳು. ಹಾಗಾಗಿ ಹಿಂದೂ ಮಹಿಳೆಯರಿಗೆ ಇಂಥ ದೇವಾಲಯಗಳಲ್ಲಿ ಬಿಟ್ಟುಕೊಳ್ಳದಿರುವುದು ಲೈಂಗಿಕ ತಾರತಮ್ಯವನ್ನು ಮಾಡಿದಂತೇ ಎಂಬುದು ಅವರ ತರ್ಕ.

ಹಿಂದೂ ಎನ್ನುವುದು ಇಸ್ಲಾಂ ಕ್ರಿಶ್ಚಿಯಾನಿಟಿಗಳಂತೆ ರಿಲಿಜನ್ನಲ್ಲ. ಇದೊಂದು ಬಹು ಸಂಪ್ರದಾಯಗಳ ಸಮಾಜ. ಈ ಸಂಪ್ರದಾಯಗಳಿಗೆ ಆಧಾರವಾಗಿ ಕ್ರೈಸ್ತ ಮುಸ್ಲಿಮರಿಗೆ ಇರುವಂತೆ ಯಾವುದೇ ದೇವವಾಣಿ, ಪವಿತ್ರ ಗ್ರಂಥ ಅಥವಾ ಏಕರೂಪೀ ಡಾಕ್ಟ್ರಿನ್ನುಗಳ ಆಧಾರವಿಲ್ಲ. ಹಾಗಾಗಿ ಇಂಥ ಸಂಪ್ರದಾಯಗಳು ವೈವಿಧ್ಯಪೂರ್ಣವಾಗಿ ಬೆಳೆದುಕೊಂಡಿವೆ. ಹಿಂದೂ ದೇವಾಲಯಗಳು ಚರ್ಚುಗಳಂತೆ ಒಂದು ಕೇಂದ್ರೀಕೃತ ಆಡಳಿತ ವ್ಯವಸ್ಥೆಯ ಘಟಕಗಳಲ್ಲ. ಅವು ಹುಟ್ಟಿಕೊಳ್ಳುವುದು,ಅವುಗಳ ಅಭಿವೃದ್ಧಿ,ಜನಪ್ರಿಯತೆ,ನಿರ್ವಹಣೆ,ಅವನತಿ ಇವೆಲ್ಲ ಆಯಾ ಕ್ಷೇತ್ರಗಳ ಕ್ರಿಯಾಶೀಲತೆಗೆ ಸಂಬಂಧಪಟ್ಟ ಖಾಸಗಿ ವಿಚಾರಗಳಾಗಿವೆ. ಅವುಗಳಿಗೆ ಭಕ್ತರು ನಾನಾ ಕಡೆಗಳಿಂದ ಬರುತ್ತಾರೆ ಎಂಬ ಕಾರಣಕ್ಕೆ ಅವು ಸಾರ್ವಜನಿಕವಲ್ಲ. ಏಕೆಂದರೆ ಆ ಭಕ್ತರಿಗೆ ಅಲ್ಲಿ ಬರಲೇಬೇಕೆಂಬ ನಿರ್ಬಂಧವಿಲ್ಲ.ಭಕ್ತರು ಆಯಾ ಕ್ಷೇತ್ರದ ರೀತಿ ರಿವಾಜುಗಳಿಗೆ ಗೌರವಕೊಟ್ಟೇ ಅಲ್ಲಿಗೆ ತಮ್ಮ ಇಷ್ಟಾರ್ಥಗಳನ್ನು ಪಡೆಯಲು ಅಲ್ಲಿಗೆ ಬಂದಿರುತ್ತಾರೆ.ಯಾರಿಗಾದರೂ ಹೊಸ ದೇವಾಲಯವನ್ನು ಕಟ್ಟಿ ಬೆಳೆಸುವ ಆಯ್ಕೆ ಮುಕ್ತವಾಗಿದೆ. ಹಾಗಾಗಿ ನಮ್ಮಲ್ಲಿ ಜಾತಿಗಳಿಗೆ,ಮತಗಳಿಗೆ,ಕುಲಗಳಿಗೆ,ಪ್ರದೇಶಗಳಿಗೆ,ಊರುಗಳಿಗೆ,ಗಲ್ಲಿಗಳಿಗೆ ಪ್ರತ್ಯೇಕದೇವಾಲಯಗಳು ಇರುವುದು.

ಮತ್ತಷ್ಟು ಓದು »

29
ಡಿಸೆ

ಬಂಗುಡೆ ಫ್ರೈ ಮತ್ತು ಭಗವದ್ಗೀತೆ

– ರೋಹಿತ್ ಚಕ್ರತೀರ್ಥ

ದೇವನೂರು ಮಹಾದೇವವರ್ಷಕ್ಕೋ ಎರಡು ವರ್ಷಕ್ಕೋ ಒಂದು – ಎರಡಲ್ಲ, ಒಂದೇ – ಸಿನೆಮಾ ಕೊಡುತ್ತಿದ್ದ ಹಿಂದಿಯ ರಾಜ್‍ಕುಮಾರ್ ಮೇಲೆ, ನನ್ನ ತಂದೆಗೆ ಕುತೂಹಲ, ಪ್ರೀತಿ, ಹುಚ್ಚು ಅಭಿಮಾನ ಇದ್ದವು. ಹಾಗೆಯೇ, ಬಹುಕಾಲ ಮೌನವಾಗಿದ್ದು ವರ್ಷಕ್ಕೆ ಒಂದೆರಡು ಮಾತು, ಒಂದೆರಡು ಹಾಳೆ ಸಾಹಿತ್ಯ ಬರೆಯುವವರ ಬಗ್ಗೆ ಹೆಚ್ಚಾಗಿ ಜನರಿಗೆ ಕುತೂಹಲ ಇರುತ್ತದೆ. ಇಂಥವರು ಕಾವಿ ತೊಟ್ಟರೆ, ಮಾತಾಡದೆ ಕೂತರೂ ಜಗತ್ಪ್ರಸಿದ್ಧರಾಗುತ್ತಾರೆ! ಇಂತಹ ಮಿತಾಕ್ಷರಿಗಳ ಪಂಥಕ್ಕೆ ಸೇರಿದ ಕನ್ನಡದ ಸಾಹಿತಿ ದೇವನೂರ ಮಹಾದೇವ, ವರ್ಷಕ್ಕೆ ಒಂದು ಭಾಷಣ ಮಾಡಿದರೆ, ಅದರ ಹಿಂದೆ ಹಲವು ದಿನಗಳ ಚಿಂತನೆ ಇರುತ್ತದೆ; ಇರಬೇಕು ಎಂದು ನಾವೆಲ್ಲ ಬಯಸುತ್ತೇವೆ. ಹಾಗೆಯೇ, ಅವರ ಐನೂರು ಪದಗಳೊಂದು ಲೇಖನ ಪ್ರಕಟವಾದರೂ, ಅದರಲ್ಲೇನೋ ಗಹನವಾದ ಸೂತ್ರರೂಪೀ ಸಂಗತಿಗಳು ಅಡಕವಾಗಿರಬಹುದು ಎಂಬ ಪೂರ್ವಗ್ರಹದಿಂದ ಎರಡೆರಡು ಬಾರಿ ಓದಿನೋಡುವ ಸಾಹಿತ್ಯಪ್ರೇಮಿಗಳಿದ್ದಾರೆ. ಹಾಗಾಗಿ ದಿನಕ್ಕೆ ಸಾವಿರ ಪದಗಳನ್ನು ಕುಟ್ಟುವ ನನ್ನಂಥ ಕೈಬಡುಕರಿಗಿಂತ ದೇವನೂರರ ಮೇಲೆ ಹುಟ್ಟುವ ನಿರೀಕ್ಷೆ ದೊಡ್ಡದು. ಅದನ್ನು ನಿಜ ಮಾಡುವ ಆನೆಯಂಥ ಹೊಣೆಗಾರಿಕೆಯೂ ಅವರ ಹೆಗಲ ಮೇಲೆ ಕೂತಿರುತ್ತದೆ.

ಈ ವರ್ಷ, ನಿಯಮ ತಪ್ಪಿ, ದೇವನೂರ ಎರಡು ಸಲ ಮಾತಾಡಿದರು. ಒಮ್ಮೆ, ಪ್ರಶಸ್ತಿ ಯಾಕೆ ವಾಪಸು ಮಾಡುತ್ತಿದ್ದೇನೆ ಎಂದು ಹೇಳಲು ಪತ್ರ ಬರೆಯುವುದರ ಮೂಲಕ. ಇನ್ನೊಮ್ಮೆ, ಮಂಗಳೂರಲ್ಲಿ ನಡೆದ – ಸಾಹಿತ್ಯವೊಂದು ಬಿಟ್ಟು ಮಿಕ್ಕೆಲ್ಲ ಅಪಸವ್ಯಗಳೂ ಇದ್ದ – ಒಂದು ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷಭಾಷಣ ಮಾಡುವ ಮೂಲಕ. ಪ್ರಶಸ್ತಿ ವಾಪಸು ಪ್ರಹಸನದ ನಿಜಬಣ್ಣ ಲೋಕಕ್ಕೇ ಗೊತ್ತಾಗಿರುವುದರಿಂದ, ಆ ಸಂದರ್ಭದ ಮಾತುಗಳನ್ನು ಮತ್ತೆ ಕೆದಕುವುದು ಬೇಡ. ನಕಲು ಸಮ್ಮೇಳನದಲ್ಲಿ ಅವರು ಏನು ಹೇಳಿದರು ಎನ್ನುವುದನ್ನು ಮಾತ್ರ ಈ ಲೇಖನದ ಸೀಮಿತ ಚೌಕಟ್ಟಿಗೆ ಎತ್ತಿಕೊಂಡಿದ್ದೇನೆ.

**
ಇತ್ತೀಚೆಗೆ ರಾಮಾಯಣ, ಮಹಾಭಾರತಗಳ ಕಡೆ ನಮ್ಮ ಸಮಕಾಲೀನ ಲೇಖಕರು ಮತ್ತೆಮತ್ತೆ ಹೊರಳುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಚರ್ಚೆಯ ವಿಷಯವಾಗಿರುವುದರಿಂದ ದೇವನೂರ ಕೂಡ ಆ ಎರಡು ಗ್ರಂಥಗಳನ್ನು ಎತ್ತಿಕೊಂಡಿದ್ದಾರೆ. ಮಿದುಳಿಲ್ಲದ ಧ್ವನಿವರ್ಧಕದಂತೆ ತನ್ನನ್ನು ಬಿಂಬಿಸಿಕೊಂಡು ಪ್ರಚಾರ ಪಡೆದ ಭಗವಾನ್‍ಗಿಂತ ಭಿನ್ನ ಧಾಟಿಯಲ್ಲಿ ಮಾತಾಡಿದ್ದರಿಂದ ದೇವನೂರರ ಮಾತುಗಳು – ಒಪ್ಪುವ ಒಪ್ಪದಿರುವ ಪ್ರಶ್ನೆಗಿಂತ, ಕನಿಷ್ಠ ವಿಶ್ಲೇಷಣೆಗೊಳಪಡಿಸಲು ಅರ್ಹವಾಗಿವೆ. ದೇವನೂರ ಬಹುಶಃ ಮೂರು ಪೂರ್ವಗ್ರಹಗಳಿಂದ ತನ್ನ ಮಾತು-ಚಿಂತನೆಗಳನ್ನು ಶುರುಮಾಡುತ್ತಾರೆ ಎಂದು ಕಾಣುತ್ತದೆ. ಒಂದು – ಭಾರತದಲ್ಲಿ ಇಂದಿಗೂ ದೇವಸ್ಥಾನಗಳಿಗೆ ಪ್ರವೇಶ ಪಡೆಯುವುದೇ ದಲಿತರ ದೊಡ್ಡ ಸವಾಲಾಗಿದೆ. ಎರಡು – ನಮ್ಮ ಪ್ರಾಚೀನ ಗ್ರಂಥಗಳಲ್ಲಿ ಹಲವು ಭಾಗಗಳು ಸರಿಯಿಲ್ಲ, ಮತ್ತು ಈ ಗ್ರಂಥಗಳೇ ಇಂದಿಗೂ ನಮ್ಮನ್ನು ಸಾಮಾಜಿಕವಾಗಿ ಬೌದ್ಧಿಕವಾಗಿ ಆಳುತ್ತಿವೆ. ಮೂರು – ಜಾತಿ ವರ್ಗ ಕಳೆದು ಎಲ್ಲವೂ ಸಮಾನವಾದರೆ ದೇಶದಲ್ಲಿ ಸರ್ವೋದಯವಾಗುತ್ತದೆ. ನಾನು ನನ್ನ ಸುತ್ತಲಿನ ಜಗತ್ತಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನಷ್ಟೆ ಹಿನ್ನೆಲೆಯಾಗಿಟ್ಟುಕೊಂಡು ದೇವನೂರರ ಮಾತುಗಳ ವಿಶ್ಲೇಷಣೆ ನಡೆಸುವುದು ಸಾಧ್ಯ. ಹಾಗಾಗಿ ಮುಂದಿನ ಎಲ್ಲ ಮಾತುಗಳನ್ನು ಓದುಗರು ತಂತಮ್ಮ ಜಗತ್ತಿನ ಹಿನ್ನೆಲೆಯಲ್ಲಿಟ್ಟು ತಾಳೆ ನೋಡುವುದಕ್ಕೆ ಸ್ವತಂತ್ರರು.
ಮತ್ತಷ್ಟು ಓದು »

3
ಡಿಸೆ

ವಾಲ್ಮೀಕಿ ರಾಮಾಯಣದ ಕ್ಷೇಪಕಗಳು

– ಡಾ| ಜಿ. ಭಾಸ್ಕರ ಮಯ್ಯ

ವಾಲ್ಮೀಕಿ ರಾಮಾಯಣಕ್ಷೇಪಕವೆಂದರೆ ನಂತರ ಸೇರಿಸಿದ್ದು.ಒಂದೊ ನಿಂದಿಸಲು ಅಥವಾ ವೈಭವೀಕರಿಸಲು ಅಥವಾ ಮೌಖಿಕ ರೂಪದಲ್ಲಿರುವ ಕಾವ್ಯವು ಸಹಜವಾಗಿಯೇ ಕಾಲಧರ್ಮಪ್ರಭಾವದಿಂದ ಜನರ ರುಚಿಸ್ವಾದ ಮತ್ತು ವಾಚಕರ ಪ್ರತಿಭೆಗನುಸರಿಸಿ ಭಾವಧರ್ಮಪರಿವರ್ತನೆಗಳಾಗುತ್ತಾ ಇರುತ್ತವೆ. ಐತಿಹಾಸಿಕ ಕಾಲಗಣನೆಯ ಪ್ರಕ್ರಿಯೆಯಲ್ಲಿ ಇಂಥವುಗಳಲ್ಲಿ ವಿದ್ವಾಂಸರು ಸಾಧಾರಣವಾಗಿ ಯಾವುದು ಪ್ರಕ್ಷಿಪ್ತ ಮತ್ತು ಯಾವುದು ಮೂಲವೆಂಬುದನ್ನು ಶೋಧಿಸುತ್ತಾರೆ.

ರಾಮಾಯಣದಲ್ಲಿರುವ ಒಟ್ಟು 7 ಕಾಂಡಗಳಲ್ಲಿ ಮೊದಲ ಮತ್ತು ಕೊನೆಯದು (1 ಮತ್ತು 7) ನಂತರ ಸೇರಿಸಲ್ಪಟ್ಟವುಗಳೆಂದು ಇಂದು ನಿರ್ವಿವಾದವಾಗಿ ವಿದ್ವತ್‍ವಲಯದಲ್ಲಿ ಸಿದ್ಧವಾದ ವಿಚಾರ. ಮೂಲಭಾರತವು ರಾಮಾಯಣಕ್ಕಿಂತ ಹಳೆಯದು. ವೇದದಲ್ಲಿ ರಾಮಾಯಣದ ಸುದ್ದಿಯೇ ಇಲ್ಲ; ಭಾರತದ ಸುಳಿವಿದೆ. ತ್ರಿಪಿಟಕಗಳಲ್ಲಿ ರಾಮಾಯಣದ ಪ್ರಸ್ತಾಪವಿಲ್ಲ. ಪಾಣಿನಿಯೂ ರಾಮಾಯಣವನ್ನು ಉದಾಹರಿಸುವುದಿಲ್ಲ. ಹಾಗಾಗಿ ಕ್ರಿ.ಪೂ. 3ನೆಯ ಶತಮಾನಕ್ಕಿಂತ ಹಿಂದೆ ರಾಮಾಯಣದ ರಚನೆಯಾಗಿರುವ ಸಂಭವವೇ ಇಲ್ಲ.

ರಾಮಾಯಣವು ಮೌಖಿಕ ಕಾವ್ಯ. ಅದು ಬರವಣಿಗೆಗೆ ಬಂದುದು ಕ್ರಿಸ್ತಶಕದ ನಂತರ.ಆ ಮುಂಚೆಯೂ ಆನಂತರವೂ ಎಷ್ಟೆಷ್ಟೋ ಅಂಶಗಳು ಅದರಲ್ಲಿ ಸೇರ್ಪಡೆಯಾಗಿವೆ. ವಾಲ್ಮೀಕಿಯದ್ದೆಂದು ಹೇಳಲಾಗುವ ಪ್ರಖ್ಯಾತ ಸಂಸ್ಕೃತ ರಾಮಾಯಣವು ಕ್ರಿ.ಪೂ. 2-3ರಲ್ಲಿ ರಚಿಸಲ್ಪಟ್ಟಿರಬಹುದು; ಬರೆಯಲ್ಪಟ್ಟಿರುವುದಿಲ್ಲ. ಹೊಸ ಸೇರ್ಪಡೆಗಳು ಅಂದರೆ ಪ್ರಕ್ಷಿಪ್ತಗಳು ಹೇರಳವಾಗಿ ತುಂಬಿಸಲ್ಪಟ್ಟು ಇಂದು ಉಪಲಬ್ಧ ವಾಲ್ಮೀಕಿ ರಾಮಾಯಣ ಒಂದಾದರೆ, ಬೇರೆ ಸಾವಿರಾರು ರಾಮಾಯಣಗಳೂ ಅಸ್ತಿತ್ವದಲ್ಲಿವೆ. ರಾಮನ ತಂಗಿ ಸೀತೆ ಎಂಬ ರಾಮಾಯಣವೂ ಇದೆ. ರಾವಣನನ್ನು ಕೊಂದವ ರಾಮನಲ್ಲ, ಲಕ್ಷ್ಮಣನೆಂತಲೂ ಇದೆ. ಅದಕ್ಕಾಗಿ ಆತ ನರಕಕ್ಕೆ ಹೋಗುತ್ತಾನೆ ಎಂತಲೂ ಜೈನ ‘ಪವುಮ ಚರಿತ’ ಹೇಳುತ್ತದೆ. ಎ.ಕೆ. ರಾಮಾನುಜನ್ ಸಂಗ್ರಹಿಸಿಕೊಟ್ಟ 300 ರಾಮಾಯಣಗಳಲ್ಲಿ ಒಂದು ಜಾನಪದ ರಾಮಾಯಣದಲ್ಲಿ ಸೀತೆ ರಾವಣನನ್ನು ಎಷ್ಟು ಮೋಹಿಸಿದ್ದಳೆಂದರೆ ಆಕೆ ಆತನ ಚಿತ್ರವನ್ನೂ ಬಿಡಿಸಿ ಅನಾಹುತ ಮಾಡಿಕೊಳ್ಳುತ್ತಾಳೆ. ಹೀಗಾಗಿ ರಾಮಾಯಣ ಯಾರ ಆಸ್ತಿಯೂ ಅಲ್ಲ, ಹಾಗೆಯೇ ಎಲ್ಲರ ಆಸ್ತಿಯೂ ಹೌದು.

ಏನೇ ಇರಲಿ, ವಾಲ್ಮೀಕಿ ರಾಮಾಯಣವನ್ನು ನಾವು ಒಂದು ಶ್ರೇಷ್ಠ ಮಹಾಕಾವ್ಯವೆಂದು ಭಾವಿಸುವುದಾದರೆ ಅದರಲ್ಲಿ ರಾಮನ ಉಜ್ವಲ ವ್ಯಕ್ತಿತ್ವಕ್ಕೆ ಕಳಂಕವನ್ನುಂಟು ಮಾಡುವ ಅಂಶಗಳನ್ನು ಪ್ರಕ್ತಿಪ್ತವೆಂದು ಕಿತ್ತೊಗೆಯಲೇ ಬೇಕು.
1) ಸೀತಾಪರಿತ್ಯಾಗ 2) ಶಂಬೂಕವಧ ಮತ್ತು 3) ಲವಕುಶರೊಡನೆ ರಾಮನ ಯುದ್ಧ – ಈ ಮೂರು ಅಸಂಬದ್ಧ ಮತ್ತು ಪ್ರಕ್ಷಿಪ್ತವೆಂದು ವೈದಿಕ ಜ್ಞಾನ ವಿಜ್ಞಾನ ಕೋಶದಲ್ಲೇ ಸ್ಪಷ್ಟೀಕರಿಸಲಾಗಿದೆ (ವೈದಿಕ ಜ್ಞಾನ ವಿಜ್ಞಾನ್ ಕೊಷ್: ಡಾ|| ಮನೋದತ್ತ ಪಾಠಕ್, ಪುಟ 252-254) :-
ಮತ್ತಷ್ಟು ಓದು »

25
ಆಗಸ್ಟ್

ಸ್ವಪ್ನ ಸಾರಸ್ವತ – ಎರಡು ಅನಿಸಿಕೆಗಳು

ಸ್ವಪ್ನ ಸಾರಸ್ವತ – ಕುಲ ಮತ್ತು ಕಾಲದ ಕಥೆ

– ನವೀನ ಗಂಗೋತ್ರಿ

ಸ್ವಪ್ನ ಸಾರಸ್ವತ'ನೆನಪಳಿಯದ ಕೃತಿಗಳ ಸಾಲಿನಲ್ಲಿ ಈ ಹೆಸರು ಎಂದಿಗೂ ಅಜರಾಮರ- ಸ್ವಪ್ನ ಸಾರಸ್ವತ. ಒಂದು ಕೃತಿ ಯಾಕೆ ಹಾಗೆ ಪದೇ ಪದೇ ಸ್ಮರಣೀಯವಾಗುತ್ತದೆ ಎನ್ನುವುದಕ್ಕೆ ಆ ಕೃತಿಯ ರೋಚಕತೆಯಾಗಲೀ, ಕಥೆಯ ಕಲ್ಪಕತೆ ಅಥವಾ ಕುತೂಹಲದ ತುದಿಯಲ್ಲಿ ನಿಲ್ಲಿಸುವ ಗುಣವಾಗಲೀ ಕಾರಣವಾಗದೆ ಆ ಕೃತಿಯು ತನ್ನ ಪಾತ್ರಗಳ ಮೂಲಕ ಮಾನವ ಬದುಕಿನ ಯಾವೆಲ್ಲ ಘಟ್ಟಗಳನ್ನು ತಾಕಬಲ್ಲದು,ಮತ್ತು ತಾತ್ತ್ವಿಕವಾಗಿ ಯಾವ ಅನಿಸಿಕೆಯನ್ನು ವ್ಯಕ್ತಪಡಿಸಬಲ್ಲದು ಎನ್ನುವುದು ಕಾರಣವಾಗುತ್ತದೆ. ಮಹಾಕಾವ್ಯಗಳಲ್ಲದೆ, ನಮ್ಮನಡುವೆ ಉಳಿದುಬಂದ ಯಾವುದೇ ಮೌಲಿಕ ಕೃತಿಯನ್ನು ತೆಗೆದುಕೊಂಡರೂ ಅದರ ಸಾರ್ವತ್ರಿಕ ಗುಣ ಇದುವೇ ಆಗಿರುತ್ತದೆ- ಮಾನವ ಬದುಕನ್ನು ಅದು ಕಾಣುವ ರೀತಿ ಮತ್ತು ಕಟ್ಟಿಕೊಡುವ ತಾತ್ತ್ವಿಕತೆ. ಬದುಕಿನ ಅರ್ಥದ ಬಗ್ಗೆ ಮನುಷ್ಯನಿಗಿರುವ ಆರದ ಕುತೂಹಲವೂ ಇದಕ್ಕೆ ಕಾರಣವಿದ್ದೀತು. ಎಷ್ಟೇ ರೋಚಕವಾದರೂ ಯಾವುದೋ ಸಾಮಾನ್ಯ ಪತ್ತೇದಾರಿ ಕಾದಂಬರಿ, ಯಾವುದೋ ಸಾಮಾನ್ಯ ಪ್ರೇಮ ಕಥೆ ನೆನಪಿರುವುದು ತುಂಬ ತುಂಬ ವಿರಳ. ಸಾರಸ್ವತದ ಚಿರಂಜೀವಿತ್ವ ಇರುವುದು ಅದರ ಚಿಂತನೆ ಮತ್ತು ತಾತ್ತ್ವಿಕ ಹಿನ್ನೆಲೆಯಲ್ಲಿ.

ಗೋವೆಯೆಂಬ ಪುಟ್ಟ ನಾಡಲ್ಲಿ ತಮ್ಮಪಾಡಿಗೆ ತಾವು ಬದುಕಿದ್ದ ಸಾರಸ್ವತ ಜನಾಂಗ, ಏಕಾ ಏಕಿ ಎರಗಿದ ಹುಂಬ ಪೋರ್ಚುಗೀಸರ ಭಯಂಕರ ಕಿರುಕುಳ ತಾಳಲಾರದೆ ತಮ್ಮ ಉಸಿರಿನ ನೆಲ ಬಿಟ್ಟು, ಬದುಕಲ್ಲಿ ಎಂದಿಗೂ ಕಂಡಿರದಿದ್ದ ಅರಿಯದ ನೆಲೆಗೆ ಎದ್ದುನಡೆದ ಕಥೆ ಅದು. ಕಥೆಯ ಹಂದರವಂತೂ ತುಂಬ ತುಂಬ ಸಂಕೀರ್ಣವಾಗಿದೆ. ಓದುವುದಕ್ಕೇ ಅದೊಂದುಬಗೆಯ ಏಕಾಗ್ರತೆಯನ್ನು ಬೇಡುವ ಈ ಕೃತಿ ತನ್ನ ಬರಹಗಾರನಲ್ಲಿ ಬೇಡಿದ ತಪಸ್ಸಿನ ಮೊತ್ತವನ್ನು ಕಲ್ಪಿಸಿ ಚಕಿತನಾಗುತ್ತೇನೆ.

ಸಮುದಾಯವೊಂದು ತನ್ನ ಜೀವನೆಲೆಯಂತಿರುವ ಭೂಭಾಗವನ್ನು ತೊರೆದು ಬರುವಾಗ ಅದೊಂದು ’ಕೇವಲ ಸ್ಥಾನಾಂತರಣ’ ಆಗಿರದೆ, ತಲೆಮಾರುಗಳನ್ನು ಪ್ರಭಾವಿಸುವ ಸಂಗತಿಯಾಗಿರುತ್ತದೆ ಎನ್ನುವುದು ಸಾರಸ್ವತವನ್ನು ಓದುವಾಗ ನಿಚ್ಚಳವಾಗುತ್ತದೆ. ತನ್ನ ಪರಿವಾರ, ಪರಿಸ್ಥಿತಿ, ಸಮೂಹದ ಸಮೇತ ಒಂದು ಕುಲ ಸ್ಥಾನಾಂತರವಾಗುವಾಗ ಯಾವುದೆಲ್ಲವನ್ನು ತನ್ನೊಡನೆ ಕೊಂಡೊಯ್ಯಬಹುದು? ಆಸ್ತಿ, ಹಣ, ಒಡವೆ, ಉಳಿಕೆ, ಗಳಿಕೆ- ಯಾವುದನ್ನು? ಸಾರಸ್ವತದ ದೃಷ್ಟಿ ಕೇಂದ್ರಗೊಳ್ಳುವುದು ಇದ್ಯಾವುದರ ಮೇಲೆಯೂ ಅಲ್ಲ, ಬದಲಿಗೆ ಆ ಹಂತದಲ್ಲಿ ಮನುಷ್ಯ ತುಂಬಾ ಗಾಢವಾಗಿ ಹೊತ್ತೊಯ್ಯಲು ಬಯಸುವುದೆಂದರೆ ತನ್ನ ತಲೆಮಾರುಗಳಿಗೆ ಸಾಕಾಗುವಷ್ಟು ನೆನಪನ್ನು, ಸಂಪ್ರದಾಯ ಆಚಾರ ಮತ್ತು ನಂಬುಗೆಗಳನ್ನು ಎಂಬ ನಿಲುಮೆಗೆ ಸಾರಸ್ವತ ಬರುತ್ತದೆ. ನೆಲ ಬಿಟ್ಟೆದ್ದು ಬಂದದ್ದೇ ಆಚಾರದ ಉಳಿಕೆಗಾಗಿ ಎಂಬಾಗ, ಹೊತ್ತೊಯ್ಯಬೇಕಿರುವುದು ಅದನ್ನೇ ಅಲ್ಲವೆ?

ಮತ್ತಷ್ಟು ಓದು »

8
ಆಗಸ್ಟ್

ಸೋತು ಗೆದ್ದ ಸ೦ತನ ಕತೆಯಿದು…

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

ರಾಮಕೃಷ್ಣ ಪರಮಹಂಸರಾಮಕೃಷ್ಣ ಪರಮಹ೦ಸರು ಯಾರಿಗೆ ತಾನೇ ಗೊತ್ತಿಲ್ಲ.ಬಹುಪಾಲು ಭಾರತೀಯರಿಗೆ ರಾಮಕೃಷ್ಣರು ಚಿರಪರಿಚಿತರು.ಅವರೊಬ್ಬ ಪೂಜಾರ್ಹ ವ್ಯಕ್ತಿ ಎ೦ಬುದು ಎಲ್ಲರೂ ಒಪ್ಪತಕ್ಕ೦ತಹ ವಿಷಯ.ಆದರೆ ಆರ೦ಭಿಕ ದಿನಗಳಲ್ಲಿ ಬಹುತೇಕ ಜನರು ಅವರನ್ನೊಬ್ಬ ವಿಚಿತ್ರ ವ್ಯಕ್ತಿಯೆ೦ಬ೦ತೆ ಭಾವಿಸುತ್ತಿದ್ದರು. ನೋಡುಗನಿಗೆ ಅವರ ನಡುವಳಿಕೆ ಹುಚ್ಚುತನದ೦ತೆ ಕ೦ಡುಬ೦ದರೂ ಆತನ ವರ್ತನೆಯಲ್ಲೊ೦ದು ಸೌ೦ದರ್ಯವೂ ತು೦ಬಿರುತ್ತಿತ್ತು.ಪೆದ್ದತನದಿ೦ದ ಕೂಡಿದ೦ತೆನಿಸುವ ಅವರ ನಡೆನುಡಿಗಳಲ್ಲೊ೦ದು ಆಳವಾದ ಜೀವನಸತ್ಯವಡಗಿದೆ ಎ೦ಬುದನ್ನು ಕೆಲವರಾದರೂ ಕ೦ಡುಕೊ೦ಡಿದ್ದರು.ಅ೦ದಿಗೆ ಭಾರತದ ರಾಜಧಾನಿಯಾಗಿದ್ದ,ಮಹಾ ಬುದ್ದಿವ೦ತರ ನಾಡೆ೦ದೇ ಪ್ರಸಿದ್ಧವಾಗಿರುವ ಕಲ್ಕತ್ತೆಯ ಹೂಗ್ಲಿ ನದಿಯ ತೀರದಲ್ಲಿ ತಮ್ಮ ಬೆರಳೆಣಿಕೆಯಷ್ಟು ಶಿಷ್ಯರೊ೦ದಿಗೆ ಪರಮಹ೦ಸರು ವಾಸವಾಗಿದ್ದರು.ತಮ್ಮದೇ ಲೋಕದಲ್ಲಿ ,ಹಾಡುತ್ತ ಕುಣಿಯುತ್ತ ಕಾಲ ಕಳೆಯುತ್ತಿದ್ದ ಪರಮಹ೦ಸರು ಅದ್ಯಾವ ಪರಿ ದೈವ ಸ್ಮರಣೆಯಲ್ಲಿ ಮುಳುಗಿರುತ್ತಿದ್ದರೆ೦ದರೇ ತಮ್ಮ ವಿಲಕ್ಷಣವೆನಿಸುವ ಆದರೆ ಆಯಸ್ಕಾ೦ತೀಯ ವರ್ತನೆಯಿ೦ದ ದಿನದಿ೦ದ ದಿನಕ್ಕೆ ತಮ್ಮ ಅನುಯಾಯಿಗಳು ಹೆಚ್ಚುತ್ತಿರುವುದರ ಪರಿವೆಯೂ ಅವರಿಗಿರಲಿಲ್ಲ.

ಹೀಗೊಬ್ಬ ವಿಕ್ಷಿಪ್ತ ವ್ಯಕ್ತಿ ತಮ್ಮ ನಡುವೆಯೇ ಇದ್ದಾನೆ ಮತ್ತು ಆತ ದೇವರ ಇರುವಿಕೆಯನ್ನು ಕಲ್ಕತ್ತೆಯಲ್ಲಿಯೇ ಸಾರುತ್ತಿದ್ದಾನೆ ಎ೦ಬುದನ್ನು ಮೊದಲು ಗಮನಿಸಿದವರು ಪಶ್ಚಿಮ ಬ೦ಗಾಳದ ಮಹಾನ್ ಚಿ೦ತಕರಲ್ಲಿ ಒಬ್ಬರಾದ ಕೇಶವ ಚ೦ದ್ರ ಸೇನರು.ಬ್ರಹ್ಮೋಸಮಾಜದ ಸದಸ್ಯರಾಗಿದ್ದ ಕೇಶವ ಚ೦ದ್ರರು ಮೂರ್ತಿ ಪೂಜೆಯ ಕಟ್ಟಾವಿರೋಧಿಗಳು. ಪರಮ ನಾಸ್ತಿಕರು ಮತ್ತು ಚತುರ ವಾಗ್ಮಿ. ಕಾಳಿದೇವಿಯ ವಿಗ್ರಹಾರಾಧಕನೊಬ್ಬ ತಮ್ಮ ಊರಿನಲ್ಲಿಯೇ ದೇವರ ಮಹಿಮೆಯನ್ನು ಸಾರುವ ಕೆಲಸವನ್ನು ಮಾಡುತ್ತಿದ್ದಾನೆ,ಅ೦ಥವನಿಗೆ ಕೆಲವು ಕಾಲೇಜಿನ ಅಧ್ಯಾಪಕರು ಶಿಷ್ಯರಾಗಿದ್ದಾರೆನ್ನುವ ವಿಷಯವನ್ನು ಕೇಳಿದಾಗ ಕೇಶವ ಸೇನರಿಗೆ ನಖಶಿಖಾ೦ತ ಕೋಪ.

ಮತ್ತಷ್ಟು ಓದು »