ವಿಷಯದ ವಿವರಗಳಿಗೆ ದಾಟಿರಿ

Posts from the ‘ಪರಿಸರ’ Category

1
ಜೂನ್

ಮನೆಮಗಳಿಗೊಂದು ಗಿಡ ನೆಡುವ ಧರ್ ಹರಾ ನಮಗೂ ಆದರ್ಶವಾಗಲಿ…

– ಚಿತ್ರ ಸಂತೋಷ್

ಹೆಣ್ಣುಮಗಳಿಗಾಗಿ ಗಿಡಗಳನ್ನು ನೆಡುವ ಬಿಹಾರದ ಧರ್‌ಹರಾ ಗ್ರಾಮದ ‘ವಿಶಿಷ್ಟ ಸಂಸ್ಕೃತಿ’ಯನ್ನು ನೋಡಿ ಅಮೆರಿಕಾವೇ ನಿಬ್ಬೆರಗಾಗಿತ್ತು. ಅಮೆರಿಕ ರಾಯಭಾರಿ ಮೆಲನ್ನೆ ವರ್ರ್ ಈ ಗ್ರಾಮವನ್ನು ಮನತುಂಬಾ ಕೊಂಡಾಡಿ, ಈ ಗ್ರಾಮ ವಿಶ್ವಕ್ಕೆ ಮಾದರಿ ಎಂದಿದ್ದರು. ಆದರೆ, ನಮ್ಮದೇ ನೆಲದ ಇಂಥದ್ದೊಂದು ಅಪೂರ್ವ ಸಂಸ್ಕೃತಿಯನ್ನು ನಮ್ಮನೆಯ ಸಂಸ್ಕೃತಿಯನ್ನಾಗಿ ಬೆಳೆಸುವ ‘ಕರ್ತವ್ಯ’ವನ್ನು ನಾವಿನ್ನೂ ಮಾಡೇ ಇಲ್ಲ!

ಬಿಟಿಯಾಕೀ ಜನ್ಮ್ ಹೋನಾ, ಹಮಾರೆ ಲಿಯೇ ತೋ ಬಹುತ್ ಖುಷಿಕೀ ಬಾತ್ ಹೈ. ಬಿಟಿಯಾ ಹಮಾರೆ ಲಿಯೇ ಬೋಜ್ ನಹೀ ಹೈ,  ಉನ್ಕೋ ಬಿ ಪಡಾಯೆತೋ ಓಬಿ ಸಾಕ್ಷರ್ ಬನಾಯೇಂಗೆ, ಶಾದಿಬೀ ಕರೇಂಗೆ. ಕ್ಯಾಂಕೀ ಬಿಟಿಯಾ ಧೋ ಘರ್ ಕೀ ಚಿರಾಗ್ ಹೈ….(ನಮಗೆ ಹೆಣ್ಣು  ಮಕ್ಕಳು ಹುಟ್ಟುವುದೆಂದರೆ ಅದೊಂದು ಸಂಭ್ರಮ, ಹೆಮ್ಮೆ. ಹೆಣ್ಣು ಮಕ್ಕಳು ನಮಗೆ ಹೊರೆಯಲ್ಲ. ಗಂಡು ಮಕ್ಕಳಂತೆ ಹೆಣ್ಣು ಮಕ್ಕಳಿಗೂ ಶಿಕ್ಷಣ ನೀಡ್ತೀವಿ. ಮದುವೆ ಮಾಡ್ತೀವಿ. ಏಕೆಂದರೆ ಹೆಣ್ಣು ಮಕ್ಕಳು ಎರಡು ಕುಟುಂಬಗಳ ಬಾಂಧವ್ಯವನ್ನು ಬೆಸೆಯುವ ಕೊಂಡಿ)

ಥತ್! ಇದ್ಯಾವುದೋ ಭಾಷಣಕಾರನ ಬೊಗಳೆ ಮಾತುಗಳು ಎಂದೆನಿಸಬಹುದು. ಆದರೆ, ನಿಮ್ಮ ಊಹೆ ಖಂಡಿತಾ ತಪ್ಪು. ಇದು ಕ್ಷಣ ಕ್ಷಣದ ಬದುಕನ್ನೂ ಕೂಲಿ-ನಾಲಿ ಮೂಲಕ ಕಂಡುಕೊಳ್ಳುವ ಜನಸಾಮಾನ್ಯರ ಮಾತು. ಇವರಿಗೆ ಹೆಣ್ಣು ಮಕ್ಕಳು ಹುಟ್ಟಿದರೆ ಹಬ್ಬದ ಸಂಭ್ರಮ. ನಮ್ಮ ಮನೆಮಗಳು ಹುಟ್ಟಿದರೆ, ಅವಳ ಬದುಕು ಅವಳೇ ಕಟ್ಟಿಕೊಳ್ಳುತ್ತಾಳೆ ಅನ್ನೋ ಗಟ್ಟಿ ನಂಬಿಕೆ ಅವರದು. ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸುವುದು ಅಥವಾ ಹೆಣ್ಣು ಮಗಳ ಮದುವೆಗಾಗಿ ಲಕ್ಷಾಂತರ ರೂಪಾಯಿ ಸಾಲಮಾಡಿ ಜೀವನಡೀ ಸಾಲ ತೀರಿಸಲು ಪರದಾಡುವುದು…ಇದೆಲ್ಲಾ ಈ ಊರಿನಲ್ಲಿ ಇನ್ನೂ “ಅಪರಿಚಿತ” ಸುದ್ದಿಗಳು. ಇದ್ಯಾವ ಸಂಸ್ಕೃತಿ, ಇದ್ಯಾವ ಊರು? ಅಂತೀರಾ…

ಮತ್ತಷ್ಟು ಓದು »

31
ಮೇ

ಚಿತ್ರದುರ್ಗ: ಒಂದು ಅಪರೂಪ ಐತಿಹಾಸಿಕ ತಾಣ.

–    ಆರ್.ರಾಘವೇಂದ್ರ, ಚಳ್ಳಕೆರೆ

ಇತಿಹಾಸ ಪ್ರಸಿದ್ಧ ಚಿತ್ರದುರ್ಗ ಜಿಲ್ಲೆಯು ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಹೊಳಲ್ಕೆರೆ ಎಂಬ ಆರು ತಾಲ್ಲೂಕು ಕೇಂದ್ರಗಳನ್ನೊಳಗೊಂಡಂತೆ ೧೮೫ ಗ್ರಾಮ ಪಂಚಾಯಿತಿ ಕೇಂದ್ರಗಳಿಂದ ಕೂಡಿರುತ್ತದೆ. ಚಿತ್ರದುರ್ಗ ಜಿಲ್ಲೆಯು ೮೩೮೮ ಚ.ಕಿ.ಮೀ. ವಿಸ್ತೀರ್ಣ ಹೊಂದಿದ್ದು, ಒಟ್ಟು ೧೫,೧೦,೨೨೭ ಜನಸಂಖ್ಯೆ ಇರುತ್ತದೆ.

ಜಿಲ್ಲೆಯ ಆರು ತಾಲ್ಲೂಕುಗಳ ಪೈಕಿ, ಚಿತ್ರದುರ್ಗ ತಾಲ್ಲೂಕು ಸಾಪೇಕ್ಷಿತವಾಗಿ ಅಭಿವೃದ್ಧಿ ಹೊಂದಿದ ತಾಲ್ಲೂಕಿನ ಗುಂಪಿನಲ್ಲಿದ್ದರೆ, ಚಳ್ಳಕೆರೆ, ಹೊಳಲ್ಕೆರೆ, ಹಿರಿಯೂರು, ಹೊಸದುರ್ಗ ಅತಿ ಹಿಂದುಳಿದ ತಾಲ್ಲೂಕುಗಳ ಗುಂಪಿನಲ್ಲಿವೆ ಹಾಗೂ ಮೊಳಕಾಲ್ಮೂರು ತಾಲ್ಲೂಕು ಅತ್ಯಂತ ಹಿಂದುಳಿದ ತಾಲ್ಲೂಕಿನ ಗುಂಪಿನಲ್ಲಿದೆ. ಆದರೆ ರಾಜ್ಯದ ಹಿಂದುಳಿದ ಪ್ರದೇಶವಾಗಿದ್ದರೂ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ. ಅದು ಹೇಗೆಂದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕ್ಷರತೆ ಪ್ರಮಾಣ, ಮಕ್ಕಳು-ಉಪಾಧ್ಯಾಯರ ಅನುಪಾತ, ೬-೧೪ ವಯೋಮಾನದಲ್ಲಿ ಶಾಲೆ ಸೇರದ ಮಕ್ಕಳ ಪ್ರಮಾಣ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಇವುಗಳ ಮೇಲೆ ನಾವು ಜಿಲ್ಲೆಯ ಶೈಕ್ಷಣಿಕ ಪ್ರಗತಿಯನ್ನು ಕಾಣಬಹುದು. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶವೆಂದು ಮೊಳಕಾಲ್ಮೂರು ತಾಲ್ಲೂಕು ಒಂದೇ. ಚಿತ್ರದುರ್ಗವು ತಾಮ್ರದ ಖನಿಜ ಸಂಪತ್ರವನ್ನು ಇಂಗಳದಾಳ್‌ನಲ್ಲಿ ಒಳಗೊಂಡಿದೆ.

ಸಾಹಿತ್ಯ ಕ್ಷೇತ್ರದ ಮೇರುವ್ಯಕ್ತಿಯಾದ ರಸಕವಿ ‘ಕುವೆಂಪು’ರವರನ್ನೇ ಶಿಷ್ಯರಾಗಿ ಪಡೆದಂತಹ ಕೀರ್ತಿ ಟಿ.ಎಸ್.ವೆಂಕಣ್ಣಯ್ಯರವರದು. ತಳಕಿನ ಕುಟುಂಬದ ತ.ಸು.ಶಾಮರಾಯರು, ತ.ರಾ.ಸು., ಅಂಬುಜಾ ತ.ರಾ.ಸು., ರವರು ಸೇರಿದಂತೆ, ಬೆಳಗೆರೆ ಮನತೆನದ ಬೆಳಗೆರೆ ಚಂದ್ರಶೇಖರಶಾಸ್ತ್ರಿ, ಬೆಳಗೆರೆ ಕೃಷ್ಣಶಾಸ್ತ್ರಿ, ಬೆಳಗೆರೆ ಜಾನಕಮ್ಮ ಮುಂತಾದ ಸಾಹಿತ್ಯ ಗಣಿಗಳು ಚಿತ್ರದುರ್ಗದ ಸಾಹಿತ್ಯವನ್ನು ಅಮರವಾಗಿಸಿದ್ದಾರೆ. ತ.ರಾ.ಸು. ರವರ ದುರ್ಗಾಸ್ತಮಾನ, ನಾಗರಹಾವು ಹಾಗೂ ಇತರೆ ಕೃತಿಗಳು ವಿಶ್ವಕ್ಕೆ ಚಿತ್ರದುರ್ಗದ ಪರಿಚಯವನ್ನು ಬಹುಸುಂದರವಾಗಿ ಮಾಡಿಕೊಟ್ಟಿದೆ. ‘ಬಿ.ಎಲ್.ವೇಣು’ ರವರ ‘ಕಲ್ಲರಳಿ ಹೂವಾಗಿ’ ಚಲನಚಿತ್ರವು ರಾಷ್ಟ್ರಮಟ್ಟದಲ್ಲಿ ಪ್ರಶಂಸೆ ಪಡೆದಿದ್ದು, ಖ್ಯಾತ ಸಂಶೋಧಕರಾದ ಹುಲ್ಲೂರು ಶ್ರೀನಿವಾಸ ಜೋಯಿಸರು, ಪ್ರೋ. ಲಕ್ಷ್ಮಣ ತೆಲಗಾವಿ, ಪ್ರೋ. ಬಿ.ರಾಜಶೇಖರಪ್ಪ, ಜಾನಪದ ತಜ್ಞರಾದ ಡಾ.ಮೀರಾಸಾಬಿಹಳ್ಳಿ ಶಿವಣ್ಣ, ಮಲ್ಲಿಕಾರ್ಜುನ ಕಲಮರಹಳ್ಳಿ, ನೇಮಿಚಂದ್ರ, ಮುಂತಾದವರು ಸೇರಿದಂತೆ ಅನೇಕ ಸಾಹಿತ್ಯ ಕಣ್ಮಣಿಗಳನ್ನೊಳಗೊಂಡಿದ್ದು, ದುರ್ಗವು ಸಾಹಿತ್ಯದ ಗಣಿಯಾಗಿದೆ. ಮತ್ತಷ್ಟು ಓದು »

27
ಮೇ

ನಾಗೇಶ್ ಹೆಗಡೆಯವರ ಮನೆಯಲ್ಲಿ ಒಂದೆರಡು ತಾಸು…

– ಹರ್ಷ ಕುಗ್ವೆ

 ನಮ್ಮ ‘ದ ಸಂಡೆ ಇಂಡಿಯನ್’ ಪತ್ರಿಕೆಯ ’ಸಾಕ್ಷಿ ಪ್ರಜ್ಞೆ’ ಅಂಕಣಕ್ಕಾಗಿ ಈ ಸಲಕ್ಕೆ ನಾಗೇಶ್ ಹೆಗಡೆಯವರನ್ನು ಸಂದರ್ಶನ ಮಾಡೋಣ ಎಂದು ತೀರ್ಮಾನಿಸಿ ಅವರಿಗೆ ಕಾಲ್ ಮಾಡಿದಾಗ ನಿಮ್ಮ ಪ್ರಶ್ನೆಗಳೇನಿವೆ ಕಳುಹಿಸಿ, ನಾನು ಉತ್ತರ ಕಳುಹಿಸುತ್ತೇನೆ ಎಂದರು. ಸಂದರ್ಶನದ ನೆಪದಲ್ಲಿಯಾದರೂ ಅವರನ್ನು ಖುದ್ದಾಗಿ ಮಾತನಾಡಿಸುವ ಅವಕಾಶ ಮಿಸ್ ಆಗಿ ಬಿಡುತ್ತಲ್ಲಾ, ಛೆ ಎಂದು ಮನಸ್ಸಲ್ಲೇ ಹೇಳಿಕೊಂಡು ’ಆಯ್ತು ಸರ್ ಎಂದು ಮರುಮಾತಲ್ಲೇ ‘ನೀವು ಫ್ರೀ ಇರೋದಾದ್ರೆ ನಿಮ್ಮ ಮನೆಗೇ ಬರ‍್ತೀನಿ ಸರ್’ ಎಂದೆ. ಅದಕ್ಕವರು, ನಿಮಗೆ ಬರಬೇಕೆಂದರೆ ಬನ್ನಿ. ನಾನು ಬಿಡುವಾಗೇ ಇರ‍್ತೀನಿ. ಆದ್ರೆ ಪ್ರಶ್ನೆಗಳನ್ನು ಮೊದಲೇ ಕಳುಹಿಸಿರಿ ಎಂದರು. ’ಓಕೆ’ ಸರ್ ಹಾಗಾದ್ರೆ ಬೆಳಿಗ್ಗೆ ಬರ‍್ತೀನಿ ಎಂದು ಅವರ ಮನೆಯ ವಿಳಾಸ ಬರೆದುಕೊಂಡೆ.

ಪತ್ರಿಕೋದ್ಯಮದಲ್ಲಿ ಇನ್ನೂ ಅಂಬೆಗಾಲಿಡುತ್ತಿರುವ ನನ್ನಂತಹವರಿಗೆ ಈ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನೂ, ಅನುಭವವನ್ನೂ ಗಳಿಸಿಕೊಂಡಿರುವ ನಾಗೇಶ್ ಹೆಗಡೆಯವರಂತಹವರ ಜೊತೆ ಒಂದಷ್ಟು ಹೊತ್ತು ಕಳೆಯುವುದಕ್ಕಿಂತ ಬೇರೆ ಭಾಗ್ಯ ಇದೆಯೇ? ಮರುದಿನ ಬೆಳಿಗ್ಗೆ ಆರುವರೆಗೇ ಮನೆ ಬಿಟ್ಟು ಕೆಂಗೇರಿಯಿಂದ ಹಿರಿಯ ಮಿತ್ರ ಮೂರ್ತಿಯವರ ಕಾರಿನಲ್ಲಿ ನಾಗೆಶ್ ಹೆಗಡೆಯವರ ಮನೆ ಇರುವ ‘ಮೈತ್ರಿ ಪಾರಂ’ಗೆ ಹೋಗಿ ತಲುಪುವುದು ಒಂಭತ್ತೂ ಕಾಲು. ನಾನು ಬೆಳಿಗ್ಗೆ ಹೊರಡುವಾಗ ನಾಗೇಶ್ ಹೆಗಡೆಯವರಿಗೆ ಕಾಲ್ ಮಾಡಿ ತಿಳಿಸುವುದನ್ನೇ ಮರೆತು ಬಿಟ್ಟಿದ್ದೆ. ಹಾಗಾಗಿ ಅವರು ಇನ್ನೂ ತಮ್ಮ ಕೆಲಸಗಳಲ್ಲಿ ತೊಡಗಿದ್ದವರು ನಮ್ಮನ್ನು ಆದರದಿಂದ ಬರ ಮಾಡಿಕೊಂಡವರು ’ಒಂದರ್ಧ ಗಂಟೆ ಫಾರಂ ಒಳಗೆಲ್ಲಾ ಸುತ್ತಾಡಿ ಬನ್ನಿ’ ಎಂದು ಹೇಳಿದರು. ಸೈ ಎಂದು ಹೊರಟೆವು.
15
ಮೇ

ನನಗೂ ಸ್ವಲ್ಪ ಕೊಡಿ…

– ಚೇತನ್ ಕೋಡುವಳ್ಳಿ

ಮಾರ್ಚ್ ತಿಂಗಳ ಎಲ್ಲ ವೀಕೆಂಡಲ್ಲೂ ಊರಿಗೆ ಹೋಗಿದ್ದೆ. ಊರಲ್ಲಿ ಮಳೆಗಾಗಿ ಕಾಯ್ತಿದ್ರು. ಈಸಲನಾದ್ರೂ ಚೆನ್ನಾಗಿ ಮಳೆ ಬಂದು ಕಾಫಿ ಚೆನ್ನಾಗಿ ಹೂ ಬಿಡ್ಲಿ ಅಂತಿದ್ರು. ನಾನೂ ಹೋದಾಗಲೆಲ್ಲ ಮಳೆಗೆ ಕಾಯ್ತಿದ್ದೆ, ಜೊತೆಗೆ ಕಾಫಿಯ ಹೂವಿಗೆ ಸಹ. ಹೂವಿನಿದ ತುಂಬಿಕಂಗೊಳಿಸುವ ತೋಟವನ್ನ ನೋಡೋದೇ ಕಣ್ಣಿಗೆ ಹಬ್ಬ, ಎಲ್ಲಿ ಕಣ್ಣು  ಹಾಯಿಸಿದರೂ  ಬಿಳೀಹೂಗಳದ್ದೇ  ರಾಶಿ,  ಅಲ್ಲದೆ ಆ ಹೂವಿನ ಘಮಲು, ಆಹಾ ಏನು ಪರಿಮಳ, ದಿನಾ ಪೂರ್ತಿ ಅಲ್ಲೇಕುಳಿತಿರೋಣ ಎಂದನ್ನಿಸುತ್ತದೆ.೨ ವರ್ಷ ಆ ಸೌಭಾಗ್ಯ ಸಿಕ್ಕಿರ್ಲಿಲ್ಲ  ಯಾಕಂದ್ರೆ ಹೂವು ಆಗಿದ್ದು ವಾರದ ಮಧ್ಯದಲ್ಲಿ 😦 ವೀಕೆಂಡ್ ಬರೋ ಹೊತ್ತಿಗೆ ಎಲ್ಲ ಹೂವು ಉದುರಿ ಹೋಗಿರ್ತಿತ್ತು.

ಒಂದಿನ  ಮೋಡ ಆದ ಹಾಗೆ ಆಗ್ತಿತ್ತು, ದೂರದ ಗಿರಿಯಲ್ಲಿ ಕಪ್ಪನೆಯ ಮೋಡ, ಸ್ವಲ್ಪ ಹೊತ್ತಾದಮೇಲೆ ಮಳೆ. ಇತ್ತ ಕಡೆ ಗಾಳಿ ಬೀಸುತ್ತಿತ್ತು, ಮಳೆಯೂ ಬರುತ್ತಿರುವ ಹಾಗನ್ನಿಸುತ್ತಿತ್ತು. ಎಲ್ಲೋದೂರದ ಆಸೆ, ಇನ್ನೇನು ಕಾಲು ಘಂಟೆಯಲ್ಲಿ ಇಲ್ಲಿಗೆ ಬರತ್ತೆ, ಹೋಗಿ ನೆನೆಯಬಹುದು ಅಂತ.ಆಮೇಲೆ ಮಳೆ ಬಂದ್ರೆ ೩-೪ ದಿನ ಆದ್ಮೇಲೆ ಚಿಗುರು ಬಿಟ್ಟು ಹೂವು ಆಗೋ  ಹೊತ್ತಿಗೆ  ೧ ವಾರಆಗತ್ತೆ, ಮುಂದಿನ ವಾರ ಬರಬಹುದು ಅಂತ ದೂರದ ಆಸೆ. ದೂರದಲ್ಲಿ ಜೋರಾಗಿಸುರಿಯುತ್ತಿದ್ದ ಮಳೆ ಗಾಳಿ ಬೀಸುತ್ತಿದ್ದಂತೆ ಇತ್ತ ಕಡೆ ಬರ್ತಾ ಇತ್ತು. ಅಲ್ಲೇ ಕಣದಲಿ  ನಿಂತುನೋಡುತ್ತಿದ್ದ ನನಗೆ, ಪಕ್ಕದ ಊರಲ್ಲಿ ಹನಿಗಳು ಬಿದ್ದಾಗ ಆದ ಸಂತಸ ಅಷ್ಟಿಷ್ಟಲ್ಲ. ಆದರೆ ಸ್ವಲ್ಪಹೊತ್ತಾದ ಮೇಲೆ ಅಲ್ಲಿ ಬೀಳುವುದೂ ಕಡಿಮೆಯಾಯ್ತು. ಕಾಯುತ್ತಿದ್ದ ನಾನು ಸಪ್ಪೆ  ಮೊರೆಹಾಕಿಕೊಂಡು ಮನೆ ಒಳಗೆ ಹೋದೆ.

ಬೆಂಗಳೂರಿಗೆ ಬಂದ ಮಾರನೇ ದಿನ ಅಮ್ಮ ಫೋನ್ ಮಾಡಿ ಮಳೆ ಬಂತು ಅಂದಾಗ ಮೊದಲಿಗೆ ಸ್ವಲ್ಪ ದುಃಖ ಆದರೆ ಮರುಕ್ಷಣವೇ ಖುಷಿ. ಮುಂದಿನ ವಾರ ಹೇಗಿದ್ದರೂ ಯುಗಾದಿಗೆ ಊರಿಗೆಹೋಗಬೇಕು ಆಗ ಇಡೀ ತೋಟ ಸುತ್ತಾಡಿ  ಅಲ್ಲಿಯ ಸೊಬಗನ್ನು, ಜೊತೆಗೆ ಸುವಾಸನೆಯನ್ನೂ ಸವಿಯಬಹುದಲ್ಲ ಎಂದೆನಿಸಿತು.

ಮತ್ತಷ್ಟು ಓದು »

27
ಏಪ್ರಿಲ್

ಬಂಜರಾದ ಬಾಂಜಾರು

ಪವನ್ ಎಂ. ಟಿ

ಪ್ರಿಯ ನಿಲುಮೆಯ ಓದುಗರೆ ಕಳೆದ ಕೆಲವು ದಿನಗಳ ಹಿಂದೆ ನಿಲುಮೆಯಲ್ಲಿ ಮಲೆಕುಡಿಯರ ಪ್ರದೇಶವಾದ ಬಂಗಾರ್ ಪಲ್ಕೆಯ ಕುರಿತಂತೆ, ಅಲ್ಲಿಯ ಸಾಮಾಜಿಕ ಸಮಸ್ಯೆಗಳ ಕುರಿತಂತೆ ಲೇಖನವೊಂದು ಪ್ರಕಟವಾಗಿತ್ತು.  ಇನ್ನೊಂದು ವಿಭಿನ್ನ ಪ್ರದೇಶವಾದ ಬಾಂಜಾರು ಮಲೆಯ ಮಲೆಕುಡಿಯರ ಕುರಿತಂತೆ, ಅವರ ಕಷ್ಟದ ಪರಿಪಾಟಲಿನ ಕುರಿತ ಸಣ್ಣ ಪರಿಚಯವನ್ನು ಈ ಲೇಖನದಲ್ಲಿ ನಿಮ್ಮ ಮುಂದಿಡುತ್ತಿದ್ದೇನೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಚಾರ್ಮಾಡಿ ರಸ್ತೆಯಲ್ಲಿ ಸುಮಾರು ೪೦ ಕಿಲೋಮೀಟರ್ ಪ್ರಯಾಣಿಸಿದರೆ ಘಾಟ್‌ನ ೯ ನೇ ತಿರುವಿನಲ್ಲಿ ಬಲಬದಿಗೆ ಒಂದು  ಕಿರಿದಾದ ಕಚ್ಚಾ ರಸ್ತೆ ಸಿಗುತ್ತದೆ. ಈ ಕಚ್ಚಾ ರಸ್ತೆ ಹೆಚ್ಚು ದೂರದ ವರೆಗೆ ಇಲ್ಲ. ಎಲ್ಲಿಯಾದರೂ ಸಾಮಾನ್ಯ ಜನರೀಗೆ ಇದರಿಂದ ಉಪಯೋಗವಾಗಿ ಬಿಟ್ಟರೆ ಕಷ್ಟ ನೋಡಿ ಅದಕ್ಕೆ  ಈ ರಸ್ತೆ ಕೇವಲ ಅರ್ಧ ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಎಸ್ಟೇಟ್ ನ ಅಥಿತಿ ಗೃಹದ ವರೆಗೆ ಮಾತ್ರವಿದೆ. ಇಲ್ಲಿ ಖಾಸಗಿ ಎಸ್ಟೇಟ್ ನವರು ಒಂದು ದೊಡ್ಡ ಗೇಟು ಹಾಕಿದ್ದಾರೆ ಈ ಗೇಟನ್ನು ಒಳ ಪ್ರವೇಶ ಮಾಡಿಯೇ ನಾವು ಬಾಂಜಾರು ಮಲೆಗೆ ಹೋಗಬೇಕು. ಇಲ್ಲಿ ಎಸ್ಟೇಟ್ ಮಾಲಿಕರ ಪರವಾನಿಗೆ ಇಲ್ಲದೇ ನಾವು ಒಳ ಹೋಗುವಂತಿಲ್ಲ.                                                                                                                                                                                                   ಮೊದಲು ನಮಗೆ ಮಲೆಕುಡಿಯರಲ್ಲಿಗೆ ಹೋಗುವುದಕ್ಕೆ ಎಸ್ಟೇಟ್‌ನವರ ಒಪ್ಪಿಗೆ ಯಾಕೆ ಪಡೆಯಬೇಕು ಎಂಬ ಪ್ರಶ್ನೆ ಮೂಡಿತು . ಆದರೆ ನಮ್ಮ ಕೆಲಸ ಆಗಬೇಕಾದರೆ ನಾವು ಒಪ್ಪಿಗೆ ಪಡೆಯಲೇ ಬೇಕಲ್ಲಾ ಅದಕ್ಕೆ ಆ ಕೆಲಸವನ್ನು ಮೊದಲು ಮಾಡಿದೆವು.  ಮುಂದೆ ಸಾಗಿದಂತೆ ಆ ಅಥಿತಿ ಗೃಹದಲ್ಲಿ ಕೆಲಸ ಮಾಡುವ ಮಲೆಕುಡಿಯರನ್ನು ಕಂಡೆವು.  ಇದೆಲ್ಲವನ್ನು ನೋಡುವಾಗ ನನ್ನಲ್ಲಿ ಮೂಡಿದ ಪ್ರಶ್ನೆ? ಎಸ್ಟೇಟ್ ನವರು ಯಾಕೆ ಈ ರೀತಿ ಗೇಟ್ ಹಾಕಿದ್ದಾರೆ? ಮಲೆಕುಡಿಯರನ್ನು ನಿಯಂತ್ರಣದಲ್ಲಿಟ್ಟಿರ ಬಹುದೇ? ನಮ್ಮನ್ನು ಯಾಕೆ ಪರೀಕ್ಷಿಸಿಯೇ ಒಳ ಬಿಡುತ್ತಾರೆ? ಇದರ ಹಿಂದೆ ಏನಿದೆ? ಮಲೆಕುಡಿಯರು ಯಾಕೆ ಇವರಲ್ಲಿಯೇ ಕೆಲಸ ಮಾಡುತಿದ್ದಾರೆ? ಎಂದು. ನಂತರ ಬಾಂಜಾರಿನ ಮಲೆಕುಡಿಯರೇ ಹೇಳಿದರೂ ಎಸ್ಟೇಟ್ ನವರು ನಮಗೆ ೫ ಎಕರೆ ಜಾಗವನ್ನು ಪ್ರತಿಯೊಬ್ಬರಿಗೂ ನೀಡಿದ್ದಾರೆ ಅದರಲ್ಲಿ ಕೃಷಿ ಮಾಡಿಕೊಂಡು ಮತ್ತು ಎಸ್ಟೇಟ್‌ನ ಕೆಲಸವನ್ನು ಮಾಡಿಕೊಂಡು ನಾವು ಬದುಕುತ್ತಿದ್ದೇವೆ. ಈ ಮಾತನ್ನು ಕೇಳಿದಾಗ ನನ್ನಲ್ಲಿ ಮೂಡಿದ್ದ ಪ್ರಶ್ನೆಗಳಿಗೆ ಅಲ್ಪ ಸ್ವಲ್ಪ ಉತ್ತರ ಸಿಕ್ಕಿದಂತಾಯಿತು. ಮತ್ತಷ್ಟು ಓದು »

23
ಏಪ್ರಿಲ್

ಬಂಗಾರಪಲ್ಕೆಗೆ ಮುಕ್ತಿ ಎಂದು?

ಪವನ್ ಎಂ.ಟಿ

ನಮ್ಮ ಸರಕಾರ ಕ್ರಿಕೇಟ್ ಆಟಗಾರರಿಗೆ ೨೫ ಲಕ್ಷ ರೂಪಾಯಿ ಹಣವನ್ನು ಕೊಡಲು ಮುಂದಾಗಿದೆ. ಪಾಪ ಅವರಿಗೆ ಏನೂ ಇಲ್ಲ ನೋಡಿ ಅದಕ್ಕೆ ಕೊಡ್ಲಿ ಬಿಡಿ. ನಮ್ಮ ಸರಕಾರದ ಹಣೆ ಬರಹವೇ ಅಷ್ಟು. ಹಣ ಇರುವವರಿಗೆ ಹಣವನ್ನು ನೀಡುತ್ತಾರೆಯೇ ಹೊರತು ಬಡವರಿಗೆ ನೀಡುವುದಿಲ್ಲ. ನಮ್ಮಲ್ಲಿ ಶ್ರೀಮಂತರೇ ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ ವಿನಹ ಬಡವ ಶ್ರೀಮಂತನಾದದಿಲ್ಲ. ನಮ್ಮಲ್ಲಿ ಕಾನೂನನ್ನು ಪಾಲಿಸುವವರಿಗೆ ಮಾತ್ರ ಕಾನೂನಿದೆ. ಆದರೆ ನಮ್ಮಲ್ಲಿ ಒಂದು ಒತ್ತಿನ ಊಟಕ್ಕೂ ಕಷ್ಟಪಡೊ, ನಾಗರೀಕ ಸೌಲಭ್ಯವನ್ನೇ ಕಾಣದೆ ಇರೋ ಕೆಲವು ಗ್ರಾಮಗಳಿವೆ, ಜನರಿದ್ದಾರೆ ಅಂತ ಸರಕಾರಕ್ಕೆ ಗೊತ್ತೇ ಇಲ್ಲ ಅಂತ ಕಾಣ್‌ತ್ತದೆ. ಯಾಕಂದ್ರೇ ನಮ್ಮ ಸರಕಾರಕ್ಕೆ ಕುರ್ಚಿ ಉಳಿಸ್‌ಕೊಳ್ಳೊ ಚಿಂತೆಯಾದರೆ ವಿರೋಧ ಪಕ್ಷಕ್ಕೆ ಕುರ್ಚಿ ಬೀಳಿಸೋ ಚಿಂತೆ ಇದರ ನಡುವೆ ಸಿಲುಕಿರೂ ಜನರ ಗತಿ ಅದೋಗತಿ.

ನಿಮ್ಮ ಮನೆಗೆ ಇನ್ನಾರದೋ ಮನೆಯ ರಸ್ತೆಯಲ್ಲಿ ಅಥವ ತೋಟದ ರಸ್ತೆಯಲ್ಲಿ ಹೋಗಬೇಕು ಎಂದಾದರೆ ನಿಮಗೆ ಮನೆಗೆ ಅಥವ ತೋಟಕ್ಕೆ ಸಂಬಂಧಪಟ್ಟ ಮಾಲಿಕನಿಂದ ಏನೆಲ್ಲ ನಿರ್ಭಂದಗಳು ಬರಬಹುದೆಂದು ನೀವೆ ಯೋಚಿಸಿ. ನಿವು ಅವ್ರು ಹೇಳುವ ಎಲ್ಲಾ ಮಾತುಗಳನ್ನು ಸರಿಯಾಗಿ ಕೇಳಿದರೆ ಮಾತ್ರ ನಿಮಗೆ ಅಲ್ಲಿ ಸಂಚರಿಸಲು ಅವಕಾಶ. ಹಾಗೆಂದು ನಿರ್ಭಂದನೆಯನ್ನು ಸಹಿಸಿಕೊಂಡು ಎಷ್ಟುದಿನವೆಂದು ನೀವು ಓಡಾಡುತ್ತಿರಿ. ಅದು ನಿಮ್ಮಿಂದ ನಮ್ಮಿಂದ ಕಂಡಿತಾ ಸಾಧ್ಯವಿಲ್ಲ. ಆದ್ರೆ ಇಲ್ಲಿ ಎಲ್ಲ ನಿರ್ಭಂದನೆಗಳ ನಡುವೆ ಸರಿಯಾದ ರಸ್ತೆ ಇಲ್ಲದೆಬದುಕುತ್ತಿರುವವರು ಬೆಳ್ತಂಗಡಿತಾಲೂಕಿನ ದಿಡುಪೆಯ ಸಮೀಪದ ಬಂಗಾರು ಪಲ್ಕೆಯ ಮಲೆಕುಡಿರು. ಪಾಪ ಇವರ ಪರಿಸ್ಥಿತಿಯನ್ನು ನಮ್ಮಲ್ಲಿ ಆಡಳಿತಗಾರರೆಂದು ಕರೆಯಿಸಿಕೊಳ್ಳುವವರಿದ್ದಾರಲ್ಲ ಅವರೊಮ್ಮೆ ಬಂದು ನೋಡಬೇಕು.

ನಾವು ಮಲೆಕುಡಿಯರ ಪ್ರದೇಶಗಳಿಗೆ ಭೇಟಿ ನೀಡಿದಾಗ ನಮಗೆ ದಿಡುಪೆಯ ಬಂಗಾರು ಪಲ್ಕೆ ಅನೇಕ ಕಾರಣಗಳಿಂದ ಕುತೂಹಲ ಮೂಡಿಸಿತ್ತು  ಇಲ್ಲಿಯ ರಸ್ತೆ, ಜನ, ನಾಗರಿಕ ಸೌಲಭ್ಯ ಎಲ್ಲವೂ ಇಲ್ಲಿ ವಿಭಿನ್ನವೇ.

ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ದಿಡುಪೆ ಎನ್ನವ ಸ್ಥಳದಿಂದ ಸುಮಾರು ೧೫ ಕಿಲೋಮೀಟರ್ ದೂರದಲ್ಲಿರುವ ಬಂಗಾರ್ ಪಲ್ಕೇಗೆ ತೆರಳಬೇಕಾದರೆ, ಪ್ರಪಂಚದ ಅತ್ಯಂತ ಕೆಟ್ಟದಾದ ರಸ್ತೆ ನಮಗೆ ಸಿಗುತ್ತದೆ. ಮನುಷ್ಯ ಸರಿಯಾಗಿ ಕಾಲು ನಡಿಗೆಯಲ್ಲಿಯೂ ಸಂಚರಿಸಲು ಸಾಧ್ಯವಿಲ್ಲದ ಈ ರಸ್ತೆ ಕುದುರೆಮುಖ ರಾಷ್ಟ್ರೀಯ ಉಧ್ಯಾನದ ಒಳಗಿದೆ. ಬೇಸಿಗೆ ಸಮಯವಾದುದರಿಂದ ನಮಗೆ ತೆರಲು ಒಂದೊ ೪ ವೀಲ್ ವ್ಯವಸ್ಥೆಯಿರುವ ಒಂದು ಜೀಪ್ ನಮಗೆ ಸಿಕ್ಕಿತು ಈ ೪ ವೀಲ್ ಜೀಪ್ ಬಿಟ್ಟು ಬೇರೆ ಯಾವುದೇ ವಾಹನ ಅಲ್ಲಿಗೆ ತೆರಳು ಸಾಧ್ಯವಿಲ್ಲ. ಮತ್ತಷ್ಟು ಓದು »

22
ಏಪ್ರಿಲ್

ನೀರು ಅತ್ಯಮೂಲ್ಯವೇಕೆ?

– ಅರುಣ್ ಎಲ್

ಭೂಪಟವನ್ನೋ, ಭೂಗೋಲವನ್ನೋ ನೋಡಿದಾಗ ಕಾಣುವ ನೀಲಿ ಬಣ್ಣದ್ದೆಲ್ಲವೂ ನೀರು ಎಂಬುದು ಗೊತ್ತಿರುವ ಸಂಗತಿಯಷ್ಟೆ. ಭೂಗ್ರಹದ ಮುಕ್ಕಾಲು ಭಾಗ ನೀರಿದ್ದೂ, ಕೇವಲ ಕಾಲು ಭಾಗವಷ್ಟೇ ನೆಲವೆಂಬ ವಿಷಯವನ್ನು ಪ್ರಾಥಮಿಕ ಶಾಲೆಯಾಲ್ಲೇ ಕಲಿತಿರುತ್ತೇವೆ. ಅಷ್ಟೊಂದು ನೀರಿದ್ದೂ ನಾವು “ಕೊರತೆ”ಯ ಬಗ್ಗೆ ಮಾತನಾಡುತ್ತಿರುತ್ತೇವೆ. ಏಕೆ?

ವಿಶ್ವಸಂಸ್ಥೆಯ ವರದಿಯ ಪ್ರಕಾರ ಭೂಗ್ರಹದಲ್ಲಿ ಸುಮಾರು ಒಂದುವರೆ ಸಾವಿರ ಮಿಲಿಯನ್ ಕ್ಯುಬಿಕ್ ಕಿಲೋಮೀಟರು ನೀರಿದೆಯಂತೆ.

ಇದನ್ನು ಹೇಗೆ ಕಲ್ಪಿಸಿಕೊಳ್ಳುವುದು? ಒಂದು ಕಿಲೋಮೀಟರು ಉದ್ದದ, ಒಂದು ಕಿಲೋಮೀಟರು ಅಗಲದ, ಒಂದು ಕಿಲೋಮೀಟರು ಆಳದ ಘನವಸ್ತುವನ್ನು ನೀರಿನಿಂದ ತುಂಬಿಸಿದರೆ ಅದು ಒಂದು ಕ್ಯುಬಿಕ್ ಕಿಲೋಮೀಟರ್. ಇದನ್ನು ಸಾವಿರದೈನೂರರಿಂದ ಗುಣಿಸಿದರೆ ನೀರಿನ ಪ್ರಮಾಣವು ಕಲ್ಪನೆಗೆ ಸಿಕ್ಕೀತು.

ಇಷ್ಟೊಂದು ನೀರಿನಲ್ಲಿ ಶೇ. 98ರಷ್ಟು ಸಮುದ್ರವೇ ಆಗಿದೆ. ಅಂದರೆ, ಒಟ್ಟು ನೀರಿನಲ್ಲಿ ಕೇವಲ ಶೇ. ಎರಡರಷ್ಟು ಮಾತ್ರ ಶುದ್ಧ ಜಲ ಇರುವುದೆಂದಾಯಿತಷ್ಟೆ?

ಈ ಶೇ. ಎರಡರಷ್ಟು ಶುದ್ಧಜಲದಲ್ಲಿ ಮುಕ್ಕಾಲು ಭಾಗ ಧ್ರುವಪ್ರದೇಶಗಳಲ್ಲಿ ಮಂಜುಗೆಡ್ದೆಗಳ ರೂಪದಲ್ಲಿದೆ. ಇನ್ನು ಶೇ 22.5ರಷ್ಟು ನೀರು ಅಂತರ್ಜಲದ ರೂಪದಲ್ಲಿ ಅತಲ, ವಿತಲ, ರಸಾತಲ, ಪಾತಾಲವನ್ನು ಸೇರಿಕೊಂಡಿದೆ.

ಮತ್ತಷ್ಟು ಓದು »

19
ಏಪ್ರಿಲ್

ಹಸಿರುಕಾನನದ ಮಗಳೀಕೆ ಗೌರಾದೇವಿ…..

– ಚಿತ್ರ ಸಂತೋಷ್

ಉತ್ತರ ಖಾಂಡದ ರೇನಿ ಗ್ರಾಮದಲ್ಲಿ  ಮರಗಳನ್ನು ಕಡಿಯಲು ಬಂದ ಅಧಿಕಾರಿಗಳ ವಿರುದ್ಧ ಬಂಡೆದ್ದವಳು ಗೌರಾದೇವಿ. ಬುಡಕಟ್ಟು ಜನರಿಗೆ ದಟ್ಟಾರಣ್ಯಗಳೇ ತವರು. ಕಾಡಿಗೂ-ನಮಗೂ ಇರುವುದು ಅಮ್ಮ-ಮಕ್ಕಳ ಸಂಬಂಧ.ಬದುಕಿದರೆ ನಮಗೆ ಆಸರೆ ನೀಡಿದ ಈ ಹಸಿರು ಕಾಡುಗಳಿಗಾಗಿ ಬದುಕಿ …ಎಂದು ಹಳ್ಳಿ ಮನೆಗಳ ಜಗುಲಿಯಲ್ಲಿ ಕುಳಿತು ಜಾಗೃತಿಯ ಕಹಳೆ ವೊಳಗಿಸಿದವಳು ಇವಳೇ ಗೌರಾದೇವಿ. ದೇಶದ್ಯಾಂತ ಪರಿಸರ ಕ್ರಾಂತಿ ಮಾಡಿದ ಚಿಪ್ಕೋ ಚಳವಳಿನ್ನು ಹುಟ್ಟು ಹಾಕಿದ್ದೇ ಇವಳು. ಇಂಥ ಗೌರಾದೇವಿಯನ್ನು ಗೌರವದಿಂದ ನೆನೆಯುವ ಕೆಲಸವನ್ನು ನಾವು ಮಾಡಬೇಕಿದೆ.

“ಸಹೋದರರೇ  ಈ ಅರಣ್ಯ ಪ್ರದೇಶ ನಮ್ಮ ಜೀವಮೂಲ. ನಮ್ಮ ಹುಟ್ಟಿನಿಂದ ಸಾವಿನ ತನಕದ ಜೀವನ ಬಂಡಿಗೆ ಸಾಥ್ ನೀಡುವುದು ಇದೇ ಹಸಿರು ಕಾನನ. ಈ ‘ರಮೆಯೇ ನಮ್ಮಮ್ಮ. ನೀವು ನಿಮ್ಮ ಹರಿತವಾದ ಗರಗಸವನ್ನು ನಮ್ಮಮ್ಮನ ಕರುಳಿಗೆ ಇಡುವ ವೊದಲು ನನ್ನ ಎದೆಗೆ ಹಿಡಿ”

ಬಹುಶಃ ಚಿಪ್ಕೋ ಚಳವಳಿ ಹುಟ್ಟುವ ವೊದಲು ಓರ್ವ ಬುಡಕಟ್ಟು ಮಹಿಳೆ ಉತ್ತರ ಖಾಂಡದ ಆ ಬೃಹತ್ ಅರಣ್ಯದಲ್ಲಿ ಈ ರೀತಿ ಮರಗಳನ್ನು ತಬ್ಬಿಕೊಂಡು ಸರ್ಕಾರದ ಅಕಾರಿಗಳ ಎದುರು ಈ ರೀತಿ ಅಳಲು ತೋಡಿಕೊಂಡಿದ್ದು ಬಹಳಷ್ಟು ಜನರಿಗೆ ನೆನಪು ಇರಲಿಕ್ಕಿಲ್ಲ. ಚಿಪ್ಕೋ ಚಳವಳಿ ಕುರಿತು ಮಾತೆತ್ತಿದ್ದರೆ ತಕ್ಷಣಕ್ಕೆ ನೆನಪಿಗೆ ಬರುವುದು ಸುಂದರ್ ಲಾಲ್ ಬಹುಗುಣ ಎಂಬ ಮಹಾನ್ ವ್ಯಕ್ತಿ. ಆದರೆ, ಇವರಿಗಿಂತಲೂ ವೊದಲು ಅಲ್ಲಿ ಮಹಿಳೆಯೊಬ್ಬಳ ದನಿಯಿತ್ತು,  ದೇಶದಾದ್ಯಂತ ಬೃಹತ್ ಪರಿಸರ ಕ್ರಾಂತಿಗೆ ಮುನ್ನುಡಿಯಾದ ಆ ಚಳವಳಿಯ ಹಿಂದೆ ಅನಕ್ಷರಸ್ಥೆ ಮಹಿಳೆಯ ಶ್ರಮ ಇತ್ತು, ಕಣ್ಣೀರಿತ್ತು, ಜಾಗೃತಿಯ ಕಹಳೆಯಿತ್ತು.

ಅವಳ ಹೆಸರು ಗೌರಾದೇವಿ.

ಮತ್ತಷ್ಟು ಓದು »

17
ಏಪ್ರಿಲ್

ಎಂಡ್ ‘ದಿ’ ಸಲ್ಫಾನ್…!

4
ಏಪ್ರಿಲ್

ಕನ್ನಡಕ್ಕಿಂತ ತಮಿಳು ಯಾವುದರಲ್ಲಿ ಮುಂದಿದೆ?

ಅಜಕ್ಕಳ ಗಿರೀಶ್ ಭಟ್

ಕನ್ನಡದ ಬಗ್ಗೆ ಚರ್ಚೆಯಾಗುತ್ತಿರುವುದು ಸಂತೋಷ. ಬನವಾಸಿ ಬಳಗ ಹಾಗೂ ಶುಭಶ್ರೀಯವರ ಲೇಖನಗಳನ್ನು ಓದಿದೆ. ಈಗಾಗಲೇ ನಾನು ಹಿಂದಿನ ಒಂದು ಪ್ರತಿಕ್ರಿಯೆಯಲ್ಲಿ ಬರೆದಿರುವಂತೆ, ಅಲ್ಲಿ ಎತ್ತಲಾಗಿರುವ ಹಲವು ಅಂಶಗಳು ನನ್ನ ಪುಸ್ತಕದಲ್ಲಿ ಪ್ರಸ್ತಾಪವಾಗಿವೆ. ಆದರೂ ಕೆಲವು ನಿರ್ದಿಷ್ಟ ಪ್ರಶ್ನೆಗಳನ್ನು ನಾನು ಇಲ್ಲಿ ಮತ್ತೆ ಎತ್ತಿಕೊಳ್ಳಬಯಸುತ್ತೇನೆ. ಶಂಕರ ಭಟ್ಟರ ಸಿದ್ಧಾಂತಗಳ ಬಗ್ಗೆ ನಾನು ಬರೆದುದನ್ನು ವೈಜ್ಞಾನಿಕವಲ್ಲ, ವೈಯಕ್ತಿಕ ದಾಳಿ ಅಂತೆಲ್ಲ ಕರೆಯಲಾಗಿದೆ. ವಾದದ ವಿಷಯಗಳ ಬಗ್ಗೆ ಹೇಳುವುದಕ್ಕಿಂತ, ಶಂಕರ ಭಟ್ಟರ ವಾದಗಳ ಕುರಿತು ನಾನು ಬರೆದ ಹೊತ್ತಗೆಯ ಶೀರ್ಷಿಕೆಯ ಬಗ್ಗೆಯೇ ಹೆಚ್ಚು ಒತ್ತು ಕೊಟ್ಟು ಬರೆದಿದ್ದಾರೆ. ಇರಲಿ. ಇದು ಅಷ್ಟು ಮುಖ್ಯ ಅಂತ ನನಗೆ ಅನ್ನಿಸದಿದ್ದರೂ ಈ ಶೀರ್ಷಿಕೆಯ ಬಗ್ಗೆ ಆರೋಪವನ್ನು ಮತ್ತೆ ಮತ್ತೆ ಮಾಡಲಾಗಿರುವುದರಿಂದ ಸಮರ್ಥನೆ ನೀಡುವೆ. ಮೊದಲೇ ಸ್ಪಷ್ಟಪಡಿಸುತ್ತೇನೆ,ನನಗೆ ಆ ಹಿರಿಯ ಭಾಷಾವಿದ್ವಾಂಸರ ಬಗ್ಗೆ ತುಂಬ ಗೌರವ ಉಂಟು. ವೈಯಕ್ತಿಕ ದ್ವೇಷವಾಗಲೀ ಅಸೂಯೆಯಾಗಲೀ ಇಲ್ಲ ! ಇನ್ನು, ಶೀರ್ಷಿಕೆಯಲ್ಲಿ ಅವರ ಹೆಸರು ಯಾಕೆ ತರಬೇಕಿತ್ತು? ಅವರು ಏಕಾಂಗಿ ಎಂದು ಬಿಂಬಿಸುವ ಯತ್ನವೇ? ಇತ್ಯಾದಿ ಪ್ರಶ್ನೆಗಳೂ ಬಂದಿವೆ.
ಮೊದಲನೆಯದಾಗಿ ತಾವು ಹೇಳಿದ ಹಾಗೆ ವ್ಯಾಪಕವಾಗಿ ಹೊತ್ತಗೆಗಳನ್ನು ಬರೆಯುತ್ತಿರುವವರು ಅವರೊಬ್ಬರೇ. ಅವರನ್ನು ಬೆಂಬಲಿಸಿದ ವಿವಿಧ ವಿ.ವಿ.ಗಳ ಮುಖ್ಯಸ್ಥರು ಅಥವಾ ಇನ್ನಾರಾದರೂ (ಶುಭಶ್ರೀಯವರೂ ಸೇರಿದಂತೆ) ಬರೆಯಲಾರಂಭಿಸಿಲ್ಲ. ಇನ್ನು ಆರಂಭಿಸಲೂಬಹುದು. ಆರಂಭಿಸಿದರೆ ನನ್ನ ಆಕ್ಷೇಪವಿಲ್ಲ, ದುಖವೂ ಇಲ್ಲ. ಯಾರಾದರೂ ಬರೆದರೆ ನಾನು ಓದುವುದಿಲ್ಲ ಅಂತ ಶಪಥ ಕೂಡ ಮಾಡೊಲ್ಲ. ಯಾಕೆಂದರೆ ಓದದಿದ್ದರೆ ಓದದವರಿಗೆ ನಷ್ಟ ಅಂತ ನನಗೊತ್ತು. ಒಟ್ಟಿನಲ್ಲಿ ಈಗ ಸದ್ಯಕ್ಕೆ ನಿಜವಾಗಿ ಕತ್ತರಿ ಪ್ರಯೋಗ ಮಾಡಿದವರು ಅವರೊಬ್ಬರೇ.