ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೯
– ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೬
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೭
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೮
‘ಆವರಣ‘ ಎಂಬ ವಿಕೃತಿ (ವಿಮರ್ಶಾ ಸಂಕಲನ) ಸಂಗ್ರಹ: ಗೌರಿ ಲಂಕೇಶ್ – ಭಾಗ ೪ : ಆವರಣ ಮಾಧ್ಯಮ-ಮಂಥನ ಮತ್ತು ಬುದ್ಧಿಜೀವಿ ವರ್ಸಸ್ ಬೌದ್ಧಿಕ ಸ್ವಾತಂತ್ರ್ಯ
‘ಆವರಣ‘ ಎಂಬ ವಿಕೃತಿ:-ಮುಖಾಮುಖಿ -೮ (೩೦-೬-೧೪) ರಲ್ಲಿ ಹೇಳಿದಂತೆ ಈ ಭಾಗದಲ್ಲಿ ‘ಆವರಣ’ ಕಾದಂಬರಿಯನ್ನು ನೆಪಮಾತ್ರಕ್ಕೆ ಇಟ್ಟುಕೊಂಡು ಬರೆದಿರುವಂತಹ ಲೇಖನಗಳ ಬಗ್ಗೆ ನಮ್ಮ ಚರ್ಚೆಯನ್ನು ಮುಂದುವರಿಸೋಣ. ಇದು ‘ಆವರಣ’ ಎಂಬ ವಿಕೃತಿ ವಿಮರ್ಶಾಸಂಕಲನವನ್ನು ಕುರಿತ ಮುಖಾಮುಖಿಯ ಕೊನೆಯ ಭಾಗ.
ಬೊಳುವಾರು ಮಹಮದ್ ಕುಂಞ ಅವರ ‘ಅವರವರ ದೇವರುಗಳು’ … ಲೇಖನದಲ್ಲಿ ‘ಆವರಣ’ ಕಾದಂಬರಿಯ ಕಥಾವಸ್ತುವನ್ನು ಅವರ ಮಾವನವರನ್ನು(ಬೊಳುವಾರು ಅವರ ಹೆಂಡತಿಯ ತಂದೆ) ಕಾಡುತ್ತಿದ್ದ ಕ್ಯಾನ್ಸರ್ ಗೆ ಹೋಲಿಸಿದ್ದಾರೆ. ಆಪರೇಷನ್ ಆದ ನಂತರ ಅವರ ಮಾವನವರು ಗುಣಮುಖರಾಗಿ ಗೆಲುವಿನ ನಗೆ ಬೀರುತ್ತಿದ್ದಾರೆ. ಅದೇ ರೀತಿ ‘ಆವರಣ’ ಕಾದಂಬರಿ ಬರೆದ ನಂತರ ಭೈರಪ್ಪನವರೂ ಸಹ ಹತ್ತಾರು ವರ್ಷಗಳಿಂದ ತಮ್ಮನ್ನು ಹಿಂಸಿಸುತ್ತಿದ್ದ,ಕಾಡುತ್ತಿದ್ದ ಚಿಂತನೆಗಳಿಂದ ಮುಕ್ತರಾಗಿದ್ದಾರೆ. ಅವರವರು ನಂಬುವ ಅವರವರ ದೇವರುಗಳು ಅವರವರನ್ನು ಕಾಪಾದುತ್ತಿರಲಿ. ಆಮೆನ್ ……… ಎಂಬ ಹಿತೋಕ್ತಿಯಿಂದ ತಮ್ಮ ಲೇಖನವನ್ನು ಮುಗಿಸಿದ್ದಾರೆ.
‘ಇಬ್ರಾಹಿಂ ಸಾಹೇಬರ ಬಗ್ಗೆ ಭೈರಪ್ಪನ ಸುಳ್ಳು … ‘ ಪೀರ್ ಬಾಷಾ ಅವರು ಸುಳ್ಳು ಹೇಳುತ್ತಿದ್ದಾರೋ ಅಥವಾ ತಮ್ಮ ಜನಾಂಗದವರ ಅಸಮಾಧಾನಕ್ಕೆ ಏಕೆ ಕಾರಣಕರ್ತನಾಗಬೇಕೆಂದು ಇಬ್ರಾಹಿಂ ಸಾಹೇಬರೇ ಸುಳ್ಳು ಹೇಳುತ್ತಿದ್ದಾರೋ ತಿಳಿಯದಾಗಿದೆ. (ತಮ್ಮ ಜನಾಂಗದ ಅಸಮಾಧಾನಕ್ಕೆ ಕಾರಣವಾಗುವ ಮಾತುಗಳನ್ನು ಆಡಲು, ಬರೆಯಲು ಹಿಂದೇಟು ಹಾಕುವ ಪ್ರವೃತ್ತಿಗೆ ಇತ್ತೀಚಿನ ಉದಾಹರಣೆಯಾಗಿ ಕನ್ನಡದ ‘ವರ್ತಮಾನ’ , ‘ಗುಜರಿ ಅಂಗಡಿ’ ಮತ್ತು ‘ಭೂತಗನ್ನಡಿ’ ಎಂಬ ಬ್ಲಾಗುಗಳಲ್ಲಿ ಪ್ರಕಟವಾದ ‘ಬುರ್ಖಾ’ ಕುರಿತ ಲೇಖನ ಮತ್ತು ಅದರ ಬಗ್ಗೆ ನಡೆದ ಚರ್ಚೆಯನ್ನು ಆಸಕ್ತರು ಗಮನಿಸಬಹುದು). ‘ಆವರಣ’ ಕಾದಂಬರಿಯ ಪ್ರವೇಶ ಎಂಬ ಭಾಗದಲ್ಲಿ ಭೈರಪ್ಪನವರು ಆ ಕಾದಂಬರಿ ಬರೆಯುವಾಗ ತಮಗೆ ಸಹಾಯ ಮಾಡಿದವರನ್ನು ಸ್ಮರಿಸಿಕೊಳ್ಳುವಾಗ ‘ಶಿವಮೊಗ್ಗದ ಎಚ್ ಇಬ್ರಾಹಿಂ ಸಾಹೇಬರು ಎಷ್ಟೋ ಸೂಕ್ಷ್ಮಾಂಶಗಳನ್ನು ಹೇಳಿ ನನ್ನ ಮನಸ್ಸಿನ ಚಿತ್ರಗಳು ಸ್ಫುಟವಾಗಲು ಸಹಾಯಮಾಡಿದರು’ ಎಂದು ಹೇಳಿರುವ ಒಂದು ವಾಕ್ಯ ಪೀರ್ ಬಾಷಾ ಅವರ ಕೆಂಗಣ್ಣಿಗೆ,ಆಕ್ರೋಶಕ್ಕೆ ತುತ್ತಾಗಿದೆ. ಇದರ ಫಲವಾಗಿ ಆವೇಶದ,ನಾಲ್ಕನೇ ದರ್ಜೆಯ ಕೀಳು ಮಾತುಗಳು ಅವರ ಲೇಖನದಲ್ಲಿದೆ. ಜತೆಗೆ ತಮ್ಮ ಮಾತಿಗೆ ಸತ್ಯದ ಲೇಪ ಹಚ್ಚಲು ‘ಪಿ ಲಂಕೇಶರ ಮಿತ್ರರೂ,ಆಗಿದ್ದ ‘ಲಂಕೇಶ್’ ವಾರಪತ್ರಿಕೆಯ ಹಿತೈಷಿಯೂ ಆಗಿರುವ ಇಬ್ರಾಹಿಂ ಸಾಹೆಬರನ್ನೇ ಇದರ ಬಗ್ಗೆ ಕೇಳಿದೆ ‘ ಎಂದು ಬರೆದಿರುವುದು ಬಾಷಾ ಅವರ ಬಗ್ಗೆ ಮರುಕ ಹುಟ್ಟಿಸುತ್ತದೆ. ಏಕೆಂದರೆ ಇಲ್ಲಿ ಸಮಸ್ಯೆಯಿರುವುದು ಭೈರಪ್ಪನವರು ಮತ್ತು ಇಬ್ರಾಹಿಂ ಸಾಹೇಬರ ನಡುವೆ ಅಷ್ಟೇ. ಅದಕ್ಕೆ ಮೂರನೇ ವ್ಯಕ್ತಿ ಮತ್ತು ಅವರ ವಾರಪತ್ರಿಕೆಯ ಆಸರೆ ಏಕೆ ಬೇಕಾಗಿತ್ತು? . ಇಬ್ರಾಹಿಂ ಸಾಹೇಬರಿಗೆ ಇನ್ನೂ ಕಾಲ ಮಿಂಚಿಲ್ಲ. ಈಗ ಬೇಕಾದರೂ ಸತ್ಯ ಹೇಳಬಹುದು. ತಾವು ಮುಸ್ಲಿಂ ಜನಾಂಗದ ರೀತಿ-ರಿವಾಜು,ನಂಬಿಕೆ, ಆಚರಣೆಗಳ ಬಗ್ಗೆ ಭೈರಪ್ಪನವರ ಜತೆ ಮಾತಾಡಿಲ್ಲ ಎಂದು ಪತ್ರಿಕೆಗಳಿಗೆ ಹೇಳಿಕೆ ಕೊಡಬಹುದು. ನಮ್ಮ ಕನ್ನಡದ 24X7 ಸುದ್ದಿವಾಹಿನಿಗಳಿಗೆ ತಿಳಿಸಿದರೆ ಸಾಕು. ಅವರು ಒಂದಿಡೀ ದಿನ ಅದರ ಬಗ್ಗೆ ಕಾರ್ಯಕ್ರಮ ನಡೆಸುತ್ತಾರೆ. ಪೀರ್ ಬಾಷಾ ಅವರೂ ಈ ನಿಟ್ಟಿನಲ್ಲಿ ಸಹಾಯ ಮಾಡಬಹುದು.
ಪಿ. ಲಂಕೇಶರ ‘ಬರಡು ಮನಸ್ಸಿನ ತಡೆರಹಿತ ಅಶ್ಲೀಲತೆ ‘ ಲೇಖನ ಭೈರಪ್ಪನವರ ‘ಸಾರ್ಥ’ ಕಾದಂಬರಿಗೆ ಸಂಬಂಧಿಸಿದ್ದು. ತಮ್ಮ ತಂದೆಯವರ ಹೆಸರಿನ ಪ್ರಕಾಶನ ಸಂಸ್ಥೆಯಿಂದ ‘……….. ವಿಕೃತಿ’ ವಿಮರ್ಶಾ ಸಂಕಲನ ಪ್ರಕಟಿಸಿರುವುದರಿಂದ ಭೈರಪ್ಪನವರ ಬಗ್ಗೆ, ಅವರ ಯಾವುದೇ ಕಾದಂಬರಿಯ ಬಗ್ಗೆ ಲಂಕೇಶ್ ಅವರು ಬರೆದ ಯಾವುದೇ ಲೇಖನ ಸೇರಿಸಲು, ಪ್ರಕಟಿಸಲು ಗೌರಿ ಲಂಕೇಶರು ಸ್ವತಂತ್ರರು. ಅದು ಅವರ ವಿವೇಚನೆಗೆ ಬಿಟ್ಟ ವಿಷಯ. ಮತ್ತಷ್ಟು ಓದು 
ವಾಲ್ಮೀಕಿ ಯಾರು?
– ನವೀನ್ ನಾಯಕ್
ಕೆ.ಎಸ್ ನಾರಾಯಣಾಚಾರ್ಯರ ” ವಾಲ್ಮೀಕಿ ಯಾರು ” ಎಂಬ ಕೃತಿಗೆ ನಿಷೇಧದ ಭೀತಿ ಎದುರಾಗಿದೆ. ಕೆಳವರ್ಗದವರು ಮಹಾಗ್ರಂಥಗಳನ್ನು ಬರೆಯಲು ಸಾಧ್ಯವಿಲ್ಲ ಅದು ಕೇವಲ ಬ್ರಾಹ್ಮಣರ ಸೊತ್ತು ಎಂಬಂತೆ ಪುಸ್ತಕ ಸೂಚಿಸುತ್ತದೆ ಎಂಬ ಆರೋಪವನ್ನೂ ಹೊರಿಸಿ ಹಲವು ಸಂಘಟನೆಗಳು ಪ್ರತಿಭಟಿಸುತ್ತಿವೆ. ಈ ಎಲ್ಲಾ ವಿವಾದಗಳಿಗೆ ಮೂಲ ಕಾರಣ ವಾಲ್ಮೀಕಿಯವರ ಜನ್ಮ ವೃತ್ತಾಂತವನ್ನು ಕೆ ಎಸ್ ನಾರಾಯಣಾಚಾರ್ಯರು ತಡಕಾಡಿದ್ದು. ತಡಕಾಡಲು ಕಾರಣವನ್ನೂ ಅವರು ಕೃತಿಯಲ್ಲೇ ನೀಡಿದ್ದಾರೆ. ವಾಲ್ಮೀಕಿ ರಾಮಾಯಣ ಮತ್ತು ಆನಂದರಾಮಾಯಣದ ಆಧಾರವನ್ನೇ ಈ ಕುರಿತ ಚರ್ಚೆಗೆ ಬಳಸಿದ್ದಾರೆ.
ವಾಲ್ಮೀಕಿ ಬ್ರಾಹ್ಮಣ ಪುತ್ರನೋ ಇಲ್ಲವೋ ಎಂಬುದಕ್ಕೆ ಲೇಖಕರು ಕೊಟ್ಟ ಆಧಾರಗಳು ಇಂತಿವೆ.ವಾಲ್ಮೀಕಿಯವರ ಆಶ್ರಮದಲ್ಲಿ ನೆಲೆಸಿ ಲವ ಕುಶರನ್ನು ಹಡೆದ ಸೀತಾಮಾತೆಯನ್ನು ಮತ್ತೆ ಶ್ರೀರಾಮನೆದುರು ನಿಲ್ಲಿಸಿ ” ಈಕೆ ಪರಿಶುದ್ಧೆ ! ಸ್ವೀಕರಿಸು ” ಎನ್ನುವಾಗ ಮಹರ್ಷಿಯು ತಾನು ಸುಳ್ಳಾಡುವವನು ಅಲ್ಲ ಎಂದು ಪ್ರತಿಜ್ಞೆ ಮಾಡಿ ತನ್ನ ಕುಲಗೋತ್ರವನ್ನು ತಂದೆಯವರನ್ನು ಸ್ಮರಿಸಿ ಹೇಳುತ್ತಾರೆ ” ಪ್ರಚೇತಸೋಹಂ ದಶಮಃ ಪುತ್ರೋ , ರಾಘವನಂದನ” |
( ಉತ್ತರಾಯಣ 96-16 ). ಹೇ ಶ್ರೀರಾಮ ! ನಾನು ಪ್ರಚೇತಸನೆಂಬ ಮಹರ್ಷಿಯ ಹತ್ತನೆಯ ಮಗ. ಎರಡನೆಯದಾಗಿ ಲವಕುಶರು ಶ್ರೀರಾಮನೆದುರೇ ರಾಮಾಯಣವನ್ನು ಗಾನ ಮಾಡಿ ತೋರಿಸಿದಾಗ ಶ್ರೀರಾಮಚಂದ್ರನು ಇದನ್ನು ಬರೆದವರಾರು ಎಂದು ಕೇಳಿದಾಗ, ಮಕ್ಕಳು ಇದನ್ನು ಭಾರ್ಗವ ಗೋತ್ರದ ಮಹರ್ಷಿ ವಾಲ್ಮೀಕಿ ಬರೆದರು ಎನ್ನುತ್ತಾರೆ. ಇದಲ್ಲದೇ ಇತರ ಪುರಾಣಗಳಲ್ಲೂ ಅಲ್ಲಲ್ಲಿ ವಾಲ್ಮಿಕಿಯನ್ನು ” ಪ್ರಾಚೇತಸ , ಭಾರ್ಗವ, ವರುಣಪುತ್ರ, ಭೃಗುಸೋದರ ” ನೆಂದೂ ಹೇಳಿದೆ.
ವಾಲ್ಮೀಕಿಯವರು ಬೇಡನಾಗಲು ಇರುವ ಕಾರಣಗಳನ್ನು ಹಲವಾರು ಕಾವ್ಯಗಳು ಎರಡು-ಮೂರು ರೀತಿಯಲ್ಲಿ ಚಿತ್ರಿಸಿವೆ. ಬೇಡನಾದ ನಂತರ ವಾಲ್ಮೀಕಿಯವರಿಗೆ ಸಪ್ತರ್ಷಿಗಳು ಅಥವ ನಾರದರ ಅನುಗ್ರಹದಿಂದ ರಾಮ ಮಂತ್ರದ ಉಪದೇಶವನ್ನು ಪಡೆದು ಜಪಿಸತೊಡಗಿದರು. ಕಾಲ ಚಲಿಸಿದಂತೆ ಬೇಡನ ಸುತ್ತ ಹುತ್ತ ( ವಾಲ್ಮೀಕ ) ಬೆಳೆಯಿತು. ನಂತರ ಸಪ್ತರ್ಷಿಗಳು ಬೇಡನನ್ನು ಹೊರ ಬರುವಂತೆ ಕರೆದಾಗ ಹುತ್ತವನ್ನೊಡೆದುಕೊಂಡು ಹೊರ ಬಂದು ವಾಲ್ಮೀಕರೆಂದು ಪ್ರಖ್ಯಾತರಾದರು. ಇದರಲ್ಲಿ ಆಚಾರ್ಯರು ಯಾವುದಾದರೂ ವಿಷಯವನ್ನು ಸೃಷ್ಟಿಸಿರುವುದು ಕಂಡು ಬರುತ್ತದೆಯೇ ? ಇಲ್ಲವಲ್ಲ. ಕೃತಿಯ ಮದ್ಯಭಾಗದಲ್ಲಿ ಲೇಖಕರು ಬರೆಯುತ್ತಾರೆ, ಪಾಮರನಾದ ಬೇಡನೊಬ್ಬ ದಿಢೀರನೆ ರಾಮಾಯಣದಂತಹ ಕಾವ್ಯ ಬರೆದ ಎಂದು ಹೇಳುವುದು ಹಾಸ್ಯಾಸ್ಪದವಾಗುತ್ತದೆ. ಈ ವಾಕ್ಯದ ಕುರಿತಾದ ದೃಷ್ಠಿಕೋನವನ್ನು ಈಗ ತಿರುಚಿರುವುದೇ ವಿವಾದಕ್ಕೆ ಮೂಲವಾಗಿರುವುದು.
ಮತ್ತಷ್ಟು ಓದು 
ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು – ಪುಸ್ತಕ ಪರಿಚಯ – ೩
ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು-ಪುಸ್ತಕ ಪರಿಚಯ – ೧
ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು-ಪುಸ್ತಕ ಪರಿಚಯ – ೨
ದಾಖಲೆಗಳು
ಮೂಲ : ವಿನಯಲಾಲ್ ಕನ್ನಡಕ್ಕೆ : ಅಕ್ಷರ ಕೆ.ವಿ
ನಾಗರಿಕತೆಗಳು, ದೇಶಗಳು, ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನೂ ಕೂಡಿದಂತೆ ಎಲ್ಲ ಸಂಗತಿಗಳ ‘ಪ್ರಗತಿ’ ಮತ್ತು ‘ಪತನಗಳನ್ನು’ ಅಳೆಯುವುದಕ್ಕೆ ನಾವು ಬಳಸುವ ದಾಖಲೆಗಳನ್ನು ಕುರಿತಂತೆ ಚಿತ್ರ ವಿಚಿತ್ರವಾದ ಹಲವಾರು ವಿಚಾರಗಳನ್ನು ಹೇಳಬಹುದು. ನಾಜಿಗಳು ಮೃತರಾದ ಖೈದಿಗಳನ್ನು ಕುರಿತಂತೆ ಇಟ್ಟಿರುವ ದಾಖಲೆಪುಸ್ತಕಗಳಲ್ಲಿ ಯಾವ ಯಾತನಾಶಿಬಿರಕ್ಕೆ ಯಾವ ರೈಲಿನ ಮೂಲಕ ಯಾವ ಯಾವ ಯಹೂದಿಗಳನ್ನು ಸಾಗಿಸಲಾಯಿತು, ಪ್ರತಿ ರೈಲಿನಲ್ಲಿದ್ದ ಯಹೂದಿಗಳ ಸಂಖ್ಯೆ, ವಿಷಾನಿಲ ಪ್ರಯೋಗದಿಂದ ಕೊಲ್ಲಲ್ಪಟ್ಟ ಯಹೂದಿಗಳ ಸಂಖ್ಯೆ ಈ ಎಲ್ಲವೂ ವಿವವರವಾಗಿ ದೊರೆಯುತ್ತದೆ.
ಭಾರತವನ್ನಾಳಿದ ಬ್ರಿಟಿಷರಿಗೂ ಇಷ್ಟೇ ವಿಸ್ತಾರವಾದ ಆಡಳಿತಾತ್ಮಕ ದಾಖಲೆಗಳನ್ನು ಇಡುವ ಪರಿಪಾಠವಿತ್ತು. 19ನೆಯ ಶತಮಾನದ ತುದಿಯ ವರ್ಷಗಳಲ್ಲಿ ರಾಷ್ಟ್ರೀಯತಾವಾದವು ಪ್ರಬಲವಾಗುತ್ತಿದ್ದಂತೆ ಈ ದಾಖಲೆಗಳು ಇನ್ನೂ ಇನ್ನೂ ವಿವರಗಳನ್ನು ಸೇರಿಸಿಕೊಳ್ಳುತ್ತಾ ಹೋಯಿತು. ಸ್ಥಳಿಯರ ನಡವಳಿಕೆಗಳ ಬಗ್ಗೆ ಮುನ್ಸೂಚನೆ ನೀಡಿ ಅವರಲ್ಲಿ ದಂಗೆಕಾರರನ್ನು ಹತೋಟಿಯಲ್ಲಿಡಲಿಕ್ಕೂ ಇವೇ ದಾಖಲೆಗಳು ಸಹಾಯಕವಾಗುತ್ತದೆಂಬ ಹೊಸ ಭಾರವು ಆಗ ರಾಜ್ಯದ ಮೇಲೆ ಬಿತ್ತು. ಮುಂದೆ ಹೊಸದಾಗಿ ಅವಿಷ್ಕಾರಗೊಂಡ ರಾಷ್ಟ್ರಪ್ರಭುತ್ವವೂ ಇದೇ ಸಾಮ್ರಾಜ್ಯಶಾಹಿ ದಾಖಲೆ ವಿಧಾನವನ್ನು ಮುಂದುವರಿಸಿತು. ಇವತ್ತು ರಾಷ್ಟ್ರ ಪ್ರಭುತ್ವವೊಂದರ ಸೂಚಕ ಚಿನ್ಹೆಗಳಾಗಿ ಒಂದು ರಾಷ್ಟ್ರಗೀತೆ, ರಾಷ್ಟ್ರಧ್ವಜ, ರಾಷ್ಟ್ರ ಭಾಷೆ ಇರುವಂತೆ ರಾಷ್ಟ್ರೀಯ ಪತ್ರಾಗಾರವೂ ಇದೆ. ಈ ರಾಷ್ಟ್ರೀಯ ದಾಖಲೆ ಸಂಗ್ರಹಾಲಯಗಳು ಆಯಾ ರಾಷ್ಟ್ರಗಳ ರಹಸ್ಯಗಳ,ದೌರ್ಜನ್ಯಗಳ ಮತ್ತು ದುಷ್ಕರ್ಮಗಳ ಅಡಗುದಾಣವೂ ಆಗಿರುತ್ತದೆ.
ಹಿಂದೂಗಳ ಸಾಂಸ್ಕೃತಿಕ ಸೃಷ್ಟಿ ಪುರಾಣಗಳಲ್ಲಿ ವರ್ಗೀಕರಣ ಮತ್ತು ಗಣನೆಗಳೆರೆಡೂ ತುಂಬಾ ಅತ್ಯಂತಿಕವಾದ ಒಂದು ಉಪಕರಣವೆಂದು ಭಾವಿಸಲ್ಪಟ್ಟಿದ್ದವು. ದೇವರಪೂಜೆಯಲ್ಲಿ, ಬಲಿಯ ವಿಧಿಗಳಲ್ಲಿ, ಸಾಹಿತ್ಯ ಕೃತಿಗಳ ನಿರ್ಮಾಣದಲ್ಲಿ, ವಂಶವೃಕ್ಷಗಳ ನಿರೂಪಣೆಯಲ್ಲಿ , ಜ್ಯೋತಿಷ್ಯದಲ್ಲಿ ಮತ್ತು ಕಾಮಶಾಸ್ತ್ರದಲ್ಲಿಯೂ ಕೂಡ ಸಂಖ್ಯೆಗಳು ಬಳಕೆಯಾಗುತ್ತಿದ್ದವು. ಅಥರ್ವವೇದವು (ದಾಳಗಳನ್ನು ಉಪಯೋಗಿಸಿ) ಐವತ್ಮೂರು ಬಗೆಯ ಮಾಟ ಮಂತ್ರಗಳನ್ನು ಮಾಡಬಹುದು ಎಂದೂ ಮತ್ತು ಸಾವಿನಲ್ಲಿ ಒಟ್ಟು 101 ಬಗೆಯ ಮರಣಗಳಿವೆಯೆಂದೂ ನಿಖರವಾಗಿ ಹೇಳುತ್ತದೆ. ಇಂಗ್ಲೇಡಿನಲ್ಲಿ ಸಹ ಇನ್ನೊಂದು ಬಗೆಯ ಸಂಖ್ಯಾ ಸಂಗ್ರಹ ಕಾರ್ಯವನ್ನು ಮಾಡಲಾಗುತ್ತಿತ್ತು. ಅಲ್ಲಿ ಮೃತ ದೇಹಗಳನ್ನು ಭರದಿಂದ ಎಣಿಸಲಾಗುತ್ತಿತ್ತು. ಒಂದು ವರ್ಷದ ಅವಧಿಯಲ್ಲಿ ರೂಢಿಗತ ಅಪರಾಧಿಗಳಿಗೆ ಎಷ್ಟು ಬಾರಿ ಛಡಿಯೇಟಿನ ಶಿಕ್ಷೆ ನೀಡಲಾಯಿತೆಂಬ ಅಂಕಿ ಅಂಶದಿಂದ ಆರಂಭಿಸಿ, ಜೈಲುಗಳಲ್ಲಿ, ಆಶ್ರಯಧಾಮಗಳಲ್ಲಿ ಎಷ್ಟು ಜನ ಕುಡುಕರು-ಹುಚ್ಚರು ಇದ್ದಾರೆಂಬ ಲೆಕ್ಕಾಚಾರದವರೆಗೆ-ನಾನಾ ಮಾದರಿಯ ಸಂಖ್ಯಾರಾಶಿಗಳನ್ನು ಇಂಗ್ಲೇಡಿನಲ್ಲಿ ಕಲೆಹಾಕಲಾಯಿತು. ಮುಂದೆ ನಡೆಯತೊಡಗಿದ ಅನಾಹುತಗಳ ದಾಖಲೆಗಳಿಗೆ ಈ ಗಣತಿಯೇ ಆರಂಭವೆಂದೂ ಬೇಕಿದ್ದರೆ ಹೇಳಬಹುದು. ಈ ದಾಖಲೆಗಳ ಮೂಲಕವೇ ಆ ಸಮಾಜವು ತನ್ನೊಳಗಿನ ಬಂಡುಕೋರರನ್ನು, ಬಹಿಷ್ಕೃತರನ್ನು, ದಲಿತ-ದಮನಿತರನ್ನು, ಅಪರಾಧಿಗಳನ್ನು, ಭಿನ್ನಮತೀಯರನ್ನು,ವಿರೋಧಿಗಳನ್ನು ಹೇಗೆ ಹತೋಟಿಯಲ್ಲಿಟ್ಟುಕೊಂಡು ನಿರ್ವಹಿಸಬೇಕೆಂಬ ಬಗ್ಗೆ ತಿಳಿಯುವ ಪ್ರಯತ್ನ ಮಾಡುತ್ತಿತ್ತು.
ಭೂತ ಪ್ರೇತ ಮತ್ತು ಸಾಹಿತ್ಯ…
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ದೆವ್ವದ ಕತೆಗಳು ಎ೦ದರೇ ಸಾಕು,ಎ೦ಥವರ ಕಿವಿಗಳಾದರೂ ನೆಟ್ಟಗಾಗುತ್ತವೆ.ಚಿಕ್ಕವರು ,ದೊಡ್ಡವರು ಭೇದವಿಲ್ಲದೇ,ನ೦ಬವವರು,ನ೦ಬದವರು ಎನ್ನುವ ವ್ಯತ್ಯಾಸವಿಲ್ಲದೇ ಎಲ್ಲರೂ ದೆವ್ವದ ಕತೆಗಳನ್ನು ಕೇಳಲು ಇಷ್ಟಪಡುತ್ತಾರೆ.ದೆವ್ವದ ಕತೆಗಳು ನೀಡುವ ರೋಮಾ೦ಚನವೇ ಅ೦ಥದ್ದು.ಚಿಕ್ಕವರಿದ್ದಾಗ ನಾವೆಲ್ಲರೂ ದೆವ್ವದ ಕತೆಗಳನ್ನು ಕೇಳಿರುತ್ತೇವೆ.ಮನೆಯಲ್ಲಿ ಆಜ್ಜಿಯ೦ದಿರಿದ್ದರೇ ಅವರೇ ದೆವ್ವದ ಕತೆಗಳ ಭ೦ಡಾರ.ರಾತ್ರಿಯ ಭೋಜನದ ನ೦ತರ ,ಎಲೆಯಡಿಕೆ ಮೆಲ್ಲುತ್ತ ಅಜ್ಜಿಯ ಸುತ್ತ ಕುಳಿತರೆ ಬಗೆಬಗೆಯ ದೆವ್ವದ ಕತೆಗಳು ಕೇಳಸಿಗುತ್ತಿದ್ದವು.ಊರ ಹೊರಗಿನ ಆಲದ ಮರಕ್ಕೆ ತಲೆಕೆಳಗಾಗಿ ನೇತಾಡುವ ಪಿಶಾಚಿಯ ಕತೆ,ಬಿಸಿ ನೀರು ಕಾಯಿಸಲು ಒಲೆಯೊಳಗೆ ತನ್ನ ಕಾಲುಗಳನ್ನೇ ಉರುವಲಿನ೦ತೇ ಬಳಸಿ ಒಲೆಯುರಿಸುವ ಮೋಹಿನಿಯ ಕತೆ ಹೀಗೆ ಇನ್ನೂ ಅನೇಕ ಕತೆಗಳಿರುತ್ತಿದ್ದವು.ಕತೆಗಳನ್ನು ಕೇಳುತ್ತ ಕುಳಿತರೆ ಹೊತ್ತು ಕಳೆದದ್ದೇ ಗೊತ್ತಾಗುತ್ತಿರಲಿಲ್ಲ.ಕತೆ ಮುಗಿದ ನ೦ತರ ಮಲಗಲು ಹೊರಟರೆ ಕಣ್ಣಿಗೆ ನಿದ್ದೆಯಿರುತ್ತಿರಲ್ಲಿಲ್ಲ.ಸ್ವಲ್ಪ ಪುಕ್ಕಲು ಹುಡುಗರಾಗಿದ್ದರ೦ತೂ, ಬೆಳಗಾಗುವಷ್ಟರಲ್ಲಿ ಹಾಸಿಗೆ ಒದ್ದೆಯಾಗಿರುತ್ತಿತ್ತು.ಬರೀ ಭಾರತೀಯರು ಮಾತ್ರವಲ್ಲ,ಪಾಶ್ಚಿಮಾತ್ಯ ರಾಷ್ಟ್ರಗಳಲ್ಲೂ ಸಹ ದೆವ್ವ ಭೂತಗಳ ಅತೀಮಾನುಷ ಕತೆಗಳಿಗೆ ಮರುಳಾಗಿರುವವರು ಕಡಿಮೆಯೇನಿಲ್ಲ.ಇ೦ಗ್ಲಿಷ್ ಸಾಹಿತ್ಯ ಲೋಕದಲ್ಲಿ ಇ೦ಥಹ ದೆವ್ವ ಭೂತಗಳ ಸಾಹಿತ್ಯವನ್ನು ರಚಿಸುವ ಒ೦ದು ವರ್ಗವೇ ಇದೆ.ಅಮೇರಿಕದ ’ಪತ್ತೇದಾರಿ ಕತೆಗಳ ಪಿತಾಮಹ’ ಎನಿಸಿಕೊ೦ಡಿರುವ ಎಡ್ಗರ್ ಅಲೆನ್ ಪೋ,ದೆವ್ವದ ಕತೆಗಳನ್ನು ಬರೆಯುವದರಲ್ಲೂ ನಿಸ್ಸೀಮರೆನಿಸಿಕೊ೦ಡಿದ್ದರು.ಉಳಿದ೦ತೆ ಸ್ಟೀಫನ್ ಕಿ೦ಗ್,ಡೀನ್ ಕೂ೦ಟ್ಝ್,ರಿಚರ್ಡ್ ಮಥೇಸನ್ ಇ೦ದಿನ ಪ್ರಮುಖ ಹಾರರ್ ಬರಹಗಾರರು.ಮನಸ್ಸಿಗೆ ಮುದ ನಿಡುವ,ಬೆನ್ನಹುರಿಯಲ್ಲಿ ಸಣ್ಣದೊ೦ದು ನಡುಕ ಹುಟ್ಟಿಸಿ ರೋಮಾ೦ಚನ ನೀಡುವ ಕೆಲವು ಹಾರರ್ ಕೃತಿಗಳ ಬಗ್ಗೆ ಇ೦ದು ನಿಮಗೆ ಹೇಳಬೇಕಿನಿಸಿದೆ.
ಸಾಹಿತ್ಯಿಕವಾಗಿ ಪ್ರಥಮ ಬಾರಿಗೆ ಪ್ರೇತಾತ್ಮಗಳ ಕತೆಗಳನ್ನು ಯಾವಾಗ ರಚಿಸಲಾಯಿತು ಎನ್ನುವುದರ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲವಾದರೂ 1764ರಲ್ಲಿ ಆ೦ಗ್ಲ ಸಾಹಿತಿ ಹೊರೆಸ್ ವಾಲ್ಪೋಲರಿ೦ದ ರಚಿಸಲ್ಪಟ್ಟ ’ದಿ ಕ್ಯಾಸಲ್ ಆಫ್ ಒಟ್ರಾ೦ಟೊ’ ಎ೦ಬ ಕೃತಿ ಹಾರರ್ ಸಾಹಿತ್ಯಕ್ಕೆ ಮುನ್ನುಡಿಯನ್ನು ಬರೆಯಿತು ಎನ್ನಲಾಗುತ್ತದೆ.ನ೦ತರದ ದಿನಗಳಲ್ಲಿ ಅತೀಮಾನುಷ ಶಕ್ತಿಗಳ ಬಗ್ಗೆ ಅನೇಕ ಕತೆ ಕಾದ೦ಬರಿಗಳು ರಚಿಸಲ್ಪಟ್ಟವು.ಆದರೆ 1818ರಲ್ಲಿ ಪ್ರಕಟವಾದ ಬ್ರಿಟಿಷ್ ಲೇಖಕಿ,ಮೇರಿ ಶೆಲ್ಲಿಯ ’ಫ್ರಾ೦ಕೈನಸ್ಟೈನ್’ ಹಾರರ್ ಸಾಹಿತ್ಯ ವಲಯದಲ್ಲಿ ಹೊಸ ಅಲೆಯನ್ನೆಬ್ಬಿಸಿತು.ವಿಜ್ನಾನಿಯೊಬ್ಬ ಮನುಷ್ಯನ ಶವವೊ೦ದಕ್ಕೆ ಮರುಜೀವ ಕೊಡುವ ಕಥಾವಸ್ತುವುಳ್ಳ ಈ ಕತೆ ದೆವ್ವದ ಕತೆಯಾದರೂ ಹುಟ್ಟು ಸಾವುಗಳ ಬಗ್ಗೆ ಸವಾಲೆಸೆಯ ಬಯಸುವ ವಿಜ್ನಾನ ಮತ್ತು ವಿಜ್ನಾನಿಗಳ ಇತಿಮಿತಿಗಳನ್ನು ಹದವಾಗಿ ವಿವರಿಸುವಲ್ಲಿ ಯಶಸ್ವಿಯಾಗಿದೆ.1886ರಲ್ಲಿ ಸ್ಕಾಟಲ್ಯಾ೦ಡಿನ ಪ್ರಸಿದ್ಧ ಲೇಖಕ ಆರ್.ಎಲ್.ಸ್ಟಿವನ್ಸನ್ ಬರೆದ ’ಡಾಕ್ಟರ್ ಜೇಕಿಲ್ ಅ೦ಡ್ ಮಿ.ಹೈಡ್’ ಹಾರರ್ ಲೋಕದ ಮತ್ತೊ೦ದು ಯಶಸ್ವಿ ಬರಹ.ಮೃದು ಸ್ವಭಾವದ ವೈದ್ಯನೊಬ್ಬ ರಾಸಾಯನಿಕ ಔಷಧಿಯೊ೦ದರ ಪರಿಣಾಮವಾಗಿ ಬಲಾಢ್ಯ ಮನುಷ್ಯನಾಗಿ,ದುಷ್ಟ ಬುದ್ದಿಯವನಾಗಿ ಬದಲಾಗುವ ಕಥಾನಕವುಳ್ಳ ರೋಚಕ ಕತೆಯಿದು.ಕಥಾನಾಯಕ ಒಬ್ಬನೇ ಆದರೂ ಕತೆಯುದ್ದಕ್ಕೂ ಎರಡು ವಿಭಿನ್ನ ಪಾತ್ರಗಳೇನೋ ಎ೦ಬ೦ತೆ ಚಿತ್ರಿಸಿರುವ ಸ್ಟೀವನ್ಸನ್ ರ ಕಥಾಶೈಲಿ ಪ್ರಶ೦ಸಾರ್ಹ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೭
— ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೬
ಆವರಣ’ ಎಂಬ ವಿ-ಕೃತಿ ಸಂಗ್ರಹ: ಗೌರಿ ಲಂಕೇಶ್
ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು-ಪುಸ್ತಕ ಪರಿಚಯ-೨
– “ನಿಲುಮೆ”ಗಾಗಿ (೧) ಬಾಲಿವುಡ್ ಮತ್ತು (೨) ಜೈಲು ಈ ಎರಡು ಲೇಖನಗಳ ಸಾರಾಂಶ ಮಾಡಿದ್ದು :- ಮು. ಅ . ಶ್ರೀರಂಗ, ಬೆಂಗಳೂರು
ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು-ಪುಸ್ತಕ ಪರಿಚಯ –೧
(೧) ಬಾಲಿವುಡ್
———-
ಮೂಲ ಲೇಖಕರು : ಎಂ. ಕೆ. ರಾಘವೇಂದ್ರ ಕನ್ನಡಕ್ಕೆ : ಅಕ್ಷರ ಕೆ. ವಿ.
ಮುಂಬಯಿಯಲ್ಲಿ ತಯಾರಾಗುವ ಹಿಂದಿ ಭಾಷೆಯ ಚಲನಚಿತ್ರ ಪ್ರಕಾರಕ್ಕೆ ‘ಬಾಲಿವುಡ್’ ಎಂಬ ಹೆಸರನ್ನು ಕೊಡಲಾಗಿದೆ. ಈ ಚಲನಚಿತ್ರಗಳಿಗೆ ಭಾರತದಲ್ಲಿನ ಪ್ರೇಕ್ಷಕರ ಜತೆಗೆ ಏಶಿಯಾ,ಆಫಿಕ್ರಾದಾದ್ಯಂತ ಹರಡಿರುವ ಅಪಾರ ಪ್ರೇಕ್ಷಕ ಸಮೂಹವೇ ಇದೆ. ವದಂತಿಗಳ ಪ್ರಕಾರ (ಅವು ಉತ್ಪ್ರೇಕ್ಷಿತ ವಾಗಿರಲೂಬಹುದು) ಜೋಸೆಫ್ ಸ್ಟಾಲಿನ್ ಮತ್ತು ಮಾವೊತ್ಸೆತುಂಗರಂಥವರೂ ತಮ್ಮ ತಮ್ಮ ‘ ಕಾಲಗಳಲ್ಲಿ ಬಾಲಿವುಡ್ಡಿನ ಚಿತ್ರಗಳ ಭಕ್ತರಾಗಿದ್ದರಂತೆ! ಮಾವೋ ಅವರು ರಾಜಕಪೂರನ “ಆವಾರಾ” ವನ್ನು ನಲವತ್ತು ಬಾರಿ ನೋಡಿದ್ದರಂತೆ!
ಬಾಲಿವುಡ್ ಚಿತ್ರಗಳ ಕೆಲವು ಲಕ್ಷಣಗಳನ್ನು ಬಹುಶಃ ಈ ರೀತಿ ಪಟ್ಟಿಮಾಡಬಹುದು.
(೧) ರಂಜನೆ
(೨) ಸಾವಿನ ಅಂಚಿನಲ್ಲಿರುವ ಶ್ರೀಮಂತ ವಿಧವೆ ಸಾವನ್ನು ಎದುರುನೋಡುತ್ತ ಮುಂಬರುವ ಭಾವುಕ ಉತ್ತುಂಗಕ್ಕೆ ಕಾರಣಲಾಗುವುದು
(೩) ತನ್ನಪ್ಪನ ಸಾವಿಗೆ ಕಾರಣನಾದ ಖಳನಾಯಕನಿಗೆ ಪ್ರತೀಕಾರಮಾಡಲು ಕಾಯುತ್ತಿರುವ ನಾಯಕ
(೪) ಹುಟ್ಟುವಾಗಲೇ ಸಂತತ್ವವನ್ನು ಪಡೆದ ಸಂತರು
(೫) ಯಾವಾಗಲೂ ಶೋಕದಲ್ಲೇ ಮುಳುಗಿರುವ ವಿಧವೆಯರು
(೬) ಗೃಹಿಣಿಯರಾಗಲು ಸಾಧ್ಯವಾಗದ ವೇಶ್ಯೆಯರು.
ಹೊಸ ಕಾದಂಬರಿ : ಕರಣಂ ಪವನ್ ಪ್ರಸಾದರ “ಕರ್ಮ”
– ನಂದೀಶ್ ಆಚಾರ್ಯ
Concave media co.ಈ ಕಾದಂಬರಿಯನ್ನು ಹೊರತಂದಿದೆ. ನಾಟಕಕಾರರಾದ ಕರಣಂ ಪವನ್ ಪ್ರಸಾದರ ಮೊದಲ ಕಾದಂಬರಿಯಿದು. ಖ್ಯಾತ ಕಾದಾಂಬರಿಕಾರರಾದ ಎಸ್ ಎಲ್ ಭೈರಪ್ಪನವರು ಈ ಕಾದಂಬರಿಯ ಪ್ರಥಮ ಪ್ರತಿಯನ್ನು ಓದಿ ಮೆಚ್ಚಿಕೊಂಡಿದ್ದಾರೆ. ಕಳೆದ ವಾರ ಶತವಾಧಾನಿ ಆರ್ ಗಣೇಶರು ಕಾದಾಂಬರಿಯನ್ನು ಬಿಡುಗಡೆಗೊಳಿಸಿದರು. ನಗರ ಜೀವನದ ಅಭದ್ರ ಭಾವಸ್ಥಿತಿಯಿಂದ ಒಮ್ಮೆಲೆ ತಂದೆಯ ಸಾವಿನ ನಂತರದ ಕಾರ್ಯದಲ್ಲಿ ತೊಡಗುವ ಟೆಕ್ಕಿಯ ಮೂಲಕ ಕಥೆ ಹರಡುಕೊಳ್ಳುತ್ತದೆ. ನಂತರದ ಹದಿನೈದು ದಿನಗಳಲ್ಲಿ ಆತನಲ್ಲಾಗುವ ನಂಬಿಕೆ ಮತ್ತು ಶ್ರದ್ಧೆಯ ನಡುವಿನ ತೊಳಲಾಟ ಮತ್ತು ಸ್ಥಿತ್ಯಂತರದ ಯಾನವೇ ‘ಕರ್ಮ’
ಅಚಾನಕ್ಕಾಗಿ ಅಪ್ಪಳಿಸಿದ ತಂದೆಯ ಸಾವಿನ ಸುದ್ದಿ ತನಗೆ ಏನೂ ಅಘಾತವನ್ನ ನೀಡದ್ದನ್ನು ಕಂಡು ಕಥಾನಾಯಕ ಮೊದಲಿನಿಂದಲೂ ಗೊಂದಲದಲ್ಲೇ ಎದುರಾಗುತ್ತಾನೆ. ಪ್ರತಿ ಪ್ರಸಂಗದಲ್ಲೂ ತನ್ನನ್ನು ತಾನೇ ಕೆಡವಿಕೊಂಡು ಅನುಭವಿಸುತ್ತಾನೆ. ತನ್ನ ಹುಟ್ಟೂರಿಗೆ ಹೋಗಿ ತನ್ನ ತಮ್ಮ ನರಹರಿ, ತಾಯಿಯನ್ನು ಕೂಡಿ ತಂದೆಯ ಕ್ರಿಯೆಯಲ್ಲಿ ಪಾಲ್ಗೊಳ್ಳುವಲ್ಲಿಯಿಂದ ಕರ್ಮ ಮಜಲು ಬದಲಿಸಿ ತನ್ನ ಮೂಲವಾದವಾದ ನಂಬಿಕೆ ಮತ್ತು ಶ್ರದ್ಧೆ ಎರಡೂ ತೀರ ಬೇರೆ. ನಂಬಿಕೆ ಚಂಚಲ, ಶ್ರದ್ಧೆ ಅಚಲ, ನಂಬಿಕೆಗೆ ಘಾಸಿಯಾಗುತ್ತದೆ, ಶ್ರದ್ಧೆಗೆ ಎಂದೂ ಘಾಸಿಯಾಗುವುದಿಲ್ಲ ಎಂಬಲ್ಲಿಗೆ ಬಂದು ನಿಲ್ಲುತ್ತದೆ. ಕ್ರಿಯೆ ಮಾಡಿಸುವ ತಂದೆಯ ಸ್ನೇಹಿತ ಶ್ರೀಕಂಠ ಜೋಯಿಸರು ಮತ್ತು ಕಥಾ ನಾಯಕನ ಸಂಭಾಷಣೆಯ ಒಂದು ಪ್ರಸಂಗ ಹೀಗಿದೆ.
“ಇವೆಲ್ಲಾ ನಿಜಾನಾ?’’ ಅಳುಕಿನಿಂದಲೇ ಸುರೇಂದ್ರ ಪ್ರಶ್ನಿಸಿದ. ಭಟ್ಟರು ಹಿಂದಿರುಗಿ ನೋಡುವ ಹೊತ್ತಿಗೆ ಇವನ ಕಂಠ ಕುಸಿದು ಹೋಯಿತು. ಅಲ್ಲೇ ಅಡಕೆ ಮರಕ್ಕೆ ಹಬ್ಬಿಸಿದ್ದ ಏಲಕ್ಕಿ ಗಿಡವನ್ನು ಪರೀಕ್ಷಿಸುತ್ತಾ ನಿಂತ. “ತೋಟ ಮಾರ್ತಾ ಇದೀನಿ ತಗೋತ್ಯಾ ಮಾರಾಯಾ?’’ ಗಿಡವನ್ನು ಮೂಸುತ್ತಿದ್ದ ಸುರೇಂದ್ರ “ನನಗ್ಯಾಕೆ ಭಟ್ಟರೇ?’’ ಎಂದ. “ಈಗ ಅದೇ ಹೊಸ ವಿಚಾರ ಈ ವಾಣಿ ಗಂಡ ಎಲ್ಲಾ ಮುಂಡುಮೋಚಿ ಈಗ ಇಲ್ಲಿ ತೋಟ ಗೀಟ ಮಾಡ್ಕೊಂಡು ಅದನ್ನೇ ಕಂಪೆನಿ ಮಾಡಿ ದುಡ್ಡು ಮಾಡ್ತಾ ಇದಾನೆ ಅವನು ನಿನ್ನ ಥರಾನೆ ಯಾವುದೋ ಇಂಜಿನಿಯರ್ ನನಗೆ ಸರಿ ಗೊತ್ತಿಲ್ಲ’’ ಭರತನ ಮೇಲಿನ ಉರಿಗೆ ಗಿಡದ ಎಲೆಯನ್ನು ಚಿವುಟಿದ. “ಎಲೆ ಎಂತ ಮಾಡ್ತೋ ನಿಂಗೆ? ಅದೇನೋ ವಿಷಯ ಅಂದ್ಯಲ್ಲ ಏನು?’’ ಆಗಲೇ ಕೇಳಿದೆನೆಲ್ಲ ಅದೇ ಎಂದು ಸುರೇಂದ್ರ ಉತ್ತರಿಸಿದ. “ನಿಜವಾ ಅಂತ ಕೇಳಿದೆ. ಏನು ನಿಜ. ನಾನು ಇರೋದ, ನೀ ಇರೋದ ಅಥವಾ ನಾ ಮನುಷ್ಯಾನ ಏನು? ಸ್ವಷ್ಟ ಕೇಳು, ಈ ಮೈಗಳ್ಳ ಮುಂಡೇವು ಇದಾವಲ್ಲ ಇವರಿಂದ ಅಡಕೆ ಇಳಿಸಕ್ಕೆ ಆಗಿಲ್ಲ. ದುಡ್ಡು ಕೊಟ್ರೂ ಜನ ಬರಲ್ಲ. ದಿನದ ಗಂಜಿ ನಂಬಿದೋರಿಗೆ ಒಂದು ರೂಪಾಯಿ ಅಕ್ಕಿ ಕೊಟ್ರೆ ಇನ್ನೇನ್ ಆಗತ್ತೆ ಹೊಲದ ಕೆಲಸ ತೋಟದ ಕೆಲಸಕ್ಕೆ ಆಳುಗಳೇ ಇಲ್ಲ. ವಯಸ್ಸಲ್ಲಿ ನಾನೇ ಇಳಿಸ್ತಿದ್ದೆ.
ನಮ್ಮನಿಮ್ಮೊಳಗೂ ಇರಬಹುದು ಒಬ್ಬ ‘ಜೋನಾಥನ್ ಸೀಗಲ್’…..
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಅದೊ೦ದು ಸಮುದ್ರ ತೀರ. ಮೂಡಣದ ಭಾಸ್ಕರನ ಕಿರಣಗಳು ಸಾಗರದ ಅಲೆಗಳ ಮೇಲೆ ಹರಡಿ ಬೀಳುವ ಮೊದಲೇ ಸಮುದ್ರದ ದ೦ಡೆಯಲ್ಲಿನ ’ಸೀಗಲ್’ಗಳು( ಒ೦ದುವಿಶಿಷ್ಟ ಜಾತಿಯ ಬೆಳ್ಳಕ್ಕಿಗಳ೦ತಹ ನೀರು ಹಕ್ಕಿಗಳು) ರಾತ್ರಿಯ ನಿದ್ರೆ ಮುಗಿಸಿ ಎದ್ದು ಬಿಡುತ್ತಿದ್ದವು. ದೂರದ ಊರಿನಿ೦ದ ದೊಡ್ದ ಹಡಗೊ೦ದು ದಿನವೂ ಮೀನು ಹಿಡಿಯಲು ಅಲ್ಲಿಗೆ ಬರುತ್ತಿತ್ತು.ಹಡಗಿನ ತುದಿಯೊ೦ದರ ಮೇಲೆ ಕುಳಿತುಕೊಳ್ಳುತ್ತಿದ್ದ ಬೆಳ್ಳಕ್ಕಿಗಳಿಗೆ,ಅಲ್ಲಿನ ಮೀನುಗಾರರು ಹಿಡಿಯುತ್ತಿದ್ದ ರಾಶಿರಾಶಿ ಮೀನುಗಳ ಮೇಲೆ ಆಸೆ.ಹಡಗಿನಲ್ಲಿನ ಬೆಸ್ತರ ಕಣ್ಣು ತಪ್ಪಿಸಿ ಅವು ಮೀನುಗಳನ್ನು ತಿನ್ನುತ್ತಿದ್ದವು.ತು೦ಬ ದೂರಕ್ಕಾಗಲಿ, ಎತ್ತರಕ್ಕಾಗಲಿ ಹಾರಲಾಗದ ಬೆಳ್ಳಕ್ಕಿಗಳಿಗೆ ಹಡಗಿನಿ೦ದ ಮೀನು ಕದ್ದು ತಿನ್ನುವುದು,ಸಮುದ್ರದ ತೀರದಲ್ಲಿ ಈಜಾಡುವ ಮೀನುಗಳ ಬೇಟೆಯಾಡುವುದೊ೦ದೇ ದೈನ೦ದಿನ ಕಾರ್ಯವಾಗಿತ್ತು ಮತ್ತು ಆ ಕಾರ್ಯದಿ೦ದ ಅವು ಬಹಳ ಸ೦ತೋಷವಾಗಿದ್ದವು. ಆದರೆ ಜೋನಾಥನ್ ಎನ್ನುವ ಒ೦ದು ಬೆಳ್ಳಕ್ಕಿಗೆ ಮಾತ್ರ ತನ್ನ ಜನಾ೦ಗದ ದೈನ೦ದಿನ ಜೀವನ ಶೈಲಿ ಬೇಸರ ತರಿಸುತ್ತಿತ್ತು.ಬರೀ ತಿನ್ನುವುದು,ಮೊಟ್ಟೆಯಿಡುವುದೇ ಜೀವನವಾ..?
ಇದರ ಹೊರತಾಗಿಯೂ ಸಾಧಿಸಲು ಬೇಕಾದಷ್ಟಿದೆ ಜೀವನದಲ್ಲಿ ಎ೦ದುಕೊಳ್ಳುತ್ತಿದ್ದ ಜೋನಾಥನ್ ಗೆ ಹಾರುವುದೆ೦ದರೇ ಪ೦ಚಪ್ರಾಣ. ತಾನು ಹದ್ದಿನ೦ತೇ,ಗರುಡ ಪಕ್ಷಿಯ೦ತೇ ಆಗಸದೆತ್ತರಕ್ಕೆ ಹಾರುವುದು ಸಾಧ್ಯವಿಲ್ಲವಾ? ಎ೦ದು ಜೋನಾಥನ್ ಯೋಚಿಸುತ್ತಿತ್ತು.ತನ್ನ ಸ್ನೇಹಿತರು ಮೀನು ಹಿಡಿಯುವ,ಮೀನು ತಿನ್ನುವ ಕಾರ್ಯದಲ್ಲಿ ನಿರತರಾಗಿದ್ದರೆ, ಜೋನಾಥನ್ ಮಾತ್ರ ಬೆಟ್ಟದ ಮೇಲಿನಿ೦ದ ಜಿಗಿದು ಹದ್ದಿನ೦ತೇ ಎತ್ತರಕ್ಕೆ ಹಾರುವ ಪ್ರಯತ್ನ ಮಾಡುತ್ತಿತ್ತು.ಆದರೆ ತೀರ ಭಾರದ,ವಿಶಾಲ ರೆಕ್ಕೆಗಳಿ೦ದಾಗಿ ಪ್ರತಿಬಾರಿಯೂ ಜೋನಾಥನ್ ಸ್ವಲ್ಪ ದೂರ ಹಾರುತ್ತಲೇ,ನಿಯ೦ತ್ರಣ ಕಳೆದುಕೊ೦ಡು ಮುಗ್ಗರಿಸಿ ಬಿಳುತ್ತಿತ್ತು. ಏನೇ ಆದರೂ ಹಾರುವುದಲ್ಲೇ ಅದು ಆನ೦ದವನ್ನು ಅನುಭವಿಸುತ್ತಿತ್ತು.ಅನ್ನ ನೀರುಗಳ ಪರಿವೆಯಿಲ್ಲದೇ,ಎತ್ತರದಿ೦ದ ಹಾರಾಡಲು ಪ್ರಯತ್ನಿಸುತ್ತ,ಹಾರುತ್ತ,ಬೀಳುತ್ತ ದಿನವಿಡಿ ಕಾಲಕಳೆಯುತ್ತಿತ್ತು. ಜೋನಾಥನ್ ಈ ವಿಚಿತ್ರ ನಡುವಳಿಕೆ ಅದರ ತ೦ದೆತಾಯ೦ದಿರಿಗೂ ಮುಜುಗರಕ್ಕೀಡು ಮಾಡಿತ್ತು.’ಬೆಳ್ಳಕ್ಕಿಯಾಗಿ ಹುಟ್ಟಿದ ಮೇಲೆ,ಮೀನು ತಿನ್ನುತ್ತ ಬದುಕುವುದೇ ನಮ್ಮ ಜೀವನದ ಪರಮೋದ್ದೇಶ, ಅಲ್ಲದೆ ಹಾರುವಾಗ ಮುಗ್ಗರಿಸಿ ಬೀಳುವುದು ನಮ್ಮ ಕುಲಕ್ಕೇ ಅವಮಾನಕರ, ನಮ್ಮಿ೦ದಾಗುವಷ್ಟು ಮಾತ್ರ ಹಾರಲು ಪ್ರಯತ್ನಿಸುವುದನ್ನು ಬಿಟ್ಟು ಇದೇನು ಹುಚ್ಚಾಟ ನಿ೦ದು’ ಎ೦ದು ಅದರ ತ೦ದೆ ಒ೦ದೆರಡು ಬಾರಿ ಅದನ್ನು ಗದರಿಸಿದ್ದೂ ಉ೦ಟು. ಆದರೆ ಜೋನಾಥನ್ ಗೆ ಗಿಡುಗನ೦ತೇ ಮೋಡಗಳಾಚೆಗೆ ಹಾರುವ ಆಸೆ.ನೂರಾರು ಮೈಲಿಗಳ ವೇಗದಲ್ಲಿ ತೇಲುವ ತವಕ.ಹಾಗಾಗಿ ತ೦ದೆಯ ಬಯ್ಗುಳಗಳನ್ನು ಹೆಚ್ಚು ಗ೦ಭೀರವಾಗಿ ತೆಗೆದುಕೊಳ್ಳದ ಈ ಪಕ್ಷಿ ತನ್ನ ಪ್ರಯತ್ನವನ್ನು ಮು೦ದುವರೆಸುತ್ತಲೇ ಇತ್ತು.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೬
– ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫
‘ಆವರಣ ‘ ಎಂಬ ವಿ-ಕೃತಿ – ಸಂಗ್ರಹ : ಗೌರಿ ಲಂಕೇಶ್
ಗೌರಿ ಲಂಕೇಶ್ ಅವರು ಸಂಗ್ರಹಿಸಿರುವ ‘ಆವರಣ’ ಎಂಬ ವಿಕೃತಿ’ (ಲಂಕೇಶ್ ಪ್ರಕಾಶನ ಬೆಂಗಳೂರು–೪, ೨೦೦೭) ವಿಮರ್ಶಾ ಸಂಕಲನದಲ್ಲಿ ಯು ಅರ್ ಅನಂತಮೂರ್ತಿ, ಕೆ ಮರುಳಸಿದ್ದಪ್ಪ, ರಹಮತ್ ತರೀಕೆರೆ, ಜಿ ರಾಜಶೇಖರ್, ಜಿ ಕೆ ಗೋವಿಂದರಾವ್, ಕೆ. ಫಣಿರಾಜ್ ಮುಂತಾದ ಪ್ರಸಿದ್ಧ ಲೇಖಕರು,ವಿಮರ್ಶಕರು ಹಾಗು ಚಿಂತಕರ ಲೇಖನಗಳಿವೆ. ‘ಆವರಣ’ದಲ್ಲಿ ಚಿತ್ರಿತಗೊಂಡಿರುವ ಚರಿತ್ರೆಯ ಅಂಶಗಳು ಎಷ್ಟರಮಟ್ಟಿಗೆ ನಂಬಲರ್ಹ/ಅದಷ್ಟೇ ನಿಜವೇ ಬೇರೆ ಮುಖಗಳು ಇಲ್ಲವೇ ಎಂಬುದರ ಜತೆಗೆ ಕಾದಂಬರಿಯ ತಾತ್ವಿಕತೆ, ರೂಪ,ವಿನ್ಯಾಸಗಳ ಬಗ್ಗೆ ಇಲ್ಲಿನ ಲೇಖನಗಳಲ್ಲಿ ಒತ್ತು ಜಾಸ್ತಿ. ಹಿಂದೆ ಏನೇನೋ ನಡೆದುಹೋಗಿದೆ;ಅದನ್ನೆಲ್ಲಾ ಮತ್ತೆ ಕೆದಕುವುದ್ಯಾಕೆ ಎಂಬ ಮಾತೂ ಆಗೀಗ ಬರುತ್ತದೆ. ಹೀಗಾಗಿ ಈ ವಿಮರ್ಶಾ ಸಂಕಲನದ ಲೇಖನಗಳನ್ನು ಸ್ವಲ್ಪ ವಿವರವಾಗಿ ಚರ್ಚಿಸಬೇಕಾಗಿದೆ.
ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು-ಪುಸ್ತಕ ಪರಿಚಯ –೧
ವಿನಯಲಾಲ್ ಮತ್ತು ಅಶೀಶ್ ನಂದಿಯವರ ಸಂಪಾದಕತ್ವದಲ್ಲಿ “ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು” ಎಂಬ ಪುಸ್ತಕವನ್ನು ಅಕ್ಷರ ಪ್ರಕಾಶನದವರು (ಹೆಗ್ಗೋಡು ಸಾಗರ; ಮೊದಲ ಮುದ್ರಣ ೨೦೦೭ ಮತ್ತು ಎರಡನೇ ಮುದ್ರಣ ೨೦೧೦) ಪ್ರಕಟಿಸಿದ್ದಾರೆ. ಈ ಪುಸ್ತಕದ ಬಗ್ಗೆ ಪ್ರಕಾಶಕರು ‘ಬೌದ್ಧಿಕ ಸಿದ್ಧ ಮಾದರಿಗಳ ನಿರಾಕರಣೆ’ ಎಂಬ ಶೀರ್ಷಿಕೆಯಡಿಯಲ್ಲಿ ಹೇಳಿರುವುದನ್ನು ಅವರದೇ ಮಾತುಗಳಲ್ಲಿ ಈ ರೀತಿ ಸಂಕ್ಷೇಪಿಸಿ ಹೇಳಬಹುದು.”… ಕನ್ನಡ ಅಕಾರಾದಿಯಲ್ಲಿ ಜೋಡಿಸಲ್ಪಟ್ಟಿರುವ ಈ ಪರಿಭಾಷಾ ಕೋಶದಲ್ಲಿ (ಅಂದರೆ ಪ್ರಸ್ತುತ ಪುಸ್ತಕದಲ್ಲಿ) ‘ಅರ್ಥಶಾಸ್ತ್ರ’ ದಿಂದ ‘ಬಾಲಿವುಡ್’ ನವರೆಗೆ, ‘ಇಸ್ಲಾಂ’ನಿಂದ ‘ಕೋಕಾಕೋಲಾ’ವರೆಗೆ, ‘ಮಾರ್ಕ್ಸ್ ವಾದ’ ದಿಂದ, ‘ಯಾಹೂ(yahoo)’ ,ದವರೆಗೆ ನಾನಾ ವಿಚಾರ ಕುರಿತ ಕಿರುಲೇಖನಗಳಿವೆ…ಆಧುನಿಕ ಜೀವನಕ್ರಮದಲ್ಲಿ ನಾವಿವತ್ತು ಹಲವು ಪದಗಳನ್ನೂ ಮತ್ತು ಆ ಪದಗಳೊಂದಿಗೆ ಅಂತರ್ಗತವೂ ಆಗಿರುವ ವಿಚಾರಗಳನ್ನು ‘ಸಾಮಾನ್ಯಜ್ಞಾನ’ವಾಗಿ ತುಂಬ ಸಹಜವೂ ಪರಿಚಿತವೂ ಎಂದು ಭಾವಿಸಿ ಸ್ವೀಕರಿಸಿದ್ದೇವೆ. ಉದಾಹರಣೆಗೆ ಶಿಕ್ಷಣ,ಬಡತನ,ಅಥವಾ ಅರ್ಥಶಾಸ್ತ್ರ ಮೊದಲಾದವು…ಈಗ ಈ ಪದವು ಚಾಲ್ತಿಯಲ್ಲಿ ಪಡೆದಿರುವ ಅರ್ಥವನ್ನಾಗಲೀ …ಆ ವ್ಯಾಖ್ಯಾನದ ಹಿನ್ನೆಲೆಯಲ್ಲಿರುವ ಸಿದ್ಧಾಂತವನ್ನಾಗಲಿ ಮೂಲಭೂತವಾಗಿಯೇ ಪ್ರಶ್ನಿಸುವ ಸಾಹಸಕ್ಕೆ ನಾವು ಕೈ ಹಾಕುವುದು ಅಪರೂಪ.
… ಬದಲು ಬದಲಾಗುತ್ತಲೇ ಇರುವ ಬೌದ್ಧಿಕ ಜಗತ್ತಿನೊಳಗೊಂದು ಕಿರುನೋಟವನ್ನು ಕೊಡುವ ಮೂಲಕ ಓದುಗರಿಗೆ ತುಂಬ ಪರಿಚಿತವೆಂದು ಭಾವಿತವಾದದ್ದು, ಎಷ್ಟು ಅಪರಿಚಿತವೆಂಬುದನ್ನೂ ಹಾಗೂ ಅಪರಿಚಿತವೇ ಎಷ್ಟು ಪರಿಚಿತವೆಂಬುದನ್ನೂ ಕಾಣಿಸಿ ಕೊಡುವ ಒಂದು ಪ್ರಯತ್ನ ಇಲ್ಲಿದೆ. ಅಲ್ಲದೆ ಇಲ್ಲಿ ಸಂಕಲಿತವಾಗಿರುವ ಎಲ್ಲ ಲೇಖನಗಳಲ್ಲಿ ಶೈಕ್ಷಣಿಕ ಶಿಸ್ತಿನ ಬಿಗಿಯಾದ ಜಡ ನಿರೂಪಣೆಗಿಂತ ಹಗುರವಾದ ಪ್ರಬಂಧರೂಪಿ ಲಾಲಿತ್ಯದ ಶೈಲಿ ಕಾಣಿಸಿಕೊಂಡಿರುವುದು ಕೂಡಾ ಇಂಥ ಪ್ರಯತ್ನದ ಒಂದು ಅಂಗವಾಗಿಯೇ …ಈ ಎಲ್ಲ ಲೇಖನಗಳು,ತಮ್ಮ ವಸ್ತು -ವಿನ್ಯಾಸಗಳೆರಡರಲ್ಲೂ ಪಾಶ್ಚಿಮಾತ್ಯ ರೂಢಿಯಲ್ಲಿ ಯಾವುದನ್ನು ‘ಅಕೆಡೆಮಿಕ್ ಬರಹ‘ ಎನ್ನಲಾಗುತ್ತದೆಯೋ ಅದಕ್ಕಿಂತ ಭಿನ್ನವಾದ ಹೊಸತನಕ್ಕಾಗಿ ಹವಣಿಸುತ್ತಿವೆ …”
ಇನ್ನು ನಾನು ಮಾಡಲು ಪ್ರಯತ್ನಿಸಿರುವ ಈ ಪುಸ್ತಕದ ಪರಿಚಯದ ರೀತಿಯ ಬಗ್ಗೆ ಒಂದೆರೆಡು ಮಾತುಗಳು. ‘ನಿಲುಮೆ’ಯ ಓದುಗರಲ್ಲಿ ಹಲವರು ಈಗಾಗಲೇ ಈ ಪುಸ್ತಕವನ್ನು ಓದಿರಬಹುದು ಮತ್ತು ಕೆಲವರ ಗಮನಕ್ಕೆ ಬರದೆ ಹೋಗಿರಬಹುದು. ಪ್ರಸ್ತುತ ಪುಸ್ತಕದಲ್ಲಿರುವ ಲೇಖನಗಳ ಅರ್ಥಕ್ಕೆ ಭಂಗ ಬರದಂತೆ ಅವುಗಳ ‘ಸಾರಾಂಶ’ವನ್ನು ನೀಡಲು ನಾನು ಪ್ರಯತ್ನಿಸಿದ್ದೇನೆ.ಈ ಲೇಖನಗಳಲ್ಲಿ ಆಗಾಗ ‘ನಾನು’, ‘ನಾವು’ ಎಂಬ ಪದಗಳು ಬರುತ್ತವೆ. ಅವು ಆ ಮೂಲ ಲೇಖಕರೇ ಹೊರತು ಸಾರಾಂಶ ಬರೆದಿರುವ ”ನಾನಲ್ಲ” ಎಂಬುದನ್ನು ಓದುಗರು ಗಮನಕ್ಕೆ ತರಲು ಇಚ್ಚಿಸುತ್ತೇನೆ.




