ವಿಷಯದ ವಿವರಗಳಿಗೆ ದಾಟಿರಿ

Posts from the ‘ಪುಸ್ತಕ ಪರಿಚಯ’ Category

6
ಸೆಪ್ಟೆಂ

ಲಕ್ಷ್ಮೀ ಪುತ್ರರಾಗುವು​ದು ಹೇಗೆ?

-ವೆಂಕಟೇಶ್ ಗುರುರಾಜ್

ಲಕ್ಷ್ಮೀ ಪುತ್ರರಾಗುವುದು ಹೇಗೆ? ಭಾಗ-೧

ವಿಶ್ವದ ಅತೀ ಶ್ರೀಮಂತರಲ್ಲಿ ಪ್ರಥಮ ಸ್ಥಾನದಲ್ಲಿರುವ ಮೆಕ್ಸಿಕೋದೇಶದ ಕಾರ್ಲೋಸ್, ದ್ವಿತೀಯ ಸ್ಥಾನದ ಅಮೇರಿಕಾದವರಾದ ಬಿಲ್ ಗೇಟ್ಸ್, ಮೂರನೇ ಸ್ಥಾನದ ಅಮೇರಿಕಾದವರೇಆದ ವಾರೆನ್ ಬಫೆಟ್ ಮುಂತಾದ ವಿಶ್ವದ ಅತೀ ಶ್ರೀಮಂತ ೧೦ ವ್ಯಕ್ತಿಗಳು ಹೇಗೆ ಲಕ್ಷ್ಮೀ ಪುತ್ರರಾದರುಎನ್ನುವ ಬಗ್ಗೆ ಒಂದು ಸೊಗಸಾದ ಕಾರ್ಯಕ್ರಮವನ್ನು ಟಿ.ವಿ.೯ ಇತ್ತೀಚೆಗೆ ಪ್ರಸಾರಮಾಡಿತ್ತು. ಚರ್ಚೆಯಲ್ಲಿಭಾಗವಹಿಸಿದ್ದ ವಿಶ್ವದ ಶ್ರೀಮಂತರಲ್ಲಿ ೧೦೫೧ನೇ ಸ್ಥಾನದ ಮತ್ತು ಕರ್ನಾಟಕದ ೬ನೇ ಶ್ರೀಮಂತರಾದ ರಾಜೇಶ್ಎಕ್ಸ್ ಪೋರ್ಟ್ ಸಿ.ಇ.ಒ.ರಾಜೀವ್ ಮೆಹ್ತಾ, ಐ.ಐ.ಎಂ.ನಿರ್ದೇಶಕರಾದ ಮುರಳೀಧರ್ ಮತ್ತು ಹಣಕಾಸು ಹೂಡಿಕೆತಜ್ಞರಾದ ರುದ್ರಮೂರ್ತಿಯವರು ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಶ್ರೀಮಂತರಾಗುವುದು ಹೇಗೆ? ಎಂಬ ಮೂಲಭೂತ ವಿಷಯವನ್ನು ಬಹಳ ಚೆನ್ನಾಗಿ ತಿಳಿಯಪಡಿಸಿದರು.

ಮತ್ತಷ್ಟು ಓದು »

5
ಸೆಪ್ಟೆಂ

ವಿಲಕ್ಷಣ ದಾರ್ಶನಿಕ ಯೂ.ಜಿ,ಕೃಷ್ಣಮೂರ್ತಿ(ಯೂಜಿ)

-ಡಾ| ಜ್ಞಾನದೇವ್ ಮೊಳಕಾಲ್ಮುರು

ತನ್ನಲ್ಲಿ ನೀಡುವುದಕ್ಕೆ ಯಾವ ಸ೦ದೇಶವೂ ಇಲ್ಲವೆ೦ದು, ಈ ಜಗತ್ತಿನಲ್ಲಿ ನೀವು ಅರ್ಥಮಾಡಿಕೊ೦ಡು ಬದುಕುವ೦ಥದು ಏನೂ ಇಲ್ಲವೆ೦ದು ಸಾರಿಕೊ೦ಡೇ ಜಗತ್ತಿನ ಆಧ್ಯಾತ್ಮಿಕ ಜಿಜ್ಞಾಸುಗಳಲ್ಲಿ, ಚಿ೦ತಕರಲ್ಲಿ ಗಾಢ ಆಸಕ್ತಿ ಕೆರಳಿಸಿದ ಒಬ್ಬ ವರ್ಣರ೦ಜಿತ ದಾರ್ಶನಿಕ ಚಿ೦ತಕ ಉಪ್ಪಾಲೂರಿ ಗೋಪಾಲ ಕೃಷ್ಣಮೂರ್ತಿ.ಯೂಜಿಯೆ೦ದೇ ವಿಶ್ವಾದ್ಯ೦ತ ಚಿರಪರಿಚಿತ. ಈ ಜಗತ್ತಿನ ಒಬ್ಬ ವೈಶಿಷ್ಟ್ಯಪೂರ್ಣ ಹಾಗೂ ಒಬ್ಬ ವಿಲಕ್ಷಣ ದಾರ್ಶನಿಕನೆ೦ದೋ ಅಥವಾ ಗುರುವೆ೦ತಲೋ ಆತನನ್ನು ಕರೆಯಬಹುದು. ಆದರೆ ಆತ ತನ್ನನ್ನು ಗುರುವೆ೦ದು ಕರೆಯುವುದನ್ನು, ತನ್ನ ಸುತ್ತ ಯಾವುದೇ ಸ೦ಘ ಸ೦ಸ್ಥೆಯನ್ನು ಕಟ್ಟಲು ಖಡಾಖ೦ಡಿತವಾಗಿ ನಿರಾಕರಿಸಿದ. ದೇವರು, ಧರ್ಮ, ಗುರುಗಳು ನೀತಿ ನಿಯಮಗಳು ಜ್ಞಾನ, ಆಲೋಚನೆ ಇವೆಲ್ಲವುಗಳನ್ನು ನಿರ್ದ್ಯಕ್ಷಿಣ್ಯವಾಗಿ ಕಿತ್ತುಹಾಕದೆಯೇ ಹೊಸ ಜಗತ್ತು ಮೂಡಲಾರದು ಎ೦ದು ಗಾಢವಾಗಿ ನ೦ಬಿದವ ಯೂಜಿ. ಅದೊ೦ದು ಕ್ರಾ೦ತಿಕಾರಕ ಅಥವಾ ಚಿ೦ತನೆಯ ನವ ಆಯಾಮದ ಹರಿಕಾರರಲ್ಲೊಬ್ಬ ಯೂಜಿ ಎ೦ದೂ ಭಾವಿಸಬಹುದು. ತನ್ನ ಖಾರವಾದ, ರ್‍ಯಾಡಿಕಲ್ ಚಿ೦ತನೆಗಳಿಗೆ ಹೆಸರುವಾಸಿಯಾಗಿದ್ದ. ತನ್ನ ಬಳಿ ಹೋಗುವವರನ್ನು ಪೂರಾ ನಗ್ನಗೊಳಿಸುತ್ತಾನೆ. ಈತನ ಬೋಧೆಗಳನ್ನು ಮೊಟ್ಟಮೊದಲ ಬಾರಿ ಕೇಳಿದವರಿಗೆ ಅದೊ೦ದು ಭಾರೀ ಶಾಕ್. ಆದರೂ ಈತನ ಬೋಧೆಗಳಲ್ಲಿ ಏನೆಲ್ಲವನ್ನೂ ನಾವು ತಿರಸ್ಕರಿಸಿದರೂ, ಹೀಗಳೆದರೂ ಎಲ್ಲೋ ಯಾವುದೋ ಒ೦ದು ಎಳೆಯಲ್ಲಿ ಸತ್ಯದ ಒಳಪದರಗಳೂ(Insights) ಅವಿತಿವೆ ಎ೦ಬುದನ್ನು ಮಾತ್ರ ನಾವು ಪೂರ್ವಾಗ್ರಹದ ಕಪಿಮುಷ್ಟಿಯಲ್ಲಿಲ್ಲ್ದದಿದ್ದರೆ ಅಲ್ಲಗಳೆಯಲಾಗುವುದಿಲ್ಲ. ಅನೇಕರನ್ನು ಪ್ರಭಾವಗೊಳಿಸಿದ್ದಾನೆ. ಈತನ ವಿಲಕ್ಷಣ ವಿಚಾರಧಾರೆಗೆ ಮನಸೋತವರೂ, ಹುಚ್ಚರಾದವರೂ ಸಾವಿರಾರು ಅನುಯಾಯಿಗಳಿದ್ದಾರೆ. ಸ೦ಪ್ರದಾಯವಾದಿಗಳನ್ನು ದ೦ಗುಬಡಿಸಿ ಕೆರಳಿಸಿದ್ದಾನೆ. ಅದರಲ್ಲೂ ನಾಸ್ತಿಕವಾದಿ ನಿಹಿಲಿಸ್ಟರಿಗೆ, ಸ್ವೆಚ್ಚಾಚಾರಿಗಳಿಗೆ ಧರ್ಮವಿರೋದಿಗಳಿಗೆ ಯೂಜಿ ಒಬ್ಬ ಪರಮಗುರುವಾಗಿ, ಮೆಸ್ಸಯ್ಯಾಅಗಿ, ಅಪ್ತನಾಗಿ ಕ೦ಡರೆ ಅಚ್ಚರಿಯೇನಿಲ್ಲ. ಹಲವರು ಈತನನ್ನು ಜ್ಞಾನೋದಯವಾದ ಗುರು ಎ೦ದು ಭಾವಿಸಿದರೆ ಇನ್ನು ಹಲವರು ತಮ್ಮ ಹುಬ್ಬುಗಳನ್ನು ಏರಿಸಿ ಈತನೊಬ್ಬ ಹಾದಿಗೆಟ್ಟ, ಪರ್ವರ್ಟೆಡ್, ಐಡಿಯೋಸಿ೦ಕ್ರಾ೦ಟಿಕ್ ತತ್ವಜ್ಞಾನಿಯೆ೦ದೇ ಮೂದಲಿಸಿದ್ದಾರೆ. “‘ ನೀವು ಬೇರೆ ಯಾರಿ೦ದಲೂ ಕೇಳಿಸಿಕೊಳ್ಳದಿರುವ೦ಥ ಆಲೋಚನೆಯ ಬಗ್ಗೆ ಸ್ವಲ್ಪ ಹೇಳಿ. ಅಲ್ಲಿರುವುದು ಯೋಚನೆ ಮತ್ತು ಯೋಚನೆಯ ಬಗ್ಗೆಯೇ ಅಷ್ಟೇ.” ಎ೦ದು ಆಲೋಚನೆಯನ್ನೇ ನಿಮ್ಮ ಶತ್ರು ಎ೦ದು ಬಣ್ಣಿಸಿ ಅದನ್ನೇ ಮೂಲವಾಗಿ ಖ೦ಡಿಸುವ, ಯೂಜಿ ನಮ್ಮನ್ನೂ ಸ್ವಲ್ಪ ಮಟ್ಟಿಗೆ ಚಿ೦ತನೆಗೆ ಹಾಗೆಯೇ ಗೊ೦ದಲಕ್ಕೂ ಹಚ್ಚುತ್ತಾನೆ. ಈತನ ಬದುಕೇ ಒ೦ದು ನಾಟಕೀಯತೆಯಿ೦ದ ತು೦ಬಿದ್ದು ಅನೇಕ ಏರಿಳಿತಗಳಿ೦ದ ಕೂಡಿದ್ದು ಅದನ್ನೇ ಒ೦ದು ಗ್ರ೦ಥವಾಗಿ ಬರೆಯುವ ರೋಚಕ ದ್ರವ್ಯವನ್ನು ಹೊ೦ದಿದೆ.

ಮತ್ತಷ್ಟು ಓದು »

30
ಮೇ

ಕಾನೂರು ಹೆಗ್ಗಡಿತಿ – 75

– ಡಾ| ಬಿ.ಆರ್ ಸತ್ಯನಾರಾಯಣ

ಕಾನೂರು ಹೆಗ್ಗಡತಿ ಕಾದಂಬರಿ ರಚಿತವಾಗಿ ಸಾರ್ಥಕ ೭೫ ವರ್ಷಗಳು ಕಳೆದಿವೆ. ನೆನಪಿನ ದೋಣಿಯಲ್ಲಿ ದಾಖಲಾಗಿರುವ ೧೭.೯.೧೯೩೩ರ ದಿನಚರಿಯಲ್ಲಿ ಹೀಗೆ ಹೇಳಿದೆ: ನಾನೊಂದು ಕಾದಂಬರಿಗೆ ವಸ್ತು ಸಂವಿಧಾನ ಪ್ರಾರಂಭಿಸಿದ್ದೇನೆ. ಹಗಲೆಲ್ಲ ಅದನ್ನೇ ಕುರಿತು ಆಲೋಚಿಸಿದೆ.ಇದು ಕಳೆದ ಎರಡೇ ದಿನಗಳಲ್ಲಿ, ಅಂದರೆ ೧೯.೯.೧೯೩೩ರ ಬೆಳಿಗ್ಗೆಯಿಂದಲೇ ಕಾದಂಬರಿಯ ಬರವಣಿಗೆ ಆರಂಭವಾಗುತ್ತದೆ. ಅಂದಿನಿಂದ ಸುಮಾರು ನಾಲ್ಕು ವರ್ಷಗಳ ನಂತರ ೧೯೩೭ರಲ್ಲಿ ಕಾದಂಬರಿ ಬೆಳಕು ಕಾಣುತ್ತದೆ.

ಈ ಎಲ್ಲಾ ಘಟನೆಗಳ ಹಿಂದಿದ್ದ ಮನೋಬಲಕ್ಕೆ ಧೈರ್ಯ ತುಂಬಿದವರು, ಕನಸನ್ನು ಬಿತ್ತಿದವರು ಕುವೆಂಪು ಅವರ ಗುರುಗಳಾದ ಶ್ರೀಟಿ.ಎಸ್.ವೆಂಕಣ್ಣಯ್ಯನವರು. ಟಾಲ್‌ಸ್ಟಾಯ್, ರೋಮಾ ರೋಲಾ, ಥಾಮಸ್ ಹಾರ್ಡಿ, ಗಾಲ್ಸ್‌ವರ್ದಿ ಮೊದಲಾದವರ ಮಹಾಕಾದಂಬರಿಗಳನ್ನು ಓದಿದ ಮೇಲೆ ಕನ್ನಡದಲ್ಲಿ ಅಂತಹ ಒಂದು ಕಾದಂಬರಿ ಯಾವಾಗ ಹುಟ್ಟುತ್ತದೆ ಎಂದು ಕಾಯುತ್ತಿದ್ದ ಕುವೆಂಪು, ತಮ್ಮ ಮಿತ್ರರಾಗಿದ್ದ ಅನೇಕ ಸ್ನೇಹಿತರಲ್ಲಿ ನೀವೇಕೆ ಬರೆಯಲು ಪ್ರಯತ್ನಿಸಬಾರದು? ಎಂದು ಪೀಡಿಸುತ್ತಿದ್ದರಂತೆ. ಒಂದು ದಿನ ಸಂಜೆ ಕುಕ್ಕನಹಳ್ಳಿ ಕೆರೆಯ ದಂಡೆಯ ಮೇಲೆ ವಾಯುಸಂಚಾರದಲ್ಲಿದ್ದಾಗ ವೆಂಕಣ್ಣಯ್ಯನವರು ನೀವೇ ಏಕೆ ಬರೆಯಬಾರದು? ಎಂದರಂತೆ. ಆಗ ಕುವೆಂಪು ಅವರು ಅದೇನು ಭಾವಗೀತೆ, ಸಣ್ಣಕತೆ, ನಾಟಕ ಬರೆದಂತೆಯೇ? ಅಥವಾ ಸಾಧಾರಣ ಕಾದಂಬರಿ ಬರೆದಂತೆಯೇ? ಮಹಾಕಾದಂಬರಿಗೆ ಇಂಗ್ಲಿಷಿನಲ್ಲಿ ಗ್ರೇಟರ್ ನಾವೆಲ್ ಅನ್ನುತ್ತಾರೆ. ಅದರ ಪಾತ್ರ ಸಂಖ್ಯೆಯ ವಿಪುಲತೆ, ಅದರ ದಿಗಿಲು ಹುಟ್ಟಿಸುವ ವಿಸ್ತಾರ, ಅದರ ಭಯಂಕರ ವೈವಿಧ್ಯ – ಆಲೋಚಿಸಿದರೆ ಮೈ ಜುಮ್ಮೆನ್ನುತ್ತದೆ! ಅವನ್ನೆಲ್ಲ ಅನ್ವಯ ಕೆಡದಂತೆ, ಎಲ್ಲಿಯೂ ಹೊಂದಾಣಿಕೆಗೆ ಭಂಗ ಬರದಂತೆ ಕಲ್ಪನೆಯಲ್ಲಿ ಹಿಡಿದಿಟ್ಟುಕೊಂಡು ಸಾವಿರಾರು ಪುಟಗಳಲ್ಲಿ ನಡೆಸುವುದು ಸಾಧ್ಯವೇ? ನಾನು ಬರೆಯಹೊರಟರೆ ಉತ್ತರಕುಮಾರನ ರಣಸಾಹಸವಾಗುತ್ತದಷ್ಟೆ! ಎಂದು ನಕ್ಕಬಿಟ್ಟಿದ್ದರಂತೆ. ಆದರೆ ಶಿಷ್ಯನ ಸಾಮರ್ಥ್ಯದಲ್ಲಿ ವೆಂಕಣ್ಣಯ್ಯನವರಿಗೆ ಶಂಕೆಯಿನಿತೂ ಇರಲಿಲ್ಲ. ಮುಂದುವರೆದು ಅವರು ಹೀಗೆ ಹೇಳಿದ್ದರು. ನೋಡಿ, ಕಾದಂಬರಿಗೆ ಅವಶ್ಯಕವಾದ ಕೆಲವು ಶಕ್ತಿಗಳು ನಿಮ್ಮಲ್ಲಿ ಆಗಲೆ ಪ್ರಕಟಗೊಂಡು ಸಾರ್ಥಕವಾಗಿವೆ. ಕಥನ, ಸಂವಾದ ಮತ್ತು ವರ್ಣನ ಈ ಮೂರು ಶಕ್ತಿಗಳು ನಿಮ್ಮಲ್ಲಿ ಇವೆ. ಸಣ್ಣಕಥೆ ಬರೆದಿದ್ದೀರಿ, ನಾಟಕ ಬರೆದಿದ್ದೀರಿ, ಮಲೆನಾಡಿನ ಚಿತ್ರಗಳಲ್ಲಿ ವರ್ಣನ ಪ್ರತಿಭೆ ಸೊಗಸಾಗಿ ವ್ಯಕ್ತಗೊಂಡಿದೆ. ಆದ್ದರಿಂದ ನೀವು ಹೆದರಬೇಕಾಗಿಲ್ಲ ಇನ್ನೊಬ್ಬರಿಗೆ ಹೇಳುತ್ತಾ ಹೋಗುವುದರ ಬದಲು ನೀವೇ ಒಂದು ಕೈ ನೋಡಿಬಿಡಿ!

ಮತ್ತಷ್ಟು ಓದು »

20
ಮಾರ್ಚ್

ಹಲವು ರಂಗಗಳ ‘ವೇಷ’

-ರಾಘವೇಂದ್ರ ರಾವ್

ಪ್ರಾದೇಶಿಕ ಕಥಾ ವಸ್ತುಗಳನ್ನು ಆಯ್ಕೆ ಮಾಡಿಕೊಂಡು ಕೃತಿಗಳನ್ನು ರಚಿಸುವ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಸಚಿವರಾದ ಪ್ರಭಾಕರ ನೀರ್‌ಮಾರ್ಗ ಅವರ ಹದಿನೇಳನೆಯ ಕೃತಿ ‘ವೇಷ’. ದಕ್ಷಿಣ ಕನ್ನಡದ ಸಾಂಸ್ಕೃತಿಕ, ಸಾಮಾಜಿಕ ಜನಜೀವನವನ್ನ ಬಹಳ ಮಾರ್ಮಿಕವಾಗಿ ಚಿತ್ರಿಸುವ ಇವರ ಕೃತಿಗಳಲ್ಲಿ ದಾಯಿತ್ವ, ತಿಲ್ಲಾನ, ಧೀಂಗಿಣ, ಮಂಗಳೂರು ಕ್ರಾಂತಿ, ಶಿಶಿರ, ಪ್ರತಿಶೋಧ, ಜಾತ್ರೆ ಮತ್ತು ತಂಬಿಲಗಳು ಒಂದಲ್ಲ ಒಂದು ರೀತಿಯಲ್ಲಿ ಪ್ರಾದೇಶಿಕ ಹಿನ್ನಲೆಯಲ್ಲಿಯೇ ಮೂಡಿಬಂದವುಗಳು. ಆದರೆ ‘ವೇಷ’ ಕಾದಂಬರಿ ಇವುಗಳ ನಡುವೆ ತುಸು ವಿಭಿನ್ನವಾಗಿ ರಚಿಸಿದ ಕಾದಂಬರಿಯಂತೆ ಕಂಡರೂ, ಇಲ್ಲಿಯ ಪಾತ್ರಗಳಿಗೆ ಯಾವುದೇ ಪ್ರಾಮುಖ್ಯತೆಯಿಲ್ಲದೆ ಕೇವಲ ಬಣ್ಣದ ‘ವೇಷ’ ಮತ್ತು ಬದುಕಿನ ವೇಷದ ಸುತ್ತಾ ಕಥೆ ಹೆಣೆದುಕೊಂಡಿದೆಯೇನೋ ಅನಿಸುತ್ತದೆ.

ಕಥೆಯ ಆರಂಭದಲ್ಲಿ ನವರಾತ್ರಿಯ ಸಮಯದಲ್ಲಿ ವಿಶೇಷವಾಗಿ ಕಾಣಿಸಿಕೊಳ್ಳುವ ವೇಷದ ಬಗ್ಗೆ ‘ಎಪಿಲೋಗ್’ನ ಹಾಗೆ ಪ್ರಸ್ತಾಪಿಸುತ್ತಾ ದಕ್ಷಿಣ ಕನ್ನಡದಲ್ಲಿ ನವರಾತ್ರಿಯಲ್ಲಿ ಕಾಣಿಸುವ ವೇಷಗಳ ಬಗ್ಗೆ ವಿವರಗಳನ್ನು ನೀಡುತ್ತಾ ಕೃತಿಕಾರರು ಕಥೆಯೊಳಗೆ ಇಳಿಯುತ್ತಾರೆ. ಇಲ್ಲಿ ಆ ಬಣ್ಣದ ವೇಷಗಳ ಬಗ್ಗೆ ಕುತೂಹಲ ಬೆಳೆಸಿಕೊಳ್ಳುವ ಓದುಗನ ನಿರೀಕ್ಷೆಯನ್ನು ಹುಸಿಯಾಗಿಸುತ್ತಾ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಉಳಿದ ಬಣ್ಣದ ಲೋಕಗಳಾದ ಯಕ್ಷಗಾನ, ನಾಟಕರಂಗಗಳಿಗೂ ಪಾತ್ರಗಳ ಮೂಲಕ ಇಳಿಯುತ್ತಾ ಹೊಸದೇನೋ ಹೇಳುತ್ತಾ ಕಥೆ ಸಾಗುತ್ತದೆ. ಇಲ್ಲಿ ಮಾರ್ನಮಿಯ ಹುಲಿವೇಷದ ವಿವರಣೆಗಳನ್ನು ಬಿಟ್ಟರೆ ಮತ್ತೆಲ್ಲವೂ ನಾಟಕ ಮತ್ತು ಯಕ್ಷಗಾನದ ಬಗೆಯೇ ಹೆಚ್ಚು ಒತ್ತುಕೊಟ್ಟು ಬರೆದಂತೆ ಕಾಣಿಸುತ್ತದೆ. ‘ಧೀಂಗಿಣ’ ಯಕ್ಷಗಾನದ ಒಳಹೊರಗನ್ನು ತಿಳಿಸುವ ಸಮಾಜಮುಖಿಯಾದ ಕಾದಂಬರಿಯಾದರೂ ಅಲ್ಲಿ ನೀರ್‌ಮಾರ್ಗ ಅವರ ‘ಪೇಪರ್ ವರ್ಕ್’ ಎದ್ದು ಕಾಣಿಸುತ್ತದೆ. ‘ತಿಲ್ಲಾನ’ ಕಾದಂಬರಿಯಲ್ಲಿ ಭೂತದಕೋಲದ ವಿವರಗಳಿರುವಂತೆ ‘ವೇಷ’ದಲ್ಲಿಯೂ ಅಂತಹುದೊಂದನ್ನು ಹುಡುಕಿದರೆ ಸಿಗಲಾರದೆನ್ನುವುದು ನನ್ನ ಅನಿಸಿಕೆ. ಹಾಗಂತ ಕಾದಂಬರಿ ಏನನ್ನೂ ಹೇಳದೆ ಸುಮ್ಮನಿರುವುದಿಲ್ಲ.

ಮತ್ತಷ್ಟು ಓದು »

19
ಮಾರ್ಚ್

ಸಂಸ್ಕೃತಿ ಸಂಕಥನ – 27 – ನಮಗೆ ನಾವೇ ಪರಕೀಯರು

-ರಮಾನಂದ ಐನಕೈ

1947 ಅಗಸ್ಟ್ 15ರಂದು ಭಾರತ ಪರಕೀಯರ ದಾಸ್ಯದಿಂದ ಮುಕ್ತವಾಯಿತು ಎಂದು ಭಾಷಣ ಬಿಗಿಯುತ್ತೇವೆ. ಇದು ನಿಜವೇ? ಕೇವಲ ಆಡಳಿತ ಮತ್ತು ಅಧಿಕಾರ ಹಸ್ತಾಂತರ ಮಾಡಿದಾಕ್ಷಣ ದಾಸ್ಯ ವಿಮೋಚನೆ ಆಯಿತು ಅಂತ ನಿರ್ಧರಿಸಿಬಿಡಬಹುದೇ? ವಸಾಹತು ಪ್ರಭಾವದಿಂದ ಮಲೀನವಾದ ಭಾರತೀಯ ಮನಸ್ಸುಗಳಿಗೆ ಮುಕ್ತಿ ಸಿಕ್ಕಿದೆಯೇ? ಒಂದೊಮ್ಮೆ ಸಿಗದಿದ್ದ ಪಕ್ಷದಲ್ಲಿ ಇದೂ ಒಂದು ರೀತಿಯ ಮಾನಸಿಕ ದಾಸ್ಯ ಅಲ್ಲವೇ? ಈ ಮಾಸಿಕ ಅವಲಂಬನೆಯಿಂದ ಹೊರ ಬರುವುದು ಹೇಗೆ?

ಮೊದಲು ಭಾರತದಲ್ಲಿ ಮುಸ್ಲಿಂ ವಸಾಹತುಶಾಹಿ ಆಡಳಿತ ನಡೆಯಿತು. ನಂತರ ಸುದೀರ್ಘ ಕಾಲ ಕ್ರಿಶ್ಚಿಯನ್ ವಸಾಹತುಶಾಹಿ ರಾಜ್ಯಭಾರ ನಡೆಯಿತು. ಇವರೆಲ್ಲರೂ ಸೇರಿ ಭಾರತೀಯ ಸಂಸ್ಕೃತಿಯ ಕುರಿತು ಬೇರೆಯದೇ ಆದ ಚಿತ್ರಣ ಕಟ್ಟಿಕೊಟ್ಟರು. ಭಾರತೀಯ ಚಿಂತಕರೂ ಕೂಡಾ ಅದನ್ನೇ ಪಠಿಸುತ್ತ ಬಂದರು. ಸದ್ಯ ಭಾರತವನ್ನು ಆಳುತ್ತಿರುವುದು ಇದೇ ವಸಾಹತುಶಾಹಿ ಪ್ರಜ್ಞೆ. ಈ ಕಾರಣಕ್ಕಾಗಿ ಭಾರತದಲ್ಲಿ ರಾಷ್ಟ್ರತತ್ವಗಳಿಗೂ ಜನಸಾಮಾನ್ಯರ ಅನುಭವಕ್ಕೂ ತಾಳೆಯಾಗಲಾರದು. ಅದರ ಫಲಿತಾಂಶಗಳೇ ಸಂಘರ್ಷಗಳು. ಆದ್ದರಿಂದ ನಿಜವಾದ ನಮ್ಮ ಸಂಸ್ಕೃತಿಯನ್ನು ಅರಿತು ಅದರ ಆಧಾರದ ಮೇಲೆ ನಮ್ಮ ದೇಶದ ಜನಜೀವನವನ್ನು ರೂಪಿಸುವ ತುತರ್ು ಇದೆ.

ಸಾವಿರಾರು ವರ್ಷಗಳಿಂದ ಬಾಳಿ ಬೆಳಗಿದ ಭಾರತೀಯ ಸಂಸ್ಕೃತಿ ಐರೋಪ್ಯರ ಆಗಮನದಿಂದಾಗಿ ತನ್ನ ಸ್ವರೂಪವನ್ನೇ ಬದಲಿಸಿಕೊಂಡದ್ದು ಈಗ ಇತಿಹಾಸ. ಭಾರತ ಐರೋಪ್ಯರಿಗೆ ಅರ್ಥವಾಗಲಿಲ್ಲ. ಇಲ್ಲಿನ ಸಂಸ್ಕೃತಿ ಅವರಿಗೆ ಒಗಟಾಯಿತು. ಅಷ್ಟರಲ್ಲಾಗಲೇ ಪ್ರತಿ ಸಂಸ್ಕೃತಿಗೆ ಇತಿಹಾಸ ಬರೆಯುವ ಕಲೆಯನ್ನು ಐರೋಪ್ಯರು ಕರಗತ ಮಾಡಿಕೊಂಡಿದ್ದರು. ಇತಿಹಾಸ ಮಾತ್ರ ಅವರಿಗೆ ಸತ್ಯ ದಾಖಲೆಯಾಗಿತ್ತು. ಏಕೆಂದರೆ ಸತ್ಯವೇದವಾದ ಬೈಬಲ್ಲೇ ಅವರಿಗೆ ನಿಜವಾದ ಇತಿಹಾಸ. ಭಾರತೀಯ ಇತಿಹಾಸವನ್ನು ಎಲ್ಲಿಂದ ಆರಂಭಿಸಬೇಕು? ಅವರಿಗಾದ ದೊಡ್ಡ ಸಮಸ್ಯೆ ಅದು. ಯಾವುದೇ ಭಾರತೀಯ ಪಂಡಿತರನ್ನು ಭಾರ ತೀಯ ಇತಿಹಾಸದ ಕುರಿತು ಕೇಳಿದರೆ ಅವರೆಲ್ಲ ಪುರಾಣದ ರೋಚಕ ಕಥೆಗಳನ್ನೇ ಹೇಳಿದರು. ಒಂದೇ ಕಥೆಯನ್ನು ಬೇರೆ ಬೇರೆ ಪಂಡಿತರು ಬೇರೆ ಬೇರೆ ರೀತಿಯಲ್ಲಿ ಹೇಳಿದರು. ಸಂಶಯ ಶುರುವಾಯಿತು. ಆಗ ಐರೋಪ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಭಾರತವನ್ನು ಗ್ರಹಿಸತೊಡಗಿದರು.

ಮತ್ತಷ್ಟು ಓದು »

13
ಮಾರ್ಚ್

ಭೈರಪ್ಪನವರ ಆತ್ಮಕತೆ ಭಿತ್ತಿ ಓದುತ್ತ…

-ಸುಪ್ರೀತ್.ಕೆ.ಎಸ್

ಭೈರಪ್ಪನವರ ಆತ್ಮಕತೆ “ಭಿತ್ತಿ”ಯನ್ನು ಓದುತ್ತಿರುವೆ. ದಿನವಿಡೀ ಕಂಪ್ಯೂಟರ್ ಪರದೆಯನ್ನು ದಿಟ್ಟಿಸಿ ಕಣ್ಣು ದಣಿದಿದ್ದರೂ ಕೈಗಳನ್ನು ತುಂಬುವಂತೆ ಕೂರುವ ಪುಸ್ತಕವನ್ನು ಹಿಡಿದು ಪುಟಗಳೊಡನೆ ಸರಸವಾಡ್ತಾ, ಒಂದು ಬೆರಳಿನಲ್ಲಿ, ಮೂರ್ನಾಲ್ಕು ಬೆರಳುಗಳನ್ನು ಒತ್ತಿ ಪುಟಗಳನ್ನು ಸರಿಸುತ್ತಾ, ನೀಟಾಗಿ ಕೂರದ ಪುಟಗಳನ್ನು ಅಂಗೈಯಲ್ಲಿ ಇಸ್ತ್ರಿ ಮಾಡುತ್ತಾ ಓದುತ್ತಿದ್ದರೆ ಕಣ್ಣುಗಳ ದಣಿವು ಇಳಿದಂತೆ ಭಾಸವಾಗುತ್ತದೆ.

ಆತ್ಮಕತೆ ಎನ್ನುವುದು ವಿಶಿಷ್ಟವಾದ ಸಾಹಿತ್ಯ ಪ್ರಕಾರ. ಅಷ್ಟೇ ವಿಲಕ್ಷಣವಾದದ್ದೂ ಕೂಡ. ಜೀವನದಷ್ಟು ನೀರಸವಾದ, ತರ್ಕರಹಿತವಾದ, ತಾತ್ವಿಕ ಅಂತ್ಯಗಳು ಕಾಣದ ಅಸಂಖ್ಯ ದಿಕ್ಕೆಟ್ಟ ವಿದ್ಯಮಾನಗಳನ್ನು ಸಾಹಿತ್ಯದ ರಸೋತ್ಪತ್ತಿಯ ಶೈಲಿಗೆ ಒಗ್ಗಿಸುವುದು, ಅದಕ್ಕೊಂದು ಸ್ವರೂಪ ಕೊಡುವುದು – ಈ ಪ್ರಕ್ರಿಯೆಗಳಲ್ಲಿ ನುಸುಳುವ ಸುಳ್ಳುಗಳು, ಸುಳ್ಳು ಎಂದು ಹೇಳಲಾಗದಿದ್ದರೂ ಬರೆಯುವ ಮುನ್ನ ಇದ್ದ ನೆನಪಿನ ಅರ್ಥೈಸುವಿಕೆಯನ್ನೇ ಬದಲಿಸುವಂತಹ ಉತ್ಪ್ರೇಕ್ಷೆಗಳು, ಕಲ್ಪನೆ, ಆಶಯ, ಆದರ್ಶಗಳು ಸೇರಿದ ಕೃತಿಗಳು ನಿಜಕ್ಕೂ ಆಸಕ್ತಿಕರ.

ಅಮೇರಿಕಾದ ಪ್ರಸಿದ್ಧ ಕಮಿಡಿಯನ್ ಜೆರ್ರಿ ಸೈನ್ ಫೆಲ್ಡ್ ಹಾಗೂ ಲ್ಯಾರಿ ಡೇವಿಡ್ ಸೇರಿ ನಿರ್ಮಿಸಿದ ‘ಸೈನ್ ಫೆಲ್ಡ್’ ಹೆಸರಿನ ಸಿಟ್ ಕಾಮ್ ನ ಒಂದು ಎಪಿಸೋಡ್ ನಲ್ಲಿ ಒಂದು ಸನ್ನಿವೇಶವಿದೆ. ಪಾತ್ರಗಳೇನು ಮುಖ್ಯವಲ್ಲ. ಒಂದು ಪಾತ್ರ ಬಂದು “ಜೆರ್ರಿ ನಿನಗೆ ಗೊತ್ತಾ, ನಿನ್ನ ಅಂಕಲ್ ಆತ್ಮಕತೆ ಬರೆಯುತ್ತಿದ್ದಾರೆ” ಎಂದು ಹೇಳುತ್ತಾಳೆ. ಗಂಡ, “ಅದು ಪೂರ್ತಿ ನನ್ನ ಜೀವನದ ಘಟನೆಗಳನ್ನು ಆಧರಿಸಿರುವಂಥದ್ದು” ಎನ್ನುತ್ತಾನೆ. ಮತ್ತಷ್ಟು ಓದು »

20
ಫೆಬ್ರ

ಸಂಸ್ಕೃತಿ ಸಂಕಥನ – 23 – ಕಾನೂನು ಸಂಸ್ಕೃತಿಯನ್ನಾಧರಿಸಿ ಇರಬೇಕು

-ರಮಾನಂದ ಐನಕೈ

ಜಿಜ್ಞಾಸುಕೂಟ ಅಂತ ಸಮಾನ ಮನಸ್ಕರ ಸಂಘಟನೆಯೊಂದು ಶಿರಸಿಯಲ್ಲಿದೆ. ಅವರು ತಿಂಗಳಿಗೊಮ್ಮೆ ಸೇರಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚಿಸುತ್ತಾರೆ. ಅವರು ಹಲವಾರು ವರ್ಷ ಗಳಿಂದ ಈ ಪ್ರವೃತ್ತಿಯನ್ನು ಉಳಿಸಿ ಬೆಳೆಸಿಕೊಡು ಬಂದಿದ್ದಾರೆ. ಮೊನ್ನೆ ಅಕ್ಟೋಬರ್ 1ಕ್ಕೆ ಅವರು ಚರ್ಚೆಗೆ ಇಟ್ಟುಕೊಂಡ ವಿಷಯ ‘ಜನಲೋಕ ಪಾಲ್ ಮಸೂದೆ’. ಈ ಚರ್ಚೆ ಶಿರಸಿಯ ವಿದ್ಯಾನಗರ ರುದ್ರಭೂಮಿ ಆವರಣದಲ್ಲಿರುವ ‘ನೆಮ್ಮದಿ’ ಕುಟಿರದಲ್ಲಿ ನಡೆಯಿತು. ಈ ಕುರಿತು ನ್ಯಾಯವಾದಿಗಳಾದ ಅನಂತ ಹೆಗಡೆ ಹೂಡ್ಲಮನೆ ಹಾಗೂ ಅರುಣಾಚಲ ಹೆಗಡೆ ಜಾನ್ಮನೆ ಜೊತೆಗೆ ಕಾನೂನು ಉಪ ನ್ಯಾಸಕರಾದ ಅರವರೆ ಅವರು ವಿಷಯ ಮಂಡಿಸಿದರು. ಸುದೀರ್ಘ ಚರ್ಚೆ ನಡೆಯಿತು. ಕೊನೆಗೂ ಒಂದು ಗೊಂದಲ ಉಳಿಯಿತು. ಅದನ್ನು ಚೌಧರಿ ಡಾಕ್ಟರ್ ಸ್ಪಷ್ಟಪಡಿಸಿದರು. ನಾವು ಕಾನೂನು ತಜ್ಞರನ್ನು ಕರೆಸಿದ್ದು ಭ್ರಷ್ಟಾ ಚಾರ ನಿವಾರಣೆಗೆ ಏನಾದರೂ ಮಾರ್ಗ ಸೂಚಿಸ ಬಹುದೆಂದು. ಆದರೆ ನೀವು ಮಾತನಾಡುವುದು ನೋಡಿದರೆ ಸರಕಾರವನ್ನೇ ಸಮರ್ಥಿಸುವಂತಿದೆ ಎಂದರು.

ಇದು ಭಾರತದಲ್ಲಿರುವ ಪ್ರತಿಯೊಬ್ಬರ ಸಮಸ್ಯೆ. ಯಾಕೆ ಹೀಗಾಗುತ್ತದೆ? ಕಾನೂನು ಅಂದರೆ ಹಿಂಬಡಿಗನ ಹಾವಿನಂತೆ  ಎರಡೂ ಕಡೆ ತಲೆ ಇದ್ದಂತೆ ಕಾಣುತ್ತದೆ. ಕಾನೂನು ವಿಳಂಬ ನೀತಿ ಅನುಸರಿಸುವಂತೆ ಕಾಣುತ್ತದೆ. ನೂರು ಜನ ಅಪರಾಧಿಗಳು ಬಿಡುಗಡೆಯಾದರೂ ಅಡ್ಡಿಯಿಲ್ಲ. ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎಂಬುದು ಕಾನೂನಿನ ಆದರ್ಶವಾದರೆ ಈ ದೇಶದಲ್ಲಿ ನೂರಾರು ಅಪರಾಧಿಗಳು ತಪ್ಪಿಸಿಕೊಂಡು ಕೊನೆ ಗೊಬ್ಬ ನಿರಪರಾಧಿ ಸಿಕ್ಕಿಬೀಳುವ ಪರಿಸ್ಥಿತಿ ಎದು ರಾಗಿದೆ ಅನಿಸುತ್ತದೆ. ಜನರಿಗೆ ಕಾನೂನಿನ ಬಗ್ಗೆ ಭಯ ಇದೆ. ಆದರೆ ಗೌರವ ಇಲ್ಲ. ಈ ದೇಶದಲ್ಲಿ ಕಾನೂನಿನ ಸದುಪಯೋಗಕ್ಕಿಂತ ದುರುಪಯೋಗ ಆಗುತ್ತಿರುವುದೇ ಹೆಚ್ಚು. ಕಾನೂನಿಗೆ ಸಂಬಂಧ ಪಟ್ಟಂತಹ ಇಂತಹ ನೂರಾರು ಪ್ರಶ್ನೆಗಳಿಗೆಲ್ಲ ಕಾರಣ ಗಳೇನು?

ಮತ್ತಷ್ಟು ಓದು »

13
ಫೆಬ್ರ

ರವಿ ಬೆಳಗೆರೆ ಎಂಬ ಕಿಲಾಡಿ ಮಾಂತ್ರಿಕನ ಮಾಯಾ ಬುಟ್ಟಿಯಿಂದ!

-ಕಾಲಂ ೯

ಶಾಲಿವಾಹನನೂ, ಬಬ್ರುವಾಹನನೂ ಒಂದಾದ ಪುರಾಣ ಪುಣ್ಯ ಕಥೆಯನ್ನು ಹಿಂದೆ ಸಂಪಾದಕೀಯದಲ್ಲಿ ಓದಿರಬಹುದು. ಇದೀಗ ಅದಕ್ಕೆ ಸಂಬಂಧವಿಲ್ಲದ ಒಂದಷ್ಟು ವಿಚಾರಗಳು:

ಪತ್ರಕರ್ತ ರವಿ ಬೆಳಗೆರೆ ಇತ್ತೀಚಿಗೆ SM ಕೃಷ್ಣರೊಂದಿಗೆ ಇಸ್ರೇಲ್ ಯಾತ್ರೆಗೆ ಹೋಗಿದ್ದರು. ಅವರೇ ಬರೆದುಕೊಂಡಂತೆ ಅದು ಕಾಡಿ, ಬೇಡಿ ಗಿಟ್ಟಿಸಿಕೊಂಡ ಬಿಟ್ಟಿ ಅವಕಾಶ. ಜೊತೆಯಲ್ಲಿಯೇ ವಿಶ್ವೇಶ್ವರ ಭಟ್ಟರೂ ಹೋಗಿದ್ದಿದ್ದು ಭಟ್ಟರ ಲೇಖನಗಳನ್ನು ಓದುವವರಿಗೆ ತಿಳಿದಿರಬಹುದು. ಇಸ್ರೇಲ್ ಜೊತೆಗೆ ಪಾಕ್, ಇಟೆಲಿ, ಮತ್ತು ಸ್ವಿಜಲ್ಯಾಂಡ್ ಪಕ್ಕದ ದೇಶವೊಂದರ ಪ್ರವಾಸದ ಅನುಭವವನ್ನೂ ಸೇರಿಸಿ ಮುಸಲ ಯುದ್ಧದಲ್ಲಿ ಹಿಮಾಗ್ನಿ ಎಂಬ ಕಾದಂಬರಿ ಬರೆದಿದ್ದಾರೆ. ಮೈನೋ ಗಾಂಧಿ ಎಂಬ ಪಾತ್ರದ ಸುತ್ತ ಭಯೋತ್ಪಾದನೆ ಮತ್ತು ಕಪ್ಪುಹಣಗಳ ಬಗ್ಗೆ ಕಥೆ ಸಾಗುತ್ತದೆ. ಹೆಚ್ಚು ವಿವಾದವದಲ್ಲಿರುವ ವಸ್ತುಗಳನ್ನು ಆರಿಸಿ ಬರೆಯುವುದರಲ್ಲಿ ನಿಸ್ಸೀಮರಾದ ಬೆಳಗೆರೆ, ಮುಖಪುಟದಲ್ಲಿ ಸೋನಿಯಾ ಚಿತ್ರವನ್ನೂ ಸೇರಿಸಿ ಕುತೂಹಲ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದ ಸಲ್ಮಾನ್ ರಶ್ದಿ/ತಸ್ಲೀಮಾ ಆಗುವ ಪ್ರಯತ್ನ ಅವರಲ್ಲಿ ಕಾಣಬಹುದು.

“ಇಲ್ಲಿ ಬರುವ ಪಾತ್ರ ಹಾಗೂ ಘಟನೆಗಳು ಕಾಲ್ಪನಿಕ. ಯಾವುದೇ ಸಾಮ್ಯತೆ ಕಂಡುಬಂದಲ್ಲಿ ಅದು ಕೇವಲ ಕಾಕತಾಳೀಯ” ಎಂಬ ಎಚ್ಚರಿಕೆಯೂ ಆ ಪುಸ್ತಕದಲ್ಲಿದೆ!

ಇದರ ಜೊತೆ ಉಡುಗೊರೆ, ಅಮ್ಮ ಸಿಕ್ಕಿದ್ದು ಎಂಬ ಪುಸ್ತಕಗಳು ಮತ್ತೆರಡು ಸಿಡಿಗಳು ಭಾನುವಾರ ಬಿಡುಗಡೆಯಾದವು. ಮತ್ತಷ್ಟು ಓದು »

21
ಡಿಸೆ

ರಷ್ಯಾದಲ್ಲಿ ಭಗವದ್ಗೀತೆ ನಿಷೇಧಕ್ಕೆ ಯಾಕೀ ಕೂಗಾಟ ?

-ಅರವಿಂದ್

ಮಾಧ್ಯಮಗಳಲ್ಲಿ ಹಾಗೂ ಲೋಕಸಭೆಯಲ್ಲಿ ನೆನ್ನೆಯಿಂದಲೂ ಒಕ್ಕೊರಲಿಗಿನ ವಾದ-ವಿವಾದ. ಬಿಜೆಪಿ ಇನ್ನಿತರ ವಿರೋಧಪಕ್ಷಗಳು, ಹಿಂದೂ ಹೋರಾಟಗಾರರು, ಇಸ್ಕಾನು ಎಲ್ಲರದೂ ಒಂದೇ, ಮಾತು. ರಷ್ಯಾದಲ್ಲಿ ಭಗವದ್ಗೀತೆ ನಿಷೇಧ ಬೇಡವೆಂಬ ಕೂಗು. ಇದ್ಯಾಕೋ ಗೊತ್ತಾಗಲಿಲ್ಲ. ರಷ್ಯಾದಲ್ಲಿ ಭಗವದ್ಗೀತೆ ನಿಷೇಧಿಸಿದರೆ ಭಾರತಕ್ಕಾಗುವ ನಷ್ಟವೇನು ? ಹೇಳಿ ಕೇಳಿ ರಷ್ಯಾ ಕಮ್ಯೂನಿಷ್ಟ್ ದೇಶ. ಆ ದೇಶ ಭಾರತದಂತೆ ಯಾವುದೇ ಧರ್ಮ ತಳಹದಿಯ ಮೇಲೆ ನಿರ್ಮಾಣವಾದ ದೇಶವಲ್ಲ. ಅದು ಧರ್ಮವನ್ನು ಅಫೀಮು ಎಂದುಕೊಂಡ ದೇಶ. ಇಂಥ ದೇಶಕ್ಕೆ ಧರ್ಮಗಳಿಂದ ನಾಗರೀಕರನ್ನು ಉದ್ಧಾರ ಮಾಡುವ ರಾಜಕೀಯವೂ ಇಲ್ಲ. ಇಂಥ ದೇಶದಲ್ಲಿ ಭಗವದ್ಗೀತೆಯಾದರೇನು, ಖುರಾನಾದರೇನು ಇನ್ಯಾವುದೇ…. ಇದ್ದರೇನು ಧರ್ಮಗ್ರಂಥಗಳಿಗೆ ವಿಶೇಷ ಮಾನ್ಯತೆಯೂ ಇಲ್ಲ.

ರಷ್ಯಾಕ್ಕೆ ತನ್ನದೇ ಆದ ಇತಿಹಾಸವಿದೆ, ಕಮ್ಯೂನಿಷ್ಟ್ ಮ್ಯಾನಿಫೆಸ್ಟೋ ಅಲ್ಲಿನ ಧರ್ಮಗ್ರಂಥವಿದ್ದಂತೆ. ಇಂಥ ದೇಶದಲ್ಲಿ ಭಗವದ್ಗೀತೆ ನಿಷೇಧಿಸಬಾರದೆಂಬ ಕೂಗು, ಅದಕ್ಕೆ ಬೇಕಾದ ರಾಜತಾಂತ್ರಿಕತೆಯ ರಾಯಭಾರ ಭಾರತಕ್ಯಾಕೆ ಅಂತ ತಿಳಿಯುತ್ತಿಲ್ಲ. ಹೋರಾಟ ಇವೆಲ್ಲ ಅವಶ್ಯಕತೆ ಇದ್ಯಾ ? ಭಾರತದಲ್ಲಿ ಮುಸಲ್ಮಾನ, ಕ್ರ್ಯೆಸ್ತ ಅನುಯಾಯಿಗಳು ಆ ಧರ್ಮದ ಪ್ರಚಾರ ಕ್ಯೆಗೊಂಡರೆ ಅದು ಮತಾಂತರವಾದರೆ, ರಷ್ಯಾಗೂ ಅದು ಅನ್ವಯಿಸುವುದಿಲ್ಲವೇ ? ನಾನಿಲ್ಲಿ ಯಾವುದೇ ಧರ್ಮ ದೊಡ್ಡದು ವಿಶಾಲವಾದದ್ದೂ ಅನ್ನೋ ತುಲನೆಗೆ ಹೇಳುತ್ತಿಲ್ಲ. ಪ್ರತಿ ದೇಶಕ್ಕೂ ಅದರದ್ದೇ ಆದ ಸಂವಿಧಾನ ಕರಡು ಇರುತ್ತದೆ. ರಷ್ಯಾಕ್ಕೆ ಭಗವದ್ಗೀತೆಯ ಅವಶ್ಯಕತೆಯಿಲ್ಲ ಮತ್ತು ಅಲ್ಲಿ ಭಗವದ್ಗೀತೆಯ ಯಾವುದೋ ಅಧ್ಯಾಯದ ಯಾವುದೋ ಸಾಲು ಅಹಿಂಸೆಯನ್ನು ಸೃಷ್ಠಿಮಾಡುತ್ತದೆ ಎಂಬ ಆಲೋಚನೆಯಿದ್ದರೆ ಇರಲಿ ಬಿಡಿ, ಅದರಿಂದ ನಮಗ್ಯಾವ ನಷ್ಟವೂ ಇಲ್ಲ. ಭಗವದ್ಗೀತೆ ಭಾರತದ ಸಂಸ್ಕೃತಿಗೆ ತಳಹದಿಯಾದರೆ, ಅದು ಭಾರತಕ್ಕಾದೀತು. ರಷ್ಯಾವೂ ಭಾರತದಂತೆ ಪಾಲಿಸಬೇಕು ಅನ್ನುವ ಹಠ ಯಾಕೆ ? ಅದೇನೋ ಆಗಬಾರದ್ದು ಮಾಡಬಾರದ್ದು ಮಾಡುತ್ತಿರುವಂತೆ ಕೂಗಾಡುವ ಅವಶ್ಯಕತೆಯೇನಿದೆ. ಮತ್ತಷ್ಟು ಓದು »

8
ಡಿಸೆ

ಗಾಂಧಿಬಂದ ವಿವಾದ : ಆತ್ಮಾವಲೋಕನೆಗೆ ಸುಸಂದರ್ಭ

-ಪ್ರವೀಣ್. ಟಿ. ಎಲ್

ನಾಗವೇಣಿಯವರ ‘ಗಾಂಧಿಬಂದ’ ಎಂಬ ಕಾದಂಬರಿಯ ಕುರಿತು ಬೇರೆ ಬೇರೆ ಪತ್ರಿಕೆಗಳಲ್ಲಿ ಇಂದು ವಿವಾದ ನಡೆಯುತ್ತಿದೆ. ಇದಕ್ಕೆ ರಾಜೇಂದ್ರ ಚೆನ್ನಿಯವರು 1-12-2011 ರಂದು ತಮ್ಮ ಪತ್ರಿಕೆಯಲ್ಲಿ   ಗಾಂಧಿ ಬಂದ’ ಕೃತಿಯ ನಿಷೇಧಕ್ಕೆ ಒತ್ತಾಯ ತರವಲ್ಲ ಎಂಬ ಶೀರ್ಷಿಕೆಯಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯದ ಹಿನ್ನೆಲೆಯಲ್ಲಿ ನನ್ನ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಅದು ‘ಜಾತಿ ಸಂಸ್ಥೆಗಳು’ ವಿಶ್ವವಿದ್ಯಾನಿಲಯಗಳ ಮೇಲೆ ತರುತ್ತಿರುವ ‘ಅನೈತಿಕ ಒತ್ತಡ’ವಾಗಿದ್ದು, ಅವುಗಳನ್ನು ‘ಲಕ್ಷ’ಕ್ಕೆ ತೆಗೆದುಕೊಳ್ಳಬಾರದೆಂಬ ವಾದವನ್ನು ಮುಂದಿಟ್ಟರು. ಹಾಗೂ ಅವರ ವಾದವು  ಮೇಲ್ನೋಟಕ್ಕೆ ಸಮಂಜಸವಾಗಿ ಕಾಣುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಜಾತಿ ಸಂಸ್ಥೆಗಳ ರಾಜಕೀಯ ಎಂಬುದನ್ನು ಗುರುತಿಸಿದಾಗ ಈ ರಾಜಕೀಯದಲ್ಲಿ ಸಾಹಿತ್ಯವು ತಟಸ್ಥ ಪಕ್ಷವಾಗಿ ತನ್ನನ್ನು ಉಳಿಸಿಕೊಂಡಿದೆಯೆ? ಎಂಬ ಪ್ರಶ್ನೆ ಏಳುತ್ತದೆ.

ತಮಗೆ ಪಥ್ಯವಾಗದ ಯಾವುದೋ ವಿಚಾರವನ್ನು ಮಂಡಿಸಿದೆ ಎನ್ನುವ ಕಾರಣಕ್ಕಾಗಿ ಗ್ರಂಥಗಳನ್ನೇ ನಿಷೇಧಿಸಬೇಕೆಂಬ ಹಾಗೂ ಸಂಶೋಧನೆಗಳನ್ನೇ ನಿಲ್ಲಿಸಬೇಕೆಂದು ಒತ್ತಡ ತರುವ ಪೃವೃತ್ತಿಯು ಇತ್ತೀಚೆಗೆ ಹೆಚ್ಚಾಗುತ್ತಿದೆ ಎಂಬುದು ವಿಷಾದಕರ  ಸಂಗತಿ ಹಾಗೂ ಖಂಡನೀಯ. ಇದು ನಮ್ಮ ಸಂಸ್ಕೃತಿಗೆ ತೀರ ಅಸಹಜವಾದ ಒಂದು ಬೆಳವಣಿಗೆ ಎಂಬುದರಲ್ಲಿ ಸಂದೇಹವಿಲ್ಲ. ಏಕೆಂದರೆ ಕೆಲವು ಜಾತಿಯ ಪಾತ್ರಗಳನ್ನು ಹಿಯ್ಯಾಳಿಸುವ, ವ್ಯಂಗ್ಯವಾಡುವ ಹಲವಾರು ಪ್ರದರ್ಶನ ಕಲೆಗಳು ಇಂದಿಗೂ ಯಾವ ‘ಜಾತಿಸಂಸ್ಥೆಗಳ’ ಕೆಂಗಣ್ಣಿಗೂ ಗುರಿಯಾಗದೇ ಮುಂದುವರೆದುಕೊಂಡು ಬರುತ್ತಿರುವುದನ್ನು ನಮ್ಮ ಸಮಾಜದಲ್ಲಿ ನೋಡಲು ಸಾಧ್ಯವಾಗುತ್ತಿದೆ. ಉದಾಹರಣೆಗೆ ಜಾನಪದೀಯ ಕಲೆಗಳಾದ, ‘ಯಕ್ಷಗಾನ’, ‘ತಾಳಮದ್ದಳೆ’, ‘ಶನಿಮಹಾತ್ಮನ ಆಟ’ ಇವುಗಳ ಸಂದರ್ಭದಲ್ಲಿ ಬ್ರಾಹ್ಮಣರಾದಿಯಾಗಿ ಎಷ್ಟೋ ಜಾತಿಗಳ ಪಾತ್ರಗಳನ್ನು(ಮಾಣಿಭಟ್ಟ, ಇತ್ಯಾದಿ) ಹಾಸ್ಯಕ್ಕೆ, ವಿಡಂಬಿಸುವುದಕ್ಕಾಗಿ ಸೃಷ್ಟಿಸಲಾಗಿರುತ್ತದೆ. ಅಂತಹ ಸಂದರ್ಭದಲ್ಲಿ ಅದೇ ಜಾತಿಯ ಜನರು ಅಂತಹ ಪ್ರದರ್ಶನಗಳನ್ನು ನೋಡಿ ಸಂತೋಷವನ್ನು ಪಡುತ್ತಾರೆ, ಕಲಾವಿದನ ಪ್ರತಿಭೆಯನ್ನು ಮೆಚ್ಚಿ ಹೊಗಳುತ್ತಾರೆ. ಜೊತೆಗೆ ಅಂತಹ  ಪ್ರದರ್ಶನಗಳು ಪದೇ ಪದೇ ತಮ್ಮ ಊರುಗಳಲ್ಲಿ ನಡೆಯುವಂತೆ ಅಲ್ಲಿನ ಜನರು ಮತ್ತು ಈ ‘ಜಾತಿಸಂಸ್ಥೆಗಳೇ’ ನೋಡಿಕೊಳ್ಳುತ್ತವೆ. ಈ ಸಾಂಪ್ರದಯಿಕ ಕಲೆಯ ಸಂದರ್ಭದಲ್ಲಿ ಕಾಣದ ಪೃವೃತ್ತಿಯು ಆಧುನಿಕ ಸಾಹಿತ್ಯದ ಸಂದರ್ಭದಲ್ಲೇಕೆ ಹುಟ್ಟಿಕೊಳ್ಳಬೇಕು? ಆಧುನಿಕ ಸಾಹಿತ್ಯದ ಸಂದರ್ಭದಲ್ಲೂ ಕೂಡ ಚೆನ್ನಿಯವರು ಹೇಳುವಂತೆ ಈ ಪೃವೃತ್ತಿಯು ಜಾತಿ ರಾಜಕೀಯ ಸಂಸ್ಥೆಗಳಿಂದ ಪ್ರಚೋದಿತವಾದುದನ್ನೇ ಕಾಣುತ್ತೇವೆಯೇ ವಿನಃ ಸಾಮಾನ್ಯ ಓದುಗರಿಂದಲ್ಲ. ಹಾಗಾಗಿ ಈ ಪೃವೃತ್ತಿಗೂ ನಮ್ಮ ಸಾಂಪ್ರದಾಯಿಕ ಸಮಾಜಕ್ಕೂ ಸಂಬಂಧವಿಲ್ಲ ಎಂಬುದು ಸ್ಪಷ್ಟ. ಇದೊಂದು ಭಿನ್ನವಾದ  ಸಾಮಾಜಿಕ ವಾಸ್ತವದಲ್ಲಿ ಹುಟ್ಟಿಕೊಂಡ ಸಮಸ್ಯೆಯಾಗಿದೆ. ಮತ್ತಷ್ಟು ಓದು »