ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

12
ಆಕ್ಟೋ

ಜನರಕ್ಷಾ ಯಾತ್ರೆ : ಕಮ್ಯುನಿಸ್ಟರ ಭದ್ರಕೋಟೆಯಲ್ಲಿ ಕಂಪನ

ಅಂಜಲಿ ಜಾರ್ಜ್ ಮತ್ತು ಜಯಶಂಕರ್

ಮೂಲ ಲೇಖನ : https://swarajyamag.com/politics/kannurs-jana-raksha-yatra-turning-the-tide-on-the-communists

ಪಿಣರಾಯಿ, ಕೇರಳದ ಮಾರ್ಕ್ಸಿಸ್ಟರಿಗೆ ಬಹಳ ಪ್ರಮುಖವಾಗಿರುವ ಒಂದು ಸಣ್ಣ ಗ್ರಾಮ. ೧೯೩೯ರಲ್ಲಿ ಪಿಣರಾಯಿಗೆ ಸಮೀಪವಿರುವ ಪರಪ್ಪುರಂ ಎಂಬ ಸ್ಥಳದಲ್ಲಿ ಕಮ್ಯುನಿಸ್ಟರು ತಮ್ಮ ಕಾರ್ಯಚಟುವಟಿಕೆಯನ್ನು ಮೊದಲ ಬಾರಿಗೆ ಆರಂಭಿಸಿದರು. ಅಂದಿನಿಂದ ಇಂದಿನವರೆಗೆ ಪಿಣರಾಯಿ ಕೇರಳದ ಕಮ್ಯುನಿಸ್ಟರ ಭದ್ರಕೋಟೆ ಎಂದೇ ಕರೆಯಲ್ಪಡುತ್ತದೆ. ಒಂದು ಕಾಲದಲ್ಲಿ ಕೇವಲ ಕೆಂಪುದ್ವಜಗಳಷ್ಟೇ ಹಾರಾಡುತ್ತಿದ್ದ ಪ್ರದೇಶ ಇದಾಗಿತ್ತು. ಕಮ್ಯುನಿಸ್ಟ್ ಪಾರ್ಟಿಯ ಹತೋಟಿಯಲಿದ್ದ ಈ ಗ್ರಾಮದಲ್ಲಿ ವಿರೋಧಕ್ಕೆ ಆಸ್ಪದವೇ ಇರಲಿಲ್ಲ. ವಿರೋಧಿ ಧ್ವನಿಗಳನ್ನು ಯಾವುದೇ ಕರುಣೆಯಿಲ್ಲದೆ ಮೆಟ್ಟಿಹಾಕಲಾಗುತ್ತಿತ್ತು. ಬಿಜೆಪಿ ಹಾಗು ಸಂಘದ ಕಾರ್ಯಕರ್ತರಾದ ಹುತಾತ್ಮ ಉತ್ತಮನ್ ಹಾಗು ಅವರ ಮಗ ಹುತಾತ್ಮ ರೆಮಿತ್ ರನ್ನು ಇದೇ ಕಮ್ಯುನಿಸ್ಟರು ಕೊಂದದ್ದು ೧೪ ದಿನಗಳ ಜನರಕ್ಷಾಯಾತ್ರೆಗೆ ಮುನ್ನುಡಿ ಬರೆಯಿತು. ಕಮ್ಯುನಿಸ್ಟರು ಮಾಡಿರುವ ರಾಜಕೀಯ ಹತ್ಯೆಗಳನ್ನು ಎತ್ತಿ ತೋರಿಸುತ್ತಿರುವ ಈ ಯಾತ್ರೆ ಕೆಲವು ದಿನದ ಹಿಂದೆ ಪಿಣರಾಯಿ ಗ್ರಾಮವನ್ನು ಪ್ರವೇಶಿಸಿ ಮುಂದುವರೆಯಿತು. ಕೇರಳದ ರಾಜಕೀಯ ಚರಿತ್ರೆಯಲ್ಲಿ ಇದೊಂದು ಮಹತ್ತರ ತಿರುವು

೧೯೭೭ರ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕತ್ವವನ್ನು ಕಂಡ ಬಹಳಷ್ಟು ಮಾರ್ಕ್ಸಿಸ್ಟ್ ನಾಯಕರು ಮತ್ತು ಕಾರ್ಯಕರ್ತರು ಸಂಘವನ್ನು ಸೇರಿಕೊಂಡರು. ಇದಕ್ಕೆ ಬಹುಮುಖ್ಯವಾಗಿ ಎರಡು ಕಾರಣಗಳಿದ್ದವು. ಮೊದಲನೆಯದ್ದು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಭಾರತೀಯ ಕಮ್ಯುನಿಸ್ಟ್ ಪಾರ್ಟಿ (ಸಿಪಿಐಎಂ) ಕುಯುಕ್ತಿಯಿಂದ ಕಾಂಗ್ರೆಸ್ಸಿನ ಜೊತೆ ಸೇರಿಕೊಂಡು ಸರಕಾರ ರಚಿಸಿತ್ತು ಹಾಗು ಎರಡನೆಯದಾಗಿ, ಸಂಘ ಈ ಹೋರಾಟದ ಮುಂಚೂಣಿಯಲ್ಲಿದ್ದು,ಇಂದಿರಾ ಗಾಂಧಿಯನ್ನು ಎದುರಿಸುವ ಸಾಹಸ ಮಾಡಿತ್ತು, ಇದರ ಫಲ ಸ್ವರೂಪವಾಗಿ ಸಾವಿರಾರು ಸ್ವಯಂಸೇವಕರು ಬಂಧನಕ್ಕೆ ಒಳಗಾಗಿದ್ದರು.. ತಮ್ಮ ನಾಯಕರ ಹೊಣೆಗೇಡಿತನ ಹಾಗು ಕಪಟತನದಿಂದ ಬೇಸತ್ತ ಜನರನ್ನು ಸ್ವಯಂಸೇವಕ ಸಂಘದ ಸನ್ನದ್ಧತೆ ಹಾಗೂ ಜವಾಬ್ದಾರಿಯುತ ನಡವಳಿಕೆ ಆಕರ್ಷಿಸಿತು.

ಮತ್ತಷ್ಟು ಓದು »

9
ಆಕ್ಟೋ

ಶಿಕ್ಷಣ ತಜ್ಞರಾಗಿ ಡಾ. ಶಿವರಾಮ ಕಾರಂತರು

ಶ್ರೀಮತಿ ತುಳಸಿ ಶಿರ್ಲಾಲು
ಉಪನ್ಯಾಸಕರು
ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ (ಬಿ.ಎಡ್)
ತೆಂಕಿಲ , ಪುತ್ತೂರು. ದ.ಕ.

ಡಾ. ಶಿವರಾಮ ಕಾರಂತರು ತಮ್ಮ ಮಾತು – ಬರವಣಿಗೆಗಳೆರಡರಲ್ಲೂ ದಶಕಗಳುದ್ದಕ್ಕೂ ಶಿಕ್ಷಣ ಎಂದರೆ ಏನು? ಯಾವುದು ಶಿಕ್ಷಣ? ಶಿಕ್ಷಣ ಹೇಗಿರಬೇಕು? ತರಗತಿಯ ಒಳಗಿನ ಶಿಕ್ಷಣ ಮತ್ತು ನಿತ್ಯ ಜೀವನದಲ್ಲಿ ಉಪಯೋಗ ಮೊದಲಾದ ವಿಷಯಗಳನ್ನು ಮತ್ತೆ ಮತ್ತೆ ಪರಿಷ್ಕರಿಸುತ್ತಾ, ಸ್ಪಷ್ಟಗೊಳಿಸುತ್ತಾ, ಪುನರ್ ರೂಪಿಸುತ್ತಿದ್ದರು. “ಓದು ಯಾಕೆ ಬೇಕು, ಬರಹ ಯಾಕೆ ಬೇಕು ಎಂದು ತಿಳಿಯದ ಮಕ್ಕಳನ್ನು ಕುಳ್ಳಿರಿಸಿಕೊಂಡು ಓದಿನಲ್ಲಿ ಸ್ವಾರಸ್ಯವಿದೆ, ಬರಹದಿಂದ ನಮ್ಮ ಮನಸ್ಸನ್ನು ತೋಡಿಕೊಳ್ಳುವುದಕ್ಕೆ ಬರುತ್ತದೆ ಎಂಬ ಉದ್ದೇಶ ಸಾಧಿಸಬೇಕು. ಇಲ್ಲಿ ಕಲಿತ ಗಣಿತ, ನಾಳೆ ನಡೆಸುವ ವಿವಿಧ ವ್ಯವಹಾರಗಳಲ್ಲಿ ಅನಿವಾರ್ಯ ಎಂಬ ಭಾವನೆಗೆ ಪೀಠಿಕೆ ಹಾಕಬೇಕು. ಮಕ್ಕಳಿಗೆ ಕಲಿಸುವ ವಿಜ್ಞಾನ, ಸಮಾಜಶಾಸ್ತ್ರ, ಚರಿತ್ರೆ ಭೂಗೋಳದಂತಹ ವಿಷಯಗಳು ಕೂಡಾ ನಾಳಿನ ಬುದ್ದಿಯ ಬೆಳವಣಿಗೆಗೆ, ಜ್ಞಾನ ಸಂಪಾದನೆಗೆ ಅವಶ್ಯಕವಾದ ತೃಷೆಯ ರೂಪವನ್ನು ಹೊಂದಿದಾಗ ಮಾತ್ರವೇ ಪ್ರಾಥಮಿಕ ಹಂತದಲ್ಲಿ ನಾವು ಕೊಡುವ ಸರಳ ಪಾಠಗಳು ತಮ್ಮ ಗುರಿಯನ್ನು ಸಾಧಿಸಬಹುದು ಇಲ್ಲವಾದರೆ ಇಲ್ಲ” ಎನ್ನುತ್ತಾರೆ. ಈ ಮಾತುಗಳೇ ಕಾರಂತರು ಶಿಕ್ಷಣವನ್ನು ಗ್ರಹಸಿಕೊಂಡ ಅವರ ಉದ್ದೇಶವನ್ನು ತಿಳಿದುಕೊಂಡ ಸೃಜನಾತ್ಮಕ ನೆಲೆಗೆ ಸಾಕ್ಷಿಯಾಗಿವೆ. ಮತ್ತಷ್ಟು ಓದು »

4
ಆಕ್ಟೋ

ಜೀವಪರರದ್ದು ಮಾತ್ರ ಜೀವವೇ ಸಾರ್?

– ಡ್ಯಾನಿ ಪಿರೇರಾ,ಹಳ್ಳಿಮೈಸೂರು

ಈ ‘ಬುದ್ಧಿಜೀವಿ’ ಎಂಬ ಪದದ ಉಗಮ ಹೇಗಾಯಿತು? ಯಾರನ್ನು ಬುದ್ಧಿಜೀವಿ ಎನ್ನುತ್ತಾರೆ? ಬುದ್ಧಿಜೀವಿ ಎನ್ನಲು ಇರಬೇಕಾದ ಮಾನದಂಡಗಳೇನು? ಬುದ್ಧಿಜೀವಿ ಎನ್ನುವವ ನಿಜಕ್ಕೂ ಬುದ್ಧಿವಂತನೇ? ಅಥವಾ ಹಾಗೆ ಭಾವಿಸಲು ಪೂರ್ವ ಷರತ್ತುಗಳಿವೆಯೇ? ಒಂದೊಮ್ಮೆ ಆತ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಮಾತಾಡಬಲ್ಲ ಸ್ಥಿತಪ್ರಜ್ಞನೇ? ಸತ್ಯವನ್ನು ನಿರ್ಭೀತಿಯಿಂದ ಹೇಳುವ ಸತ್ಯಸಂದನೇ?  ಯಾವುದೇ ಒಂದು ನಿರ್ಧಿಷ್ಟ ಸಿದ್ಧಾಂತಕ್ಕೆ ಅಂಟಿಕೊಳ್ಳದೇ ಸತ್ಯವನ್ನು ಮಾತ್ರ ಅಂಜಿಕೆ ಇಲ್ಲದೇ ಹೇಳುವ ನಿಷ್ಠೂರವಾದಿಯೇ?  ಎಂಬ ಪ್ರಶ್ನೆಗಳು ‘ಬುದ್ಧಿಜೀವಿ’ ಎಂದು  ಪದ ಕೇಳಿದಾಗಲೆಲ್ಲ ಮನಸ್ಸಲ್ಲಿ ಮೂಡುತ್ತದೆ. ಅದಕ್ಕೆ ಕಾರಣವಿದೆ.

ಇತ್ತೀಚಿನ ದಿನಗಳಲ್ಲಿ ಇಂಥ ಯಾವುದೇ ಮಾನದಂಡಗಳನ್ನಿಟ್ಟುಕೊಳ್ಳದೇ ಬುದ್ಧಿಜೀವಿಗಳಾಗುವ ಪ್ರಯತ್ನ ನಡೆಯುತ್ತಿರುವುದು ಹೆಚ್ಚಾಗುತ್ತಿದೆ.  ಅಂಥವರು ತಮ್ಮನ್ನು ತಾವು ಬುದ್ಧಿಜೀವಿ ಎಂದು ಹೇಳಿಕೊಳ್ಳದೆಯೂ ‘ಬುದ್ಧಿಜೀವಿ’ ಆಗಬಹುದೆಂದು ಪತ್ರಕರ್ತೆ ಗೌರಿ ಲಂಕೇಶರ ಹತ್ಯೆ ನಡೆದ ದಿನಗಳಿಂದ  ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ನಟ ಪ್ರಕಾಶ್ ರೈ ಯವರು ಅವರ ಮಾತುಗಳಿಂದ ನಿರೂಪಿಸುತ್ತಿದ್ದಾರೆಂದು ಭಾಸವಾಗುತ್ತಿದೆ.

ಭಾರತೀಯ ಸಮಾಜ ಬುದ್ಧಿಜೀವಿಯಾದವರು, ಪ್ರಗತಿಪರ ಎಂದೆನಿಸಿಕೊಳ್ಳುವವರು ಸಮಾಜದಲ್ಲಿ ವಿಚಾರಶೀಲನೂ, ನ್ಯಾಯಪರನೂ ಅಳೆದು ತೂಗಿ ಸತ್ಯವನ್ನಷ್ಟೇ ಹೇಳಬಲ್ಲ ನಿಷ್ಠೂರ ಭಾವದವನಾಗಿರಬೇಕೆಂದು ಅಪೇಕ್ಷೆ ಪಡುತ್ತದೆ. ಆದರೆ ಪ್ರಕಾಶ ರೈ ಯಂಥ ನಟರು ಮಾಡುತ್ತಿರುವುದೇನು? ಅವರು ಮಾತಾಡುತ್ತಿರುವುದೇನು? ಇವರು ಒಬ್ಬ ಪ್ರಸಿದ್ಧ ನಟನಾಗಿ ಯಾವುದೋ ಕಾಲಬಾಹ್ಯ ಸಿದ್ಧಾಂತಕ್ಕೆ  ಮನಸೋತು  ಎಲ್ಲಾ ವರ್ಗಗಳಲ್ಲೂ ಅವರ ಅಭಿಮಾನಿಗಳಿದ್ದಾರೆ ಎಂಬುದನ್ನು ಮರೆತು. ಎಡಪಂಥೀಯ ಪೂರ್ವಗ್ರಹ ವಿಚಾರ ವಿಮರ್ಶೆಗೆ ಜೋತು ಬಿದ್ದು ಅವರ ಅಭಿನಯವನ್ನು ಮೆಚ್ಚುವವರಿಗೆ ಅವರು ಆಪಥ್ಯರಾಗುತ್ತಿದ್ದಾರೆ ಎನಿಸುತ್ತಿದೆ.

ಈ ಪ್ರಶ್ನೆ ಯಾಕೆ ಮೂಡುತ್ತಿದೆ ಎಂದರೆ ಕೆಲವು ದಿನಗಳ ಹಿಂದೆ ಪತ್ರಕರ್ತೆ ಗೌರಿ ಲಂಕೇಶರ ಹತ್ಯೆನಡೆಯಿತು. ಅದನ್ನು ಎಲ್ಲ ಪಕ್ಷಭೇದ ಮರೆತು ಖಂಡಿಸಿದ್ದೂ ಆಯಿತು. ಹತ್ಯೆಗೊಳಗಾದ ವ್ಯಕ್ತಿಯ ಬರವಣಿಗೆ ನಡೆ-ನುಡಿಯಿಂದ ಬೇಸತ್ತಿರುವ ಕೆಲವರು ಸ್ವಲ್ಪ ಅತಿ ಎನಿಸುವಷ್ಟು ಪ್ರತಿಕ್ರಿಯೆ ನೀಡಿದರೆ, ಅವರ ವಿರುದ್ಧದ ದನಿಯಾಗಿ ಆಕೆಯ ಧೈರ್ಯ-ಶೌರ್ಯವನ್ನು ಕೊಂಡಾಡುವ ಸಂಖ್ಯೆಯೂ ಸಾಕಷ್ಟಿತ್ತು. ಈ ನಡುವೆ ವಿಚಾರವಾದಿಗಳಿಂದ ತನಿಖೆ ನಡೆಯದೇ ತೀರ್ಪು ಹೊರಬಿತ್ತು.  ಕೊಂದವರು- ಸಂಘಪರಿವಾರದವರು. ಇರಲಿ, ಬುದ್ಧಿಜೀವಿಗಳ ಈ ನಡವಳಿಕೆ ಸೋಜಿಗವೇನಲ್ಲ. ಈ ಆಪಾದನೆಯ ಹಿಂದೆ ವಿಚಾರವಾದಿಗಳ, ಬುದ್ಧಿಜೀವಿಗಳ, ಜೀವಪರರ ಅಸ್ಥಿತ್ವದ ಪ್ರಶ್ನೆಯಿದೆ ಎಂಬುದು. ಆದರೆ ಇಲ್ಲಿ ಚಿತ್ರ ನಟ ಪ್ರಕಾಶ್ ರೈ ಯವರ ಸ್ಥಿತಿ ಹಾಗಲ್ಲ. ಅವರಿಗೆ ಎಲ್ಲಾ ವರ್ಗಗಳಲ್ಲೂ ಅವರ ಅಭಿನಯವನ್ನು ಆಸ್ವಾಧಿಸುವ ಅಭಿಮಾನಿಗಳಿದ್ದಾರೆ. ಹಾಗಾಗಿ ಅವರು ಬುದ್ಧಿಜೀವಿಯಾಗಬೇಕಿಲ್ಲ. ಆದರೂ ಹತ್ಯೆ ಖಂಡಿಸುವ ಬರದಲ್ಲಿ ಅವರು ಕರ್ನಾಟಕದಲ್ಲಿ ಏನಾಗುತ್ತಿದೆ? ಇದು ಸೈದ್ಧಾಂತಿಕ ದ್ವೇಷದಿಂದ ಬಲಪಂಥೀಯರು ಈ ಹತ್ಯೆಯ ಹಿಂದಿದ್ದಾರೆ ಎಂಬ ಷರಾ ಬರೆದೇಬಿಟ್ಟರು. ಕರ್ನಾಟಕದಲ್ಲಿ ಏನಾಗುತ್ತಿದೆ ಎಂಬ ಪ್ರಶ್ನೆ ಸಹಜವಾಗಿತ್ತು. ಅವರು ಪ್ರಶ್ನೆಯನ್ನು ಕಾನೂನಾತ್ಮಕವಾಗಿ ಹೊಣೆ ಇರದ ದೇಶದ ಪ್ರಧಾನಿಯನ್ನು ಕೇಳಿದ್ದು ಪ್ರಶ್ನೆಯಲ್ಲಿ ಪ್ರಧಾನಿ ಇದಕ್ಕೆ ಉತ್ತರಿಸಬೇಕೆಂಬ ದಾರ್ಷ್ಟ್ಯವಿತ್ತು. ಹಾಗಾದರೆ ಸೈದ್ಧಾಂತಿಕ ಭಿನ್ನತೆ ಏನೇ ಇರಲಿ, ಹತ್ಯೆ ಮಾಡಿದವರು ಯಾರೆಂದು ಪತ್ತೆಮಾಡುವುದು ತನಿಖಾ ಸಂಸ್ಥೆಯೇ ಹೊರತು ಪರಸ್ಪರ ವಿರುದ್ಧವಾದ ಸಿದ್ಧಾಂತವಿರುವ ವ್ಯಕ್ತಿಗಳಲ್ಲ ಎನ್ನುವುದು ಈ ನಟನಿಗೆ ಗೊತ್ತಿಲ್ಲವೇ? ರೈ ಅವರನ್ನು ಜನರು ಒಪ್ಪಿರುವುದು ಅವರ ನಟನಾ ಪ್ರೌಢಿಮೆಯೇ ಅಥವಾ ಅವರ ಪೂರ್ವಗ್ರಹದಿಂದ ಕೂಡಿದ ಹಿಂದೂ ವಿರೋಧಿ ನೀತಿಯೇ?

ಮತ್ತಷ್ಟು ಓದು »

27
ಸೆಪ್ಟೆಂ

ಬುಲೆಟ್, ಬಾಂಬ್, ಕ್ಷಿಪಣಿಗಳ ಯುಗದಲ್ಲಿ ಭಾರತದಲ್ಲೊಂದು “ಬುಲೆಟ್ ಟ್ರೈನ್”.

-ಶ್ರೇಯಾಂಕ ಎಸ್ ರಾನಡೆ.

“ಬುಲೆಟ್” ಎಂಬ ಪ್ರಗತಿಯ ಪಟರಿ(Track):

ವಿಶ್ವದ ಬಹುತೇಕ ರಾಷ್ಟ್ರಗಳು, ಪ್ರದೇಶಗಳು ಒಂದಿಲ್ಲೊಂದು ಕಾರಣದಿಂದ ಬುಲೆಟ್, ಬಾಂಬ್, ಕ್ಷಿಪಣಿಗಳನ್ನು ಹಿಡಿದು ನಿಂತಿವೆ. ಕೆಲವು ಸಾಮ್ರಾಜ್ಯ ವಿಸ್ತರಣೆಗೆ ಅವನ್ನು ಹಿಡಿಯುತ್ತಿದ್ದರೆ ಮತ್ತೆ ಕೆಲವರು ಅವರನ್ನು ತಡೆಯುವುದಕ್ಕಾಗಿಯೋ ಅಥವಾ ತಮ್ಮ ಅಸ್ಮಿತೆಯ ರಕ್ಷಣೆಗಾಗಿಯೋ ಅಥವಾ ತಮ್ಮನ್ನು ನೆಚ್ಚಿದವರನ್ನು ಕಾಪಾಡಲೋ ಹೀಗೆ ಕಾರಣಗಳು ಹಲವಿದ್ದರೂ ಕೈಯಲ್ಲಿರುವುದು ವಿನಾಶಕಾರಿ ಆಯುಧಗಳು. ಸಿರಿಯಾ, ವೆನೆಜುವೆಲಾದಂತಹ ಕಡೆ ನಾಗರಿಕ ಯುದ್ಧವಾಗುತ್ತಿದ್ದರೆ; ಉತ್ತರ ಕೊರಿಯಾ, ಚೀನಾದಂತಹ ದೇಶಗಳು ಆಕ್ರಮಣಕ್ಕಾಗಿ ಸದಾ ಸಿದ್ಧವಾಗಿವೆ. ಭಯೋತ್ಪಾದನೆ, ಮತಾಂಧತೆಯಿಂದ ಮಧ್ಯಪ್ರಾಚ್ಯ, ಪಶ್ಚಿಮ ಏಷ್ಯಾದ ಪರಿಸ್ಥಿತಿ ರಕ್ತದ ಮಡುವಿನಲ್ಲಿ ಮುಳುಗುವಂತೆ ಮಾಡಿದೆ. ಹೀಗೆ ಒಂದಿಲ್ಲೊಂದು ಕಾರಣಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಯ ಬದಲಿಗೆ ಅಧಿಕಾರ ಕೇಂದ್ರಿತ “ಹಿಂಸೆ” ಶಕ್ತಿ ರಾಜಕಾರಣದ ಪ್ರಬಲ ಅಸ್ತ್ರವಾಗಿದೆ. ಮತ್ತಷ್ಟು ಓದು »

25
ಸೆಪ್ಟೆಂ

ಸಾವು..!

– ಗೀತಾ ಹೆಗಡೆ

ಇತ್ತೀಚಿನ ದಿನಗಳಲ್ಲಿ ಈ ಸಾವು ಎಂಬ ಶಬ್ದ ಬೇಡ ಬೇಡಾ ಅಂದರೂ ನನ್ನ ಚಿತ್ತದ ಸುತ್ತ ಬಿಡದೇ ಗಿರ್ಗೀಟಿ ಹೊಡಿತಾನೇ ಇದೆ. ಕುಳಿತಲ್ಲಿ ನಿಂತಲ್ಲಿ ಬರೀ ಇದರ ಬಗ್ಗೆಯೆ ತರ್ಕ. ಏನೇನೊ ಯೋಚನೆ, ಭಯ, ಯಾತನೆ, ಕಳವಳ ಇತ್ಯಾದಿ. ಏನಾದರೂ ಬರಿಬೇಕು. ಬರಿಲೇ ಬೇಕು ಎಂಬ ಹಠ ಮನಸ್ಸಿಗೆ. ಆದರೆ ಹೇಗೆ ಬರೆದರೆ ಹೇಗೊ ಏನೊ. ನನ್ನಿಂದ ಏನಾದರೂ ತಪ್ಪು ಬರವಣಿಗೆ ಅನಾವರಣವಾದರೆ? ತಪ್ಪು ಒಪ್ಪುಗಳನ್ನು ವಿಶ್ಲೇಷಿಸುವಷ್ಟು ತಿಳುವಳಿಕೆ ನನಗೆ ಖಂಡಿತಾ ಇಲ್ಲ. ಆದರೆ ನಮ್ಮ ಸುತ್ತಮುತ್ತಲೂ ನಡೆಯುವ ಸಾವಿನ ಸಮಾಚಾರ ನನಗೆ ನಿಜಕ್ಕೂ ಸಂಕಟವಾಗುತ್ತಿರುವುದು ದಿಟ. ಮತ್ತಷ್ಟು ಓದು »

24
ಸೆಪ್ಟೆಂ

ರೊಹಿಂಗ್ಯಾಗಳಿಗಾಗಿ ‘ಭಾರತ’ ತನ್ನತನವನ್ನು ಕಳೆದುಕೊಳ್ಳಬೇಕೇ ?

– ಡ್ಯಾನಿ ಪಿರೇರಾ
ಹಳ್ಳಿಮೈಸೂರು

ಭಾರತ ಎಲ್ಲಾ ಜಾತಿ ಜನಾಂಗಗಳನ್ನು ತನ್ನೊಡಲಲ್ಲಿ ಆಶ್ರಯ ನೀಡಿ ಆದರಿಸಿದ ದೇಶ. ಕೆಲವರು ಆಶ್ರಯ ಬೇಡಿ ಬಂದರೆ ಮತ್ತೆ ಕೆಲವರು ದುರಾಸೆಯಿಂದ ದಾಳಿ ಇಟ್ಟವರು. ಬಂದವರಲ್ಲಿ ಅನೇಕರು ಇಲ್ಲಿ ಬೆರೆತರು, ಕಲಿತರು ಕಲಿಸಿದರು. ಮತ್ತೆ ಕೆಲವರು ಬೆರೆತಂತೆ ಕಂಡರೂ ಬೇರೆಯಾಗಿಯೇ ಉಳಿದಿದ್ದಾರೆ. ಅವರು ಶರೀರ ಮಾತ್ರ ಇಲ್ಲಿದ್ದರೆ ಮನಸ್ಸು ಜಾತಿ-ಮತ-ಪಂಥಗಳಾಚೆ ಯೋಚಿಸಲು ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳೇ ಕಳೆದಿದ್ದರೂ ಸಾಧ್ಯವಾಗಿಲ್ಲ. ಅವರೊಳಗಿನ ಮತಾಂಧತೆಯ ಭಾವ ಇಲ್ಲಿ ಎಲ್ಲವನ್ನೂ ಪಡೆದ ಮೇಲೂ ಹಾಗೆಯೇ ಇದೆ ಎಂದರೆ ಅದು ಸರಿಯಾಗದ ಮನಸ್ಥಿತಿ ಎನ್ನುವ ನಿಷ್ಕರ್ಶೆಗೆ ಬರಬೇಕಾಗುತ್ತದೆ. ಇಲ್ಲಿ ಸಮರಸತೆಯಿಂದ ಬೆರೆತ ಜನಾಂಗವೊಂದು ಈ ನೆಲದ ಸಂಸ್ಕೃತಿಯೊಂದಿಗೆ ಸಮ್ಮಿಳಿತಗೊಂಡು ಸ್ವಾತಂತ್ರ್ಯ ಹೋರಾಟದಲ್ಲಿ ಮೊದಲ್ಗೊಂಡು ಈ ದೇಶದ ಬದುಕಿನೊಂದಿಗೆ ಸಮರಸಗೊಂಡು ಹೊರಗಿನಿಂದ ಬಂದವರಿಗೆ ಮಾತ್ರವಲ್ಲ, ತಾವು ಇಲ್ಲಿನ ಮೂಲದವರು ಎನ್ನುವವರಿಗೂ ಆದರ್ಶಪ್ರಾಯರಾಗಿದ್ದಾರೆ. ಈ ಜನಾಂಗ ಈ ದೇಶದ ಮೂಲಭೂತವಾದಿ ಮನಸ್ಥಿತಿಗೆ ನೀತಿ ಮಾರ್ಗವಾಗಬೇಕಿತ್ತು! ದುರ್ದೈವ ಹಾಗಾಗಲಿಲ್ಲ. ಮತ್ತಷ್ಟು ಓದು »

23
ಸೆಪ್ಟೆಂ

ಉತ್ತರೆಯರನ್ನು ದಕ್ಷಿಣೆಯರೊಟ್ಟಿಗೆ ಸೇರಿಸುವ ಸಾಹಸದ ಘಳಿಗೆಯಲ್ಲಿ…

– ಸುಜಿತ್ ಕುಮಾರ್

ಉತ್ತರದ ಅತಿವೃಷ್ಟಿ ಹಾಗು ದಕ್ಷಿಣದ ಅನಾವೃಷ್ಟಿ, ಎರಡೂ ದೇಶವನ್ನು ಕಾಡುತ್ತಿರುವ ಬಹುಮುಖ್ಯವಾದ ಸಮಸ್ಯೆಗಳು. ಶತಮಾನಗಳಿಂದ ಜನಜೀವನಗಳನ್ನು ಬಹುವಾಗಿ ಕಾಡುತ್ತಾ ಬಂದಿರುವ ಈ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಇತಿಶ್ರೀ ಹಾಡುತ್ತೇನೆಂದು ಆತ್ಮವಿಶ್ವಾಸದಿಂದ ಹೇಳುತ್ತಿದೆ. ಆ ಆತ್ಮವಿಶ್ವಾಸದ ಮಾತಿನ ಹಿಂದಿರುವ ಯೋಜನೆಯೇ ನದಿ ಜೋಡಣೆ. ಉತ್ತರದ ನದಿಗಳನ್ನು ಕಾಲುವೆ, ಆಣೆಕಟ್ಟುಗಳ ಮೂಲಕ ದಕ್ಷಿಣದ ನದಿಗಳ ಹರಿವಿನೊಟ್ಟಿಗೆ ಸೇರಿಸಿ, ಹಿಗ್ಗಿ ಒಡೆದು ಹೋಗುವ ಪ್ರವಾಹವನ್ನು ಕುಗ್ಗಿ ಸೊರಗಿ ಹೋಗುವ ಧಾರೆಯೊಟ್ಟಿಗೆ ಸೇರಿಸುವ ಪ್ರಕ್ರಿಯೆ. ಹಿಂದೆಲ್ಲ ಜನರು ಗಂಗೆಯನ್ನು ಕಾಣಲು ಅವಳ ಬಳಿಗೆ ಹೋದರೆ ಮುಂದೊಂದು ದಿನ ಇಂತಹ ಯೋಜನೆಗಳ ಮೂಲಕ ಆಕೆಯೇ ನಮ್ಮ ಮನೆಬಾಗಿಲಿಗೆ ಬಂದರೂ ಆಶ್ಚರ್ಯಪಡಬೇಕಾಗಿಲ್ಲ! ಮತ್ತಷ್ಟು ಓದು »

20
ಸೆಪ್ಟೆಂ

ಡೋಕ್ಲಾ ಕಾರ್ಮೋಡ ಕರಗಿದ ನಂತರ ಮೋದಿ ಸಮರ್ಥಕರು, ವಿರೋಧಿಗಳು ಮತ್ತದೇ ಗುದ್ದಾಟಕ್ಕಿಳಿದಿದ್ದಾರೆ.

– ಪ್ರಸನ್ನ ಕೆ

ಮೋದಿ ಅಂತದ್ದೇನು ಮಾಡಿದ್ದು ಎಂದು ವಿಶ್ಲೇಷಿಸಲು ಕುಳಿತರೆ ನಮಗೆ ಅಂತ ವಿಶೇಷಗಳು ಸಿಗುವುದಿಲ್ಲ. ಆದರೆ ವಿಷಯ ಇಷ್ಟೇನಾ? ಮೋದಿ ಏನೂ ಮಾಡಲೇ ಇಲ್ವಾ? ಎಂಬ ಪ್ರಶ್ನೆ ಏಳಬಹುದು. ಏನೂ ಮಾಡದೇ ಇಂತಹ ಗೆಲುವುಗಳು, ಯಶಸ್ಸು ಕೇವಲ ಭಕ್ತರ ಹೊಗಳಿಕೆ ವಿರೋಧಿಗಳ ಕೆಸರೆರಚಾಟದಿಂದ ಸಿಗಲು ಸಾಧ್ಯವೆ?

ಮೋದಿಯನ್ನು ಅತಿಯಾಗಿ ಹೊಗಳುವರಾಗಲಿ ಹಿಂದೆ ಮುಂದೆ ತಿಳಿಯದೆ ಕೇವಲ ಸೈದ್ದಾಂತಿಕ ಕಾರಣಕ್ಕಾಗಿ ವಿರೋಧಿಸುವವರು ಅವರ ಕಾರ್ಯಶೈಲಿಯನ್ನು ವಿಮರ್ಷಿಸಲಿಲ್ಲ ಅಥವಾ ಅರ್ಥ ಮಾಡಿಕೊಳ್ಳುವ ಗೋಜಿಗೆ ಹೋಗಲಿಲ್ಲ. ಆದರೆ ಮೋದಿ ಹಾಗೆ ಮಾಡಲಿಲ್ಲ, ತನ್ನ ಕೆಲಸವೇನು, ತನ್ನ ಗುರಿ ಏನು ಎಂಬುದು ಅವರಿಗೆ ಸ್ಪಷ್ಟವಾಗಿ ತಿಳಿದಿದೆ, ಆದನ್ನು ಅವರು ಮುಂದುವರೆಸಿದ್ದಾರಷ್ಟೆ. ಅವರು ಗುರಿ ಒಂದೇ ‘ಉತ್ತಮ ಆಡಳಿತ, ದೇಶದ ಒಳಿತು’. ತನ್ನ ವೈಯಕ್ತಿಕ ವರ್ಚಸ್ಸಿಗಿಂತ ದೇಶದ ಒಳಿತು ಮುಖ್ಯ ಎನ್ನುವುದು ಬಂದಾಗ ಬೇರೆಲ್ಲಾ ದಾರಿಗೆ ಬರುತ್ತವೆ. ಮತ್ತಷ್ಟು ಓದು »

20
ಸೆಪ್ಟೆಂ

ಪ್ರಗತಿಪರ ಫ್ಯಾಸಿಸ್ಟುಗಳಿಂದ ಪ್ರಜಾಪ್ರಾಭುತ್ವವ್ವನ್ನು ರಕ್ಷಿಸಬೇಕಾಗಿದೆ

– ರಾಕೇಶ್ ಶೆಟ್ಟಿ

ದೇಶದಾದ್ಯಂತ ಇಂದು ನಡೆಯುತ್ತಿರುವ Intellectual Intolerance ಹುಟ್ಟಿಕೊಂಡಿದ್ದು 16 May 2014 ರಂದು. ಆ ದಿನ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಎನ್.ಡಿ.ಎ ಪ್ರಚಂಡ ಬಹುಮತಗಳಿಸಿ ಅಧಿಕಾರ ಹಿಡಿಯದೇ ಹೋಗಿದ್ದರೆ ಇವತ್ತು ಭಾರತದ ಹಾದಿ ಬೀದಿಗಳಲ್ಲಿ ಗಂಜಿಗಿರಾಕಿಗಳು ಎದೆಬಡಿದುಕೊಂಡು ಅಳಬೇಕಿರಲಿಲ್ಲ. ಆದರೆ ಏನು ಮಾಡುವುದು ಹೇಳಿ? ಭಾರತದ ಪಾಲಿಗೆ ಅಚ್ಛೇ ದಿನಗಳು ನಿಕ್ಕಿಯಾಗಿದ್ದವಲ್ಲ ಹಾಗಾಗಿ ಮೋದಿಯವರೇ ಗೆದ್ದರು. ಅಷ್ಟಕ್ಕೂ ಮೋದಿಯವರು ಗೆದ್ದಿದ್ದಕ್ಕೆ, ಗೆದ್ದ ನಂತರ ಯಶಸ್ವಿ ಮತ್ತು ಮೂರು ವರ್ಷಗಳ ಜನಪ್ರಿಯ ಆಡಳಿತವನ್ನು ನೀಡಿ ನಾಲ್ಕನೇ ವರ್ಷದತ್ತ ಶರವೇಗದಲ್ಲಿ ಹೊರಟಿರುವಾಗ ಗಂಜಿಗಿರಾಕಿಗಳದೇಕೆ ಈ ಗೋಳು? ಅವರ ಗೋಳಿನ ಕಾರಣವನ್ನು ಸರಳೀಕರಿಸಿ ಮೂರು ಪ್ರಮುಖ ಕಾರಣಗಳನ್ನು ನೀಡಬಹುದು. ಮತ್ತಷ್ಟು ಓದು »

19
ಸೆಪ್ಟೆಂ

ದ್ವೇಷ ಕಾರುವುದನ್ನೇ ವಿಚಾರವಾದ ಎನ್ನುವುದಾದರೆ…

– ಅಜಿತ್ ಶೆಟ್ಟಿ ಹೆರಾಂಜೆ

ಗೌರಿ ಲಂಕೇಶ್ ಕೊಲೆಯಾದಾಗ ನಾನು ಮುಖಪುಟದಲ್ಲಿ ಒಂದು ಸ್ಟೇಟಸ್ ಹಾಕಿದ್ದೆ.. ಅಕಾಲಿಕ ಮರಣ ಯಾರದ್ದೇ ಆಗಿರಲಿ ಅದು ಘೋರ. ಅದು ಗೌರಿ ಲಂಕೇಶರಂತಾ ಖ್ಯಾತ ನಾಮರದ್ದೆ ಆಗಿರಲಿ ಅಥವಾ ಶರತ್, ರುದ್ರೇಶ್, ಕಟ್ಟಪ್ಪ, ರವಿಯರಂತ ಶ್ರೀ ಸಾಮಾನ್ಯರದ್ದೇ ಆಗಿರಿಲಿ..!! ಮತ್ತಷ್ಟು ಓದು »