ನೋಟು ರದ್ದತಿಯ ಪೂರ್ವ ತಯಾರಿ ಮತ್ತು ದೂರ ದೃಷ್ಟಿತ್ವ…!
– ಶ್ರೇಯಾಂಕ ಎಸ್ ರಾನಡೆ
ಕಳೆದ ೭೦ ವರ್ಷಗಳಲ್ಲಿ ಭಾರತದ ಪ್ರತೀ ಪ್ರಜೆಗೆ ಬ್ಯಾಂಕ್ ಒಂದರಲ್ಲಿ ಖಾತೆ ತೆರೆಯುವಂತಾಗಲು ಹಿಂದಿನ ಸರಕಾರದ ‘ಸ್ವಾಭಿಮಾನ್’ದಂತಹ ಯೋಜನೆಯಿಂದಲೂ ಸಾಧ್ಯವಾಗಲಿಲ್ಲ. ಅದಕ್ಕೆ ಜನಧನ್ ಯೋಜನೆ ಬರಬೇಕಾಯಿತು. ಇದು ಉದ್ಯೋಗ ಖಾತ್ರಿಯಂತಹ ಸರಕಾರದ ೨೬ ಯೋಜನೆಗಳಲ್ಲಿ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆಯಾಗುವುದರಿಂದ ಆನೇಕ ರೀತಿಯ ಸೋರಿಕೆ, ಭ್ರಷ್ಟಾಚಾರ ಹಾಗೂ ದಾಖಲೆಗಳ ಕೊರತೆ ಎಲ್ಲದಕ್ಕೂ ಕಡಿವಾಣ ಹಾಕಿದಂತಾಯಿತು. ಅದಕ್ಕೆ ಪೂರಕವಾಗಿ ಕಳೆದ ವರ್ಷದಿಂದ ಜಾರಿಗೆ ತಂದ “ಜಾಮ್ ಟ್ರಿನಿಟಿ” ಯೋಜನೆ, ಅಂದರೆ ವ್ಯಕ್ತಿಯೊಬ್ಬರ ಜನ್ ಧನ್ ಖಾತೆ- ಆಧಾರ್ ಸಂಖ್ಯೆ-ಮೊಬೈಲ್ ಸಂಖ್ಯೆ. ಇವುಗಳನ್ನು ಬೆಸೆಯುವ ಮಹತ್ವದ ಕಾರ್ಯದಿಂದ ಸೋರಿಕೆ, ನಕಲಿ ಫಲಾನುಭವಿಗಳು, ನಕಲಿ ಖಾತೆಯಿಂದ ನಡೆಸಬಹುದಾದ ಮಾರಕ ವ್ಯವಹಾರಗಳನ್ನು ತಡೆಯಲು ಸಾಧ್ಯವಾಗಲಿದೆ. ಇದನ್ನೇ ಭಾನುವಾರ ಪ್ರಧಾನಿಯವರು ವ್ಯಕ್ತಪಡಿಸಿರುವ ದೂರದೃಷ್ಟಿಯ ಮನಿ ಕಿ ಬಾತ್. ಇಡೀ ದೇಶವೇ ಮೊಬೈಲ್ ಮೂಲಕ ನೋಟು ರಹಿತ ಆರ್ಥಿಕ ವ್ಯವಹಾರದತ್ತ ಸಾಗಬೇಕೆಂಬ ಇಂಗಿತಕ್ಕೆ ಪೂರಕವಾಗಿ ಬಹಳ ಅಚ್ಚುಕಟ್ಟಾಗಿ ಸಜ್ಜುಗೊಳಿಸಿದ ಡಿಜಿಟಲ್ ಬ್ಯಾಂಕಿಂಗ್ ಗೆ ಪೂರ್ವಭೂಮಿಕೆ. ಮತ್ತಷ್ಟು ಓದು 
ನೋಟುಗಳ ಅಮಾನ್ಯೀಕರಣ – ಭಾರತೀಯರ ಪ್ರತಿಸ್ಪಂದನೆ
– ವಿನಾಯಕ ಹಂಪಿಹೊಳಿ
ಪಾಶ್ಚಿಮಾತ್ಯರಿಂದ ಆಮದು ಮಾಡಿಕೊಂಡಿರುವ “ಸಿಸ್ಟಂ”ಗಳ ಜೊತೆ ನಾವು ಭಾರತೀಯರು ಮುಂಚಿನಿಂದಲೂ ಅಗತ್ಯವಿದ್ದರೆ ಮಾತ್ರ ಹೊಂದಿಸಿಕೊಳ್ಳುವ ಗುಣವನ್ನು ಹೊಂದಿದ್ದೇವೆ. ಇದು ವಾಸ್ತವವಾಗಿ ನಮ್ಮ ತಪ್ಪಲ್ಲ. ಸಿಸ್ಟಂನ ತಪ್ಪೂ ಅಲ್ಲ. ಭಾರತೀಯ ಸಮಾಜಗಳ ಸಂರಚನೆಗೆ ಪಾಶ್ಚಿಮಾತ್ಯರ “ಸಿಸ್ಟಂ” ಸಂಪೂರ್ಣ ಸಾಂಗತ್ಯವನ್ನು ಹೊಂದಿಲ್ಲ. ಯಾವುದೇ ಸಿಸ್ಟಂನ ಜೊತೆಗೆ ನಾವು ವರ್ತಿಸುವ ರೀತಿಯನ್ನು ಗಮನಿಸಿದರೆ ನಮಗಿದು ಅರ್ಥವಾಗುತ್ತದೆ.
ವಿದ್ಯಾರ್ಥಿ ಜೀವನವನ್ನೇ ತೆಗೆದುಕೊಳ್ಳಿ. ಎಜುಕೇಶನ್ ಸಿಸ್ಟಂ ನಡೆಸುವ ಪರೀಕ್ಷೆಗಳ ಜೊತೆಗೆ ನಾವು ಹೇಗೆ ವರ್ತಿಸಿದ್ದೇವೆ? ನೂರು ಜನ ವಿದ್ಯಾರ್ಥಿಗಳಲ್ಲಿ, ಅಂದಂದಿನ ಪಾಠವನ್ನು ಅಂದಂದಿಗೇ ಓದಿಕೊಂಡು, ಪರೀಕ್ಷೆಯ ಸಮಯದಲ್ಲಿ ಕೇವಲ ಕಣ್ಣಾಡಿಸಿಕೊಂಡಿರುವ ವಿದ್ಯಾರ್ಥಿಗಳು, ಕೇವಲ ಬೆರಳೆಣಿಕೆಯಷ್ಟು ಮಾತ್ರ. ಅದು ಬಿಟ್ಟರೆ ಉಳಿದೆಲ್ಲ ವಿದ್ಯಾರ್ಥಿಗಳು ಪರೀಕ್ಷೆ ಸಮೀಪಿಸುತ್ತಿದ್ದಂತೆ, ಅಭ್ಯಾಸದ ವೇಗವನ್ನು ಹೆಚ್ಚಿಸಿಕೊಳ್ಳುವವರೇ. ಶಿಕ್ಷಕರೂ ಹಾಗೆಯೇ. ಮೊದಲಿನ ಪಾಠಗಳನ್ನು ಎಳೆದೂ ಎಳೆದೂ ಕಲಿಸಿ, ಸೆಮಿಸ್ಟರ್ ಮುಗಿಯಲು ಬಂದಂತೆ, ಸ್ಪೆಷಲ್ ಕ್ಲಾಸುಗಳನ್ನು ಇರಿಸಿ, ಕೊನೆಯ ಪಾಠಗಳನ್ನೆಲ್ಲ ಮುಗಿಸುತ್ತಾರೆ. ಮತ್ತಷ್ಟು ಓದು 
ಸದ್ಯದ ಸನ್ನಿವೇಶದಲ್ಲಿ ನಮ್ಮ ಮಾಧ್ಯಮಗಳ ನಡೆ ಸರಿಯಾಗಿದೆಯೇ..?
– ಮು ಅ ಶ್ರೀರಂಗ
ದಿನ ನಿತ್ಯ ಮಾಮೂಲಾಗಿ ಸಾಗುತ್ತಿದ್ದ ಜೀವನಕ್ಕೆ ಸ್ವಲ್ಪ ತಡೆ ಉಂಟಾದಾಗ ಮನಸ್ಸಿಗೆ ಕಸಿವಿಸಿ ಆಗುವುದು ಸಹಜ. ೫೦೦ ಮತ್ತು ೧೦೦೦ ನೋಟುಗಳ ಚಲಾವಣೆಯ ನಿಷೇಧದ ಪರಿಣಾಮದಿಂದಲೂ ಹೀಗಾಗಿದೆ. ಬಸ್ಸು, ರೈಲು, ವಿಮಾನ, ನೀರು, ವಿದ್ಯುತ್ತು ಇವುಗಳ ದರ ಇಷ್ಟನೇ ತಾರೀಖಿನಿಂದ ಹೆಚ್ಚಾಗುತ್ತದೆ ಎಂದು ಮುಂಚಿತವಾಗಿ ಘೋಷಣೆ ಮಾಡಿದಂತೆ ನೋಟಿನ ವಿಷಯದಲ್ಲಿ ಮಾಡಲು ಸಾಧ್ಯವಿಲ್ಲ. ಹಾಗೆ ಮಾಡಿದರೆ ಅದರ ಹಿಂದಿನ ಉದ್ದೇಶವೇ ನಿರರ್ಥಕವಾಗುತ್ತದೆ. ಇದು ಸಾಮಾನ್ಯ ಜ್ಞಾನ. ಆ ಎರಡು ನೋಟುಗಳ ಬದಲಾವಣೆಗಾಗಿ ೫೦ ದಿನಗಳ ಕಾಲಾವಕಾಶವಿದೆ. ಆದರೆ ಹೆಚ್ಚಿನ ಪತ್ರಿಕೆ ಮತ್ತು ಟಿ ವಿ ಸುದ್ದಿ ಮಾಧ್ಯಮಗಳು ನೆಗೆಟಿವ್ ಧೋರಣೆಗೆ ಕೊಟ್ಟಷ್ಟು ಮಹತ್ವವನ್ನು ಧನಾತ್ಮಕ ಸುದ್ದಿಗಳಿಗೆ ಕೊಡದೆ ಇರುವುದು ಸಮಸ್ಯೆಯು ಜಟಿಲವಾಗುತ್ತಿದೆ ಎಂಬ ಭಾವನೆಯನ್ನು ಜನರಲ್ಲಿ ಹರಡುತ್ತಿದೆ. ಮತ್ತಷ್ಟು ಓದು 
ಹೊಣೆಗಾರಿಕೆ ಮರೆತಿರುವ ಮಾಧ್ಯಮಗಳು…!
– ಸಂತೋಷಕುಮಾರ ಮೆಹೆಂದಳೆ.
(ಇವತ್ತು ಮನೆಯಲ್ಲೊಂದು ಮದುವೆ ನಡೆಯುತ್ತಿದೆ ಎಂದಾದರೆ ಅನಾಮತ್ತು ತಿಂಗಳಗಟ್ಟಲೆಯಿಂದ ತಯಾರಿ ಮಾಡಿಕೊಳ್ಳುವ ಯಜಮಾನ ಮತ್ತವನ ಕುಟುಂಬ ಕೊನೆಯ ಕ್ಷಣದಲ್ಲಿ ಎನೋ ಮರೆತು ಬಿಟ್ಟಿರುತ್ತದೆ. ಮಂಟಪದಲ್ಯಾರೊ ಅದಕ್ಕಾಗಿ ಓಡಾಡುತ್ತಾರೆ. ಕೊನೆಗೆಲ್ಲಾ ಸಾಂಗವಾಗುತ್ತದೆ. ಒಂದು ಟೂರ್ ಅಂತಾ ಹೊರಟವರು ಅಯ್ಯೋ ಅದನ್ನು ಮರೆತು ಬಂದೆನೆನ್ನುವುದೇ ಸಾಮಾನ್ಯ ಆಗಿರುವಾಗ ನೂರೂ ಚಿಲ್ರೆ ಕೋಟಿ ಜನರನ್ನು ಸಂಭಾಳಿಸುವ ನಾಯಕ ಭವಿಷ್ಯಕ್ಕಾಗಿ ಅನಿವಾರ್ಯವಾಗಿ ಧೃಢ ನಿರ್ಧಾರ ಕೈಗೊಂಡು ಅಲ್ಲಲ್ಲಿ ಕೊಂಚ ಕ್ಯೂ ನಿಲ್ಲಿಸಿದಾಗಲೂ ಅದು ಕಾಮನ್ ಮ್ಯಾನ್ಗೆ ಹಬ್ಬದಂತೆ ಅನ್ನಿಸುತ್ತಿದ್ದಾಗಲೂ, ಏನು ಪ್ರಕಟಿಸಬೇಕು ಪ್ರಕಟಿಸಬಾರದು ಎನ್ನುವ ಪರಿಜ್ಞಾನ ಮಾಧ್ಯಮಗಳಿಗಿರಲೇ ಬೇಕಿತ್ತು.. ) ಮತ್ತಷ್ಟು ಓದು 
ಮಾನಸಿಕ ದಾಳಿಗಳು ನಮ್ಮನ್ನು ಆಯಾಸಗೊಳಿಸುವುದಿಲ್ಲ : ಡಾ. ಮೋಹನ್ ಆಳ್ವ
2016 ರ ನುಡಿಸಿರಿ ಕಾರ್ಯಕ್ರಮ ನಡೆಯುತ್ತಿರುವ ಈ ಸಮಯದಲ್ಲಿ ಆಳ್ವಾಸ್ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರವರ ಬಳಿ ನುಡಿಸಿರಿಯ ಉದ್ದೇಶಗಳ ಕುರಿತು ಶ್ರೀಮತಿ ಮೌಲ್ಯ ಜೀವನ್ ರವರು ನಡೆಸಿದ ಒಂದು ಸಂದರ್ಶನ ನಿಲುಮೆಯ ಓದುಗರಿಗಾಗಿ ಇಲ್ಲಿದೆ.
ಮೌಲ್ಯ ಜೀವನ್: ಈ ಮೊದಲು ‘ಕನ್ನಡ ಮನಸ್ಸು’ ಎಂಬ ಪರಿಕಲ್ಪನೆಯಲ್ಲಿ ಆಳ್ವಾಸ್ ನುಡಿಸಿರಿ ನಡೆಯುತ್ತಿತ್ತು. ಆದರೆ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ನಂತರ ವಿಭಿನ್ನ ಪರಿಕಲ್ಪನೆಗಳಲ್ಲಿ ನುಡಿಸಿರಿ ನಡೆಯುತ್ತ ಬಂದಿದೆ. ಈ ಬಾರಿ `ಕರ್ನಾಟಕ-ನಾಳೆಗಳ ನಿರ್ಮಾಣ’ ಎಂಬ ಕೇಂದ್ರ ವಿಷಯದಡಿಯಲ್ಲಿ ನುಡಿಸಿರಿ ನಡೆಯುತ್ತಿದೆ. ಈ ಪರಿಕಲ್ಪನೆಗಳ ಬಗ್ಗೆ ನೀವು ಏನು ಹೇಳುತ್ತೀರಿ? ಮತ್ತಷ್ಟು ಓದು 
ಬ್ರಹ್ಮಚರ್ಯವೇ ಅಸಹಜವೆಂದ ದಾರ್ಶನಿಕ, ಸನ್ಯಾಸಿನಿಯನ್ನು ವಂಚಕಿ ಎಂದ….!!
– ಗುರುರಾಜ ಕೋಡ್ಕಣಿ. ಯಲ್ಲಾಪುರ
“ನಾನು ಯಾರನ್ನೂ ಸಹ ಆದರ್ಶವ್ಯಕ್ತಿಯಾಗಿ ಸ್ವೀಕರಿಸಲಾರೆ. ನನ್ನನ್ನೂ ಸಹ ಯಾರೂ ಆದರ್ಶವಾಗಿ ಸ್ವೀಕರಿಸಬಾರದು. ಆದರ್ಶ ವ್ಯಕ್ತಿತ್ವಗಳಲ್ಲಿ ಮೇಲು ಕೀಳು ಎಂಬ ಭೇದವಿರಬಾರದು. ಮೊದಲು ಜನಿಸಿದ್ದ ಆದರ್ಶ ವ್ಯಕ್ತಿ, ನಂತರ ಜನಿಸಿದ ಮಹಾನ್ ವ್ಯಕ್ತಿಗಿಂತ ಶ್ರೇಷ್ಟವೆನ್ನುವುದು ಅರ್ಥಹೀನ. ವ್ಯಕ್ತಿತ್ವಗಳಲ್ಲಿನ ಮಹಾನತೆ ಸಮಾನಾಂತರ ರೇಖೆಯಂಥದ್ದು. ಮಹಾತ್ಮಾ ಗಾಂಧಿ, ಮದರ್ ತೆರೆಸಾರಂಥಹ ವ್ಯಕ್ತಿತ್ವಗಳ ಮೇಲೆ ನನಗೆ ತೀರ ಕಡಿಮೆ ಗೌರವವಿದೆ ಎಂಬುದು ಅನೇಕರ ಅಂಬೋಣ. ಅಂಥಹ ಅಭಿಪ್ರಾಯಗಳು ಸಂಪೂರ್ಣ ತಪ್ಪು. ಅಸಲಿಗೆ ನನಗೆ ಇಂಥವರ ಮೇಲೆ ಗೌರವವೇ ಇಲ್ಲ. ಅಂದ ಮೇಲೆ ಹೆಚ್ಚು ಗೌರವ, ಕಡಿಮೆ ಆದರ ಎನ್ನುವ ಪ್ರಶ್ನೆಯೇ ನಿರರ್ಥಕ. ಇವರೆಲ್ಲರೂ ಆದರ್ಶವಾದಿ ಅಪರಾಧಿಗಳು ಎನ್ನುವುದು ನನ್ನ ಅಭಿಪ್ರಾಯ. ನಮ್ಮ ಕಾನೂನು ಮರಣದಂಡನೆ ವಿಧಿಸುವ ದುಷ್ಕರ್ಮಿಗಳ ಅಪರಾಧಕ್ಕಿಂತಲೂ ಇಂಥಹ ಆದರ್ಶವಾದಿ ಅಪರಾಧಿಗಳ ಅಪರಾಧ ಘೋರವೆನ್ನುವುದು ನನ್ನ ವಾದ. ಒಂದರ್ಥದಲ್ಲಿ ನಿಜವಾದ ಅಪರಾಧಿಗಳೆಂದರೆ ಇಂಥವರೇ. ಮದರ್ ತೆರೆಸಾರ ಉದಾಹರಣೆಯನ್ನೇ ತೆಗೆದುಕೊಳ್ಳಿ. ಆಕೆಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಯಿತು. ವಿಶ್ವದ ಹತ್ತಾರು ರಾಷ್ಟ್ರಗಳು ಆಕೆಯ ಸಾಧನೆಯನ್ನು ಮೆಚ್ಚಿ ಪ್ರಶಸ್ತಿಗಳ ಸುರಿಮಳೆಗೈದವು. ಇಂದಿಗೂ ವಿಶ್ವವಿದ್ಯಾಲಯಗಳು ಆಕೆಗೆ ಒಂದರ ಹಿಂದೊಂದರಂತೆ ಗೌರವ ಡಾಕ್ಟರೇಟ್ ನೀಡುತ್ತಲೇ ಇವೆ. ಇಷ್ಟಾಗಿಯೂ ಆಕೆಯ ಸಾಧನೆಯೇನು ಎಂಬುದು ನನಗರ್ಥವಾಗದ ವಿಷಯ. ಕೈಗೆ ಸಿಕ್ಕ ಅನಾಥರನ್ನೆಲ್ಲ ಎಳೆದುಕೊಂಡು ಹೋಗಿ ಅವರೆಲ್ಲರನ್ನು ಕ್ಯಾಥೋಲಿಕ್ಕರನ್ನಾಗಿ ಪರಿವರ್ತಿಸಿದ್ದೇ ಆಕೆಯ ಸಾಧನೆ. ಮತ್ತಷ್ಟು ಓದು 
ಲೈಫ್ ಹಿಂಗೂ ‘ಚೇಂಜ್’ ಆಗುತ್ತೆ ಕಣಾ..!
– ತುರುವೇಕೆರೆ ಪ್ರಸಾದ್
ನಾನು ಪ್ರೈಮರಿ ಶಾಲೆಯಲ್ಲಿ ಓದುತ್ತಿದ್ದಾಗ ಐದು ಪೈಸೆ ತಗೊಂಡು ಹೋದರೆ ಅಂಗಡಿ ನಾಗಣ್ಣ ಮೂರು ಪೈಸೆಗೆ ಒಂದು ಹಿಡಿ ಕಡಲೆ, ಎರಡು ಪೈಸೆಗೆ ಒಂದು ಉಂಡೆ ಬೆಲ್ಲ ಕೊಡುತ್ತಿದ್ದರು. ಮೊನ್ನೆ ಬುಧವಾರ ಪ್ರಧಾನಿ ಮೋದಿ ರೂ 1000, 500ರ ನೋಟುಗಳನ್ನು ರಾತ್ರೋ ರಾತ್ರಿ ರದ್ದು ಮಾಡಿದ ಮರುದಿನ 500 ರೂಪಾಯಿ ನೋಟು ಹಿಡಿದು ಹೋದರೂ ಒಂದು ಹಿಡಿ ಕಡ್ಲೆ ಒಂದು ಉಂಡೆ ಬೆಲ್ಲ ಸಿಗದ ಪರಿಸ್ಥಿತಿ ಉಂಟಾಗಿತ್ತು. ಹಿಂದಿನ ದಿನ ರಾತ್ರಿ ಊರಿನಲ್ಲಿ ನೆಟ್ಟಗೆ ಕೆಲಸ ಮಾಡುತ್ತಿದ್ದ 2-3 ಎಟಿಎಂಗಳಲ್ಲಿದ್ದ ಅಳಿದುಳಿದ ನೂರರ ನೋಟುಗಳೆಲ್ಲಾ ಖಾಲಿಯಾಗಿದ್ದವು. ಎಲ್ಲ ಕಡೆಯೂ ರೂ.500ರ ನೋಟುಗಳೇ ರಾರಾಜಿಸುತ್ತಿದ್ದವು, ಜನ ಅವುಗಳನ್ನು ಚಿಲ್ಲರೆ ಮಾಡಿಸಲು ಪರದಾಡುತ್ತಿದ್ದರು.. ದಿನನಿತ್ಯದ ಖರ್ಚಿಗೆ ಚಿಲ್ಲರೆ ನೋಟುಗಳನ್ನು ಹೊಂದಿಸಲು ಹರಸಾಹಸ ಮಾಡುತ್ತಿದ್ದರು. ಹಾಲಿಗೆ, ದಿನಸಿಗೆ, ಬಸ್ಸಿಗೆ, ಆಟೋಗೆ ಹೀಗೆ ಯಾವ ಬಾಬತ್ತಿಗೂ 1000, 500ರ ನೋಟು ಕೆಲಸಕ್ಕೆ ಬಾರದಂತಾಗಿತ್ತು. ಎಲ್ಲಾ ಚಿಲ್ಲರೆ ಕೇಳುವವರೇ! 2-3 ಪೆಟ್ರೋಲ್ ಬಂಕ್ಗಳು ಬೆಳಿಗ್ಗೆ ಬಾಗಿಲೇ ತೆರೆಯಲಿಲ್ಲ. ಒಂದು ಪೆಟ್ರೋಲ್ ಬಂಕ್ನಲ್ಲಿ ರೂ.500ಕ್ಕೆ ಪೂರಾ ಪೆಟ್ರೋಲ್ ಹಾಕಿಸಿಕೊಂಡರೆ ಉಂಟು.. ಇಲ್ಲವೆಂದರೆ ಒಂದೆರಡು ಲೀಟರ್ ಹಾಕಿ ಚಿಲ್ಲರೆ ಕೊಡುವ ಉಸಾಬರಿಯೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿಬಿಟ್ಟರು. ಅವರು ತಾನೆ ಎಷ್ಟು ಜನಕ್ಕೆ ಚಿಲ್ಲರೆ ಕೊಟ್ಟಾರು? ಎಲ್ಲಿಂದ ಚಿಲ್ಲರೆಯನ್ನು ತಂದಾರು?
ಮತ್ತಷ್ಟು ಓದು 
ಮೋದಿಜಿ ಮಾಡುವುದೆಲ್ಲ ವೋಟಿಗಲ್ಲಾ…!
– ವಿಕ್ರಮ್ ಎಂ.ಆರ್
ನಲವತ್ತು ವರ್ಷಗಳಿಂದ ಹಾಗೆಯೇ ಮೂಲೆ ಗುಂಪಾಗಿ ಬಿದ್ದಿತ್ತು. 1973ರಲ್ಲಿ ಇಂದಿರಾಗಾಂಧಿ OROP ಪ್ರಸ್ತಾಪವನ್ನೇ ಕಿತ್ತು ಎಸೆದಿದ್ದರು. ಇಂದು ಮೋದಿ ಸರ್ಕಾರ ದೇಶಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಸೈನಿಕರ ಕನಸನ್ನು ನನಸು ಮಾಡಿದೆ. GST ಎಷ್ಟು ವರ್ಷದಿಂದ ಚರ್ಚೆಯಲ್ಲಿತ್ತು, ನೀವೇ ವಿಚಾರ ಮಾಡಿ! ಗಾಂಧಿ ಮನೆತನದ ತಂದಿಟ್ಟ ನೂರೆಂಟು ವಿಘ್ನಗಳ ನಡುವೆಯೂ ಮೋದಿಜಿ GST ಬಿಲ್ಲನ್ನು ಸಂಸತ್ತಿನಲ್ಲಿ ತಂದು ಎರಡೂ ಸದನದಲ್ಲಿ ಮಂಡನೆ ಮಾಡಿ ಎಲ್ಲರ ಒಪ್ಪಂದ ಪಡೆದು ಪಾಸು ಮಾಡಲಾಗಿದೆ. ಪ್ರಧಾನಮಂತ್ರಿ ಧನ ಜನ ಯೋಜನೆ ಅಸ್ತಿತ್ವಕ್ಕೆ ಬಂದಾಗಿನಿಂದ ಎಷ್ಟೋ ಕೋಟಿ ಬಡ ಜನರು ಬ್ಯಾಂಕಿನಲ್ಲಿ ತಮ್ಮ ಖಾತೆ ಹೊಂದಿದ್ದಾರೆ. ಮೊದಲು ಅವರಿಗೆ ಸಿಗಬೇಕಾದ ಹಣ ಕೈಗೆ ಬರುತ್ತಿರಲಿಲ್ಲ ಆದರೆ ಈಗ ನೇರವಾಗಿ ಅವರ ಖಾತೆಗೆ ಜಮಾ ಆಗುತ್ತದೆ. ನಮ್ಮ ಕಂಪನಿಯಲ್ಲಿರುವ ಕಾಂಟ್ರಾಕ್ಟ್ ಕೆಲಸಗಾರನೊಬ್ಬ ಹೀಗೆ ಹೇಳುತ್ತಾನೆ “ಸರ್, ಮೊದಲು ನೂರು ರೂಪಾಯಿ ವೇತನ ಇದ್ದರೆ ಅದರಲ್ಲಿ ಇಪ್ಪತ್ತು ರೂಪಾಯಿಯನ್ನು ಮೇಲ್ವಿಚಾರಕ ಇಟ್ಟುಕೊಂಡು ಉಳಿದಿದ್ದನ್ನು ನನಗೆ ಕೊಡುತ್ತಿದ್ದ ಆದರೆ ಈಗ ನೇರವಾಗಿ ನೂರು ರುಪಾಯಿ ನನ್ನ ಬ್ಯಾಂಕಿಗೆ ಬರುತ್ತದೆ”. ಇದು ಒಂದು ಉದಾಹರಣೆ ಅಷ್ಟೇ, ಇಂತಹ ಸಾವಿರ ನಿದರ್ಶನಗಳನ್ನು ಹಂಚಿಕೊಳ್ಳಬಹುದು. ಇವೆಲ್ಲ ಒಂದಲ್ಲಾ ಒಂದುಕಡೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಆದರೆ ಮೋದಿ ಸರ್ಕಾರ ಏನೇ ಮಾಡಿದರೂ ಕೆಲವರಿಗೆ ಉರಿ. ವಿರೋಧ ಪಕ್ಷ ಅಥವಾ ಕೆಲವು ಬುದ್ಧಿಜೀವಿಗಳು ಮೋದಿಜಿಯವರ ಪ್ರತಿ ಪ್ರಯತ್ನವನ್ನೂ ವಿರೋಧಿಸುವುದು ಯಾತಕ್ಕೆ? ಮಾಡಬೇಕು ಇಲ್ಲವೇ ಮಾಡಲು ಬಿಡಬೇಕು. ಅರವತ್ತು ವರ್ಷವಾಯಿತು, ಇನ್ನೂ ದೇಶ ಎಷ್ಟು ಮುಂದುವರಿಯಬೇಕೋ ಅಷ್ಟು ಮುಂದುವರಿದಿಲ್ಲ. ಮೋದಿಜಿ ಬಂದಾಗಿನಿಂದ ಒಂದು ರಿದಮ್ ಸಿಕ್ಕಿದೆ ಅದನ್ನು ಹಾಳು ಮಾಡಲು ಕಾರಣಗಳೇನು? ಏನೇ ಮಾಡಿದರೂ ಅದು ಚುನಾವಣೆಯಲ್ಲಿ ಮತ ಗಳಿಸಲೇ ಮಾಡಿದ್ದು ಎಂದು ಡಂಗುರ ಬಾರಿಸುತ್ತ ಸಾರುವ ಈ ಎಡಬಿಡಂಗಿಗಳ ಉದ್ದೇಶವಾದರೂ ಏನು? ಮತ್ತಷ್ಟು ಓದು 
ಅಬ್ ಕಿ ಬಾರ್, ‘ಟ್ರಂಪ್ ಸರ್ಕಾರ್’
– ಶ್ರೇಯಾಂಕ ಎಸ್ ರಾನಡೆ
ಎಲ್ಲಾ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ತಲೆಕೆಳಗೆ ಮಾಡುವ ಮೂಲಕ, ಸ್ಥಾಪಿತ ರಾಜಕೀಯ ಶಕ್ತಿಗಳನ್ನು ಬೀಳಿಸಿದ ಡೊನಾಲ್ಡ್ ಟ್ರಂಪ್ ಅಮೆರಿಕದ 45ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಮೋದಿಯವರನ್ನು ಟ್ರಂಪ್ ರೀತಿಯ ವ್ಯಕ್ತಿತ್ವದವರೆಂದೋ, ಟ್ರಂಪ್ ಮೋದಿಯವರಷ್ಟೇ ಉತ್ತಮರೆಂದೋ ಹೇಳುವ ಪ್ರಯತ್ನವಲ್ಲ. ಆದರೆ ಭಾರತದ ಅನುಕೂಲಕ್ಕೆ ತಕ್ಕಂತಹ ಸೂಕ್ತ ಸಮಯ, ವಾತಾವರಣ “ನ ಭೂತೋ ಭವಿಷ್ಯತಿಃ” ಎಂಬಂತೆ ಅಮೆರಿಕದಲ್ಲಿ ನಿರ್ಮಾಣಗೊಂಡಿದೆ. 21ನೇ ಶತಮಾನ ಭಾರತ ಹಾಗೂ ಉಪಖಂಡದ್ದಾಗಲು ಭಾರತ ಈ ಸಮಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಭಾರತ ಹಾಗೂ ಅಮೆರಿಕದ ಸಮಾನ ಆಸಕ್ತಿಗಳನ್ನು ದ್ವಿಪಕ್ಷೀಯ ಬಾಂಧವ್ಯದ ಮತ್ತೊಂದು ದಿಕ್ಕಿಗೆ ಕೊಂಡೊಯ್ಯಬೇಕು. ಮತ್ತಷ್ಟು ಓದು 
ಯಾರಿಗೂ ಬೇಡವಾದ ಪಾತಕಿ.. ದಾವೂದ್..!
– ಸಂತೋಷಕುಮಾರ ಮೆಹೆಂದಳೆ.
( ಮೈಗಿಷ್ಟು ಪುಕ್ಕಟ್ಟೆ ಅನ್ನ, ತಂತಮ್ಮ ಮೋಜು ಮಸ್ತಿಯ ಚಟಕ್ಕಿಷ್ಟು ಯಾರದ್ದೋ ತಲೆ ಒಡೆದ ದುಡ್ಡು.. ಅದಕ್ಕೆ ಸರಿಯಾಗಿ ಮೆರೆಯೋದಕ್ಕೆ ಪಾಪಿಲೋಕದ ಕಡುಗತ್ತಲೆಯ ಸಾಮ್ರಾಜ್ಯ. ಕೊನೆಗೆ ಇದೆಲ್ಲದರಿಂದ ತಲೆ ತಪ್ಪಿಸಿಕೊಂಡು ಬದುಕಿಕೊಳ್ಳಲು ತೀರ ಪರಮ ನಿರ್ಲಜ್ಯ ಪಾಕಿಸ್ತಾನ. ಇಷ್ಟನ್ನಿಟ್ಟುಕೊಂಡು ಕತ್ತಲ ಲೋಕವನ್ನು ಆಳುತ್ತೇನೆಂದು ಹೊರಟು ಬಿಡುವವರು ತಮ್ಮ ಕೊನೆಯ ಕಾಲಾವಧಿಯುದ್ದಕ್ಕೂ ಇದೆಲ್ಲಾ ಶಾಶ್ವತ ಎಂದೇ ತಿಳಿದಿರುತ್ತಾರೆ. ದುರಾದೃಷ್ಟ ಮತ್ತು ನೂರಾರು ಹೆಣ್ಣುಮಕ್ಕಳ ಶಾಪ ಅವರನ್ನು ಜೀವಂತ ನರಕಕ್ಕೆ ನೂಕುತ್ತದೆ ಎನ್ನುವುದಕ್ಕೆ ಅಷ್ಟೆ ಉದಾಃ ಗಳು ನಮ್ಮ ಮುಂದಿವೆ. ಆದರೂ ಪಾತಕ ಲೋಕದ ಪಾತಕಿಗಳು ಬುದ್ಧಿ ಕಲಿತದ್ದೇ ಇಲ್ಲ. ಅದರಲ್ಲೂ ಪಾಕಿಸ್ತಾನದ ಕೊಚ್ಚೆಯಲ್ಲಿ ಹೊರಳುವ ಕ್ರಿಮಿಗಳಿಗೆ ಬುದ್ಧಿ ಮತ್ತು ವಿವೇಚನಾ ಶಕ್ತಿ ಬಿಟ್ಟು ಬೇರೆಲ್ಲ ಬೆಳೆಯುತ್ತದೆ. ಅದೇ ವಿನಾಶಕ್ಕೂ ಕಾರಣವಾಗುತ್ತದೆ. ಇಂಥ ಕೊಚ್ಚೆಯಂತಿರುವ ಕಥಾನಕದ ಕೊನೆಯ ತುಂಡು, ಅರೆಜೀವವಾಗಿರುವ ಪಾತಕಿ ತನಗೇ ತಾನೇ ಡಾನ್ ಎಂದು ಕರೆದುಕೊಂಡ ದಾವೂದ್ ಇಬ್ರಾಹಿಂ ಯಾವ ನೆಲಕ್ಕೆ ದ್ರೋಹ ಬಗೆದಿದ್ದನೋ ಅಲ್ಲಿವತ್ತು ಕಾಲೂರುವ ಬಗ್ಗೆ ಚಡಪಡಿಸುತ್ತಿದ್ದಾನೆ. ಆದರೆ ಊರಲು ಒಂದು ಕಾಲೇ ಉಳಿದಿಲ್ಲ. ಬದುಕಿನ ವಿಪರ್ಯಾಸ ಅಂದರೆ ಇದೇ ಅಲ್ಲವೇ..?) ಮತ್ತಷ್ಟು ಓದು 




