ದೇವರ ಪಟದ ಹಿಂದಿನ ಸೈಟು ಮಾರಾಟಕ್ಕಿದೆ!
– ರೋಹಿತ್ ಚಕ್ರತೀರ್ಥ
ನಮ್ಮ ಹಳ್ಳಿಮನೆಗಳ ಪಡಸಾಲೆಗಳ ನಾಲ್ಕೂ ಸುತ್ತು ಗೋಡೆಗಳಲ್ಲಿ ಚೌಕಟ್ಟಿನ ಪಟಗಳು ತೂಗಾಡುತ್ತಿದ್ದವು. ಧ್ಯಾನಾಸಕ್ತನಾಗಿ ಉನ್ಮೀಲಿತ ನೇತ್ರನಾದ ನೀಲಕಂಠ ಶಿವ, ಸಿಂಹವಾಹಿನಿ ದುರ್ಗೆ, ಸ್ಟುಡಿಯೋದಲ್ಲಿ ಫ್ಯಾಮಿಲಿ ಫೋಟೋಗೆ ಪೋಸ್ ಕೊಟ್ಟಂತಿರುವ ರಾಮಭದ್ರ ಮತ್ತವನ ಅವಿಭಕ್ತ ಸಂಸಾರ, ಹೆಂಡತಿಯಿಂದ ಕಾಲೊತ್ತಿಸಿಕೊಂಡು ಹಾವಿನ ಮೇಲೆ ಸುಖಾಸೀನನಾಗಿರುವ ಮಹಾವಿಷ್ಣು – ಹೀಗೆ ಒಂದು ರೀತಿಯಲ್ಲಿ ಜಗತ್ತಿನ ಮುಕ್ಕೋಟಿ ದೇವತೆಗಳೆಲ್ಲ ಈ ಮನೆಯಲ್ಲೇ ಝಂಡಾ ಹೂಡಿದ್ದಾರೆಂಬ ಭಾವನೆ ತರಿಸುವ ಪಟಗಳ ಚಿತ್ರಶಾಲೆಯಾಗಿತ್ತು ನಮ್ಮ ಪಡಸಾಲೆ. ದೇವರ ಭಯ ಮತ್ತು ಅದಕ್ಕಿಂತ ಮಿಗಿಲಾಗಿ, ಕೈ ಜಾರಿ ಬಿದ್ದು ಫಳಾರನೆ ಒಡೆದೇ ಹೋದರೆ ಬೆನ್ನು ಮುರಿಯಲಿದ್ದ ಅಜ್ಜನ ಭಯದಿಂದಾಗಿ ನಾವು ಈ ದೇವರ ಸಹವಾಸಕ್ಕೇ ಹೋಗುತ್ತಿರಲಿಲ್ಲ. ಆದರೆ ಆಗೀಗ ಆ ಪಟಗಳೆಡೆಯಲ್ಲಿ ಚಿಕ್ಚಿಕ್ ಚೀಂವ್ ಎಂಬ ದನಿ ಬಂದಾಗ ಮಾತ್ರ ಸ್ಟೂಲ್ ಹತ್ತಿ ಅಲ್ಲೇನಿದೆ ಎಂದು ಇಣುಕುವ ಕುತೂಹಲ ಚಿಗುರುತ್ತಿತ್ತು. ಅಲ್ಲಿ ನಮಗೆ ಕಾಣಿಸುತ್ತಿದ್ದುದು ಪುಟಾಣಿ ಗುಬ್ಬಚ್ಚಿಗಳ ಸಂಸಾರ. ದೇವರ ಪಟವನ್ನು ನಲವತ್ತೈದು ಡಿಗ್ರಿ ವಾರೆಯಾಗಿ ನೇತಾಡಿಸುತ್ತಿದ್ದುದರಿಂದ ಆ ಸಂದಿ ತಮ್ಮ ಮನೆ ಕಟ್ಟಲಿಕ್ಕೆಂದೇ ಮನುಷ್ಯ ಮಾಡಿಟ್ಟ ಏರ್ಪಾಟು ಎಂದು ಗುಬ್ಬಚ್ಚಿಗಳು ಬಗೆಯುತ್ತಿದ್ದವೋ ಏನೋ. ಉಗ್ರ ನರಸಿಂಹನಂಥ ಕಡುಕೋಪಿಷ್ಠ ದೇವರ ಪಟದ ಹಿಂದೆಯೂ ಅವು ನಿರಾತಂಕವಾಗಿ ತಮ್ಮ ಸಂಸಾರದ ಗುಡಾರ ಬಿಚ್ಚಿಕೊಳ್ಳುತ್ತಿದ್ದವು. ಮತ್ತಷ್ಟು ಓದು 
ಪಕ್ಷ ರಾಜಕಾರಣದ ಮರ್ಮಗಳು
ಡಾ. ಸಂತೋಷ್ ಕುಮಾರ್ ಪಿ.ಕೆ
ಶಿವಮೊಗ್ಗ
ರಾಜಕಾರಣವೆಂಬುದು ಇಂದಿಗೆ ಪಕ್ಷಕ್ಕೆ ಮಾತ್ರ ಸೀಮಿತವಾಗಿ, ಪ್ರದೇಶಗಳು ಎರಡನೇ ಪ್ರಾಮುಖ್ಯತೆಯನ್ನು ಪಡೆಯುತ್ತಿವೆ. ಕರ್ನಾಟಕ ಸರ್ಕಾರವೆಂಬುದು ಕಾಂಗ್ರೆಸ್ ಸರ್ಕಾರ ಎಂಬ ಮಿತಿಯ ಒಳಗೆ ಕಾರ್ಯನಿರ್ವಹಿಸಲು ಇಚ್ಚಿಸುತ್ತದೆಯೇ ಹೊರತು ರಾಜ್ಯ ಸರ್ಕಾರವಾಗಿ ಅಲ್ಲ. ಇದು ಕಾಂಗ್ರೆಸ್ ಪಕ್ಷದ ಮಿತಿ ಎಂದು ಭಾವಿಸದೆ ಆಡಳಿತಕ್ಕೆ ಬರುವ ಬಹುತೇಕ ಪಕ್ಷಗಳ ಹಣೆಬರಹವಾಗಿದೆ. ಆದ್ದರಿಂದ ಸರ್ವತೋಮುಖ ಅಭಿವೃದ್ಧಿಯ ಬದಲು ಭಾಗಶಃ ಅಭಿವೃದ್ಧಿಯ ಕಾರ್ಯಚಟುವಟಿಕೆಗಳನ್ನು ಸರ್ಕಾರಗಳು ಕೈಗೆತ್ತಿಕೊಳ್ಳುತ್ತವೆ. ಹಾಗಾಗಿ ತುಷ್ಟೀಕರಣದ ರಾಜಕಾರಣ ಹೆಚ್ಚಾಗಿ ಇಂದು ಕಾಣಬಹುದಾಗಿದೆ. ಮತ್ತಷ್ಟು ಓದು 
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೩ )
– ಡಾ. ಮಾಧವ ಪೆರಾಜೆ
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
ಎರಡು ಭಿನ್ನ ಶಾಸನಗಳು:
ಆದರೆ ಈ ಮಾತಿಗೆ ಅಪವಾದಗಳಾಗಿ ಭಿನ್ನ ರಾಗವನ್ನು ಹಾಡುವ ಶಾಸಗಳೂ ಇಲ್ಲದಿಲ್ಲ. ಸದ್ಯಕ್ಕೆ ಅಂತಹ ಎರಡು ಶಾಸನಗಳು ನನ್ನ ಗಮನಕ್ಕೆ ಬಂದಿದೆ. ಮೊದಲನೆಯದು ಸಿರಗುಪ್ಪದ ಶಾಸನ, ಎರಡನೆಯದು ಹರಪನಹಳ್ಳಿಯ ಶಾಸನ. ಸಿರಗುಪ್ಪದ ಶಾಸನವು ಶಂಭುಲಿಂಗೇಶ್ವರ ದೇವಾಲಯದಲ್ಲಿರುವುದಾಗಿ ಅದರ ಕಾಲವು ಕ್ರಿ.ಶ. 1199 ಎಂದು ತಿಳಿದು ಬರುತ್ತದೆ. ಈ ಶಾಸನದ ಕೊನೆಯಲ್ಲಿ …… ಮತ್ತಷ್ಟು ಓದು 
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
– ಡಾ. ಮಾಧವ ಪೆರಾಜೆ
ಮಧ್ಯಕಾಲದಲ್ಲಿ ಗುಡಿಗಳು:
ದೇವಾಲಯಗಳಿಗೆ ಇದ್ದಕ್ಕಿದ್ದಂತೆ ಪ್ರಸಿದ್ಧಿ ಬಂದಿರುವುದೇ ಮಧ್ಯಯುಗದಲ್ಲಿ ಎನ್ನುವುದು ಇನ್ನೊಂದು ಗಮನಾರ್ಹ ಅಂಶವಾಗಿದೆ. ಪುರಾಣಗಳು ಕಾವ್ಯಗಳು ದೇವಾಲಯಗಳ ಕುರಿತು ಹಾಡಿಹೊಗಳುವುದಕ್ಕೆ ಈ ಕಾಲದಲ್ಲಿ ಪ್ರಾರಂಭ ಮಾಡುತ್ತವೆ. ಅಗ್ನಿಪುರಾಣದ ಪ್ರಕಾರ ದೇವಾಲಯಗಳನ್ನು ಕಟ್ಟಿಸುವ ಬಯಕೆ ಬಂತೆಂದರೆ ಸಾಕು – ಅವರ ಪಾಪ ಪರಿಹಾರವಾಗುತ್ತದೆಯಂತೆ. ದೇವಾಲಯಕ್ಕೆ ಒಂದು ಇಟ್ಟಿಗೆಯನ್ನು ಇಟ್ಟರೆ ಅದು ಅವನಿಗೆ ಸಾಯುವಾಗ ಒಂದು ಯಜ್ಞವನ್ನು ಮಾಡಿದ ಪುಣ್ಯವನ್ನು ಕೊಡುತ್ತದೆಯಂತೆ – ಹಾಗೆಂದು ಹಯಶೀರ್ಷ ಸಂಹಿತೆ ಹೇಳುತ್ತದೆ. ಯಾವುದಾದರೊಂದು ಮಗು ಆಟದ ನೆಪದಲ್ಲಿ ಮರಳಿನಲ್ಲಿ ಗುಡಿ ಕಟ್ಟಿದರೂ ಆ ಮಗುವಿಗೆ ಸ್ವರ್ಗ ಲಭಿಸುತ್ತದೆ ಎಂದು ವಿಷ್ಣು ರಹಸ್ಯವು ತಿಳಿಸುತ್ತದೆ. ಹೀಗೆ ಇಲ್ಲಿಂದ ದೇವಾಲಯಗಳಿಗೆ ಮಹತ್ವವೂ ಪ್ರಸಿದ್ಧಿಯೂ ದೊರೆಯುತ್ತದೆ. ಶ್ರೀಮಂತರು,ಚಕ್ರವರ್ತಿಗಳು, ದಂಡನಾಯಕರು ದೇವಾಲಯಗಳನ್ನು ಕಟ್ಟಿಸುತ್ತಾರೆ. ದೇವಾಲಯಗಳನ್ನು ಕಟ್ಟಿಸುವುದು, ಅಂತಹ ದೇವಾಲಯಗಳಿಗೆ ಪೂಜಾರಿಗಳನ್ನು ನೇಮಕ ಮಾಡುವುದು, ದೇವಾಲಯಗಳ ಸಂದರ್ಶನಕ್ಕಾಗಿ ಹೋಗುವುದು, ಅಲ್ಲಿ ಪ್ರಾರ್ಥನೆ ಮಾಡುವುದು, ಯಾರು ಪೂಜೆ ಮಾಡಬಹುದು, ಮಾಡಬಾರದು ಎನ್ನುವುದು ಮೊದಲಾದವುಗಳೆಲ್ಲ ಈ ಕಾಲದಿಂದಲೇ ಆರಂಭವಾಗುತ್ತವೆ. ನಮ್ಮ ಕನಕದಾಸರು ಈ ಕಾಲದವರೆಂಬುದನ್ನು ಇಲ್ಲಿ ನೆನಪಿಸಿಕೊಳ್ಳೋಣ. ಹೀಗಾಗಿ ಮಧ್ಯಕಾಲೀನ ವಿಷಯಗಳಿಗೆ ಸಂಬಂಧಿಸಿದ ಈಗ ನಾವು ನಿರ್ದಿಷ್ಟವಾಗಿ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿರುವುದರಿಂದ, ಈ ವಿವರಗಳು ಇನ್ನಷ್ಟು ಸ್ಪಷ್ಟವಾಗಬಲ್ಲವು. ಹಾಗಾದುದರಿಂದ ನಿರ್ದಿಷ್ಟವಾಗಿ ದೇವಾಲಯಕ್ಕೆ ಸಂಬಂಧಿಸಿದಂತೆ ಕರ್ನಾಟಕವನ್ನೇ ಲಕ್ಷಿಸಿ ಇನ್ನು ಮುಂದೆ ಈ ವಿಷಯವನ್ನು ಇನ್ನಷ್ಟು ವಿಸ್ತರಿಸೋಣ. ಮತ್ತಷ್ಟು ಓದು 
ಕಾವೇರಿ = ಕನ್ನಡ/ಕನ್ನಡಿಗ?
– ಚೇತನಾ ಹೆಗಡೆ
ಕಾವೇರಿ = ಕನ್ನಡ/ಕನ್ನಡಿಗ?
ಈ ಪ್ರಶ್ನೆ ನನ್ನನ್ನು ಚಿಕ್ಕಂದಿನಿಂದಲೂ ಕಾಡಿದೆ. ಕಾರಣ ನಮ್ಮ ಸಿನಿಮಾಗಳು ಮತ್ತು ಅವುಗಳ ಹಾಡುಗಳು. ಕನ್ನಡ ಭಾಷೆ ಮತ್ತು ಕರ್ನಾಟಕಕ್ಕೆ ಸಂಬಂಧಿಸಿದ ಯಾವುದೇ ಹಾಡು ಇದ್ದರೂ ಅದರಲ್ಲಿ ಕಾವೇರಿಯ ಉಲ್ಲೇಖ ಪಕ್ಕಾ. ಯಾಕೆ ಕಾವೇರಿ ನದಿಗೆ ಇಷ್ಟೊಂದು ಪ್ರಾಮುಖ್ಯತೆ ಎಂಬುದು ದೇವರಾಣೆಗೂ ಅರ್ಥವಾಗಿರಲಿಲ್ಲ.
ಸತ್ಯ ಹೇಳುತ್ತೇನೆ, ಅಪ್ಪಟ ಮಲೆನಾಡಾದ ಶಿರಸಿಯಲ್ಲಿ ಹುಟ್ಟಿ ಬೆಳೆದ ನನಗೆ ನೀರಿನ ಕೊರತೆ ಎಂಬುದು ಅಷ್ಟಾಗಿ ಕಾಡಿರಲಿಲ್ಲ. ಪ್ರತೀ ಮನೆಯೂ ಒಂದೊಂದು ಸಿಹಿನೀರಿನ ಬಾವಿ ಹೊಂದಿರುವುದು ವಿಶೇಷವೇ ಅಲ್ಲ. ಹಳ್ಳಿಗಳಲ್ಲಿ ಮನೆಯ ಹಿಂದುಗಡೆಯೇ ಗುಡ್ಡದಿಂದ ಇಳಿದು ಬರುವ ನೀರಿನ ಝರಿಗಳು ಬಹು ಸಾಮಾನ್ಯವಾಗಿದ್ದ ಕಾಲ. ಹಾಗಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ಹುಟ್ಟಿದ/ಹರಿಯುವ ನದಿಗಳಾದ ಅಘನಾಶಿನಿ, ಶರಾವತಿ, ಬೇಡ್ತಿ, ಕಾಳಿ, ವರದಾ ಮುಂತಾದ ಯಾವ ನದಿಯ ನೀರನ್ನೂ ಕುಡಿದು ಬೆಳೆದವಳಲ್ಲ ನಾನು… ಮತ್ತಷ್ಟು ಓದು 
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )
– ಡಾ. ಮಾಧವ ಪೆರಾಜೆ
‘ದೇವಾಲಯ ಪ್ರವೇಶ’ ಎನ್ನುವ ಸಂಗತಿಯು ಈಗ ಒಂದು ಜ್ವಲಂತ ಸಮಸ್ಯೆ ಎನ್ನುವ ಹಾಗೆ ಪ್ರತಿಬಿಂಬಿತವಾಗುತ್ತಿದೆ. ಕನ್ನಡದ ಜನಪ್ರಿಯ ದಿನಪತ್ರಿಕೆಯಾದ ಪ್ರಜಾವಾಣಿಯಲ್ಲಿ ‘ದೇಗುಲ ಪ್ರವೇಶವೂ ಶುದ್ಧೀಕರಣವೂ’ ಎನ್ನುವ ಲೇಖನ (ಲೇ: ಹೊಸಕೆರೆ ನಂಜುಂಡೇಗೌಡ, ದಿ.6.10.14) ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಇದು ಅತ್ಯಂತ ಸಮಕಾಲೀನ ಸಂಗತಿಯಾಗಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಈ ಉಪನ್ಯಾಸಕ್ಕೆ ಸಂಬಂಧಿಸಿದ ಹಾಗೆ ಶೀರ್ಷಿಕೆಯ ಹಾಗಿರುವ ‘ಬಾಗಿಲನು ತೆರೆದು’ ಎನ್ನುವ ಕೀರ್ತನೆಯ ಸಾಲೊಂದು, ಈ ಉಪನ್ಯಾಸಕ್ಕೆ ಬಾಗಿಲೇ ಆಗುತ್ತದೆ ಎನ್ನುವ ಹಿನ್ನೆಲೆಯಲ್ಲಿ ಆ ಕೀರ್ತನೆಯನ್ನು ಪೂರ್ಣವಾಗಿ ಇಲ್ಲಿ ಉದ್ಧರಿಸಲಾಗಿದೆ. ಮತ್ತಷ್ಟು ಓದು 
ಮನೆಯೊಂದು ಮೂರು ಬಾಗಿಲು…..
– ಮು ಅ ಶ್ರೀರಂಗ
೧. ಕೃಷ್ಣರಾಜಸಾಗರ ಆಣೆಕಟ್ಟು ಕಟ್ಟುವಾಗಲಿಂದ ಹಿಡಿದು ಇಲ್ಲಿಯತನಕ ನೂರು ವರ್ಷಗಳಿಗೂ ಮೀರಿ ಕಾವೇರಿ ನದಿ ನೀರಿನ ಹಂಚಿಕೆ ಮತ್ತಿತರ ವಿಷಯಗಳ ಗಲಾಟೆ ತಮಿಳುನಾಡು (ಅಂದಿನ ಮದ್ರಾಸ್ ರಾಜ್ಯ) ಮತ್ತು ನಮ್ಮ ನಡುವೆ ಇದೆ. ಶಾಸಕಾಂಗ, ನ್ಯಾಯಾಂಗ, ಒಕ್ಕೂಟ ವ್ಯವಸ್ಥೆ, ಕೇಂದ್ರ ಸರ್ಕಾರ ಹೀಗೆ ಅನೇಕ ವಿಷಯಗಳು ಹೆಣೆದುಕೊಂಡಿರುವ ಒಂದು ಸಮಸ್ಯೆ ಸಿನಿಮಾನಟರ, ಬುದ್ಧಿಜೀವಿಗಳ, ಸಾಹಿತಿಗಳ ಮೆರವಣಿಗೆ, ಅಬ್ಬರದ, ಆಕ್ರೋಶದ ಒಂದು ಹೇಳಿಕೆಯಿಂದ ಬಗೆ ಹರಿಯುತ್ತವೆ ಎಂಬುದೇ ಹಾಸ್ಯಾಸ್ಪದ ಸಂಗತಿ. ಕೆಲವು ಪ್ರಚಾರಪ್ರಿಯ ಸಾಹಿತಿಗಳು ಗೋಕಾಕ್ ಚಳುವಳಿಯ ಉದಾಹರಣೆ ಕೊಟ್ಟು ಈಗಲೂ ಹಾಗೆ ಮಾಡಿದರೆ ರಾತ್ರಿ ಕಳೆದು ಬೆಳಗಾಗುವುದರವೊಳಗೆ ಕಾವೇರಿ ಸಮಸ್ಯೆ ಬಗೆಹರಿಸಬಹುದು ಎಂಬ ಹೇಳಿಕೆಕೊಡುತ್ತಿದ್ದಾರೆ. ಆದರೆ ಗೋಕಾಕ್ ವರದಿಯ ಅನುಷ್ಠಾನ ಕಟ್ಟುನಿಟ್ಟಾಗಿ ಜಾರಿಯಾಗಿದೆಯೇ? ಇತ್ತೀಚಿಗೆ ತಾನೇ ಸುಪ್ರೀಂ ಕೋರ್ಟಿನಲ್ಲಿ ಕನ್ನಡ ಮಾಧ್ಯಮ ಕಡ್ಡಾಯ ಮಾಡುವುದು ತಪ್ಪು ಎಂದು ಹೇಳಿ ‘ಮಾತೃ ಭಾಷೆ’ಗೆ ನಮ್ಮ ಸಂವಿಧಾನದ ಪ್ರಕಾರ ಬೇರೆ ವ್ಯಾಖ್ಯಾನ ನೀಡಿದೆ. ಖಾಸಗಿ ಶಾಲೆಗಳ ಒಕ್ಕೂಟದ ವಾದಕ್ಕೆ ಜಯ ಸಿಕ್ಕಿದೆ. ಸರ್ಕಾರಿ ಕನ್ನಡ ಮಾಧ್ಯಮದ ಶಾಲೆಗಳು ವಿದ್ಯಾರ್ಥಿಗಳಿಲ್ಲದೆ ಖಾಲಿ ಹೊಡೆಯುತ್ತಿವೆ; ಮುಚ್ಚುತ್ತಿವೆ ಅಥವಾ ಮೂರ್ನಾಲಕ್ಕು ಶಾಲೆಗಳನ್ನು ಒಟ್ಟುಗೂಡಿಸಿ ಹಾಗೂ ಹೀಗೂ ಉಸಿರಾಡುವಂತೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಪ್ರಥಮ ಆದ್ಯತೆ ಕೊಡಬೇಕು ಎಂಬ ಮಹಿಷಿ ವರದಿಯ ಜಾರಿಯೂ ಪೂರ್ಣಪ್ರಮಾಣದಲ್ಲಿ ಜಾರಿಯಾಗಲು ಸಂವಿಧಾನ, ನ್ಯಾಯಾಂಗದ ವಿಧಿಗಳ ಪ್ರಕಾರ ಆಗುತ್ತಿಲ್ಲ. ಇದೇನು ನಮ್ಮನ್ನಾಳುತ್ತಿರುವ, ಆಳಿದ ಸರ್ಕಾರಗಳ ‘ರಾಜಕೀಯ ಇಚ್ಚಾಶಕ್ತಿ’ಯ ಕೊರತೆಯೋ ಅಥವಾ ಆ ವರದಿಗಳಲ್ಲಿನ ಕೊರತೆಯೋ ತಿಳಿಯದಾಗಿದೆ. ಮತ್ತಷ್ಟು ಓದು 
ಮಾದರೀ ಹೋರಾಟಗಾರರ ಮುಂದಾಳತ್ವದಲ್ಲಿ ಪ್ರಾಯೋಜಿತ ಪ್ರತಿಭಟನೆಗಳು
– ಎಸ್. ಎನ್. ಭಾಸ್ಕರ್
ದಲಿತಪರ ಹೋರಾಟ, ಚಳುವಳಿಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ದಲಿತ ಸಂಬಂಧಿ ಸಂಘಟನೆಯ ಮುಖಂಡರೊಬ್ಬರು ತಮ್ಮ ಚಳುವಳಿ, ಧ್ಯೇಯ ಗಳ ಬಗ್ಗೆ ಮಾತನಾಡುತ್ತಾ, ಈ ಹಿಂದೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರು ಹೇಳಿದ್ದ ಈ ಮಾತುಗಳನ್ನು ಉಲ್ಲೇಖಿಸುತ್ತಾರೆ.
“ಹಿಂದೂ ಧರ್ಮವೆಂಬುದು ಬಹು ಮಹಡಿಗಳನ್ನು ಹೊಂದಿರುವ ಒಂದು ಕಟ್ಟಡವಿರುವ ಹಾಗೆ. ವಿಪರ್ಯಾಸವೆಂದರೆ ಇಲ್ಲಿ ಒಂದು ಮಹಡಿಯಿಂದ ಮತ್ತೊಂದು ಮಹಡಿಗೆ ಹೋಗಲು ಯಾವುದೇ ಮೆಟ್ಟಿಲುಗಳಿಲ್ಲ. ನೆಲಮಹಡಿಯಲ್ಲಿರುವವನು ಕೊನೆಯ ತನಕ ಅಲ್ಲೇ ಇರಬೇಕಾಗುತ್ತದೆ. ಮೇಲ್ಮಹಡಿಯಲ್ಲಿರುವವನು ಕೊನೆಯವರೆಗೂ ಮೇಲ್ಮಟ್ಟದಲ್ಲಿಯೇ ಇರುವಂತೆ ನೋಡಿಕೊಳ್ಳಲಾಗುತ್ತದೆ” ಮತ್ತಷ್ಟು ಓದು 
ಆಗಬೇಕಿದೆ ಸರಸ್ವತಿ ಮಂದಿರಗಳ ಜೀರ್ಣೋದ್ಧಾರ
– ಮುರಳಿ ಕೃಷ್ಣ ಕಡವ
ಒಂದೂರಿನ ಒಂದಷ್ಟು ಜನ ತಮ್ಮ ಮಕ್ಕಳ ವಿದ್ಯಾಭ್ಯಾಸ ಸರಿಯಾಗಿ ನಡೆಯುತ್ತಿಲ್ಲಾ ಅಂತ ಒಬ್ಬ ಜ್ಯೋತಿಷಿಯ ಬಳಿ ಸಲಹೆಗಾಗಿ ಹೋದರು. ಜ್ಯೋತಿಷಿಯು ತನ್ನೆಲ್ಲಾ ಲೆಕ್ಕಚಾರಗಳನ್ನು ಮಾಡಿ, “ನಿಮ್ಮೂರಿನ ಮಧ್ಯದಲ್ಲಿ ದೇವರ ಸಾನ್ನಿಧ್ಯವಿದೆ, ಅಲ್ಲಿ ಒಂದು ದೇವಸ್ಥಾನದ ನಿರ್ಮಾಣವಾಗಬೇಕು” ಎಂಬ ಪರಿಹಾರವನ್ನು ನೀಡಿದರು. ದೇವರ ಮೇಲಿನ ಭಕ್ತಿಗಿಂತ ಭಯವೇ ಜಾಸ್ತಿ ನೋಡಿ ಜನರಿಗೆ. ಸರಿ ಎಂದು ಒಂದೇ ವರ್ಷದಲ್ಲಿ ಲಕ್ಷಗಟ್ಟಲೇ ದುಡ್ಡು ಸಂಗ್ರಹಿಸಿ, ಒಂದು ಗುಡಿಯನ್ನ ಎದ್ದು ನಿಲ್ಲಿಸಿ, ದೇವರ ಮೂರ್ತಿಯನ್ನ ಪ್ರತಿಷ್ಟಾಪಿಸಿಯೇ ಬಿಟ್ಟರು. ಅದಕ್ಕೊಬ್ಬ ಪೂಜಾರಿಯನ್ನೂ ನೇಮಿಸಿ ಪೂಜೆ, ಹೋಮ ಹವನಗಳನ್ನೂ ನಡೆಸಲಾಯಿತು. ಆದರೆ ಅವರು ಎದುರಿಸುತ್ತಿದ್ದ ಸಮಸ್ಯೆಗೆ ಪರಿಹಾರ ಸಿಗಲೇ ಇಲ್ಲ. ಕೇಳಿದರೆ ಆ ಜನರ ಉತ್ತರ ಏನು ಗೊತ್ತಾ “ನಮ್ಮ ಕೆಲಸ ನಾವು ಮಾಡಿದ್ದೇವೆ ಫಲಾಫಲಗಳೆಲ್ಲಾ ದೇವರಿಗೆ ಬಿಟ್ಟದ್ದು” ಅಂತ. ಮತ್ತಷ್ಟು ಓದು 
ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು, ಒಂದು ತಲೆಕೆಟ್ಟ ನಿರ್ಧಾರ ಸಾಕು||
– ರಾಘವೇಂದ್ರ ನಾವಡ
ಏನೇ ಹೇಳಿ… ರಾಜ್ಯ ರಾಜಕೀಯದಲ್ಲಿ ದೇವೇಗೌಡರನ್ನು “ಫೀನಿಕ್ಸ್” ಅಂತ ಯಾಕೆ ಕರೀತಾರೆ? ಅನ್ನೋದಕ್ಕೆ ಮತ್ತೊಮ್ಮೆ ನಿದರ್ಶನ ದೊರಕಿತು! ತನ್ನ ಮುಂಪಡೆ ನಾಯಕರ ಸೋಮಾರಿತನ, ಅಂತಃಕಲಹ, ಅಹಂಕಾರ ಮುಂತಾದವುಗಳಿಂದ ಮಕಾಡೆ ಮಲಗಿದ್ದ ಜಾತ್ಯಾತೀತ ಜನತಾದಳ, ತನ್ನ ಮೇರು ಪ್ರಭೃತಿ ದೇವೇಗೌಡರು ತೆಗೆದುಕೊಂಡ ಒಂದು ಚಾಣಾಕ್ಷತನದ ನಿರ್ಧಾರದಿಂದ ಕುಂಭಕರ್ಣ ನಿದ್ರೆಯಿಂದ ದಢಾಲ್ಲನೆ ಎದ್ದರೆ, ಯಡಿಯೂರಪ್ಪನವರ ನಾಯಕತ್ವದಲ್ಲಿ ಸ್ವಲ್ಪ-ಸ್ವಲ್ಪವೇ ಮೇಲೇಳುತ್ತಿದ್ದ (ಇಲ್ಲಿಯೂ ಅಂತಃ ಕಲಹವಿದೆ. ಆದರೆ ನಾಯಕರು ಸ್ವಲ್ಪ ಚುರುಕಾಗಿದ್ದರು) ರಾಜ್ಯ ಭಾಜಪಾ, ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆದಿದ್ದ ಸರ್ವಪಕ್ಷ ಸಭೆಯನ್ನು ಬಹಿಷ್ಕರಿಸುವುದರ ಮೂಲಕ ಮಕಾಡೆ ಮಲಗಿತು!! ಒಬ್ಬರು ಫೀನಿಕ್ಸ್ ನಂತೆ ಎದ್ದರೆ ಮತ್ತೊಬ್ಬರು ಶವದಂತೆ ಬಿದ್ದರು!! ಮತ್ತಷ್ಟು ಓದು 




