“ಭಾರತ್ ಕಿ ಬರ್ಬಾದಿ” ಕೂಗಿನ ಹಿಂದಿರುವ ಕೈಗಳು ಯಾರದ್ದು?
– ರಾಕೇಶ್ ಶೆಟ್ಟಿ
ಉಗ್ರ ಬರ್ಹನ್ ವಾನಿಯ ಹತ್ಯೆಯಾಗಿ ಒಂದು ತಿಂಗಳು ಕಳೆದು ಕಾಶ್ಮೀರ ಕಣಿವೆಯ ಒಂದೆರಡು ಜಿಲ್ಲೆಗಳನ್ನು ಬಿಟ್ಟು ಉಳಿದೆಲ್ಲವೂ ತಣ್ಣಗಾಗಿದ್ದರೂ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡುತ್ತಿರುವ ದೇಶದ್ರೋಹಿಗಳ ಕೂಗು ಇನ್ನು ತಣ್ಣಗಾಗಿಲ್ಲ. ಇಷ್ಟು ದಿನ ಶ್ರೀನಗರದಲ್ಲೋ, ದೆಹಲಿಯ JNUವಿನಲ್ಲೋ, ಉತ್ತರ ಭಾರತದಲ್ಲೆಲ್ಲೋ ಕಾಣಿಸಿಕೊಳ್ಳುತ್ತಿದ್ದ ಈ Urban Naxalರು ಈಗ ನಮ್ಮ ಬೆಂಗಳೂರಿಗೂ ಕಾಲಿಟ್ಟಿದ್ದಾರೆ. ಕಾಶ್ಮೀರದಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಗಲಭೆ ಶುರುವಾಗಿ ಒಂದು ವಾರ ಕಳೆಯುವಷ್ಟರಲ್ಲೇ (ಜುಲೈ15,16) We Stand with Kashmir ಎನ್ನುವ ಹೆಸರಿನೊಂದಿಗೆ ಬೆಂಗಳೂರಿನ ಟೌನ್ ಹಾಲ್ ಮುಂದೆ ನಿಂತು “ಕಾಶ್ಮೀರದ ಆಜಾದಿ” ಕೇಳಲು ಹೊರಟಿದ್ದ ಈ ಅರ್ಬನ್ ನಕ್ಸಲರ ಆಸೆಗೆ ನಾವೊಂದಿಷ್ಟು ಜನರು ಸೇರಿ ತಣ್ಣಿರೇರಚಿದ್ದೆವು. ಅದಾದ ನಂತರ, ‘ತಾತ್ಕಾಲಿಕವಾಗಿ’ ನಾವು ಅವರನ್ನು ತಡೆದಿದ್ದೇವೆ ಅಂತಲೇ ನಾನು ಬರೆದಿದ್ದೆ. ಆ ಆತಂಕ ನಿಜವೆಂಬಂತೆ ಮೊನ್ನೆ ಆಗಸ್ಟ್ 13ರಂದು ಅಮ್ನೆಸ್ಟಿ ಇಂಡಿಯಾ ಎಂಬ NGO ಹೆಸರಿನಡಿಯಲ್ಲಿ, ಕಳ್ಳರೆಲ್ಲಾ ಸಂತೆಯಲ್ಲಿ ಒಂದಾಗುವಂತೆ ಬಂದು ಸೇರಿಕೊಂಡಿದ್ದಾರೆ. ಮತ್ತಷ್ಟು ಓದು 
ನೀನ್ಯಾರಿಗಾದೆಯೋ ಎಲೆ ಮಾನವ!
ಇತ್ತೀಚೆಗೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಲ್ಲಿ ಗೋರಕ್ಷಕರಿಂದ ದಲಿತರು ಹಾಗೂ ಮುಸ್ಲಿಂ ಸ್ತ್ರೀಯರ ಮೇಲೆ ಹಲ್ಲೆಗಳು ನಡೆದ ಪ್ರಕರಣಗಳು ವರದಿಯಾಗಿ ಸುದ್ದಿಯಾದವು. ನಂತರ ಇದಕ್ಕೆ ಪ್ರತಿಕ್ರಿಯೆಯಾಗಿ ನರೇಂದ್ರ ಮೋದಿಯವರಿಂದ ಖಂಡನೆಯ ಮಾತುಗಳು ಕೂಡ ಬಂದವು. ನರೇಂದ್ರ ಮೋದಿಯವರ ಖಂಡನೆಗೆ ಹಿಂದುತ್ವದವರಿಂದ ಹಾಗೂ ಪ್ರಗತಿಪರರಿಂದ ಪ್ರತಿಕ್ರಿಯೆಗಳೂ ಬಂದಿವೆ. ನರೇಂದ್ರ ಮೋದಿಯವರ ಹೇಳಿಕೆ ಯಾವುದೇ ಕಾರಣಕ್ಕೆ ಬಂದಿರಲಿ, ಈ ಗೋರಕ್ಷಣೆಯ ರಾಜಕೀಯವು ಸೃಷ್ಟಿಸುತ್ತಿರುವ ಸಮಸ್ಯೆಗಳ ಕುರಿತು ಹಿಂದುತ್ವದ ಮುಂದಾಳುವೇ ಈ ರೀತಿ ಹೇಳಿಕೆ ನೀಡುವ ಅಗತ್ಯವಂತೂ ಖಂಡಿತಾ ಇತ್ತು. ಇಂದು ಹಿಂದುತ್ವ ರಾಜಕೀಯ ಧುರೀಣರನ್ನು ಹಾಗೂ ಹೋರಾಟಗಾರರನ್ನು ನೋಡಿದರೆ ಒಂದೋ ಹಿಂದೂಸಂಸ್ಕೃತಿ, ಗೋವು, ಪೂಜಾಸ್ಥಳಗಳು, ದೇವತೆಗಳು, ಧಾರ್ಮಿಕ ಆಚರಣೆ ಇವೆಲ್ಲ ಇವರಿಗೆ ಸಾಂಸ್ಕೃತಿಕ ಕಾಳಜಿಗಿಂತ ರಾಜಕೀಯದ ಸರಕುಗಳಾಗಿಬಿಟ್ಟಿವೆ, ಇಲ್ಲಾ, ಭಾರತೀಯ ಸಂಸ್ಕೃತಿಯ ಕುರಿತು ಇವರಿಗೆ ತಪ್ಪು ತಿಳಿವಳಿಕೆಗಳಿವೆ. ಹಾಗಾಗಿ ಈ ರಾಜಕೀಯವು ನಮ್ಮ ಜನರಿಗೆ ಹಾಗೂ ದೇಶಕ್ಕೆ ಏಕೆ ಬೇಕು ಎಂಬ ಪರಾಮರ್ಶೆ ಕೂಡ ಜೊತೆಜೊತೆಯಲ್ಲೇ ನಡೆಯಬೇಕಾದ ಅಗತ್ಯವಿದೆ. ಇಲ್ಲದಿದ್ದಲ್ಲಿ ಈ ರಾಜಕೀಯವು ಜನರಿಂದ ದೂರವಾಗಿ, ಜನಕಂಟಕವಾಗಿ ಪರಿಣಮಿಸುವ ಸಾಧ್ಯತೆ ಇರುತ್ತದೆ. ಮತ್ತಷ್ಟು ಓದು 
ಎನ್ಜಿಓ: ಪರದೆ ಹಿಂದಿನ ಕತೆ
– ರೋಹಿತ್ ಚಕ್ರತೀರ್ಥ
ನರೇಂದ್ರ ಮೋದಿಯ ಬಿಜೆಪಿ ಸರಕಾರ 2014ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ಮಾಡಿದ ಮೊದಲ ಕೆಲಸವೇನೆಂದರೆ ಅದುವರೆಗೆ ಭಾರತದಲ್ಲಿ ಬೇರುಬಿಟ್ಟು ಹೆಮ್ಮರಗಳೂ ಹೆಮ್ಮಾರಿಗಳೂ ಆಗಿ ವಿಜೃಂಭಿಸುತ್ತಿದ್ದ ಎನ್ಜಿಓಗಳಿಂದ ಅವುಗಳ ಹಣಕಾಸು ವ್ಯವಹಾರಗಳ ಲೆಕ್ಕ ಕೇಳಿದ್ದು ಮತ್ತು ಹಾಗೆ ಲೆಕ್ಕ ಕೊಡದೆ ಅಂಗಡಿ ತೆರೆದಿರುವ ಎಲ್ಲ ಎನ್ಜಿಓಗಳಿಗೂ ಬಾಗಿಲು ಹಾಕಿಸಿ ಬೀಗ ಜಡಿಯುತ್ತೇನೆಂದು ಖಡಕ್ ಸೂಚನೆ ಇತ್ತಿದ್ದು. ಯಾವ್ಯಾವುದೋ ಬೇನಾಮಿ ಹೆಸರು ಮತ್ತು ಖಾತೆಗಳಿಂದ ಧನಸಹಾಯ ಪಡೆಯುತ್ತ ಆರಾಮಾಗಿದ್ದ ಎನ್ಜಿಓಗಳಿಗೆ ಕೇಂದ್ರ ಸರಕಾರ ಹೀಗೆ ಚಾಟಿ ಬೀಸತೊಡಗಿದ್ದೇ ಕಣ್ಣುಕತ್ತಲೆ ಬಂದಂತಾಯಿತು. ಕೇಂದ್ರದ ಗೃಹಖಾತೆ 2015ರ ಎಪ್ರೀಲ್ನಲ್ಲಿ ಗ್ರೀನ್ಪೀಸ್ ಎಂಬ ಅಂತಾರಾಷ್ಟ್ರೀಯ ಎನ್ಜಿಓದ ಮಾನ್ಯತೆ ರದ್ದುಮಾಡಿದ್ದೇ ತಡ, ಇನ್ನು ಕೆಲವೇ ದಿನಗಳಲ್ಲಿ ತಮ್ಮ ಬುಡಕ್ಕೂ ಕೊಡಲಿಯೇಟು ಬೀಳುವುದು ಖಚಿತವೆಂದು ತಿಳಿದ ಉಳಿದ ಎನ್ಜಿಓಗಳು ಚಿರೋಬರೋ ಅಳತೊಡಗಿದವು. ಬಿಲಕ್ಕೆ ಹೊಗೆ ಹಾಕಿದಾಗ ದಂಶಕಗಳು ದಿಕ್ಕಾಪಾಲಾಗಿ ಹೊರಗೋಡಿಬರುವುದು ಸಾಮಾನ್ಯವೇ ತಾನೇ? ಗ್ರೀನ್ಪೀಸ್ ಸಂಸ್ಥೆಗೆ ಬರೆ ಎಳೆದೊಡನೆ ಫೋರ್ಡ್ ಫೌಂಡೇಶನ್, ಆಮ್ನೆಸ್ಟಿ ಇಂಟರ್ನ್ಯಾಷನಲ್, ವಿಶ್ವಸಂಸ್ಥೆ ಎಲ್ಲವೂ ಕೋರಸ್ನಲ್ಲಿ ಕೂಗು ಹಾಕಿದವು. ಗ್ರೀನ್ಪೀಸ್ ಮತ್ತು ಉಳಿದ ದೇಶದ್ರೋಹಿಗಳ ನೆಟ್ವರ್ಕ್ ಹೇಗಿದೆ ಎಂಬುದನ್ನು ಯಾವ ತನಿಖೆಯೂ ಇಲ್ಲದೆ ಸರಕಾರಕ್ಕೆ ನೋಡಲು ಅವಕಾಶವಾಯಿತು. ನಂಬಿದರೆ ನಂಬಿ, ಆ ಕಾಲಕ್ಕೆ ಭಾರತದಲ್ಲಿ ಯಾರ ನಿಯಂತ್ರಣ ಇಲ್ಲದೆ ಸಿಕ್ಕಸಿಕ್ಕ ಮೂಲಗಳಿಂದ ಧನಸಹಾಯ ಪಡೆದುಕೊಂಡು ಆಯಾ ವ್ಯಕ್ತಿ/ಸಂಸ್ಥೆಗಳಿಗೆ ಬೇಕಾದಂತೆ ಕೆಲಸ ಮಾಡಿಕೊಡುತ್ತಿದ್ದ ಎನ್ಜಿಓಗಳ ಸಂಖ್ಯೆ ಒಟ್ಟು 42,273! ಮತ್ತಷ್ಟು ಓದು 
ಅಂದು ಜೆ ಎನ್ ಯು, ಇಂದು ಬೆಂಗಳೂರು
– ತನ್ಮಯೀ ಪ್ರೇಮ್ ಕುಮಾರ್
ಜೆಎನ್ಯುನಲ್ಲಿ ನಡೆದ ದೇಶದ್ರೋಹದ ಕೆಲಸಗಳು, ಘೋಷಣೆಗಳು, ಬೌದ್ಧಿಕ ದಾರಿದ್ರ್ಯತನವನ್ನು, ವೈಚಾರಿಕ ಗುಲಾಮಿತನದ ಪರಿಸ್ಥಿತಿ ಕಂಡು ಮರುಗಿದ್ದೆ. ಎಷ್ಟೋ ಅಸಹನೆಯ ರಾತ್ರಿಗಳನ್ನು ನಿದ್ದೆಯಿಲ್ಲದೆ ಕಳೆದಿದ್ದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಭಟನೆ, ವಿಚಾರ ಸಂಕಿರಣ, ಆಂದೋಲನದ ಭಾಗವಾಗಿದ್ದೆ ಕೂಡ. ಆದರೆ ಶಾಂತಿಪ್ರಿಯ ಬೆಂಗಳೂರಿನಲ್ಲಿ ಇಂಥದೇ ಘಟನೆ ನಡೆಯಬಹುದೆಂಬ ಕಲ್ಪನೆ ಕನಸಿನಲ್ಲೂ ಬಂದಿರಲಿಲ್ಲ. ಮೊನ್ನೆ ಜೆಎನ್ಯು ವಿವಿಯ ಸ್ನೇಹಿತೆಯೊಬ್ಬಳು ಸಿಕ್ಕಾಗಲೂ ಕರ್ನಾಟಕ ಇಂಥ ಘಟನೆಗಳಿಂದ ಮುಕ್ತವಾಗಿದೆ ಎಂಬ ಗರ್ವದಿಂದ ಮಾತನಾಡಿದ್ದೆ. ಮೊನ್ನೆಯವರೆಗೆ ಎಲ್ಲರ ನಂಬಿಕೆಯೂ ಅದೇ ಆಗಿತ್ತು. ಆದರೆ ಆಗಸ್ಟ್ 13ರ ಸಂಜೆ ಭಾರತ 70ನೇ ಸ್ವಾತಂತ್ರ್ಯ ಸಂಭ್ರಮದ ಹೊಸ್ತಿಲಲ್ಲಿ ನಿಂತ ಸಂದರ್ಭದಲ್ಲಿ ನಮ್ಮ ವಿಶ್ವಾಸಕ್ಕೆ, ನೆಮ್ಮದಿಯ ಬಾಳಿಗೆ ಕೊಡಲಿ ಪೆಟ್ಟು ಬೀಳುವಂತ ಘಟನೆ ನಡೆದಿದೆ. ಮತ್ತಷ್ಟು ಓದು 
ಕನ್ನಡದ ಮೊದಲ ಕೋಮುವಾದಿ ಈ ಮುಮ್ಮಡಿ ಬಲ್ಲಾಳ ವೀರ!
– ಸಂತೋಷ್ ತಮ್ಮಯ್ಯ
ಕ್ರಿ.ಶ ೧೩೧೦. ಅದು ಮುಸಲ್ಮಾನರ ರಂಜಾನ್ ತಿಂಗಳಿನ ೨೨ನೇ ದಿನ, ಭಾನುವಾರ. ಆ ಪವಿತ್ರ ತಿಂಗಳಿನ ೨೧ ದಿನಗಳೂ ಮುಸಲ್ಮಾನರು ದಕ್ಷಿಣ ಭಾರತದಲ್ಲಿ ನಿರಂತರ ಲೂಟಿ ನಡೆಸಿದ್ದರು. ಕಾಫಿರರ ಕೊಲೆ ಮಾಡಿದ್ದರು, ವಿಗ್ರಹ ಭಂಜನೆ ನಡೆಸಿದ್ದರು, ಮತಾಂತರಗಳು ನಡೆದಿದ್ದವು.
ರಂಜಾನಿನ ೨೨ನೇ ದಿನದಂದು ಅವರು ಲೂಟಿಗೆ ಆರಿಸಿಕೊಂಡದ್ದು ಶ್ರೀಮಂತ ದ್ವಾರಸಮುದ್ರವನ್ನು. ಮಲ್ಲಿಕಾಫರ್ ಎಂಬ ಒಂದು ಕಾಲದ ಬ್ರಾಹ್ಮಣ ಮತಾಂತರವಾದೊಡನೆಯೇ ವಿಪರೀತ ಕ್ರೂರಿಯೂ, ಮಾತೃ ಧರ್ಮದ ದ್ವೇಷಿಯೂ ಆಗಿ ಬದಲಾಗಿದ್ದ. ಹಿಂದೂ ಧರ್ಮದ ಯಾವ ನರವನ್ನು ಮೀಟಿದರೆ ಲಾಭ ಎಂಬುದನ್ನು ಉಳಿದ ದಾಳಿಕೋರರಿಗಿಂತ ಆತ ಚೆನ್ನಾಗಿ ಬಲ್ಲವನಾಗಿದ್ದ. ಅಲ್ಲಾವುದ್ದೀನ್ ಖಿಲ್ಜಿಯ ಕೂಲಿ ಮಾಡುತ್ತಿದ್ದ ಆತ ದಣಿಯನ್ನು ಮೆಚ್ಚಿಸಲು ಏನು ಮಾಡಲೂ ಹಿಂಜರಿಯುತ್ತಿರಲಿಲ್ಲ. ದ್ವಾರಸಮುದ್ರವನ್ನು ಲೂಟಿಮಾಡಬೇಕು ಎಂದು ಆತನೇ ಮುಹೂರ್ತ ನಿಗದಿಪಡಿಸಿದ್ದ. ಏಕೆಂದರೆ ಆ ಹೊತ್ತಲ್ಲಿ ದ್ವಾರಸಮುದ್ರದ ರಾಜ ರಾಜಧಾನಿಯಲ್ಲಿರಲಿಲ್ಲ. ನಿಶ್ಚಯವಾದಂತೆ ದ್ವಾರಸಮುದ್ರದ ಮೇಲೆ ದಾಳಿಯಾಯಿತು. ನಿರಂತರ ೧೩ ದಿನ ಲೂಟಿ ನಡೆಯಿತು. ದೇವಸ್ಥಾನಗಳು ಧ್ವಂಸವಾದವು. ಅತ್ತ ರಾಜ ರಾಜಧಾನಿಗೆ ದೌಢಾಯಿಸಿ ಬಂದಾಗ ಕಾಲ ಮಿಂಚಿಹೋಗಿತ್ತು. ಮಲ್ಲಿಕಾಫರನಿಗೆ ಶರಣಾಗದೆ ಆತನಿಗೆ ಬೇರೆ ದಾರಿಯಿರಲಿಲ್ಲ. ದುಷ್ಟ ಮಲ್ಲಿಕಾಫರ್ ಆತನಿಗೆ ಎರಡು ಆಯ್ಕೆಗಳನ್ನು ನೀಡಿದ. ಒಂದೋ ಇಸ್ಲಾಮಿಗೆ ಮತಾಂತರವಾಗಬೇಕು. ಇಲ್ಲವೇ ತಮಿಳು ಪಾಂಡ್ಯರನ್ನು ಗೆಲ್ಲಲು ಸಹಾಯ ಮಾಡಬೇಕು ಮತ್ತು ದ್ವಾರಸಮುದ್ರದಲ್ಲಿ ಮುಸಲ್ಮಾನ ಸೈನ್ಯವನ್ನು ಇರಿಸಿಕೊಳ್ಳಬೇಕು. ರಾಜ ಮತಾಂತರಕ್ಕೆ ಒಪ್ಪಿಗೆ ನೀಡಲಿಲ್ಲ. ಉಳಿದ ಷರತ್ತುಗಳಿಗೆ ಒಪ್ಪಿದ. ಮಲ್ಲಿಕಾಫರ್ ದ್ವಾರಸಮುದ್ರದ ಸೈನ್ಯದ ಬಲದಿಂದ ತಮಿಳು ಪಾಂಡ್ಯರನ್ನು ಗೆದ್ದು ಲೂಟಿಗೈದು ದೆಹಲಿಗೆ ಹೊರಟುಹೋದ. ಮತ್ತಷ್ಟು ಓದು 
ವೇದಾಂತದ ಕಥೆಗಳ ಆಧಾರದಲ್ಲಿ ಇತಿಹಾಸ ಶಬ್ದದತ್ತ ಕಿರುನೋಟ
– ವಿನಾಯಕ ಹಂಪಿಹೊಳಿ
ಹಿಸ್ಟರಿ ಎನ್ನುವ ಶಬ್ದದ ಸ್ವರೂಪವು ಬೈಬಲ್ಲಿನ ಥಿಯಾಲಜಿಯಲ್ಲಿ ನಮಗೆ ಕಾಣಸಿಗುತ್ತದೆ. ಪ್ರತಿಯೊಂದು ಸಮಾಜಕ್ಕೂ ಗಾಡ್ ತನ್ನ ಸಂದೇಶಗಳನ್ನು ಪ್ರವಾದಿಗಳ ಮೂಲಕ ತಲುಪಿಸಿರುತ್ತಾನೆ. ಇದು ಒಂದಾನೊಂದು ಕಾಲದಲ್ಲಿ ಆ ಸಮಾಜದಲ್ಲಿ ನಡೆದಿರುವ ಘಟನೆಯಾಗಿರುತ್ತದೆ. ಆ ಸಮಾಜದ ಜನರನ್ನು ಅರಿತುಕೊಳ್ಳಲು ಹಾಗೂ ಅಲ್ಲಿನ ಜನರು ಆಚರಿಸುವ ಪದ್ಧತಿಗಳಲ್ಲಿ ರಿಲಿಜಿಯಸ್ ಯಾವುದು ಎಂದು ಗುರುತಿಸಿಕೊಳ್ಳಲು ಈ ಸಂದೇಶಗಳು ಅಗತ್ಯ. ಹೀಗಾಗಿ ಸಮುದಾಯವೊಂದನ್ನು ಅಧ್ಯಯನ ಮಾಡುವಾಗ ಆ ಸಮುದಾಯದಲ್ಲಿ ಗಾಡ್ ಯಾವಾಗ ಮಧ್ಯಪ್ರವೇಶಿಸಿ ತನ್ನ ಸಂದೇಶಗಳನ್ನು ನೀಡಿದ್ದ ಎನ್ನುವುದನ್ನು ಕಂಡುಕೊಳ್ಳುವದು ಅಗತ್ಯ. ಹಿಸ್ಟರಿ ಎನ್ನುವ ಅಧ್ಯಯನ ಕ್ರಮವು ಈ ಪ್ರಕ್ರಿಯೆಯಿಂದಲೇ ಹುಟ್ಟಿರುತ್ತದೆ. ಲಭ್ಯವಿರುವ ಶಾಸನಗಳ ಆಧಾರದಲ್ಲಿ ಸಮಂಜಸವಾದ ವಿವರಣೆಯೊಂದನ್ನು ಕಟ್ಟಿಕೊಡುವುದೇ ಹಿಸ್ಟರಿಯ ಧ್ಯೇಯ. ಹಿಸ್ಟರಿ ಶಬ್ದಕ್ಕೆ ಪರ್ಯಾಯವಾಗಿ ನಾವು ಇತಿಹಾಸ ಎಂಬ ಶಬ್ದವನ್ನು ಬಳಸುತ್ತ ಬಂದಿದ್ದೇವೆ. ಆದರೆ ವಸಾಹತು ಪ್ರಜ್ಞೆಗೂ ಪೂರ್ವದಲ್ಲಿ ಇತಿಹಾಸ ಎಂಬ ಶಬ್ದವು ಏನನ್ನು ಪ್ರತಿನಿಧಿಸುತ್ತಿತ್ತು? ಸದ್ಯಕ್ಕೆ ಉಪನಿಷತ್ತುಗಳ ಕಥೆ ಮತ್ತು ಅದಕ್ಕೆ ಶಂಕರಾಚಾರ್ಯರು ಬರೆದ ಭಾಷ್ಯಗಳನ್ನು ಆಧಾರವಾಗಿಟ್ಟುಕೊಂಡು ಚರ್ಚಿಸೋಣ. ಮತ್ತಷ್ಟು ಓದು 
ನಂಬಿಕೆ, ನಿಷೇಧ, ಆಚರಣೆಗಳಲ್ಲಿ ಆಹಾರ
ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿ ಕುರಿತು ಬಹಳಷ್ಟು ಚರ್ಚೆ ರಾಷ್ಟ್ರಮಟ್ಟದಲ್ಲಿ ಆಗಾಗ ನಡೆಯುತ್ತದೆ. ದನ ಕದಿಯುವ ಹಾಗೂ ಅದನ್ನು ರಕ್ಷಿಸುವ ಗುಂಪುಗಳ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಪ್ರಧಾನಿ ಮೋದಿ “ಸೋ ಕಾಲ್ಡ್ ಗೋರಕ್ಷಕರ” ವಿರುದ್ಧ ಗುಡುಗುತ್ತಿದ್ದಂತೆಯೇ ಮತ್ತೆ ಇಂಥ ಚರ್ಚೆ ಶುರುವಾಗಿದೆ. ಈ ಚರ್ಚೆಗಳಲ್ಲಿ ಮೇಲ್ನೋಟದಲ್ಲಿ ಬಹುಸಂಖ್ಯಾತರ ಆಹಾರ ಕ್ರಮವನ್ನು ಅಲ್ಪ ಸಂಖ್ಯಾತರ ಮೇಲೆ ಹೇರುವ ಹುನ್ನಾರ; ದಲಿತರು ಹಾಗೂ ಅಲ್ಪಸಂಖ್ಯಾತರ ಆಹಾರ ಪದ್ಧತಿಯನ್ನು ಪುರೋಹಿತಶಾಹಿ ವ್ಯವಸ್ಥೆ ಆಳುತ್ತಿರುವ ಸಂಕೇತ ಎಂದೂ, ಬ್ರಾಹ್ಮಣರನ್ನು ಬಿಟ್ಟರೆ ಬೇರೆ ಸಾವಿರಾರು ಜಾತಿ-ಸಮುದಾಯಗಳಿಗೆ ಆಹಾರ ಸಂಬಂಧಿ ವಿಧಿ-ನಿಷೇಧಗಳೇ ಇಲ್ಲ ಎಂಬಂತೆಯೂ ಬಿಂಬಿಸಲಾಗುತ್ತಿದೆ. ಅಷ್ಟೇ ಅಲ್ಲ, ಆಹಾರ ಸೇವಿಸುವಾಗಲೂ ಬ್ರಾಹ್ಮಣರು ಮಾತ್ರ ಅನ್ಯರನ್ನು ಸಹಪಂಕ್ತಿ ಭೋಜನದಲ್ಲಿ ಕೂರಿಸಿಕೊಳ್ಳುವುದಿಲ್ಲ, ಉಳಿದವರಲ್ಲಿ ಇಂಥ ಸಂಪ್ರದಾಯವಿಲ್ಲ ಎಂಬಂತೆಯೂ ಬಿಂಬಿಸುತ್ತ, ಇವೆಲ್ಲ ಜಾತಿಪದ್ಧತಿಯನ್ನು ಬಲಗೊಳಿಸುವ ಪುರೋಹಿತಶಾಹಿಯ ಹುನ್ನಾರ ಎಂದೂ ಸರಳವಾಗಿ ವಾದಿಸಲಾಗುತ್ತದೆ. ಆದರೆ ಇವೆಲ್ಲ ಹಾಗೆ ವಾದಿಸುವವರ ವಿವಿಧ ಸಮುದಾಯಗಳ ಆಹಾರ ಸಂಬಂಧಿ ಅಜ್ಞಾನವನ್ನು ತೋರಿಸುತ್ತದೆಯಲ್ಲದೇ ಇನ್ನೇನನ್ನೂ ಅಲ್ಲ. ಇಂಥ ತಿಳಿವಳಿಕೆಯನ್ನು ತಲೆಕೆಳಗಾಗಿಸುವ ಕ್ಷೇತ್ರಾಧಾರಿತ ಅಧ್ಯಯನದ ಫಲಿತ ಹಾಗೂ ವಾಸ್ತವ ಇಲ್ಲಿದೆ. ಇದು ತುಮಕೂರು ಜಿಲ್ಲೆಯ ಸಾಂಪ್ರದಾಯಿಕ ಆಹಾರ ಪದ್ಧತಿ ಕುರಿತ ಯೋಜನೆಯೊಂದನ್ನು ಆಧರಿಸಿದೆ. ಮತ್ತಷ್ಟು ಓದು 
ಆತ್ಮಹತ್ಯೆಯಲ್ಲಿನ ಮನಸ್ತಿತಿ.
– ಗೀತಾ ಹೆಗ್ಡೆ
ಆತ್ಮಹತ್ಯೆ ಮಹಾ ಪಾಪ. ಆತ್ಮಹತ್ಯೆ ಮಾಡಿಕೊಂಡವರು, ದುರ್ಮರಣದಲ್ಲಿ ಸತ್ತವರು ಅಂತರ್ ಪಿಶಾಚಿಯಾಗಿ ಅಲೆಯುತ್ತಾರಂತೆ. ಅವರಿಗೆ ಇಹದಲ್ಲೂ ಪರದಲ್ಲೂ ಸ್ಥಾನವಿಲ್ಲವಂತೆ.. ದೆವ್ವವಾಗಿ ಅಲೆಯುತ್ತಾರಂತೆ, ಹಾಗಂತೆ ಹೀಗಂತೆ ಅನ್ನುವ ಕಥೆಗಳು ಚಿಕ್ಕಂದಿನಿಂದ ನನ್ನ ತಲೆ ಹೊಕ್ಕಿ ಶಾಶ್ವತವಾಗಿ ನೆಲೆಯೂರಿದ್ದು ಬದುಕನ್ನು ಎದುರಿಸುವ ಛಲಕ್ಕೆ ನಾಂದಿಯಾಗಿರಬಹುದೇ ಅನ್ನುವ ಸಣ್ಣ ಗುಮಾನಿ ಕಾಡಿದ್ದು ಇತ್ತೀಚಿನ ಘಟನೆಗಳನ್ನು ನೋಡಿದಾಗ, ಬರಹಗಳನ್ನು ಓದಿದಾಗ ನೆನಪುಗಳು ಹೆಡೆಯೆತ್ತಿ ನನ್ನ ಸ್ವಂತ ಅನುಭವ ಬರೆಯಲು ಪ್ರೇರೇಪಿಸಿತು. ಆ ಒಂದು ಮನಸ್ಥಿತಿ ಹೇಗಿರುತ್ತದೆ ಎನ್ನುವುದು ಈ ಲೇಖನದ ತಾತ್ಪರ್ಯ. ಮತ್ತಷ್ಟು ಓದು 
ಎಲ್ಲಿಯ ಹವಾಲ್ದಾರ್ ಜಪ್ಪು? ಎಲ್ಲಿಯ ಸದ್ದಾಂ ಹುಸೇನ್?
– ಸಂತೋಷ್ ತಮ್ಮಯ್ಯ
ಮೂರು ವರ್ಷದ ಹಿಂದೆ ಇಂಥದ್ದೇ ಒಂದು ಮಳೆಗಾಲದಲ್ಲಿ ಹವಾಲ್ದಾರ್ ಜಪ್ಪು ಬೆಂಗಳೂರಿನಲ್ಲಿ ಸಿಕ್ಕಿದ್ದರು. ಅಂದು ಜಪ್ಪು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲು ತಮ್ಮ ಮೆಡಲುಗಳ ಸಮೇತ ಬೆಂಗಳೂರಿಗೆ ಬಂದುಬಿಟ್ಟಿದ್ದರು. ಅದಾದ ನಂತರ ಮತ್ತೆ ಮೊನ್ನೆ ಸಿಕ್ಕಿದ್ದರು. ಸಿಕ್ಕವರು ಈಗ ತಾನು ಊರಲ್ಲಿಲ್ಲವೆಂದೂ ದಕ್ಷಿಣ ಕೊಡಗಿನ ತಾವಳಗೇರಿ ಶೆಟ್ಟಿಗೇರಿ ಎಂಬ ಊರಲ್ಲಿರುವುದಾಗಿಯೂ ಬಾಡಿಗೆ ಮನೆಯೊಂದನ್ನು ಹಿಡಿದು ಮಗಳನ್ನು ಪ್ರೈಮರಿ ಓದಿಸುತ್ತಿದ್ದೇನೆಂದು ಹೇಳಿದ್ದರು. ಪುರುಸೋತ್ತಾದಾಗ ಒಮ್ಮೆ ಮನೆಗೆ ಬರಬೇಕೆಂದೂ ಹೇಳಿದ್ದರು. ಮೂರು ವರ್ಷಗಳ ಹಿಂದೆ ಇದ್ದ ಆ ದೊಡ್ಡ ಸ್ವರದ ರಭಸ ಕಿಂಚಿತ್ತೂ ಮಾಸಿರಲಿಲ್ಲ. ಗಡಸುತನ ಮಾಯವಾಗಿರಲಿಲ್ಲ. ಆದರೆ ಮಾತುಮಾತಿಗೆ ಆಕ್ರೋಶಗೊಳ್ಳುವ ಅವರ ಜಾಯಮಾನ ಮೂರು ವರ್ಷಗಳಲ್ಲಿ ಮೂರುಪಟ್ಟು ಹೆಚ್ಚಿದಂತೆ ಕಂಡುಬಂತು. ಮತ್ತಷ್ಟು ಓದು 
ಅಪರಾಧಕ್ಕೆ ಜಾತಿ ಬಣ್ಣ ಬಳಿಯುವುದೇಕೆ?
– ರಾಕೇಶ್ ಶೆಟ್ಟಿ
ಕಳೆದ ವಾರ ಎರಡು ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾದವು. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಬಿಎಸ್ಪಿ ನಾಯಕಿ ಮಾಯಾವತಿಯವರ ಬಗ್ಗೆ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ದಯಾಶಂಕರ್ ಮಾಡಿದ ಕೆಟ್ಟ ಟೀಕೆಯ ಪ್ರಕರಣ ಮೊದಲನೆಯದು.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ದಯಾಶಂಕರ್ ಮೇಲೆ BJP ಪಕ್ಷ ಆರು ವರ್ಷಗಳ ಕಾಲ ಉಚ್ಚಾಟನೆಯಂತಹ ಕಠಿಣ ಕ್ರಮ ಕೈಗೊಂಡಿದೆ. ಅವರ ಮೇಲೆ FIR ಕೂಡ ದಾಖಲಾಗಿದೆ. ಆದರೆ, ದಯಾಶಂಕರ್ ಅವರ ಮಗಳನ್ನು, ಮಡದಿಯನ್ನು ನಮಗೊಪ್ಪಿಸಿ ಎಂದಿರುವ BSP ನಾಯಕ ನಸೀಮುದ್ದೀನ್ ವಿರುದ್ಧ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಎಷ್ಟು ಕೇಸುಗಳು ದಾಖಲಾಗಿವೆ ? ದಯಾಶಂಕರ್ ಅಕ್ರಮ ಸಂತಾನ ಎನ್ನುವ ಮೂಲಕ, ದಯಾಶಂಕರ್ ಅವರ ತಾಯಿಗೆ ಅವಮಾನ ಮಾಡಿದ BSP ಶಾಸಕಿ ಉಷಾ ಚೌಧರಿ ವಿರುದ್ಧ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಎಷ್ಟು ಕೇಸುಗಳು ದಾಖಲಾಗಿವೆ ? ದಯಾಶಂಕರ್ ನಾಲಗೆ ಕತ್ತರಿಸಿ ತಂದವರಿಗೆ ಐವತ್ತು ಲಕ್ಷ ಕೊಡುತ್ತೇನೆ ಎಂದ BSP ಪಕ್ಷದ ನಾಯಕಿ ಜನ್ನತ್ ಜಹಾನ್ ಮೇಲೆ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಕ್ರಮ ಕೈಗೊಳ್ಳುವುದು ಪಕ್ಕಕ್ಕಿರಲಿ. ಮಾಯವತಿಯವರು, ಅವರ ಕಾರ್ಯಕರ್ತರ ಘೋಷಣೆಗಳನ್ನು ಸಮರ್ಥಿಸಿಕೊಂಡಿದ್ದಾರೆ! ಮಾಯಾವತಿಯವರಿಗಾದರೆ ಮಾತ್ರ ನೋವು, ದಯಾಶಂಕರ್ ಅವರ ತಾಯಿ, ಮಗಳು, ಹೆಂಡತಿಗಾಗುವ ನೋವು ನೋವಲ್ಲವೇ? ಮತ್ತಷ್ಟು ಓದು 




