ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

27
ಮೇ

ಹೋಮ ಹವನ ಸನಾತನ ಧರ್ಮದ ಪ್ರತೀಕ, ಅದರ ತೇಜೋವಧೆ ಡಂಭಾಚಾರಕ

– ಸಂದೀಪ್ ಶರ್ಮಾ .ಎಂ

18C9F35-356x340ಕೆಲ ದಿನಗಳ ಹಿಂದೆ ಬಂಡಾಯ ಸಾಹಿತಿಗಳಾದ ಮಾನ್ಯ ವೇಣುರವರು ಕನ್ನಡದ ದಿನಪತ್ರಿಕೆ “ವಿಶ್ವವಾಣಿ”ಯಲ್ಲಿ ಮತ್ತೂರಿನಲ್ಲಿ ನಡೆದ ಸೋಮಯಾಗದ ಬಗ್ಗೆ ತಮ್ಮ ಕಪೋಲಕಲ್ಪಿತ ನಿಲುವನ್ನು ವ್ಯಕ್ತಪಡಿಸಿದ್ದಾರೆ. ವೇಣುರವರು ವೈಭವದ ಮಾತುಗಳಲ್ಲೇ ಮತ್ತು ತಮ್ಮ ಬರಹಗಳಿಂದ ವಾಚಕವೃಂದವನ್ನು ಆಕರ್ಷಿಸಬಹುದು ಎಂದು ತಿಳಿದಿದ್ದರೆ ಅದು ಅವರ ಭ್ರಮಾಲೋಕದ ಪರಮಾವಧಿ ಎಂದರೆ ತಪ್ಪಾಗಲಾರದು. ಬುದ್ಧುಜೀವಿಗಳ ಮುಖದ ರಾಡಿಯನ್ನು ಇವರು ಒರೆಸಲು ಹರಸಾಹಸ ಪಡುತ್ತಿದ್ದಾರೆ ಹಾಗು ಅವರುಗಳ ಗೊಡ್ಡುತನದ ಧೋರಣೆಗಳನ್ನು ಎತ್ತಿ ಹಿಡಿಯಲು ನೋಡುತ್ತಿದ್ದಾರೆ. ಆದರೆ ವಾಚಕವೃಂದದವರನ್ನು ಬೆಪ್ಪು ಮಾಡಲಿಕ್ಕೆ ಸಾಧ್ಯವಿಲ್ಲವೆಂಬುದು ಅವರಿಗೆ ತಿಳಿದಂತಿಲ್ಲ. ಮತ್ತೂರಿನಲ್ಲಿ ಸಂಸ್ಕೃತ ಭಾಷೆ ಮಾತನಾಡಿದರೆ ಇವರ ಗಂಟು ಏನು ಹೋಗುವುದೋ ಗೊತ್ತಿಲ್ಲ, ಇಲ್ಲಿನವರು ಮಾತನಾಡುವ ಭಾಷೆಗು ಹಾಗು ಅಲ್ಲಿ ನಡೆದ ಯಾಗಕ್ಕೂ ಯಾವ ಬಾದರಾಯಣ ಸಂಬಂಧ. ಸಂಸ್ಕೃತ ಮೃತ ಭಾಷೆ ಎಂದು ತಿಳಿದಿರುವ ಇವರು ಆ ಭಾಷೆಯಿಂದಲೇ ಮಿಕ್ಕೆಲ್ಲ ಭಾಷೆಗಳು ಉದ್ಭವಿಸಿದವು ಎಂಬುದನ್ನು ಇವರು ಮನಗಂಡಂತಿಲ್ಲ. ಸುಮಾರು ಅರವತ್ತು ಲಕ್ಷಕ್ಕೂ ಹೆಚ್ಚು ಜನ ಉಪಯೋಗಿಸುವ ಈ ಭಾಷೆಯು ಹೇಗೆ ಇವರ ಪ್ರಕಾರ ಮೃತವಾಯಿತೋ ಎಂಬುದನ್ನು ಇವರ ಅಧ್ಯಯನ ಹಾಗು ಚಿಂತನೆಯಿಂದ ತಿಳಿದುಕೊಳ್ಳಬೇಕಾಗಿದೆ. ಮತ್ತಷ್ಟು ಓದು »

24
ಮೇ

ತಲೆಕೆಟ್ಟ ಕಾನೂನುಗಳು ಮತ್ತು ಸ್ವಂತ ಬುದ್ಧಿಯಿಲ್ಲದ ಜೀವಿಗಳು

–  ರಾಕೇಶ್ ಶೆಟ್ಟಿ

ಬುದ್ಧಿಜೀವಿಗಳ ಮೂಢನಂಬಿಕೆಗಳುಇತ್ತೀಚೆಗೆ ಮತ್ತೂರಿನಲ್ಲಿ ನಡೆದ ಸೋಮಯಾಗದಲ್ಲಿ ಸಂಕೇತಿ ಬ್ರಾಹ್ಮಣರು ಮೇಕೆ ಬಲಿ ಕೊಟ್ಟು ತಿಂದರಂತೆ, ಸೋಮರಸ ಕುಡಿದರಂತೆ ಅಂತ ಪ್ರಗತಿಪರರ ವಾಣಿಯೊಂದು ಸುಳ್ಳು ಸುದ್ದಿ ಬರೆಯಿತು. ಈ ಸುದ್ದಿಯಿಂದಾಗಿ ಟೌನ್ ಹಾಲ್ ಮುಂದೆ ನಿಂತು ದನ ತಿನ್ನುವುದನ್ನು ಬೆಂಬಲಿಸುವ ಕಬಾಬ್ ಕ್ರಾಂತಿಕಾರಿಗಳಿಗೂ ಹೊಟ್ಟೆನೋವು ಕಾಣಿಸಲಾರಂಭಿಸಿತು. ಇವರನ್ನು ಕರೆಯದೇ ತಿಂದರೂ ಎಂದು ಹೊಟ್ಟೆ ನೋವಾಗಿತ್ತೋ ಏನೋ. PhD ಮಹಾಶಯನೊಬ್ಬ ಬ್ರಾಹ್ಮಣರು ಮಾಂಸ ತಿನ್ನಲು ಶುರು ಮಾಡಿದರೆ ರೇಟ್ ಜಾಸ್ತಿಯಾಗುತ್ತೆ ಅಂತ ಅಳ್ತಾ ಇದ್ದ. ಎಂತೆಂತವರೆಲ್ಲ ವಿವಿಗಳಲ್ಲಿ ಪಾಠ ಮಾಡುತ್ತಾರಪ್ಪಾ ಅನಿಸಿತು. ಎಲ್ಲಾ (ಜಾತಿ/ಪಂಗಡದ) ಬ್ರಾಹ್ಮಣರು ಸಸ್ಯಹಾರಿಗಳು ಅನ್ನೋದು “ಮೂಢನಂಬಿಕೆ”. ಸಿದ್ರಾಮಯ್ಯನವರಿಗೆ ಹೇಳಿ ಮೌಢ್ಯ ನಿಷೇಧ ಕಾಯ್ದೆಯ ಮೂಲಕ ಈ ಮೂಢನಂಬಿಕೆಯನ್ನು ನಿಷೇಧಿಸಬೇಕು. ಕಾಶ್ಮೀರಿ ಪಂಡಿತರಿಗೆ ಶಿವರಾತ್ರಿ ಹಬ್ಬದಂದು ಮಾಂಸದಡುಗೆಯೇ ವಿಶೇಷವಾದದ್ದು. ಬಂಗಾಳಿ, ಓಡಿಶಾದ ಬ್ರಾಹ್ಮಣರೂ, ಗೌಡ ಸಾರಸ್ವತ ಬ್ರಾಹ್ಮಣರಲ್ಲೂ ಮಾಂಸಹಾರಿಗಳಿದ್ದಾರೆ. ಮತ್ತಷ್ಟು ಓದು »

20
ಮೇ

ಬೀಭತ್ಸ (ಭಾಗ ೨)

ಗುರುರಾಜ್ ಕೊಡ್ಕಣಿ,ಯಲ್ಲಾಪುರ

ಭಾಗ 1 ರಿಂದ ಮುಂದುವರೆದ ಕತೆ

8149361_f260“ಎಷ್ಟು ಬೇಗ ಈ ಆಚರಣೆ ಮರುಕಳಿಸಿತು ಅಲ್ಲವಾ..”? ಎಂದವಳು ಶ್ರೀಮತಿ ಡೆಲಾಕ್ರೋಕ್ಸ್. ಅವಳ ಮಾತಿಗೆ ಸಮ್ಮತಿಸುವಂತೆ ತಲೆಯಾಡಿಸಿದ ಶ್ರೀಮತಿ ಗ್ರೇವ್ಸ್, “ಹೌದು, ಮೊನ್ನೆಮೊನ್ನೆಯಷ್ಟೇ ಕಳೆದ ವರ್ಷದ ಚೀಟಿಯೆತ್ತುವಿಕೆಯ ಆಚರಣೆ ಮುಗಿದಿತ್ತೇನೋ ಎಂದು ಭಾಸವಾಗುತ್ತಿದೆ. ಕಾಲ ಎಷ್ಟು ಬೇಗ ಸರಿದು ಹೋಗುತ್ತದಲ್ಲವಾ..’?”ಎಂದು ನುಡಿದಳು. ಅಷ್ಟರಲ್ಲಿ ಕ್ಲಾರ್ಕ್ ನ ಸರದಿ ಮುಗಿದು ಡೆಲಾಕ್ರೋಕ್ಸ್ ತನ್ನ ಪಾಳಿಗಾಗಿ ಕಾಯುತ್ತ ನಿಂತಿದ್ದ. “ಅಲ್ನೋಡು ನನ್ನ ಗಂಡನ ಸರದಿ ಬಂದೇ ಬಿಟ್ಟಿತು” ಎಂದ ಅವನ ಮಡದಿಗೆ ಒಂದು ಕ್ಷಣ ಉಸಿರು ನಿಂತ ಅನುಭವ. ಡೆಲಾಕ್ರೊಕ್ಸ್ ಚೀಟಿಯನ್ನೆತ್ತಿಕೊಂಡು ಸ್ವಸ್ಥಾನಕ್ಕೆ ಮರಳಿದ. “ಡನ್ಬರ್” ಎಂಬ ಹೆಸರು ಕೇಳುತ್ತಲೇ ಕಾಲು ಮುರಿದುಕೊಂಡು ಮನೆಯಲ್ಲಿಯೇ ಮಲಗಿದ್ದ ಡನ್ಬರನ ಮಡದಿ ನಿಧಾನವಾಗಿ ಕಪ್ಪುಪೆಟ್ಟಿಗೆಯ ಬಳಿ ನಡೆಯಲಾರಂಭಿಸಿದಳು. ಆಕೆಯನ್ನು ಗಮನಿಸಿದ ಮಹಿಳೆಯೊಬ್ಬಳು “ಧೈರ್ಯವಾಗಿ ಹೋಗು ಜೇನಿ, ಭಯ ಬೇಡ” ಎನ್ನುತ್ತ ಆಕೆಯನ್ನು ಹುರಿದುಂಬಿಸಿದಳು. “ನಮ್ಮದು ಮುಂದಿನ ಸರದಿ” ಎನ್ನುತ್ತ ಕೊಂಚ ಗಂಭೀರಳಾದಳು ಶ್ರೀಮತಿ ಗ್ರೇವ್ಸ್. ತನ್ನ ಪತಿ ಗಡಿಬಿಡಿಯಾಗಿ ಕರಿಪೆಟ್ಟಿಗೆಯತ್ತ ತೆರಳಿ ಸಮ್ಮರ್ಸನಿಗೊಂದು ನಮಸ್ಕಾರ ಹೇಳಿ, ಚೀಟಿಯನ್ನು ಎತ್ತಿದ್ದನ್ನು ದೂರದಿಂದಲೇ ಗಮನಿಸಿದಳಾಕೆ. ಸಾಕಷ್ಟು ಸಮಯ ಕಳೆದಿತ್ತು. ಅದಾಗಲೇ ಚೀಟಿಯನ್ನು ಎತ್ತುಕೊಂಡಿದ್ದ ಜನ ಚೀಟಿಯನ್ನು ತೆರೆದು ನೋಡಲಾಗದೆ, ಕುತೂಹಲವನ್ನು ತಡೆದುಕೊಳ್ಳಲಾಗದೆ ನಿಂತಲ್ಲೆ ಸಣ್ಣಗೆ ಕಂಪಿಸುತ್ತಿದ್ದರು. ಡನ್ಬರನ ಮಡದಿ ಸಹ ಕೊಂಚ ಆತಂಕದಿಂದಲೇ ತನ್ನೆರಡು ಮಕ್ಕಳೊಡಗೂಡಿ ಮೂಲೆಯೊಂದರಲ್ಲಿ ನಿಂತಿದ್ದಳು. ಅಷ್ಟರಲ್ಲಿ ಹರ್ಬರ್ಟನ ಸರದಿ ಮುಗಿದು, ಹಚ್ಚಿಸನ್ನನ ಸರದಿ ಬಂದಿತ್ತು. “ಬೇಗ ಹೋಗಿ ಚೀಟಿ ಎತ್ತು, ಬಿಲ್” ಎಂದ ಟೆಸ್ಸಿಯ ಮಾತಿನ ಶೈಲಿಯೇ ನೆರೆದಿದ್ದ ಕೆಲವರಿಗೆ ನಗು ತರಿಸಿತ್ತು. ಹಚ್ಚಿಸನ್ನನ ನಂತರ ಚೀಟಿಯೆತ್ತುವ ಸರದಿ ಜೋನ್ಸಳದ್ದು. ಮತ್ತಷ್ಟು ಓದು »

18
ಮೇ

ನಂಜುಂಡೇಗೌಡರು ಮೋದಿಗೆ ಬರೆದ ಪತ್ರಕ್ಕೊಂದು ಆತ್ಮೀಯ ಪ್ರತಿಕ್ರಿಯೆ

– ವಿಜಯ್ ಪೈ

pvec16may16editmainಸನ್ಮಾನ್ಯ ಹೊನಕೆರೆ ನಂಜುಂಡೇಗೌಡರಿಗೆ ವಂದನೆಗಳು.

ತಾವು ಪ್ರಧಾನ ಮಂತ್ರಿಗಳಿಗೆ ಪ್ರಜಾವಾಣಿ ಪತ್ರಿಕೆಯಲ್ಲಿ ಬರೆದ ‘ಆತ್ಮೀಯ’ ಪತ್ರವನ್ನು ಓದಿದ ನಂತರ ನಿಮಗೊಂದು ಆತ್ಮೀಯ ಪ್ರತಿಕ್ರಿಯೆ ನೀಡಬೇಕಾಯಿತು.

(ನಂಜುಂಡೇಗೌಡರ ಪತ್ರ : www.prajavani.net/columns/ಗೌರವಾನ್ವಿತ-ಪ್ರಧಾನಿಗೆ-ಆತ್ಮೀಯ-ಪತ್ರ )

ಮೋದಿ ಆಡಳಿತದಿಂದ ಈ ದೇಶದಲ್ಲಿ ಬಂದ ಒಂದು ಅತ್ಯುತ್ತಮ ಬದಲಾವಣೆಯೆಂದರೆ, ‘ಬುದ್ಧಿಜೀವಿ’ಗಳೆಂದು / ಪತ್ರಕರ್ತರೆಂಬ ಅಪಾದನೆಗೊಳಲ್ಪಟ್ಟವರು ಆಗಾಗ ಪ್ರಧಾನಿಗೆ ಪತ್ರ ಬರೆಯುವ, ಬುದ್ಧಿವಾದ ಹೇಳುವ/ ಎಚ್ಚರಿಸುವ ಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವುದು. ದಶಕಗಳ ಕಾಲ ಕೋಮಾಕ್ಕೆ ಒಳಗಾಗಿದ್ದ ಇವರುಗಳು, ಈಗ ಮೋದಿ ಎಂಬ ಸಂಜೀವಿನಿಯಿಂದ ಮತ್ತೆ ಜೀವಂತಗೊಂಡು ಮತ್ತೆ ‘ಸಾಕ್ಷಿ ಪ್ರಜ್ಞೆ’ಗಳಾಗಿದ್ದಾರೆ ಎಂದು ಜನ ಭಾವಿಸಿದರೆ, ನೀವೂ ಕೂಡ ಅಲ್ಲಗೆಳೆಯುವುದಿಲ್ಲ ಅಂದುಕೊಳ್ಳುತ್ತೇನೆ. ಮೊನ್ನೆ-ಮೊನ್ನೆ ಬರವನ್ನು ಹೇಗೆ ನಿರ್ವಹಿಸಬೇಕು, ಈ ವಿಷಯದಲ್ಲಿ ಸರಕಾರದ ನ್ಯೂನತೆಗಳೇನು ಎಂಬ ಬಗ್ಗೆ ನಮ್ಮ ದೇಶ ಕಂಡ ಕೆಲವು ಬಹುಮುಖ್ಯ ಸಾಕ್ಷಿಪ್ರಜ್ಞೆಗಳು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈಗ ನೀವು ಕೂಡ ಸರಕಾರದ ಎರಡನೆಯ ವರ್ಷಾಚರಣೆಯ ಸಂದರ್ಭದಲ್ಲಿ ಪತ್ರ ಬರೆದಿದ್ದೀರಿ. ತಮ್ಮ ಕಾಳಜಿಗೆ ವಂದನೆಗಳು. ಮತ್ತಷ್ಟು ಓದು »

17
ಮೇ

ಕಾಂಗ್ರೆಸ್‌ನ ವ್ಯಾಘ್ರ ದಾಳಿಗೆ ನಲುಗಿದ ಸಾಧ್ವಿ

– ಎಸ್.ಆರ್. ಅನಿರುದ್ಧ ವಸಿಷ್ಠ, ಭದ್ರಾವತಿ

sadhvi-pragya-singh.before_afterಮಾಲೇಗಾಂವ್ ಸ್ಪೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್‌ಗೆ ಕ್ಲೀನ್‌ಚಿಟ್ ನೀಡಿ ಆರೋಪಮುಕ್ತಗೊಳಿಸಲಾಗಿದೆ. ಹಾಗಾದರೆ, ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ನಿಜಕ್ಕೂ ಭಾಗಿಯಾದವರು ಯಾರು? ಸ್ಫೋಟದ ಹಿಂದಿರುವ ವ್ಯಕ್ತಿ ಹಾಗೂ ಸಂಘಟನೆಗಳು ಯಾರು ಎನ್ನುವುದರ ಕುರಿತು ಉನ್ನತ ಮಟ್ಟದ ತನಿಖೆ ನಡೆಯಬೇಕಿದ್ದು, ಈ ಕುರಿತಂತೆ ಸತ್ಯ ಹೊರಬರಬೇಕಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.

ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣಕ್ಕೀಗ ತಾರ್ಕಿಕ ಅಂತ್ಯ ದೊರೆತಿದ್ದು, ಸಾಧ್ವಿ ಪ್ರಜ್ಞಾ ಸಿಂಗ್ ಸೇರಿದಂತೆ ಆರು ಜನರ ಮೇಲೆ ಹೇರಲಾಗಿದ್ದ ಮೋಕಾ ಪ್ರಕರಣದಲ್ಲಿ ಇವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಚಾರ್ಜ್‌ಶೀಟ್ ಸಲ್ಲಿಸಿರುವ ತನಿಖಾ ಸಂಸ್ಥೆ ಎನ್‌ಐಎ ಆರೋಪಗಳಿಂದ ಕ್ಲೀನ್ ಚಿಟ್ ನೀಡಿದೆ.

ನಿಜಕ್ಕೂ ಇದು ಸತ್ಯಕ್ಕೆ ಸಂದ ಜಯ ಎಂದು ಸಂತಸ ಪಡುವ ವೇಳೆಯೇ ಈ ಸಂತಸವನ್ನು ಸಂಭ್ರಮಿಸುವ ಮನಸ್ಥಿತಿ ಹಾಗೂ ದೇಹಸ್ಥಿತಿಯಲ್ಲಿ ಸ್ವತಃ ಸಾಧ್ವಿ ಪ್ರಜ್ಞಾ ಸಿಂಗ್ ಇಲ್ಲ ಎನ್ನುವುದು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆ ತಲೆ ತಗ್ಗಿಸಬೇಕಾದ ವಿಚಾರ. ಮತ್ತಷ್ಟು ಓದು »

15
ಮೇ

ಸಿದ್ಧಾಂತಗಳ ಸಂಗ ಸಾಕಾಗಿದೆ; ದೇಶಭಕ್ತಿಯ ಸಂಘ ಬೇಕಾಗಿದೆ

– ರೋಹಿತ್ ಚಕ್ರತೀರ್ಥ

indian-flag-rallyಕನ್ನಡದಲ್ಲಿ “ತಾಯಿನಾಡು” ಪತ್ರಿಕೆಯನ್ನು ನಾಲ್ಕು ದಶಕಗಳ ಕಾಲ ನಡೆಸಿದ ಮತ್ತು ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಮೊದಲ ಚುನಾಯಿತ ಶಾಸಕನಾಗಿದ್ದ ಪಿ.ಆರ್.ರಾಮಯ್ಯ ಬನಾರಸ್ ಹಿಂದೂ ವಿಶ್ವ ವಿದ್ಯಾಲಯದಲ್ಲಿ ಕಲಿಯುತ್ತಿದ್ದ ದಿನಗಳು. ಪದವಿಯ ಅಂತಿಮ ವರ್ಷದಲ್ಲಿದ್ದರು. ದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ದಿನದಿನಕ್ಕೆ ಏರುತ್ತಿದ್ದ ಹೊತ್ತು. ಗಾಂಧಿಯ ಮಾತುಗಳನ್ನು ಕೇಳಲು ಎಲ್ಲಿಂದ ಎಲ್ಲಿಯವರೆಗೂ ಕಾಲ್ನಡಿಗೆಯಲ್ಲೋ ರೈಲಿನಲ್ಲೋ ಹೋಗಿಬರಲು ತಯಾರಾಗಿದ್ದ ರಾಮಯ್ಯನವರಿಗೆ ಒಂದು ದಿನ ವಾರಾಣಸಿಯ ಪಕ್ಕದಲ್ಲೇ ಗಾಂಧಿ ಭಾಷಣ ಏರ್ಪಾಟಾಗಿದ್ದನ್ನು ಕಂಡು ಸಕ್ಕರೆ ಹಾಲು ಕುಡಿದಷ್ಟು ಸಂತೋಷವಾಯಿತು. ಅಂದಿನ ಭಾಷಣದಲ್ಲಿ ಗಾಂಧಿ, ಹೋರಾಟಕ್ಕೆ ಭೀಮಬಲ ಬರಬೇಕಾದರೆ ವಿದ್ಯಾರ್ಥಿಗಳೆಲ್ಲರೂ ತಮ್ಮ ಶಾಲಾ-ಕಾಲೇಜುಗಳಿಂದ ಹೊರಬಂದು ಹೋರಾಟದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಮಾತು ರಾಮಯ್ಯನವರ ಮೇಲೆ ಎಷ್ಟು ಪ್ರಭಾವ ಬೀರಿತೆಂದರೆ ಅವರು ತಕ್ಷಣ ತನ್ನ ಪದವಿ ವ್ಯಾಸಂಗವನ್ನು ಮೊಟಕುಗೊಳಿಸಿ ಚಳವಳಿಯಲ್ಲಿ ಭಾಗವಹಿಸಲು ನಿರ್ಧರಿಸಿಬಿಟ್ಟರು. ಇನ್ನೊಂದೆರಡು ವಾರಗಳು ಕಳೆದರೆ ಮುಖ್ಯಪರೀಕ್ಷೆಗಳು ಪ್ರಾರಂಭವಾಗುವುದರಲ್ಲಿದ್ದವು. ಈಗ ಏಕಾಏಕಿ ವಿಶ್ವವಿದ್ಯಾಲಯ ತೊರೆದರೆ ಗತಿಯೇನು ಎಂಬ ಸಣ್ಣದೊಂದು ಅಂಜಿಕೆಯೂ ಅವರ ಮನದ ಮೂಲೆಯಲ್ಲಿತ್ತು. ನೇರವಾಗಿ ವಿವಿಯ ಕುಲಪತಿಗಳಾಗಿದ್ದ ಮದನ ಮೋಹನ ಮಾಲವೀಯರಲ್ಲಿಗೆ ಹೋಗಿ ತನ್ನ ಇಬ್ಬಂದಿತನವನ್ನು ವಿವರಿಸಿ ಏನು ಮಾಡಲಿ ಎಂದು ಮಾರ್ಗದರ್ಶನ ಕೇಳಿದರು. ಮತ್ತಷ್ಟು ಓದು »

9
ಮೇ

ರಾಜ್ಯ ಸರ್ಕಾರ ರಾಜ್ಯವನ್ನು ಏನು ಮಾಡಲು ಹೊರಟಿದೆ?

ಎಸ್.ಆರ್. ಅನಿರುದ್ಧ ವಸಿಷ್ಠ, ಭದ್ರಾವತಿ

sep1401siddaramaih1ಜಿಲ್ಲಾ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯಲ್ಲಿ ಇನ್ನಿಲ್ಲದ ತಂತ್ರಗಾರಿಕೆ ಮಾಡಿ, ತಮ್ಮ ಪಕ್ಷಕ್ಕೇ ಅಧಿಕಾರ ಬರುವಂತೆ ಮಾಡಿಕೊಂಡಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಈಗ್ಗೆ ಕೆಲವು ತಿಂಗಳ ಹಿಂದೆ ಪಂಚಾಯತ್‌ರಾಜ್ ಕಾಯ್ದೆಗೆ ತಿದ್ದುಪಡಿ ತಂದು ಜಿಪಂ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿದೆ.ಇದರ ಪರಿಣಾಮ ಈಗ ಅಧ್ಯಕ್ಷರಾಗುವವರಿಗೆ ಮಾಸಿಕ ೩೫ ಸಾವಿರ ವೇತನ, ಆತಿಥ್ಯ ಭತ್ಯೆ ೨ ಲಕ್ಷ, ಮನೆ ಬಾಡಿಗೆಗೆ ಮಾಸಿಕ ೮೦ ಸಾವಿರ, ಮನೆ ನಿರ್ವಹಣೆಗೆ ೨೦ ಸಾವಿರ, ತಿಂಗಳಿಗೆ ೧ ಸಾವಿರ ಲೀಟರ್ ಡೀಸೆಲ್, ರೈಲು ಹಾಗೂ ವಿಮಾನ ಪ್ರಯಾಣ ದರ, ದಿನ ಭತ್ಯೆ ೨ ಸಾವಿರ, ವಸತಿ ಗೃಹ ಭತ್ಯೆ ೫ ವರ್ಷಕ್ಕೆ ೧೦ ಲಕ್ಷ ದೊರೆಯುತ್ತಿದೆ. ಇದರೊಂದಿಗೆ ಅಧ್ಯಕ್ಷರಿಗೆ ಗೂಟದ ಕಾರು, ಚಾಲಕ, ಪೊಲೀಸ್ ಭದ್ರತೆ ಸಹ ಲಭ್ಯವಾಗಲಿದೆ. ಇದು ನೇರವಾಗಿ ಅವರಿಗಾಗಿ ವೆಚ್ಚ ಮಾಡುವ ಲೆಕ್ಕವಾದರೆ, ಪರೋಕ್ಷವಾಗಿ ಇನ್ನು ಲಕ್ಷಗಟ್ಟಲೆ ಇವರಿಗಾಗಿ ಸರ್ಕಾರ ವ್ಯಯ ಮಾಡುತ್ತದೆ. ಮತ್ತಷ್ಟು ಓದು »

5
ಮೇ

ಸಹಿಷ್ಣುತೆ-ಅಸಹಿಷ್ಣುತೆಗಳ ಸುತ್ತಾ…..

politics

 ಸಂಗೀತಾ ದೀಪಕ್

ಕಳೆದ ವರ್ಷವೆಲ್ಲಾ ಸುದ್ದಿ ಮಾಡಿದ, ದೇಶ ವಿದೇಶಗಳಲ್ಲಿ ತೀರ್ವ ಸಂಚಲನವನ್ನು ಉಂಟು  ಮಾಡಿದ ಪದ ಅಸಹಿಷ್ಣುತೆ. ಇದಕ್ಕೆ  ಅದೆಷ್ಟೋ  ಪ್ರಶಸ್ತಿ, ಪುರಸ್ಕಾರಗಳ ಮರ್ಯಾದೆ ಬಲಿಯಾದವು, ಅದೆಷ್ಟೋ ತಾರಾಮಣಿಯರ, ವಿದ್ವಜ್ಜನರ ಪರ-ವಿರೋಧ ಹೇಳಿಕೆಗಳು ವಿವಾದಕ್ಕೀಡಾದವು. ಒಂದು  ರಾಜ್ಯದ ರಾಜಕೀಯ ಭವಿಷ್ಯವನ್ನು ತಕ್ಕ ಮಟ್ಟಿಗೆ  ಬದಲಾಯಿಸಿದ ಪದ ಅದು. ಅಸಹಿಷ್ಣುತೆ ಬಗ್ಗೆ  ಬರೆಯುತ್ತಿರುವ ಲೇಖನವೆಂದರೆ, ಯಾವುದೋ ರಾಜಕೀಯ ಪಕ್ಷದ ಪರ ಅಥವ ವಿರುದ್ಧವಾಗಿಯೇ ಈ ಲೇಖನವೆಂದು ಎಲ್ಲಾ ಭಾವಿಸುವುದು ಸಹಜ, ಆದರೆ ಅಸಹಿಷ್ಣುತೆ ಮತ್ತು ಮಾನವನ ನಡುವಿನ ಸಂಬಂಧವನ್ನು ತಿಳಿಸುವುದಷ್ಟೇ ಈ ಲೇಖನದ ಉದ್ದೇಶ. ಇಲ್ಲಿ ಅಸಹಿಷ್ಣುತೆ, ಅದೂ ಭಾರತೀಯರಲ್ಲಿ ಎಂಬ ವಿಷಯವಂತೂ ರಾಜ್ಯ, ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗಿ ದಿನಗಟ್ಟಲೇ ಪತ್ರಿಕೆಗಳಿಗೆ ಹಾಗೂ ದೃಶ್ಯ ಮಾಧ್ಯಮಗಳಿಗೆ ಆಹಾರವನ್ನು ಒದಗಿಸಿದ್ದವು. ಈ ವಿಷಯದಲ್ಲಿ ಸಾಮಾಜಿಕ ತಾಣಗಳು ಕೂಡ ಹಿಂದೆ ಬಿದ್ದಿರಲಿಲ್ಲ, ತಾವೇನೂ ಕಡಿಮೆಯಿಲ್ಲವನ್ನುವಂತೆ ಜನರೂ ಮನಸೋ ಇಚ್ಛೆ ತಮ್ಮ ಅಭಿಪ್ರಾಯಗಳನ್ನು ಹರಿಯಬಿಟ್ಟಿದ್ದರು. ಮತ್ತಷ್ಟು ಓದು »

2
ಮೇ

ಮರವನ್ನು ಮರೆತರೆ ಬರ ಬಾರದ್ದು ಬಂದೀತು!

fresh_nature-1280x720

– ರೋಹಿತ್ ಚಕ್ರತೀರ್ಥ

ಅವೊತ್ತು ಶುಕ್ರವಾರ. ಆಫೀಸಿನಿಂದ ಹೊರಟು ನಗರದ ಮುಖ್ಯರಸ್ತೆಯೊಂದಕ್ಕೆ ಬಂದು ಸೇರಿದಾಗ, ಆ ಸಾಗರದಲ್ಲಾಗಲೇ ಸಾವಿರಾರು ದೋಣಿಗಳು ಹುಟ್ಟುಹಾಕಲಿಕ್ಕೂ ಜಾಗ ಸಿಗದಂತೆ ತುಂಬಿಕೊಂಡಿದ್ದವು. ಯಾಕೆ ಇಷ್ಟೊಂದು ಟ್ರಾಫಿಕ್‍ಜಾಮ್ ಆಗಿದೆ ಎಂದು ಬಾತುಕೋಳಿಗಳಂತೆ ಕತ್ತು ಎತ್ತರಿಸಿ ನಿರುಕಿಸುತ್ತಿದ್ದವರಿಗೆ ದೂರದಲ್ಲಿ ಮಳೆಯ ರಭಸಕ್ಕೆ ಮರವೊಂದು ಮಾರ್ಗಶಾಯಿಯಾಗಿರುವುದು ಕಾಣಿಸಿತು. ಹತ್ತಾರು ಅಡಿಗಳ ರೆಂಬೆಕೊಂಬೆಗಳನ್ನು ದಶದಿಕ್ಕುಗಳಿಗೂ ಚಾಚಿ ಇಷ್ಟುದಿನ ರಸ್ತೆಯ ಬದಿಯಲ್ಲಿ ಗತ್ತಿನಿಂದ ನಿಂತು ನಮಗೆಲ್ಲ ಹಾಯ್ ಹೇಳುತ್ತ ಕೈಬೀಸುತ್ತಿದ್ದ ಈ ಮರ, ಇವೊತ್ತು ಹೃದಯಾಘಾತವಾದಂತೆ ಮಳೆಯ ಹೊಡೆತಕ್ಕೆ ನೆಲಕ್ಕೆ ಬಿದ್ದಿದೆಯಲ್ಲ ಅಂದುಕೊಂಡೆ. ಮರದ ಶವ ಬಿದ್ದಲ್ಲಿ ಹತ್ತಾರು ಅಧಿಕಾರಿಗಳು ನಿಂತು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದರು. ಅದರ ಕೈಕಾಲುಗಳನ್ನು ಆದಷ್ಟು ಬೇಗ ಕತ್ತರಿಸಿ ಎಲ್ಲಿಗಾದರೂ ಸಾಗಿಸಿಬಿಟ್ಟರೆ ಸಾಕು ಎಂಬ ಧಾವಂತ ಅವರ ಮುಖಗಳಲ್ಲಿ ಕುಣಿದಾಡುತ್ತಿತ್ತು. ಗ್ಯಾಂಗ್ರಿನ್ ಆದ ಕಾಲು ಕತ್ತರಿಸುವ ನಿರ್ಭಾವುಕ ವೈದ್ಯನಂತೆ, ನಾಲ್ಕು ಜನ ಕೆಲಸಗಾರರು ಶಕ್ತಿಮೀರಿ ಬಲಪ್ರಯೋಗಿಸಿ ಅದರ ದೇಹವಿಚ್ಛೇದನದಲ್ಲಿ ನಿರತರಾಗಿದ್ದರು. ಶೋಕೇಸಿನ ಹಲವಾರು ಶೋಪೀಸುಗಳ ನಡುವೆ ಕೈಮೇಲೆತ್ತಿ ನಗುವ ಪುಟ್ಟ ಬುದ್ಧನ ಮೂರ್ತಿಯಂತೆ; ಈ ನಗರದ ಸಾಫ್ಟ್‍ವೇರ್ ತಜ್ಞರು ಬರೆಯುವ ಧೀರ್ಘ ಪ್ರೋಗ್ರಾಮಿನ ಒಂದೇ ಒಂದು ಪುಟ್ಟ ಸಾಲಿನಂತೆ, ಅಥವಾ ಬೀದಿಬದಿಯಲ್ಲಿ ಹುಡುಗ ಮಾರುವ ನೂರಾರು ಪೋಸ್ಟರುಗಳ ನಡುವೆ ತಣ್ಣಗೆ ನಗುತ್ತ ಕೂತ ಹೃತಿಕ್ ರೋಷನ್ನಿನಂತೆ ಇಷ್ಟುದಿನ ಧ್ಯಾನಾಸಕ್ತನಾಗಿ ನಿಂತಿದ್ದ ವೃಕ್ಷ ಇನ್ನು ಅಲ್ಲಿ ಇರುವುದಿಲ್ಲವಲ್ಲ ಅಂತ ಸಂಕಟವಾಯಿತು. ಅದನ್ನು ತುಂಡುತುಂಡಾಗಿ ಕತ್ತರಿಸಿ ತೆಗೆದು ಸ್ಥಳಾವಕಾಶ ಮಾಡಿಕೊಡುತ್ತಲೇ ಅಸಹನೆಯಿಂದ ಕುದಿಯುತ್ತಿದ್ದ ಸವಾರರು ನಿರಾಳತೆಯಿಂದ ನಿಟ್ಟುಸಿರು ಬಿಟ್ಟರು. ಅಣೆಕಟ್ಟಿನ ಬಾಗಿಲು ತೆರೆದಾಗ ಹೊರಹಾರುವ ನೀರಿನ ಧಾರೆಯಂತೆ ಬೈಕು-ಕಾರುಗಳು ಧಿಮ್ಮನೆ ಚಿಮ್ಮಿದವು. ಮತ್ತಷ್ಟು ಓದು »

27
ಏಪ್ರಿಲ್

ಮನುಷ್ಯನಾಗುವುದೆಂದರೇನು?

-ರಾಜಕುಮಾರ.ವ್ಹಿ.ಕುಲಕರ್ಣಿ, ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ

36374889-corruption

ಮೊನ್ನೆ ನನ್ನೂರಿನ ಆ ಹಳ್ಳಿಗೆ ಹೋಗಿದ್ದೆ. ಊರ ಹೆಬ್ಬಾಗಿಲಲ್ಲಿ ಪರಿಚಿತರೋರ್ವರು ಭೇಟಿಯಾದರು. ಅದು ಇದು ಮಾತನಾಡುತ್ತ ತಮ್ಮ ಅಣ್ಣನ ಮಗನಿಗೆ ಸರ್ಕಾರಿ ಕೆಲಸ ಸಿಕ್ಕ ವಿಷಯ ತಿಳಿಸಿದರು. ವಿಷಯ ಕೇಳಿ ತುಂಬ ಸಂತೋಷವಾಯಿತು. ಬಾಲ್ಯದಿಂದಲೂ ಬಡತನದಲ್ಲೇ ಬೆಳೆದ ಹುಡುಗ ಪರಿಶ್ರಮ ಪಟ್ಟು ಓದಿ ಡಿಪ್ಲೋಮ ಡಿಗ್ರಿ ಸಂಪಾದಿಸಿದ್ದ. ಆತನ ಅರ್ಹತೆಗೆ ತಕ್ಕುದಾದ ಹುದ್ದೆ ಲೋಕೋಪಯೋಗಿ ಇಲಾಖೆಯಲ್ಲಿ ಲಭಿಸಿತ್ತು. ನನ್ನ ಪರಿಚಿತರು ತಮ್ಮ ಅಣ್ಣನ ಮಗನ ಕುರಿತು ಅಭಿಮಾನದಿಂದ ಮಾತನಾಡಿದರು. `ನೋಡ್ರಿ ಅವ್ನಿಗಿ ಭಾಳ ಛಲೋ ಡಿಪಾರ್ಟ್‍ಮೆಂಟ್ ಸಿಕ್ಕಾದ. ಇನ್ನ ಮುಂದ ಅವ್ನಿಗಿ ಯಾರೂ ಹಿಡಿಯೋ ಹಂಗಿಲ್ಲ. ಯಾಕಂದ್ರ ಮುಂದ ಸುರಿಯೋದೆಲ್ಲ ರೊಕ್ಕದ ಮಳಿನಾ. ಬ್ಯಾಡ ಅಂದ್ರೂ ಮಂದಿ ಮನಿಗಿ ಬಂದು ರೊಕ್ಕ ಕೊಡ್ತಾರ. ರೊಕ್ಕ ಎಣಿಸಾಕ ಅಂವ ಒಂದು ಆಳ ಇಟ್ಕೊಬೇಕಾಗ್ತದ. ಎರ್ಡ ವರ್ಷದಾಗ ಅಂವ ಹ್ಯಾಂಗ ಮನಷ್ಯಾ ಆಗ್ತಾನ ನೋಡ್ರಿ’ ಒಂದು ಕ್ಷಣ ಕಾಲ ಸ್ತಬ್ಧವಾದಂತಾಯಿತು. ಹಾಗಾದರೆ ಅವರ ದೃಷ್ಟಿಯಲ್ಲಿ ಮನುಷ್ಯನಾಗುವುದೆಂದರೇನು. ಸರ್ಕಾರಿ ನೌಕರಿಗೆ ಸೇರಿ ಲಂಚ ಹೊಡೆಯುತ್ತ, ಬಂಗ್ಲೆ ಮೇಲೆ ಬಂಗ್ಲೆ ಕಟ್ಟಿಸಿ, ಹವಾನಿಯಂತ್ರಿತ ಕಾರುಗಳಲ್ಲಿ ಓಡಾಡುತ್ತ ಐಷಾರಾಮಿ ಬದುಕು ನಡೆಸುವಾತನೇ ನಿಜವಾದ ಮನುಷ್ಯ ಎನ್ನುವ ಅವರ ಯೋಚನಾ ಲಹರಿ ಅರೇ ಕ್ಷಣ ನನ್ನನ್ನು ನಾನು ಯಾರು? ಎನ್ನುವ ಯೋಚನೆಗೆ ಹಚ್ಚಿತು. ಒಂದಿಷ್ಟು ಶೃದ್ಧೆ, ನಿಷ್ಟೆ, ಪ್ರಾಮಾಣಿಕತೆಯ ನೆರಳಲ್ಲಿ ಬದುಕು ನೂಕುತ್ತಿರುವ ಜನ ಮನುಷ್ಯರೇ ಅಲ್ಲ ಎನ್ನುವ ಅಭಿಪ್ರಾಯ ಅವರ ಮಾತಿನುದ್ದಕ್ಕೂ ಇಣುಕುತ್ತಿತ್ತು. ಮತ್ತಷ್ಟು ಓದು »