ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

26
ಏಪ್ರಿಲ್

ವಿಡಂಬನೆ: ಸಾಹಿತ್ಯ ಗದ್ದುಗೆ ಹಾಗೂ ಮಣ್ಣಂಗಟ್ಟಿ ಸಾಹಿತ್ಯ!

– ತುರುವೇಕೆರೆ ಪ್ರಸಾದ್

kannadaತರ್ಲೆಕ್ಯಾತನಳ್ಳಿ ಖ್ಯಾತ ಸಾಹಿತಿ ಅನಂತ ಜೋಷಿ ಮತ್ತು ತಾಲ್ಲೂಕ ಸಾಹಿತ್ಯ ಸಭೆಯ ನೂತನ ಅಧ್ಯಕ್ಷ ಗುದ್ಲಿಂಗ ಜಮಖಂಡಿ ಅವರ ಮಧ್ಯೆ ನಡೆದ ಫೋನ್ ಸಂಭಾಷಣೆ ಹೀಗಿದೆ:
‘ನಮಸ್ಕಾರ್ರೀ ! ನಾನ್ ಜಮಖಂಡಿ ಮಾತಾಡಕ್ ಹತ್ತೀನಿ’
‘ಓಹೋ! ಜಮಖಂಡಿ ಅವರು!ಏನ್ರಪ್ಪಾ! ಆರಾಮದೀರೇನು?’
‘ಹಾಂ! ಆರಾಮದೀನಿ..ವಿಷ್ಯ ತಿಳೀತೇನ್ರೀ ಎಪ್ಪಾ?’
‘ಯಾವ ವಿಷ್ಯ ಹೇಳಕ್ ಹತ್ತೀರಿ ನೀವು? ಕೊಶ್ನೆ ಪೇಪರ್ ಲೀಕಾಯ್ತಲ್ಲ ಅದಾ ? ಇಲ್ಲ ಯಡಿಯೂರಪ್ಪಗೆ ಅಧ್ಯಕ್ಷ ಪಟ್ಟ ಸಿಕ್ತಲ್ಲ ಅದಾ?’
‘ಏ ! ಅವೆಲ್ಲಾ ಹಳೇದಾತ್ ಬಿಡ್ರಿ, ಈಗ ನಂಗ್ ಸಾಹಿತ್ಯ ಸಭೆ ಅಧ್ಯಕ್ಷಗಿರಿ ಸಿಕ್ಕೈತೆ, ಮೊನ್ನೆ ಯುಗಾದಿ ಮುಂದ ಪೇಪರ್ನಾಗ್ ಬಂದಿತ್ತು, ನೀವು ನೋಡ್ಲಿಲ್ಲೇನು?’
‘ಅರೆ! ಹೌದಾ? ನಿಮ್ಗೆ ಅಧ್ಯಕ್ಷಗಿರಿ ಕಟ್ಯಾರಾ? ಅಂದ್ರೆ ಹಾರ ತುರಾಯಿ ಹಾಕಿಸ್ಕೊಳೋಕ್ ಕೊಳ್ ಚಾಚ್ಕಂಡ್ ಕುಂತ್ ಬಿಟ್ರಿ ಅನ್ನಿ, ಇಂದ್ರಾಬಾಯವ್ರು ನಮಗಾ ಒಂದ್ ಮಾತೂ ಕೇಳ್ದ, ಸಭೆನೂ ಕರೀದೆ ನಿಮ್ಮನ್ನ ಹೆಂಗ್ ಅಧ್ಯಕ್ಷ ಮಾಡಾರೆ?’
‘ನಿಮ್ಗೆ ಇದ್ ಕೇಳಿದ್ ಕೂಡ್ಲೆ ಹೊಟ್ಟೆನಾಗೆ ಮೆಣಸಿನಕಾಯ್ ಕಿವುಚಿದಂಗಾಗ್ತದೆ ಅಂತ ನಂಗೊತ್ತಿತ್ತು ಬಿಡ್ರಲಾ! ಅದೆಂಥ ಹೊಟ್ಟೆ ಉರೀನ್ರೀ ನಿಮ್ದು..! ಇನ್ನೊಬ್ರಿಗೆ ಒಳ್ಳೇದಾತು ಅಂದ್ರೆ ಸಹಿಸೋ ಮಂದಿ ಅಲ್ಲ ನೀವು’ ಮತ್ತಷ್ಟು ಓದು »

25
ಏಪ್ರಿಲ್

ಸಾಯಣರ ವೇದವ್ಯಾಖ್ಯಾನವು ಏನನ್ನು ತಿಳಿಸುತ್ತದೆ?

– ವಿನಾಯಕ ಹಂಪಿಹೊಳಿ
vedaಸಾಯಣಾಚಾರ್ಯರು ಋಗ್ವೇದಕ್ಕೆ ಭಾಷ್ಯವನ್ನು ಬರೆಯುವಾಗ ಮೊದಲು ವೇದ ಎಂದರೇನು ?, ಅದರ ಲಕ್ಷಣವೇನು ಎಂಬುದರ ಕುರಿತು ಒಂದು ದೀರ್ಘ ಚರ್ಚೆಯನ್ನು ಮಾಡಿದ್ದಾರೆ. ಅದರಲ್ಲಿ ಪೂರ್ವಪಕ್ಷದ ವಾದಗಳನ್ನೆಲ್ಲ ಒಂದೊಂದಾಗಿ ಪರಿಗಣಿಸಿ, ವೇದದ ಲಕ್ಷಣದ ಕುರಿತು ತಮ್ಮ ಸಿದ್ಧಾಂತವನ್ನು ಮಂಡಿಸಿ, ಪೂರ್ವಪಕ್ಷಿಯ ಸಂದೇಹಗಳನ್ನೆಲ್ಲ ಪರಿಹರಿಸುತ್ತಾ ಸಾಗಿದ್ದಾರೆ. ಆ ಚರ್ಚೆ ಏನು ಎಂಬುದು ಮುಖ್ಯವಲ್ಲ. ಆ ಚರ್ಚೆಯಲ್ಲಿ ಪೂರ್ವಪಕ್ಷಿಗಳು ಮತ್ತು ಸಿದ್ಧಾಂತಿಗಳು ವೇದದ ಕುರಿತು ಯಾವ ದೃಷ್ಟಿಕೋಣವನ್ನು ಇಟ್ಟುಕೊಂಡಿದ್ದರು ಎಂಬುದು ಇಲ್ಲಿ ಮುಖ್ಯ. ಹೀಗಾಗಿ ಆ ಚರ್ಚೆಯ ಆದಿಭಾಗದ ಸಾರಾಂಶವನ್ನು ಮಾತ್ರ ನೋಡೋಣ. ಮೊದಲು ಪೂರ್ವಪಕ್ಷದ ವಾದಗಳನ್ನು ಪಟ್ಟಿ ಮಾಡಿ ನಂತರ ಸಾಯಣರು ಕೊಟ್ಟ ವೇದದ ವ್ಯಾಖ್ಯಾನವನ್ನು ನೀಡಲಾಗಿದೆ. ಪೂರ್ವಪಕ್ಷದ ಮತ: ವೇದ ಎನ್ನುವದು ಯಾವದನ್ನು? ವೇದಕ್ಕೆ ಲಕ್ಷಣಗಳೇನಾದರೂ ಇವೆಯೇ? ಪ್ರತ್ಯಕ್ಷ, ಅನುಮಾನ ಮತ್ತು ಆಗಮ ಎಂಬ ಮೂರು ಪ್ರಮಾಣಗಳಿವೆಯಲ್ಲ (ಊಟ ಮಾಡಿದರೆ ಹೊಟ್ಟೆ ತುಂಬುತ್ತದೆ ಎನ್ನುವದಕ್ಕೆ ಪ್ರತ್ಯಕ್ಷ ಪ್ರಮಾಣ, ಹೊಗೆಯಾಡುತ್ತಿರುವಲ್ಲಿ ಬೆಂಕಿಯಿರಬಹುದೆಂಬುದಕ್ಕೆ ಅನುಮಾನ ಪ್ರಮಾಣ, ಯಾಗದಿಂದ ಸ್ವರ್ಗಪ್ರಾಪ್ತಿ ಎಂಬುದಕ್ಕೆ ಆಗಮ ಪ್ರಮಾಣ), ಅವುಗಳಲ್ಲಿ ಕೊನೆಯ ಆಗಮ ಪ್ರಮಾಣವೆಂಬುದೇ ವೇದದ ಲಕ್ಷಣವೆನ್ನಲು ಸಾಧ್ಯವಿಲ್ಲ. ಏಕೆಂದರೆ ಮನ್ವಾದಿ ಸ್ಮೃತಿಗಳೂ ಆಗಮಗಳಾಗಿವೆ. ವೇದ ಎನ್ನುವದು ಸ್ವರ್ಗ ಅಥವಾ ಮೋಕ್ಷಕ್ಕೆ ಸಾಧನ ಎಂಬ ಲಕ್ಷಣವನ್ನೂ ಹೇಳಲು ಸಾಧ್ಯವಿಲ್ಲ ಕಾರಣ ಇತಿಹಾಸ ಪುರಾಣಗಳೂ ಸ್ವರ್ಗ ಅಥವಾ ಮೋಕ್ಷಕ್ಕೆ ಸಾಧನಗಳಾಗಿರುತ್ತವೆ. ಆಗಮವೇ ವೇದದ ಲಕ್ಷಣ ಎನ್ನುವದು ಅತಿವ್ಯಾಪ್ತಿದೋಷ ಒಳಗೊಂಡಿದೆ. ಬೆಳ್ಳಗಿರುವದು ಹಾಲಿನ ಲಕ್ಷಣ ಎಂದರೆ, ಸುಣ್ಣವೂ ಬೆಳ್ಳಗಿರುವದರಿಂದ, ಈ ಲಕ್ಷಣವಾಕ್ಯವು ಅತಿವ್ಯಾಪ್ತಿದೋಷ (Necessary But Not Sufficient) ಎಂಬ ದೋಷವನ್ನು ಹೊಂದಿರುತ್ತದೆ. ಮತ್ತಷ್ಟು ಓದು »

24
ಏಪ್ರಿಲ್

ಶನಿಯ ಬೆನ್ನೇರಿದ ಕಾಕ, ಇದೆಲ್ಲ ನಾಟಕ ಯಾಕ?

– ರೋಹಿತ್ ಚಕ್ರತೀರ್ಥ

shani-shingnapur_650x400_41460171606ನಮ್ಮ ದೇಶದಲ್ಲಿ ಖರ್ಚಿಲ್ಲದೆ ಪ್ರಸಿದ್ಧಿ ಒದಗಿಸುವ ಎರಡು ಸಂಗತಿಗಳಿವೆ. ಒಂದು ಬುದ್ಧಿಜೀವಿಯಾಗುವುದು, ಇನ್ನೊಂದು ಮಹಿಳಾವಾದಿಯಾಗುವುದು. ಬುದ್ಧಿಜೀವಿಯಾಗಬೇಕಾದರೆ ನೀವು ಸೆಕ್ಯುಲರ್ ಎಂದು (ಏನೆಂದು ಗೊತ್ತಿರದಿದ್ದರೂ) ತೋರಿಸಿಕೊಳ್ಳಬೇಕು. ಹಿಂದೂಗಳನ್ನು, ಅವರ ಆಚರಣೆ, ಪದ್ಧತಿ, ಹಬ್ಬಹರಿದಿನಗಳನ್ನು ಬಯ್ಯಬೇಕು. ಹಿಂದೂ ದೇವರನ್ನು, ದೇವಾಲಯಗಳನ್ನು ಪ್ರಶ್ನಿಸಬೇಕು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ರಿಲಿಜನ್ನುಗಳನ್ನು ಓಲೈಸಬೇಕು. ಮೋದಿಯನ್ನು ತೆಗಳಬೇಕು. ಭಯೋತ್ಪಾದಕರನ್ನು, ನಕ್ಸಲರನ್ನು ಬೆಂಬಲಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಿಮಗೆ ಬೆನ್ನುಮೂಳೆ ಇರಬಾರದು. ಜೊತೆಗೆ, ಅರ್ಥವತ್ತಾದ ಮಾತು, ತರ್ಕಬದ್ಧವಾದ ಚಿಂತನೆ – ಇವೆರಡರ ಬಗ್ಗೆ ನೀವು ಎಂದೆಂದೂ ತಲೆ ಕೆಡಿಸಿಕೊಂಡಿರಬಾರದು. ಹಾಗೆಯೇ, ಮಹಿಳಾವಾದಿಯಾಗುವುದು ಕೂಡ ಸುಲಭ. ಮೊದಲಿಗೆ ಮಹಿಳಾವಾದ = ಪುರುಷದ್ವೇಷ ಎಂಬ ಸಮೀಕರಣ ಬರೆಯಿರಿ. ಮಹಿಳೆಗೆ ಸ್ವಾತಂತ್ರ್ಯ ಬೇಕು ಅನ್ನಿ. ಉದ್ಯೋಗದಲ್ಲಿ, ಸಂಸತ್ತಿನಲ್ಲಿ, ಬಸ್ಸಿನಲ್ಲಿ, ಚಿತ್ರಮಂದಿರದಲ್ಲಿ, ನಡೆದಾಡುವ ರಸ್ತೆಯಲ್ಲಿ – ಹೀಗೆ ಎಲ್ಲೆಲ್ಲೂ ಹೆಣ್ಣಿಗೆ ಸಮಾನತೆ ಬೇಕೆಂದು ಬೊಬ್ಬೆ ಹೊಡೆಯಿರಿ. ಉದ್ಧೇಶವೇ ಇಲ್ಲದೆ ಪ್ರತಿಭಟನೆ ಮಾಡಿದರೂ ಓಕೆ. ವಿರೋಧಿಸದವರಿಗೂ ಧಿಕ್ಕಾರ ಕೂಗಿದರೂ ಓಕೆ. ಒಟ್ಟಲ್ಲಿ ನಿಮ್ಮ ಮಾತು, ಕೂಗಾಟ, ಹಾರಾಟ, ಹೋರಾಟವೆಲ್ಲ ನಾಲ್ಕು ಜನಕ್ಕೆ ಗೊತ್ತಾಗಬೇಕು, ಪತ್ರಿಕೆ ಟಿವಿಗಳಲ್ಲಿ ಬರಬೇಕು. ಮತ್ತು ಇವೆಲ್ಲದರ ಜೊತೆ, ನೀವು, ಮೇಲೆ ಹೇಳಿದ ಬುದ್ಧಿಜೀವಿಯೂ ಆಗಿರಬೇಕಾದ್ದು ಅನಿವಾರ್ಯ. ಎರಡು ವರ್ಷಗಳ ಹಿಂದೆ ಒಂದು ಬುದ್ಧಿಜೀವಿ ಮಹಿಳಾಪರ ಲೇಖಕಿ, “ಮೋದಿಯ ಮುಖ ನೋಡಿದರೇನೇ ಆತ ಸ್ತ್ರೀದ್ವೇಷಿ ಅನ್ನೋದು ಗೊತ್ತಾಗುತ್ತದೆ” ಎಂದಿದ್ದರು. ಇಂಥ ಹೇಳಿಕೆ ಕೊಡುವವರಿಗೆ ಮಹಿಳಾಪರ ಸಂಘಟನೆಗಳಲ್ಲಿ ಒಳ್ಳೆಯ ಬೇಡಿಕೆ ಇದೆ. ಮತ್ತಷ್ಟು ಓದು »

19
ಏಪ್ರಿಲ್

‘ಅಪರೇಷನ್ ಪೀಠತ್ಯಾಗ’ದ ಸೂತ್ರದಾರರು ಯಾರು?

– ಮಂಜುನಾಥ ಹೆಗಡೆ

FB_IMG_1460892892983ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮೇಲೆ ಬಂದಂತಹ ಅತ್ಯಾಚಾರ ಆರೋಪವನ್ನು ಇತ್ತೀಚೆಗೆ ನ್ಯಾಯಾಲಯವು ತಳ್ಳಿಹಾಕಿ, “ಇದು ಶ್ರೀಗಳನ್ನು ಸಿಕ್ಕಿಹಾಕಿಸಲು ನಡೆಸಿದ ಷಡ್ಯಂತ್ರ” ಎಂದು ಷರಾ ಬರೆದಿದ್ದಲ್ಲದೇ, CID ಮತ್ತು FSLಗಳನ್ನು ಕೂಡ ತರಾಟೆಗೆ ತೆಗೆದುಕೊಂಡಿದೆ. ಹಾಗಾದರೆ ಯಾರು, ಯಾಕಾಗಿ ಒಂದು ಧಾರ್ಮಿಕ ಸಂಸ್ಥೆಯ ಮೇಲೆ ಹಗೆ ಸಾಧಿಸಲು ಹೊರಟಿದ್ದಾರೆ ? ಯಾರು ಮಠವನ್ನು ಇನ್ನಿಲ್ಲವಾಗಿಸುವ “ಷಡ್ಯಂತ್ರ” ಮಾಡುತ್ತಿದ್ದಾರೆ? ಆಮೂಲಾಗ್ರವಾಗಿ ಎಲ್ಲವನ್ನೂ ಪರಿಶೀಲಿಸಬೇಕಾಗಿದೆ!

ಸುಮಾರು 1200 ವರ್ಷಗಳ ಹಿಂದೆ ಆದಿಶಂಕರಾಚಾರ್ಯರು ಗೋಕರ್ಣದ ಸಮೀಪದ ಅಶೋಕೆಯಲ್ಲಿನ ಸೌಮ್ಯ ಪ್ರಕೃತಿಯ ಮಡಿಲಲ್ಲಿ ಧರ್ಮಪಾಲನೆಗಾಗಿ ಮಠವೊಂದನ್ನು ಸ್ಥಾಪಿಸಿ ತಮ್ಮ ಜ್ಯೇಷ್ಠ ಶಿಷ್ಯ ಸುರೇಶ್ವರಾಚಾರ್ಯರಿಂದ ಸನ್ಯಾಸ ದೀಕ್ಷೆ ಪಡೆದು ತಮ್ಮಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾನಂದರನ್ನು ಪೀಠಾಧಿಪತಿಯನ್ನಾಗಿ ಮಾಡಿ ಗೋಕರ್ಣ ದೇವಾಲಯದ ಆಡಳಿತವೂ ಸೇರಿದಂತೆ ಹಲವಾರು ಹೊಣೆಗಾರಿಕೆಗಳನ್ನು ಕೊಡುತ್ತಾರೆ. ಇದು ರಾಜಗುರುಪೀಠವಾಗಿದ್ದು ಸಮಾಜದ ಅಂತರಂಗ ಮತ್ತು ಬಹಿರಂಗ ಶ್ರೇಯೋಭಿವೃದ್ಧಿಗಾಗಿ ದುಡಿಯುತ್ತಿದೆ. ಅಲ್ಲಿಂದ ಇಲ್ಲಿನವರೆಗೂ ಶ್ರೀಮಠದ ಮಾರ್ಗದರ್ಶನದಲ್ಲಿ ಧರ್ಮಪಾಲನೆ ನಡೆಯುತ್ತಾ ಬಂದಿದೆ. ಶಂಕರರಿಂದ ಆರಂಭಿಸಿ 35 ತಲೆಮಾರುಗಳು ಕಳೆದಿವೆ. ಪ್ರಸ್ತುತ ಶ್ರೀ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು 36ನೇ ಪೀಠಾಧೀಶರಾಗಿರುತ್ತಾರೆ. ಶ್ರೀಗಳ ಪ್ರೇರಣೆಯಂತೆ ಬಿಂದು-ಸಿಂಧು, ಮುಷ್ಟಿಭಿಕ್ಷೆ, ವಿದ್ಯಾನಿಧಿ, ಕಾಮದುಘಾ, ಗುರುಕುಲ, ಭಾರತೀ ವಿದ್ಯಾಲಯಗಳು, ಗ್ರಾಮರಾಜ್ಯ, ವಿದ್ಯಾನಿಧಿ, ಜೀವನದಾನ ಮೊದಲಾದ ಹತ್ತು ಹಲವಾರು ಸಮಾಜಮುಖಿ ಯೋಜನೆಗಳು ಆರಂಭಗೊಂಡವು. ಅಷ್ಟಾಗಿ ಮಠದ ಸಂಪರ್ಕ ಇಲ್ಲದವರೂ ಮಠಕ್ಕೆ ಬರಲಾರಂಭಿಸಿದರು! ಮಠದ ಪ್ರಸಿದ್ಧಿಯೂ ಜಾಸ್ತಿಯಾಗುತ್ತಾ ಬಂತು! ಬರೀ ಜಪ-ತಪ-ಅನುಷ್ಠಾನಗಳೇ ಆಗಿದ್ದರೆ ತೊಂದರೆ ಇರಲಿಲ್ಲವೇನೋ! ಆದರೆ ಇದು ರಾಜಗುರು ಪೀಠ. ಇಲ್ಲಿ ಕಾವಿಯೂ ಇದೆ, ಕಿರೀಟ-ಶ್ವೇತಛತ್ರಗಳೂ ಇವೆ! ಸಮಾಜದಲ್ಲಿ ನಡೆಯುವ ಅಧರ್ಮ ಕಾರ್ಯಗಳ ನಿಗ್ರಹವೂ ಪೀಠದ ಹೊಣೆಯಾಗಿರುತ್ತದೆ! ಮತ್ತಷ್ಟು ಓದು »

18
ಏಪ್ರಿಲ್

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ: ಪರ ಮತ್ತು ವಿರೋಧ

-ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟೆ

sslc-examವೃತ್ತಿಪರ ಕೋರ್ಸುಗಳ ಏಕರೂಪ ಅರ್ಹತಾ ಪ್ರವೇಶ ಪರೀಕ್ಷೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕಳೆದ ಕೆಲವು ವರ್ಷಗಳಿಂದ ಈ ವಿಷಯವಾಗಿ ಶಿಕ್ಷಣ ಕ್ಷೇತ್ರದಲ್ಲಿ ಪರ ಮತ್ತು ವಿರೋಧವಾಗಿ ಮಾತುಗಳು ಕೇಳಿ ಬರುತ್ತಿವೆ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಈ ಯೋಜನೆಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತಿವೆ. ಭಾರತದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ವಿಶೇಷವಾಗಿ ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಅನೇಕ ಪ್ರಕಾರದ ಅರ್ಹತಾ ಪರೀಕ್ಷೆಗಳು ಚಾಲ್ತಿಯಲ್ಲಿವೆ. ಪ್ರತಿ ರಾಜ್ಯಗಳಲ್ಲಿ ಆಯಾ ಸರ್ಕಾರ ವೈದ್ಯಕೀಯ ಕೋರ್ಸಿನ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ. ಜೊತೆಗೆ ಖಾಸಗಿ ಕಾಲೇಜುಗಳಲ್ಲಿನ ಮ್ಯಾನೆಜಮೆಂಟ್ ಸೀಟುಗಳಿಗಾಗಿ, ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳು ಮತ್ತು ಡೀಮ್ಡ್ ವಿಶ್ವವಿದ್ಯಾಲಯವೆಂದು ಮಾನ್ಯತೆ ಪಡೆದ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳಿಗಾಗಿ ಎಂದು ಹೀಗೆ ಒಂದೇ ರಾಜ್ಯದಲ್ಲಿ ಅನೇಕ ಪ್ರಕಾರದ ಅರ್ಹತಾ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಯೊಬ್ಬ ಒಂದಕ್ಕಿಂತ ಹೆಚ್ಚಿನ ಅರ್ಹತಾ ಪ್ರವೇಶ ಪರೀಕ್ಷೆಗಳನ್ನು ಬರೆಯುವ ಸಂದಿಗ್ಧತೆಗೆ ಒಳಗಾಗುತ್ತಾನೆ. ಅಲ್ಲದೆ ಪ್ರತಿಯೊಂದು ಪ್ರವೇಶ ಪರೀಕ್ಷೆಯ ಶುಲ್ಕ ಅತ್ಯಂತ ದುಬಾರಿಯಾಗಿದ್ದು ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಇದು ಹೊರೆಯಾಗುತ್ತಿದೆ. ಮತ್ತಷ್ಟು ಓದು »

14
ಏಪ್ರಿಲ್

ಬಾಬಾಸಾಹೇಬ್ ಅಂಬೇಡ್ಕರ್ : ಇದ್ದದ್ದು ಇದ್ದ ಹಾಗೆ

– ರೋಹಿತ್ ಚಕ್ರತೀರ್ಥ

images (2)ಇದು ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಸಪಾದ ಜನ್ಮಶತಮಾನೋತ್ಸವದ ವರ್ಷ. ಹತ್ತೊಂಬತ್ತನೇ ಶತಮಾನದ ಕೊನೆಯ ದಶಕದಲ್ಲಿ ಹುಟ್ಟಿದ ಅಂಬೇಡ್ಕರ್ ಆ ಕಾಲದ ಅನಕ್ಷರತೆ, ಜಾತಿ ತಾರತಮ್ಯ, ಶೋಷಣೆ, ನಿರುದ್ಯೋಗ, ಸ್ವಾತಂತ್ರ್ಯ ಹೋರಾಟ ಮುಂತಾದ ಎಲ್ಲ ಪರಿಸ್ಥಿತಿಗಳನ್ನೂ ನೋಡಬೇಕಾಯಿತು, ಸ್ವತಃ ಅನುಭವಿಸಬೇಕಾಯಿತು. ಹುಡುಗ ಚೂಟಿ, ಬುದ್ಧಿವಂತ. ಜಾತಿಯ ಕಾರಣವೊಂದೇ ಮುಂದಾಗಿ ಆತನ ಭವಿಷ್ಯವನ್ನು ಕಮರಿಸಬಾರದೆಂಬ ಎಚ್ಚರದಿಂದ ಬ್ರಾಹ್ಮಣ ಗುರು ಮಹಾದೇವ ಅಂಬೇಡ್ಕರ್, ತನ್ನ ಈ ಪ್ರೀತಿಯ ಶಿಷ್ಯನಿಗೆ ಅಂಬಾವಾಡೇಕರ್ ಎಂಬ ಕುಲಸೂಚಕವನ್ನು ತಿದ್ದಿ ಅಂಬೇಡ್ಕರ್ ಎಂಬ ನಾಮಕರಣ ಮಾಡಿದರು. ಅಲ್ಲಿಂದ ಮುಂದಕ್ಕೆ ಹುಡುಗ, ಹುಟ್ಟಿದೂರು ಸತಾರದಲ್ಲಿ ಪ್ರಾಥಮಿಕ ಶಾಲೆ ಮುಗಿಸಿ, ಮುಂಬಯಿಯ ಪ್ರತಿಷ್ಠಿತ ಎಲ್ಫಿನ್‍ಸ್ಟನ್ ಹೈಸ್ಕೂಲು, ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮುಂದುವರೆಸಿ, ಉನ್ನತ ಶಿಕ್ಷಣಕ್ಕಾಗಿ ಅಮೆರಿಕ, ಇಂಗ್ಲೆಂಡ್ ಪ್ರವಾಸಗಳನ್ನು ಮಾಡಿದ್ದೆಲ್ಲ ನಂಬಲಸಾಧ್ಯವೆನಿಸುವ ವಾಸ್ತವ.ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಪಡೆದಾಗ ಅಂಬೇಡ್ಕರರಿಗೆ 26 ವರ್ಷ. ನಂತರದ ಪ್ರಯಾಣ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಡೆಗೆ. ಅಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಜೊತೆಗೆ ಬ್ಯಾರಿಸ್ಟರ್-ಎಟ್-ಲಾ ಎಂಬ ಕಾನೂನು ಪದವಿ ಪಡೆದು, ತನ್ನ 32ನೇ ವಯಸ್ಸಿಗೆ ಡಿಎಸ್‍ಸಿ ಗಳಿಸಿ ಭಾರತಕ್ಕೆ ಮರಳಿದರು. ದಲಿತರ ಹುಡುಗನೊಬ್ಬ ಹೀಗೆ ಅಖಂಡ 28 ವರ್ಷ ವ್ಯಾಸಂಗವೊಂದರಲ್ಲೇ ಮುಳುಗಿ, ವಿದೇಶದ ಹೆಸರುವಾಸಿ ಸಂಸ್ಥೆಗಳಲ್ಲಿ ಡಿಗ್ರಿಯ ಮೇಲೆ ಡಿಗ್ರಿಯನ್ನು ಸಂಪಾದಿಸಿದ ಕತೆ ರೋಮಾಂಚನಗೊಳಿಸುವಂಥಾದ್ದು. ಮತ್ತಷ್ಟು ಓದು »

13
ಏಪ್ರಿಲ್

ಇದೊಂದು ಸಣ್ಣ ಸಂಗತಿ ತಿಳಿದಿದ್ದರೆ ಆ ಸಾವನ್ನು ಯಾರಾದರೂ ತಪ್ಪಿಸಬಹುದಿತ್ತು

– ರೋಹಿತ್ ಚಕ್ರತೀರ್ಥ

harishjpg-08-1457415172ಫೆಬ್ರವರಿ 17ನೇ ತಾರೀಖು ಬುಧವಾರದ ಪತ್ರಿಕೆಯಲ್ಲಿ ಪ್ರಕಟವಾದ ಆ ವರದಿಯನ್ನು ಹಾಗ್‍ಹಾಗೇ ಕೊಡುವುದಾದರೆ ಅದು ಹೀಗಿದೆ: ಹುಟ್ಟೂರಿನಲ್ಲಿ ನಡೆಯುತ್ತಿದ್ದ ಸ್ಥಳೀಯ ಚುನಾವಣೆಯಲ್ಲಿ ಓಟು ಹಾಕಲೆಂದು ಹರೀಶ್ ಶನಿವಾರ ಊರಿಗೆ ತೆರಳಿದ್ದರು. ತನ್ನ ಕುಟುಂಬದ ಜತೆ (ತಾಯಿ ಮತ್ತು ಅಣ್ಣ) ಒಂದಷ್ಟು  ಹೆಚ್ಚಿನ  ಸಮಯ  ಕಳೆಯುವ   ಉದ್ಧೇಶದಿಂದ  ಸೋಮವಾರ   ರಜೆ   ಹಾಕಿದ್ದರು. ಮಂಗಳವಾರ  ಆಫೀಸಿದ್ದುದರಿಂದ  ಊರಿಂದ  ಮುಂಜಾನೆ  ಬೇಗನೇ  ಹೊರಟಿದ್ದರು.  ಬೈಕು ಚಲಾಯಿಸುತ್ತ  ಬರುತ್ತಿದ್ದಾಗ,  ತಿಪ್ಪಗೊಂಡನಹಳ್ಳಿಯ  ಸಮೀಪ,  ಹಿಂದಿನಿಂದ  ಒಂದು   ಲಾರಿ ಅವರನ್ನು ಓವರ್‍ಟೇಕ್ ಮಾಡುವ ಯತ್ನದಲ್ಲಿತ್ತು. ಲಾರಿ ಅತಿ ವೇಗದಲ್ಲಿದ್ದುದರಿಂದ, ಅದು ತನ್ನ ತೀರಾ ಹತ್ತಿರ ಬಂದಾಗ ಹರೀಶ್ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದರು. ಆದರೆ, ಲಾರಿ ಮಾತ್ರ ನಿಲ್ಲುವ ಸೂಚನೆ ತೋರಿಸಲಿಲ್ಲ. ಅದು, ಯಮವೇಗದಲ್ಲಿ ಮುಂದುವರಿದು ಹರೀಶರ  ದೇಹದ  ಮೇಲೆಯೇ  ಹಾದುಹೋಯಿತು. ಮತ್ತಷ್ಟು ಓದು »

11
ಏಪ್ರಿಲ್

ಋಗ್ವೇದ ೧೦.೮೫.೧೩ ಅಘಾಸು ಹನ್ಯಂತೇ ಗಾವಃ

– ವಿನಾಯಕ ಹಂಪಿಹೊಳಿ

rigvedaಸ್ವಘೋಷಿತ ಅಭಿನವ ಪ್ರವಾದಿ ಜಾಕೀರ ನಾಯ್ಕರ ಶಿಷ್ಯರೊಂದಿಗೆ ಸ್ವಲ್ಪ ದಿನಗಳ ಹಿಂದೆ ನನ್ನ ಕೆಲವು ಮಿತ್ರರು ಚರ್ಚೆಯೊಂದನ್ನು ನಡೆಸಿದ್ದರು. ಆ ಚರ್ಚೆಯಲ್ಲಿ ನಾನೂ ಭಾಗವಹಿಸಿದ್ದೆ. ಅಲ್ಲಿ ನಮ್ಮ ವಿರೋಧಿಗಳ ವಾದವೊಂದು ನನ್ನ ಗಮನ ಸೆಳೆಯಿತು. ಅಲ್ಲಿ ನಮ್ಮ ವಿರೋಧಿಗಳು “ಋಗ್ವೇದದಲ್ಲಿ ಗೋಮಾಂಸದ ಉಲ್ಲೇಖವಿದೆ. ಮದುವೆಯ ಸಂದರ್ಭದಲ್ಲಿ ಆಕಳುಗಳನ್ನು ಕಡಿಯಲಾಗುತ್ತಿತ್ತು ಎಂಬುದಕ್ಕೆ ಆಧಾರವಿದೆ. ಬೇಕಾದರೆ ಋಗ್ವೇದದ ೧೦ನೇ ಮಂಡಲದ ೮೫ನೇ ಸೂಕ್ತದ ೧೩ನೇ ಋಕ್ಕನ್ನು ನೋಡಿ” ಎಂದು ಹೇಳಿದ್ದರು. ಆ ಋಕ್ಕು ಹೀಗಿತ್ತು.

ಸೂರ್ಯಾಯಾ ವಹತುಃ ಪ್ರಾಗಾತ್ಸವಿತಾ ಯಮವಾಸೃಜತ್ | ಅಘಾಸು ಹನ್ಯಂತೇ ಗಾವೋsರ್ಜನ್ಯೋಃ ಪರ್ಯುಹ್ಯತೇ || ಮತ್ತಷ್ಟು ಓದು »

8
ಏಪ್ರಿಲ್

ಬಡ್ಜೆಟ್ಟೆಂಬ ಬಕಾಸುರ

– ನಾಗೇಶ ಮೈಸೂರು

union-budget-inner14-newಈಗ ನಾನು ಹೇಳ ಹೊರಟಿರುವುದು ವಾರ್ಷಿಕ ಬಡ್ಜೆಟ್ಟಿನ (ಆಯವ್ಯಯ ಲೆಕ್ಕಾಚಾರ) ಕುರಿತು. ಪ್ರತಿ ವರ್ಷದ ಫೆಬ್ರವರಿ ಕೊನೆಗೆ ಸಂಸತ್ತಿನಲ್ಲಿ ಹಣಕಾಸು ಮಂತ್ರಿಗಳು ಮಂಡಿಸುವ ದೇಶದ ಬಡ್ಜೆಟ್ಟಲ್ಲ ಬಿಡಿ. ಸ್ವಲ್ಪ ಪುಟ್ಟ ಮಟ್ಟದಲ್ಲಿ ಕಂಪನಿಗಳಲ್ಲಿ ನಡೆಯುವ ವಾರ್ಷಿಕ ಬಡ್ಜೆಟ್ಟಿನ ಕುರಿತು. ಕಂಪನಿ ಚಿಕ್ಕದೋ, ಮಧ್ಯಮ ಗಾತ್ರದ್ದೋ, ದೊಡ್ಡದೋ ಒಟ್ಟಾರೆ ಒಂದಲ್ಲಾ ಒಂದು ರೀತಿ ಆಯವ್ಯಯದ ಲೆಕ್ಕಾಚಾರ ನಡೆದೇ ನಡೆಯುತ್ತದೆ. ಆಯಾ ಸಂಸ್ಥೆಯ ವಾತಾವರಣಕ್ಕೆ ಸರಿ-ಸೂಕ್ತ ಮಟ್ಟದಲ್ಲಿ.

ತುಂಬ ಸರಳವಾಗಿ ಹೇಳುವುದಾದರೆ ಈ ಇಡೀ ವಾರ್ಷಿಕ ವ್ಯಾಯಾಮ ಎರಡು ಮುಖ್ಯ ಅಂಶಗಳ ಸುತ್ತ ಗಿರಕಿ ಹೊಡೆಯುವ ಪುನರಾವರ್ತನ ಚಕ್ರ. ಮೊದಲಿಗೆ ಸಂಸ್ಥೆಗೆ ಆ ವರ್ಷದಲ್ಲಿ ಏನೆಲ್ಲ ಮೂಲೆಗಳಿಂದ ಬರಬಹುದಾದ ಆದಾಯದ ಅಂದಾಜು ಮಾಡಿಟ್ಟುಕೊಳ್ಳುವುದು. ಮತ್ತೊಂದು ಕಡೆಯಿಂದ ಆ ಆದಾಯ ಮೂಲಕ್ಕೆ ಸಂವಾದಿಯಾಗಿ ಏನೆಲ್ಲ ಖರ್ಚು ವೆಚ್ಚಗಳನ್ನು ನಿಭಾಯಿಸಬೇಕಾಗಿ ಬರುವುದೋ ಎಂದು ಅಂದಾಜು ಲೆಕ್ಕಾಚಾರ ಹಾಕುವುದು. ಇವೆರಡು ಅಂದಾಜುಗಳನ್ನು ಕ್ರೋಢಿಕರಿಸಿದರೆ ಒಟ್ಟಾರೆ ನಿವ್ವಳ ಲಾಭ, ನಷ್ಟಗಳ ಅಂದಾಜು ಸಿಗುತ್ತದೆ. ಜತೆಗೆ ಅದನ್ನು ನಿಭಾಯಿಸಲು ಬೇಕಾದ ಹಣ ಬಲ, ಜನ ಬಲ, ಯಂತ್ರ ಬಲ ಇತ್ಯಾದಿಗಳ ಸ್ಥೂಲ ಅಂದಾಜು ಸಿಗುತ್ತದೆ. ಇದನ್ನು ಗುರಿಯತ್ತ ನಡೆಸುವ ಆಧಾರವಾಗಿಟ್ಟುಕೊಂಡು ತಮ್ಮಲ್ಲಿನ ಹಣಕಾಸು ಮತ್ತಿತರ ಸಂಪನ್ಮೂಲಗಳನ್ನು ಸಮರ್ಥವಾಗಿ ಸರಿಯಾದ ಕಡೆ ವಿನಿಯೋಗಿಸಲು ಪ್ರಯತ್ನಿಸುವುದು ಇದರ ಮೂಲೋದ್ದೇಶ. ಹಣ ತುಟ್ಟಿಯಾದ ಕಾರಣ ಮತ್ತು ಹೇರಳವಾಗಿ ದೊರಕದ ಸಂಪನ್ಮೂಲವಾದ ಕಾರಣ ಇರುವಷ್ಟು ಹಣದ ಸೂಕ್ತ ಸದ್ವಿನಿಯೋಗ ಮಾಡಿಕೊಳ್ಳುವುದು ಅತಿ ಮುಖ್ಯವಾದ ಅಂಶ. ಆಯ ವ್ಯಯದ ಲೆಕ್ಕಾಚಾರ ಈ ದಿಸೆಯಲ್ಲಿ ನಡೆಯಲು ಸಹಕಾರಿಯಾಗುವ ಹೆಜ್ಜೆ ಮತ್ತು ನಿಭಾಯಿಸಿ ಸಂಭಾಳಿಸುವ ಆಯುಧ. ಮತ್ತಷ್ಟು ಓದು »

6
ಏಪ್ರಿಲ್

ಈ ಗೆಲುವು ಮತ್ತೊಂದು ಸೋಲಿಗೆ ಮುನ್ನುಡಿಯಾಗದಿರಲಿ ರಾಘವೇಶ್ವರರೇ….

– ಕೆ ಎಸ್ ರಾಘವೇಂದ್ರ ನಾವಡ

08-1444299163-raghaveshwaraswamijiಅಂತೂ ಇಂತು ಎರಡು ವರುಷಗಳ ಹಿಂದೆ ಹೋಗಿದ್ದ ಹಿಂದೂಗಳ ಮರ್ಯಾದೆ ಮೊನ್ನೆ ವಾಪಾಸು ಬಂದಿತು. ರಾಘವೇಶ್ವರರು ಮತ್ತೊಂದು “ಅಂತರಿಕ ಯುದ್ಧ” ಗೆದ್ದಿದ್ದಾರೆ!! ಏಕೆ0ದರೆ ಬಾಹ್ಯ ವೈರಿಗಿ0ತಲೂ ಆಂತರಿಕ ವೈರಿಯನ್ನು ಗೆಲ್ಲುವುದು ಬಹಳ ಕಷ್ಟ! ಅಂದ ಮೇಲೆ ನಮ್ಮ ರಾಘವೇಶ್ವರ ಗೆಲುವೇನು ಸಾಮಾನ್ಯವೇ? ಏಕೆಂದರೆ ರಾಘವೇಶ್ವರರ ವಿರುದ್ಧ ಹಿಂದಿನ0ತೆ ಯುದ್ದ ಸಾರಿದ್ದು ಬೇರಾರು ಅಲ್ಲ! ಅವರ ಸುತ್ತು ಬಳಗದಲ್ಲಿನ ಹಿತಶತ್ರುಗಳೇ!! ಬ್ರಾಹ್ಮಣರೇ!, ಹಿಂದೂ ಸಂಘಟನೆಗಳೇ! ಇವರೊಂದಿಗೆ ಸಾರಿಗೆ ಒಗ್ಗರಣೆ ಹಾಕುವಂತೆ ಈ ಬಳಗಕ್ಕೆ ಬೇರೆಯವರ ಸಾಥ್ ಇತ್ತಷ್ಟೇ ! ಹಿಂದೂಗಳು ಹಿಂದೂಗಳ ಬೆಳವಣಿಗೆಯನ್ನು ಸಹಿಸಲಾರರು ಎಂಬುದಕ್ಕೆ ಈ ಹಗರಣ ಮತ್ತೊಂದು ಉದಾಹರಣೆಯಷ್ಟೇ!! ಮತ್ತಷ್ಟು ಓದು »