ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

5
ಏಪ್ರಿಲ್

ನಮೋ ಬ್ರಿಗೇಡ್ ಮೇಲಿನ ಕೋಪಕ್ಕೆ ನರೇಶ್ ತುತ್ತಾದರೇ?

– ಹನುಮ೦ತ ಕಾಮತ್

11143647_10204577244893080_67827641632082198_nವಿನಾಯಕ ಪಾಂಡುರಂಗ ಬಾಳಿಗಾ, ಇತ್ತೀಚೆಗೆ ಕೊಲೆಯಾದ ಆರ್‌ಟಿಐ ಕಾರ್ಯಕರ್ತ.ಬಹುಶಃ ಆರು ವರ್ಷಗಳ ಹಿಂದಿನ ಒಂದು ದಿನ. ವಿನಾಯಕ ಬಾಳಿಗಾ ನನ್ನ  ಹತ್ತಿರ  ಬಂದಿದ್ದರು.  ‘ನನಗೆ ಮಾಹಿತಿ  ಹಕ್ಕು  ಕಾಯ್ದೆಯಡಿ  ಮಾಹಿತಿ ಪಡೆಯುವುದು  ಹೇಗೆ  ಎನ್ನುವುದರ  ಬಗ್ಗೆ  ಒಂದಿಷ್ಟು ಮಾಹಿತಿ  ಬೇಕು’ ಎಂದರು. ಕಾರಣ ಕೇಳಿದೆ.. ವಿನಾಯಕ ಬಾಳಿಗಾ ಅವರಿಗೆ ತನ್ನ ಮನೆಯಿಂದ ಕೊಡಿಯಾಲ್  ಬೈಲ್‌ಗೆ  ಹೋಗುವ ರಸ್ತೆಯಲ್ಲಿರುವ  ಪ್ರಖ್ಯಾತ  ಬಿಲ್ಡರ್ ರಮೇಶ್ ಕುಮಾರ್ ಅವರ ಮೌರಿಷ್ಕಾ ವಸತಿ ಸಮುಚ್ಚಯ ಮತ್ತು ಅದರ ಎದುರಿರುವ  ಶಾರದಾ ವಿದ್ಯಾಲಯದ ಮೇಲೆ  ತುಂಬಾ  ಸಿಟ್ಟಿದ್ದಂತೆ ಕಾಣುತ್ತಿತ್ತು. ಸಾಮಾನ್ಯವಾಗಿ ಯಾವುದಾದರೂ  ಒಂದು  ಸಂಸ್ಥೆ ಅಥವಾ ವ್ಯವಸ್ಥೆಯಿಂದ ಸಾರ್ವಜನಿಕರ ಮೇಲೆ ಅನ್ಯಾಯ, ದೌರ್ಜನ್ಯ ನಡೆದಾಗ ಆ ಸಂಸ್ಥೆ ಅಥವಾ ವ್ಯವಸ್ಥೆ  ಎಷ್ಟರ  ಮಟ್ಟಿಗೆ ನಿಯಮ,  ಕಾನೂನುಗಳನ್ನು ಪರಿಪಾಲಿಸುತ್ತಿದೆ, ಯಾವ ಹಂತದಲ್ಲಿ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ತನ್ನ ಇಚ್ಚೆ ಬಂದಂತೆ ವರ್ತಿಸುತ್ತದೆ ಎಂದು ಲಿಖಿತ ದಾಖಲೆಗಳು ನಮ್ಮ ಬಳಿ ಇದ್ದಲ್ಲಿ ಆಗ ನ್ಯಾಯಾಲಯದಲ್ಲಿ ಹೋರಾಟ ಮಾಡುವುದು ಸುಲಭ. ಬಹುಶಃ  ಮೌರಿಷ್ಕಾ  ವಸತಿ  ಸಮುಚ್ಚಯ  ಮತ್ತು ಶಾರದಾ  ವಿದ್ಯಾಲಯದ ವಿರುದ್ಧ ಅಂತಹ ದಾಖಲೆಗಳನ್ನು ಪಡೆದು, ಕಾನೂನು ಹೋರಾಟ ಮಾಡಲು ಬಾಳಿಗಾ ತೀರ್ಮಾನಿಸಿದ್ದರು.ಮೌರಿಷ್ಕಾ ಅಪಾರ್ಟಮೆಂಟಿನಿಂದ  ಏನು  ಸಮಸ್ಯೆಯಾಗುತ್ತಿದೆ  ಎಂದು ಕೇಳಿದೆ. ಮತ್ತಷ್ಟು ಓದು »

2
ಏಪ್ರಿಲ್

ಸ್ವಾಮಿ ವಿವೇಕಾನಂದರ ಒಂದು ಮರು ಓದು

Swamijiಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

3, 4, 5 ಜೂನ್ 2016

ಸ್ಥಳ ಮತ್ತು ಆತಿಥ್ಯ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ, ಕರ್ನಾಟಕ

ಸಹ ಸಂಘಟಕರು: Vergelijkende Cultuurwetenschappen (ಗೆಂಟ್ ವಿಶ್ವವಿದ್ಯಾಲಯ, ಬೆಲ್ಜಿಯಂ); SDM Centre for Interdisciplinary Research in Humanities and Social Sciences (ಉಜಿರೆ, ಭಾರತ) ಮತ್ತು India Platform

 ಪ್ರವೇಶ: ಉಚಿತ, ಆದರೆ ನೊಂದಾವಣೆ ಖಡ್ಡಾಯ.

ನೊಂದಾಯಿಸಿಕೊಳ್ಳಲು, ತಮ್ಮ ಪೂರ್ಣ ಹೆಸರು, ಸಂಸ್ಥೆ ಮುಂತಾದ ವಿವರಗಳೊಂದಿಗೆ ಇಲ್ಲಿಗೆ ಬರೆಯಿರಿ: revisitingvivekananda@gmail.com

ಕಡೆಯ ದಿನಾಂಕ: 10 ಮೇ 2016.

ಸಮ್ಮೇಳನದ ಚಟುವಟಿಕೆಗಳ ತಾತ್ಕಾಲಿಕ ವೆಳಾಪಟ್ಟಿ ಮತ್ತು ಇಂಗ್ಲಿಷ್ concept noteಗಾಗಿ ನೋಡಿ:  http://www.cslc.in/dharma-and-ethics/?page=Dharma_And_Ethics_8 ಮತ್ತಷ್ಟು ಓದು »

31
ಮಾರ್ಚ್

ಸಾವರ್ಕರ್ ಬಗ್ಗೆ ಮಾತಾಡುವುದಕ್ಕೂ ಯೋಗ್ಯತೆ ಬೇಕು

-ಡ್ಯಾನಿ ಪಿರೇರಾ
ಹಳ್ಳಿಮೈಸೂರು-573210

355-Vinyaka-Damodar-Savarkar1123-03-2016 ರಂದು ಭಗತ್ ಸಿಂಗ್, ರಾಜಗುರು ಸುಖದೇವರ ಬಲಿದಾನದ ದಿನ ಸಾಮಾಜಿಕ ಜಾಲತಾಣದಲ್ಲಿ ಇದ್ದಕ್ಕಿದ್ದಂತೆ ಒಂದು ಸುದ್ಧಿ ಕಾಣಿಸಿತು. ಅದು ಕಾಂಗ್ರೆಸ್ಸಿನ ಅಧಿಕೃತ ಐಎನ್‍ಸಿ ಟ್ವಿಟರ್ ನಲ್ಲಿ ಪ್ರಕಟವಾದ ಸಂದೇಶ ವಾಗಿತ್ತು. ಅದರಲ್ಲಿ ಹೇಳುತ್ತಿರುವುದೇನು?! ಭಗತ್ ಸಿಂಗ್, ಸ್ವಾತಂತ್ರ್ಯವೀರ ಸಾವರ್ಕರ್‍ರ ಭಾವಚಿತ್ರದಡಿಯಲ್ಲಿ ಒಬ್ಬರನ್ನು ದೇಶಭಕ್ತ ಮತ್ತೊಬ್ಬರನ್ನು ದೇಶದ್ರೋಹಿ ಎಂದು ಟ್ವಿಟ್ ಮಾಡಲಾಗಿರುವ ಸಂದೇಶವದು! ಈ ದೇಶದ ಸ್ವಾತಂತ್ರ್ಯ ಯೋಧರ ಬಗೆಗಿನ ಕಾಂಗ್ರೆಸ್ಸಿನ ಮಾನಸೀಕತೆಯನ್ನು ಬಲ್ಲವರಿಗೆ ಈ ಹೇಳಿಕೆಯನ್ನು ನೋಡಿದಾಗ ಆಶ್ಚರ್ಯವಾಗುವುದಿಲ್ಲವಾದರೂ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲಾತಾಣಗಳಲ್ಲಿ ಒಂದಷ್ಟು ಹುಡುಕಾಟ ನಡೆಸುವ ಯುವ ಮನಸ್ಸುಗಳಿಗೆ ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಮಾತ್ರವಲ್ಲದೇ ಇಡೀ ಜೀವನವನ್ನೇ ದೇಶ ಮಾತೆಯ ಸೇವೆಗಿಟ್ಟ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಪ್ರೇರಣೆ ಕೊಡಬೇಕಾಗುವ ವಿಷಯವಾಗಬೇಕಾದ ಹಿನ್ನೆಲೆಯಲ್ಲಿ ಅವರ ಬಗೆಗಿನ ಕಾಂಗ್ರೆಸ್ ಪಕ್ಷದ ಮಾತು ನಿಜಕ್ಕೂ ತಪ್ಪು ಸಂದೇಶ ಕೊಡುವಂತದ್ದು! ಇವರೇಕೆ ಹೀಗೆ? ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ನಡುವೆ ಭಿನ್ನಾಭಿಯವಿದ್ದೊಡನೇ ಆ ವ್ಯಕ್ತಿ ವಿದ್ರೋಹಿ ಆಗಬಲ್ಲನೇ?! ಮತ್ತಷ್ಟು ಓದು »

30
ಮಾರ್ಚ್

ಪೇಪರು ಔಟಾಗಿ, ಎಂಟ್ರೆನ್ಸು ಬೇಕಾಗಿ..

– ನಾಗೇಶ ಮೈಸೂರು

chemistry-paper-leak-305_032216115714ಅದು ಸುಮಾರು ೮೨-೮೩ ರ ಕಾಲ. ನಾವು ಅಗ ಎರಡನೆ ಪೀಯೂಸಿಯಲ್ಲಿ ಓದುತಿದ್ದೆವು. ಆಗಿನ್ನೂ ಎಂಜಿನಿಯರಿಂಗ್, ಮೆಡಿಕಲ್ ಸೀಟುಗಳಿಗೆ ಪ್ರವೇಶ ಪರೀಕ್ಷೆ ಇರಲಿಲ್ಲ – ಪೀಯೂಸಿ ಅಂಕೆ, ದರ್ಜೆಯ ಮೇಲೆ ಸೀಟು ನಿರ್ಧಾರವಾಗುತ್ತಿದ್ದ ಕಾಲ. ‘ಸೈನ್ಸ್ ತೆಗೆದುಕೊಂಡರೆ ಕೆಲಸ ಸುಲಭ ಸಿಗುತ್ತೆ’ ಅನ್ನುವ ಜನಪ್ರಿಯ ನಂಬಿಕೆಯನುಸಾರ ಪೀಸಿಎಂಬಿ ತೆಗೆದುಕೊಡಿದ್ದ ನನಗಂತೂ ಕೂತಲ್ಲಿ, ನಿಂತಲ್ಲಿ ಅದೇ ಧ್ಯಾನ, ಆತಂಕ, ಕಳವಳ.

ಫೇಲಾಗಿ ಬಿಟ್ಟರೆ ಎಲ್ಲರ ಎದುರು ಮುಖವೆತ್ತಿ ತಿರುಗುವುದು ಹೇಗೆ ಅನ್ನುವುದಕ್ಕಿಂತ, ಸುತ್ತ ಮುತ್ತಲಿನವರೆಲ್ಲ ಇಟ್ಟುಕೊಂಡಿರುವ ‘ಮಹಾ ಬುದ್ಧಿವಂತ, ಗ್ಯಾರಂಟಿ ಎಂಜಿನಿಯರೋ, ಡಾಕ್ಟರೋ ಆಗ್ತಾನೆ’ ಅನ್ನೋ ನಂಬಿಕೆ ಸುಳ್ಳಾಗಿಬಿಟ್ರೆ ಏನು ಕಥೆಯಪ್ಪ ? ಅನ್ನೋ ಅಳುಕೇ ಹೆಚ್ಚಾಗಿ ಕಿತ್ತು ತಿನ್ನುತ್ತಿತ್ತು. ಇನ್ನು ಮಿಕ್ಕಿದ್ದೆಲ್ಲ ಹೇಳುವ ಹಾಗೆ ಇಲ್ಲಾ ಬಿಡಿ – ಬೆಳಗಿನಿಂದ ಕಾಲೇಜು ಕ್ಲಾಸು, ಮುಗಿಯುತ್ತಿದ್ದಂತೆ ಸೈಕಲ್ ಏರಿ ಹೊರಟರೆ ಒಂದು ಕಡೆಯಿಂದ ಟ್ಯೂಶನ್ನಿನ ಪರಿಭ್ರಮಣನೆ.. ಎಂಜಿನಿಯರಿಂಗೋ, ಮೆಡಿಕಲ್ಲೋ ಆನ್ನೋ ಸಂದಿಗ್ದಕ್ಕೆ ಎಲ್ಲಾ ನಾಲ್ಕು ಸಬ್ಜೆಕ್ಟ್ಟಿಗೂ ಟ್ಯೂಷನ್.. ಮನೆಗೆ ಬಂದ ಮೇಲೆ ಮತ್ತೆ ರಿವಿಷನ್, ಸ್ಟಡಿ ನಡುರಾತ್ರಿಯವರೆಗೆ. ಇವಿಷ್ಟು ಬಿಟ್ಟರೆ ಬೇರೆ ಬದುಕೇ ಇಲ್ಲ ಅನ್ನೋ ತರಹದ ಜೀವನ. ಮತ್ತಷ್ಟು ಓದು »

25
ಮಾರ್ಚ್

ಕಾಂಗ್ರೆಸ್-ಕಮ್ಯುನಿಷ್ಟರ ಮೈತ್ರಿ, ಬಂಗಾಳಕ್ಕೆ ಸಿಕ್ಕಿದ್ದು ಕರಾಳ ರಾತ್ರಿ

-ಶ್ರೀನಿವಾಸ ರಾವ್

bengalಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಕೊಲೆ, ದಾಳಿ – ಭಯೋತ್ಪಾದನೆಗೆ ಧರ್ಮವಿಲ್ಲ- ಕಮ್ಯುನಿಷ್ಟರು
26/11ರ ಮುಂಬೈ ದಾಳಿ, ದಾಳಿ ಮಾಡಿದ್ದು ಇಸ್ಲಾಮ್ ನ ಭಯೋತ್ಪಾದಕರು -ಭಯೋತ್ಪಾದನೆಗೆ ಧರ್ಮವಿಲ್ಲ- ಬುದ್ಧಿಜೀವಿಗಳು, ಕಮ್ಯುನಿಷ್ಟರು. ಉಗ್ರ ಯಾಕೂಬ್ ಮೆಮನ್ ಗೆ ಗಲ್ಲು ಶಿಕ್ಷೆ – ಭಯೋತ್ಪಾದನೆಗೆ ಧರ್ಮವಿಲ್ಲ!

ಭಾರತದಲ್ಲಾಗಲೀ ಅಥವಾ ವಿದೇಶಗಳಲ್ಲಿ ಇಸ್ಲಾಂ ನ ಮೂಲಭೂತವಾದಿಗಳು, ಮತಾಂಧ ಉಗ್ರರು ದಾಳಿ ನಡೆಸಿದಾಗಲೆಲ್ಲಾ ’ಭಯೋತ್ಪಾದನೆಗೆ ಧರ್ಮವಿಲ್ಲ’ವೆಂಬ ಹೇಳಿಕೆ (ready made statement) ಸಿದ್ಧವಾಗಿರುತ್ತದೆ. ಇಂಥದ್ದೊಂದು ಹೇಳಿಕೆಯನ್ನು coin(ಪರಿಚಯಿಸಿದ್ದೇ)ಮಾಡಿದ್ದೇ ಈ ಕಮ್ಯುನಿಷ್ಟರು ಹಾಗೂ ಕಮ್ಯುನಿಷ್ಟರ ಕೃಪಾಪೋಷಿತ ಬುದ್ಧಿಜೀವಿಗಳು. ಭಯೋತ್ಪಾದಕರ ದಾಳಿ ನಡೆದಾಗಲೆಲ್ಲಾ ಇವರಿಂದ ಇಂಥಹ ಹೇಳಿಕೆ ಬರುವುದಾದರೂ ಯಾಕೆ ಅಂದುಕೊಂಡಿದ್ದೀರಿ? ಇಸ್ಲಾಮ್ ಗೆ ಪರ್ಯಾಯವಾದ, ಅಂಥಹದ್ದೇ ಒಂದು ಭಯೋತ್ಪಾದನೆಯನ್ನು ಇವರೂ ಪರಿಚಯಿಸಿದ್ದಾರೆ ಆದ್ದರಿಂದ…
ಮತ್ತಷ್ಟು ಓದು »

19
ಮಾರ್ಚ್

ಪರೀಕ್ಷೆಯ ಲೆಕ್ಕಾಚಾರ

– ನಾಗೇಶ ಮೈಸೂರು

2284916ಒಲ್ಲದ ಮನಸ್ಸಿನಿಂದ ಪುಸ್ತಕ ಹಿಡಿದು ಪರೀಕ್ಷೆಗೆ ಓದಿಕೊಳ್ಳಲು ಒದ್ದಾಡುತ್ತಿದ್ದ ಮಗನನ್ನು ಸಾಮ, ದಾನ, ದಂಡ, ಭೇಧೋಪಾಯಗಳೆಲ್ಲದರ ಬಳಕೆ ಮಾಡುತ್ತ ಸಿದ್ಧಗೊಳಿಸಲು ಹೆಣಗಾಡುತ್ತಾ ಕುಳಿತಿದ್ದೆ. ಅದೇ ಹೊತ್ತಿನಲ್ಲಿ ಟೀವಿಯಲ್ಲಿ ಪ್ರವೇಶ ಪರೀಕ್ಷೆಯ ನಂತರದ ಸವಾಲು, ಮತ್ತದನ್ನೆದುರಿಸುವ ಬಗೆಯನ್ನು ಕುರಿತು ಆತಂಕಪೂರ್ಣ ಚರ್ಚೆ ನಡೆಯುತ್ತಾ ಇತ್ತು. ಒಂದು ಕಾಲದಲ್ಲಿ ನಾವೂ ಇದನ್ನೆಲ್ಲಾ ಅನುಭವಿಸಿ ಮುಂದೆ ಸಾಗಿದ್ದವರೇ. ಆದರೆ ಆ ದಿನದಲ್ಲಿ ಕಾಡಿದ್ದ ಅದೆಷ್ಟೋ ಆತಂಕ, ಒತ್ತಡಗಳು ಕೇವಲ ಆತಂಕ, ಅಜ್ಞಾನ, ನಿಖರ ಗಮ್ಯವಿಲ್ಲದ ಒದ್ದಾಟಗಳ ಕಾರಣದಿಂದ ಉಂಟಾದದ್ದು. ಇಂದು ತಿರುಗಿ ನೋಡಿದರೆ ನಾನು ಓದಿದ್ದಕ್ಕೂ, ಮಾಡುತ್ತಿರುವ ಕೆಲಸಕ್ಕೂ ನೇರ ಸಂಬಂಧವೇ ಇಲ್ಲ. ವಿದ್ಯಾರ್ಹತೆ ಕೇವಲ ಕೆಲಸ ಗಿಟ್ಟಿಸುವ ಆರಂಭದ ರಹದಾರಿಯಾಯ್ತೆಂಬುದನ್ನು ಬಿಟ್ಟರೆ ಮಿಕ್ಕೆಲ್ಲಾ  ಹೊಸ ಹೋರಾಟ, ಪರೀಕ್ಷೆಗಳೇ ಎದುರಾದದ್ದು ವಾಸ್ತವ ಸತ್ಯ. ನಮ್ಮ ವಿದ್ಯಾರ್ಹತೆ, ವಿದ್ಯಾಭ್ಯಾಸ ಆ ಹೋರಾಟಕ್ಕೆ ನಮ್ಮನ್ನು ಸಿದ್ದಪಡಿಸಿರಲೇ ಇಲ್ಲ. ಆದರೂ ನಾವು ಅದೇ ಮರೀಚಿಕೆಯ ಹಿಂದೆ ನಮ್ಮ ಭವಿಷ್ಯದ ಪೀಳಿಗೆಯನ್ನು ತಳ್ಳುತ್ತ ಕುರಿಮಂದೆಗಳ ಹಾಗೆ ಸಾಗುತ್ತಿದ್ದೇವಲ್ಲ ಎಂದೆನಿಸಿ ಖೇದವೂ ಆಯ್ತು.
ಮತ್ತಷ್ಟು ಓದು »

2
ಮಾರ್ಚ್

ಕಾಂಗ್ರೆಸ್ ಮುಕ್ತ ಸುಳ್ಯದಲ್ಲಿ ಅರಳಿದ ಕಮಲ

  – ತಾರನಾಥ ನಡುಮನೆ

BJP Wಸುಳ್ಯ- ಇಂದು ಇದು ರಾಜಕೀಯವಾಗಿ ದಕ್ಷಿಣಕನ್ನಡಕ್ಕೆ ಸೇರಿದರೂ, ಇನ್ನೂ ಕೊಡಗಿನ ಕೆಲವು ಸಂಪ್ರದಾಯವನ್ನು ಉಳಿಸಿಕೊಂಡು ಬಂದ ಪ್ರದೇಶ. ಕರ್ನಾಟಕದ ಪ್ರಮುಖ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವನ್ನು ಹೊಂದಿರುವ ತಾಲೂಕು.

ಸುಳ್ಯ ಪರಿಸರ ಮಂಗಳೂರಿನಂತೆ ಸಮತಟ್ಟಾಗಿರದೆ , ಕೊಡಗಿನಂತೆ ಸಣ್ಣ ಬೆಟ್ಟ-ಗುಡ್ಡ ವನ್ನು ಹೊಂದಿರೋ ಪ್ರದೇಶ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಹಸಿರು ಸಿರಿಯಲ್ಲಿ  ಮಲಗಿರುವ ಊರು. ಇಲ್ಲಿನ ಜನ ಸ್ವಾಭಿಮಾನಿಗಳು , 1837 ರಲ್ಲಿ ನಡೆದ ಅಮರ ಸುಳ್ಯದ ರೈತ ದಂಗೆ ಇದಕ್ಕೆ ಸಾಕ್ಷಿ. ಅಂದು ಕಂದಾಯ ಪಾವತಿ ಹಾಗೂ ಕೊಡಗಿನ ಅರಸ ಚಿಕ್ಕವೀರರಾಜೇಂದ್ರನ ಪದಚ್ಯುತಿ ಕಾರಣಕ್ಕಾಗಿ ತಮ್ಮನಾಳುತ್ತಿದ್ದ ಬ್ರಿಟಿಷರ ವಿರುದ್ದ ದಂಗೆ ಎದ್ದ ರೈತರು ಮಂಗಳೂರಿಗೆ ಮುತ್ತಿಗೆ ಹಾಕಿದ್ದರು. ಮೊದಲು ಮಂಗಳೂರನ್ನು ಗೆದ್ದರೂ ನಂತರ ಆಂಗ್ಲರಿಗೆ ಬಿಟ್ಟು ಕೊಡಬೇಕಾಯಿತು.

ಮತ್ತಷ್ಟು ಓದು »

29
ಫೆಬ್ರ

ಸುಳ್ಸುದ್ದಿ: ಹಾರ್ಪಿಕ್ ಟಾಯ್ಲೆಟ್ ಕ್ಲೀನರ್ ಮೇಲೆ ಅಮೀರ್ ಖಾನ್ ಕಣ್ಣು!

– ಪ್ರವೀಣ್ ಕುಮಾರ್ ಮಾವಿನಕಾಡು
sulsuddi      ಅಸಹಿಷ್ಣುತೆ ಹೇಳಿಕೆಯಿಂದ ಸ್ನ್ಯಾಪ್ ಡೀಲ್ ನ ಜಾಹೀರಾತಿನಿಂದ ಹೊರಹಾಕಲ್ಪಟ್ಟಿದ್ದ ಬಾಲಿವುಡ್ ನಟ ಅಮೀರ್ ಖಾನ್ ಕಣ್ಣು ಇದೀಗ ಇದುವರೆಗೂ ಅಬ್ಬಾಸ್ ನಟಿಸುತ್ತಿದ್ದ ಹಾರ್ಪಿಕ್ ಜಾಹೀರಾತಿನ ಮೇಲೆ ಬಿದ್ದಿದೆ! ಜಾಹೀರಾತಿನಲ್ಲಿ ದೇಶದ ಪರವಾಗಿ ಮಾತನಾಡುವ ವ್ಯಕ್ತಿ ಹೊರಗೆ ದೇಶದ ಮಾನ ತೆಗೆಯುವ ಮಾತನ್ನಾಡಿದ ಕಾರಣಕ್ಕಾಗಿ ಕೇಂದ್ರ ಸರ್ಕಾರದ ಇನ್ಕ್ರೆಡಿಬಲ್ ಇಂಡಿಯಾ ಜಾಹೀರಾತಿನಿಂದಲೂ ಹೊರ ಹಾಕಲ್ಪಟ್ಟ ನಂತರ ಅಮೀರ್ ಖಾನ್,ಮೊದಲ ಬಾರಿಗೆ ತನ್ನ ಕೈಯಲ್ಲಿ ಯಾವುದೇ ಜಾಹೀರಾತಿಲ್ಲದೇ ಕುಳಿತುಕೊಳ್ಳುವಂತಾಗಿದೆ.

ಇದೇ ಸಮಯದಲ್ಲಿ ನಟ ಅಬ್ಬಾಸ್ ನೊಂದಿಗಿನ ಹಾರ್ಪಿಕ್ ಟಾಯ್ಲೆಟ್ ಕ್ಲೀನರ್ ನ ಜಾಹೀರಾತಿನ ಒಪ್ಪಂದದ ಅವಧಿ ಇನ್ನೇನು ಕೆಲವೇ ದಿನಗಳಲ್ಲಿ ಮುಗಿಯಲಿರುವ ಕಾರಣ ಶತಾಯ ಗತಾಯ ಹಾರ್ಪಿಕ್ ಕಂಪನಿಯ ರಾಯಭಾರಿಯಾಗಲೇಬೇಕೆಂದು ನಿರ್ಧರಿಸಿರುವ ಅಮೀರ್,ತನ್ನ ಕಾರ್ಯದರ್ಶಿಯ ಮೂಲಕ ಈಗಾಗಲೇ ಕಂಪನಿಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.ದಂಗಾಲ್ ಹೀರೋನ ಈ ನಡೆಯಿಂದ ಕಂಗಾಲ್ ಆಗಿರುವ ಹಾರ್ಪಿಕ್ ಹೀರೋ ಜಾಹೀರಾತನ್ನು ತನ್ನಲ್ಲಿಯೇ ಉಳಿಸಿಕೊಳ್ಳಲು ಒದ್ದಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

      ಈ ಬಗ್ಗೆ ಮಾತನಾಡಿದ ನಟ ಅಮೀರ್ ಖಾನ್,ನಾನು ಇದುವರೆಗೂ ಹಲವಾರು ಜಾಹೀರಾತುಗಳಲ್ಲಿ ನಟಿಸಿದ್ದೇನೆ.ಇನ್ನು ಮುಂದೆಯೂ ನಟಿಸುತ್ತೇನೆ.ನಾನು ಮತ್ತು ನನ್ನ ಕುಟುಂಬ ಭಾರತವನ್ನು ಅಪಾರವಾಗಿ ಪ್ರೀತಿಸುತ್ತೇವೆ.ನಾವು ಈ ದೇಶವನ್ನು ಬಿಟ್ಟು ಹೋಗುವ ಬಗ್ಗೆ ಯಾವುದೇ ನಿದ್ದೆ ಬಾರದ ರಾತ್ರಿಯಲ್ಲೂ ಸಮಾಲೋಚಿಸಿಲ್ಲ.ಒಂದು ವೇಳೆ ಹಾರ್ಪಿಕ್ ಟಾಯ್ಲೆಟ್ ಕ್ಲೀನರ್ ನ ಜಾಹೀರಾತಿನಲ್ಲಿ ನಟಿಸುವ ಅವಕಾಶ ದೊರೆತರೆ ಅದರಿಂದ ಬರುವ ಸಂಭಾವನೆಯ ಶೇ.೫೦ ರಷ್ಟು ಮೊತ್ತವನ್ನು ಪಾಕೀಸ್ತಾನದಲ್ಲಿ ಬಾಂಬ್ ದಾಳಿಯಿಂದ ಸಂತ್ರಸ್ತರಾದ ಜನರಿಗೆ ನೆರವಾಗಲು ಬಳಸುವುದಾಗಿ ಹೇಳಿದರು.

ಈ ನಡುವೆ ಬೆಂಗಳೂರಿನ ಜಾತ್ಯಾತೀತ ಶಾಸಕ ಜಮೀರ್ ಅಹಮ್ಮದ್ ಅವರನ್ನು ಭೇಟಿಯಾದ ಅಬ್ಬಾಸ್,ಈ ವಿಷಯದಲ್ಲಿ ತನಗೆ ಸಹಾಯ ಮಾಡಬೇಕೆಂದು ಕೋರಿದರು.ಅವರಿಗೆ ಪ್ರತಿಕ್ರಿಯಿಸಿದ ಜಮೀರ್,ಜಾತ್ಯಾತೀತರ ನಡುವೆ ಈ ರೀತಿಯ ಸ್ಪರ್ಧೆ ಒಳ್ಳೆಯದಲ್ಲ.ನಮ್ಮ ಹಿರಿಯರ ಮುಂದೆ ಈ ವಿಷಯವನ್ನಿಟ್ಟು ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು.ಎಲ್ಲಾ ಜಾತ್ಯಾತೀತರ ಕಂಪನಿಗಳ ಉತ್ಪನ್ನಗಳ ಪ್ರಚಾರಕ್ಕೂ ರಾಯಭಾರಿಗಳನ್ನಾಗಿ ಜಾತ್ಯಾತೀತರನ್ನೇ ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಫ಼ತ್ವಾ ಹೊರಡಿಸುವ ಬಗ್ಗೆ ತಾನು ಈಗಾಗಲೇ ನಮ್ಮ ವೈಯುಕ್ತಿಕ ಕಾನೂನು ಮಂಡಳಿ ಮತ್ತು ಶಾಹಿ ಇಮಾಂ ಬುಖಾರಿಯವರ ಜೊತೆಯಲ್ಲಿ ಒಂದು ಸುತ್ತಿನ ಮಾತುಕತೆ ನಡೆಸಿದ್ದು ಕೆಲವೇ ದಿನಗಳಲ್ಲಿ ಈ ಬಗ್ಗೆ ಫ಼ತ್ವಾ ಹೊರಬೀಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನಮ್ಮ ದೇಶದ ಸಂವಿಧಾನದಲ್ಲಿ ಫ಼ತ್ವಾಗಳಿಗೆ ಮಾನ್ಯತೆಯಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಜಮೀರ್,ನಮ್ಮ ವೈಯುಕ್ತಿಕ ಕಾನೂನಿನಲ್ಲಿ ಸಂವಿಧಾನಕ್ಕೇ ಮಾನ್ಯತೆಯಿಲ್ಲ ಎಂದು ಸ್ವಲ್ಪ ಖಾರವಾಗಿಯೇ ಉತ್ತರಿಸಿದರು.

ಮುಂದಿನ ಶುಕ್ರವಾರ ಡಿ.ಎಸ್.​ಯು.ಮುಖಂಡ ಉಮರ್ ಖಾಲಿದ್ ನ ನೇತೃತ್ವದಲ್ಲಿ ಬನಾರಸ್ ಹಿಂದೂ ವಿ.ವಿ.ಸೇರಿದಂತೆ ದೇಶದ ಹದಿನೆಂಟು ವಿಶ್ವವಿದ್ಯಾಲಯಗಳಲ್ಲಿ ಅಮೀರ್ ಖಾನ್ ಪರ ಘೋಷಣೆ ಕೂಗಿ ಹಾರ್ಪಿಕ್ ಜಾಹೀರಾತಿನಲ್ಲಿ ನಟಿಸಲು ಅವರಿಗೆ ಬೆಂಬಲ ವ್ಯಕ್ತಪಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಇದೇ ವೇಳೆ ಪಾಕೀಸ್ತಾನದ ಪ್ರಧಾನಿ ನವಾಜ್ ಷರೀಫ್‌ ಲಾಹೋರ್ ನಲ್ಲಿ ಇಂದು ಮಾತನಾಡುತ್ತಾ,ಮುಂದಿನ ತಿಂಗಳು ಅಮೇರಿಕಾದಲ್ಲಿ ನಡೆಯುವ ಪರಮಾಣು ಶೃಂಗಸಭೆಯಲ್ಲಿ ಈ ವಿಷಯದ ಬಗ್ಗೆ ಅಲ್ಲಿನ ಅಧ್ಯಕ್ಷರ ಗಮನ ಸೆಳೆಯುವುದಾಗಿ ತಿಳಿಸಿದ್ದಾರೆ.

    ಕೆಲ ರಾಜಕೀಯ ಪಕ್ಷಗಳೂ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ಹಲವು ಪ್ರಗತಿಪರ ಸಂಘಟನೆಗಳು ‘ದೇಶದಲ್ಲಿ ಜಾತ್ಯಾತೀತರ ನಡುವೆ ನಡೆಯುತ್ತಿರುವ ಈ ರೀತಿಯ ಅನಾರೋಗ್ಯಕರ ಸ್ಪರ್ಧೆಗೆ ಮೋದಿ ಸರ್ಕಾರದ ಷಡ್ಯಂತ್ರವೇ ಕಾರಣ’ ಎಂದು ಆರೋಪಿಸಿದ್ದು,ಮುಂದಿನ ಸೋಮವಾರದಂದು ಖಾಸಗಿ ಜಾಹೀರಾತಿನಲ್ಲಿ ಜಾತ್ಯಾತೀತರಿಗೆ ಮೀಸಲಾತಿಗೆ ಒತ್ತಾಯಿಸಿ ದೇಶದಾದ್ಯಂತ ಹೋರಾಟ ಹಮ್ಮಿಕೊಂಡಿರುವುದಾಗಿ ತಿಳಿಸಿವೆ.ಈ ಬಗ್ಗೆ ಸರ್ಕಾರ ಶೀಘ್ರವಾಗಿ ಕಾನೂನು ತರದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿಯೂ ಅವು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ!

ಒಟ್ಟಿನಲ್ಲಿ ಎಲ್ಲವೂ ಅಮೀರ್ ಖಾನ್ ಅಂದುಕೊಂಡಂತೆಯೇ ಆದರೆ ಇನ್ನು ಕೆಲವೇ ದಿನಗಳಲ್ಲಿ ಅಮೀರ್ ಖಾನ್ ಕೂಡಾ ಅಬ್ಬಾಸ್ ನಂತೆಯೇ ನೇರವಾಗಿ ನಿಮ್ಮ ಶೌಚಾಲಯ ಕೋಣೆಗೆ ನುಗ್ಗುವ ದಿನ ದೂರವಿಲ್ಲ!!

*ವಿ.ಸೂ:ಈ ಸುದ್ದಿಯು ಕೇವಲ ಕಾಲ್ಪನಿಕವಾಗಿದ್ದು ಮೇಲೆ ಹೆಸರಿಸಿದ ಆಯಾ ಪಕ್ಷ,ವ್ಯಕ್ತಿ,ಸಂಸ್ಥೆ,ಸಂಘಟನೆಗಳ ಇದುವರೆಗಿನ ನಡವಳಿಕೆಗಳನ್ನಾಧರಿಸಿ ಕಲ್ಪಿಸಿಕೊಂಡಿದ್ದಾಗಿರುತ್ತದೆ.ಈ ಸುದ್ದಿಯು ಕೇವಲ ಮನರಂಜನೆಗಾಗಿಯೇ ಹೊರತೂ ಯಾರನ್ನೂ ನೋಯಿಸುವ ಅಥವಾ ಅವಮಾನಿಸುವ ಉದ್ದೇಶದ್ದಲ್ಲ. 

28
ಫೆಬ್ರ

ಬರ್ನಾಲ್ ಗೋಸ್ವಾಮಿ

– ರೋಹಿತ್ ಚಕ್ರತೀರ್ಥ

“ನೀನು, ನಿನ್ನಂಥವರು ಈ ವಿಶ್ವವಿದ್ಯಾಲ17-Arnab-Goswamiಯದಲ್ಲಿ ಸೇರಿಕೊಂಡು ಗಬ್ಬೆಬ್ಬಿಸುತ್ತಿದ್ದೀರಿ. ಉಗ್ರಗಾಮಿಗಳ ಪರವಾಗಿ ಘೋಷಣೆ ಕೂಗುವಾಗ ನಿನಗೆ ಆತ್ಮಸಾಕ್ಷಿ ಚುಚ್ಚಬೇಕಾಗಿತ್ತು. ಆದರೆ ಅದರ ಲವಲೇಶವೂ ನಿನಗೆ ಇರುವ ಹಾಗಿಲ್ಲ. ಹೇಳು, ನಿನ್ನಂಥ ದೇಶದ್ರೋಹಿಗಳಿಗೆ ನಾವ್ಯಾಕೆ ತೆರಿಗೆ ದುಡ್ಡು ಕಟ್ಟಿ ಓದಿಸಬೇಕು? ಅಲ್ಲಿ ಹದಿನೈದು ಸಾವಿರ ಅಡಿ ಎತ್ತರದಲ್ಲಿ, ಮೈನಸ್ 50 ಡಿಗ್ರಿ ಉಷ್ಣಾಂಶದಲ್ಲಿ ನಿಂತು ದೇಶ ಕಾಯುತ್ತಿದ್ದ ಲ್ಯಾನ್ಸ್ ನಾಯಕ್ ಹನುಮಂತಪ್ಪ ಇಂದು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಅವರ ಬದಲು ನಿನ್ನಂಥವರು ಇಂದು ದೇಶದ ದಾರಿತಪ್ಪಿದ ಯುವಕರಿಗೆ ರೋಲ್ ಮಾಡೆಲ್ ಆಗುತ್ತಿದ್ದೀರಲ್ಲ, ದುರಂತ! ದುರಂತ ಇದು!” ಎಂದು ಅಬ್ಬರಿಸುತ್ತಿದ್ದನಾತ. ಹಾಗೆ ಭಾರತದ ಎಲ್ಲ ದೇಶಭಕ್ತರ ಪರವಾಗಿ ಆತ ಗುಡುಗುತ್ತಿದ್ದರೆ ಉತ್ತರಿಸಬೇಕಿದ್ದ ಉಮರ್ ಖಾಲಿದ್‍ನಿಗೆ ಉಸಿರುಕಟ್ಟಿದಂತಾಗಿತ್ತು. “ಬಾಯ್ತೆಗೆದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುತ್ತೀರಿ. ನಿಮ್ಮ ಸ್ವಾತಂತ್ರ್ಯ ಕೂಡ ಸೆಲೆಕ್ಟಿವ್. ಬೇಕಾದವರ ಪರವಾಗಿ ಮಾತಾಡಲು ಮಾತ್ರ ಅದನ್ನು ಬಳಸುತ್ತೀರಿ. ಅದೇ ನಿಮ್ಮ ಶತ್ರುಗಳ ಪರವಾಗಿ ಬೇರೆಯವರು ಮಾತಾಡಿದಾಗ ಅವರ ಮೇಲೆ ಹಲ್ಲೆಗೆ ಮುಂದಾಗುತ್ತೀರಿ. ಬೆಂಕಿಬಿತ್ತು ನಿಮ್ಮ ಸ್ವಾತಂತ್ರ್ಯಕ್ಕೆ!” ಎಂದು ಆತ ಉಗಿದು ಉಪ್ಪಿನಕಾಯಿ ಹಾಕುತ್ತಿದ್ದರೆ ಗಲಭೆ ಎಬ್ಬಿಸಿದ್ದ ವಿದ್ಯಾರ್ಥಿಗಳ ಪರ ವಾದಿಸಲು ಬಂದಿದ್ದ ಮಂದಿ ಬಾಲ ಸುಟ್ಟ ಬೆಕ್ಕಿನಂತಾಗಿದ್ದರು.

       ಅವನು ಅರ್ಣಬ್ ಗೋಸ್ವಾಮಿ. ಚುಟುಕಾಗಿ ಹೇಳಬೇಕೆಂದರೆ ಕರ್ಣಪಿಶಾಚಿ. ಟೈಮ್ಸ್ ನೌ ಎಂಬ ಆಂಗ್ಲ ಸುದ್ದಿವಾಹಿನಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ ಆತನ “ನ್ಯೂಸ್ ಅವರ್” ಕಾರ್ಯಕ್ರಮ ಪ್ರಸಾರವಾಗುತ್ತದೆ. ಇದರ ವಿಶೇಷತೆಯೇನೆಂದರೆ ಕಾರ್ಯಕ್ರಮದ ಮೊದಲ ಐದು ನಿಮಿಷದಲ್ಲಿ ಅರ್ಣಬ್ ಅಂದಿನ ಚರ್ಚೆಯ ಪ್ರಮುಖ ವಿಷಯ ಏನು ಎಂಬುದನ್ನು ತಿಳಿಸುತ್ತಾನೆ. ನಂತರದ ಐವತ್ತೈದು ನಿಮಿಷ ಸುಮಾರು ಹತ್ತು-ಹನ್ನೆರಡು ಜನ ತಾರಕ ಸ್ವರದಲ್ಲಿ ವಾಕ್ಸಮರ ನಡೆಸಿಕೊಳ್ಳುತ್ತಾರೆ. ಒಟ್ಟಿಗೆ ತಂದುಹಾಕಿದರೆ, ಕೇವಲ ಎರಡೇ ನಿಮಿಷದಲ್ಲಿ ಅವರೆಲ್ಲರೂ ಪರಸ್ಪರರನ್ನು ಗುದ್ದಿ ನೆಲಕ್ಕೆ ಕೆಡವಿ ಚೂರಿ ಹಾಕಿ ಬೆಂಕಿ ಕೊಟ್ಟುಕೊಂಡು ಸರ್ವನಾಶವಾಗುತ್ತಾರೆ ಅನ್ನಿಸುವಷ್ಟು ಭೀಕರವಾಗಿ ಅವರೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಇದು ನ್ಯೂಸ್ ಅವರೋ ನಾಯ್ಸ್ ಅವರೋ ಎಂಬ ಗೊಂದಲ ಕಾರ್ಯಕ್ರಮದ ಪ್ರತಿ ವೀಕ್ಷಕನಲ್ಲಿ ಮೂಡುವಂತಿರುತ್ತದೆ. ಶಬ್ದವನ್ನು ಡೆಸಿಬಲ್‍ಗಳಲ್ಲಿ ಅಳೆಯುತ್ತಾರೆ; ಕರ್ಕಶತೆಯನ್ನು ಅರ್ಣಬ್ ಎಂಬ ಮಾನದಲ್ಲಿ ಅಳೆಯುತ್ತಾರೆ ಎಂಬ ಜೋಕಿದೆ. ಆತನ “ನೇಷನ್ ವಾಂಟ್ಸ್ ಟು ನೋ” ಎಂಬ ಪದಪುಂಜ ಬಹಳ ಪ್ರಸಿದ್ಧ. ದೇಶಕ್ಕೆ ಖಂಡಿತಾ ಬೇಕಾಗಿಲ್ಲ; ಉತ್ತರ ಬೇಕಾಗಿರುವುದು ನಿನಗೆ ಮಾತ್ರ. ಹಾಗಾಗಿ ನಿನ್ನ ರೆಡಿಮೇಡ್ ಡೈಲಾಗನ್ನು ಬದಲಾಯಿಸಿ ಅರ್ಣಬ್ ವಾಂಟ್ಸ್ ಟೂ ನೋ ಅನ್ನು ಮಾರಾಯ ಎಂದು ಹೇಳಿದವರುಂಟು. ಈತ ರಾಜಕೀಯದ ಹಲವು ಆಷಾಢಭೂತಿ ಮುಖಗಳನ್ನು ಹೊರಗೆಳೆದ; ಹಲವರ ನಿಜಬಣ್ಣ ಬಯಲು ಮಾಡಿದ; ಇಂಥವರು ಮಾಧ್ಯಮದಲ್ಲಿ ಬೇಕು ಎನ್ನುವವರದ್ದು ಒಂದು ಗುಂಪಾದರೆ ಈತನಿಂದಾಗಿಯೇ ಮಾಧ್ಯಮದ ಪಾವಿತ್ರ್ಯ ಹೋಯಿತು; ಅರಚಾಟ – ದೋಷಾರೋಪಣೆಗಳೇ ಸಂವಾದವೆನ್ನುವ ಭ್ರಮೆ ಹಿಡಿಸಿ ಆರೋಗ್ಯಕರ ಚರ್ಚೆಯನ್ನು ಹಳ್ಳ ಹಿಡಿಸಿದ ಭೂಪನೀತ ಎನ್ನುವವರಿದ್ದಾರೆ. ನೀವು ಒಪ್ಪುತ್ತೀರೋ ಬಿಡುತ್ತೀರೋ, ಅದು ಅರ್ಣಬ್‍ನಿಗೆ ಮುಖ್ಯವಲ್ಲ. ವಿಮರ್ಶಕರು “ಅದೊಂದು ಡಬ್ಬಾ ಸಿನೆಮ” ಎಂದು ಹುಯಿಲೆಬ್ಬಿಸಿದರೂ ಮುನ್ನೂರು ಕೋಟಿ ಬಾಚುವ ಸಲ್ಮಾನ್‍ಖಾನ್ ಸಿನೆಮಗಳಂತೆ ಅರ್ಣಬ್‍ನ ಟಿವಿ ಕಾರ್ಯಕ್ರಮ. ಹಾಗಾಗಿ ಟೀಕಾಕಾರರತ್ತ ಅವನದ್ದು ಡೋಂಟ್ ಕೇರ್.

ಮತ್ತಷ್ಟು ಓದು »

26
ಫೆಬ್ರ

ಪ್ರೀತಿಯ ನೆಹರೂಜಿ,ನೆಮ್ಮದಿಯಾಗಿರಬೇಕಲ್ಲ? ಕಂಗ್ರಾಜುಲೇಷನ್ಸ್!

– ಪಲ್ಲವಿ ರಾವ್

ನೆಹರೂಅಂತೂ ಭಾರತದ ಯುವ ಜನತೆಗೆ ದೇಶವೆಂದರೆ ಭೌಗೋಳಿಕ ಇರುವಿಕೆಯೇ ಅರ್ಥಹೀನ, ಇಲ್ಲಿನ ನಂಬಿಕೆಗಳೆಲ್ಲವೂ ಅವೈಜ್ನಾನಿಕ, ಆಚರಣೆಗಳೆಲ್ಲ ತುಚ್ಚ , ಹೆಮ್ಮೆ ಪಡುವಂತದ್ದೂ ಇಲ್ಲೇನೂ ಇಲ್ಲ , ದೇಶವೆಂದರೆ ತಾಯಿ ಅನ್ನುವ ಕಲ್ಪನೆಯೇ ಬುಲ್ಶಿಟ್ ಅನ್ನುವ ಮನೋಭಾವವನ್ನು ನಿಮ್ಮ ಕನಸಿನ ವೈಜ್ನಾನಿಕ ಆಧುನಿಕ ಪಾಶ್ಚಾತ್ಯ ಶಿಕ್ಷಣ ಬಹಳ ಯಶಸ್ವಿಯಾಗಿ ಬಿತ್ತಿದೆ. ನೀವು ಬಹಳವಾಗಿ ಆರಾಧಿಸಿದ ಇತಿಹಾಸ ತಜ್ನರಿಂದ ಬರೆಸಿದ ಇತಿಹಾಸ ಈ ದೇಶದ ತರುಣರಲ್ಲಿ ಸಿನಿಕತೆಯನ್ನು,ದೇಶ ಕಾಯುವ ಸೈನಿಕರ ಬಗ್ಗೆ ತಿರಸ್ಕಾರವನ್ನೂ ಪ್ರಜಾಪ್ರಭುತ್ವದ ಬುನಾದಿಯ ಮೇಲೆ ದಾಳಿ ನಡೆಸಿದವರನ್ನೂ ಆರಾಧಿಸುವ ಮಟ್ಟಕ್ಕೆ ಬೆಳೆಸಿದೆ. ನೀವು ಇದನ್ನೇ ಬಯಸಿದ್ದೀರಿ ಅಲ್ವ? ಪ್ರತಿಯೊಂದನ್ನೂ ಪ್ರಶ್ನಿಸುವ, ತಿರಸ್ಕರಿಸುವ ಎಡಬಿಡಂಗಿ ಮನೋಭಾವವನ್ನೇ ವೈಜ್ನಾನಿಕ ಎಂದು ಅರ್ಥೈಸಿದ್ದವರಿಗೆ ಇಂದಿನ ವಿಶ್ವವಿದ್ಯಾನಿಲಯಗಳ ದಿಕ್ಕುದೆಶೆ ಇಲ್ಲದ ಭವಿಷ್ಯದ ಬಗ್ಗೆ ಕನಸು, ದೇಶದ ಬಗ್ಗೆ ಕಾಳಜಿ ಎರಡೂ ಇಲ್ಲದ ಸಿನಿಕ ಯುವಭಾರತ ಹೆಮ್ಮೆ ತಂದಿರಬೇಕು ,

ಕಂಗ್ರಾಜ್ಯುಲೇಷನ್ಸ್!

ನೀವು ಮತ್ತು ನಿಮ್ಮ ಕುಟುಂಬದ ಸ್ವತ್ತಾಗಿ ಹೋದ ಪಕ್ಷಕ್ಕೆ ಭಾರತದ ಬಗ್ಗೆ ಪ್ರೀತಿ, ಹೆಮ್ಮೆ ಹುಟ್ಟುವುದಾದರೂ ಹೇಗೆ? ಸದಾ ಪಾಶ್ಚಾತ್ಯ ಚಿಂತನೆ, ಅಲ್ಲಿನ ವಿದ್ಯಾಲಯಗಳ ಓದು, ಅಲ್ಲಿನದೇ ಬದುಕನ್ನು ಕಂಡ ನಿಮ್ಮವರಿಗೆ ಈ ದೇಶ ಬರಿಯ ಮೂಢನಂಬಿಕೆಗಳ , ಜಾತಿಗಳ, ತಾರತಮ್ಯದ ಆಡೊಂಬೊಲವಾಗಿಯೇ ಕಂಡಿತ್ತು. ನೀವೇನೋ ಡಿಸ್ಕವರಿ ಆಫ್ ಇಂಡಿಯ ಬರೆದುಬಿಟ್ಟಿರಿ. ಆದರೆ ನಿಮ್ಮ ಮರಿ ಮಕ್ಕಳಿಗೆ ಅದರ ಕಲ್ಪನೆಯಾದರೂ ಇದೆ ಅಂದು ಕೊಂಡಿದ್ದೀರ? ನೀವು ಅಷ್ಟೆಲ್ಲ ಕಾಳಜಿಯಿಂದ ಜತನವಾಗಿ ಅತ್ಯಂತ ಚಾಣಾಕ್ಶತನದಿಂದ ಅಡೆತಡೆಗಳನ್ನು ನಿವಾರಿಸಿ , ಕಾದಿಟ್ಟ ದೇಶಾಡಳಿತದ ಕಿರೀಟ ಕೈ ತಪ್ಪಿದ ಸಂಕಟದಲ್ಲಿ ನಿಮ್ಮದೇ ವಂಶದ ಕುಡಿ ದೇಶದ್ರೋಹಿಗಳಿಗೂ ಜೈಕಾರ ಹಾಕುತ್ತಾನೆ. ನಮಗವನ ಬಗ್ಗೆ ನಿರೀಕ್ಶೆಗಳೇನೂ ಇಲ್ಲ ಬಿಡಿ. ಎಷ್ಟಾದರೂ ಏನೂ ಬೆಳೆಯದ ಹಿಮದ ಮರುಭೂಮಿಯನ್ನೂ ಬೇರೆ ದೇಶಕ್ಕೆ ಕೊಟ್ಟರೇನೂ ತೊಂದರೆ ಇಲ್ಲ ಅಂದವರಲ್ಲವೆ ನೀವೂ? ನಿಮ್ಮ ವಾರಸುದಾರರು ನಿಮ್ಮ ಜೀನ್ಗಳಿಗೆ ನ್ಯಾಯ ಸಲ್ಲಿಸುತ್ತಿದ್ದಾರೆ ಬಿಡಿ. ಭಾರತದ ಸಾರ್ವಭೌಮತೆ ವಿಚ್ಛಿದ್ರವಾದರೂ ಚಿಂತೆ ಇಲ್ಲ, ಅವರ ಆಡಳಿತ ನಡೆಸಲು ತುಂಡು ಉಳಿದರೆ ಸಾಕು ಅನ್ನುತ್ತ ಭಾರತವನ್ನು ತುಂಡಾಗಿಸಲು ಹೋರಾಡುವವರ ಜತೆ ಧರಣಿ ಕೂರುತ್ತಿದ್ದಾರೆ. ನೀವು ಮಗಳನ್ನು ಪಟ್ಟಕ್ಕೇರಿಸಿದಾಗ ಇದನ್ನೇ ನಿರೀಕ್ಷಿಸಿದ್ದಿರೇನೋ ಅಲ್ವ?

ಮತ್ತಷ್ಟು ಓದು »