“ರೋಟಿ ಕಪಡಾ ಔರ್ ಮಕಾನ್ ನಿಂದ ಹೊಸ ಆಶೋತ್ತರದತ್ತ ಯುವ ಸಮೂಹ”
– ಪ್ರೊ. ಪುನೀತ್ರಾಜ್ ಕೆ. ಎನ್
ಜೈನ್ ಯೂನಿವರ್ಸಿಟಿ
ವಿಶ್ವದ ಐದನೇ ಒಂದರಷ್ಟು ಯುವಜನರು ಭಾರತದಲ್ಲಿದ್ದಾರೆ. ದೇಶದ ಅರ್ಧದಷ್ಟು ಜನರ ವಯೋಮಾನ 25 ವರ್ಷಕ್ಕಿಂತ ಕಡಿಮೆ ಇದೆ. ದೇಶ ಮುನ್ನಡೆ ಸಾಧಿಸಬೇಕು ಎಂದರೆ ಈ ಯುವಜನರ ಆಶೋತ್ತರಗಳನ್ನು ಈಡೇರಿಸುವುದು ಬಹಳ ಮುಖ್ಯವಾದ ಸಂಗತಿ. ಕೈಬೆರಳ ತುದಿಯಲ್ಲಿ ಸಿಗುತ್ತಿರುವ ತಂತ್ರಜ್ಞಾನದ ಪರಿಣಾಮವಾಗಿ ಯುವಜನರ ಆಶೋತ್ತರಗಳಲ್ಲಿ ಗಣನೀಯ ಬದಲಾವಣೆ ಆಗಿರುವುದು ಗೋಚರಿಸುತ್ತದೆ. ವಿಶ್ವಾದಾದ್ಯಂತ ಏನಾಗುತ್ತಿದೆ ಎಂಬುದನ್ನು ಅರಿಯುವುದರ ಮೂಲಕ ಜೀವನದ ಬಗ್ಗೆ ತಮ್ಮದೇ ಆದ ವಿಶ್ವನೋಟವನ್ನು ಬೆಳೆಸಿಕೊಳ್ಳಲು ತಂತ್ರಜ್ಞಾನ ಸಹಕರಿಸುತ್ತ್ತಿದೆ. ಇತ್ತೀಚಿನ ವರ್ಷಗಳಲ್ಲಿ “ಸಫಲತೆ” ಎಂಬ ಅಂಶವೇ ಸಾಕಷ್ಟು ಬದಲಾವಣೆ ಕಂಡಿರುವುದನ್ನು ನಾವು ನೋಡಬಹುದು. ಇಂದಿನ ಯುವಕರು ಧೈರ್ಯಶಾಲಿಗಳು, ನಿರ್ಧಾರ ಕೈಗೊಳ್ಳಲು ಹಿಂಜರಿಯದ, ಖಂಡಿಸುವ, ಮುಕ್ತವಾಗಿ ಟೀಕಿಸುವ, ತಮಗೆ ಯಾವುದು ಉತ್ತಮ ಎಂಬುದನ್ನು ಅರಿಯುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ 20 ವರ್ಷಗಳ ಮುನ್ನ ಪರಿಸ್ಥಿತಿ ಹೀಗೆ ಇರಲಿಲ್ಲ. ಅದು ಐಐಟಿ/ಐಐಎಂಗಳಿಂದ ಪದವಿ ಪಡೆಯುವುದು, ಅಧಿಕಾರಿಯಾಗಿ ನೇಮಕವಾಗುವುದು, ಉತ್ತಮ ಸಂಬಳ ಹೊಂದಿರುವ ಸುರಕ್ಷಿತ ಕೆಲಸ ಅರಸುವುದು, ವಿದೇಶಗಳಲ್ಲಿರಬಹುದಾದ ಕೆಲಸದ ಅವಕಾಶಗಳತ್ತ ಆಕರ್ಷಣೆಗಳೇ ಸಫಲತೆಗೆ ಮಾನದಂಡವಾಗಿದ್ದವು. ಇದಕ್ಕೆ ತದ್ವಿರುದ್ಧವಾಗಿ, ಕುಟುಂಬ ಆಡಳಿತಕ್ಕೆ ಸಮಾನವಾಗಿದ್ದ ಹಾಗೂ ಸಫಲತೆಯ ಪ್ರಮಾಣ ಕಡಿಮೆಯಿದ್ದ ಕ್ರೀಡೆ, ಸಿನಿಮಾ ಹಾಗೂ ರಾಜಕೀಯ ಕ್ಷೇತ್ರಗಳು ಬಹುತೇಕಯುವಕ/ಯುವತಿಯರ ಆಯ್ಕೆಯೇ ಆಗುತ್ತಿರಲಿಲ್ಲ. ಕ್ರೀಡಾತಾರೆಯ ಪುತ್ರನೊಬ್ಬ ತನ್ನ ಕ್ರೀಡಾ ಸಾಮರ್ಥ್ಯಕ್ಕಿಂತಲೂ ತನ್ನ ತಂದೆಯ ಪ್ರಭಾವದ ಕಾರಣಕ್ಕೆ ಕ್ರೀಡಾಪಟುವಾಗುವ ಅವಕಾಶ ಹೊಂದಿರುತ್ತಿದ್ದ. ಸಿನಿಮಾತಾರೆಯ ಪುತ್ರನನ್ನು ತನ್ನ ಪ್ರಭಾವದ ಕಾರಣದಿಂದಲೇ ಬೆಳ್ಳಿತೆರೆಗೆ ಕರೆತರುವ ಹಾಗೂ ರಾಜಕಾರಣಿಯ ಪ್ರಭಾವದಿಂದಲೇ ತನ್ನ ಪುತ್ರನನ್ನು ರಾಜಕೀಯಕ್ಕೆ ಕರೆತರುತ್ತಿದ್ದರು. ವಿಫಲವಾಗುವ ಹಾಗೂ ತಿರಸ್ಕಾರಕ್ಕೆ ಒಳಗಾಗುವ ಅಪಾಯಕ್ಕೆ ಹೆದರುತ್ತಿದ್ದ ಬಹುಪಾಲು ಯುವಕರು ಈ ಕ್ಷೇತ್ರಗಳಿಂದ ದೂರವೇ ಉಳಿಯುತ್ತಿದ್ದರು. ನಂತರದ ದಿನಗಳಲ್ಲಿ, ಅಷ್ಟೇನೂ ಉತ್ಸಾಹದಿಂದ ಸ್ವಾಗತಿಸದ ಪರಿಸ್ಥಿತಿ ಬಂದಿತು. ಘಟಾನುಘಟಿಗಳನ್ನು ದಾಟಿ ಈ ಬಾಗಿಲುಗಳನ್ನು ದಾಟಿ ಒಳಹೋಗುವುದು ಅಸಾಧ್ಯ ಎಂಬಷ್ಟೇ ಕಠಿಣ ಕೆಲಸವಾಗಿತ್ತು. ಈ ಪ್ರವಾಹದ ವಿರುದ್ಧ ಈಜಿ ದಡ ಸೇರಿದವರು ಬೆರಳೆಣಿಕೆ ಮಂದಿ ಮಾತ್ರ. ಶಾರೂಖ್ಖಾನ್, ಅಕ್ಷಯಕುಮಾರ್ನಂತಹ ಕೆಲ ಸಿನಿಮಾ ಸ್ಟಾರ್ಗಳು ಹಾಗೂ ಕೆಲವೇ ಕ್ರೀಡಾಪಟುಗಳು ಮಾತ್ರವೇ ಎಲ್ಲ ಅಡೆತಡೆಗಳನ್ನು ದಾಟಿ ಸಫಲರಾಗಲು ಸಾಧ್ಯವಾಯಿತೇ ಹೊರತು ಬಹುತೇಕ ಯುವಕರು ಇದು ತಮ್ಮ ಕೈಲಾಗುವ ಕೆಲಸವಲ್ಲ ಎಂದುಕೊಂಡು ಈ ಕ್ಷೇತ್ರಗಳಿಂದ ದೂರವುಳಿಯುತ್ತಿದ್ದರು. ಮತ್ತಷ್ಟು ಓದು 
ಮತದಾರರ ಮೋದಿ Vs ಬೆಂಗಳೂರು ಮಾಫಿಯಾ
– ರಾಕೇಶ್ ಶೆಟ್ಟಿ
‘ನಾವು ಗೆದ್ದಿರುವ ಕ್ಷೇತ್ರಗಳನ್ನು ಕಳೆದುಕೊಳ್ಳಬಾರದು ಅಣ್ಣ. ಈ ಹಿಂದೆ ಯುಟಿ ಖಾದರ್ ಅಪ್ಪನ ಕಾಲದಲ್ಲೇ ಉಳ್ಳಾಲದಲ್ಲಿ ಬಿಜೆಪಿಯಿಂದ ಜಯರಾಮ ಶೆಟ್ಟರು ಗೆದ್ದಿದ್ದರು. ನಂತರದ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಕೋಪಿಸಿಕೊಂಡು ದಳಕ್ಕೆ ಹೋಗಿ ಸ್ಪರ್ಧಿಸಿ ವೋಟ್ ಡಿವೈಡ್ ಮಾಡಿದರು.ಹಾಗೆ ಕಾಂಗ್ರೆಸ್ಸಿನ ಯು.ಟಿ ಫರೀದ್ ಗೆದ್ದರು. ಉಳ್ಳಾಲ ನಮ್ಮ ಕೈ ಬಿಟ್ಟು ಹೋಯಿತು. ಅಲ್ಲಿಂದ ಇಲ್ಲಿನವರೆಗೆ ನಮಗೆ ಆ ಕ್ಷೇತ್ರವನ್ನು ಮತ್ತೆ ಗೆಲ್ಲಲಿಕ್ಕಾಗಿಲ್ಲ ನೋಡಿ’ ನನ್ನ ತಮ್ಮನಂತಹ ಮಿತ್ರ ರಾಜೇಶ್ ನರಿಂಗಾನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೇಳಿದ ಮಾತು ನನಗೀಗ ನೆನಪಾಯ್ತು. ನೆನಪು ಮಾಡಿಸಲು ಕಾರಣವಾಗಿದ್ದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಒಳಬೇಗುದಿ.
ಬೆಂಗಳೂರು ದಕ್ಷಿಣದ ಬಗ್ಗೆ ಮಾತನಾಡುವ ಮೊದಲು, ರಾಜರಾಜೇಶ್ವರಿ ನಗರ,ಜಯನಗರದ ವಿಧಾನಸಭಾ ಚುನಾವಣೆ ಬಗ್ಗೆ ಮಾತನಾಡಬೇಕು.
ಇತ್ತೀಚಿನ ದಿನಗಳಲ್ಲಿ ಬಿಜೆಪಿ ಪಕ್ಷದ ಅತಿ ಪ್ರಮುಖ ನಾಯಕರು ಹಠಾತ್ ನಿಧನರಾಗುವ ಮೂಲಕ ಪಕ್ಷಕ್ಕೆ ನಷ್ಟವಾಗಿದೆ. ಆದರೆ ಈ ರೀತಿಯ ಹಠಾತ್ ಆಘಾತಗಳು ಈ ಪಕ್ಷದ ಆರಂಭದಿಂದಲೇ ಶುರುವಾಗಿದೆ. ಪಕ್ಷದ ಆಧಾರ ಸ್ತಂಭದಂತಿದ್ದ ಶ್ಯಾಂ ಪ್ರಸಾದ್ ಮುಖರ್ಜಿ,ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಕೊಲೆಗಳು ಮೊದಲನೇ ಆಘಾತಗಳು. ಅದರಿಂದ ಚೇತರಿಸಿಕೊಂಡೇ ಪಕ್ಷ ಇಲ್ಲಿವರೆಗೂ ಬಂದು ನಿಂತಿದೆ. ಪ್ರಮೋದ್ ಮಹಾಜನ್,ಗೋಪಿನಾಥ್ ಮುಂಡೆ,ಪರಿಕ್ಕರ್, ಅನಂತಕುಮಾರ್,ವಿಜಯಕುಮಾರ್ ಇವೆಲ್ಲ ಇತ್ತೀಚಿನ ಆಘಾತಗಳು.
ನೋಡಿ ಸ್ವಾಮಿ .. ನಾವಿರೋದು ಹೀಗೆ.. !!
- ಸುಜಿತ್ ಕುಮಾರ್
ಮೊನ್ನೆ ಆ ದೃಶ್ಯಗಳನ್ನು ನೋಡಿ ಯಾಕೋ ನಮ್ಮ ಶಂಕರ್ ನಾಗ್ ನೆನಪಾದ್ರು. ಅದು ಶಂಕರ್ ನಾಗ್ ಅನ್ನೋದಕ್ಕಿಂತ ಶಂಕರ್ ನಾಗ್ ಅಭಿನಯದ ‘ನೋಡಿ ಸ್ವಾಮಿ ನಾವಿರೋದೇ ಹೀಗೆ’ ಚಿತ್ರದ ಟೈಟಲ್ ಹಾಡು ನೆನಪಾಯಿತು ಎನ್ನಬಹುದು. ನಗರದ ಗಲ್ಲಿಮೂಲೆಗಲ್ಲಿ ತನ್ನ MAT ಬೈಕಿನ ಮೇಲೆ ಕೂತು ಹಾಡುತ್ತಾ ಸಾಗುವ ಚಿತ್ರದ ದೃಶ್ಯದ ತುಣುಕು, ದಿನ ಬೆಳಗಾದರೆ ಬೆಳ್ಳನೆಯ ಬಟ್ಟೆಗಳನ್ನು ತೊಟ್ಟು ‘ನಾನೇ ಸಾಚಾ ಆತ ಮಾತ್ರ ನೀಚ’ ಎಂಬಂತೆ ಎಲ್ಲೆಂದರಲ್ಲಿ ಬೈಯುವ ಭಾಷಣಗಳನ್ನು ಮಾಡುತ್ತಾ ಓಟಿಗಾಗಿ ಊರೂರು ಸುತ್ತುತ್ತಾ ಕೊನೆಗೆ ಅಪ್ಪಿ ತಪ್ಪಿ ಆತನೇ ಎದುರಿಗೆ ಪ್ರತ್ಯಕ್ಷವಾದರೆ ‘ಹಿಂದಿ ಚೀನೀ ಬಾಯಿ ಬಾಯಿ’ ಎಂಬುವಂತೆ ತಬ್ಬಿಕೊಂಡು ಮುತ್ತಿಡುವುದೊಂದೇ ಬಾಕಿ ಏನೋ ಎಂಬ ಧಾಟಿಯಲ್ಲಿ ನಟಿಸುತ್ತಾ ನಿಲ್ಲುವ ರಾಜಕಾರಣಿಗಳನ್ನು ನೆನೆಪಿಸುತ್ತಿತ್ತು. ಅವರುಗಳ ಹಿಂದೆಯೇ ನಮ್ಮ ಶಂಕರ್ ಗುರು ‘ನೋಡಿ ಸ್ವಾಮಿ ಇವ್ರ್ ಇರೋದೇ ಹೀಗೆ’ ಎಂದು ಹಾಡಿದಂತೆ ಭಾಸವವಾಗುತ್ತಲಿತ್ತು. ನಿಂತ ನೆರಳಿಗೆ ಆಗದ ಮಾಜಿ ಸಿಎಮ್ ಗಳಿಬ್ಬರು ವೇದಿಕೆಯೊಂದರ ಮೇಲೆ ಕೈ ಕೈ ಕುಲುಕುತ್ತಾ ‘ಪಾಲಿಟಿಕ್ಸ್ ಅಪಾರ್ಟ್, ನಾವಿಬ್ಬರು ಅತ್ಯುತ್ತಮ ಸ್ನೇಹಿತರು’ ಎಂದಾಗ ನೆರೆದಿದ್ದ ನೂರಾರು ಅಭಿಮಾನಿಗಳು ತಲೆಯನ್ನು ಕೆರೆದುಕೊಳ್ಳುತ್ತಾ ಒಬ್ಬರನ್ನೊಬ್ಬರು ಮಿಕ ಮಿಕ ನೋಡತೊಡಗಿದಂತೂ ಸುಳ್ಳಲ್ಲ. ರಾಜ್ಯದ ಹಿರಿಯ ರಾಜಕಾರಣಿಗಳಾಗಿ ಅಂತವರ ಬಾಯಿಂದ ಇಂಥ ಹಿರಿಯ ಮಾತುಗಳು ಬರುವುದು ತಪ್ಪೇನಿಲ್ಲ. We Should Appreciate that. ಆದರೆ ಇಂದು ಹೀಗಂದು ನಾಳೆ ಮತ್ತದೇ ಮೈ ಮೈ.. ತು ತು .. ಎಂದು ಬೆಂಕಿಕಾರುವ ಮಾತುಗಳಾದರು ಏತಕ್ಕೆ ಸ್ವಾಮಿ? ಮಿಗಿಲಾಗಿ ಇಂತಹ ಪೊಳ್ಳು ಮಾತುಗಳ ಸರದಾರರಾಗಿ ಅವರುಗಳಿಗೇ ಇರದ ವೈರತ್ವವನ್ನು ಒಬ್ಬ ಕಾಮನ್ ಸಿಟಿಸನ್ ಆಗಿ ನಾವ್ಯಕ್ಕೆ ಕಟ್ಟಿಕೊಳ್ಳಬೇಕು ಹೇಳಿ? ಮತ್ತಷ್ಟು ಓದು 
ಬದುಕುವ ಹಾದಿಯ ತೋರಿಸಿ ಹೋದ ಮಹಾನಾಯಕ
– ರಾಕೇಶ್ ಶೆಟ್ಟಿ
ಹಿಂದೊಮ್ಮೆ ಗೆಳೆಯರ ಜೊತೆಗೆ ರಾಜಕೀಯ ಮಾತನಾಡುವಾಗ,ನರೇಂದ್ರ ಮೋದಿಯವರ ನಂತರ ಆ ಜಾಗಕ್ಕೆ ಅವರಷ್ಟೇ ಸಮರ್ಥ ಹಾಗೂ ಅವರಂತಹದ್ದೇ ವ್ಯಕ್ತಿತ್ವವುಳ್ಳ ಮತ್ತೊಬ್ಬ ವ್ಯಕ್ತಿ ಬಿಜೆಪಿಯಲ್ಲಿದ್ದಾರೆಯೇ? ಎಂಬ ಪ್ರಶ್ನೆ ಬಂದಿತ್ತು. ಇದ್ದಾರೆ! ಆ ವ್ಯಕ್ತಿಯ ಹೆಸರು ಮನೋಹರ್ ಪರಿಕ್ಕರ್ ಎಂದಿದ್ದೆ. ಬೆಂಗಳೂರಿನಲ್ಲಿ ಸ್ವಾಮಿ ವಿವೇಕಾನಂದರ ೧೫೦ನೇ ಜಯಂತಿಗೆ ಮುಖ್ಯ ಅತಿಥಿಯಾಗಿ ಬಂದಿದ್ದಾಗ ಅವರನ್ನು ಹತ್ತಿರದಿಂದ ನೋಡುವ,ಒಡನಾಡುವ ಅವಕಾಶ ಸಿಕ್ಕಿತ್ತು. ಯಾವುದೇ ಹಮ್ಮುಬಿಮ್ಮಿಲ್ಲದ ಸರಳ ವ್ಯಕ್ತಿತ್ವ ಅವರದ್ದು.
ಪ್ರಧಾನಿ ಮೋದಿಯವರು, ಪರಿಕ್ಕರ್ ಅವರಿಗೆ ತಮ್ಮ ಸಂಪುಟದ ಅತಿ ಮಹತ್ವದ ರಕ್ಷಣಾ ಖಾತೆಯನ್ನು ನೀಡಿದ್ದರು. ಪರಿಕ್ಕರ್ ಅವರು ಒಲ್ಲದ ಮನಸ್ಸಿನಿಂದಲೇ ತಮ್ಮ ರಾಜಕೀಯ ಅಖಾಡ ಗೋವಾವನ್ನು ಬಿಟ್ಟು ದೆಹಲಿಗೆ ಬಂದಿದ್ದರು.ಒಳ್ಳೆಯ ಪ್ಯಾಕೇಜುಗಳು ಯಾವಾಗಲೂ ಲಿಮಿಟೆಡ್ ಎಡಿಷನ್ನಿನಲ್ಲಿ ಬರುತ್ತವಂತೆ. ಪರಿಕ್ಕರ್ ಅವರ ವಿಷಯದಲ್ಲಿ ಈ ಮಾತು ನಿಜವಾಗಿ ಹೋಯಿತು. ೬೩ ನಿಜಕ್ಕೂ ಸಾಯುವ ವಯಸ್ಸಲ್ಲ. ವರ್ಷದ ಹಿಂದೆ ಅವರಿಗೆ ಪ್ಯಾಂಕ್ರಿಯಾಸ್ ಕ್ಯಾನ್ಸರ್ ಇದೆ ಎಂದಾಗಲೇ ಸ್ವಚ್ಛ ಹಾಗೂ ದಕ್ಷ ರಾಜಕಾರಣದೆಡೆಗೆ ಆಸಕ್ತಿಯಿರುವವರ ಮನಸ್ಸುಗಳು ಮುದುಡಿ ಹೋಗಿತ್ತು. ಒಂದು ವರ್ಷ ಕ್ಯಾನ್ಸರಿನೊಂದಿದೆ ಬಡಿದಾಡುತ್ತಲೇ ಇದ್ದರೂ ತಮ್ಮ ಕರ್ತವ್ಯ ಪ್ರಜ್ಞೆಯನ್ನು ಅವರು ಮರೆಯಲೇ ಇಲ್ಲ.ತೀರಾ ಇತ್ತೀಚೆಗಷ್ಟೇ ತೀವ್ರ ಅನಾರೋಗ್ಯದ ನಡುವೆಯೇ ದೈನಂದಿನ ಕೆಲಸಗಳನ್ನು ನಿರ್ವಹಿಸಿದ್ದರು.ಸದನದಲ್ಲಿ ಬಜೆಟ್ ಕೂಡ ಮಂಡಿಸಿದ್ದರು ಪುಣ್ಯಾತ್ಮ.
ಗುಡಿಯಿಂದ ಮನೆಕಾಯುವವನು ದೇವರಾದರೆ ಗಡಿಯಿಂದ ದೇಶ ಕಾಯುವವನು ..
– ಸುಜಿತ್ ಕುಮಾರ್
ಉರಿಯುವ ಬಿಸಿಲಾಗಲಿ ಅಥವಾ ಕೊರೆಯುವ ಚಳಿಯಾಗಲಿ, ಹಸಿವು ಕೂಗುತ್ತಿರಲಿ ಅಥವಾ ದುಃಖ ಮಡುಗಟ್ಟಿರಲಿ, ದೇಹ ಸಾಕೆನ್ನುತ್ತಿರಲಿ ಅಥವಾ ಭಯ ಮನೆಮಾಡಿರಲಿ, ಹಗಲಿರಲಿ, ಇರುಳಿರಲಿ, ಕೇವಲ ದೇಶ ದೇಶ ದೇಶವೆನುತ ಜೀವ ತೆತ್ತುವ ಆ ಹುಚ್ಚು ಪ್ರೇಮಿಗಳಿಗೆ ಅರ್ಥಾತ್ ನಮ್ಮ ಧೀರ ಸೈನಿಕರನ್ನು ಸ್ಮರಿಸುತ್ತಾ, ಗೌರವಿಸುತ್ತಾ ಹಾಗು ಶ್ರದ್ದಾಂಜಲಿಯನ್ನು ಅರ್ಪಿಸುತ್ತಾ… ಜೊತೆಗೆ ನೆನ್ನೆ ಇಡೀ ದೇಶಕ್ಕೆ ಸರ್ಪ್ರೈಸ್ ನೀಡಿ ಭಾರತದ ವಿರಾಟ್ ರೂಪವನ್ನು ವಿಶ್ವಕ್ಕೆ ಪರಿಚಯಿಸಿದ ಸೈನಿಕರಿಗೆ ಮತ್ತು ಸದಾ ಕಾಲ ನಮ್ಮ ಸೈನಿಕರಿಗೆ ಹಿರಿಯಣ್ಣನಂತೆ ಜೊತೆ ನೀಡುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಒಂದು ಸೆಲ್ಯೂಟ್.. ಮತ್ತಷ್ಟು ಓದು 
ಅಕಟಕಟ ಸಂಸಾರವನು ನೆಚ್ಚಿಕೆಡಬ್ಯಾಡ
ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪಕನ್ನಡಅಧ್ಯಯನಕೇಂದ್ರ,
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಶ್ರೀಪಾದರಾಜರು (1404-1502) ಹರಿದಾಸ ಸಾಹಿತ್ಯದ ಪ್ರಮುಖ ಕೀರ್ತನಕಾರರಲ್ಲಿ ಒಬ್ಬರು. ಚನ್ನಪಟ್ಟಣ ಬಳಿಯ ಅಬ್ಬೂರಿನವರಾದ ಇವರನ್ನುಪುರಾಣೋಕ್ತ ಹರಿಭಕ್ತಧ್ರುವನ ಅವತಾರ ಎಂದು ಹೇಳಲಾಗುತ್ತದೆ. ವಿಜಯನಗರ ಅರಸರ ರಾಜಗುರುಗಳಾಗಿದ್ದ ಇವರು ಪುರಂದರ, ಕನಕರ ಗುರುಗಳಾಗಿದ್ದ ವ್ಯಾಸತೀರ್ಥರ ಗುರುಗಳೂ ಹೌದು. ಭ್ರಮರಗೀತ, ವೇಣುಗೀತ, ಗೋಪಿಗೀತ, ಮಧ್ವನಾಮ ಇವರ ಪ್ರಮುಖರಚನೆಗಳು. ರಂಗವಿಠಲ ಎಂಬ ಅಂಕಿತದಲ್ಲಿ ಇವರು ಕೀರ್ತನೆಗಳನ್ನೂ ರಚಿಸಿದ್ದಾರೆ. ‘ನೀ ಇಟ್ಟ ಹಂಗೆ ಇರುವೆನೋ ಹರಿಯೇ’;‘ಕಣ್ಗಳಿದ್ಯಾತಕೋ ಕಾವೇರಿರಂಗನ ನೋಡದಾ’;‘ಭೂಷಣಕೆ ಭೂಷಣ…’ ಮೊದಲಾದವು ಅವರ ಅತ್ಯಂತ ಜನಪ್ರಿಯ ಕೀರ್ತನೆಗಳಾಗಿ ಜನಮನದಲ್ಲಿ ನೆಲೆನಿಂತಿವೆ. ‘ಅಕಟಕಟ ಸಂಸಾರವನು ನೆಚ್ಚಿಕೆಡಬ್ಯಾಡ’ ಎಂಬುದು ಅವರ ಅನೇಕಾನೇಕ ಕೀರ್ತನೆಗಳಲ್ಲೊಂದು. ಮತ್ತಷ್ಟು ಓದು 
ಮಾಧ್ಯಮಗಳೇ ಸಾಕು ನಿಲ್ಲಿಸಿ ನಿಮ್ಮ ಬೂಟಾಟಿಕೆಯ..
– ವರುಣ್ ಕುಮಾರ್
ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಇವು ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುಮುಖ್ಯ ಆಧಾರ ಸ್ತಂಭಗಳು. ಇವುಗಳಲ್ಲಿ ಯಾವುದಾದರೊಂದು ಅಂಗ ನಿಷ್ಕ್ರೀಯಗೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಅಪಾಯಕ್ಕೀಡಾಗುವ ಸಾಧ್ಯತೆಗಳಿರುತ್ತದೆ. ಇಂತಹ ನಿಷ್ಕ್ರೀಯ ವ್ಯವಸ್ಥೆಗಳಿಗೆ ಚುರುಕು ಮುಟ್ಟಿಸಲು, ನಿದ್ದೆಯಲ್ಲಿರುವ ಅಧಿಕಾರಿಗಳನ್ನು ಎಬ್ಬಿಸಲು ಜನತೆ ಹಾಗೂ ಆಡಳಿತ ವ್ಯವಸ್ಥೆಯ ನಡುವಿನ ಸೇತುವೆಯಾಗಿ ಕಾರ್ಯ ನಿರ್ವಹಿಸಲು ಸುದ್ದಿ ಮಾದ್ಯಮಗಳ ಪಾತ್ರ ಬಹುಮುಖ್ಯವಾದುದು. ಅದಕ್ಕಾಗಿ ಮಾದ್ಯಮಕ್ಕೆ ೪ ನೇ ಆಧಾರಸ್ತಂಭವೆಂಬ ವಿಶೇಷ ಸ್ಥಾನವನ್ನು ಕಲ್ಪಿಸಲಾಗಿದೆ.
ಈ ಸ್ಥಾನವನ್ನು ಮಾದ್ಯಮ ರಂಗದವರು ಕಾಪಾಡಿಕೊಂಡಿದ್ದಾರೆಯೇ?, ಇವರ ಕಾರ್ಯಶೈಲಿ, ನಿರ್ವಹಣೆ ಹಾಗೂ ಅವರ ನಡವಳಿಕೆಗಳು ಇದರ ಬಗ್ಗೆ ಸಣ್ಣ ವಿಶ್ಲೇಷಣೆಯನ್ನು ನಡೆಸೋಣ.
ಕೆಲ ದಶಕಗಳ ಹಿಂದೆ ಹೋದರೆ ಸುದ್ದಿ ವಾಹಿನಿಗಳ ಆರ್ಭಟ ಇಷ್ಟೊಂದಿರಲಿಲ್ಲ. ಆಯಾ ದಿನಗಳಲ್ಲಿ ನಡೆದಂತಹ ಸುದ್ದಿಗಳನ್ನು ಕೇವಲ ೨೦ ಅಥವಾ ೩೦ ನಿಮಿಷಗಳಲ್ಲಿ ಎಲ್ಲ ಪ್ರಮುಖ ವಾರ್ತೆಗಳನ್ನು ಪ್ರಸಾರ ಮಾಡುತ್ತಿದ್ದವು. ಆದರೆ ಯಾವಾಗ ಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಯನ್ನು ಭಾರತ ಸಾಧಿಸಿದಾಗ ಎಲ್ಲ ವಿಭಾಗಗಳಲ್ಲಿ ಮಹತ್ತರ ಬದಲಾವಣೆಗಳು ಕಾಣಲಾರಂಭಿಸಿದರು. ಒಂದೆರಡು ವಾಹಿನಿಗಳಿದ್ದಲ್ಲಿ ನೂರಾರು ವಾಹಿನಿಗಳು ಟಿ.ವಿ.ಪರದೆಯಲ್ಲಿ ಕಾಣತೊಡಗಿಸಿದವು. ಅದರಲ್ಲೂ ಮುಖ್ಯವಾಗಿ ೨೪*೭ ಘಂಟೆ ಸುದ್ದಿಗಳನ್ನು ಬಿತ್ತರಿಸುವ ವಾಹಿನಿಗಳೆಂದರೆ ಅದೊಂದು ಪ್ರತಿಷ್ಠೆಯ ವಿಷಯವೇ ಆಗಿತ್ತು. ಇಲ್ಲಿಂದ ಸುದ್ದಿಗಳನ್ನು ಕೊಡುವ ವ್ಯಾಖ್ಯೆಯೇ ಬದಲಾಗತೊಡಗಿತು, ಬ್ರೇಕಿಂಗ್ ನ್ಯೂಸ್, ಫ್ಲಾಶ್ ನ್ಯೂಸ್ ಈ ರೀತಿಯಾಗಿ ಪ್ರತಿ ಕ್ಷಣದಲ್ಲೂ ಸುದ್ದಿಯನ್ನು ಬಿತ್ತರಿಸುವ ರೀತಿಯಲ್ಲಿ ವಾಹಿನಿಗಳು ಬಂದುಬಿಟ್ಟವು. ಆದರೆ ಯಾವಾಗ ತಮ್ಮ ಲಾಭಕ್ಕೋಸ್ಕರ, ವಾಣಿಜ್ಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಾಹಿನಿಗಳು ಕೆಲಸ ಮಾಡತೊಡಗಿದಾಗ ಪ್ರಜಾಪ್ರಭುತ್ವದ ಆಧಾರ ಸ್ತಂಭವೇ ಅಲುಗಾಡುವ ಪರಿಸ್ಥಿತಿಗೆ ಬರತೊಡಗಿತು. ಮತ್ತಷ್ಟು ಓದು 
ಪುಲ್ವಾಮ ದಾಳಿ: ಭಾರತ ಕಲಿತ ಪಾಠ
– ವರುಣ್ ಕುಮಾರ್
ಫೆಬ್ರವರಿ ೧೪ನೇ ತಾರೀಖು ಭಾರತದ ಸೈನಿಕರ ಪಾಲಿಗೆ ಅತ್ಯಂತ ಕರಾಳ ದಿನ. ಕಳೆದ ದಶಕದಲ್ಲಿಯೇ ನಡೆದ ಅತ್ಯಂತ ಘೋರ ಉಗ್ರರ ದಾಳಿ ಅಮಾಯಕ ಸೈನಿಕರ ಸಾವಿಗೆ ಕಾರಣವಾಗಿ ಇಡೀ ದೇಶವೇ ಮಮ್ಮಲ ಮರುಗಿತು. ಪ್ರಪಂಚದೆಲ್ಲೆಡೆಯಿಂದ ಈ ಘಟನೆಯ ಬಗ್ಗೆ ಖಂಡನೆ ವ್ಯಕ್ತವಾಗಿ ಭಾರತದ ಜೊತೆ ನಾವಿದ್ದೇವೆ ಎಂಬ ಸಂದೇಶವನ್ನು ರವಾನಿಸಿ ಬೆಂಬಲವನ್ನು ವ್ಯಕ್ತಪಡಿಸಿದರು. ಈ ದಾಳಿಯ ಬಳಿಕ ಭಾರತದಲ್ಲಿ ನಡೆದ ಬೆಳವಣಿಗೆಗಳ ಹಾಗೂ ಈ ದಾಳಿಯಿಂದ ಭಾರತ ಕಲಿಯಬೇಕಾದ ಪಾಠಗಳೇನು ಎಂಬುದಾಗಿ ವಿಶ್ಲೇಷಿಸೋಣ.
ಭಾರತದೊಳಗಿನ ಉಗ್ರರು:
ಹೌದಲ್ಲವೇ, ನಮಗೆ ಈ ಉಗ್ರರದಾಳಿಯ ಬಳಿಕ ಹಲವಾರು ಉಗ್ರರು ನಮ್ಮ ದೇಶದೊಳಗೆ ಅಣಬೆಗಳಂತೆ ಹುಟ್ಟಿಕೊಳ್ಳತೊಡಗಿದರು. ಪಾಕಿಸ್ತಾನ್ ಜಿಂದಾಬಾದ್, ಇದು ನಿಜವಾದ ಸರ್ಜಿಕಲ್ ಸ್ಟ್ರೈಕ್ ಇತ್ಯಾದಿ ಬರಹಗಳನ್ನು ಒಳಗೊಂಡ ಅನೇಕ ದೇಶದ್ರೋಹಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾರಂಭಿಸಿದರು. ಪಂಜಾಬ್ ಎಂದಿಗೂ ದೇಶಪ್ರೇಮಿಗಳನ್ನು ಕೊಟ್ಟಂತಹ ರಾಜ್ಯ ಆದರೆ ಅದೇ ರಾಜ್ಯದ ಸಚಿವನಾದ ಸಿಧುರವರು ಪಾಕಿಸ್ತಾನದ ಜೊತೆ ಮಾತುಕತೆ ಭಾರತ ಮುಂದಾಗಬೇಕು ಎಂದು ಸಲಹೆ ನೀಡಿದರು. ಇದರ ಬೆನ್ನಿಗೆ ಸಮಯಕ್ಕೆ ತಕ್ಕಂತೆ ಬಣ್ಣ ಬದಲಾಯಿಸುವ ಪ್ರಕಾಶ್ ರೈ ಒಂದು ಹಂತದಲ್ಲಿ ಭಾರತದ ಜೊತೆ ನಾವಿದ್ದೇವೆ ಎಂದು ಬೆಂಬಲ ನೀಡಿದರು. ಆದರೆ ಮರುದಿನ ಬಿಜೆಪಿಯ ಬಗ್ಗೆ ಮೋದಿಯವರ ಬಗ್ಗೆ ಟೀಕಿಸಿ ಘಟನೆಯನ್ನು ರಾಜಕೀಯಗೊಳಿಸಿದರು. ಕಮಲ್ ಹಾಸನ್ ಅಂತಹ ಸ್ವಯಂಘೋಷಿತ ನಾಯಕರು ಸೈನಿಕರು ಸಾಯಲೆಂದೇ ಸೇನೆಗೆ ಸೇರುತ್ತಾರೆ ಎಂದು ಹೇಳಿಕೆಗಳನ್ನು ಕೊಟ್ಟಾಗ ಇದು ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ಯಾವ ರೀತಿ ನೋವಾಗಬಹುದು ಎಂಬ ಕಾಳಜಿಯಿಲ್ಲದೆ ಮಾತನಾಡಿದರು. ಮತ್ತಷ್ಟು ಓದು 
ನಮೋ ಶಿವಕುಮಾರ ಸ್ವಾಮಿ: ಶರಣಂ ಗಚ್ಛಾಮಿ!
~ ತುರುವೇಕೆರೆ ಪ್ರಸಾದ್
ಗಾಂಧಿನಗರ
ತುರುವೇಕೆರೆ-572227
ಸಿದ್ಧಗಂಗೆಯ ಐಸಿರಿ, ತಾನಾಗಬಲ್ಲನಿಲ್ಲಿ ನರನು ನಾರಾಯಣನು ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟ ಶ್ರೇಷ್ಠ ನರಹರಿ, ಸಿದ್ಧಗಂಗೆಯ ಸಾಧನೆಯ ಉತ್ತುಂಗದ ಗಿರಿ ಡಾ.ಶ್ರೀ ಶಿವಕುಮಾರಸ್ವಾಮೀಜಿ ಭೌತಿಕವಾಗಿ ನಮ್ಮನ್ನೆಲ್ಲಾ ಅಗಲಿ ಹೋಗಿದ್ದಾರೆ. ಸುಮಾರು 9 ದಶಕಗಳ ಕಾಲ ಅವರು ಮನುಕುಲಕ್ಕೆ ಸಲ್ಲಿಸಿದ ಸೇವೆ ಅನುಪಮವಾದದು, ಅನನ್ಯವಾದದು, ಮಾನವೀಯತೆಯ ಇತಿಹಾಸದಲ್ಲಿ ಎಂದೆಂದಿಗೂ ಅಜರಾಮರವಾಗಿ ‘ನಭೂತೋ ನಭವಿಷ್ಯತ್’ ಎನ್ನುವಂತೆ ದಾಖಲಾಗುವಂತಾದ್ದು. ಶಾಂತಿ ನೆಮ್ಮದಿ ಬಯಸಿದವನಿಗೆ ದಿವ್ಯ ದರ್ಶನ, ನರಳುತ್ತಾ ಬಂದವನಿಗೆ ಮಾನವೀಯ ಸೇವೆಯ ದಿಗ್ದರ್ಶನ, ಹಸಿದವನಿಗೆ ಅನ್ನ, ಅನಾಥನಿಗೆ ಪ್ರೀತಿಯ ಸಿಂಚನ, ಅರಿವಿನ ಜೋಳಿಗೆ ಹಿಡಿದು ಬಂದವನಿಗೆ ಜ್ಞಾನ- ಸಿದ್ಧಗಂಗಾ ಸ್ವಾಮೀಜಿಯ ಬಹುಮುಖಿ ದಾಸೋಹದ ವೈಖರಿಯೇ ಅನನ್ಯ! ಮತ್ತಷ್ಟು ಓದು 
ಅಬ್ಬಾ..ಈ ದೇಶದಲ್ಲಿ ಅದೆಂತಹ ಅಸಹಿಷ್ಣುತೆ..!
– ವರುಣ್ ಕುಮಾರ್
ಪುತ್ತೂರು

- ಈ ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ – ಶಾರುಖ್ ಖಾನ್
- ನನ್ನ ಪತ್ನಿಗೆ ಮತ್ತು ನನಗೆ ಈ ದೇಶದಲ್ಲಿ ಇರಲು ಭಯವಾಗುತ್ತಿದೆ, ಯಾಕೆಂದರೆ ಇಲ್ಲಿ ಅಸಹಿಷ್ಣುತೆ ಇದೆ – ಅಮೀರ್ ಖಾನ್
- ನನ್ನ ಮೊಮ್ಮಕ್ಕಳಿಗೆ ಈ ದೇಶದಲ್ಲಿರಲು ಭಯವಾಗುತ್ತಿದೆ – ನಾಸೀರುದ್ದಿನ್ ಷಾ
ಹೌದಲ್ಲವೇ, ಇವರು ಹೇಳಿದಂತೆ ಕಳೆದ ನಾಲ್ಕೂವರೆ ವರ್ಷಗಳಿಂದ ಎಷ್ಟೊಂದು ಅಸಹಿಷ್ಣುತೆ ಇದೆಯಲ್ಲವೆ, ಎಲ್ಲ ಕಡೆಗಳಲ್ಲಿ ಗೋವಿನ ಹೆಸರಲ್ಲಿ ಕೊಲೆ,ಸುಲಿಗೆ ಧರ್ಮದ ಹೆಸರಲ್ಲಿ ಗಲಭೆ, ಅಲ್ಪಸಂಖ್ಯಾತರಿಗಂತೂ ಉಸಿರುಗಟ್ಟಿದ ಸ್ಥಿತಿ. ಒಂದೇ ಎರಡೇ, ಇದಕ್ಕೆಲ್ಲ ಯಾರು ಮುಖ್ಯ ಕಾರಣ ಕೇಂದ್ರ ಸರ್ಕಾರ. ಅದರಲ್ಲೂ ಮುಖ್ಯವಾಗಿ ಮೋದಿ. ಈ ಮನುಷ್ಯ ಬಂದ ಮೇಲಂತೂ ಈ ದೇಶದ ಬಗ್ಗೆ ತಾತ್ಸರ ಮೂಡುವಂತೆ ಮಾಡಿದ್ದಾನೆ. ಅಲ್ಲವೇ.. ಅಷ್ಟಕ್ಕೂ ಮೋದಿಯ ಬಗ್ಗೆ ಈ ನಮ್ಮ ದೇಶಭಕ್ತ(?)ರಿಗೆ ಯಾಕೆ ಇಷ್ಟೊಂದು ಕೋಪ ಸ್ವಲ್ಪ ಮೆಲುಕು ಹಾಕೋಣ. ಮತ್ತಷ್ಟು ಓದು 




