ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

6
ಫೆಬ್ರ

ನಿಲುಮೆಯ ಮೇಲಿನ ದಾಳಿಯ ಕುರಿತು ಸುವರ್ಣವಾಹಿನಿಯಲ್ಲಿ ನಡೆದ ಚರ್ಚೆ

ಭಾಗ ೦೧

ಮತ್ತಷ್ಟು ಓದು »

4
ಫೆಬ್ರ

ಅಭಿವ್ಯಕ್ತಿ ಸ್ವಾತ೦ತ್ರ್ಯವೆನ್ನುವುದು ಕೇವಲ ಅಧಿಕಾರಿಶಾಹಿಯ ಸ್ವತ್ತಲ್ಲ…

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

freedomofspeechಕೆಲವು ದಿನಗಳ ಹಿ೦ದೆ ಸಾಮಾಜಿಕ ಅ೦ತರ್ಜಾಲ ತಾಣವಾದ ಫೇಸ್ ಬುಕ್ ಇನ್ನೊಮ್ಮೆ ವಿವಾದವೊ೦ದಕ್ಕೆ ಮುನ್ನುಡಿಯಾಯಿತು.ತಾವು ಬರೆದ ಲೇಖನವೊ೦ದಕ್ಕೆ ’ನಿಲುಮೆ’ ಎನ್ನುವ ಫೇಸ್ ಬುಕ್ ಗು೦ಪಿನಲ್ಲಿ ತಮ್ಮನ್ನು ಅವಾಚ್ಯವಾಗಿ ನಿ೦ದಿಸಲಾಗಿದೆ ಎ೦ದು ಆರೋಪಿಸಿ,ರಾಜ್ಯದ ಮುಖ್ಯಮ೦ತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು,ಗು೦ಪಿನ ನಿರ್ವಾಹಕರು ಸೇರಿದ೦ತೆ,ಸುಮಾರು ಐದು ಜನರ ಮೇಲೆ ಕ್ರಿಮಿನಲ್ ದೂರು ದಾಖಲಿಸಿದರು.ರಾಜ್ಯ ಸರ್ಕಾರದ ಅನೇಕ ಯೋಜನೆಗಳ ಬಗ್ಗೆ ಅವಮಾನಕರ ಚರ್ಚೆ ,ಶಾ೦ತಿ ಕದಡುವ ಪ್ರಯತ್ನ,ಮಾನಹಾನಿ ಮು೦ತಾದ ಆರೋಪಗಳಲ್ಲಿ ’ನಿಲುಮೆ’ಯ ಕೆಲವು ಸದಸ್ಯರ ಮೇಲೆ ಎಫ಼್.ಐ.ಆರ್ ದಾಖಲಿಸಲಾಗಿದೆ

ನಿಲುಮೆ ಎನ್ನುವ ಈ ಫೇಸ್ ಬುಕ್ ಗು೦ಪಿನ ಸದಸ್ಯರ ಪೈಕಿ ನಾನೂ ಒಬ್ಬ.ಸುಮಾರು ಮೂರು ವರ್ಷಗಳಿ೦ದ ಈ ಸಮುದಾಯದಲ್ಲಿನ ಬರವಣಿಗೆಗಳನ್ನು,ಚರ್ಚೆಗಳನ್ನು ಅತ್ಯ೦ತ ತಟಸ್ಥನಾಗಿ ನಾನು ಗಮನಿಸುತ್ತ ಬ೦ದಿದ್ದೇನೆ.ಸರಿಸುಮಾರು ಹದಿನೆ೦ಟು ಸಾವಿರ ಸಮಾನ ಮನಸ್ಕ ಸದಸ್ಯರನ್ನು ಹೊ೦ದಿರುವ ಕನ್ನಡದ ಅತಿದೊಡ್ಡ ಫೇಸ್ ಬುಕ್ ಸಮುದಾಯಗಳಲ್ಲಿ ನಿಲುಮೆಯೂ ಒ೦ದು.ಸದಸ್ಯನೇ ಆಗಿದ್ದರೂ ನಾನು ಅಲ್ಲಿನ ಚರ್ಚೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಸ೦ದರ್ಭಗಳು ತೀರ ಕಡಿಮೆ.ಬಲಪ೦ಥೀಯ ನಿಲುವುಗಳೆಡೆಗೆ ಆಕರ್ಷಿತರಾಗಿರುವ ಸದಸ್ಯರೇ ಹೆಚ್ಚಿರುವುದು ಹೌದಾದರೂ ನಿಲುಮೆಯ ಸದಸ್ಯರು(ಕೆಲವು ಅಪವಾದಗಳನ್ನು ಹೊರತುಪಡಿಸಿ) ತೀರ ಅತಿರೇಕಿಗಳಲ್ಲ.ಇಲ್ಲಿನ ಸದಸ್ಯರಿಗೆ ಸಾಮಾಜಿಕ ಅಸಮಾನತೆಯೆಡೆಗೊ೦ದು ಆಕ್ರೋಶವಿದೆ.ರಾಜಕಾರಣಿಗಳ ಆಷಾಢಭೂತಿತನದೆಡೆಗೊ೦ದು ಸಾತ್ವಿಕ ಕೋಪವಿದೆ.ರಾಜಕೀಯ,ಸಾಮಾಜಿಕ ಚರ್ಚೆಗಳು,ಕತೆಗಳು,ಕವನಗಳನ್ನೊಳಗೊ೦ಡ ಈ ವೇದಿಕೆ ,ಸಾಮಾಜಿಕ ಜಾಲತಾಣದ ಸದುಪಯೋಗಕ್ಕೆ ಅತ್ಯ೦ತ ಸೂಕ್ತ ಉದಾಹರಣೆಯ೦ಥದ್ದು ಎ೦ದು ನನಗೆ ಅನೇಕ ಬಾರಿ ಅನ್ನಿಸಿದ್ದಿದೆ.ಆದರೆ ಇ೦ಥಹ ವೇದಿಕೆಯಲ್ಲಿಯೇ ಅಚಾತುರ್ಯವೊ೦ದು ನಡೆದುಹೋಯಿತು.ದಿನೇಶ್ ಅಮೀನ್ ಮಟ್ಟುರವರ ಬರವಣಿಗೆಯನ್ನು ಒಪ್ಪದ ಕೆಲವರು,ಅವರ ಲೇಖನಕ್ಕೆ ಅಸಭ್ಯವಾಗಿ ಟೀಕಿಸಿಬಿಟ್ಟರು.

ಮತ್ತಷ್ಟು ಓದು »

3
ಫೆಬ್ರ

ಟಾರ್ಗೆಟ್ ನಿಲುಮೆ : ಪರದೆಯ ಹಿಂದಿನ ಕತೆ

– ರಾಕೇಶ್ ಶೆಟ್ಟಿ

freedomofspeechಸುವರ್ಣ ಸುದ್ದಿ ವಾಹಿನಿಯಲ್ಲಿ ನಡೆದ “ನಿಲುಮೆಯ ಮೇಲಿನ ದೌರ್ಜನ್ಯ” ಕುರಿತ ಚರ್ಚೆಯಲ್ಲಿ,ನಾನು ಕೊಂಚ ಆಕ್ರಮಣಕಾರಿಯಾಗಬೇಕಿತ್ತು ಎನ್ನುವುದು ನನ್ನ ಕೆಲ ಗೆಳೆಯರ ಅನಿಸಿಕೆಯಾಗಿತ್ತು.ಚರ್ಚೆಯನ್ನು ಮತ್ತೊಮ್ಮೆ ನಾನೇ ನೋಡಿದಾಗ ಕೆಲವೊಂದು ಕಡೆ ನಾನು ಆಕ್ರಮಣಕಾರಿಯಾಗಿದ್ದರೆ ಚೆನ್ನಾಗಿತ್ತು ಅಂತಲೇ ಅನಿಸಿತು.ಆದರೇನು ಮಾಡುವುದು,ಮಧ್ಯೆ ಬಾಯಿ ಹಾಕಿ ಮಾತನಾಡುವುದು ಮತ್ತು ಜೋರು ದನಿಯಲ್ಲಿ ಮಾತನಾಡುವುದೆಲ್ಲ “ಚರ್ಚೆ”ಯಲ್ಲ ಎನ್ನುವುದು ನಾನು ಬೆಳೆದು ಬಂದ ಹಾದಿ ಮತ್ತು ರೀತಿ ನನಗೆ ಕಲಿಸಿದೆ.ಹ್ಮ್ ಅದೆಲ್ಲ ಇರಲಿ.ಆವತ್ತು ಚರ್ಚೆಯ ಗದ್ದಲದಲ್ಲಿ ನಾನು ಹೇಳದೇ ಉಳಿದ ಬಹುಮುಖ್ಯ ವಿಷಯಗಳನ್ನು ದಾಖಲಿಸಬೇಕಿದೆ.ಆ ಕಾರಣಕ್ಕಾಗಿ ಈ ಲೇಖನ…

ಚರ್ಚೆಯ ನಡುವೆ,ದಿನೇಶ್  ಅಮೀನ್ ಮಟ್ಟು ಅವರು “ನಿಲುಮೆ ಗುಂಪನ್ನು ಮುಚ್ಚಬೇಕು” ಎಂದಿದ್ದನ್ನು ನೀವೆಲ್ಲರೂ ಕೇಳಿದ್ದೀರಿ.ಮಾತು ತೆಗೆದರೆ ಮುಚ್ಚಿಸಬೇಕು ಎನ್ನುವ ಈ ಪ್ರಗತಿಪರ ಚಿಂತನೆಯ ಹಿಂದಿನ ಕತೆಯೇನು? ಇವರಿಗೇಕೆ ನಿಲುಮೆಯನ್ನು ಮುಚ್ಚಿಸಲೇಬೇಕೆಂಬ ಹಟ?ಈ ಪ್ರಶ್ನೆಗಳಿಗೆ ಉತ್ತರ ಹುಡುಕಲು ನಾವು ೨೦೧೩ರ ಮಾರ್ಚ್ ನಲ್ಲಿ  ರಾಜ್ಯದ ಪ್ರತಿಷ್ಟಿತ ಪತ್ರಿಕೆಯೊಂದರಲ್ಲಿ ಶುರುವಾದ “ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ” ಕುರಿತ ಚರ್ಚೆಯತ್ತ ನೋಡಬೇಕು.ಈ ಚರ್ಚೆ ಆರಂಭವಾಗಿದ್ದು  CSLC ಎಂಬ  ಸಮಾಜ ವಿಜ್ಞಾನ ಸಂಶೋಧನಾ ತಂಡದವರ “ವಚನ ಸಾಹಿತ್ಯವು ಜಾತಿವ್ಯವಸ್ಥೆಯ ವಿರುದ್ಧ ಮಾತನಾಡುತ್ತದೆಯೆ?” ಎಂಬ ಸಂಶೋಧನಾ ಪ್ರಬಂಧದೊಂದಿಗೆ.ಆ ಪತ್ರಿಕೆಯಲ್ಲಿ ಶುರುವಾದ ಚರ್ಚೆಯಲ್ಲಿ ಕೇವಲ ಒಂದು ಕಡೆಯವರ ವಾದಗಳಿಗೆ ಮಾತ್ರ ವೇದಿಕೆಯೊದಗಿಸಿ, CSLC ತಂಡದವರಿಗೆ ವಾದಕ್ಕೂ ಜಾಗ ಕೊಡದಿದ್ದಾಗ ಅವರಿಗೆ ಜೊತೆಯಾಗಿ ನಿಂತಿದ್ದು ನಿಲುಮೆ.ನಿಲುಮೆಯಲ್ಲಿ ಸಿ.ಎಸ್.ಎಲ್.ಸಿ  ತಂಡದವರ ಲೇಖನಗಳು ಪ್ರಕಟವಾಗಿ ಅದು ಫೇಸ್ಬುಕ್ಕಿನಲ್ಲೂ ವ್ಯಾಪಕ ಚರ್ಚೆಗೆ ಒಳಪಟ್ಟಿತು.ಕಡೆಗೆ ಒತ್ತಡಕ್ಕೆ ಬಿದ್ದವರು ಅನಿವಾರ್ಯವಾಗಿ ಸಿ.ಎಸ್.ಎಲ್.ಸಿಯವರ ಒಂದೆರಡು ಲೇಖನಗಳನ್ನು ಪ್ರಕಟಿಸಿ,ಆ ಚರ್ಚೆಗೆ ಅಂತ್ಯ ಹಾಡಿಸಿದರು.ಆದರೆ,ಅಷ್ಟಕ್ಕೆ ನಮ್ಮ ಪ್ರಗತಿಪರರ ಸಿಟ್ಟು ಕಮ್ಮಿಯಾದೀತೇ? ಅವರು ತಮ್ಮ ಅಧಿಕಾರದ ಜೊತೆಗಿನ ಸ್ನೇಹ(ಪುರೋಹಿತಶಾಹಿ!?) ವನ್ನು ಬಳಸಿಕೊಂಡು ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಇದ್ದ CSLC ಸಂಶೋಧನಾ ಕೇಂದ್ರವನ್ನೇ ಮುಚ್ಚಿಸಿಬಿಟ್ಟರು! ಆಗಲಾದರೂ ನಾವು ಇವರಿಗೆ ಬೆದರಿಕೊಂಡು ಸುಮ್ಮನಾಗಬಾರದೇ? ಊಹೂಂ! ಸುಮ್ಮನಿರಲಿಲ್ಲ.ಈ ಫ್ಯಾಸಿಸ್ಟ್ ಧೋರಣೆಯ ಬಗ್ಗೆ ನಿಲುಮೆಯ ವೇದಿಕೆಯಲ್ಲಿ ಬರೆಯಲಾಯಿತು.ನಾನು ಈ ಬಗ್ಗೆ ನಿಲುಮೆಯಲ್ಲಿ,ಅಸೀಮಾ ಮಾಸಿಕದಲ್ಲಿ ಮತ್ತು ಕನ್ನಡ ಪ್ರಭ ಪತ್ರಿಕೆಯಲ್ಲಿ ಮಾನ್ಯ ಅನಂತ ಮೂರ್ತಿಯವರಿಗೆ ಬರೆದ ಬಹಿರಂಗ ಪತ್ರದಲ್ಲೂ ಪ್ರಗತಿಪರರ ಫ್ಯಾಸಿಸ್ಟ್ ಧೋರಣೆಯನ್ನು ಪ್ರಶ್ನಿಸಿದೆ.ನಿಲುಮೆಯ ಮೇಲೆ ಫ್ಯಾಸಿಸಂನ ಕರಾಳ ಛಾಯೆ ಆವರಿಸುತ್ತಲೇ ಹೋಯಿತು.

ಮತ್ತಷ್ಟು ಓದು »

1
ಫೆಬ್ರ

ಭಾರತೀಯ ಸಂಸ್ಕೃತಿಯನ್ನು ವಿರೂಪಗೊಳಿಸುವ ಪಾಶ್ಚಾತ್ಯ ಚಿಂತನಾ ಮಾರ್ಗಗಳು

ಶಿವಕುಮಾರ ಮತ್ತು ಡಂಕಿನ್ ಝಳಕಿ

Swami Vivekanandaದಿನೇಶ್ ಅಮೀನ್ ಮಟ್ಟು ಅವರು ಪ್ರತಿಷ್ಠಿತ ಪತ್ರಿಕೆಯೊಂದಕ್ಕೆ ೨೦೧೨ರಲ್ಲಿ ಬರೆದ ವಿವೇಕಾನಂದರ ಕುರಿತ ಲೇಖನ ಬಹಳಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಈ ಲೇಖನದ ವಿರುದ್ಧ ಎದ್ದ ದನಿಗಳ ಕುರಿತು ತಮ್ಮ ಸಮರ್ಥನೆಯನ್ನು ಹೊಸೆಯುತ್ತಾ, ತಮ್ಮ ಫೇಸ್ಬುಕ್ ಪುಟದಲ್ಲಿ, ತಮ್ಮ ಲೇಖನ ಐತಿಹಾಸಿಕವಾಗಿ ಸರಿಯಾಗಿದೆ ಮತ್ತು ತಾವು ವಿವೇಕಾನಂದರ ಬಗ್ಗೆ ಪ್ರಕಟವಾಗಿರುವ ಸುಮಾರು 200 ಪುಸ್ತಕಗಳನ್ನು ಓದಿದ್ದಾಗಿ ಹೇಳಿಕೊಳ್ಳುತ್ತಾರೆ. ಅವರ ಪರವಾಗಿ ವಾದಿಸುತ್ತ ಮತ್ತೊಬ್ಬರು, ‘ರೋಗಿಷ್ಟ’ ಎನ್ನುವುದು ಬೈಗುಳವೇ ಅಲ್ಲ, ‘ಕಡಿಮೆ ಅಂಕ ಗಳಿಸುವವ’ ಎಂಬುದು ‘ಅವಮಾನದ’ ವಿಷಯವಲ್ಲ ಎಂದು ಹೇಳ ತೊಡಗಿದ್ದಾರೆ. ಈ ಹೊತ್ತಿನಲ್ಲಿ ಕೆಲವು ವಿಚಾರಗಳನ್ನು ಮತ್ತೊಮ್ಮೆ ಚರ್ಚೆಗೆತ್ತಿಕೊಳ್ಳುವುದು ಈ ಪುಟ್ಟ ಲೇಖನದ ಉದ್ದೇಶ.

ಮಟ್ಟುರವರ ವಿವೇಕಾನಂದರ ಕುರಿತ ಲೇಖನದ ಈ ಸಾಲುಗಳನ್ನು ನೋಡಿ: “ಸ್ವಾಮಿ ವಿವೇಕಾನಂದರು ದಡ್ಡ ವಿದ್ಯಾರ್ಥಿಯಾಗಿದ್ದರು. … ಹುಟ್ಟಿನಿಂದಲೇ ರೋಗಿಷ್ಠರಾಗಿದ್ದ ಅವರು ಸಾಯುವ ಹೊತ್ತಿಗೆ ಒಂದೆರಡಲ್ಲ, ಮೂವತ್ತೊಂದು ರೋಗಗಳಿಂದ ಬಳಲಿ ಹೋಗಿದ್ದರು. ಎಲ್ಲ ಬಂಗಾಳಿಗಳಂತೆ ಅವರೊಬ್ಬ ಮಹಾ ತಿಂಡಿಪೋತರಾಗಿದ್ದರು. ಜೀವನದ ಕೊನೆಯ ದಿನದವರೆಗೂ ಅವರು ಮಾಂಸಾಹಾರಿ ಆಗಿದ್ದರು. … ವ್ಯಸನಿಯಂತೆ ಸಿಗರೇಟ್-ಹುಕ್ಕಾ ಸೇದುವ ಧೂಮಪಾನಿಯಾಗಿದ್ದರು. … ತೀವ್ರ ತಲೆನೋವಿನಿಂದ ಹಿಡಿದು ಹೃದಯದ ಕಾಯಿಲೆವರೆಗೆ … ಮಲಬದ್ಧತೆ, ಭೇದಿ, ನರದೌರ್ಬಲ್ಯ, ಮಂಡಿನೋವು, ಕಾಲುಬಾವು ಎಲ್ಲವೂ ಅವರನ್ನು ಕಾಡುತ್ತಿತ್ತು. … ಈ ಎಲ್ಲ ರೋಗಗಳ ನಡುವೆಯೂ ಅವರ ನಾಲಗೆಯ ಚಪಲ ಮಾತ್ರ ಕಡಿಮೆಯಾಗಿರಲಿಲ್ಲ. … (ವಿವೇಕಾನಂದ) ಮಾತ್ರ ಮಾಂಸದ ಅಡುಗೆಯನ್ನು ಬಗೆಬಗೆಯಲ್ಲಿ ಮಾಡುತ್ತಿದ್ದ…. ಕುಟುಂಬದ ಕಷ್ಟಗಳನ್ನು ತಾಯಿಯ ಹೆಗಲ ಮೇಲೆ ಹಾಕಿ ವಿವೇಕಾನಂದರು ಸಂಸಾರ ತೊರೆದು ಸನ್ಯಾಸಿಯಾಗುತ್ತಾರೆ.” ಇವು ಲೇಖನದ ವಾದದ ಕೆಲವೊಂದು ಝಲಕ್ ಅಷ್ಟೇ.

ಮತ್ತಷ್ಟು ಓದು »

8
ಜನ

ರಾಷ್ಟ್ರದ ಹಿತ ದೃಷ್ಟಿಯಿಂದಾದರು ಈ ಭಯೋತ್ಪಾದನೆಯ ರಾಜಕೀಯಕ್ಕೆ ಅಂತ್ಯ ಹಾಡಬೇಕಲ್ಲವೇ?

– ಅನಿಲ ಚಳಗೇರಿ

Terror Boatಡಿಸೆಂಬರ್ ೩೧ ರ ರಾತ್ರಿ ಶಂಕಿತ ಉಗ್ರರ ಹಡಗನ್ನು ನೌಕ ಪಡೆ ಪತ್ತೆ ಹಚ್ಚಿ ಅದನ್ನು ಹಿಂಬಾಲಿಸಿ ಹೋದಾಗ ಅದರಲ್ಲಿರುವವರು ಹಡಗನ್ನು ಸ್ಪೋಟಿಸಿದರು ಎನ್ನುವ ವಿಷಯ ತಿಳಿದೊಡನೆ ನಮ್ಮಲ್ಲಿ ಅನೇಕರಿಗೆ ನೌಕಾಪಡೆಗೆ ಒಂದು ಶಬ್ಭಾಶ್ ಹೇಳಬೇಕೆನ್ನಿಸಿರಬಹುದು, ಅದಾಗಲೇ ರಾಜಕೀಯ ಪಕ್ಷಗಳು ಇಂತಹ ಒಂದು ಹಡಗು ಇತ್ತಾ? ಅದರಲ್ಲಿ ನಿಜವಾಗಲು ಉಗ್ರರಿದ್ದರಾ ? ಅದು ಪಾಕಿಸ್ತಾನಕ್ಕೆ ಸೇರಿದ ಹಡಗಾಗಿತ್ತಾ ? ಹಾಗಿದ್ದರೆ ಅವುಗಳ ದಾಖಲೆ ವೀಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿ, ನಮಗೆ ಇದರ ಮೇಲೆ ಶಂಕೆಯಿದೆಯೆಂದು ಪ್ರಶ್ನಿಸಲು ಪ್ರಾರಂಭಿಸಿದನ್ನು ನೋಡಿ ನೋಡಿ ನಮ್ಮಲ್ಲಿ ಅನೇಕರಿಗೆ ಬೇಜಾರಾಗಿರಬೇಕು.  ಪ್ರತಿ ಬಾರಿ ಉಗ್ರಗಾಮಿಯೊಬ್ಬ ಸಿಕ್ಕಾಗ, ಬಾಂಬ್ ದಾಳಿಯಾದಾಗ ಅಥವಾ ಯಾವುದೇ ಉಗ್ರ ಚಟುವಟಿಕೆ ನಡೆದಾಗ, ತನಿಖೆಯ ಪ್ರಾರಂಭದಿಂದಲೇ  ಒಂದಲ್ಲ ಒಂದು ರಾಜಕೀಯ ಪಕ್ಷಗಳು ಅಥವಾ ಬುದ್ಧಿ ಜೀವಿಗಳು ಈ ಶಕಿಂತ ಆರೋಪಿಗಳ ನಿಂತೇಬಿಡುತ್ತಾರೆ. ತನಿಖೆ ನಡೆಯುತ್ತಿರುವಾಗಲೇ ಕ್ಲೀನ್ ಚಿಟ್ ಕೊಡುವದು, ರಾಜಕೀಯ ಬಣ್ಣ ಕಟ್ಟಲು ಪ್ರಯತ್ನಿಸುವದು ಅಥವಾ ಇಂತಹ ಗಂಭೀರ ವಿಷಯದಲ್ಲಿ ಜಾತಿ ಅಥವಾ ಧರ್ಮದ ಮಾತುಗಳನ್ನು ಆಡುವದು ನೋಡುತ್ತಲೇ ಇರುತ್ತೇವೆ, ಕೆಲವಿರಿಗೆ ಇದು ಇದು ಓಲೈಕೆಯ ಒಂದು ಭಾಗವಾದರೆ ಇನ್ನು ಕೆಲವರಿಗೆ ಇದು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳಲು ಒಂದು ಗಿಮಿಕ್.  ಇಂತಹ ಹೇಳಿಕೆಗಳನ್ನು  IC – 814 ಹೈ ಜಾಕ್ ನಿಂದ ಹಿಡಿದು ಅಫ್ಜಲ್ ಗುರು, ಬಾಟ್ಲ ಹೌಸ್ ಎನ್ಕೌಂಟರ್, ಇಶ್ರಾತ್ ಜಹಾ ಎನ್ಕೌಂಟರ್, ಹೈದರಾಬಾದ್ ಬ್ಲಾಸ್ಟ್, ಜರ್ಮನ್ ಬೇಕರಿ ಬ್ಲಾಸ್ಟ್ ಹಾಗು ಮುಂಬೈ ತಾಜ್ ಅಟ್ಯಾಕ್ ಆದಗಲು  ಕೇಳುತ್ತಲೇ ಬಂದಿದ್ದೇವೆ. ಪ್ರತ್ಯೇಕತೆಯ ಹೆಸರಿನಲ್ಲಿ ಉಗ್ರವಾದ, ನಕ್ಸಲ್ ಹೆಸರಿನಲ್ಲಿ ಉಗ್ರವಾದ ಹಾಗು ಮಾವೋವಾದಿಗಳ ಉಗ್ರ ಚಟುವಟಿಕೆಯನ್ನು ವಹಿಸಿಕೊಂಡು ಮಾತನಾಡುವಂತಹ ಬುದ್ಧಿ ಜೀವಿಗಳು ಇಡೀ ದೇಶದಲ್ಲಿ ತುಂಬಿದ್ದಾರೆ. ಕೆಲವೊಮ್ಮ ರಾಜಕೀಯ ಪಕ್ಷಗಳ ಜೊತೆ, ಕೆಲವೊಮ್ಮೆ ಮಾಧ್ಯಮಗಳ ಜೊತೆ ಇನ್ನು ಕೆಲವೊಮ್ಮೆ ಮಾನವ ಹಕ್ಕು ಹೋರಾಟದ ನೆಪದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ದಶಕಗಳ ಹಿಂದೆಯೇ ಧರ್ಮ ಮತ್ತು  ರಾಜಕೀಯದ ಹೆಸರಿನಲ್ಲಿ ಇಂಥಹ ಸಂಘಟನೆಗಳನ್ನು ಸಮರ್ಥಿಸಿಕೊಂಡ ಪಾಕಿಸ್ತಾನ, ಆಫ್ತಾನಿಸ್ತಾನ, ಇರಾಕ್ ಹಾಗು ಇಂತಹ ಅನೇಕ ರಾಷ್ಟ್ರಗಳು ತಾವೇ ಬೆಳಸಿದ ಈ ಉಗ್ರರಿಂದ ತಮ್ಮ ದೇಶವನ್ನು ಕಾಪಾಡಿಕೊಳ್ಳಲು ಇಂದು ಕಷ್ಟಪಡುತ್ತಿರುವದನ್ನು ನಾವೆಲ್ಲ ನೋಡುತ್ತಿದ್ದೇವೆ.
ಮತ್ತಷ್ಟು ಓದು »

6
ಜನ

ಪ್ರತೀ ಬಾರಿಯೂ ಹಿಂದೂ ಧರ್ಮವೇ ವಿಮರ್ಷೆಗೊಳಪಡಬೇಕೇ?

– ಲಕ್ಷ್ಮೀಶ ಜೆ.ಹೆಗಡೆ

Ganeshaಪೇಷಾವರದಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಭಯೋತ್ಪಾದಕರು ಶಾಲೆಯ ಮೇಲೆ ದಾಳಿ ನಡೆಸಿ ಅಮಾಯಕ ಮಕ್ಕಳ ಮಾರಣ ಹೋಮ ನಡೆಸಿದಾಗ ನಮ್ಮಲ್ಲಿನ ಕೆಲವು ವಿಚಾರವಾದಿಗಳಿಗೆ ಅನ್ನಿಸಿದ್ದು ಧರ್ಮಗ್ರಂಥಗಳ   ನಿಷ್ಕರ್ಷೆಯಾಗಬೇಕೆಂದು.ಅದರಲ್ಲೂ ವಿಶೇಷವಾಗಿ ‘ಹಿಂಸೆಗೆ ಪ್ರಚೋದನೆ’ ಕೊಡುವ ಭಗವದ್ಗೀತೆಯ ವಿಮರ್ಷೆಯಂತೂ ಆಗಲೇಬೇಕು.ಆಗ ಮಾತ್ರ ಜಗತ್ತು ಶಾಂತಿಯ ದಿನಗಳನ್ನು ನಿರೀಕ್ಷಿಸಬಹುದು.ಜಗತ್ತಿನ ಶಾಂತಿಗೆ ಭಂಗ ತರಲು ಪ್ರಮುಖ ಕಾರಣವಾಗಿರುವುದು ಇಸ್ಲಾಮಿಕ್ ಭಯೋತ್ಪಾದನೆ ಎಂಬುದು ಎಲ್ಲರಿಗೂ ಗೊತ್ತಿದ್ದರೂ ಪ್ರಾಮಾಣಿಕವಾಗಿ ವಿಮರ್ಷೆಗೊಳಪಡಬೇಕಾಗಿರುವುದು ಭಗವದ್ಗೀತೆಯಂತೆ.ಅದೇ ಸಮಯದಲ್ಲಿ ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವನ್ನಾಗಿಸುವ ಕುರಿತೂ ಚರ್ಚೆ ನಡೆಯುತ್ತಿರುವುದರಿಂದ ಅವರ ಮಾತುಗಳು ಸಾಂಧರ್ಬಿಕವೋ, ಕಾಕತಾಳೀಯವೋ ಎಂಬುದನ್ನು ಅವರುಗಳೇ ಹೇಳಬೇಕು.

ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವನ್ನಾಗಿ ಘೋಷಿಸಕೂಡದು ಎಂದಾದರೆ ಬೇರೆ ಯಾವ ಗ್ರಂಥವಾಗಬೇಕೆಂದು ಕೇಳಿದರೆ ನಮಗೆ ನಮ್ಮ ಸಂವಿಧಾನವೇ ಸಾಕು ಎನ್ನುತ್ತಾರೆ.ಸಂವಿಧಾನ ಎಂದಿಗೂ ಧಾರ್ಮಿಕ ಗ್ರಂಥವಾಗಲಾರದು. ಅದು ಎಲ್ಲ ಧರ್ಮಗಳನ್ನೂ ಮೀರಿದ್ದು.ಅದನ್ನು ಎಲ್ಲರೂ ಗೌರವಿಸಲೇಬೇಕು.ಜಗತ್ತಿನ ಇತರ ಅನೇಕ ರಾಷ್ಟ್ರಗಳೂ ತಮ್ಮದೇ ಆದ ಸಂವಿಧಾನವನ್ನು ಹೊಂದಿವೆ ಮತ್ತು ಅದನ್ನು ಗೌರವಿಸುತ್ತವೆ ಕೂಡಾ.ಆದರೆ ಆ ಇತರ ರಾಷ್ಟ್ರಗಳು ತಮ್ಮದೇ ಆದ ಧಾರ್ಮಿಕ ಮೌಲ್ಯ,ಧರ್ಮಗ್ರಂಥಗಳನ್ನು ಘೋಷಿಸಿ,ಪೋಷಿಸುತ್ತಿರುವಾಗ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಅದರದ್ದೇ ಆದ ಧಾರ್ಮಿಕ ಮೌಲ್ಯ,ರಾಷ್ಟ್ರೀಯ ಗ್ರಂಥ ಇರಬೇಡವೇ?ಅದು ಈ ದೇಶದ ಬಹುಸಂಖ್ಯಾತ ಹಿಂದೂಗಳ ಭಗವದ್ಗೀತೆಯಾದರೆ ಇತರ ಧರ್ಮಗಳ ಅಸ್ತಿತ್ವಕ್ಕೇನಾದರೂ ಧಕ್ಕೆ ಬರುತ್ತದೆಯೇ?ರಾಷ್ಟ್ರೀಯ ಗ್ರಂಥವಾಗಿ ಘೋಷಣೆಯಾದ ಕೂಡಲೇ ಕಡ್ಡಾಯವಾಗಿ ಎಲ್ಲರೂ ಭಗವದ್ಗೀತೆಯನ್ನು ಪಠಣ ಮಾಡಬೇಕು ಎಂಬ ಕಾನೂನನ್ನು ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜಾರಿಗೆ ತರಲು ಸಾಧ್ಯವೇ?ಇದನ್ನು ಅರ್ಥಮಾಡಿಕೊಳ್ಳದ ಕೆಲವರು ಭಗವದ್ಗೀತೆ,ಹಿಂದೂ ಧರ್ಮ,ಸನಾತನ ಧರ್ಮ ವಿಮರ್ಷೆಗೊಳಗಾಗಬೇಕೆಂದು ಕೂಗುತ್ತಿದ್ದಾರೆ.

ಮತ್ತಷ್ಟು ಓದು »

29
ಡಿಸೆ

ಮತಾಂತರ ಸರಿಯಾದರೇ ,ಮರುಮತಾಂತರವೇಕೆ ತಪ್ಪು?

– ರಾಕೇಶ್ ಶೆಟ್ಟಿ

Conversionಹೀಗೆ ಹತ್ತು ದಿನಗಳ ಹಿಂದೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಹತ್ತಿರ ಒಂದು ಜಾಹೀರಾತು ಓದಿದ್ದೆ.”೧೫ ಕಥೆಗಳು ನಿಮ್ಮ ಜೀವನವನ್ನೇ ಬದಲಾಯಿಸುವವು” ಅಂತ ಬರೆದಿತ್ತು.ಇದ್ಯಾವುದೋ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದ ಜಾಹೀರಾತು ಎಂದುಕೊಂಡೆ.ಆದರೆ,ಇತ್ತೀಚೆಗೆ ದಿನ ಪತ್ರಿಕೆಗಳ ಮುಖಪುಟದಲ್ಲೂ ದೊಡ್ಡದಾಗಿ ಇದೇ ಜಾಹೀರಾತು “ಅನುಭವಿಸಿ ಬದಲಾಯಿಸುವ ಶಕ್ತಿ – ೧೫ ಕಥೆಗಳು ನಿಮ್ಮ ಜೀವನವನ್ನು ಬದಲಾಯಿಸುವುದು” ಎಂದು ಕಾಣಿಸಲಾರಂಭಿಸಿತು. ಪ್ರತಿದಿನ ಜಾಹೀರಾತು ಕೊಡುವಂತದ್ದು ಈ ಪುಸ್ತಕದಲ್ಲಿ ಅಂತದ್ದೇನಿದೆ ಎಂದು ಓದುವ ಕೂತುಹಲವಾಗಿ ಓದಿದೆ.ಮೂರ್ನಾಲ್ಕು ಪುಟ ಓದಿದಂತೆ ಪುಸ್ತಕದ ಮುಂದಿನ ಪುಟಗಳಲ್ಲಿ ಏನಿರಬಹುದು ಮತ್ತು ಈ ಪುಸ್ತಕ ಓದಿದವರು ಏನಾಗಿ ಬದಲಾಗಬೇಕು ಎಂಬ ಉದ್ದೇಶವಿದೆಯೆಂದು ಖುದ್ದು ಅನುಭವಿಸಿದೆ!

ಆ ಪುಸ್ತಕದಲ್ಲಿ ಬಾಲಿವುಡ್ ನಟ ಜಾನಿಲಿವರ್,ನಟಿ ನಗ್ಮಾ ಇನ್ನೂ ಹಲವರು ತಮ್ಮ ತಮ್ಮ ಕತೆಗಳನ್ನು ಹೇಳಿ ಕೊಂಡಿದ್ದಾರೆ.ಈ ಪುಸ್ತಕದ ಸರಳ ಸಾರಾಂಶವೇನೆಂದರೆ,”ಬೈಬಲ್ ಮತ್ತು ಜೀಸಸ್” ಮಾತ್ರ ಸತ್ಯ ಮತ್ತು ಅವು ಮಾತ್ರವೇ “ಪಾಪಿ”ಗಳಾದ ಮನುಷ್ಯ ಬದುಕಿನ ಬಿಡುಗಡೆಯ ಹಾದಿ ಎಂಬುದು!.ಅದೊಂದೇ ಮಾತ್ರ ಸತ್ಯವೆಂದಾದರೆ,ಉಳಿದ ರಿಲಿಜನ್ನುಗಳು, ಸಂಪ್ರದಾಯಗಳು ಮತ್ತು ಭಿನ್ನ ಹಾದಿಗಳೆಲ್ಲವೂ ಸುಳ್ಳು ಅಂತಾಯಿತಲ್ಲ! ಈ ಪುಸ್ತಕದ ಉದ್ದೇಶವನ್ನು ಇನ್ನೂ ಸರಳ ಮಾಡುವುದಾದರೆ ಅಥವಾ ಸಾಮಾನ್ಯಜನರ ಭಾಷೆಯಲ್ಲಿ ಹೇಳುವುದಾದರೆ,ಜನರನ್ನು ಕ್ರಿಸ್ತ ಮತಕ್ಕೆ ಬನ್ನಿ ಎಂದು ಕರೆಯುವ ಮತಾಂತರದ ಹೊಸ ತಂತ್ರವಷ್ಟೇ.ಈ ಬಗ್ಗೆ ಯಾವ ಮೀಡಿಯಾಗಳು,ಯಾವ ಸೆಕ್ಯುಲರ್ ನಾಯಕನೂ ಅಬ್ಬರಿಸಿ ಬೊಬ್ಬಿರಿಯಲಿಲ್ಲ,ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಎಂದು ಮೊಸಳೆ ಕಣ್ಣೀರೂ ಸುರಿಸಲಿಲ್ಲ.

ಮತ್ತಷ್ಟು ಓದು »

26
ಡಿಸೆ

ಭಗವದ್ಗೀತೆಯ ಕುರಿತ ಪರಕೀಯ ನಿರೂಪಣೆಗಳು/ನಿರ್ಣಯಗಳು…!

-ಡಾ. ಪ್ರವೀಣ್ ಟಿ. ಎಲ್.

ಉಪನ್ಯಾಸಕರು, ಕುವೆಂಪು ವಿಶ್ವವಿದ್ಯಾನಿಲಯ

ಭಗವದ್ಗೀತೆಭಗವದ್ಗೀತೆಯು ಸದಾ ಚರ್ಚೆಯಲ್ಲಿರುವ ವಸ್ತುವಿಷಯ. ಅದನ್ನು ಶಾಲೆಯಲ್ಲಿ ಭೋದಿಸುವ ಸಲುವಾಗಿ ಕಳೆದ ಬಾರಿ ಚರ್ಚೆಯಾಗಿತ್ತು. ಪ್ರಸ್ತುತ ಕೇಂದ್ರ ಸರ್ಕಾರ ಅದನ್ನೊಂದು ರಾಷ್ಟ್ರೀಯ ಗ್ರಂಥ ಮಾಡುವ ಆಶಯ ವ್ಯಕ್ತಪಡಿಸಿದ ಕಾರಣಕ್ಕಾಗಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಹಲವು ಲೇಖನಗಳು ಪ್ರಜಾವಾಣಿಯಲ್ಲಿ ಪ್ರಕಟವಾಗುತ್ತಲೇ ಇವೆ. ಮುಖ್ಯವಾಗಿ ಪ್ರಜಾವಣಿಯ ‘ಸಂಗತ’ದಲ್ಲಿ ಪ್ರಕಟವಾದ ಪ್ರೊ. ಭಗವಾನ್‍ರ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಈ ಬರಹ. ಹಾಗೆಂದು ಭಗವದ್ಗೀತೆ ರಾಷ್ಟೀಯ/ಧರ್ಮ ಗ್ರಂಥವಾಗಬೇಕೆಂಬ ಆಶಯ ನನ್ನದಲ್ಲ. ಬದಲಾಗಿ ‘ಭಗವದ್ಗೀತೆಯು ಜಾತಿವ್ಯವಸ್ಥೆಯನ್ನು ಪ್ರತಿಪಾದಿಸುವ ಒಂದು ಅಪಾಯಕಾರಿ ಕೃತಿ’ ಎನ್ನುವ ಹಾಗೂ ‘ಧರ್ಮಗ್ರಂಥ’ ಮಾಡಬೇಕೆನ್ನುವ ಎರಡೂ ವಾದಗಳು ಹೇಗೆ ನಮಗೆ ಪರಕೀಯವಾಗಿವೆ ಎಂಬುದನ್ನು ತೋರಿಸುವುದು.

ಲೇಖಕರು ತಮ್ಮ ವಾದದ ಸಮರ್ಥನೆಗೆ ನೀಡಿದ ಅಂಶಗಳು ಭಗವದ್ಗೀತೆಯು ಜಾತಿವ್ಯವಸ್ಥೆಯನ್ನು ಪ್ರತಿಪಾದಿಸಿದೆ ಎಂಬುದನ್ನು ಸಾಭೀತುಪಡಿಸಲು ಯಶಸ್ವಿಯಾಗಿಲ್ಲ.

ಮತ್ತಷ್ಟು ಓದು »

12
ಡಿಸೆ

ಶರಿಯತ್ ಕಾನೂನಿನಡಿ ಮ್ಯುಚುಯಲ್ ಫಂಡ್ ಪ್ರಾರಂಭಿಸುವ ದರ್ದೇಕೆ?

– ಶ್ರೀನಿವಾಸ್ ರಾವ್

ಮ್ಯುಚುಯಲ್ ಫಂಡ್ಈ ದೇಶದಲ್ಲಿ ಸಂವಿಧಾನಕ್ಕೆ ಪರ್ಯಾಯವಾದ ಮತ್ತೊಂದು ಕಾನೂನು ಚಾಲ್ತಿಯಲ್ಲಿದ್ದರೂ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ದೇಶದ ಭದ್ರತೆಗೇ ಅಪಾಯವೊಡ್ಡುವ ಸ್ಥಿತಿ ಎದುರಾದಾಗ ಮಾತ್ರ ಅದರ ಬಗ್ಗೆ ಎಚ್ಚೆತ್ತುಕೊಳ್ಳುತ್ತೇವೆ. ಇಲ್ಲದಿದ್ದರೆ ಪರ್ಯಾಯ ಕಾನೂನಿನ ಪ್ರಕಾರ ಏನು ನಡೆದರೂ ಪಿಳಿಪಿಳಿ ನೋಡುತ್ತಾ ಕುಳಿತುಬಿಡುತ್ತೇವೆ. ಈ ಮಾತನ್ನು ಈಗೇಕೆ ಹೇಳಬೇಕಾಗಿದೆ ಎಂದರೆ ಅಲ್ಪಸಂಖ್ಯಾತರಿಗೆ,ಎಸ್.ಬಿ.ಐ ಶರಿಯಾ ಕಾನೂನಿನ ಪ್ರಕಾರ ಮ್ಯುಚುಯಲ್ ಫಂಡ್ ಪ್ರಾರಂಭಿಸಲು ಹೊರಟಿರುವದರಿಂದ.

ಒಂದಷ್ಟು ಜನರು ಗುಂಪಿನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಪ್ರಕ್ರಿಯೆಯೇ ಮ್ಯುಚುಯಲ್ ಫಂಡಿಂಗ್. ಇದಕ್ಕಾಗಿಯೇ ಹೆಚ್.ಡಿ.ಎಫ್.ಸಿ ಸೇರಿದಂತೆ ಹಲವು ಕಂಪನಿಗಳಿರುತ್ತವೆ.ಹೂಡಿಕೆ ಮಾಡಿರುವವರ ಹಣವನ್ನು ಸರಿಯಾದ ರೀತಿಯಲ್ಲಿ ಷೇರುಪೇಟೆಯಲ್ಲಿ ತೊಡಗಿಸಿ ಲಾಭ ಗಳಿಸಿಕೊಡಲೆಂದೇ ಆ ಕಂಪನಿಗೋರ್ವ ಫಂಡಿಂಗ್ ಮ್ಯಾನೇಜರ್ ಇರುತ್ತಾನೆ. ಯಾವ ಕಂಪನಿಯ ಷೇರುಗಳಲ್ಲಿ ಹೂಡಿಕೆ ಮಾಡಿದರೆ ಎಷ್ಟು ಲಾಭ, ಎಷ್ಟು ಹೂಡಿಕೆ ಮಾಡಬೇಕು ಇತ್ಯಾದಿಗಳ ಪಕ್ಕಾ ಲೆಕ್ಕಾಚಾರದ ಕಸುಬು. ಗಮನಿಸಬೇಕಾದ ಮುಖ್ಯ ಅಂಶವೆಂದರೆ ಯಾವುದೇ ಮ್ಯುಚುಯಲ್ ಫಂಡಿಂಗ್ ಕಂಪನಿ ಇರಲಿ ಅದು ದೇಶದ  ಸಂವಿಧಾನಕ್ಕೆ, ಕಾನೂನಿಗೆ ಬದ್ಧವಾಗಿಯೇ ಕಾರ್ಯನಿರ್ವಹಿಸಬೇಕಾಗುತ್ತದೆ. ಆರ್.ಬಿ.ಐ, ಸೆಬಿ,(ಸೆಕ್ಯುರಿಟಿ ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾ)ನಿಂದ ಅನುಮತಿ ಪಡೆದು ನಿಬಂಧನೆಗಳಿಗೆ ಬದ್ಧವಾಗಿರಬೇಕಾಗುತ್ತದೆ. ವಿದೇಶಗಳಲ್ಲಿ ಹೂಡಿಕೆ ಮಾಡಿದ ಎನ್.ಆರ್.ಐ ಗಳು ಒಂದು ವರ್ಷದೊಳಗೆ ಮ್ಯುಚುಯಲ್ ಫಂಡ್ ಗಳನ್ನು ಮಾರಾಟ ಮಾಡಬೇಕು, ವಿದೇಶಗಳಲ್ಲಿ ಹೂಡಿಕೆ, ಹಿಂತೆಗೆತ ಸೇರಿದಂತೆ ಪ್ರತಿಯೊಂದಕ್ಕೂ ಸರಿಯಾದ ಲೆಕ್ಕ ಕೊಡಬೇಕು(ಭಾರತದಲ್ಲಿ ಹೂಡಿಕೆ ಮಾಡಿದರೆ ಲೆಕ್ಕ ಕೊಡಬೇಕಿಲ್ಲ ಎಂದಲ್ಲ, ವಿದೇಶದಲ್ಲಿ ಹೂಡಿದರೆ ವಿಶೇಷ ಎಚ್ಚರಿಕೆ ವಹಿಸಲಾಗುತ್ತದೆ ಅಷ್ಟೆ). ಹೀಗೆ ಹತ್ತು ಹಲವು ಷರತ್ತುಗಳು ವಿಧಿಸಲಾಗಿದೆ.
ಮತ್ತಷ್ಟು ಓದು »

6
ಡಿಸೆ

ರಾಮ ಜನ್ಮಭೂಮಿ/ಬಾಬರಿ ವಿವಾದ : ಭೂತಕಾಲದ ತಪ್ಪುಗಳು ಭವಿಷ್ಯಕ್ಕೆ ಭಾರವಾಗಬಾರದು

– ರಾಕೇಶ್ ಶೆಟ್ಟಿ

Ayodhya Issue and Unityಮುಂಬೈನಿಂದ ನಾನು ಬೆಂಗಳೂರಿಗೆ ಹೊರಟಿದ್ದ ಸೆಪ್ಟಂಬರ್ ೩೦,೨೦೧೦ರ ಗುರುವಾರದ ಆ ದಿನ ಉಳಿದ ದಿನಗಳಂತೆ ಇರಲಿಲ್ಲ.ಒಂದು ಬಗೆಯ ಕುತೂಹಲ,ಕಾತರ,ಆತಂಕಗಳು ಭಾರತದ ಬಹುತೇಕರಲ್ಲಿ ಮನೆ ಮಾಡಿದ್ದ ದಿನವದು.ಅಲಹಬಾದ್ ಉಚ್ಚ ನ್ಯಾಯಾಲಯ ಅಯೋಧ್ಯೆಯ “ರಾಮ ಜನ್ಮ ಭೂಮಿ/ಬಾಬರಿ ಮಸೀದಿ” ವಿವಾದದ ಕುರಿತು ತೀರ್ಪು ನೀಡುವ ದಿನವಾಗಿತ್ತದು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಹಳಷ್ಟು ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದವು,ಸೂಕ್ಷ್ಮ,ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಪಡೆಯ ಕಣ್ಗಾವಲಿತ್ತು.ಜನರ ಜೊತೆಗೆ ವಿಶೇಷವಾಗಿ ಟಿ.ಆರ್.ಪಿ ಮಾಧ್ಯಮಗಳು ಕೂಡ ಸಂಯಮದಿಂದ ವರ್ತಿಸಬೇಕು ಎನ್ನುವ ಮನವಿಗಳು ಸರ್ಕಾರದಿಂದಲೇ ಬರುತಿತ್ತು.ಮಧ್ಯಾಹ್ನ ೩.೩೦ರ ಸುಮಾರಿಗೆ ತೀರ್ಪು ಹೊರಬರಲಿದೆ ಎನ್ನುವ ಸುದ್ದಿಗಳು ಹರಿದಾಡುತಿದ್ದವು.ನನ್ನ ವಿಮಾನವಿದ್ದಿದ್ದು ಸಂಜೆಯ ವೇಳೆಗೆ.ಆದರೆ,ಬಾಬರಿ ಮಸೀದಿ ಧರಾಶಾಹಿಯಾದ ಮೇಲೆ ಭೀಕರ ದಂಗೆಗೆ ಸಾಕ್ಷಿಯಾಗಿದ್ದ ಮುಂಬೈನಲ್ಲಿ ತೀರ್ಪು ಹೊರಬಂದ ಮೇಲೆ ಏನಾದರೂ ಆಗಬಾರದ್ದು ಶುರುವಾದರೇ,ಅದಕ್ಕೂ ಮುಖ್ಯವಾಗಿ ನಾನು ಹೋಗಬೇಕಾದ ದಾರಿಯಲ್ಲೇ “ಅತಿ ಸೂಕ್ಷ್ಮ ಪ್ರದೇಶ”ಗಳು ಇದ್ದವಾದ್ದರಿಂದ,ಸೇಫರ್ ಸೈಡ್ ಎಂಬಂತೆ ತುಸು ಬೇಗವೇ ನಾನು ಮತ್ತು ನನ್ನ ಸಹುದ್ಯೋಗಿ ಕ್ಯಾಬ್ ಹತ್ತಿಕೊಂಡೆವು.

ಕ್ಯಾಬ್ ಹೊರಟಂತೇ,ಡ್ರೈವರ್ ಅನ್ನು ಮಾತಿಗೆಳೆದೆ.”ಇವತ್ತು ತೀರ್ಪು ಬರಲಿಕ್ಕಿದೆಯಲ್ಲ.ನಿಮಗೇನನ್ನಿಸುತ್ತದೆ,ಆ ಜಾಗ ಯಾರಿಗೆ ಸೇರಿಬೇಕು ನಿಮ್ಮ ಪ್ರಕಾರ?”.ಅವರು ನನ್ನತ್ತ ತಿರುಗಿ “ತಪ್ಪು ತಿಳಿಯಬೇಡಿ ಸರ್.ನಿಮ್ಮ ಪ್ರಶ್ನೆಯೇ ಸರಿಯಿಲ್ಲ.ಜಾಗ ಯಾರಿಗೆ ಸೇರಬೇಕು ಎನ್ನುವುದು ‘ಅಹಂ’ನ ಪ್ರಶ್ನೆಯಾಗುತ್ತದೆ.ಆ ಅಹಂ ಮುಂದೇ ಪ್ರತಿಷ್ಟೆ, ದ್ವೇಷವನ್ನಷ್ಟೇ ಹೊರಡಿಸುತ್ತದೆ.ಅಸಲಿಗೆ ಇದು “ನಂಬಿಕೆ”ಯ ಪ್ರಶ್ನೆ.ಈ ಸಮಸ್ಯೆಯ ಪರಿಹಾರವಾಗಬೇಕಿರುವುದು ಪರಸ್ಪರ ಸಂವಾದ,ಸಾಮರಸ್ಯ,ಶಾಂತಿಯ ಅನುಸಂಧಾನದಿಂದಲೇ ಹೊರತು, ಇದು ಸರ್ಕಾರ,ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ವಿಷಯವಲ್ಲ.ಆ ಜಾಗ ರಾಮ ಜನ್ಮಭೂಮಿಯೆಂಬುದು ಹಿಂದೂಗಳ ನಂಬಿಕೆಯಾಗಿದೆ.ಮೊಘಲ ಬಾಬರ್ ಆದೇಶಂತೆ ಅಲ್ಲಿದ್ದ ಮಂದಿರವೊಂದನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಿಸಲಾಗಿರುವ ವಾದವಿದೆಯಲ್ಲ ಸರ್ ಅದು ನಿಜವೇ ಆದರೆ,ಅಲ್ಲಿ ಮಂದಿರವೇ ನಿರ್ಮಾಣವಾಗಬೇಕು.ಯಾಕೆಂದರೆ ರಾಮ,ರಾಮಾಯಣ,ಕೃಷ್ಣ,ಮಹಾಭಾರತವೆಲ್ಲ ಈ ದೇಶದ ಜನರಿಗೆ ಕೇವಲ ಪುರಾಣಗಳಲ್ಲ.ಅವು ಜನರ ಜೀವನದ ಭಾಗಗಳು.ಹೀಗಿರುವಾಗ ಅಲ್ಲಿನ ಜನರ ನಂಬಿಕೆಗಳಿಗೆ ಬೆಲೆ ಕೊಟ್ಟು ಬಾಬರಿನಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದ.

ಮತ್ತಷ್ಟು ಓದು »