ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

1
ಡಿಸೆ

ತುಳುನಾಡ ನಂಬಿಕೆಗಳು…

– ಭರತೇಶ ಆಲಸಂಡೆಮಜಲು

ತುಳುನಾಡುಬಾಳಿಗೊಂದು ನಂಬಿಕೆ ಎಂಬಂತೆ, ಈ ಬಾಹ್ಯ ಜಗತ್ತು ನಂಬಿಕೆಯ ತಲೆದಿಂಬುನಿಟ್ಟು ಮಲಗಿದೆ. ಈ ನಂಬಿಕೆಯಲ್ಲಿ ಎಲ್ಲವೂ ಶೂನ್ಯ ಆಕಾಶ ಅನಂತವಾದರೆ, ಅಣು ಪರಮಾಣುಗಳು ಎನೋ ಕತ್ತಲಲ್ಲಿ ತೇಲುವ ಸೂಕ್ಷ್ಮ ಜೀವಿ, ಆ ಆಗಾಧ ಶಕ್ತಿಯ ಕೊಲ್ಮಿಂಚು ಎಲ್ಲೋ ಹುಟ್ಟಿ ಶಕ್ತಿಯ ಅದುಮಿದ ಶೂನ್ಯ, ಸತ್ಯದ ಜಗದಲ್ಲಿ ನಾವೊಂದು ಭ್ರಾಮರಕ ನಿರ್ಮಿತಿಗಳು ಅದೇ ನಿರಾಕಾರ, ನಿರ್ಗುಣ, ನಿರಾಮಯ, ಆಗೋಚರ ಬ್ರಹ್ಮಾಂಡದ ಸ್ವರೂಪಗಳು ನಮ್ಮ ನಮ್ಮ  ಜ್ಞಾನದ ಅಳತೆಯೊಳಗೆ…. “ನೈಜ ಜಗತ್ತಿನಲ್ಲಿ ಬಣ್ಣಗಳೇ ಇಲ್ಲ, ವಾಸನೆಯೂ ಇಲ್ಲ, ಮೃದುತ್ವ ಕಾಠೀಣ್ಯಗಳು ಇಲ್ಲ, ಅವೆಲ್ಲ ಏನಿದ್ದರೂ ನಮ್ಮ ನಿಮ್ಮ ಮಿದುಳಿನಲ್ಲಿ ನಮ್ಮ ನಿಮ್ಮ ಜ್ಞಾನದಲ್ಲಿ” ಎಂದು ಪ್ರಸಿದ್ಧ ನರ ವಿಜ್ಞಾನಿ ನೋಬೆಲ್ ವಿಜೇತ ಸರ್ ಜಾನ್ ಐಕೆಲ್ಸ್ ಹೇಳಿದ್ದಾರೆ.

ನಮ್ಮ ಯೋಚನಾ ಲಹರಿಯ ಶೂನ್ಯ ಜಾಗಗಳಲ್ಲಿ ಈ ನಂಬಿಕೆಗಳು ಅಚ್ಚಳಿದು ನಿಂತಿದೆ ನಮ್ಮ ನಂಬಿಕೆಗಳೇ ಹಾಗೆ ಅದು ಪ್ರಕೃತಿಯ ಅರಾಧನೆಯಿಂದ ಹಿಡಿದು ಗುರು ಹಿರಿಯರ ಪೂಜನೆಯವರೆಗೆ ಅದರಲ್ಲೂ ಕರಾವಳಿ ಇವೂಗಳ ಗೂಡು, ಬೀಡು. ಹಲವಾರು ವೈಶಿಷ್ಟ, ವಿಶೇಷ, ಆಚರಣೆ, ಅರಾಧನೆ, ಪಾಲನೆ ಇವುಗಳಿಂದಾಗಿ ವಿಶ್ವವ್ಯಾಪ್ತಿಯಲ್ಲಿ ಛಾಪನ್ನು ಮೂಡಿಸಿದೆ.  ಎಲ್ಲರ ಮಂದ ದೃಷ್ಠಿ ಇತ್ತ ಕಡೆ ನೆಡುವಂತೆ ಮಾಡಿದೆ. ಇಲ್ಲಿನ ಆಚರಣೆ ಒಂದನ್ನು ಮೀರಿಸುವ ಇನ್ನೊಂದು ಪ್ರಬುದ್ಧವಾದದ್ದು. ಪ್ರಪಂಚದ ಬೇರೆ ಯಾವೂದೇ ಕೋಣೆಯಲ್ಲೂ ಅರಸಿ ಹುಡುಕಿದರೂ ಬಯಸಿ ಸಿಗಲಾರದು. ಯಾವುದೋ ಪೂವಾಗ್ರಹದ ನೆಲೆಯಲ್ಲಿ ತುಳುನಾಡು ತನ್ನ ಭವ್ಯ ಸಂಸ್ಕೃತಿಯ ಕಣಜದ ನೆಲೆಯಲ್ಲಿ ಇನ್ನೂ ಆಚರಣೆಗಳು ಉಳಿದು ನಡೆಯುತಿದೆ. ಒಂದಷ್ಟು ಜಿಜ್ಞಾಸೆ, ವಿಮರ್ಶೆಗಳಿಂದ ಮತ್ತಷ್ಟು ಪ್ರಚಾರವಾಗಿ ಇನ್ನಷ್ಟು ಗಟ್ಟಿಯಾಗಿ ತುಳುವರ ಮನಗಳಲ್ಲಿ ಅಗೆಲುಗಳ ರೂಪದಲ್ಲಿ ಭಾವುಕವಾಗಿ ಬೆಚ್ಚಗೆ ಕುಳಿತಿದೆ.

ಮತ್ತಷ್ಟು ಓದು »

28
ನವೆಂ

ಅಭಿವ್ಯಕ್ತಿ ಸ್ವಾತಂತ್ರವೆಂಬ ಕಪಟ ನಾಟಕ

– ಹೃಷಿಕೇಶ್ ಚಿಕ್ಕಮಗಳೂರು

tv9ಇತ್ತೀಚೆಗೆ ಕಳೆದ ಸೋಮವಾರದಿಂದ ಟಿ.ವಿ9 ವಾಹಿನಿಯನ್ನು ಪ್ರಸಾರ ಮಾಡದಂತೆ ಘನ ಸರ್ಕಾರದ ಮುಖ್ಯಸ್ಥರು ಕೇಬಲ್ ಆಪರೇಟರ್ ಗಳಿಗೆ ಫತ್ವಾವನ್ನು ಹೊರಡಿಸಿದ್ದರು.ಅದರನ್ವಯ ಬಹುತೇಕ ಪ್ರದೇಶಗಳಲ್ಲಿ ಆ ವಾಹಿನಿಯು ಕೇಬಲ್ ವಾಹಿನಿಗಳ ಲಿಸ್ಟ್ ನಿಂದ ಮಾಯವಾಗಿತ್ತು.(ನಂತರ ಕೇಬಲ್ ಆಪರೇಟರುಗಳ ಜೊತೆ ಮತುಕತೆಯೆಂಬ ಕಾರ್ಯಕ್ರಮದ ನೆಪದಲ್ಲಿ ಈ ಫತ್ವಾವನ್ನು ಹಿಂಪಡೆದು,ವಾಹಿನಿಯ ಪ್ರಸಾರಕ್ಕೆ ಅವಕಾಶಕೊಡಲಾಯಿತು)ಆ ವಾಹಿನಿಯನ್ನು ನೋಡದೆ ಊಟ ನಿದ್ದೆ ಬಿಟ್ಟು ಯಾರೂ ಸಾಯದೇ ಇದ್ದರೂ ಸಹ ಒಂದು ಆಸಕ್ತದಾಯಕ ಬೆಳವಣಿಗೆಯೊಂದು ಕಂಡುಬರುತ್ತದೆ. ಅದೆಂದರೆ ಅಭಿವ್ಯಕ್ತಿ ಸ್ವಾತಂತ್ರಕ್ಕೆ ಅಡ್ಡಿ, ಹಾಗೂ ಸರ್ಕಾರದ ನಾಲ್ಕನೇ ಅಂಗ ಎಂದೇ ಖ್ಯಾತಿ ಗಳಿಸಿದ ಮಾಧ್ಯಮದ ಮೇಲೆ ಒಂದು ಸುತ್ತಿನ ಬಿಗಿಹಿಡಿತ ಸಾಧಿಸಲು ಸರ್ಕಾರ ಶತಾಯಗತಾಯ ಪ್ರಯತ್ನ ಪಡುತ್ತಿರುವುದು ಗೋಚರವಾಗುತ್ತಿದೆ.

ಹಾಲಿ ಸಚಿವರೊಬ್ಬರ ಸ್ಟಿಂಗ್ ಆಪರೇಷನ್ ಮಾಡಲು ಹೋಗಿ ಈ ವಾಹಿನಿಗೆ ವಕ್ರದೃಷ್ಟಿ ಬಿದ್ದಂತಾಗಿದೆ. ವಿಷಯ ಏನೇ ಇದ್ದಿರಿಲಿ, ಆದರೆ ಸರ್ಕಾರದ ವಿರುದ್ಧ ಕಾರ್ಯಕ್ರಮಗಳನ್ನು ಮಾಡಲೇಬಾರದು ಎಂಬುದು ದಾಷ್ಟ್ಯದ ಪರಮಾವಧಿ ಎಂದೇ ಹೇಳಬೇಕು. ಬ್ರಿಟೀಷರ ನಂತರ ಪತ್ರಿಕಾ ಸ್ವಾತಂತ್ಯದ ಮೇಲೆ ನಿರ್ಬಂಧವನ್ನು ಹೇರಿದ್ದು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ತದ ನಂತರ ಆ ಕೀರ್ತಿ ಪ್ರಸ್ತುತ ಸರ್ಕಾರಕ್ಕೆ ಸಲ್ಲುತ್ತದೆ. ಎಲ್ಲಾ ಮಾಧ್ಯಮದ ಮೇಲೂ ನಿರ್ಬಂಧ ಹೇರದಿದ್ದರೂ ನಿರ್ದಿಷ್ಟವಾಗಿ ತನಗೆ ಆಗದವರ ಮೇಲೆ ನಿರ್ಬಂಧ ಹೇರುವುದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಯಲ್ಲದೆ ಮತ್ತೇನೂ ಅಲ್ಲ.

ಮತ್ತಷ್ಟು ಓದು »

27
ನವೆಂ

ಒಂದಿಡಿ ಜನಾಂಗಕ್ಕೆ ಕಂಟಕವಾದವರನ್ನು ವೈಭವೀಕರಿಸುವುದೇಕೆ?

– ಡ್ಯಾನಿ ಪಿರೇರಾ,ಹಳ್ಳಿಮೈಸೂರು

Frncis Xvierನ.16 ರ ಕನ್ನಡಪ್ರಭ ದಿನಪತ್ರಿಕೆಯಲ್ಲಿ ‘ಫ್ರಾನ್ಸಿಸ್ ಕ್ಸೇವಿಯರ್ ಪಾರ್ಥಿವ ಶರೀರ ಪ್ರದರ್ಶನಕ್ಕೆ ಅಪಸ್ವರ’ ಎಂಬ ಶೀರ್ಷಿಕೆ ಅಡಿಯಲ್ಲಿ ಸಂತನೆಂದು ಹೇಳಲಾಗುವ ಪ್ರಾನ್ಸಿಸ್ ಕ್ಸೇವಿಯರ್‍ರ ಬಗ್ಗೆ ವರದಿಯಾಗಿತ್ತು. ಆತನ ಪಾರ್ಥಿವ ಶರೀರ ನ.22 ರಿಂದ ಜ.4 ರ ವರೆಗೆ ಸಾರ್ವಜನಿಕ ದರ್ಶನಕ್ಕಿಡಲಾಗುತ್ತಿದೆ.

ಈ ನಡುವೆ ಈ ವಿವಾದಿತ ಸಂತನ ವಿಚಾರದಲ್ಲಿ ಆತನು ನಡೆಸಿದ ಮತಾಂತರದ ಕ್ರೌರ್ಯ ಹಾಗೂ ಮಾರಣಹೋಮ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದೂ ಈತ ಒಬ್ಬ ಮಹಾನ್ ಸಂತ ಎಂದು ಆತನನ್ನು ವೈಭವೀಕರಿಸುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಸಹಜವಾಗಿ ಏಳುತ್ತದೆ. ಭಾರತದ ಸಂತ ಪರಂಪರೆಗೂ ಪಾಶ್ಚತ್ಯ ಸಂತ ಪರಂಪರೆಗೂ ಅಜಗಜಾಂತರ ವ್ಯತ್ಯಾಸವಿದೆ. ಒಬ್ಬ ವ್ಯಕ್ತಿ ಆತ ಯಾವುದೇ ಜಾತಿಗೆ ಸೇರಿರಲಿ ಆತ ಮಾಡಿದ ಮಾನವತೆಯ ಸೇವೆಯನ್ನು ಅತ್ಯಂತ ಕೃತಜ್ಞತೆಯನ್ನು ಸ್ಮರಿಸಿ, ಆತನಿಗೆ ಸಂತ ಪದವಿ ನೀಡುವುದು ಈ ನೆಲದ ಪರಂಪರೆ. ಆದರೆ ಪಾಶ್ಚತ್ಯ ಜಗತ್ತಿನ ಸಂತ ಪದವಿಯನ್ನೇರಲು ಇಂಥಹ ಮಾನದಂಡವೇನಿಲ್ಲ ಎನಿಸುತ್ತದೆ!  ಒಬ್ಬ ವ್ಯಕ್ತಿ ತನ್ನ ಮತದ ಹಿತಕ್ಕೆ ಪೂರಕವಾಗಿ ನಡೆದು, ಇತರ ಮತಗಳ ಅವಹೇಳನ ಗೈದು ಇತರ ಮತೀಯರ ಮೇಲೆ ಮರಣ ಮೃದಂಗ ಬಾರಿಸಿದರೆ ಆತ ಶ್ರೇಷ್ಠನೆಂದು ಪರಿಗಣಿತವಾಗುತ್ತದೆ ಎನ್ನುವುದಕ್ಕೆ ಕ್ಸೇವಿಯರ್ ಸಂತ ಪದವಿ ಅಲಂಕರಿಸಿದ್ದೇ ಸಾಕ್ಷಿ ಎನ್ನಬೇಕಾಗುತ್ತದೆ. ಇನ್ನೊಂದು ಮತದ ನಂಬಿಕೆಗಳ ವಿರುದ್ಧ ನಡೆದುಕೊಂಡಾಗಲೂ ಅವನನ್ನು ಆರಾಧಿಸುವ ಮನಸ್ಥಿತಿ ಏರ್ಪಟ್ಟರೆ ಅತನನ್ನು ಯಾವ ಅರ್ಥದಲ್ಲಿ ಸಂತ ಎನ್ನ ಬಹುದು ಎನ್ನುವ ಪ್ರಶ್ನೆ ಸಹಜವಾಗಿ ಏಳುತ್ತದೆ. ಈ ಹಿನ್ನೆಲೆಯಲ್ಲಿ ಕ್ಸೇವಿಯರ್ ಒಬ್ಬ ಸಂತನೆಂದು ಕ್ರೈಸ್ತ ಸಮಾಜ ಒಪ್ಪಿಕೊಂಡರೂ ಮಾನವತೆಯ ನೆಲೆಗಟ್ಟಿನಲ್ಲಿ ಯೋಚಿಸುವ ಯಾವುದೇ ಜನಾಂಗ ಇದನ್ನು ಒಪ್ಪಲು ಸಾಧ್ಯವಾಗುವುದಿಲ್ಲ.
ಮತ್ತಷ್ಟು ಓದು »

26
ನವೆಂ

ಭಾರತವನ್ನು “ಕಾಂಗ್ರೆಸ್ಸ್ ಮುಕ್ತ”ವಾಗಿಸಲು,ಕರ್ನಾಟಕದಲ್ಲಿ “ಬಿಜೆಪಿಯೇ ಇಲ್ಲ”!

– ರಾಕೇಶ್ ಶೆಟ್ಟಿ

Modi Karnataka BJPಕುರುಕ್ಷೇತ್ರದ ಯುದ್ದಕ್ಕೆ ಬೆಂಬಲ ಕೋರಿ ಬಂದ ಅರ್ಜುನನಿಗೆ,”ನಾರಾಯಣ ಬೇಕೋ?”,”ನಾರಾಯಣಿ ಸೈನ್ಯ ಬೇಕೋ?” ಎಂದು ಕೇಳುತ್ತಾನೆ ಶ್ರೀಕೃಷ್ಣ.’ಸಂಖ್ಯೆ’ ಗಿಂತ ‘ವ್ಯಕ್ತಿ’ ಮತ್ತು ‘ವ್ಯಕ್ತಿ’ಗಿಂತ ‘ವ್ಯಕ್ತಿತ್ವ’ದ ಮಹತ್ವ ಅರಿತಿದ್ದ ಅರ್ಜುನ “ನಾರಾಯಣ” ಎನ್ನುತ್ತಾನೆ. ಅರ್ಜುನನೆಡೆಗೆ ಕನಿಕರ ತೋರಿದ ದುರ್ಯೋಧನ “ನಾರಾಯಣಿ ಸೈನ್ಯ”  ಪಡೆದು ಹೋಗುತ್ತಾನೆ.ಕಡೆಗೆ ಯುದ್ಧದಲ್ಲಿ ಗೆದ್ದಿದ್ದು ಯಾರು ಎನ್ನುವುದು ಎಲ್ಲರಿಗೂ ತಿಳಿದ ವಿಷಯವೇ. ಇಲ್ಲಿ ನನ್ನ ಗಮನವಿರುವುದು ಯುದ್ಧದ ಮೇಲಲ್ಲ.ಯುದ್ಧಕ್ಕೆ ಹೊರಟು ನಿಂತವನು ಮಾಡಿಕೊಳ್ಳುವ ತಯಾರಿಯ ಮೇಲೆ.ಕುರುಕ್ಷೇತ್ರದ ಯುದ್ಧಕ್ಕೆ ಕಾರಣನಾದ ದುರ್ಯೋಧನ,ಯುದ್ಧಕ್ಕೆ ಬೇಕಾದ ಜನರನ್ನು (ಸಂಖ್ಯೆ) ಒಟ್ಟುಗೂಡಿಸಿಕೊಂಡು ಹೊರಟು ನಿಂತನೇ ಹೊರತು,ಯುದ್ದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಿಲ್ಲ.

ಬಹುಷಃ, ತನ್ನ ಜೊತೆಗೆ ಭೀಷ್ಮ,ದ್ರೋಣಾಚರ್ಯರಂತ ಅಸಾಧಾರಣ ಸಾಮರ್ಥ್ಯದ “ವ್ಯಕ್ತಿ”ಗಳಿದ್ದಾರೆ ಎನ್ನುವ ಅಹಂ ದುರ್ಯೋಧನನಿಗಿದ್ದೀತು.ವ್ಯಕ್ತಿಗಳಿದ್ದರೇನಂತೆ “ವ್ಯಕ್ತಿತ್ವ” ಇರಲಿಲ್ಲವಲ್ಲ!

ಏನಿದು,ಭೀಷ್ಮನಂತ ಭೀಷ್ಮ,ದ್ರೋಣಾಚಾರ್ಯರಿಗೆ ವ್ಯಕ್ತಿತ್ವವಿರಲಿಲ್ಲ ಎನ್ನುತ್ತಿದ್ದೇನೆ ಎನ್ನಿಸಬಹುದು.ಧರ್ಮ-ಅಧರ್ಮದ ಪ್ರಶ್ನೆ ಬಂದಾಗ ಅದಿನ್ನೇನೋ ಸಬೂಬು ಕೊಟ್ಟು ಅಧರ್ಮದ ಪರ ನಿಲ್ಲುವ ವ್ಯಕ್ತಿಯ “ವ್ಯಕ್ತಿತ್ವ”ಕ್ಕೆ ಬೆಲೆ ಉಳಿಯುತ್ತದೆಯೇ? ಕಡೆಗೂ ಮಹಾಭಾರತದ ಯುದ್ಧದಲ್ಲಿ ಗೆದ್ದಿದ್ದು ಧರ್ಮದ ಪರನಿಂತ ವ್ಯಕ್ತಿಗಳೇ.

ಮತ್ತಷ್ಟು ಓದು »

21
ನವೆಂ

ನಂಬಿಕೆ-ಮೂಢನಂಬಿಕೆ ಗೆರೆ ಎಳೆಯುವುದು ಹೇಗೆ?

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ

ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು, ಕರ್ನಾಟಕ

ಮೌಢ್ಯ ವಿರೋಧಬೆಂಗಳೂರಿನಲ್ಲಿ ಇನ್ನೂರಾ ಎಂಟು ಪ್ರಗತಿಪರ ಸ್ವಾಮೀಜಿಗಳೆಂದು ಕರೆದುಕೊಂಡಿರುವವರು ಮೂಢ ನಂಬಿಕೆ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಸಂತೋಷ. ಯಾರಲ್ಲೂ ಮೌಢ್ಯ ಎಂಬುದು ಇರಬಾರದು. ಯಾಕೆಂದರೆ ನಾವೆಲ್ಲ ವೈಜ್ಞಾನಿಕ (ಹಾಗೆಂದರೇನು ಎಂಬುದೇ ಬೇರೆ ಚರ್ಚೆಯ ಸಂಗತಿ) ಯುಗದಲ್ಲಿದ್ದೇವೆ! ಈಗ ಧರಣಿ ಕುಳಿತಿದ್ದ ಸ್ವಾಮೀಜಿಗಳು ಕಾವಿ ಧರಿಸಿದ್ದಾರೆ, ಕೆಲವರು ವಿಭೂತಿಯನ್ನೂ ರುದ್ರಾಕ್ಷಿ ಮಾಲೆಯನ್ನೂ ಧರಿಸಿದ್ದಾರೆ. ಅನೇಕಾನೇಕ ಜನರ ನಂಬಿಕೆಯನ್ನು ಪ್ರತಿನಿಧಿಸುವ ಮಠಾಧೀಶರಾಗಿದ್ದಾರೆ. ಇವೆಲ್ಲದರ ಗೋಜಿಲ್ಲದೇ ಆರಾಮವಾಗಿ ದೇಶದ ಸಂವಿಧಾನಕ್ಕೆ ಅನುಸಾರವಾಗಿ ನಾನಂತೂ ಬದುಕುತ್ತಿದ್ದೇನೆ. ನನ್ನ ದೃಷ್ಟಿಯಲ್ಲಿ ಈ ಸ್ವಾಮೀಜಿಗಳ ವೇಷವೇ ಮೌಢ್ಯ. ಅವರು ಪ್ರತಿನಿಧಿಸುವ ಮಠಗಳೂ ಮೌಢ್ಯ. ಆದರೂ ಅವರು ಇವುಗಳಿಗೆ ಹೊರತಾದ ಯಾವುದೋ ಮೌಢ್ಯ ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆ. ತಮಾಷೆ ಎಂದರೆ ನವೆಂಬರ್ ಎರಡನೆಯ ವಾರದಲ್ಲಿ ಸಿದ್ಧಗಂಗಾ ಕ್ಷೇತ್ರದಲ್ಲಿ ನಡೆದ ಸಂತರ ಸಮ್ಮೇಳನದಲ್ಲಿ ಪಾಲ್ಗೊಂಡು ಭಾರತೀಯ ಪ್ರಾಚೀನ ಪರಂಪರೆಯ ಉಳಿವಿನ ಪಣ ತೊಟ್ಟ ಕೆಲವು ಸ್ವಾಮೀಜಿಗಳೂ ಈ ಧರಣಿಯಲ್ಲಿದ್ದಾರೆ. ಮೂಢ ನಂಬಿಕೆ ನಿಷೇಧದ ಪಟ್ಟಿಯಲ್ಲಿರುವ ಪೂಜೆ, ಪಾದಪೂಜೆಯಾದಿಯಾಗಿ ಅನೇಕಾನೇಕ ಸಂಗತಿಗಳನ್ನು ಸದ್ಯ ಆಚರಿಸುತ್ತಿರುವ ಸ್ವಾಮೀಜಿಗಳು ಇವರು!

ಕೆಲವು ತಿಂಗಳುಗಳ ಹಿಂದೆ ರಾಜ್ಯದಲ್ಲಿ ಸರ್ಕಾರದಿಂದ ರಚಿತವಾದ ಸಮಿತಿಯೊಂದು ಮೂಢ ನಂಬಿಕೆ ನಿಷೇಧ ಕಾಯ್ದೆಯ ಕರಡು ಪ್ರತಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ಅದಿನ್ನೂ ಸರ್ಕಾರದ ಪರಿಶೀಲನೆಯ ಹಂತದಲ್ಲೇ ಇದೆ. ಸಾರ್ವಜನಿಕ ಚರ್ಚೆಗೆ ಅದಿನ್ನೂ ತೆರೆದುಕೊಂಡಿಲ್ಲ. ಅದರಲ್ಲಿ ಹೇಳಲಾದ ಕೆಲವು ಸಂಗತಿಗಳು ಅಂತರ್ಜಾಲದ ಕೆಲವು ಮೂಲಗಳಿಂದ ಅಷ್ಟಿಷ್ಟು ಲಭ್ಯವಾಗಿದೆ. ಹತ್ತಾರು ಬಗೆಯ ಆಚಾರ ವಿಚಾರಗಳನ್ನು, ನಂಬಿಕೆ ನಿಷೇಧಗಳನ್ನು ಅನುಸರಿಸುವ ಆದರೂ ಜೊತೆಯಲ್ಲೇ ಬದುಕುವ ವೈವಿಧ್ಯಮಯ ಸಮಾಜ ನಮ್ಮದು. ಸಾಲದ್ದಕ್ಕೆ ಜನತಂತ್ರ ವ್ಯವಸ್ಥೆ ಬೇರೆ ಇದೆ. ಧಾರ್ಮಿಕ ಆಚರಣೆಯ ಸ್ವಾತಂತ್ರ್ಯ ಅಂದರೇನೆಂದು ನಾವು ಅನುಸರಿಸುವ ಸಂವಿಧಾನವೂ ಸ್ಪಷ್ಟವಾಗಿ ಹೇಳಿದೆ. ಇಂಥ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಮುಕ್ತ ಚರ್ಚೆಗೆ ಕರಡನ್ನು ತೆರೆದು ಕೂಲಂಕಷವಾಗಿ ತಿದ್ದುಪಡಿ ಮಾಡದೇ ಸರ್ಕಾರ ನೇಮಿಸಿದ ಸಮಿತಿಯ ಕೆಲ ಸದಸ್ಯರ ಹಾಗೂ ತಾವು ಸಂದರ್ಶಿಸಿದ್ದೇವೆ ಎಂದು ಹೇಳಲಾದ ಆಯ್ದ ಕೆಲವರ ಅಭಿಪ್ರಾಯವನ್ನು ಸಮಾಜದ ಸಕಲರ ಅಭಿಪ್ರಾಯ ಎಂದು ಸ್ವೀಕರಿಸುವುದಾದರೂ ಹೇಗೆ? ಇಂಥ ಮೂಲಭೂತ ಸಂಗತಿ ಕರಡನ್ನು ಸರ್ಕಾರಕ್ಕೆ ಸಲ್ಲಿಸಿದಾಗಲೇ ಸಾಕಷ್ಟು ಚರ್ಚೆಯಾಗಿದೆ. ಅದಿರಲಿ.

ಮತ್ತಷ್ಟು ಓದು »

13
ಆಕ್ಟೋ

ಕೈಲಾಶ್ ಸತ್ಯಾರ್ಥಿ : ಮಾನವತೆಯ ಕೈಲಾಸ ಪರ್ವತ

– ರಾಘವೇಂದ್ರ ಅಡಿಗ

ಕೈಲಾಶ್ ಸತ್ಯಾರ್ಥಿಭಾರತದ ಮಧ್ಯ ಪ್ರದೇಶದ ವಿದಿಶಾ ನಗರದಲ್ಲಿ ಹುಟ್ಟಿ “ಬಚಪನ್ ಬಚಾವೋ” ಆಂದೋಳನದ ಮೂಲಕ ಸಾವಿರಾರು ಮಕ್ಕಳನ್ನು ಜೀತ ವಿಮುಕ್ತಿಗೊಳಿಸಿದ ವ್ಯಕ್ತಿ 60 ರ ಪ್ರಾಯದ ಕೈಲಾಶ್ ಸತ್ಯಾರ್ಥಿಯವರ ಕುರಿತಾಗಿ ಮೊನ್ನೆ ನೋಬೆಲ್ ಶಾಂತಿ ಪಾರಿತೋಶಕ ಘೋಷಣೆ ಆಗುವವರೆಗೂ ನಮಗೆ ಯಾರೊಬ್ಬರಿಗೂ ಅವರ ಬಗೆಗೆ ತಿಳಿದಿರಲಿಲ್ಲ ಎನ್ನುವುದು ನಮ್ಮ ದೇಶದ ಸಾಧಕನೋರ್ವನ ಬಗೆಗೆ ನಮಗಿರುವ ಉದಾಸೀನತೆಗೆ ಸಾಕ್ಷಿಯಲ್ಲವೆ? ಭಾರತದ ಸಾಮಾನ್ಯ ಜನರಿಗಾಗಲೀ, ಭಾರತದ ಘನ ಸರ್ಕಾರಗಳಿಗಾಗಲೀ, ಸಾವಿರಾರು ಸಂಖ್ಯೆಯಲ್ಲಿರುವ ಸಂಘ ಸಂಸ್ಥೆಗಳಲ್ಲಿ ಯಾರೊಬ್ಬರಿಗೂ ಇವರ ಬಗೆಗೆ, ಇವರ ಸಾಮಾಜಿಕ ಕಳಕಳಿಯ ಕಾರ್ಯಗಳ ಬಗೆಗೆ ಯಾವೊಂದು ವಿಚಾರವೂ ತಿಳಿದಿರಲಿಲ್ಲ! “ಡರ್ಟಿ ಪಿಕ್ಚರ್” ನಂತಹಾ ಚಲನಚಿತ್ರಗಳಲ್ಲಿ ನಟಿಸಿದ ನಟಿಮಣಿಯರಿಗೆಲ್ಲ ಭಾರತದ ಉನ್ನತ ನಾಗರಿಕ ಗೌರವ “ಪದ್ಮಶ್ರೀ” ಪ್ಯ್ರಸ್ಕಾರವು ಸಂದಿರುವಾಗ ನಮ್ಮ ನಡುವೆಯೇ ಇದ್ದು ಸಾವಿರಾರು ಬಡ ಮಕ್ಕಳ ಉದ್ದಾರಕ್ಕಾಗಿ ಟೊಂಕಕಟ್ಟಿದ ಕೈಲಾಶ್ ರಂತಹವರನ್ನು ನಮ್ಮ ಸರ್ಕಾರಗಳು ಗುರುತಿಸದೇ ಹೋದುದು ತೀರಾ ಖೇದಕರ ಸಂಗತಿಯಲ್ಲವೆ? ಇನ್ನಾದರೂ ನಮ್ಮ ದೇಶದ ಸರ್ಕಾರಗಳು, ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಬೇಕಿದೆ. ಹಾಗಾದಾಗ ಮಾತ್ರವೇ ನಮ್ಮ ಸಮಾಜಕ್ಕೂ, ಜನತೆಗೂ ಮಾನವತೆಯ ಮೌಲ್ಯಗಳ ಅರಿವಿದೆ ಎಂದು ಇತರರಿಗೆ ತಿಳಿಸಿದಂತಾಗುತ್ತದೆ.

ಆ ಹುಡುಗನು ತಾನು ನಿತ್ಯವೂ ಶಾಲೆಗೆ ನಡೆದು ಹೋಗುತ್ತಿದ್ದಾಗ ತನ್ನದೇ ಓರಗೆಯ ಹುಡುಗನೋರ್ವನು ತನ್ನ ತಂದೆಯೊಡನೆ ಕುಳಿತು ಬೂಟು ರಿಪೇರಿ ಮಡುತ್ತಿದ್ದುದನ್ನು ಕಾಣುತ್ತಿದ್ದನು. ಅದಾಗೆಲ್ಲಾ ಈ ಹುಡುಗನ ಮನಸ್ಸಿನಲ್ಲಿ ‘ನಾನು ಉತ್ಸಾಹದಿಂದಲೂ ಸಂತೋಷದಿಂದಲೂ ಶಾಲೆಗೆ ಹೋಗುತ್ತಿದ್ದರೆ ಆ ಹುಡುಗ ಮಾತ್ರ ತನ್ನ ತಂದೆಯೊಂದಿಗೆ ಕುಳಿತು ಬೂಟು ಹೊಲಿಯುತ್ತಿದ್ದಾನೆ, ಅದೇಕೆ ಹೀಗೆ?’ಎನ್ನುವ ಆಲೋಚನೆ ಹುಟ್ಟುತ್ತಿತ್ತು.

ಅದೊಮ್ಮೆ ಅದೇ ಪ್ರಶ್ನೆಯನ್ನು ತನ್ನ ಶಾಲಾ ಉಪಾದ್ಯಾಯರ ಬಳಿ ಕೇಳಲಾಗಿ “ ಅವರ ಬಳಿ ಹಣವಿಲ್ಲ, ಅವರು ಬಡವರು. ವಿದ್ಯಾಭ್ಯಾಸ ಪಡೆದುಕೊಳ್ಳಲಿಕ್ಕೆ ಸಾಕಷ್ಟು ಧನಬಲವಿಲ್ಲದವರು.” ಎನ್ನುವ ಉತ್ತರ ದೊರಕಿತು.

ಮತ್ತಷ್ಟು ಓದು »

8
ಆಕ್ಟೋ

ಭ್ರಷ್ಟ ಜಯಲಲಿತಾ ಯಾವೆಲ್ಲದರ ಫಲಿತಾಂಶ?

– ಚೇತನಾ ತೀರ್ಥಹಳ್ಳಿ    

Jayalilthaಅಧಿಕೃತವಾಗಿ ತನ್ನ ಸ್ವಂತದವರೆಂದು ಹೇಳಿಕೊಳ್ಳಲು ಮತ್ತೊಂದು ಜೀವ ಜೊತೆಗಿರದ ಜಯಲಲಿತಾ ಇವೆಲ್ಲವನ್ನೂ ಮಾಡಿಟ್ಟಿದ್ದು ಯಾಕಾಗಿ? ತನ್ನ ನೆಲದ ಬಡ ಜನರಿಗೆ ರೂಪಾಯಿಗೊಂದು ಇಡ್ಲಿ, ಕುಡಿಯುವ ನೀರು, ಸೂರು ಎಂದೆಲ್ಲ ಜನಪರ – ಜನಪ್ರಿಯ ಯೋಜನೆಗಳನ್ನು ರೂಪಿಸಿದ ಜಯಲಲಿತಾ ಅದೇ ಜನರ ತೆರಿಗೆ ಹಣವನ್ನು ನುಂಗಿ ಕೂತಿರುವುದು ಯಾಕೆ? ನಿಜಕ್ಕೂ ಈ ಪರಿಯ ಹಪಾಹಪಿ ಅವರಲ್ಲಿದೆಯೇ? ತುಸು ಜಂಭದ, ಆದರೆ ಅಪ್ರಮಾಣಿಕತೆ ಕಾಣದ ಅವರ ಮುಖ ಹಾಗೂ ನಿಲುವಿನಲ್ಲಿ ಮೋಸವಿದೆಯೇ? ಇಂದು ನಾವು ನೋಡುತ್ತಿರುವ ಭ್ರಷ್ಟ ರಾಜಕಾರಣಿ ಜಯಲಲಿತಾ ರೂಪುಗೊಂಡಿದ್ದು ಹೇಗೆ?

ಬದುಕನ್ನು ಗಂಡು – ಹೆಣ್ಣೆಂಬ ಭೇದ ಮೀರಿದ ದೃಷ್ಟಿಕೋನದಿಂದ ನೋಡಬೇಕೆನ್ನುವುದು ನಿಜವಾದರೂ ಅದರ ಹೊರಳಾಟಗಳನ್ನು ನೋಡುವಾಗ ಈ ಭೇದದ ಊರುಗೋಲು ಅಗತ್ಯವಾಗಿಬಿಡುತ್ತದೆ. ಏಕೆಂದರೆ, ಬದುಕು ಒಂದೇ ಆದರೂ ಅದನ್ನು ಹೆಣ್ಣು ಎದುರುಗೊಳ್ಳುವ ಬಗೆಯೇ ಬೇರೆ ಮತ್ತು ಗಂಡು ಒಳಗೊಳಿಸಿಕೊಳ್ಳುವ ಬಗೆ ಬೇರೆ. ಏಕೆಂದರೆ, ನಾಗರಿಕತೆಯ ಆರಂಭಕಾಲದಿಂದಲೂ ಗಂಡು ಹೆಣ್ಣಿಗೆ ಕೊಡಲಾಗಿರುವ ಅವಕಾಶಗಳು ಹಾಗಿವೆ.

ಸದ್ಯದ ಭಾರತೀಯ ರಾಜಕಾರಣದ ಮುಖ್ಯಧಾರೆಯಲ್ಲಿರುವ ಐವರು ಹೆಣ್ಣುಗಳ ಬದುಕು ಮತ್ತು ಸಾಧನೆಗಳು ವಿಶಿಷ್ಟವೇ. ಅವರ ಹಗರಣಗಳೂ ಕೂಡಾ. ಭ್ರಷ್ಟಾಚಾರದ ವಿಷಯಕ್ಕೆ ಬಂದಾಗ ಅಲ್ಲಿ ಕೂಡ ಲಿಂಗ ತಾರತಮ್ಯ ಇರುವುದಿಲ್ಲ. ವಿಚಾರಣೆ, ಶಿಕ್ಷೆ, ಪರಿಣಾಮಗಳಿಗೆ ಸಂಬಂಧಿಸಿದಂತೆ ಅದನ್ನು ತರತಮವಿಲ್ಲದೆಯೇ ನೋಡಬೇಕಾಗುತ್ತದೆ. ಈ ಸಾಮಾಜಿಕ ಆಯಾಮವನ್ನು ಮೀರಿ, ಮಾನಸಿಕ ಸ್ತರದಲ್ಲಿ ನೋಡುವಾಗ, ಮಾನವೀಯ ಚಿಂತನೆಗೆ ಹಚ್ಚಿ ನೋಡುವಾಗ ಬಿಚ್ಚಿಕೊಳ್ಳುವ ದೃಶ್ಯಗಳೂ ಬೇರೆಯೇ ಇರುತ್ತವೆ. ಅಲ್ಲಿ ಮಾಯಾವತಿಯ ಮೂರ್ತಿಗಳಿಗೆ, ಚಿನ್ನದ ಕತ್ತಿಗಳಿಗೆ ಬೇರೆಯೇ ಅರ್ಥ ಕಾದಿರುತ್ತದೆ. ಹಿಂಜಿಹೋದ ಕಾಟನ್‌ ಸೀರೆಯನ್ನಷ್ಟೆ ಉಡುವ ಮಮತಾ ಬ್ಯಾನರ್ಜಿಯ ಹೆಸರು ಯಾಕೆ ಚೀಟಿ ವ್ಯವಹಾರದಂಥದರಲ್ಲಿ ಕಾಣಿಸುತ್ತದೆ ಎಂಬುದರ ಅರಿವಾಗುತ್ತದೆ. ಯಾಕೆ ಉಮಾ ಭಾರತಿ ಹಾಗೆ ರಚ್ಚೆ ಹಿಡಿದ ಮಗುವಿನಂತಾಡುತ್ತಾರೆ ಎಂದರೆ ಅವರ ಸೋತ ಹೃದಯದ ನೋವು ಕೇಳಿಸುತ್ತದೆ. ಸೋನಿಯಾರ ನಗುವಿಲ್ಲದ ಮುಖವೂ ಅವರ ಪರಿವಾರದೊಂದಿಗೆ ಹೆಣೆದುಕೊಂಡ ಹಗರಣಗಳು, ಹಣದ ವ್ಯವಹಾರಗಳು ಮತ್ತೊಂದೇ ಕಥೆ ಹೇಳತೊಡಗುತ್ತವೆ. ಈ ಎಲ್ಲವನ್ನು ಆ ಎಲ್ಲರ ಅಪರಾಧಗಳ ಸಮರ್ಥನೆಗಾಗಿ ಖಂಡಿತ ಬಳಸಬಾರದು. ಆದರೆ ಅರ್ಥೈಸಿಕೊಳ್ಳಲು ಮತ್ತು ನಮ್ಮನಮ್ಮ ಸ್ತರಗಳಲ್ಲಿ ಅವನ್ನು ಅನ್ವಯಿಸಿಕೊಂಡು ನೋಡಲು ಇವು ಬೇಕಾಗುತ್ತವೆ.
ಮತ್ತಷ್ಟು ಓದು »

14
ಸೆಪ್ಟೆಂ

ಧರ್ಮ ಮತ್ತು ಅಂಧತ್ವ

-ಡಾ ಅಶೋಕ್ ಕೆ ಆರ್.

World_Religionಆಗ ನಾನು ಕಲ್ಬುರ್ಗಿಯಲ್ಲಿ ಓದುತ್ತಿದ್ದೆ. ಗೆಳೆಯನೊಬ್ಬನನ್ನು ಕಾಣುವ ಸಲುವಾಗಿ ಕಲ್ಬುರ್ಗಿಯಿಂದ ಲಿಂಗಸೂರು ಕಡೆಗೆ ಹೋಗುವ ಬಸ್ಸನ್ನೇರಿದೆ. ದಾರಿ ಮಧ್ಯದಲ್ಲಿ ಕುಟುಂಬವೊಂದು ಬಸ್ಸಿನೊಳಗೆ ಬಂತು. ಮಗ, ಸೊಸೆ ಮತ್ತು ಅತ್ತೆ ಎಂಬುದು ಅವರ ಮಾತಿನಿಂದ ಅರಿವಾಗುತ್ತಿತ್ತು. ಅದು ಮುಸ್ಲಿಂ ಕುಟುಂಬವೆಂದು ತಿಳಿದಿದ್ದು ಬುರ್ಖಾ ಧರಿಸಿದ್ದ ಸೊಸೆಯ ಉಡುಪಿನಿಂದ. ಉತ್ತರ ಕರ್ನಾಟಕದ ಕಡೆ (ನಂತರದ ದಿನಗಳಲ್ಲಿ ಕರಾವಳಿ ಭಾಗದಲ್ಲೂ ಕಂಡಂತೆ) ಮುಸ್ಲಿಮರನ್ನು ಅವರ ಮಾತಿನ ದಾಟಿಯಿಂದ ಗುರುತು ಹಿಡಿಯಲಾಗುವುದಿಲ್ಲ ನಮ್ಮ ಹಳೆ ಮೈಸೂರು ಭಾಗದಲ್ಲಿ ಗುರುತಿಸುವಂತೆ, ಮತ್ತು ಬಹುತೇಕ ಎಲ್ಲ ಕನ್ನಡ ಚಿತ್ರಗಳಲ್ಲೂ ತೋರಿಸಿರುವಂತೆ. ಅಂದು ಬಸ್ಸೇರಿದ ಕುಟುಂಬದಲ್ಲಿ ಅತ್ತೆ ಉತ್ತರ ಕರ್ನಾಟಕದ ಕಡೆಯ ಸೀರೆಯನ್ನು ಉಟ್ಟಿದ್ದರು, ಸೊಸೆ ಬುರ್ಖಾಧಾರಿಯಾಗಿದ್ದರು.

ಕಳೆದೊಂದು ವಾರದಿಂದ ಅಂತರ್ಜಾಲ ತಾಣಗಳಲ್ಲಿ ಬುರ್ಖಾದ ಬಗೆಗಿನ ಚರ್ಚೆ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಮೇಲಿನ ಘಟನೆ ನೆನಪಾಯಿತು. ‘ನಾನು ವಿವಾದದ ವಿಷಯಗಳನ್ನು ಎತ್ತಿಕೊಂಡು ಮಾತನಾಡುತ್ತಿದ್ದೇನೋ ಅಥವಾ ನಾನು ಮಾತನಾಡಿದ್ದೆಲ್ಲವೂ ವಿವಾದವಾಗುತ್ತೋ ಗೊತ್ತಿಲ್ಲ’ ಎಂದೇ ಮಾತುಗಳನ್ನಾರಂಭಿಸಿದ್ದ ದಿನೇಶ್ ಅಮೀನ್ ಮಟ್ಟುರವರ ಮಾತುಗಳು ಮತ್ತೆ ಚರ್ಚೆಗಳೊಂದಷ್ಟನ್ನು ಹುಟ್ಟುಹಾಕಿವೆ. ಪತ್ರಕತ್ರ ಬಿ.ಎಂ.ಬಷೀರ್‍ರವರ “ಬಾಡೂಟದ ಜೊತೆ ಗಾಂಧಿ ಜಯಂತಿ” ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ. ಅವರು ಮೋದಿಯ ಬಗ್ಗೆ, ಮಾಧ್ಯಮದ ಬಗ್ಗೆ, ಮಂಗಳೂರಿನ ಕೋಮು ಸಾಮರಸ್ಯದ ಬಗ್ಗೆ, ಆ ಕೋಮು ಸಾಮರಸ್ಯದಿಂದಲೇ ಹುಟ್ಟಿದ ಕೋಮುವಾದತನದ ಬಗ್ಗೆ, ಕೋಮುವಾದಿಗಳ ಅಟ್ಟಹಾಸದ ನಡುವೆಯೇ ನಿಜ ಜಾತ್ಯತೀತ ಮನೋಭಾವದ ಧರ್ಮಸಹಿಷ್ಣುಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ಕೊನೆಗೆ ಅವರ ಭಾಷಣ ಚರ್ಚೆಗೊಳಗಾಗುತ್ತಿರುವುದು ಅವರು ಪ್ರಸ್ತಾಪಿಸಿದ ಬುರ್ಖಾ ಪದ್ಧತಿಯ ಬಗೆಗೆ ಮಾತ್ರ! ಅವರು ಬುರ್ಖಾ ವಿಷಯಕ್ಕೆ ಬರುವುದಕ್ಕೆ ಮೊದಲು ಮುಸ್ಲಿಂ ಸಮಾಜದ ಒಳಬೇಗುದಿಗಳನ್ನು ಸಮಾಜದ ಮುಂದೆ ತೆರದಿಡುವ ಕೆಲಸವನ್ನು ಬೋಳುವಾರ ಮೊಹಮದ್, ಸಾರಾ ಅಬೂಬಕ್ಕರ್, ಫಕೀರ್ ಮೊಹಮದ್ ಕಟ್ಪಾಡಿ ಸಮರ್ಥವಾಗಿ ನಿರ್ವಹಿಸಿದ್ದಾರೆ. ಅವರು ಹಾಕಿದ ದಾರಿಯಲ್ಲಿ ಜ್ಯೋತಿಯನ್ನಿಡಿದು ನಡೆಯುವವರ ಕೊರತೆ ಎದ್ದು ಕಾಣುತ್ತಿದೆ ಎಂಬ ಮಾತುಗಳನ್ನು ಹೇಳಿದ್ದಾರೆ. ಬಿ.ಎಂ.ಬಷೀರ್ ಸ್ವಲ್ಪ ಸಾಫ್ಟ್ ಕಾರ್ನರಿನಲ್ಲಿ ಬರೆಯೋದು ಜಾಸ್ತಿ. ಮುಸ್ಲಿಂ ಸಮುದಾಯದ ತಲ್ಲಣಗಳು ಈ ಪುಸ್ತಕದಲ್ಲಿ ಕಾಣಸಿಗುತ್ತಿಲ್ಲ ಎಂದು ಸಲಹೆಯನ್ನು ಕೊಟ್ಟಿದ್ದಾರೆ. ಮುಸ್ಲಿಮನಾದವನು ಆ ಸಮುದಾಯದ ತಲ್ಲಣಗಳನ್ನು ಸಮರ್ಥವಾಗಿ ಬಿಂಬಿಸಲು ಸಾಧ್ಯ ಎಂಬುದು ಎಷ್ಟು ಸತ್ಯವೋ ಮುಸ್ಲಿಂ ಲೇಖಕನಾದ ಮಾತ್ರಕ್ಕೆ ಮುಸ್ಲಿಂ ಸಮುದಾಯದ ತಲ್ಲಣಗಳನ್ನಷ್ಟೇ ಬರೆಯಬೇಕು ಎಂಬುದೂ ಒಪ್ಪತಕ್ಕ ವಿಷಯವೇನಲ್ಲ. ಮತ್ತಷ್ಟು ಓದು »

22
ಆಗಸ್ಟ್

ಸತ್ಯ ಕೂಡ ಚಲನಶೀಲ ಎಂದರಿವು ಮೂಡಿಸಿದ ಅನಂತಮೂರ್ತಿ

-ಡಾ ಅಶೋಕ್ ಕೆ ಆರ್. 

kirananna_n

ಜಾತ್ಯತೀತವಾಗಿಯೇ ಬದುಕಿ ಬರೆದು ಬೆಳೆದ ಅವರು ಕುಮಾರಸ್ವಾಮಿ, ದೇವೇಗೌಡರನ್ನು ಇದ್ದಕ್ಕಿದ್ದಂತೆ ಬೆಂಬಲಿಸಿಬಿಡುತ್ತಾರೆ, ಕೆಲವೇ ವರುಷಗಳಲ್ಲಿ ಜೀವನಪರ್ಯಂತ ವಿರೋಧಿಸಿಕೊಂಡೇ ಬಂದಿದ್ದ ಕಾಂಗ್ರೆಸ್ಸನ್ನು ಸಿದ್ಧರಾಮಯ್ಯನವರ ಮೇಲಿನ ನಂಬುಗೆಯಿಂದ ಗೆಲ್ಲಿಸಿ ಎಂದು ಪತ್ರಿಕಾ ಹೇಳಿಕೆ ಕೊಡುತ್ತಾರೆ. ಮೋದಿಯನ್ನು ವಿರೋಧಿಸುವ ಏಕೈಕ ಕಾರಣಕ್ಕೆ ಅದರಷ್ಟೇ ಅಪಾಯಕಾರಿ ಎಂಬ ಅರಿವಿದ್ದೂ ಕಾಂಗ್ರೆಸ್ಸಿಗೆ ಮತಹಾಕಿ ಎಂದು ಹೇಳಿಬಿಡುತ್ತಾರೆ. ಇನ್ನೊಂದೈದು ವರುಷಗಳು ಅವರು ಬದುಕಿದ್ದರೆ ಮೋದಿ ಸಂಪೂರ್ಣ ಸರಿಯಿಲ್ಲದಿದ್ದರೂ ಪರ್ಯಾಯಗಳಿಲ್ಲದ ಕಾರಣ, ಇರುವ ಪರ್ಯಾಯಗಳು ಮೋದಿಗಿಂತ ಅಪಾಯಕಾರಿಯಾಗಿರುವ ಕಾರಣ ಮೋದಿಯನ್ನೇ ಗೆಲ್ಲಿಸಿದರೆ ಒಳ್ಳೆಯದೇನೋ ಎಂದು ಹೇಳಿಕೆ ನೀಡಿದ್ದರೂ ಅನಂತಮೂರ್ತಿಯವರ ಬಗೆಗೆ ಅಚ್ಚರಿಯಾಗುತ್ತಿರಲಿಲ್ಲ. ಇದು ಅವಕಾಶವಾದಿತನ, ಸ್ವಾರ್ಥಕ್ಕಾಗಿ ಕ್ಷಣಕ್ಕೊಂದು ಬಣ್ಣ ಬದಲಿಸುವ ನೀಚತನ – ಇನ್ನು ಅನೇಕಾನೇಕ ರೀತಿಯಲ್ಲಿ ಅವರನ್ನು ಟೀಕಿಸಿದ್ದರೂ ಅವರದಕ್ಕೆ ಹೆಚ್ಚು ತಲೆಕೆಡಿಸಿಕೊಳ್ಳುತಿರಲಿಲ್ಲವೇನೋ. ಯಾಕೆಂದರೆ ಅನಂತಮೂರ್ತಿ (ನಾನವರನ್ನು ಅವರ ಬರಹಗಳ ಮೂಲಕ ತಿಳಿದುಕೊಂಡಂತೆ) ಇದ್ದಿದ್ದೇ ಹಾಗೆ. ಸತ್ಯವೆಂಬುದು ಅವತ್ತಿನ ಆ ಮಟ್ಟಿಗಿನ ವಾಸ್ತವವೇ ಹೊರತು ಅದು ಸರ್ವಕಾಲಿಕ ಸತ್ಯವಾಗಲು ಸಾಧ್ಯವೇ ಇಲ್ಲ ಎಂಬುದು ಅವರ ಲೇಖನಗಳನ್ನು ಓದಿದಾಗ ಅರಿವಾಗುತ್ತದೆ.

ಉಂಡವರ ತೇಗು ಉಳಿದವರ ಕೊರಳ ಉರುಲಾಗದಿರಲಿ – ಯು.ಆರ್.ಎ

ಅನಂತಮೂರ್ತಿ ಕೆಲವರಿಗೆ ಮೇಷ್ಟ್ರಾಗಿ, ಕೆಲವರಿಗೆ ರಾಜಕೀಯ ಅಭಿಪ್ರಾಯ ವ್ಯಕ್ತಪಡಿಸುವ ವ್ಯಕ್ತಿಯಾಗಿ, ಇನ್ನು ಹಲವರಿಗೆ ಚಳುವಳಿಕಾರನಾಗಿ ದಕ್ಕಿದರೆ ಬಹುತೇಕರಿಗೆ ಅವರು ದಕ್ಕಿದ್ದು ಅವರ ಬರಹಗಳ ಮೂಲಕ ಲೇಖಕರಾಗಿ. ಅವರ ಕೆಲವು ಇತ್ತೀಚಿನ ಲೇಖನಗಳನ್ನು ಓದುತ್ತಿದ್ದಾಗ ಅವರ ಹಳೆಯ ಲೇಖನಗಳಲ್ಲಿ ಇದಕ್ಕೆ ತದ್ವಿರುದ್ದವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಂತಿತ್ತಲ್ಲ ಎಂಬ ಆಲೋಚನೆ ಮೂಡಿದರೆ ಅದು ಸಮಾಜದ ಚಲನಶೀಲತೆಯ ಬಗೆಗಿನ ನಂಬುಗೆಯನ್ನು ಧೃಡಪಡಿಸುತ್ತಿತ್ತೇ ಹೊರತು ಅನಂತಮೂರ್ತಿಯವರ ಅನುಕೂಲ ಸಿದ್ಧಾಂತವನ್ನಲ್ಲ. ಒಂದು ಇಸಂಅನ್ನು ಒಪ್ಪಿಕೊಂಡವರು ಆ ಇಸಂನಲ್ಲಿ ತಪ್ಪುಗಳಿದ್ದಾಗ್ಯೂ ಅದನ್ನೇ ಅಪ್ಪಿ ಒಪ್ಪಬೇಕೆನ್ನುವವರಿಗೆ ಅನಂತಮೂರ್ತಿ ದ್ವಂದ್ವದ ಮೂರ್ತಿಯಾಗಿ ಕಂಡಿದ್ದರೆ ಅಚ್ಚರಿಪಡಬೇಕಿಲ್ಲ. ಹಳೆಯ ಅಭಿಪ್ರಾಯ ತಪ್ಪಾಗಿದ್ದರೆ ಅದನ್ನು ಒಪ್ಪುವ ಗುಣ ಎಲ್ಲರಲ್ಲೂ ಕಾಣುವುದು ಕಷ್ಟಸಾಧ್ಯ. ಮತ್ತಷ್ಟು ಓದು »

15
ಆಗಸ್ಟ್

ಅವರೆಲ್ಲರೂ ಪ್ರತಿಭಾವಂತರೇ ಆದರೆ…..

-ಡಾ ಅಶೋಕ್ ಕೆ ಆರ್
corruption

ಭಾರತದಲ್ಲಿ ಹಗರಣಗಳು ಹೊಸದಲ್ಲ, ಹಗರಣಗಳ ಕುರಿತ ರಾಜಕೀಯ ಮತ್ತು ರಾಜಕೀಯೇತರ ಗದ್ದಲ, ಪ್ರತಿಭಟನೆಗಳು ಹೆಚ್ಚಾಗಿ ಚಳುವಳಿಗಳಾಗಿ ಮಾರ್ಪಟ್ಟ ನಂತರ ಅಧಿಕಾರದಲ್ಲಿರುವ ಪಕ್ಷಗಳು ಆ ಹಗರಣದ ತನಿಖೆಗೆ ವಿವಿಧ ಹಂತದ ತನಿಖಾ ಆಯೋಗಗಳನ್ನು ರಚಿಸುವುದೂ ಹೊಸದಲ್ಲ. ಸಿ.ಐ.ಡಿ ಪೋಲೀಸರಿಂದ ಹಿಡಿದು ನ್ಯಾಯಂಗ, ಸದನ ಸಮಿತಿ, ಸಿ.ಬಿ.ಐ ಸಂಸ್ಥೆಗಳೆಲ್ಲವನ್ನೂ ತನಿಖೆ ಮಾಡಲು ನಿಯೋಜಿಸುವುದು ಸಾಮಾನ್ಯ. ವಿಪರ್ಯಾಸದ ಸಂಗತಿಯೆಂದರೆ ಇಂತಹ ಎಷ್ಟೋ ತನಿಖಾ ಸಂಸ್ಥೆಗಳು ನೀಡಿದ ಅನೇಕಾನೇಕ ವರದಿಗಳು ಅನುಷ್ಠಾನಗೊಳ್ಳದೆ ಸರಕಾರದ ಯಾವುದೋ ಒಂದು ಕಛೇರಿಯಲ್ಲಿ ಧೂಳು ಹಿಡಿದು ಹಾಳಾಗುತ್ತವೆಯೇ ಹೊರತು ತನಿಖಾ ಆಯೋಗ ನೀಡಿದ ಸಲಹೆ ಸೂಚನೆಗಳನ್ನು ಯಥಾವತ್ತಾಗಿ ಜಾರಿಗೆ ತರುವುದು ಅಪರೂಪದ ಸಂಗತಿಯೇ ಆಗಿಹೋಗಿದೆ.

ಸಲಹೆ ಸೂಚನೆಗಳು ಜಾರಿಗೆ ಬರದಿರಲು ಪಟ್ಟಭದ್ರ ಹಿತಾಸಕ್ತಿಗಳ ಕೈವಾಡ, ರಾಜಕೀಯ ಪಕ್ಷಗಳ ವೋಟ್ ಬ್ಯಾಂಕ್ ಅನಿವಾರ್ಯತೆ, ಅಧಿಕಾರಸ್ಥ ಪಕ್ಷಗಳೇ ಬದಲಾವಣೆಗೊಳ್ಳುವುದು ಮತ್ತು ಕೆಲವು ಸಂದರ್ಭದಲ್ಲಿ ಆರೋಪಕ್ಕೊಳಗಾದವರು ಮತ್ತು ವಿವಿಧ ಕಾರಣಗಳಿಂದ ಅವರಿಗೆ ಬೆಂಬಲ ನೀಡುವವರು ಪ್ರತಿಭಟನೆಯ ರೂಪದಲ್ಲಿ ವಿರೋಧ ವ್ಯಕ್ತಪಡಿಸುವುದು. ಬಿಜೆಪಿಯ ದುರಾಡಳಿತದಿಂದ ಬೇಸತ್ತು ಕಾಂಗ್ರೆಸ್ಸಿಗೆ ಅವಕಾಶ ನೀಡಿದ ಕರ್ನಾಟಕದ ಮತದಾರ ಕಳೆದೊಂದೂವರೆ ವರುಷದಿಂದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಿಂದ ಭ್ರಮನಿರಸನಕ್ಕೊಳಗಾಗಿರುವುದೇ ಅಧಿಕ. ಮತ್ತಷ್ಟು ಓದು »