ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

19
ಜೂನ್

ಕಲ್ಬುರ್ಗಿ,ಕಲ್ಲು ಮತ್ತು Colonial Consciousness

– ರಾಕೇಶ್ ಶೆಟ್ಟಿ

consciousnessಬೆಂಗಳೂರಿನ ವಿಜ್ಞಾನ ಭವನದಲ್ಲಿ ಜೂನ್ ೯ರ ಸೋಮವಾರ ನಡೆದ ಮೌಢ್ಯಮುಕ್ತ ಸಮಾಜ, ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ವಯಸ್ಸಿನಲ್ಲಿ ಹಿರಿಯರಾದ (ಕೇವಲ ವಯಸ್ಸಿನಲ್ಲಷ್ಟೇ) ಪ್ರೊ.ಎಂ.ಎಂ. ಕಲ್ಬುರ್ಗಿಯವರು, ” ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದು. ಅವುಗಳಿಗೆ ಕಾಯುವ ಶಕ್ತಿಯೂ ಇಲ್ಲ, ಕಾಡುವ ಶಕ್ತಿಯೂ ಇಲ್ಲ. ದೇವತೆ, ದೇವಾಲಯಗಳ ವಿರುದ್ಧ ಚಳವಳಿ ನಡೆಯಬೇಕು.” ಅಂತೆಲ್ಲ ಬಡಬಡಿಸಿ ಎಲ್ಲರಿಂದ ತಪರಾಕಿ ಹಾಕಿಸಿಕೊಂಡ ಮೇಲೆ “ನಾ ಹಂಗೇ ಹೇಳೇ ಇಲ್ಲಾರೀ, ನಾನು ಹಿಂದೂ ಇದ್ದೀನಿ, ನಾನ್ಯಾಕೇ ಮೂತ್ರ ಮಾಡಿ ಅಂತ ಹೇಳ್ತೀರ್ರೀ… ಅನಂತಮೂರ್ತಿ ಹಿಂಗ್ ಬರ್ದಾರಾ ಅಂತ ನಾನ್ ಸಭಿಯೋಳಗ ಹೇಳಿನ್ರೀ… ತಪ್ಪ್ ತಿಳಿ ಬ್ಯಾಡರ್ರೀ…” ಅಂತೆಲ್ಲ ಸೃಷ್ಟೀಕರಣ ಕೊಟ್ಟರು.

ನಿಜವಾಗಿ ಕಲ್ಬುರ್ಗಿಯವರ ಮನಸ್ಸಿನಲ್ಲಿದ್ದಿದ್ದು “ಮೂರ್ತಿ”ಗಳ ಮೇಲೆ ಮೂತ್ರ ಮಾಡಿದ ಹೊರೆ ಹೊರಿಸಿ ಅದರ ಜೊತೆಗೆ ಮೂರ್ತಿ ಪೂಜೆ ಮಾಡುವ ಜನರ “ಮೌಢ್ಯ” (ಅವರ ಮಂದ ಬುದ್ದಿಯ ಪ್ರಕಾರ) ನಿವಾರಿಸುವುದಾಗಿತ್ತು ಅನ್ನಿಸುತ್ತದೆ.ಕಲ್ಬುರ್ಗಿಯವರು ಹೀಗೆ ಹೇಳಿಕೆ ಕೊಡುವುದರಿಂದ ಒಂದೇ ಕಲ್ಲಿಗೆ ಎರಡು ಹಕ್ಕಿ (“ಮೂರ್ತಿ” ಮತ್ತು “ಮೌಢ್ಯ”) ಹೊಡೆಯುವ ಆಲೋಚನೆಯಲ್ಲಿದ್ದರೇನೋ.ಪಾಪ!

“ಮೂರ್ತಿ”ಗಳ ಮೇಲೆ ಕಲ್ಬುರ್ಗಿಯವರಿಗೆ ಈ ವಿಶೇಷ ಮಮತೆ ಯಾಕೆ? ಪ್ರಜಾವಾಣಿಯಲ್ಲಿ “ಮೂರ್ತಿ”ಗಳಿಗೆ ೧೦ ಲಕ್ಷ ಸರ್ಕಾರಿ ಕಾಣಿಕೆ ಕೊಟ್ಟದ್ದನ್ನು ವಿರೋಧಿಸಿ ಸೋತುಹೋಗಿದ್ದ ಕಲ್ಬುರ್ಗಿಗಳು,”ಮೂರ್ತಿಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗುವುದಿಲ್ಲ” ಅನ್ನುವ ಮೂಲಕ ಸೇಡು ತೀರಿಸಿಕೊಂಡರು, ಅನ್ನುವಲ್ಲಿಗೆ ಅವರ ಹೇಳಿಕೆಯ ಮೊದಲನೇ “ಹಕ್ಕಿ” ಯಾವುದೆಂದು ಹೊಳೆಯುತ್ತದೆ.

ಅಸಲಿಗೆ ತಪ್ಪೆಲ್ಲ ಆಯ್ಕೆ ಸಮಿತಿಯದ್ದು!
“ಪರಾವಲಂಬಿ ಜೀವಿ”ಗಳ ನಡುವೆ “ಪ್ರಶಸ್ತಿ/ಹಣ”ವನ್ನು ಸಮನಾಗಿ ಹಂಚಿದ್ದರೆ ಮೂತ್ರ,ಮೂರ್ತಿ ಇತ್ಯಾದಿ ವಿವಾದಗಳೇ ಆಗ್ತಿರ್ಲಿಲ್ಲ ಮಾರ್ರೆ. ಎಲ್ಲವನ್ನೂ ಒಬ್ಬರಿಗೆ ಕೊಟ್ಟರೆ.ಇನ್ನೊಬ್ಬರಿಗೆ (ತಮಗಾದ) ಅನ್ಯಾಯವನ್ನು ಪ್ರಶ್ನಿಸುವ ಅಭಿವ್ಯಕ್ತಿ ಸ್ವಾತಂತ್ರ್ಯ(!) ಇದ್ದೇ ಇರುತ್ತದಪ್ಪ… (ಸೂ : “ಪರಾವಲಂಬಿ ಜೀವಿ”ಗಳನ್ನು ಕೆಲವರು “ಬುದ್ಧಿಜೀವಿ”ಗಳು ಅನ್ನುತ್ತಾರೆ.ನಾನು ಇನ್ಮುಂದೆ ಪ್ರೀತಿಯಿಂದ “ಪರಾವಲಂಬಿ ಜೀವಿ” ಎನ್ನುತ್ತೇನೆ)

ಮತ್ತಷ್ಟು ಓದು »

9
ಜೂನ್

ಐಡಿಯಾಲಜಿಯ ಅಪಾಯಗಳು!

– ಡಾ. ಶ್ರೀಪಾದ ಭಟ್

ಸಹಾಯಕ ಪ್ರಾಧ್ಯಾಪಕ,ತುಮಕೂರು ವಿಶ್ವವಿದ್ಯಾನಿಲಯ

SIಹದಿನಾರನೆಯ ಲೋಕಸಭಾ ಚುನಾವಣಾ ಫಲಿತಾಂಶ ಬಂದು ತಿಂಗಳಾಗುತ್ತ ಬಂತು. ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎಂಬಂತೆ ಈ ಚುನಾವಣೆ ಕುರಿತ ಚರ್ಚೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಏಕೆಂದರೆ ಮಾಧ್ಯಮಗಳು, ಗದ್ದುಗೆಯ ಕನಸು ಕಾಣುತ್ತಿದ್ದ ಗೆದ್ದ-ಸೋತ ಪ್ರಮುಖ ಪಕ್ಷಗಳು, ಯಾರಿಗೂ ಬಹುಮತ ಬರದಿದ್ದರೆ ಆಟವಾಡಿಸುವ ಭ್ರಮೆಯಲ್ಲಿದ್ದ ಪ್ರಾದೇಶಿಕ ಪಕ್ಷಗಳು-ಪುಡಿ ಪಕ್ಷಗಳು, ಒಂದೆರಡು ಸ್ಥಾನಗಳ ಕೊರತೆ ಬಿದ್ದರೆ ಲಾಭ ಮಾಡಿಕೊಳ್ಳುವ ಹವಣಿಕೆಯಲ್ಲಿದ್ದ ಪಕ್ಷೇತರರು, ಇವರೆಲ್ಲರ ಬೆಂಬಲಿಗರು, ಕಾರ್ಯಕರ್ತರು ಹೀಗೆ ಇವರೆಲ್ಲರಿಗೂ ಅನಿರೀಕ್ಷಿತ ಆಘಾತ ನೀಡಿದ ದೇಶದ ಜನಸಾಮಾನ್ಯರು ಇದುವರೆಗಿನ ಚುನಾವಣೆಯಲ್ಲೇ ಸದ್ಯ ಅತ್ಯಂತ ಹೆಚ್ಚು ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನತಂತ್ರ ವ್ಯವಸ್ಥೆಯಲ್ಲಿ ಇಂಥ ಬೆಳವಣಿಗೆ ಅಗತ್ಯ. ಆದರೆ ಈ ಚರ್ಚೆಯ ಆಯಾಮಗಳನ್ನು ಗಮನಿಸುವುದು ಒಳಿತು.

ಉಳಿದ ಸಂಗತಿ ಹಾಗಿರಲಿ. ನಮ್ಮ ದೇಶದಲ್ಲಿ ಒಂದು ಎಂಬುದನ್ನು ಜನ ದೇವರಲ್ಲೂ ಇಟ್ಟುಕೊಂಡಿಲ್ಲ. ಅವು ಕೋಟಿ ಲೆಕ್ಕದಲ್ಲಿ ಇವೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ವೈವಿಧ್ಯವಂತೂ ಪ್ರತಿ ಹತ್ತಿಪ್ಪತ್ತು ಕಿ.ಮೀ.ಗೆ ಬದಲಾಗುತ್ತದೆ. ಏಕರೂಪತೆಯನ್ನು ಒಪ್ಪದ, ಆದರೆ ಭಾವನಾತ್ಮಕ ಏಕತೆಗೆ ಮಹತ್ವ ನೀಡುವ ಇಂಥ ದೇಶದಲ್ಲಿ ಯಾವುದೋ ಒಂದು ಐಡಿಯಾಲಜಿ ಸ್ಥಾಪನೆಯಾಗಬೇಕು ಎಂದು ಬಯಸುವುದು ಭ್ರಮೆಯಲ್ಲದೇ ಬೇರಲ್ಲ. ಜನತಂತ್ರ ವ್ಯವಸ್ಥೆ ಇಲ್ಲಿನ ವೈವಿಧ್ಯಕ್ಕೆ ಬೆನ್ನೆಲುಬಾಗಿದೆ. ಹೀಗಾಗಿಯೇ ಒಂದೇ ಐಡಿಯಾಲಜಿ ಹೇರುವ ಯಾರಿಗೇ ಆದರೂ ಜನ ಹೊರಹೋಗುವ ಬಾಗಿಲು ತೋರುತ್ತಾರೆ. ತ್ರಿಪುರಾ, ಪ.ಬಂಗಾಳದಲ್ಲಿ ಮಾರ್ಕ್ಸ್ ವಾದಿಗಳು ಜಾಗಖಾಲಿಮಾಡಿದ್ದು ಹೀಗೆ. ಸ್ವಾತಂತ್ರ್ಯ ಬಂದ ಹತ್ತಿಪ್ಪತ್ತು ವರ್ಷ ದೇಶಾದ್ಯಂತ ಸಾರಾಸಗಟು ಸ್ಥಾನ ಪಡೆಯುತ್ತಿದ್ದ ಕಾಂಗ್ರೆಸ್ ಬೆರಳೆಣಿಕೆ ಸ್ಥಾನ ಪಡೆಯಲೂ ಹೆಣಗಾಡುವ ಸ್ಥಿತಿ ಬಂದಿದ್ದೂ ಹೀಗೆಯೇ. ಹಿಂದೂ, ಮುಸ್ಲಿಂ, ಮಾರ್ಕ್ಸ್, ಮಾವೋ, ನೆಹರೂ ಹೀಗೆ ಒಂದನ್ನೇ ಸ್ಥಾಪಿಸಬಯಸುವ ಎಲ್ಲ ಬಗೆಯ ಮೂಲಭೂತವಾದಿಗಳನ್ನೂ ಜನ ತೂಗುವುದು ಒಂದೇ ತಕ್ಕಡಿಯಲ್ಲಿ.

ಈ ಫಲಿತಾಂಶದಿಂದ ಎಡ ಚಿಂತಕರು ಎಂದು ಗುರುತಿಸಿಕೊಂಡವರ ಸ್ಥಿತಿಯಂತೂ ಚಿಂತಾಜನಕವಾಗಿದೆ. ಪ್ರಚಾರದ ವೇಳೆ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಕೆಲವರಂತೂ ನಾಪತ್ತೆಯಾಗಿದ್ದಾರೆ. ಇನ್ನು ಕೆಲವರಿಗೆ ಜೀವನವೇ ಸಾಕಾಗಿದೆ. ಎಡಪಂಥೀಯ ಚಿಂತನೆಯಲ್ಲಿ ಗುರುತಿಸಿಕೊಂಡಿದ್ದವರೊಬ್ಬರು ಫಲಿತಾಂಶ ಬಂದ ನಾಲ್ಕು ದಿನಗಳ ನಂತರ ಭೇಟಿಯಾದರು. ಅವರ ಮುಖದಲ್ಲಿ ಯಾವ ಉತ್ಸಾಹವೂ ಇರಲಿಲ್ಲ. ಸೂತಕದ ಕಳೆ. ಏನಾಯ್ತು ಅಂದೆ. ಪ್ರಳಯವೇ ಆಗಿ ಇವರೊಬ್ಬರೇ ಬದುಕಿದ್ದಾಗ ಆಗುವ ಹತಾಶೆ, ಸಂಕಟ, ಆಘಾತಗಳೆಲ್ಲ ಅವರಲ್ಲಿ ಮೈವೆತ್ತಿದ್ದವು. ಯಾಕೆಂದು ಕೇಳಿದರೆ ಮೋದಿ ಪ್ರಧಾನಿಯಾಗ್ತಾರಲ್ಲ, ಬಿಜೆಪಿ ಈ ಪಾಟಿ ಸ್ಥಾನ ಗೆದ್ದುಬಿಟ್ತಲ್ಲ ಅಂತೆಲ್ಲ ಗೋಳು ತೋಡಿಕೊಳ್ಳತೊಡಗಿದರು. ಹೋಗ್ಲಿ ಬಿಡಿ ಸಾರ್, ಜನತಂತ್ರ ವ್ಯವಸ್ಥೆಯಲ್ಲಿ ಒಮ್ಮೆ ಅವರು ಮತ್ತೊಮ್ಮೆ ಮತ್ತೊಬ್ಬರು ಮೇಲೆ ಕೆಳಗೆ ಆಗುವುದು ಸಹಜವಲ್ಲವೇ? ಅದನ್ಯಾಕೆ ಇಷ್ಟು ಸೀರಿಯಸ್ಸಾಗಿ ತಗೋತೀರಿ ಅಂದೆ. ಹಂಗಲ್ಲ ಸಾರ್, ನಿಮಗೆ ಅರ್ಥವಾಗಲ್ಲ, ದೇಶದ ಕತೆ ಏನು ಅಂತೆಲ್ಲ ವರಾತ ಶುರು ಇಟ್ಟುಕೊಂಡರು.

ಮತ್ತಷ್ಟು ಓದು »

6
ಜೂನ್

ಬುದ್ಧಿಜೀವಿಗಳೇ, ಕಾದು ನೋಡುವುದಲ್ಲದೆ ನಿಮಗೆ ಅನ್ಯ ಮಾರ್ಗವಿಲ್ಲ!

– ಸಹನಾ ವಿಜಯ್ ಕುಮಾರ್

ಪ್ರಗತಿಪರರು ಹಾಗೂ ಬುದ್ಧಿಜೀವಿಗಳುAction and reaction are equal and opposite. ಕ್ರಿಯೆ ಮತ್ತು ಪ್ರತಿಕ್ರಿಯೆಗಳು ವಿರುದ್ಧ ದಿಕ್ಕಿನಲ್ಲಿದ್ದರೂ ಸಮಬಲದಿಂದಿರುತ್ತವೆ. ಇದು ನ್ಯೂಟನ್ನ ಮೂರನೆಯ ನಿಯಮ. ಸುಮಾರು ಮೂರು ಶತಕಗಳಿಗೂ ಹಿಂದೆ, ಅಂದರೆ ಕ್ರಿ.ಶ. 1687ರಲ್ಲಿ ನ್ಯೂಟನ್ ಜಗತ್ತಿಗೆ ಸಾಬೀತುಪಡಿಸಿದ್ದು. ಈಗ 2014ರಲ್ಲಿ ನಾವು ಭಾರತೀಯರು ಈ ನಿಯಮದ ಸತ್ಯಾಸತ್ಯತೆಯನ್ನು ಮತ್ತೆ ಸಾಬೀತುಪಡಿಸಿದ್ದೇವೆ! ಇಲ್ಲಿ ಕ್ರಿಯೆ – ಚುನಾವಣಾ ಪೂರ್ವದಲ್ಲಿ ಇಡೀ ದೇಶದಲ್ಲಿ ಒಂದು ವ್ಯವಸ್ಥಿತ ಜಾಲವು ಮೋದಿಯವರ ಕುರಿತ ಭಯವನ್ನು ಹುಟ್ಟುಹಾಕಿದ್ದು. ಪ್ರತಿಕ್ರಿಯೆ – ಜನಸಾಮಾನ್ಯರು ಆ ಭಯದ ಹುಟ್ಟಡಗಿಸಿ ಮೋದಿಯವರಿಗೆ ಐತಿಹಾಸಿಕ ವಿಜಯ ದೊರಕಿಸಿಕೊಟ್ಟಿದ್ದು. ಒಂದು ವಿಶೇಷವೆಂದರೆ ಪ್ರತಿಕ್ರಿಯೆಯು ಕ್ರಿಯೆಗಿಂತ ಬಹಳ ಪಟ್ಟು ಹೆಚ್ಚಿದೆ, ತೀಕ್ಷ್ಣವಾಗಿದೆ ಹಾಗೂ ಮುಟ್ಟಿ ನೋಡಿಕೊಳ್ಳುವ ಹಾಗಿದೆ! ಈಗ ನ್ಯೂಟನ್ ಬದುಕಿದ್ದರೆ ಬಹಳ ಖುಷಿಪಡುತ್ತಿದ್ದ!

ಹೀಗೆ ಮಾಡುವ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಿತ್ತು. ಏಕೆಂದರೆ ಈ ಕ್ರಿಯೆಯನ್ನು ಹುಟ್ಟುಹಾಕಿದವರು ಅಂತಿಂಥವರಲ್ಲ, ಮೂರು ವರ್ಗಗಳಾಗಿ ವಿಂಗಡಿಸಬಹುದಾದ ಘಟಾನುಘಟಿಗಳು. ಒಂದು ವರ್ಗ ರಾಜಕಾರಣಿಗಳದ್ದಾದರೆ ಮತ್ತೊಂದು ಸುದ್ದಿ ಮಾಧ್ಯಮಗಳದ್ದು. ಮೂರನೆಯ ಹಾಗೂ ಅತ್ಯಂತ ಕುಲೀನ(?) ವರ್ಗ ಪ್ರಗತಿಪರರು ಹಾಗೂ ಬುದ್ಧಿಜೀವಿಗಳದ್ದು. ರಾಜಕಾರಣಿಗಳು ಸಿದ್ಧಾಂತ ಭೇದ ಮರೆತು ಒಂದಾದರು. ಮೋದಿಯವರನ್ನು ರಾಕ್ಷಸನೆಂದು ಬಿಂಬಿಸಿ ತಮ್ಮ ಕ್ರಿಯೆಗೆ ಮೊದಲಿಟ್ಟುಕೊಂಡರು. ಇನ್ನು ಸುದ್ದಿ ಮಾಧ್ಯಮದವರು ಹಿಂದೆ ಬೀಳುತ್ತಾರೆಯೇ? ಅಪಸ್ಮಾರ ಇರುವವರಿಗಿಂತ ಹೆಚ್ಚಾಗಿ ದೇಹ ಮನಸಿನ ಸ್ಥಿಮಿತ ಕಳೆದುಕೊಂಡು ಆ ಕ್ರಿಯೆಗೆ ಶಕ್ತಿ ಹಾಗೂ ವೇಗ ತುಂಬಿದರು. ಯಾವ ರಾಷ್ಟ್ರೀಯ ಚಾನೆಲ್ ನೋಡಿದರೂ ಮೋದಿ ಎಂಬ ನರಹಂತಕನ ಗೋಧ್ರಾ ಕಥೆಯೇ. ಇನ್ನುಳಿದವರು ಪ್ರಗತಿಪರರು ಹಾಗೂ ಬುದ್ಧಿಜೀವಿಗಳು. ಇದೊಂಥರಾ ವಿಚಿತ್ರ ತಳಿ. ತಮಗೆ ತಲೆಯಿಂದ ಕಾಲಿನವರೆಗೂ ರಕ್ತ ಮಾಂಸಗಳ ಬದಲು ಬುದ್ಧಿಯೇ ತುಂಬಿಕೊಂಡಿದೆಯೆಂಬ ಭ್ರಾಂತಿಯ ಜನ. ಉಳಿದವರು ಕೇವಲವೆಂಬ ಉದ್ಧಟತನ. ಜೊತೆಗೆ ಇವರ ಆವುಟವನ್ನು ಎಲ್ಲರೂ ಸಹಿಸ ಲೇಬೇಕೆಂಬ ತಿಕ್ಕಲುತನ. ಇವರೂ ಗುಂಪುಕಟ್ಟಿಕೊಂಡು ತಮ್ಮ ಕೈಲಾದಷ್ಟು ‘ಭಯೋತ್ಪಾದನೆ'(ಭಯ+ಉತ್ಪಾದನೆ) ಮಾಡಿದರು.

ಈಗ ಇವರೆಲ್ಲರಿಗೂ ತಕ್ಕ ಪ್ರತಿಕ್ರಿಯೆ ನೀಡಿದ್ದೇವೆ ನೋಡಿ, ಬಾಲ ಮುದುರಿಕೊಂಡು ಸುಮ್ಮನಾಗಿದ್ದಾರೆ. ರಾಜಕಾರಣಿಗಳು ಪರಸ್ಪರ ದೋಷಾರೋಪಣೆಯ ಕೆಸರೆರಚಾಟದಲ್ಲಿ ನಿರತರಾಗಿದ್ದಾರೆ. ರಾಜ್‍ದೀಪ್ ಸರ್‍ದೇಸಾಯಿ, ಬರ್ಖಾ ದತ್ ಹಾಗೂ ಅರ್ಣಬ್ ಗೋಸ್ವಾಮಿಯರು ಇಂಗು ತಿಂದ ಮಂಗನ ಮುಖ ಮಾಡಿಕೊಂಡು ವಿಧಿಯಿಲ್ಲದೆ ಮೋದಿ ಸರ್ಕಾರದ ಮೊದಲ ದಿಟ್ಟ ಹೆಜ್ಜೆಗಳ ಸಮಾಚಾರ ಬಿತ್ತರಿಸುತ್ತಿದ್ದಾರೆ. ಕಡೇಪಕ್ಷ ಇವರು ಜನರಿಂದ ಓಡಿಹೋಗುತ್ತಿಲ್ಲ. ತಮ್ಮ ಲೆಕ್ಕಾಚಾರ ತಪ್ಪಾದುದನ್ನು ಮುಕ್ತವಾಗಿ ಒಪ್ಪಿಕೊಳ್ಳುತ್ತಿದ್ದಾರೆ. ಆದರೆ ಈ ಬುದ್ಧಿಜೀವಿಗಳು ಹಾಗೂ ಪ್ರಗತಿಪರರ ದಂಡಿದೆಯಲ್ಲ, ಇವರ ಪಾಡು ಯಾರಿಗೂ ಬೇಡ. ಅತ್ತ ತಪ್ಪನ್ನು ಒಪ್ಪಿಕೊಳ್ಳಲಾಗದೆ, ಇತ್ತ ಸತ್ಯವನ್ನು ಅಲ್ಲಗಳೆಯಲೂ ಆಗದೆ ಕಾದ ಹೆಂಚಿನ ಮೇಲೆ ಕುಳಿತಂತೆ ಚಡಪಡಿಸುತ್ತಿದ್ದಾರೆ.

ಮತ್ತಷ್ಟು ಓದು »

27
ಮೇ

ನಮಗೆಂಥ ಮೀಸಲಾತಿ ಬೇಕು?

– ವಲವಿ ಬಿಜಾಪೂರ

Reservation Policy India Reservation Policy India Reservation Policy India Reservation Policy India Reservation Policy India Reservation Policy India Reservation Policy India Reservationಶ್ರೀ ಹೋ.ಬ ರಘೋತ್ತಮ ಅವರ “ಅಸ್ಪೃಶ್ಯತೆ, ಮೀಸಲಾತಿ ಮತ್ತು ತಲೆಮಾರಿನ ಪ್ರಶ್ನೆ” ಎಂಬ ಲೇಖನವನ್ನು ಓದಿ ಪ್ರತಿಕ್ರಿಯಿಸುವದು ನನಗೆ ಅನಿವಾರ್ಯವಾಗಿದ್ದರಿಂದ ಈ ಲೇಖನ ಬರೆಯುತ್ತಿದ್ದೇನೆ.ಅವರು ಲೇಖನ ಬರೆದಲ್ಲೇ ಪ್ರತಿಕ್ರಿಯೆ ಬರೆಯಬಹುದಾಗಿತ್ತು. ಆದರೆ ತಮ್ಮ ವಿಚಾರಗಳಿಗೆ ವಿರುದ್ಧವಾಗಿ ಏನೇ ಬರೆದರೂ ಕೆಲವು ಬ್ಲಾಗಿನಲ್ಲಿ ಪ್ರಕಟವಾಗುವುದಿಲ್ಲ.ವಿರುದ್ಧ ಕಮೆಂಟುಗಳನ್ನೂ ಪ್ರಕಟಿಸುವದಿಲ್ಲ. ಯಾಕೆಂದರೆ ಅವರು ಪ್ರಗತಿಪರರೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬಹಳ ಬೆಲೆ ಕೊಡುವವರೂ ಆಗಿದ್ದಾರೆ. !? ಅದಕ್ಕಾಗಿ ನಿಲುಮೆಯಲ್ಲಿ ನನ್ನ ವಿಚಾರಗಳನ್ನು ಅಭಿವ್ಯಕ್ತ ಪಡಿಸುತ್ತಿದ್ದೇನೆ.

ಲೇಖನದ ಮೊದಲಿಗೆ ಹೇಳುತ್ತಿದ್ದೇನೆ. ನಾನು ಮೀಸಲಾತಿ ವಿರೋಧಿಯಲ್ಲ. ಮೀಸಲಾತಿ ಹೇಗಿದ್ದರೆ ಸರ್ವರಿಗೂ ಒಳಿತಾಗುತ್ತದೆ ಎಂಬ ಕುರಿತು ಮಾತ್ರ ಹೇಳುತ್ತಿದ್ದೇನೆ.

ಶ್ರೀ ರಘೋತ್ತಮ ಅವರು ಹೇಳುತ್ತಾರೆ. ” ಕೆದರಿದ ತಲೆಯ, ಗಲೀಜು ಬಟ್ಟೆಯ, ಎಣ್ಣೆ ಕಾಣದ ಹಳ್ಳಿ ಹೆಂಗಸೊಬ್ಬಳು ಅವರಿಗೆ {ಗರಿಗರಿಯಾಗಿ ಇಸ್ತ್ರೀ ಮಾಡಿದ ನೀಟಾದ ಬಟ್ಟೆ ಉಟ್ಟುಕೊಂಡು ನಾಗರೀಕರು ನೌಕರರು ಆಗಿರುವ] ಏಕವಚನದಲ್ಲಿ ಮಾತನಾಡಿಸಿದಳಂತೆ ಕಾರಣ ಆಕೆ ರಘೋತ್ತಮರ ಊರಿನ ಮೇಲ್ಜಾತಿಯವಳಾಗಿದ್ದರಿಂದ ಮತ್ತು ಇವರು ದಲಿತರಾಗಿದ್ದರಿಂದ ಕಡಲೆಕಾಯಿ ಮಾರುವ ಹೆಂಗಸಾದ ಅವಳು ಮೇಲಿರಿಮೆಯ ಸೊಕ್ಕಿನಿಂದ ಹೀಗೆ ಮಾತನಾಡಿದಳೆಂಬ ಧ್ವನಿ ಬರುವಂತೆ ಬರೆದಿದ್ದಾರೆ. ಅಲ್ಲದೇ ಬಿಜೆಪಿ ಅಧಿಕಾರಕ್ಕೆ ಬಂದರೆ ಮೂರನೆ ತಲೆಮಾರಿನ ದಲಿತರಿಗೆ ಮೀಸಲಾತಿ ಕೊಡದಿರುವಂತೆ ಚಿಂತಿಸುತ್ತಿದೆ. ಎಂದು ಆಂಗ್ಲ ಪತ್ರಿಕೆಯೊಂದರ ಸುದ್ದಿಯನ್ನೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಮುಂಬರುವ ದಿನಗಳು ದಲಿತರಿಗೆ ಒಳ್ಳೆಯ ದಿನಗಳಲ್ಲ ಎಂಬ ಆತಂಕವನ್ನು ಸಹ ತೋಡಿಕೊಂಡಿದ್ದಾರೆ. ಗೋಧ್ರೋತ್ತರ ಮಾರಣಹೋಮದಂತೆ ಮೋದಿ ಇನ್ನೋಂದು ಮಾರಣಹೋಮಕ್ಕೆ ಸಜ್ಜಾದರೆ ಎಂದೂ ಸೇರಿಸುತ್ತಾರೆ.

ಆದರೆ ನನ್ನ ಅಭಿಪ್ರಾಯವೆಂದರೆ ಶ್ರೀ ರಘೋತ್ತಮರು ದಲಿತರಲ್ಲಿ ವಿನಾಕಾರಣ ಮೋದಿ ವಿರುದ್ಧ ಭಯ ಮೂಡಿಸುತ್ತಿದ್ದಾರೆ.ಎನಿಸುತ್ತದೆ. ಇರಲಿ, ನಾನೂ ಸಹ ನಮ್ಮೂರಿಗೆ ಹೋದಾಗ ನಮ್ಮ ಹಳ್ಳಿಯ ಜನ ನನ್ನನ್ನು ಏಕವಚನದಲ್ಲೇ ಮಾತನಾಡಿಸುತ್ತಾರೆ. ನಾನು ಇಡೀ ಭಾರತ ದೇಶವೇ ತಿಳಿದುಕೊಂಡಂತೆ ಮೇಲು ಜಾತಿಯಲ್ಲಿ [??] ಜನಿಸಿದವಳು. ಆದರೂ ನಮ್ಮೂರಿನ ಜನ ನನ್ನನ್ನೂ ಏಕವಚನದಲ್ಲಿ ಮಾತನಾಡಿಸುತ್ತಾರೆ. ಅನೇಕರು “ಯಾಕವ್ವಾ ಮಗಳ… ಎಂದ ಬಂದ್ಯವಾ? ಎಲ್ಲಾ ಪಾಡ [ಚನ್ನಾಗಿ] ಅದೀರಾ? ಎಲ್ಲಿ ಯಾವೂರಾಗ ಅದಿಯವಾ ? ಕುರುಸಾಲ್ಯಾ ನನ್ನ ಅಳ್ಯಾ ಬಂದಿಲ್ಲೇನ? [ನಮ್ಮ ಮನೆಯವರಿಗೆ ಹೀಗೆ ಸಂಬೋಧಿಸುತ್ತಾರೆ. ಊರ ಅಳಿಯನಿಗೆ ಹೀಗೆ ಸಂಬೋಧಿಸಬೇಕೆಂಬ ಅಲಿಖಿತ ನಿಯಮ. ] ನಮ್ಮ ಚಾಜಗಾರ ಕುಳ [ನಮ್ಮಿಂದ ಸನ್ಮಾನ ಕಾಣಿಕೆ ಪಡೆಯುವ ಹೆಣ್ಣು ಮಕ್ಕಳ ಮಗ] ಬಂದಿಲ್ಲೇನ??” ಹೀಗೆ ಮಾತನಾಡಿಸುತ್ತಾರೆ. ನಾನೂ ಸಹ ಸರಕಾರಿ ನೌಕರಿಯಲ್ಲಿ ನಮ್ಮ ಮನೆಯವರು ಸಹ ಸರಕಾರಿ ನೌಕರಿಯಲ್ಲಿ ಇದ್ದೇವೆ. ಮೇಲುಜಾತಿಯವರಾಗಿದ್ದೆವೆ. ಉತ್ತಮ ಗರಿಗರಿಯಾದ ಬಟ್ಟೆಗಳನ್ನು ಧರಿಸಿಯೇ ನಮ್ಮೂರಿಗೆ ಹೋಗಿರುತ್ತೇವೆ. ಆ ಹಳ್ಳಿಗರಿಗಿಂತ ಸಾವಿರ ಪಾಲು ಉತ್ತಮ ಸ್ಥಿತಿಯಲ್ಲಿ ಇದ್ದೇವೆ. ಆದರೆ ನಾವೆಂದೂ ಅವರು ನಮ್ಮನ್ನು ಬಹುವಚನದಲ್ಲಿ ಮಾತನಾಡಿಲ್ಲವೆಂದು ಸಿಟ್ಟಿಗೆ ಬಂದಿಲ್ಲ. ನಾನೂ ಕೂಡ ಹೌಂದ ಕಾಕಾ, ದೊಡ್ಡಪ್ಪ, ಮುತ್ಯಾ ಆಯಿ, ಚಿಗವ್ವ, ದೊಡ್ಡವ್ವ, ಅತ್ತಿ, ಮಾಮಾ ಹೀಗೆ ಹೇಳಿ ನಾನು ಕ್ಷೇಮವಾಗಿದ್ದನ್ನು ಹೇಳುತ್ತೇನೆ. ಇಲ್ಲಿ ಅವರ ಪ್ರೀತಿ ತಮ್ಮ ಮನೆಯ ಮಗಳೇ ನಮ್ಮೂರಿಗೆ ಬಂದಳೆಂದು ತಿಳಿಯುವ ಅವರ ಆತ್ಮೀಯತೆ ಗಮನಿಸಬೇಕೆ ಹೊರತು ಅವರ ಭಾಷೆಯಲ್ಲ. ನಾವು ಭಾರತದ ರಾಷ್ಟ್ರಪತಿಯಾಗಿ ನಮ್ಮೂರಿಗೆ ಹೋದರೂ ನಮ್ಮ ಜನಗಳು “ಏನವಾ ತಂಗೀ ಏನೋ ದೊಡ್ಡ ಸಾಬ್ತಿ ಆಗೀಯಂತಲ್ಲವಾ? ಶಿವಾ ಚಲೂ ಮಾಡಿದ ಬಿಡೂ… ನನ್ನ ಆಶೀ [ಆಯುಷ್ಯ] ಎಲ್ಲ ನಿನಗಾಗಲಿ. ಚಂದಾಗಿ ಸಿವಾ ನಿನ್ನ ಇಡಲಿ”. ಎಂದಾರೇ ವಿನಃ ಅವರಿಗೆ ರಾಷ್ಟ್ರಪತಿಗೆ ಗೌರವ ಕೊಡಬೇಕೆಂಬ ಇರಾದೆ ಇರುವದಿಲ್ಲ. ಅವರಿಗೆ ನಾವು ಅವರೂರಿನ ಮಗ , ಮಗಳು ಅಷ್ಟೇ.

ಇರಲಿ, ನಮ್ಮೂರಿನ ಜನರ ಪುರಾಣವಾಯಿತು. ನಾನೀಗ ಹೇಳ ಹೊರಟಿರುವದು ಮೀಸಲಾತಿ ಹೇಗಿರಬೇಕೆಂಬ ಕುರಿತು. ಅದಕ್ಕೂ ಮುನ್ನ ಒಂದು ರೂಪಕದ ಉದಾಹರಣೆ ಹೇಳಿ ಮುಂದುವರಿದರೆ ಓದುಗರಾದ ನಿಮಗೆ ಹೆಚ್ಚು ಅರ್ಥವಾಗುತ್ತದೆಂದು ಅಂದುಕೊಳ್ಳುತ್ತೇನೆ.
ಮತ್ತಷ್ಟು ಓದು »

19
ಮೇ

ಚುನಾವಣೆ 2014: ಯುಪಿಎ ಸೋಲಿಗೆ ಕಾರಣಗಳೇನು?

– ತುರುವೇಕೆರೆ ಪ್ರಸಾದ್

SRಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ನಿಜವಾಗಿದ್ದು ಅದರಂತೆ ಬಿಜೆಪಿ ಮತ್ತು ಅದರ ಮಿತ್ರಪಕ್ಕಗಳನ್ನೊಳಗೊಂಡ ಎನ್‍ಡಿಎ ಕಳೆದ 25 ವರ್ಷಗಳಲ್ಲೇ ಐತಿಹಾಸಿಕ ಎನ್ನಬಹುದಾದ ಭಾರೀ  ಗೆಲುವು ದಾಖಲಿಸಿದೆ. ಯುಪಿಎ ನೂರರ ಗಡಿ ಮುಟ್ಟಲಾಗದೆ ದಯನೀಯ ಸೋಲು ಕಂಡಿದೆ. ಯುಪಿಎ ವೈಫಲ್ಯಕ್ಕೆ ಕಾರಣವಾದ ಹಲವು ಅಂಶಗಳಿವೆ. ಅವುಗಳಲ್ಲಿ  ಮಿತಿ ಮೀರಿದ ಭ್ರಷ್ಟಾಚಾರ, ಸಾಲು ಸಾಲು ಹಗರಣಗಳು, ಹಣದುಬ್ಬರ, ಬೆಲೆಯೇರಿಕೆ  ಇವು ಪ್ರಮುಖ ಕಾರಣಗಳು. ಯುಪಿಎ ಸರ್ಕಾರದ ವೈಫಲ್ಯಕ್ಕೆ ಕಾರಣವಾದ  ಅಂಕಿ-ಅಂಶಗಳನ್ನು ಖ್ಯಾತ ಪತ್ರಕರ್ತ ಸೆನ್‍ಗುಪ್ತ ಪಟ್ಟಿ ಮಾಡಿದ್ದಾರೆ.  ಅವುಗಳ ಸಾರಾಂಶ ಈ ಕೆಳಕಂಡಂತಿದೆ

•    ಯುಪಿಎ ಆಢಿತಾವಧಿಯಲ್ಲಿ ನಡೆದ 1.76 ಲಕ್ಷ ಕೋಟಿಯ 2ಜಿ ಹಗರಣ, 1.85 ಲಕ್ಷ ಕೋಟಿಯ ಕಲ್ಲಿದ್ದಲು ಹಂಚಿಕೆ ಹಗರಣ, ರೂ.3600 ಕೋಟಿಯ ಅಗಸ್ಟಾ ವೆಸ್ಟ್‍ಲ್ಯಾಂಡ್ ಹೆಲಿಕಾಪ್ಟರ್ ಹಗರಣ, 90 ಕೋಟಿ ಹಣ ದುರುಪಯೋಗದ ಕಾಮನ್‍ವೆಲ್ತ್ ಕ್ರೀಡಾಕೂಟದ ಹಗರಣ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಶನ್‍ನಿಂದ 5000 ಕೋಟಿ ದುರುಪಯೋಗದ ಆರೋಪ ಹೊತ್ತಿರುವ ಮಾಯಾವತಿ ಸರ್ಕಾರದ ಹಗರಣ- ಇವನ್ನು ಜನ ಎಂದಿಗೂ ಕ್ಷಮಿಸುವುದಿಲ್ಲ ಎಂಬುದನ್ನು ಈ ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ.

•    2011ರಲ್ಲಿ ಸುಮಾರು 4 ಲಕ್ಷ ಕೋಟಿ ಕಪ್ಪು ಹಣ ಭಾರತದಿಂದ ಆಚೆ ಸಾಗಿಸಲಾಗಿದೆ. ಇದು 2010ರ ಶೇ.24ರಷ್ಟು ಹೆಚ್ಚು. ಪ್ರತಿ ವರ್ಷ ಇದು ಅವ್ಯಾಹತವಾಗಿ ನಡೆದು ಬಂದಿದೆ. ಆದರೆ ಸ್ವಿಸ್ ಬ್ಯಾಂಕ್‍ನಲ್ಲಿದೆ ಎಂದು ಹೇಳಾಗಿರುವ 1456 ಬಿಲಿಯನ್ ಡಾಲರ್ ಹಣ ಹಿಂದೆ ಪಡೆಯಲು ಯುಪಿಎ ಸರ್ಕಾರ ಯಾವ ಗಂಭೀರ ಪ್ರಯತ್ನವನ್ನೂ ಮಾಡಲಿಲ್ಲ.

•    ಯುಪಿಎ ಸರ್ಕಾರದ ಮಹದಾಕಾಂಕ್ಷಿ ಯೋಜನೆ ಎನಿಸಿದ ಉದ್ಯೋಗ ಖಾತ್ರಿ ಯೋಜನೆಯಡಿ ಯುಪಿಎ ಸರ್ಕಾರ 1.9ಲಕ್ಷ ಕೋಟಿ ಹಣ ವೆಚ್ಚ ಮಾಡಿದೆ. ಆದರೆ ಶೇ.31 ಗ್ರಾ.ಪಂಚಾಯ್ತಿಗಳಿಗೆ ಈ ಹಣ ಹೇಗೆ ವಿನಿಯೋಗಿಸಬೇಕು ಎಂಬುದೇ ಗೊತ್ತಿಲ್ಲ, ರಾಜ್ಯದಲ್ಲಿನ ಹಳೆ ಉಳಿಕೆ, ಬಳಕೆಯ ಲೆಕ್ಕವೇ ಇಡದೆ  ಕಳೆದ 3 ವರ್ಷಗಳಿಂದ ಒಟ್ಟಾರೆ 11549 ಕೋಟಿ  ಹಣ ಬಿಡುಗಡೆ ಮಾಡಲಾಗಿದೆ.   4.33 ಲಕ್ಷ ಜಾಬ್ ಕಾರ್ಡ್‍ಗಳಿಗೆ ಭಾವಚಿತ್ರವೇ ಇಲ್ಲ, ಗ್ರಾಮೀಣ  ಪ್ರದೇಶದಲ್ಲಿ ಕೇವಲ ಶೇ.20 ಹಣವನ್ನು ಮಾತ್ರ ಉದ್ದೇಶಿತ ಯೋಜನೆಗಳಿಗೆ ಬಳಸಲಾಗಿದ್ದು ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಸಿಎಜಿ ಆಕ್ಷೇಪಿಸಿದೆ.

ಮತ್ತಷ್ಟು ಓದು »

29
ಮಾರ್ಚ್

ಪೋಲಿಸ್ ಸಿಬ್ಬಂದಿ ಮತ್ತು ಚುನಾವಣೆಗಳ ನಡುವೆ

– ಬೆಳ್ಳಿ

ಪೋಲಿಸ್ ಸಮಸ್ಯೆಗಳುಈಗ ಎಲ್ಲೆಲ್ಲೂ ಚುನಾವಣೆಯ ಅಬ್ಬರ.ಹಳ್ಳಿ ಹಳ್ಳಿ ಗಲ್ಲಿ ಗಲ್ಲಿಗಳಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ.ಎಲ್ಲರೂ ತಮ್ಮ ಪಾಡಿಗೆ ತಾವು ಹಾಯಾಗಿ ಜೀವನ ಸಾಗಿಸುತ್ತಿದ್ದರೆ,ಕಾನೂನು ಮತ್ತು ಸುವ್ಯವಸ್ಧೆಯ ಅಡಿಯಲ್ಲಿ ಬರುವ ಪೋಲಿಸ್ ವ್ಯವಸ್ಧೆ ಯಾವ ರೀತಿಯಾಗಿ ಅವರಿಗೆ ಒತ್ತಡಗಳಿದ್ರೂ ಕೆಲಸ ಮಾಡುತ್ತದೆಂದು ಯಾರಿಗೂ ಗೊತ್ತಿಲ್ಲ.ಅವರು ನಾಮಪತ್ರ ಸಲ್ಲಿಸುವುದರಿಂದ ಹಿಡಿದು ಚುನಾವಣೆಯ ಫಲಿತಾಂಶ ಬರುವವರೆಗೂ ಸತತವಾಗಿ ಎರಡು ತಿಂಗಳುಗಳ ಕಾಲ ಹಗಲಿರುಳೆನ್ನದೆ ದುಡಿಯುತ್ತಾರೆ.ಚುನಾವಣೆ ಸಮೀಪ ಬಂತೆಂದರೆ ಸಾಕು ಯಾರು ಒಂದು ತಿಂಗಳು ಕಾಲ ರಜೆ ಕೇಳಬಾರದೆಂಬ ಆದೇಶ ಹೊರಡಿಸಿಬಿಟ್ಟಿರುತ್ತಾರೆ.ಮನೆಯಲ್ಲಿ ಯಾರಾದರೂ ತೀರಿಕೊಂಡರೆ ಮಾತ್ರ ರಜೆ ಕೇಳಬೇಕು.ಅದೂ ಸಹ ಎಸ್.ಪಿ.ಸರ್ ಅಪ್ಪಣೆ ನೀಡಬೇಕು.

ಇದು ಹಿಂಗಾದರೆ,ಚುನಾವಣೆಯ ಕಾಲಕ್ಕೆ ಯಾವುದೋ ಹಳ್ಳಿಗೆ ಕರ್ತವ್ಯ ಬಂದಿರುತ್ತೆ.ನಮಗೆ ಮೈಯಲ್ಲಿ ಆರಾಮ ಇಲ್ಲದಿದ್ರೂ,ಅಥವಾ ಮನೆಯಲ್ಲಿ ಗಂಡ,ಅತ್ತೆ,ಮಾವ,ಮಕ್ಕಳಗೆ,ಹೆಂಡತಿಗೆ ಮೈಯಲ್ಲಿ ಹುಷಾರಿಲ್ಲದೆ ಆಸ್ಪತ್ರೆಯಲ್ಲಿ ಸೇರಿದ್ರೂ ಎಲ್ಲ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು.ಮನೆಯ ಕಡೆ ವಿಷಯ ತಿಳಿದುಕೊಳ್ಳೋಣವೆಂದರೆ ಅಲ್ಲಿ ಮೊಬೈಲ್ ನೆಟ್ ವರ್ಕ್ ಬರೋಲ್ಲ.ಅದೇ ಒತ್ತಡಗಳ ಜೊತೆಗೆ ಹಳ್ಳಿಗೆ ಹೋಗಿ ಕೊಟ್ಟಿರುವ ಬೂತ್ ಎನ್ನುವ ಭೂತ ಬಂಗಲೆಗೆ ಕಾಲಿಟ್ಟಾಗ ಮೊದಲು ಅದು ಆ ಗ್ರಾಮದ ಸಾರ್ವಜನಿಕರೆಲ್ಲರ ಶೌಚಾಲಯದ ತಾಣ.ಚುನಾವಣೆಯ ವೇಳೆಯಲ್ಲಿ ಗಿಡ ಕಂಟಿ ಕಡಿದು ಅಲ್ಲಲ್ಲಿ ಬ್ಲೀಚಿಂಗ್ ಪೌಡರ್ ಹಾಕಿ,ಒಂದೇ ಒಂದು ಕೋಣೆ ರೆಡಿ ಮಾಡಿ,ಅದರಲ್ಲಿ 60 ವೋಲ್ಟೆಜಿನ ಬಲ್ಬ್ ಹಾಕುತ್ತಾರೆ.ನಲವತ್ಮೂರರಿಂದ ನಲವತ್ತೈದು ಡಿಗ್ರಿ ಬಿಸಿಲ ಧಗೆಯಲ್ಲಿ ಹ್ಯಾಗೆ ಕರ್ತವ್ಯ ಮಾಡಬೇಕು.

ಮತ್ತಷ್ಟು ಓದು »

22
ಮಾರ್ಚ್

೨೦೧೪ರ ಚುನಾವಣ ಕಣದ ಸುತ್ತ

– ಡಾ.ಕಿರಣ್ ಎಂ ಗಾಜನೂರು

Modi vs Rahulಭಾರತದಲ್ಲಿ ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಂಡಿದೆ.ಹಾಗೆ ನೋಡುವುದಾದರೆ ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳಿಗಿಂತ ೨೦೧೪ರ ಈ ಲೋಕಸಭಾ ಚುನಾವಣೆ ಹೆಚ್ಚು ಚರ್ಚೆಯಲ್ಲಿದೆ ಮತ್ತು ಜನ ಸಮಾನ್ಯರಲ್ಲಿಯು ಒಂದು ಸಹಜ ಕುತೂಹಲವನ್ನು ಈ ಚುನಾವಣೆ ಹುಟ್ಟುಹಾಕಿದೆ.ಭಾರತದಲ್ಲಿನ ಪ್ರಮುಖ ರಾಜಕೀಯ ಚಿಂತಕರು,ಮಾಧ್ಯಮಗಳು ಈ ವಿದ್ಯಮಾನಕ್ಕೆ ಹಲವಾರು ಕಾರಣಗಳನ್ನು ಗುರುತಿಸಿದ್ದಾರೆ ಅದರಲ್ಲಿ ಬಹಳ ಮುಖ್ಯವಾದದ್ದು

೧) ಆಡಳಿತಾತ್ಮಕ ಮತ್ತು ಭ್ರಷ್ಟಾಚಾರದ ಕಾರಣಕ್ಕಾಗಿ (ಮುಖ್ಯವಾಗಿ ಬೆಲೆ ಎರಿಕೆ) ರೂಪಿತಗೊಂಡ ಕಾಂಗ್ರೆಸ್ಸ್ ವಿರೋಧಿ ನಿಲುವು
೨) ಬಿ.ಜೆ.ಪಿ ತನ್ನ ಪ್ರಧಾನಿ ಆಭ್ಯರ್ಥಿ ನರೆಂದ್ರ ಮೋದಿಯವರ ಹಿನ್ನಲೆಯಲ್ಲಿ ರೂಪಿಸಿಕೊಂಡ ಜನಪ್ರಿಯತೆ.

ಹಾಗಾದರೆ, ೨೦೧೪ ರ ಚುನಾವಣೆ ಈ ಎರಡು ನಿಲುಗಳ ಆಧಾರದಲ್ಲಿಯೆ ನಡೆಯುತ್ತದಾ? ದೇಶದ ಎಲ್ಲಾ ಭಾಗದ ಮತದಾರ ಈ ನಿಲುವುಗಳ ಆಧಾರದಲ್ಲಿಯೆ ಮತ ಚಲಾಯಿಸುತ್ತಾನಾ?  ಎಂಬ ಪ್ರಶ್ನೆಯನ್ನು ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳ ಹಿನ್ನಲೆಯಲ್ಲಿ ವಿಶ್ಲೇಷಿಸಿ ಕೇಳಿಕೊಂಡರೆ, ’ಖಂಡಿತಾ ಇಲ್ಲಾ’ ಎಂಬ ಉತ್ತರವನ್ನೂ ಯಾರಾದರೂ ನೀರಿಕ್ಷಿಸಬಹುದಾಗಿದೆ…! ಏಕೆಂದರೆ ಕಳೆದ ಹತ್ತು ವರ್ಷಗಳ ಕಾಲ ಈ ದೇಶವನ್ನು ಆಳಿದ ಯುಪಿಎ ಸರ್ಕಾರ ಹಲವಾರು ಹಗರಣಗಳನ್ನು ತನ್ನ ಮೇಲೆ ಎಳೆದುಕೊಂಡಿದ್ದರೂ ಆದರ ಜೊತೆ ಜೊತೆಗೆ ’ಆರ್.ಟಿ.ಐ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನ”ಯಂತಹ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವುದರ ಮೂಲಕ ಸಮಾಜದ ಹಲವು ವರ್ಗಗಳ ಜನರ ಬೆಂಬಲವನ್ನು ಗಳಿಸಿಕೊಂಡಿದೆ .ಅದೂ ಅಲ್ಲದೆ, ಈ ದೇಶವನ್ನು ಹೆಚ್ಚು ಕಾಲ ಆಳಿದ ಕಾಂಗ್ರೆಸ್ಸ್ ಪಕ್ಷ ಅದರದ್ದೆ ಆದಂತಹ ಒಂದು ಮತದಾರರ ವರ್ಗ ಮತ್ತು ಬುದ್ದಿಜೀವಿಗಳ ಗುಂಪನ್ನು ಸೃಷ್ಟಿಸಿಕೊಂಡಿದೆ ಅವರು ಎಂದಿಗೂ ಕಾಂಗ್ರೆಸ್ಸ್ ಅನ್ನು ಬೆಂಬಲಿಸುತ್ತಾರೆ ಮತ್ತು ಚುನಾವಣೆಯಲ್ಲಿ ಈ ಅಂಶ ಖಂಡಿತವಾಗಿ ಪ್ರಭಾವ ಬೀರಲಿದೆ.ಇದರ ಜೊತೆಗೆ ದೇಶದ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ಸ್ ವಲಯದಲ್ಲಿ ಗುರುತಿಸಿಕೊಂಡಿರುವ ರಾಹುಲ್ ಗಾಂಧಿಯವರು ಇತ್ತಿಚೆಗೆ “ಭಾರತಕ್ಕೆ ಬೇಕಿರುವುದು ಇಲ್ಲಿನ ವಿವಿಧತೆಯನ್ನು ಅವುಗಳ ನೆಲೆಯಲ್ಲಿಯೆ ಗುರುತಿಸಿ ಬೆಳೆಸಬೇಕಾದ ರಾಜಕೀಯ ಪಕ್ಷವೆ ಹೊರತು ವ್ಯಕ್ತಿ ಕೇಂದ್ರಿತ ಪಕ್ಷವಲ್ಲ” ಎಂಬ ಮಾದರಿಯ ಪ್ರಜಾಸತ್ತಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಕಾಂಗ್ರೆಸ್ಸಿನಲ್ಲಿ ತಮ್ಮ ಈ ನಿಲುವನ್ನು ಜಾರಿಗೆ ತರುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಇದಕ್ಕೆ ಉದಾಹರಣೆ ಇತ್ತೀಚೆಗೆ ಕಾಂಗ್ರೆಸ್ಸ್ ಪಕ್ಷದೊಳಗೆ ನಡೆದ ಆಂತರಿಕ ಚುನಾವಣೆ.ಈ ಅಂಶವು ದೇಶದ ಮಧ್ಯಮ ವರ್ಗದ ಮತದಾರರನ್ನು ಖಂಡಿತಾ ಸೆಳೆಯುತ್ತದೆ.

ಮತ್ತಷ್ಟು ಓದು »

19
ಮಾರ್ಚ್

ಸಿಂಧುರಕ್ಷಕ್ ಮುಳುಗಿತೆಂದರೆ ಹಿಂದೂಸ್ಥಾನವೂ ಮುಳುಗಿದಂತೆ!

– ರಾಜೇಶ್ ರಾವ್

ಸಿಂಧು ರಕ್ಷಕ್ಭಾರತೀಯ ನೌಕೋದ್ಯಮಕ್ಕೆ ಸಹಸ್ರಾರು ವರ್ಷಗಳ ಇತಿಹಾಸವಿದೆ. ಋಗ್ವೇದದಲ್ಲಿ ನೌಕೆಗಳ ಉಲ್ಲೇಖವಿದೆ. ವೇದಕಾಲದಲ್ಲಿ ನೌಕೆಗಳ ಬಗ್ಗೆ, ಅವುಗಳನ್ನು ತಯಾರಿಸುವ, ಬಳಸುವ ಬಗ್ಗೆ ಜನತೆಗೆ ಅರಿವು ಇತ್ತು. ಅಂದರೆ ಸಾಗರ ಗರ್ಭದೊಳಗಡಗಿರುವ ಅಪಾರ ಸಂಪನ್ಮೂಲಗಳ ಬಗ್ಗೆ ಜನ ತಿಳಿದಿದ್ದರು. ಆಧುನಿಕ ವಿಜ್ಞಾನದ ಅರಿವಿಗೆ ದೊರಕಿದ ಮಾಹಿತಿಯನ್ನು ಆಧರಿಸಿದರೂ ಭಾರತವೇ ನೌಕೋದ್ಯಮದ ತವರು. ಕ್ರಿ.ಪೂ 2300ರ ಸುಮಾರಿಗೆ ಗುಜರಾತಿನ ಲೋಥಲ್ ಎಂಬ ಪ್ರದೇಶದಲ್ಲಿರುವ ಮಾಂಗ್ರೋಲ್ ಬಂದರಿನ ಬಳಿ ಸಿಂಧೂ ನಾಗರೀಕತೆಯ ಸಮಯದಲ್ಲಿ ಮೊದಲ ಉಬ್ಬರವಿಳಿತದ ಹಡಗು ನಿರ್ಮಾಣವಾಯಿತು. ಮೌರ್ಯರ ಆಳ್ವಿಕೆಯ ಸಮಯದಲ್ಲಿ ಜಲಮಾರ್ಗದ ಸಮಸ್ತ ಆಗು ಹೋಗುಗಳು ನವಾಧ್ಯಕ್ಷನ ನಿಯಂತ್ರಣದಲ್ಲಿತ್ತು. ಕೌಟಿಲ್ಯನ ಅರ್ಥ ಶಾಸ್ತ್ರದಲ್ಲಿ ನೌಕೆಗಳ ಬಗೆಗಿನ ಅಗಾಧ ಮಾಹಿತಿಯಿದೆ. ಮೌರ್ಯರಲ್ಲದೆ ಚೋಳ, ಶಾತವಾಹನ, ಗುಪ್ತ, ಪಾಲ, ಪಾಂಡ್ಯ, ವಿಜಯನಗರ, ಕಳಿಂಗ, ಮರಾಠರ ಆಳ್ವಿಕೆಯ ಕಾಲದಲ್ಲೂ ನೌಕೋದ್ಯಮ ಪ್ರಸಿದ್ದಿ ಪಡೆದಿತ್ತು. ಪಾಶ್ಚಿಮಾತ್ಯ ದೇಶಗಳೊಡನೆ ವ್ಯಾಪಾರ ವಹಿವಾಟು ಬಹು ಹಿಂದಿನಿಂದಲೂ ಸಾಗರ ಮಾರ್ಗವಾಗಿಯೇ ನಡೆದಿತ್ತು. ಮರಾಠ ನೌಕಾ ಪಡೆಯಂತೂ ಮೂರು ಶತಮಾನಗಳ ಕಾಲ ತನ್ನ ಪಾರುಪತ್ಯ ಸ್ಥಾಪಿಸಿತ್ತು. ಯೂರೋಪಿನ ನೌಕಾಪಡೆಗಳು ಅನೇಕ ಸಲ ಮರಾಠರ ನೌಕಾಪಡೆಗಳೆದುರು ನಿಲ್ಲಲಾರದೆ ಓಡಿ ಹೋಗಿದ್ದವು. ಕನ್ಹೋಜಿ ಆಂಗ್ರೇಯಂತಹ ಸಾಗರ ವೀರ ಎಂದೆಂದಿಗೂ ಅಮರ.

ಭಾರತೀಯ ನೌಕಾಪಡೆ ಜಗತ್ತಿನ ಐದನೇಯ ಅತಿ ದೊಡ್ಡ ನೌಕಾಪಾಡೆಯಾಗಿದ್ದು, ಇದರಲ್ಲಿ ಸುಮಾರು 55,000 ಜನರು ಕಾರ್ಯನಿರತರಾಗಿದ್ದಾರೆ. ಇವರಲ್ಲಿ ಸುಮಾರು 5,000 ಜನ ನೌಕಾ ವಾಯುಪಡೆಗೆ ಸೇರಿದ್ದು ಮತ್ತು ಸುಮಾರು 2೦೦೦ ಜನ ನೌಕಾ ಕಮಾಂಡೋಗಳಾಗಿದ್ದಾರೆ. ಭಾರತೀಯ ನೌಕಾಪಡೆ 155 ನೌಕೆಗಳನ್ನು ಹೊಂದಿದ್ದು, ಐ.ಎನ್.ಎಸ್.ವಿರಾಟ್ ಎಂಬ ವಾಯು ಯುದ್ಧ ನೌಕೆಯನ್ನು ಹೊದಿದೆ. ಸಂಪೂರ್ಣ ಏಷ್ಯಾ ಖಂಡದಲ್ಲಿರುವ ಎರಡು ವಾಯು ಯುದ್ಧ ನೌಕೆಗಳಲ್ಲಿ ಇದು ಒಂದು. ಸ್ವತಂತ್ರ ಭಾರತದ ನೌಕಾಪಡೆ ಇತಿಹಾಸದಲ್ಲಿ ಹಡಗಿನೊಂದಿಗೇ ಜಲಸಮಾಧಿಯಾದ ಹಾಗೂ ಸಾಯುವ ಮೊದಲು 67 ಜನರ ಜೀವ ರಕ್ಷಣೆ ಮಾಡಿದ್ದ ಮೊದಲ ಹಾಗೂ ಏಕೈಕ ಕ್ಯಾಪ್ಟನ್ ಮಹೇಂದ್ರನಾಥ್ ಮುಲ್ಲಾರಂತಹ ವೀರರನ್ನು ಹೊಂದಿದ್ದ ನೌಕಾಪಡೆ ನಮ್ಮದ್ದು.

ಮತ್ತಷ್ಟು ಓದು »

18
ಮಾರ್ಚ್

ಜಾತ್ಯಾತೀತರೆನಿಸಿಕೊಳ್ಳಲು ಮುಸಲ್ಮಾನರ ಟೋಪಿ ಧರಿಸಲೇಬೇಕೆ?

– ನರೇಂದ್ರ ಕುಮಾರ್

Secular Nandan Nilekaniಮುಂಬರುವ ಲೋಕಸಭಾ ಚುನಾವಣೆಯಲ್ಲಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂದನ್ ನೀಲೇಕಣಿಯವರು ಸ್ಪರ್ಧಿಸುತ್ತಿರುವುದು ಅಧಿಕೃತವಾಗಿ ಪ್ರಕಟವಾಗಿದೆ. ಅವರು ಕಾಂಗ್ರೆಸ್ ಅಭ್ಯರ್ಥಿಯೆಂದು ಘೋಷಣೆಯಾದ ಕೂಡಲೇ ಮುಸಲ್ಮಾನರ ಟೋಪಿ ಧರಿಸಿ ತಾವು ಕೂಡಾ “ಜಾತ್ಯಾತೀತ”ರೆಂದು ಲೋಕಕ್ಕೆಲ್ಲಾ ಸಾರಿದರು. ಈ ರೀತಿ ಮುಸಲ್ಮಾನ ಟೋಪಿ ಧರಿಸಿ “ಜಾತ್ಯಾತೀತ”ರಾಗುವುದು ಕಾಂಗ್ರೆಸ್ ಪರಂಪರೆಯೇ ಆದಂತಿದೆ. ಅದಕ್ಕಿಂತಲೂ ಮಿಗಿಲಾಗಿ, ಮುಸಲ್ಮಾನ ಟೋಪಿ ಧರಿಸದಿದ್ದವರನ್ನು “ಕೋಮುವಾದಿ” ಎಂದು ಖಂಡಿಸಲಾಗುತ್ತದೆ. ಒಂದೆರಡು ವರ್ಷದ ಹಿಂದೆ ಗುಜರಾತಿನಲ್ಲಿ ನಡೆದ ಸದ್ಭಾವನಾ ಸಭೆಯೊಂದರಲ್ಲಿ ನರೇಂದ್ರ ಮೋದಿಯವರಿಗೆ ಮುಸಲ್ಮಾನರೊಬ್ಬರು ಟೋಪಿ ನೀಡಿದರು. ಮೋದಿಯವರು ಆ ಟೋಪಿಯನ್ನು ಧರಿಸಲಿಲ್ಲ. ಆ ಕೂಡಲೇ ಅವರನ್ನು “ಕೋಮುವಾದಿ” ಎಂದು ಖಂಡಿಸಲಾಯಿತು.

ಇದು ಯಾವ ಸೀಮೆ ಜಾತ್ಯಾತೀತತೆ? ಒಂದು ಕೋಮಿನ ಟೋಪಿ ಧರಿಸಿದರೆ ಜಾತ್ಯಾತೀತ, ಧರಿಸದಿದ್ದರೆ ಕೋಮುವಾದಿ!? ಈ ದೇಶದಲ್ಲಿ ಬೇರೆ ಕೋಮುಗಳೇ ಇಲ್ಲವೆ? ಅವುಗಳಲ್ಲಿ ಅನೇಕ ಕೋಮುಗಳೂ ಅಲ್ಪಸಂಖ್ಯಾತವಲ್ಲವೇ? ಆ ಕೋಮುಗಳ ಲಾಂಚನವನ್ನೋ, ಟೋಪಿಯನ್ನೋ ಈ ರಾಜಕಾರಣಿಗಳು ಏಕೆ ಧರಿಸಿ ಪತ್ರಿಕೆಗಳಲ್ಲಿ ಚಿತ್ರ ಹಾಕಿಸಿಕೊಳ್ಳುವುದಿಲ್ಲ? ಮುಸಲ್ಮಾನ ಟೋಪಿ ಧರಿಸದಿದ್ದವರು ಕೋಮುವಾದಿಯಾಗುವುದಾದರೆ, ಆ ಉಳಿದ ಅಲ್ಪಸಂಖ್ಯಾತ ಕೋಮುಗಳ ಟೋಪಿ ಧರಿಸದಿದ್ದವರೂ ಕೋಮುವಾದಿ ಆಗಬೇಕಲ್ಲವೇ? ಮುಸಲ್ಮಾನರಿಗಿಂತ ಬಹಳ ಕಡಿಮೆ ಸಂಖ್ಯೆಯಲ್ಲಿರುವವರು ಜೈನರು. ಯಾವ ರಾಜಕಾರಣಿಯೂ ಜೈನರ ದಿರಿಸು ಧರಿಸಿ ತನ್ನ “ಜಾತ್ಯಾತೀತತೆ”ಯನ್ನು ಮೆರೆದದ್ದು ನನಗೆ ತಿಳಿದಿಲ್ಲ. ಅಥವಾ ಪಾರ್ಸಿ ಲಾಂಚನ ಧರಿಸಿಯೋ, ಇಲ್ಲವೇ ಬೌದ್ಧರ ದಿರಿಸು ಧರಿಸಿಯೋ, ಕ್ರೈಸ್ತರಂತೆ ವೇಷ ಹಾಕಿದ್ದೋ ಎಲ್ಲೂ ನೋಡಿಲ್ಲ.

ಮತ್ತಷ್ಟು ಓದು »

10
ಮಾರ್ಚ್

ಜಾತೀಯತೆ: ಏನು? ಎತ್ತ?

– ಡಾ. ಶ್ರೀಪಾದ ಭಟ್

ಜಾತಿ ರಾಜಕಾರಣಸೆಪ್ಟೆಂಬರ್ 13, 2007ರಂದು 11 ನೇ ಪಂಚವಾರ್ಷಿಕ ಯೋಜನೆ ಕುರಿತ ಯೋಜನಾ ಆಯೋಗದ ಸಮಾಲೋಚನಾ ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ “ಸ್ಪೆಶಲ್ ಅಟೆನ್ಷನ್ ವುಡ್ ನೀಡ್ ಟು ಬಿ ಪೇಯ್ಡ್ ಟು ಡಿಸ್ಟ್ರಿಕ್ಟ್ಸ್ ವಿತ್ ಎಸ್‍ಸಿ, ಎಸ್‍ಟಿ, ಒಬಿಸಿ ಆಂಡ್ ಮೈನಾರಿಟಿ ಕಾನ್ಸನ್‍ಟ್ರೇಶನ್’’ ಎಂದು ಭಾಷಣ ಮಾಡಿದ್ದರು. ಅಲ್ಪ ಸಂಖ್ಯಾತರಿಗೆ ಸರ್ಕಾರಿ ಯೋಜನೆಯಲ್ಲಿ ಸಿಂಹಪಾಲು ದೊರೆಯಬೇಕು ಎಂದೂ ಅವರು ಹೇಳಿದ್ದರು. ಸಿಂಗ್ ಮೂಲತಃ ಅರ್ಥಶಾಸ್ತ್ರಜ್ಞರು, ರಾಜಕಾರಣಿಯಲ್ಲ. ಆದರೆ ಅವರ ಧಾಟಿ ಮತಬ್ಯಾಂಕಿನ ಮೇಲೆ ಕಣ್ಣಿಟ್ಟ ಯಾವ ರಾಜಕಾರಣಿಗೂ ಕಡಿಮೆ ಇರಲಿಲ್ಲ. ಅಂದಿನ ಸಭೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ಅಧಿಕಾರಿಗಳು ಎಲ್ಲ ಹಾಜರಿದ್ದರು. ಸರ್ಕಾರದ ಯೋಜನೆಯ ಲಾಭ ಬಡವರಿಗೆ ದೊರೆಯಬೇಕು ಎಂದು ಹೇಳುವ ಬದಲು ಅಲ್ಪ ಸಂಖ್ಯಾತರಿಗೆ ದೊರೆಯಬೇಕು ಎಂದು ಅವರು ಹೇಳಿದ್ದರಲ್ಲಿ ಅಭಿವೃದ್ಧಿಗಿಂತಲೂ ಮತಗಳಿಕೆಯ ವಾಸನೆ ಢಾಳಾಗಿ ರಾಚಿದರೆ ಅದರಲ್ಲಿ ಅವರ ತಪ್ಪಿಲ್ಲ. ಕರ್ನಾಟಕದಲ್ಲಿ ಶಾದಿ ಭಾಗ್ಯ ಯೋಜನೆ ಕುರಿತ ಸರ್ಕಾರದ ನಿಲುವನ್ನು ಕೂಡ ಇದೇ ದೃಷ್ಟಿಯಲ್ಲಿ ನೋಡಬಹುದು. ಆ ಸರ್ಕಾರ, ಈ ಸರ್ಕಾರ ಎಂದಲ್ಲ ಎಲ್ಲ ಸರ್ಕಾರಗಳ ಯೋಜನೆಗಳೂ ಮತಗಳಿಕೆಯತ್ತ ನೆಟ್ಟಿರುವುದರಿಂದ ಅವರ ಘೋಷಣೆಗಳು ಹೀಗಾಗಿಬಿಡುತ್ತವೆ ಅಷ್ಟೆ.

ಮತ್ತಷ್ಟು ಓದು »