ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

30
ಡಿಸೆ

ಕೇಜ್ರಿವಾಲ್ ಮತ್ತು ಮೋದಿ – ಹೀಗೊಂದು ಮುನ್ನೋಟ

– ಗಣೇಶ್ ಕೆ. ದಾವಣಗೆರೆ

ಮೋದಿ Vs ಕೇಜ್ರಿವಾಲ್ರಾಹುಲ ಗಾಂಧೀ ಮತ್ತು ಅರವಿಂದ ಕೇಜ್ರಿವಾಲ್ ಒಂದೇ ವಯಸ್ಸಿನವರು. ಇಬ್ಬರಿಗೂ ಎಷ್ಟು ವ್ಯತ್ಯಾಸಗಳಿವೆ. ಒಬ್ಬವ ತೀರಾ ಎಳಸು. ಇನ್ನೊಬ್ಬವ ಜನರ ಗಮನವನ್ನ ತನ್ನ ಮಾತುಗಳತ್ತ ಸೆಳೆದ ಯುವಕ. ಹೊಸ ಹೊಸ ಚಿಂತನೆಗಳನ್ನ ಹರಿಯಬಿಟ್ಟವ. ಆಡಳಿತದಲ್ಲಿ ಪಳಗಿದ ಮೋದಿಗೆ ರಾಹುಲ ಯಾವ ರೀತಿಯಲ್ಲೂ ಸರಿಸಮನಲ್ಲ. ಜೊತೆಗೆ, ಪ್ರತಿಸ್ಪರ್ಧಿಯೂ ಅಲ್ಲ. ರಾಹುಲಗಾಂಧೀ ವಯಸ್ಸಿನವನೇ ಆದ ಕೇಜ್ರಿವಾಲ್ ಯಾವ ರಾಜಕೀಯ ಅನುಭವವೂ ಇಲ್ಲದೇ ಪಕ್ಷವೊಂದನ್ನ ಕಟ್ಟಿ ಆರು ತಿಂಗಳಲ್ಲಿ ಆಧಿಕಾರದ ಹೊಸ್ತಿಲತ್ತ ತಂದು ನಿಲ್ಲಿಸುವುದು ಸಾಮಾನ್ಯ ಸಂಗತಿಯಲ್ಲ.

ನಮ್ಮೆಲ್ಲ ಪೂರ್ವಾಗ್ರಹಗಳನ್ನ ಬದಿಗಿಟ್ಟು ಈ ಯಶಸ್ಸನ್ನ ಗಮನಿಸಬೇಕಾದ ಅಗತ್ಯವಿದೆ. ಕೆಲವರಿಗೆ ಕೇಜ್ರಿವಾಲನನ್ನ ಹೊಗಳಿದರೆ, ಮೆಚ್ಚಿಕೊಂಡರೆ, ಮೋದಿ ಗತಿಯೇನು ಅನ್ನುವ ಚಿಂತೆ. ದೆಹಲಿಯಲ್ಲಿ ಕಾಂಗ್ರೇಸ್ ವಿರೋಧಿ ಅಲೆ ಇತ್ತು ಅನ್ನೋದು ಸರ್ವವಿದಿತವಾದ ಸಂಗತಿ. ಆದರೆ, ಆ ಅಧಿಕಾರ ವಿರೋಧಿ ಅಲೆಯ ಸಂಪೂರ್ಣ ಲಾಭ ಪಡೆಯಲಿಕ್ಕೆ ಬಿಜೆಪಿಗೆ ಏಕೆ ಸಾಧ್ಯವಾಗಲಿಲ್ಲ? ಮೋದಿಯೂ ಕೂಡಾ ಬಂದು ಹೋಗಿದ್ದರಲ್ಲ? ಕಾಂಗ್ರೇಸ್ ಆಡಳಿತ ವಿರೋಧಿ ಅಲೆಯಿರುವಾಗ ಮೋದಿಯವರ ಭಾಷಣಕ್ಕೆ ಸರಳ ಬಹುಮತ ಕೊಡಿಸುವಷ್ಟೂ ಶಕ್ತಿ ಸಾಮರ್ಥ್ಯಗಳಿಲ್ಲವೇ? ಹಾಗಾದರೆ, ಬಿಜೆಪಿ ಎಡವಿದ್ದೆಲ್ಲಿ?
ಮತ್ತಷ್ಟು ಓದು »

29
ಡಿಸೆ

ಸರ್ವಾಧಿಕಾರಿ ಧೋರಣೆಯ ಪ್ರಗತಿಪರರು ಮತ್ತು ಮೋದಿ

– ಪ್ರಸನ್ನ,ಬೆಂಗಳೂರು

Modiಅಹಮದಾಬಾದಿನ ಮೆಟ್ರೊಪಾಲಿಟನ್ ನ್ಯಾಯಾಲಯ ಪ್ರಗತಿಪರರಿಗೆ ಒಂದು ತಡೆಯಲಾರದ ಆಘಾತ ನೀಡಿದೆ. ಈ ಆಘಾತವನ್ನು ಸಹಿಸಿಕೊಂಡು ಈಗಲಾದರೂ ಈ ಬುದ್ದಿಗೇಡಿಗಳು ತಮ್ಮ ಮಾರ್ಗ ಸರಿ ಪಡಿಸಿಕೊಳ್ಳುತ್ತರೇನೋ ಎಂಬ ನಮ್ಮ ನಿರೀಕ್ಷೆ ಹುಸಿಯಾಗುವಂತಿದೆ, ಯಥಾ ಪ್ರಕಾರ ಅವರು ತಮ್ಮ ಪ್ರಜಾಪ್ರಭುತ್ವ ವಿರೋಧಿ ಧೋರಣೆಯಲ್ಲೇ ಇನ್ನೂ ಬಿದ್ದು ಒದ್ದಾಡುತ್ತಿದ್ದಾರೆ. ನಾನಂತೂ ಇವರನ್ನು ಪ್ರಜಾಪ್ರಭುತ್ವ ನ್ಯಾಯಾಂಗ ವ್ಯವಸ್ಥೆ ಮತ್ತು ಭಾರತದ ಕಾನೂನಗಳನ್ನು ಗೌರವಿಸದ ದೇಶದ್ರೋಹಿಗಳೆಂದೆ ಪರಿಗಣಿಸುತ್ತೇನೆ. ಹೇಗೆಂದಿರಾ?

ನೀವೆ ಗಮನಿಸಿ ೨೦೦೨ದಿಂದೀಚೆಗೆ ಇವರು ಹಾಡುತ್ತಿದ್ದುದು ಒಂದೇ ರಾಗ ಅದು ಮೋದಿ ನರಹಂತಕ ಎಂಬುದು, ಇವರ ಅಧಿನಾಯಕಿಯಂತೂ ಆತನನ್ನು ಸಾವಿನ ವ್ಯಾಪಾರಿಯೆಂದು ಜರೆದು ನಾಲಿಗೆ ಕುಲ ಹೇಳುತ್ತದೆಂಬುವುದನ್ನು ತೋರಿಸಿಕೊಟ್ಟುಬಿಟ್ಟಿದ್ದಲ್ಲದೇ ತನ್ನ ನಾಲಿಗೆಯನ್ನು ತಾನೆ ಕಚ್ಚಿ ಕೊಳ್ಳುವಂತಾಯ್ತು. ಗುಜರಾತಿನ ಜನರು ಸತತ ೩ ಬಾರಿ ಇವರ ತಲೆಯ ಮೇಲೆ ಕಲ್ಲು ಹಾಕಿದ್ದೂ ಆಯ್ತು. ಆದರೂ ನಮ್ಮ ಕರ್ನಾಟಕದ ಪ್ರಗತಿಪ್ರರು ಮಾತ್ರ ಇನ್ನೂ ಆ ರೋಗದಿಂದ ಹೊರಬರಲೇ ಇಲ್ಲ.

ಮತ್ತಷ್ಟು ಓದು »

27
ಡಿಸೆ

ಗೊಂಬೆಯಾಟವಯ್ಯಾ…

ಮೂಲ ಲೇಖಕರು : ತನ್ಯರಾಜ್ ಪುರೋಹಿತ್
ಕನ್ನಡಕ್ಕೆ : ಪ್ರಶಾಂತ್ ಭಟ್

Chessಅಧಿಕಾರದ ಮೇಲಿನ ಹಂತಗಳಲ್ಲಿ ನಡೆಯುವ ಒಳಸಂಚುಗಳ ಮತ್ತು ತಂತ್ರಗಳ ಕತೆ ಯಾವತ್ತಿಗೂ ಕುತೂಹಲ ಹುಟ್ಟಿಸುತ್ತದೆ. ನಮಗೆಲ್ಲ ಅಂತಹ ವಿಷಯಗಳನ್ನು ಕೇಳಲು ಮತ್ತು ಇನ್ನೊಬ್ಬರಿಗೆ ಹೇಳಲು ತುಂಬಾ ಆಸಕ್ತಿ; ಅವು ನಮ್ಮ ಅರಿವನ್ನೂ ಮೀರಿ ನಮ್ಮನ್ನ ದಂಗು ಬಡಿಸುತ್ತದೆ! ಯಾಕೆಂದರೆ ಅಧಿಕಾರ ಪಡೆಯಲು ವ್ಯಕ್ತಿ/ಸಂಘಟನೆಗಳು ಮಾಡುವ, ಹೂಡುವ ಆಟಗಳು ನಾವೆಲ್ಲ ಕಲ್ಪನೆ ಮಾಡಲೂ ಅಸಾಧ್ಯವಾದದ್ದು!

ಈಗ ನೋಡಿ, ರಾಜಕೀಯದಲ್ಲಿ ಮೋದಿಯವರ ಮುಂದಿನ ದೊಡ್ಡ ನಡೆ ಏನು? ಅಥವಾ ಬಿ.ಜೆ.ಪಿ. ಗೆಗಂಡಾಂತರ ತಂದೊಡ್ಡಲು ರಾಹುಲ್ ಹೆಣೆಯುತ್ತಿರುವ ತಂತ್ರವೇನು? ಇಂತಹ ಪ್ರಶ್ನೆಗಳಿಗೆ ನಮಗೆ ಉತ್ತರ ಸಿಗುವುದು ಇವೆಲ್ಲಾ ಸಂಪೂರ್ಣವಾಗಿ ಕಾರ್ಯಗತವಾದ ಮೇಲೇ. ನಾವು ಅಂದುಕೊಳ್ಳುತ್ತೇವೆ ಏನೆಂದರೆ ಈ ರಾಜಕಾರಣಿಗಳಿಗೆ, ಮಂತ್ರಿಗಳಿಗೆ ಎಲ್ಲವೂ ತಿಳಿದಿದೆ ಯಾಕೆಂದರೆ ಅವರು ಈ ಆಟವನ್ನೆಲ್ಲಾ ಹತ್ತಿರದಿಂದ ನೋಡಿರುತ್ತಾರೆ ಅಂತ; ಈ ಮಾತು ಸಂಪೂರ್ಣ ನಿಜವಲ್ಲ. ಮೇಲಿನ ಹಂತಗಳಲ್ಲಿ ನಡೆಯುವ ದೊಡ್ಡ ದೊಡ್ಡ ಆಟಗಳ ಬಗ್ಗೆ ಅವರಿಗೆಅರಿವೇ ಇರುವುದಿಲ್ಲ ಮತ್ತು ತಾವು ಪಾನ್ ಗಳಾಗಿ ನಡೆಸಲ್ಪಡುವುದೂ ಗೊತ್ತಿರುವುದಿಲ್ಲ.ಈ ಆಟಗಳು ಕೇವಲ ದೊಡ್ಡವರ ಮೇಲೆ  ಕೇಂದ್ರೀಕೃತವಾಗಿರುತ್ತದೆ. ಕೆಲವು ನಂಬಿಕಸ್ಥ ದಳಪತಿಗಳ ಹೊರತು ಮತ್ತಾರಿಗೂ ಇದರ ಸಳುಹೂ ಸಿಕ್ಕಿರುವುದಿಲ್ಲ ನಮ್ಮ ನಿಮ್ಮೆಲ್ಲರಂತೆ!

ರಾಜಕಾರಣಿಗಳು ನಾವಂದುಕೊಂಡಿರುವುದಕ್ಕಿಂತ ಬುದ್ಧಿವಂತರಾಗಿರುತ್ತಾರೆ. ಅವರಿಗೆ ಒಂದು ಸಾಮಾನ್ಯ ಗಣಿತದ ಲೆಕ್ಕಾಚಾರ ತಿಳಿಯದಿರಬಹುದು ಆದರೆ ಎದುಗಿರುವ ವ್ಯಕ್ತಿಯ ಆಳ, ಅಗಲವ ಕ್ಷಣಾರ್ಧದಲ್ಲಿ ಅಳೆಯಬಲ್ಲರು; ಒಂದು ವಿಷಯವನ್ನ ಹತ್ತಾರು ವರ್ಷಗಳಿಗೆ ಧಕ್ಕೆ ಬಾರದಂತೆ ತಂತ್ರ ಹೆಣೆಯುವ ಚಾತುರ್ಯ ಅವರದ್ದು, ಆ ತಂತ್ರವನ್ನು ಜಾರಿಗೊಳಿಸುವುದರಲ್ಲಂತೂ ಅವರ ಮೀರಿಸಿದವರಿಲ್ಲ! ರಾಹುಲ್ ಗಾಂಧಿ ಎಂಬ ಹೆಸರು ನಗುವ ಸರಕಾಗಿ ತುಂಬ ಕಾಲವಾಯ್ತು. ‘ಪಪ್ಪು’, ‘ಬುದ್ಧು’ ನಂತಹ ಹೆಸರುಗಳು ಆ ಹೆಸರೊಂದಿಗೇ ಸೇರಿ ಹೋಗಿದೆ. ಮೋದಿ ಮಾತ್ರವಲ್ಲ ಯಾವ ಪ್ರೊಫ಼ೆಷನಲ್ ರಾಜಕಾರಣಿಗೂ ಸರಿದೂಗದ, ಜನರಲ್ಲಿ ಉತ್ಸಾಹ ತುಂಬಲಾರದ ನಾಯಕ(?) ರಾಹುಲ್ ಎಂದು ನಮಗೆಲ್ಲಾ ಅಗತ್ಯಕ್ಕಿಂತ ಸ್ಪಷ್ಟವಾಗೇ ಗೊತ್ತಾಗಿ ಹೋಗಿದೆ. ಹಾಗಾದರೆ ಇದು ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲವೇ? ಅಥವಾ ಇದನ್ನೂ ಕಾಣಲಾರದಷ್ಟು ಅವರು ಮೂರ್ಖರಾಗಿದ್ದಾರೆಯೆ? ಅಥವಾ ಕಾಂಗ್ರೆಸ್ ಅದಾಗಲೇ ತನ್ನ ‘ಪ್ಲಾನ್ ಬಿ’ ಯನ್ನ ಜಾರಿಗೊಳಿಸಿದೆಯೇ?
ಮತ್ತಷ್ಟು ಓದು »

25
ಡಿಸೆ

ಆಪ್ ಎಂಬ ನೀರಮೇಲಣ ಗುಳ್ಳೆ …

– ಅವಿನಾಶ್ ಹೆಗ್ಡೆ

AAPಒಂದು ರಾಜಕೀಯ ಪಕ್ಷಕ್ಕೆ ಸೈದ್ದಾಂತಿಕ ಹಿನ್ನೆಲೆ ಇಲ್ಲದೆ ಇದ್ದರೆ, ಮತ್ತು ಸ್ಪಷ್ಟ ಗುರಿಯಿಲ್ಲದೆ ಇದ್ದರೆ ಏನಾಗಬಹುದು ಅನ್ನುವುದಕ್ಕೆ ಒಂದು ಸ್ಪಷ್ಟ ಉದಾಹರಣೆ ಆಮ್ ಆದ್ಮಿ ಪಾರ್ಟಿ …. ಆಪ್ ರಾಜಕೀಯಕ್ಕೆ ಪ್ರವೇಶ ಕೊಡುತ್ತೇವೆ ಅಂದಾಗ ಅವರನ್ನ ಗಂಭೀರವಾಗಿ ಪರಿಗಣಿಸಿದವರ ಸಂಖ್ಯೆ ತುಂಬಾ ಕಡಿಮೆ.ಆದರೆ ದೆಹಲಿ ಚುನಾವಣಾ ಆಪ್ ಕಡೆ ದೇಶ ನೋಡುವಂತೆ ಮಾಡಿದ್ದು ಸುಳ್ಳಲ್ಲ ..

ಆದರೆ ಬಂಗಾಳದಲ್ಲಿ ೩೪ ವರ್ಷದ ಸರಕಾರವನ್ನ ಬೇರು ಸಮೇತ ಕಿತ್ತು ಹಾಕಿದ್ದ ಮಮತಾ ಬ್ಯಾನರ್ಜಿಗೆ ಕೂಡ ಕೊಡದ ಪ್ರಚಾರವನ್ನ ಮಾಧ್ಯಮಗಳು ಆಪ್ ಗೆ ಕೊಟ್ಟಿದ್ದವು ಮತ್ತು  ಅದರ ಹಿಂದೆ ಮಾದ್ಯಮಗಳ ಸ್ಪಷ್ಟ ಕಮ್ಯುನಿಸ್ಟ್ ಹಿತಾಸಕ್ತಿ ಇತ್ತು,ಬಿಜೆಪಿಯ ಗೆಲುವನ್ನ ಮರೆಮಾಚುವ ಉದ್ದೇಶ ಸ್ಪಷ್ಟವಾಗಿತ್ತು. ಲೋಕಪಾಲ್ ಚಳುವಳಿಯ ಹೋರಾಟವನ್ನ ಮತ್ತು ಅಣ್ಣ ಹಜಾರೆಯವರನ್ನ ಬಳಸಿಕೊಂಡಿದರ ಬಗ್ಗೆ ಮಾಧ್ಯಮಗಳು ಈ ಸಂದರ್ಭದಲ್ಲಿ ಯಾಕೆ ಕಣ್ಣು ಮುಚ್ಚಿಕೊಂಡವು ಅನ್ನುವುದು ಎಲ್ಲರಿಗು ಗೊತ್ತಿರುವಂತದೆ.ಇರಲಿ …..

ಮತ್ತಷ್ಟು ಓದು »

24
ಡಿಸೆ

ಕೇವಲ ಬ್ರಾಹ್ಮಣರ ಟೀಕೆಗೆ ಮಾತ್ರ ಮೀಸಲೇ ಈ ಪತ್ರಿಕೆ?

– ವಿದ್ಯಾ ಕುಲಕರ್ಣಿ

ಬ್ರಾಹ್ಮಣನವೆಂಬರ್ 18 ನೇ ತಾರೀಖಿನಿಂದ ಇವತ್ತಿನ ವರೆಗೆ ವಾತಾ೯ಭಾರತಿ ಪತ್ರಿಕೆಯಲ್ಲಿನ ಅಂಕಣಗಳನ್ನು ನಾನು ಓದುತ್ತಿದ್ದೇನೆ. ಸುಮಾರು ನಾಲ್ಕೈದು ಅಂಕಣಗಳು ಕಾರಣವಿಲ್ಲದೇ ಬ್ರಾಹ್ಮಣರ ಟೀಕೆಯನ್ನು ಮಾಡಿವೆ. ಯಾಕೆ ಹೀಗೆ ಇವರೆಲ್ಲ ಕಾರಣವಿಲ್ಲದೇ ಬ್ರಾಹ್ಮಣರನ್ನು ಹುರಿದು ಮುಕ್ಕುತ್ತಿದ್ದಾರೆ ? ಮನನೊಂದು ಈ ಲೇಖನ ಬರೆಯುತ್ತಿದ್ದೇನೆ.

ಯಾವ ಲೇಖನಗಳಲ್ಲಿ ಬ್ರಾಹ್ಮಣರನ್ನು ಎಳೆದು ತರುವ ಅವಶ್ಯಕತೆಯೇ ಇಲ್ಲವೋ ಅಲ್ಲೆಲ್ಲ ವಿನಾಕಾರಣ ಬ್ರಾಹ್ಮಣರನ್ನು ಎಳೆದು ತಂದು ಗೂಬೆ ಕೂರಿಸಿದ್ದಾರೆ . ಕೆಳಗಿನ ಉಧಾಹರಣೆಗಳಿಂದ ನೀವಿದನ್ನು ತಿಳಿಯಬಹುದು.

1) ವಿಜಯಾ ಮಹೇಶ್ ಎಂಬುವವರು ‘ ರಾಜ ಕನಕನಾಯಕ ಕನಕದಾಸನಾದ ಕಥೆ’ ಎಂಬ ಅಂಕಣದಲ್ಲಿ ಕನಕದಾಸರ ಕೃತಿಗಳ ಬಗ್ಗೆ ವಿಮಶಾ೯ತ್ಮಕವಾಗಿ ಬರೆಯಬಹುದಿತ್ತು. ಆ ಮೂಲಕ ಕನಕರ ಕೆಲವು ಕೃತಿಗಳ ಬಗ್ಗೆ ಸಾಮಾನ್ಯ ಜನತೆಗೆ ವಿಷಯ ತಿಳಿಯುತ್ತಿತ್ತು. ಹೆಚ್ಚಿನ ಜನ ಕನಕರ ಕೃತಿಯಾದ ‘ರಾಮಧಾನ್ಯ ಚರಿತೆ’ಯನ್ನು ‘ರಾಮಧ್ಯಾನ ಚರಿತೆ’ ಎಂದು ತಪ್ಪಾಗಿ ಓದುತ್ತಾರೆ. ಇನ್ನು ಈ ಕೃತಿಗೆ ಅಷ್ಟಾಗಿ ವಿಮಶೆ೯ ಬಂದಿಲ್ಲವೆಂದು ಓದುಗ ವಲಯದಲ್ಲಿ ಅಪಸ್ವರವಿದೆ. ಈ ಎಲ್ಲವನ್ನು ಲೇಖಕಿ ಈ ಅಂಕಣದಲ್ಲಿ ವಿಮಶಿ೯ಸಬಹುದಿತ್ತು. ಆದರೆ ಇವರು ತಮ್ಮ ಲೇಖನವನ್ನು ಕನಕರ ಕೃತಿ ವಿಮಶೆ೯ಗೆ ಅಥವಾ ಅವರ ಜೀವನ ವಿಮಶೆ೯ಗೆ ಮೀಸಲಿಡದೇ ಕೇವಲ ಬ್ರಾಹ್ಮಣರ ಟೀಕೆಗೆ ಮೀಸಲಾಗಿರಿಸಿದ್ದಾರೆ. ಅವರು ಹೇಳುತ್ತಾರೆ ; ಕೃಷ್ಣದೇವರಾಯನ ಒಂದು ಯುದ್ಧದಲ್ಲಿ ಕನಕರ ಅಪಾರ ಶ್ರಮದಿಂದ ಸೋಲುವ ಹಂತದಲ್ಲಿದ್ದ ರಾಯ ಗೆಲುವು ಸಾಧಿಸಿದನಂತೆ.ಗೆಲುವಿನ ಸುದ್ದಿ ಕೇಳಿದ ವ್ಯಾಸರಾಯರು ಕನಕನನ್ನು ಯಾವುದೇ ರೀತಿಯಿಂದ ಗೌರವಿಸದೇ ಇತ್ತ ಕೃಷ್ಣದೇವರಾಯನೂ ಗೌರವಿಸದೆ ಕನಕರು ಬುದ್ಧಿಭ್ರಮಣರಾದರಂತೆ.

ಮತ್ತಷ್ಟು ಓದು »

17
ಡಿಸೆ

ಸಲಿಂಗ ಕಾಮ ಕಾನೂನು ಬಾಹಿರ ಯಾಕೆ?

-ಬಾಲಚಂದ್ರ ಭಟ್

Salinga Kamigaluಸಲಿಂಗ ಕಾಮದ ಬಗ್ಗೆ ಸುಪ್ರೀಮ್ ಕೋರ್ಟ್ ಕೊಟ್ಟ ಬಹಳ ಕಾರಣಗಳಿಗಾಗಿ ಹುಬ್ಬೇರಿಸುವಂತೆ ಮಾಡಿದೆ. ಬಹಳಷ್ಟು ಜನರು ತೀರ್ಪಿನ ಬೆಂಬಲಕ್ಕಿದ್ದರೆ, ಇನ್ನು ಕೆಲವರು ಇದು ಸಲಿಂಗಿಗಳ ಹಕ್ಕು ಚ್ಯುತಿ ಎಂದು ತರ್ಕಿಸುತ್ತಿದ್ದಾರೆ. ಮೂಲತಹ ಸಲಿಂಗ ಕಾಮವೆಂಬುದು ಪೌರಾತ್ಯ, ಹಾಗೂ ಅರಬ್ ದೇಶಗಳಲ್ಲಿ ನಿಷೇಧಕ್ಕೊಳಗಾಗಲು ಮುಖ್ಯ ಕಾರಣ ಅಲ್ಲಿನ ರಿಲಿಜಿಯನ್ ಸಂಸ್ಕೃತಿ. ಮುಸ್ಲೀಮ್ ಕ್ರಿಶ್ಚಿಯನ್ ಮತ್ತಿತರ ಅಬ್ರಾಹಮಿಕ್ ಧರ್ಮಗ್ರಂಥಗಳು ಸಲಿಂಗ ಕಾಮವನ್ನು ಧರ್ಮವಿರೋಧಿ ಎಂದು ಬೋಧಿಸುತ್ತವೆಯಾದ್ದರಿಂದ ಅದನ್ನು ಅಪರಾಧ ಎಂದು ಸ್ವೀಕರಿಸಲಾಗಿತ್ತು. ವೈಜ್ನಾನಿಕ ಎಂದು ಹೇಳಲ್ಪಡುವ ನಾಸ್ತಿಕರ ರಾಜಕೀಯ ಪಕ್ಷ ಕಮ್ಯುನಿಸ್ಮ್ ಕೂಡ ಸಲಿಂಗ ಕಾಮದ ಬಗೆಗೆ ಬೇರೆಯದೆ ನಿರ್ಧಾರವನ್ನು ಹೊಂದಿರಲಿಲ್ಲ. ಬದಲಾಗಿ ರಿಲಿಜಿಯನ್ ಗಳು ಕೊಟ್ಟ ತೀರ್ಪನ್ನೆ ಸಲಿಂಗಿಗಳ ಮೇಲೆ ಹೇರಿತು. ಆದರೆ ಕಾರಣದ ವ್ಯಾಖ್ಯಾನವನ್ನಷ್ಟೆ ಬದಲು ಮಾಡಿತು. ಇದು ‘ಅನಾಗರಿಕ’ ಎಂಬ ಕಾರಣಕ್ಕೆ ಸ್ಟಾಲಿನ್ ನ ರಾಜಕಾರಣದಲ್ಲಿ ಅಪರಾಧವೆಂದು ಪರಿಗಣಿಸಲಾಗಿತ್ತು. (ಅನಾಗರಿಕ ಎಂದು ತೀರ್ಮಾನಿಸುವಲ್ಲಿ ವೈಜ್ನಾನಿಕ ಧೋರಣೆಯೇ ಇಲ್ಲದಿದ್ದದ್ದು ಕಮ್ಯುನಿಸ್ಮ್ ನ ವೈಜ್ನಾನಿಕ ನಿಲುವನ್ನು ಅನುಮಾನಪಡುವಂತಾಗಿದೆ).

ಮತ್ತಷ್ಟು ಓದು »

16
ಡಿಸೆ

ಬೆಂಗಳೂರು ಸುಂದರವಾಗಬೇಕೇ – ಹಾಗಿದ್ದರೆ, ಒಂದು ಸಣ್ಣ SMS ಕಳುಹಿಸಿ!

Katte Sathyaಬೆಂಗಳೂರಿಗರೇ,

  • ನಿಮಗೆ ಬೆಂಗಳೂರಿನ ಕಿತ್ತು ಹೋಗಿರುವ ರಸ್ತೆಗಳನ್ನು ನೋಡಿ ಬೇಸರವಾಗಿದೆಯೇ?
  • ನಿಮಗೆ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಚೆಲ್ಲಿರುವ ಕಸವನ್ನು ಕಂಡು ರೋಸಿ ಹೋಗಿದೆಯೇ?
  • ಬೆಂಗಳೂರಿನಲ್ಲಿ BBMP ಕೆಲಸ ಮಾಡುತ್ತಿದೆಯೋ ಇಲ್ಲವೋ ಎನಿಸುತ್ತಿದೆಯೇ?

ಇದನ್ನೆಲ್ಲಾ ಸರಿಪಡಿಸಲು ನಾವು ಏನೂ ಮಾಡುವುದು ಬೇಡವೇ? ಎಲ್ಲಾ ಜವಾಬ್ದಾರಿಯನ್ನು BBMP ಮೇಲೆ ಹೊರಿಸಿ, ನಾವು ಮನೆಯಲ್ಲಿ ಕಣ್ಮುಚ್ಚಿ ಹಾಯಾಗಿ ನಿದ್ದೆ ಹೋದರೆ, ಎಲ್ಲವೂ ಸರಿ ಹೋಗುತ್ತದೆಯೇ? ಕನಿಷ್ಠ ಪಕ್ಷ ನಮ್ಮ ದೂರುಗಳನ್ನಾದರೂ BBMPಗೆ ತಲುಪಿಸುವುದನ್ನು ಮಾಡಿದ್ದೇವೆಯೇ? ಮನೆಯಲ್ಲೇ ಕುಳಿತು ಗೊಣಗಿದರೆ, ಗೋಳಾಡಿದರೆ, ಏನು ಪ್ರಯೋಜನ? ಅದನ್ನಾದರೂ ರಸ್ತೆಯಲ್ಲಿ ಮಾಡಿದರೆ ಸುದ್ದಿಯಾಗುತ್ತದೆ.

ನಮ್ಮೆಲ್ಲಾ ತೊಂದರೆಗಳನ್ನೂ ನಮ್ಮ ಮೇಯರ್ ಅವರಿಗೆ ತಿಳಿಸೋಣ. ಒಂದು ಸಣ್ಣ SMS ಕಳುಹಿಸಿದರೂ ಸಾಕು. ಅವರು, ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿದ್ದಾರೆ. ಜನರು ತಮ್ಮ ತೊಂದರೆಗಳನ್ನು ತಮಗೇ ನೇರವಾಗಿ ತಿಳಿಸಬಹುದೆಂದು ಹೇಳಿದ್ದಾರೆ.ಅವರು ಹೇಗೆ ಎಲ್ಲವನ್ನು ಸರಿಪಡಿಸುತ್ತಾರೋ ಗೊತ್ತಿಲ್ಲ. ಕನಿಷ್ಠಪಕ್ಷ ನಮ್ಮ ದೂರನ್ನಾದರೂ ಅವರಿಗೆ ತಿಳಿಸೋಣ.

ಮತ್ತಷ್ಟು ಓದು »

4
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭವಿಷ್ಯವನ್ನೇ ಬಲಿಕೊಟ್ಟು ಕೊಡಿಸುತ್ತಿರುವ ಚಿಕಿತ್ಸೆಯ ಕಾರಣದಿಂದಾಗಿ ಇಂದು ಬದುಕಿದ್ದಾನೆ. 2001ರಲ್ಲಿ ಆತನ ಕುಟುಂಬದವರು ಸಹಾಯಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು, ಅಂತೆಯೇ ಅವರಿಗೆ 20ಲಕ್ಷ ರೂ ಸಹಾಯ ಧನದ ಭರವಸೆಯನ್ನು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಸಹಾಯ ನಿಂತುಹೋಯಿತು. ತತ್ಕಾಲಕ್ಕೆ ಗೃಹ ಮಂತ್ರಾಲಯ ಮಧ್ಯಪ್ರವೇಶಿಸಿ ನೆರವನ್ನು ಮುಂದುವರಿಸುವಂತೆ ಸೂಚಿಸಿತು. ಇಷ್ಟಾದ ಮೇಲೂ ಅವರಿಗೆ ದೊರಕಿದ್ದು ದಿ 24 ಜುಲೈ 2007ರ ಒಂದು ಪತ್ರ, ಪತ್ರದ ಒಕ್ಕಣೆಯಲ್ಲಿ “ಸಂವಿಧಾನದ ವಿಧಿ 370ರ ಅನ್ವಯ ಜಮ್ಮು ಕಾಶ್ಮೀರ ಸರ್ಕಾರ ಗೃಹ ಮಂತ್ರಾಲಯದ ಸೂಚನೆಯನ್ನು ಪಾಲಿಸುವ ಬಾಧ್ಯತೆಯನ್ನು ಹೊಂದಿರುವುದಿಲ್ಲ.” ಎಂದು ಉಲ್ಲೇಖಿಸಲಾಗಿತ್ತು !

ಇದೊಂದು 370ನೇ ವಿಧಿಯ ದುರುಪಯೋಗದ ಪ್ರತ್ಯೇಕ ಪ್ರಕರಣವಲ್ಲ. 1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವ್ಯತಿರಿಕ್ತವಾದ ಸ್ವಾರ್ಥ ಉದ್ಧೇಶಗಳ ಪೂರ್ತಿಗಾಗಿ 370ನೇ ವಿಧಿಯ ನಿಂದನೆ ಮತ್ತು ದುರುಪಯೋಗ ಮತ್ತೆ ಮತ್ತೆ ನಡೆಯಲ್ಪಟ್ಟಿದೆ.

ಆಗಿನ ತುರ್ತು ಸನ್ನಿವೇಶಕ್ಕೆ ಹಂಗಾಮಿ ಏರ್ಪಾಡಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಲಾಗಿತ್ತು. ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವೆಸಗಿದ್ದ ಪಾಕಿಸ್ತಾನ ರಾಜ್ಯದ ಭೂಭಾಗವನ್ನು ನ್ಯಾಯಬಾಹಿರವಾಗಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ವಿಷಯವನ್ನು ವಿಶ್ವಸಂಸ್ಥೆಗೆ ಒಯ್ಯಲಾಗಿ ವಿಶ್ವಸಂಸ್ಥೆಯ ಭದ್ರತಾ ಮಂಢಳಿಯು ಕೆಲವು ಪೂರ್ವಾನ್ವಯ ಷರತ್ತುಗಳೊಂದಿಗೆ ಜನಮತಗಣನೆಯನ್ನು ನಡೆಸುವ ಗೊತ್ತುವಳಿಯನ್ನು ಅಂಗೀಕರಿಸಿತು. ಆ ಷರತ್ತುಗಳೆಂದರೆ ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ತನ್ನ ಸೈನ್ಯವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಮತ್ತು ತಾನು ಸ್ಥಾಪಿಸಿದ ಆಡಳಿತ ವ್ಯವಸ್ಥೆಯನ್ನು ತಗೆದುಹಾಕಬೇಕು. ಹಾಗೆಯೇ ಭಾರತದ ಸಂವಿಧಾನವನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ನಿರಾಕರಿಸಲ್ಪಡುವುದು.

ಮತ್ತಷ್ಟು ಓದು »

3
ಡಿಸೆ

ದಿನೇ ದಿನೇ ಹೆಚ್ಚುತ್ತಿರುವ ‘ಮೋದಿ ಜಪ’

– ನರೇಂದ್ರ ಕುಮಾರ ಎಸ್.ಎಸ್

NaModiದಿನಗಳೆದಂತೆ, ೨೦೧೪ರ ಮಹಾ ಚುನಾವಣೆಯು ಹತ್ತಿರ ಬಂದಂತೆ ಭಾರತದಾದ್ಯಂತ ‘ಮೋದಿ ಜಪ’ ಹೆಚ್ಚುತ್ತಿದೆ. ಇದನ್ನು ಕೆಲವರು ‘ಮೋದಿ ಜ್ವರ’, ‘ಮೋದಿತ್ವ’ ಎಂದೂ ಬಣ್ಣಿಸುತ್ತಿರುವರು. ಯಾರು ಏನೇ ಹೇಳಲಿ, ಭಾರತದಾದ್ಯಂತ ನಿತ್ಯವೂ ಚರ್ಚಿಸಲ್ಪಡುತ್ತಿರುವ ಒಂದು ವಿಷಯವೆಂದರೆ “ನರೇಂದ್ರ ಮೋದಿ”. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಾದ ಟ್ವಿಟ್ಟರ್ ಹಾಗೂ ಪೇಸ್^ಬುಕ್ ಗಳಲ್ಲಿ, ಯುವಕರು ನಡೆಸುವ ಚರ್ಚೆಗಳಲ್ಲಿ, ಕ್ಷೌರಿಕನ ಅಂಗಡಿಯಲ್ಲಿ ನಡೆಯುವ ವಾರ್ತಾಲಾಪಗಳಲ್ಲಿ, ಹಳ್ಳಿಗಳಲ್ಲಿ ನಡೆಯುವ ಸಂಭಾಷಣೆಗಳಲ್ಲಿ – ಎಲ್ಲರೂ ಮೋದಿಯ ಕುರಿತು ಮಾತನಾಡುತ್ತಿದ್ದಾರೆ! ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಜನರ ಚರ್ಚೆಗಳಲ್ಲಿ ಇಷ್ಟರಮಟ್ಟಿಗೆ ಹೊಕ್ಕಿರುವ ಮತ್ತೊಂದು ಹೆಸರಿಲ್ಲ.

ನಾನು ಕೆಲವು ದಿನಗಳ ಹಿಂದೆ, ಬೆಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದೆ. ರಸ್ತೆಗಳೆಲ್ಲ ಗುಂಡಿಗಳಿಂದ ಗಬ್ಬೆದ್ದು ಹೋಗಿದ್ದವು. ಈ ರೀತಿ ಸ್ವಲ್ಪ ಹೊತ್ತು ಪ್ರಯಾಣಿಸಿದ ನಂತರ, ನನಗೆ ನಾನೇ “ಯಾವಾಗ ಸರಿ ಹೋಗುತ್ತೋ ನಮ್ಮ ಬೆಂಗಳೂರು” ಎಂದು ಸ್ವಲ್ಪ ಗಟ್ಟಿಯಾಗಿ ಹೇಳಿಕೊಂಡೆ. ಕೂಡಲೇ, ಆಟೋ ರಿಕ್ಷಾದ ಚಾಲಕ, “ಸಾರ್, ನರೇಂದ್ರ ಮೋದಿಯವರಿಗೆ ಒಂದು ಚಾನ್ಸ್ ಕೊಟ್ಟು ನೋಡಿ, ಎಲ್ಲಾ ಸರಿ ಹೋಗುತ್ತೆ” ಎಂದು ಬಿಡೋದೇ!?

ಮತ್ತಷ್ಟು ಓದು »

2
ಡಿಸೆ

ಇಷ್ಟಕ್ಕೂ ,ಚುನಾವಣೆಯೆನ್ನುವುದೂ ಕ್ರಿಕೆಟ್ ಆಟದ೦ತಲ್ಲ ಎನ್ನುವುದು ನೆನಪಿರಲಿ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Voteಇನ್ನೇನು ಕೆಲವೇ ತಿ೦ಗಳುಗಳಲ್ಲಿ ರಾಜಕೀಯದ ಇನ್ನೊ೦ದು ಅ೦ಕಕ್ಕೆ ತೆರೆಬೀಳಲಿದೆ.ಚುನಾವಣೆಯೆ೦ಬ ಮತ್ತೊ೦ದು ಮಹಾಪರ್ವಕ್ಕೆ ದೇಶ ಸಜ್ಜಾಗುತ್ತಿದೆ.ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರಕ್ಕೆ ರಣತ೦ತ್ರಗಳನ್ನು ರೂಪಿಸಿವೆ,ಪ್ರಚಾರ ಆರ೦ಭಿಸಿವೆ.ಈ ಬಾರಿ ದೇಶದ ಜನತೆಯೂ ಅಷ್ಟೇ ಉತ್ಸಾಹದಿ೦ದ ಚುನಾವಣೆಯನ್ನು ಎದುರು ನೋಡುತ್ತಿದ್ದಾರೆ.ಸಾಮಾಜಿಕ ತಾಣಗಳಲ್ಲಿ ನೆಚ್ಚಿನ ನಾಯಕರ ಬಗ್ಗೆ ಬಿಸಿ ಬಿಸಿ ಚರ್ಚೆಗಳಾಗುತ್ತಿವೆ,ವಾಗ್ವಾದಗಳಾಗುತ್ತಿವೆ.ದಿನ ಪತ್ರಿಕೆಗಳಲ್ಲಿ ಪು೦ಖಾನುಪು೦ಖವಾಗಿ ಪ್ರತಿಯೊ೦ದು ರಾಜಕೀಯ ಪಕ್ಷದ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಪರ ವಿರೋಧ ಲೇಖನಗಳು ಪ್ರಕಟವಾಗುತ್ತಿವೆ.ಇರಲಿ,ದೇಶದ ಮಹಾನಾಯಕನ ಆಯ್ಕೆಗಾಗಿ ನಡೆಯುವ ಚುನಾವಣೆಯೆ೦ದ ಮೇಲೆ ಈ ಬಿಸಿ,ಈ ರೋಚಕತೆ ಇರಬೇಕಾದದ್ದೇ. ಮತದಾನವೆನ್ನುವುದು ಪ್ರಜೆಗಳ ವೈಯಕ್ತಿಕ ವಿಷಯವೆ೦ಬುದು ಎಲ್ಲರಿಗೂ ಗೊತ್ತಿರುವ ವಿಷಯವೇ.ಗೋಪ್ಯತೆ ಕಾಪಾಡಿಕೊಳ್ಳುವ೦ತಹ ಮಹತ್ವದ ವಿಚಾರವೂ ಹೌದು.ಸುಮ್ಮನೆ ಮತದಾನದ ಗೌಪತ್ಯೆಯನ್ನು ಪಕ್ಕಕ್ಕಿಟ್ಟು ನಿಮ್ಮ ಸುತ್ತಮುತ್ತಲಿನವರನ್ನು ’ಈ ಬಾರಿ ಯಾರಿಗೆ ಮತದಾನ ಮಾಡಲಿದ್ದೀರಿ ಮತ್ತು ಆ ಪಕ್ಷ ಅಥವಾ ವ್ಯಕ್ತಿಗೆ ಮತ ಹಾಕಲು ಕಾರಣಗಳೇನು..’? ಎ೦ದು ಕೇಳಿ ನೋಡಿ.ನಿಮಗೆ ತರಹೇವಾರಿ ಉತ್ತರಗಳು ಸಿಗಬಹುದು.

ಮತ್ತಷ್ಟು ಓದು »