ಸಿದ್ಧಗಂಗಾ ಶ್ರೀಗಳಿಗೇಕಿಲ್ಲ ಭಾರತರತ್ನ?
– ರಾಕೇಶ್ ಶೆಟ್ಟಿ
“ಮೂರು ಬಿಟ್ಟೋರು ಊರಿಗೇ ದೊಡ್ಡೋರು” ಅನ್ನೋ. ಗಾದೆ ಮಾತು ಯಾರಿಗಾದರೂ ಸೂಕ್ತವಾಗಿ ಅನ್ವಯವಾಗುವುದಿದ್ದರೆ ಅದು ಕಾಂಗ್ರೆಸ್ ಪಕ್ಷ ಹಾಗೂ ಅದನ್ನು ಬೆಂಬಲಿಸುವ ಗಂಜಿಗಿರಾಕಿಗಳಿಗೆ. ಕಾರಣವೇನು ಗೊತ್ತೇ, ತನ್ನ ಪಕ್ಷದ ಇತಿಹಾಸದಲ್ಲಿ ಮಾಡಲಾಗಿರುವ ಅನ್ಯಾಯಗಳ ಪಟ್ಟಿ ಅಕ್ಷಯಪಾತ್ರೆಯಂತದ್ದು ಎನ್ನುವುದು ಗೊತ್ತಿದ್ದರೂ ಬೇರೆ ಪಕ್ಷಗಳನ್ನು ಟೀಕಿಸಲು ಹೊರಟಾಗ ಕಾಂಗೈ ನಾಯಕರು ನಾಚಿಕೆ ಬಿಟ್ಟು ನಿಲ್ಲುತ್ತಾರೆ. ಇದಕ್ಕೆ ಇತ್ತೀಚಿನ ಉದಾಹರಣೆ, ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡದಿರುವ ವಿವಾದ.
ಇವತ್ತಿಗೆ ಸಿದ್ದರಾಮಯ್ಯನವರಿಂದ ಹಿಡಿದು ಕಾಂಗಿ ಮರಿಪುಢಾರಿಗಳೆಲ್ಲ ಬಿಜೆಪಿಯನ್ನು ಈ ಬಗ್ಗೆ ಪ್ರಶ್ನಿಸುತ್ತಿವೆ.ಆದರೆ,ಹಾಗೆ ಪ್ರಶ್ನಿಸುವ ಭರದಲ್ಲಿ ದೇಶದ ಉನ್ನತ-ಅತ್ಯುನ್ನತ ಪ್ರಶಸ್ತಿಗಳ ಮಾನವನ್ನು ಮೂರು ಬಿಟ್ಟವರ ಪಕ್ಷ ಹೇಗೆ ಕಳೆದಿದೆ ಎನ್ನುವುದನ್ನು ಇವರು ಮರೆತಿರುವಂತಿದೆ.
ಭಗವದ್ಗೀತೆ ಬರ್ನ್, ವಿಚಾರಕ್ರಾಂತಿಯ ಯೂ ಟರ್ನ್?
– ತುರುವೇಕೆರೆ ಪ್ರಸಾದ್
ತುರುವೇಕೆರೆ-572227
ಇಂದು ನಾವು ಕುವೆಂಪುರವರ 114ನೇ ಜನ್ಮದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸುತ್ತಿದ್ದೇವೆ. ಕುವೆಂಪುರವರು ಶ್ರೇಷ್ಠ ಕವಿ, ನಾಟಕಕಾರ, ಕಾದಂಬರಿಕಾರ ಎಲ್ಲವೂ ಆಗಿದ್ದರು. ಭಾವ, ಶ್ರದ್ಧೆ,ಆಧ್ಯಾತ್ಮ ಹಾಗೂ ನವರಸಗಳ ವಿಕಾರ, ವಿಕೃತಿ, ಅಬ್ಬರ, ಆಕ್ರೋಶವಿಲ್ಲದ ಸಮನ್ವಯದ ಅಭಿವ್ಯಕ್ತಿಯ ಸಂತರೆಂದೇ ಅವರನ್ನು ರಸಋಷಿ ಎಂದು ಕರೆಯುವುದು. ಇವೆಲ್ಲಕ್ಕಿಂತ ಹೆಚ್ಚಾಗಿ ಕುವೆಂಪು ತೀವ್ರ ವಿಚಾರವಾದಿಯಾಗಿದ್ದರು. ವಿಚಾರವಾದಿಯಾಗಿದ್ದುಕೊಂಡೇ ಅವರು ಆಧ್ಯಾತ್ಮ ಜೀವಿಯೂ, ಆಧ್ಮಾತ್ಮವಾದಿಯೂ ಆಗಿದ್ದರೆಂಬುದು ಅತ್ಯಂತ ಶ್ರೇಷ್ಠ ಹಾಗೂ ಹೆಗ್ಗಳಿಕೆಯ ಸಂಗತಿ. ವಿಚಾರವಾದಿಯಾಗಿ ಅವರು ಜಾತಿಧರ್ಮ, ವರ್ಣಾಶ್ರಮ ಪದ್ಧತಿಯನ್ನು ಉಗ್ರವಾಗಿ ಖಂಡಿಸುತ್ತಿದ್ದರು. ಅರ್ಥಹೀನ ಆಚರಣೆ, ಮೌಢ್ಯ, ಕಂದಾಚಾರಗಳನ್ನು ಧಿಕ್ಕರಿಸುತ್ತಿದ್ದರು. ಮತ್ತಷ್ಟು ಓದು 
ಶಬರಿಮಲೆ: ಇದು ಹಿಂದೂಗಳ ಸೋಲೇ ?
– ವರುಣ್ ಕುಮಾರ್
ಪುತ್ತೂರು
ಕಳೆದ ಕೆಲ ತಿಂಗಳುಗಳಿಂದ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಎಂದರೆ ಅದು ಶಬರಿಮಲೆಗೆ ಮಹಿಳಾ ಪ್ರವೇಶದ ಕುರಿತಾಗಿ ಬಂದಂತಹ ತೀರ್ಪು. ಈ ಕುರಿತಾಗಿ ಚರ್ಚೆಗಳು, ವಾದ- ವಿವಾದಗಳು,ಸಂಭಾಷಣೆಗಳು ಈಗ ಅತಿ ಸಾಮಾನ್ಯ. ಆದರೆ ಶಬರಿಮಲೆಯು ಇಂತಹ ಚರ್ಚೆಗಳಿಗೆ ಗುರಿಯಾಗುತ್ತಿರುವುದು ಇದು ಮೊದಲ ಬಾರಿಯೇನಲ್ಲ. ಇದರ ಕುರಿತಾದ ಒಂದು ಸಣ್ಣ ಅವಲೋಕನೆಯು ಈ ಕೆಳಗಿನಂತಿದೆ. ಮತ್ತಷ್ಟು ಓದು 
ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳೇ ಮುಖ್ಯಮಂತ್ರಿಗಳೇ?
– ರಾಕೇಶ್ ಶೆಟ್ಟಿ
ಇಂಗ್ಲೀಷ್ ಸುದ್ದಿ ವಾಹಿನಿಗಳಲ್ಲಿ ತಮ್ಮ ಪ್ಯಾನೆಲ್ ಚರ್ಚೆಗಳ ಮೂಲಕ,ಹಾಗೂ ಪ್ಯಾನೆಲಿಸ್ಟ್-ರಾಜಕಾರಣಿಗಳಿಗೆ ನಿರ್ಭಿತಿಯಿಂದ ಪ್ರಶ್ನೆ ಕೇಳುವ ಮೂಲಕ ದೇಶದ ಗಮನ ಸೆಳೆದ ಪತ್ರಕರ್ತ ಅರ್ನಬ್ ಗೋಸಾಮಿಯವರಂತೆಯೇ ಕರ್ನಾಟಕ ರಾಜ್ಯದ ಪತ್ರಿಕಾ ರಂಗದಲ್ಲಿ ತಮ್ಮ ನೇರಾ ನೇರ ಪ್ರಶ್ನೆಗಳು ಹಾಗೂ ಸತ್ಯ-ನ್ಯಾಯದ ಪರ ದನಿಯಾದವರು ಸುವರ್ಣ ಸುದ್ದಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನಮಕ್ಕನವರ್.ಇವರು ನಡೆಸಿಕೊಡುವ ಲೆಫ್ಟ್-ರೈಟ್-ಸೆಂಟರ್ ಎಂಬ ಚರ್ಚಾ ಕಾರ್ಯಕ್ರಮದಲ್ಲಿ ದಾಖಲೆಗಳನ್ನು ಮುಂದಿಟ್ಟುಕೊಂಡು, ಸುತ್ತಿ ಬಳಸಿ ಹೊಗಳಿಕೆಯ ಮಾತನಾಡದೇ ಸತ್ಯವನ್ನು ಸ್ಪಷ್ಟವಾಗಿ ಹೇಳುವುದು ಅಜಿತ್ ಶೈಲಿ.ಐತಿಹಾಸಿಕ ಸತ್ಯವನ್ನು ನೇರವಾಗಿ ಹೇಳಿದ್ದರಿಂದಾಗಿ ಈಗ ಅಜಿತ್ ಹನಮಕ್ಕನವರ್ ಸಂಕಟದಲ್ಲಿದ್ದಾರೆ.
ಕಳೆದ ಗುರುವಾರ, ಪ್ರೊ.ಭಗವಾನರನ ಕುರಿತ ಚರ್ಚೆಯ ಸಮಯದಲ್ಲಿ,ಭಗವಾನರನ ಪರ ವಹಿಸಿದ್ದ ಮಹೇಶ್ ಚಂದ್ರಗುರು ಅವರ “ಯಾರೂ ಪ್ರಶ್ನಾತೀತರಲ್ಲ” ಎನ್ನುವ ಮಾತಿಗೆ ಪ್ರತಿಯಾಗಿ ಅಜಿತ್, ಹೌದು ಸರ್ ನಿಮ್ಮ ಮಾತು ಒಪ್ಪುತ್ತೇನೆ ಯಾರೂ ಕೂಡ ಪ್ರಶ್ನಾತೀತರಲ್ಲ. ಆದರೆ ಯಾರನ್ನು ಪ್ರಶ್ನಿಸಲು ನೀವುಗಳು (ಬುದ್ಧಿಜೀವಿಗಳು) ಆರಿಸಿಕೊಳ್ಳುತ್ತೀರಿ ಎಂದರೆ,ಯಾರನ್ನು ಪ್ರಶ್ನಿಸಿದರೆ ಅತ್ಯಂತ ಕಡಿಮೆ ಅಪಾಯ ಆಗಬಹುದೋ ಅಂತವರನ್ನು ಮಾತ್ರ ಆರಿಸಿಕೊಳ್ಳುತ್ತೀರಿ. ರಾಮನನ್ನು ಪ್ರಶ್ನಿಸಬಹುದು.೫೩ ವಯಸ್ಸಿನಲ್ಲಿ ೬ ವರ್ಷದ ಹೆಣ್ಣುಮಗುವನ್ನು ಮದುವೆಯಾದವರನ್ನು ಪ್ರಶ್ನಿಸುವ ಧೈರ್ಯ ನಿಮಗೆ ಬರುವುದಿಲ್ಲ ಎನ್ನುವ ಅರ್ಥದಲ್ಲಿ ಮಾತನ್ನಾಡಿದ್ದರು.ಅಷ್ಟೇ ನೋಡಿ ಶುರುವಾಯಿತು!
ಮೋದಿರಾಗಾ ಸರಿಸಿ ಮತ ಹಾಕಲು ಮತ್ತೊಂದು ಹೆಸರು ಹೇಳುವಿರಾ?
– ಗೋಪಾಲಕೃಷ್ಣ
ಚಿಕ್ಕಮಗಳೂರು
ಹಾಗೆ ಒಮ್ಮೆ ಕಲ್ಪಿಸಿಕೊಳ್ಳಿ; 2014ರಲ್ಲಿ ನರೇಂದ್ರ ಮೋದಿಯವರಿಗೆ ಬಹುಮತ ಸಿಗದೇ ಇದ್ದಿದ್ದರೆ, 18 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ, 16 ಸದಸ್ಯರನ್ನು ಹೊಂದಿದ್ದ ಚಂದ್ರಬಾಬು ನಾಯ್ಡು, 37 ಸ್ಥಾನ ಹೊಂದಿದ್ದ ಎಐಎಡಿಎಂಕೆ ಹೇಗೆಗೆಲ್ಲಾ ‘ಪೊಲಿಟಿಕಲ್ ಬ್ಲಾಕ್ಮೇಲ್’ ಮಾಡಬಹುದಿತ್ತು! ಅಂದು ಎನ್ಡಿಎ ಮೈತ್ರಿಕೂಟದ 336 ಸದಸ್ಯರಲ್ಲಿ 282 ಸ್ಥಾನಗಳೊಂದಿಗೆ ಬಿಜೆಪಿ ಸ್ಪಷ್ಟ ಬಹುಮತ ಪಡೆದಿತ್ತು. ಬಿಜೆಪಿ ಎನ್ನುವುದಕ್ಕಿಂತಲೂ ನರೇಂದ್ರ ಮೋದಿಯವರಿಗಾಗಿ ದೇಶ ನೀಡಿದ್ದ ಸ್ಪಷ್ಟ ಜನಾದೇಶವದು. ಹೀಗಿದ್ದರೂ ಶಿವಸೇನೆ ಪ್ರತಿಬಾರಿಯೂ ಕಿತಾಪತಿ ಮಾಡುತ್ತಲೇ ಬರುತ್ತಿದೆ. ಚಂದ್ರಬಾಬು ನಾಯ್ಡು ಅತ್ತಲಿಂದ ಇತ್ತ ಇತ್ತಲಿಂದ ಅತ್ತ ಜಿಗಿಯುತ್ತಲೇ ಇದ್ದಾರೆ. ಇನ್ನು ಜಯಲಲಿತಾ ಬದುಕಿದ್ದಿದ್ದರೆ ಅದು ಇನ್ನೊಂದು ರೀತಿಯ ರಾಜಕಾರಣವಾಗುತ್ತಿತ್ತು ಬಿಡಿ. ಮತ್ತಷ್ಟು ಓದು 
ಕನ್ನಡಿಗನೊಬ್ಬನ ಕ್ಲಾಸಿಕ್ ವಿಮಾನಗಳು ಆಗಸದಲ್ಲಿ ಹಾರುವುದನ್ನು ನೋಡಲು ಇನ್ನೆಷ್ಟು ದಶಕಗಳು ಕಾಯಬೇಕೋ?!
– ಸುಜಿತ್ ಕುಮಾರ್
‘ಈತ ನಮ್ಮ ನೂರು ಬಿಲಿಯನ್ ಕಂಪನಿಯ ಚೇರ್ಮ್ಯಾನ್. ಅಪ್ಪನ ಕಂಪನಿಯನ್ನು ಮುನ್ನಡಿಸಿಕೊಂಡು ಬಂದು ಎದ್ವಾ ತದ್ವಾ ಸಾಲವನ್ನು ಮಾಡಿ ತೀರಿಸಲಾಗದೆ ಇಂದು ವಿದೇಶದಲ್ಲಿ ಅಡಗಿ ಕೂತಿದ್ದಾನೆ. ಆತ ಮಾಡಿರುವ ಸಾಲದ ಮೊತ್ತ ಹೆಚ್ಚು ಕಡಿಮೆ ನಮ್ಮ ಇಡೀ ಕಂಪನಿಯ ರೆವೆನ್ಯೂ ಮೊತ್ತಕ್ಕೆ ಸಮ. ನಮ್ಮ ಕಂಪನಿಯನ್ನಷ್ಟೇ ಅಲ್ಲದೆ ನಮ್ಮನ್ನು ನಂಬಿಕೊಂಡು ಕೂತಿರುವ ಇನ್ನೂ ಹತ್ತಾರು ಕಂಪನಿಗಳ ಭವಿಷ್ಯದೊಟ್ಟಿಗೆ ಚೆಲ್ಲಾಡಿ ಮರೆಯಾದವನಿವ’ ಎಂಬ ಮಾತುಗಳಿಗೆ ಪೂರಕವಾಗಿರುವ ಹಾಗು ಅದೇ ಪೇಜಿನಲ್ಲಿ ಕಂಪನಿಯ ಇತರ ಉದ್ಯೋಗಿಗಳನ್ನು Mr. ಅಥವ Mrs. ಎಂಬ ಗೌರವ ಸೂಚಕಗಳನ್ನು ಬಳಸಿ ಸಂಭೋದಿಸಿವುದು ಒಂದೆಡೆಯಾದರೆ ಇನ್ನೊಂದೆಡೆ ಅಲ್ಲೇ ಕಂಪನಿಯ ಚೇರ್ಮ್ಯಾನ್ ನನ್ನು ಕೇವಲ ಹೆಸರಿನಿಂದಷ್ಟೇ ಕರೆಯುವ ಕಂಪನಿಯ ವೆಬ್ಸೈಟ್ ಅನ್ನು ಎಲ್ಲಿಯಾದರೂ ಕಂಡಿರುವಿರಾ? ಇಲ್ಲವಾದರೆ ಒಂದು ಕಾಲಕ್ಕೆ ಇಡೀ ವಿಶ್ವದಲ್ಲೇ ಟಾಪ್ ಸ್ಪಿರಿಟ್ ಕಂಪನಿಗಳಲ್ಲಿ ಒಂದಾಗಿ ಇಂದು ಅಕ್ಷರ ಸಹ ತನ್ನ ಉಳಿವಿಗಾಗಿ ಪರದಾಡುತ್ತಿರುವ ಯುಬಿ.ಗ್ರೂಪ್ಸ್ ನ ವೆಬ್ಸೈಟ್ ಗೆ ಒಮ್ಮೆ ಭೇಟಿ ಕೊಡಿ. ತನಗೆ ಅನ್ನ ಕೊಟ್ಟ ಒಡೆಯನಾದರೂ, ತಪ್ಪು ಮಾಡಿದಾಗ ಆತನನ್ನು ಕಳ್ಳನೆಂದೇ ಕರೆಯುತ್ತೀವಿ ಎಂಬಂತಿದೆ ಅಲ್ಲಿಯ ಬೋರ್ಡ್ ಆಫ್ ಡೈರೆಕ್ಟರ್ ಗಳ ಮಾತುಗಳು. ಮತ್ತಷ್ಟು ಓದು 
ಮೋದಿ ಮತ್ತೊಮ್ಮೆ ಎನ್ನುವುದಕ್ಕಿಂತ, ಮೋದಿ ಮತ್ತೆ ಮತ್ತೆ ಎನ್ನಿ!
– ಸಾಗರ ಮುಧೋಳ
ಕಳೆದ ಒಂದು ದಶಕದ ಹಿಂದೆ ಯಾರಾದರೂ ಒಬ್ಬ ವಿದ್ಯಾರ್ಥಿ ಅಥವಾ ಯುವಕ ತಾನೂ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಬೇಕು ಅಂದುಕೊಂಡಿದ್ದರೆ, ಅದು ಅವನ ದೃಷ್ಟಿಯಲ್ಲಿ ವಿಜ್ಞಾನಿ, ಅಧ್ಯಾಪಕ, ಅಧಿಕಾರಿ, ವೈದ್ಯ ಹೀಗೆ ಹಲವು ಬಗೆಯಲ್ಲಿ ಯೋಚಿಸುತ್ತಿದ್ದ. ಆದರೆ, ತಪ್ಪಿಯೂ ನಾನೊಬ್ಬ ರಾಜಕಾರಣಿಯಾಗಬೇಕೆಂದು ಚಿಂತಿಸುತ್ತಿರಲಿಲ್ಲ. ರಾಜಕಾರಣವೆಂದರೆ ಅದೊಂದು ಸಮಾಜದ ಬಹು ಜನರ ಆಶೋತ್ತರಗಳಿಂದ ಅಸ್ಪೃಶ್ಯವಾಗಿಯೇ ಉಳಿದ ಕ್ಷೇತ್ರ. ಅಲ್ಲಿ ಮಾನವೀಯತೆ, ಪ್ರಾಮಾಣಿಕತೆ, ಒಳ್ಳೆಯತನಕ್ಕೆ ಬೆಲೆಯೇ ಇಲ್ಲ. ರಾಜಕಾರಣವಿರುವುದೇ ದುಡ್ಡು ಮಾಡುವುದಕ್ಕೆ, ಜನರನ್ನು ಮೋಸ ಮಾಡುವುದಕ್ಕೆ ಎನ್ನುವುದು ನಾಡಿನ ಹಲವರಿಂದ ಅಸ್ಖಲಿತವಾಗಿ ಹೊಮ್ಮುತ್ತಿದ್ದ ವಾಣಿ. ಯಾರೊಬ್ಬರೂ ಊಹಿಸಿರಲಿಲ್ಲ! 2014 ರ ಸಂದರ್ಭದಿಂದ ಈ ದೇಶದಲ್ಲಿ ಬಾಲಿವುಡ್, ಕ್ರಿಕೆಟ್ ಗಿಂತ ಅತಿ ಹೆಚ್ಚು ಚರ್ಚೆ ಮತ್ತು ಮೆಚ್ಚುಗೆ ಪಡೆದ ವಿಷಯ ರಾಷ್ಟ್ರದ ರಾಜಕೀಯವೇ ಆಯಿತು. ಮೋದಿ ಎಂದರೆ ಅವರೊಬ್ಬ Political leader ಅಲ್ಲ, ಬದಲಾಗಿ ದೇಶದ ಬ್ರಾಂಡ್! ಮೋದಿ ಟೀ,ಮೋದಿ ಕುರ್ತಾ,ಮೋದಿ ಜಾಕೆಟ್ ಎಲ್ಲವೂ ಬ್ರಾಂಡ್. ಮೋದಿಗೆ ಸಂಬಂಧಿಸಿರುವುದೆಲ್ಲವು ಬ್ರಾಂಡ್. ಹಿಂದೆ ಅಪ್ಪ -ಅಮ್ಮ ಮನೆಯಲ್ಲಿ ರಾತ್ರಿ ನ್ಯೂಸ್ ನೋಡುತ್ತಿರಬೇಕಾದರೆ, ತಮ್ಮನ್ನು ಇಂದಿನ ಕ್ರಿಕೆಟ್ ಮ್ಯಾಚನ್ನು ನೋಡುವುದರಿಂದ ತಪ್ಪಿಸಿರುವವರ ಕಡೆ ಮಕ್ಕಳು ಶಪಿಸುತ್ತಾ ಮೂಗು ಮುರಿಯುತ್ತಿದ್ದರು. ಆದರೆ ಮೋದಿ ಎಂಟ್ರಿ ಕೊಟ್ಟ ಮೇಲೆ ಸಕುಟುಂಬ ಸಮೇತರಾಗಿ ಮನೆಯ ಟಿ.ವಿ. ಪರದೆಯ ಮೇಲೆ ಮೋದಿ ಗಾಥೆಯನ್ನು ನೋಡಲು ಶುರುಹಚ್ಚಿದರು. 2014 ರಲ್ಲಿ ಮೋದಿ ಗೆಲ್ಲುವುದು ಅನಿವಾರ್ಯ ಮಾತ್ರವಲ್ಲ, ಅಂತಿಮವಾದ ಪೂರ್ವ ನಿಯೋಜಿತ ತೀರ್ಮಾನವಾಗಿತ್ತು. Breaking news ಗಾಗಿ ಹಪಹಪಿಸುತ್ತಿದ್ದ ನ್ಯೂಸ್ ಚಾನೆಲ್ ಗಳಿಗೆ ಮೋದಿಯಿಂದ ಪ್ರತಿದಿನ Breaking news ಸಿಗುವ ಹಾಗಾಯಿತು. ಕೊನೆಗೆ ಮೋದಿ ಸುನಾಮಿಯ ಎದುರು ಪ್ರತಿಪಕ್ಷಗಳು ಕೊಚ್ಚಿಕೊಂಡು ಹೋದವು. ಅತ್ತ ನಾಯಕತ್ವವುಯಿಲ್ಲದೆ, ಇತ್ತ ಧ್ಯೇಯೋದ್ದೇಶಗಳು ಇಲ್ಲದ ಪ್ರತಿಪಕ್ಷಗಳು ಮೋದಿಯ ವಿಜಯಕ್ಕೆ ತಲೆ ಬಾಗಲೇ ಬೇಕಾಯಿತು. ಮೋದಿ ಈ ದೇಶದ ಪ್ರಧಾನಮಂತ್ರಿ ಎಂದು ಜನ ಹೇಳುತ್ತಿರುವಾಗ, ” ನಾನು ಈ ದೇಶದ ಪ್ರಧಾನಮಂತ್ರಿಯಲ್ಲ, 125 ಕೋಟಿ ಭಾರತೀಯರ ಪ್ರಧಾನ ಸೇವಕ” ಎಂದ ಮೋದಿಯ ಕೃತಜ್ಞತಾ ಭಾವಕ್ಕೆ ಇಡೀ ದೇಶ ಶರಣೆಂದಿತು. ಮತ್ತಷ್ಟು ಓದು 
ಅರುಣ್ ನಂದಗಿರಿಯ ಆನಂದದ ಗೆರೆಗಳು!
– ತುರುವೇಕೆರೆ ಪ್ರಸಾದ್
ಮಿತ್ರ ಅರುಣ್ ನಂದಗಿರಿ ವಿಧಿವಶರಾದರು ಎಂದು ಕೇಳಿ ಬಹಳ ದುಃಖವಾಯಿತು. ‘ Smile is a small curve which makes many things straight’ ಅನ್ನೋ ಒಂದು ಮಾತಿದೆ. ಅಂದ್ರೆ ನಗು ಎನ್ನುವ ಒಂದು ಸಣ್ಣ ವಕ್ರಗೆರೆ ಬದುಕಿನ ಎಷ್ಟೋ ಸಂಗತಿಗಳನ್ನು, ಡೊಂಕುಗಳನ್ನ ನೇರ ಮಾಡುತ್ತದೆ ಅಂತ. ಸ್ನೇಹಿತ ಅರುಣ್ ನಂದಗಿರಿ ತನ್ನ ಮೂಳೆಗಳೆಲ್ಲಾ ವಕ್ರವಾಗಿದ್ದರೂ ಸಹ ಜನರ ಬದುಕಿನ ಅಸಂಬದ್ಧತೆಗಳನ್ನ ತನ್ನ ನಗೆ ಗೆರೆಗಳ ಮೂಲಕ ನೇರವಾಗಿಸುವ ಛಲದಂಕ ಮಲ್ಲರಾಗಿದ್ದರು. ಮತ್ತಷ್ಟು ಓದು 
ಸ್ವದೇಶೀ ಆಂದೋಲನದ ಭಗೀರಥ: ರಾಜೀವ ದೀಕ್ಷಿತ!
– ತುರುವೇಕೆರೆ ಪ್ರಸಾದ್
ಕಂಪ್ಯೂಟರ್ ಇಂಜನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಒಬ್ಬ ಪ್ರತಿಭಾವಂತ ಯುವಕ, ಇಲೆಕ್ಟ್ರಾನಿಕ್ ಹಾಗೂ ಟೆಲಿಕಮ್ಯುನಿಕೇಶನ್ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ಒಬ್ಬ ಮೇಧಾವಿ,ಹೆಸರಾಂತ ಸಂಶೋಧನಾ ಸಂಸ್ಥೆ ಸಿ.ಎಸ್.ಐ.ಆರ್ನಲ್ಲಿ ಸೆಟೆಲೈಟ್ ಕಮ್ಯುನಿಕೇಶನ್ನಲ್ಲಿ ವಿಜ್ಞಾನಿಯಾಗಿ ದುಡಿದಿದ್ದವರು, ಮನಸ್ಸು ಮಾಡಿದ್ದರೆ ವಿದೇಶಗಳಲ್ಲಿ ವೈಭವದ ಐಶಾರಾಮಿ ಜೀವನ ನಡೆಸಬಹುದಾಗಿದ್ದ ಒಬ್ಬ ಯುವಕ ಈ ದೇಶದ ದುರ್ಘಟನೆಯೊಂದರ ಸಂತ್ರಸ್ತರಿಗಾಗಿ ತನ್ನ ಸುಖ, ಸಂತೋಷ ಎಲ್ಲಾ ತ್ಯಾಗ ಮಾಡುತ್ತಾರೆ. ಸಂತ್ರಸ್ತರಿಗೆ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸಿಕೊಡುವುದಕ್ಕಾಗಿ ಒಂದು ಅಂದೋಲನವನ್ನೇ ಆರಂಭಿಸಿ ತನ್ನ ಜೀವನವನ್ನೇ ಅದಕ್ಕಾಗಿ ಮೀಸಲಿಡುತ್ತಾರೆ. ಭಾರತ ಎದೆಂದಿಗೂ ಎದೆಯುಬ್ಬಿಸಿ, ತಲೆಎತ್ತಿ ಹೆಮ್ಮೆಯಿಂದ ಕೂಗಿ ಹೇಳಿಕೊಳ್ಳಬಹುದಾದ ಆ ಅದಮ್ಯ ಚೇತನವೇ ದೇಶಭಕ್ತ ರಾಜೀವ್ ದೀಕ್ಷಿತ್, ಅವರು ಪ್ರಾರಂಭಿಸಿದ ಆಂದೋಲನವೇ ‘ಆಜಾದಿ ಬಚಾವೋ’ ಆಂದೋಲನ. ಮತ್ತಷ್ಟು ಓದು 
ನಮೋ “ಅರಿಹಂತಾಯ” : ವಿಕ್ಷಿಪ್ತ ಶಕ್ತಿಗಳ ಅಣ್ವಸ್ತ್ರ ಬೆದರಿಕೆಗೆ ಭಾರತದ ಸುರಕ್ಷಾ ಕವಚ.
– ಶ್ರೇಯಾಂಕ ಎಸ್ ರಾನಡೆ
“ಅರಿಹಂತ” ಅಂದರೆ ಸಂಸ್ಕೃತ ಭಾಷೆಯಲ್ಲಿ “ಶತ್ರುಗಳ ವಿನಾಶಕ” ಎಂದರ್ಥ ( ಅರಿ=ಶತ್ರು. ಹಂತ = ವಿನಾಶಕ ). ‘ಐಎನ್ಎಸ್ ಅರಿಹಂತ್’ ಭಾರತದ ಮೊದಲ ಸ್ವದೇಶಿ ನಿರ್ಮಿತ ಅಣ್ವಸ್ತ್ರ ಜಲಾಂತರ್ಗಾಮಿ ನೌಕೆ. ನವೆಂಬರ್ 5 ಕ್ಕೆ ಅರಿಹಂತ ಹಿಂದೂ ಮಹಾಸಾಗರದಲ್ಲಿ ಸುಮಾರು 300 ಮೀಟರ್ ಆಳಕ್ಕೆ ಧುಮುಕಿ ಮೊದಲ ಹಂತದ ಗಸ್ತು ಪರೀಕ್ಷಣವನ್ನು ಯಶಸ್ವಿಯಾಗಿ ಪೂರೈಸಿದೆ. ಇದರ ಲೋಕಾರ್ಪಣೆಯೊಂದಿಗೆ ಭಾರತ ದೇಶ ಭೂ(ಪೃಥ್ವಿ, ಅಗ್ನಿ ಕ್ಷಿಪಣಿಗಳು), ವಾಯು ಹಾಗೂ ಜಲ ಹೀಗೆ ಮೂರೂ ಮಾಧ್ಯಮಗಳಲ್ಲಿಯೂ ನ್ಯೂಕ್ಲಿಯರ್ ಶಸ್ತ್ರ ಬಲವಿರುವ “ಅಣ್ವಸ್ತ್ರ ತ್ರಿವಳಿ” ಶಕ್ತಿಯಾಗಿದೆ. ರಷ್ಯ, ಅಮೆರಿಕ, ಫ್ರಾನ್ಸ್, ಇಂಗ್ಲೆಂಡ್, ಚೀನ ದೇಶಗಳನ್ನು ಹೊರತುಪಡಿಸಿ ಪರಮಾಣು ತಂತ್ರಜ್ಞಾನದ ಜಲಾಂತರ್ಗಾಮಿಯನ್ನು ಅಭಿವೃದ್ಧಿಪಡಿಸಿ ಬಳಸುತ್ತಿರುವ “ಅಣ್ವಸ್ತ್ರ ತ್ರಿವಳಿ” ಸಾಮಾರ್ಥ್ಯವಿರುವ ವಿಶ್ವದ ಆರನೇ ದೇಶ ಭಾರತ. ಏಷ್ಯಾದ ಖಂಡದ ಎರಡನೇ ದೇಶ. ಮತ್ತಷ್ಟು ಓದು 




