ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

14
ಆಕ್ಟೋ

ಸೌಜನ್ಯ ಹಂತಕರು ನೇಣಿಗೇರುವುದೆಂತು?

– ರಾಕೇಶ್ ಶೆಟ್ಟಿ

Justice for Kumari Soujanya“ಬಹುಷಃ ಆಗಿನ ಕಾಲವೇ ಚೆನ್ನಾಗಿತ್ತೆನೋ.ಆಗಲಾದರೂ ಕುರು ಸಭೆಯಲ್ಲಿ ದ್ರೌಪದಿಯ ವಸ್ತ್ರಾಪಹರಣವಾಗುವಾಗ ಅವಳ ಸಹಾಯಕ್ಕೆ ಕರೆದೊಡನೆಯೇ ಶ್ರೀ ಕೃಷ್ಣ ಪರಮಾತ್ಮ ಬಂದಿದ್ದ.ಪಾಪ! ಈ ಕಾಲದ ಹೆಣ್ಣು ಮಕ್ಕಳ ಕೂಗು ಆ ಕಾಣದ ದೇವರಿಗೂ,ಕಾನೂನು ಪಾಲಕರಾದ ಮನುಷ್ಯ(?)ರಿಗೂ ಕೇಳುತ್ತಿಲ್ಲ.ಕುರುಕ್ಷೇತ್ರದ ಯುದ್ಧದ ಮುಗಿದರೂ ಕೌರವರು ಇನ್ನೂ ಸತ್ತಿಲ್ಲ.ದ್ರೌಪದಿಯರ ಗೋಳು ಮುಗಿಯೋಲ್ಲ…” ಅಂತ ’ನಿರ್ಭಯ’ ಅತ್ಯಾಚಾರದ ಪ್ರಕರಣದ ಸಮಯದಲ್ಲಿ ಬರೆದಿದ್ದೆ. ಮತ್ತೆ ಅದೇ ಸಾಲುಗಳನ್ನು ನಮ್ಮ ಧರ್ಮಸ್ಥಳದ ’ಸೌಜನ್ಯ’ ಅನ್ನುವ ಹೆಣ್ಣುಮಗಳ ಬಗ್ಗೆ ಬರೆಯುವಾಗಲೂ ಬಳಸಬೇಕಾಗಿ ಬಂದಿದೆ.ಆಗ ಕೃಷ್ಣನೇನೋ ಕರೆದಾಗ ಬಂದಿದ್ದ.ಆದರೆ ಇಲ್ಲಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ಯಾಕೋ ವರುಷ ಕಳೆದರೂ ಇನ್ನು ಕರುಣೆ ತೋರಲಿಲ್ಲ …! ನನಗೆ ಈ ದೇವರುಗಳ ಮೇಲೆ ಒಮ್ಮೊಮ್ಮೆ ಕೋಪಬರುವುದು ಇದೇ ಕಾರಣಕ್ಕಾಗಿ, ಏನೆಲ್ಲಾ ಪಾಪಗಳನ್ನು ಮಾಡಿ ಒಂದು ನೇಮ,ಒಂದು ಹರಕೆ,ಒಂದು ಹೋಮ,ಒಂದು ಹವನ,ತಪ್ಪು ಕಾಣಿಕೆ ಸಲ್ಲಿಸಿ ಸುಮ್ಮನಾಗಿಬಿಡಬಹುದೇ? ಹಾಗಿದ್ದರೆ ’ಧರ್ಮ’ವೆಲ್ಲಿದೆ?

ದಿಲ್ಲಿಯಲ್ಲಿ ಕಳೆದ ಡಿಸೆಂಬರಿನಲ್ಲಿ ನಡೆದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ’ನಿರ್ಭಯ’ ಅತ್ಯಾಚಾರ ಪ್ರಕರಣದಲ್ಲಿ ಹೋರಾಟದ ಕಿಡಿಯನ್ನು ದೆಹಲಿಯ ವಿದ್ಯಾರ್ಥಿ ಮಿತ್ರರು ಹಚ್ಚಿದ್ದರು.ಅದು ದೇಶವ್ಯಾಪಿಯೂ ಹಬ್ಬಿತ್ತು. ಖುದ್ದು ಕೇಂದ್ರ ಸರ್ಕಾರವನ್ನೇ ಮಂಡಿಯೂರುವಂತೆ ಮಾಡಿದ್ದು ಯುವಶಕ್ತಿಗೆ ಸಂದ ಜಯವಾಗಿತ್ತು.ಈಗ ನಿರ್ಭಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಿದೆ.ಆದರೆ ನಮ್ಮ ಸೌಜನ್ಯ ಪ್ರಕರಣದ ಆರೋಪಿಗಳೇ ಇನ್ನೂ ಸಿಕ್ಕಿಲ್ಲ…! ಅತ್ಯಾಚಾರದ ಆರೋಪಿಗಳನ್ನು ವರ್ಷವಾದರೂ ಬಂಧಿಸಲಾಗದಷ್ಟು ನಿಷ್ಕ್ರಿಯರಾಗಿದ್ದಾರೆಯೇ ನಮ್ಮ ಕರ್ನಾಟಕ ಪೋಲಿಸರು? ಅಥವಾ ಪೋಲಿಸರನ್ನು ನಿಷ್ಕ್ರಿಯಗೊಳಿಸುವಲ್ಲಿ ಕಾಣದ ’ಕೈ’ ಗಳು ಕೆಲಸ ಮಾಡುತ್ತಿವೆಯೇ? ಪ್ರಕರಣ ನಡೆದಾಗ ಇದ್ದಿದ್ದು ಬಿಜೆಪಿ ಸರ್ಕಾರ.ಈಗ ಇರುವುದು ಕಾಂಗ್ರೆಸ್ಸ್ ಸರ್ಕಾರ.ಹಾಗಿದ್ದರೆ ಆ ಕಾಣದ ಕೈಗಳು ಸರ್ಕಾರದ ಕೈಗಳನ್ನೇ ಕಟ್ಟಿಹಾಕಬಲ್ಲಷ್ಟು ಬಲಿಷ್ಟವಾಗಿವೆಯೇ?

ಮತ್ತಷ್ಟು ಓದು »

14
ಆಕ್ಟೋ

ಮೋದಿ ಫ್ಯಾಕ್ಟರ್ : ಒಮರ್ ಅಬ್ದುಲ್ಲಾರ ಮಾತುಗಳು ಯುಪಿಎ ದಿಗಿಲಿನ ಕನ್ನಡಿಯೇ?

ಮೂಲ : ಸಂಜಯ್ ಸಿಂಗ್
ಅನುವಾದ : ಪ್ರಶಾಂತ್ .ಕೆ

Modi Omar“ನನಗನ್ನಿಸುತ್ತೆ, ನಾವೇನಾದರೂ( ಯು.ಪಿ.ಎ. ಅಂಗಪಕ್ಷಗಳು) ‘ಮೋದಿ ಫ಼್ಯಾಕ್ಟರ್’ ನ್ನು ನಿರ್ಲಕ್ಷಿಸಿದರೆ ಅದು ಮೂರ್ಖತನವಾಗುತ್ತೆ; ಅಲ್ಲದೆ ಅದೊಂದು ಅಪಾಯಕಾರಿ ತಪ್ಪು ಕೂಡ..”
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ‘ಒಮರ್ ಅಬ್ದುಲ್ಲಾ’, ‘ಹಿಂದುಸ್ತಾನ್ ಟೈಮ್ಸ್’ ಗೆ ನೀಡಿದ ಸಂದರ್ಶನದಲ್ಲಿ ಆಡಿದ ಮಾತುಗಳಿವು. ದೇಶದ ಅತ್ಯಂತ ಸಮಸ್ಯಾತ್ಮಕ ರಾಜ್ಯದ, ಅದರಲ್ಲೂ ಆ ರಾಜ್ಯದ ಆಗು- ಹೋಗುಗಳು ಇಡೀ ದೇಶವನ್ನ ತಲ್ಲಣಗೊಳಿಸುತ್ತಿರುವ ಸಂದರ್ಭದಲ್ಲಿ, ಆ ರಾಜ್ಯದ ಮುಖ್ಯಮಂತ್ರಿಯ ಮಾತುಗಳನ್ನು ಹಗುರವಾಗಿ ಕಾಣುವ ಹಾಗಿಲ್ಲ. ‘ಒಮರ್’ ‘ರಾಹುಲ್ ಗಾಂಧಿ’ಯವರ ಆಪ್ತ ಮಿತ್ರ, ಅಲ್ಲದೆ ಅವರ ತಂದೆ ‘ಫ಼ರೂಕ್ ಅಬ್ದುಲ್ಲ’ ಯು.ಪಿ.ಎ. ಸರಕಾರದಲ್ಲಿ ಮಂತ್ರಿ ಕೂಡ ಹೌದು; ಈ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಇನ್ನೂ ಮಹತ್ವ ಪಡೆದುಕೊಳ್ಳುತ್ತವೆ, ‘ರಾಹುಲ್ ಗಾಂಧಿ’ ಉತ್ತರ ಪ್ರದೇಶ, ರಾಮ್ ಪುರದಲ್ಲಿ ಹೇಳಿದ ” ೨೦೧೪ ರಲ್ಲಿ ಕೇಂದ್ರದಲ್ಲಿ ಯುವಶಕ್ತಿಯ ಸರಕಾರ ಅಧಿಕಾರಕ್ಕೆ ಬರುತ್ತದೆ, ಅದು ದೇಶವನ್ನೇ ಬದಲಾಯಿಸಬಲ್ಲುದು” ಎಂಬ ಮಾತುಗಳನ್ನು ಒಮರ್ ಪೂರ್ತಿ ಒಪ್ಪಿದಂತೆ ಕಾಣುವುದಿಲ್ಲ; ನಿಮಗೆ ಗೊತ್ತಿರಲಿ, ರಾಹುಲ್ ಮತ್ತು ಒಮರ್ ಇಬ್ಬರೂ ಒಂದೇ ವರ್ಷದಲ್ಲಿ ಜನಿಸಿದವರು ಮತ್ತು ಇಬ್ಬರಿಗೂ ಏಗ ೪೩ ವರ್ಷ ವಯಸ್ಸು. ಅನೇಕ ಕಾಂಗ್ರೆಸ್ ನಾಯಕರಂತೆ, ರಾಹುಲ್ ಗಾಂಧಿಯ ಈ ಭಾಷಣದ ಬಳಿಕ ಮುಂದಿನ ಸರಕಾರ ನಡೆಸಲು ಆತನೇ ಸೂಕ್ತ ವ್ಯಕ್ತಿ ಎಂದು ಅಭಿಪ್ರಾಯ ವ್ಯಕ್ತಪಡಿಸದ ಕಾರಣ , ನ್ಯಾಷನಲ್ ಕಾನ್ಫ಼ರೆನ್ಸ್ ನ ನಾಯಕನ ಮಾತುಗಳನ್ನು ವಿಶೇಷವಾಗಿ ಪರಿಗಣಿಸಬೇಕು.

ಮತ್ತಷ್ಟು ಓದು »

12
ಆಕ್ಟೋ

ಸುದ್ಧಿ ಮಾಡುವವರಲ್ಲಿ ಶುದ್ಧಿ ಇಲ್ಲವಾದರೆ. . .

– ಡ್ಯಾನಿ ಪಿರೇರಾ,ಹಳ್ಳಿಮೈಸೂರು

Paid Media       ಇಂದು ವಾರ್ತಾ ವಾಹಿನಿಗಳು ಯಥಾತ್‍ಶಿರ್ಘ ಸುದ್ಧಿಗಳನ್ನು ಜಗತ್ತಿನ ಮೂಲೆ ಮೂಲೆಗೂ ಅತಿ ವೇಗದಲ್ಲಿ ಮುಟ್ಟಿಸುವ ಕೆಲಸ ಮಾಡುತ್ತಿವೆ. ಇದರಿಂದ ಉಪಯೋಗವಿದೆ ಎನ್ನುವುದು ನಿಜವೇ  ಆದರೂ ಸುದ್ಧಿ ಹೇಳುವ ಮನಸ್ಸುಗಳ ಹಿಂದೆ ಶುದ್ಧಿ ಇಲ್ಲದಿರುವುದು ಗೋಚರವಾಗುತ್ತಿದೆ. ಹಾಗಾಗಿ ಅವುಗಳ ಹಿಂದಿರುವ ಉದ್ದೇಶ ಪ್ರಶ್ನಾರ್ಹವಾಗುತ್ತಿದೆ.  ಒಂದು ಕಾಲವಿತ್ತು ಒಬ್ಬ ವ್ಯಕ್ತಿಗೆ  ಅಪಮಾನವೆನಿಸುವ  ಸುದ್ಧಿಯೊಂದು ಪತ್ರಿಕೆ ಅಥವಾ ದೃಶ್ಯ ಮಾಧ್ಯಮಗಳಲ್ಲಿ ಬಂದರೆ ಅದರಿಂದ ವ್ಯಕ್ತಿಗೆ ಅದು ನಿಜವಿರಲಿ, ಸುಳ್ಳಿರಲಿ  ಒಂದೋ ಅವನಿಗದು ಆಘಾತ ತರುವಂತಿತ್ತು ಅಥವಾ ಆತ ತನ್ನನ್ನು ತಾನು ಆತ್ಮ ವಿಮರ್ಶೆಗೆ ಒಳಪಡಿಸುವ ಸಾಧನವಾಗಿರುತ್ತಿತ್ತು. ಅದು ವ್ಯಕ್ತಿಯೊಬ್ಬ ಸಾರ್ವಜನಿಕ ಜೀವನದಲ್ಲಿರುವವನಾಗಿದ್ದರೆ ಕೂಡಲೇ ರಾಜೀನಾಮೆ ನೀಡಿ ಅದರಿಂದ ಬಿಡುಗಡೆ ಹೊಂದುವ ಸಾಕ್ಷಿಪ್ರಜ್ಞೆ ಆತನನ್ನು ಎಚ್ಚರಿಸುತ್ತಿತ್ತು. ಆದರೆ ಕಾಲ ಬದಲಾಗಿದೆ. ಅಕ್ಷರ ಮಾಧ್ಯಮಗಳಿಗಿಂತ ದೃಶ್ಯ ಮಾಧ್ಯಮಗಳು ಅದರಲ್ಲೂ ಸುದ್ಧಿ ವಾಹಿನಿಗಳು ಇನ್ನಿಲ್ಲದ ವೇಗದಲ್ಲಿ ಕಾರ್ಯಪ್ರವೃತ್ತವಾಗಿವೆ.  ಕ್ಷಣಾರ್ಧದಲ್ಲಿ ಅದು ಅಸಲಿಯೋ ನಕಲಿಯೋ ಅಂತೂ ಸುದ್ಧಿಗಳು ಬಿತ್ತರವಾಗುತ್ತವೆ. ಆದರೆ ಅಪರಾಧಿ ಸ್ಥಾನದಲ್ಲಿರುವ ವ್ಯಕ್ತಿಯ ಮೇಲೆ ಮಾತ್ರ ಅದು ಯಾವುದೇ ಪರಿಣಾಮ ಬೀರುವಂತೆ ಕಾಣುತ್ತಿಲ್ಲ.  ಏಕೆಂದರೆ ಸುದ್ಧಿ ಮಾಡುವವನ ಮತ್ತು ಸುದ್ಧಿಯಾಗುವವನಲ್ಲಿ  ಚಿತ್ತಶುದ್ಧಿಯಿಲ್ಲದಿರುವುದು! ಸುದ್ಧಿ ಮಾಡುವ ದಾವಂತದಲ್ಲಿ ಅದರಿಂದಾಗುವ ಪರಿಣಾಮವನ್ನು ಸುದ್ಧಿ ಮಾಡುವವ ಯೋಚಿಸುತ್ತಿಲ್ಲವೋ ಅಥವಾ ಅದು ತನಗೆ ಸಂಬಂದಿಸಿದ್ದಲ್ಲ ಎನ್ನುವ ತಾತ್ಸಾರ ಮನೋಭಾವವೋ ಗೊತ್ತಿಲ್ಲ ಅಂತೂ ಅನಾಹುತ ಮಾಡುವುದರಲ್ಲೇ ಆನಂದ ಕಾಣುತ್ತಿವೆ ನಮ್ಮ ಅನೇಕ ದೃಶ್ಯ ಮಾಧ್ಯಮಗಳು.

ಕೆಲ ವರ್ಷಗಳ ಹಿಂದೆ ಕನ್ನಡದ ಸುದ್ಧಿ ಮಾಧ್ಯಮವೊಂದು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಂಡ ಮಕ್ಕಳು ತೀವ್ರ ಅಸ್ವಸ್ಥವೆಂದು ‘ಬ್ರೇಕಿಂಕ್ ನ್ಯೂಸ್’ ಹಾಕಿತು. ಲಸಿಕೆ ಹಾಕಿಸಿಕೊಂಡ ಮಕ್ಕಳ ಪೋಷಕರು ಆತಂಕದಿಂದ ಆಸ್ಪತ್ರೆ ಸುತ್ತ ಜಮಾವಣೆಗೊಂಡರು. ಜನರಿಗೆ ಅಲ್ಲಿನ ಆಸ್ಪತ್ರೆ ಮತ್ತು ಅದರ ಸಿಬ್ಬಂದಿ ದಾಳಿಯ ವಸ್ತುವಾದರು. ಆದರೆ ಅದರ ನೈಜ ವಿಚಾರವೆಂದರೆ ಅಸ್ವಸ್ಥಗೊಂಡ ಒಂದೆರಡು ಮಕ್ಕಳು ಸೇವಿಸಿದ ಆಹಾರ Food Poison ಅಗಿದ್ದು .  ಆ ಸುದ್ಧಿ ಮಾಧ್ಯಮ ಮಾಡಿದ ಅವಾಂತರದ ಬಗ್ಗೆ ಅಂದಿನ  ಗೃಹ ಸಚಿವರಾದ ವಿ.ಎಸ್. ಆಚಾರ್ಯರು ಗಮನ ಸೆಳೆದರೂ ಅದು ತನ್ನ ದುಡುಕುತನದ ಬಗ್ಗೆ ವಿಷಾದ ವ್ಯಕ್ತಪಡಿಸಲಿಲ್ಲ. ಹೀಗೆ ಸುದ್ಧಿ ಮಾಧ್ಯಮಗಳು ಸುದ್ಧಿ ಮಾಡುವ ಭರದಲ್ಲಿ ಅವುಗಳು ಮಾಡುವ ಅವಾಂತರಗಳೇ ದೊಡ್ಡ ಸುದ್ಧಿಯಾದರೂ ಅವುಗಳಿಗೇನು ಪಶ್ಚತ್ತಾಪವಾಗುವುದಿಲ್ಲ. ಜನರಿಗೆ ಉಚಿತ ಬುದ್ಧಿ ಹೇಳುವುದಷ್ಟೇ ಅವುಗಳ ಕೆಲಸ

ಮತ್ತಷ್ಟು ಓದು »

11
ಆಕ್ಟೋ

ದಲಿತ ನಾಯಕರಿಗೆ ದಲಿತರ ಮೇಲೇಕಿಲ್ಲ ಕಾಳಜಿ?

 – ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

shindheರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿಯ ಮುನ್ನಾ ಎರಡು ದಿನಗಳಲ್ಲಿ ದೇಶದ ಗೃಹ ಮಂತ್ರಿಗಳು, ಕರ್ನಾಟಕದ ಮುಖ್ಯಮಂತ್ರಿಗಳು ಸೇರಿ ನಾಲ್ವರು ರಾಜಕಾರಣಿಗಳು ಇದ್ದಕ್ಕಿದ್ದಂತೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ, ಕಾಳಜಿ ರಕ್ಷಣೆಯ ಮಾತುಗಳನ್ನಾಡಿದ್ದಾರೆ. ಪ್ರಮುಖವಾಗಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಮಾಯಕ ಮುಸ್ಲಿಂ ಯುವಕರನ್ನು ಬಂಧಿಸಬೇಡಿ ಎಂದಿದ್ದಾರೆ.

ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಪೊಲೀಸ್ನ ಹಾಲಿ ನಿರ್ದೇಶಕರಿಗೆ ಪತ್ರ ಬರೆದು ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿ 2 ರಿಂದ 3 ಮಂದಿ ಮುಸ್ಲಿಂ ಸಿಬ್ಬಂದಿಗಳನ್ನು ನೇಮಿಸುವಂತೆ ಆದೇಶಿಸಿದ್ದಾರೆ. ಅದೇ ರೀತಿ ಅಲ್ಪಸಂಖ್ಯಾತ ಸಮುದಾಯದ ಖಾತೆ ಪಡೆದಿರುವ ಕೆ. ರೆಹಮಾನ್ ಖಾನ್ ಕೂಡ ಮುಸ್ಲಿಂ ಯುವಕರನ್ನು ಬಂಧಿಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಇನ್ನು ಅಹಿಂದ ಹೋರಾಟದ ಹಿನ್ನೆಲೆಯಲ್ಲಿ ಬಂದಿರುವ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಮೇಲೆ ‘ಎಲ್ಲೋ’ ದೌರ್ಜನ್ಯ ನಡೆಸಿದರೆ ಪರಿಣಾಮ ನೆಟ್ಟಗೆ ಇರುವುದಿಲ್ಲವೆಂಬ ಕಠೋರ ಸಂದೇಶ ಕೊಟ್ಟಿದ್ದಾರೆ. ಹೀಗೆ ಒಂದು ಸಮುದಾಯದ ಬಗೆಗಿನ ಕಾಳಜಿ ವ್ಯಕ್ತಪಡಿಸುವ ಮೂಲಕ ಭಾರತದಲ್ಲಿ ದಲಿತರು ಕೂಡ ನಿತ್ಯವೂ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂಬುದನ್ನು ಮರೆತಿರುವ ಈ ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವುದು ಅನಿವಾರ್ಯವೆನಿಸುತ್ತಿದೆ.

ಮತ್ತಷ್ಟು ಓದು »

8
ಆಕ್ಟೋ

ತುತ್ತನ್ನು ನಿರ್ಲಕ್ಷಿಸುವ ಮುನ್ನ

– ನವೀನ್ ನಾಯಕ್

Dont Waste Food      ಭಾರತ ಬದಲಾಗುತಿದೆ, ಇದನ್ನು ನಮ್ಮ ಮುಖ್ಯಮಂತ್ರಿಯಿಂದ ಹಿಡಿದು ಪ್ರಧಾನ ಮಂತ್ರಿಯವರೆಗೆ ಎಲ್ಲರೂ ದಿನಕೊಮ್ಮೆ ಮಂತ್ರದಂತೆ ಪಟಿಸುತಿದ್ದಾರೆ. ಇದರಿಂದ ನಮ್ಮ ಕಂಗಳು ಬದಲಾವಣೆಯ ಸಮಯ ಹತ್ತಿರ ಬರುತಿದೆ ಎಂದು ಹೊಸ ಕನಸು ಕಾಣತೊಡಗಿದೆ. ಇಂಥ ಸಮಯದಲ್ಲಿ ವಾಸ್ತವವನ್ನು ವಿಶ್ವಸಂಸ್ಥೆ ಬಯಲಿಗೆಳೆದು ನಮ್ಮ ಸರಕಾರ ನಡೆಸುತ್ತಿರುವವರ ಮುಖವಾಡವನ್ನು ಕಳಚಿದೆ. ವಿಶ್ವಸಂಸ್ಥೆ ನಡೆಸಿರುವ ಸಮೀಕ್ಷೆಯನ್ನು ಗಮನಿಸಿದರೆ ಭಾರತದ ಬದಲಾವಣೆಯು ಮುಂದುವರೆಯುವದು ಬಿಟ್ಟು ಹಿಮ್ಮುಖವಾಗಿ ನಡೆಯತೊಡಗಿದೆ.ಈ ಅನಿಸಿಕೆ ಏಕೆಂದರೆ ಅದರ ಸಮೀಕ್ಷೆಯ ವರದಿಯನ್ನು ನೋಡಿ.

ವಿಶ್ವಸಂಸ್ಥೆ;- ವಿಶ್ವದಲ್ಲಿ 120 ಕೋಟಿ ಜನ ಇನ್ನೂ ಕಿತ್ತು ತಿನ್ನುವ ಬಡತನದ ಬೇಗೆಯಲ್ಲಿ ದಿನವನ್ನು ಕಳೆಯುತಿದ್ದಾರೆ. ಅದರಲ್ಲಿ ಮೂರನೆಯ ಒಂದರಷ್ಟು ಅಂದರೆ 33% (39 ಕೋಟಿ 60 ಲಕ್ಷ ಜನ) ಭಾರತೀಯರಾಗಿದ್ದಾರೆ. ಇವರು ದಿನವೊಂದಕ್ಕೆ ಸುಮಾರು 65 ರುಪಾಯಿಗಳಿಗಿಂತಲೂ ಕಡಿಮೆ ಹಣದಲ್ಲಿ ಜೀವನ ದೂಡುತಿದ್ದಾರೆ. ಅವರದೇ ವರದಿ ಪ್ರಕಾರ 1981 ರಿಂದ 2010ರ ನಡುವೆ ವಿಶ್ವದ ಬಡತನದ ಪ್ರಮಾಣ ಸುಮಾರು ಅರ್ಧದಷ್ಟು ಇಳಿಕೆಯಾಗಿದೆ ಮತ್ತು ಇದಕ್ಕೆ ವಿರುದ್ಧವಾಗಿ ಅಭಿವೃದ್ಧಿಶೀಲ ಹಾಗು ಬಡರಾಷ್ಟ್ರಗಳಲ್ಲಿ

ಮತ್ತಷ್ಟು ಓದು »

6
ಆಕ್ಟೋ

ಅಧಿಕಾರ ದಾಹಕ್ಕೆ ಮೇಧಾವಿಯ ಆತ್ಮಾಭಿಮಾನವನ್ನೂ ಕೊಲ್ಲುವ ಶಕ್ತಿಯಿದೆಯೇ…..?

– ಗುರುರಾಜ ಕೊಡ್ಕಣಿ,ಯಲ್ಲಾಪುರ

Man Mohn Singhಅವರು ಸಾಮಾನ್ಯ ವ್ಯಕ್ತಿಯೇನಲ್ಲ. ಚಿನ್ನದ ಪದಕದೊ೦ದಿಗೆ ಪದವಿ ಮುಗಿಸಿದವರು. ವಿಶ್ವದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒ೦ದಾದ ಆಕ್ಸಫರ್ಡ್ ಕಾಲೇಜಿನಿ೦ದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದವರು.ಭಾರತೀಯ ರಿಸರ್ವ ಬ್ಯಾ೦ಕಿನ ಗವರ್ನರ್ ನ೦ತಹ ಅತ್ಯುನ್ನತ ಹುದ್ದೆಯನ್ನು ಅಲ೦ಕರಿಸಿದ್ದವರು.ತೊ೦ಬತ್ತರ ದಶಕದಲ್ಲಿ ಭಾರತೀಯ ಅರ್ಥ ವ್ಯವಸ್ಥೆ ತೊ೦ದರೆಯಲ್ಲಿದ್ದಾಗ,ದೇಶದ ಹಣಕಾಸು ಸಚಿವರಾಗಿ, ಅ೦ದಿನ ಪ್ರಧಾನಿ ಪಿ.ವಿ ನರಸಿ೦ಹರಾವ್ ರವರ ಸಾರಥ್ಯದಲ್ಲಿ ಜಾಗತೀಕರಣದ೦ತಹ ವ್ಯವಸ್ಥೆಯಿ೦ದ ದೇಶದ ಆರ್ಥಿಕ ಪರಿಸ್ಥಿತಿಯನ್ನು ಮೇಲೆತ್ತಲು ಸಹಕಾರಿಯಾದವರು. ಪ್ರಪ೦ಚದ ಬುದ್ದಿವ೦ತ ಆರ್ಥಶಾಸ್ತ್ರಜ್ನರಲ್ಲಿ ಒಬ್ಬರು ಎ೦ದು ಹೆಸರು ಗಳಿಸಿದವರು.ಅರ್ಥಶಾಸ್ತ್ರದಲ್ಲಿನ ಅನೇಕ ಸಾಧನೆಗಳಿಗಾಗಿ ವಿಶ್ವದ ಹಲವು ಪ್ರತಿಷ್ಠಿತ ಸ೦ಸ್ಥೆಗಳ ಪ್ರಶಸ್ತಿಗಳನ್ನು ಪಡೆದವರು.ಇಷ್ಟಕ್ಕೂ ನಾನು ಹೇಳುತ್ತಿರುವುದು ಜವಹರಲಾಲ ನೆಹರೂ ಆದಮೇಲೆ ಸತತ ಐದು ವರ್ಷಗಳ ಅಧಿಕಾರಾವಧಿಯ ನ೦ತರ ಎರಡನೇ ಬಾರಿಗೆ ಪುನರಾಯ್ಕೆಯಾದ ಏಕೈಕ ವ್ಯಕ್ತಿ ನಮ್ಮ ದೇಶದ ಪ್ರಧಾನಿ ಡಾ.ಮನಮೊಹನ್ ಸಿ೦ಗ್ ರವರ ಬಗ್ಗೆ.

ಆದರೆ ಇ೦ದು ಆಗುತ್ತಿರುವುದಾದರೂ ಏನು..? ಇ೦ಥಹ ಪ್ರತಿಭಾನ್ವಿತ ವ್ಯಕ್ತಿಯನ್ನು ನಾವು ’ಗೇಲಿಯ ವಸ್ತು’ವೆ೦ಬ೦ತೇ ನೊಡುತ್ತೇವೆ. ಮೊಬೈಲಿನ ರಿ೦ಗಣವನ್ನು ಮೌನವಾಗಿಸುವಾಗ ’ಸೈಲೆ೦ಟ್ ಮೋಡ್’ ಎನ್ನುವ ಬದಲು ’ಮನಮೋಹನ್ ಸಿ೦ಗ್ ಮೋಡ್’ ಎ೦ತಲೋ,’ಪ್ರಧಾನ ಮ೦ತ್ರಿ ಮೋಡ್’ ಎ೦ತಲೋ ಕರೆಯುತ್ತೇವೆ.ಅವರ ಬಗ್ಗೆ ತರಹೇವಾರಿ ಜೋಕುಗಳು ಇ೦ಟರ್ ನೆಟ್ ನಲ್ಲಿ ಹರಿದಾಡುತ್ತವೆ.ದಿನಕ್ಕೊ೦ದು ಎಸೆಮ್ಮಸ್ ಗಳು ಹುಟ್ಟಿಕೊಳ್ಳುತ್ತವೆ. ’ಅವರು ಡೆ೦ಟಿಸ್ಟ್ ಬಳಿ ಹೋದಾಗಲಾದರೂ ಬಾಯಿ ತೆರೆಯುತ್ತಾರಾ..’ ಎನ್ನುವ೦ತೇ ಲೇವಡಿ ಮಾಡುತ್ತೇವೆ.ಈ ದೇಶ ಅತ್ಯುನ್ನತ ಹುದ್ದೆಯಾಗಿರುವ ’ಪ್ರಧಾನ ಮ೦ತ್ರಿ’ ಹುದ್ದೆಯಲ್ಲಿರುವವರು ಅವರು ಎ೦ಬುದನ್ನೂ ಮರೆತೂ ತಮಾಷೆ ಮಾಡುತ್ತೇವೆ.

ಮತ್ತಷ್ಟು ಓದು »

5
ಆಕ್ಟೋ

ಮಿ.ರಾಹುಲ್,ಹಿರೋಯಿಸಂ ಅನ್ನುವುದು ಸಿನೆಮಾಗಳಲ್ಲೇ ಚೆನ್ನ

– ರಾಕೇಶ್ ಶೆಟ್ಟಿ

Rahul Gandhiಕಾಂಗ್ರೆಸ್ಸಿನ ನಾಯಕರಾಗಿದ್ದಂತಹ ಅರ್ಜುನ್ ಸಿಂಗ್ ಅವರ ಆತ್ಮಕತೆ ‘A Grain of Sand in the Hourglass of Time’ ಯಲ್ಲಿ ಒಂದು ಪ್ರಸಂಗವನ್ನು ದಾಖಲಿಸಿದ್ದಾರೆ ಅನ್ನುವ ವರದಿಯೊಂದು ಕಳೆದ ವರ್ಷ ಪತ್ರಿಕೆಗಳಲ್ಲಿ ಬಂದಿತ್ತು.ಅಲ್ಲಿ ಅವರು ಆಗಿನ್ನೂ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರದಿದ್ದ ಸೋನಿಯಾ ಅವರನ್ನು ಪಕ್ಷಕ್ಕೆ ಕರೆ ತಂದು ಅಧ್ಯಕ್ಷೆಯ ಪಟ್ಟಕಟ್ಟುವ ಬಗ್ಗೆ ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರ ಬಳಿ ಮಾತನಾಡಲು ಸೀತರಾಂ ಕೇಸರಿ ಮತ್ತಿತ್ತರರೊಂದಿಗೆ ಹೋಗಿರುತ್ತಾರೆ. ಸೋನಿಯಾರನ್ನು ಅಧ್ಯಕ್ಷೆಯನ್ನಾಗಿ ಮಾಡುವ ಇವರ ಮಾತನ್ನು ಕೇಳಿ ಕ್ಷಣಕಾಲ ಸುಮ್ಮನಿದ್ದ ಪಿವಿಎನ್ ಒಮ್ಮೆಲೇ ” ರೈಲಿನ ಕಂಪಾರ್ಟ್-ಮೆಂಟ್ ಗಳನ್ನು ಇಂಜಿನ್ನಿಗೆ ಜೋಡಿಸಿದಂತೆ,ಕಾಂಗ್ರೆಸ್ಸ್ ಅನ್ನು ನೆಹರೂ ಕುಟುಂಬಕ್ಕೆ ಜೋತು ಬೀಳಿಸುವುದೇಕೆ? ಬೇರೆ ದಾರಿಗಳಿಲ್ಲವೇ ನಮ್ಮ ಮುಂದೆ?” ಅಂತ ಸಿಡುಕುತ್ತಾರೆ. ಕಾಂಗ್ರೆಸ್ಸಿನಂತ ಲಕೋಟೆ ಪಕ್ಷದಲ್ಲಿ ಪಿವಿಎನ್ ಮತ್ತು ಸೀತರಾಂ ಕೇಸರಿಯವರನ್ನು ಆಮೇಲೆ ಹೇಗೆ ನಡೆಸಿಕೊಳ್ಳಲಾಯಿತು ಅನ್ನುವುದೆಲ್ಲ ಮತ್ತೆ ಬಿಡಿಸಿ ಹೇಳಬೇಕಿಲ್ಲ.

೧೨೮ ವರ್ಷಗಳ ಇತಿಹಾಸ ಹೊಂದಿರೋ ಈ ರಾಷ್ಟ್ರೀಯ ಪಕ್ಷಕ್ಕೆ “ನೆಹರೂ ಕುಟುಂಬ”ದ ಬೋಗಿಯನ್ನು ಮೊದಲಿಗೆ ಜೋಡಿಸಿದ್ದು ಮಹಾತ್ಮ ಗಾಂಧೀಜಿ.ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಸರ್ದಾರ್ ವಲ್ಲಭಾಯ್ ಪಟೇಲ್ ಅಂತ ದಿಗ್ಗಜರನ್ನೆಲ್ಲ ಬದಿಗೆ ಸರಿಸಿ ಜವಹರಲಾಲ್ ನೆಹರೂ ಅವರನ್ನು ಗಾಂಧೀಜಿ ಮುನ್ನೆಲೆಗೆ ತಂದ ಹಿನ್ನೆಲೆಯೇನು ಅನ್ನುವುದರ ಬಗ್ಗೆ ಇವತ್ತಿಗೂ ಬೇರೆ ಬೇರೆ ಕತೆಗಳಿವೆ.ನೆಹರೂ ನಂತರ ಬಂದ ಇಂದಿರಾ ಅವರು ನೆಹರೂಗಿಂತ ಉತ್ತಮವಾಗಿ ದೇಶವನ್ನು ಮುನ್ನಡೆಸಿದರೂ, ಸುಲಭವಾಗಿ ದಕ್ಕಿದ್ದಂತಹ ಪ್ರಧಾನಿ ಹುದ್ದೆ ಅವರೊಳಗಿನ ಸರ್ವಾಧಿಕಾರಿಯನ್ನು ಜಾಗೃತಗೊಳಿಸಿ ಈ ದೇಶದ ಪ್ರಜಾಪ್ರಭುತ್ವದ ಇತಿಹಾಸದ ಕಪ್ಪುಚುಕ್ಕೆ “ಎಮರ್ಜೆನ್ಸಿ”ಯ ದಿನಗಳಿಗೆ ಕಾರಣವಾಯಿತು. (ಆದರೆ ಕರ್ನಾಟಕದ ಕೆಲವು ಬುದ್ಧಿಜೀವಿಗಳಿಗೆ ಈಗಲೂ ಕಾಂಗ್ರೆಸ್ಸ್ ಪ್ರಜಾಪ್ರಭುತ್ವದ ರಕ್ಷಕನಂತೆ,”ಬತ್ತಲಾರದ ಗಂಗೆ” ಕಾಣುತ್ತದೆ…! ) ಇಂದಿರಾ ಹಂತಕರ ಗುಂಡಿಗೆ ಬಲಿಯಾದ ನಂತರ ಕಾಂಗ್ರೆಸ್ಸ್ ರೈಲಿನ ಬೋಗಿಗೆ ’ರಾಜೀವ್’ ಜೋಡಣೆಯಾದರು.
ಮತ್ತಷ್ಟು ಓದು »

4
ಆಕ್ಟೋ

ಮೂರ್ತಿಗಳ ದ್ವಂದ್ವಗಳು ಮತ್ತು ದೇವನೂರರ ಬಾಂಬುಗಳು

– ಮು.ಅ ಶ್ರೀರಂಗ, ಬೆಂಗಳೂರು

anantamurthy mattu devanuruಸುಮಾರು ಹತ್ತು ದಿನಗಳಿಂದ ಈಚೆಗೆ ನಮ್ಮೀ ಸುವರ್ಣ ಕರ್ನಾಟಕವು ಅನಂತಮೂರ್ತಿಯವರ ಹೇಳಿಕೆ,ಮರುಹೇಳಿಕೆ,ಅವುಗಳಿಗೆ ಮಾಧ್ಯಮಗಳ,ಜನರ ಪ್ರತಿಕ್ರಿಯೆಗಳು,ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಏನು ಎತ್ತ ಎಂದು ಇತರ ಬುದ್ಧಿಜೀವಿಗಳ ಪಾಠಗಳಿಂದ ತುಂಬಿ ಹೋಗಿದೆ. ಈರುಳ್ಳಿ ಬೆಲೆ ಎಷ್ಟು ಏರಿತು,ರುಪಾಯಿ ಎಷ್ಟು ಆಳಕ್ಕೆ ಬಿತ್ತು ಇತ್ಯಾದಿಗಳ ಕಡೆಗೆ ನಮಗೆ ಆಸಕ್ತಿಯಿಲ್ಲ. ಅನಂತಮೂರ್ತಿಯವರು ಏನು ಹೇಳಿದ್ದಾರೆ?ಈಗ ಎಲ್ಲಿದ್ದಾರೆ?ಏನು ಮಾಡುತ್ತಿದ್ದಾರೆ?ಇದೇ ಮುಖ್ಯವಾಗಿದೆ. ಇದರ ಜತೆಗೆ ಈಗ ನಮ್ಮ ಖ್ಯಾತ ದಲಿತ ಮತ್ತು ಬಂಡಾಯ ಸಾಹಿತಿಗಳಾದಂತಹ ಮಾನ್ಯ ದೇವನೂರು ಮಹಾದೇವ ಅವರು ಬೆಂಗಳೂರು ಸುತ್ತಮುತ್ತಲಿನ ಬ್ರಾಹ್ಮಣ ಮತ್ತು ಲಿಂಗಾಯಿತರ townshipಗಳನ್ನು  ಪ್ರಾಣಹಾನಿ ಆಗದಂತೆ ಬಾಂಬ್ ಹಾಕಿ ನಾಶಪಡಿಸಲೇಬೇಕು ಎಂದು “ಫತ್ವಾ” ಹೊರಡಿಸಿದ್ದಾರೆ. . ಈ ಬಾಂಬ್ ಯೋಜನೆಯನ್ನು ಅವರು ಹೇಳಿದ್ದು ಕರ್ನಾಟಕ ಕೇಂದ್ರೀಯ ವಿ ವಿ ಮತ್ತು ಗುಲ್ಬರ್ಗ ವಿ ವಿ ಸಂಯುಕ್ತವಾಗಿ ಆಯೋಜಿಸಿದ ಕರ್ನಾಟಕ ದಲಿತ ಚಳುವಳಿ ಹಾಗು ಸಾಹಿತ್ಯದ “ಉದ್ಘಾಟನಾ” ಸಮಾರಂಭದಲ್ಲಿ. ಇದುವರೆಗೆ ವಿ ವಿ ಗಳ ಕೆಲವು ಅಧ್ಯಾಪಕರು ಮತ್ತು ಪ್ರಾಧ್ಯಾಪಕರು ನಕ್ಸಲರ ಮತ್ತು ಮಾವೋವಾದಿಗಳ ಹಿಂಸೆಗೆ ಬೌದ್ಧಿಕ ಬೆಂಬಲವನ್ನು ಮಾತ್ರ ಕೊಡುತ್ತಿದ್ದರು. ಇನ್ನು ಮುಂದೆ ಭೌತಿಕ ಬೆಂಬಲವನ್ನೂ ಸಹ ನಿರ್ಭಯವಾಗಿ ನೀಡಬಹುದು. ಏಕೆಂದರೆ ಬುದ್ಧಿಜೀವಿಗಳು ಹೇಳಿದ ಮೇಲೆ ಮುಗಿಯಿತು. ಅವರು ಏನೇ ಮಾಡಿದರೂ, ಹೇಳಿದರೂ ಅದು ಅಪರಾಧವಲ್ಲ.

ಮತ್ತಷ್ಟು ಓದು »

3
ಆಕ್ಟೋ

ಪ್ರೊ.ಬಾಲು ಅವರಿಗೆ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

Prof Balu2ಕರ್ನಾಟಕದಲ್ಲಿ ಈಗ ಗೌರವ ಡಾಕ್ಟರೇಟ್ ಪದವಿ ಎನ್ನುವುದು ಮಾರುಕಟ್ಟೆಯಲ್ಲಿ ದೊರೆಯುವ ವಸ್ತುವಾಗಿರುವುದು ನಮಗೆಲ್ಲ ಗೊತ್ತಿರುವ ವಿಚಾರವೇ. ಆದರೆ ಯುರೋಪಿನ ವಿಶ್ವವಿದ್ಯಾಲಯಗಳಲ್ಲಿ ಇದು ಇನ್ನೂ ತನ್ನ ಘನತೆ ಹಾಗೆ ಉಳಿಸಿ ಕೊಂಡಿದೆ. ಉದಾಹರಣೆಗೆ, ಪ್ರೊಫೆಸರ್ ಎಸ್. ಎನ್. ಬಾಲಗಂಗಾಧರ ರಾವ್ ಅವರಿಗೆ ೩೦/೯/೨೦೧೩ರಂದು  ಗೌರವ ಡಾಕ್ಟರೇಟ್ ಪದವಿ ಮತ್ತು ಬಂಗಾರದ ಪದಕದೊಂದಿಗೆ ಸನ್ಮಾನ ಮಾಡಿದ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯ ತನ್ನ ೧೫ ವರ್ಷಗಳ ಇತಿಹಾಸದಲ್ಲಿ ಕೊಟ್ಟಿದ್ದು ಕೇವಲ ಬೆರಳೆಣಿಕೆಯಷ್ಟು ಗೌರವ ಡಾಕ್ಟರೇಟ್ ಪದವಿಗಳನ್ನು ಮಾತ್ರ.

ಈ ಸಂದರ್ಭದಲ್ಲಿ ಎಸ್. ಎನ್. ಬಾಲಗಂಗಾಧರ ರಾವ್ ಅವರ ಸಾಧನೆಗಳ ಕುರಿತು ಅಲ್ಲಿನ ಸಮಾಜ ವಿಜ್ಞಾನಗಳ ಡೀನ್ ಮಾಡಿದ ಭಾಷಣದ ಕನ್ನಡ ಅವತರಣಿಕೆಯನ್ನು ನಾವಿಲ್ಲಿ ಕೊಡುತ್ತಿದ್ದೇವೆ.

–      ನಿಲುಮೆ

 

ಮತ್ತಷ್ಟು ಓದು »

1
ಆಕ್ಟೋ

ಲೋಕಾಯುಕ್ತ ಆಸ್ತಿ ವಿವರ ನೀಡುವುದೇ ಯುಕ್ತ!

– ತುರುವೇಕೆರೆ ಪ್ರಸಾದ್

RTI       ಈಚೆಗೆ ಪತ್ರಿಕೆಗಳಲ್ಲಿ ಹಲವು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ ಎಂಬ ಸಂಗತಿ ವರದಿಯಾಗಿತ್ತು. ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮಾಜಿ ಜನಪ್ರತಿನಿಧಿಗಳು ಕಡ್ಡಾಯವಾಗಿ ಪ್ರತಿವರ್ಷ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕಿದೆ. ಆದರೆ ಹಲವರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅಷ್ಟೇ ಅಲ್ಲ, ಜನಪ್ರತಿನಿಧಿಗಳು ಸಲ್ಲಿಸಿರುವ ಆಸ್ತಿ ವಿವರವೂ ಎಷ್ಟರ ಮಟ್ಟಿಗೆ ಸತ್ಯ ಎನ್ನುವುದನ್ನು ಸಾರ್ವಜನಿಕರು  ತಿಳಿಯಲಾಗುತ್ತಿಲ್ಲ. ಏಕೆಂದರೆ ಲೋಕಾಯುಕ್ತ ಜನಪ್ರತಿನಿಧಿಗಳ ಆಸ್ತಿ ವಿವರಗಳನ್ನು ಮಾಹಿತಿ ಹಕ್ಕು ಕಾಯಿದೆಯಡಿ ನೀಡಲು ನಿರಾಕರಿಸುತ್ತದೆ.

       ಕಳೆದ ಮಾರ್ಚ್ 18ರಂದು ನಾನು ವಿಧಾನಸಭಾ ಚುನಾವಣೆಗಳ ಹಿನ್ನಲೆಯಲ್ಲಿ ಕೆಲವು ಜನಪ್ರತಿನಿಧಿಗಳು ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರವನ್ನು ಮಾಹಿತಿ ಹಕ್ಕು ಕಾಯಿದೆಯಡಿ  ನೀಡುವಂತೆ ಕೋರಿದ್ದೆ. ಆದರೆ ಲೋಕಾಯುಕ್ತ ಆ ಮಾಹಿತಿ ನೀಡಲು ನಿರಾಕರಿಸಿತು. ಅದಕ್ಕೆ ಲೋಕಾಯುಕ್ತ ಕೊಟ್ಟ ಕಾರಣ ಮಾಹಿತಿ ಹಕ್ಕು ಕಾಯಿದೆಯಡಿ ನಾಗರಿಕರಿಗೆ ಸಾರ್ವಜನಿಕ ಪ್ರಾಧಿಕಾರದ ಸಾರ್ವಜನಿಕ ಸಂಗತಿಗಳ ಬಗ್ಗೆ ಮಾತ್ರ ಮಾಹಿತಿ ನೀಡಲಾಗುತ್ತದೆ. ನೀವು ಕೆಲವು ವ್ಯಕ್ತಿಗಳ ಖಾಸಗಿ ವಿವರಗಳ ಬಗ್ಗೆ ಮಾಹಿತಿ ಕೇಳಿದ್ದೀರಿ. ಇದು ಸಾರ್ವಜನಿಕ ಪ್ರಾಧಿಕಾರ ಅಥವಾ ಆಢಳಿತಕ್ಕೆ ಸಂಬಂಧಿಸಿದ ಸಾರ್ವಜನಿಕ ವಿಷಯವಲ್ಲ ಎಂಬುದು.(The intention of the legislation is to provide right to information of a citizen pertaining to public affairs of the public authority, but you have sought the information of an individual which is purely personal one and is not with respect to public affairs)

ಮತ್ತಷ್ಟು ಓದು »