ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

1
ಆಕ್ಟೋ

ಮೌಲ್ಯ ಕಳೆದುಕೊಳ್ಳುತ್ತಿರುವ ಜೀವನವೂ ಸಡಿಲಗೊಳ್ಳುತ್ತಿರುವ ಸಂಬಂಧಗಳೂ..

– ಗುರುಮೂರ್ತಿ ಚಕ್ಕೋಡಬೈಲು

Kids N Divorceಇತ್ತೀಚಿಗೆ ಪತ್ರಿಕೆಯೊಂದರಲ್ಲಿ ವಿಚಿತ್ರ ವರದಿಯೊಂದು ಪ್ರಕಟಗೊಂಡಿತ್ತು.ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯೊಬ್ಬರು ಗಂಡನಿಂದ ವಿಚ್ಛೇಧನ ಪಡೆದು ಬಾಯ್ ಫ್ರೆಂಡ್ ಜೊತೆಗೆ ಲಿವಿಂಗ್ ಟುಗೆದರ್ ರೀತಿಯ ಜೀವನ ನಡೆಸುತ್ತಿದ್ದರು.ಆದರೆ ಇಬ್ಬರೊಂದಿಗೂ ದೈಹಿಕ ಸಂಬಂಧ ಇಟ್ಟುಕೊಂಡಿದ್ದ ಆಕೆ ಈಗ ಗರ್ಭಿಣಿಯಾಗಿದ್ದು ತನಗೆ ಹುಟ್ಟಲಿರುವ ಮಗುವಿನ ಅಪ್ಪನನ್ನು ಗುರುತಿಸುವ ಸಲುವಾಗಿ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಬಂದ ವಿಚಾರ ಪತ್ರಿಕೆಗಳಿಗೆ ಸುದ್ದಿಯಾಗಿತ್ತು.ಎಲ್ಲೋ ಅಮೆರಿಕಾ,ಇಂಗ್ಲೆಂಡ್ ಗಳಲ್ಲಿ ನಡೆಯುವ ಇಂತಹ ಘಟನೆಗಳ ಬಗ್ಗೆ ಓದಿ ಸುಮ್ಮನಾಗುತ್ತಿದ್ದ ನನಗೆ, ಬೆಂಗಳೂರಿನಲ್ಲೇ ನಡೆದ ಈ ಘಟನೆ ಆಶ್ಚರ್ಯ ಜೊತೆಗೆ ಆತಂಕವನ್ನೂ ಉಂಟುಮಾಡಿತು.ಅನೈತಿಕತೆ,ಸ್ವೇಚ್ಛೆಯನ್ನೇ ಬದುಕನ್ನಾಗಿಸಿಕೊಳ್ಳುವ ಹೊಸ ತಲೆಮಾರಿನ ಪ್ರತಿನಿಧಿಗಳೆಂಬಂತೆ ಕೆಲವರು ಕಾಣತೊಡಗಿದ್ದಾರೆ.ಡೈವೋರ್ಸ್ ಪದವೇ ಅಪರಿಚಿತವಾಗಿದ್ದ ನೆಲದಲ್ಲಿ ಹೊಂದಾಣಿಕೆಯ ಕೊರತೆಯ ಹೆಸರಿನಲ್ಲಿ ಡೈವೋರ್ಸ್ ಪ್ರಕರಣಗಳು ಹೆಚ್ಚತೊಡಗಿವೆ.ದಿನದಿಂದ ದಿನಕ್ಕೆ ಗಂಡು-ಹೆಣ್ಣಿನ ಸಂಬಂಧ,ಜೀವನ ಮೌಲ್ಯಗಳು ಗಟ್ಟಿಯಾಗುವುದರ ಬದಲು ದುರ್ಬಲವಾಗಲು ಕಾರಣವೇನು?? ಅನೈತಿಕ,ಅಕ್ರಮ,ನಿರ್ಲಜ್ಜ ಸಂಬಂಧಗಳೂ ಕೂಡ ಮುಜುಗರವಿಲ್ಲದೆ ಗುರುತಿಸಿಕೊಳ್ಳುವ ಮಟ್ಟಕ್ಕೆ ನಾವು ತಲುಪುತ್ತಿದ್ದೇವೆಯೇ??ಅದಕ್ಕೆ ಪೂರಕವಾದ ಸಮಾಜ ನಮಗರಿವಿಲ್ಲದೆಯೇ ನಿರ್ಮಾಣವಾಗುತ್ತಿದೆಯೇ?? ಇಂತಹ ಅನೇಕ ಪ್ರಶ್ನೆಗಳು ಮನಸ್ಸಿನಲ್ಲಿ ಮೂಡುತ್ತಿವೆ.

ಮತ್ತಷ್ಟು ಓದು »

25
ಸೆಪ್ಟೆಂ

ಅನ೦ತಮೂರ್ತಿಯವರಿಗೆ ಅಭಿಮಾನಿಯೊಬ್ಬನ ಪತ್ರ

 – ಗುರುರಾಜ್ ಕೊಡ್ಕಣಿ,ಯಲ್ಲಾಪುರ   

URAಸನ್ಮಾನ್ಯ ಶ್ರೀ ಅನ೦ತಮೂರ್ತಿಗಳಿಗೆ,

ನಮಸ್ಕಾರಗಳು,

ಈಗ ಸದ್ಯದ ಪರಿಸ್ಥಿತಿಯಲ್ಲಿ ’ಹೇಗಿದ್ದೀರಿ..’? ಎ೦ದು ಕೇಳುವುದೇ ತಪ್ಪೇನೋ.ಇತ್ತೀಚಿನ ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟನೆಗೆ ತಮಗೊ೦ದು ಪತ್ರ ಬರೆಯೊಣವೆನಿಸಿತು.ಪತ್ರವನ್ನು ನೇರವಾಗಿ ತಮಗೆ ಕಳುಹಿಸೊಣವೆ೦ದುಕೊ೦ಡೆ.ಆದರೆ ಇತ್ತೀಚೆಗೆ ತಾವು ಯಾವುದೇ ಪತ್ರ , ಪತ್ರಿಕೆ,ಓದುವುದಿಲ್ಲವ೦ತೆ.ಮೊನ್ನೆಯೊ೦ದು ಟಿವಿ ಸ೦ದರ್ಶನದಲ್ಲಿ ತಾವೇ ಹೇಳಿದ್ದೀರಿ.ಹಾಗಾಗಿ ಸುಮ್ಮನೇ ಏಕೆ ಐದು ರೂಪಾಯಿ ಹಾಳು ಮಾಡುವುದೆ೦ದು ಇಲ್ಲಿ ಹಾಕುತ್ತಿದ್ದೇನೆ.ಸಾಧ್ಯವಾದರೇ ಓದಿ,ಓದದಿದ್ದರೂ ಚಿ೦ತೆಯಿಲ್ಲ.

ಏನಾಗಿದೆ ಸರ್ ನಿಮಗೆ..? ಮತಿಭ್ರಮಣೆಯಾ ..? ಹೊಸದೊ೦ದು ಪ್ರಶಸ್ತಿ ಪಡೆಯುವ ಉಮ್ಮೇದಿಯಾ…?ಅಥವಾ ಸುದ್ದಿಯಲ್ಲಿರುವ ರೋಗವಾ..? ಒ೦ದು ಗೊತ್ತಾಗುತ್ತಿಲ್ಲ ಒ೦ದು ಕಾಲದಲ್ಲಿ ನಿಮ್ಮ ಸಾಹಿತ್ಯವನ್ನು ಪ್ರೀತಿಸುತ್ತಿದ್ದವರು ನಾವು,ನಿಮಗಾಗಿ ಎಷ್ಟು ಸ೦ತೋಷಿಸುತ್ತಿದ್ದೇವು ಗೊತ್ತಾ…? ನಿಮ್ಮದೊ೦ದು ಕತೆ ಪತ್ರಿಕೆಯಲ್ಲಿ ಬ೦ದಿದ್ದರೇ ನಮಗದುವೇ ಮೃಷ್ಟಾನ್ನ,ನಿಮ್ಮ ಹೊಸದೊ೦ದು ಪುಸ್ತಕ ಬಿಡುಗಡೆಯಾದರೇ ನಮಗೆ ಆ ದಿನ ಸ೦ಭ್ರಮ.ನಿಮಗೊ೦ದು ಪ್ರಶಸ್ತಿ ಬ೦ದರೇ ನಿಮಗಿ೦ತಲೂ ಹೆಚ್ಚು ಸ೦ತೊಷಿಸಿದವರು ನಾವು.ನಿಮಗೆ ಜ್ನಾನಪೀಠ ಬ೦ದಾಗಲ೦ತೂ ’ನೋಡ್ರೋ,ನಮ್ಮ ಗುರುಗಳಿಗೆ ದೇಶದ ಅತ್ಯುನ್ನತ ಗೌರವ ಬ೦ತು’ಎ೦ದು ಊರೆಲ್ಲಾ ಹೇಳಿಕೊ೦ಡು ತಿರುಗಿದೆವು.ನಿಮ್ಮ ಮೇಲಿನ ಅತಿಯಾದ ಅಭಿಮಾನಕ್ಕೋ ಏನೋ,ನೀವೇನೇ ಮಾಡಿದರೂ ,ಹೇಳಿದರೂ ಸಹಿಸಿಕೊ೦ಡೆವು.ಅನೇಕ ಕಾದ೦ಬರಿಗಳಲ್ಲಿ ಬ್ರಾಹ್ಮಣ ಯುವತಿಗೆ ದಲಿತ ಯುವಕನೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ,ಅಥವಾ ಬ್ರಾಹ್ಮಣ ಯುವಕನೊಬ್ಬನಿಗೆ ,ದಲಿತ ಯುವತಿಯೊಬ್ಬಳೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ಚಿತ್ರಿಸಿದಿರಿ. ಕೊ೦ಚ ಇರುಸುಮುರುಸಾದರೂ ’ಎಲ್ಲಾ ಕಡೆ ನಡೆಯೋದೆ ಬಿಡು ಇದು’ ಎ೦ದು ಸುಳ್ಳುಸುಳ್ಳೆ ನಿಮ್ಮನ್ನು ಸಮರ್ಥಿಸಿದೆವು.’ಭೈರಪ್ಪ ,ಒಬ್ಬ ಡಿಬೇಟರ್ ಆತನನ್ನು ಕಾದ೦ಬರಿಕಾರನೆ೦ದು ಒಪ್ಪಿಕೊಳ್ಳಲು ಕಷ್ಟವಾಗುತ್ತದೆ’ ಎ೦ದಿರಿ.’ಆವರಣ’ ಓದಿದ ನ೦ತರವೂ ನೀವು ಹೇಳಿದ್ದೇ ಸರಿ ಎ೦ದು ವಾದಿಸಿದೆವು.’ಮೋದಿ ಪ್ರಧಾನಿಯಾದರೇ ದೇಶ ಬಿಡುತ್ತೇನೆ ’ಎ೦ದಿರಿ,ನಾವು ಮುಜುಗರಕ್ಕೊಳಗಾದೆವು.ಆದರೆ ಈಗ ಇದೇನಿದು ನಿಮ್ಮ ಹೊಸರಾಗ..? ಆರ್.ಎಸ್.ಎಸ್. ಎ೦ದರೇ ’ಹುಚ್ಚು ನಾಯಿ ರೋಗ’ಎ೦ದುಬಿಟ್ಟೀರಿಲ್ಲ ಈಗ.. ಹೇಗೆ ಸಮರ್ಥಿಸುವುದು ನಿಮ್ಮ ಇ೦ಥ ನೀಚ ತಪ್ಪನ್ನು ಗುರುಗಳೇ.ದಯವಿಟ್ಟು ಕ್ಷಮಿಸಿ,ನಮ್ಮಿ೦ದ ಸಾಧ್ಯವಿಲ್ಲ.
ಮತ್ತಷ್ಟು ಓದು »

23
ಸೆಪ್ಟೆಂ

ವಿರೋಧಿಗಳೆಸೆದ ಕಲ್ಲನ್ನೇ ತನ್ನ ಏಳಿಗೆಯ ಮೆಟ್ಟಿಲಾಗಿಸಿಕೊಂಡ ಮೋದಿ

– ಪ್ರಸನ್ನ  ಬೆಂಗಳೂರು

NaModiಭಾರತದ ರಾಜಕೀಯ ಇತಿಹಾಸದಲ್ಲಿ ೧೦ ವರ್ಷಗಳಿಗೂ ಹೆಚ್ಚು ಕಾಲ ವಿರೋಧ ಪಕ್ಷಗಳು,ಮಾಧ್ಯಮಗಳು,ಪ್ರಗತಿಪರರು ಟಾರ್ಗೆಟ್ ಮಾಡಿರುವುದು ನರೇಂದ್ರ ಮೋದಿಯವರನ್ನು . ಮೋದಿಯವನರನ್ನು  ಬಿಜೆಪಿ ತನ್ನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಮೇಲೆ ಅವರ ಮೇಲಿನ ಹಿಂದಿನ ಆರೋಪಗಳ ಜೊತೆ ಜೊತೆಗೆ ಅವರ ಅಭಿವೃದ್ಧಿ ಕಾರ್ಯಗಳನ್ನು ವಿಶ್ಲೇಷಣೆಗೊಳಪಡಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯಾದವರ ಬಗ್ಗೆ ಇಷ್ಟೊಂದು ವಿಶ್ಲೇಷಣೆ ವಿಮರ್ಶೆ ಪರೀಕ್ಷೆ ನಡೆದಿತ್ತೆ? ನಡೆದು ಅಂತಹ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬಂದಿದ್ದರೆ ಬಹುಶಃ ಭಾರತವಿಂದು ಇಂತಹ ಪರಿಸ್ಥಿತಿಯಲ್ಲಿರುತ್ತಿರಲಿಲ್ಲ ಅಲ್ಲವೆ? ಮೋದಿ ಈ ಪರಿ ಬೆಳೆದಿದ್ದಕ್ಕೆ ಕಾರಣ ಹುಡುಕುತ್ತಾ ಹೊರಟವನಿಗೆ ಕಂಡದ್ದು ಈ ವಿಭಿನ್ನವಾದ ಆದರೆ ತೆರೆಮರೆಯ ಕಾರಣ.

ಅದು ತನ್ನ ಕುಕೃತ್ಯಕ್ಕೆ ತಾನೆ ಬಲಿಯಾದ ಆತನ ದ್ವೇಷ ವರ್ಗ.ಇವರ ದ್ವೇಷ,’ತನ್ನೊಡಲ ಬೆಂಕಿ ತನ್ನನ್ನಲ್ಲದೆ ಅನ್ಯರನ್ನು ಸುಡದು‘ ಎಂಬ ಜನಪ್ರಿಯ ವಚನದಂತೆ ದ್ವೇಷಿಗಳೇ ನಾಲಿಗೆ ಕಚ್ಚಿಕೊಳ್ಳುವಂತಾಗಿರುವುದು ಸುಳ್ಳಲ್ಲ. ತಾನು ವೈಭವೀಕರಿಸಿದ ಸುಳ್ಳು ತನಗೇ ತಿರುಗುಬಾಣವಾಗಿರುವುದು ಅವರ ಈಗಿನ ಬಡಬಡಿಕೆಗೆ ಕಾರಣವಾಗಿದೆ. ಈ ವರ್ಗ ಮೋದಿಯ ವಿರುದ್ದ ಮಾಡಿದ ಅಪಪ್ರಚಾರಗಳೇ ಅಪಚಾರಗಳೇ ಅವರಿಗೆ ಇಂದು ಮುಳುವಾಗಲು ಮೂಲ ಕಾರಣವೆಂದು ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲದಿದ್ದರೂ ಅದು ಸತ್ಯವಲ್ಲವೆಂದು ತಳ್ಳಿ ಹಾಕಲು ಅವರಿಗೆ ಸಾಧ್ಯವಾಗುವುದಿಲ್ಲ.

ಮೋದಿ ಮಾಡದ ತಪ್ಪಿಗೆ ಅವನನ್ನು ಹೊಣೆಗಾರನನ್ನಾಗಿಸುವ ಮೂಲಕ ಆತನ ಬೆಳವಣಿಗೆ ದಾರಿ ಮಾಡಿಕೊಟ್ಟದ್ದು ಹೇಗೆ?

ಮತ್ತಷ್ಟು ಓದು »

20
ಸೆಪ್ಟೆಂ

ಅಭಿವ್ಯಕ್ತಿ ಸ್ವಾತಂತ್ರ್ಯ ಅನ್ನುವುದು ಯಾರ ಸ್ವತ್ತು ಅನಂತ ಮೂರ್ತಿಗಳೇ?

– ನವೀನ್ ನಾಯಕ್

URAಮೊನ್ನೆ ಮೊನ್ನೆ ನಡೆದ ಒಂದು ಕಾರ್ಯಕ್ರಮದಲ್ಲಿ ಅನಂತ ಮೂರ್ತಿಯವರು ” ನರೇಂದ್ರ ಮೋದಿ ಪ್ರಧಾನಿಯಾಗುವ ದೇಶದಲ್ಲಿ ನಾನು ಬದುಕಿರಲು ಇಷ್ಟಪಡುವುದಿಲ್ಲ ” ಎಂಬ ಹೇಳಿಕೆ ನೀಡಿ ಮೋದಿ ಅಭಿಮಾನಿಗಳ ವಿರೋಧಕ್ಕೆ ಗುರಿಯಾಗಿದ್ದರು.ತದನಂತರ ನಡೆದ ಸಂದರ್ಶನದಲ್ಲಿ ಅನಂತ ಮೂರ್ತಿಯವರು ” ಮೋದಿ ಪ್ರಧಾನಿಯಾಗಬಾರದೆಂದು ” ಎಂಬ ಉದ್ದೇಶದಿಂದ ಹಾಗೆ ಹೇಳಿದೆ. ಯೌವನದಲ್ಲಿಯಾಗಿದ್ದರೆ ಮೋದಿ ಪ್ರಧಾನಿಯಾಗಗೊಡವುದಿಲ್ಲ ಅಂತ ಹೇಳುತ್ತಿದ್ದೆ ಈಗ ವಯಸ್ಸಾಗಿದೆ ಅದಕ್ಕೆ ಹಾಗೆ ಹೇಳಿದೆ,ನನ್ನ ನಿಲುವೊಂದೆ ಮೋದಿ ಈ ದೇಶದ ಪ್ರಧಾನಿಯಾಗಬಾರದು. ಇದರರ್ಥ ಮೋದಿ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆಂದು ಅರ್ಥವಲ್ಲ ವೆಂದು ಸಮಜಾಯಿಸಿ ನೀಡಿದರು.

ಹಾಗೆ ಮೋದಿ ಅಭಿಮಾನಿಗಳು ನೀಡುತ್ತಿರುವ ಉತ್ತರ ಮತ್ತು ಅವರು ಪ್ರತಿಕ್ರಿಯಿಸುತ್ತಿರುವ ರೀತಿ ನೋಡಿದರೆ ಅಧಿಕಾರವಿಲ್ಲದೇನೇ ಹೀಗೆ ಇನ್ನು ಮೋದಿ ಅಧಿಕಾರವಹಿಸಿಕೊಂಡ ಮೇಲೆ ಅಭಿವ್ಯಕ್ತಿ ಸ್ವಾತಂತ್ರ್ಯಇರೋದೇ ಇಲ್ಲ,  ಇದು ನಿಜವಾದ ಅಪಾಯವೆಂದಿದ್ದಾರೆ. ಅದೇ ಸಂದರ್ಶನದಲ್ಲಿ ಪ್ರಜಾಪ್ರಭುತ್ವವಾದಿಗೆ ಪ್ರಜಾಪ್ರಭುತ್ವವನ್ನು  ಸಂಶಯದಿಂದ ನೋಡುವ ಶಕ್ತಿಯಿರಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳನ್ನು ಮರುಳು ಮಾಡುವ ವಿಧಾನದಿಂದ ಆಯ್ಕೆಯಾಗಿ ಬರುವವರನ್ನು ವಿರೋಧಿಸುವ ಗುಣವನ್ನು ಬೆಳೆಸಿಕೊಳ್ಳಬೇಕು.

ಅನಂತ ಮೂರ್ತಿಯವರಿಗೆ ಮಾತ್ರವೇ ಅಥವಾ ಅವರನ್ನು ಬೆಂಬಲಿಸುವವರಿಗೆ ಮಾತ್ರವೇ ಇರುವುದಾ ಆಭಿವ್ಯಕ್ತಿ ಸ್ವಾತಂತ್ರ್ಯ? ಇಲ್ಲಿ ಒಬ್ಬರ ಉದ್ದೇಶ ಮಾತ್ರ ಸ್ಪಷ್ಟಪಡಿಸಿಕೊಂಡರೆ ಅದು ಫ್ಯಾಸಿಸ್ಷ್ ಧೋರಣೆಯಾಗುತ್ತದೆ. ಕೇವಲ ಅನಂತಮೂರ್ತಿಯವರ ಹೇಳಿಕೆಗೆ ಅಥವ ಅವರನ್ನು ಸಮರ್ಥಿಸುವ ಹಿಂಬಾಲಕರಿಗೆ ಮಾತ್ರವಾ ಹಿಂದೆ ಉದ್ದೇಶವಿರುವುದು. ಆ ಹೇಳಿಕೆಯನ್ನು ಟೀಕಿಸುವವರಿಗೆ ಉದ್ದೇಶವಿಲ್ಲವೇ. ಅನಂತಮೂರ್ತಿಯವರು ನಾನು ಮೋದಿ ಪ್ರಧಾನಿಯಾದರೆ ಬದುಕಿರಲು ಇಷ್ಟಪಡುವುದಿಲ್ಲ ಎಂಬ ಹೇಳಿಕೆಗೆ ಅದಕ್ಕೆ ವಿರೋಧವಾಗಿ ನೀವು ಸಾಯಿರಿ ಎಂಬ ಹೇಳಿಕೆಯನ್ನು ಮೋದಿ ಅಭಿಮಾನಿಗಳು ಕೊಟ್ಟಿದ್ದಾರೆ. ಇಲ್ಲಿ ಮೋದಿ ಅಭಿಮಾನಿಗಳು ಕತ್ತಿ  ಕುಡಾರಿ ಹಿಡಿದುಕೊಂಡು ಅನಂತಮೂರ್ತಿಯವರ ಹಿಂದೆ ಬಿದ್ದಿದ್ದಾರಾ, ಇಲ್ಲವಲ್ಲ. ಅವರ ಹೇಳಿಕೆಗೆ ಇದು ವಿರೋಧವಾಗುತ್ತೆ ವಿನಃ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಿಲ್ಲ. ಹೇಳಿಕೆಯ ಹಿಂದಿರುವ ಉದ್ದೇಶ ಎರಡೂ ಕಡೆ ಗಮನಿಸುವುದು ಉತ್ತಮ.

ಮತ್ತಷ್ಟು ಓದು »

19
ಸೆಪ್ಟೆಂ

ಸಿರಿಯಾದಲ್ಲಿ ಶಬ್ದವಿಲ್ಲದ ಯುದ್ಧವಂತೂ ನಡೆಯಲಿದೆ

– ಎಸ್.ಸುನಿಲ್ ಕುಮಾರ್

ರಾಷ್ಟೀಯ ಪ್ರಧಾನ ಕಾರ್ಯದರ್ಶಿ, YOUTH FOR NATION

ಸೈಬರ್ ಯುದ್ಧಈ ಬಾರಿ ಸಿರಿಯಾ ಮೇಲೆ ಕ್ಷಿಪಣಿ ಯುದ್ಧವೇರ್ಪಟ್ಟರೂ, ಕ್ಷಿಪಣಿ ಬಳಸದೇ ಇದ್ದರೂ ಸೈಬರ್ ಯುದ್ಧವಂತೂ ನಿಶ್ಚಿತವಾಗಿ ನಡೆಯಲಿದೆ. ಇದಕ್ಕೆ ಯಾರ ಅಪ್ಪಣೆಯೂ ಬೇಕಿಲ್ಲ. ಯಾರ ಸಮ್ಮತಿಗೂ ಕಾಯಬೇಕಿಲ್ಲ. ಏಕೆಂದರೆ ಇದೊಂದು ಮಾಯಾಯುದ್ಧ. ಇಲ್ಲಿ ಶತ್ರು ಎಲ್ಲಿರುವನು ಎಂದು ತಿಳಿಯುವುದೇ ಇಲ್ಲ. ದಾಳಿ ನಡೆಯುವುದೆ ಗೊತ್ತಾಗುವುದಿಲ್ಲ, ದಾಳಿ ಎಂದು ಶುರುವಾತು, ಎಲ್ಲಿ ಮುಗಿತು ಒಂದೂ ತಿಳಿಯುವುದಿಲ್ಲ. ತಿಳಿಯುವುದೊಂದೆ ಅದರಿಂದಾಗುವ ಹಾನಿ ಮಾತ್ರ, ಸೈಬರ್ ಯುದ್ಧದ ಪರಿಣಾಮ ಅತ್ಯಂತ ಅಪಾಯಕಾರಿ.

ಜೂನ್ ೨೦೧೦ ರಲ್ಲಿ ಇರಾನಿನ ಅಣುಸ್ಥಾವರಗಳು ಸ್ಟಕ್ಸ್‌ನೆಟ್ ಎಂಬ ಕಂಪ್ಯೂಟರ್ ವೈರಸ್ ದಾಳಿಂದ ನಿಷ್ಕ್ರಿಯಗೊಳ್ಳುತ್ತದೆ. ನಿರ್ದಿಷ್ಟವಾಗಿ ಅಣುಸ್ಥಾವರದ ಸೆಂಟ್ರಿಫ್ಯೂಜ್‌ಗಳನ್ನೆ ಗುರಿಯಾಗಿರಿಸಿ ಇರಾನಿನ ಅಣುಶಕ್ತಿ ಉತ್ಪಾದನಾ ಸಾಮರ್ಥ್ಯವನ್ನು ಕುಂಠಿತಗೊಳಿಸಿದ ಸ್ಟಕ್ಸ್‌ನೆಟ್  ಅಮೆರಿಕಾ ಮತ್ತು ಇಸ್ರೇಲ್ ಸೇರಿ ಇರಾನಿನ ವಿರುದ್ಧ ಬಳಸಲು ತಯಾರಿಸಿದ ಸೈಬರ್ ಅಸ್ತ್ರ ಎಂದು ಜೂನ್ ೧. ೨೦೧೨ ರಂದು “ನ್ಯೂಯಾರ್ಕ್ ಟೈಮ್ಸ್” ವರದಿ ಮಾಡುತ್ತದೆ. ಹಾಗೆಯೆ ಈ ಕಾರ್ಯಾಚರಣೆಯ ಹೆಸರು “ಆಪರೇಷನ್ ಒಲಂಪಿಕ್ ಗೇಮ್ಸ್” ಎಂಬುದನ್ನು ಉಲ್ಲೇಖಿಸುತ್ತದೆ.
ದೇಶವೊಂದು ಯಾವುದೇ ಸೈನಿಕರನ್ನು ಕಳುಹಿಸದೆ, ವಾಯುಪಡೆ ನೌಕಾಪಡೆಗಳನ್ನು ನಿಯೋಜಿಸದೆ ಗುಂಡಿನ ಆರ್ಭಟವೂ ಇಲ್ಲದೆ ಹೇಗೆ ಯುದ್ಧ ಮಾಡಬಹುದು ಹಾಗೂ ಇದರಿಂದ ಹೇಗೆ ಶತ್ರು ರಾಷ್ಟ್ರವನ್ನು ಹಣೆಯಬಹುದೆಂಬ ಪಾಠವನ್ನು ಅಮೆರಿಕಾ ಮತ್ತು ಇಸ್ರೇಲ್ ಜಗತ್ತಿಗೆ ಹೇಳಿಕೊಟ್ಟವು.

ಮತ್ತಷ್ಟು ಓದು »

17
ಸೆಪ್ಟೆಂ

ಅನ೦ತಮೂರ್ತಿ ,ಮೋದಿ ಮತ್ತು ಅಭಿವ್ಯಕ್ತಿ ಸ್ವಾತ೦ತ್ರ್ಯ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Modi N URAಅನುಚಿತ ಕಾರಣಗಳಿಗೆ ಯು.ಆರ್. ಅನ೦ತಮೂರ್ತಿ ಸುದ್ದಿಯಾಗುವುದು ಹೊಸದೇನಲ್ಲ.ಈಗ ಮತ್ತೆ ಅ೦ಥಹದ್ದೇ ಕಾರಣದಿ೦ದ ಅನ೦ತಮೂರ್ತಿ ಸುದ್ದಿಯಲ್ಲಿರುವುದು ಆಗಲೇ ಹಳೆಯ ವಿಷಯವೆನಿಸತೊಡಗಿದೆ.’ಮೋದಿ ಪ್ರಧಾನಿಯಾದರೇ ನಾನು ಈ ದೇಶದಲ್ಲಿರುವುದಿಲ್ಲ’ ಎ೦ಬ೦ತ ಹೇಳಿಕೆ ಕೊಟ್ಟು ಮೂರ್ತಿ ,ಸಾಮಾನ್ಯ ಜನರ ,ಅ೦ತರ್ಜಾಲ ಬರಹಗಾರರ ಕೆ೦ಗಣ್ಣಿಗೆ ಗುರಿಯಾಗಿದ್ದಾರೆ.ಅವರ ಪರ ವಿರೋಧದ ಮಾತುಗಳು ಧಾರಾಕಾರವಾಗಿ ಸಾಮಾಜಿಕ ತಾಣಗಳಲ್ಲಿ ,ವೃತ್ತಪತ್ರಿಕೆಗಳಲ್ಲಿ ಹರಿಯತೊಡಗಿವೆ.ಅವರು ದೇಶವನ್ನ ಬಿಟ್ಟು ಪಾಕಿಸ್ತಾನಕ್ಕೋ,ಅಫಘಾನಿಸ್ತಾನಕ್ಕೋ ಹೋಗಲಿ ಎ೦ದು ಕೆಲವರೆ೦ದರೇ, ಹಾಗೆಲ್ಲ ಅವರ ಬಗ್ಗೆ ಮಾತನಾಡಬಾರದು ,ಅವರು ಹಿ೦ದೆಲ್ಲ ಕನ್ನಡ ಸಾಹಿತ್ಯಕ್ಕೆ ಕೊಟ್ಟ ಕೊಡುಗೆಯನ್ನು ಮರೆತು ಮಾತನಾಡುವುದು ತಪ್ಪು ಎ೦ದು ವಾದಿಸುತ್ತಾರೆ ಕೆಲವರು.ಬಿಡಿ ಅದು ಅವರವರ ಭಾವಕ್ಕೆ,ಅವರವರ ಭಕುತಿಗೆ.

ಆದರೆ ಇಲ್ಲೊ೦ದು ವಿಷಯವನ್ನು ಗಮನಿಸಲೇಬೇಕು. ಅನ೦ತಮೂರ್ತಿ ಜಾತ್ಯಾತೀತವಾದಿಗಳೆ೦ದು ಹಾಗಾಗಿ ಅವರು ಏನೇ ಹೇಳಿದರೂ ಹಿ೦ದೂಗಳು ಅವರನ್ನು ಹೀಗೆಳೆಯುತ್ತಾರೆ೦ದೂ ಕೆಲವರು ವಾದಿಸುತ್ತಾರೆ.ಅಲ್ಲದೇ ಎಸ್.ಎಲ್ ಭೈರಪ್ಪ ಹಿ೦ದುತ್ವವಾದಿಯಾಗಿರುವುದರಿ೦ದ ಅವರು ಏನೇ ಬರೆದರೂ ಅವರನ್ನು ಹೊಗಳಿ ಅಟ್ಟಕ್ಕೇರಿಸುತ್ತಾರೆ೦ಬುದೂ ಇವರ ವಾದ.ಇದು ಶುದ್ಧ ಮೂರ್ಖತನವೆನ್ನದೇ ಬೇರೆ ವಿಧಿಯಿಲ್ಲ.’ವ೦ಶವೃಕ್ಷ’ ದಲ್ಲಿನ ಸಾ೦ಪ್ರದಾಯಿಕ ಬ್ರಾಹ್ಮಣ ಮನೆಯಲ್ಲಿ ’ನಿಯೋಗ’( ಮಕ್ಕಳನ್ನು ಪಡೆಯುವುದಕ್ಕೋಸ್ಕರ ಗ೦ಡನನ್ನು ಹೊರತುಪಡಿಸಿ ಬೇರೊಬ್ಬನೊ೦ದಿಗೆ ಸ೦ಬ೦ಧ ಹೊ೦ದುವುದು) ಪದ್ದತಿಯಿ೦ದ ಜನಿಸುವ ಶ್ರೀನಿವಾಸ ಶ್ರೋತ್ರಿಯ ಪಾತ್ರವನ್ನು ಸೃಷ್ಟಿಸಿದವರು ಭೈರಪ್ಪನವರಲ್ಲವೇ…? ಸ೦ಗೀತದ ಕಥಾವಸ್ತುವಿದ್ದರೂ , ಒಬ್ಬ ಶಾಸ್ತ್ರೀಯ ಸ೦ಗೀತದ ಗುರುವೊಬ್ಬನೊ೦ದಿಗೆ ,ಅವನ ಶಿಷ್ಯೆಗಿರಬಹುದಾದ ಅನೈತಿಕ ಸ೦ಬ೦ಧ,ನಾಟ್ಯ ಪ್ರವೀಣೆಯೊಬ್ಬಳಿಗೆ ಅವಳ ಶಿಷ್ಯನೊ೦ದಿಗಿರಬಹುದಾದ ಸ೦ಬ೦ಧಗಳ ಬಗ್ಗೆ ಎಳೆ ಎಳೆಯಾಗಿ ಬಿಡಿಸಿಡುವ ’ಮ೦ದ್ರ’ ಯಾರ ಕಾದ೦ಬರಿ..?

ಮತ್ತಷ್ಟು ಓದು »

9
ಸೆಪ್ಟೆಂ

ಧಿಡೀರ್ ಖ್ಯಾತಿ(?)

– ಡಾ. ಜ್ಞಾನದೇವ್ ಮೊಳಕಾಲ್ಮುರು

ಡುಂಢಿನೀನೊಬ್ಬ ಅನಾಮಧೇಯ ಈ ನಾಡಿನಲ್ಲಿ. ನಿನ್ನ ಹಿ೦ದಿನ ಚರಿತ್ರೆ ನಮಗೆ ಬೇಕಿಲ್ಲ.
ನಿನಗೆ ಧಿಡೀರ್ ಖ್ಯಾತಿ, ಹೆಸರು ಬೇಕಾ? ಬುದ್ದಿಜೀವಿ, ಸೆಕ್ಯುಲಾರ್ ಎ೦ಬ ಮಾಡರ್ನ್ ವಿಶೇಷಣ ಬೇಕಾ?
ಸೋ ಕಾಲ್ಡ್ ಈ ನಾಡಿನ ಬುದ್ಧಿಜೀವಿಗಳ ಜ್ಞಾನಪೀಠಿಗಳ ಸೆಕ್ಯುಲರ್ವಾದಿಗಳ, ಪ್ರಗತಿಪರರ ಸಖ್ಯ, ಸಪೋರ್ಟ್, ಐಡೆ೦ಟಿಟಿ, ಭೇಷ್ ಬೇಕಾ?
ಈ ನಾಡಿನ ಪ್ರಬಲ ಮಾಧ್ಯಮ ಟಿವಿ, ಪತ್ರಿಕೆಯಲ್ಲಿ ಹೆಡ್ ಲೈನ್ಸ್ ಕುದುರಿಸಿಕೊಳ್ಳುವ ಬಯಕೆ ಇದೆಯಾ?
ಟಿವಿ ಪತ್ರಿಕೆಯಲ್ಲಿ ಸ೦ದರ್ಶನ, ಸ೦ವಾದ ಗೋಷ್ಠಿಯಲ್ಲಿ ರಾರಾಜಿಸಬಹುದು ಎ೦ಬ ಅದಮ್ಯ ಕನಸು ಇದೆಯಾ?
ಗುಡ್..
ಇದಕ್ಕೆಲ್ಲಾ ಹೆಚ್ಚು ಶ್ರಮ ಪಡಬೇಕಿಲ್ಲ, ಹೆಚ್ಚು ಹಣದ ಅಗತ್ಯವೂ ಇಲ್ಲ.
ಜಸ್ಟ್ ಇಷ್ಟನ್ನು ಮಾಡು..
ಹಿ೦ದೂ ಧರ್ಮದ, ಹಿ೦ದೂ ಸ೦ಸ್ಕೃತಿಯ, ಹಿ೦ದೂ ಮಹಾಕಾವ್ಯಗಳ, ಪುರಾಣಗಳ, ಹಿ೦ದೂ ದೇವತೆಗಳನ್ನು ಸ್ವಲ್ಪ ಲೇವಡಿ ಮಾಡಿದರೆ ಸಾಕು, ಜಾಸ್ತಿಯಾದರೆ ಇನ್ನೂ ಜಾಸ್ತಿ ಖ್ಯಾತಿ!
ಅದು ಸ೦ಶೋಧನೆ(?)ಯ ಹೆಸರಿನಲ್ಲಿರಬಹುದು ಅಥವಾ ಅಭಿವ್ಯಕ್ತಿ ಸ್ವಾತ೦ತ್ರ್ಯದ ಹೆಸರಲ್ಲಿರಬಹುದು, ಅಥವಾ ಪ್ರಗತಿಪರ ಧೋರಣೆಯ ಸಾಹಿತ್ಯದ ಹೆಸರಲ್ಲಿರಬಹುದು ಅಥವಾ ನೀನು ಸೃಷ್ಟಿಸುವ ಸುಳ್ಳು ಸುಳ್ಳು ಜೊಳ್ಳು ಜೊಳ್ಳಿನ ಸೃಜನಶೀಲತೆಯ ಹೆಸರಲ್ಲಿರಬಹುದು..
Dont Worry..
ಮತ್ತಷ್ಟು ಓದು »

4
ಸೆಪ್ಟೆಂ

“ಡುಂಢಿ” ಅನ್ನುವ ಕೃತಿ ಮತ್ತು “ಸೆಕ್ಯುಲರಿಸಂ” ಅನ್ನುವ ಅವಕಾಶವಾದ …!

– ರಾಕೇಶ್ ಶೆಟ್ಟಿ

Dundi mattu CSLC“ಡುಂಢಿ”ಯ ಬಗ್ಗೆ ಗೆಳೆಯರೊಬ್ಬರ ಜೊತೆ ಮಾತನಾಡುತಿದ್ದೆ. ಅವರು “Immortals of Meluha” ಪುಸ್ತಕವನ್ನು ಉಲ್ಲೇಖಿಸಿ, “ಆ ಪುಸ್ತಕದಲ್ಲಿ ಶಿವ, ಗಾಂಜಾ ಸೇದುತ್ತಾನೆ,ಟಿಬೆಟಿಯನ್ ಮೂಲದವನು ಅಂತ ಬರೆದಿತ್ತು ಅದು ಭರ್ಜರಿ ಸೇಲ್ ಆಗಿತ್ತು.ಈ ಡುಂಢಿ ಪ್ರಿಂಟ್ ಹಾಕಿಸಿದ್ದೇ ೧೫೦-೨೦೦ ಪ್ರತಿಯಂತಲ್ಲ” ಅಂದರು. ನಾನಂದೆ “ನಿಮಗೆ, ’ದೇವರ ಪಾಲಿಟಿಕ್ಸ್’ ಅರ್ಥವಾಗಿಲ್ಲ. ಆ ಪುಸ್ತಕದಲ್ಲಿ ಶಿವನನ್ನು, ’ಟಿಬೆಟಿಯನ್’ ಅನ್ನುವ ಬದಲೋ ’ಬ್ರಾಹ್ಮಣ/ಆರ್ಯ’ ಅಂತೇನಾದರೂ ಚಿತ್ರಿಸಿದ್ದರೇ ಈಗ ಡುಂಢಿಯ ಪರ ಮಾತನಾಡುತ್ತಿರುವ ಕರ್ನಾಟಕದ ಸೋ-ಕಾಲ್ಡ್ ಸೆಕ್ಯುಲರ್ ಗಳೆಲ್ಲ ಆ ಪುಸ್ತಕದ ವಿರುದ್ಧ ಮಾತನಾಡುತಿದ್ದರು”.

“ಒಬ್ಬ ನಕಲಿಯೋ ಅಥವಾ ಹಲವಾರು ಅಸಲಿಗಳ ಒಂದು ಸಂಕೇತವೊ ಆಗಿರುವ ಗಣಪತಿಯನ್ನು ಕುರಿತು ಹಲವು ಪುರಾಣಗಳು ಹಲವಾರು ರೀತಿಯ ಕಥೆಗಳನ್ನು ಹೇಳಿವೆ. ಈ ಢುಂಢೀಯೂ ಹಾಗೇ ಒಂದು ಮನೋರಂಜನೆ ಅಥವಾ ವಿಚಾರಕ್ಕೆ ಹಚ್ಚಬಹುದಾದ, ನಿಜವೆಂದು ನಂಬಲು ಇಷ್ಟ ಪಡುವ ಹೂರಣದ ಒಂದು ಕಲ್ಪನೆಯ ಪುರಾಣವೇ.” ಅನ್ನುವ ಮಾತುಗಳನ್ನಿಟ್ಟುಕೊಂಡ “ಡುಂಢಿ” ಅನ್ನುವ ಕೃತಿಯನ್ನು ಓದದೇ ಅದು ಕೃತಿಯೋ,ವಿಕೃತಿಯೋ ಅಂತ ನಿರ್ಧಾರ ಮಾಡುವುದು ಹೇಗೆ? ಅನ್ನುವ ಪ್ರಶ್ನೆಯನ್ನು ಮುಂದಿಡುತ್ತ ಮತ್ತು ಒಬ್ಬ ಲೇಖಕನನ್ನು ಬಂಧಿಸುವಂತ ಮಟ್ಟದವರೆಗೂ ಹೋಗಿದ್ದನ್ನು ವಿರೋಧಿಸುತ್ತಲೇ,ಈ ಮಾತು ಕೇಳುತಿದ್ದೇನೆ.ನಾನು ನನ್ನ ಗೆಳೆಯರಿಗೆ ಹೇಳಿದ ಮಾತಿನಲ್ಲಿ ಸತ್ಯವಿರಬಹುದು ಅಂತ ನಿಮಗೂ ಅನ್ನಿಸುವುದಿಲ್ಲವೇ? (“ಶಿವ”ನಮ್ಮವನು ಅವನನ್ನು ಹೈಜಾಕ್ ಮಾಡಿದ್ದಾರೆ ಅಂತ ಬರೆದವರನ್ನೂ ನೋಡಿದ್ದೇನೆ. ದೇವರನ್ನೂ ಈ ಮಂದಿ ತಮ್ಮ ಗುಂಪಿನೊಳಗೆ ಸೇರಿಸಿಕೊಳ್ಳುತ್ತಾರೆ ಶಿವಾ ಶಿವಾ…!)

ಮತ್ತಷ್ಟು ಓದು »

3
ಸೆಪ್ಟೆಂ

ರೂಪಾಯಿ,ಪೆಟ್ರೋಲ್ ಮತ್ತು ಸ್ವದೇಶಿ

– ಪ್ರಶಸ್ತಿ.ಪಿ ಶಿವಮೊಗ್ಗ

usd_to_inr_since99ರೂಪಾಯಿ ಮೌಲ್ಯ ಅಪಮೌಲ್ಯ ಆಗ್ತಾ ಆಗ್ತಾ ಅದ್ರ ಬೆಲೆ ಅರವತ್ತೆಂಟು ದಾಟಾಯ್ತು.. ಇನ್ನಾದ್ರೂ ನಾವು ಎಚ್ಚೆತ್ತಿಲ್ಲ. ಮನೆಗೊಂದು ಕಾರು, ತೆಲೆಗೊಂದು ಬೈಕು ಅಂತ ಜುಂ ಜಾಮಾಗಿರೋ ನಾವು ನಮ್ಮೀ ವೈಭವದಿಂದಲೇ ಪೆಟ್ರೋಲ್ ದರ ಗಗನಕ್ಕೇರಿರೋದು ಅಂತಲೂ ತಿಳೀತಿಲ್ಲ. ಪೆಟ್ರೋಲ್ ಬೆಲೆ ಏನಾದ್ರಾಗ್ಲಿ, ಅದ್ರಿಂದ ಡಾಲರ್ ದರ ಅರವತ್ತಲ್ಲ ನೂರು ಮುಟ್ಟಿದ್ರೂ ನಮಗೇನು ಅಂದ್ರಾ ? ಡಾಲರ್ ದರ ಹೆಚ್ಚಾದಷ್ಟೂ ಟೆಕ್ಕಿಗಳಿಗೆ, ರಫ್ತು ಮಾಡೋರಿಗೆ ಲಾಭವೇ ಅಲ್ವಾ ? ದೇಶಕ್ಕೇನಾದ್ರೆ ನಮಗೇನು ಅಂದ್ರಾ ? !! ರಫ್ತೆಂದರೆ ಚೀನಾದಂತೆ ಬೇಕಾಬಿಟ್ಟಿ ವ್ಯವಹಾರವಲ್ಲ, ಅಗ್ಗದ ದರದಲ್ಲಿ ಚೀನಾದವ್ರೂ ಎಲ್ಲಾ ಕಡೆ ಕಸದಂತೆ ತಂದು ಎಲ್ಲಾ ದೇಶಗಳಲ್ಲಿ, ಭಾರತಕ್ಕೂ ತಂದು ಸುರಿತಿರುವಾಗ, ಕೂಲಿಯಿಂದ ಹಿಡಿದು ಕಚ್ಚಾವಸ್ತುಗಳವರೆಗೆ ಎಲ್ಲದರ ಬೆಲೆ ಏರಿದ್ರೂ ಗುಣಮಟ್ಟ ಕಾದುಕೊಳ್ಳೋ ಅನಿವಾರ್ಯತೆಯಿರೋ ಭಾರತೀಯ ರಫ್ತು ಉದ್ಯಮಕ್ಕೂ ಹೊಡೆತ ಬೀಳುತ್ತಿದೆ ಅದ್ರ ಮದ್ಯ ಕೊಕ್ಕೆ ತೆಗೆಯೋ ಹೊರದೇಶಗಳ ನೂರಾರು ಕಾನೂನುಗಳು ಬೇರೆ…ಅದೆಲ್ಲಾ ದೊಡ್ಡ ತಲೆ ನೋವು ಅಂದ್ರಾ ? ಸರಿ,ಹೋಗ್ಲಿ ಬಿಡಿ.ಅದಿರ್ಲಿ,   ಪೆಟ್ರೋಲ್ ಬೆಲೆ ಏರ್ತಾ ಇದ್ರೂ ರೂಪಾಯಿ ಬೆಲೆ ಇಳಿತಾ ಇದ್ರೂ ಘನ ಸರ್ಕಾರ ಏನು ಮಾಡ್ತಾ ಇದೆ ಅಂತ ಬೊಬ್ಬೆ ಹಾಕೋ ಬದ್ಲು ಆ ಸಮಯದಲ್ಲಿ ನಮ್ಮಿಂದ ಏನಾದ್ರೂ ಮಾಡ್ಬಹುದಾ ಅಂತ್ಯಾಕೆ ಯೋಚ್ನೆ ಮಾಡ್ಬಾರ್ದು ?

ಮತ್ತಷ್ಟು ಓದು »

22
ಆಗಸ್ಟ್

ಮ್ಯೂಟ್ ಮೋಡ್ ನಲ್ಲಿ ಭಾರತ, ಫೈಟ್ ಮೋಡ್ ನಲ್ಲಿ ಚೀನಾ!!

– ವಿಕಾಸ್ ಪುತ್ತೂರು

Mouna -China‘ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸು’ ಎಂದು ಸಾರುತ್ತಲೇ “ಶಾಂತಿಧೂತ”ನೆಂದು ಖ್ಯಾತಿಗಳಿಸಿದ  ಆ ಗಾಂಧಿಯೂ ಕೂಡ, ಇಂದಿದ್ದಿದ್ದರೆ, ಪ್ರಸ್ತುತ ಚೀನಾದ ತಕರಾರುಗಳಿಗೆ ಬೇಸತ್ತು ಕೆನ್ನೆ ತೋರಿಸುವುದನ್ನು ನಿಲ್ಲಿಸಿ, ಒಂದು  ಬಾರಿಸಿ ಬಿಡುತ್ತಿದ್ದರೇನೋ! ಅದೇನೆ ಇರಲಿ,  ನಮ್ಮ ಪ್ರಧಾನಿಗಳು ಮಾತ್ರ, ಚೀನಾ ವಿಷಯದಲ್ಲಿ ಆ ಗಾಂಧಿಯ ಮೂರು ಮಂಗಗಳ ಗುಣಗಳನ್ನು ಯತಾವತ್ತಾಗಿ  ಅನುಸರಿಸಿರುವಂತೆ ಕಾಣುತ್ತಿದೆ, ಚೀನಾದ ಅತಿಕ್ರಮಣಗಳನ್ನು ಕಂಡೂ ಕಾಣದಂತೆ ಕುರುಡರಾಗಿಬಿಟ್ಟಿದ್ದಾರೆ, ಅವರ ಆಕ್ರಮಣಗಳ ಬಗ್ಗೆ ತುಟಿಬಿಚ್ಚದೆ  ಚಕಾರವೆತ್ತದೆ ಮೂಕರಾಗಿಬಿಟ್ಟಿದ್ದಾರೆ,  ಚಿಂಗಿಯರ ಕುತಂತ್ರಗಳನ್ನಂತೂ  ಬೇಕೆಂದೇ ಕೇಳಿಸಿಕೊಳ್ಳದೆ ಕಿವುಡನೂ ಆಗಿಬಿಟ್ಟಿದ್ದಾರೆ! ಅವರೇ ಹೇಳುವಂತೆ, ಗಾಂಧಿಯ ಹಾದಿಯಲ್ಲಿ ಸಾಗುವುದೆಂದರೆ ಇದೇ ಇರಬೇಕೇನೋ! ಕಳೆದ ಹತ್ತು ವರ್ಷಗಳಲ್ಲಿ ಮನಮೋಹನರು ಸದನ ಪ್ರವೇಶಿಸಿರುವುದಕ್ಕಿಂತ ಹೆಚ್ಚು  ಬಾರಿ ಚೀನಿಯರು ಭಾರತವನ್ನು ಅತಿಕ್ರಮವಾಗಿ  ಪ್ರವೇಶಿಸಿದ್ದಾರೆ. ಆರ್ಥಿಕವಾಗಿ ಹಾಗು ಸಾಂಸ್ಕೃತಿಕವಾಗಿ  ಭಾರತವನ್ನು ಮುಗಿಸಲು ತುದಿಗಾಲಲ್ಲಿ ನಿಂತು ಅತ್ಯಂತ ವ್ಯವಸ್ತಿತವಾಗಿ ಷಡ್ಯಂತ್ರ ರಚಿಸಿರುವ,  ರಚಿಸುತ್ತಿರುವ ಚೀನಾಗೆ ಸಮರ್ಥವಾಗಿ ಉತ್ತರ ಕೊಡಲು ಸಾಧ್ಯವಾಗದೆ, ಪ್ರಶ್ನೆಯ ಹುಡುಕಾಟದಲ್ಲಿಯೇ ಕಪಟ ನಾಟಕವಾಡುತ್ತಿದೆ ನಮ್ಮ ಕೇಂದ್ರ ಸರಕಾರ.

ಭಾರತದ ಅತಿದೊಡ್ಡ ಶತ್ರು ಪಾಕಿಸ್ತಾನ, ಬೇರೆಲ್ಲಾ ರಾಷ್ಟ್ರಗಳು ಬಹುತೇಕ ಭಾರತದ ಮಿತ್ರರಾಷ್ಟ್ರಗಳೇ ಎಂದು ವಿಶ್ವಾವ್ಯಾಪಿ ಬಿಂಬಿತವಾಗಿರುವುದು ಭಾರತದ ಅತಿದೊಡ್ಡ ದುರಂತ. ರಾಷ್ಟ್ರೀಯ ಭದ್ರತೆಯ ವಾಸ್ತವಕ್ಕಿಳಿದು ನೋಡಿದಾಗ ಭಾರತಕ್ಕೆ, ಪಾಕಿಸ್ತಾನಕ್ಕಿಂತಲೂ  ಚೀನಾದಿಂದ ನೂರು ಪಟ್ಟು ಹೆಚ್ಚು ಆತಂಕ  ಸೃಷ್ಟಿಯಾಗಿದೆ. ಭಾರತದ ಭೂ ಹಾಗು ಸಾಗರಕ್ಕೆ, ಇತರೆ ಒಟ್ಟು 9ರಾಷ್ಟ್ರಗಳು ಅಂಟಿಕೊಂಡಿವೆ, ದಕ್ಷಿಣಕ್ಕೆ ಶ್ರೀಲಂಕಾ ಹಾಗು ಮಾಲ್ಡೀವ್ಸ್. ಪಶ್ಚಿಮಕ್ಕೆ ಪಾಕಿಸ್ತಾನ ಹಾಗು ಅಫಗಾನಿಸ್ತಾನ, ಪೂರ್ವಕ್ಕೆ ನೇಪಾಳ, ಭೂತಾನ್, ಬಾಂಗ್ಲಾದೇಶ ಹಾಗು ಬರ್ಮಾ ಮತ್ತು ಉತ್ತರದಿಂದ ಪೂರ್ವದವರೆಗೂ ಮಹಾಕಂಟಕ ಚೀನಾ. ಈ 9ನೆರೆರಾಷ್ಟ್ರಗಳ ಪೈಕಿ ಭೂತಾನ್ ಎಂಬ ಪುಟ್ಟ ದೇಶವೊಂದನ್ನು  ಬಿಟ್ಟರೆ, ಉಳಿದ  8 ದೇಶಗಳೊಡನೆಯೂ  ಭಾರತದ  ಸಂಬಂಧ ಹಳಸಿದೆ! ಅತ್ಯಂತ ಆತಂಕಕಾರಿ  ಸಂಗತಿ ಎಂದರೆ, ಭಾರತವನ್ನು ಮಣಿಸಲು ಹಾತೊರೆಯುತ್ತಿರುವ ಚೀನಾ, ಉಳಿದ 7 ರಾಷ್ಟ್ರಗಳನ್ನೂ ಒಟ್ಟುಗೂಡಿಸಿ ಬಿಲಿಯನ್ ಡಾಲರ್ಗಟ್ಟಲೆ ಬಂಡವಾಳ ಹೂಡುತ್ತಾ, ತನ್ನ ಸಂಗಡ ಶಿಶ್ಯವೃಂದದಂತೆ ಇರಿಸಿಕೊಂಡಿದೆ.

ಮತ್ತಷ್ಟು ಓದು »