ಹನಿ ಹನಿ ಪ್ರೇಂ ಕಹಾನಿ
– ಮಧು ಚಂದ್ರ, ಭದ್ರಾವತಿ
ಅತಿಥಿಗಳಿಗೆ ಕುಡಿಯಲು ನೀರು ಕೊಟ್ಟು ಉಪಚರಿಸುತ್ತಿರಿ. ಇದು ಅನಾದಿ ಕಾಲದಿಂದಲೂ ನಡೆದು ಬಂದ ಭಾರತೀಯ ಸಂಸ್ಕೃತಿ. ಈ ಸಂಸ್ಕೃತಿಯನ್ನು ತಪ್ಪದೆ ಪಾಲಿಸುವವರನ್ನು ನಾವು ಭಾರತೀಯನೆನ್ನಬಹುದು.ನೀರನ್ನು ಕೊಟ್ಟು ಉಪಚರಿಸುವುದು ಭಾರತೀಯತೆ, ನೀರು ಇಲ್ಲದಿದ್ದರೆ ಮತ್ತೇನು ಮಾಡುವಿರಿ ಎಂದು ಎಂದಾದರೂ ಯೋಚಿಸಿದ್ದಿರ? ಬಹುಶ ಇರಲಿಕ್ಕಿಲ್ಲ. ಕಾರಣ ಇಷ್ಟೇ ನಮ್ಮಲ್ಲಿ ನೀರಿನ ಮೂಲ ಮತ್ತು ಅಂತರ್ಜಲಕ್ಕೆ ಕೊರತೆ ಇಲ್ಲ ಎನ್ನುವ ಹುಚ್ಚು ಪ್ರಮೇಯ ಇರಬಹುದು. ಈ ಹುಚ್ಚು ಪ್ರಮೇಯವೇ ಇಂದಿನ “ಹನಿ ಹನಿ ಪ್ರೇಂ ಕಹಾನಿ” ಲೇಖನ. ಹಿಂದೆ ನಾನೊಂದು ಓದಿದದ ಕಥೆಯನ್ನು ನಿಮಗೆ ಹೇಳಬಯಸುತ್ತೇನೆ. ಇದು ನೈಜ ಘಟನೆಯೋ ಇಲ್ಲವೋ ನನಗೆ ಅರಿವಿಲ್ಲ ಅದರೂ ಲೇಖನಕ್ಕೆ ಸೂಕ್ತ ಎಂದೆನಿಸುತು.
ವಿಶ್ವವನ್ನೇ ಗೆದ್ದ ಅಲೆಗ್ಸಾಂಡರ್ ಯಾರಿಗೆ ಗೊತ್ತಿಲ್ಲ ಹೇಳಿ.
ಹಲವು ದೇಶಗಳನ್ನುಅಲೆಗ್ಸಾಂಡರ್ ಗೆದ್ದು ಮರುಭೂಮಿಯ ದಾರಿಯಲ್ಲಿ ಸಾಗುತ್ತಿರುವ ಸಮಯದಲ್ಲಿ ಅವನ ಉಗ್ರಾಣದಲ್ಲಿ ಇದ್ದ ಆಹಾರ ಸಾಮಗ್ರಿಗಳು ಖಾಲಿಯಾಗುತ್ತ ಬಂದವು. ಇನ್ನೇನು ಮುಂದಿನ ಊರಿನಲ್ಲಿ ಸಂಗ್ರಹಿಸಬಹುದು ಎಂದು ಮುಂದೆ ಮುಂದೆ ನಡೆದನು. ಆದರೆ ಎತ್ತ ನೋಡಿದರು, ಬರಿ ಮರುಭೂಮಿ ಎಲ್ಲಿಯೋ ಊರಿರುವ ಲಕ್ಷಣಗಳು ಕಾಣಲಿಲ್ಲ. ಕಡೆಗೆ ಅವನ ಹತ್ತಿರವಿದ್ದ ಆಹಾರ ಸಾಮಗ್ರಿಗಳು ಖಾಲಿಯಾದವು. ವಿಶ್ವವನ್ನು ಗೆದ್ದ ವೀರನಿಗೆ ಹೊಟ್ಟೆ ಹಸಿವನ್ನು ಗೆಲ್ಲಲಾಗಲಿಲ್ಲ.
ತಾನು ನೀರು ಕುಡಿಯದೆ ಇದ್ದರೆ ಬದುಕುವುದಿಲ್ಲ ಅರಿತನು. ಅದೇ ಸಮಯದಲ್ಲಿ ದಾರಿಹೋಕನೋಬ್ಬನು ಸಿಕ್ಕನು. ಅವನ ಹತ್ತಿರ ಇದ್ದ ನೀರನ್ನು ಕಂಡು ” ನನಗೆ ನಿನ್ನ ಹತ್ತಿರ ಇರುವ ನೀರು ಬೇಕು, ನನಗೆ ಕೊಡು. ದಯವಿಟ್ಟು, ಏನು ಬೇಕು ಕೇಳು ನಾನು ಕೊಡುತ್ತೇನೆ ” ಎಂದು ಅಲೆಗ್ಸಾಂಡರ್ ಹೇಳಿದನು.
೨೦೦೪ ರಲ್ಲಿಯೇ ಅಡ್ವಾಣಿ ಯುಗಾ೦ತ್ಯ ಆಗಿ ಹೋಗಿತ್ತು!
-ರಾಘವೇಂದ್ರ ನಾವಡ
ಭಾ.ಜ.ಪಾ. ದ ಪ್ರಾಥಮಿಕ ಸದಸ್ಯತ್ವನ್ನೊ೦ದು ಬಿಟ್ಟು ಪಕ್ಷದಲ್ಲಿ ತನಗಿದ್ದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ ಅಡ್ವಾಣಿಯ ಹತಾಶ ನಡೆ ಆಶ್ಚರ್ಯವನ್ನೇನೂ ತರಲಿಲ್ಲ! ಬದಲಿಗೆ ಬೇಸರವನ್ನು೦ಟು ಮಾಡಿತು. ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಗೆ ಗೈರು ಹಾಜರಾದಾಗಲೇ ಏನೋ ಮಹತ್ತರವಾದುದು ನಡೆಯುತ್ತದೆ ಎ೦ಬುದನ್ನು ಊಹೆಯಿತ್ತು! ಆದರೆ ಅಡ್ವಾಣಿಯ ಈ ನಡೆಯನ್ನಲ್ಲ! ಮೋದಿಯ ಮೇಲಿನ ಅಡ್ವಾಣಿಯವರ ವಿರೋಧದ ಅ೦ತ್ಯ ಹೇಗಾಗಬಹುದೆ೦ದು ಯೋಚಿಸುತ್ತಿದ್ದೆ.. ಮೋದಿಯ ಪದೋನ್ನತಿಯನ್ನು ಊಹಿಸಿಯಾಗಿತ್ತು! ಅದಕ್ಕಿದ್ದ ಅಡ್ವಾಣಿಯವರ ವಿರೋಧವನ್ನೂ ಅರ್ಥೈಸಿಕೊ೦ಡಿತ್ತು! ಆದರೆ ಅಡ್ವಾಣಿಯವರ ಈ ನಡೆ ಪಕ್ಷವನ್ನಷ್ಟೇ ಅಲ್ಲ! ಸಮಸ್ತ ಭಾ.ಜ.ಪಾ ಕಾರ್ಯಕರ್ತರಲ್ಲದೆ ಅದರ ಲಕ್ಷಾ೦ತರ ಅಭಿಮಾನಿಗಳಿಗೂ ಕ್ಷಣ ನಿಟ್ಟುಸಿರು ಬಿಡ್ಶುವ೦ತೆ ಮಾಡಿದೆ! ಕೇವಲ “ ಕೃಷ್ಣ “ ನ ಕೈಯಲ್ಲಿ ಆಯುಧ ಹಿಡಿಸಲೆ೦ದೇ ಕುರುಕ್ಷೇತ್ರದಲ್ಲಿ ಪಾ೦ಡವರೊ೦ದಿಗೆ ಹಿಗ್ಗಾಮುಗ್ಗ ಹೋರಾಡಿದ ಭೀಷ್ಮರು ತನ್ನ ಗುರಿ ಈಡೇರಿದ ನ೦ತರ ಶರಶಯ್ಯೆಯಲ್ಲಿ ಮಲಗಿದ೦ತೆ.. ಭಾಜಪಾದ “ ಲಾಲಕೃಷ್ಣ“ ಶಸ್ತ್ರ ತ್ಯಾಗ ಮಾಡಿರುವುದು ಬೇಸರವನ್ನು೦ಟು ಮಾಡಿದುದರ ಜೊತೆಗೆ… ಹೆ೦ಡತಿಯ ಒತ್ತಾಯಕ್ಕೋ… ವಯಸ್ಸಿನ ಪ್ರಭಾವವೋ… ಶಕ್ತಿಯ ಕೊರತೆಯೋ ಎ೦ಬುದರ ಗೊ೦ದಲದಲ್ಲಿ ತನ್ನ ಅಪ್ರಸ್ತುತತೆಯನ್ನು ಮನಗ೦ಡ ತ೦ದೆಯೊಬ್ಬ ಏಕದ೦ ಕುಟು೦ಬದ ಜವಾಬ್ದಾರಿಯನ್ನು ಮಕ್ಕಳಿಗೆ ತಲ್ಲಣದಿ೦ದಲೇ ನೀಡಿ, ಹೊರಬರುವುದನ್ನು ಕಲ್ಪಿಸಿಕೊಳ್ಳುವ೦ತೆ ಮಾಡುತ್ತದೆ!
ಅದು ೧೯೮೦ ರ ಕಾಲ.. ಜನಸ೦ಘದಿ೦ದ ಬೇರ್ಪಟ್ಟು ಭಾ.ಜ.ಪಾದ ಹುಟ್ಟಿಗೆ ಕಾರಣಕರ್ತರಾದವರಿಬ್ಬರಲ್ಲಿ ವಾಜಪೇಯಿಯ ಜೊತೆಗೆ ಅಡ್ವಾಣಿಯೂ ಒಬ್ಬರು. ೧೯೮೬ ರಲ್ಲಿ ಆ ಪಕ್ಷದ ರಾಷ್ತ್ರೀಯ ಅಧ್ಯಕ್ಷರಾಗುವವರೆಗೂ ಚುನಾವಣೆಗಳಲ್ಲಿ ಭಾಜಪಾದ ಸಾಧನೆಯೇನೂ ಹೇಳಿಕೊಳ್ಳುವ೦ತಹದ್ದಾಗಿರಲಿಲ್ಲ! ಆದರೆ ನ೦ತರದ್ದು ಇತಿಹಾಸ.. ಚುನಾವಣೆಯಿ೦ದ ಚುನಾವಣೆಗೆ ಸುಧಾರಿಸುತ್ತಲೇ ಹೋದ ಭಾಜಪಾ.. ಅಡ್ವಾಣಿಯವರು ಆರ೦ಭಿಸಿದ “ಶ್ರೀರಾಮ ರಥಯಾತ್ರೆಯ“ ಲಾಭವನ್ನು ಭರಪೂರವಾಗಿ ಪಡೆದುಕೊ೦ಡಿತು! ಕಾ೦ಗ್ರೆಸ್ಸಿಗೆ ಸಮಾನವಾಗಿ ಸೆಡ್ದುಹೊಡೆದು ನಿಲ್ಲಲು ಭಾಜಪಾಕ್ಕೆ ಶಕ್ತಿ ತು೦ಬಿದವರೆ೦ದರೆ ಇಬ್ಬರೇ.. ವಾಜಪೇಯಿ ಹಾಗೂ ಅಡ್ವಾಣಿ! ಲಕ್ಷಾ೦ತರ ಕಾರ್ಯಕರ್ತರ ಅಮಿತೋತ್ಸಾಹವೂ ಇವರೊ೦ದಿಗಿತ್ತು! ಬೆನ್ನಿಗೆ ಉಗ್ರ ಹಿ೦ದುತ್ವದ ಅಜೆ೦ಡಾ… ಬೆನ್ನು ಬೆನ್ನಿಗೆ ರಥಯಾತ್ರೆಗಳು.. ಭಾರತ ರಾಜಕೀಯದಲ್ಲಿ “ ರಾಮ-ಲಕ್ಷ್ಮಣ“ರೆ೦ದೇ ಖ್ಯಾತವಾದ ಈ ಜೋಡಿ ಕಾ೦ಗ್ರೆಸ್ ಗೆ ಪರ್ಯಾಯವಾಗಿ ಭಾ.ಜ.ಪಾವನ್ನು ಬೆಳೆಸಿದ್ದಲ್ಲದೆ, ದೇಶದ ರಾಜಕೀಯದಲ್ಲಿ ಕಾ೦ಗ್ರೆಸ್ಸಿಗೆ ಬಹುದೊಡ್ಡ ಪರ್ಯಾರವಾಗಿ ಬೆಳೆದು ನಿ೦ತಿತು. ೧೯೯೬ ರ ಚುನಾವಣೆಯಲ್ಲಿ ಏಕೈಕ ಬಲು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಾ.ಜ.ಪಾಕ್ಕೆ ವಾಜಪೇಯಿ ನೇತಾರರಾದರು. ಚುನಾವಣೆಗೂ ಮುನ್ನ ಅಡ್ವಾಣಿ ವಾಜಪೇಯಿಯವರನ್ನು ಬಾ.ಜ.ಪಾ ದ ಪ್ರಧಾನ ಮ೦ತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು ಫಲ ನೀಡಿತು! “ ಬದಲಾವಣೆಗಾಗಿ ಭಾ.ಜ.ಪಾ.ವನ್ನು ತನ್ನಿ“ , “ ಈ ಬಾರಿ ಬಿ.ಜೆ.ಪಿ“ ಎ೦ಬ ಕಾರ್ಯಕರ್ತರ ಚುನಾವಣಾ ಘೋಷಣೆಗಳು ಫಲ ನೀಡಿದವು. ವಾಜಪೇಯಿಯವರ ಅಕಳ೦ಕಿತ ವ್ಯಕ್ತಿತ್ವ, ರಾಜಕೀಯ ಅನುಭವ ಹಾಗೂ ಅಡ್ವಾಣಿಯವರ ಪ್ರಖರ ಹಿ೦ದುತ್ವವಾದಕ್ಕೆ ಮತದಾರರು ಮಣೆ ಹಾಕಿದರು!
CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ
ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.
ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.
ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.
ಚೀನಿಗಳೊಂದಿಗಿನ ಯುದ್ಧ ಸೈನಿಕ ಕಾರ್ಯಾಚರಣೆಯೇ ಆಗಬೇಕಿಲ್ಲ
– ರಾಕೇಶ್ ಶೆಟ್ಟಿ
ಮೂರುವರೆ ವರ್ಷಗಳ ಹಿಂದಿನ ಮಾತು.ಬಹುಷಃ ೨೦೦೯ರ ನವೆಂಬರ್ ತಿಂಗಳಿರಬಹುದು.ಪ್ರಧಾನಿ ಮ(ಮೌ?)ನಮೋಹನ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಅದನ್ನು ಚೀನಾ ಖಡಕ್ ಆಗಿ ವಿರೋಧಿಸಿ, ’ನೀವು ಭಾರತೀಯರು ೧೯೬೨ ರ ಅನುಭವವನ್ನ ಮರೆತಿದ್ದಿರ!’ ಅಂತ ಬಹಿರಂಗವಾಗೇ ಹೇಳುವ ದಾರ್ಷ್ಟ್ಯ ತೋರಿತ್ತು.ಅಂದು ಅದು ಕ್ಯಾತೆ ತೆಗೆದಿದ್ದು ’ತವಾಂಗ್’ ನ ಕುರಿತಾಗಿ.
ಚೀನಿಗಳ ಬೆದರಿಕೆ ಬಗ್ಗೆ ಮಾತಡುವುದಕ್ಕಿಂತ ಮೊದಲು, ಏನಿದು ‘ತವಾಂಗ್’ ಅದಕ್ಕಾಗಿ ಯಾಕಿಷ್ಟು ಕಿತ್ತಾಟ? ಇದು ಯಾರಿಗೆ ಸೇರಿದ್ದು? ಭಾರತೀಯರಿಗೋ? ಚೀನಿಗಳಿಗೋ? ಈ ಮೊದಲು ಇದು ಯಾರಿಗೆ ಸೇರಿತ್ತು? ಅಂತ ನೋಡ ಹೊರಟರೆ, ಐತಿಹಾಸಿಕಾವಾಗಿ ಅಂದರೆ ೧೯೧೪ರಲ್ಲಿ ಬ್ರಿಟಿಷರು ಮೆಕ್-ಮಹೂನ್ ರೇಖೆಯನ್ನ ಗುರುತಿಸುವವರೆಗೂ ಅದು ಆಗಿನ ‘ಟಿಬೆಟ್’ ಗೆ ಸೇರಿತ್ತು. ೧೯೧೪ರಲ್ಲಿ ತವಾಂಗ್ ಅನ್ನು ೧೩ನೆ ಲಾಮ ಭಾರತಕ್ಕೆ ಬಿಟ್ಟು ಕೊಟ್ಟರು.ಆ ನಂತರ ಬಂದ ೧೪ನೆ ಅಂದರೆ ಈಗಿನ ‘ದಲೈ ಲಾಮ’ ಕೂಡ ತವಾಂಗ್ ಅನ್ನು ಭಾರತದ ಅಂಗವೆಂದೇ ಮಾನ್ಯ ಮಾಡಿದರು.
ಆದರೆ ೧೯೫೦ ರ ದಶಕದಲ್ಲಿ ಚೀನಿಗಳು ‘ಟಿಬೆಟ್’ ಅನ್ನು ಆಕ್ರಮಿಸಿಕೊಂಡರಲ್ಲ. ಈಗ ಅವರು ಹೇಳುವುದು , ‘ಒಂದು ಕಾಲದಲ್ಲಿ ತವಾಂಗ್ ಟಿಬೆಟ್ಗೆ ಸೇರಿತ್ತು, ಈಗ ಟಿಬೆಟ್ ನಮಗೆ ಸೇರಿದೆ, ಹಾಗಾಗಿ ಈ ತವಾಂಗ್ ನಮಗೆ ಸೇರಬೇಕು’ ಅಂತ (ಅದರ ಜೊತೆಗೆ ಇರಲಿ ಅಂತ ಇಡಿ ಅರುಣಾಚಲ ಪ್ರದೇಶವನ್ನು ಕೊಡಿ ಅನ್ನುತಿದ್ದಾರೆ).
ಸಂಶೋಧನೆಯ ದಾರಿಯನ್ನು ಯಾರು ನಿರ್ಧರಿಸಬೇಕು?
ಪ್ರೊ.ರಾಜಾರಾಮ ಹೆಗಡೆ
{20-5-2013 ಕನ್ನಡ ಪ್ರಭದಲ್ಲಿ ವರದಿಯಾದಂತೆ ಡಾ. ಎಂ.ಎಂ
. ಕಲ್ಬುರ್ಗಿಯವರು ಬಸವಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಕುವೆಂಪು ವಿಶ್ವವಿದ್ಯಾನಿಲಯದ ಸಂಶೋಧಕರ ಕುರಿತು ಆಡಿದ ಮಾತಿಗೆ ಈ ಪ್ರತಿಕ್ರಿಯೆ.}
“ವಚನ ಚಳುವಳಿಯ ಚರ್ಚೆಯಲ್ಲಿ ಪ್ರಜಾವಾಣಿ ಪತ್ರಿಕೆಯು ಒಂದು ಪಕ್ಷದವರ ನಿಲುವುಗಳನ್ನು ಹೆಚ್ಚಾಗಿ ಬೆಂಬಲಿಸಿ ಈಗ ಚರ್ಚೆಯನ್ನು ಸಂಪೂರ್ಣವಾಗಿ ಆ ಪತ್ರಿಕೆಯು ನಿಲ್ಲಿಸಿಯಾಗಿದೆ. ಆದರೆ ಆ ಚರ್ಚೆಯ ಪರಿಣಾಮಗಳು ಗಾಢವಾಗಿವೆ ಎಂಬುದು ಸ್ಪಷ್ಟ. ಹಲವಾರು ಪ್ರಗತಿಪರ ಸಂಘಟನೆಗಳು ನಮ್ಮ ಸಂಶೋಧನಾ ಕೇಂದ್ರವನ್ನು ಮತ್ತು ಸಂಶೋಧನೆಯನ್ನು ನಿಲ್ಲಿಸುವಂತೆ ಸರ್ಕಾರದ ಮಟ್ಟದಲ್ಲಿ, ವಿಶ್ವವಿದ್ಯಾನಿಲಯಗಳ ಮಟ್ಟದಲ್ಲಿ ತಮ್ಮ ಪ್ರಭಾವವನ್ನು ಬೀರುತ್ತಾ ಒತ್ತಡ ತರುತ್ತಿವೆ. ಇಂತಹ ಸಮಯದಲ್ಲಿ ಬಸವಶ್ರೀ ಪ್ರಶಸ್ತಿ ಪಡೆದ ಎಂ.ಎಂ.ಕಲಬುರ್ಗಿಯವರು ವಿಕೃತ ಸಂಶೋಧನೆಯನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳ ಮುಂದೆ ಅಲವತ್ತುಕೊಂಡಿರುವುದು ಹಲವಾರು ಪತ್ರಿಕೆಗಳಲ್ಲಿ ಪಕ್ರಟವಾಗಿದೆ. ಅವರ ಕೋರಿಕೆಗೆ ಕೆಲವಾದರೂ ಪರಿಣಾಮಗಳು ಇದ್ದೇ ಇರುತ್ತವೆ. ಕನ್ನಡಪ್ರಭದಲ್ಲಿ ಪ್ರಕಟವಾದ ಅವರ ಅಂಬೋಣಕ್ಕೆ ಪ್ರತಿಕ್ರಿಯೆಯಾಗಿ ಈ ಲೇಖನವನ್ನು ಬರೆದು ಕನ್ನಡಪ್ರಭ ಪತ್ರಿಕೆಗೆ ಕಳುಹಿಸಲಾಗಿತ್ತು. ಆದರೆ ಪ್ರಕಟವಾಗಿಲ್ಲ.”
ವಿಶ್ವವಿದ್ಯಾನಿಲಯದ ಸಿಂಡಿಕೇಟು ಸದಸದ್ಯರು ಈ ಅಧ್ಯಾಪಕರಿಗೆ ಎಚ್ಚರಿಕೆ ನೀಡಬೇಕೆಂದು ಅವರು ಕರೆಕೊಟ್ಟಿದ್ದಾರೆ. ಅದೇ ಭಾಷಣದಲ್ಲಿ ಅವರು ವಚನಗಳ ಕುರಿತು ಕುವೆಂಪು ವಿಶ್ವವಿದ್ಯಾಲಯದ ಸಂಶೋಧಕರು ನಡೆಸುತ್ತಿರುವುದು ವಿಕೃತ ಸಂಶೋಧನೆ, ಅದನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳಿಗೂ ಕೇಳಿಕೊಂಡಿದ್ದಾರೆ ಎಂಬುದನ್ನು ಇತರ ಪತ್ರಿಕೆಗಳೂ ಪ್ರಕಟಿಸಿವೆ.
ಕನ್ನಡ ಸಾರಸ್ವತ ಲೋಕದಲ್ಲಿ ಕಲಬುರ್ಗಿಯವರನ್ನು ಸಂಶೋಧಕರು ಎಂದೇ ಗುರುತಿಸಲಾಗುತ್ತದೆ. ಅವರು ಹಂಪಿ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಕೂಡ ಜವಾಬ್ದಾರಿ ನಿರ್ವಹಿಸಿದ್ದಾರೆ. ಅದಕ್ಕಿಂತ ಸ್ವತಃ ಅವರೇ ತಮ್ಮ ಮಾರ್ಗ 2 ಸಂಪುಟದಲ್ಲಿನ ಲೇಖನವೊಂದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯನ್ನು ಎದುರಿಸಬೇಕಾದ ಪರಿಸ್ಥಿತಿ ಕೂಡ ಒಮ್ಮೆ ಬಂದಿತ್ತು. ಆಗ ಅಭಿಪ್ರಾಯ ಸ್ವಾತಂತ್ರ್ಯದ ಮೌಲ್ಯ ಅವರಿಗೆ ರಕ್ಷಣೆಯಾಗಿ ಬಂದಿತ್ತು. ಆದರೆ ಈಗ ಒಂದು ವಿಪರ್ಯಾಸವನ್ನು ನೋಡುತ್ತಿದ್ದೇವೆ. ನಮ್ಮ ಶಿಕ್ಷಣ ವ್ಯವಸ್ಥೆಯು ಸಂಶೋಧಕನೊಬ್ಬನಿಗೆ ನೀಡುವ ಯಾವ ಭರವಸೆಯು ಕಲಬುರ್ಗಿಯವರ ಸಂಶೋಧನೆಯನ್ನು ಸಾಧ್ಯ ಮಾಡಿತೊ ಹಾಗೂ ಅದರ ಹೆಸರಿನಲ್ಲಿ ಎದ್ದ ವಿವಾದಗಳಿಗೆ ಎದುರಾಗಿ ಅವರನ್ನು ರಕ್ಷಿಸಿತೊ ಅದು ಮುಂದಿನ ತಲೆಮಾರಿನ ಸಂಶೋಧಕರಿಗೆ ಬೇಡ ಎಂಬ ಅಭಿಪ್ರಾಯಕ್ಕೆ ಅವರು ಬಂದಂತಿದೆ. ಅಥವಾ ಅವರು ಈಗ ಸಂಶೋಧನೆಗೆ ಬೇರೆಯದೇ ಆದ ಅರ್ಥ ಹಚ್ಚುತ್ತಿರಲೂಬಹುದು
ಅವರು ಉಳಿಸಿದ್ದು ಒಂದೆರಡು ಕೋಟಿ ಮಾತ್ರವಲ್ಲ…
– ಗೋಪಾಲ್ ಕೃಷ್ಣ
ಓಡುವುದರಲ್ಲಿ ಹುಸೇನ್ ಬೋಲ್ಟ್ ತನ್ನ ದಾಖಲೆಯನ್ನು ತಾನೆ ಸರಿಗಟ್ಟುತ್ತಾನೆ. ಭ್ರಷ್ಟಾಚಾರದಲ್ಲಿ ನಮ್ಮ ನೇತಾರರು, ಅಧಿಕಾರಿಗಳು ಬೋಲ್ಟ್ ಗೆ ಅನುರೂಪ. ಆದರೆ ಭ್ರಷ್ಟಾಚಾರ ಪತ್ತೆ ಹಚ್ಚುವುದರಲ್ಲಿ! ಹೌದು, ಇಂತಹದ್ದೊಂದು ದಾಖಲೆಯೂ ಸೃಷ್ಟಿಯಾದಂತಿದೆ. ಅದು ನಮ್ಮ ಮಹಾಲೇಖಪಾಲರಿಂದ. ಎರಡನೆ ತಲೆಮಾರಿನ ತರಂಗಗುಚ್ಛ ಹಂಚಿಕೆಯಲ್ಲಾದದ್ದು 1.76 ಲಕ್ಷ ಕೋಟಿ ಅವ್ಯವಹಾರ. ಇದೇ ಐತಿಹಾಸಿಕ ದಾಖಲೆ ಎನ್ನುತ್ತಿದ್ದರು. ಅದನ್ನೂ ಮೀರಿಸಿದ್ದು 1.86 ಲಕ್ಷ ಕೋಟಿಯ ‘ಕೋಲ್’ಗೇಟ್ ಹಗರಣ. ಎರಡನ್ನೂ ಹೊರಚೆಲ್ಲಿದವರು ಮಹಾಲೇಖಪಾಲರೇ. ಅಂದ ಮೇಲೆ ಅವರದೇ ಹೊಸ ದಾಖಲೆ ಸೃಷ್ಟಿಯಾಗಿದೆ.
ದೆಹಲಿಯಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿನ ಹಗರಣ, ಎರಡನೆ ತಲೆಮಾರಿನ ತರಂಗಗುಚ್ಛ ಹಗರಣ ಮತ್ತು ಇದೀಗ ಕಲ್ಲಿದ್ದಲು ಗಣಿ ಹಂಚಿಕೆಯಲ್ಲಿನ ಲೋಪಗಳು ಕೇಂದ್ರ ಸರ್ಕಾರವನ್ನು ಬೆತ್ತಲುಗೊಳಿಸಿವೆ. ಭ್ರಷ್ಟಾಚಾರ ವಿರೋಧಿ ಹೋರಾಟವೆನ್ನುವುದು ಒಂದು ಫ್ಯಾಷನ್ ಆಗಿ ಹೋಗಿದೆ. ಈ ಒಂದು ಎಳೆಯನ್ನು ಹಿಡಿದುಕೊಂಡು ಖ್ಯಾತಿ, ಪ್ರಖ್ಯಾತಿ, ಕುಖ್ಯಾತಿ ಗಳಿಸುವವರಿಗೇನೂ ಲೆಕ್ಕವಿಲ್ಲ. ಅಂತಹವರುಗಳ ಮಧ್ಯೆಯೇ ಬೆರಳಣಿಕೆಯಷ್ಟು ಜನರು ಮಾತ್ರ ಪ್ರಾಮಾಣಿಕತೆ, ದಿಟ್ಟತನವನ್ನು ತಮ್ಮ ಕಾರ್ಯದಲ್ಲಿ ತೋರಿಸುತ್ತಾರೆ. ಈ ಸಾಲಿನಲ್ಲಿ ಅಗ್ರಗಣ್ಯರೆನ್ನುವಂತೆ ಕಾಣುವವರು ವಿನೋದ್ರಾಯ್.
ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’
– ರಾಕೇಶ್ ಶೆಟ್ಟಿ
ಮೇ೮ರಂದು ರಾಜ್ಯದ ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲ ತಲೆಕೆಳಕಾಗಿ ಖುದ್ದು ಕಾಂಗ್ರೆಸ್ಸಿಗರೇ ತಮ್ಮ “ಕೈ” ಚಿವುಟಿ ಚಿವುಟಿ ಕನಸೋ ನನಸೋ ಅನ್ನುವಷ್ಟರಲ್ಲಿ ಕಾಂಗ್ರೆಸ್ಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.ಪರಮೇಶ್ವರ್ ಸೋಲಿನಿಂದ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿಯೂ ಆಗಿಬಿಟ್ಟರು.
ಅತ್ತ ಕಾಂಗ್ರೆಸ್ಸ್ ಗೆದ್ದಿದ್ದೇ ತಡ,ಇತ್ತ ನಮ್ಮ ನಾಡಿನ ಪ್ರಗತಿಪರರು,ಬುದ್ದಿಜೀವಿಗಳು,ಸಾಕ್ಷಿಪ್ರಜ್ನೆಗಳು ಚುನಾವಣಾ ಫಲಿತಾಂಶದ ಬಗ್ಗೆ ಬರೆಯಲು ಕುಳಿತರು ನೋಡಿ. ಶುರುವಾಯ್ತು ಪದಪುಂಜಗಳ ಪಟ್ಟಿ.ಹೆಚ್ಚು ಕಡಿಮೆ ಆ ಎಲ್ಲಾ ಬರಹಗಳೂ ಈ ಧಾಟಿಯಲ್ಲಿದ್ದವು.
“ಸಂಘ ಪರಿವಾರದ ಪುಂಡಾಟಿಕೆಯಿಂದ,ವಿಷಮಯವಾದ ಹಿಂದುತ್ವದ ಅಜೆಂಡಾ,ಮತಾಂಧತೆ ಇತ್ಯಾದಿ ಇತ್ಯಾದಿಗಳಿಂದ ಅಲ್ಪಸಂಖ್ಯಾತರ ಜೀವನ ನರಕವಾಗಿದ್ದ ಕರ್ನಾಟಕ”ವನ್ನು ನೋಡಿ ಸಹಿಸಲಾಗದ ನಾಡಿನ ಪ್ರಜ್ಞಾವಂತ, ಪ್ರಗತಿಪರ,ಸಂವೇದನಾಶೀಲ,ಸಾಕ್ಷಿಪ್ರಜ್ನೆ ಕನ್ನಡಿಗರು ಕಾಂಗ್ರಸ್ ಪರ ನಿಂತರಂತೆ…!
ನಿಜವಾಗಿಯೂ ಕನ್ನಡಿಗರು ಕಾಂಗ್ರೆಸ್ಸ್ ಪರ ಮತ ಚಲಾಯಿಸದರೆ ಅಂತ ನೋಡ ಹೊರಟರೆ, ೬ ಸ್ಥಾನ ಗೆದ್ದ ಕೆ.ಜೆ.ಪಿ ೩೯ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಜೆ.ಪಿ ಸುಮಾರು ೩೦ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಆಸ್.ಆರ್ ಗೆದ್ದಿದ್ದು ೪ ಸೀಟುಗಳನ್ನು.ಅಂದರೆ ಬಿಜೆಪಿ+ಕೆಜೆಪಿ+ಬಿ.ಆಸ್.ಆರ್ ನಡುವೆ ಮತಗಳು ಚೆಲ್ಲಾಪಿಲ್ಲಿಯಾಗಿರುವುದರಿಂದ ಕಾಂಗ್ರೆಸ್ಸು ಗೆದ್ದಿದೆ.ಬಹುಷಃ ಬಿಜೆಪಿಯಿಂದ ಯಡ್ಯೂರಪ್ಪ ಹೊರಹೋಗದಿದ್ದರೆ ೮೦ರ ಹತ್ತಿರ ಬಂದು ತಲುಪುತಿತ್ತು.ಇನ್ನೂ ಸರಳವಾಗಿ ಹೇಳಬೇಕೆಂದರೆ ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’ ಅಷ್ಟೆ.ಗೆಲ್ಲಲ್ಲಿಕ್ಕೆ ಕಾಂಗ್ರೆಸ್ಸ್ ಏನಾದರೂ ವಿರೋಧ ಪಕ್ಷ ಕೆಲಸವನ್ನಾದರೂ ಸರಿಯಾಗಿ ನಿಭಾಯಿಸಿತ್ತೇ? ಇದೊಂತರ ಕೋಗಿಲೆ ಗೂಡಲ್ಲಿ ಕಾಗೆ ಮೊಟ್ಟೆ ಇಟ್ಟ ಹಾಗೆ …!!! ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದು ಸಮರ್ಥ ವಿರೋಧ ಪಕ್ಷದ ಕೆಲಸ ಮಾಡಿದ್ದು ಜೆಡಿಎಸ್,ಗೆದ್ದಿದ್ದು ಕಾಂಗ್ರೆಸ್ಸ್ …!!!
ಇನ್ನು ಬಿಜೆಪಿ ಸೋಲಿಗೆ ಕಾರಣಗಳನ್ನು ದುರ್ಬೀನು ಹಾಕಿಕೊಂಡೇನು ಹುಡುಕಬೇಕಿಲ್ಲ.ಸಾಲು ಸಾಲು ಡಿ-ನೋಟಿಫಿಕೇಷನ್,ಭ್ರಷ್ಟಾಚಾರದ ಹಗರಣಗಳು,ಬ್ಲೂ-ಫಿಲಂ ಕರ್ಮಕಾಂಡ ಅದು ಇದು ಅಂತಲೇ ಪಟ್ಟಿ ಮಾಡಿಬಿಡಬಹುದು.ಇವೆಲ್ಲಕ್ಕೂ ಕಳಶವಿಟ್ಟಂತೆ ಬಿಜೆಪಿಯ ಮಾಸ್ ನಾಯಕ ಯಡ್ಯೂರಪ್ಪರನ್ನು, ಬೆಂಗಳೂರಿನ ತನ್ನ ಕ್ಷೇತ್ರವೊಂದನ್ನು ಬಿಟ್ಟು ಇನ್ನೆಲ್ಲೂ ನಿಂತು ಒಂದು ಸಂಸದನ ಸ್ಥಾನ ಗೆಲ್ಲಲಾಗದ ರಾಷ್ಟ್ರೀಯ ನಾಯಕ(?)ರೊಬ್ಬರ ಕುತಂತ್ರದಿಂದ ಪಕ್ಷ ತೊರೆದು ಹೋಗುವಂತೆ ಮಾಡಿದ್ದು ಮುಖ್ಯ ಕಾರಣ.ಇನ್ನು ದಕ್ಷಿಣ ಕನ್ನಡದಲ್ಲಿ ಹಾಲಾಡಿ,ಯೋಗಿಶ್ ಭಟ್,ನಾಗರಾಜ್ ಶೆಟ್ಟಿ ಅಂತವರ ವಿಷಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ನಡೆದುಕೊಂಡ ರೀತಿಯಿಂದ ಮತ್ತು ಸದಾನಂದ ಗೌಡರನ್ನ ವಿನಾಕಾರಣ ಕುರ್ಚಿಯಿಂದ ಇಳಿಸಿದ್ದು ಬಿಜೆಪಿಗೆ ಮುಳುವಾಯಿತು.
ಹೇಗೆ ಹೇಳಲಿ? ಏನು ಹೇಳಲಿ?
– ಪ್ರೊ.ರಾಜಾರಾಮ ಹೆಗಡೆ
ದೇವನೂರು ಮಹಾದೇವರವರ ಲೇಖನಕ್ಕೆ ಪ್ರತಿಕ್ರಿಯೆ {ಪ್ರಜಾವಾಣಿಯಲ್ಲಿ ಅಪ್ರಕಟಿತ ಲೇಖನ}
ದೇವನೂರು ಮಹಾದೇವರ ಪ್ರತಿಕ್ರಿಯೆಯನ್ನು ಓದಿದ ನಂತರ, ಅವರು ಏನನ್ನು ಹೇಗೆ ಹೇಳಿದ್ದಾರೆ ಎಂಬುದನ್ನು ಕಂಡ ನಂತರ ಅವರನ್ನು ಕಾಡಿದ ಆ “ಹೇಗೆ ಹೇಳಲಿ? ಏನು ಹೇಳಲಿ?” ಎಂಬ ಪ್ರಶ್ನೆ ಈಗ ಅವರದಕ್ಕಿಂತ ನನ್ನದೇ ಆಗಿದೆ. ಅವರು ನಮ್ಮ ಕುರಿತು ಏಕೆ ಇಂಥ ಭಾಷೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ಸ್ಪಷ್ಟ. ಅವರಿಗೆ ಸಿಟ್ಟಿದೆ. ದೇವನೂರರು ಒಂದು ಸಮೂಹದ ಹಿತದೃಷ್ಟಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರ ಜೀವನ ಈ ಕುರಿತಾಗಿಯೇ ಒಂದು ಹೋರಾಟ ಎಂದರೂ ತಪ್ಪಿಲ್ಲ. ಇಷ್ಟನ್ನು ಖಚಿತವಾಗಿ ಹೇಳಬಲ್ಲಷ್ಟು ನಾನು ಅವರನ್ನು ಬಲ್ಲೆ. ಹಾಗೂ ಅದನ್ನು ಗಮನಿಸುವುದು ಮುಂದಿನ ಸಂವಾದಕ್ಕೆ ನಿರ್ಣಾಯಕ ಎಂಬುದಾಗಿ ನನಗನಿಸುತ್ತದೆ. ಏಕೆಂದರೆ ಯಾರದೇ ಪ್ರಾಮಾಣಿಕತೆಯ ಮೇಲೆ ಅಪನಂಬಿಕೆಯನ್ನಿಟ್ಟು ಬೌದ್ಧಿಕ ಚರ್ಚೆಯನ್ನು ಪ್ರಾರಂಭಿಸುವುದರಿಂದ ಚರ್ಚಿಸತಕ್ಕ ವಿಷಯಕ್ಕೆ ನ್ಯಾಯ ಸಲ್ಲುವುದಿಲ್ಲ.
ನಮ್ಮ ದುರುದ್ದೇಶದ ಕುರಿತು ಅವರು ಕಟ್ಟಿಕೊಂಡಿರುವ ಚಿತ್ರಗಳನ್ನು ಅವರ ಲೇಖನದ ಮೂಲಕ ಗ್ರಹಿಸುತ್ತ ಹೋದಾಗ ನಮ್ಮ ಕುರಿತು ಯಾವ ರೀತಿಯ ಚಿತ್ರಣವು ಅವರ ವಲಯದಲ್ಲಿ ಗಟ್ಟಿಯಾಗುತ್ತಿದೆ ಎಂಬುದಕ್ಕೆ ಮತ್ತೊಂದು ದೃಷ್ಟಾಂತ ಸಿಕ್ಕಂತಾಯಿತು. ಹಾಗಂತ ಇದೇನೂ ನನಗೆ ಆಘಾತ ನೀಡಲಿಲ್ಲ. ಈ ಥೆರಪಿಯನ್ನು ನನಗೆ ಹಾಗೂ ನನ್ನ ಗುಂಪಿಗೆ ನಾವು ಬಾಲು ಜೊತೆ ಸೇರಿ ಸಂಶೋಧನೆ ಪ್ರಾರಂಭಿಸಿದಾಗಿನಿಂದಲೂ ನೀಡಲಾಗುತ್ತಿದೆ. ಸಂಶೋಧನೆ ಮಾಡುವುದು ಕೇವಲ ಬೌದ್ಧಿಕ ಪ್ರಶ್ನೆಯೊಂದೇ ಅಲ್ಲ, ಅದು ಪ್ರವಾಹದ ವಿರುದ್ಧ ಈಜುವ ಕೆಲಸ ಕೂಡ ಆಗಿದೆ ಎಂಬುದು ನಮಗೆ ಈಗಾಗಲೇ ಅನುಭವ ವೇದ್ಯವಾಗಿದೆ. ನಮ್ಮ ದುರುದ್ದೇಶದ ಕುರಿತು ಹುಟ್ಟುತ್ತಿರುವ ಕಥೆ ಸಾಕಷ್ಟು ಬೇರುಬಿಡುತ್ತಿದೆ ಎಂಬುದನ್ನು ಪ್ರಜಾವಾಣಿ ಪ್ರತಿಕ್ರಿಯೆಗಳಿಂದ ಮನಗಾಣುತ್ತಿದ್ದೇನೆ. ದೇವನೂರರೇ ಕೊಟ್ಟ ಆಡಿನ ಕಥೆಯಂತೆ ಹತ್ತಾರು ಮಂದಿ ಒಂದು ಸುಳ್ಳನ್ನು ಹೇಳುತ್ತಿದ್ದರೆ, ಹಾಗೂ ನಾವು ಸುಮ್ಮನೇ ಇದ್ದರೆ ಜನ ಅದನ್ನೇ ಸತ್ಯವೆಂದು ನಂಬಿಬಿಡುವ ಸಾಧ್ಯತೆಯಿದೆ. ಒಂದೊಮ್ಮೆ ನಮ್ಮ ಸಂಶೋಧನೆಯು ದೇವನೂರರು ಅಂದುಕೊಂಡಂತೇ ಯಾವುದೇ ಮಾನವ ಸಮುದಾಯದ ಅಹಿತವನ್ನು ಬಯಸುವ ದುರುದ್ದೇಶವನ್ನು ಹೊಂದಿಲ್ಲ ಅಂತಾದರೆ, ಈ ನಿಟ್ಟಿನಲ್ಲಿ ಈಗಿರುವ ಜ್ಞಾನದ ಮಿತಿಗಳನ್ನು ಕಳೆದು ಇನ್ನೂ ಹೆಚ್ಚು ಸ್ಪಷ್ಟತೆಯನ್ನು, ನ್ಯಾಯವನ್ನು ಸಾಧಿಸುವುದು ಅಂತಾದರೆ, ದೇವನೂರರ ನೋವಿಗೆ ಇರಬಹುದಾದ ಕಾರಣಗಳೇ ಮಾಯವಾಗುತ್ತವೆ. ಮುಂದೆ ಅವರ ಜೊತೆ ಅರ್ಥಪೂರ್ಣ ಸಂವಾದ ಸಾಧ್ಯವಾಗಬಹುದು ಎಂಬ ಆಶಯದಿಂದ ಈ ಲೇಖನ.
ಸಾಮಾನ್ಯ ಭಾರತೀಯನೊಬ್ಬನ ಪ್ರಶ್ನೆಗಳು
– ಶಿವಶಂಕರ್ ಪುತ್ರನ್, ಕೊಡಿಯಾಲ್ ಬೈಲ್
ಅಲ್ಲಾ ಸ್ವಾಮಿ, ಮಹಾತ್ಮರ ಸಿದ್ದಾ೦ತಗಳನ್ನು ಪಾಲಿಸುವವರೆ, ಯಾರೋ ಒಬ್ಬ ಸ೦ಸತ್ ಸದಸ್ಯ ಶಫಿಯಕುರ್ ರೆಹಮಾನ್ ವಂದೇಮಾತರ೦ನ್ನ ಗೌರವಿಸದೆ,ಆಮೇಲೆ ತಾನು ಯಾಕೆ ಗೌರವಿಸಿಲ್ಲ
ಅನ್ನೋದಕ್ಕೆ ಸ್ಪಷ್ಟನೆ ನೀಡ್ತಾನೆ.ಆತನ ಆ ಕ್ರಿಯೆ ದೇಶದಲೆಲ್ಲ ದೊಡ್ಡ ಅಲ್ಲೋಲಕಲ್ಲೋಲವನ್ನ ಉ೦ಟು ಮಾಡುತ್ತೆ.ಸಾಮಾಜಿಕ ತಾಣಗಳಾದ ಫೇಸ್ಬುಕ್,ಟ್ವಿಟ್ಟರ್ಗಳಲ್ಲಿ ಅವನ ವಿರುದ್ದ ಜನ ತಮ್ಮ ಕ್ರೋಧ ವ್ಯಕ್ತಪಡಿಸುತ್ತಾರೆ.ಕನ್ನಡದ ಬ್ಲಾಗೊ೦ದರಲ್ಲಿ ಸತ್ಯವಿಶ್ವಾಸಿಗಳಿಗೆ ದೇಶಪ್ರೇಮವನ್ನ ಬೋಧಿಸಲು ಹೋದವನ ಲೇಖನಕ್ಕೆ ಉತ್ತರಿಸುವ ನೆಪದಲ್ಲಿ ಹಲವಾರು ವ್ಯಕ್ತಿಗಳು ತಾವು ಹಾಗು ತಮ್ಮವರು ಯಾಕೆ ವಂದೇಮಾತರ೦ ಹಾಡಬಾರದು,ಯಾಕೆ ಗೌರವಿಸಬಾರದೆ೦ದು ತಮ್ಮ ಸ೦ಸದನ ವರ್ತನೆಯನ್ನ ಸಮರ್ಥಿಸಿಕೊಳ್ಳುವಾಗ ಒಬ್ಬ ಹುಲು ಭಾರತಿಯನಾಗಿ,ಒಬ್ಬ ಸಾಮಾನ್ಯ ಹಿ೦ದುವಾಗಿ, ಅದರೆ ಒಬ್ಬ ಅಪ್ಪಟ್ಟ ಭಾರತೀಯನಾಗಿ ಮನದಲ್ಲಿ ಹುಟ್ಟುವ ಹಲವಾರು ಗೊ೦ದಲಗಳಿಗೆ ಉತ್ತರವೆ ಸಿಗುತ್ತಿಲ್ಲ.ಹಾಗೆ ಮು೦ದುವರಿದು ಕೆಲವು ಮಿತ್ರರಲ್ಲಿ ಕೇಳಿದೆ, ಅವರಿಗೂ ಅದೇ ಗೊಂದಲ.ಅವರಲ್ಲಿ ಕೆಲವರು ಸದ್ಯಕಷ್ಟೆ ರಾಜ್ಯದ ಚುನಾವಣೆಯಲ್ಲಿ ಬಾಗಿಯಾಗಿ ಕೆಲವರು ಭ್ರಮನಿರಸಗೊ೦ಡರೆ,ಕೆಲವರು ಪಕ್ಷ ನಿಷ್ಟೆ ಬದಲಿಸಿ ಹೊಟ್ಟೆತು೦ಬಿಸಿಕೊ೦ಡವರು.ಹಾಗಾಗಿ,ಅವರಲ್ಲಿ ಕೇಳುವುದು ವ್ಯರ್ಥವೆಂದೆನಿಸಿ ಯಾಕೆ ನಮ್ಮ ಮುಸಲ್ಮಾನ ಬ೦ಧುಗಳಲ್ಲೆ ಕೇಳಬಾರದು ಅನಿಸಿತು.ಸ೦ಸಾರದ ಗೊಂದಲಗಳ ನಡುವೆ ಪ್ರತಿಯೊಬ್ಬ ನನ್ನ ಭೇಟಿಮಾಡುವಸ್ಟು ಸಮಯವಿಲ್ಲದಿರುವುದರಿ೦ದ ಇಲ್ಲೇ ಕೇಳುತ್ತಿದ್ದೇನೆ.ಅಷ್ಟೆ ಅಲ್ಲದೆ, ಇನ್ನು ಕೆಲವು ದಿನಗಳಿ೦ದ ಮನಸಿನಲ್ಲಿ ನನ್ನ ಮುಂದಿನ ಜನಾ೦ಗದ ಬಗ್ಗೆ ಯೋಚಿಸಿ ಇನ್ನು ಕೆಲವು ಪ್ರಶ್ನೆಗಳನ್ನ ಇಡುತ್ತಿದೇನೆ.ಇದನ್ನ ನೇರವಾಗಿ ಕೇಳಿದರೆ ನನ್ನ ಜೀವಕ್ಕೆ ಅಪಾಯ ಯಾಕೆ೦ದರೆ ನಾನೊಬ್ಬ ಹಿ೦ದು ಹಾಗು ನನ್ನ ಜಾತಿಯ ಆಧಾರದಲ್ಲಿ ಚುನಾವಣೆಯ ಸಮಯದಲ್ಲಿ ನನ್ನ ಮತಕ್ಕೆ ಮಾತ್ರ ಮರ್ಯಾದೆ ಅಲ್ಲದೆ ನನ್ನ ರಕ್ಷಣೆಗಲ್ಲ ಎ೦ದು ಸಣ್ಣ೦ದಿನಲ್ಲೆ ನನಗೆ ಅರ್ಥವಾಗಾಗಿದೆ.ಆದುದರಿ೦ದ ನನ್ನ ಪ್ರಶ್ನೆ ಪ್ರತಿಯೊಬ್ಬ ಸಾಮಾನ್ಯ ಭಾರತೀಯನ(ನಿಮ್ಮ ಪ್ರಕಾರ ಸತ್ಯವಿಶ್ವಾಸಿಯಲ್ಲದ ಅಬ್ರಾಹಂನ ಸಿದ್ದಾ೦ತಗಳಿಗೆ ಒಳಪಡದ ಅಪ್ಪ-ಅಮ್ಮನಿಲ್ಲದ ಜನಾ೦ಗ)ಪ್ರಶ್ನೆಯೆಂದು ತಿಳಿಯಬಹುದು.
ಇದು ಸತ್ಯಕಥೆ – ಮಾನವ ಕಳ್ಳಸಾಗಣೆಯ ಕರಾಳ ಮುಖದ ದರ್ಶನ !
-ನಿತ್ಯಾನಂದ ವಿವೇಕವಂಶಿ.ಮಂಡ್ಯ
ಒಂದು ವರ್ಷಗಳ ದೀರ್ಘ ಅವಧಿಯ ನಂತರ ಮತ್ತೆ ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ಪ್ರವಾಸ ಮಾಡಿದ ಖುಷಿಯೊಂದಿಗೆ ವಾಪಾಸು ಬರಬೇಕಾದರೆ ಮನಸ್ಸಿಗೆ ಹಾಯೆನಿಸಿತ್ತು. ನಾಲ್ಕು ಸಾವಿರ ಕಿಲೋಮೀಟರುಗಳ ದೂರ ಕ್ರಮಿಸಿ ಭೇಟಿಯಾದ ಅರುಣಾಚಲದ ನನ್ನ ಪ್ರಿಯ ವಿದ್ಯಾರ್ಥಿಗಳ ಮಕ್ಕಳ ಮುದ್ದು ಮುಖ, ಬೆಟ್ಟದಿಂದ ಬೀಸುವ ಗಾಳಿ, ತುಂತುರು ಮಳೆ, ಮೋಡ, ಅಸ್ಸಾಮಿನ ಚಹಾ ತೋಟ, ಕಾಡುಗಳು, ಬ್ರಹ್ಮಪುತ್ರ ನದಿಯ ವೈಭವವನ್ನು ನೋಡಿಕೊಂಡು ಬರಬೇಕಾದರೆ, ವಾಪಾಸು ಹೋಗಲೇಬೇಕಾ? ಎನ್ನಿಸುವಂತೆ ಆಗಿತ್ತು.
ಏಪ್ರಿಲ್ ಐದನೇ ತಾರೀಖು ಮದ್ಯಾಹ್ನ ಮೂರು ಘಂಟೆಗೆ ಗುವಾಹಟಿಯಿಂದ ಹೊರಟ ಟ್ರೈನು ಏಪ್ರಿಲ್ 7ರ ರಾತ್ರಿ ಚೆನ್ನೈ ತಲುಪಲಿತ್ತು. ಮೊದಲೇ ಬುಕ್ ಮಾಡಿದ್ದ ನನ್ನ ಸೀಟಿನಲ್ಲಿ ಕುಳಿತೆ. ನನ್ನ ಅಕ್ಕ ಪಕ್ಕದ ಸೀಟುಗಳಲ್ಲಿ ಅದಾಗಲೇ ಪ್ರಯಾಣಿಕರು ಬಂದು ಕುಳಿತಿದ್ದರು. ಎಲ್ಲರೂ ಹೆಚ್ಚು ಕಡಿಮೆ ಒಂದೇ ವಯಸ್ಸಿನ ಅನಕ್ಷರಸ್ಥ ಮುಸ್ಲಿಮ್ ಹುಡುಗರು. ಕೆಲಸ ಮಾಡಲು ಅಸ್ಸಾಮಿನಿಂದ ಚೆನ್ನೈಗೆ ವಲಸೆ ಹೊರಟಿದ್ದರು. ಹಿಂದಿ ಭಾಷೆಯಲ್ಲಿ ನಾನು ಸರಾಗವಾಗಿ ಮಾತಾಡುತ್ತಿದ್ದರಿಂದಲೋ ಅಥವಾ ದಕ್ಷಿಣದವನೆಂಬ ಕಾರಣಕ್ಕೋ, ಬಹುಬೇಗ ಎಲ್ಲರೂ ಪರಿಚಯವಾದರು. ರೈಲು ಅಸ್ಸಾಮ್, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒರಿಸ್ಸಾ, ಆಂಧ್ರ ಪ್ರದೇಶ ರಾಜ್ಯಗಳನ್ನು ದಾಟಿ ತಮಿಳುನಾಡಿನ ಚೆನ್ನೈ ತಲುಪಬೇಕಿತ್ತು. ರೈಲಿನ ಕಿಟಕಿಯ ಬಳಿ ಕುಳಿತು ಆಗಾಗ ಬರುವ ಸ್ಟೇಷನ್ಗಳಲ್ಲಿ ರೋಟಿ, ವೆಜಿಟೆಬಲ್ ಪಲಾವ್ಗಳನ್ನು ತಿಂದುಕೊಂಡು ಬಾಟಲಿ ನೀರು ಕುಡಿಯುತ್ತಾ, ಹೊರಗಿನ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುತ್ತಿದ್ದೆ. ರೈಲಿನಲ್ಲಿ ದೂರದ ಪ್ರಯಾಣ ಮಾಡಬೇಕಾದರೆ ಆಗಾಗ ಮಾರಾಟಕ್ಕೆ ಬರುವ ಆಯಾ ರಾಜ್ಯದ ವಿಶೇಷ ಹಣ್ಣು, ತಿಂಡಿ-ತಿನಿಸುಗಳನ್ನು ಕೊಂಡು ತಿನ್ನುವುದು ಬಹಳ ಮಜವಾದ ಸಂಗತಿ. ಅದರ ಜೊತೆಗೆ ಬೇರೆ ಬೇರೆ ರಾಜ್ಯಗಳ ಹವಾಮಾನ, ಭೌಗೋಳಿಕ ವೈವಿಧ್ಯತೆಗಳು, ಜನರ ಜೀವನ ಮತ್ತು ನದಿ ತೊರೆಗಳನ್ನು ನೋಡುವುದು ಅದಕ್ಕಿಂತಲೂ ಮಜವಾದ ಸಂಗತಿ. ಆದರೆ ನನ್ನ ಮಿದುಳು ಮತ್ತು ಹೃದಯ ಬಹಳ ಸಮಯ ಯೋಚಿಸುತ್ತಿದ್ದುದು, ಅಲ್ಲಿ ಕಾಣುತ್ತಿದ್ದ ಜನರ ಬಡತನ ಮತ್ತು ಅನಕ್ಷರತೆಯ ಬಗ್ಗೆ. ಅಸ್ಸಾಮಿನ ಗುವಾಹಟಿ ನಗರದಲ್ಲಿ ರೈಲ್ವೇ ಸ್ಟೇಶನ್ನಿನಲ್ಲಿ ಬರುತ್ತಿದ್ದ ಭಿಕ್ಷುಕರ, ಅಂಗವಿಕಲರ, ಅನಾಥ ಮಕ್ಕಳ ಗೋಳು, ರೈಲಿನ ಹೊರಗೆ ಪ್ಲಾಟ್ ಫಾರಮ್ನಲ್ಲಿ ಪ್ರಾಣಿಗಳಿಗಿಂತಲೂ ಕಡೆಯಾಗಿ ಬಿದ್ದಿರುತ್ತಿದ್ದ ಜನರ ಹೃದಯ ವಿದ್ರಾವಕ ದೃಶ್ಯಗಳು ನನ್ನನ್ನು ಮೂಕನನ್ನಾಗಿ ಮಾಡುತ್ತಿದ್ದವು. ಕುಡಿದು ಬಿದ್ದಿರುತ್ತಿದ್ದ ಜನರು, ತಂಬಾಕು, ಸಿಗರೇಟುಗಳನ್ನು ಸೇದಿ ಪ್ರಜ್ಞಾಹೀನ ಸ್ಥಿತಿ ತಲುಪಿದ್ದ ಅನೇಕರ ದರ್ಶನವೂ ಆಯಿತು. ಇದಲ್ಲದೇ ದುಡ್ಡಿಗಾಗಿ ಪೀಡಿಸುತ್ತಾ, ನಮಗೆ ತೊಂದರೆ ಕೊಟ್ಟ ಹಿಜಿಡಾಗಳ ಘೋರ ಮುಖದ ಪರಿಚಯವೂ ಆಯಿತು. ಹೀಗೆ ಮೊದಲನೇ ದಿನ ಬಹುಬೇಗ ಕಳೆದು ಹೋಯಿತು.
ಮತ್ತಷ್ಟು ಓದು 






