ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

17
ಏಪ್ರಿಲ್

ಪಂಜಾಂಬಿನಲ್ಲಿ ಖಲಿಸ್ತಾನಿ ಕರಾಳ ದಿನಗಳು ಮರುಕಳಿಸಲಿವೆಯೇ?

– ರಾಕೇಶ್ ಶೆಟ್ಟಿ

OBS ಆ ದಂಪತಿಗಳು  ಮರುದಿನ ಸಂಜೆ ರಜೆಯ ಮೇಲೆ ಮಣಿಲಕ್ಕೆ ಹೊರಡುವವರಿದ್ದರು.ಪ್ರಯಾಣದ ಟಿಕೆಟ್ಟು ಎಲ್ಲವೂ ನಿಗದಿಯಾಗಿತ್ತು.ಅಷ್ಟರಲ್ಲಿ ಟೆಲಿಫೋನ್ ರಿಂಗಣಿಸಿತ್ತು.ಕರೆ ಸ್ವೀಕರಿಸಿದವರಿಗೆ ಮರುದಿನ ತುರ್ತು ಮಾತುಕತೆಗಾಗಿ ದೆಹಲಿಗೆ ಬರುವ ಆದೇಶ ಸಿಕ್ಕಿತು.

ಹೆಂಡತಿಯ ಜೊತೆ ಮೀರತ್ ಬಿಟ್ಟು ದೆಹಲಿಯ ಕಡೆ ಹೊರಟವರು, ಸಂಜೆಯೊಳಗೆ ಬರುವೆ ಮಣಿಲಕ್ಕೆ ಹೊರಟು ಬಿಡೋಣ ಅಂತೇಳಿ, ಚಾಂದಿಮಂದಿರದ II ಕಾರ್ಪ್ಸ್ ಅರ್ಮಿ ಹೆಡ್ ಕ್ವಾರ್ಟರ್ ತಲುಪಿಕೊಂಡರು.ತಲುಪಿಕೊಂಡವರೇ ಆಪರೇಷನ್ ರೂಮಿನೊಳ ಹೊಕ್ಕರು.ಅಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್ ನಕ್ಷೆಗಳನ್ನು ಹರವಿ ಕುಳಿತಿದ್ದರು ಸೈನ್ಯಾಧಿಕಾರಿಗಳು.ಒಳ ಬಂದವರಿಗೆ ಏನೊಂದು ಅರ್ಥವಾಗುವ ಮೊದಲೇ “ನಿನಗೆ ಅಮೃತಸರದ ಪರಿಸ್ಥಿತಿ ಕೈ ತಪ್ಪುತ್ತಿರುವುದು ಗೊತ್ತಿದೆಯಲ್ಲ?,ಆದಷ್ಟು ಬೇಗ ನೀನು ಅಮೃತಸರ ತಲುಪಿಕೊಂಡು ಸ್ವರ್ಣಮಂದಿರದೊಳಗೆ ಸೇರಿಕೊಂಡಿರುವ ಖಲಿಸ್ತಾನಿ ಉಗ್ರಗಾಮಿಗಳನ್ನ ಹೊರಹಾಕಬೇಕು” ಅಂತ ಆದೇಶಿಸಲಾಯಿತು.ಹಾಗೆ,ಇದ್ದಕ್ಕಿದ್ದಂತೆ ಸಿಕ್ಕ ಅಪ್ಪಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ,ಪಂಜಾಬ್ ರಾಜ್ಯ ಭಾರತದಿಂದ ಸಿಡಿದು “ಖಲಿಸ್ತಾನ” ಆಗುವುದನ್ನು ತಪ್ಪಿಸಿದ್ದು “ಆಪರೇಷನ್ ಬ್ಲೂ-ಸ್ಟಾರ್” ಅನ್ನುವ ಮಿಲಿಟರಿ ಕಾರ್ಯಾಚರಣೆ ಮತ್ತದರ ನೇತೃತ್ವ ವಹಿಸಿದ್ದ ಆ ಯೋಧನ ಹೆಸರು ಜನರಲ್.ಕೆ.ಎಸ್ ಬ್ರಾರ್.

ಆವತ್ತು ಅಮೃತಸರಕ್ಕೆ ಬಂದಿಳಿದ ಬ್ರಾರ್ ಅವರಿಗೆ ಸರಿಯಾಗಿ ಸ್ವರ್ಣಮಂದಿರದ ನಕ್ಷೆಯೂ ಗೊತ್ತಿರಲಿಲ್ಲ.ತಕ್ಷಣ ಅವರು ಅಲ್ಲಿನ ಸರ್ಕಾರಿ ಅಧಿಕಾರಿಗಳು ಮತ್ತು ಪೋಲಿಸರನ್ನು ಭೇಟಿಯಾಗಿ ಹೆಚ್ಚಿನ ಮಾಹಿತಿ ಕೇಳಿದರು.ಊಹೂಂ! ಅವರಲ್ಲಿ ಯಾವ ಮಾಹಿತಿಯೂ ಇರಲಿಲ್ಲ.ತಿಂಗಳುಗಟ್ಟಲೆ ಕೆಲಸವಿಲ್ಲದೆ ಕುಳಿತಿದ್ದ ಅವರಿಂದ ಏನು ನಿರೀಕ್ಷಿಸುವಂತೆಯೂ ಇರಲಿಲ್ಲ.ಭಿಂದ್ರನ್ ವಾಲೆಯ ಕಪಿಮುಷ್ಟಿಗೆ ಅದಾಗಲೇ ಸ್ವರ್ಣಮಂದಿರ ಸಿಕ್ಕಿಯಾಗಿತ್ತು.ಒಳಗೇನು ನಡೆಯುತ್ತಿದೆ ಯಾರಿಗೂ ಗೊತ್ತಿರಲಿಲ್ಲ.ಭಿಂದ್ರನ್ ವಾಲೆಯ ಖ್ಯಾತಿ ಆಗ ಪಂಜಾಬಿನಲ್ಲಿ ಉತ್ತುಂಗಕ್ಕೇರಿದ ಸಮಯ.ಜನ ಅವನನ್ನು ದೈವತ್ವಕ್ಕೇರಿಸುವ ಮಟ್ಟಕ್ಕೇ ಅವನ ಅಮಲೇರಿತ್ತು.

ಮತ್ತಷ್ಟು ಓದು »

12
ಏಪ್ರಿಲ್

ಅಕ್ಷರ ಕಡಿತಕ್ಕೆ ತಮಿಳು ಮಾದರಿ?

-ಡಾ. ಅಜಕ್ಕಳ ಗಿರೀಶ್ ಭಟ್

ನನ್ನ ” ಕನ್ನಡಕ್ಕೇಕೆ ಶಂಕರ ಬಟ್ಟರ ಕತ್ತರಿ? ” ಎಂಬ ಪುಸ್ತಕದ ಕೆಲವು ಭಾಗಗಳು.

ಅಕ್ಷರ ಕಡಿತಕ್ಕೆ ತಮಿಳು ಮಾದರಿ?

ಹಿರಿಯ ಭಾಷಾವಿದ್ವಾಂಸರಾದ ಡಾ. ಡಿ. ಎನ್. ಶಂಕರ ಭಟ್ಟರು ಈಚಿನ ವರ್ಷಗಳಲ್ಲಿ” ಹೊಸ ಕನ್ನಡ”ವನ್ನು ಪ್ರತಿಪಾದಿಸುತ್ತಿದ್ದಾರೆ. ಕನ್ನಡದ ಅಕ್ಷರಗಳನ್ನು ಕಡಿಮೆ ಮಾಡಬೇಕು ಹಾಗೂ ಸಂಸ್ಕೃತದಿಂದ ಬಂದ ಪದಗಳನ್ನು ಬಿಟ್ಟುಬಿಡಬೇಕು ಎನ್ನುವುದು ಅವರ ವಾದದ ಮುಖ್ಯಾಂಶ. ಅವರ ಇತ್ತೀಚಿನ ಪುಸ್ತಕಗಳು ಅವರದೇ ಆದ ಹೊಸ ಕನ್ನಡದಲ್ಲಿ ಬರುತ್ತಿವೆ.

ಪರಂಪರೆ ಮತ್ತು ಸಂಸ್ಕೃತಿಗಳ ಬಗ್ಗೆ ಡಿ.ಎನ್.ಎಸ್. ಬರಹಗಳಲ್ಲಿ ವ್ಯಕ್ತವಾಗುವ ನಿಲುವೇನು ಎಂದು ನೋಡಬೇಕು. ಅವರು ಒಂದೆಡೆ ಸ್ವಾಭಿಮಾನ, ಸ್ವಸಂಸ್ಕೃತಿ ಬಗ್ಗೆ ಮಾತಾಡುತ್ತಾರೆ; ಇನ್ನೊಂದೆಡೆ ವ್ಯಾವಹಾರಿಕ ಪ್ರಯೋಜನಗಳ ಬಗ್ಗೆ ಮಾತಾಡುತ್ತಾರೆ.ಇನ್ನೊಂದೆಡೆ ವರ್ತಮಾನ ಕಾಲವನ್ನೂ ಈಚಿನ ಕೆಲ ಶತಮಾನಗಳ ಇತಿಹಾಸವನ್ನೂ ನಿರಾಕರಿಸುತ್ತಾರೆ.

ತಮಿಳನ್ನು ಅನುಸರಿಸುವುದೇ ಕನ್ನಡದ ಸಂಸ್ಕೃತಿಯನ್ನು ಹಾಗೂ ಸೊಗಡನ್ನು ಉಳಿಸುವ ದಾರಿ ಎಂದು ಡಾ.ಡಿ.ಎನ್.ಎಸ್. ಹೇಳುತ್ತಾರೆ. ಆರ್. ಗಣೇಶ್ ಹೇಳುವಂತೆ , ಈ ಸುಧಾರಣೆಯು ” ಒಂದು ಶತಾಬ್ಧಿಗೂ ಮುನ್ನ ತಮಿಳುನಾಡಿನಲ್ಲಿ ವೀರ ತಮಿಳರು ನಡೆಸಿದ ಅವಿಚಾರಿತ ಸುಧಾರಣೆಯ ಸವಕಲು ಅನುಕರಣೆಯೆಂಬುದನ್ನು ಬಲ್ಲವರೆಲ್ಲ ಬಲ್ಲರು.ಇಷ್ಟಾಗಿಯೂ ತಮಿಳು ಜಾಗತಿಕ ಸ್ತರದಲ್ಲಿ ತಾನೊಂದು ಭಾಷೆಯಾಗಿ ಏನನ್ನೂ ಸಾಧಿಸಲಾಗಲಿಲ್ಲ.ತಮಿಳರಿಗೆ ಜೀವಿಕೆಯ ಅನಿವಾರ್ಯತೆಯಿಂದ ವ್ಯವಹಾರಮಾತ್ರಕ್ಕಾಗಿ ಕಲಿಯಬೇಕಾಗಿ ಬರುವ ಇನ್ನಿತರ ಭಾಷೆಗಳನ್ನರಿಯಲೂ ಅದು ಸಹಕಾರಿಯಾಗಿಲ್ಲ.” ಕೆ.ವಿ.ತಿರುಮಲೇಶ್ ಅವರು ಕೂಡ ತಮಿಳರ ಈ ಮಾದರಿ ಕನ್ನಡಕ್ಕೆ ಅನುಸರಣಯೋಗ್ಯವಲ್ಲ ಎಂದು ತುಂಬ ಸ್ಪಷ್ಟವಾಗಿಯೇ ಹೇಳಿದ್ದಾರೆ.

ಮತ್ತಷ್ಟು ಓದು »

10
ಏಪ್ರಿಲ್

ಶಂಕರ ಬಟ್ಟರದ್ದು “ಎಲ್ಲರ ಕನ್ನಡ”ವೇ?

– ಡಾ.ಮಾಧವ ಪೆರಾಜೆ

images

ಡಾ. ಆರ್. ಚಲಪತಿಯವರು ‘ತಂತಿ ಮೇಲಿನ ನಡಿಗೆ’ ಎನ್ನುವ ಪುಸ್ತಕವನ್ನು ಇದೀಗ ತಾನೇ ಪ್ರಕಟಿಸಿದ್ದಾರೆ. ‘ಕಲಿಕೆಯ ಕನ್ನಡದ ಬಗೆಗೆ ಬಲ್ಲವರೊಂದಿಗೆ ಮಾತು ಕತೆ’ ಎನ್ನುವ ಉಪಶೀರ್ಷಿಕೆಯೂ ಇದಕ್ಕಿದೆ. ಸಖಿ ಪ್ರಕಾಶನ ಹೊಸಪೇಟೆ ಇವರು ಇದನ್ನು ಪ್ರಕಟಿಸಿದ್ದಾರೆ. ಈ ಪುಸ್ತಕದಲ್ಲಿ ಬಳಕೆಯಾಗಿರುವ ಭಾಷೆಯ ಕುರಿತು ಒಟ್ಟಾರೆಯಾಗಿ ನಾನು ಮುಂದೆ ಚರ್ಚಿಸಲಿರುವುದರಿಂದ ಆರಂಭದಲ್ಲಿಯೇ ಒಂದು ಮಾತನ್ನು ವಿಶೇಷವಾಗಿ ಪ್ರಸ್ತಾಪಮಾಡಿ ಮುಂದುವರಿಯುತ್ತೇನೆ.ಈ ಪುಸ್ತಕದ ಮುಖಪುಟದ ಮೇಲಿನಿಂದ ಅದು ಸ್ವತಂತ್ರ ಪುಸ್ತಕದ ಹಾಗೆ ಕಾಣುತ್ತದೆ. ಆದರೆ ತೆರೆತೆರದಂತೆ ಅದು ಸಂಪಾದನೆ ಎನ್ನುವುದು ಸ್ಪಷ್ಟವಾಗುತ್ತದೆ.ಶಿಕ್ಷಣ ಕ್ಷೇತ್ರದಲ್ಲಿ ದಶಕಗಳಿಂದ ತೊಡಗಿಸಿಕೊಂಡಿರುವವರೊಂದಿಗೆ ಲೇಖಕರು ಮಾಡಿದ ಸಂದರ್ಶನಗಳಿರುವ ಪುಸ್ತಕವಿದು. ಹಾಗಿರುವಾಗ ಇಂತಹ ಪುಸ್ತಕವನ್ನು ಸಂಪಾದನೆ ಎಂದು ಸ್ಪಷ್ಟವಾಗಿ ಗುರುತಿಸಬೇಕು.ಅದುವೇ ಸರಿಯಾದ ವಿಧಾನ.

ಈ ಪುಸ್ತಕದಲ್ಲಿ ಪ್ರಯೋಗವಾಗಿರುವ ಭಾಷೆಯ ಕುರಿತು ಒಂದು ಉದಾಹರಣೆಯನ್ನು ನೀಡುತ್ತೇನೆ.

ಉದಾ: ೧:

“ಪದವಿ ತರಗತಿಗಳಲ್ಲಿ ಏನನ್ನು ಕಲಿಯುವುದು/ ಕಲಿಸುವುದಾಗಿರಬೇಕು?”

ಎಂ.ಜಿ.ಸಿ. ಯಾವುದೇ ಒಂದು ಮಾತ್ರುಬಾಶೆಯನ್ನು ತರಗತಿಯಲ್ಲಿ ಕಲಿಯುವ ವಿದ್ಯಾರ್‍ತಿಗೆ ಆ ಭಾಶೆಯಲ್ಲಿ ವ್ಯವಹರಿಸುವ ಸಾಮಾನ್ಯ ಜ್ನಾನವಿರುತ್ತದೆ. ತರಗತಿಗಳಲ್ಲಿ ಹೊಸ ಪಾರಿಬಾಶಿಕ ಪದಗಳು ಪರಿಚಯವಾಗುತ್ತವೆ. ಹಾಗೂ ಒಂದು ರೀತಿಯ ಆಲೋಚನಾ ಕ್ರಮಕ್ಕೆ ಆಡುಬಾಶೆಯಿಂದ ಶಿಶ್ಟಬಾಶೆಯ ಕಡೆಗೆ ಅವನ/ಳ ಗಮನ ಹರಿಯುತ್ತದೆ.

ಒಂದು ರೀತಿಯಲ್ಲಿ ಕಲಿಸುವವರು ಮತ್ತು ಕಲಿಯುವವರು ಅಸಹಾಯಕರು. ಪಟ್ಯಕ್ರಮ ಮತ್ತು ಪಟ್ಯವನ್ನು ಸಿದ್ದಪಡಿಸುವವರೇ ಬೇರೆಯವರಾಗಿರುತ್ತಾರೆ. ಈಗ ಪರಿಸ್ತಿತಿ ಸುದಾರಿಸುತ್ತಿದೆ ಎನಿಸಿದರೂ ವಿವಿಗಳ ಒಟ್ಟು ರಚನಾ ವಿನ್ಯಾಸವೇ ಪ್ಯೂಡಲ್ ಮಾದರಿಯದು- ವಸಾಹತು ಕಲ್ಪನೆಯದು. ಅವು ಇಂದಿಗೂ ಡೆಮಕ್ರೆಟಿಕ್ ಆಗಿಯೇ ಇಲ್ಲ.(ಪು.೧೨) ಮತ್ತಷ್ಟು ಓದು »

6
ಏಪ್ರಿಲ್

ಇನ್ನೂ ಬೇಕೆ ಇಂಥ ರಾಜಕೀಯ ಮೀಸಲಾತಿ?

-ಸಾತ್ವಿಕ್ ಎನ್.ವಿ.

ಒಂದು ವಿಷಯವಂತೂ ಸಂಸತ್ತಿನಲ್ಲಿ ಒಂದು ಸಣ್ಣ ಚರ್ಚೆಯೂ ಇಲ್ಲದೇ ಸರ್ವಾನುಮತದಿಂದ ಅನುಮೋದನೆ ಪಡೆಯುತ್ತದೆ. ಸಂಸದರು ಇದಕ್ಕೆ ವಿರೋಧ ಇಲ್ಲವೆ ಅನುಮಾನ ವ್ಯಕ್ತಪಡಿಸುವುದು ಪ್ರತಿಗಾಮಿತನ ಎಂದೇ ಭಾವಿಸುತ್ತಾರೆ. ಪಕ್ಷಬೇಧ ಮರೆತು ಬೆಂಬಲಿಸುತ್ತಾರೆ. ಅದುವೇ ಚುನಾವಣೆಯಲ್ಲಿ ನೀಡಲಾಗಿರುವ ರಾಜಕೀಯ ಮೀಸಲಾತಿಯ ನವೀಕರಣ. ಇದು ಪ್ರತಿ ಹತ್ತು ವರ್ಷಕ್ಕೊಮ್ಮೆ ನವೀಕರಣಕ್ಕೆ ಬರುತ್ತದೆ. ಆಗ ಸಂಸತ್ತು ಈ ಪದ್ಧತಿಯನ್ನು ನಿರಾಕರಿಸಬಹುದು ಇಲ್ಲವೇ ಮುಂದಿನ ಹತ್ತು ವರ್ಷಕ್ಕೆ ನವೀಕರಿಸಬಹುದು. ಆದರೆ ಸಂಸತ್ತು ಯಾವುದೇ ಚರ್ಚೆಯಿಲ್ಲದೇ ನವಿಕರಿಸುತ್ತಲೇ ಬಂದಿದೆ. ಸರ್ಕಾರ ಯಾ ರಾಜಕೀಯಪಕ್ಷಗಳಿಗೆ ದಲಿತ/ಹಿಂದುಳಿದ ವರ್ಗಗಳ ಬಗ್ಗೆ ಇಷ್ಟೊಂದು ಪ್ರೀತಿ ಎಲ್ಲಿಂದ ಉಕ್ಕಿತೆಂದು ಆಶ್ಚರ್ಯವಾಗಬಹುದು. ಆದರೆ ಇದರ ಹಿಂದಿನ ತಂತ್ರ ಬೇರೆಯದೇ ಇದೆ.

ಯಾಕೆಂದರೆ ಸಂವಿಧಾನದಲ್ಲಿ ದಲಿತ ಜನವರ್ಗದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ನೀಡಲಾದ ಈ ಮೀಸಲಾತಿಯು ರಾಜಕೀಯ ಪಕ್ಷಗಳ ಕೈಯಲ್ಲಿ ಸಿಕ್ಕಿ ತನ್ನ ಮೂಲ ಉದ್ದೇಶವನ್ನು ಎಂದೋ ಮರೆತಿದೆ. ಮೀಸಲು ಕ್ಷೇತ್ರದಲ್ಲಿ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸುತ್ತವೆ. ಗೆದ್ದ ಸ್ಪರ್ಧಿಯು ತನ್ನ ಸಮುದಾಯದ ಪ್ರತಿನಿಧಿಯಾಗಿರುತ್ತಾನೆ. ತನ್ನ ಸಮುದಾಯದ ಅಭಿವೃದ್ಧಿಯ ಸಲುವಾಗಿ ಸದನದಲ್ಲಿ ಧ್ವನಿ ಎತ್ತುವುದು ಆತನ ಕರ್ತವ್ಯವಾಗಿರುತ್ತದೆ. ಆದರೆ ಪಕ್ಷವೊಂದರ ಹಂಗಿನಲ್ಲಿರುವ ವ್ಯಕ್ತಿಯಿಂದ ಇಂಥ ದೃಢ ಮತ್ತು ನಿಷ್ಠುರ ಕೆಲಸಗಳನ್ನು ನಿರೀಕ್ಷಿಸಲು ಸಾಧ್ಯವೇ? ಆತ ದಲಿತವರ್ಗದಿಂದ ಬಂದಿದ್ದರೂ ತನ್ನ ಪಕ್ಷಕ್ಕಾಗಿಯೇ ತಯಾರಾದವನು. ಆತ ತನ್ನ ಪಕ್ಷದ ಸಿದ್ಧಾಂತದಿಂದ ಎಷ್ಟು ಹೊರಗೆ ನಿಂತು ಕೆಲಸ ಮಾಡಲು ರಾಜಕೀಯ ಪಕ್ಷಗಳು ಅವಕಾಶ ನೀಡುತ್ತಿವೆ? ಹೆಚ್ಚಿನ ಸಂದರ್ಭದಲ್ಲಿ ಆಯ್ಕೆಯಾದ ವ್ಯಕ್ತಿಯು ಪಕ್ಷವೊಂದರಲ್ಲಿ ಸದಸ್ಯರ ಸಂಖ್ಯೆ ಹೆಚ್ಚಿಸುವ ಇಲ್ಲವೇ ಹೌದಪ್ಪನಾಗಿ ಬಳಕೆಯಾಗುವ ಸಂದರ್ಭವೇ ಹೆಚ್ಚು. ಇಂಥ ಸಂದರ್ಭದಲ್ಲಿ ದಲಿತ ಸದಸ್ಯನೊಬ್ಬನಿಗೆ ಇತರೆ ವರ್ಗದ ರಾಜಕೀಯ ನೇತಾರನಿಗಿಂತ ಹೆಚ್ಚಿನ ಜವಾಬ್ದಾರಿ ಮತ್ತು ಹೊಣೆಗಾರಿಕೆ ಇರಬೇಕಾಗುತ್ತದೆ. ಮತ್ತಷ್ಟು ಓದು »

4
ಏಪ್ರಿಲ್

ಬದಲಾವಣೇ ತರಲು ಬೇಕಿರುವುದು “ಮನಸ್ಸು” ವಯಸ್ಸಲ್ಲ…!

-ರಾಕೇಶ್ ಶೆಟ್ಟಿ

ARONMN“ರಾಜಕಾರಣಕ್ಕೆ ಯುವಕರು ಬರಬೇಕು” ಹಾಗೂ “ರಾಜಕಾರಣಿಗಳಿಗೆ ನಿವೃತ್ತಿ ವಯೋಮಿತಿಯಿರಬೇಕು” ಅನ್ನುವ ಚರ್ಚೆಗಳು ಪದೇ ಪದೇ ನಡೆಯುತ್ತಲೇ ಇರುತ್ತವೆ.ನನ್ನ ಮಟ್ಟಿಗೆ ಯುವಕರು ರಾಜಕೀಯಕ್ಕೆ ಬಂದರೆ/ಯುವಕರ ಕೈಗೆ ಅಧಿಕಾರ ಸಿಕ್ಕರೆ ಎಲ್ಲವೂ ಬದಲಾಗುತ್ತದೆ ಅನ್ನುವುದು ಒಂದು ’ಮಿಥ್’ ಅಷ್ಟೇ.ನಿಜಕ್ಕೂ ಬದಲಾವಣೆ ಬಯಸಲು/ಮಾಡಲು ಬೇಕಾಗಿರುವುದು ವಯಸ್ಸೋ? ಮನಸ್ಸೋ?

ಭಾರತದ ಅತಿಕಿರಿಯ ಮುಖ್ಯಮಂತ್ರಿ ಅನ್ನುವ ಹೆಗ್ಗಳಿಕೆ ಉ.ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ (೩೯) ಅವರದ್ದು.ಅವರು ಗಾದಿಯ ಮೇಲೆ ಕುಳಿತು ಮೊನ್ನೆ ಮೊನ್ನೆಗೆ ಒಂದು ವರ್ಷ ಕಳೆದಿದೆ.ಈ ಒಂದು ವರ್ಷದಲ್ಲಿ ಈ ಬಿಸಿ ರಕ್ತದ ಯುವ ಮುಖ್ಯಮಂತ್ರಿ ಅಧಿಕಾರ ಚಲಾವಣೆಯಲ್ಲಿ ಯಾವುದಾದರೂ ಭರವಸೆಯುತ (’ಕ್ರಾಂತಿಕಾರಕ’ ಅನ್ನುವ ದೊಡ್ಡ ಪದವೂ ಬೇಡ) ರೀತಿಯಲ್ಲಿ ರಾಜ್ಯಭಾರ ಮಾಡಿದ್ದಾರೆಯೇ? ಕನಿಷ್ಟ ಮಂತ್ರಿಮಂಡಲ ರಚನೆ ಮಾಡುವಾಗಲಾದರೂ ಆರೋಪ ಮುಕ್ತರಿಗೆ ಸ್ಥಾನ ಕೊಟ್ಟರೇನು? ಇವರ ಮಂತ್ರಿಮಂಡಲದಲ್ಲಿ ಶೇ.೫೩ರಷ್ಟು ಮಂದಿ ಸಚಿವರ ಮೇಲೆ ಕ್ರಿಮಿನಲ್ ಆರೋಪಗಳಿವೆ.ವರ್ಷದಿಂದ ಉತ್ತರ ಪ್ರದೇಶ ಸುದ್ದಿಯಲ್ಲಿದ್ದರೆ ಅದು ಬರಿ ಕೆಟ್ಟ ಸುದ್ದಿಗಳ ಮೂಲಕವಷ್ಟೇ.ಇತ್ತೀಚೆಗೆ ತಾನೇ ಪ್ರತಾಪ್ ಗಢದಲ್ಲಿ ಡಿವೈಎಸ್ಪಿ ಜಿಯಾ-ಉಲ್-ಹಕ್ ರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದ್ದು ನೆನಪಿರಬೇಕಲ್ಲ.ಒಬ್ಬ ಯುವ (ಅನನುಭವಿ) ಮುಖ್ಯಮಂತ್ರಿಗೆ ಭರವಸೆಯ ಕಾರ್ಯಕ್ರಮ ರೂಪಿಸುವಲ್ಲಿ ಇನ್ನೊಂದಿಷ್ಟು ಸಮಯ ಬೇಕು ಅಂತ ಇಟ್ಟುಕೊಂಡರೂ, ಅಪರಾಧ,ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮೊದಲಿಗೆ ಬೇಕಿದಿದ್ದು ಗಟ್ಟಿ ಮನಸ್ಸು.ಬಹುಷಃ ಅದೇ ಈ ಯುವ ಮುಖ್ಯಮಂತ್ರಿಯಲ್ಲಿ ಕಾಣುತ್ತಿಲ್ಲ.ತನ್ನ ಸುತ್ತಲೂ ಕ್ರಿಮಿನಲ್ ಆರೋಪಿಗಳ ಸಂಪುಟವನ್ನಿಟ್ಟುಕೊಂಡು “ಗೂಂಡಾ ರಾಜ್ಯ”ವನ್ನು ಅಳಿಸಿ ಹಾಕುತ್ತೇವೆ ಅನ್ನುವುದೆಷ್ಟು ಸತ್ಯ? “ಬದಲಾವಣೆ ತರಲು ವಯಸ್ಸು ಮುಖ್ಯವೋ,ಮನಸ್ಸು ಮುಖ್ಯವೋ” ಅನ್ನುವ ಈ ಚರ್ಚೆಯ ಮೊದಲ ಉದಾಹರಣೆ ಅಖಿಲೇಶ್ ಯಾದವ್ ರನ್ನು ನೋಡಿದರೇ ಯುವಕರು ರಾಜಕೀಯಕ್ಕೆ/ಅಧಿಕಾರಕ್ಕೆ ಬಂದರೆ ಬದಲಾವಣೆಯಾಗುತ್ತದೆ ಅನ್ನುವುದು ಮಿಥ್ ಅನ್ನಿಸುತ್ತದೆ.ಬದಲಾಯಿಸಲೇಬೇಕು ಅನ್ನುವ ಮನಸಿದ್ದರೆ ವಯಸ್ಸು ಅಷ್ಟು ಅಡ್ಡಿಯಾಗಲಾರದು.

ಮತ್ತಷ್ಟು ಓದು »

29
ಮಾರ್ಚ್

ಉಪಖಂಡದಲ್ಲಿ ಏಕಾಂಗಿ ಭಾರತ?

– ಡಾ ಅಶೋಕ್ ಕೆ ಆರ್

ISPCತೀರ ಹಿಂದಿನ ಮಾತಲ್ಲ. ಕೆಲವೇ ದಿನಗಳ ಹಿಂದೆ ಅಫ್ಜಲ್ ಗುರುವನ್ನು ನೇಣಿಗೇರಿಸಿ ಅವನ ದೇಹವನ್ನು ಆತನ ಮನೆಯವರಿಗೆ ನೀಡದೆ ಜೈಲಿನಲ್ಲೇ ಮಣ್ಣು ಮಾಡಲಾಗಿತ್ತು. ಕಾಶ್ಮೀರದಲ್ಲಿ ಪ್ರತಿಭಟನೆಗಳಾದವು, ಅಫ್ಜಲ್ ಗುರು ಅಲ್ಲಿಯವನಾಗಿದ್ದರಿಂದ. ಇದೇ ಸಮಯದಲ್ಲಿ ಪಾಕಿಸ್ತಾನದ ರಾಜಕೀಯ ಪಕ್ಷಗಳು ಅಫ್ಜಲ್ ಗುರುವಿನ ದೇಹವನ್ನು ಆತನ ಮನೆಯವರಿಗೆ ಹಿಂದಿರುಗಿಸಬೇಕು ಎಂಬ ನಿರ್ಣಯ ತೆಗೆದುಕೊಂಡವು, ನಿರ್ಣಯ ಮಾಡಿದ್ದು ಹಾದಿಬೀದಿಯಲ್ಲಾಗಿರದೆ ಸಂಸತ್ತಿನಲ್ಲಾಗಿತ್ತು.ಈ ಕಾರಣದಿಂದ ನಿರ್ಣಯಕ್ಕೆ ಅಧಿಕೃತತೆಯ ಮುದ್ರೆ ಲಭಿಸಿತ್ತು. ಪಾಕಿಸ್ತಾನದ ಈ ನಡೆಗೆ ಭಾರತದಲ್ಲಿ ಅಗಾಧ ವಿರೋಧ  ವ್ಯಕ್ತವಾಗಿದ್ದು ಸಹಜ ಪ್ರತಿಕ್ರಿಯೆಯಾಗಿತ್ತು. ನಮ್ಮ ಮನೆಯ ವಿಷಯದಲ್ಲಿ ಅನ್ಯರು ಮೂಗು ತೂರಿಸುವುದು ಕೋಪ ತರಿಸುವ  ವಿಷಯವೇ ಸರಿ.

ಶ್ರೀಲಂಕಾದ ಎಲ್ ಟಿ ಟಿ ಇ ಸಂಘಟನೆಯ ಹುಟ್ಟಿಗೆ ಅನೇಕ ಐತಿಹಾಸಿಕ ಕಾರಣಗಳಿವೆ.ಶ್ರೀಲಂಕಾದ ಈ ಆಂತರಿಕ ಸಮಸ್ಯೆಯ ಉದ್ಭವವಾಗಿದ್ದು ಬ್ರೀಟೀಷರ ಆಡಳಿತದ ಕಾರಣದಿಂದ ಎಂದರೆ ತಪ್ಪಾಗಲಾರದು.ಶ್ರೀಲಂಕಾದ ಎಸ್ಟೇಟುಗಳಲ್ಲಿ ಕೆಲಸ ಮಾಡಲೆಂದು ಶ್ರಮಜೀವಿಗಳಾದ ತಮಿಳರನ್ನು ಕರೆದುಕೊಂಡು ಹೋಗಿತ್ತು ಅಂದಿನ ಬ್ರಿಟೀಷ್ ಆಡಳಿತ. ಬ್ರಿಟೀಷರು ಶ್ರೀಲಂಕ ತೊರೆದ ನಂತರ ಅಲ್ಲಿನ ಬಹುಸಂಖ್ಯಾತರಾದ ಸಿಂಹಳೀಯರು ಲಂಕ ತಮಿಳರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ನೋಡಕಲಾರಂಭಿಸಿದ್ದರು.

ಮತ್ತಷ್ಟು ಓದು »

20
ಮಾರ್ಚ್

ಇಂತ ಸಾವಿಗೆ ಕೊನೆಯೆಂದು?

– ಗುರುಗಜಾನನ ಭಟ್

sainikaruಕೇವಲ ಎರಡು ಜನ ಉಗ್ರರು ಐದು ಜನ ಸೈನಿಕರನ್ನು ಕೊಂದರೆಂದರೆ ನಮ್ಮ ಸೈನಿಕರದ್ದು ಎಂತಹ  ಸಾವಾಗಿರಬೇಕು ?? ಎಂದಾದರೂ ಯೋಚಿಸಿದ್ದೇವೆಯೇ? ಕೈಯಲ್ಲಿ ಉಗ್ರರು ಆಧುನಿಕ ಮೆಷೀನ್ ಗನ್ನುಗಳನ್ನೂ ಹಿಡಿದು ಬಂದರೆ , ಭಾರತೀಯ ಸೈನಿಕನಲ್ಲಿ ಎಂತಹ ಗನ್ನುಗಳಿರುತ್ತವೆ ಎಂದು ಗಮನಿಸಿದ್ದೆವೆಯೇ?? ನಮ್ಮ ಮುಗ್ಧ ಯೋಧರ ಎದೆಯಲ್ಲಿ ಅಗಾಧ ದೇಶಪ್ರೇಮವನ್ನು ಬಿತ್ತಿ , ಅದನ್ನು ಬೆಳೆಸಿ ಹೆಮ್ಮರ ವಾಗಿಸಿ , ಕೈಯಲ್ಲಿ ಸರಿಯಾದ ಗನ್ನುಗಳನ್ನೂ ಕೊಡದೆ, ಎದೆಗೆ ರಕ್ಷಾ ಕವಚಗಳನ್ನು ನೀಡದೆ , ಯುದ್ದಕ್ಕೆ ನಿಲ್ಲಿಸಿ ಬಿಡುತ್ತೆವಲ್ಲ ಇದಾವ ನ್ಯಾಯ ?

ಸೈನಿಕರನ್ನು ಕೊಲ್ಲಲು ಬಿಟ್ಟು, ಸತ್ತಮೇಲೆ ಪರಮವೀರ ಚಕ್ರ ಕೊಡುವ ಸರ್ಕಾರ ಬಹುಶಃ ಯಾವ ದೇಶದಲ್ಲೂ ಇಲ್ಲ. ನಮ್ಮ ನೆಲದಲ್ಲೇ ನಮ್ಮ ಸೈನಿಕರ ಹತ್ಯೆ ನಡೆಯುತ್ತದಲ್ಲ ಇದಕ್ಕಿಂತ ವಿಪರ್ಯಾಸ ಎಲ್ಲಾದರೂ ಉಂಟೇ ?? ಕಟ್ಟ ಕಡೆಗೆ ಸೈನಿಕ ಸತ್ತಿದ್ದಾನೆ , ಅವನದು ಮಾತೃ ಭಕ್ತಿ , ನೆಲದ ಮಣ್ಣಿನ ಪ್ರೀತಿ , ಎಲ್ಲವೂ ಸರಿ , ಆದರೇ ಅದನ್ನು ತೋರಿಸಲು ಸಾಯಲೇ ಬೇಕಿತ್ತೆ??   ಅಥವಾ ಆ ಸಾವು ಅನಿವಾರ್ಯವಾಗಿತ್ತೆ ??

ಎಂದು ಕೊನೆ ಈ ಸಾವಿಗೆ ?? 1947 ರಿಂದಲೂ ನಮ್ಮ ಸೈನಿಕರು ಸಾಯುತ್ತಲೇ ಇದ್ದಾರೆ  ನಮ್ಮ ಸೈನಿಕನಿಗೆ , ಅವನ ವೀರಾವೇಶಕ್ಕೆ , ಅವನ ಆತ್ಮ ಸ್ತೈರ್ಯಕ್ಕೆ , ಅವನ ಮಣ್ಣಿನ ಪ್ರೀತಿಗೆ , ಸರ್ಕಾರ ಕೊಟ್ಟಿದ್ದಾದರೂ ಏನು ? ನಮ್ಮ ಸೈನಿಕರ ಆಲೋಚನೆಯನ್ನೇಕೆ ಬದಲು ಮಾಡಲಾಗದು ?? ನೀನು ಹೊರಟಿರುವುದು ವೀರಮರಣವನ್ನೊಪ್ಪಲು ಅಲ್ಲ , ನಿನ್ನನ್ನು ಕಳುಹಿಸುತ್ತಿರುವುದು , ಸಾಯಲಿ ಎಂದಲ್ಲ , ಸಾಯಿಸು ಎಂದು . ನಿನಗೆ ಮುಕ್ತ ಅವಕಾಶವಿದೆ , ದೇಶದ್ರೋಹಿಗಳನ್ನು ಸದೆ ಬಡಿ ಎಂದು ಯಾಕೆ ಆತನಿಗೆ ತಿಳಿಸಬಾರದು ??

ಮತ್ತಷ್ಟು ಓದು »

19
ಮಾರ್ಚ್

ರಾಮಸೇತು ಒಡೆದರೆ ಥೋರಿಯಮ್ ನಿಕ್ಷೇಪಕ್ಕೆ ಎಳ್ಳು ನೀರು…

-ಚಕ್ರವರ್ತಿ ಸೂಲಿಬೆಲೆ

Rama Sethuve1ನಮಗೇ ಅರಿವಿಲ್ಲದೇ ಭಯಾನಕ ಪರಿಸ್ಥಿತಿಯತ್ತ ತೆವಳಿಕೊಂಡು ಹೋಗುತ್ತಿದ್ದೇವೆ! ನಾವು ಬಳಸುವ ಪೆಟ್ರೋಲು – ಡೀಸೆಲ್ಲಿನ ಮುಕ್ಕಾಲು ಭಾಗ ಆಮದು ಮಾಡಿಕೊಳ್ಳುತ್ತಿದ್ದೇವೆ. ಕಳೆದ ವರ್ಷದ ಲೆಕ್ಕಾಚಾರದ ಪ್ರಕಾರ ೧೩೪ ಶತಕೋಟಿ ಡಾಲರುಗಳಷ್ಟು ತೈಲ ಆಮದು ಮಾಡಿಕೊಂಡಿದ್ದೇವೆ. ಆಮದು ಮಿತಿಮೀರಿ ರಫ್ತು ನೆಲ ಕಚ್ಚುತ್ತಿರುವುದರಿಂದ ಡಾಲರಿನೆದುರು ರೂಪಾಯಿ ಸೋಲುತ್ತಲೇ ಸಾಗುತ್ತಿದೆ. ಒಂದಷ್ಟು ಜನಕ್ಕೆ ರೂಪಾಯಿಯ ಅಪಮೌಲ್ಯ ಲಾಭದಾಯಕವೆನಿಸಿದರೂ ಭಾರತದ ದೃಷ್ಟಿಯಿಂದ ಬಲು ಭಯಾನಕ.
ಅದೇಕೋ ನೆಹರೂ ಕಾಲದಿಂದಲೂ ಈ ದೇಶಕ್ಕೆ ದೂರದೃಷ್ಟಿಯ ಕೊರತೆ ಇದೆ. ಮುಂದಿನ ನೂರು ವರ್ಷಗಳಿಗೆ, ಸಾವಿರ ವರ್ಷಗಳಿಗೆ ಯೋಜನೆ ರೂಪಿಸುವ ಪ್ರಯತ್ನಗಳೇ ಇಲ್ಲ. ಅದು ಬಿಡಿ, ಅಂತಾರಾಷ್ಟ್ರೀಯ ಒತ್ತಡಗಳಿಗೆ ಮಣಿದು ಇರುವ ಸಂಪತ್ತನ್ನೂ ನಾಶ ಮಾಡಿಕೋಳ್ಳುವ ಜಾಯಮಾನ ನಮ್ಮದು.

ಎನರ್ಜಿ ಇನ್‌ಫರ್ಮೇಶನ್ ಏಜೆನ್ಸಿಯ ಪ್ರಕಾರ ಅಮೆರಿಕಾ, ಚೀನಾ, ರಷ್ಯಾ ಬಿಟ್ಟರೆ ಹೆಚ್ಚು ತೈಲ ಬಳಸುವ ರಾಷ್ಟ್ರ ನಮ್ಮದೇ. ಉಳಿದ ಮೂರು ರಾಷ್ಟ್ರಗಳೂ ತೈಲ ಹೊರತೆಗೆದು ಸಂಸ್ಕರಿಸಿ ಬಳಸುವಲ್ಲಿ ಸ್ವಾವಲಂಬಿಯಾಗುವತ್ತ, ಅಷ್ಟೇ ಅಲ್ಲ, ತಮ್ಮ ತೈಲ ಕಂಪನಿಗಳನ್ನು ತೈಲ ರಾಷ್ಟ್ರಗಳಿಗೆ ಕಳಿಸುವತ್ತಲೂ ಗಮನ ನೀಡುತಿವೆ. ನಾವು ಮಾತ್ರ ಕಂಡುಹಿಡಿದಿರುವ ತೈಲ ಸಂಪತ್ತನ್ನು ಹೊರತೆಗೆಯಲೂ ಮೀನಾಮೇಷ ಎಣಿಸುತ್ತ ಬಿಲಿಯನ್‌ಗಟ್ಟಲೆ ಡಾಲರುಗಳನ್ನು ವ್ಯರ್ಥ ಮಾಡುತ್ತ, ಕಾಲ ಕಳೆಯುತ್ತಿದ್ದೇವೆ. ಅದೇ ಏಜೆನ್ಸಿಯ ಅಂಕಿ ಅಂಶದ ಪ್ರಕಾರ ೨೦೧೦ರಲ್ಲಿ ನಾವು ಏಳುವರೆ ಲಕ್ಷ ಬ್ಯಾರಲ್‌ನಷ್ಟು ತೈಲವನ್ನು ಪ್ರತಿ ನಿತ್ಯ ಹೊರತೆಗೆದರೆ, ಆ ವರ್ಷ ೩೨ ಲಕ್ಷ ಬ್ಯಾರಲ್‌ನಷ್ಟು ತೈಲವನ್ನು ಪ್ರತಿನಿತ್ಯ ಬಳಸಿದ್ದೇವೆ. ಅಂದಮೇಲೆ ಅಂತಾರಾಷ್ಟ್ರೀಯ ಒತ್ತಡಗಳು ನಮ್ಮ ಮೇಲೆ ಹೇಗಿರಬಹುದೆಂದು ಲೆಕ್ಕ ಹಾಕಿ. ನಮಗೆ ಪೆಟ್ರೋಲು- ಡೀಸೆಲ್ಲು ಕಳಿಸುವುದಿಲ್ಲವೆಂದು ತೈಲ ರಾಷ್ಟ್ರಗಳು ನಿರ್ಬಂಧ ಹೇರಿ ಕುಂತುಬಿಟ್ಟರೆ ನಮ್ಮ ಕಥೆ ಮುಗಿದೇಹೋಯ್ತು. ಹಾಹಾಕಾರ ಉಂಟಾಗಿಬಿಡುತ್ತೆ.

ಮತ್ತಷ್ಟು ಓದು »

18
ಮಾರ್ಚ್

ನರೇಂದ್ರ ಮೋದಿ v /s ರಾಹುಲ್ ಗಾಂಧಿ …ಅನುಭವಿ v /s ಅನನುಭವಿ

– ಅಜಿತ್ ಶೆಟ್ಟಿ,ಉಡುಪಿ

NaGa೨೦೧೪ ರ ಲೋಕಸಭೆ ಮಹಾಸಮರ ಇನ್ನೇನು ಬಂದೇ ಬಿಡುತ್ತೆ.ಎರಡು ಪ್ರಮುಖ ಒಕ್ಕೂಟಗಳಾದ ಎನ್.ಡಿ.ಎ ಹಾಗೂ ಯು.ಪಿ.ಎ ತನ್ನ ಪ್ರಧಾನಿ ಅಭ್ಯರ್ಥಿ ಯಾರೆಂದು ಅಧಿಕೃತವಾಗಿ ಘೋಷಿಸದಿದ್ದರೂ, ತಮ್ಮ ಪ್ರಧಾನಿ ಅಭ್ಯರ್ಥಿಗೆ ಸಕಲ ವೇಷ-ಭೂಷಣ ತೊಡಿಸಿ ರಂಗಕ್ಕೆ ಇಳಿಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿವೆ. ನೆಹರು ಕುಟುಂಬಕ್ಕೆ ಜೋತು ಬಿದ್ದಿರುವ ಕಾಂಗ್ರೆಸ್ ತಿಂಗಳ ಹಿಂದೆ ಜೈಪುರದಲ್ಲಿ ನಡೆದ ಚಿಂತನಾ ಶಿಬಿರ ದಲ್ಲಿ ಆ ವಂಶದ ಕುಡಿ , ನಲವತ್ತು ಮೀರಿದ ಯುವಕ ರಾಹುಲ್ ಗಾಂಧಿ ಯವರಿಗೆ ಪಕ್ಷದಲ್ಲಿ “ನಂಬರ್ ಟೂ” ಸ್ಥಾನ ಕೊಟ್ಟು ಅವರನ್ನೇ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದೆ. ವೀರಪ್ಪ ಮೊಯಿಲಿ, ದಿಗ್ವಿಜಯ್ ಸಿಂಗ್ , ಜಿತೀನ್ ಪ್ರಸಾದ್ ರಂತವರು ರಾಹುಲ್ ಗುಣಗಾನದಲ್ಲೇ ತೊಡಗಿ ಬಹಿರಂಗವಾಗೇ ಅವರನ್ನು ಪ್ರಧಾನಿ ಅಭ್ಯರ್ಥಿಎಂದಿದ್ದಾರೆ.ಎನ್.ಡಿ.ಎಯ ಪ್ರಮುಖ ಪಕ್ಷ ಬಿಜೆಪಿ ಇತ್ತೀಚಿಗೆ ನಡೆದ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಗುಜರಾತ್ ನ ಮೂರುಬಾರಿಯ ಜನಪ್ರಿಯ ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ವಿಶೇಷ ಆದ್ಯತೆ ನೀಡಿದೆ . ಪಕ್ಷದಲ್ಲಿ ಏನೇ ಗೊಂದಲ ಇದ್ದರೂ, ಕಾರ್ಯಕಾರಿ  ಸಭೆಯಲ್ಲಿ ಮೋದಿಗೆ ಕೊಟ್ಟ ಪ್ರಾಮುಖ್ಯತೆ ಸೂಚ್ಯವಾಗಿ ಮೋದಿನೇ ಮುಂದಿನ ಪ್ರಧಾನಿ ಅಭ್ಯರ್ಥಿ ಎನ್ನುವಂತಿತ್ತು.ಹಾಗೇ ಪಕ್ಷದ ರಾಷ್ಟೀಯ ಅಧ್ಯಕ್ಷ ರಾಜನಾಥ್ ಸಿಂಗ್ ರ ಹೇಳಿಕೆಗಳು ಕೂಡ ಇದಕ್ಕೆ ಪುಷ್ಟಿ ನೀಡುತಿತ್ತು .

ಒಂದು ವೇಳೆ ಈವರಿರ್ವರು ಪ್ರಧಾನಿ ಅಭ್ಯರ್ಥಿಗಳಾದರೆ, ಮೋದಿ ಮುಂದೆ ರಾಹುಲ್ ಎನ್ನುವುದು ಅನುಭವಿ ಭೀಷ್ಮನ ಮುಂದೆ ಅನನುಭವಿ ಬಡಾಯಿ ಉತ್ತರ ಕುಮಾರನನ್ನು ತಂದು ನಿಲ್ಲಿಸಿದಂತೆ.ಇದು ನಿಸ್ಸಂಶಯವಾಗಿ ಅನುಭವಿ v /s ಅನನುಭವಿ ನಡುವಿನ ಸಮರ.ಹೌದು ಮೇಷ್ಟ್ರ ಮಗ ಮೇಷ್ಟ್ರು ಅಗಬಾರದು, ಡಾಕ್ಟರ್ ಮಗ ಡಾಕ್ಟರ್ ಆಗಬಾರದು ಅಂತೇನು ಇಲ್ಲಾ ಹಾಗೇ ತಲತಲಾಂತರದಿಂದ ರಾಜಕೀಯ ವಂಶದಿಂದ ಬಂದ ರಾಜಕಾರಣಿ ಮಗ ಪ್ರದಾನಿ ಆಗಬಾರದಂತೆನೂ ಇಲ್ಲ.ಆದರೆ, ಅವನು ತನ್ನ ಸ್ವಂತ ಅರ್ಹತೆಯಿಂದ ಆ ಪದವಿ ಪಡೆಯಬೇಕೇ ವಿನಹ , ತನ್ನ ತಂದೆ ಅನುಭವಿಸಿದ ಹುದ್ದೆ, ತಂದೆ ಹೆಸರು , ಕುಟುಂಬದ ಹೆಸರು ಇವನ ಅರ್ಹತೆ ಆಗಬಾರದು. ರಾಹುಲ್ ತನ್ನ ಕುಟುಂಬ ನಡೆಸಿದ ಅಧಿಕಾರ ನೋಡಿದ್ದಾನೆ ಹೊರತು ಅಧಿಕಾರ ನಡೆಸಿ ಗೊತ್ತಿಲ್ಲ . ರಾಹುಲ್ ಈ ತನಕ ಉಸ್ತುವಾರಿ ವಹಿಸಿಕೊಂಡ ಬಿಹಾರ್ , ಗುಜರಾತ್ , ತಮಿಳುನಾಡು , ಮತ್ತು ಆತನ ಸ್ವಕ್ಷೇತ್ರ ಅಮೇಥಿಯನ್ನು ಹೊಂದಿರುವ ಉತ್ತರ ಪ್ರದೇಶದ  ಚುನಾವಣೆ  ಎಲ್ಲಾ ಕಡೆ ಕಾಂಗ್ರೆಸ್ ಮಕಾಡೆ ಮಲಗಿತ್ತು.ಉತ್ತರ ಪ್ರದೇಶದ ಚುನಾವಣೆಯಂತು ರಾಹುಲ್ v /s ಅಕಿಲೇಶ್ ಅಂತಾನೇ ಬಿಂಬಿತ ವಾಗಿತ್ತು.ಅಲ್ಲೂ ಕಾಂಗ್ರೆಸ್ಗೆ ಸೋಲು.ರಾಹುಲ್ ನ ಸ್ವಕ್ಷೇತ್ರ ಅಮೇಥಿಯಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತು ತೀವ್ರ ಮುಖ ಭಂಗ ಅನುಭವಿಸಿತ್ತು.ಜನ ಸ್ಪಷ್ಟವಾಗಿ ರಾಹುಲ್ ರ ನಾಯಕತ್ವವನ್ನು ನಿರಾಕರಿಸಿದ್ದು ಎದ್ದು ಕಾಣುತ್ತಿತ್ತು.
ಮತ್ತಷ್ಟು ಓದು »

16
ಮಾರ್ಚ್

ವೈವಿಧ್ಯತೆಯ ಸಮಾಧಿ ಮೇಲೆ UPSC ಕಟ್ಟಲು ಹೊರಟ ಎಲೈಟ್ ವ್ಯವಸ್ಥೆ

– ವಸಂತ್ ಶೆಟ್ಟಿ

UPSCಯು.ಪಿ.ಎಸ್.ಸಿ ತನ್ನ ಪರೀಕ್ಷಾ ನಿಯಮಾವಳಿಗಳನ್ನು ಬದಲಾಯಿಸಿದ್ದು, ಅದಕ್ಕೆ ಮಾನ್ಯ ಪ್ರಧಾನಮಂತ್ರಿಗಳು ಒಪ್ಪಿಗೆ ಸೂಚಿಸಿರುವ ಸುದ್ದಿಯಿದೆ. ಈ ಬದಲಾವಣೆಗಳನ್ನು ಹಲವಾರು ರಾಜ್ಯಗಳು ವಿರೋಧಿಸಿವೆ. ಈ ಬದಲಾವಣೆಗಳೇನು ಮತ್ತು ರಾಜ್ಯಗಳು ಯಾಕೆ ವಿರೋಧಿಸಿವೆ ಎಂದು ಯು.ಪಿ.ಎಸ್.ಸಿ ಮಿಂಬಲೆ ತಾಣ (ಪುಟ 12)  ನೋಡಿದಾಗ ಕಂಡಿದ್ದು ನಿಜಕ್ಕೂ ಅಚ್ಚರಿ ತರುವಂತದ್ದು. ಭಾರತದ ವೈವಿಧ್ಯತೆಯನ್ನು ಶವಪೆಟ್ಟಿಗೆಯೊಳಗೆ ಕೂರಿಸಿ ಪೆಟ್ಟಿಗೆಗೆ ಹೊಡೆಯುತ್ತಿರುವ ಮೊಳೆಗೆ ಇನ್ನೊಂದು ಮೊಳೆ ಸೇರ್ಪಡೆಯಾಗಿದೆ. ಯು.ಪಿ.ಎಸ್.ಸಿಯ  ಬದಲಾದ ನಿಯಮಗಳು ಮತ್ತು ಕನ್ನಡಿಗನೊಬ್ಬನ ಮೇಲೆ ಅದರ ಪರಿಣಾಮಗಳು ಇಂತಿವೆ:

  1. ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಇನ್ನು ಮುಂದೆ ಕನ್ನಡ ಭಾಷೆಯಲ್ಲಿ ಸಾಹಿತ್ಯದ ಪದವಿ ಪಡೆದವರು ಮಾತ್ರ ಮುಖ್ಯ ಪರೀಕ್ಷೆಯಲ್ಲಿ  ಕನ್ನಡ ಭಾಷೆಯಲ್ಲಿ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿ ಆಯ್ಕೆ ಮಾಡಿಕೊಂಡು ಮುಖ್ಯ ಪರೀಕ್ಷೆ ಬರೆಯಬಹುದು. ಹಿಂದಿನಂತೆ ಯಾವುದೇ ಮಾಧ್ಯಮದಲ್ಲಿ, ಯಾವ ವಿಷಯವನ್ನೇ ಓದಿದ್ದರೂ ಐಚ್ಛಿಕ ವಿಷಯವಾಗಿ ಅಭ್ಯರ್ಥಿಯ ತಾಯ್ನುಡಿಯಲ್ಲಿ ಸಾಹಿತ್ಯವನ್ನು ಆಯ್ಕೆ ಮಾಡಿಕೊಳ್ಳಲಾಗದು. ಆದರೆ ಈ ನಿಯಮ ಐಚ್ಛಿಕ ವಿಷಯಗಳ ಪಟ್ಟಿಯಲ್ಲಿರುವ ಗಣಿತ, ಅರ್ಥಶಾಸ್ತ್ರ, ಇಂಜಿನಿಯರಿಂಗ್ ಮುಂತಾದ ವಿಷಯಗಳಿಗೆ ಅನ್ವಯಿಸದೇ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರತಿಭೆಗಳು ಆಯ್ಕೆ ಮಾಡಿಕೊಳ್ಳುತ್ತಿದ್ದ ಸಾಹಿತ್ಯದ ವಿಷಯಕ್ಕೆ ಮಾತ್ರ ರೂಪಿಸಲಾಗಿದೆ. ಕನ್ನಡದಂತಹ ನುಡಿಯಲ್ಲಿ ಲಭ್ಯವಿದ್ದಿದ್ದೇ ಸಾಹಿತ್ಯದಂತಹ ವಿಷಯಗಳು. ಈಗ ಕೇವಲ ಸಾಹಿತ್ಯ ಓದಿದವರಿಗೆ ಮಾತ್ರ ಅದನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಳ್ಳಬಹುದು ಅನ್ನುವ ಮೂಲಕ ಇಂಜಿನಿಯರಿಂಗ್, ಕಾನೂನು, ವೈದ್ಯಕೀಯ ಪದವಿ ಪಡೆದು ಕನ್ನಡ ಸಾಹಿತ್ಯ ಆಯ್ದುಕೊಂಡು ಪರೀಕ್ಷೆ ಬರೆಯುತ್ತಿದ್ದ ಕನ್ನಡಿಗರಿಗೆ ಮೋಸವಾಗಲಿದೆ. ಇದೇ ಪಾಡು ಇತರೆ ಭಾಷಿಕರದ್ದು ಆಗಲಿದೆ.
  2. ಯಾವ ಮಾಧ್ಯಮದಲ್ಲಿ  ಅಭ್ಯರ್ಥಿಯ ಡಿಗ್ರಿ ಆಗಿದೆಯೋ ಅದೇ ಮಾಧ್ಯಮದಲ್ಲಿ ಆತ ಪರೀಕ್ಷೆ ಬರೆಯಬೇಕು. ಅಂದರೆ ಇಂಗ್ಲಿಶ್ ಮಾಧ್ಯಮದಲ್ಲಿ ಡಿಗ್ರಿ ಓದಿದ ಕನ್ನಡಿಗನೊಬ್ಬ ಕನ್ನಡ ಭಾಷೆಯಲ್ಲಿ ಯು.ಪಿ.ಎಸ್.ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳುವಂತಿಲ್ಲ. ಕರ್ನಾಟಕದಿಂದ ಇತ್ತಿಚೆಗೆ ಯು.ಪಿ.ಎಸ್.ಸಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಬಹಳಷ್ಟು ಜನರು ಇಂಜಿನಿಯರಿಂಗ್, ವೈದ್ಯಕೀಯ ಮತ್ತು ಕಾನೂನು ವೃತ್ತಿಯಿಂದ ಬಂದವರು ಮತ್ತು ತಮ್ಮ ಡಿಗ್ರಿಯನ್ನು ಇಂಗ್ಲಿಷ್ ಮಾಧ್ಯಮದಲ್ಲಿ ಪಡೆದವರು, ಆದರೆ ಅವರಾರು ಈ ನಿಯಮದ ದೆಸೆಯಿಂದ ಬಯಸಿದರೂ ಕನ್ನಡದಲ್ಲಿ ಯು.ಪಿ.ಎಸ್.ಸಿ ಪರೀಕ್ಷೆ ಬರೆಯಲಾರರು.
  3. ಮತ್ತಷ್ಟು ಓದು »