ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

14
ಮಾರ್ಚ್

ಟಿಪ್ಪು ಹೊಗಳಿದ ಮೇಲೆ ಕೋವಿದನೂ ಅಲ್ಲ ಕೋದಂಡನೂ ಅಲ್ಲ

– ಸಂತೋಶ್ ತಮ್ಮಯ್ಯ

Pratap Simha's bookಕೊಡವರಿಗೆ ಕಾವೇರಮ್ಮನ ಶಾಪವಿದೆಯಂತೆ, ಬ್ರಹ್ಮಹತ್ಯಾದೋಷವೂ, ನಾಗದೋಷವೂ ಕಾಡುತ್ತಿದೆಯಂತೆ. ಹಾಗಾಗಿ ಕೊಡವರಿಗೆ ಶಾಂತಿ ನೆಮ್ಮದಿ ಇಲ್ಲವಂತೆ, ಅಷ್ಟಮಂಗಲ ಪ್ರಶ್ನೆಯಲ್ಲಿ ಅದು ಕಂಡುಬಂದಿದೆಯಂತೆ. ಇದು ಸದ್ಯ ಕೊಡಗಿನಲ್ಲಿ ಚರ್ಚೆಯಾಗುತ್ತಿರುವ ವಿಷಯ. ಈ ದೋಷ, ಶಾಪ, ಪ್ರಶ್ನೆ, ಅದಕ್ಕಿರುವ ಪರಿಹಾರಗಳು ಏನೇನಿವೆಯೋ ಗೊತ್ತಿಲ್ಲ. ಆದರೆ ಒಂದು ಶಾಪವಂತೂ ಅಷ್ಟಮಂಗಲ ಪ್ರಶ್ನೆಯ ಹೊರತಾಗಿಯೂ ಪ್ರಜ್ನಾವಂತ ಕೊಡವರಿಗೆ ತಿಳಿದೇ ಇದೆ.

ಅದೆಂದರೆ ಕರ್ನಾಟಕದ ಎಲ್ಲರಿಗೂ ಕೊಡಗಿಗೆ ಹೋದಾಗ ಅಲ್ಲಿನ ಯೋಧರು, ಧೀರರು, ಶೂರರು ಎಲ್ಲರೂ ನೆನಪಾಗಿಬಿಡುತ್ತಾರೆ. ಮಡಿಕೇರಿಗೆ ಬಂದ ರಾಜಕಾರಣಿಗಳು, ಸಾಹಿತಿಗಳಿಗೆ ಯೋಧರನ್ನು ಹೊರತಾಗಿಸಿ ಮಾತು ಹೊರಬರುವುದೇ ಇಲ್ಲ. ಅವರೆಲ್ಲರಿಗೂ ಭಾಷಣಕ್ಕೆ, ಸಾಹಿತ್ಯಕ್ಕೆ, ಸಿನಿಮಾಕ್ಕೆ ಕೊಡಗಿನ ಯೋಧರು, ಬ್ರಹ್ಮಗಿರಿ, ಕಾವೇರಮ್ಮೆ, ಇಗ್ಗುತ್ತಪ್ಪರು ಬೇಕು. ಆದರೆ ಅವರೆಲ್ಲರೂ ಟಿಪ್ಪು ವಿಷಯಕ್ಕೆ ಬಂದರೆ ಟಿಪ್ಪು ಆ ಯೋಧರನ್ನೆಲ್ಲಾ ಮೀರಿ ನಿಂತುಬಿಡುತ್ತಾನೆ! ಅಂದರೇ ಧರ್ಮಕ್ಕಾಗಿ ಹೋರಾಡಿದ ಕೊಡಗಿನ ಯೋಧರು ಸಾಹಿತಿಗಳ ಪ್ರಕಾರ ಸೆಕ್ಯುಲರ್ ಆಗಿಬಿಡುತ್ತಾರೆ. ಈ ಸೆಕ್ಯುಲರ್ ವ್ಯಾದಿ ಸಾಹಿತಿಗಳ ಪ್ರಾರಬ್ಧವಾದರೂ ಕೊಡವರ ಪಾಲಿಗೆ ಅದು ಶಾಪ. ಅವರ ಭಾವನೆಗಳ ಮೇಲಿನ ಚೆಲ್ಲಾಟ. ಏಕೆಂದರೆ ಈ ಸೆಕ್ಯುಲರ್ ವ್ಯಾದಿ ಟಿಪ್ಪುವನ್ನು ಹೊಗಳಲು ಕೊಡವರ ಬಲಿದಾನವನ್ನೂ ತಿರುಚಲೂ ಹಿಂಜರಿಯುವುದಿಲ್ಲ. ಹೀಗೆ ಟಿಪ್ಪುವನ್ನು ಹೊಗಳುತ್ತಾ ಕೊಡವರ ಯೋಧತನವನ್ನು ವರ್ಣಿಸಲು ಹೇಗೆ ತಾನೇ ಸಾಧ್ಯ? ಸಾಧ್ಯವಿಲ್ಲ ನಿಜ. ಆದರೆ ಅದು ನಿರಂತರ ನಡೆಯುತ್ತಲೇ ಇದೆ. ಕೊಡಗಲ್ಲೇ ಕೆಲವರು ಭಂಡರಿದ್ದಾರೆ. ಅಂಥವರಿಗೆ ಅಷ್ಟು ಮಾತುಗಳು ಸಾಕಾಗುತ್ತವೆ. ಸಾಹಿತಿ-ರಾಜಕಾರಣಿಗಳಿಗೆ ಚಪ್ಪಾಳೆಗಳು ಭರಪೂರ ಗಿಟ್ಟುತ್ತವೆ. ಹಾಗಾಗಿ ಕಾರ್ನಾಡರೂ “ಟಿಪ್ಪು ಸುಲ್ತಾನ ಕಂಡ ಕನಸು” ಎಂದು ಬರೆಯುತ್ತಾರೆ. ಕೆಲವರು “ಟಿಪ್ಪು ಜನ್ಮದಿನವನ್ನು ಆಚರಿಸಲು ಶಾಲೆಗಳಿಗೆ ರಜಾ ಘೋಷಿಸಲಾಗುವುದು” ಎನ್ನುತ್ತಾರೆ. ಇನ್ನೊಬ್ಬರು ” ಟಿಪ್ಪು ಓರ್ವ ಸಂತ” ಎಂದುಬಿಡುತ್ತಾರೆ. ವಿಚಿತ್ರವೆಂದರೆ ಇವರೆಲ್ಲರೂ ಹೀಗೆ ಹೇಳುವ ಮೊದಲು ಮಡಿಕೇರಿಯ ಯುದ್ಧ ಸ್ಮಾರಕಗಳಿಗೆ ಹಾರ ಹಾಕಿ ಬಂದಿರುತ್ತಾರೆ. ಇವನ್ನೆಲ್ಲಾ ಕೇಳುವುದು, ನೋಡುವುದೇ ಕೊಡಗಿನವರ ಪಾಲಿನ ಶಾಪ. ಏಕೆಂದರೆ ಕೊಡಗಲ್ಲಿ ಬಂದು ಟಿಪ್ಪುವನ್ನು ಹೊಗಳುವುದೆಂದರೆ ಕೊಡಗಿನ ಪೂರ್ವಜರನ್ನು ನಿಂದಿಸಿದಂತೆಯೇ.

ಮತ್ತಷ್ಟು ಓದು »

8
ಮಾರ್ಚ್

ಭಾರತದ ಮಾಣಿಕ್ಯ – ಮಾಣಿಕ್ ಸರ್ಕಾರ್

-ಡಾ. ಅಶೋಕ್ ಕೆ ಆರ್

Manik Sarkarಭಾರತ ಬಡದೇಶವೇ? ನಮ್ಮ ರಾಜಕಾರಣಿಗಳು ಅಧಿಕೃತವಾಗಿಯೇ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ನೋಡಿದರೆ ಭಾರತದಲ್ಲಿ ಬಡವರ ಅಸ್ತಿತ್ವವೇ ಇಲ್ಲವೇನೋ ಎಂಬ ಭಾವನೆ ಮೂಡಿದರೆ ತಪ್ಪಲ್ಲ. ಎಲ್ಲೋ ಕೆಲವರನ್ನು ಹೊರತುಪಡಿಸಿ ನಮ್ಮ ಸಂಸದರು ಸಚಿವರು ಶಾಸಕರು ಮುಖ್ಯಮಂತ್ರಿಗಳೆಲ್ಲ ಕೋಟಿಗೂ ಅಧಿಕ ಬೆಲೆಬಾಳುವವರೇ! ಶಾಸನಸಭೆಯಲ್ಲಿ ಯಾರದೂ ವಿರೋಧವಿಲ್ಲದೆ ಅಂಗೀಕೃತವಾಗುವ ಮಸೂದೆ “ಶಾಸಕ – ಸಚಿವರ” ವೇತನ ಹೆಚ್ಚಳ ಮಾತ್ರ! ರಾಜಕಾರಣಿಗಳ ಬಗ್ಗೆ ರಾಜಕೀಯದ ಬಗ್ಗೆ ಅಪಾಯಕಾರಿ ಮಟ್ಟದಲ್ಲಿ ಬೆಳೆಯುತ್ತಿರುವ ಸಿನಿಕತೆಯ ನಡುವೆ ರಾಜಕಾರಣವೆಂದರೆ ಕೇವಲ ಹಣ ಮಾಡುವ, ಅನೈತಿಕ ರೀತಿಯಲ್ಲಿ ಜನರ ಮಧ್ಯೆಯೇ ವಿರೋಧ ಬೆಳೆಸುವ ದಂಧೆಯಲ್ಲ ಎಂಬುದನ್ನು ನಿರೂಪಿಸುವ ರಾಜಕಾರಣಿಗಳೂ ಇದ್ದಾರೆ ಎಂದರೆ ನಂಬುವುದು ಕೊಂಚ ಕಷ್ಟದ ಕೆಲಸವೇ ಸರಿ! ಅದರಲ್ಲೂ ಕರ್ನಾಟಕದ ರಾಜಕಾರಣ ಹಿಂದೆಂದೂ ಕಾಣದ ರೀತಿಯಲ್ಲಿ ಅಧಃಪತನಕ್ಕೊಳಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರನ್ನು ಅಪಹಾಸ್ಯದ ಸರಕನ್ನಾಗಿಸಿರುವುದು ಸುಳ್ಳಲ್ಲ.  ಈ ವಿಷಮ ಪರಿಸ್ಥಿತಿಯಲ್ಲಿ ರಾಜಕಾರಣವೆಂದರೆ ಪ್ರಚಾರಕ್ಕಾಗಿ ಹಪಹಪಿಸುವುದಲ್ಲ, ವೋಟಿಗಾಗಿ ನೈತಿಕತೆ ತೊರೆಯುವುದಲ್ಲ, ಇವೆಲ್ಲಕ್ಕಿಂತ ಹೆಚ್ಚಾಗಿ ತನ್ನತನ ಕಳೆದುಕೊಳ್ಳುವುದಲ್ಲ ಎಂಬುದನ್ನು ನಿರೂಪಿಸುತ್ತ ತನ್ನ ಸಾಮರ್ಥ್ಯದ ಮಟ್ಟಿಗೆ ಜನರಿಗೆ ಅನುಕೂಲವನ್ನು ಮಾಡಿಕೊಡುತ್ತಿರುವ ಮಾಣಿಕ್ ಸರ್ಕಾರ್ ಬಗ್ಗೆ ತಿಳಿದುಕೊಳ್ಳುವುದು ರಾಜಕಾರಣಿಗಳಿಗೆ ಮತ್ತವರಿಗೆ ಮತ ನೀಡುವ ಜನರಿಗೂ ಅವಶ್ಯಕ.

“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ತ್ರಿಪುರದಲ್ಲಿ 1998ರಿಂದಲೂ ಮುಖ್ಯಮಂತ್ರಿಯಾಗಿರುವವರು ಮಾಣಿಕ್ ಸರ್ಕಾರ್! ಜನವರಿ 22 1949ರಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಮಾಣಿಕ್ ಸರ್ಕಾರ್ ವಿಧ್ಯಾರ್ಥಿ ದೆಸೆಯಲ್ಲಿದ್ದಾಗ ನಕ್ಸಲ್ ವಿಚಾರಧಾರೆಗಳಿಗೆ ಆಕರ್ಷಿತರಾಗಿ ಕಮ್ಯುನಿಷ್ಟ್ ಪಕ್ಷ ಸೇರಿದರು. ಎಸ್ ಎಫ್ ಐನ ಪ್ರತಿನಿಧಿಯಾಗಿ, ಎಸ್ ಎಫ್ ಐನ ರಾಜ್ಯ ಕಾರ್ಯದರ್ಶಿಯಾಗಿ, ಅದೇ ಎಸ್ ಎಫ್ ಐನ ಅಖಿಲ ಭಾರತ ಸಮಿತಿಗೆ ಉಪಾಧ್ಯಕ್ಷನಾಗಿ ತಮ್ಮ ಹೋರಾಟದ ಹಾದಿಯನ್ನು ಮುಂದುವರೆಸಿದ ಮಾಣಿಕ್ 1972ರಲ್ಲಿ ಸಿ ಪಿ ಐ (ಎಂ)ನ ರಾಜ್ಯ ಕಮಿಟಿಯ ಸದಸ್ಯನಾಗಿ ಆಯ್ಕೆಯಾಗುತ್ತಾರೆ. 1978ರಲ್ಲಿ ಸಿ ಪಿ ಐ (ಎಂ)ನ ರಾಜ್ಯ ಕಾರ್ಯದರ್ಶಿಯಾಗುತ್ತಾರೆ. ಅದೇ ವರ್ಷ ಎಡರಂಗ ಮೊದಲ ಬಾರಿಗೆ ಅಧಿಕಾರಕ್ಕೆ ಬರುತ್ತದೆ. 1985ರಲ್ಲಿ ಮಾಣಿಕ್ ಸರ್ಕಾರ್ ಪಕ್ಷದ ಸೆಂಟ್ರಲ್ ಕಮಿಟಿಯ ಸದಸ್ಯರಾಗುತ್ತಾರೆ.

ಮತ್ತಷ್ಟು ಓದು »

6
ಮಾರ್ಚ್

‘ಮಾನವ ಹಕ್ಕು ಉಲ್ಲಂಘನೆ’ ಅನ್ನುವುದು ಮೋದಿಗೆ ಮಾತ್ರ ಅನ್ವಯವೇ?

– ರಾಕೇಶ್ ಶೆಟ್ಟಿ

NaModiಕಳ್ಳಬೆಕ್ಕು ತೀರ್ಥಯಾತ್ರೆಗೆ ಹೊರಟು ನಿಂತ ಕತೆ ಗೊತ್ತಿದೆಯಲ್ವಾ! ಅಮೇರಿಕಾದ ವಾರ್ಟನ್-ಇಂಡಿಯಾ ಎಕಾನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ಭಾಷಣ ಮಾಡಲು ಆಹಾನ ಕೊಟ್ಟು ಕಡೆಗೆ ಎಡಪಂಥೀಯರ ಒತ್ತಾಯಕ್ಕೆ ಮಣಿದು ಅದನ್ನು ರದ್ದುಗೊಳಿಸಿ ಭಾರತದ ಸಂವಿಧಾನದಡಿ ಜನರಿಂದ ಚುನಾಯಿಸಿ ಬಂದ ಮುಖ್ಯಮಂತ್ರಿಯೊಬ್ಬರಿಗೆ ಅವಮಾನ ಮಾಡುವುದಿದೆಯಲ್ಲ ಅದು ಮೋದಿಗಾದ ಅವಮಾನವಲ್ಲ.ಬದಲಿಗೆ ಆ ರಾಜ್ಯಕ್ಕಾದ ಅವಮಾನ ಕೂಡ ಹೌದು.ಗುಜರಾತ್ ಗಲಭೆಯ ನಂತರ ಮೋದಿಯೆಡೆಗೆ ಬೆನ್ನು ತಿರುಗಿಸಿ ನಿಂತಿದ್ದ ಐರೋಪ್ಯ ಒಕ್ಕೂಟ ಇವತ್ತು ಸ್ನೇಹ ಹಸ್ತಚಾಚಿ ನಿಂತಿದೆ.ಆದರೆ ತೀರ್ಥಯಾತ್ರೆಗೆ ಹೊರಟು ನಿಂತ ಕಳ್ಳಬೆಕ್ಕು ಅಮೇರಿಕಾ ಮಾತ್ರ ಇನ್ನು ಹುಸಿ ಧ್ಯಾನದಲ್ಲಿದ್ದಂತಿದೆ.ಮೋದಿಯ ವಿಷಯದಲ್ಲಿ ಅದೂ ಈಗಲೂ ಹಟಮಾರಿ ಧೋರಣೆಯನ್ನು ಮುಂದುವರೆಸಿಕೊಂಡು ಬಂದಿದೆ.

“ನೀವು ಬಯಸುವ ಬದಲಾವಣೆ ನೀವೆ ಆಗಿ ತೋರಿಸಿ” ಅಂದಿದ್ದರು ಗಾಂಧೀಜಿ.ಆದರೆ ಅಮೇರಿಕಾದ ವರಸೆ ಸಲ್ಪ ಉಲ್ಟಾ ಈ ವಿಷಯದಲ್ಲಿ “ತಾನು ಬಯಸುವ ಬದಲಾವಣೆ ಬೇರೆಡೆಯಲ್ಲಿ,ಬೇರಯವರಿಂದ ಆಗಬೇಕು.ತಾನು ಮಾತ್ರ ತನ್ನ ಚಾಳಿ ಬಿಡಲಾರೆ” ಅನ್ನುವಂತೆ.ಮೋದಿಯ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆಯ ಭಾಷಣ ಬಿಗಿಯುವ ಈ ಅಮೇರಿಕಾ ಇತಿಹಾಸದುದ್ದಕ್ಕೂ ಮಾಡಿಕೊಂಡು ಬಂದಿರುವುದೇನು?

ಮತ್ತಷ್ಟು ಓದು »

1
ಮಾರ್ಚ್

ಪಾಕಿಸ್ತಾನದಲ್ಲಿ ಹಿಂದೂ ವಿವಾಹಕ್ಕೆ ಮಾನ್ಯತೆಯಿಲ್ಲ

-ಕ.ವೆಂ.ನಾಗರಾಜ್

Pak Hindu Maduveನಿಮಗೆ ತಿಳಿದಿದೆಯೇ? ಪಾಕಿಸ್ತಾನದಲ್ಲಿ ಹಿಂದೂ ಮದುವೆಗಳಿಗೆ ಮಾನ್ಯತೆಯಿಲ್ಲ. ಪಾಕಿಸ್ತಾನ ಹುಟ್ಟಿದ 1947ರಿಂದಲೂ ಹಿಂದೂ ದಂಪತಿಗಳನ್ನು ಗಂಡ-ಹೆಂಡಿರೆಂದು ಕಾನೂನು ಪ್ರಕಾರ ಪರಿಗಣಿಸಲಾಗಿಲ್ಲ. ಇದರಿಂದಾಗಿ ಅನೇಕ ಕೌಟುಂಬಿಕ, ಸಾಮಾಜಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಅವರುಗಳು, ವಿಶೇಷವಾಗಿ ಸ್ತ್ರೀಯರು, ಸಿಲುಕಿದ್ದಾರೆ. ರಾಷ್ಟ್ರೀಯತೆಯ ಸಮಸ್ಯೆ, ಪಾಸ್ ಪೋರ್ಟ್ ಪಡೆಯಲು ಸಮಸ್ಯೆ, ಆಸ್ತಿ-ಪಾಸ್ತಿಗಳ ಹಕ್ಕು ವರ್ಗಾವಣೆ ಸಮಸ್ಯೆ, ದೇಶದೊಳಗೆಯೇ ಪ್ರಯಾಣ ಮಾಡಲೂ ಸಮಸ್ಯೆ, ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ. ಘೋರ ಸಮಸ್ಯೆ ಎಂದರೆ ಹಿಂದೂ ಹೆಣ್ಣು ಮಕ್ಕಳನ್ನು ಬಲವಂತವಾಗಿ ಅಪಹರಿಸಿ, ಮತಾಂತರಿಸಿ, ಬಲವಂತ ವಿವಾಹಗಳನ್ನೂ ಮಾಡಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಿಂದೂ ಸ್ತ್ರೀಯರ ರಕ್ಷಣೆಗೆ ಅಲ್ಲಿ ಸೂಕ್ತ ಕಾನೂನುಗಳೇ ಇರದಿರುವುದು.

ಭಾರತದಲ್ಲಿ ಎಲ್ಲರಿಗೂ ಜಾತಿ-ಮತ ಭೇದವಿಲ್ಲದೆ ಸಮಾನ ಸಿವಿಲ್ ಮತ್ತು ಕ್ರಿಮಿನಲ್ ಕಾಯದೆಗಳಿರಬೇಕೆಂಬ ಒತ್ತಾಯಕ್ಕೆ ವಿರೋಧವಿರುವುದು ಮುಸಲ್ಮಾನರಿಂದಲೇ ಮತ್ತು ಅವರನ್ನು ಬೆಂಬಲಿಸುವ ಬುದ್ಧೂಜೀವಿಗಳು ಮತ್ತು ಮತಗಳ ಮೇಲೆ ಕಣ್ಣಿಟ್ಟಿರುವ ರಾಜಕೀಯ ಪಕ್ಷಗಳಿಂದಲೇ. ಭಾರತದಲ್ಲಿ ಮುಸ್ಲಿಮರ ರಕ್ಷಣೆಗೆ ವಿಶೇಷ ಮುತುವರ್ಜಿ ವಹಿಸಲಾಗಿದೆ. ಅವರಿಗೇ ಪ್ರತ್ಯೇಕ ಕಾನೂನು-ಕಾಯದೆಗಳನ್ನು ಅವರ ಶರೀಯತ್ ಪ್ರಕಾರವೇ ರಚಿಸಲಾಗಿದೆ. ನೂರಾರು ಜನರ ಬಲಿ ತೆಗೆದುಕೊಂಡ/ತೆಗೆದುಕೊಳ್ಳುವ ಉಗ್ರರಿಗೂ ಇಲ್ಲಿ ರಕ್ಷಣೆಯಿದೆ. ಆದರೆ ಅಮಾಯಕ ಅತ್ಯಂತ ಅಲ್ಪಸಂಖ್ಯಾತರೆನಿಸಿರುವ ಹಿಂದೂಗಳಿಗೆ ಕನಿಷ್ಠ ಮೂಲಭೂತ ಸ್ವಾತಂತ್ರ್ಯವನ್ನೂ ಪಾಕಿಸ್ತಾನದಲ್ಲಿ ನಿರಾಕರಿಸಲಾಗಿದೆ. ಹಿಂದೂ ವಿವಾಹಗಳನ್ನು ಮಾನ್ಯ ಮಾಡಲು ಸೂಕ್ತ ಕಾನೂನು ರಚಿಸಬೇಕೆಂಬ ಒಟ್ಟು ಜನಸಂಖ್ಯೆಯ ಕೇವಲ ಶೇ. 3ರಷ್ಟು ಮಾತ್ರ ಉಳಿದಿರುವ ಹಿಂದೂಗಳ ಕೂಗು ಅಲ್ಲಿನ ಸರ್ಕಾರದ ಕಿವುಡು ಕಿವಿಗಳಿಗೆ ಇದುವರೆವಿಗೂ ಮುಟ್ಟಿಲ್ಲ. ಮಾನವ ಹಕ್ಕುಗಳ ಆಯೋಗದವರು, ಬುದ್ಧಿಜೀವಿಗಳೆನಿಸಿಕೊಂಡವರು, ಮುಂತಾದವರಿಗೆ ಇದು ಯೋಚಿಸಬೇಕಾದ ಸಂಗತಿಯೇ ಆಗಿಲ್ಲ.
ಮತ್ತಷ್ಟು ಓದು »

28
ಫೆಬ್ರ

ಅವರಿಗೆ ಸಾಚಾರ್ ವರದಿ: ನಮಗೇಕಿಲ್ಲ ಪಚೌರಿ ವರದಿ?

-ಸಂತೋಷ್ ತಮ್ಮಯ್ಯ

Rama Sethuveಭಾರತದಲ್ಲಿ ಹಿಂದುಗಳು ಎಂದರೆ ಎರಡನೇ ದರ್ಜೆಯ ಜನರು ಮತ್ತು ಹಿಂದುಗಳನ್ನು ಎಲ್ಲಿಡಬೇಕೋ ಅಲ್ಲೇ ಇಡಲಾಗುತ್ತಿದೆ ಎಂಬುದಕ್ಕೆ ರಾಮಸೇತು ಪ್ರಕರಣವೇ ಸಾಕ್ಷಿ. ಕೇಂದ್ರ ಸರಕಾರ ರಾಜೇಂದ್ರ ಪಚೌರಿ ವರದಿಯನ್ನು ತಿರಸ್ಕರಿಸುವುದರ ಮೂಲಕ ಅದನ್ನು ಸಾಭೀತುಪಡಿಸಿದೆ. ಸುಪ್ರಿಂಕೋರ್ಟಿಗೆ ತಾನು ಸೇತುಸಮುದ್ರಂ ಯೋಜನೆಯನ್ನು ಮಾಡಲು ಬಯಸಿರುವುದಾಗಿಯೂ, ಇಷ್ಟಿಷ್ಟು ಖರ್ಚುವೆಚ್ಚಗಳನ್ನು ಅದಕ್ಕಾಗಿ ಇಟ್ಟಿರುವುದಾಗಿಯೂ ಇದು ರಾಷ್ಟ್ರದ ಮಹತ್ತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂಬುದರ ಬಗ್ಗೆ ಅಫಿಡವಿಟ್ ಅನ್ನು ಸಲ್ಲಿಸಿದೆ.
ಸಲ್ಲಿಸದೇ ಇನ್ನೇನು ತಾನೇ ಮಾಡಿಯಾರು? ರಾಮಸೇತು ಹಿಂದೂ ಭಾವನೆಗಳಿಗೆ ಸಂಬಂಧಪಟ್ಟ ಸಂಗತಿ, ರಾಮಸೇತು ರಾಮಾಯಣಕ್ಕೆ ಸಂಬಂಧಪಟ್ಟ ಸಂಗತಿ, ರಾಮಸೇತು ಹಿಂದೂ ತತ್ತ್ವಶಾಸ್ತ್ರ, ಅಧ್ಯಾತ್ಮದ ಪರಾಕಾಷ್ಠೆಗೆ ಸಂಬಂಧಪಟ್ಟ ಸಂಗತಿ, ರಾಮಸೇತು ವಿಶ್ವದ ಓರ್ವ ಮಹಾನ್ ಆದರ್ಶಪುರುಷನೊಬ್ಬನ , ಧರ್ಮಸಂಸ್ಥಾಪಕನೊಬ್ಬನಿಗೆ ಸಂಬಂಧಪಟ್ಟ ಸಂಗತಿ.  ಆ ಆದರ್ಶಪುರುಷ  ಹಿಂದೂ ದೇವರು ಎಂಬ ಉದಾಸೀನತನ ಸರಕಾರಕ್ಕೆ ಇರುವಾಗ ಈ ಸರಕಾರ ಅಫಿಡವಿಟ್ ಅನ್ನೂ ಸಲ್ಲಿಸುತ್ತದೆ ಮತ್ತು ಅಯೋಧ್ಯೆಯನ್ನೂ ತುಂಡುಮಾಡಿ ಹಂಚಿಬಿಡುತ್ತದೆ. ಅಂದು ಬಾಬರ್ ಮಾಡಿದಂತೆ ರಾಮಕುರುಹನ್ನೇ ಒಡೆಯುತ್ತದೆ. ಹಾಗಾಗಿ ರಾಜೇಂದ್ರ ಪಚೌರಿ ಎಂಬ ವಿಶ್ವವಿಖ್ಯಾತ ಪರಿಸರ ಶಾಸ್ತ್ರಜ್ನ, ಚಿಂತಕ ಹೇಳುವ ಮಾತನ್ನು ಸರಕಾರ ಕೇಳುವ ಸ್ಥತಿಯಲ್ಲಿರುವುದಿಲ್ಲ. ಅದನ್ನು ತಿರಸ್ಕರಿಸದೇ ಇರುವುದಿಲ್ಲ.
ಕೆಲವರ್ಷಗಳ ಹಿಂದೆ ರಾಜೇಂದ್ರ ಪಚೌರಿ ವರದಿ ಸರಕಾರದ ಸೇತುಸಮುದ್ರಂ  ಯೋಜನೆಯ ಅವೈಜ್ನಾನಿಕತೆ ಮತ್ತು ತಿಕ್ಕಲುತನಗಳನ್ನು ಎಳೆಎಳೆಯಾಗಿ ಬಿಡಿಸಿ ವರದಿಯನ್ನು ಸಿದ್ಧ ಮಾಡಿತ್ತು. ಭೂಗೋಳದ ದಕ್ಷಿಣದ ಸಮುದ್ರಗಳ ಜಲಚರಗಳ ತವರು ಮನೆ ಈ ಪ್ರದೇಶ ಎಂದು ಬಣ್ಣಿಸಿತ್ತು. ಈ ಪ್ರದೇಶದಲ್ಲಿ ನಡೆಯುವ ಯಾವುದೇ ಮಾನವ ಹಸ್ತಕ್ಷೇಪಗಳು ಈ ಜಲಚರಗಳ ಸಂತತಿಯನ್ನು ಕೊಲ್ಲುತ್ತದೆ ಎಂದು ಹೇಳಿತ್ತು. ಮತ್ತು ಭಾರತ ಮತ್ತು ಶ್ರೀಲಂಕಾ ನಡುವಿನ ಕಡಲ್ಗಾಲುವೆಗೆ  ಪರ್ಯಾಯ ಮಾರ್ಗವನ್ನು ಸೂಚಿಸಿತ್ತು. ಆದರೆ ಸರಕಾರ, ಯಾವ ರಾಜೇಂದ್ರ ಪಚೌರಿಯವರ ಮಾತಿಗಾಗಿ ವಿಶ್ವಸಂಸ್ಥೆ ಕಾಯುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಒಂದು ಸಲಹೆಗಾಗಿ ಯುನೆಸ್ಕೋ ಬೇಡಿಕೊಳ್ಳುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಡೇಟ್‌ಗಾಗಿ ವಿದೇಶದ ವಿಶ್ವವಿದ್ಯಾಲಯಗಳು ಕಾಯುತ್ತವೆಯೋ, ಯಾವ ನೊಬೆಲ್ ಪ್ರಶಸ್ತಿ ಸಮಿತಿ ಯಾವ ರಾಜೇಂದ್ರ ಪಚೌರಿಯವರನ್ನು ಆಹ್ವಾನಿಸುತ್ತದೆಯೋ ಅಂಥ ಪಚೌರಿಯವರನ್ನು, ಅವರ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತದೆ. ಕಾರಣ ರಾಮ ಹಿಂದು. ರಾಮಸೇತು ಹಿಂದೂ ಭಾವನೆ.ಅದು ದೇಶದಲ್ಲಿ ಅಂಥಾ ದೊಡ್ಡ ಸಂಗತಿಯೇನಲ್ಲ ಎಂಬ ತನ್ನ ಎಂದಿನ ಕಾಂಗ್ರೆಸ್ ನೀತಿ. ಹಾಗಾಗಿ ಕಾಂಗ್ರೆಸ್‌ಗೆ ಯಾವಾಗಲೂ ಮುಸಲ್ಮಾನರಿಗೆ ಹೆಚ್ಚು ತಿನ್ನಿಸಿ, ಅವರಿಗೆ ಹೆಚ್ಚು ಕುಡಿಸಿ, ಹೆಚ್ಚು ಸಂಬಳ ಕೊಡಿಸಿ, ಹೆಚ್ಚುಹೆಚ್ಚಾಗಿ ಮಿಲಿಟರಿಗೆ ಸೇರಿಸಿಕೊಳ್ಳಿ, ಮೇಷ್ಟ್ರನ್ನಾಗಿ ನೇಮಿಸಿಕೊಳ್ಳಿ,ಗುಮಾಸ್ತರನ್ನಾಗಿಸಿಕೊಳ್ಳಿ. ಅವರನ್ನು ಜತನದಿಂದ ನೋಡಿಕೊಂಡಿರಿ. ಪಾಪ ಅವರು ಬಡವರು ನೋಡಿ, ಮೀಸಲಾತಿ ಸಿಗದೇ ಇದ್ದರೆ ಅವರು ಸತ್ತೇಹೋದಾರು ಎಂದೆಲ್ಲಾ ಆಲಾಪಿಸುವ ರಾಜೇಂದ್ರ ಸಾಚಾರ್ ವರದಿ ಮಾತ್ರ ಇಷ್ಟವಾಗುತ್ತದೆ. ರಾಜೇಂದ್ರ ಪಚೌರಿ ವರದಿ ಮೂಲೆಗುಂಪಾಗುತ್ತದೆ.

ಮತ್ತಷ್ಟು ಓದು »

26
ಫೆಬ್ರ

ರಾಮಸೇತು: ಭಕ್ತಿ ಭಾವನೆಯ ಜೊತೆಗೆ ಜೀವನೋಪಾಯದ ಪ್ರಶ್ನೆಯೂ ಹೌದು

– ಅಜಿತ್ ಶೆಟ್ಟಿ,ಉಡುಪಿ

Raama Setuveರಾಮಾಯಣ ಮತ್ತು ಮಹಾಭಾರತ ಗ್ರಂಥಗಳು ಹಿಂದೂಗಳಿಗೆ ಧಾರ್ಮಿಕ ಪವಿತ್ರ ಗ್ರಂಥಗಳಾಗಿದ್ದು, ಈ ಎರಡೂ ಕೃತಿಗಳು ಇತಿಹಾಸದ ಕಥೆಗಳಾಗಿವೆ .ಅನಾದಿಕಾಲದಿಂದ ಮಹಾಪಂಡಿತರು, ತಿಳಿದವರು ಇವನ್ನು ಪಂಚಮವೇದವೆಂದು ಕೈ ಮುಗಿಯುತ್ತಾರೆ. ಸಾವಿರಾರು ವರ್ಷಗಳಿಂದ ಭಾರತೀಯರ ಜನಜೀವನದಲ್ಲಿ ಮಿಳಿತವಾಗಿರುವ ಈ ಪವಿತ್ರ ಗ್ರಂಥಗಳ ಯಥಾರ್ಥವೇನು ಎಂದು ಕೇಳಿದರೆ ಏನೂಂತ ಹೇಳಬೇಕು? ಆರ್ಯ-ದ್ರಾವಿಡರು ವೈರಿಗಳೆಂದು ಕಥೆ ಕಲ್ಪಿಸಿ, ರಾಮ ಯಾವ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದನೆಂದು ಸರ್ಟಿಫಿಕೇಟ್ ಕೊಡಿ,ಸಾಕ್ಷಧಾರ ಕೊಡಿ ಎನ್ನುವ ಮೂರ್ಖ ಕರುಣಾನಿಧಿಯಂಥವರಿಗೆ ಏನೆಂದು ಉತ್ತರಿಸಬೇಕು ?

ಮೊದಲು ಹಿಂದೂ ರಾಷ್ಟ್ರ ಅಖಂಡ ಭಾರತದ ಮೇಲೆ ಮಹಮದೀಯರ ಆಕ್ರಮಣವಾಯಿತು . ನಂತರ ವ್ಯವಹಾರಕ್ಕೆ ಬಂದ ಕ್ರೈಸ್ತ ಯುರೋಪಿಯನ್ನರ ಆಕ್ರಮಣ . ಮಹಮದೀಯರು ಹೆದರಿಸಿ ಬೆದರಿಸಿ,ಕೊಲೆ ಸುಲಿಗೆ ಮಾಡುತ್ತ ನಮ್ಮ ಸಂಪತ್ತು ಲೂಟಿ ಹೊಡೆದರು.ಮೋಸದಿಂದ, ವಿಶ್ವಾಸಘಾತುಕ ಕೆಲಸದಿಂದ,ಕುಟಿಲ ತಂತ್ರದಿಂದ ಹಿಂದೂ ದೊರೆಗಳನ್ನು ಸೋಲಿಸಿ,ಪ್ರಜೆಗಳನ್ನು ಹೆದರಿಸಿ,ಒಪ್ಪದವರ ಕೊಲೆ ಮಾಡಿ ಅವರ ಮತ ಪ್ರಚಾರ ಮಾಡಿ ಮತಾಂತರಿಸಿದರು.ಅಲ್ಲಾವುದ್ದೀನ್ ಖಿಲ್ಜಿ, ಔರಂಗಜೇಬ್,ತುಘಲಕ್ ಅವರಿಂದ ಟಿಪ್ಪುವಿನವರೆಗೆ ಎಲ್ಲರೂ ಭಾರತೀಯ ಸಂಸ್ಕೃತಿಯ ಮೇಲೆ ಆಕ್ರಮಣದ ಆಡಳಿತ ನಡೆಸಿದವರೇ. ಅದಕ್ಕೆ ಇರಬೇಕು ವಿಲ್ ದುರಂಟ್ STORY OF CIVILIZATION ಕೃತಿಯಲ್ಲಿ ಭಾರತದ ಮೇಲೆ ನಡೆದ ಇಸ್ಲಾಮಿನ ಆಕ್ರಮಣ ವಿಶ್ವದ ಇತಿಹಾಸದ ಅತ್ಯಂತ ರಕ್ತಸಿಕ್ತ ಅದ್ಯಾಯವೆಂದಿದ್ದು.ಯುರೋಪಿಯನ್ನರು ಭಾರತೀಯರ ಶಕ್ತಿ ಅಡಗಿರುವುದು ಭಾರತೀಯ ಸಂಸ್ಕೃತಿಯಲ್ಲಿ ಎಂದು ಮನಗಂಡು ಹಿಂಸಾ ಮಾರ್ಗವನ್ನು ಬದಿಗಿಟ್ಟು, ಹಿಂದೂ ನಂಬಿಕೆ , ಅಚಾರ ವಿಚಾರ ದೇವರನ್ನು ಪ್ರಶ್ನಿಸುತ್ತಾ,ಲೇವಡಿ ಮಾಡುತ್ತ,ಹಣದ ಆಮಿಷವೊಡ್ಡಿ ಮಿಷನರಿಗಳ ಮೂಲಕ ಉಪಾಯದಿಂದ ಮತಾಂತರದ ಕ್ರೈಸ್ತಿಕರಣಕ್ಕೆ ಮುಂದಾದರು.ಹಿಂದೂ ಧರ್ಮ ಪ್ರಸಾರಕ್ಕೆ ಇಲ್ಲಿತನಕ ಎಲ್ಲಿಯೂ ಹಿಂದೂಗಳು ಯುದ್ದ ಮಾಡಿಲ್ಲ,ಇನ್ನೊಂದು ಧರ್ಮವನ್ನು ನಿಂದಿಸಿಲ್ಲ ತೀರ ವಿಪರೀತವಾಗುತ್ತಿದೆ,ಸ್ವಾಭಿಮಾನಕ್ಕೆ ದಕ್ಕೆಯಾಗುತ್ತಿದೆ ಎಂದೆನಿಸಿದಾಗ ಅದಕ್ಕೆ ಉತ್ತರಿಸಿದ್ದಾರೆ.

ಮತ್ತಷ್ಟು ಓದು »

25
ಫೆಬ್ರ

‘ಸತ್ಯ ಹರಿಶ್ಚಂದ್ರ’ ನ ನೋಡಿದ ಮೋಹನ ದಾಸನೂ…‘ಕ್ರೈಂ ಡೈರಿ’ ನೋಡುವ ನಮ್ಮ ಮಕ್ಕಳೂ…

-ನಿತ್ಯಾನಂದ.ಎಸ್.ಬಿ

TV“………. ಅದೊಂದು ದಿನ ಸಂಚಾರಿ ಬೊಂಬೆ ಪ್ರದರ್ಶಕರು ನಮ್ಮ ಊರಿಗೆ ಬಂದರು. ಅವರು ನನಗೆ ತೋರಿಸಿದ ಒಂದು ಚಿತ್ರ, ಶ್ರವಣ ಕುಮಾರ. ಆ ಚಿತ್ರದಲ್ಲಿ ಶ್ರವಣ ತನ್ನ ಕುರುಡು ತಂದೆ ತಾಯಿಯರನ್ನು ಅಡ್ಡೆಯಲ್ಲಿ ಕೂರಿಸಿಕೊಂಡು, ಅದನ್ನು ಹೆಗಲಿನ ಮೇಲೆ ಹೊತ್ತುಕೊಂಡು ಯಾತ್ರೆಗಾಗಿ ಹೋಗುತ್ತಿದ್ದ. ಅಂದು ಆ ದೃಶ್ಯ ನನ್ನ ಅಂತರಂಗದಲ್ಲಿ ಶಾಶ್ವತವಾಗಿ ಅಂಕಿತವಾಯಿತು. ಇಗೋ ಇಲ್ಲಿ ನಿನಗೊಂದು ಆದರ್ಶವಿದೆ. ಅದನ್ನು ಅನುಕರಿಸು ಎಂದು ನನಗೆ ನಾನೇ ಹೇಳಿಕೊಂಡೆ. ಶ್ರವಣ ಮರಣ ಹೊಂದಲು ಅವನ ಮಾತಾಪಿತೃಗಳು ಮಾಡಿದ ಆರ್ತವಿಲಾಪ ನನ್ನ ಕಿವಿಗೆ ಈಗಲೂ ಕೇಳುವಂತಿದೆ. ಆ ದೃಶ್ಯ ನನ್ನ ಹೃದಯವನ್ನು ಕರಗಿಸಿತು. ಅದೇ ಸಮಯದಲ್ಲಿ ನಾನು ನೋಡಿದ ಇನ್ನೊಂದು ನಾಟಕವೆಂದರೆ ಸತ್ಯ ಹರಿಶ್ಚಂದ್ರ. ಅದು ನನ್ನ ಮನಸ್ಸನ್ನು ಸೂರೆಗೊಂಡಿತ್ತು. ಅದನ್ನು ಎಷ್ಟು ಸಲ ನೋಡಿದರೂ ನನಗೆ ತೃಪ್ತಿಯೇ ಆಗಲಿಲ್ಲ. ಆದರೆ ನಮ್ಮ ತಂದೆ ಎಷ್ಟು ಸಲ ನೋಡಲು ಅನುಮತಿ ಕೊಟ್ಟಾರು? ಅದರ ಹುಚ್ಚು ನನ್ನನ್ನು ಹಗಲೂ ರಾತ್ರಿ ಬಿಡಲೇ ಇಲ್ಲ. ಲೆಕ್ಕವಿಲ್ಲದಷ್ಟು ಸಲ ನಾನೇ ಹರಿಶ್ಚಂದ್ರನಾಗಿ ಆ ನಾಟಕವನ್ನು ಅಭಿನಯಿಸಿಕೊಂಡೆ. ಎಲ್ಲರೂ ಏಕೆ ಸತ್ಯಹರಿಶ್ಚಂದ್ರನಂತೆ ಸತ್ಯಸಂಧರಾಗಿರಬಾರದು? ಇದೇ ಹಗಲೂ ರಾತ್ರಿ ನನ್ನನ್ನು ನಾನೇ ಕೇಳಿಕೊಳ್ಳುತ್ತಿದ್ದ ಪ್ರಶ್ನೆ. ಸತ್ಯವನ್ನು ಅನುಸರಿಸಬೇಕೆಂದು ಹರಿಶ್ಚಂದ್ರ ಪಟ್ಟ ಕ್ಲೇಶಗಳನ್ನೆಲ್ಲಾ, ಆಪತ್ತುಗಳನ್ನೆಲ್ಲಾ ನಾನೂ ಪಡಬೇಕು. ಇದೊಂದೇ ನನ್ನ ಮನಸ್ಸಿನಲ್ಲಿ ಸ್ಪೂರ್ತಿ ತುಂಬಿದ ಆದರ್ಶ. ಹರಿಶ್ಚಂದ್ರನ ಕಥೆಯನ್ನು ನಾನು ಅಕ್ಷರಶಃ ನಂಬಿದೆನು. ನೆನಪು ಮಾಡಿಕೊಂಡು ಪದೇ ಪದೇ ಅಳುತ್ತಿದ್ದೆನು. ಹರಿಶ್ಚಂದ್ರ ಐತಿಹಾಸಿಕ ವ್ಯಕ್ತಿ ಆಗಿರಲಾರ ಎಂಬುದು ಇಂದು ನನ್ನ ಬುದ್ಧಿಗೆ ಗೋಚರಿಸುತ್ತಿದೆ. ಆದರೆ ನನ್ನ ಮಟ್ಟಿಗೆ ಹರಿಶ್ಚಂದ್ರ, ಶ್ರವಣ ಇಬ್ಬರೂ ಜೀವಂತ ವ್ಯಕ್ತಿಗಳು. ಆ ನಾಟಕಗಳನ್ನು ಓದಿದರೆ ಮತ್ತೆ ಮೊದಲಿನಂತೆ ನಾನು ಕಣ್ಣೀರು ಹಾಕದೇ ಇರಲಾರೆನೆಂಬುದು ನನ್ನ ನಂಬಿಕೆ……..”

ಮತ್ತಷ್ಟು ಓದು »

14
ಫೆಬ್ರ

ವ್ಯಾಲೆಂಟೈನ್ಸ್ ಡೇ ಮತ್ತು ಅದರ ಒಳ ಸುಳಿಗಳು

ಮಹೇಶ್ ಪ್ರಸಾದ್ ನೀರ್ಕಜೆ

ವ್ಯಾಲೆಂಟೈನ್ಸ್ ಡೇಹೌದ್ರೀ, ನಾನು ಕನ್ನಡ ಪ್ರೇಮಿಯೇ. ಇಂಗ್ಲಿಷ್ ವ್ಯಾಮೋಹದಿಂದ ಶೀರ್ಷಿಕೆಯಲ್ಲಿ ‘ಪ್ರೇಮಿಗಳ ದಿನ’ ಅನ್ನದೇ ವ್ಯಾಲೆಂಟೈನ್ಸ್ ಡೇ ಅಂದಿದ್ದಲ್ಲ. ಪ್ರೇಮಿಗಳ ದಿನ ಅಂತ ಹೇಳದೇ ಇದ್ದಿದ್ದಕ್ಕೆ ಕಾರಣ ತುಂಬಾ ಇದೆ. ಯಾಕೆಂದರೆ ವ್ಯಾಲೆಂಟೈನ್ಸ್ ಡೇ ಎನ್ನುವುದರ ಅರ್ಥ ನಾವೆಲ್ಲರು ತಿಳಿದಿರುವಂತೆ ಪ್ರೇಮಿಗಳ ದಿನ ಅಲ್ಲ! ಅದು ಹೇಗೆ ಅಂತ ಹೇಳುವ ಮೊದಲು ಇನ್ನೊಂದು ವಿಷಯ ಸ್ಪಷ್ಟಪಡಿಸುತ್ತೇನೆ. ಸಾಮಾನ್ಯವಾಗಿ ವ್ಯಾಲ್ಲೆಂಟೈನ್ಸ್ ಡೇ ವಿರೋಧಿಸುವ ಬಲ ಪಂಥೀಯರಿಗೂ, ಅಥವಾ ಏನೇ ಇದ್ದರೂ ವ್ಯಾಲೆಂಟೈನ್ಸ್ ಡೇ ಎನ್ನುವುದನ್ನು ಮಾನವತೆಯ ಮಟ್ಟಕ್ಕೆ ಎತ್ತರಿಸಿ ಸಮರ್ಥಿಸುವ ಎಡ ಪಂಥೀಯರಿಗೂ (ಕೆಲ ಎಡಪಂಥೀಯರು ಕೂಡ ಬೇರೆ ಕಾರಣಕ್ಕೆ ವ್ಯಾಲೆಂಟೈನ್ಸ್ ಡೇ ವಿರೋಧಿಸುತ್ತಾರೆ) ಈ ಬರಹ ಅಪಥ್ಯವಾಗಬಹುದು. ನನ್ನ ಪ್ರಯತ್ನವೇನಿದ್ದರೂ ಇವೆರಡನ್ನು ಬಿಟ್ಟು ಅವುಗಳಿಗಿಂತಲೂ ಮೇಲಿನ ಮಟ್ಟದಲ್ಲಿ ಮೂರನೇ ದೃಷ್ಟಿಕೋನವೊಂದನ್ನು ಅನ್ವೇಷಿಸುವುದು.

ಮೊದಲನೆಯದಾಗಿ ವ್ಯಾಲೆಂಟೈನ್ಸ್ ಡೇ ಮೂಲ ಕೆದಕಿದರೆ ನಮಗೆ ಇತಿಹಾಸದಲ್ಲಿ ಸಿಗುವುದು ಒಬ್ಬ ಪ್ರೇಮಿಯೋ ರಸಿಕನೋ ಅಥವಾ ಒಂದು ಪೌರಾಣಿಕ ಕಥೆಯ ಜನಪ್ರಿಯ ಪಾತ್ರವೋ ಅಲ್ಲ. ವ್ಯಾಲೆಂಟೈನ್ಸ್ ಎಂಬುದು ಮೂಲತಹ ಒಬ್ಬ ಸಂತನ ಹೆಸರು. ಇನ್ನೂ ಸರಿಯಾಗಿ ಹೇಳಬೇಕೆಂದರೆ ಕ್ರಿಶ್ಚಿಯಾನಿಟಿ ಇನ್ನೂ ಪಸರಿಸುತ್ತಿದ್ದ ಕಾಲದಲ್ಲಿ ಪೆಗನರ (ಶಬ್ದಾರ್ಥ : ಅನಾಗರಿಕ) ಕೈಯಲ್ಲಿ ಸಾಯುತ್ತಿದ್ದ ಕ್ರೈಸ್ತ ಸಂತರನ್ನು ವ್ಯಾಲೆಂಟೈನ್ ಎಂದು ಕರೆಯಲಾಗುತ್ತಿತ್ತಂತೆ. ಮತ್ತಷ್ಟು ಓದು »

4
ಫೆಬ್ರ

“ವಿಶ್ವರೂಪ” ದರ್ಶನವಂತೂ ಆಗುತ್ತಿದೆ….!

– ಚಕ್ರವರ್ತಿ ಸೂಲಿಬೆಲೆ

Vishwaroopamಸೆಕ್ಯುಲರ್ ಭಾರತ!
ಇನ್ನಾದರೂ ಹಾಗೆ ಕರೆಯೋಕೆ ನಾಚ್ಕೋಬೇಕು. ಇಸ್ಲಾಮ್ ಭಾರತ ಅಂತಾನೋ ಹಿಂದೂ ವಿರೋಧಿ ಭಾರತ ಅಂತಾನೋ ಕರೆದರೆ ಒಂದಷ್ಟು ಅತೃಪ್ತ ಆತ್ಮಗಳು ತೃಪ್ತಿಗೊಂಡಾವು. ಕಳೆದ ಎಂಟ್ಹತ್ತು ದಿನಗಳ ನಾಟಕ ನೋಡಿದರೆ ಹಾಗನ್ನಿಸುವುದು ಸಹಜವೇ.

‘ವಿಶ್ವರೂಪಮ್’ ಬಿಡುಗಡೆಗೆ ಕಿರಿಕ್ ಅಯ್ತು. ಹತ್ಯೆ ಮಾಡುವ ಮುನ್ನ ಭಯೋತ್ಪಾದಕ ಅಲ್ಲಾಹನಿಗೆ ವಂದಿಸಿ ಹೊರಡುವುದನ್ನು ತೋರಿಸಿರುವುದೇ ಗಲಾಟೆಗೆ ಕಾರಣವಂತೆ. ತಮಿಳುನಾಡು ಸರ್ಕಾರ ಸಿನೆಮಾ ತಡೆಹಿಡಿಯಿತು. ಬೇರೆಬೇರೆ ರಾಜ್ಯಗಳಲ್ಲಿ ಬಿಡುಗಡೆಗೆ ಮುನ್ನ ಮುಸಲ್ಮಾನ ಸಂಘಟನೆಗಳು ಪ್ರತಿಭಟನೆ ಮಾಡಿದವು. ದಾವಣಗೆರೆಯಲ್ಲಿ ಕೋಮು ಗಲಭೆಯೇ ನಡೆಯಿತು. ತಮಿಳುನಾಡಿನ ಸಿನೆಮಾ ಮಂದಿರದಲ್ಲಿ ಪೆಟ್ರೋಲ್ ಬಾಂಬ್ ಎಸೆಯಲಾಯ್ತು. ಅಚ್ಚರಿಯೇನು ಗೊತ್ತೆ? ಜನಾರ್ಧನ ಪೂಜಾರಿಯವರು ಬಾಯಿ ತೆರೆಯಲೇ ಇಲ್ಲ. ಬುದ್ಧಿ ಮಾರಿಕೊಂಡು ಬದುಕುವ ಕೆಲವರು ಬೆಂಗಳೂರಿನಲ್ಲಿ ತಣ್ಣಗೆ ಕುಳಿತುಬಿಟ್ಟಿದ್ದಾರೆ.

ಯಾಕೆ ಸ್ವಾಮಿ? ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆಯೇ ಇಲ್ವೆ? ಈಗ ನಿಮಗೆ ಧರ್ಮದ ಹೆಸರಲ್ಲಿ ಕ್ರೌರ್ಯ ಕಾಣುವುದೆ ಇಲ್ಲವೆ?

ಮತ್ತಷ್ಟು ಓದು »

31
ಜನ

‘ದಾಮಿನಿ’ಗೆ ಮಿಡಿದ ಹೃದಯಗಳು ’ಸೌಜನ್ಯ’ಳಿಗೂ ಮಿಡಿಯಲಾರವೇ?

– ಭುವಿತ್ ಶೆಟ್ಟಿ

ಪ್ರಿಯ ಮಂಗಳೂರಿನ ನಾಗರೀಕರೇ,

Kumari Soujanyaನಾವೇಕೆ ಈ ರೀತಿ? ನಮ್ಮ ಮನೆಯಲ್ಲಿ ಸೂತಕವಿದ್ದರೂ ಪರಮನೆಯ ಸಾವಿಗೆ ಕಣ್ಣೀರು ಸುರಿಸುವ ಹೃದಯ ವೈಶಾಲ್ಯತೆ ನಮಗೇಕೆ? ಊರ ಉಸಾಬರಿ ನಮಗ್ಯಾಕೆ ಅಂತ ಸುಮ್ಮನೆ ಕೂರುವಂಥ ಕಾಲ ಇದಲ್ಲ. ಅದನ್ನು ಒಪ್ಪಲೇ ಬೇಕು. ಆದರೆ, ಇತ್ತೀಚೆಗೆ ನಾವು ತೀರ ಸ್ವಂತಿಕೆಯ ಎಲ್ಲೆ ಮೀರಿ ಹೋಗುತ್ತಿದ್ದೇವೆ. ನೆರೆಮನೆ ಸುಡುತ್ತಿದ್ದರೂ ಮಾತಾಡದೆ, TV ಯಲ್ಲಿ ಕ್ರೈಂ ಸ್ಟೋರಿ ನೋಡಿ ಅಯ್ಯೋ ಪಾಪ ಎನ್ನುತ್ತೇವೆ. ಅಂಥ ಮನೋಸ್ಥಿಥಿ ನಮ್ಮದು. ಮಾನವೀಯತೆ ಎಂಬುದು ಮಾದ್ಯಮಗಳು ಬಿತ್ತರಿಸುವ ಸುದ್ದಿಯನ್ನು ನೋಡಿ ಉಕ್ಕಿ ಹರಿಯುತ್ತದೆ ಹೊರತು ವಾಸ್ತವತೆಯನ್ನರಿತಲ್ಲ. ಮಂಗಳೂರು ಖಂಡಿತವಾಗಿಯೂ ಬದಲಾಗಿದೆ ಎನ್ನಲು ಇತ್ತೀಚೆಗೆ ನಡೆದ Home Stay ಗಲಾಟೆ ಹಾಗೂ  ಸೌಜನ್ಯ ಸಾವಿನ ಪ್ರಕರಣದ ಬಗ್ಗೆ ಮಂಗಳೂರಿನ ಜನತೆ ವ್ಯಕ್ತಪಡಿಸಿದ ಪ್ರತಿಕ್ರಿಯೆಯೇ ಸಾಕು.

ರಾಜಕೀಯ ಪ್ರೇರಿತ ‘ಮಂಗಳೂರು ರೆಸಾರ್ಟ್ ಗಲಾಟೆ’ಯಲ್ಲಿ ಸಿರಿವಂತ ಮನೆಯ ಹೆಣ್ಣುಮಕ್ಕಳಿಗಾದ ಅನ್ಯಾಯಕ್ಕೋಸ್ಕರ ಅದೆಷ್ಟು ಮಂದಿ ಬೀದಿಗಿಳಿಯಲಿಲ್ಲಾ? Facebook ತುಂಬಾ ಅದೇನೂ ಸ್ಟೇಟಸ್ Update ಗಳು, ಅದೇನೂ ಅಕ್ರೋಶ? ದಾಳಿ ಮಾಡಿದವರನ್ನು ಕೈಗೆ ಕೊಟ್ಟಿದ್ದರೆ ಕೊಂದು ಬಿಡುತ್ತಿದ್ದರೋ ಏನೋ… ಆ ರೀತಿ ಇತ್ತು ಪ್ರತಿಭಟನೆಯ ಜೋರು.

ಮತ್ತಷ್ಟು ಓದು »