ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

25
ನವೆಂ

ಪ್ರಶಾಂತ ಹಿಮಾಲಯದ ಅಶಾಂತ ಗಡಿ….

-ಪ್ರೇಮ ಶೇಖರ್

(ಶನಿವಾರ, ಡಿಸೆಂಬರ್ ೧, ೨೦೧೨ರಂದು ಭಾರತ – ಚೀನಾ ಗಡಿಸಮಸ್ಯೆಯ ಬಗೆಗಿನ ನನ್ನ “ಪ್ರಶಾಂತ ಹಿಮಾಲಯದ ಅಶಾಂತ ಗಡಿ” ಕೃತಿ ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಆ ಪುಸ್ತಕದ ಮೊದಲ  ಅಧಯಾಯ ಇಲ್ಲಿದೆ )

ಮೂವತ್ತೆರಡು ಲಕ್ಷ ಚದರ ಕಿಲೋಮೀಟರ್ ವಿಸ್ತೀರ್ಣದ ನೆಲದೊಂದಿಗೆ ವಿಶ್ವದಲ್ಲಿ ಭೌಗೋಳಿಕವಾಗಿ ಏಳನೆಯ ದೊಡ್ಡ ದೇಶವಾದ ಭಾರತ ಸುಮಾರು ಹದಿನಾಲ್ಕು ಸಾವಿರ ಕಿಲೋಮೀಟರ್ ಉದ್ದದ ನೆಲಗಡಿಯನ್ನೂ, ಐದುಸಾವಿರದ ಐನೂರು ಕಿಲೋಮೀಟರ್ ಉದ್ದದ ಜಲಗಡಿಯನ್ನೂ ಹೊಂದಿದೆ. ಬಹುತೇಕ ಈ ಎಲ್ಲಾ ನೆಲಗಡಿಗಳು ಹಿಂದಿನ ಬ್ರಿಟಿಷ್ ವಸಾಹತುಶಾಹಿ ಆಡಳಿತದಿಂದ ಸ್ವತಂತ್ರ ಭಾರತಕ್ಕೆ ಬಂದ ಬಳುವಳಿಗಳಾಗಿವೆ.

ನೇಪಾಲ ಜತೆಗಿನ ೧,೬೯೦ ಕಿಲೋಮೀಟರ್ ಗಡಿಯನ್ನು ಬ್ರಿಟಿಷರು ರೂಪಿಸಿದ್ದಂತೇ ಸ್ವತಂತ್ರ ಭಾರತ ಉಳಿಸಿಕೊಂಡರೆ ಭೂತಾನದ ಜತೆಗಿನ ೬೦೫ ಕಿಲೋಮೀಟರ್ ಗಡಿಯಲ್ಲಿ ಮಾತ್ರ ಸ್ವಲ್ಪ ಬದಲಾವಣೆಯನ್ನು ಮಾಡಲಾಯಿತು. ಹತ್ತೊಂಬತ್ತನೇ ಶತಮಾನದ ಮಧ್ಯದಲ್ಲಿ ಬ್ರಿಟಿಷರು ಆಕ್ರಮಿಸಿಕೊಂಡಿದ್ದ ದಕ್ಷಿಣ ಭೂತಾನದ ಕೆಲವು ಪ್ರದೇಶಗಳನ್ನು ಆ ದೇಶಕ್ಕೆ ಮರಳಿಸುವ ನಿರ್ಧಾರವನ್ನು ಸ್ವತಂತ್ರ ಭಾರತ ಮಾಡಿದ್ದು ಆ ಬದಲಾವಣೆಗೆ ಕಾರಣ. ಮಿಯಾನ್ಮಾರ್(ಹಿಂದಿನ ಬರ್ಮಾ) ಜತೆಗಿನ ಗಡಿಯ ಬಗ್ಗೆ ಹೇಳುವುದಾದರೆ ೧೯೩೭ರಲ್ಲಿ ಬ್ರಿಟಿಷರು ಆ ದೇಶವನ್ನು ಭಾರತದಿಂದ ಬೇರ್ಪಡಿಸಿದಾಗ ರೂಪಿಸಿದ ಗಡಿಯಲ್ಲಿದ್ದ ಕೆಲವು ಗೊಂದಲಗಳನ್ನು, ಮುಖ್ಯವಾಗಿ ಅರುಣಾಚಲ ಪ್ರದೇಶ ಮತ್ತು ಉತ್ತರ ಬರ್ಮಾದ ನಡುವಿನ ತಿರಾಪ್ ಕಣಿವೆ ಮತ್ತು ಮಣಿಪುರದ ಗಡಿಯ ಬಗ್ಗೆ ಇದ್ದ ಅಸಮರ್ಪಕತೆಗಳನ್ನು ಸ್ವಾತಂತ್ರಾನಂತರ ದ್ವಿಪಕ್ಷೀಯ ಮಾತುಕತೆಗಳು ಮತ್ತು ಒಪ್ಪಂದದ ಮೂಲಕ ಸ್ನೇಹಯುತವಾಗಿ ಸರಿಪಡಿಸಿಕೊಳ್ಳಲಾಯಿತು. ಬಾಂಗ್ಲಾದೇಶದ ಜತೆಗಿನ ೪,೦೫೩ ಕಿಲೋಮೀಟರ್ ಉದ್ದದ ಗಡಿ ನಲವತ್ತೇಳರಲ್ಲಿ ಸರ್ ಸಿರಿಲ್ ರ‍್ಯಾಡ್‌ಕ್ಲಿಫ್ ನೇತೃತ್ವದ “ಗಡಿ ಸಮಿತಿ” (Boundary Commission) ಭಾರತ ಮತ್ತು ಪೂರ್ವ ಪಾಕಿಸ್ತಾನಗಳ ನಡುವೆ ಎಳೆದ ಗಡಿಯಾಗಿದೆ. ಈ ಗಡಿಯ ಐತಿಹಾಸಿಕ ಹಿನ್ನೆಲೆಯನ್ನು ಅನ್ವೇಷಿಸಿದರೆ ಇದು ೧೯೦೫ರಲ್ಲಿ ವೈಸ್‌ರಾಯ್ ಲಾರ್ಡ್ ಕರ್ಜನ್ ಬಂಗಾಲವನ್ನು ವಿಭಜಿಸಿದಾಗ ಎಳೆದ ರೇಖೆ ಮತ್ತು ೧೯೪೩ರಲ್ಲಿ ವೈಸ್‌ರಾಯ್ ಲಾರ್ಡ್ ವೇವಲ್ ದೇಶವಿಭಜನೆಗಾಗಿ ಸೂಚಿಸಿದ ರೇಖೆಗಳ ಆಧಾರದ ಮೇಲೆ ರಚಿತವಾದದ್ದು ಎಂಬ ಅಂಶ ಸ್ಪಷ್ಟವಾಗುತ್ತದೆ. ಈ ಧೀರ್ಘ ಗಡಿ ಬಹುತೇಕ ವಿವಾದಾತೀತವಾಗಿದ್ದರೂ ಅದರ ಕೆಲವು ಪುಟ್ಟ ತುಣುಕುಗಳು ಢಾಕಾದಲ್ಲಿ ಅಧಿಕಾರ ಹಿಡಿಯುವ ರಾಜಕೀಯ ಪಕ್ಷಗಳ ಮರ್ಜಿಗನುಗುಣವಾಗಿ ಆಗಾಗ ಸುದ್ಧಿಯಾಗುತ್ತದೆ. ಮತ್ತಷ್ಟು ಓದು »

23
ನವೆಂ

ಕರ್ನಾಟಕದಲ್ಲಿ ಈ ಬಾರಿ ಪ್ರಾದೇಶಿಕ ಪಕ್ಷಗಳಿಗೆ ಕಾಲ ಕೂಡಿ ಬಂದಿದೆಯೇ?

-ವಸಂತ್  ಶೆಟ್ಟಿ
ಕರ್ನಾಟಕದಲ್ಲಿ ಬರುವ ವಿಧಾನಸಭೆ ಚುನಾವಣೆ ಹೊತ್ತಿಗೆ ಒಂದಕ್ಕಿಂತ ಹೆಚ್ಚು ಪ್ರಾದೇಶಿಕ ಪಕ್ಷಗಳು ಅಸ್ತಿತ್ವಕ್ಕೆ ಬರುವುದು ಖಚಿತವಾಗುತ್ತಿದ್ದಂತೆಯೇ ಕರ್ನಾಟಕದಲ್ಲಿ ಈ ಹಿಂದೆಯೂ ಪ್ರಾದೇಶಿಕ ಪಕ್ಷ ಗೆಲುವು ಕಂಡಿಲ್ಲ, ಈಗಲೂ ಕಾಣಲ್ಲ ಅಂತೆಲ್ಲ ಅಲ್ಲಲ್ಲಿ ದನಿ ಎಬ್ಬಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಚುನಾವಣೆ ಹತ್ತಿರ ಬಂದಂತೆ ಅದು ತಾರಕಕ್ಕೆರಲಿದೆ. ಈ ಪಕ್ಷಗಳ ಭವಿಷ್ಯ ಜನತಾ ನ್ಯಾಯಲಯದಲ್ಲಿ ನಿರ್ಧಾರವಾಗುತ್ತೆ ಮತ್ತು ಆ ತೀರ್ಪೇ ಅಂತಿಮ ಅನ್ನುತ್ತಲೇ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ನೆಲೆ ಸಿಗುವ ಸಾಧ್ಯತೆ ಯಾಕೆ ಹೆಚ್ಚಿದೆ ಅನ್ನುವುದರ ಬಗ್ಗೆ ನನ್ನ ಅನಿಸಿಕೆ ಓದುಗ ಗೆಳೆಯರೊಡನೆ ಹಂಚಿಕೊಳ್ಳಲು ಈ ಬರಹ.

ಭಾರತ ಒಕ್ಕೂಟದ ಮೇಲೊಂದು ಹಿನ್ನೋಟ
ಭಾರತ ಒಕ್ಕೂಟ ಅಸ್ತಿತ್ವಕ್ಕೆ ಬಂದ ದಿನಗಳನ್ನು ಒಮ್ಮೆ ಸುಮ್ಮನೆ ನೆನೆಸಿಕೊಳ್ಳಿ. ವಿವಿಧ ನುಡಿಯಾಡುವ, ವಿವಿಧ ಆಚರಣೆ, ಆಹಾರ, ಜೀವನವಿಧಾನವನ್ನೇ ಹೊಂದಿರುವ ಭಾರತ ಒಕ್ಕೂಟದ ಜನರನ್ನು ಭಾವನಾತ್ಮಕವಾಗಿ ಬೆಸೆದಿದ್ದು ನಮ್ಮೆಲ್ಲಗಿಂತಲೂ ಆರ್ಥಿಕವಾಗಿ, ತಾಂತ್ರಿಕವಾಗಿ ಮುಂದುವರೆದಿದ್ದ ಬ್ರಿಟಿಷ್ ಎಂಬ ಸಾಮಾನ್ಯ ಶತ್ರು. ಈ ಶತ್ರುವಿನ ವಿರುದ್ದ ಭಾರತ ಒಕ್ಕೂಟದ ಜನರನ್ನು ಸಂಘಟಿತರನ್ನಾಗಿಸಿ ಹೋರಾಟಕ್ಕೆ ಮೊನಚು ತಂದ ನಾಯಕರಿದ್ದದ್ದು ಕಾಂಗ್ರೆಸ್ ಅನ್ನುವ ಅಂದಿನ ಪಕ್ಷದಲ್ಲಿ. ಬ್ರಿಟಿಷರು ಭಾರತ ಬಿಟ್ಟು ಹೋದಾಗ ಜನರ ಮನದಲ್ಲಿದ್ದ “ಕಾಂಗ್ರೆಸ್ಸಿನವರು ಸ್ವಾತಂತ್ರಕ್ಕೆ ಕಾರಣರಾದರು” ಅನ್ನುವ ಭಾವನೆಯನ್ನೇ ಬಂಡವಾಳವಾಗಿಸಿಕೊಂಡು ದೇಶಾದ್ಯಂತ ಕಾಂಗ್ರೆಸ್ ಪಕ್ಷ ರಾಜಕೀಯ ನೆಲೆ ಕಂಡುಕೊಂಡಿತು. ಈ ಭಾವನಾತ್ಮಕ ಬಂಡವಾಳ ಗಟ್ಟಿಯಾಗಿದ್ದರಿಂದ ಸ್ವಾತಂತ್ರ್ಯ ನಂತರದ ಮೊದಲೆರಡು ದಶಕ ದೇಶಕ್ಕೆ ಒಂದೇ ಪಕ್ಷ ಅನ್ನುವಂತೆ ಕಾಂಗ್ರೆಸಿನ ಪಾರುಪತ್ಯ ನಡೆದಿತ್ತು.

ಒಂದು ಪಕ್ಷ, ಒಬ್ಬ ವ್ಯಕ್ತಿ ಒಕ್ಕೂಟವನ್ನಾಳುವುದು ಅಸಹಜ !
ಹೀಗೆ ಬ್ರಿಟಿಷರನ್ನು ಹೊಡೆದೊಡಿಸಲು ರೂಪುಗೊಂಡಿದ್ದ ಹೋರಾಟದಿಂದಾಗಿ ನೆಲೆ ಕಂಡಿದ್ದ ಭಾವನಾತ್ಮಕ ಒಗ್ಗಟ್ಟು ಅನ್ನುವ ತೆಳು ಅಂಟು ಕೆಲ ಸಮಯದಲ್ಲಿ ಖಾಲಿಯಾಗುತ್ತಲೇ ನಮ್ಮ ನಮ್ಮಲ್ಲಿನ ಆಸೆ, ಆಶೋತ್ತರಗಳು, ಏಳಿಗೆಯ ಕಲ್ಪನೆಗಳಲ್ಲಿನ ವೈವಿಧ್ಯತೆಗಳು ಹಂತ ಹಂತವಾಗಿ ಹೊರ ಹೊಮ್ಮತೊಡಗಿದವು. ಇಷ್ಟು ವ್ಯಾಪಕವೂ, ವೈವಿಧ್ಯಮಯವೂ ಆದ ಒಕ್ಕೂಟವೊಂದನ್ನು ಒಂದು ಪಕ್ಷ, ಒಬ್ಬ ವ್ಯಕ್ತಿ ದೆಹಲಿಯಿಂದ ಆಳುವುದು ಅತ್ಯಂತ ಅಸಹಜವೂ, ಆಳಲಸಾಧ್ಯವಾದದ್ದು (unwieldy) ಅನ್ನುವುದು ಅರ್ಥವಾಗತೊಡಗಿತು. ನೂರು ಕೋಟಿಗೂ ಮಿಗಿಲಾದ ಜನರ ಆಶೋತ್ತರಗಳನ್ನು ಒಂದು ಪಕ್ಷ, ಒಬ್ಬ ವ್ಯಕ್ತಿಯಿಂದ ಎಂದಿಗೂ ಈಡೇರಿಸಲಾಗದು ಅನ್ನುವ ಪ್ರಾಕ್ಟಿಕಲ್ ಆದ ತಿಳಿವೇ ಮುಂದಿನ ದಿನಗಳಲ್ಲಿ ಕಾಂಗ್ರೆಸಿನ ಪಾರಮ್ಯವನ್ನು ಮುರಿದು ದೇಶದ ಹಲವೆಡೆ ಪ್ರಾದೇಶಿಕ ಶಕ್ತಿಗಳು ಉದಯಿಸುವಂತೆ ಮಾಡಿದ್ದು ಅನ್ನುವುದನ್ನು ಗಮನಿಸಬೇಕಿದೆ. 1990ರ ಈಚೆಗೆ ಆರ್ಥಿಕ, ಸಾಮಾಜಿಕ ನೆಲೆಗಟ್ಟಿನಲ್ಲಾದ ತುರ್ತಿನ ಬದಲಾವಣೆಗಳು ಈ ಪ್ರಕ್ರಿಯೆಗೆ ಇನ್ನಷ್ಟು ವೇಗ ಒದಗಿಸಿದೆ ಅಂದರೆ ತಪ್ಪಾಗಲಾರದು.  ಮತ್ತಷ್ಟು ಓದು »

22
ನವೆಂ

ಸ್ವಾಭಿಮಾನದ ಬದುಕು ಕಟ್ಟಿಕೊಟ್ಟ “ಸರ್ಕಾರ್ “

-ಅಜಿತ್ ಎಸ್ ಶೆಟ್ಟಿ

ಕೇಸರಿ ಅಂಗಿ, ಕೇಸರಿ ಶಾಲು, ಕೇಸರಿ ಟೋಪಿ , ಕೇಸರಿ ಶೂಗಳು , ಕೇಸರಿ ಬಣ್ಣದ ಸೈಕಲ್ , ಅದಕ್ಕೆ ಕೇಸರಿ ಬಣ್ಣದ ಚಕ್ರಗಳು ,ಕೇಸರಿ ಪೆನ್ ಯಿಂದ ಹಿಡಿದು ಕೇಸರಿ ಬಣ್ಣದ ಮೊಬೈಲ್ ತನಕ ಎಲ್ಲವೂ ಕೆಸರಿನೇ.  ಹಿಂದುತ್ವವಾದಿ ಯಾದರೂ  ಮನೆಯಲ್ಲಿ ಯಾವದೇ ದೇವರ ಫೋಟೋ ಇಲ್ಲ.  ಇರುವದು ಎರಡೇ ಎರಡು ಫೋಟೋಗಳು ಅವರುಗಳೇ ಇವನ ಪಾಲಿಗೆ ದೇವರು. ಆ ಫೋಟೋ ಗಳು ಬೇರೆ ಯಾರದ್ದು ಅಲ್ಲಾ ಮರಾಠ ಸೇನಾಧಿಪತಿ , ಹಿಂದೂ ಹೃದಯ ಸಾಮ್ರಾಟ್ , ಹುಲಿ, ಬಾಳಾ ಸಾಹೇಬ್  ಠಾಕ್ರೆ ಮತ್ತು ಅವರ ಪತ್ನಿ ಮೀನಾ ಅವರದ್ದು . ಅವರನ್ನು ಅರಾಧಿಸುತಿರುವವರು 52 ರ ಹರೆಯದ ಪೂನಾ ಜಿಲ್ಲೆಯ  ನಂಗೋನ್ ಎಂಬಲ್ಲಿನ ಮಹಾದೇವ್ ಯಾದವ್. ನಾವು ಇಂಥ ಸಾವಿರಾರು   ಠಾಕ್ರೆ ಅಭಿಮಾನಿಗಳನ್ನು ಮಹಾರಾಷ್ಟ್ರದಲ್ಲಿ ನೋಡಬಹುದು . 

ಇಂದು ಬಾಳಾ ಸಾಹೇಬ್ ಯನ್ನು “ತಮಿಳು ವಿರೋಧಿ” “ಕನ್ನಡಿಗರ ಪಾಲಿನ ಶತ್ರು ” ಉತ್ತರ ಭಾರತೀಯರು ಮತ್ತು ಗುಜರಾತಿಗಳ ಪಾಲಿಗೆ ಕಂಟಕರಾಗಿದ್ದವರೆಂದು ಬೆರಳೆಣಿಕೆ ಎಷ್ಟು ಇರುವ ಅವರ ವಿರೋಧಿಗಳು ಕರೆಯಬಹುದು . ಆದರೆ ಅದು ಬಾಳಾ ಸಾಹೇಬ್  ಠಾಕ್ರೆ ಯವರ   ವ್ಯಕ್ತಿತ್ವದ ಮುಂದೆ ಗೌಣವಾಗುತದೆ . ಠಾಕ್ರೆ ವ್ಯಕ್ತಿತ್ವ ಅಂತಹುದು ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳುತಿದ್ದ . ಎಲ್ಲಿಯೂ ಎಡಬಿಡಂಗಿ ತರ ವರ್ತಿಸುತಿರಲಿಲ್ಲ.  ಉದಾಹರಣೆ ಸಮೇತ ಸಮರ್ಥಿಸಿಕೊಳ್ಳುತಿದ್ದರು. ಅದು ಇಂದಿರೆ ಹೇರಿದ ತುರ್ತು ಪರಿಸ್ಥಿತಿಯಿಂದ ಹಿಡಿದು ಹಿಟ್ಲರ್ ಬಗೆಗಿನ ಠಾಕ್ರೆ  ಅಭಿಮಾನದವರೆಗೆ. ದೇಶಕ್ಕೆ ಕಳಂಕದಂತಿದ್ದ , ಗುಲಾಮತೆಯ ಪ್ರತೀಕದಂತೆ ಭಾಸವಾಗುತಿದ್ದ ಬಾಬ್ರಿ ಮಸೀದಿ ದ್ವಂಸದಿಂದ, ಭಾರತ-ಪಾಕ್ ಕ್ರಿಕೆಟ್ ಪಂದ್ಯದ ತನಕ. ಎಲ್ಲಿಯೂ ರಾಜಿ ಇರಲಿಲ್ಲ. ಬಾಳಾ ಸಾಹೇಬ್ ಠಾಕ್ರೆ ಒಬ್ಬ ಭಾಷಾಪ್ರೇಮಿಯಾಗಿದ್ದರು ಅಪ್ರತಿಮ ದೇಶಭಕ್ತ, ಒಬ್ಬ ಹುಟ್ಟು ಹೋರಾಟಗಾರ, ಅಂಜದೇ ಅಳುಕದೇ ಯಾರಿಗೂ ತಲೆಬಾಗದೆ ತಾನು ನಂಬಿಕೊಂಡು ಬಂದಿರುವ ತತ್ವ ಸಿದ್ದಾಂತವನ್ನು  ಪ್ರತಿಪಾದಿಸುವವ. ತಮ್ಮವರ ಹಕ್ಕಿಗಾಗಿ ಹೋರಾಡಿದ ಧೀಮಂತ ನಾಯಕ. ತನ್ನ ಶಕ್ತಿಯ ಮೇಲೆ, ತನ್ನ ಜನರ ನಂಬಿಕೆ ಮೇಲೆ ಅಪಾರ ಭರವಸೆ ಇಟ್ಟುಕೊಂಡಿದ್ದ ಅದ್ಬುತ ಮಾತುಗಾರ. ತನ್ನ ನಂಬಿರುವ ತನ್ನ ಜನರ ಭರವಸೆ ಎಂದು ಹುಸಿಗೊಳಿಸದ, ಅವರಿಗೆ ಸ್ವಾವಲಂಬಿ ಬದುಕು ಕಟ್ಟಿಸಿಕೊಟ್ಟ “ಸರ್ಕಾರ್” . ಉಳಿದವರಿಗೆ ಸ್ಪೂರ್ತಿಯ ಚಿಲುಮೆ . ಒಬ್ಬ ವ್ಯಂಗ್ಯ ಚಿತ್ರಗಾರ ನಾಗಿ ಬದುಕು ಪ್ರಾರಂಭಿಸಿದ ಬಾಳಾ ಸಾಹೇಬ್ ಠಾಕ್ರೆ  ಬೆಳೆದು ಬಂದ ಅವನ ವಿರೋಧಿಗಳು ಮೆಚ್ಚುವಂಥಹುದು . ಅದಕ್ಕೊಂದು ಸಲಾಂ ಹೇಳಲೇ ಬೇಕು. ವಿವಾದಾತ್ಮಕ ವಾಗಿದ್ದರೂ ವರ್ಣರಂಜಿತ ಬದುಕು.
ಮತ್ತಷ್ಟು ಓದು »

21
ನವೆಂ

ಹುಚ್ಚರ ಮದುವೆಯಲ್ಲಿ ಉ೦ಡವನೇ ಜಾಣ!!

– ಕೆ ಎಸ್ ರಾಘವೇಂದ್ರ ನಾವಡ

ಅ೦ತೂ ಇ೦ತೂ ಕೆಜಿಪಿ. ಯಡಿಯೂರಪ್ಪ ನವರ ತೆಕ್ಕೆಗೆ ಬಿದ್ದಿದೆ. ಧನ೦ಜಯ ಕುಮಾರ್ ಅಧ್ಯಕ್ಷರಾಗಿಯೂ ಕೆಜಿಪಿಯ ಹಳೇ ಮಾಲೀಕರಾಗಿದ್ದ ಪ್ರಸನ್ನಕುಮಾರ್ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳು ಮತ್ತು ಇತರೆ ಪದಾಧಿಕಾರಿಗಳ ನೇಮಕವೂ ಆಗಿದೆ.. ಎಲ್ಲರಿಗೂ ಗೊತ್ತಿದೆ.. ಧನ೦ಜಯ ಕುಮಾರ್ ಹೆಸರಿಗೆ ಮಾತ್ರ ಅಧ್ಯಕ್ಷರಾಗಿರುವುದು.. ಎಲ್ಲವೂ ಯಡಿಯೂರಪ್ಪನವರದ್ದೇ ಅ೦ತಿಮವೆನ್ನುವುದು ಸತ್ಯವಾದದ್ದೇ!

ಯಡಿಯೂರಪ್ಪನವರ ಹಟವೇ ಅ೦ಥಾದ್ದು! ಚೆಡ್ಡಿ ದೋಸ್ತಿಯಾಗಿದ್ದ ಈಶ್ವರಪ್ಪನವರ ವೈರವನ್ನೂ ಅವರೀಗ ಕಟ್ಟಿಕೊ೦ಡಿದ್ದಾರೆ. ಮು೦ದಿನ ಚುನಾವಣೆಯಲ್ಲಿ  ತನ್ನ ಆ ದೋಸ್ತಿಯ ಎದುರೇ ಸ್ಪರ್ಧಿಸಲೂ ಹಿ೦ದೇಟು ಹಾಕರು ಯಡಿಯೂರಪ್ಪ! ತಾನಿಲ್ಲದ ಬಿ.ಜೆ.ಪಿಯನ್ನು ಯಡಿಯೂರಪ್ಪ ಈಗಾಗಲೇ ಕಲ್ಪಿಸಿಕೊ೦ಡಿದ್ದಾರೆ! ಅದಕ್ಕೆ ತಕ್ಕ೦ತೆ ಅವರ ಈಗಿನ ನಡೆಗಳೂ ಕೂಡಾ! ಅವರನ್ನು ಬಿ.ಜೆ.ಪಿಯಲ್ಲಿಯೇ ಉಳಿಸಿಕೊಳ್ಳಲು ವರಿಷ್ಟರು ಹರಸಾಹಸ ಪಡುತ್ತಿದ್ದಾರೆ! ಸ೦ಧಾನಕ್ಕಾಗಿ ಒಬ್ಬರ ಮೇಲೊಬ್ಬರನ್ನು ಕಳುಹಿಸಿದರೂ ಮುಗುಮ್ಮಾಗಿರುವ ಯಡಿಯೂರಪ್ಪನವರ್ ಮುಖ ಅರಳುತ್ತಿಲ್ಲ. ಅವರಾಗಲೇ ಮಾನಸಿಕವಾಗಿ ಬಿ.ಜೆ,ಪಿ.ಯನ್ನು ಬಿಟ್ಟು ಬಹಳ ದೂರ ಹೋಗಿಯಾಗಿದೆ! ಹಿ೦ದೆ ಬಿ.ಬಿ.ಶಿವಪ್ಪನವರಿಗಾದ ಗತಿಯೇ ಇ೦ದು ಯಡಿಯೂರಪ್ಪನವರಿಗೂ ಆಗಿದೆ. ಬಿ.ಬಿ.ಶಿವಪ್ಪ ಹೊಸ ಪಕ್ಷ ಕಟ್ಟಲಿಲ್ಲ.. ಅದರೆ  ಯಡಿಯೂರಪ್ಪ ಅನಾಥವಾಗಿದ್ದ ಕೆ,ಜಿ.ಪಿ.ಗೆ ಬಲ ತು೦ಬಿದ್ದಾರಷ್ಟೇ!

ಮತ್ತಷ್ಟು ಓದು »

19
ನವೆಂ

ಡಾ ಅಂಬೇಡ್ಕರ್, ಸಾಮರಸ್ಯ ಮತ್ತು ಆರೆಸ್ಸೆಸ್

-ರಾಜೇಶ್  ಪದ್ಮಾರ

ಮಲೆನಾಡಿನ ಪೂರ್ಣಚಂದ್ರ ತೇಜಸ್ವಿ ಇರಲಿ ಕರಾವಳಿಯ  ಪ್ರೊ|| ಅಮೃತ ಸೋಮೇಶ್ವರ ಇರಲಿ ಅಥವಾ ಕೋಲಾರದ ಗುಡಿಬಂಡೆಯ ಡಾ|| ಎಂ.ಟಿ.ಕಾಂಬೈ ಇರಲಿ ‘ಸಾಮರಸ್ಯ’ ನನಗದು ಅತ್ಯಂತ ಪ್ರಿಯವಾದ ಶಬ್ದ ಎನ್ನುವುದುಂಟು. ಅದು ಮನೆಯಲಿರಲಿ, ವ್ಯಾಪಾರವಿರಲಿ ಕೊನೆಗೆ ರಾಜಕಾರಣವೇ ಇರಲಿ ಸಾಮರಸ್ಯಬೇಕು.

ಈ ಸಾಮರಸ್ಯ ಮನುಷ್ಯನಲ್ಲೇ ಇದೆ. ಕಾಲಿರಲಿ, ಕೈಯಿರಲಿ, ತಲೆಯಿರಲಿ ಒಂದಕ್ಕೊಂದು ಪೂರಕವೇ. ಕಾಲಿಗೆ ಮುಳ್ಳು ಚುಚ್ಚಿದಾಗ ಕೈ ‘ತನಗೇನೂ ಆಗಿಲ್ವಲ್ಲ’ ಎಂದು ಸುಮ್ಮನಿರುವುದಿಲ್ಲ. ಹೀಗೆ ಒಂದಕ್ಕೊಂದು, ಒಬ್ಬರಿಗೊಬ್ಬರು ಪೂರಕವಾಗಿ ಯೋಚಿಸುವುದು, ನೆರವಿಗೆ ಮುಂದಾಗುವುದೇ ಸಾಮರಸ್ಯ. ಶರೀರದಲ್ಲಿರುವ ಈ ಸಮರಸತೆ, ಸಮಾಜದಲ್ಲೂ ಬರಬೇಕಷ್ಟೆ.

ಹಾಗೇ ಸಮಾಜ ಸಾಮರಸ್ಯದಿಂದಿರಲು ತೊಡಕುಗಳೂ ಇವೆ. ವಿದ್ಯೆ, ಆಸ್ತಿ, ಅಂತಸ್ತು, ಜಾತಿ, ಭಾಷೆ ತೊಡಕು ತಂದುಹಾಕುತ್ತೇವೆ. ವಿದ್ಯೆ, ಸಿರಿವಂತಿಕೆ ಇದೆಯಲ್ಲ ಅದು ಅವರವರು ಗಳಿಸಿದ್ದು, ಆದರೆ ಜಾತಿ- ಅದು ಗಳಿಸಿದ್ದಲ್ಲ. ಅದು ಹುಟ್ಟಿದಾಗ ಅಂಟಿಕೊಂಡಿದ್ದು.

‘ಮಂಡಲ್ ವರದಿ’ ಖ್ಯಾತಿಯ ಆ ಬಿಂದೇಶ್ವರ ಪ್ರಸಾದ್ ಮಂಡಲ್ ಪ್ರಕಾರ ಭಾರತದಲ್ಲಿ 5600 ಜಾತಿಗಳು. ಜಾತಿ ಇರೋದೆ ತಪ್ಪಾ? ಹಾಗೆ ಹೇಳೋರು ಇದಾರೆ. ಅವರೊಂದಿಗೆ ಹೊಸ ಜಾತಿನೇ ಆಗಿದ್ದಾರೆ. ಯಾವುದರಲ್ಲಿ ಜಾತಿ ಇಲ್ಲ? ಭತ್ತದಲ್ಲಿ ಅದೆಷ್ಟು ನಮೂನೆ? ಮಾವಿನಹಣ್ಣಿನಲ್ಲಿ ಅದೆಷ್ಟು ಥರಾ? ಬದನೆಕಾಯಿಯಲ್ಲೂ ಅದೆಷ್ಟು ರೀತಿ? ಹೋಗಲಿ ನಮ್ಮ ದೇಶದ ಮಣ್ಣಿದೆಯಲ್ಲ ಅದೆಷ್ಟು ಬಗೆ? ಈ ನಮೂನೆ, ಥರ, ಬಗೆ, ರೀತಿಗಳೇ ಜಾತಿಗಳಾಗೋದು. ಬಣ್ಣವೋ, ರುಚಿಯೋ, ಗುಣ ಸ್ವಭಾವವೋ  ಜಾತಿ ಆಗಿಬಿಡುತ್ತದೆ ಸರಿ. ಆದರೆ ‘ನಾನೇ ಮೇಲು’ ಎಂಬ ಈ ‘ಶ್ರೇಷ್ಠತೆಯ ವ್ಯಸನ’ ಇದೆಯಲ್ಲ ಇದು; ವಿವೇಕ’ ಇರೋ ಮನುಷ್ಯ ಸಂಕುಲದಲ್ಲಿ ಮಾತ್ರ. ಅದು ಯಾವುದೇ, ಯಾರದೇ ಭಾಷಣವಿರಲಿ ಸಾಮಾನ್ಯವಾಗಿ ಶುರುವಾಗುವುದು ‘ಅಣ್ಣತಮ್ಮಂದಿರೇ’ ಎಂದಲ್ಲವೇ? ಆಸ್ತಿ ಹಂಚಿಕೊಳ್ಳುವುದು ಬೇಡ ಸ್ವಾಮಿ, ಒಟ್ಟಿಗೆ ಕೂತು ಒಂದೇ ಸಾಲಿನಲ್ಲಿ ಊಟ ಮಾಡಲೇನು ಅಡ್ಡಿ? ಹೆಗಲ ಮೇಲೆ ಕೈಹಾಕಿ ಪ್ರೀತಿಯಿಂದ ಮಾತನಾಡಿಸಲೇನು ಸಂಕಟ? ನಮ್ಮೂರ ದೇವಸ್ಥಾನಕ್ಕೆ ಇದೇ ಅಣ್ಣತಮ್ಮಂದಿರೆಲ್ಲ ಬಂದರೇಕೆ ಕಿರಿಕಿರಿ?

ಸಮಸ್ಯೆ ಇರುವುದೇ ಈ ನಡೆನುಡಿಯ ನಡುವಿನ ಅಂತರದಲ್ಲಿ. ಅಸಲಿಗೆ ನಮ್ಮ ವೇದಗಳು, ಉಪನಿಷತ್ತುಗಳು ಜಗತ್ತಿನ ಹಿತವನ್ನೇ ಮಾತನಾಡುತ್ತವೆ. ಆದರೆ ವೇದದ ವಕ್ತಾರಿಕೆ ಹಿಡಿದೋರು ಜಗತ್ತಿನಲ್ಲಿ ಪಕ್ಕದ ಕೇರಿಯವನನ್ನೂ ಹತ್ತಿರ ಸೇರಿಸುವುದಿಲ್ಲ, ಶರಣರನ್ನು, ವಚನಕಾರರನ್ನು ಕಂಠಪಾಠ ಮಾಡಿರೋರು ಇದಾರೆ, ಅರ್ಥ ತಿಳಿದು ಆಚರಿಸುವವರನ್ನು ಹುಡುಕಬೇಕಷ್ಟೆ. ಕೋಲಾರ ಜಿಲ್ಲೆಯಲ್ಲಿ ಬಸ್ಸಿನಲ್ಲೊಮ್ಮೆ ಪ್ರಯಾಣಸಾಗಿತ್ತು. ಹಳ್ಳಿಯೊಂದರಲ್ಲಿ ಬಸ್ಸು ನಿಂತಾಗ ಕೆಲವು ಕಾಲೇಜು ಹುಡುಗರು ಹತ್ತಿದರು. ಹಾಗೆ ಬಂದು ಪಕ್ಕದಲ್ಲಿ ಕೂತವನ ಹತ್ತಿರ ಮಾತಿಗಿಳಿದಿದ್ದೆ. ಹೆಸರು, ಊರು, ಕಾಲೇಜು, ಕೋರ್ಸು, ಕಾಂಬಿನೇಶನ್ ಕೇಳುತ್ತಲೇ ‘ನಿಮ್ಮ ಊರಲ್ಲೊಂದು ಚರ್ಚ್ ಆಗಿದೆಯಂತಲ್ಲ, ಹೌದಾ?’ ಎಂದೆ. ಮತ್ತಷ್ಟು ಓದು »

18
ನವೆಂ

ಸತ್ತ ನಂತರ ‘ಒಳ್ಳೆಯವರಾಗಿಬಿಡುವ’ ಪರಿಗೆ ಅಚ್ಚರಿಗೊಳ್ಳುತ್ತ….

ಡಾ ಅಶೋಕ್ ಕೆ ಆರ್

‘ಸತ್ತವರ ಬಗ್ಗೆ ಕೆಟ್ಟದ್ದಾಡಬಾರದಂತೆ’; ಅವರು ಬದುಕಿದ್ದಾಗ ಕೆಟ್ಟವರಾಗಿದ್ದಾಗಲೂ ಸಹ! ವ್ಯಕ್ತಿಯೇ ಸತ್ತು ಹೋದ ಮೇಲೆ ಆತನ ಹಳೆಯ ಪುರಾಣಗಳನ್ನು ಕೆದಕುವುದು ಬೇಡವೆಂಬ ಭಾವನೆಯನ್ನೇನೋ ಒಪ್ಪಬಹುದು ಆದರೆ ಇದ್ದ – ಇರದ – ಸೃಷ್ಟಿಸಲ್ಪಟ್ಟ ವಿಶೇಷಣಗಳನ್ನೆಲ್ಲ ಸತ್ತ ವ್ಯಕ್ತಿಯ ವ್ಯಕ್ತಿತ್ವಕ್ಕೆ ಆರೋಪಿಸಿ ಸತ್ತವರಿಗೇ ಬೇಸರ ಬರಿಸುವಷ್ಟು ಹೊಗಳುವುದು ಎಷ್ಟರಮಟ್ಟಿಗೆ ಸರಿ?! ಶಿವಸೇನೆ ಮುಖ್ಯಸ್ಥ ಬಾಳ ಠಾಕ್ರೆಯ ಮರಣದ ನಂತರ ಪತ್ರಿಕೆಗಳಲ್ಲಿ, ಅಂತರ್ಜಾಲದಲ್ಲಿ ಬಾಳ ಠಾಕ್ರೆಯ ಬಗ್ಗೆ ಬರುತ್ತಿರುವ ವರದಿಗಳನ್ನು ಓದಿದರೆ ನಮ್ಮ ಸಮಾಜದ ಅಧಃಪತನದ ಮನಸ್ಥಿತಿಯ ಪ್ರತಿಬಿಂಬದಂತೆಯೇ ಕಾಣಿಸುತ್ತಿದೆ.

‘ಮರಾಠಿ ಮಾನೂಸ್’ ಸೃಷ್ಟಿಸಿ ಅದರ ಬೆಂಕಿಯಲ್ಲೇ ರಾಜಕೀಯದಾಟವಾಡಿದ, ಹಿಂದೂ ಮುಸ್ಲಿಮರ ದ್ವೇಷ ಹೆಚ್ಚಳಕ್ಕೆ ತನ್ನ ಕೈಲಾದ ಸಹಾಯ ಮಾಡಿದ ವ್ಯಕ್ತಿಯೊಬ್ಬ ಇಂದು ರಾಷ್ಟ್ರನಾಯಕರಂತೆ, ದೇಶಭಕ್ತನಂತೆ ಚಿತ್ರಿಸಲ್ಪಡುತ್ತಿದ್ದಾರೆ. ಶಿವಸೇನೆಯ ಕಟ್ಟರ್ ಹಿಂದುತ್ವದ ಬೆಂಬಲಿಗರು ಠಾಕ್ರೆಯ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ ಲಕ್ಷಾಂತರ ಜನರನ್ನು ತೋರಿಸುತ್ತ ಆತ ಒಬ್ಬ ಮಹಾನ್ ನಾಯಕನೇ ಹೌದು ಎಂದ್ಹೇಳಬಹುದು. ಹಿಟ್ಲರನಿಗೂ ಅಪಾರ ಸಂಖ್ಯೆಯ ಬೆಂಬಲಿಗರಿದ್ದರು ಮತ್ತು ಬಾಳ ಠಾಕ್ರೆ ಸಂದರ್ಶನಗಳಲ್ಲಿ ಹಿಟ್ಲರನನ್ನು ಹಾಡಿ ಹೊಗಳಿದ್ದೂ ಇದೆ! ಮತ್ತಷ್ಟು ಓದು »

13
ನವೆಂ

ಬಿಟ್ಟೇ ಹೋಗುವ ಬೆಂಗಳೂರು ಅರಮನೆ

-ಪ್ರಶಸ್ತಿ ಪಿ ಸಾಗರ

ಬೆಂಗಳೂರು ಅರಮನೆ

ಬೆಂಗಳೂರಲ್ಲಿ ಲಾಲ್ ಬಾಗ್ , ವಿಧಾನ ಸೌಧ, ಕಬ್ಬನ್ ಪಾರ್ಕ್ ಗೊತ್ತು. ಇದೆಲ್ಲಿಂದ ಬಂತಪ ಅರಮನೆ ಅಂದ್ಕಂಡ್ರಾ ? ಮೈಸೂರು ಅರಮನೆ ಬಗ್ಗೆ ಬರೆಯೋಕೆ ಪೀಟಿಕೆ ಹಾಕ್ತಿದೀನಿ ಅಂದ್ಕಂಡ್ರಾ ? ಇಲ್ಲ ಸ್ವಾಮಿ . ನಾ ಹೇಳೋಕೆ ಹೊರಟಿರೋದು ಅರಮನೆ ರೋಡಲ್ಲಿರೋ ಮಹಾರಾಜರ ಬೇಸಿಗೆ ಅರಮನೆ ಬಗ್ಗೆನೇ . ಟಿಪ್ಪು ಅರಮನೆ ಅಂತ ಮಾರ್ಕೆಟ್ ಹತ್ರ ಇದ್ಯಲ ಅಂದ್ರ್ರ ? ಅದ್ರ ಬಗ್ಗೆನೂ.. ಹರಿಕತೇನೆ ನಿಮಗೆ ನಿದ್ದೆ ತರಿಸೋ ಮೊದ್ಲು ಅರಮನೆಗೆ ವಾಪಾಸ್ ಬರೋಣ.

ಹಿಂದಿನ ವಾರ ನಾವು ಗೆಳೆಯರು ಬೆಂಗಳೂರು ಅರಮನೆಗೆ ಹೋಗಿದ್ವಿ .ಮೂರು ಬಣ್ಣದ ರಕ್ಷಕರ ಭದ್ರತೆ ಕಾಣ್ತಿತ್ತು ಹೊರಗಿಂದ . ಗೂಗಲ್ ದೈವ ದಯಪಾಲಿಸಿದ್ದ ಚಿತ್ರಗಳನ್ನ್ನು ನ್ನೋಡಿಯೇ   ಕೆರಳಿದ್ದ ನಮ್ಮ ಕುತೂಹಲ ಪೋಲಿಸ್ ಮಾವಂದಿರ ದರ್ಶನದಿಂದ  ಇನ್ನು ಹೆಚ್ಚಾಯ್ತು. ಹೊರಗಿನಿಂದಲೂ ಚಿತ್ರ ತೆಗೆಯಕ್ಕೆ ಬಿಡಲಿಲ್ಲ ಅಲ್ಲಿ ಸಿಬ್ಬಂದಿ. ಅದರೂ ಮೊಬೈಲ್ ಕ್ಯಾಮರ ಸಮಾಧಾನಿಸುತ್ತ ಒಳ ಸಾಗಿದ ನಮಗೆ ಮತ್ತೊಂದು ಬೇಸರ ಕಾದಿತ್ತು. ಪ್ರವೇಶ ಶುಲ್ಕ ೨೦೦ ರೂ. ಮೈಸೂರು ಅರಮನೆಯಲ್ಲೂ ನೂರರ ಮೇಲಿಲ್ಲ . ತಾಜಮಹಲ್ , ಕೆಂಪುಕೋಟೆ  ಹೀಗೆ ಭಾರತದಲ್ಲೇ ಭಾರತೀಯರಿಗೆ ಎಲ್ಲೂ ಇರದಷ್ಟು ಶುಲ್ಕ ಇಲ್ಲಿ !! ಆದರೆ ಬರೋದು ಬಂದಾಗಿದೆ .ನೋಡ್ಕೊಂಡೆ ಹೋಗೋದು ಅಂತ ತೀರ್ಮಾನ ಮಾಡಿದ್ವಿ. ಗೆಳೆಯರ ಹತ್ರ ಇದ್ದ ಬದ್ದ ದುಡ್ಡೆಲ್ಲ ಗುಡ್ಡೆ ಹಾಕಿ ಅಂತೂ ಒಳಗೆ ಸೇರಿದ್ವಿ. ಅಲ್ಲಿರೋ ಎಲ್ಲದರ ಮಾಹಿತಿ ಇದ್ದ ಆಡಿಯೋ ಗೈಡ ಉಚಿತ ಅನ್ನೋದಷ್ಟೇ ಅವಾಗಿದ್ದ ಸಮಾಧಾನ.

ಮೊದಲ್ನೇ ಜಾಗ ಅಂದ್ರೆ ಮತ್ತೆ ಹೊರಬಾಗಿಲಿಗೆ ಬಂದ್ವಿ. ಈ ಅರಮನೆಯನ್ನು  ೧೮೭೩ರಲ್ಲಿ ಕಟ್ಟಲಾಯಿತಂತೆ. ಅದನ್ನು ಕಟ್ಟಿದ ಪರಿ, ಆಗಿನ ರಾಜ ವೊಡೆಯರರ ಮೈಸೂರು ಸಂಸ್ಥಾನದ ಪರಿ, ನೀರಾವರಿಯಿಂದ , ಅಭಿವೃದ್ದಿ ಯೋಜನೆಗಳೆಡೆಗೆ ಸಂಸ್ಥಾನ ಗಮನ ಹರಿಸಿದ ರೀತಿಯನ್ನು ಕೇಳುತ್ತ ಅಭಿಮಾನ ಕನಕಣದಲ್ಲೂ ಉಕ್ಕಿದ ಅನುಭವ. “ಅಪಾರ ಕೀರ್ತಿಯಿಂದ ಮೆರೆವ ದಿವ್ಯ ನಾಡಿದು ” .. ಹಾಡಿನ ಹಿಮ್ಮೇಳ ಕೇಳಿದಂತಾಯ್ತು   ಒಮ್ಮೆ . ಮತ್ತಷ್ಟು ಓದು »

7
ನವೆಂ

ಜ್ಞಾನಿಗಳಿಗೆ ಸಾವಿಲ್ಲ. ಆದರೆ ಗಡ್ಕರಿ, ದಾವೂದ್ ನಂತಹ ಬುದ್ದಿವಂತರಿಗೆ ಸಾವಿದೆ!

– ಮಹೇಂದ್ರ ಕುಮಾರ್

           ಸ್ವಾಮಿ ವಿವೇಕಾನಂದರು ಮತ್ತು ದಾವೂದ್ ಇಬ್ರಾಹಿಂ, ಇಬ್ಬರೂ ಸಮಾನ ಬುದ್ದಿವಂತರು. ಸ್ವಾಮಿ ವಿವೇಕಾನಂದರು ತಮ್ಮ ಬುದ್ದಿವಂತಿಕೆಯನ್ನು ಸದುಪಯೋಗ ಪಡಿಸಿಕೊಂಡರು. ಆದರೆ ದಾವೂದ್ ಇಬ್ರಾಹಿಂ ದುರುಪಯೋಗ ಪಡಿಸಿಕೊಂಡ. ಈ ಹೇಳಿಕೆಯನ್ನು ದೇಶದ ಮಹಾನ್ ರಾಷ್ಟ್ರಭಕ್ತಿಯ  ಪ್ರತೀಕ ಎಂದು ಹೇಳಿಕೊಳ್ಳುವ ಭಾರತೀಯ ಜನತಾಪಕ್ಷದ, ಆರ್ ಎಸ್ ಎಸ್ ಗರಡಿಯಲ್ಲಿ ಪಳಗಿ ಏಕಾಏಕಿ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಬಾಯಿಂದ ಉದುರಿರುವ ಅಣಿಮುತ್ತುಗಳು..

ಹೇಳಿಕೇಳಿ ಈತ ದೇಶಭಕ್ತರನ್ನು ಹುಟ್ಟು ಹಾಕುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾಳು. ಪ್ರತೀ ವರ್ಷ ವಿವೇಕಾನಂದ ಜಯಂತಿಯನ್ನು ಆಚರಿಸುವ ಪಕ್ಷದ ರಾಷ್ಟ್ರನಾಯಕ. ಇಷ್ಟೇ ಅಲ್ಲದೇ ರಾಷ್ಟ್ರೀಯ  ಕಾರ್ಯಕಾರಣಿಗಳಿಂದ ಹಿಡಿದು ಸಣ್ಣ ಸಣ್ಣ ಕಾರ್ಯಕ್ರಮಗಳವರೆಗೂ ವಿವೇಕಾನಂದರ ಭಾವಚಿತ್ರಗಳನ್ನು ಬಳಸಿಕೊಳ್ಳುವ ರಾಜಕೀಯ ಪಕ್ಷದ ಮುಂದಾಳು.

ಈ ಹೇಳಿಕೆಯನ್ನು ಕೊಡುವಾಗ ಒಂದೋ ತಲೆ ಕೆಟ್ಟಿರಬೇಕು, ಇಲ್ಲವಾದಲ್ಲಿ ವಿವೇಕಾನಂದರ ಬಗ್ಗೆ ಮತ್ತು ಅವರ ಆದರ್ಶ ಚಿಂತನೆಗಳ ಬಗ್ಗೆ ಯಾವುದೇ ಅರಿವಿಲ್ಲದೇ ಒಬ್ಬ ಸಾದಾರಣ ಇವರ ನಾಯಕರೆಂದು ಭಾವಿಸಿರಬೇಕು.. ವಿವೇಕಾನಂದರ ಬಗ್ಗೆ ಸಣ್ಣ ಅರಿವೂ ನಿತಿನ್ ಗಡ್ಕರಿಗೆ ಇದ್ದಿದ್ದೇ ಆದಲ್ಲಿ ಆತನ ಬಾಯಿಂದ ಈ ಮಾತುಗಳು ಹೊರಬರುತ್ತಿರಲಿಲ್ಲ. ಇವರುಗಳಿಗೆ ಆದರ್ಶ ವ್ಯಕ್ತಿಗಳು ಬಳಕೆಗೆ ಮಾತ್ರಾ…

ಮತ್ತಷ್ಟು ಓದು »

5
ನವೆಂ

ಗಡ್ಕರಿಯ ಅ”ವಿವೇಕ” ಮತ್ತು ಸಂಘದ “ಸ್ವಾಮಿ”ನಿಷ್ಠೆ…!

– ರಾಕೇಶ್ ಶೆಟ್ಟಿ

“ಇನ್ನೊಬ್ಬ ವಿವೇಕಾನಂದನಿದ್ದಿದ್ದರೆ ಅವನಿಗೆ ತಿಳಿಯುತಿತ್ತು – ಈ ವಿವೇಕಾನಂದ ಏನು ಮಾಡಿದ್ದಾನೆ ಎಂದು… ಇರಲಿ, ಕಾಲಾಂತರದಲ್ಲಿ ಮತ್ತೆಷ್ಟು ಮಂದಿ ವಿವೇಕಾನಂದರು ಉದಿಸಲಿರುವರೋ!” ಸ್ವಾಮೀಜಿ ದೇಹತ್ಯಾಗದ ದಿನ ತಮ್ಮಷ್ಟಕ್ಕೆ ತಾವೇ ಹೇಳಿಕೊಂಡ ಮಾತುಗಳಿವು. ನಿಜ ವಿವೇಕಾನಂದ ಮಾಡಿ ಹೋಗಿದ್ದೇನು? ಯಾರನ್ನಾದರು ಕೇಳಿ ನೋಡಿ, ತಟ್ಟನೆ “ಅವರು ಸರ್ವ ಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದರು” ಅಂತಲೇ ಹೇಳುತ್ತಾರೆ..ಮುಂದೇನು ಮಾಡಿದ್ದರು ಅಂತ ಕೇಳುವಷ್ಟರಲ್ಲಿ ಮಾತು ತಡವರಿಸುತ್ತದೆ… ಬಹುಷಃ ಇದೆಲ್ಲವನ್ನೂ ಅರಿತೇ ಸ್ವಾಮೀಜಿ ಬಹುಷಃ ಮೇಲಿನ ಮಾತನ್ನು ಹೇಳಿದ್ದರು ಅನ್ನಿಸುತ್ತದೆ.

ಆದರೆ,ಮುಂದೊಂದು ದಿನ ತಾನು ಪ್ರತಿಪಾದಿಸುತ್ತಿರುವ “ರಾಷ್ಟ್ರೀಯತೆ(?)” ಅನ್ನುವ ಪದವನ್ನು ಹಿಡಿದು ಪಕ್ಷವೊಂದು ಉದಯಿಸಬಹುದು ಮತ್ತು ಅದಕ್ಕೊಬ್ಬ ಮೇಧಾವಿ ಅಧ್ಯಕ್ಷ ಬಂದು ಅವನು “ಸ್ವಾಮಿ ವಿವೇಕಾನಂದರ ಬುದ್ದಿಮತ್ತೆಯನ್ನು ಮುಂಬೈನ ಕಪ್ಪು ಜಗತ್ತಿನ ಕಳ್ಳನಾಗಿದ್ದವನ ಬುದ್ದಿ ಮತ್ತೆಗೆ ಸರಿಸಮ” ಅಂತೇಳಬಹುದು ಅನ್ನುವುದನ್ನು ಮಾತ್ರ ಊಹಿಸಿರಲಿಕ್ಕಿಲ್ಲ…!

ಮತ್ತಷ್ಟು ಓದು »

29
ಆಕ್ಟೋ

ಯಡಿಯೂರಪ್ಪರ ಹೊಸ ಪಕ್ಷವೂ..ರಾಜ್ಯ ರಾಜಕೀಯ ಜಂಜಾಟವೂ..!

– ಶಂಶೀರ್ ಬುಡೋಳಿ

ರಾಜ್ಯ ಬಿಜೆಪಿಯ ಆಡಳಿತಾವಧಿಯ ಕಾಲಾವಧಿ ಮುಗಿಯುತ್ತಾ ಬಂದಿದೆ..ಜೊತೆಗೆ ದಿ ಗ್ರೇಟ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಬ್ಲಾಕ್‌ಮೇಲ್ ರಾಜಕಾರಣ ಕೂಡಾ ಹೆಚ್ಚಾಗ್ತಾ ಇದೆ. ಹಗರಣದ ಆರೋಪ ಮೈಮೇಲೆ ಬಂದಾಗ ಅನಿವಾರ್ಯವಾಗಿ ಸಿಎಂ ಪಟ್ಟದಿಂದ ಕೆಳಗಿಳಿಯುವಾಗ ಬಿಜೆಪಿ ಹೈಕಮಾಂಡ್ ನಿಮಗೆ ಸೂಕ್ತ ಸ್ಥಾನಮಾನ ನೀಡುತ್ತೇವೆಂದು ಭರವಸೆ ನೀಡಿತ್ತೆಂದು ಹಲವಾರು ಬಾರಿ ಯಡಿಯೂರಪ್ಪರೇ ಹೇಳಿದ್ದರು. ಇದನ್ನೇ ಅಸ್ತ್ರವಾಗಿಟ್ಟುಕೊಂಡು ಮಾಜಿ ಸಿಎಂ ‘ಹಠ’(ಯಡಿ)ಯೂರಪ್ಪ ಬಿಜೆಪಿಯನ್ನ ತೊರೆದು ಕೆಜೆಪಿ ಎಂಬ ಸ್ವಪಕ್ಷ ಕಟ್ಟುವ ಮೂಲಕ ಬಿಜೆಪಿ ಹೈಕಮಾಂಡ್‌ಗೆ ಸವಾಲು ಎಸೆದಿದ್ದಾರೆ..ಅದಕ್ಕೂ ಮುನ್ನಾ ಹೈಕಮಾಂಡ್‌ಗೆ ತನಗೆ ಸೂಕ್ತ ಸ್ಥಾನಮಾನ ನೀಡುವುದರ ಬಗ್ಗೆ ಬೇಗ ಯೋಚಿಸಿ ಅಂತಾ ಎಚ್ಚರಿಕೆ ಕೊಟ್ಟು ತಾನೇ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನ ಆಡಳಿತಕ್ಕೆ ತಂದಂತೆ ವರ್ತಿಸುತ್ತಿದ್ದಾರೆ. ನಿಜಕ್ಕೂ ಯಡಿಯೂರಪ್ಪಗೆ ಮಾನ ಮರ್ಯಾದೆ ಎನ್ನುವುದು ಇಲ್ಲವೇ..?

ಮಾಜಿ ಸಿಎಂ ಯಡಿಯೂರಪ್ಪನವರು ಬಿಜೆಪಿ ಹೈಕಮಾಂಡ್‌ನಿಂದ ಮುನಿಸಿಕೊಂಡು ಪ್ರತ್ಯೇಕ ಪಕ್ಷವನ್ನ ಕಟ್ಟುವ ದೊಡ್ಡ ಸಾಹಸಕ್ಕೆ ಕೈಹಾಕಿದ್ದಾರೆ. ನಿಜಕ್ಕೂ ಇದು ರಾಜ್ಯ ರಾಜಕೀಯದಲ್ಲಿ ಹೊಸ ಶಕೆಯನ್ನ ಆರಂಭಿಸಲಿದೆಯೇ..? ಎಂಬ ಪ್ರಶ್ನೆ ಉದ್ಭವವಾಗಿದೆ. ಇದಕ್ಕೆ ಉತ್ತರ ನಿಜಕ್ಕೂ ಇಲ್ಲ..ಯಾವ ಯಡಿಯೂರಪ್ಪ ತಾನು ಬಿಜೆಪಿಯಿಂದಲೇ ಬೆಳೆದು ಬಂದಿರುವುದನ್ನೇ ಮರೆತುಕೊಂಡು ತಾನು ಕುಣಿಸಿದ ಹಾಗೇ ಶೆಟ್ಟರ್ ಹಾಗೂ ಹೈಕಮಾಂಡ್ ಆಡಿಲ್ಲವೆಂದು ಮುನಿಸಿಕೊಂಡು ಅದಕ್ಕಿಂತಲೂ ಹಠ ಮಾಡಿಕೊಂಡು ಹೊಸ ಪಕ್ಷ ಕಟ್ಟುವುದಕ್ಕೆ ಮುಂದಾಗಿದ್ದು ಇವರ ಮೂರ್ಖತನಕ್ಕೊಂದು ಸಾಕ್ಷಿ. ಬಳ್ಳಾರಿ ಗ್ರಾಮಾಂತರ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಶ್ರೀರಾಮುಲು ‘ಬಿಎಸ್‌ಆರ್’ ಪಕ್ಷವನ್ನು ಸ್ಥಾಪನೆ ಮಾಡಿದ ವೇಳೆ ರಾಜ್ಯದಲ್ಲಿ ಬದಲಾವಣೆ ಆಗುತ್ತದೆಂದು ಭಾವಿಸಲಾಗಿತ್ತು. ಆದರೆ ಇಂದು ಈ ಪಕ್ಷ ಪ್ರಾಥಮಿಕ ಮಟ್ಟದಿಂದಲೇ ಬೇರೂರಲು ಇನ್ನು ಸಾಧ್ಯವಾಗಿಲ್ಲ. ಇನ್ನು ರಾಜ್ಯ ಬಿಜೆಪಿ ಹಾಗೂ ಯಡಿಯೂರಪ್ಪರ ವಿಷಯಕ್ಕೆ ಬರುವುದಾದರೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಮನದಲ್ಲಿ ಏನೇನೋ ಇದೆ..ಮಾತು ಮೊದಲೇ ಹೇಳಿಬಿಡಲು ಕಾರಣನೂ ಇದೆ. ‘ನಾನು ಪಕ್ಷ ಬಿಟ್ಟು ಹೋಗುತ್ತಿದ್ದೇನೆ. ಯಾರಿಗೆ ಬೇಕಾಗಿದೆ ಬಿಜೆಪಿ. ನನಗೆ ಮಾಡಿದ ಅಪಮಾನಕ್ಕಾಗಿ ಪಕ್ಷ ಬಿಡುತ್ತಿದ್ದೇನೆ’ ಎಂದು ತಾನು ಬೆಳೆದು ಬಂದ ಪಕ್ಷದ ವಿರುದ್ಧನೆ ಇತ್ತೀಚಿಗಷ್ಟೇ ಶಿವಮೊಗ್ಗದಲ್ಲಿ ಹೇಳಿಕೆ ನೀಡಿ ತಾನಿಲ್ಲದೇ ಬಿಜೆಪಿ ಪಕ್ಷ ರಾಜ್ಯದಲ್ಲಿರಲು ಸಾಧ್ಯನೇ ಇಲ್ಲ ಅಂತಾ ಫೋಸು ಕೊಡುತ್ತಿರುವ ಯಡಿಯೂರಪ್ಪರ ಮೊಸಳೆ ಕಣ್ಣೀರು ಜನರಿಗೆ ಅರ್ಥವಾಗಲ್ಲವೇ..? ಮತ್ತಷ್ಟು ಓದು »