ದೆಹಲಿಗೂ ಹರಿಯಲಿ ಕಾವೇರಿ; ಇಲ್ಲದೇ ಹೋದರೆ ಸೋಲುವಿರಿ
-ರಾಕೇಶ್ ಎನ್ ಎಸ್
ಗಂಗಾ, ಯಮುನಾ ನದಿಗಳ ಹೆಸರು ಕೇಳಿದರೆ ನಿಮಗೆ ಯಾವುದಾದರೂ ರಾಜ್ಯದ ನೆನಪು ಆಗುತ್ತದೆಯೇ ಎಂದು ಹಿರಿಯ ಪತ್ರಕರ್ತರೊಬ್ಬರು ಕೇಳಿದರು. ನಾನು ಅವಾಕ್ಕಾದೆ. ಗಂಗಾ ನದಿಯೂ ಉತ್ತರಾ ಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಗಳಲ್ಲಿ ಜೀವ ನದಿಯಾಗಿ ಹರಿಯುತ್ತದೆ. ಉತ್ತರಾ ಖಂಡ, ಉತ್ತರ ಪ್ರದೇಶ, ಹರಿಯಾಣ, ದೆಹಲಿಗಳಿಗೆ ಯಮುನೆಯ ಜೀವದಾಯಿ. ಮಾತು ಮುಂದುವರಿಸಿದ ಅವರು ನನಗೆ ಕಾವೇರಿ ಅಂದರೆ ತಮಿಳುನಾಡಿನ ನೆನಪಾಗುತ್ತದೆ ಎಂದರು. ಹೌದು, ಕಾವೇರಿ ನದಿ ಸಂಪೂರ್ಣವಾಗಿ ತಮಿಳುನಾಡಿಗೆ ಸೇರಿದಾಗಿದ್ದು, ಕರ್ನಾಟಕ ಸುಮ್ಮನೆ ಕಿರಿಕ್ ಮಾಡುತ್ತಿದೆ ಎಂಬ ಭಾವನೆ ಕರ್ನಾಟಕದ ಹೊರಗೆ ಮಡುಗಟ್ಟಿದೆ ಎಂಬುದನ್ನು ಅವರು ನನಗೆ ಸೂಚ್ಯವಾಗಿ ಮನದಟ್ಟು ಮಾಡಿಕೊಟ್ಟಿದ್ದರು.

ಬಿಜೆಪಿಯ ಅಪಸ್ವರಕ್ಕೆ ‘ಆರ್.ಎಸ್.ಎಸ್’ನದ್ದೇ ಟ್ಯೂನ್
– ರಾಕೇಶ್ ಶೆಟ್ಟಿ
ಅಂದು ಪಾಕಿಸ್ತಾನದ ನೆಲದಲ್ಲಿ ನಿಂತು “ಜಿನ್ನಾ ಜಾತ್ಯಾತೀತರಾಗಿದ್ದರು” ಅನ್ನುವ ಸತ್ಯ ಹೇಳಿದ್ದೆ ಆ ಹಿರಿಯ ಮಾಡಿದ ದೊಡ್ಡ ತಪ್ಪು(!).ಆ ಒಂದು ಮಾತು ಅವರು ಅಲ್ಲಿವರೆಗೂ ದೇಶದ ಮೂಲೆ ಮೂಲೆಗೆ ಹೋಗಿ ಅವರು ಪಕ್ಷಕಟ್ಟಲು ಪಟ್ಟ ಶ್ರಮ,೨ ಸೀಟಿನಿಂದ ಅಧಿಕಾರದ ಚುಕ್ಕಾಣಿ ಹಿಡಿಯುವವರೆಗೂ ಪಕ್ಷ ಸಾಗಿ ಬಂದ ಹಾದಿಯಲ್ಲಿ ಅವರು ವಹಿಸಿದ ಜವಬ್ದಾರಿ ಎಲ್ಲವನ್ನು ಮರೆಸಿಹಾಕಿತ್ತು.ಧುತ್ತನೆ ಅವರ ಮಾತೃ ಸಂಘಟನೆಗೆ ಈ ಹಿರಿಯ ನಾಯಕ ಮತ್ತು ಮುಂದಿನ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿಯಾಗಿದ್ದವರಿಗೆ ವಯಸ್ಸಾಯಿತು ಅನ್ನುವ ಜ್ನಾನೋದಯ ಅರ್ಧ ರಾತಿಯಲ್ಲಿ ಆಗಿಬಿಟ್ಟಿತ್ತಲ್ಲ,ಅಷ್ಟೇ ಸಾಕಿತ್ತು ಅವಮಾನಕಾರಿಯಾಗಿ ಅವರನ್ನು ಪಕ್ಕಕ್ಕೆ ತಳ್ಳಿ,ಅಲ್ಲಿಯವರೆಗೂ ಮಹಾರಾಷ್ಟ್ರ ಬಿಟ್ಟು ಹೊರಗೆ ಹೆಸರೇ ಕೇಳಿರದ ‘ಯುವ ನಾಯಕ(?)’ ನನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು.
ಇವತ್ತಿಗೆ ‘ಆ ಹಿರಿಯ’ರನ್ನು ಮರೆತು ಮುಂದೆ ಹೋದ ಆ ಪಕ್ಷದ ಪಾಡು, ಅಹಂಕಾರದಿಂದ ಕೃಷ್ಣ ಪರಮಾತ್ಮನನ್ನು ಬಿಟ್ಟು ಬಿಲ್ವಿದ್ಯೆ ಮರೆತು ನಿಂತ ‘ಅರ್ಜುನ’ನಂತೆಯೇ ಆಗಿದೆ.ಕೂದಲು ಬೆಳೆಯೋ ಜಾಗವೆಲ್ಲ ತಲೆ ಅಂದುಕೊಂಡವರಂತೆ ಆ ಪಕ್ಷದಲ್ಲಿರುವ ಜನರೆಲ್ಲಾ ತಾವೇ ‘ಪ್ರಧಾನಿ ಅಭ್ಯರ್ಥಿ’ಗಳು ಅಂದುಕೊಂಡಿದ್ದಾರೆ.ಅಂದ ಹಾಗೆ,ಆ ಹಿರಿಯರ ಹೆಸರು ಲಾಲ್ ಕೃಷ್ಣ ಅಡ್ವಾಣಿ,ಪಕ್ಷ ಬಿಜೆಪಿ,ಮಾತೃ ಸಂಘಟನೆಯ ಹೆಸರು ‘ಆರ್.ಎಸ್.ಎಸ್’ ಮತ್ತೆ ಆ ಯುವನಾಯಕ(?) ಮೊನ್ನೆ ಮೊನ್ನೆ ತಾನೇ ಎಕರೆಗಟ್ಟಲೆ ರೈತರ ಜಮೀನು ಸ್ವಾಹ ಮಾಡಿದ್ದಾರೆ ಅನ್ನುವ ಆರೋಪ ಹೊತ್ತ ನಿತಿನ್ ಗಡ್ಕರಿ.
ಹದಿನಾಲ್ಕರ ಬಾಲೆಗೆ ಹೆದರಿದ ತಾಲಿಬಾನಿ ಹೇಡಿಗಳು!
– ಚಕ್ರವರ್ತಿ ಸೂಲಿಬೆಲೆ
‘ನನ್ನ ಪಾಕಿಸ್ತಾನದ ಕನಸು ಇಂತಹದುಲ್ಲ. ಅಲ್ಲಿ ಶಾಂತಿ ಇರಬೇಕು. ನೆರೆಯವರೊಂದಿಗೆ ಸೌಹಾರ್ದ ಗೆಳೆತನವಿರಬೇಕು. ನನ್ನ ಪಾಕಿಸ್ತಾನದಲ್ಲಿ ಹಗರಣಗಳಿರಬಾರದು. ಶತ್ರುಗಳಿಲ್ಲದ ರಾಷ್ಟ್ರವಾಗಿರಬೇಕು ಅದು.’ ಹಾಗಂತ ಪಟಪಟನೆ ಮಾತನಾಡುತ್ತ ಇಂತಹದೊಂದು ರಾಷ್ಟ್ರದ ನಿರ್ಮಾಣಕ್ಕೆ ಅಗತ್ಯಬಿದ್ದಲ್ಲಿ ಓದು ಮುಗಿಸಿ ರಾಜಕಾರಣಕ್ಕೂ ಧುಮುಕುವೆನೆಂದು ಪತ್ರಕರ್ತರ ಮುಂದೆ ಹೇಳಿದ್ದು ಬೆನಜಿರ್ ಭುಟ್ಟೋ ಅಲ್ಲ. ಹದಿಮೂರರ ಬಾಲೆ ಮಲಾನಾ ಯೂಸುಫ್ ಜಾಯ್…!ಹೌದು. ಮೊನ್ನೆ ದುಷ್ಟ ತಾಲಿಬಾನಿಗಳು ಗುಂಡು ಹಾರಿಸಿ ಕೊಲ್ಲುವ ಯತ್ನ ನಡೆಸಿದ್ದು ಈ ಹುಡುಗಿಯ ಮೇಲೆಯೇ. ಈಗ ಅವಳಿಗೆ ಹದಿನಾಲ್ಕು ವರ್ಷ ಮಾತ್ರ. ತಾಲಿಬಾನ್ ಎನ್ನುವ ಪದ ಕ್ರೌರ್ಯಕ್ಕೆ ಪರ್ಯಾಯವಾಗಿ ನಿಂತಿರುವುದು ಇಂದೇನಲ್ಲ. ಆಪ್ಘಾನಿಸ್ತಾನದ ಪುಷ್ತೂನ್ ಬುಡಕಟ್ಟಿನ ಜನರ ಮಹತ್ವಾಕಾಂಕ್ಷೆಯ ಭಾಗವಾಗಿ ಹುಟ್ಟಿದ ದಿನದಿಂದ ಅದು ಹಾಗೆಯೇ. ಅಫ್ಘಾನಿಸ್ತಾನ ಗಾಂಧಾರ ದೇಶವಾಗಿದ್ದ ಕಾಲದಿಂದಲೂ ಭಿನ್ನಭಿನ್ನ ಬುಡಕಟ್ಟುಗಳ ಭೂಪ್ರದೇಶ. ಅದರಲ್ಲಿ ಸೂರ್ಯಚಂದ್ರರನ್ನು ಆರಾಧಿಸುವ ಪ್ರಕೃತಿ ಪೂಜಕರಿಂದ ಹಿಡಿದು ಸಗುಣ ಸಾಕಾರ ಮೂರ್ತಿಪೂಜಕರೂ ಇದ್ದರು. ನಡುವಲ್ಲಿ ಒಂದಷ್ಟು ಕಾಲ ಬುದ್ಧನ ಅನುಯಾಯಿಗಳ ಶಾಂತಿಯ ಪ್ರಭೆಯಿಂದಲೂ ಬೆಳಗಿತು ಆಫ್ಘಾನಿಸ್ತಾನ. ಆನಂತರದ ದಿನಗಳಲ್ಲಿ ದಾಳಿಗೆ ಒಳಗಾಗಿ ಕ್ರಮೇಣ ಇಸ್ಲಾಮ್ ವ್ಯಾಪ್ತಗೊಂಡಿತು. ಹಾಗಂತ ಇಸ್ಲಾಮ್ ಕೂಡ ಏಕಪ್ರಕಾರವಾಗಿರಲಿಲ್ಲ. ಆಯಾ ಬುಡಕಟ್ಟುಗಳು ತಮ್ಮದೇ ಆದ ಆಚರಣೆಗಳೊಂದಿಗೆ ಬದುಕಿದ್ದವು. ಸೂಫಿಸಂತರುಗಳು ಹೊಸ ಪರಂಪರೆಯನ್ನು ಹುಟ್ಟುಹಾಕಿದ್ದರು. ತಮ್ಮ ರೀತಿಯೇ ಸರಿ ಎನ್ನುವ ಕಾದಾಟಗಳು ಆಗೀಗ ನಡೆಯುತ್ತಲೇ ಇದ್ದವು. ಮೇಲುಗೈ ಸಾಧಿಸಿ ಇಡಿಯ ಪ್ರಾಂತವನ್ನು ಆಳಬೇಕೆಂಬ ತಹತಹವೂ ಸಹಜವಾಗೇ ಇತ್ತು. ಈ ಹಂತದಲ್ಲಿ ಪುಷ್ತೂನ್ ಬುಡಕಟ್ಟಿನ ಜನ ವಹಾಬಿಗಳ, ದಿಯೋಬಂದಿಗಳ ಸಿದ್ಧಾಂತದ ಆಧಾರದ ಮೇಲೆ ಕಟ್ಟಿದ ಕಟ್ಟರ್ ಇಸ್ಲಾಮೀಪಂಥ ’ತಾಲಿಬಾನ್’. ಮುಲ್ಲಾ ಮುಹಮ್ಮದ್ ಓಮರ್ನ ನೇತೃತ್ವ ಅದಕ್ಕೆ ದೊರೆಯಿತು. ಸೌದಿಯ ಹಣ, ಪಾಕಿಸ್ತಾನದ ಜನ ಎರಡೂ ವಿಪುಲವಾಗಿ ಹರಿಯಿತು. ೧೯೯೬ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನ್ ಚುಕ್ಕಾಣಿಯನ್ನೆ ಹಿಡಿದುಬಿಟ್ಟಿತು.
ಮಲಾಳ ಯೂಸುಫ್ ಝಾಯಿಯ ಡೈರಿಯಿಂದ
– ಡಾ ಅಶೋಕ್ ಕೆ ಆರ್
ಅಧಿಕಾರ ಸಿಗುವುದಾದರೆ ಇವರು ಕಸಬ್ ಗೂ ಸ್ಮಾರಕ ಕಟ್ಟಲಾರರೆ?
-ಎ ಕೆ ಕುಕ್ಕಿಲ
1984 ಜೂನ್ 5ರಂದು ಭಾರತೀಯ ಸೇನೆಯು ಆಪರೇಶನ್ ಬ್ಲೂಸ್ಟಾರ್ (Operation Blue Star) ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳುತ್ತದೆ. ಪ್ರತ್ಯೇಕತಾವಾದಿಗಳ ಹಿಡಿತದಿಂದ ಸಿಕ್ಖರ ಪವಿತ್ರ ಕ್ಷೇತ್ರ ಸ್ವರ್ಣ ಮಂದಿರವನ್ನು ಬಿಡುಗಡೆಗೊಳಿಸುವುದು ಕಾರ್ಯಾಚರಣೆಯ ಉದ್ದೇಶವೆಂದು ಪ್ರಧಾನಿ ಇಂದಿರಾ ಗಾಂಧಿ ಘೋಷಿಸುತ್ತಾರೆ. ಜನರಲ್ ಎ.ಎಸ್. ವೈದ್ಯ ಮತ್ತು ಲೆಫ್ಟಿನೆಂಟ್ ಜನರಲ್ ಕುಲ್ ದೀಪ್ ಸಿಂಗ್ ಬ್ರಾರ್ರ ನೇತೃತ್ವದಲ್ಲಿ ನೂರಾರು ಯೋಧರು ಕಾರ್ಯಾಚರಣೆಗಿಳಿಯುತ್ತಾರೆ. ಜರ್ನೈಲ್ ಸಿಂಗ್ ಬಿಂದ್ರನ್ವಾಲೆ ಮತ್ತು ನಿವೃತ್ತ ಮೇಜರ್ ಜನರಲ್ ಶಾಹೆಬ್ ಸಿಂಗ್ರ ನೇತೃತ್ವದಲ್ಲಿ ಸ್ವರ್ಣ ಮಂದಿರದೊಳಗೆ ಅಡಗಿ ಕೂತಿದ್ದ ಪ್ರತ್ಯೇಕತಾವಾದಿಗಳು, ಸೇನೆಗೆ ತೀವ್ರ ಪ್ರತಿರೋಧ ಒಡ್ಡುತ್ತಾರೆ. ಟ್ಯಾಂಕ್, ಹೆಲಿಕಾಪ್ಟರ್, ಶಸ್ತ್ರಾಸ್ತ್ರ ವಾಹನಗಳು, ಆರ್ಟಿಲರಿಗಳನ್ನು ಕಾರ್ಯಾಚರಣೆಯ ವೇಳೆ ಸೇನೆ ಬಳಸಿಕೊಂಡರೆ, ಪ್ರತ್ಯೇಕತಾವಾದಿಗಳು ಮೆಶಿನ್ ಗನ್, ಕ್ಷಿಪಣಿಗಳು, ರಾಕೆಟ್ ಲಾಂಚರುಗಳನ್ನು ಬಳಸುತ್ತಾರೆ. ಒಂದು ರೀತಿಯಲ್ಲಿ ಸ್ವರ್ಣ ಮಂದಿರದೊಳಗೆ ಯುದ್ಧವೇ ನಡೆಯುತ್ತದೆ. ಜೂನ್ 3ರಿಂದ 36 ಗಂಟೆಗಳ ಕಾಲ ಇಡೀ ಪಂಜಾಬ್ನಲ್ಲೇ ಕಫ್ರ್ಯೂ ವಿಧಿಸಲಾಗಿದ್ದರೂ ಸಂಚಾರ, ವ್ಯಾಪಾರ-ವಹಿವಾಟುಗಳನ್ನು ನಿಷೇಧಿಸಲಾಗಿದ್ದರೂ ವಿದ್ಯುತ್ ಕಡಿತಗೊಳಿಸಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಸಿಕ್ಖರು ಚೌಕ್ ಮೆಹ್ತಾದಲ್ಲಿ, ಹರಿಕ್ ಪಟನ್ನಲ್ಲಿ ನೆರೆಯುತ್ತಾರೆ. ಈ ಮಧ್ಯೆ ಸ್ವರ್ಣ ಮಂದಿರದ ಆಸುಪಾಸಿನ ಹೊಟೆಲ್ಗಳಲ್ಲಿ ಉಳಕೊಂಡಿದ್ದ ಎಲ್ಲ ಪತ್ರಕರ್ತರನ್ನೂ ಜೂನ್ 5ರ ಬೆಳಿಗ್ಗೆ 5 ಗಂಟೆಗೆ ಮಿಲಿಟರಿ ವಾಹನದಲ್ಲಿ ಹರ್ಯಾಣಕ್ಕೆ ಸಾಗಿಸಿ ಅಲ್ಲಿ ಬಂಧಿಸಿಡಲಾಗುತ್ತದೆ. ಮಾಧ್ಯಮಗಳನ್ನು ಸಂಪೂರ್ಣ ಸೆನ್ಸಾರ್ಶಿಪ್ಗೆ ಒಳಪಡಿಸಲಾಗುತ್ತದೆ. ಹೀಗೆ ಹೊರ ಜಗತ್ತಿನಿಂದ ಪಂಜಾಬನ್ನು ಸಂಪೂರ್ಣ ಪ್ರತ್ಯೇಕಿಸಿ ನಡೆಸಲಾದ ಆ ಕಾರ್ಯಾಚರಣೆ ಜೂನ್ 7ರಂದು ಕೊನೆಗೊಳ್ಳುವಾಗ 700ರಷ್ಟು ಯೋಧರೇ ಸಾವಿಗೀಡಾಗಿರುತ್ತಾರೆ. ಬಿಂದ್ರನ್ವಾಲೆ, ಶಾಹೆಬ್ ಸಿಂಗ್ ಸಹಿತ 400ರಷ್ಟು ಉಗ್ರವಾದಿಗಳು ಹತ್ಯೆಗೊಳಗಾಗುತ್ತಾರೆ. ಇಷ್ಟಕ್ಕೂ ಸಾವಿಗೀಡಾದ ಸಿಕ್ಖರ ನಿಖರ ಸಂಖ್ಯೆ ಎಷ್ಟು, ಎಷ್ಟು ಮಂದಿ ಗಾಯ ಗೊಂಡರು, ಆ ಕಾರ್ಯಾಚರಣೆ ಹೇಗಿತ್ತು ಎಂಬುದನ್ನೆಲ್ಲಾ ಹೇಳುವುದಕ್ಕೆ ಅಲ್ಲಿ ಅಸೋಸಿಯೇಟೆಡ್ ಪ್ರೆಸ್ನ (AP) ವರದಿಗಾರ ಬ್ರಹ್ಮ ಚಲ್ಲಾನಿಯ ಹೊರತು ಇನ್ನಾರೂ ಇದ್ದರಲ್ಲವೇ? ಮಿಲಿಟರಿಯ ಕಣ್ತಪ್ಪಿಸಿ ಅವರು ಮಾಡಿದ ಅಷ್ಟಿಷ್ಟು ವರದಿಯನ್ನು ಮುಂದೆ ನ್ಯೂಯಾರ್ಕ್ ಟೈಮ್ಸ್, ದಿ ಟೈಮ್ಸ್ ಆಫ್ ಲಂಡನ್, ದಿ ಗಾರ್ಡಿಯನ್ ಪತ್ರಿಕೆಗಳೆಲ್ಲಾ ಮುಖಪುಟದಲ್ಲಿ ಪ್ರಕಟಿಸುತ್ತವೆ. ಶವಸಂಸ್ಕಾರ ಮಾಡಿದವರ ಪ್ರಕಾರ, ಒಟ್ಟು 3,300 ಮಂದಿ ಆ ಕಾರ್ಯಾಚರಣೆಯಲ್ಲಿ ಸಾವಿಗೀಡಾಗಿದ್ದಾರೆ. ಇಂದಿರಾ ಗಾಂಧಿಯವರ ಕುರಿತಂತೆ ಪುಸ್ತಕ ಬರೆದಿರುವ ಮಾರ್ಕ್ ಟುಲಿಯ ಪ್ರಕಾರ ಸತ್ತವರ ಸಂಖ್ಯೆ 2,093. ಆದರೂ,
ಬೆಂಗಳೂರು ಕನ್ನಡಿಗರಿಗೊಂದು ಬಹಿರಂಗ ಪತ್ರ
-ಭರತ್ ಬಿಕೆ
ಬೆಂಗಳೂರಲ್ಲೀ ಇದೀರಾ ? ಬೆಂಗಳೂರಿಗೆ ಬಂದ್ರಾ ?? ಸಂತೋಷ 🙂 ಬೆಂಗಳೂರಲ್ಲೇ ಹುಟ್ಟೀ, ಬೆಂಗಳೂರಲ್ಲೇ ಬೆಳೆದ್ರಾ ?? ತುಂಬಾ ಸಂತೋಷ 🙂
ಬೆಂಗಳೂರಲ್ಲೇ ಬದುಕಬೇಕು ಅಂತಾ ಇದೀರಾ ?? ಇನ್ನೂ ಸಂತೋಷ:)
ಆದರೇ ಇಲ್ಲಿನ ಭಾಷೆ, ನೆಲ, ಜಲ, ವ್ಯವಸ್ಥೆ, ಅವಸ್ಥೆ,ಸಮಸ್ಯೆಗಳ ಬಗ್ಗೆ ಸ್ವಲ್ಪ ಯೋಚನೆ ಮಾಡಿದ್ದೀರಾ? ಅದಕ್ಕಾಗಿ, ಅದಕ್ಕೆ ಸಂಬಂಧಿಸಿದ ವಿಚಾರಗಳಲ್ಲೀ ಭಾಗವಹಿಸಿದ್ದೀರಾ ??
ಸಾರ್ವಜನಿಕವಾಗಿ ?? ವಯಕ್ತಿಕವಾಗಿ ??
ಅಷ್ಟೆಲ್ಲಾ ಯಾಕೇ ಬಿಡಿ.. ಫೇಸ್ ಬುಕ್ ಪ್ರೋಫೈಲಲ್ಲೀ ಪೋಸ್ಟ್ ಮಾಡಿದಿರಾ ? ಸಂಬಂಧಿಸಿದ ಪೋಸ್ಟ್ ಗಳಿಗೇ ಲೈಕ್ ಮಾಡಿಡ್ಡೀರಾ ?? ಕಮೇಂಟ್ ಕೊಟ್ಟಿದ್ದೀರಾ ??
ಕಾನೂನಿನಂಗಳ ೯ : ಹೆಣ್ಣಿಗೆ ಆಸ್ತಿಯಲ್ಲಿ ಸಮಾನ ಹಕ್ಕು
ಉಷಾ ಐನಕೈ ಶಿರಸಿ
ಭಾರತೀಯ ಸಂಸ್ಕೃತಿಗೆ ಜಾಗತಿಕ ಮಟ್ಟದಲ್ಲಿ ಒಂದು ವಿಶಿಷ್ಟವಾದ ಸ್ಥಾನಮಾನ ಇದೆ. ವೈವಿಧ್ಯಮಯವಾದ ಭೌಗೋಲಿಕ ಸ್ವರೂಪ, ವಿಭಿನ್ನವಾದ ಭಾಷೆ, ಆಚಾರ, ರೂಢಿ ಹೀಗೆ ಭಾರತದಲ್ಲಿ ಸಾಂಸ್ಕೃತಿಕ ವೈವಿಧ್ಯತೆ ಅಪಾರ. ಈ ಕಾರಣಕ್ಕಾಗೇ ಭಾರತದೇಶ ಜಾಗತಿಕ ಕುತೂಹಲದ ತಾಣವಾಗಿದೆ. ಭಾರತೀಯ ಸಮಾಜಕ್ಕೆ ಸಾವಿರಾರು ವರ್ಷಗಳ ಪರಂಪರೆ ಇದೆ. ಇಷ್ಟೊಂದು ವರ್ಷ ಈ ಸಂಸ್ಕೃತಿ ಸುಸಂಬದ್ಧವಾಗಿ ಸಾಗಿಬಂದಿದೆ ಅಂದರೆ ಇದರ ಹಿಂದೆ ನ್ಯಾಯ, ನೀತಿ, ಧರ್ಮ ಮುಂತಾದವುಗಳು ಇದೆ ಅಂತಲೇ ಅರ್ಥ. ಅಂದರೆ ಒಂದು ರೀತಿಯ ಕಾನೂನುಗಳ ಪರಿಕಲ್ಪನೆಯಲ್ಲೇ ನಮ್ಮ ಸಂಸ್ಕೃತಿ ಸಾಗಿಬಂದಿದೆ. ಅದನ್ನೇ ಸಂಪ್ರದಾಯ, ರೂಢಿ, ಶ್ರುತಿ, ಸ್ಮೃತಿ, ಉಪನಿಷತ್ ಮುಂತಾದವುಗಳಾಗಿ ಕಾನೂನಿನ ಅಂಗವೆಂದು ಗುರುತಿಸಲ್ಪಟ್ಟಿವೆ. ನಾವಿಂದು ನೋಡುತ್ತಿರುವ ಹಿಂದೂ ಕಾನೂನು ಪ್ರಾಚೀನ ಭಾರತದಲ್ಲಿನ ಸಂಪ್ರದಾಯ, ಪದ್ದತಿ, ಸ್ಮೃತಿಗಳನ್ನಾಧರಿಸಿಯೇ ಇದೆ.
ಈ ಹಿಂದೂ ಕಾನೂನು ಎನ್ನುವುದು ಎಲ್ಲ ಭಾರತೀಯರಿಗೆ ಅಥವಾ ಹಿಂದೂಗಳು ಎನಿಸಿಕೊಂಡ ಭಾರತೀಯರಿಗೆ ಅನ್ವಯಿಸುತ್ತದೆ. ಇದರಲ್ಲಿ ವಿವಾಹ, ಜೀವನಾಂಶ, ದತ್ತಕ, ವಾರಸಾ, ಸಂರಕ್ಷ ಅಧಿನಿಯಮ, ಆಸ್ತಿ ವಿಭಾಗ ಮುಂತಾದವುಗಳೆಲ್ಲ ಬರುತ್ತವೆ.
ಕಾವೇರಿ ನದಿನೀರು ಹಂಚಿಕೆಯಲ್ಲಿ ನಾಡಿಗಾದ ಅನ್ಯಾಯ – ಕಿರು ವರದಿ
– ಜಯಪ್ರಕಾಶ್ ಪಿ., ಕರುನಾಡ ದನಿ
ಕಾವೇರಿ ನದಿಯು ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಬ್ರಹ್ಮಗಿರಿ ತಪ್ಪಲಿನ ’ತಲಕಾವೇರಿ’ ಯಲ್ಲಿ ಹುಟ್ಟಿ ಕರ್ನಾಟಕದ ಬಹುತೇಕ ಭಾಗದಲ್ಲಿ ಹರಿದು ತಮಿಳುನಾಡು ಮತ್ತು ಕೇರಳದ ಕೆಲ ಭಾಗಗಳಲ್ಲಿ ಹರಿದು ಹೋಗುತ್ತದೆ. 1883 ರಲ್ಲಿ ಅಂದಿನ ಮೈಸೂರು ಪ್ರಾಂತ್ಯದ ದಿವಾನರು ಕಾವೇರಿ ನದಿನೀರನ್ನು ನೀರಾವರಿ ಯೋಜನೆಗೆ ಬಳಸಿಕೊಳ್ಳಲು ಮುಂದಾದಾಗ, ಅಂದಿನ ಬ್ರಿಟಿಷ್ ಆಳ್ವಿಕೆಯಲ್ಲಿದ್ದ ಮದರಾಸು ಪ್ರಾಂತ್ಯ ಅದನ್ನು ಸಹಿಸದೆ, ಮದರಾಸಿಗೆ ಅನುಕೂಲವಾಗುವಂತ ಅನೇಕ ಕಟ್ಟಳೆಗಳನ್ನು ಮಾಡುವ ಮೂಲಕ ತಾರತಮ್ಯ ನೀತಿ ಆರಂಭಿಸಿತು. ಅಂದು ಆರಂಭವಾದ ಕಾವೇರಿ ನದಿನೀರಿನ ಸಮಸ್ಯೆ ಸುಮಾರು 120ವರ್ಷಗಳೇ ಕಳೆದಿದ್ದರೂ,ಸರಿಯಾದ ಒಂದು ನಿಷ್ಪಕ್ಷಪಾತ ಜಲನೀತಿ ಇಲ್ಲದ ಪರಿಣಾಮವಾಗಿ ಇಂದು ಬಗೆಹರಿಯದ ಕಗ್ಗಂಟಾಗಿ ಬೆಳೆದು ನಿಂತಿದೆ.ಬರಹಗಾರನ ಭಾಷೆ ಮತ್ತು ಸ್ಮಾರಕ
ಆರ್. ಕೆ. ನಾರಾಯಣ್ ಯಾರಿಗೆ ಸೇರಿದವರು? ಅವರು ಮೂಲತಃ ತಮಿಳಿಗ, ಕರ್ನಾಟಕದ ಮೈಸೂರಿನಲ್ಲೂ ವಾಸಿಸಿದ್ದರು. ಬರೆದಿದ್ದು ತಮಿಳಿನಲ್ಲೂ ಅಲ್ಲ, ಕನ್ನಡದಲ್ಲೂ ಅಲ್ಲ; ನಮ್ಮ ದೇಶದ್ದೇ ಅಲ್ಲದ ಆಂಗ್ಲ ಭಾಷೆಯಲ್ಲಿ. ಇದೊಂದೇ ಕಾರಣಕ್ಕೆ ಅವರನ್ನು ಕನ್ನಡಿಗರೂ ಅಲ್ಲ, ತಮಿಳರೂ ಅಲ್ಲ ಕೊನೆಗೆ ಭಾರತದವರೇ ಅಲ್ಲ ಎನ್ನಲಾದೀತೆ? ಬರಹಗಳು ಒಂದು ಭಾಷೆ, ರಾಜ್ಯ, ರಾಷ್ಟ್ರಕ್ಕಷ್ಟೇ ಸೀಮಿತವಾದ ಸಂಗತಿಯೇ? ಮನದ ಭಾವನೆ ತುಮುಲಗಳನ್ನು, ಸಮಾಜದ ಜೀವನ ವಿಧಾನವನ್ನು ಬರಹರೂಪದಲ್ಲಿ ಕಟ್ಟಬಯಸುವ ಲೇಖಕನಿಗೆ ತನಗೆ ಹಿಡಿತವಿರುವ ಭಾಷೆಯಲ್ಲಿ ಬರೆಯುವ ಸ್ವಾತಂತ್ರ್ಯವಿದ್ದೇ ಇದೆ. ಪ್ರಾದೇಶಿಕ ಭಾಷೆಗಳ ಪುಸ್ತಕಗಳು ಮೇಲ್ನೋಟಕ್ಕೆ ಆ ಭಾಷಿಗರಿಗಷ್ಟೇ ಸೀಮಿತವೆಂಬಂತೆ ತೋರಿದರೂ ಅನುವಾದಗಳ ಮುಖಾಂತರ ಅನ್ಯಭಾಷಿಗರನ್ನೂ ತಲುಪುತ್ತದೆ. ರಷಿಯನ್ ಭಾಷೆಯಲ್ಲಿ ಬರೆದ ಲಿಯೋ ಟಾಲ್ ಸ್ಟಾಯ್, ದಸ್ತೋವಸ್ಕಿ ಪ್ರಪಂಚವನ್ನೆಲ್ಲ ತಲುಪಲು ಸಾಧ್ಯಾವಾಗಿದ್ದು ಅನುವಾದದಿಂದ. ತೆಲುಗಿನ ಯಂಡಮೂರಿ ವಿರೇಂದ್ರನಾಥ್ ನಮ್ಮವನೆನಿಸಿದ್ದು ಅನುವಾದದಿಂದ. ಭಾಷೆಗಿಂತ ಬರಹಗಳಲ್ಲಿನ ಮಾನವೀಯತೆ, ಸಾರ್ವತ್ರಿಕತೆಯಷ್ಟೇ ಕೊನೆಗೆ ಮುಖ್ಯವಾಗುಳಿಯುವುದು. ಆರ್. ಕೆ. ನಾರಾಯಣ್ ರ ಬಹುತೇಕ ಕೃತಿಗಳು ಕನ್ನಡಕ್ಕೆ ಅನುವಾದಗೊಂಡು ಕನ್ನಡಿಗರನ್ನೂ ತಲುಪಿದೆ. ಓದಲು ಬಾರದವರಿಗೆ, ಓದಲು ಇಚ್ಛಿಸದವರಿಗೆ ಶಂಕರ್ ನಾಗ್ ರ ಸಮರ್ಥ ನಿರ್ದೇಶನದಲ್ಲಿ ಮೂಡಿಬಂದ ಮಾಲ್ಗುಡಿ ಡೇಸ್ ಧಾರಾವಾಹಿಯ ಮುಖಾಂತರ ಹಿಂದಿ ಅರ್ಥೈಸಿಕೊಳ್ಳುವ ಜನರಿಗೂ ತಲುಪಿದೆ. ಎಲ್ಲರ ಮನಸ್ಸು ತಟ್ಟುವ ನಮ್ಮದೇ ಜೀವನದ ತುಣುಕುಗಳಂತೆ ಕಾಣುವ ನಾರಾಯಣ್ ರ ಕಥೆಗಳು ಭಾಷೆಯನ್ನು ಮೀರಿ ನಮ್ಮನ್ನು ತಲುಪುತ್ತದೆ.
ಮೈಸೂರಿನಲ್ಲಿ ಆರ್. ಕೆ. ನಾರಾಯಣ್ ವಾಸವಿದ್ದ ಮನೆಯನ್ನು ಸ್ಮಾರಕವಾಗಿಸಬೇಕೆಂಬ ಸರಕಾರದ ಉದ್ದೇಶವನ್ನು ಕನ್ನಡದ ಕೆಲವು ಲೇಖಕರು ವಿರೋಧಿಸಿದ್ದಾರೆ. ‘ಕನ್ನಡಕ್ಕೆ ಆರ್. ಕೆ. ನಾರಾಯಣರ ಕೊಡುಗೆ ಏನು?’ ಎಂದು ಪ್ರಶ್ನಿಸಿದ್ದಾರೆ. ಆರ್. ಕೆ. ನಾರಾಯಣ್ ಕನ್ನಡಿಗರೂ ಅಲ್ಲ, ತಮಿಳರೂ ಅಲ್ಲ, ಭಾರತೀಯರೂ ಅಲ್ಲವೆಂಬ ಭಾವನೆ ಅವರ ಬರಹದ ಭಾಷೆಯ ಚೌಕಟ್ಟಿನಿಂದಾಗಿ ಉದ್ಭವವಾಗುವುದಾದರೆ ಆರ್. ಕೆ. ನಾರಾಯಣ್ ಒಬ್ಬ ಶ್ರೇಷ್ಠ ಸಾಹಿತಿ ಎಂಬ ದೃಷ್ಟಿಕೋನವಾದರೂ ಇರಬೇಕಲ್ಲವೇ? ಇಂಥ ಒಬ್ಬ ಸಾಹಿತಿ ವಾಸವಿದ್ದ, ಬರವಣಿಗೆ ನಡೆಸಿದ ಮನೆಯನ್ನು ಸ್ಮಾರಕ ಮಾಡುವುದನ್ನು ವಿರೋಧಿಸುವುದಕ್ಕೆ ಭಾಷೆಯೊಂದೇ ಕಾರಣವಾಗುವುದು ಸರಿಯಲ್ಲ. ಆರ್. ಕೆ. ನಾರಾಯಣ್ ರ ಸಾಹಿತ್ಯಿಕ ಕೊಡುಗೆಯನ್ನು ಗಮನಿಸುವಾಗ ಭಾಷೆ ಗೌಣವಾಗಬೇಕು. ನಾರಾಯಣ್ ರ ಮನೆಯವರು ಅವರು ವಾಸವಿದ್ದ ಮನೆಯನ್ನು ಸರಕಾರಕ್ಕೆ ‘ಮಾರಿದ್ದಾರೆ’ ಎಂಬ ಆರೋಪವೂ ಇದೆ. ಅದು ಅವರ ಮನೆಯವರ ಅನಿವಾರ್ಯತೆಯೇನೋ? ಖಾಸಗಿ ವ್ಯಕ್ತಿ ಖರೀದಿಸಿ ವಾಸ್ತುವಿನ ಹೆಸರಲ್ಲೋ, ನವೀಕರಣದ ಹೆಸರಲ್ಲೋ ಮನೆಯನ್ನು ಕೆಡವಿ ಕೆಡಿಸುವುದಕ್ಕಿಂತ ಸರಕಾರ ಖರೀದಿಸುವುದೇ ಸೂಕ್ತವಲ್ಲವೇ?
ಇನ್ನು ಲೇಖಕರ ಮನೆಯನ್ನು ಸ್ಮಾರಕವನ್ನಾಗಿಸಿ ಪ್ರವಾಸಿ ತಾಣದಂತೆ ಮಾರ್ಪಡಿಸುವುದು ಎಷ್ಟರಮಟ್ಟಿಗೆ ಸಾಹಿತ್ಯಕ್ಕೆ ಉಪಯೋಗಕಾರಿ? ಸ್ಮಾರಕಗಳಿಗೆ ವೆಚ್ಚ ಮಾಡುವ ಹಣವನ್ನು ಸಾಹಿತಿಯ ಪುಸ್ತಕಗಳನ್ನು ಮುದ್ರಿಸಿ ಜನರಿಗೆ ತಲುಪಿಸುವುದು ಹೆಚ್ಚು ಸೂಕ್ತವೆಂಬ ವಾದವೂ ಇದೆ. ಪ್ರತಿಮೆಗಳಿಗೆ ವೆಚ್ಚ ಮಾಡುವುದನ್ನು ವಿರೋಧಿಸುವುದು ಅರ್ಥಪೂರ್ಣ. ಆದರೆ ಸ್ಮಾರಕಗಳಿಂದ ಸಾಹಿತ್ಯಿಕ ಉಪಯೋಗವಿಲ್ಲ ಎಂಬುದನ್ನು ಸಂಪೂರ್ಣವಾಗಿ ಒಪ್ಪುವುದು ಕಷ್ಟ. ಮೋಜಿಗಾಗಿ, ಪ್ರವಾಸಕ್ಕಾಗಿ ಇಂಥ ಸ್ಮಾರಕಗಳಿಗೆ ಭೇಟಿ ನೀಡುವವರು ಇದ್ದಾರಾದರೂ ಸಾಹಿತಿಯ ಬರಹಗಳನ್ನು ಓದಿದ ಓದುಗನಿಗೆ ಆ ಸಾಹಿತಿ ಓಡಾಡಿದ, ಆ ಸಾಹಿತ್ಯ ಪಡಿಮೂಡಿದ ಜಾಗವನ್ನು ನೋಡುವ ಕುತೂಹಲವೂ ಇರುತ್ತದೆ. ಪುತ್ತೂರಿನ ಶಿವರಾಮ ಕಾರಂತ ಬಾಲವನ, ಕುವೆಂಪುರವರ ಕುಪ್ಪಳ್ಳಿಗೆ ಭೇಟಿ ನೀಡಿದಾಗ ಓದುಗರಿಗೆ ಸಿಗುವ ಉಲ್ಲಾಸ, ‘ನಾನೂ ಬರೆಯಬೇಕೆಂದು’ ಕೊಂಡವರಿಗೆ ಸಿಗುವ ಉತ್ಸಾಹ – ಪ್ರೇರಣೆಯನ್ನು ಕಡೆಗಣಿಸಲಾದೀತೆ? ಪುಸ್ತಕಗಳನ್ನು ಜನರಿಗೆ ತಲುಪಿಸುವುದು ಸಾಹಿತಿಗೆ ತೋರುವ ಶ್ರೇಷ್ಠ ಗೌರವವೆಂಬುದು ಸತ್ಯ, ಇದರೊಟ್ಟಿಗೆ ಸಾಹಿತಿಗಳ ಮನೆಯನ್ನು ಸ್ಮಾರಕವಾಗಿಸುವುದು ಕೂಡ ಅವರನ್ನು ಮತ್ತಷ್ಟು ಅರಿಯಲು, ಮಗದಷ್ಟು ಓದಲು ಸಹಾಯಕ.
ಚಿತ್ರಗಳು – ಡಾ ಅಶೋಕ್ ಕೆ ಆರ್, churumuri
ಎಷ್ಟು ಕಷ್ಟ ಒಂದ್ ಮದ್ವೆ ಅಂದ್ರೆ
-ಪರೇಶ್ ಸರಾಫ್
ಡಾಕ್ಟರ್ ಮಾಮನ ಆಸ್ಪತ್ರೆಯ ಹಿಂದಿನ ಹಾಲ್ನಲ್ಲಿ ಆಗಾಗ ಚಿಕ್ಕ ಪುಟ್ಟ ಸಮಾಜ ಸೇವಾ ಕಾರ್ಯಕ್ರಮಗಳು ನಡೆಯುವುದು ಸಾಮಾನ್ಯ. ಅದರಲ್ಲಿ ಪ್ರತಿ ರವಿವಾರ ನಡೆಯುವ ಮ್ಯಾರೇಜ್ ಬ್ಯುರೋ ಸಹ ಒಂದು. ನಮ್ಮ ಸಮುದಾಯದ ಹುಡುಗ, ಹುಡುಗಿಯರ ಮಾಹಿತಿ ಸಂಗ್ರಹ, ಜಾತಕ ಮೇಳಾಮೇಳಿ
, ಮಾತುಕತೆಯಿಂದ ಹಿಡಿದು, ಬಡವರಿದ್ದರೆ ಮದುವೆಗೆ ಸಹಾಯ ಮಾಡುವಷ್ಟರವರೆಗೆ ಸಮಾಜಸೇವೆ ನಡೆಯುತ್ತಿತ್ತು. ಪ್ರಭು ಮಾಸ್ತರರು, ಮಹಾಲೆ ಮಾಮನ ಸಾರಥ್ಯದಲ್ಲಿ ಈ ಕಾರ್ಯ ಬಹಳ ಸಮರ್ಥವಾಗಿ ಮುಂದುವರೆದುಕೊಂಡು ಹೋಯಿತು. ಬರೀ ವಧು ವರರ ಮಾಹಿತಿ ನೀಡುವುದಷ್ಟೇ ಅಲ್ಲದೇ ಹುಡುಗನ, ಹುಡುಗಿಯ ಹಿನ್ನೆಲೆಗಳನ್ನು ನೋಡಿ, ಜೋಡಿ ಸರಿ ಹೊಂದುತ್ತದೆಯೋ, ಹುಡುಗನಿಗೆ ವ್ಯಸನಗಳಿವೆಯೋ ಎಂಬುದನ್ನೆಲ್ಲ ಪರೀಕ್ಷಿಸಿ ತಮ್ಮ
ಕೈಲಾದ ಮಟ್ಟಿಗೆ ಉತ್ತಮ ಸೇವೆ ನೀಡಿ, ಮದುವೆಯ ನೈತಿಕ ಹೊಣೆಯನ್ನು ಸಹ ಹೊತ್ತು ಮನೆ ಮಾತಾದರು. ಹೀಗೆ ಬರುವವರ ಸಂಖ್ಯೆ ಸಹ ಜಾಸ್ತಿಯಾಗುತ್ತ ಹೋಯಿತು. ಸಂಖ್ಯೆಗಳು ಜಾಸ್ತಿಯಾದಂತೆ ಹಲವು ಸಿಹಿ ಕಹಿ ಅನುಭವಗಳು ಸಹ ಆಗುತ್ತಾ ಹೋಯಿತು. ಪ್ರತಿ ಅನುಭವವೂ ಈಗಿನ ಸಾಮಾಜಿಕ ಜೀವನ,









